ಕರ್ನಾಟಕದಲ್ಲಿ ಮತ್ತೆ ಕಾಲೇಜ, ವಿಶ್ವವಿದ್ಯಾಲಯಗಳಲ್ಲಿ ಎಲೆಕ್ಷನ್: ವಿದ್ಯಾರ್ಥಿ ಚುನಾವಣೆ ಬೇಕಾ? ಬೇಡ್ವಾ? – Kannada News | Karnataka Government To Plan Students elections In College And universities

ಬೆಂಗಳೂರು, (ಜನವರಿ 16): ಕರ್ನಾಟಕದಲ್ಲಿ  (Karnataka) ಮತ್ತೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು (Students elections) ನಡೆಸುವ ಸಂಬಂಧ ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಮೊದಲ ಹಂತದ ಸಭೆ ಸಹ ಆಗಿದೆ. ಉನ್ನತ್ತ ಶಿಕ್ಷಣ ಇಲಾಖೆಯು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಈ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ ?ಬೇಡ್ವಾ ಎನ್ನುವ ಬಗ್ಗೆ ಅಭಿಪ್ರಾಯ ಕೇಳಲಾಗಿದೆ.

ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ಸಂಬಂಧ ಈಗಾಗಲೇ ಸಮಿತಿ ರಚನೆ ಮಾಡಲಾಗಿದೆ. ಆದ್ರೆ ಇದಕ್ಕೆ ಈಗ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಚುನಾವಣೆ ಬೇಕಾ? ಇದರಿಂದ ವಿದ್ಯಾರ್ಥಿಗಳ ನಡುವೆ ಜಗಳ ಕಿತ್ತಾಟ ಹೊಡೆದಾಟ ರಾಜಕೀಯ ಶುರುವಾಗುತ್ತೆ ಎನ್ನುವ ಪರ ವಿರೋಧ ಅಭಿಪ್ರಾಯ ಕೇಳಿ ಬಂದಿತ್ತು. ಹೀಗಾಗಿ ಸರ್ಕಾರ ಕಾಲೇಜು ಹಾಗೂ ವಿವಿಗಳಲ್ಲಿ ವಿದ್ಯಾರ್ಥಿ ಚುನಾವಣೆ ಬೇಕಾ ಬೇಡ್ವ ಎಂಬುವುದರ ಕುರಿತು ಶಿಕ್ಷಣ ತಜ್ಞರು ಸಾರ್ವಜನಿಕರು ಹಾಗೂ ಪೋಷಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ.

ಇದನ್ನೂ ಓದಿ: CUET PG 2026: CUET PG ಆನ್‌ಲೈನ್ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ; ಜ. 20ರ ವರೆಗೆ ಅವಕಾಶ

ನಿಮ್ಮ ಅಭಿಪ್ರಾಯವನ್ನು ಮೇಲ್ ಮಾಡಿ

ಪೋಷಕರು ಹಾಗೂ ಸಾರ್ವಜನಿಕರ ಅಭಿಪ್ರಾಯ ಏನು ಎಂಬ ಅಭಿಪ್ರಾಯ ಪಡೆದು ಚುನಾವಣೆ ಅಖಾಡಕ್ಕೆ ತಯಾರಿ ತಯಾರಿ ಮಾಡಲಾಗುತ್ತದೆ. ಹೀಗಾಗಿ ಅಭಿಪ್ರಾಯ ಸಂಗ್ರಹಕ್ಕೆ ಪ್ರತ್ಯೇಕ ಮೇಲ್ ಐಡಿ ಕೂಡಾ ನೀಡಿ ಪೋಷಕರ ಅಭಿಪ್ರಾಯ ಕೇಳಿದೆ. ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ karstudentselections@gmail.com ಇಲ್ಲಿ ಸಲಹೆ ರೂಪದಲ್ಲಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಬಹುದಾಗಿದೆ.

ಸರ್ಕಾರದ ನಿಲುವು ಏನು?

ಯುವಕರಲ್ಲಿ ಪ್ರಜಾಪ್ರಭುತ್ವದ ಬಗ್ಗೆ ತಿಳಿವಳಿಕೆ ಅರಿವು ಇರಬೇಕು. ನಾಯಕತ್ವ ಗುಣ ಅಳವಡಿಸಿಕೊಳ್ಳೋದಕ್ಕೆ ಇದು ಬುನಾದಿ ಆಗತ್ತೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಬೇಕಾದರೆ ಚುನಾವಣೆ ನಡೆಸುವುದು ಅತ್ಯಗತ್ಯ ಎನ್ನುವುದು ಸರ್ಕಾರದ ಅಭಿಪ್ರಾಯವಾಗಿದೆ.

ಕಮಿಟಿ ಮುಖ್ಯಸ್ಥರು ಹೇಳುವುದೇನು?

ಇನ್ನು ಈ ಬಗ್ಗೆ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜ್ಯದ ಕಾಲೇಜುಗಳಲ್ಲಿ ಚುನಾವಣೆಗಳು ಆಗಬ್ಬೇಕು. ಅದರ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಒಂದು ವರದಿ ಒಪ್ಪಿಸಲಿಕ್ಕೆ ಹೇಳಿದ್ದಾರೆ. ಆ ಕಮಿಟಿ ಮುಖ್ಯಸ್ಥನನ್ನಾಗಿ ನನ್ನನ್ನ ನೇಮಕ ಮಾಡಿದ್ದಾರೆ. ಈಗಾಗಲೇ ಒಂದು ಸಭೆ ಮಾಡಿದ್ದೇವೆ. ಈಗ ಚುನಾವಣೆಗಳನ್ನ ಮಾಡ್ಬೇಕಂದ್ರೆ ಹೇಗೆ ಮಾಡಬೇಕು? ಅದರ ರೂಪುರೇಷೆ ಹೇಗಿರಬೇಕು? ಟರ್ಮ್ಸ್ ಆಫ್ ರೆಫರನ್ಸ್ ಬಗ್ಗೆ ಚರ್ಚೆ ಆಗಿದೆ. ಸಾರ್ವಜನಿಕರ ಅಭಿಪ್ರಾಯದ ಆಧಾರದ ಮೇಲೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ತಿವಿ ಎಂದಿದ್ದಾರೆ.

ಒಟ್ಟಿನಲ್ಲಿ ದಶಕಗಳ ಬಳಿಕ ಬ್ಯಾನ್ ಮಾಡಿದ್ದ ಎಲೆಕ್ಷನ್ ಈಗ ಮತ್ತೆ ಕಾಲೇಜು ಹಾಗೂ ವಿವಿಗಳಲ್ಲಿ ನಡೆಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕರು ಶಿಕ್ಷಕರು ಸೇರಿದಂತೆ ಅನೇಕರ ಅಭಿಪ್ರಾಯಗಳನ್ನು ಸಲಹೆಗಳ ರೂಪದಲ್ಲಿ ಪಡೆಯಲು ಸಮಿತಿ ಮುಂದಾಗಿದ್ದು, ಕಾಲೇಜು ವಿವಿಗಳಲ್ಲಿ ಈ ವರ್ಷದಿಂದಲೇ ಮತ್ತೆ ಚುನಾವಣೆ ಆಂಭವಾಗುತ್ತಾ ಅಂತ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 10:21 pm, Fri, 16 January 26

Source link

6 ಬೌಂಡರಿ, 3 ಸಿಕ್ಸರ್‌, 66 ರನ್..! ಚೊಚ್ಚಲ ಅರ್ಧಶತಕ ಚಚ್ಚಿದ ರಾಧಾ ಯಾದವ್ – Kannada News | RCB vs GG WPL: Radha Yadav’s Stunning 66, Richa Ghosh’s 44 Guide RCB to 183

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 183 ರನ್ ಕಲೆಹಾಕಿದೆ. ತಂಡ ಈ ಬೃಹತ್ ಮೊತ್ತ ಕಲೆಹಾಕುವಲ್ಲಿ ಆಲ್‌ರೌಂಡರ್ ರಾಧಾ ಯಾದವ್ ಅವರ ಪ್ರದರ್ಶನ ಪ್ರಮುಖ ಪಾತ್ರವಹಿಸಿತು. ಆರ್​ಸಿಬಿ ಕೇವಲ 43 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ಬ್ಯಾಟಿಂಗ್​ಗೆ ಬಂದ ರಾಧಾ, ರಿಚಾ ಜೊತೆ ಉತ್ತಮ ಜೊತೆಯಾಟ ಕಟ್ಟಿದರು.

ಈ ಜೋಡಿ ಐದನೇ ವಿಕೆಟ್​ಗೆ 66 ಎಸೆತಗಳಲ್ಲಿ 105 ರನ್​ಗಳ ಜೊತೆಯಾಟವನ್ನಾಡಿ ತಂಡವನ್ನು 148 ರನ್​ಗಳಿಗೆ ಕೊಂಡೊಯ್ಯಿತು. ಈ ಹಂತದಲ್ಲಿ ರಿಚಾ ಘೋಷ್ 28 ಎಸೆತಗಳಲ್ಲಿ 4 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 44 ರನ್ ಗಳಿಸಿದರೆ, ರಾಧಾ ಯಾದವ್ 47 ಎಸೆತಗಳಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 66 ರನ್ ಗಳಿಸಿದರು. ಇದು ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ರಾಧಾ ಯಾದವ್ ಅವರ ಚೊಚ್ಚಲ ಅರ್ಧಶತಕವಾಗಿದೆ. ಈ ಇಬ್ಬರನ್ನು ಹೊರತುಪಡಿಸಿ ನಾಡಿನ್ ಡಿ ಕ್ಲರ್ಕ್ 12 ಎಸೆತಗಳಲ್ಲಿ 26 ರನ್ ಗಳಿಸಿದರು.

Source link

ಗಿಲ್ಲಿಯಿಂದ ಅಶ್ವಿನಿ ಗೌಡ ತನಕ: ಬಿಗ್ ಬಾಸ್ ಫಿನಾಲೆ ಸ್ಪರ್ಧಿಗಳ ಪ್ಲಸ್ ಏನು? ಮೈನಸ್ ಏನು? – Kannada News | Plus and Minus of Bigg Boss Kannada Season 12 Finale contestants Gilli Nata Ashwini Gowda

ನೋಡನೋಡುತ್ತಿದ್ದಂತೆಯೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬಂದೇ ಬಿಟ್ಟಿದೆ. ಎಲ್ಲವೂ ನಿನ್ನೆ ಮೊನ್ನೆ ಶುರು ಆದಂತಿದೆ. ಆದರೆ ಮೂರೂವರೆ ತಿಂಗಳು ಕಳೆದುಹೋಗಿದೆ. ಹಲವಾರು ಸ್ಪರ್ಧಿಗಳಿಂದ ತುಂಬಿದ್ದ ಬಿಗ್ ಬಾಸ್ ಮನೆ ಈಗ ಕೇವಲ 6 ಮಂದಿಗೆ ಬಂದು ನಿಂತಿದೆ. ಅಶ್ವಿನಿ ಗೌಡ, ಕಾವ್ಯಾ ಶೈವ, ಮ್ಯೂಟೆಂಟ್ ರಘು, ಧನುಷ್, ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಜನವರಿ 18ರಂದು ಅದ್ದೂರಿಯಾಗಿ ‘ಬಿಗ್ ಬಾಸ್ ಕನ್ನಡ 12’ ಫಿನಾಲೆ (BBK 12 Finale) ನಡೆಯಲಿದೆ. ಫಿನಾಲೆ ತಲುಪಿದ 6 ಸ್ಪರ್ಧಿಗಳಿಗೆ ಕೆಲವು ಪ್ಲಸ್ ಮತ್ತು ಮೈಸನ್ ಅಂಶಗಳು ಇವೆ.

ಕಾವ್ಯಾ ಶೈವ: ಬಿಗ್ ಬಾಸ್ ಆಟದಲ್ಲಿ ಕಾವ್ಯಾ ಅವರು ಗಿಲ್ಲಿ ನಟ ಜೊತೆ ಜಂಟಿಯಾಗಿ ಎಂಟ್ರಿ ನೀಡಿದ್ದರು. ಅದು ಅವರಿಗೆ ಪ್ಲಸ್ ಆಯಿತು. ಆದರೆ ಅತಿಯಾಗಿ ಗಿಲ್ಲಿ ಜೊತೆ ಕಾಣಿಸಿಕೊಂಡಿದರು. ಕುಟುಂಬದವರು ಬಂದಾಗ ಹೊರಗಿನ ವಿಷಯ ಕೇಳಿ ತಿಳಿದುಕೊಂಡರು. ಗಿಲ್ಲಿ ನೆರಳಲ್ಲಿ ಕಾವ್ಯಾ ಇದ್ದಾರೆ ಎಂಬ ಟೀಕೆ ಇದೆ. ಅದರಿಂದ ಅವರಿಗೆ ಮೈನಸ್ ಆಗಿದೆ. ಎಮೋಷನಲ್ ಆಗಿ ಗಟ್ಟಿಗಿತ್ತಿ. ಟಾಸ್ಕ್ ಚೆನ್ನಾಗಿ ಆಡಿದ್ದಾರೆ. ಇವೆಲ್ಲವೂ ಅವರಿಗೆ ಪ್ಲಸ್ ಆಗಿದೆ.

ಧನುಷ್ ಗೌಡ: ಕಿರುತೆರೆ ನಟ ಧನುಷ್ ಗೌಡ ಅವರು ಎಲ್ಲರಿಗಿಂತ ಮೊದಲು ಫಿನಾಲೆ ತಲುಪಿ ಭೇಷ್ ಎನಿಸಿಕೊಂಡರು. ಯಾವುದೇ ಸಂದರ್ಭದಲ್ಲಿ ಅವರು ವ್ಯಕ್ತಿತ್ವ ಕಳೆದುಕೊಂಡಿಲ್ಲ. ಎಲ್ಲರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಎಲ್ಲರಿಗಿಂತ ಚೆನ್ನಾಗಿ ಟಾಸ್ಕ್ ಆಡಿದ್ದಾರೆ. ಈ ಗುಣಗಳು ಅವರಿಗೆ ಪ್ಲಸ್ ಆಗಿದೆ. ಆದರೆ ಮನರಂಜನೆ ನೀಡುವಲ್ಲಿ ಅವರು ಹಿಂದೆ ಬಿದ್ದಿದ್ದಾರೆ. ಇದು ಅವರಿಗೆ ಮೈನಸ್ ಆಗುತ್ತದೆ.

ಮ್ಯೂಟೆಂಟ್ ರಘು: ಬಿಗ್ ಬಾಸ್ ಮನೆಯಲ್ಲಿ ರಘು ಅವರು ಹಿರಿಯ ಸ್ಪರ್ಧಿಯಾಗಿ ಘನತೆ ಕಾಪಾಡಿಕೊಂಡಿದ್ದಾರೆ. ಟಾಸ್ಕ್ ಉತ್ತಮವಾಗಿ ಆಡಿದ್ದಾರೆ. ಪ್ರತಿಸ್ಪರ್ಧಿಗಳು ತಮಗಿಂತ ಚೆನ್ನಾಗಿ ಆಟ ಆಡಿದಾಗ ಮೆಚ್ಚುಗೆ ಸೂಚಿಸಿದ್ದಾರೆ. ಇದೆಲ್ಲವೂ ಅವರಿಗೆ ಪ್ಲಸ್ ಆಗಿದೆ. ಆದರೆ ಅವರು ವೈಲ್ಡ್ ಕಾರ್ಡ್ ಸ್ಪರ್ಧಿ. ಆರಂಭದಲ್ಲಿ ಇದ್ದ ಜೋಶ್ ನಂತರದ ದಿನಗಳಲ್ಲಿ ಉಳಿಸಿಕೊಳ್ಳಲಿಲ್ಲ. ವೀಕ್ಷಕರಿಗೆ ಮನರಂಜನೆ ಕೂಡ ಹೆಚ್ಚು ನೀಡಲಿಲ್ಲ. ಇವು ರಘು ಅವರ ಮೈನಸ್ ಪಾಯಿಂಟ್.

ರಕ್ಷಿತಾ ಶೆಟ್ಟಿ: ಚಿಕ್ಕ ಹುಡುಗಿ ಎಂಬ ಕಾರಣಕ್ಕೆ ರಕ್ಷಿತಾ ಶೆಟ್ಟಿಯನ್ನು ಬೆಂಬಲಿಸುವ ವರ್ಗ ಇದೆ. ತುಳುನಾಡಿನ ಪ್ರೇಕ್ಷಕರು ರಕ್ಷಿತಾ ಶೆಟ್ಟಿಗೆ ಬೆಂಬಲ ನೀಡುತ್ತಾರೆ. ನೇರ ನಡೆ-ನುಡಿಯಿಂದ ಅವರು ಗುರುತಿಸಿಕೊಂಡಿದ್ದಾರೆ. ಇದೆಲ್ಲ ಅವರಿಗೆ ಪ್ಲಸ್ ಆಗಲಿದೆ. ಪ್ರಭುದ್ಧತೆ ಇಲ್ಲದ ಕಾರಣ ಅವರು ಕೆಲವೊಮ್ಮೆ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಕನ್ನಡ ಸರಿಯಾಗಿ ಮಾತನಾಡಲ್ಲ. ಅದು ಅವರಿಗೆ ಮೈಸನ್ ಆಗುತ್ತದೆ.

ಅಶ್ವಿನಿ ಗೌಡ: ಆರಂಭದಲ್ಲಿ ಅಶ್ವಿನಿ ಗೌಡ ಅವರು ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಜಾಹ್ನವಿ ಜೊತೆ ಸೇರಿಕೊಂಡು ರಕ್ಷಿತಾ ಶೆಟ್ಟಿ ವಿರುದ್ಧ ಸಂಚು ರೂಪಿಸಿದ್ದರು. ರಕ್ಷಿತಾ, ರಾಶಿಕಾ ಮುಂತಾದ ಮಹಿಳಾ ಸ್ಪರ್ಧಿಗಳ ಬಗ್ಗೆ ಕೀಳಾಗಿ ಮಾತನಾಡಿದ್ದರು. ಈ ಎಲ್ಲ ಅಂಶಗಳು ಅಶ್ವಿನಿ ಗೌಡ ಅವರಿಗೆ ಮೈನಸ್ ಆಗಿವೆ. ನಂತರದ ದಿನಗಳಲ್ಲಿ ಅಶ್ವಿನಿ ಅವರು ತಮ್ಮ ಗುಣ ಬದಲಿಸಿಕೊಂಡರು. ತಾಳ್ಮೆ ರೂಢಿಸಿಕೊಂಡರು. ಮಾಡಿದ್ದ ತಪ್ಪಿಗೆ ಕ್ಷಮೆ ಕೇಳಿದರು. ವಯಸ್ಸಿನ ಮಿತಿ ಬದಿಗಿಟ್ಟು ಟಾಸ್ಕ್ ಚೆನ್ನಾಗಿ ಆಡಿದರು. ಇವು ಅಶ್ವಿನಿ ಗೌಡ ಅವರಿಗೆ ಪ್ಲಸ್ ಆಗಿವೆ.

ಇದನ್ನೂ ಓದಿ: ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ..

ಗಿಲ್ಲಿ ನಟ: ಕಾಮಿಡಿ ವಿಚಾರದಲ್ಲಿ ಗಿಲ್ಲಿಯೇ ಕಿಂಗ್. ವೀಕ್ಷಕರಿಗೆ ಅವರು ಭರ್ಜರಿ ಮನರಂಜನೆ ನೀಡಿದರು. ಆರಂಭದಿಂದ ಕೊನೇ ತನಕ ಎನರ್ಜಿ ಕಳೆದುಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಅವರಿಗೆ ಭರ್ಜರಿ ಫ್ಯಾನ್ ಫಾಲೋಯಿಂಗ್ ಇದೆ. ಪ್ರತಿ ದಿನವೂ ಗಿಲ್ಲಿ ಹೈಲೈಟ್ ಆದರು. ಇವೆಲ್ಲವೂ ಅವರಿಗೆ ಪ್ಲಸ್ ಆಗಿದೆ. ಆದರೆ ಇತರರನ್ನು ಹೀಯಾಳಿಸಿ ಅವರು ಕಾಮಿಡಿ ಮಾಡಿದ್ದು ಸರಿಯಲ್ಲ. ಟಾಸ್ಕ್ ವಿಚಾರದಲ್ಲಿ ಗಿಲ್ಲಿ ಹೆಚ್ಚು ಸ್ಕೋರ್ ಮಾಡಲಿಲ್ಲ. ಮನೆ ಕೆಲಸದಲ್ಲೂ ಅವರು ಸೋಮಾರಿತನ ತೋರಿಸಿದರು. ಹೆಚ್ಚಿನ ಸಂದರ್ಭದಲ್ಲಿ ಕಾವ್ಯಾ ಪರ ವಹಿಸಿದರು. ಇದೆಲ್ಲವೂ ಗಿಲ್ಲಿ ಅವರಿಗೆ ಮೈನಸ್ ಆಗುತ್ತವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:01 pm, Fri, 16 January 26

Source link

ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕಾ ಜಾಲ ಪತ್ತೆ – Kannada News | Kolar: KGF Milk Adulteration Exposed; 8 Arrested for Multi Brand Fake Milk Production

ಕೋಲಾರ, ಜನವರಿ 16: ಹಲವು ಬ್ರ್ಯಾಂಡ್‌ ಕಂಪನಿಗಳ ಕಲಬೆರಕೆ ಹಾಲನ್ನು (Fake Milk) ತಯಾರಿಸುತ್ತಿದ್ದ 8 ಜನರನ್ನು ಕೆಜಿಎಫ್ (KGF) ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಿ, ಕಲಬೆರಕೆಗೆ ಉಪಯೋಗಿಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಮೂಲದ ವೆಂಕಟೇಶಪ್ಪ (50), ಬಾಲಾಜಿ (35), ದಿಲೀಪ್ (25), ಬಾಲರಾಜ್ (33), ಮನೋಹರ್ (28), ಕಾರ್ತಿಕ್ (29), ಮನೋಜ್ (22) ಮತ್ತು ಮಂಜುನಾಥ್ (55) ಬಂಧಿತ ಆರೋಪಿಗಳು.

ನಕಲಿ ಹಾಲು ತಯಾರಿಕೆ ಅಡ್ಡೆ ಮೇಲೆ ದಾಳಿ

ಕೆಜಿಎಫ್ ನಗರದ ಬಳ್ಳಗೆರೆ ಹೊರವಲಯದ ಗ್ರಾಮದ ತೋಟದ ಮನೆಯಲ್ಲಿ ಪಾಮ್ ಆಯಿಲ್ ಹಾಗೂ ರಾಸಾಯನಿಕ ವಸ್ತುಗಳನ್ನು ಉಪಯೋಗಿಸಿಕೊಂಡು ಅಕ್ರಮವಾಗಿ ನಕಲಿ ಹಾಲು ತಯಾರಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಅಂಡರ್‌ಸನ್ ಪೇಟೆ ಪೊಲೀಸರು ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮಧುಗಿರಿ: ಕಲಬೆರಕೆ ಸೇಂದಿ ಸೇವಿಸಿ ಕರ್ನಾಟಕ, ಆಂಧ್ರ ಪ್ರದೇಶದ 15 ಮಂದಿ ಅಸ್ವಸ್ಥ

ಒಂದು ಲೀಟರ್ ಮಿಶ್ರಣದಿಂದ 20 ಲೀಟರ್ ಹಾಲು ತಯಾರು ಮಾಡಲಾಗುತ್ತಿತ್ತು. ಹೀಗೆ ತಯಾರು ಮಾಡಿದ ಹಾಲನ್ನು ಬೇತಮಂಗಲ ಸೇರಿದಂತೆ ಇತರೆ ಪ್ರದೇಶದ ಡೈರಿಗಳಿಗೆ ಸರಬರಾಜು ಮಾಡಲಾಗುತ್ತಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳು ನಂದಿನಿ ಸೇರಿದಂತೆ ವಿವಿಧ ಬ್ರ್ಯಾಂಡ್‌ ಹೆಸರಲ್ಲಿ ಕಲಬೆರಕೆ ಹಾಲನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದರು. ಇನ್ನು ದಾಳಿ ವೇಳೆ 500 ಗ್ರಾಂ ನಂದಿನ ಹಾಲಿನ ಪುಡಿಯ 350 ಪಾಕೆಟ್, ಒಂದು ಕೆಜಿ ತೂಕದ 40 ಪಾಕೆಟ್, ಮಿಲೆಟ್ ಮಿಲ್ಕ್ ಲಡ್ಡು 12 ಪಾಕೆಟ್, 500 ಗ್ರಾಂ ಸಾಮರ್ಥ್ಯದ 7 ಬೆಲ್ಲದ ಪಾಕೆಟ್, 900 ಪಾಕೆಟ್ ಪಾಮ್ ಆಯಿಲ್, ಎರಡು ಮಿಕ್ಸಿ, 38 ಲೀಟರ್ ಸಾಮರ್ಥ್ಯದ 51 ಹಾಲಿನ ಕ್ಯಾನ್, ಹಾಲು ಸರಬರಾಜು ಮಾಡುತ್ತಿದ್ದ ಎರಡು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ನಕಲಿ ನಂದಿನಿ ತುಪ್ಪ ಕಡಿವಾಣಕ್ಕೆ KMF ಹೊಸ ಪ್ರಯೋಗ: ಕ್ಯೂ ಆರ್ ಕೋಡಿನಲ್ಲೇ ಅಸಲಿ, ನಕಲಿ ಪತ್ತೆ

ನಂದಿನಿ ಸಂಸ್ಥೆ ಹೊರಗಡೆ ಮಾರಾಟ ಮಾಡದ ಹಾಲಿನ ಪೌಡರ್ ಹಾಗೂ ಅಂಗನವಾಡಿ ಕೇಂದ್ರಕ್ಕೆ ನೀಡಲಾಗುವ ಪೌಷ್ಠಿಕ ಆಹಾರದ ಪಾಕೆಟ್‌ಗಳು ಆರೋಪಿಗಳ ಬಳಿಗೆ ಹೇಗೆ ಬಂದವು, ಇದರಲ್ಲಿ ಯಾರಾದರೂ ಸರ್ಕಾರಿ ನೌಕರರು ಶಾಮಿಲಾಗಿದ್ದಾರೆಯೇ ಎಂಬುದರ ಬಗ್ಗೆ ಕೂಡ ತನಿಖೆ ನಡೆಸಲಾಗುತ್ತಿದೆ ಕೆಜಿಎಫ್ ಎಸ್​ಪಿ ಶಿವಾಂಶು ರಜಪೂತ್​​​ ಹೇಳಿದ್ದಾರೆ. ಇನ್ನು ಡಿವೈಎಸ್‌ಪಿ ಲಕ್ಷ್ಮಯ್ಯ, ಸರ್ಕಲ್ ಇನ್‌ಸ್ಪೆಕ್ಟರ್‌ ಪಿಎಂ ನವೀನ್, ಮಾರ್ಕೊಂಡಯ್ಯ ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Money Tricks: ಎಷ್ಟು ದುಡಿದರೂ ಹಣ ನಿಲ್ಲುತ್ತಿಲ್ಲವಾ? ಈ 50-30-20 ಟ್ರಿಕ್ಸ್ ಉಪಯೋಗಿಸಿ – Kannada News | Learn to control expense using this 50pc 30pc 20pc rule

ನೀವು ಎಷ್ಟೇ ಹಣ ಸಂಪಾದಿಸಿದರೂ ಅದು ಸುಖಾಸುಮ್ಮನೆ ಖರ್ಚಾಗಿ ಹೋಗುತ್ತಿದೆಯಾ? ಅರ್ಧಕ್ಕಿಂತ ಹೆಚ್ಚಿನ ಜನರ ಸಮಸ್ಯೆ ಇದು. ಯಾವುದೋ ಬಹಳ ದೊಡ್ಡ ವೆಚ್ಚ ಹಣವೆಲ್ಲಾ ಖರ್ಚಾಗಿ ಹೋಗುವುದು ಬೇರೆ, ಆದರೆ ದೈನಂದಿನ ಸಾಧಾರಣ ಜಂಜಾಟಗಳಿಂದಲೇ ಹಣ ಖರ್ಚು ಮಾಡಿಕೊಳ್ಳುವುದು ಬೇರೆ. ಅವಗಡಗಳು ನಮ್ಮ ಕೈಲಿರುವುದಿಲ್ಲ. ಆದರೆ ಇತರ ಹಲವು ವೆಚ್ಚಗಳ ನಿಯಂತ್ರಣ (Expense control) ನಮ್ಮ ಕೈಲಿರುತ್ತದೆ. ಸ್ವಲ್ಪ ಯೋಜಿಸಿದರೆ ವೆಚ್ಚಗಳ ಮೇಲೆ ಸುಲಭವಾಗಿ ಕಡಿವಾಣ ಹಾಕಬಹುದು. ಹೇಗೆ ಮಾಡಬೇಕೆಂದು ಗೊಂದಲ ಇದ್ದರೆ 50-30-20 ರೂಲ್ ನೆನಪಿನಲ್ಲಿಡಿ.

ಏನಿದು 50-30-20 ನಿಯಮ?

ನಿಮ್ಮ ಆದಾಯವನ್ನು ಹೇಗೆ ವ್ಯಯಿಸಬೇಕು, ಯಾವುದಕ್ಕೆ ಉಪಯೋಗಿಸಬೇಕು ಎಂದು ವರ್ಗೀಕರಿಸಲು ಈ 50-30-20 ನಿಯಮ ಬಳಸಿ. ಅನಿವಾರ್ಯ ವೆಚ್ಚಗಳಿಗೆ ಶೇ. 50, ತುಸು ಐಷಾರಾಮ್ಯಕ್ಕೆ ಶೇ. 30, ಹಾಗೂ ಉಳಿತಾಯ ಮತ್ತು ಹೂಡಿಕೆಗೆ ಶೇ. 20 ಎಂದು ಒಂದು ಚೌಕಟ್ಟು ಹಾಕಿಕೊಳ್ಳಿ.

ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ಉಳಿತಾಯ ಮತ್ತು ಹೂಡಿಕೆಗೆಂದು ಶೇ. 20 ಮೀಸಲಿಟ್ಟಿರುವ ಹಣ ಯಾವತ್ತೂ ಕಡಿಮೆ ಆಗಬಾರದು.

ಇದನ್ನೂ ಓದಿ: 1 ಲಕ್ಷ ರೂನಿಂದ 2.71 ಕೋಟಿ ರೂ; ಭಾರತದ ಅತ್ಯಂತ ಹಳೆಯ ಫಂಡ್​ನಿಂದ ಭರ್ಜರಿ ಆದಾಯ

ಇಲ್ಲಿ ಶೇ. 50ರ ಗುಂಪಿನಲ್ಲಿರುವ ಅನಿವಾರ್ಯ ವೆಚ್ಚಗಳಲ್ಲಿ ಮನೆ ಬಾಡಿಗೆ, ಶಾಲಾ ಫೀಸ್, ದಿನಸಿ ವಸ್ತು, ವಿದ್ಯುತ್, ನೀರು, ಗ್ಯಾಸ್ ಬಿಲ್​ಗಳು, ಕಚೇರಿಗೆ ಓಡಾಡುವ ವೆಚ್ಚ, ಇನ್ಷೂರೆನ್ಸ್, ಸಾಲದ ಇಎಂಇ ಇತ್ಯಾದಿ ಸೇರುತ್ತವೆ. ಇವಿಷ್ಟೂ ಅನಿವಾರ್ಯ ವೆಚ್ಚಗಳು ನಿಮ್ಮ ಆದಾಯದ ಶೇ. 50 ಮೀರದಂತೆ ನೋಡಿಕೊಳ್ಳಬೇಕು. ಸಾಲ ತೆಗೆದುಕೊಂಡಾಗ ಇಎಂಐ ಕೂಡ ಇದೇ ವ್ಯಾಪ್ತಿಯಲ್ಲಿ ಬರಬೇಕು. ಈ ಅನಿವಾರ್ಯ ಖರ್ಚುಗಳು ಶೇ. 50ಕ್ಕಿಂತ ಕಡಿಮೆ ಇದ್ದರೆ, ಅದರಲ್ಲಿ ಮಿಗುವ ಹಣವನ್ನು ವ್ಯಯಿಸಬೇಡಿ.

ಇನ್ನು ಎರಡನೇ ವರ್ಗ ಅಗತ್ಯವಲ್ಲದ ಮತ್ತು ಐಷಾರಾಮಿ ಎನಿಸುವ ಖರ್ಚುಗಳು. ಇದರಲ್ಲಿ ನೀವು ಹೋಟೆಲ್​ಗೆ ಹೋಗಿ ತಿನ್ನುವುದು, ಆನ್​ಲೈನ್ ಶಾಪಿಂಗ್ ಮಾಡುವುದು, ಒಟಿಟಿ ಸಬ್​ಸ್ಕ್ರಿಪ್ಷನ್, ಪ್ರವಾಸ, ಹೊಸ ಗ್ಯಾಜೆಟ್ ಖರೀದಿ, ವಾಹನ ಖರೀದಿ, ಸಿನಿಮಾ ಇತ್ಯಾದಿ ಖರ್ಚುಗಳು ಇದರಲ್ಲಿ ಬರುತ್ತವೆ. ಈ ವಿಭಾಗದಲ್ಲಿ ನೀವು ಎಷ್ಟು ಸಾಧ್ಯವೋ ಅಷ್ಟು ಖರ್ಚು ಕಡಿಮೆ ಮಾಡಲು ಯತ್ನಿಸಬಹುದು.

ಇದನ್ನೂ ಓದಿ: 2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ

ನೀವು ಖರ್ಚು ಕಡಿಮೆ ಮಾಡಿ ಉಳಿಸಿದ ಹಣವನ್ನು ಹೂಡಿಕೆಗೆ ವರ್ಗಾಯಿಸಬಹುದು. ಅದಕ್ಕಿಂತ ಮುನ್ನ ಒಂದು ತುರ್ತು ನಿಧಿ ಮಾಡಿ ಅದರಲ್ಲಿ ನಿಮ್ಮ ಮಾಸಿಕ ವೆಚ್ಚದ ಆರರಷ್ಟು ಹಣವನ್ನು ಕೂಡಿಡಬೇಕು. ಇದು ನಿಮ್ಮ ಹಣಕಾಸು ಸಂಕಷ್ಟಕ್ಕೆ ಶಾಕ್ ಅಬ್ಸಾರ್ಬರ್ ರೀತಿ ಕೆಲಸ ಮಾಡುತ್ತದೆ. ಎಮರ್ಜೆನ್ಸಿ ಫಂಡ್ ಭರ್ತಿಯಾಗಿ ನಂತರ ಉಳಿಯುವ ಹಣವನ್ನು ಹೂಡಿಕೆಗೆ ಬಳಸಬಹುದು. ಹೀಗೆ ನೀವು ನಿಮ್ಮ ಆದಾಯದಲ್ಲಿ ಹೂಡಿಕೆಗೆಂದು ನಿಗದಿ ಮಾಡಿಕೊಂಡಿರುವ ಶೇ. 20ರ ಪ್ರಮಾಣವನ್ನು ಶೇ. 30, ಶೇ. 40ಕ್ಕೆ ಹೆಚ್ಚಿಸಿದರೆ ಇನ್ನೂ ಗ್ರೇಟ್. ಇದು ಸಾಧ್ಯವಾಗಬೇಕಾದರೆ ನಿಮ್ಮ ಲೈಫ್​ಸ್ಟೈಲ್ ಬದಲಾವಣೆ ಆಗಬೇಕಾಗುತ್ತದೆ.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಭಾರತ ಟಿ20 ತಂಡದಲ್ಲಿ 2 ಬದಲಾವಣೆ; ವರ್ಷಗಳ ಬಳಿಕ ಶ್ರೇಯಸ್​ಗೆ ಅವಕಾಶ – Kannada News | Team India T20 Squad: Washington Sundar, Tilak Varma Out; Ravi Bishnoi, Shreyas Iyer In for NZ Series

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ನಡುವೆ ಟೀಂ ಇಂಡಿಯಾದಲ್ಲಿ (India vs New Zealand) ಪ್ರಮುಖವಾಗಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಆದಾಗ್ಯೂ ಈ ಬದಲಾವಣೆ ಏಕದಿನ ತಂಡದಲ್ಲಿ ಆಗಿಲ್ಲ. ಬದಲಾಗಿ ಮುಂಬರುವ ಟಿ20 ಸರಣಿಗೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ವಾಸ್ತವವಾಗಿ ಭಾರತ ಟಿ20 ತಂಡದಲ್ಲಿ ಇಬ್ಬರು ಆಟಗಾರರು ಪ್ರಸ್ತುತ ಗಾಯಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಬಿಸಿಸಿಐ (BCCI) ಗಾಯಗೊಂಡಿರುವ ಆಟಗಾರರ ಬದಲಿಗೆ ಬದಲಿ ಆಟಗಾರರನ್ನು ಘೋಷಿಸಿದೆ. ಅದರಂತೆ ಗಾಯಗೊಂಡಿರುವ ವಾಷಿಂಗ್ಟನ್ ಸುಂದರ್ ಮತ್ತು ತಿಲಕ್ ವರ್ಮಾ ಅವರ ಬದಲಿಗೆ ರವಿ ಬಿಷ್ಣೋಯ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಇಬ್ಬರು ಔಟ್, ಇಬ್ಬರು ಇನ್

ಜನವರಿ 11 ರಂದು ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರ ಪಕ್ಕೆಲುಬುಗಳಲ್ಲಿ ಇದ್ದಕ್ಕಿದ್ದಂತೆ ನೋವು ಕಾಣಿಸಿಕೊಂಡಿತು. ಹೀಗಾಗಿ ಅವರ ಪಂದ್ಯದ ಮಧ್ಯದಲ್ಲೇ ಮೈದಾನದಿಂದ ಹೊರನಡೆದಿದ್ದರು. ಆ ಬಳಿಕ ಸುಂದರ್ ಅವರನ್ನು ಪರೀಕ್ಷಿಸಿದ್ದ ವೈದ್ಯಕೀಯ ತಂಡ ಅವರಿಗೆ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದೆ. ಏತನ್ಮಧ್ಯೆ, ತಿಲಕ್ ವರ್ಮಾ ಈಗಾಗಲೇ ಗಾಯದಿಂದಾಗಿ ಮೊದಲ ಮೂರು ಟಿ20ಪಂದ್ಯಗಳಿಂದ ಹೊರಗುಳಿದಿದ್ದಾರೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಬದಲಿಗೆ ಲೆಗ್-ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ಟಿ20 ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

3 ಪಂದ್ಯಗಳಿಗೆ ಶ್ರೇಯಸ್ ಆಯ್ಕೆ

ಮತ್ತೊಂದೆಡೆ, ಗಾಯಗೊಂಡ ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್ ಅವರನ್ನು ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಅಯ್ಯರ್ ಮೊದಲ ಮೂರು ಟಿ20 ಪಂದ್ಯಗಳಿಗೆ ತಂಡದ ಭಾಗವಾಗಿರುತ್ತಾರೆ. ಈ ಮೂಲಕ ಶ್ರೇಯಸ್ ಅಯ್ಯರ್ ಎರಡು ವರ್ಷಗಳ ನಂತರ ಭಾರತೀಯ ಟಿ20 ತಂಡಕ್ಕೆ ಮರಳಿದ್ದಾರೆ. ಕೊನೆಯ ಬಾರಿಗೆ ಡಿಸೆಂಬರ್ 2023 ರಲ್ಲಿ ಟೀಂ ಇಂಡಿಯಾ ಪರ ಅಯ್ಯರ್ ಟಿ20ಪಂದ್ಯವನ್ನು ಆಡಿದ್ದರು. ಏತನ್ಮಧ್ಯೆ, ರವಿ ಬಿಷ್ಣೋಯ್ ಫೆಬ್ರವರಿ 2025 ರಿಂದ ಟೀಂ ಇಂಡಿಯಾ ಪರ ಟಿ20ಪಂದ್ಯ ಆಡಿಲ್ಲ. ಆದ್ದರಿಂದ, ಈ ಸರಣಿಯು ಇಬ್ಬರೂ ಆಟಗಾರರಿಗೆ ಪ್ರಮುಖ ಅವಕಾಶವಾಗಿದ್ದು, ತಮ್ಮ ಸಾಮರ್ಥ್ಯವನ್ನು ಸಾಭೀತುಪಡಿಸಬೇಕಿದೆ.

ಏಕದಿನ ಸರಣಿ ಬಳಿಕ ಟಿ20 ಸರಣಿಯಿಂದಲೂ ವಾಷಿಂಗ್ಟನ್ ಸುಂದರ್ ಔಟ್

ಟಿ20 ಸರಣಿಗೆ ಟೀಂ ಇಂಡಿಯಾ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಮೊದಲ ಮೂರು ಪಂದ್ಯ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್ (ಉಪನಾಯಕ), ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಇಶನ್ ಕಿಶನ್ (ವಿಕೆಟ್ ಕೀಪರ್), ರವಿ ಬಿಷ್ಣೋಯ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:43 pm, Fri, 16 January 26

Source link

ನಾಳೆಯಿಂದ 2 ದಿನ ಬಂಗಾಳ, ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ; ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit West Bengal and Assam on January 17 and 18 to inaugurate various projects

ನವದೆಹಲಿ, ಜನವರಿ 16: ಜನವರಿ 17 ಮತ್ತು 18ರಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೆ ಎರಡು ದಿನಗಳ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಪ್ರಮುಖ ರೈಲು ಮತ್ತು ರಸ್ತೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ “ಬಾಗುರುಂಬಾ ದ್ವೌ 2026″ದಲ್ಲಿ ಮೋದಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಶನಿವಾರ ಮಧ್ಯಾಹ್ನ 12.45ರ ಸುಮಾರಿಗೆ ಪಶ್ಚಿಮ ಬಂಗಾಳದ ಮಾಲ್ಡಾಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಮಾಲ್ಡಾ ಪಟ್ಟಣದ ರೈಲು ನಿಲ್ದಾಣದಲ್ಲಿ ಹೌರಾವನ್ನು ಗುವಾಹಟಿ (ಕಾಮಾಕ್ಯ)ಯನ್ನು ಸಂಪರ್ಕಿಸುವ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. 3,250 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ

ಜನವರಿ 17ರಂದು ಸಂಜೆ ಮೋದಿ ಅವರು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ “ಬಾಗುರುಂಬಾ ದ್ವೌ 2026″ದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10,000ಕ್ಕೂ ಹೆಚ್ಚು ಕಲಾವಿದರು ಒಂದೇ ಬಾರಿಗೆ ಬಾಗುರುಂಬಾ ನೃತ್ಯವನ್ನು ಪ್ರದರ್ಶಿಸಲಿದ್ದಾರೆ.

ಕಲಿಯಾಬೋರ್‌ನಲ್ಲಿ 6,950 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗಾಗಿ ಮೋದಿ ಭೂಮಿ ಪೂಜೆಯನ್ನು ಸಹ ಮಾಡಲಿದ್ದಾರೆ. 86 ಕಿ.ಮೀ. ಉದ್ದದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಪರಿಸರ ಸೂಕ್ಷ್ಮ ರಾಷ್ಟ್ರೀಯ ಹೆದ್ದಾರಿ ಯೋಜನೆಯಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಯನ್ನು ಸಂರಕ್ಷಣೆಯೊಂದಿಗೆ ಸಮತೋಲನಗೊಳಿಸಲು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

ಜನವರಿ 18ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಸುಮಾರು 830 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮತ್ತು ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಮೋದಿ 2 ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಾದ ಗುವಾಹಟಿ (ಕಾಮಾಕ್ಯ) – ರೋಹ್ಟಕ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ದಿಬ್ರುಗಢ – ಲಕ್ನೋ (ಗೋಮ್ತಿ ನಗರ) ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಈ ಹೊಸ ಸೇವೆಗಳು ಈಶಾನ್ಯ ಮತ್ತು ಉತ್ತರ ಭಾರತದ ನಡುವಿನ ರೈಲು ಸಂಪರ್ಕವನ್ನು ಬಲಪಡಿಸುತ್ತದೆ. ಪ್ರಯಾಣಿಕರಿಗೆ ಸುರಕ್ಷಿತ, ವೇಗದ ಮತ್ತು ಹೆಚ್ಚು ಅನುಕೂಲಕರ ಪ್ರಯಾಣವನ್ನು ಒದಗಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಎಂಸಿ ಚುನಾವಣಾ ಫಲಿತಾಂಶದ ಲೆಕ್ಕಾಚಾರ ಉಲ್ಟಾ; ಕಿಂಗ್ ಮೇಕರ್ ಆಗುತ್ತಾ ಕಾಂಗ್ರೆಸ್? – Kannada News | Mumbai BMC Election results bjp Fails to Grab Majority Congress Might become King Maker

ಮುಂಬೈ, ಜನವರಿ 16: ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಚುನಾವಣಾ ಮತ ಎಣಿಕೆ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ಲೆಕ್ಕಾಚಾರವೇ ಉಲ್ಟಾ ಆಗುವಂತಿದೆ. ಬಿಎಂಸಿ ಚುನಾವಣೆಯಲ್ಲಿ (BMC Elections) ಬಿಜೆಪಿ ಅತಿ ಹೆಚ್ಚು ಮತಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವುದು ನಿಜವಾದರೂ ಬಿಜೆಪಿ ನೇತೃತ್ವದ ಮಹಾಯುತಿಗೆ ಇನ್ನೂ ಬಹುಮತ ಲಭ್ಯವಾಗಿಲ್ಲ. ಈ ಮೊದಲು ಬಹುಮತಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುಂದಿದ್ದ ಬಿಜೆಪಿ ಇದೀಗ ಕೊನೆಯ ಸುತ್ತಿನ ಮತ ಎಣಿಕೆ ವೇಳೆ ಕೊಂಚ ಹಿನ್ನಡೆ ಅನುಭವಿಸಿರುವುದರಿಂದ ಬಿಜೆಪಿಗೆ 110 ಸ್ಥಾನಗಳು ಸಿಕ್ಕಿವೆ. ಆದರೆ, ಮುಂಬೈ ಮಹಾನಗರ ಪಾಲಿಕೆಯಲ್ಲಿ ಅಧಿಕಾರಕ್ಕೇರಲು 114 ಮ್ಯಾಜಿಕ್ ನಂಬರ್. ಈ ಸಂಖ್ಯೆಗೆ ಬಿಜೆಪಿ ಮೈತ್ರಿಗೆ ಇನ್ನೂ 4 ಸ್ಥಾನಗಳು ಬೇಕು.

ಇಲ್ಲಿಯವರೆಗೆ ಮುಂಬೈ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಮತ್ತು ಶಿವಸೇನೆ ಶಿಂಧೆ ಬಣ ಮುನ್ನಡೆ ಸಾಧಿಸಿತ್ತು, ಆದರೆ ಈಗ ಮುಂಬೈ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ದೊಡ್ಡ ತಿರುವು ಸಿಕ್ಕಿದೆ. ಕೊನೆಯ ಕ್ಷಣದಲ್ಲಿ ಸಂಖ್ಯೆಗಳು ಬದಲಾಗಿವೆ. ಇದರಿಂದಾಗಿ, ಬಿಜೆಪಿ ಮತ್ತು ಶಿವಸೇನಾ ಶಿಂಧೆ ಗುಂಪಿಗೆ ಚಡಪಡಿಕೆ ಹೆಚ್ಚಾಗಿದೆ. ಪ್ರಸ್ತುತ, ಬಿಜೆಪಿ 84 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೆ, ಶಿವಸೇನಾ ಶಿಂಧೆ ಗುಂಪು 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಆದ್ದರಿಂದ, ಬಿಜೆಪಿ ಮತ್ತು ಶಿವಸೇನೆ ಒಟ್ಟು 110 ಅಭ್ಯರ್ಥಿಗಳಲ್ಲಿ ಮುನ್ನಡೆ ಸಾಧಿಸುತ್ತಿವೆ. ಮತ್ತೊಂದೆಡೆ, ಶಿವಸೇನಾ ಠಾಕ್ರೆ ಗುಂಪು 64 ಅಭ್ಯರ್ಥಿಗಳಲ್ಲಿ ಮುನ್ನಡೆ ಸಾಧಿಸುತ್ತಿದೆ ಮತ್ತು ಎಂಎನ್ಎಸ್ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದೆ. ಶಿವಸೇನಾ ಠಾಕ್ರೆ ಗುಂಪು ಮತ್ತು ಎಂಎನ್ಎಸ್ ಒಟ್ಟು 72 ಅಭ್ಯರ್ಥಿಗಳಲ್ಲಿ ಮುನ್ನಡೆ ಸಾಧಿಸಿವೆ.

ಇದನ್ನೂ ಓದಿ: BMC Election Exit Polls: ಮುಂಬೈನಲ್ಲಿ ಉದ್ಧವ್ ಠಾಕ್ರೆಯ 25 ವರ್ಷಗಳ ಅಧಿಕಾರ ಅಂತ್ಯ, ಬಿಜೆಪಿಗೆ ಬಹುಮತ; ಮತಗಟ್ಟೆ ಸಮೀಕ್ಷೆ ಭವಿಷ್ಯ

ಮುಂಬೈ ಮಹಾನಗರ ಪಾಲಿಕೆಯಲ್ಲಿ ಒಟ್ಟು 227 ಸ್ಥಾನಗಳಿವೆ, ಆದ್ದರಿಂದ ಯಾವುದೇ ಪಕ್ಷಕ್ಕೆ ಬಹುಮತದ ಗಡಿ ದಾಟಲು 114 ಸ್ಥಾನಗಳು ಬೇಕಾಗುತ್ತವೆ. ಪ್ರಸ್ತುತ, ಬಿಜೆಪಿ ಮತ್ತು ಶಿವಸೇನೆ ಶಿಂಧೆ ಬಣ ಬಹುಮತದ ಗಡಿಯ ಹತ್ತಿರದಲ್ಲಿದೆ. ಆದರೆ ಇನ್ನೂ ಅವರು ಬಹುಮತದ ಗಡಿಯನ್ನು ತಲುಪಲು ಸಾಧ್ಯವಾಗಿಲ್ಲ. ಮತ್ತೊಂದೆಡೆ, ಕಾಂಗ್ರೆಸ್ ಅಭ್ಯರ್ಥಿಗಳು ಇನ್ನೂ 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ. ಆದ್ದರಿಂದ ಪ್ರಸ್ತುತ ಅಂಕಿಅಂಶಗಳ ಪ್ರಕಾರ, ಕಾಂಗ್ರೆಸ್ ಈಗ ಮುಂಬೈನಲ್ಲಿ ಸರ್ಕಾರ ರಚಿಸಲು ಕಿಂಗ್‌ಮೇಕರ್ ಪಾತ್ರವನ್ನು ವಹಿಸಬಹುದು. ಕಾಂಗ್ರೆಸ್ ಜೊತೆಗೆ, ಗೆಲ್ಲುವ ಸ್ವತಂತ್ರ ಅಭ್ಯರ್ಥಿಯೂ ದೊಡ್ಡ ಆಟವಾಡುವ ಸಾಧ್ಯತೆಯಿದೆ. ಏಕೆಂದರೆ ಸ್ವತಂತ್ರ ಅಭ್ಯರ್ಥಿಗಳು ಮುಂಬೈನಲ್ಲಿ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಹೀಗಾಗಿ, ಮುಂಬೈನಲ್ಲಿ ಯಾರು ವಿಜೇತರಾಗುತ್ತಾರೆ ಎಂಬ ಕುತೂಹಲ ಇನ್ನೂ ಬಾಕಿ ಉಳಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಲಾರಲಿಂಗನಿಗೆ ಬಲಿ ಕೊಡಲು ತಂದಿದ್ದ ಕುರಿಮರಿಗಳನ್ನ ವಶಕ್ಕೆ ಪಡೆದು ಮಾರಾಟ ಮಾಡಿದ ಅಧಿಕಾರಿಗಳು – Kannada News | Yadgir Mailarlingeshwar Jatre: Temple revenue 23 Lakhs from Lamb Tenders After Ban

ಮೈಲಾರಲಿಂಗನ ಜಾತ್ರೆಗೆ ಭಕ್ತರು ತಂದಿದ್ದ ಕುರಿಮರಿಗಳು

ಯಾದಗಿರಿ, ಜನವರಿ 16: ಕಲ್ಯಾಣ ಕರ್ನಾಟಕ ಭಾಗದಲ್ಲೇ ಅತ್ಯಂತ ಪ್ರಸಿದ್ಧ ಮೈಲಾರಲಿಂಗನ ಜಾತ್ರೆ (mailaralingeshwara jatre) ಅದ್ಧೂರಿಯಾಗಿ ನಡೆದಿದೆ. ಜಾತ್ರೆಯಲ್ಲಿ ಮೈಲಾರನ ಪಲ್ಲಕ್ಕಿ ಮೇಲೆ ಭಕ್ತರು ಕುರಿಮರಿಗಳನ್ನ ಎಸೆಯಲು ತೆಗೆದುಕೊಂಡು ಬರುತ್ತಾರೆ. ಆದರೆ ಈ ಪದ್ದತಿಗೆ ಬ್ರೇಕ್ ಬಿದ್ದಿರುವ ಕಾರಣಕ್ಕೆ ಭಕ್ತರು (Devotees) ತಂದಿದ್ದ ಕುರಿಮರಿಗಳನ್ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ಅದೇ ಕುರಿಮರಿಗಳನ್ನ ಟೆಂಡರ್ ಮೂಲಕ ರೈತರಿಗೆ ಮಾರಾಟ ಮಾಡಿದ್ದರಿಂದ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಲಕ್ಷ ಲಕ್ಷ ಆದಾಯ ಹರಿದು ಬಂದಿದೆ.

ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಮೈಲಾರಲಿಂಗೇಶ್ವರ ಜಾತ್ರೆ ಪ್ರತಿವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ನಡೆದಿದೆ. ವಿವಿಧ ಜಿಲ್ಲೆ ಮತ್ತು ರಾಜ್ಯಗಳಿಂದ ಲಕ್ಷಾಂತರ ಭಕ್ತರ ದಂಡೆ ಜಾತ್ರೆಗೆ ಹರಿದು ಬಂದಿತ್ತು. ಈ ಜಾತ್ರೆಯಲ್ಲಿ ಮೈಲಾರಲಿಂಗನನ್ನ ಪಲ್ಲಕ್ಕಿಯಲ್ಲಿ ಕುರಿಸಿಕೊಂಡು ಸಂಕ್ರಮಣದ ದಿನದಂದು ಹೊನ್ನ ಕೆರೆಗೆ ಗಂಗಾ ಸ್ನಾನ ಮಾಡಿಸಲು ಮೆರವಣಿಗೆ ಮೂಲಕ ಕರೆದುಕೊಂಡು ಹೋಗಲಾಗುತ್ತೆ. ಈ ವೇಳೆ ಪಲ್ಲಕ್ಕಿ ಮೇಲೆ ಕುರಿಮರಿಗಳ ಎಸೆದು ಹರಕೆ ತೀರಿಸುವುದು ಇಲ್ಲಿನ ವಾಡಿಕೆ ಆಗಿತ್ತು.

ಭಕ್ತರು ತಂದಿದ್ದ 778 ಕುರಿಮರಿಗಳ ಜಪ್ತಿ

ಪ್ರಾಣಿ ಹಿಂಸೆ ಮಾಡಬಾರದು ಎನ್ನುವ ಕಾರಣಕ್ಕೆ ಈ ಸಂಪ್ರದಾಯಕ್ಕೆ ಕಳೆದ ಕೆಲ ವರ್ಷಗಳಿಂದ ಬ್ರೇಕ್ ಹಾಕಲಾಗಿದೆ. ಆದರೂ ಭಕ್ತರು ನೂರಾರು ಕುರಿಮರಿಗಳನ್ನ ಪಲ್ಲಕ್ಕಿ ಮೇಲೆ ಎಸೆಯಲು ತೆಗೆದುಕೊಂಡು ಬರುತ್ತಾರೆ. ಇದ್ದನ್ನ ತಡೆಯೋಕೆ ಜಿಲ್ಲಾಡಳಿತ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲಿ ಚೆಕ್ ಪೋಸ್ಟ್​​ಗಳನ್ನು ನಿರ್ಮಿಸಿತ್ತು. ಹೀಗಾಗಿ ಭಕ್ತರು ಆಗಮಿಸುತ್ತಿದ್ದಂತೆ ಪೊಲೀಸರು ವಾಹನಗಳನ್ನ ಪರಿಶೀಲನೆ ನಡೆಸಿ ಭಕ್ತರು ತಂದಿದ್ದ ಕುರಿಮರಿಗಳನ್ನ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಯಾದಗಿರಿ ಮೈಲಾರಲಿಂಗ ಜಾತ್ರೆಯಲ್ಲಿ ಹಳದಿ ಮಾರುತ: ಭಂಡಾರದೋಕುಳಿಯಲ್ಲಿ ಮುಂದೆದ್ದ ಭಕ್ತರು

ಈ ವರ್ಷ ಭಕ್ತರು ತಂದಿದ್ದ 778 ಕುರಿಮರಿಗಳನ್ನ ಜಪ್ತಿ ಮಾಡಿದ್ದಾರೆ. ಅಧಿಕಾರಿಗಳು ಮತ್ತು ಪೊಲೀಸರು ಜಪ್ತಿ ಮಾಡಿದ ಕುರಿಮರಿಗಳನ್ನು ಪಶು ಇಲಾಖೆಯಿಂದ ನಿರ್ಮಾಣ ಮಾಡಲಾಗಿದ್ದ ಶೆಡ್​ನಲ್ಲಿ ಇಡಲಾಗಿತ್ತು. ಇದೇ ಕುರಿಮರಿಗಳಿಂದ ಇದೀಗ ದೇವಸ್ಥಾನಕ್ಕೆ ಲಕ್ಷಾಂತರ ರೂ. ಆದಾಯ ಹರಿದು ಬಂದಿದೆ.

ಪ್ರತಿ ವರ್ಷ ಜಾತ್ರೆಯಲ್ಲಿ ವಶ ಪಡಿಸಿಕೊಂಡ ಕುರಿಮರಿಗಳನ್ನ ಯಾದಗಿರಿ ನಗರದಲ್ಲಿರುವ ಪಶು ಆಸ್ಪತ್ರೆಗೆ ತರಲಾಗುತ್ತೆ. ಇಲ್ಲಿ ಶೆಡ್​ಗಳನ್ನ ಮಾಡಿ ಕುರಿಗಳನ್ನ ಇರಿಸಲಾಗುತ್ತಿತ್ತು. ಬಳಿಕ ಹರಾಜ್ ಮೂಲಕ ತಲಾ 20 ಕುರಿಗಳನ್ನ ರೈತರಿಗೆ ಹಾಗೂ ವ್ಯಾಪರಸ್ಥರಿಗೆ ಮಾರಾಟ ಮಾಡಲಾಗುತ್ತಿತ್ತು. ಆದರೆ ಪಶು ಆಸ್ಪತ್ರೆಯಲ್ಲಿ ಎರಡು ದಿನಗಳ ಕಾಲ ಇಡುವುದರಿಂದ ಕೆಲ ಕುರಿಮರಿಗಳು ಸಾವನ್ನಪ್ಪುತ್ತಿದ್ದವು. ಇದೆ ಕಾರಣಕ್ಕೆ ಕಳೆದ ನಾಲ್ಕು ವರ್ಷಗಳಿಂದ ಜಾತ್ರೆಗೂ ಮುನ್ನವೆ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಆಸಕ್ತ ರೈತರು ಮತ್ತು ವ್ಯಾಪರಸ್ಥರಿಗೆ ಕರೆದು ಟೆಂಡರ್ ಮಾಡಲಾಗುತ್ತಿದೆ.

ಯಾರೇ ಕುರಿಮರಿಗಳನ್ನ ಖರೀದಿ ಮಾಡಿದರೂ ಕನಿಷ್ಟ 100 ಕುರಿಗಳನ್ನ ಖರೀದಿ ಮಾಡಬೇಕಾಗಿತ್ತು. ಪ್ರತಿ ಕುರಿಮರಿಗೆ ಅಧಿಕಾರಿಗಳು 1700 ರೂ ದರ ನಿಗದಿ ಮಾಡಿದ್ದರು. ಇದರ ಮೇಲೆ ಟೆಂಡರ್​ನಲ್ಲಿ ಭಾಗವಹಿಸಿದವರು ಬೆಲೆ ಏರಿಸಿ ಟೆಂಡರ್ ಪಡೆಯಬಹುದಾಗಿತ್ತು. ಒಟ್ಟು ಈ ಬಾರಿ ಟೆಂಡರ್ ಪ್ರಕ್ರಿಯೆಯಲ್ಲಿ 15 ಜನರು ಭಾಗವಹಿಸಿದ್ದರು. ಪ್ರತಿಯೊಂದು ಕುರಿಗೆ 2800 ರೂ ಯಿಂದ ಹಿಡಿದು 3211 ರೂ. ತನಕ ಬೆಲೆಯನ್ನ ಏರಿಕೆ ಮಾಡಿ ಟೆಂಡರ್ ಪಡೆದಿದ್ದರು. ಸುಮಾರು 8 ಜನರಿಗೆ ಮಾತ್ರ ಕುರಿಗಳನ್ನ ಖರೀದಿ ಮಾಡುವುದ್ದಕ್ಕೆ ಅವಕಾಶ ಸಿಕ್ಕಿದೆ.

23 ಲಕ್ಷಕ್ಕೂ ಅಧಿಕ ಆದಾಯ

ಮೈಲಾರಪುರ ಹತ್ತಿರ ಹಾಕಿದ್ದ ಶೆಡ್ ಬಳಿಯ ಟೆಂಡರ್ ಪಡೆದವರು 100 ಕುರಿಮರಿಗಳ ಜಮಾ ಆಗುತ್ತಿದ್ದ ಹಾಗೆ ವಾಹನ ತಂದು ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಸುಮಾರು ದೇವಸ್ಥಾನಕ್ಕೆ 23 ಲಕ್ಷಕ್ಕೂ ಅಧಿಕ ಆದಾಯ ಹರಿದು ಬಂದಿದೆ. ಕಳೆದ ಬಾರಿ 760 ಕುರಿಗಳನ್ನ ವಶಕ್ಕೆ ಪಡೆಯಲಾಗಿದ್ದು, ಸುಮಾರು 19 ಲಕ್ಷ ರೂ ಆದಾಯ ಬಂದಿತ್ತು. ಆದರೆ ಈ ಬಾರಿ ಟೆಂಡರ್​ನಿಂದ ಹೆಚ್ಚಿನ ಆದಾಯ ದೇವಸ್ಥಾನಕ್ಕೆ ಹರಿದು ಬಂದಿದೆ. ಇನ್ನು ಕುರಿಮರಿಗಳ ಟೆಂಡರ್​ನಿಂದ ಹರಿದು ಬಂದ ಹಣದಿಂದ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಬಳಕೆ ಮಾಡಲಾಗುವುದು.

ಇದನ್ನೂ ಓದಿ: ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು

ಪಲ್ಲಕ್ಕಿ ಮೇಲೆ ಕುರಿ ಮರಿಗಳನ್ನ ಎಸೆಯುವ ಪದ್ಧತಿಗೆ ಬ್ರೇಕ್ ಬಿದ್ದಿರುವ ಕಾರಣಕ್ಕೆ ಭಕ್ತರು ತಂದಿದ್ದ ಕುರಿಮರಿಗಳಿಂದ ದೇವಸ್ಥಾನಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. ಹೀಗಾಗಿ ಕುರಿಮರಿಗಳಿಂದ ಬಂದ ಹಣದಿಂದ ದೇವಸ್ಥಾನದಲ್ಲಿ ಭಕ್ತರಿಗಾಗಿ ಮೂಲಭೂತ ಸೌಕರ್ಯಗಳನ್ನ ಒದಗಿಸುವ ಕೆಲಸ ಕೂಡ ಆಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 9:34 pm, Fri, 16 January 26

Source link

Spiritual Power: ರುದ್ರಾಕ್ಷಿ ಧರಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ ನಿಯಮಗಳಿವು – Kannada News | Rudraksha Benefits and Wearing Rules: Spiritual Power and Protection Guide

ರುದ್ರಾಕ್ಷವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ರುದ್ರಾಕ್ಷಿಯಿಂದ ಮಂತ್ರ ಜಪಿಸುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ, ರುದ್ರಾಕ್ಷಿಯಿಂದ ಜಪಿಸುವುದರಿಂದ ಹಲವು ಪಟ್ಟು ಹೆಚ್ಚಿನ ಪ್ರಯೋಜನಗಳು ದೊರೆಯುತ್ತವೆ. ರುದ್ರಾಕ್ಷಿಯು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ ಎಂದು ಹೇಳಲಾಗುತ್ತದೆ. ಇದನ್ನು ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ, ಆದರೆ ಶಾಸ್ತ್ರಗಳು ಅದನ್ನು ಧರಿಸಲು ನಿಯಮಗಳನ್ನು ಸಹ ಸೂಚಿಸುತ್ತವೆ. ಶಾಸ್ತ್ರಗಳಲ್ಲಿ ಸೂಚಿಸಲಾದ ನಿಯಮಗಳ ಪ್ರಕಾರ ಇದನ್ನು ಧರಿಸಬೇಕು. ಇಲ್ಲದಿದ್ದರೆ, ಪ್ರಯೋಜನದ ಬದಲು, ಅದು ಹಾನಿಯನ್ನುಂಟುಮಾಡಬಹುದು.

ರುದ್ರಾಕ್ಷಿ ಧರಿಸುವ ನಿಯಮಗಳು:

ರುದ್ರಾಕ್ಷಿಯನ್ನು ಈ ರೀತಿ ಧರಿಸಿ:

ಮಾರುಕಟ್ಟೆಯಿಂದ ನೇರವಾಗಿ ತರಿಸಿದ ರುದ್ರಾಕ್ಷಿಯನ್ನು ಎಂದಿಗೂ ಧರಿಸಬೇಡಿ. ಬದಲಾಗಿ, ಅದನ್ನು ಗಂಗಾ ಜಲ ಅಥವಾ ಹಸಿ ಹಾಲಿನಿಂದ ಶುದ್ಧೀಕರಿಸಿ. ನಂತರ ಧರಿಸಿ. ಶುಭ ಸಮಯದಲ್ಲಿ 108 ಬಾರಿ “ಓಂ ನಮಃ ಶಿವಾಯ” ಎಂದು ಜಪಿಸಿ ಅಥವಾ ದೇವಸ್ಥಾನದಲ್ಲಿರುವ ಶಿವಲಿಂಗಕ್ಕೆ ಮುಟ್ಟಿ. ನಂತರ ರುದ್ರಾಕ್ಷಿಯನ್ನು ಧರಿಸಿ.

ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ:

ರುದ್ರಾಕ್ಷಿ ಧರಿಸುವ ಮೊದಲು, ಶುಭ ದಿನವನ್ನು ಪರೀಕ್ಷಿಸಲು ಮರೆಯದಿರಿ. ರುದ್ರಾಕ್ಷಿ ಧರಿಸಲು ಅತ್ಯಂತ ಶುಭ ದಿನಗಳು ಅಮಾವಾಸ್ಯೆ, ಪೂರ್ಣಿಮೆ, ಶ್ರಾವಣ, ಸೋಮವಾರ ಅಥವಾ ಶಿವರಾತ್ರಿ ಎಂದು ಶಾಸ್ತ್ರಗಳು ಹೇಳುತ್ತವೆ. ಅಲ್ಲದೆ, ಯಾವಾಗಲೂ ರುದ್ರಾಕ್ಷಿಯನ್ನು ಸ್ವಚ್ಛವಾಗಿಡಿ. ಇದಲ್ಲದೆ, ನೀವು ಧರಿಸಿರುವ ರುದ್ರಾಕ್ಷಿಯನ್ನು ಬೇರೆಯವರಿಗೆ ಎಂದಿಗೂ ನೀಡಬೇಡಿ, ಅಥವಾ ಬೇರೆಯವರ ರುದ್ರಾಕ್ಷಿಯನ್ನು ತೆಗೆದುಕೊಳ್ಳಬೇಡಿ. ನೀವು ಈ ನಿಯಮಗಳನ್ನು ನಿರ್ಲಕ್ಷಿಸಿದರೆ, ರುದ್ರಾಕ್ಷಿಯ ಪ್ರಯೋಜನಗಳ ಬದಲಿಗೆ ನೀವು ಅಶುಭ ಫಲಿತಾಂಶಗಳನ್ನು ಅನುಭವಿಸಬಹುದು.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ರುದ್ರಾಕ್ಷಿ ಧರಿಸುವುದರಿಂದಾಗುವ ಪ್ರಯೋಜನಗಳು:

ರುದ್ರಾಕ್ಷಿಯನ್ನು ಧರಿಸುವುದರಿಂದ ಶಿವನ ಆಶೀರ್ವಾದ ಸಿಗುತ್ತದೆ. ಇದು ಮನಸ್ಸನ್ನು ಶಾಂತಗೊಳಿಸುತ್ತದೆ. ರುದ್ರಾಕ್ಷಿಯನ್ನು ಧರಿಸುವುದರಿಂದ ಏಕಾಗ್ರತೆ ಹೆಚ್ಚಾಗುತ್ತದೆ, ನಕಾರಾತ್ಮಕ ಶಕ್ತಿ ಮತ್ತು ದುಷ್ಟ ಕಣ್ಣುಗಳನ್ನು ದೂರವಿಡುತ್ತದೆ. ಅಶುದ್ಧ ಮತ್ತು ದುಷ್ಟ ಆಲೋಚನೆಗಳನ್ನು ದೂರವಿಡಲಾಗುತ್ತದೆ. ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇದು ಗ್ರಹಗಳ ಋಣಾತ್ಮಕ ಪರಿಣಾಮಗಳಿಂದ ರಕ್ಷಿಸುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version