Bheemanna Khandre passes away: ಬೀದರ್: ಮಾಜಿ ಸಚಿವ, ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ – Kannada News | Veteran Congress Leader and Former Minister Bheemanna Khandre Passes Away at 102 in Bidar

ಬೀದರ್, ಜನವರಿ 17: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ (102) (Bheemanna Khandre) ವಯೋಸಹಜ ಅನಾರೋಗ್ಯದಿಂದ ಬೀದರ್​​ನ (Bidar) ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು. ವಯೋ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರಿಗೆ ಮಲ್ಸಿ ಸ್ಪೆಷಾಲಿಟಿ ಆ್ಯಂಡ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಕೆಲವು ದಿನಗಳ ಕಾಲ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಸೋಮವಾರ ಅವರನ್ನು ಮನೆಗೆ ಕರೆದೊಯ್ದು ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ರಾತ್ರಿ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಕೊನೆಯುಸಿರೆಳೆದಿದ್ದಾರೆ.

ಇಂದೇ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

ಭೀಮಣ್ಣ ಖಂಡ್ರೆ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಇಂದೇ ನಡೆಯಲಿದೆ ಎಂದು ಅವರ ಮಗ, ಸಚಿವರೂ ಆಗಿರುವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಭಾಲ್ಕಿಯ ಗಾಂಧಿ ಗಂಜ್​ನಲ್ಲಿರುವ ಸ್ವಗೃಹದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭೀಮಣ್ಣ ಖಂಡ್ರೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಎಕ್ಸ್ ಸಂದೇಶ

ಭೀಮಣ್ಣ ಖಂಡ್ರೆ ನಡೆದುಬಂದ ಹಾದಿ

ಡಾ. ಭೀಮಣ್ಣ ಖಂಡ್ರೆ ಅವರು 1927ರ ಜನವರಿ 8ರಂದು ಶಿವಲಿಂಗಪ್ಪ ಖಂಡ್ರೆ ಮತ್ತು ಶ್ರೀಮತಿ ಪಾರ್ವತಿ ದಂಪತಿಯ ಪುತ್ರನಾಗಿ ಜನಿಸಿದರು. ಭಾಲ್ಕಿ ಹಿರೇಮಠದಲ್ಲಿ ಕನ್ನಡ ಶಿಕ್ಷಣ ಪಡೆದು ಶರಣತತ್ವದ ದೀಕ್ಷೆ ಪಡೆದ ಅವರು, ಬಾಲ್ಯದಲ್ಲಿಯೇ ಶಿಸ್ತಿನ ಬದುಕಿಗೆ ಪೂರಕವಾದ ಮೌಲ್ಯಗಳನ್ನು ಅಳವಡಿಸಿಕೊಂಡರು. ಭಾಲ್ಕಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ, ಬೀದರ್‌ನಲ್ಲಿ ಪ್ರೌಢ ಶಿಕ್ಷಣ ಪಡೆದರು. ಮುನ್‌ಪಿ–ಫಾಜಲ್ ಪರೀಕ್ಷೆಯಲ್ಲಿ ಇಡೀ ಹೈದರಾಬಾದ್ ಪ್ರಾಂತ್ಯದಲ್ಲೇ ಪ್ರಥಮ ಸ್ಥಾನ ಪಡೆದು ತಮ್ಮ ಪ್ರತಿಭೆಯನ್ನು ಮೆರೆದರು. ನಂತರ ಹೈದರಾಬಾದ್‌ನ ಉಸ್ಮಾನಿಯಾ ಕಾಲೇಜಿನಲ್ಲಿ ವಕಾಲತ್ ಅಧ್ಯಯನ ಪೂರ್ಣಗೊಳಿಸಿದರು. ಕನ್ನಡದ ಜೊತೆಗೆ ಉರ್ದು, ಪಾರಸಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರಾವೀಣ್ಯತೆ ಹೊಂದಿದ್ದರು.

ಭೀಮಣ್ಣ ಖಂಡ್ರೆ ರಾಜಕೀಯ ಪಯಣ

1949–50ರಲ್ಲಿ ಪ್ರಜಾ ಸಮಾಜವಾದಿ ಪಕ್ಷದ ಕಾರ್ಯಕರ್ತನಾಗಿ ರಾಜಕೀಯ ಜೀವನ ಆರಂಭಿಸಿದ ಭೀಮಣ್ಣ ಖಂಡ್ರೆ, 1953ರಲ್ಲಿ ಭಾಲ್ಕಿ ಪುರಸಭೆಯ ಮೊದಲ ಚುನಾಯಿತ ಅಧ್ಯಕ್ಷರಾಗಿ ಜನಸೇವೆಗೆ ಹೊಸ ದಿಕ್ಕು ನೀಡಿದರು. ಅವರು 1962, 1967, 1978 ಮತ್ತು 1983ರಲ್ಲಿ ಭಾಲ್ಕಿ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡಿದರು. ಇದೇ ವೇಳೆ 1988 ರಿಂದ 1994ರವರೆಗೆ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ (MLC) ಸೇವೆ ಸಲ್ಲಿಸಿದರು. ಶಾಸನಸಭೆಯ ವಿವಿಧ ಸಮಿತಿಗಳ ಸದಸ್ಯ ಹಾಗೂ ಅಧ್ಯಕ್ಷರಾಗಿ, ಪಾರ್ಲಿಮೆಂಟರಿ ವ್ಯವಹಾರಗಳ ಅಧ್ಯಯನ ಸಂಸ್ಥೆಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

ಸಚಿವರಾಗಿ ಭೀಮಣ್ಣ ಖಂಡ್ರೆ

ಎಂ. ವೀರಪ್ಪ ಮೊಯಿಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, 1992 ರಿಂದ 1994ರವರೆಗೆ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ ಡಾ. ಭೀಮಣ್ಣ ಖಂಡ್ರೆ, ಆಡಳಿತದಲ್ಲಿ ಶಿಸ್ತು, ಪಾರದರ್ಶಕತೆ ಮತ್ತು ಜನಪರ ನಿಲುವಿಗೆ ಹೆಸರಾಗಿದ್ದರು.

ಕಾಂಗ್ರೆಸ್ ಮತ್ತು ಸಮಾಜ ಸೇವೆ

1980ರಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಸಭೆಯ ಸದಸ್ಯರಾಗಿ, ಕಾರ್ಯದರ್ಶಿಯಾಗಿ ಹಾಗೂ ರೈತ ವಿಭಾಗದ ಸಂಚಾಲಕರಾಗಿ ದುಡಿದ ಅವರು, ರೈತರ ಹಿತಕ್ಕಾಗಿ ಸದಾ ಧ್ವನಿ ಎತ್ತಿದರು. ವೀರಶೈವ ಲಿಂಗಾಯತ ಸಮುದಾಯದ ಸಂಘಟನೆ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಗೆ ಮಹತ್ವದ ಪಾತ್ರ ವಹಿಸಿದ್ದರು.

ರಾಜ್ಯ ಏಕೀಕರಣದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ 2006ರ ನವೆಂಬರ್ 1ರಂದು ಕರ್ನಾಟಕ ಏಕೀಕರಣ ಪ್ರಶಸ್ತಿ ನೀಡಿ ಕರ್ನಾಟಕ ಸರ್ಕಾರವು ಅವರನ್ನು ಗೌರವಿಸಿತು. ಇದು ಅವರ ದೀರ್ಘಕಾಲದ ಜನಸೇವೆಗೆ ಸಿಕ್ಕ ಗೌರವವಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:34 am, Sat, 17 January 26

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ ಪದ್ಧತಿಯಲ್ಲಿ ಅಥವಾ ವೈದ್ಯರನ್ನು ಬದಲಾವಣೆ ಮಾಡುವ ಮುಂಚೆ ಆಲೋಚಿಸಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಭಾವನಾತ್ಮಕವಾಗಿ ತುಂಬ ಕಠಿಣವಾದ ದಿನ ಇದಾಗಿರಲಿದೆ. ಬಹಳ ವರ್ಷಗಳಿಂದ ಬಾಂಧವ್ಯ ಇರುವ ವ್ಯಕ್ತಿ, ಸಂಘಟನೆ, ಸಂಸ್ಥೆಯಿಂದ ದೂರ ಆಗಬೇಕಾದ ಪರಿಸ್ಥಿತಿ ಸೃಷ್ಟಿ ಆಗುತ್ತದೆ. ಮುಂದೆ ಏನು ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಂಥ ಒತ್ತಡವೊಂದು ಮೇಲೆ ಬೀಳಲಿದೆ. ಮುಖ್ಯ ಕೆಲಸಗಳನ್ನು ಗಡುವಿನ ಒಳಗಾಗಿ ಮಾಡಿ ಮುಗಿಸುವುದು ಬಹಳ ಮುಖ್ಯ. ಮರೆವಿನ ಕಾರಣಕ್ಕೆ ಸಣ್ಣ ಪ್ರಮಾಣದಲ್ಲಿಯಾದರೂ ತೊಂದರೆ ಅನುಭವಿಸುವಂತೆ ಆಗಲಿದೆ. ಮಾಂಸಾಹಾರ ಸೇವಿಸುವವರು ದಿನದ ಮಟ್ಟಿಗೆ ದೂರ ಇರುವುದು ಉತ್ತಮ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ದೇಹದಲ್ಲಿನ ವಿಟಮಿನ್, ಹಿಮೋಗ್ಲೋಬಿನ್ ಇತರ ಮುಖ್ಯ ಅಂಶಗಳು ಸರಿಯಾದ ಪ್ರಮಾಣದಲ್ಲಿ ಇದೆಯೇ ಅಥವಾ ಕೊರತೆ ಇದೆಯಾ ಎಂದು ತಿಳಿದುಕೊಳ್ಳಲು ಕೆಲವು ವೈದ್ಯಕೀಯ ಪರೀಕ್ಷೆ ಮಾಡಿಸಲಿದ್ದೀರಿ. ಬ್ಯಾಂಕ್ ಗಳಲ್ಲಿ ಕೆಲಸ ಮಾಡುವವರು ಈ ದಿನ ನಡೆಸುವ ಹಣಕಾಸು ವ್ಯವಹಾರಗಳಲ್ಲಿ ಸಾಮಾನ್ಯ ದಿನಕ್ಕಿಂತ ಹೆಚ್ಚಿನ ಎಚ್ಚರಿಕೆಯನ್ನು ವಹಿಸಿ. ಕುಟುಂಬ ಸದಸ್ಯರಿಂದ ಆಗುವ ಸಣ್ಣ- ಪುಟ್ಟ ತಪ್ಪುಗಳನ್ನು ದೊಡ್ಡದು ಮಾಡಿ, ಕೂಗಾಟ- ಕಿರುಚಾಟ ಮಾಡಲಿಕ್ಕೆ ಹೋಗಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಹೊಸ ಬಟ್ಟೆ- ವಾಚ್, ಶೂ ಇಂಥವುಗಳ ಖರೀದಿ ಮಾಡಲಿದ್ದೀರಿ. ಪ್ರವಾಸಕ್ಕೆ ಅಂತಲೋ ಕಾರ್ಯಕ್ರಮ- ಸಮಾರಂಭಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮಲ್ಲಿ ಕೆಲವರು ಇಷ್ಟಪಡುವ ವ್ಯಕ್ತಿ ಎದುರಿಗೆ ಪ್ರೇಮ ನಿವೇದನೆ ಮಾಡಲಿದ್ದೀರಿ. ನಿಮ್ಮ ಬಳಿ ರಹಸ್ಯ ಎಂದು ಇತರರು ಹೇಳಿದಂಥ ವಿಷಯಗಳನ್ನು ಯಾರ ಮುಂದೆಯೂ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ಸ್ನೇಹಿತರಿಗೆ ನಿಮ್ಮ ಸಹಾಯದ ಅಗತ್ಯ ಬರಲಿದೆ. ನಿಮ್ಮ ಮೊಬೈಲ್ ಫೋನ್ ನಾಟ್ ರೀಚಬಲ್ ಆಗದಂತೆ ಸಾಧ್ಯವಾದಷ್ಟೂ ನೋಡಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ತುಂಬ ಒತ್ತಡದಲ್ಲಿಯೂ ಅದ್ಭುತವಾದ ಫಲಿತಾಂಶವನ್ನು ಪಡೆಯಲಿದ್ದೀರಿ. ವೃತ್ತಿ ಅಥವಾ ವ್ಯವಹಾರದಲ್ಲಿ ಇರುವವರು ಜೊತೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನುಕೂಲಗಳನ್ನು ಮಾಡಿಕೊಡಲಿದ್ದೀರಿ. ಬಹಳ ಸಮಯದಿಂದ ಒಂದು ಅವಕಾಶ ಎಂಬಂತೆ ಎದುರು ನೋಡುತ್ತಾ ಇದ್ದದ್ದು ಅದೀಗ ನಿಮ್ಮ ಕಡೆಗೆ ಬರುವಂಥ ಸುಳಿವು ದೊರೆಯಲಿದೆ. ಮಾನಸಿಕವಾಗಿ ಈ ದಿನ ಬಹಳ ಗಟ್ಟಿಯಾಗಿ ಇರಲಿದ್ದೀರಿ. ಇತರರಿಗೆ ಕಷ್ಟ ಎನಿಸಿದ ವಿಷಯಗಳನ್ನು ಸಹ ಅರ್ಥ ಮಾಡಿಕೊಳ್ಳುವಿರಿ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ನಿಮಗೆ ಇಷ್ಟವಾದದ್ದನ್ನು ಖರೀದಿ ಮಾಡಿಬಿಡಬೇಕು ಎಂಬ ಚಡಪಡಿಕೆ ನಿಮ್ಮಲ್ಲಿ ಇರಲಿದೆ. ನಿಶ್ಚಿತವಾದ ಆದಾಯ ಬರುವಂತೆ ಮಾಡಿಕೊಳ್ಳಬೇಕು ಎಂಬ ಪ್ರಯತ್ನಗಳು ಗುರಿಯ ಕಡೆಗೆ ಸಾಗಲಿವೆ. ಶಿಕ್ಷಕರಿಗೆ ನಿಯೋಜನೆ ಮೇರೆಗೆ ದೊಡ್ಡ ಜವಾಬ್ದಾರಿಗಳು ನಿರ್ವಹಿಸಬೇಕಾಗಿ ಬರಲಿದೆ. ಆರಂಭದಲ್ಲಿ ಅದು ನಿಮ್ಮಿಂದ ಸಾಧ್ಯವೇ ಎಂಬ ಆತಂಕವಾದರೂ ಇದರಿಂದ ನಿಮಗೆ ಹೆಸರು ಬರುವಂಥ ಸಾಧ್ಯತೆ ಇದೆ. ಸಿನಿಮಾ ರಂಗದಲ್ಲಿ ಅವಕಾಶಕ್ಕಾಗಿ ಪ್ರಯತ್ನ ಮಾಡುತ್ತಾ ಇರುವವರಿಗೆ ಆತ್ಮವಿಶ್ವಾಸ ಹೆಚ್ಚಾಗುವಂಥ ದಿನವಿದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ನಿಮ್ಮಲ್ಲಿ ಕೆಲವರಿಗೆ ಈ ದಿನದ ಆರಂಭ ಅಷ್ಟೇನೂ ಚೆನ್ನಾಗಿರುವುದಿಲ್ಲ. ಆ ಕಾರಣಕ್ಕಾಗಿ ಎಂದಿನ ಉತ್ಸಾಹದಲ್ಲಿ ನೀವು ಕಂಡುಬರುವುದಿಲ್ಲ. ಉದ್ಯೋಗ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಅಂದುಕೊಳ್ಳದ ಕೆಲವು ಫಲಿತಾಂಶ ಬರುವುದರಿಂದ ವಿಚಲಿತರಾಗುವಂತೆ ಆಗಲಿದೆ. ಸ್ವಲ್ಪ ದೂರದ ಸ್ಥಳಕ್ಕೆ ತೆರಳಿ ಏಕಾಂಗಿಯಾಗಿ ಸಮಯ ಕಳೆಯೋಣ ಎಂದೆನಿಸಲಿದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕಾಗದ- ದಾಖಲೆ ಪತ್ರಗಳ ವ್ಯವಹಾರ ಸಲೀಸಾಗಿ ಆಗಲಿದೆ. ಇದಕ್ಕೆ ನಿಮ್ಮ ಪ್ರಭಾವ- ಪ್ರಯತ್ನ ಸಹಾಯ ಮಾಡಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಪ್ಲಾನಿಂಗ್- ಪರಿಶ್ರಮ ಜತೆಯಾಗಿ ಅತ್ಯುತ್ತಮ ಫಲಿತಾಂಶ ದೊರೆಯಲಿದೆ. ದಂಪತಿ ಮಧ್ಯೆ ಸಂತೋಷಕರವಾದ ಸಮಯವನ್ನು ಕಳೆಯುವ ಯೋಗ ಇದೆ. ನಿಮ್ಮ ಬಳಿ ಎಷ್ಟು ಹಣ ಇದೆಯೋ ಅಷ್ಟಕ್ಕೆ ಮಾತ್ರ ಸೀಮಿತಗೊಳ್ಳಿ. ಕಡಿಮೆ ಬಡ್ಡಿ- ದೀರ್ಘಾವಧಿ ಹೀಗೆ ಏನೇ ಆಕರ್ಷಣೆಗಳು ಇದ್ದರೂ ಸಾಲ ಪಡೆದುಕೊಳ್ಳಬೇಡಿ. ಖಾಸಗಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವವರು ಅದೆಷ್ಟೇ ಸಣ್ಣ ಪ್ರಮಾಣದ ಕೆಲಸವಾದರೂ ನೀವೇ ಪೂರ್ಣಗೊಳಿಸುವುದು ಉತ್ತಮ. ನಿಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ವರ್ಗಾವಣೆ ಮಾಡಬೇಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ನಿಮ್ಮ ಕೆಲಸ- ಜವಾಬ್ದಾರಿ ಅಷ್ಟಕ್ಕೆ ಮಾತ್ರ ಸೀಮಿತ ಮಾಡಿಕೊಳ್ಳಿ. ಸ್ನೇಹ- ಕರುಣೆ ಹೀಗೆ ಭಾವನಾತ್ಮಕವಾಗಿ ತಳುಕು ಹಾಕಿಕೊಂಡು, ಇತರರಿಗೆ ನೆರವು ನೀಡಲು ಮುಂದಾದಲ್ಲಿ ಆ ನಂತರ ಪಡಿಪಾಟಲು ಪಡುವಂತೆ ಆಗುತ್ತದೆ. ಉಳಿತಾಯದ ಉದ್ದೇಶಕ್ಕೆ ಖರೀದಿ ಮಾಡಿಟ್ಟಿದ್ದ ಚಿನ್ನ ಅಥವಾ ಬೆಳ್ಳಿಯನ್ನು ಮಾರಾಟ ಮಾಡಿ, ಸದ್ಯದ ಹಣಕಾಸಿನ ಅಗತ್ಯವನ್ನು ಪೂರೈಸಿಕೊಳ್ಳಲು ಚಿಂತನೆ ಮಾಡುತ್ತೀರಿ. ಮ್ಯೂಚುವಲ್ ಫಂಡ್ ನಲ್ಲಿ ಹಣ ಹೂಡಿಕೆ ಮಾಡಿದವರಿಗೆ ಲಾಭ ಸಿಗಲಿದೆ. ಪ್ರಾಫಿಟ್ ಬುಕ್ಕಿಂಗ್ ಗೆ ನಿರ್ಧಾರ ಮಾಡುತ್ತೀರಿ.

ಲೇಖನ- ಸ್ವಾತಿ ಎನ್.ಕೆ.

Source link

Horoscope Today 17 January: ಇಂದು ಈ ರಾಶಿಯವರು ಆಸ್ತಿ ರಕ್ಷಣೆಗೆ ವ್ಯವಸ್ಥೆ ಮಾಡುವರು – Kannada News | Horoscope Today 17 January: people of this zodiac sign will protect their property

ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಮಕರ, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ : ಪೂರ್ವಾಷಾಢ ಯೋಗ : ವ್ಯಾಘಾತ, ಕರಣ : ಶಕನಿ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 15 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09-44 – 11:09, ಯಮಗಂಡ ಕಾಲ 13:59 – 15:25, ಗುಳಿಕ ಕಾಲ 06:54 – 08:18.

ಮೇಷ ರಾಶಿ: ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನೀವು ನೀಡುವ ಅಗೌರವವು ಪಶ್ಚಾತ್ತಾಪಕ್ಕೆ ಕಾರಣವಾಗಲಿದೆ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ಮಕ್ಕಳ ಮೇಲೆ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ಚು ಆಗುವುದು. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅವಶ್ಯಕತೆ ಇರುವಷ್ಟು ಬಳಸಿಕೊಂಡು, ಇನ್ನೊಬ್ಬರ ವಸ್ತುವನ್ನು ಹಿಂದಿರುಗಿಸುವಿರಿ.

ವೃಷಭ ರಾಶಿ: ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ನೀವು ಇಂದು ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ಕೆಲಸದಲ್ಲಿ ನೈಪುಣ್ಯತೆಯನ್ನು ಬೆಳೆಸಿಕೊಂಡಿರುವಿರಿ. ನಿಮಗೆ ಕೆಲವು ಪರೋಕ್ಷ ಮಾತುಗಳು ಅಭಿಮಾನಕ್ಕೆ ಭಂಗ ತರಬಹುದು. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ವಿನಯದಿಂದ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳಬಹುದು.

ಮಿಥುನ ರಾಶಿ: ಇಂದಿನ ವರ್ತನೆಯು ಊಹಾತೀತವಾಗಿರುವುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ನಿಮ್ಮ ಮನೆಯ ವಾತಾವರಣವು ಅನೇಕ ದಿನಗಳ ಅನಂತರ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ಎಲ್ಲ ಕಡೆಗಳಲ್ಲಿ ತಾರತಮ್ಯ ತೋರುವುದು ಬೇಡ. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟಕೊಳ್ಳಿ.

ಕರ್ಕಾಟಕ ರಾಶಿ: ಉದ್ಯಮದಲ್ಲಿ ಶತ್ರುಗಳು ಹುಟ್ಟಿಕೊಳ್ಳಬಹುದು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಪ್ರಭಾವೀ ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ನಂಬಿಕೆ ಬಾರದ ಕಡೆ ವ್ಯವಹಾರವನ್ನು ಮುಂದುವರಿಸುವುದು ಬೇಡ. ಧನವ್ಯಯವಾದರೂ ದೊಡ್ಡ ಸಮಸ್ಯೆ ಆಗುವುದಿಲ್ಲ. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು.‌

ಸಿಂಹ ರಾಶಿ: ಯಾರನ್ನೂ ಕೊಂಡುಕೊಳ್ಳಲಾಗದು, ಇನ್ನೊಬ್ಬರಿಗೆ ಕೊಟ್ಟುಕೊಂಡರೆ ಕೆಲಸ ಸಲೀಸು. ಆರ್ಥಿಕತೆಯಿಂದ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ನಡೆದಾಡುವಾಗ ಜಾಗರೂಕತೆ ಬೇಕು. ಇಂದು ನಿಮಗೆ ವ್ಯಕ್ತಿಗಿಂತ ಕೆಲಸವೇ ಮುಖ್ಯವಾಗುವುದು. ದುಡಿಯುವವು ತಮ್ಮ ಶ್ರಮಕ್ಕೆ ಉಚಿತ ಫಲಿತಾಂಶವನ್ನು ನಿರೀಕ್ಷಿಸುವರು. ನಿಮ್ಮ ಆಸೆಯನ್ನು ಇನ್ನೊಬ್ಬರ ಎದುರು ಪ್ರಕಟಪಡಿಸಲು ಮುಜುಗರ ಆಗಬಹುದು. ಬರುವ ಆದಾಯವನ್ನು ಜಾಣ್ಮೆಯಿಂದ ಬಳಸಿಕೊಳ್ಳುವಿರಿ. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ನಡೆದುಕೊಳ್ಳುವಿರಿ.

ಕನ್ಯಾ ರಾಶಿ: ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭ ಗಳಿಸುವಿರಿ. ಯಾರಿಗೂ ನೋವಾಗಂದಂತೆ ಇರುವುದು ಸುಲಭವಲ್ಲ. ಸಂಗಾತಿಯ ಬಯಕೆಯನ್ನು ಪೂರ್ಣವಾಗಿಸುವಿರಿ. ವ್ಯಾಪಾರಸ್ಥರಾದ ನೀವು ಆರ್ಥಿಕ ಸ್ಥಿತಿಯನ್ನು ಬಲಪಡಿಸಿಕೊಳ್ಳುವಿರಿ. ಮಗುವಿನ ಆರೋಗ್ಯದ ಚಿಂತೆ ಇಂದು ಕಾಡಬಹುದು. ದಾಯಾದಿ ಕಲಹವು ತಾರಕಕ್ಕೆ ಹೋಗಬಹುದು. ಇತರರ ಬೆಂಬಲವು ನಿಮಗೆ ಕಡಿಮೆ ಆಗಬಹುದು. ಸಹೋದ್ಯೋಗಿಗಳು ನಿಮ್ಮ ಬಗ್ಗೆ ದೂರಬಹುದು. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂದರ್ಭವು ಇದೆ.

ತುಲಾ ರಾಶಿ: ಇಂದಿನ ನಿಮ್ಮ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಮನೆಯಲ್ಲಿ ಸಂತೋಷದ ವಾತಾವರಣವನ್ನು ನೀವೇ ಸೃಷ್ಟಿಸುವಿರಿ. ಸಂತೋಷವನ್ನು ಇನ್ನೊಂದರಲ್ಲಿ ಹುಡುಕುವುದಕ್ಕಿಂತ ನಿಮ್ಮೊಳಗೆ ಇದೆಯೇ ಎಂದು ಭಾವಿಸಿ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ‌ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು.

ವೃಶ್ಚಿಕ ರಾಶಿ: ಪ್ರೇಮಿಗಳು ಇಂದು ಸ್ವತಂತ್ರವಾಗಿ ಇರಲು ಆಸೆಪಡುವರು. ವಿವಾಹಿತರ ಜೀವನವು ಆನಂದದಿಂದ ಇರುವುದು. ನಿಮ್ಮ ವರ್ಚಸ್ಸು ಅಧಿಕವಾದಷ್ಟೂ ಅಪಾಯವೇ ನಿಮಗೆ. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು.

ಧನು ರಾಶಿ: ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸುವ ಅಗತ್ಯವಿದೆ. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು.‌ ಆಕಸ್ಮಿಕವಾಗಿ ಉದ್ಯೋಗವು ನಿಮ್ಮ‌ ಪಾಲಿಗೆ ಬರುವುದು.‌ ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ಇಂದಿನ ನಿಮ್ಮ ಉತ್ಸಾಹವು ಸಮಾರಂಭಗಳಲ್ಲಿ ಸಂತೋಷದಿಂದ ಭಾಗವಿಸುವಂತೆ ಮಾಡುವುದು.

ಮಕರ ರಾಶಿ: ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಅತಿಯಾದ ನಿರೀಕ್ಷೆಯನ್ನು ಇಟ್ಟು ಕಾರ್ಯ ಮಾಡುವುದು ಬೇಡ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ.

ಕುಂಭ ರಾಶಿ: ಅಂತಸ್ತಿನ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ.

ಮೀನ ರಾಶಿ: ಉದ್ಯಮದಲ್ಲಿ ಬರುವ ದಾಖಲೆಗಳ ಸಮಸ್ಯೆಯೂ ದೂರಾಗುವುದು. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯವು ಸುಸ್ಥಿರವಾಗಿದ್ದು ಇಂದು ಅನುಕೂಲವೇ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ.‌ ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದದಿಂದ ಬೇಸರ ಇರಲಿದೆ.

ಲೋಹಿತ ಹೆಬ್ಬಾರ್ -8762924271 (what’s app only)

Source link

Inspiring: 9-5 ಸೆಕ್ಯೂರ್ಡ್ ಜಾಬ್ ಬಿಟ್ಟು ಮನಸ್ಸಿನ ಮಾತು ಕೇಳಿ ಹಣ ಮತ್ತು ನೆಮ್ಮದಿ ಕಂಡುಕೊಂಡ ರಿಮ್ಜಿಮ್ ಸೈಕಿಯಾ – Kannada News | Inspiring story of Rimjhim Saikia, the MD of Tatvik Ayurveda and Wellness Pvt Ltd

ಇವತ್ತಿನ ಸಂದರ್ಭದಲ್ಲಿ, ಸಾಮಾನ್ಯವಾಗಿ ಜನರು ಯಶಸ್ಸನ್ನು ಸುರಕ್ಷಿತ ಕೆಲಸದ ಆಧಾರದ ಮೇಲೆ ಪರಿಗಣಿಸುತ್ತಾರೆ. ಆದರೆ ಕೆಲವರು ತಮ್ಮ ಹೃದಯ ತುಡಿತವನ್ನು ಅನುಸರಿಸುತ್ತಾರೆ. ರಿಮ್​ಝಿಮ್ ಸೈಕಿಯಾ ಅಂತಹ ಒಬ್ಬ ಉದ್ಯಮಿ. ಈಕೆ ಕಾರ್ಪೊರೇಟ್ ಜಗತ್ತಿನಲ್ಲಿ ಆರಾಮದಾಯಕವಾದ ಕೆಲಸವನ್ನು ತೊರೆದು ಆಯುರ್ವೇದ ಮತ್ತು ಸ್ವಾಸ್ಥ್ಯದ ಮಾರ್ಗವನ್ನು ಆರಿಸಿಕೊಂಡರು. ಈ ನಿರ್ಧಾರ ಸುಲಭವಾಗಂತೂ ಇರಲಿಲ್ಲ. ಆದರೆ ಅವರು ತಮ್ಮ ವಿಶ್ವಾಸದ ಬಗ್ಗೆ ನಂಬಿಕೆ ಹೊಂದಿದ್ದರು. ಇಂದು, ಅವರು Tatvik Ayurveda and Wellness Pvt Ltd ನ ವ್ಯವಸ್ಥಾಪಕ ನಿರ್ದೇಶಕಿ. ಅವರ ಕಥೆ ಧೈರ್ಯ, ಕಠಿಣ ಪರಿಶ್ರಮ ಮತ್ತು ಸ್ವಾವಲಂಬನೆಯ ಉದಾಹರಣೆಯಾಗಿದೆ.

ಕಾರ್ಪೊರೇಟ್ ವೃತ್ತಿಜೀವನದ ಆರಂಭ

ರಿಮ್ಜಿಮ್ ಸೈಕಿಯಾ ವೃತ್ತಿಪರ ಕಾರ್ಪೊರೇಟ್ ಪರಿಸರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅವರು ಐಐಟಿ ಡೆಲ್ಲಿಯಿಂದ ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಡಿಪ್ಲೊಮಾ ಪಡೆದರು. ನಂತರ ಅವರು ಎಚ್‌ಎಸ್‌ಬಿಸಿ ಮತ್ತು ವೊಡಾಫೋನ್‌ನಂತಹ ದೊಡ್ಡ ಅಂತರರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡಿದರು. ಸ್ಥಿರವಾದ ಸಂಬಳ ಮತ್ತು ಸ್ಥಿರವಾದ ಕೆಲಸದ ಹೊರತಾಗಿಯೂ, ಅವರಿಗೆ ಅದೇಕೋ ಜೀವನ ತೃಪ್ತಿ ತರುತ್ತಿಲ್ಲ ಎಂಬುದನ್ನು ಕಂಡುಕೊಂಡರು. ಸಮಾಜದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಏನನ್ನಾದರೂ ಮಾಡಲು ಅವರು ಬಯಸಿದ್ದರು.

ಆಯುರ್ವೇದದತ್ತ ಒಲವು

ತನ್ನ ಕಾರ್ಪೊರೇಟ್ ವೃತ್ತಿಜೀವನದ ಸಮಯದಲ್ಲಿಯೇ ರಿಮ್​ಝಿಮ್‌ಗೆ ಆಯುರ್ವೇದ ಮತ್ತು ಸ್ವಾಸ್ಥ್ಯದ ಕಡೆಗೆ ಒಲವು ಪ್ರಾರಂಭವಾಯಿತು. ಅದು ಕೇವಲ ಆಸಕ್ತಿಯಾಗಿರಲಿಲ್ಲ, ಕ್ರಮೇಣ ಅದು ಒಂದು ಗುರಿಯಾಗಿ ಮಾರ್ಪಟ್ಟಿತು. ಸಾಂಪ್ರದಾಯಿಕ ಆಯುರ್ವೇದ ಜ್ಞಾನವನ್ನು ಆಧುನಿಕ ಅಗತ್ಯಗಳಿಗೆ ಹೊಂದಿಕೊಳ್ಳಬಹುದು ಎಂದು ಈಕೆ ಅರಿತುಕೊಂಡರು. ಈ ಆಲೋಚನೆಯು ಅವರನ್ನು ದಿಟ್ಟ ಹೆಜ್ಜೆ ಇಡಲು ಪ್ರೇರೇಪಿಸಿತು. ತನ್ನ ಸೆಕ್ಯೂರ್ಡ್ ಜಾಬ್ ಅನ್ನು ತೊರೆಯುವ ದಿಟ್ಟ ನಿರ್ಧಾರ ತೆಗೆದುಕೊಂಡರು.

Tatvik Ayurveda ಪ್ರತಿಷ್ಠಾನ

9 ರಿಂದ 5ರ ಉದ್ಯೋಗವನ್ನು ತೊರೆದ ನಂತರ, ರಿಮಜಿಮ್ ಅವರು Tatvik Ayurveda and Wellness Pvt Ltd ಅನ್ನು ಸ್ಥಾಪಿಸಿದರು. ಸಾಂಪ್ರದಾಯಿಕ ಆಯುರ್ವೇದ ಮತ್ತು ಆಧುನಿಕ ವಿಜ್ಞಾನದ ಸಮ್ಮಿಲನದ ಮೇಲೆ ಈ ಬ್ರ್ಯಾಂಡ್ ಅನ್ನು ಸ್ಥಾಪಿಸಲಾಯಿತು. ಆರಂಭದಲ್ಲಿ ಸವಾಲುಗಳಿದ್ದರೂ, ಅವರು ತಮ್ಮ ತಾಳ್ಮೆ ಮತ್ತು ಶಿಸ್ತನ್ನು ಉಳಿಸಿಕೊಂಡರು. ಕ್ರಮೇಣ, Tatvik ತನ್ನ ಗುರುತನ್ನು ಸ್ಥಾಪಿಸಲು ಪ್ರಾರಂಭಿಸಿತು. ಇಂದು, ಬ್ರ್ಯಾಂಡ್ ತನ್ನ ಗುಣಮಟ್ಟದ ಆಯುರ್ವೇದ ಸ್ಕಿನ್​ಕೇರ್ ಉತ್ಪನ್ನಗಳಿಗೆ ಹೆಸರುವಾಸಿಯಾಗಿದೆ.

ಮಹಿಳಾ ಸಬಲೀಕರಣಕ್ಕೆ ಒಂದು ಉದಾಹರಣೆ

Tatvik Ayurvedaವು ಕೇವಲ ವ್ಯವಹಾರವಲ್ಲ, ಮಹಿಳಾ ಸಬಲೀಕರಣದ ಉದಾಹರಣೆಯೂ ಆಗಿದೆ. ರಿಮಝಿಮ್ ಅವರ ಕಂಪನಿಯು ಸುಮಾರು 80 ಪ್ರತಿಶತ ಮಹಿಳೆಯರನ್ನು ನೇಮಿಸಿಕೊಂಡಿದೆ. ಅವರು ಮಹಿಳೆಯರಿಗೆ ಉದ್ಯೋಗ ಮತ್ತು ಸ್ವಾವಲಂಬನೆ ಅವಕಾಶಗಳನ್ನು ಒದಗಿಸುತ್ತಾರೆ. ಮಹಿಳೆಯರು ಮುಂದುವರೆದಾಗ ಸಮಾಜವು ಬಲಗೊಳ್ಳುತ್ತದೆ ಎಂಬುದು ಅವರ ನಂಬಿಕೆ. ಈ ಆಲೋಚನೆಯು ಅವರ ಕಂಪನಿಯ ಕೆಲಸದ ಸಂಸ್ಕೃತಿಯಲ್ಲೂ (ವರ್ಕ್ ಕಲ್ಚರ್) ಪ್ರತಿಫಲಿಸುತ್ತದೆ.

ರಾಷ್ಟ್ರೀಯ ಮನ್ನಣೆ

ರಿಮ್ಜಿಮ್ ಸೈಕಿಯಾ ಅವರ ಕೆಲಸವನ್ನು ರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಲಾಗಿದೆ. 2023 ರಲ್ಲಿ, ಕೇಂದ್ರ MSME ಸಚಿವರು ರಿಮಝಿಮ್ ಅವರನ್ನು ಟಾಪ್-12 ಉದಯೋನ್ಮುಖ ಮಹಿಳಾ ಉದ್ಯಮಿಗಳಲ್ಲಿ ಒಬ್ಬರೆಂದು ಗುರುತಿಸಿದರು. ಈ ಗೌರವವು ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.

ಯಶಸ್ಸಿಗೆ ಬಲವಾದ ದೃಢಸಂಕಲ್ಪ ಅತ್ಯಗತ್ಯ

ಕೇವಲ ಹಣ ಸಂಪಾದನೆಯಿಂದ ಫೈನಾನ್ಷಿಯಲ್ ಫ್ರೀಡಂ ಅಥವಾ ಹಣಕಾಸು ಸ್ವಾತಂತ್ರ್ಯ ಸಿಕ್ಕೋದಿಲ್ಲ ಎನ್ನುವ ಸತ್ಯವನ್ನು ರಿಮ್​ಝಿಮ್ ಸೈಕಿಯಾ ಅವರ ಜೀವನಕಥೆಯಿಂದ ತಿಳಿಯಬಹುದು. ತನ್ನ ಸ್ವಂತ ನಿರ್ಧಾರಗಳನ್ನು ನಂಬಿ ಮತ್ತು ಅವುಗಳನ್ನು ಶ್ರದ್ಧೆಯಿಂದ ಅನುಸರಿಸುವ ಮೂಲಕ ಅದನ್ನು ಸಾಧಿಸಬಹುದು. ಬಲವಾದ ದೃಢಸಂಕಲ್ಪದಿಂದ, ಸುರಕ್ಷಿತ ಮಾರ್ಗ ಅಲ್ಲದಿದ್ದರೂ ದೃಢಸಂಕಲ್ಪದಿಂದಲೇ ಯಶಸ್ಸನ್ನು ಸಾಧಿಸಬಹುದು ಎಂಬುದನ್ನು ಈ ಮಹಿಳೆಯನ್ನು ನೋಡಿ ಕಲಿಯಬಹುದು. ತಮ್ಮ ಕನಸ್ಸನ್ನು ಬೆಂಬತ್ತಿ ಹೋತಿ ನನಸಾಗಿಸಲು ಮನಸ್ಸು ಮಾಡಿರುವ ಯಾರಿಗಾದರೂ ಸರಿ ರಿಮ್​ಝಿಮ್ ಸ್ಫೂರ್ತಿಯಾಗುತ್ತಾರೆ.

ರಿಮ್ಜಿಮ್ ಸೈಕಿಯಾ

ಹೂಡಿಕೆದಾರರ ಶಿಕ್ಷಣ ಮತ್ತು ಜಾಗೃತಿ ಉಪಕ್ರಮಗಳು

ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಒಂದು ಬಾರಿಯ KYC (Know Your Customer) ಪ್ರಕ್ರಿಯೆಯ ಅಗತ್ಯವಿದೆ. SEBI ವೆಬ್​ಸೈಟ್​ನಲ್ಲಿ ವಿವರ ಹೊಂದಿರುವ ಹಾಗೂ ನೊಂದಾಯಿತವಾಗಿರುವ ಮ್ಯೂಚುವಲ್ ಫಂಡ್ ಕಂಪನಿಗಳೊಂದಿಗೆ ಮಾತ್ರ ಮಾಡಬೇಕು. ಹೂಡಿಕೆದಾರರು ಯಾವುದೇ ದೂರುಗಳಿಗಾಗಿ ನೇರವಾಗಿ AMC ಅನ್ನು ಸಂಪರ್ಕಿಸಬಹುದು ಅಥವಾ SCORES ಪೋರ್ಟಲ್‌ನಲ್ಲಿ (https://scores.gov.in) ದೂರು ಸಲ್ಲಿಸಬಹುದು. ಪರಿಹಾರವು ತೃಪ್ತಿಕರವಾಗಿಲ್ಲದಿದ್ದರೆ, Smart ODR ಪೋರ್ಟಲ್ (https://smartodr.in/login) ಅನ್ನು ಬಳಸಬಹುದು.

HDFC AMC ಬಗ್ಗೆ

HDFC ಅಸೆಟ್ ಮ್ಯಾನೇಜ್ಮೆಂಟ್ ಕಂಪನಿ ಲಿಮಿಟೆಡ್ ಭಾರತದ ಅತಿದೊಡ್ಡ ಮ್ಯೂಚುವಲ್ ಫಂಡ್ ಕಂಪನಿಗಳಲ್ಲಿ ಒಂದಾಗಿದೆ. ಇದನ್ನು 1999 ರಲ್ಲಿ ಸ್ಥಾಪಿಸಲಾಯಿತು ಮತ್ತು SEBI ಅನುಮೋದನೆ ಪಡೆದ ನಂತರ 2000 ರಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದು ಈಕ್ವಿಟಿ, ಫಿಕ್ಸೆಡ್ ಇನ್ಕಮ್ ಮತ್ತು ಇತರ ಹೂಡಿಕೆ ಆಯ್ಕೆಗಳನ್ನು ನಿರ್ವಹಿಸುತ್ತದೆ. ಮತ್ತು ದೇಶಾದ್ಯಂತ ಶಾಖೆಗಳನ್ನು ಹೊಂದಿದೆ. ಬ್ಯಾಂಕುಗಳು, ಸ್ವತಂತ್ರ ಹಣಕಾಸು ಸಲಹೆಗಾರರು ಮತ್ತು ರಾಷ್ಟ್ರೀಯ ವಿತರಕರ ಮೂಲಕ ಸೇವೆಗಳನ್ನು ಒದಗಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೊನೆಗೂ ಕೂಡಿಬಂತು ಟೈಮ್: ರಾಹುಲ್ ಗಾಂಧಿ ಭೇಟಿ ಮಾಡಿದ್ದಕ್ಕೆ ಡಿಕೆಶಿ ಫುಲ್ ಖುಷ್ – Kannada News | Karnataka Power Tussle: DK Shivakumar Talks after Rahul Gandhi Met at Delhi

ನವದೆಹಲಿ, (ಜನವರಿ 16): ಸಂಕ್ರಾಂತಿಗೆ ಸೂರ್ಯ ಪಥ ಬದಲಾಗಿದೆ. ಹಾಗೆಯೇ ಕರ್ನಾಟಕ ಕಾಂಗ್ರೆಸ್​ನೊಳಗೂ ನಾಯಕತ್ವ ಬದಲಾವಣೆಯ ಚರ್ಚೆ ಗರಿಗೆದರಿದೆ. ಸಂಕ್ರಾಂತಿ ಕಳೆದು ಶಿವರಾತ್ರಿ ಬಂದರೂ ಕುರ್ಚಿ ಕಾಳಗ ಮುಂದುವರೆಯೋ ಎಲ್ಲ ಲಕ್ಷಣಗಳು ಗೋಚರಿಸ್ತಿವೆ. ಯಾಕಂದ್ರೆ ಅಸ್ಸಾಂ ಚುನಾವಣೆ ನೆಪದಲ್ಲಿ ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿದೆ. ಹೌದು….ಕಳೆದ ಹಲವು ದಿನಗಳಿಂದ ರಾಹುಲ್ ಭೇಟಿಗೆ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗದಕ್ಕೆ ದೆಹಲಿಯಿಂದ ಬರಿಗೈನಲ್ಲಿ ವಾಪಸ್ ಆಗುತ್ತಿದ್ದರು. ಆದ್ರೆ, ಇಂದು(ಜನವರಿ 16) ರಾಹುಲ್ ಗಾಂಧಿ ಭೇಟಿಗೆ ಸಮಯ ಕೂಡಿಬಂದಿದೆ. ಅಸ್ಸಾಂ ಚುನಾವಣೆ ಸಭೆ ಬಳಿಕ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದು, ಖುಷಿ ಖುಷಿಯಲ್ಲೇ ರಾಹುಲ್ ನಿವಾಸದಿಂದ ವಾಪಸ್ ಆಗಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಅಸ್ಸಾಂ ಚುನಾವಣೆ ಸಂಬಂಧ ಗಂಟೆಗಟ್ಟಲೇ ಸಭೆ ನಡೆಸಿ ಚರ್ಚಿಸಿದ್ದೇವೆ ಎಂದರು. ಇನ್ನು ಇದೇ ವೇಳೆ ರಾಹುಲ್ ಗಾಂಧಿ ಭೇಟಿ ‌ಮಾಡಿ ಚರ್ಚೆ ಮಾಡಿದ್ರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಅದೆಲ್ಲಾ ಹೇಳಲು ಆಗಲ್ಲ, ರಾಷ್ಟ್ರ ರಾಜಕಾರಣದ ಬಗ್ಗೆ ಚರ್ಚಿಸಿದ್ದೇವೆ. ಬೇರೆ ಏನೂ ಮಾತನಾಡಲು ನಾನು ತಯಾರಿಲ್ಲ. ಮಲ್ಲಿಕಾರ್ಜುನ ಖರ್ಗೆ ನಮ್ಮ ಅಧ್ಯಕ್ಷರು ಭೇಟಿಯಾಗುವುದು ಸಹಜ. ಪ್ರತಿ ನಿತ್ಯವೂ ಒಳ್ಳೆಯದೇ ಎಂದಿ ಹೇಳುತ್ತಿದ್ದೇನೆ ಅಲ್ವಾ? ಎಂದು ಹೇಳಿದರು.

ಇದನ್ನೂ ನೋಡಿ: ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್

Source link

WPL 2026: ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಆರ್​ಸಿಬಿ – Kannada News | RCB Dominates Gujarat Giants in WPL: Shreyanka Patil Shines, Creates New History with 3rd Consecutive Win

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾದ್ದವು. ಬಲಿಷ್ಠ ತಂಡಗಳ ನಡುವಿನ ಈ ಕಾಳಗ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅಂತಿಮವಾಗಿ ಸ್ಮೃತಿ ಮಂಧಾನ ಪಡೆ, ಗುಜರಾತ್ ತಂಡವನ್ನು ಮಣಿಸಿ ಈ ಆವೃತ್ತಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಆವೃತ್ತಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಆರ್​ಸಿಬಿ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 183 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಮಾರಕ ದಾಳಿಗೆ ನಲುಗಿ 150 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಆರ್​ಸಿಬಿ ಈ ಪಂದ್ಯವನ್ನು 32 ರನ್​ಗಳಿಂದ ಗೆದ್ದುಕೊಂಡಿತು.

Source link

ತಮಿಳುನಾಡಿನ ವೆಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ; 200ಕ್ಕೂ ಹೆಚ್ಚು ಹೋರಿಗಳು ಭಾಗಿ – Kannada News | First annual bull race organised in Vellore watch video

ವೆಲ್ಲೂರು, ಜನವರಿ 16: ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು (Jallikattu), ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು ಎತ್ತುಗಳು ಭಾಗವಹಿಸಿದ್ದವು. 2026ರ ಋತುವಿನ ಮೊದಲ ವಾರ್ಷಿಕ ಬುಲ್ ರೇಸ್ ಇಂದು ವೆಲ್ಲೂರಿನ ಪನಾಮದಂಗಿ, ಶಿವನಾಥಪುರಂ ಮತ್ತು ಗುಡಲವರಿಪಲ್ಲಿಯಲ್ಲಿ ಪ್ರಾರಂಭವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು? – Kannada News | Aged man dies after snake bitten 3 times while showing off with a 6 foot black cobra

ನವದೆಹಲಿ, ಜನವರಿ 16: ವೃದ್ಧನೊಬ್ಬ 6 ಅಡಿ ಉದ್ದದ ವಿಷಪೂರಿತ ಹಾವನ್ನು ಕೈಯಲ್ಲಿ ಹಿಡಿದು ಜನರೆದುರು ಹುಡುಗಾಟವಾಡುತ್ತಿದ್ದರು. ಆಗ ಆ ಹಾವು (Snake) 3 ಬಾರಿ ಆ ವ್ಯಕ್ತಿಗೆ ಕಚ್ಚಿದೆ. ಆದರೂ ಆ ವೃದ್ಧ ಹಾವನ್ನು ಕೆಳಗೆ ಬಿಡಲಿಲ್ಲ. ಅದನ್ನು ತಮ್ಮ ಕುತ್ತಿಗೆಯ ಸುತ್ತ ಹಿಡಿದುಕೊಂಡು ಜನರಿಂದ ಫೋಟೋ ತೆಗೆಸಿಕೊಳ್ಳುತ್ತಲೇ ಇದ್ದರು. ಕೊನೆಗೆ ಆ ಹಾವಿನ ವಿಷ ಮೈ ಪೂರ್ತಿ ಆವರಿಸಿಕೊಳ್ಳುತ್ತಿದ್ದಂತೆ ನಿತ್ರಾಣರಾದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದರು. ಹಾವಿನೊಂದಿಗೆ ಆ ವೃದ್ಧ ಇರುವ ವೈರಲ್ ವಿಡಿಯೋ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version