Headlines

ತನ್ನ ಕುಡಿತದ ಚಟದ ಬಗ್ಗೆ ಬಹಿರಂಗವಾಗಿ ಮಾತನಾಡಿದ ಯುವನಟಿ ಜಾನ್ಹವಿ ಕಪೂರ್ – Kannada News | Janhvi Kapoor talks about alcohol addiction and how she break free from that

ಬಾಲಿವುಡ್​​ನ ಸ್ಟಾರ್ ಯುವ ನಟಿ ಜಾನ್ಹವಿ ಕಪೂರ್ (Janhvi Kapoor). ಇತ್ತೀಚೆಗೆ ದಕ್ಷಿಣದಲ್ಲೂ ಸಹ ಜೂ ಎನ್​​ಟಿಆರ್, ರಾಮ್ ಚರಣ್ ಅಂಥಹಾ ಸ್ಟಾರ್ ನಟರುಗಳೊಟ್ಟಿಗೆ ನಟಿಸುತ್ತಿದ್ದಾರೆ. ಬಾಲಿವುಡ್​​ನಲ್ಲಿ ಮುಂಚೂಣಿಯಲ್ಲಿರುವ ಯುವನಟಿ ಎನಿಸಿಕೊಂಡಿದ್ದಾರೆ. ಒಂದರ ಹಿಂದೊಂದು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೊಕಾ-ಕೊಲಾ ಸೇರಿದಂತೆ ಹಲವು ಪ್ರತಿಷ್ಠಿತ ಬ್ರ್ಯಾಂಡುಗಳ ರಾಯಭಾರಿ ಆಗಿದ್ದಾರೆ. ಭಾರತದ ಬ್ಯುಸಿ ಸ್ಟಾರ್ ನಟಿಯರಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಇದೆಲ್ಲದರ ಜೊತೆಗೆ ಪಾರದರ್ಶಕತೆಗೆ ಒತ್ತು ಕೊಡುವ ನಟಿಯೂ ಸಹ ಆಗಿದ್ದು, ಇದೀಗ ಅವರ ಕುಡಿತದ ಚಟದ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಸಂದರ್ಶನವೊಂದರಲ್ಲಿ…

Read More

ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ದುರಂತ; ಪ್ಲಾಂಟ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಅಸ್ವಸ್ಥ! – Kannada News | STP Plant Accident: Four Workers Suffocate: Hospitalized Due to Negligence

ಚಿಕ್ಕಬಳ್ಳಾಪುರ, ಏಪ್ರಿಲ್​ 19: ಪ್ರತಿಷ್ಠಿತ ಖಾಸಗಿ ಕಂಪನಿಯಾದ ಎಸ್​​ಟಿಪಿ ಪ್ಲಾಂಟ್​ನಲ್ಲಿ (STP plant)  ಉಸಿರುಗಟ್ಟಿ ನಾಲ್ವರು ಕಾರ್ಮಿಕರು (Workers) ಅಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರದ ಅಗಲಗುರ್ಕಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಪ್ರಶಾಂತ್, ಸುನಿಲ್, ಜಯಪ್ರಕಾಶ್ ಹಾಗೂ ಮದನ್ ಅಸ್ವಸ್ಥಗೊಂಡ ಕಾರ್ಮಿಕರು. ಸದ್ಯ ನಾಲ್ವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಂದಿಗಿರಿಧಾಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಅಗಲಗುರ್ಕಿ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯ ಎಸ್.ಟಿ.ಪಿ ಪ್ಲಾಂಟ್‌ನ ಸಂಪು ಸ್ವಚ್ಛಗೊಳಿಸಲು ಕಾರ್ಮಿಕರು ಮುಂದಾಗಿದ್ದರು. ಮೊದಲು ಪ್ರಶಾಂತ್…

Read More

ದೀಪಿಕಾಗಾಗಿ ಶೂಟಿಂಗ್ ಶೆಡ್ಯೂಲ್ ಬದಲಿಸಲಿರುವ ಅಲ್ಲು ಅರ್ಜುನ್, ಶಾರುಖ್ ಖಾನ್ – Kannada News | For Deepika Padukone King and Raaka movie changing their shooting schedule

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಇಂದು (ಏಪ್ರಿಲ್ 19) ಖುಷಿ ವಿಷಯ ಹಂಚಿಕೊಂಡಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಾಯಿ ಆಗಿರುವ ದೀಪಿಕಾ ಪಡುಕೋಣೆ, ಇದೀಗ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗಿದ್ದು, ತಾವು ಗರ್ಭಿಣಿ ಆಗಿರುವ ವಿಷಯವನ್ನು ಹಂಚಿಕೊಂಡಿದ್ದಾರೆ. ದೀಪಿಕಾ ಪಡುಕೋಣೆ ಅಭಿಮಾನಿಗಳು, ಹಲವಾರು ಮಂದಿ ಬಾಲಿವುಡ್ ಸೆಲೆಬ್ರಿಟಿಗಳು ದೀಪಿಕಾರಿಗೆ ಶುಭಾಶಯಗಳನ್ನು ಕೋರಿದ್ದಾರೆ. ದೀಪಿಕಾ ಅವರು ಮತ್ತೆ ತಾಯಿ ಆಗುತ್ತಿರುವುದು ಖುಷಿಯ ವಿಷಯವಾದರೂ ಎರಡು ಸಿನಿಮಾಗಳಿಗೆ ಇದರಿಂದ ತುಸು ಸಮಸ್ಯೆ ಆಗಿದೆ. ಅದುವೇ ಶಾರುಖ್…

Read More

PBKS vs LSG: ಪ್ರಿಯಾಂಶ್-ಕನೋಲಿ ರೌದ್ರಾವತಾರಕ್ಕೆ ಆರ್​ಸಿಬಿಯ ದಾಖಲೆಗಳೆಲ್ಲ ಧ್ವಂಸ

ಐಪಿಎಲ್ 2026 ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ತಂಡದ ಪರ ಪ್ರಿಯಾಂಶ್ ಆರ್ಯ ಹಾಗೂ ಕೂಪರ್ ಕನೋಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಹಾಗೆಯೇ ಎರಡನೇ ವಿಕೆಟ್​ಗೆ ಕೇವಲ 81 ಎಸೆತಗಳಲ್ಲಿ ದಾಖಲೆಯ 181 ರನ್​ಗಳ ಜೊತೆಯಾಟವನ್ನಾಡಿದರು. ಈ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪ್ರಿಯಾಂಶ್ 37 ಎಸೆತಗಳಲ್ಲಿ 93 ರನ್​ಗಳ ಇನ್ನಿಂಗ್ಸ್…

Read More

PBKS vs LSG: 6,6,6,6,6,6,6,6,6..! ಲಕ್ನೋ ವಿರುದ್ಧ ಅಬ್ಬರಿಸಿ ಬೊಬ್ಬಿರಿದ ಪ್ರಿಯಾಂಶ್ – Kannada News | Priyansh Arya’s Explosive 93 Powers Punjab Kings to Record 254 vs LSG in IPL 2026

ಐಪಿಎಲ್ 2026 (IPL 2026) ರ 29ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (PBKS vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ದಾಖಲೆಯ 254 ರನ್ ಕಲೆಹಾಕಿತು. ತಂಡದ ಪರ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಆರಂಭಿಕ ಪ್ರಿಯಾಂಶ್ ಆರ್ಯ (Priyansh Arya) 93 ರನ್​ಗಳ ಇನ್ನಿಂಗ್ಸ್ ಆಡಿದರು. ಪ್ರಿಯಾಂಶ್ ಅವರ ಈ ಇನ್ನಿಂಗ್ಸ್​ನಲ್ಲಿ ನಾಲ್ಕು ಬೌಂಡರಿಗಳು ಮತ್ತು ಒಂಬತ್ತು ಸಿಕ್ಸರ್‌ಗಳು ಸೇರಿದ್ದವು. ಕೇವಲ 37 ಎಸೆತಗಳಲ್ಲಿ ಈ…

Read More

ರಾಜ್ಯದ 5 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಬಿಸಿಲಿನ ಝಳದಿಂದ ಪಾರಾಗಲು ಜನರ ನಾನಾ ಕಸರತ್ತು – Kannada News | Karnataka Heatwave: Five Districts Cross 40 Degrees Celsius as Residents Struggle

ಬೆಂಗಳೂರು, ಏಪ್ರಿಲ್​ 19: ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳು ಅಕ್ಷರಶಃ ಕೆಂಡದಂತಾಗಿವೆ. ಐದು ಜಿಲ್ಲೆಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಜನರು ಬಿಸಿಲಿನಿಂದ ತತ್ತರಿಸಿದ್ದಾರೆ. ಗದಗ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಅಧಿಕ ದಾಖಲಾಗಿದೆ. ಮನೆಯಲ್ಲಿದ್ದರೂ ಫ್ಯಾನ್ ಮತ್ತು ಕೂಲರ್‌ಗಳಿಂದ ಬಿಸಿ ಗಾಳಿ ಬರುತ್ತಿರುವುದರಿಂದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಮಧ್ಯಾಹ್ನದ ವೇಳೆ ಜನರು ಮನೆಯಿಂದ…

Read More

MLC ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು ಕಾಂಗ್ರೆಸ್ ಕಾರ್ಯಕರ್ತ ಪತ್ರ – Kannada News | Mysuru Congress Worker Basavanna writes Letter To Rahul gandhi For MLC Post

ಮೈಸೂರು, (ಏಪ್ರಿಲ್ 19): ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ನಾಲ್ಕನೇ ಬಾರಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ವಿಧಾನಪರಿಷತ್​ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದಿದ್ದಾರೆ. ಈ ಬಗ್ಗೆ…

Read More

ಧಗಧಗಿಸಿದ ಮಲೆ ಮಹದೇಶ್ವರ ಬೆಟ್ಟಡ ಒಡಲು: 100 ಎಕರೆ ವನಸಂಪತ್ತು ನಾಶ – Kannada News | Chamarajanagar Wildfire: Over 100 Acres Burnt in Male Mahadeshwara Sanctuary

ಚಾಮರಾಜನಗರ, ಏಪ್ರಿಲ್​ 19: ಮಲೆ ಮಹದೇಶ್ವರ ವನ್ಯಜೀವಿಧಾಮದ ಒಡಲಿಗೆ ಬೆಂಕಿ ಬಿದ್ದಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸುಮಾರು 100 ಎಕರೆಗೂ ಅಧಿಕ ವಿಸ್ತೀರ್ಣದ ಅಮೂಲ್ಯ ವನಸಂಪತ್ತು ಬೆಂಕಿಗಾಹುತಿಯಾಗಿದೆ. ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೆಬೋಳಿ ಬೆಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಿಡಮೂಲಿಕೆಗಳ ಕಾಶಿಯಂತಿದ್ದ ಕಡೆಬೋಳಿ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ವನ್ಯ ಸಂಪತ್ತು ಮತ್ತು ಅಪರೂಪದ ಗಿಡಮೂಲಿಕೆಗಳು ಸುಟ್ಟು ಕರಕಲಾಗಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಫೈರ್ ಲೇನ್ (ಬೆಂಕಿ ರೇಖೆ) ನಿರ್ಮಾಣ ಮಾಡಲಾಗಿದೆ…

Read More

ಮಹಿಳೆ ಸಾವು: ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿ ಮುಜುಗರಕ್ಕೀಡಾದ ಪೊಲೀಸ್ರು, ಏನಿದು ಕೇಸ್? – Kannada News | Set Back To Chamaranagar Police In Death Case, Court released Man Who living together relationship with Woman

ಚಾಮರಾಜನಗರ, (ಏಪ್ರಿಲ್ 19): 2023ರ ಡಿಸೆಂಬರ್ 16ರಂದು ಚಾಮರಾಜನಗರ (Chamaranagar) ಜಿಲ್ಲೆಯ ಕೊಳ್ಳೇಗಾಲದ ಆದರ್ಶನಗರದಿಂದ ಪಟ್ಟಣದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಅಗರ ಮಾಂಬಳ್ಳಿಯ ರೇಖಾ ಎಂದು ಗುರುತು ಪತ್ತೆ ಮಾಡಿದ್ದರು. ಆದ್ರೆ, ಪೊಲೀಸರು ಸರಿಯಾಗಿ ತನಿಖೆ ನಡೆಸದೆ ರೇಖಾಳ ಜೊತೆ ಲೀವಿಂಗ್ ಟು ಗೆದರ್ ನಲ್ಲಿದ್ದ ನಾಗೇಶ್​ ಎನ್ನುವರನ್ನ ಬಂಧಿಸಿ ಬಳಿಕ ಕೋರ್ಟ್​ ಮುಂದೆ ಹಾಜರು ಪಡಿಸಿದ್ದು, ಚಾರ್ಜ್…

Read More

KKR vs RR: 19 ವರ್ಷಗಳ ಐಪಿಎಲ್‌ನಲ್ಲಿ ಇದೇ ಮೊದಲು; ಇತಿಹಾಸ ಸೃಷ್ಟಿಸಿದ ಆರ್ಚರ್ – Kannada News | IPL 2026: KKR Secures First Win; Jofra Archer Shatters Unique First Ball Wicket Record

2026 ರ ಐಪಿಎಲ್‌ನಲ್ಲಿ (IPL 2026) ಕೆಕೆಆರ್ (KKR) ತಂಡ ಮೊದಲ ಗೆಲುವು ದಾಖಲಿಸಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ವಿಕೆಟ್​ಗಳಿಂದ ಗೆದ್ದ ಕೆಕೆಆರ್ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 155 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್‌ ಕೊನೆಯ ಓವರ್​ನಲ್ಲಿ ಗೆಲುವು ದಾಖಲಿಸಿತು. ಇತ್ತ ಈ ಸೋಲಿನ ಹೊರತಾಗಿಯೂ ರಾಜಸ್ಥಾನ್ ತಂಡದ ವೇಗಿ ಚೋಫ್ರಾ ಆರ್ಚರ್ (Jofra Archer) 19 ವರ್ಷಗಳ ಐಪಿಎಲ್‌ನಲ್ಲಿ ಈವರೆಗೆ ಯಾವ…

Read More