Headlines

ಹೋಟೆಲ್ ಮಾಲೀಕರ ಗಮನಕ್ಕೆ: ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!

ಬೆಂಗಳೂರು, ಮಾ.23: ಕರ್ನಾಟಕದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಸಮಸ್ಯೆ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. IOC, HP, GAIL ಮತ್ತು ಭಾರತ್ ಪೆಟ್ರೋಲಿಯಂ ಕಂಪನಿಗಳ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ 20% ಸಿಲಿಂಡರ್‌ಗಳನ್ನು ಪೂರೈಸಲು ಒಪ್ಪಿಗೆ ನೀಡಿದೆ ಎಂದು ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಆದರೆ, ಬ್ಲಾಕ್​​​ನಲ್ಲಿ ಮಾರಾಟ ಮಾಡುವುದನ್ನು…

Read More

ರುಪಾಯಿ ಮತ್ತಷ್ಟು ಕುಸಿತ; ಪ್ರಪ್ರಥಮ ಬಾರಿಗೆ 94ರ ಮಟ್ಟಕ್ಕೆ ಇಳಿಕೆ; ಭಾರತೀಯ ಕರೆನ್ಸಿ ಮೌಲ್ಯ ಕುಸಿಯಲು ಏನು ಕಾರಣ?

ನವದೆಹಲಿ, ಮಾರ್ಚ್ 23: ಅಮೆರಿಕನ್ ಡಾಲರ್ ಎದುರು ಭಾರತದ ಕರೆನ್ಸಿಯಾದ ರುಪಾಯಿಯ ದುರ್ಬಲ ಸಾಧನೆ (Dollar vs Rupee) ಮುಂದುವರಿದಿದೆ. ಡಾಲರ್​ಗೆ ರುಪಾಯಿ ಮೌಲ್ಯ 94 ರು ಮಟ್ಟಕ್ಕಿಂತ ಕೆಳಗೆ ಕುಸಿದಿದೆ. ಈ ಮಟ್ಟಕ್ಕೆ ರುಪಾಯಿ ಇಳಿದ್ದು ಇತಿಹಾಸದಲ್ಲಿ ಇದೇ ಪ್ರಥಮ. ಇವತ್ತು ಸೋಮವಾರ (ಮಾ. 23) ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ 93.83ರಲ್ಲಿ ಆರಂಭಗೊಂಡಿತು. ನಂತರದ ವಹಿವಾಟಿನಲ್ಲಿ ಅದು 94ರ ಮಟ್ಟ ದಾಟಿ ಹೋಯಿತು. ರುಪಾಯಿ ಮೌಲ್ಯ ಕುಸಿತಕ್ಕೆ ಏನು ಕಾರಣಗಳು? ಕಚ್ಛಾ ತೈಲ…

Read More

ಗಂಡನ ಕಳೆದುಕೊಂಡವರೇ ಟಾರ್ಗೆಟ್! ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!

ಬೆಂಗಳೂರು, ಮಾರ್ಚ್​ 23: ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಸಂಸ್ಥೆಯ ಮಾಲೀಕ ರಾಮಾಂಜಿ ಎಂಬಾತ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಇತರ ಮಹಿಳೆಯರಿಗೆ ಮದುವೆಯಾಗುವ ನೆಪದಲ್ಲಿ ವಂಚಿಸಿರುವ ಆರೋಪದ ಮೇಲೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 38 ವರ್ಷದ ರಾಮಾಂಜಿ ಐವರು ಹೆಣ್ಣುಮಕ್ಕಳಿಗೆ ಮೋಸ ಮಾಡಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ. ಪತಿ ಕಳೆದುಕೊಂಡವರು, ಪತಿಯಿಂದ ವಿಚ್ಛೇದನ ಪಡೆದು ದೂರವಾದವರು ಅಥವಾ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಹಿಳೆಯರನ್ನು ಈತ ಬಲೆಗೆ ಕೆಡವುತ್ತಿದ್ದ ಎನ್ನಲಾಗಿದೆ. ಮದುವೆಯ ಭರವಸೆ…

Read More

’ಧುರಂಧರ್ 2’ ಗೆಲುವಿನ ಖುಷಿಯಲ್ಲಿ ಮೀನೂಟ ಮಾಡಿದ ರಣವೀರ್-ದೀಪಿಕಾ

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರವು ಪ್ರಸ್ತುತ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ, ಚಿತ್ರವು 400 ಕೋಟಿ ರೂ.ಗಳನ್ನು ದಾಟಿದೆ. ಚಿತ್ರದಲ್ಲಿನ ರಣವೀರ್ ಸಿಂಗ್ ಅವರ ಅಭಿನಯವನ್ನು ಹೆಚ್ಚು ಪ್ರಶಂಸಿಸಲಾಗುತ್ತಿದೆ. ಅಭಿಮಾನಿಗಳಿಂದ ಹಿಡಿದು ಸೆಲೆಬ್ರಿಟಿಗಳವರೆಗೆ, ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಅವರಿಗಾಗಿ ಪೋಸ್ಟ್‌ಗಳನ್ನು ಬರೆದಿದ್ದಾರೆ. ಏತನ್ಮಧ್ಯೆ, ರಣವೀರ್ ಅವರ ಪತ್ನಿ ಮತ್ತು ನಟಿ ದೀಪಿಕಾ ಪಡುಕೋಣೆ ‘ಧುರಂಧರ್ 2’ ಯಶಸ್ಸಿನ ಬಗ್ಗೆ ಯಾವುದೇ ಕಾಮೆಂಟ್ ಮಾಡದಿದ್ದಾಗ ಕೆಲವು ಅಭಿಮಾನಿಗಳು ಅಸಮಾಧಾನಗೊಂಡರು….

Read More

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs SRH ಹೈವೋಲ್ಟೇಜ್ ಪಂದ್ಯ! ನಿಮಗೂ ಟಿಕೆಟ್​​ ಬೇಕಾ? ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು?

ಬೆಂಗಳೂರು. ಮಾ.23: ಐಪಿಎಲ್ 2026ರ ಉದ್ಘಾಟನಾ ಪಂದ್ಯ ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಆರ್‌ಸಿಬಿ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯದ ಟಿಕೆಟ್ ಬೆಲೆ ಎಷ್ಟು? ಎಲ್ಲಿ ಬುಕ್ ಮಾಡಬೇಕು? ಮೆಟ್ರೋ ಪ್ರಯಾಣ ಉಚಿತವೇ? ಇಲ್ಲಿದೆ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ. ಇನ್ನು ಟಿಕೆಟ್​​​​ ಖರೀದಿಯ ಬಗ್ಗೆ RCB ಮಹತ್ವದ ಹೇಳಿಕೆಯನ್ನು ಕೂಡ ನೀಡಿದೆ. ವಂಚನೆಯ ವಿರುದ್ಧ ಎಚ್ಚರಿಕೆ ನೀಡಿದೆ ಮತ್ತು shop.royalchallengers.com ಮೂಲಕ ಖರೀದಿಸಿದ ಟಿಕೆಟ್‌ಗಳು ಮಾತ್ರ ಮಾನ್ಯವಾಗಿರುತ್ತವೆ ಎಂದು ಹೇಳಿದೆ. RCB IPL 2026 ಟಿಕೆಟ್‌ಗಳನ್ನು…

Read More

ಕೋರ್ಟ್​ ಉದ್ಯೋಗ ಕೊಡಿಸುವುದಾಗಿ 25 ಲಕ್ಷ ರೂ. ಪಡೆದು ವಂಚಿಸಿದ ಖತರ್ನಾಕ್ ದಂಪತಿ ಅಂದರ್!

ಬೆಂಗಳೂರು, ಮಾರ್ಚ್​ 23: ಕೋರ್ಟ್‌ಗಳಲ್ಲಿ ಸರ್ಕಾರಿ ಉದ್ಯೋಗ (Government Job) ಕೊಡಿಸುವುದಾಗಿ ಭರವಸೆ ನೀಡಿ ನೂರಾರು ಜನರನ್ನು ವಂಚಿಸಿದ್ದ ಖತರ್ನಾಕ್ ದಂಪತಿಯನ್ನು  ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಜೇಸನ್ ಡಿಸೋಜಾ ಮತ್ತು ಲವೀನಾ ದಂಪತಿ ಸುಮಾರು 25 ಕೋಟಿ ರೂ.ಗೂ ಹೆಚ್ಚು ಹಣ ವಂಚನೆ ಮಾಡಿದ್ದು, ಸದ್ಯ ಸಿಸಿಬಿ ಪೊಲೀಸರು ಅವರನ್ನು ವಿಚಾರಣೆಗೊಳಪಡಿಸಿದ್ದಾರೆ. ನಿರುದ್ಯೋಗಿಗಳೇ ಟಾರ್ಗೆಟ್! ನಿರುದ್ಯೋಗಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರನ್ನು ಗುರಿಯಾಗಿಸಿಕೊಂಡು ಆರೋಪಿಗಳು ದೊಡ್ಡ ಮಟ್ಟದ ಮೋಸದ ಜಾಲವನ್ನು…

Read More

ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ ಮಾಡ್ತಾರೆ ಈ ಅಭಿಮಾನಿ!

ಚಾಮರಾಜನಗರ, ಮಾರ್ಚ್ 23: ಅಣ್ಣಾವ್ರ ಹುಟ್ಟೂರಾಗಿರುವ, ಕರ್ನಾಟಕ-ತಮಿಳುನಾಡು ಗಡಿ ಭಾಗದ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ಇದೀಗ ಕನ್ನಡಿಗರ ಗಮನ ಸೆಳೆಯುವಂತೆ ಮಾಡಿದ್ದಾರೆ. ದೊಡ್ಡ ಗಾಜನೂರು ಗ್ರಾಮದ ಸಿದ್ದರಾಜು ಎಂಬ ಅಭಿಮಾನಿ, ಸುದೀಪ್ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಐಸ್ ಕ್ಯಾಂಡಿ ಮಾರಾಟ ಮಾಡುತ್ತಾ ಜೀವನ ನಡೆಸುವ ಸಿದ್ದರಾಜುಗೆ ‘ಕಿಚ್ಚ’ ಸುದೀಪ್ ಎಂದರೆ ಪಂಚಪ್ರಾಣ. ಇದಕ್ಕಾಗಿ ಅವರು ಮನೆ ಬಳಿ ಸುದೀಪ್‌ಗಾಗಿ ಗುಡಿ ನಿರ್ಮಿಸಿದ್ದು, ಪ್ರತಿದಿನವೂ ನಿತ್ಯ ಆರಾಧನೆ ಮಾಡುತ್ತಾರೆ! ಸೋಮವಾರ…

Read More

‘ಆ ಸಿನಿಮಾ ಕಥೆ ನನ್ನದು’; ಕನ್ನಡದಲ್ಲಿ ಇತ್ತೀಚೆಗೆ ರಿಲೀಸ್ ಆದ ಹಿಟ್ ಚಿತ್ರದ ಬಗ್ಗೆ ಕೃತಿಚೌರ್ಯ ಆರೋಪ

ಒಂದು ಸಿನಿಮಾ ರಿಲೀಸ್ ಆಗಿ ಹಿಟ್ ಆದ ಬಳಿಕ ಕೆಲವರು ನಿರ್ದೇಶಕರ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ ಉದಾಹರಣೆ ಇದೆ. ಕೆಲವು ನಿಜವಾದರೆ, ಕೆಲವು ಸುಳ್ಳಾಗಿದೆ. ಈಗ ಇತ್ತೀಚೆಗೆ ರಿಲೀಸ್ ಆಗಿ ಹಿಟ್ ಆದ ಸಿನಿಮಾ ಮೇಲೆ ‘ಮಾರಿಗೋಲ್ಡ್’ ಸಿನಿಮಾ ನಿರ್ದೇಶಕ ರಾಘವೇಂದ್ರ ನಾಯಕ್ ದೀರ್ಘ ಪೋಸ್ಟ್ ಬರೆದಿದ್ದಾರೆ. ಅವರು ಆರೋಪ ಮಾಡಿರೋದು ‘ಲವ್ ಮಾಕ್ಟೇಲ್ 3’ ಚಿತ್ರದ ಮೇಲೆ ಇರಬಹುದು ಎಂಬ ಚರ್ಚೆ ಕೂಡ ನಡೆದಿದೆ. ‘ಸಿನಿಮಾ ಬರಹಗಾರರೇ ಮತ್ತು ಭವಿಷ್ಯದ ನಿರ್ದೇಶಕರೇ, ನನ್ನದೊಂದು ಸಣ್ಣ…

Read More

ದಾವಣಗೆರೆಗೆ ಆ ಸಚಿವರು ಗೋಣಿಚೀಲದಲ್ಲಿ ಹಣ ತರುತ್ತಾರೆ! ಬಿವೈ ವಿಜಯೇಂದ್ರ ಗಂಭೀರ ಆರೋಪ

ಬಾಗಲಕೋಟೆ, ಮಾರ್ಚ್ 23: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳ ಹಿನ್ನೆಲೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಾಯಕರ ನಡುವೆ ವಾಕ್ಸಮರ ಜೋರಾಗಿದೆ. ಈ ಮಧ್ಯೆ, ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯೇಂದ್ರ, ದಾವಣಗೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಹಣ ತರುವುದಿಲ್ಲ, ಸಚಿವರೊಬ್ಬರು ಗೋಣಿಚೀಲದಲ್ಲಿ ಹಣ ತಂದು ಕೂರುತ್ತಾರೆ ಎಂದು ಆರೋಪಿಸಿದರು. ಅಲ್ಲಿನ ರಾಜಕೀಯದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ನನಗೆ ತಿಳಿದಿದೆ ಎಂದು ಹೇಳಿ ಕಾಂಗ್ರೆಸ್…

Read More

ಈ ಲಕ್ಷಣಗಳು ದೇಹದಲ್ಲಿ ಕಂಡುಬಂದ್ರೆ ನಿಮಗೆ ಹೃದಯದಲ್ಲಿ ಬ್ಲಾಕೇಜ್ ಇರಬಹುದು ಎಚ್ಚರ!

ಇತ್ತೀಚೆಗೆ ಹೃದಯ ಸಂಬಂಧ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಅದರಲ್ಲೂ ಹೃದಯಾಘಾತ ಕೇಸ್ಗಳು ಯುವಕರಲ್ಲೂ ಗಣನೀಯವಾಗಿ ಹೆಚ್ಚುತ್ತಿವೆ. ಈ ಹಾರ್ಟ್ ಅಟ್ಯಾಕ್ಗೆ ಹೃದಯದ ನರಗಳಲ್ಲಿ ಉಂಟಾಗುವ ಬ್ಲಾಕೇಜ್ ಕೂಡ ಪ್ರಮುಖ ಕಾರಣಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಅಷ್ಟಕ್ಕೂ ಹೃದಯದಲ್ಲಿ ಬ್ಲಾಕೇಜ್ ಏಕೆ ಉಂಟಾಗುತ್ತದೆ? ಅದರ ಆರಂಭಿಕ ಲಕ್ಷಣಗಳು ಯಾವುವು ಮತ್ತು ಅದನ್ನು ಹೇಗೆ ನಿಯಂತ್ರಿಸಬಹುದು? ಎಂಬುದನ್ನು ತಿಳಿದುಕೊಳ್ಳುವ ಅಗತ್ಯ ಇಂದಿಗಿದೆ. ಹೃದಯದ ನರಗಳಲ್ಲಿ ಕೊಬ್ಬು (ಫ್ಯಾಟ್) ಅಥವಾ ಕೊಲೆಸ್ಟ್ರಾಲ್ ಶೇಖರೆಯಾಗುವುದರಿಂದ ರಕ್ತದ ಹರಿವು ಸರಿಯಾಗಿ ಆಗುವುದಿಲ್ಲ. ಇದರಿಂದ ಹೃದಯಕ್ಕೆ…

Read More