ಗದಗ: ಆಂಜನೇಯ ದೇಗುಲದಲ್ಲಿ ಮೂರು ದಿನಗಳಿಂದ ನಿರಂತರ ಕೇಳಿಸುತ್ತಿದೆ ನಿಗೂಢ ಗೆಜ್ಜೆ ಶಬ್ದ! – Kannada News | Mysterious Anklet Sounds Echo for Three Days at Anjaneya Temple in Gadag, Villagers on Night Vigil

ಗದಗ, ಜನವರಿ 17: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯ ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಮೂರು ದಿನಗಳಿಂದ ನಿರಂತರವಾಗಿ ಕೇಳಿಬರುತ್ತಿದ್ದು, ಈ ಅನಿರೀಕ್ಷಿತ ಘಟನೆಯಿಂದ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಮೂಲಗಳ ಪ್ರಕಾರ, ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ದೇವಾಲಯಕ್ಕೆಂದು ತಂದ ದುರ್ಗಮ್ಮ ಮತ್ತು ಮಾಯಮ್ಮ ದೇವಿ ಮೂರ್ತಿಗಳನ್ನು ಆಂಜನೇಯ ದೇಗುಲದಲ್ಲಿ ತಾತ್ಕಾಲಿಕವಾಗಿ ಇರಿಸಿದ ನಂತರ ಗೆಜ್ಜೆನಾದ ಕೇಳಿಸಲು ಪ್ರಾರಂಭಿಸಿದೆ. ಗುರುವಾರ ರಾತ್ರಿ 8 ಗಂಟೆಯಿಂದ ಆರಂಭವಾದ ಈ ಶಬ್ದ ಇದುವರೆಗೆ ನಿಂತಿಲ್ಲ ಎಂದು ಸ್ಥಳೀಯ ನಿವಾಸಿ ಮಹೇಶ್ ತಿಳಿಸಿದ್ದಾರೆ.

ಗೆಜ್ಜೆ ಶಬ್ದ ಕೇಳಿದ ಕೂಡಲೇ ನೂರಾರು ಗ್ರಾಮಸ್ಥರು ದೇವಸ್ಥಾನಕ್ಕೆ ಓಡೋಡಿ ಬಂದಿದ್ದು, ರಾತ್ರಿಯಿಡೀ ಅಲ್ಲೇ ಜಾಗರಣೆ ಮಾಡಿದ್ದಾರೆ. ಈ ಶಬ್ದ ದೇವಸ್ಥಾನದ ಗರ್ಭಗುಡಿಯಿಂದ ಕೇಳಿಬರುತ್ತಿದೆ ಎನ್ನಲಾಗಿದೆ. ಭಯದಿಂದ ಯಾವುದೇ ಗ್ರಾಮಸ್ಥರು ಒಳಗಡೆ ಹೋಗಲು ಮುಂದಾಗಿಲ್ಲ. ಗ್ರಾಮಸ್ಥರು ಈ ಘಟನೆಯ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ತಿಳಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬಂದು ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಅಜ್ಜ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ದುಬೈಗೆ ಕರೆದೊಯ್ದ ಮೊಮ್ಮಗ – Kannada News | Grandson takes grandparents on a plane for the first time

ತಾನು ಚೆನ್ನಾಗಿ ಓದಿ, ಒಂದೊಳ್ಳೆ ಉದ್ಯೋಗ ಪಡೆದುಕೊಂಡು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಅಮ್ಮ ಅಪ್ಪ, ಅಜ್ಜ, ಅಜ್ಜಿಯೊಂದಿಗೆ (grand parents) ಊರು ಸುತ್ತಬೇಕು. ಅವರ  ಸಣ್ಣ ಪುಟ್ಟ ಆಸೆಗಳನ್ನು ಈಡೇರಿಸಬೇಕು ಹೀಗೆ ಸಾವಿರಾರು ಕನಸುಗಳನ್ನು ಕಂಡಿರುತ್ತಾರೆ. ಆ ಕನಸುಗಳು ನನಸಾಗುವ ಘಳಿಗೆ ಬಂದರೆ ಹೇಗಿರುತ್ತೆ ಎಂದು ನೀವು ಒಮ್ಮೆಯಾದ್ರೂ ಊಹಿಸಿದ್ದೀರಾ. ಆದರೆ ಈ ಹಿರಿಜೀವಗಳು ಮೊಮ್ಮಗನಿಂದಾಗಿ (grandson) ವಿಮಾನ ಹತ್ತುವಂತಾಗಿದೆ. ಹೌದು, ಮೊಮ್ಮಗನು ತನ್ನ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದಿದ್ದು ಈ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ತುಂಬಿಬಂದಿದೆ.

ಅಂಕಿತ್ ಬಿಗ್ ಮೌತ್ (ankitranabigmouth) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಯುವಕನೊಬ್ಬನು ತನ್ನ ಅಜ್ಜ ಅಜ್ಜಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ದುಬೈಗೆ ಕರೆದುಕೊಂಡಿರುವ ದೃಶ್ಯವನ್ನು ನೀವಿಲ್ಲಿ ನೋಡಬಹುದು. ಈ ವಿಡಿಯೋದ ಶೀರ್ಷಿಕೆಯಲ್ಲಿ ದಾದಿಜೀ ಕಿ ಫಸ್ಟ್ ಫ್ಲೈಟ್ ಎಂದು ಬರೆಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಅಜ್ಜ ಅಜ್ಜಿಯ ಮೊದಲ ವಿಮಾನ ಪ್ರಯಾಣದ ಭಾವುಕ ಕ್ಷಣದ ವಿಡಿಯೋ ಇದಾಗಿದೆ. ಈ ವಿಡಿಯೋದಲ್ಲಿ ವೃದ್ಧ ದಂಪತಿಯೂ ತನ್ನ ಮೊಮ್ಮಗನ ಜೊತೆ ವಿಮಾನದಲ್ಲಿ ಏರ್‌ಪೋರ್ಟ್‌ಗೆ ತೆರಳಿ ಅಲ್ಲಿಂದ ವಿಮಾನ ಪ್ರಯಾಣಿಸಿ ದುಬೈಗೆ ಹೋಗುವುದನ್ನು ಕಾಣಬಹುದು. ಈ ಹಿರಿಜೀವಗಳು ವಿಮಾನ ಹಾರಾಟ ಸೇರಿದಂತೆ ದುಬೈನಲ್ಲಿ ಕಳೆಯುವ ಕ್ಷಣವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಪ್ರಯಾಣ ಎಷ್ಟು ಖುಷಿ ತಂದಿದೆ ಎನ್ನುವುದಕ್ಕೆ ಅಜ್ಜ ಅಜ್ಜಿಯ ಮೊಗದಲ್ಲಿನ ನಗುವೇ ಸಾಕ್ಷಿಯಾಗಿದೆ.

ಇದನ್ನೂ ಓದಿ: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ವೃದ್ಧ ವ್ಯಕ್ತಿ

ಈ ವಿಡಿಯೋ 3 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇಂತಹ ಮೊಮ್ಮಗನನ್ನು ಪಡೆದ ನೀವೇ ಧನ್ಯ ಎಂದಿದ್ದಾರೆ. ಇನ್ನೊಬ್ಬರು, ಅಜ್ಜ ಅಜ್ಜಿಯ ಮೊಗದಲ್ಲಿನ ಖುಷಿ ನೋಡಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಅನೇಕ ಜನರಿಗೆ ವಿಮಾನದಲ್ಲಿನ ಪ್ರಯಾಣ ಕನಸಿನ ಮಾತು. ಈ ದೃಶ್ಯ ನೋಡಿ ಕಣ್ಣಲ್ಲಿ ನೀರು ಬಂತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿಧಿ ಸಿಕ್ಕ ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಪುರಾತನ ವಸ್ತು ಪತ್ತೆ! – Kannada News | Ancient Artifacts Unearthed During Excavation at Treasure Site in Lakkundi, Gadag, Watch Video

ಗದಗ, ಜನವರಿ 17: ಗದಗದ ಐತಿಹಾಸಿಕ ತಾಣ ಲಕ್ಕುಂಡಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಉತ್ಖನನದಲ್ಲಿ ಶಿವಲಿಂಗಕ್ಕೆ ಸಂಬಂಧಿಸಿದ ಪುರಾತನ ವಸ್ತುವೊಂದು ಪತ್ತೆಯಾಗಿದೆ. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರ ಪ್ರಕಾರ, ಈ ವಸ್ತು ನೀರು ಹರಿಯಲು ಮಾಡಿದ ರೀತಿಯಲ್ಲಿ ಕಂಡುಬರುತ್ತಿದ್ದು, ಶಿವಲಿಂಗ ಪೂಜೆಯ ಸಂದರ್ಭದಲ್ಲಿ ಬಳಸಲಾಗುವ ವಸ್ತು ಎನ್ನಲಾಗಿದೆ. ಈ ಉತ್ಖನನ ಕಾರ್ಯಕ್ಕೆ ಯಾವುದೇ ಯಂತ್ರೋಪಕರಣಗಳನ್ನು ಬಳಸದೆ, ಪುರುಷ ಮತ್ತು ಮಹಿಳಾ ಕಾರ್ಮಿಕರಿಂದ ಮಾನವ ಸಂಪನ್ಮೂಲವನ್ನು ಬಳಸಲಾಗುತ್ತಿದೆ. ಹಿಂದೆ ಮನೆಯ ಅಡಿಪಾಯ ಅಗೆಯುವಾಗ ನಿಧಿ ಪತ್ತೆಯಾದ ನಂತರ ಉತ್ಖನನ ಕಾರ್ಯ ಚುರುಕುಗೊಂಡಿತಾದರೂ, ಈ ಗ್ರಾಮದಲ್ಲಿ ಈ ಹಿಂದೆಯೂ ಉತ್ಖನನ ಕೆಲಸ ನಡೆಯುತ್ತಿತ್ತು.

ಲಕ್ಕುಂಡಿಯ ಗತವೈಭವವನ್ನು ಮರುಕಳಿಸಲು ಮಾಜಿ ಸಚಿವರಾದ ಹೆಚ್.ಕೆ. ಪಾಟೀಲ್ ಅವರು ಪ್ರಮುಖ ಪಾತ್ರ ವಹಿಸಿದ್ದು, ದೇವಾಲಯಗಳ ಸ್ವರ್ಗ ಎಂದು ಹೆಸರಾದ ಲಕ್ಕುಂಡಿಯ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಆರು ದೇವಾಲಯಗಳು ಮತ್ತು ಒಂದು ಬಾವಿಯ ಅಭಿವೃದ್ಧಿಗೆ ಹತ್ತು ಕೋಟಿ ರೂಪಾಯಿ ಹಾಗೂ ಪ್ರವಾಸಿಗರ ಮೂಲಸೌಕರ್ಯಕ್ಕೆ ಐದು ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಿದ್ಧು ಪಾಟೀಲ್ ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನಲ್ಲಿ ಮುಗಿಯುತ್ತಿಲ್ಲ ರಸ್ತೆ ಗುಂಡಿ ಗೋಳು; ಗುಂಡಿಗೆ ಬಿದ್ದು ಕೈ ಮುರಿದುಕೊಂಡ ಟೆಕ್ಕಿ – Kannada News | Bengaluru Pothole Menace: Techie Suffers Fractured Hand in Varthur Accident

ಬೆಂಗಳೂರು, ಜನವರಿ 17: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಸಮಸ್ಯೆ ಮತ್ತೆ ಮುನ್ನೆಲೆಗೆ ಬಂದಿದೆ. ವರ್ತೂರಿನಲ್ಲಿ ಜನವರಿ 12ರಂದು ಸಂಜೆ ಸುಮಾರು 5 ಗಂಟೆಗೆ ನಡೆದ ಅಪಘಾತದಲ್ಲಿ ಟೆಕ್ಕಿ ಶ್ರೀಧರ್ ಅವರು ರಸ್ತೆ ಗುಂಡಿಗೆ ಬಿದ್ದು ತಮ್ಮ ಕೈ ಮುರಿದುಕೊಂಡಿದ್ದಾರೆ. ಗುಂಜೂರು ಪಾಳ್ಯ ಸಿಡಿಪಿ ರಸ್ತೆಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅವರ ಗಾಡಿ ಗುಂಡಿಯಿಂದ ಸ್ಕಿಡ್ ಆಗಿ, ಬಲಗೈಗೆ ಫ್ರ್ಯಾಕ್ಚರ್ ಆಗಿದೆ. ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆಂದು ತಿಳಿದುಬಂದಿದೆ.

ನಗರದ ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಬೆಂಗಳೂರು ಹೈಕೋರ್ಟ್ ಸರ್ಕಾರಕ್ಕೆ ಛೀಮಾರಿ ಹಾಕಿತ್ತು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದಿಷ್ಟ ದಿನಾಂಕದೊಳಗೆ ಬೆಂಗಳೂರಿನಲ್ಲಿ ಒಂದು ಗುಂಡಿಯೂ ಕಾಣಿಸಬಾರದು ಎಂದು ಗಡುವು ನೀಡಿದ್ದರು. ಆದರೆ, ಈ ಆದೇಶಗಳು ಮತ್ತು ಗಡುವುಗಳ ಹೊರತಾಗಿಯೂ ರಸ್ತೆ ಗುಂಡಿಗಳ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ. ಕೆಲವೆಡೆ ತಾತ್ಕಾಲಿಕವಾಗಿ ತೇಪೆ ಹಾಕುವ ಕಾರ್ಯ ನಡೆದಿದೆಯಾದರೂ, ಇನ್ನೂ ಹಲವು ಪ್ರದೇಶಗಳಲ್ಲಿ ರಸ್ತೆ ಗುಂಡಿಗಳು ಹಾಗೆಯೇ ಉಳಿದುಕೊಂಡಿವೆ. ಟಿವಿ9 ಕನ್ನಡ ವಾಹಿನಿಯು ಗುಂಡಿಗಳ ಕುರಿತು ಅಭಿಯಾನ ನಡೆಸಿದರೂ ಸಮಸ್ಯೆ ಸಂಪೂರ್ಣ ನಿವಾರಣೆಯಾಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ! ಆ ರಾತ್ರಿ ತೋಟದ ಮನೆಯಲ್ಲಿ ನಡೆದಿದ್ದೇನು ಗೊತ್ತಾ? – Kannada News | Bagalkote Murder: Lover Kills Woman Over Illicit Affair, Fakes Tears Drama

ಕೊಲೆ ಮಾಡಿದ್ದೂ ಅವನೇ, ಪೊಲೀಸರಿಗೆ ಹೇಳಿದ್ದೂ ಅವನೇ!

ಬಾಗಲಕೋಟೆ,ಜನವರಿ 17: ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ (Bagalakot) ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ. ತೋಟದ ಮನೆಯಲ್ಲಿ ಒಂಟಿ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಾನೇ ಕೊಲೆ ಮಾಡಿದ್ದರೂ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ವೇಳೆ ಆತ ಸತ್ಯ ಬಿಚ್ಚಿಟ್ಟಿದ್ದಾನೆ.

ಮೂರನೆ ವ್ಯಕ್ತಿಗಾಗಿ ನಡೀತಾ ಕೊಲೆ?

ಕೊಲೆಯಾದ ಮಹಿಳೆಯನ್ನು ಯಮನವ್ವ (40)ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಶ್ರೀಶೈಲ ಪಾಟೀಲ್ (67) ಎಂದು ಪೊಲೀಸರು ತಿಳಿಸಿದ್ದಾರೆ. ಯಮನವ್ವ ಸುಮಾರು 20 ವರ್ಷಗಳ ಹಿಂದೆ ಪತಿಯಿಂದ ವಿಚ್ಛೇದನ ಪಡೆದಿದ್ದು, ಬಳಿಕ ಶ್ರೀಶೈಲ ಪಾಟೀಲ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಹೀಗಿರುವಾಗ ಇತ್ತೀಚೆಗೆ ಯಮನವ್ವ 27 ವರ್ಷದ ಯುವಕನೊಂದಿಗೆ ಸಂಪರ್ಕ ಹೊಂದಿದ್ದಾಳೆ ಎಂಬ ವಿಚಾರದಿಂದ ಶ್ರೀಶೈಲ  ಆಕ್ರೋಶಗೊಂಡಿದ್ದನು. ಇದೇ ವಿಷಯಕ್ಕೆ ರಾತ್ರಿ ಇಬ್ಬರ ನಡುವೆ ಆರಂಭವಾಗಿದ್ದ ಜಗಳ ತೀವ್ರ ಸ್ವರೂಪ ಪಡೆದಿತ್ತು.

ಕತ್ತು ಹಿಸುಕಿ ಕೊಂದು, ಶವದ ಮುಂದೆ ಕಣ್ಣೀರಿಟ್ಟ!

ಜಗಳದ ವೇಳೆ ಶ್ರೀಶೈಲ ಪಾಟಿಲ್ ಯಮನವ್ವಳ ಕಿವಿ ಭಾಗಕ್ಕೆ ಬಲವಾಗಿ ಹೊಡೆದಿದ್ದ. ಅಷ್ಟಕ್ಕೆ ಸುಮ್ಮನಾಗದ ಪ್ರಿಯಕರ, ಕತ್ತು ಹಿಸುಕಿ ಕೊಲೆಯೂ ಮಾಡಿದ್ದ. ಮಹಿಳೆಯ ಉಸಿರು ನಿಂತ ಮೇಲೆ ಭಯಕ್ಕೆ ಸ್ಥಳದಿಂದ ಕಾಲ್ಕಿತ್ತಿದ್ದ ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ.

ಇದನ್ನೂ ಓದಿ ಮಾರಿ ಹಬ್ಬಕ್ಕೆಂದು ಹೋದಾತ ಸಿಕ್ಕಿದ್ದು ಹೆಣವಾಗಿ: ಬರ್ಬರವಾಗಿ ಕೊಂದು ಶವ ಸುಟ್ಟರಾ ದುಷ್ಟರು?

ಮರುದಿನ ಬೆಳಿಗ್ಗೆ ಆತನೇ ಮನೆಯ ಬಾಗಿಲು ತೆರೆದು ಯಮನವ್ವ ಸಾವನ್ನಪ್ಪಿದ್ದಾಳೆ ಎಂದು ಇತರರಿಗೆ ಸುದ್ದಿ ತಿಳಿಸಿದ್ದ. ಆಕೆಗೆ ಹೃದಯಾಘಾತವಾಗಿದೆ ಎಂಬಂತೆ ನಾಟಕವಾಡಿ ಕಣ್ಣೀರು ಹಾಕಿದ್ದ ಆರೋಪಿ, ಬಳಿಕ ಸಾವಳಗಿ ಪೊಲೀಸರಿಗೂ ತಾನೇ ಮಾಹಿತಿ ನೀಡಿದ್ದ. ಆದರೆ ವಿಚಾರಣೆಯ ವೇಳೆ ಆರೋಪಿಯ ಮೊಸಳೆ ಕಣ್ಣೀರು ಬಯಲಾಗಿದ್ದು, ಸತ್ಯ ಒಪ್ಪಿಕೊಂಡಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 12:51 pm, Sat, 17 January 26

Source link

ಶ್ರೀ ಮಹಾಕಾಳೇಶ್ವರನಿಗೆ ವಿರಾಟ್ ಕೊಹ್ಲಿ ವಿಶೇಷ ಪೂಜೆ – Kannada News | Virat Kohli visits Shree Mahakaleshwar Temple in Ujjain

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 3ನೇ ಏಕದಿನ ಪಂದ್ಯವು ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಇಂದೋರ್​​ಗೆ ಆಗಮಿಸಿರುವ ವಿರಾಟ್ ಕೊಹ್ಲಿ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸರಣಿಯ ನಿರ್ಣಾಯಕ ಪಂದ್ಯಕ್ಕೂ ಮುನ್ನ ಕೊಹ್ಲಿ ತನ್ನ ಸಹ ಆಟಗಾರ ಕುಲ್ದೀಪ್ ಯಾದವ್ ಅವರೊಂದಿಗೆ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಅಲ್ಲದೆ ಕೆಲ ಹೊತ್ತು ದೇವರ ಸನ್ನಿಧಿಯಲ್ಲೇ ಸಮಯ ಕಳೆದರು.

ಇದೀಗ ವಿರಾಟ್ ಕೊಹ್ಲಿ ಮಹಾಕಾಳೇಶ್ವರನಿಗೆ ತಲೆಬಾಗಿ ಪ್ರಾರ್ಥಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಂದಹಾಗೆ ಕೊಹ್ಲಿ ಈ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲೇನಲ್ಲ.

ಈ ಹಿಂದೆ 2023 ರಲ್ಲಿ, ಪತ್ನಿ ಅನುಷ್ಕಾ ಶರ್ಮಾ ಜೊತೆಗೆ ಆಗಮಿಸಿ ಈ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿ ಶ್ರೀ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ವಿರಾಟ್ ಬ್ಯಾಟ್​ನಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸುತ್ತಿದ್ದಾರೆ ಅಭಿಮಾನಿಗಳು.

ಅಂದಹಾಗೆ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕ. ಅಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ ಗೆಲುವು ದಾಖಲಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯನ್ನು ಜಯಿಸಲಿದೆ. ಹೀಗಾಗಿ ಅಂತಿಮ ಏಕದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

 

 

Source link

Vastu Tips: ಬೆಳಿಗ್ಗೆ ಎದ್ದ ಕೂಡಲೇ ಈ ವಸ್ತುಗಳನ್ನು ನೋಡಲೇಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Tips: Avoid These 4 Things in Morning for a Positive Day and Success

ವಾಸ್ತು ನಂಬಿಕೆಯ ಪ್ರಕಾರ, ಒಬ್ಬ ವ್ಯಕ್ತಿ ಬೆಳಿಗ್ಗೆ ಎದ್ದ ತಕ್ಷಣ ನೋಡುವ ಮೊದಲ ದೃಶ್ಯವು ಆ ದಿನದ ಮನಸ್ಥಿತಿ, ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ನಿರ್ಧರಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಬೆಳಿಗ್ಗೆ ಕಾಣುವ ವಸ್ತುಗಳು ಮನಸ್ಸಿನಲ್ಲಿ ಸಕಾರಾತ್ಮಕ ಅಥವಾ ನಕಾರಾತ್ಮಕ ಆಲೋಚನೆಗಳನ್ನು ಹುಟ್ಟುಹಾಕಿ ದಿನದ ಫಲಿತಾಂಶಗಳ ಮೇಲೆ ಪ್ರಭಾವ ಬೀರುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅದಕ್ಕಾಗಿಯೇ, ಎದ್ದ ತಕ್ಷಣ ನೋಡುವ ಕೆಲವು ವಿಷಯಗಳನ್ನು ಅಶುಭವೆಂದು ಪರಿಗಣಿಸಲಾಗಿದೆ.

ನೆರಳನ್ನು ನೋಡುವುದು:

ವಾಸ್ತು ಪ್ರಕಾರ, ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ನಿಮ್ಮದೇ ನೆರಳನ್ನು ನೋಡುವುದು ಶುಭವಲ್ಲ ಎಂದು ನಂಬಲಾಗಿದೆ. ದಿನದ ಆರಂಭವೇ ನೆರಳಿನೊಂದಿಗೆ ಆಗುವುದರಿಂದ ಮನಸ್ಸಿನಲ್ಲಿ ಅಸ್ಪಷ್ಟತೆ ಮತ್ತು ನಕಾರಾತ್ಮಕ ಶಕ್ತಿ ಹೆಚ್ಚಾಗಬಹುದು ಎಂದು ಹೇಳಲಾಗುತ್ತದೆ.

ಒಡೆದ ಕನ್ನಡಿ:

ಒಡೆದ ಕನ್ನಡಿಯನ್ನು ಬೆಳಿಗ್ಗೆ ನೋಡುವುದನ್ನು ವಾಸ್ತು ಶಾಸ್ತ್ರ ಅಶುಭವೆಂದು ಪರಿಗಣಿಸುತ್ತದೆ. ವಿಶೇಷವಾಗಿ ಹೊರಗೆ ಹೋಗುವ ಮುನ್ನ ಒಡೆದ ಕನ್ನಡಿ ಕಣ್ಣಿಗೆ ಬಿದ್ದರೆ, ಅದು ಈಗಾಗಲೇ ಮಾಡಿದ ಕೆಲಸಗಳಲ್ಲಿ ಅಡಚಣೆಗಳು ಮತ್ತು ಹಿನ್ನಡೆಗಳನ್ನುಂಟುಮಾಡಬಹುದು ಎಂಬ ನಂಬಿಕೆ ಇದೆ. ಒಡೆದ ಕನ್ನಡಿಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಕೊಳಕು ಪಾತ್ರೆ:

ಬೆಳಿಗ್ಗೆ ಎದ್ದ ತಕ್ಷಣ ಅಡುಗೆಮನೆಯಲ್ಲಿರುವ ಕೊಳಕು ಪಾತ್ರೆಗಳನ್ನು ನೋಡುವುದೂ ಶುಭವಲ್ಲ ಎಂದು ವಾಸ್ತು ಶಾಸ್ತ್ರ ಸೂಚಿಸುತ್ತದೆ. ಅಶುದ್ಧತೆ ಮತ್ತು ಅಸ್ತವ್ಯಸ್ತತೆ ಮನಸ್ಸಿನಲ್ಲಿ ಅಶಾಂತಿಯನ್ನು ಉಂಟುಮಾಡಿ, ಮನೆಯ ಸಕಾರಾತ್ಮಕ ವಾತಾವರಣವನ್ನು ಹಾಳುಮಾಡಬಹುದು ಎಂದು ನಂಬಲಾಗಿದೆ. ಇದರಿಂದ ಮನೆಗೆ ದುಃಖ ಮತ್ತು ಆರ್ಥಿಕ ತೊಂದರೆಗಳು ಬರಬಹುದು ಎಂಬ ನಂಬಿಕೆಯೂ ಇದೆ. ಆದ್ದರಿಂದ ರಾತ್ರಿ ಊಟದ ಬಳಿಕ ಪಾತ್ರೆಗಳನ್ನು ಸ್ವಚ್ಛಗೊಳಿಸುವ ಅಭ್ಯಾಸವನ್ನು ಬೆಳೆಸುವುದು ಉತ್ತಮ.

ಇದನ್ನೂ ಓದಿ: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಮುರಿದ ದೇವತಾ ವಿಗ್ರಹ:

ಬೆಳಿಗ್ಗೆ ಮುರಿದ ದೇವತಾ ವಿಗ್ರಹಗಳನ್ನು ನೋಡುವುದನ್ನು ಅಥವಾ ಮುಟ್ಟುವುದನ್ನು ತಪ್ಪಿಸಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಮನೆಯಲ್ಲಿ ಮುರಿದ ವಿಗ್ರಹಗಳು ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ ಎಂದು ನಂಬಲಾಗುತ್ತದೆ. ಇಂತಹ ವಿಗ್ರಹಗಳನ್ನು ಗೌರವಪೂರ್ವಕವಾಗಿ ಪವಿತ್ರ ನದಿ ಅಥವಾ ಜಲಾಶಯದಲ್ಲಿ ವಿಸರ್ಜಿಸುವುದು ಶ್ರೇಯಸ್ಕರವೆಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಒಟ್ಟಾರೆ, ಬೆಳಿಗ್ಗೆ ಎದ್ದ ತಕ್ಷಣ ಶುದ್ಧ, ಶುಭ ಮತ್ತು ಸಕಾರಾತ್ಮಕ ವಸ್ತುಗಳನ್ನು ನೋಡುವ ಅಭ್ಯಾಸವು ದಿನವಿಡೀ ಮನಸ್ಸಿಗೆ ಶಾಂತಿ, ಆತ್ಮವಿಶ್ವಾಸ ಮತ್ತು ಉತ್ತಮ ಫಲಿತಾಂಶಗಳನ್ನು ತರುತ್ತದೆ ಎಂಬುದು ವಾಸ್ತು ಶಾಸ್ತ್ರದ ಅಭಿಪ್ರಾಯ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ – Kannada News | Illegal Bangladeshi Immigrants Entering Bengaluru via West Bengal Trains? Chalavadi Narayanaswamy Flags Security Concerns

ಬೆಂಗಳೂರು, ಜನವರಿ 17: ಪಶ್ಚಿಮ ಬಂಗಾಳ–ಬೆಂಗಳೂರು ನಡುವಣ ರೈಲು ಸಂಚಾರ ರಾಷ್ಟ್ರೀಯ ಭದ್ರತೆಗೆ ಭಾರೀ ಸವಾಲಾಗುತ್ತಿದೆ ಎಂದು ಕರ್ನಾಟಕ (Karnataka) ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಪತ್ರವನ್ನೂ ಬರೆದಿರುವ ಅವರು, ಅಕ್ರಮ ವಲಸಿಗರು ರೈಲುಗಳ ಮೂಲಕ ದಕ್ಷಿಣ ಭಾರತ ಪ್ರವೇಶಿಸುವುದನ್ನು ತಡೆಯುವುದಕ್ಕಾಗಿ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಮತ್ತು ಬೆಂಗಳೂರು ನಡುವೆ ಪ್ರಸ್ತುತ 15ರಿಂದ 17ರಷ್ಟು ವೀಕ್ಲಿ ಮತ್ತು ಡೈಲಿ ರೈಲುಗಳು ಸಂಚರಿಸುತ್ತಿದ್ದು, ಈ ಮಾರ್ಗಗಳನ್ನು ಅಕ್ರಮ ವಲಸಿಗರು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿವೆ. ಅಲ್ಲದೆ, ಸಾರ್ವಜನಿಕರಿಂದ ಆಕ್ಷೇಪಗಳೂ ವ್ಯಕ್ತವಾಗಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿಶೇಷವಾಗಿ ಅಂತರರಾಷ್ಟ್ರೀಯ ಗಡಿಗಳಲ್ಲಿ ಅಕ್ರಮವಾಗಿ ಪ್ರವೇಶಿಸಿರುವವರು ಈ ಮಾರ್ಗದ ಮೂಲಕ ದಕ್ಷಿಣ ಭಾರತಕ್ಕೆ ನುಸುಳುತ್ತಿದ್ದಾರೆ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ನಕಲಿ ದಾಖಲೆಗಳನ್ನು ಬಳಸಿ ವಂಚಿಸುವ ಅಕ್ರಮ ವಲಸಿಗರು

ಈ ಮಾರ್ಗಗಳಲ್ಲಿ ಪ್ರಯಾಣಿಸುವ ಹಲವರು ನಕಲಿ ಅಥವಾ ಅಕ್ರಮಗಳ ಮೂಲಕ ಪಡೆದ ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಗಳನ್ನು ಬಳಸುತ್ತಿರುವುದು ಮತ್ತೊಂದು ಆತಂಕಕಾರಿ ಅಂಶವಾಗಿದೆ. ಇಂತಹ ದಾಖಲೆಗಳು ನಾಗರಿಕತ್ವದ ಸಾಬೀತು ಅಲ್ಲ ಎಂದು ಬಾಂಬೆ ಹೈಕೋರ್ಟ್ ನೀಡಿರುವ ಇತ್ತೀಚಿನ ತೀರ್ಪನ್ನೂ ಛಲವಾದಿ ನಾರಾಯಣಸ್ವಾಮಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೋರ್ಟ್ ಆದೇಶವಿದ್ದ ಹೊರತಾಗ್ಯೂ ಇಂಥ ನಕಲಿ ದಾಖಲೆಗಳನ್ನು ಬಳಸಿಕೊಂಡು ಸ್ಥಳೀಯ ಭದ್ರತಾ ತಪಾಸಣೆಗಳನ್ನು ತಪ್ಪಿಸಿಕೊಂಡು ಸಂಚರಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರು ನಗರವು ಕಾರ್ಮಿಕ ವಸತಿಗಳ ಪ್ರಮುಖ ಕೇಂದ್ರವಾಗಿದ್ದು, ಪಶ್ಚಿಮ ಬಂಗಾಳ ಹಾಗೂ ಉತ್ತರ ಭಾರತದಿಂದ ಬಂದ ಅಕ್ರಮ ವಲಸಿಗರು ಇಲ್ಲಿ ನೆಲೆಸುತ್ತಿರುವ ಬಗ್ಗೆ ವರದಿಗಳಿವೆ. ಇದರಿಂದ ನಗರ ಹಾಗೂ ರಾಜ್ಯದ ಆಂತರಿಕ ಭದ್ರತೆಗೆ ಗಂಭೀರ ಅಪಾಯ ಎದುರಾಗುತ್ತಿದೆ ಎಂದು ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.

ನಾರಾಯಣಸ್ವಾಮಿ ಸೂಚಿಸಿದ ಭದ್ರತಾ ಕ್ರಮಗಳೇನು?

ತಕ್ಷಣ ಕೈಗೊಳ್ಳಬೇಕಾದ ಕೆಲವು ಕ್ರಮಗಳ ಬಗ್ಗೆಯೂ ನಾರಾಯಣಸ್ವಾಮಿ ಸಲಹೆ ನೀಡಿದ್ದಾರೆ. ಅವುಗಳು ಹೀಗಿವೆ;

  • ಪ್ರಮುಖ ರೈಲು ನಿಲ್ದಾಣಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಕಟ್ಟುನಿಟ್ಟಿನ ಗುರುತು ಪರಿಶೀಲನೆ ನಡೆಸುವುದು.
  • ಈ ಮಾರ್ಗದ ರೈಲುಗಳ ಸಂಖ್ಯೆಯ ಪುನರ್‌ಪರಿಶೀಲನೆ, ಆರ್‌ಪಿಎಫ್ ಹಾಗೂ ಗುಪ್ತಚರ ದಳದ ಸಿಬ್ಬಂದಿಯನ್ನು ಗುಪ್ತವಾಗಿ ನಿಯೋಜಿಸಿ ಅನುಮಾನಾಸ್ಪದ ಚಟುವಟಿಕೆಗಳ ನಿಗಾ ಇರಿಸುವುದು.
  • ರೈಲ್ವೆ ಬುಕಿಂಗ್ ವ್ಯವಸ್ಥೆಯನ್ನು ಎಸ್‌ಐಆರ್/ಎನ್‌ಆರ್‌ಸಿ ಸೇರಿದಂತೆ ರಾಷ್ಟ್ರೀಯ ಡೇಟಾಬೇಸ್‌ಗಳಿಗೆ ಜೋಡಿಸುವುದು.

ಭಾರತದ ಗಡಿಗಳ ಭದ್ರತೆ ಹಾಗೂ ನಗರಗಳ ಸುರಕ್ಷತೆ ಭಾರತೀಯ ರೈಲ್ವೆಯ ಜಾಗೃತಿಯ ಮೇಲೆಯೇ ಅವಲಂಬಿತವಾಗಿದೆ ಎಂದು ಹೇಳಿರುವ ನಾರಾಯಣಸ್ವಾಮಿ, ಈ ವಿಷಯವನ್ನು ಆದ್ಯತೆಯ ರಾಷ್ಟ್ರೀಯ ಭದ್ರತಾ ವಿಚಾರವಾಗಿ ಪರಿಗಣಿಸಿ ತ್ವರಿತ ಹಾಗೂ ದೃಢ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:19 pm, Sat, 17 January 26

Source link

Vasthu Shastra: ತಪ್ಪಿಯೂ ಕೂಡ ಈ ವಸ್ತುಗಳನ್ನು ಕಪಾಟಿನಲ್ಲಿ ಇಡಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Wardrobe Vastu: Avoid These Items for Financial Stability and Positive Home Energy

ಪ್ರತಿ ಮನೆಯಲ್ಲೂ ಬೀರು ಅಥವಾ ಕಪಾಟು ಇದ್ದೇ ಇರುತ್ತದೆ. ದಿನನಿತ್ಯ ಬಳಸುವ ಬಟ್ಟೆ, ಹಣ, ದಾಖಲೆಗಳು ಸೇರಿದಂತೆ ಅನೇಕ ವಸ್ತುಗಳನ್ನು ಅದರಲ್ಲಿ ಇಡಲಾಗುತ್ತದೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಬೀರುವಿನಲ್ಲಿ ಯಾವ ವಸ್ತುಗಳನ್ನು ಇಡಬೇಕು ಮತ್ತು ಯಾವುವನ್ನು ಇಡಬಾರದು ಎಂಬುದು ಮನೆಯ ಸಕಾರಾತ್ಮಕತೆ ಮತ್ತು ಆರ್ಥಿಕ ಸ್ಥಿತಿಗೆ ನೇರವಾಗಿ ಸಂಬಂಧಿಸಿದೆ. ಕೆಲವು ವಸ್ತುಗಳು ಶುಭ ಶಕ್ತಿಯನ್ನು ಆಕರ್ಷಿಸುತ್ತವೆ ಎಂದರೆ, ಇನ್ನೂ ಕೆಲವು ವಸ್ತುಗಳು ನಕಾರಾತ್ಮಕ ಶಕ್ತಿಯನ್ನು ಹರಡಬಹುದು. ಅದಕ್ಕಾಗಿ ಬೀರುವಿನ ಬಳಕೆಯಲ್ಲಿ ಎಚ್ಚರಿಕೆ ಅಗತ್ಯವೆಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಸುಗಂಧ ದ್ರವ್ಯಗಳು:

ವಾಸ್ತು ಪ್ರಕಾರ, ಸುಗಂಧ ದ್ರವ್ಯಗಳು ಅಥವಾ ಪರಿಮಳಯುಕ್ತ ವಸ್ತುಗಳನ್ನು ಬೀರು ಅಥವಾ ಕಪಾಟಿನಲ್ಲಿ ಇಡುವುದು ಒಳ್ಳೆಯದಲ್ಲ. ಇವುಗಳನ್ನು ತಪ್ಪಾಗಿ ಇಡುವುದರಿಂದ ವಾಸ್ತು ದೋಷ ಉಂಟಾಗಬಹುದು ಎಂದು ನಂಬಲಾಗಿದೆ. ಕಪಾಟಿನಲ್ಲಿ ಸುಗಂಧ ದ್ರವ್ಯಗಳನ್ನು ಹೆಚ್ಚು ದಿನ ಇಡುವುದರಿಂದ ಹಣಕಾಸಿನ ನಷ್ಟ, ಅನಗತ್ಯ ಖರ್ಚು ಮತ್ತು ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಂದು ವಾಸ್ತು ತಜ್ಞರು ಎಚ್ಚರಿಸುತ್ತಾರೆ.

ಕನ್ನಡಿ:

ಅದೇ ರೀತಿ, ಬೀರು ಅಥವಾ ವಾರ್ಡ್ರೋಬ್ ಮೇಲೆ ಕನ್ನಡಿ ಇರುವುದೂ ಶುಭವಲ್ಲ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಿಶೇಷವಾಗಿ ಮಲಗುವ ಕೋಣೆಯಲ್ಲಿರುವ ಬೀರುವಿನ ಮೇಲೆ ಕನ್ನಡಿ ಇದ್ದರೆ ಅದು ನಕಾರಾತ್ಮಕ ಶಕ್ತಿಯನ್ನು ಪ್ರತಿಬಿಂಬಿಸಿ ಆರ್ಥಿಕ ಅಸ್ಥಿರತೆ, ಮನಸ್ಸಿನ ಅಶಾಂತಿ ಮತ್ತು ಕುಟುಂಬದ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ನಂಬಲಾಗಿದೆ.

ಹರಿದ ಕಾಗದ:

ಬೀರುವಿನಲ್ಲಿ ಹರಿದ, ಹಳೆಯ ಅಥವಾ ವ್ಯರ್ಥವಾದ ಕಾಗದಗಳನ್ನು ಸಂಗ್ರಹಿಸುವ ಅಭ್ಯಾಸವನ್ನೂ ಬಿಟ್ಟುಬಿಡುವುದು ಉತ್ತಮ. ವಾಸ್ತು ನಂಬಿಕೆಯ ಪ್ರಕಾರ, ಲಕ್ಷ್ಮಿ ದೇವಿಯು ಬೀರು ಅಥವಾ ತಿಜೋರಿಯಲ್ಲಿ ವಾಸಿಸುತ್ತಾಳೆ ಎನ್ನಲಾಗುತ್ತದೆ. ಅಲ್ಲಿ ಅಶುದ್ಧತೆ ಅಥವಾ ವ್ಯರ್ಥ ವಸ್ತುಗಳಿದ್ದರೆ ಲಕ್ಷ್ಮಿ ದೇವಿಯ ಕೃಪೆ ಕಡಿಮೆಯಾಗುತ್ತದೆ ಎಂಬ ನಂಬಿಕೆ ಇದೆ. ಇದರ ಪರಿಣಾಮವಾಗಿ ಹಣಕಾಸಿನ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಕಪ್ಪು ಬಟ್ಟೆಗಳು:

ಇನ್ನೊಂದು ಪ್ರಮುಖ ವಿಷಯವೆಂದರೆ ಕಪ್ಪು ಬಟ್ಟೆಗಳು ಮತ್ತು ಕಪ್ಪು ವಸ್ತುಗಳು. ವಾಸ್ತು ಪ್ರಕಾರ, ಕಪ್ಪು ಬಟ್ಟೆ, ಕಪ್ಪು ಪರ್ಸ್ ಅಥವಾ ಕಪ್ಪು ಚೀಲಗಳನ್ನು ಬೀರುವಿನಲ್ಲಿ ಇಡುವುದು ಶುಭವಲ್ಲ. ವಿಶೇಷವಾಗಿ ಹಣವನ್ನು ಕಪ್ಪು ಬಟ್ಟೆಯಲ್ಲಿ ಇಡುವುದರಿಂದ ಸಂಪತ್ತಿನ ನಷ್ಟ ಮತ್ತು ಸಂತೋಷದ ಹರಿವಿಗೆ ಅಡ್ಡಿ ಉಂಟಾಗುತ್ತದೆ ಎಂದು ನಂಬಲಾಗಿದೆ.

ಹೀಗಾಗಿ, ಬೀರುವಿನಲ್ಲಿ ಸದಾ ಸ್ವಚ್ಛತೆ, ಶಿಸ್ತು ಮತ್ತು ಶುಭ ವಸ್ತುಗಳನ್ನು ಮಾತ್ರ ಇಡುವ ಅಭ್ಯಾಸವನ್ನು ಬೆಳೆಸಿದರೆ, ಅದು ಮನೆಯಲ್ಲಿನ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಸ್ಥಿರತೆಗೆ ಸಹಕಾರಿಯಾಗುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುಸ್ಲಿಂ ಎಂಬ ಕಾರಣಕ್ಕೆ ಹಿಂದಿಯಲ್ಲಿ ನನಗೆ ಆಫರ್​​ಗಳು ಬರುತ್ತಿಲ್ಲ; ಎಆರ್ ರೆಹಮಾನ್ – Kannada News | AR Rahman: No Bollywood offers due to religion Unpacking the controversy

ಎಆರ್ ರೆಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕ. ಅವರು ಆಸ್ಕರ್ ಕೂಡ ಗೆದ್ದಿದ್ದಾರೆ. ಅವರು ಪಡೆದ ಖ್ಯಾತಿ ತುಂಬಾನೇ ದೊಡ್ಡದು. ಈಗ ರೆಹಮಾನ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ಹಿಂದಿ ಚಿತ್ರರಂಗದಲ್ಲಿ ಧರ್ಮದ ಕಾರಣಕ್ಕೆ ನನಗೆ ಆಫರ್ ಸಿಗುತ್ತಿಲ್ಲ’ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ರೆಹಮಾನ್ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಅವರ ಹೇಳಿಕೆ ಸರಿ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಿಬಿಸಿ ಏಷ್ಯನ್ ನೆಟ್ವರ್ಕ್​​ಗೆ ನೀಡಿದ ಸಂದರ್ಶನದಲ್ಲಿ ರೆಹಮಾನ್ ಮಾತನಾಡಿದರು. ‘ಕಳೆದ ಎಂಟು ವರ್ಷಗಳಿಂದ ನನಗೆ ಹಿಂದಿ ಸಿನಿಮಾ ರಂಗದಲ್ಲಿ ಆಫರ್​​ಗಳು ಬಂದಿಲ್ಲ. ಇದಕ್ಕೆ ಕಾರಣ ಏನು ಎಂಬ ವಿಷಯ ಹಿಂದಿನ ಬಾಗಿಲಿನಿಂದ ನನಗೆ ತಿಳಿಯುತ್ತದೆ. ನಾನು ಕೆಲಸ ಹುಡುಕುತ್ತಾ ಇಲ್ಲ. ಕೆಲಸ ನನ್ನ ಬಳಿಗೆ ಬರಬೇಕೆಂದು ನಾನು ಬಯಸುತ್ತೇನೆ’ ಎಂದು ಅವರು ಹೇಳಿದ್ದಾರೆ.

‘ರಾಜನಿಂದ ಅಥವಾ ಭಿಕ್ಷುಕನಿಂದ ಪಡೆದ ಜ್ಞಾನಕ್ಕೆ ಬೆಲೆ ಕಟ್ಟಲಾಗದು. ಒಳ್ಳೆಯದರಿಂದ ಅಥವಾ ಕೆಟ್ಟದರಿಂದ ಪಡೆದ ಜ್ಞಾನಕ್ಕೆ ಬೆಲೆ ಕಟ್ಟಲಾಗದು ಎಂದು ಪ್ರವಾದಿ ಹೇಳಿದ್ದರು. ನಾವು ಸಣ್ಣತನ ಮತ್ತು ಸ್ವಾರ್ಥವನ್ನು ಮೀರಿ ಹೋಗಬೇಕು’ ಎಂದು ರೆಹಮಾನ್ ಹೇಳಿದ್ದಾರೆ.

ಇದನ್ನೂ ಓದಿ: ನಟನೆ ಆರಂಭಿಸಿದ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್

‘ಸೃಜನಶೀಲರಲ್ಲದ ಜನರು ಬಾಲಿವುಡ್​​​ನಲ್ಲಿ ವಿಷಯಗಳನ್ನು ನಿರ್ಧರಿಸುವ ಶಕ್ತಿಯನ್ನು ಹೊಂದಿದ್ದಾರೆ. ಧರ್ಮದ ವಿಷಯದ ಕಾರಣಕ್ಕೂ ಆಫರ್ ಬರದೆ ಇರಬಹುದು. ಸಿನಿಮಾಗೆ ನಿಮ್ಮನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂಬ ಸುದ್ದಿ ಬರುತ್ತದೆ. ಆದರೆ, ನಂತರ ಮ್ಯೂಸಿಕ್ ಕಂಪನಿ ಅವರದ್ದೇ ಆದ ಐದು ಮ್ಯೂಸಿಕ್ ಕಂಪೋಸರ್​​​​ಗಳನ್ನು ಆಯ್ಕೆ ಮಾಡಿಕೊಂಡಿರುತ್ತದೆ. ಆಗ ನಾನು ಮನೆಯಲ್ಲಿ ಹಾಯಾಗಿ ವಿಶ್ರಾಂತಿ ಪಡೆಯಬಹುದು’ ಎಂದಿದ್ದಾರೆ ಅವರು.

‘ನಾನು ಮುಸ್ಲಿಂ, ನಾನು ಬ್ರಾಹ್ಮಣ ಶಾಲೆಯಲ್ಲಿ ಓದಿದೆ. ಅಲ್ಲಿ ನಾನು ರಾಮಾಯಣ ಹಾಗೂ ಮಹಾಭಾರತ ಕಲಿತೆ’ ಎಂದಿದ್ದಾರೆ ಅವರು. ಈಗ ಹಿಂದಿಯ ‘ರಾಮಾಯಣ’ ಚಿತ್ರಕ್ಕೆ ಅವರದ್ದೇ ಸಂಗೀತ ಸಂಯೋಜನೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 12:00 pm, Sat, 17 January 26

Source link

Exit mobile version