ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್ – Kannada News | Shreyanka Patil Creates New History in WPL 2026

WPL 2026: ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ (Shreyanka Patil) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 5 ವಿಕೆಟ್​ ಕಬಳಿಸುವ ಮೂಲಕ. ಈ ಐದು ವಿಕೆಟ್​ಗಳೊಂದಿಗೆ ಭರ್ಜರಿ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

Source link

ಬೆಂಗಳೂರು: ಬೆಳ್ಳಂಬೆಳಗ್ಗೆ ಗುದ್ದಲಿ, ಪೊರಕೆ ಹಿಡಿದು ಬೀದಿಗಿಳಿದ ಟೆಕ್ಕಿಗಳು!

ಬೆಂಗಳೂರು, ಜನವರಿ 17: ನಗರದ ಮಹದೇವಪುರದ ಬಳಗೆರೆ ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚದಿರುವುದನ್ನು ಖಂಡಿಸಿ ಐಟಿ–ಬಿಟಿ ಉದ್ಯೋಗಿಗಳು ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ಹಾಳಾಗಿರುವ ರಸ್ತೆಗಳಿಂದ ನಿತ್ಯ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಟೆಕ್ಕಿಗಳು ಗುದ್ದಲಿ, ಬಾಂಡಲಿ, ಹಾರೆ ಮತ್ತು ಪೊರಕೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಟ್ರ್ಯಾಕ್ಟರ್ ತರಿಸಿ ರಸ್ತೆ ಮೇಲೆ ತುಂಬಿಕೊಂಡಿದ್ದ ಮಣ್ಣು ಹಾಗೂ ಧೂಳನ್ನು ಸ್ವಚ್ಛಗೊಳಿಸುವ ಮೂಲಕ ಆಡಳಿತದ ನಿರ್ಲಕ್ಷ್ಯವನ್ನು ಪ್ರಶ್ನಿಸಿದ್ದಾರೆ. ಬಳಗೆರೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ರಸ್ತೆ ಗುಂಡಿಗೆ ಬಿದ್ದು ಟೆಕ್ಕಿ ಶ್ರೀಧರ್ ಅವರಿಗೆ ಕೈ ಮುರಿದಿದ್ದ ಘಟನೆ ನಡೆದಿದ್ದು, ಈ ಹಿನ್ನೆಲೆ ಅಧಿಕಾರಿಗಳು ತಕ್ಷಣ ರಸ್ತೆ ದುರಸ್ತಿ ಕೈಗೊಳ್ಳಬೇಕು ಎಂದು ಟೆಕ್ಕಿಗಳು ಒತ್ತಾಯಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

Namma Metro: ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ – Kannada News | Tejasvi Surya Urges Halt to Bangalore Metro Fare Hike

ಮತ್ತೆ ಮೆಟ್ರೋ ದರ ಹೈಕ್ ಶಾಕ್? ದರ ಏರಿಕೆ ತಡೆಗೆ ತೇಜಸ್ವಿ ಸೂರ್ಯ ಪತ್ರ

ಬೆಂಗಳೂರು, ಜನವರಿ 17: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್ಸಿಎಲ್ (BMRCL) ಅಧಿಕಾರಿಗಳು ಶೇ 105.5 ರಷ್ಟು ಒನ್ ಟು ಡಬಲ್ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದರವನ್ನು ಶೇ 71.5 ಕ್ಕೆ ಇಳಿಸಲಾಗಿತ್ತು. ಈ ಗೊಂದಲದ ನಡುವೆಯೇ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಅಣಿಯಾಗಿದ್ದು, ಇದನ್ನು ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳಿಗೆ ತೇಜಸ್ವಿ ಸೂರ್ಯ ಪತ್ರ

ಪ್ರತಿವರ್ಷ ಫೆಬ್ರವರಿಯಲ್ಲಿ 5% ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್​ಗೆ ಕಳುಹಿಸಲಾಗಿದೆ.

ಇದನ್ನೂ ಓದಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಲೈನ್​ನಲ್ಲಿ ಇಂದಿನಿಂದ 7ನೇ ರೈಲು ಸಂಚಾರ

ಬಿಎಂಆರ್ಸಿಎಲ್ ವಿರುದ್ಧ ಹೋರಾಟದ ಎಚ್ಚರಿಕೆ

ಇತ್ತ, ಸೇವ್ ಬೆಂಗಳೂರು ಕಮಿಟಿ ಹಾಗೂ ಬೆಂಗಳೂರು ಮೆಟ್ರೋ ಪ್ರಯಾಣಿಕರ ವೇದಿಕೆ ಬಿಎಂಆರ್ಸಿಎಲ್ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಮುಂದಿನ ತಿಂಗಳಿಂದ ದರ ಏರಿಕೆ ಮಾಡಬಾರದು ಎಂದು ಒತ್ತಾಯಿಸಿದೆ. ಪದೇಪದೇ ದರ ಏರಿಕೆ ಪ್ರಯಾಣಿಕರ ಮೇಲೆ ಭಾರೀ ಹೊರೆ ಆಗುತ್ತಿದೆ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:26 am, Sat, 17 January 26

Source link

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಕ್ರಿಕೆಟಿಗನಿಗೆ ಜೀವ ಬೆದರಿಕೆ..! – Kannada News | CWAB president Mohammad Mithun revealed that he received death threats

ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ವಿರುದ್ಧ ಸೆಟೆದು ನಿಂತ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್​ಗೆ ಜೀವ ಬೆದರಿಕೆಯೊಡ್ಡಲಾಗಿದೆ. ಮೊಹಮ್ಮದ್ ಮಿಥುನ್, ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರ ರಾಜೀನಾಮೆ ಆಗ್ರಹಿಸಿದ್ದರು. ಆಟಗಾರರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನಲೆ ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘವು ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ಸ್ಥಾನದಿಂದ ನಜ್ಮುಲ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿತ್ತು.

ಅಷ್ಟೇ ಅಲ್ಲದೆ ನಜ್ಮುಲ್ ಇಸ್ಲಾಂ ಅವರು ರಾಜೀನಾಮೆ ನೀಡುವವರೆಗೆ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಬಾಂಗ್ಲಾ ಆಟಗಾರರು ತಿಳಿಸಿದ್ದರು. ಅದರಂತೆ ಶುಕ್ರವಾರ ನಡೆಯಬೇಕಿದ್ದ ಪಂದ್ಯಗಳಿಂದ ಬಾಂಗ್ಲಾದೇಶ್ ಆಟಗಾರರು ಹಿಂದೆ ಸರಿದಿದ್ದರು. ಹೀಗಾಗಿ 2 ಪಂದ್ಯಗಳು ರದ್ದಾಗಿದ್ದವು.

ಈ ಬೆಳವಣಿಗೆಗಳ ಬೆನ್ನಲ್ಲೇ ತನಗೆ ಕರೆ ಮಾಡಿ ಜೀವ ಬೆದರಿಕೆಯೊಡ್ಡಲಾಗುತ್ತಿದೆ ಎಂದು ಬಾಂಗ್ಲಾದೇಶ್ ಕ್ರಿಕೆಟಿಗರ ಕಲ್ಯಾಣ ಸಂಘ (CWAB) ಅಧ್ಯಕ್ಷ ಮೊಹಮ್ಮದ್ ಮಿಥುನ್​ ಬಹಿರಂಗಪಡಿಸಿದ್ದಾರೆ. ನಾನು ಆಟಗಾರರ ಹಕ್ಕುಗಳು ಮತ್ತು ಸುರಕ್ಷತೆಯನ್ನು ಪ್ರತಿಪಾದಿಸುತ್ತಿದ್ದೇನೆ.

ಈ ಹಿನ್ನಲೆಯಲ್ಲಿ ನನಗೆ ಕೊಲೆ ಬೆದರಿಕೆಗಳು ಬರುತ್ತಿವೆ. ನಾನು ಎಂದಿಗೂ ದೇಶದ ವಿರುದ್ಧ ಮಾತನಾಡಿಲ್ಲ. ಯಾವುದೇ ವಿವಾದಾತ್ಮಕ ವಿಷಯಗಳಲ್ಲಿ ಭಾಗಿಯಾಗಿಲ್ಲ. ಇದಾಗ್ಯೂ ನಗಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ. ಇವೆಲ್ಲವೂ ನನಗೆ ಹೊಸ ಅನುಭವ.

ನಾನು ಕ್ರಿಕೆಟ್ ಮತ್ತು ಆಟಗಾರರ ಹಿತಾಸಕ್ತಿಗಾಗಿ ಮಾತ್ರ ಮಾತನಾಡಿದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ಸಮಸ್ಯೆ ಇಲ್ಲ. ನಾನು ಒಂದು ಸಂಸ್ಥೆಯ ಅಧ್ಯಕ್ಷನಾಗಿರುವುದರಿಂದ, ನಾನು ಆಟಗಾರರ ಹಕ್ಕುಗಳ ಪರವಾಗಿ ಮಾತನಾಡದಿದ್ದರೆ, ಈ ಹುದ್ದೆಯನ್ನು ಅಲಂಕರಿಸುವುದರ ಅರ್ಥವೇನು? ಯಾರೂ ದೇಶಕ್ಕಿಂತ ಮೇಲಲ್ಲ ಎಂದು ಮೊಹಮ್ಮದ್ ಮಿಥುನ್ ಹೇಳಿದ್ದಾರೆ.

ಇದಾಗ್ಯೂ ಯಾರ ಕಡೆಯಿಂದ ಬೆದರಿಕೆ ಕರೆಗಳು ಬರುತ್ತಿವೆ ಎಂಬುದನ್ನು ಮೊಹಮ್ಮದ್ ಮಿಥುನ್ ಬಹಿರಂಗಪಡಿಸಿಲ್ಲ. ಹೀಗಾಗಿಯೇ ಇದು ಮತ್ತೊಂದು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ನೆಟ್ಟಿಗರು ಈ ಜೀವ ಬೆದರಿಕೆಗೆ ಬಿಸಿಬಿಯ ಹಣಕಾಸು ಸಮಿತಿಯ ಅಧ್ಯಕ್ಷ ನಜ್ಮುಲ್ ಇಸ್ಲಾಂ ಅವರತ್ತ ಬೊಟ್ಟು ಮಾಡುತ್ತಿದ್ದಾರೆ.

ಇದನ್ನೂ ಓದಿ: ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

ಒಟ್ಟಿನಲ್ಲಿ ಐಪಿಎಲ್​ನಿಂದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಟ್ಟ ಬೆನ್ನಲ್ಲೇ ಶುರುವಾದ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ನ ವಿವಾದ ಸದ್ಯಕ್ಕಂತು ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಅದರಲ್ಲೂ ಟಿ20 ವಿಶ್ವಕಪ್​​ ಪಂದ್ಯಗಳ ಸ್ಥಳಾಂತರಕ್ಕೆ ಆಗ್ರಹಿಸಿದ್ದ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ಗೆ ಇದೀಗ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ನಲ್ಲಿ ತನ್ನ ಆಟಗಾರರನ್ನು ಕಣಕ್ಕಿಳಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿರುವುದು ಮಾತ್ರ ವಿಪರ್ಯಾಸ.

Source link

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? – Kannada News | Bengaluru Recruitment Scam: 7 Caught in IWST Exam Impersonation Fraud

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು?

ಬೆಂಗಳೂರು, ಜನವರಿ 17: ಬೆಂಗಳೂರು ನಗರದ ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ (Exam Fraud) ಬೆಳಕಿಗೆ ಬಂದಿದೆ. ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಪರೀಕ್ಷೆಯನ್ನು ನಡೆಸಿತ್ತು. ಈ ವೇಳೆ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ಪರೀಕ್ಷೆಗೆ ಬೇರೆ ವ್ಯಕ್ತಿಗಳನ್ನು ಹಾಜರುಪಡಿಸಿ ಪರೀಕ್ಷೆ ಬರೆಸಿದ್ದ 7 ಅಭ್ಯರ್ಥಿಗಳ ಕೃತ್ಯ ಬಹಿರಂಗವಾಗಿದೆ.

ದಾಖಲೆ ಪರಿಶೀಲನೆ ವೇಳೆ ಸಿಕ್ಕಿ ಬಿದ್ದ ಅಬ್ಯರ್ಥಿಗಳು

ನೇಮಕಾತಿ ಪ್ರಕ್ರಿಯೆಯಲ್ಲಿ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಡಳಿಯು ಆಂತರಿಕ ತನಿಖೆ ನಡೆಸಿದೆ. ಪರೀಕ್ಷೆ ವೇಳೆ ಹಾಜರಾದ ಅಭ್ಯರ್ಥಿಗಳ ಫೋಟೋಗಳು, ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಗಳು ಹಾಗೂ ನೇಮಕಾತಿ ಸಂದರ್ಭದಲ್ಲಿ ಮತ್ತು ಕೆಲಸಕ್ಕೆ ಸೇರಿದ ಬಳಿಕ ಸಲ್ಲಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅಭ್ಯರ್ಥಿಗಳ ಸಹಿಗಳಲ್ಲಿ ಸ್ಪಷ್ಟ ವ್ಯತ್ಯಾಸ ಕಂಡುಬಂದಿದೆ.

ಪರೀಕ್ಷೆ ವೇಳೆ ಹಾಜರಾದ ವ್ಯಕ್ತಿಗಳು ಮತ್ತು ನೇಮಕಾತಿ ಸಂದರ್ಭದಲ್ಲಿ ದಾಖಲೆ ಸಲ್ಲಿಸಿದ ವ್ಯಕ್ತಿಗಳು ಬೇರೆ ಬೇರೆ ಎಂಬ ಅನುಮಾನ ಬಲವಾದ ಹಿನ್ನೆಲೆಯಲ್ಲಿ, ಎಲ್ಲಾ ದಾಖಲೆಗಳನ್ನು ವೈಜ್ಞಾನಿಕ ಪರೀಕ್ಷೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಎಫ್‌ಎಸ್‌ಎಲ್ ವರದಿಯಲ್ಲಿ, ಏಳು ಅಭ್ಯರ್ಥಿಗಳ ಬದಲಾಗಿ ಬೇರೆ ವ್ಯಕ್ತಿಗಳು ಪರೀಕ್ಷೆ ಬರೆದಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಅವರು ಪೊಲೀಸರಿಗೆ ದೂರು ನೀಡಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಏಳು ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ಫೋಟೋದಲ್ಲಿರೋ ಬಾಲಕ ಈಗ ಸ್ಟಾರ್ ಹೀರೋ; ಯಾರೆಂದು ಗುರುತಿಸಿ – Kannada News | Vijay Sethupathi’s Rags to Riches: From rs 250 Job to 170 Cr Superstar Journey

ಚಿತ್ರೋದ್ಯಮದಲ್ಲಿ ಸೂಪರ್‌ಸ್ಟಾರ್ ಆಗುವ ಪ್ರಯಾಣ ಸುಲಭವಲ್ಲ. ಅನೇಕ ನಟರು ಯಶಸ್ಸನ್ನು ಸಾಧಿಸುವ ಮೊದಲು ಬಹಳಷ್ಟು ಕಷ್ಟಪಟ್ಟಿದ್ದಾರೆ. ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ, ಕಮಲ್ ಹಾಸನ್, ಯಶ್, ದರ್ಶನ್ ಅವರಂತಹ ನಾಯಕರು ತಮ್ಮ ವೃತ್ತಿಜೀವನದ ಆರಂಭದಲ್ಲಿ ಸಣ್ಣ ಕೆಲಸ ಮಾಡಿದ್ದಾರೆ. ನಂತರ ತಮ್ಮದೇ ಆದ ಪ್ರಯತ್ನದಿಂದ ಚಿತ್ರರಂಗದಲ್ಲಿ ದೊಡ್ಡ ಸ್ಥಾನವನ್ನು ಗಳಿಸಿದರು. ಮೇಲಿನ ಫೋಟೋದಲ್ಲಿರೋ ಹೀರೋ ಅನೇಕ ತೊಂದರೆಗಳನ್ನು ಎದುರಿಸಿದರು. ಅವರು ಕೇವಲ 250 ರೂ.ಗೆ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಅವರು 170 ಕೋಟಿ ರೂ.ಗಳ ಒಡೆಯ. ಅವರು ಯಾರೆಂದು ನಿಮಗೆ ಗೊತ್ತೇ? ಅವರೇ ವಿಜಯ್ ಸೇತುಪತಿ.

ವಿಜಯ್ ದಕ್ಷಿಣ ಚಿತ್ರೋದ್ಯಮದಲ್ಲಿ ಮಾತ್ರವಲ್ಲದೆ ಬಾಲಿವುಡ್‌ನಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಎಲ್ಲಾ ಕಲಾವಿದರು ಅವರೊಂದಿಗೆ ನಟಿಸಲು ತುಂಬಾ ಆಸಕ್ತಿ ತೋರುತ್ತಾರೆ. ಅವರ ಅತ್ಯುತ್ತಮ ನಟನೆಗಾಗಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. 6ನೇ ತರಗತಿಯವರೆಗೆ ಶಿಕ್ಷಣ ಪಡೆದು ವಿಜಯ್ ಚೆನ್ನೈಗೆ ಬಂದರು. ಅವರು ತಮ್ಮ ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಲಿಲ್ಲ. ಅವರ ಎತ್ತರದ ಕಾರಣಕ್ಕೆ ಶಾಲೆಯಲ್ಲಿ ಕೀಟಲೆ ಮಾಡಲಾಗುತ್ತಿತ್ತು. 16 ನೇ ವಯಸ್ಸಿನಲ್ಲಿ, ಅವರು ಚಲನಚಿತ್ರವೊಂದರ ಆಡಿಷನ್‌ಗೆ ಹೋಗಿದ್ದರು. ಆದರೆ ಅವರ ಕಡಿಮೆ ಎತ್ತರದ ಕಾರಣ ಅವರನ್ನು ಆಯ್ಕೆ ಮಾಡಲಾಗಲಿಲ್ಲ.

ಕುಟುಂಬ ನಿರ್ವಹಣೆಗಾಗಿ ವಿಜಯ್ ಸಣ್ಣಪುಟ್ಟ ಕೆಲಸಗಳನ್ನು ಮಾಡಿದರು. ಚಿಲ್ಲರೆ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ, ಕೆಲವೊಮ್ಮೆ ಫಾಸ್ಟ್ ಫುಡ್ ಜಾಯಿಂಟ್‌ನಲ್ಲಿ ಕ್ಯಾಷಿಯರ್ ಆಗಿ, ಕೆಲವೊಮ್ಮೆ ಫೋನ್ ಬೂತ್ ಆಪರೇಟರ್ ಆಗಿ ಕೆಲಸ ಮಾಡಿದರು. ಸಿಮೆಂಟ್ ವ್ಯವಹಾರದಲ್ಲಿ ಸಹಾಯಕರಾಗಿಯೂ ಕೆಲಸ ಮಾಡಿದರು.

ಇದನ್ನೂ ಓದಿ: 

ವಿಜಯ್ ದುಬೈಗೆ ಹೋಗಿ ಅಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡಲು ಪ್ರಾರಂಭಿಸಿದರು. ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ, ಅವರು ತಮ್ಮ ಭಾವಿ ಪತ್ನಿ ಜೆಸ್ಸಿಯನ್ನು ಭೇಟಿಯಾದರು. ಅವರು 2003 ರಲ್ಲಿ ವಿವಾಹವಾದರು. ನಟನೆಯಲ್ಲಿ ಆಸಕ್ತಿ ಹೊಂದಿದ್ದ ಅವರು ಭಾರತಕ್ಕೆ ಬಂದು ಚಲನಚಿತ್ರ ಅವಕಾಶಗಳನ್ನು ಪ್ರಯತ್ನಿಸಿದರು. ತಮ್ಮ ವೃತ್ತಿಜೀವನದ ಆರಂಭದಲ್ಲಿ ಸಣ್ಣ ಪಾತ್ರಗಳನ್ನು ನಿರ್ವಹಿಸಿದ ವಿಜಯ್ ಈಗ ಸ್ಟಾರ್ ಹೀರೋ. ಅವರು ತಮಿಳು, ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ನಟಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’; ಹರಾಮ್ ವಿಷಯದಲ್ಲಿ ಝೈದ್ ಖಾನ್ ಖಡಕ್ ತಿರುಗೇಟು – Kannada News | Zaid Khan on ‘Cult’ Movie, Haram Controversy and Religion: Actor’s Bold Stance Ahead of Jan 23 Release

ನಟ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬರಲು ರೆಡಿ ಆಗಿದ್ದಾರೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್​​​ನಲ್ಲಿ ಝೈದ್ ಖಾನ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಶೇಡ್​​​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈಗ ಝೈದ್ ಖಾನ್ ಅವರಿಗೆ ಹರಾಮ್ ವಿಷಯದ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ.‘ಸತ್ತಮೇಲೆ ದೇವರಿಗೆ ಲೆಕ್ಕ ಕೊಟ್ಕೋತಿನಿ’ ಎಂದು ನೇರಮಾತುಗಳಲ್ಲಿ ಹೇಳಿದ್ದಾರೆ.

ಝೈದ್ ಖಾನ್ ಅವರು ಮುಸ್ಲಿಂ ಧರ್ಮದವರು. ಆದರೆ, ಅವರು ಎಲ್ಲಾ ಧರ್ಮಕ್ಕೂ ಸಮಾನ ಆದ್ಯತೆ ನೀಡುತ್ತಾರೆ. ಅವರ ಮೊದಲ ಸಿನಿಮಾ ‘ಬನಾರಸ್’ ಕಾಶಿ ಭಾಗದಲ್ಲಿ ಶೂಟ್ ಆಗಿದೆ. ಇತ್ತೀಚೆಗೆ ‘ಕಲ್ಟ್’ ಸಿನಿಮಾ ಪ್ರಚಾರದ ವೇಳೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ. ಇದನ್ನು ಅವರ ಧರ್ಮದವರು ಪ್ರಶ್ನೆ ಮಾಡುವುದಿಲ್ಲವೇ ಎಂಬ ಪ್ರಶ್ನೆ ಎದುರಾಯಿತು. ಇದಕ್ಕೆ ಉತ್ತರಿಸಿದ ಝೈದ್ ಖಾನ್, ‘ನಾನು ಎಲ್ಲಾ ಧರ್ಮವನ್ನು ಸಮಾನವಾಗಿ ಕಾಣುತ್ತೇನೆ’ ಎಂದಿದ್ದಾರೆ.

ಆ ಬಳಿಕ ಝೈದ್ ಖಾನ್ ಅವರಿಗೆ ಹರಾಮ್ ಬಗ್ಗೆ ಪ್ರಶ್ನೆ ಎದುರಾಯಿತು. ‘ಕುರಾನ್ ಅಲ್ಲಿ ಮದ್ಯ ಸೇವನೆ ಮಾಡಬಾರದು, ಹಿಂಸಾಚಾರ ಮಾಡಬಾರದು ಎಂದೆಲ್ಲ ಇದೆ. ಅದೆಲ್ಲ ಹರಾಮ್. ಆದರೆ, ಸಿನಿಮಾದಲ್ಲಿ ಅದನ್ನೇ ತೋರಿಸಿದ್ದೀರಿ’ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಝೈದ್ ಖಾನ್, ‘ನಟನೆಯನ್ನು ನಟನೆಯಾಗಿ ಮಾತ್ರ ನೋಡುತ್ತೇನೆ. ಅದಕ್ಕೂ ನಿಜ ಜೀವನಕ್ಕೂ ಕನೆಕ್ಟ್ ಮಾಡಬಾರದು’ ಎಂದರು.

ಇದನ್ನೂ ಓದಿ: ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ ಪ್ರಕರಣ; ಕ್ಷಮೆ ಕೇಳಿದ ನಟ ಝೈದ್ ಖಾನ್

ಆ ಬಳಿಕ ಮತ್ತೆ ಇದೇ ವಿಷಯವಾಗಿ ಪ್ರಶ್ನೆಗಳು ಎದುರಾದವು. ಇದಕ್ಕೆ ಉತ್ತರಿಸಿದ ಝೈದ್ ಖಾನ್, ‘ಸತ್ತ ಮೇಲೆ ನಾನು ದೇವರಿಕೆ ಲೆಕ್ಕ ಕೊಟ್ಟುಕೊಳ್ಳುತ್ತೇನೆ’ ಎಂದರು. ಅವರ ಉತ್ತರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.
ಝೈದ್ ಖಾನ್ ಅವರ ಕಲ್ಟ್ ಸಿನಿಮಾ ಜನವರಿ 23ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಝೈದ್ ಜೊತೆ ರಂಗಾಯಣ ರಘು, ಮಲೈಕಾ ವಾಸುಪಾಲ್, ರಚಿತಾ ರಾಮ್, ಅಚ್ಯುತ್ ಕುಮಾರ್ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Vande Bharat Sleeper Train: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ – Kannada News | PM Narendra Modi Flags Off India’s First Vande Bharat Sleeper Train Today

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್​ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಚಾಲನೆ ನೀಡುತ್ತಿದ್ದಾರೆ. ಈ ರೈಲು ಹೌರಾ ಮತ್ತು ಗುವಾಹಟಿ ನಡುವೆ ಸಂಚರಿಸಲಿದೆ. ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ರಾತ್ರಿ ಪ್ರಯಾಣಕ್ಕಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸಂಪೂರ್ಣ ಹವಾನಿಯಂತ್ರಿತ ರೈಲು ಆಗಿದೆ. ಅಸ್ತಿತ್ವದಲ್ಲಿರುವ ವಂದೇ ಭಾರತ್ ಚೇರ್ ಕಾರ್ ಸೇವೆಗಳಿಗಿಂತ ಭಿನ್ನವಾಗಿ, ಈ ಆವೃತ್ತಿಯು ದೀರ್ಘ ಪ್ರಯಾಣದ ಸಮಯಕ್ಕೆ ಅಗತ್ಯವಾದ ಸೌಕರ್ಯವನ್ನು ಕೇಂದ್ರೀಕರಿಸುತ್ತದೆ. ಮೆತ್ತನೆಯ ಬರ್ತ್‌ಗಳು, ಸೌಂಡ್ ಪ್ರೂಫ್ ಬರ್ತ್​​ನೊಂದಿಗೆ 11 ಎಸಿ 3-ಟೈರ್ ಕೋಚ್‌ಗಳು, 4 ಎಸಿ 2-ಟೈರ್ ಕೋಚ್‌ಗಳು, 1 ಎಸಿ 1ಟೈರ್ ಕೋಚ್ ಅನ್ನು ಈ ರೈಲು ಒಳಗೊಂಡಿರಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Hindu Devotion: ದೇವಸ್ಥಾನಕ್ಕೆ ಯಾವ ಹಣ್ಣು ತೆಗೆದುಕೊಂಡು ಹೋಗುವುದು ಶುಭ? – Kannada News | The Spiritual Significance of Fruit Offerings in Hindu Devotion

ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗೆ ತೆರಳಿದಾಗ, ಗುರುಗಳನ್ನು, ಪುಟ್ಟ ಮಕ್ಕಳನ್ನು, ಬಂಧುಗಳನ್ನು, ವೃದ್ಧರನ್ನು ಅಥವಾ ಅನಾರೋಗ್ಯ ಪೀಡಿತರನ್ನು ನೋಡಲು ಹೋದಾಗ ಕೈಯಲ್ಲಿ ಹಣ್ಣು ಅಥವಾ ಇತರ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವ ಸಂಪ್ರದಾಯವಿದೆ. ಇದು ನಮ್ಮ ಸಂಸ್ಕೃತಿಯ ಪರಂಪರೆಯಾಗಿದೆ. ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ನಿಮ್ಮ ಇಷ್ಟ ದೈವರು ಅಥವಾ ಕುಲದೈವರೇ ಆಗಿರಲಿ, ಅಲ್ಲಿ ಭಕ್ತಿ ಮತ್ತು ಭಾವನೆ ಪ್ರಮುಖವಾಗಿದೆ. ದೇವರು ಸರ್ವಾಂತರಯಾಮಿ, ಸರ್ವವ್ಯಾಪಿ ಮತ್ತು ಸರ್ವಶಕ್ತನಾಗಿದ್ದಾನೆ. ಆದರೆ, ನಿರ್ದಿಷ್ಟ ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳು ದೊರೆಯುತ್ತವೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ದೇವಸ್ಥಾನಕ್ಕೆ ಬಾಳೆಹಣ್ಣು, ತೆಂಗಿನಕಾಯಿ ಮತ್ತು ಇತರ ಹಣ್ಣುಗಳನ್ನು ತೆಗೆದುಕೊಂಡು ಹೋಗುವುದು ಸಾಮಾನ್ಯ. ಈ ಹಣ್ಣುಗಳ ಅರ್ಪಣೆಯಿಂದ ದೊರೆಯುವ ಫಲಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಬಾಳೆಹಣ್ಣು:

ಬಾಳೆಹಣ್ಣನ್ನು ದೇವರಿಗೆ ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಮತ್ತು ಅರ್ಧಕ್ಕೆ ನಿಂತಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ಬಾಳೆಹಣ್ಣು ಗುರುಗಳಿಷ್ಟವಾದ ಹಣ್ಣು ಎಂದು ಸಹ ಹೇಳಲಾಗುತ್ತದೆ.

ತೆಂಗಿನಕಾಯಿ:

ತೆಂಗಿನಕಾಯಿಗೆ ಹಲವು ವ್ಯಾಖ್ಯಾನಗಳಿವೆ. ಇದನ್ನು ನಮ್ಮ ಅಹಂ ಅನ್ನು ಭಗವಂತನಿಗೆ ಅರ್ಪಿಸುವುದರ ಸಂಕೇತವೆಂದು ಪರಿಗಣಿಸಲಾಗುತ್ತದೆ. ತೆಂಗಿನಕಾಯಿ ಕಲ್ಪವೃಕ್ಷವಿದ್ದಂತೆ. ಇದನ್ನು ಅರ್ಪಿಸುವುದರಿಂದ ಹೊಸ ಯೋಜನೆಗಳಿಗೆ ಸ್ಪಷ್ಟ ಆಲೋಚನೆಗಳು ದೊರೆಯುತ್ತವೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಶುಭವಾಗುತ್ತದೆ, ವೃತ್ತಿಯಲ್ಲಿ ಪ್ರಗತಿ ಕಂಡುಬರುತ್ತದೆ. ಅಲ್ಲದೆ, ಅಧಿಕಾರಿಗಳೊಂದಿಗಿನ ಸಂಬಂಧಗಳು ಉತ್ತಮಗೊಳ್ಳುತ್ತವೆ ಮತ್ತು ನಿಮ್ಮ ಯೋಜನೆಗಳಿಗೆ ಮನ್ನಣೆ ಸಿಗುತ್ತದೆ.

ಸೇಬು:

ಸೇಬನ್ನು ದೇವರಿಗೆ ಅರ್ಪಿಸುವುದರಿಂದ ದೇಹದ ರೋಗಗಳು ನಿವಾರಣೆಯಾಗಿ ಆರೋಗ್ಯ ವೃದ್ಧಿಸುತ್ತದೆ. ರೋಗಗಳಿಂದ ಮುಕ್ತಿ ಸಿಗುತ್ತದೆ. ಅಲ್ಲದೆ, ಇದು ದಾರಿದ್ರ್ಯ ನಿರ್ಮೂಲನೆಗೂ ಸಹಕಾರಿಯಾಗಿದೆ. ಸಾಲ ಬಾಕಿ ಇರುವ ಹಣ ವಸೂಲಾಗಲು ಸಹ ಸಹಾಯ ಮಾಡುತ್ತದೆ.

ದ್ರಾಕ್ಷಿ:

ಹಸಿ ದ್ರಾಕ್ಷಿ, ಒಣ ದ್ರಾಕ್ಷಿ, ಕಪ್ಪು ದ್ರಾಕ್ಷಿ ಹೀಗೆ ಯಾವುದೇ ವಿಧದ ದ್ರಾಕ್ಷಿಯನ್ನು ಅರ್ಪಿಸುವುದರಿಂದ ಸುಖ, ಸಂತೋಷ, ನೆಮ್ಮದಿ ಮತ್ತು ಮಾನಸಿಕ ತೃಪ್ತಿ ದೊರೆಯುತ್ತದೆ. ಉತ್ತಮ ಆಲೋಚನೆಗಳು ಮನಸ್ಸಿನಲ್ಲಿ ಮೂಡುತ್ತವೆ.

ಸಪೋಟ (ಚಿಕ್ಕು):

ಸಪೋಟ ಹಣ್ಣನ್ನು ದೇವರಿಗೆ ಅರ್ಪಿಸುವುದರಿಂದ ಶೀಘ್ರ ವಿವಾಹ ಯೋಗ ಕೂಡಿಬರುತ್ತದೆ. ಶತ್ರುಗಳು ದಮನಗೊಳ್ಳುತ್ತಾರೆ ಮತ್ತು ಸಂಬಂಧಗಳಲ್ಲಿ ಸ್ಥಿರತೆ ಉಂಟಾಗುತ್ತದೆ. ಉತ್ತಮ ಸಂಬಂಧಗಳು ಗಟ್ಟಿಯಾಗುತ್ತವೆ.

ಮಾವಿನ ಹಣ್ಣು:

ಇದು ಕಾಲೋಚಿತ ಹಣ್ಣಾದರೂ, ಈಗ ಎಲ್ಲಾ ಕಾಲದಲ್ಲೂ ಲಭ್ಯ. ಮಾವಿನ ಹಣ್ಣನ್ನು ದೇವರಿಗೆ ಅರ್ಪಿಸುವುದರಿಂದ ಗೃಹ ನಿರ್ಮಾಣ ಯೋಗ, ಮನೆ ಅಥವಾ ನಿವೇಶನ ಖರೀದಿಸುವ ಯೋಗ ಕೂಡಿಬರುತ್ತದೆ. ಸಾಲ ಬಾದೆಯಿಂದ ಮುಕ್ತಿ ದೊರೆತು ಇಎಂಐಗಳ ತೊಂದರೆ ಕಡಿಮೆಯಾಗಿ ಒಂದೇ ಬಾರಿಗೆ ಸಾಲ ತೀರಿಸುವ ಸಾಧ್ಯತೆ ಹೆಚ್ಚುತ್ತದೆ. ಬಾಕಿಗಳು ಸಹ ವಸೂಲಿಯಾಗುತ್ತವೆ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ನೇರಳೆ ಹಣ್ಣು:

ನೇರಳೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಆಯುರ್ವೇದ ಹೇಳುತ್ತದೆ. ಜ್ಯೋತಿಷ್ಯದ ಪ್ರಕಾರ, ಇದನ್ನು ಅರ್ಪಿಸುವುದರಿಂದ ಶನಿ ದೇವ ಸಂತುಷ್ಟನಾಗುತ್ತಾನೆ ಮತ್ತು ಅವನ ಕೃಪೆ ದೊರೆಯುತ್ತದೆ. ಸಾಡೇಸಾತಿ, ಪಂಚಮ ಶನಿ, ಅರ್ಧಾಷ್ಟಮ ಶನಿ ಮುಂತಾದ ಶನಿ ದೋಷಗಳು ಕಡಿಮೆಯಾಗುತ್ತವೆ. ಕೋರ್ಟ್ ಕೇಸ್‌ಗಳಿಂದ ಮುಕ್ತಿ ದೊರೆಯುತ್ತದೆ, ದಾರಿದ್ರ್ಯ ನಾಶವಾಗಿ ರೋಗಗಳು ಕಡಿಮೆಯಾಗುತ್ತವೆ.

ಡ್ರೈ ಫ್ರೂಟ್ಸ್:

ಒಣ ಹಣ್ಣುಗಳನ್ನು ದೇವರಿಗೆ ಪೂರ್ಣವಾಗಿ ಅರ್ಪಿಸುವುದರಿಂದ ದೇವರ ದೃಷ್ಟಿ ನಿಮ್ಮ ಕಡೆಗೆ ತಿರುಗುತ್ತದೆ ಎಂದು ಹೇಳಲಾಗುತ್ತದೆ. ಒಣ ಹಣ್ಣುಗಳನ್ನು ನೀಡುವುದರಿಂದ ಬಾಂಧವ್ಯಗಳು ಗಟ್ಟಿಯಾಗುತ್ತವೆ ಎಂದು ಸಹ ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕೋಳಿ ಮರಿಯನ್ನು ಹುಡುಕಬಲ್ಲಿರಾ – Kannada News | Optical illusion: Can you find the hidden chicks in this picture in just 35 seconds

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media

ಒಗಟು ಎಂದರೆ ಕೆಲವರ ಕಣ್ಣು ಹಾಗೂ ಕಿವಿ ಅರಳುತ್ತದೆ. ಬಿಡುವುದು ಸಿಕ್ಕಾಗಲೆಲ್ಲಾ ಕೆಲವರು ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಆಟಗಳನ್ನು ಬಿಡಿಸುತ್ತ ಟೈಮ್ ಪಾಸ್ ಮಾಡುತ್ತಾರೆ. ಇದು ನಿಮ್ಮ ಕಣ್ಣಿನ ದೃಷ್ಟಿ, ತಾಳ್ಮೆ ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮಲ್ಲಿ ವೀಕ್ಷಣಾ ಕೌಶಲ್ಯ ಅತ್ಯುತ್ತಮವಾಗಿದ್ದರೆ ಈ ಇಲ್ಯೂಷನ್ ಚಿತ್ರ ಬಿಡಿಸಿ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಮರೆ ಮಾಡಲಾಗಿರುವ ಕೋಳಿ ಮರಿಯನ್ನು ಕಂಡುಹಿಡಿಯುವುದೇ ನಿಮ್ಮ ಮುಂದಿರುವ ಸವಾಲು. ಈ ಹಿಂದೆ ನೀವು ಇಂತಹ ಒಗಟು ಬಿಡಿಸುವಲ್ಲಿ ವಿಫಲರಾಗಿರಬಹುದು. ಇದೀಗ ನಿಮಗೆ ಮತ್ತೊಂದು ಅವಕಾಶವಿದೆ. ಈ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಕೋಳಿ ಮರಿಯನ್ನು 35 ಸೆಕೆಂಡುಗಳೊಳಗೆ ಕಂಡು ಹಿಡಿಯಬೇಕು.

ಈ ಚಿತ್ರ ನೋಡಿದಾಗ ಏನು ಕಾಣಿಸಿತು?

ಈ ಆಪ್ಟಿಕಲ್ ಇಲ್ಯೂಷನ್ ಚಿತ್ರವು ನಿಮ್ಮ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಬೀಳುವುದೇ ಫಾರ್ಮ್ ಹೌಸ್. ಈ ಫಾರ್ಮ್‌ಹೌಸ್‌ನಲ್ಲಿ ಅನೇಕ ಪ್ರಾಣಿ ಪಕ್ಷಿಗಳಿವೆ. ಆದರೆ ಫೋಟೋದಲ್ಲಿರುವ ಕೋಳಿಯೂ ಕಾಣೆಯಾದ ತನ್ನ ನಾಲ್ಕನೇ ಮರಿಯನ್ನು ಹುಡುಕುತ್ತಿದೆ. ನೀವು ಕೋಳಿಮರಿ ಎಲ್ಲಿದೆ ಎಂದು ಹೇಳಬೇಕು.  35 ಸೆಕೆಂಡುಗಳೊಳಗೆ ಈ ಕೋಳಿಮರಿಯನ್ನು ಕಂಡುಹಿಡಿಯಲು ಸಾಧ್ಯವಾದರೆ, ನೀವು ಅತೀ ಬುದ್ಧಿವಂತರು ಎಂದರ್ಥ.

ಇದನ್ನೂ ಓದಿ: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ಜಿಂಕೆಯನ್ನು ಕಂಡು ಹಿಡಿಯಿರಿ

ನಿಮ್ಮ ಕಣ್ಣಿಗೆ ಕೋಳಿ ಮರಿ ಕಾಣಿಸಿತೇ?

ಕೆಲವೊಮ್ಮೆ ಇಂತಹ ಒಗಟನ್ನು ಬಿಡಿಸುವಾಗ ತಾಳ್ಮೆ ಹಾಗೂ ಏಕಾಗ್ರತೆ ಬಹಳ ಮುಖ್ಯವಾಗುತ್ತದೆ. ನಿಮ್ಮ ಗಮನವನ್ನು ಸ್ವಲ್ಪವೂ ಬೇರೆಡೆ ಹರಿಸಿದರೂ ಒಗಟು ಬಿಡಿಸುವುದು ಕಷ್ಟವಾಗಬಹುದು. ತೀಕ್ಷ್ಣವಾದ ಕಣ್ಣು ನಿಮ್ಮದಾಗಿದ್ದರೆ ಈ ಚಿತ್ರದ ಇಂಚಿಂಚು ಕಣ್ಣಾಯಿಸಿ. ಎಷ್ಟೇ ಪ್ರಯತ್ನ ಪಟ್ಟರೂ ಕೋಳಿ ಮರಿ ಕಣ್ಣಿಗೆ ಬಿದ್ದಿಲ್ಲವೇ, ನಾವೇ ನಿಮಗೆ ಈ ಒಗಟಿನ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಕೋಳಿ ಮರಿ ಎಲ್ಲಿದೆ ಎಂದು ಗುರುತಿಸಿದ್ದೇವೆ ನೋಡಿ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version