Headlines

‘ಕಿಲಾಡಿ ಮೇಘ’ ಸಿನಿಮಾದಲ್ಲಿ ದೈವಾರಾಧಕನ ಪಾತ್ರದಲ್ಲಿ ಶಂಕರ್ ಅಶ್ವತ್ಥ್ – Kannada News | Shankar Ashwath Mahalakshmi starrer Kiladi Megha Kannada movie press meet

‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ನಟಿಸಿದ ‘ಕಿಲಾಡಿ ಮೇಘ’ (Kiladi Megha) ಸಿನಿಮಾದ ಟೀಸರ್ ಮತ್ತು ಹಾಡುಗಳು ರಿಲೀಸ್ ಆಗಿವೆ. ಮೇಘ ಎಂಬ ಪಾತ್ರದಲ್ಲಿ ಮಹಾಲಕ್ಷ್ಮಿ ಅವರು ನಟಿಸಿದ್ದಾರೆ. ಇದೇ ಸಿನಿಮಾದಲ್ಲಿ ಹಿರಿಯ ನಟ ಶಂಕರ್ ಅಶ್ವಥ್ (Shankar Ashwath) ಅವರು ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಚಿತ್ರತಂಡದವರು ಮಾತನಾಡಿದ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು. ‘ಸುಲೋಚನಾ ಪ್ರೊಡಕ್ಷನ್ಸ್’ ಮೂಲಕ ಸುಲೋಚನಾ ಸುಕುಮಾರ್ ಅವರು ಈ…

Read More

ಇನ್ನೇನು ಟೇಕ್ ಆಫ್ ಆಗುವಷ್ಟರಲ್ಲೇ ಪ್ರಯಾಣಿಕ ಅಸ್ವಸ್ಥ: ಮಾನವೀಯತೆಗೆ ಸಾಕ್ಷಿಯಾದ ವಿಮಾನ – Kannada News | Passenger sickness During Flight take off at Kempegowda international airport bengaluru

ಬೆಂಗಳೂರು, (ಏಪ್ರಿಲ್ 19): ಇಂಡಿಗೋ ವಿಮಾನ (indifo Flight) ಮಾನವೀಯತೆಗೆ ಸಾಕ್ಷಿಯಾಗಿದೆ. 6E 840 ನಂಬರಿನ ಇಂಡಿಗೋ ಫ್ಲೈಟ್ ಬೆಂಗಳೂರಿನಿಂದ (Bengaluru) ದೆಹಲಿಗೆ (Delhi) ತೆರಳಲು ಟೇಕ್ ಆಫ್ ಆಗ್ಬೇಕು ಎನ್ನುವಷ್ಟರಲ್ಲೇ ಪ್ರಯಾಣಿಕನೋರ್ವ ಅಸ್ವಸ್ಥಗೊಂಡಿದ್ದು, ಕೂಡಲೇ ಕಂಪಾರ್ಟ್ಮೆಂಟ್​ನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ಡಾಕ್ಟರ್ ನೆರವಿಗೆ ದಾವಿಸಿದ್ದಾರೆ. ​ವಿಮಾನದೊಳಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಸಿಬ್ಬಂದಿ, ಸ್ಟಾಫ್ – ಪೈಲಟ್ ಸಹಾಯದಿಂದ ಅಸ್ವಸ್ಥಗೊಂಡ ಪ್ರಯಾಣಿಕನನ್ನ ವಿಮಾನದಿಂದ ಆ್ಯಂಬುಲೆನ್ಸ್​ಗೆ ಶಿಫ್ಟ್​ ಮಾಡಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ…

Read More

ವಿಳಂಬವಾದ್ರು ಬಿಜೆಪಿ ಮಹಿಳಾ ಮೀಸಲಾತಿ ಬಿಲ್ ಜಾರಿ ಮಾಡುತ್ತೆ: ಸಂಸದ ತೇಜಸ್ವಿ ಸೂರ್ಯ – Kannada News | BJP will enforce women’s reservation bill despite delay: MP Tejasvi Surya

ಬಿಜೆಪಿ ಸಂಸದ ತೇಜಸ್ವಿ ಸೂರ್ಯImage Credit source: tv9 kannada ಬೆಂಗಳೂರು, ಏಪ್ರಿಲ್​ 19: ಮಹಿಳಾ ಮೀಸಲಿಗೆ (Women’s Reservation Bill) ಸೋಲು ಆಗಿರುವುದು ರಾಜ್ಯದಲ್ಲೂ ಕಿಚ್ಚು ಹಚ್ಚಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮಣಿಯರು ಸಿಡಿದೆದಿದ್ದಾರೆ. ರಾಜ್ಯ ವಿವಿಧೆಡೆ ಪ್ರತಿಭಟನೆ ಮಾಡಲಾಗುತ್ತಿದೆ. ಬೆಂಗಳೂರಿನ ಜೆಪಿ ನಗರದ ಆರ್​.ವಿ.ಕಾಲೇಜು ಬಳಿ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಭಾಗಿಯಾಗಿದ್ದು, ಹೆಣ್ಣು…

Read More

ನೋಯ್ಡಾ ಹಿಂಸಾಚಾರದ ಮಾಸ್ಟರ್​ಮೈಂಡ್ ಆದಿತ್ಯ ಆನಂದ್ ಅರೆಸ್ಟ್​ – Kannada News | Key Planner of Noida Workers’ Stir arrested in Tamil Nadu

ನೋಯ್ಡಾ, ಏಪ್ರಿಲ್ 19: ನೋಯ್ಡಾದಲ್ಲಿ ಇತ್ತೀಚೆಗೆ ನಡೆದ ಭೀಕರ ಹಿಂಸಾಚಾರ(Violence) ಮತ್ತು ಬೆಂಕಿ ಹಚ್ಚುವಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF), ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆಯ ಪ್ರಮುಖ ಆರೋಪಿಯನ್ನು ಹೆಡೆಮುರಿ ಕಟ್ಟಿದೆ. ಹಿಂಸಾಚಾರದ ನಂತರ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆದಿತ್ಯ ಆನಂದ್ ಎಂಬಾತ ನೋಯ್ಡಾದಿಂದ ಚೆನ್ನೈಗೆ, ಅಲ್ಲಿಂದ ತಿರುಚ್ಚಿಗೆ ಪಲಾಯನ ಮಾಡಿದ್ದ. ಈತನ ಚಲನವಲನದ ಬಗ್ಗೆ ನಿಖರ ಮಾಹಿತಿ ಪಡೆದ STF ನೋಯ್ಡಾ ಘಟಕದ ತಂಡವು ತಮಿಳುನಾಡಿಗೆ ಹೋಗಿ ಆತನನ್ನು…

Read More

‘ನರಸಿಂಹ’ ಬಳಿಕ ಈಗ ‘ಪರಶುರಾಮ’ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ – Kannada News | Hombale announced Mahavatar Parashuram animated movie released teaser

‘ಕೆಜಿಎಫ್’ (KGF), ‘ಕಾಂತಾರ’ ಸರಣಿ, ‘ಸಲಾರ್’ ಇನ್ನೂ ಕೆಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಹೊಂಬಾಳೆ ಫಿಲಮ್ಸ್ (Hombale Films), ಕಳೆದ ವರ್ಷ ವಿಶಿಷ್ಟ ಸಾಹಸವೊಂದನ್ನು ಮಾಡಿತು. ‘ಮಹಾವತಾರ ನರಸಿಂಹ’ ಅನಿಮೇಟೆಡ್ ಸಿನಿಮಾವನ್ನು ವಿತರಣೆ ಮಾಡಿತು. ಒಳ್ಳೆಯ ವಿತರಣೆ ಮತ್ತು ಮಾರುಕಟ್ಟೆ ತಂತ್ರಗಳಿಂದ ಹೇಗೆ ಒಂದು ಸಿನಿಮಾವನ್ನು ಅದ್ಧೂರಿಯಾಗಿ ಗೆಲ್ಲಿಸಬಹುದು ಎಂದು ತೋರಿಸಿಕೊಟ್ಟಿತು. ‘ಕ್ಲೀಮ್ ಪ್ರೊಡಕ್ಷನ್ಸ್’ ನಿರ್ಮಿಸಿದ್ದ ‘ಮಹಾವತಾರ ನರಸಿಂಹ’ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ಪ್ರೆಸೆಂಟ್ ಮಾಡಿತ್ತು. ಸಿನಿಮಾ ಬ್ಲಾಕ್ ಬಸ್ಟರ್ ಆಯ್ತು. ಇದೀಗ ಅದೇ ‘ಮಹಾವತಾರ’…

Read More

ಪಂದ್ಯಕ್ಕೆ ಕರೆದಿಲ್ಲವೆಂದು ಕ್ರಿಕೆಟ್ ಪಿಚ್ ಅನ್ನೇ ಉಳುಮೆ ಮಾಡಿದ ಭೂಪ! – Kannada News | Tractor Terror: Angry Local Ploughs Cricket Pitch Over Invitation Snub

ಕ್ರಿಕೆಟ್ ಅಂದ್ರೆ ಕ್ರೇಝ್, ಆದರೆ ಇಲ್ಲಿ ನಡೆದಿದ್ದು ಮಾತ್ರ ಕ್ರೇಝ್​ನ ಪರಮಾವಧಿ! ಪಂದ್ಯಕ್ಕೆ ಕರೆದಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಯುವಕನೊಬ್ಬ, ಕ್ರಿಕೆಟ್ ಇತಿಹಾಸದಲ್ಲೇ ಹಿಂದೆಂದೂ ಕೇಳರಿಯದ ವಿಲಕ್ಷಣ ಕೃತ್ಯ ಎಸಗಿದ್ದಾನೆ. ಇಡೀ ಮೈದಾನ ಫೈನಲ್ ಪಂದ್ಯದ ಸಂಭ್ರಮದಲ್ಲಿದ್ದಾಗ, ದಿಢೀರನೆ ಟ್ರ್ಯಾಕ್ಟರ್‌ನೊಂದಿಗೆ ಎಂಟ್ರಿ ಕೊಟ್ಟ ಈ ಭೂಪ, ಇಡೀ ಪಿಚ್ ಅನ್ನೇ ಉಳುಮೆ ಮಾಡಿ ಆಯೋಜಕರಿಗೆ ಬಿಗ್ ಶಾಕ್ ನೀಡಿದ್ದಾನೆ. ಕ್ರೀಡಾ ಸ್ಫೂರ್ತಿಯೇ ಮರೆತ ಈ ಯುವಕನ ಹಠಕ್ಕೆ ಈಗ ಇಡೀ ಪಂದ್ಯಾವಳಿಯೇ ಬಲಿಯಾಗಿದೆ! ಇಂತಹದೊಂದು ವಿಧ್ವಂಸಕ…

Read More

ಕೃಷಿಹೊಂಡದಲ್ಲಿ ಯುವಕರ ಶವ ಪತ್ತೆ: ಈಜಲು ಹೋಗಿ ಇಬ್ಬರು ಕಾರ್ಮಿಕರ ದುರಂತ ಅಂತ್ಯ? – Kannada News | Chikkamagaluru Tragedy: Two Labourers’ Bodies Found in Farm Pond at Bannuru

ಯುವಕರಿಬ್ಬರ ದಾರುಣ ಅಂತ್ಯImage Credit source: Tv9 Kannada ಚಿಕ್ಕಮಗಳೂರು, ಏಪ್ರಿಲ್​​ 19: ತೀವ್ರ ಬಿಸಿಲಿನ ಪರಿಣಾಮ ಕೂಲ್​​ ಆಗೋಣ ಎಂದು ಸಿಕ್ಕ ಸಿಕ್ಕಲ್ಲಿ ಈಜಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ. ಈಜಲು ಹೋಗಿ ಭದ್ರಾ ಹಿನ್ನೀರಿನಲ್ಲಿ ನಿನ್ನೆಯಷ್ಟೇ ಯುವಕನೋರ್ವ ಮೃತಪಟ್ಟ ಘಟನೆ ಮಾಸುವ ಮುನ್ನವೇ ಕಾಫಿನಾಡು ಚಿಕ್ಕಮಗಳೂರಲ್ಲಿ (Chikkamagaluru) ಮತ್ತೊಂದು ಅವಘಡ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ರಮೇಶ್(27), ಮಹೇಶ್ (34) ಮೃತರಾಗಿದ್ದು,…

Read More

‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್? – Kannada News | Rajinikanth Jailer 2 OTT rights sold to record price Amazon Prime Video

ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಯಶಸ್ಸು ಕಂಡಿತ್ತು. ಈಗ ಅದರ ಮುಂದುವರಿದ ಭಾಗ ‘ಜೈಲರ್ 2’ (Jailer 2) ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರೀಕರಣದ ಹಂತದಲ್ಲಿರುವ ಈ ಸಿನಿಮಾ ಬಿಡುಗಡೆಗೂ ಮುನ್ನವೇ ದಾಖಲೆಗಳ ಮೇಲೆ ದಾಖಲೆ ಬರೆಯಲು ಶುರು ಮಾಡಿದೆ. ನೆಲ್ಸನ್ ದಿಲೀಪ್ ಕುಮಾರ್ ಮತ್ತು ರಜನಿಕಾಂತ್ (Rajinikanth) ಕಾಂಬಿನೇಷನ್‌ನ ಈ ಸಿನಿಮಾ ಬಿಗ್ ಬಜೆಟ್​ನಲ್ಲಿ ತಯಾರಾಗುತ್ತಿದೆ. ಚಿತ್ರಮಂದಿರಕ್ಕೆ ಬರುವ ಮೊದಲೇ ಈ ಸಿನಿಮಾ ಡಿಜಿಟಲ್ ಲೋಕದಲ್ಲಿ ಇತಿಹಾಸ ನಿರ್ಮಿಸಿದೆ. ವರದಿಗಳ ಪ್ರಕಾರ,…

Read More

ಐಪಿಎಲ್​ನಲ್ಲಿ ‘ದುರಾದೃಷ್ಟ’ದ ದಾಖಲೆ ಬರೆದ ಇಶಾನ್ ಕಿಶನ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 73 ಹೆಚ್ಚು ನಾಯಕರುಗಳು ಕಣಕ್ಕಿಳಿದಿದ್ದಾರೆ. ಈ 73 ನಾಯಕರುಗಳ ಪೈಕಿ ನತದೃಷ್ಟದ ದಾಖಲೆ ಬರೆದಿರುವುದು ಇಶಾನ್ ಕಿಶನ್ (Ishan Kishan) ಮಾತ್ರ. ಅಂದರೆ ಐಪಿಎಲ್ ಇತಿಹಾಸದಲ್ಲೇ ಮೊದಲ ಆರು ಪಂದ್ಯಗಳಲ್ಲೂ ಟಾಸ್ ಸೋತ ಏಕೈಕ ಕ್ಯಾಪ್ಟನ್ ಎಂಬ ಅಪಕೀರ್ತಿಯೊಂದು ಇಶಾನ್ ಕಿಶನ್ ಪಾಲಾಗಿದೆ. ಏಪ್ರಿಲ್ 18 ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕರಾಗಿ ತಮ್ಮ ಸತತ ಆರನೇ ಟಾಸ್ ಸೋಲುವ ಮೂಲಕ…

Read More

ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ – Kannada News | HD Kumaraswamy Clarify about Minister Zameer ahmed khan to Join JDS

ನವದೆಹಲಿ, (ಏಪ್ರಿಲ್ 19): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ (Davanagere South By Election) ವಿಚಾರವಾಗಿ ಕಾಂಗ್ರೆಸ್​​​​ನಲ್ಲಿ ಒಳಬೇಗುದಿ ಸ್ಫೋಟಗೊಂಡಿದ್ದು, ಮುಸ್ಲಿಂ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರೀಗ ಈ ಲಿಸ್ಟ್​ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer ahmed khan) ಇದ್ದು, ಸಂಪುಟ ಪುನಾರಚನೆ ಸಂದರ್ಭದಲ್ಲಿ ಜಮೀರ್ ಅವರನ್ನ ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಜೆಡಿಎಸ್‌ಗೆ ವಾಪಸ್‌ ತೆರಳುತ್ತಾರೆ ಎಂಬ ವದಂತಿ ಜೋರಾಗಿದೆ….

Read More