ದುಡ್ಡಿನ ಆಸೆಗೆ ಕಳ್ಳಾಟ ಆಡುತ್ತಿದ್ದ ಬೆಂಗಳೂರಿನ ಪಿಜಿ ಮಾಲೀಕರಿಗೆ ಶಾಕ್ ಕೊಟ್ಟ ಅಧಿಕಾರಿಗಳು – Kannada News | GBA Officer inspects 204 paying guest In Bengaluru today And 6 locked

ಬೆಂಗಳೂರು, (ಜನವರಿ 16): ಶುಚಿತ್ವದ ಕೊರತೆ, ಎಫ್‌ಎಸ್‌ಎಸ್‌ಎಐ ಮಾನದಂಡಗಳ ಉಲ್ಲಂಘನೆ, ಸುರಕ್ಷತಾ ಮಾರ್ಗಸೂಚಿಗಳ ಪಾಲಿಸದಿರುವುದು ಸೇರಿ ನಿಯಮಗಳನ್ನ ಪಾಲಿಸದ ಪಿಜಿಗಳ (paying guest )ವಿರುದ್ಧ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಸಮರ ಸಾರಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಿವಾಜಿನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯಾಧಿಕಾರಿಗಳು ಪಿಜಿ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ. ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್‌ ನಿರ್ದೇಶನದ ಮೇರೆಗೆ 204 ಪೇಯಿಂಗ್‌ ಗೆಸ್ಟ್‌(ಪಿಜಿ)ಗಳನ್ನ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಲೋಪ ಕಂಡುಬಂದ ಹಿನ್ನೆಲೆ 6 ಪಿಜಿಗಳಿಗೆ ಬೀಗ ಜಡಿದಿದ್ದಾರೆ. ಹಾಗೇ ಜೊತೆಗೆ 1.96 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.

ನ್ಯೂನತೆ ಸರಿಪಡಿಸಿಕೊಳ್ಳಲು ಕಾಲಾವಕಾಶ

ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನ, ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು FSSAIನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುವ ಒಟ್ಟು 204 ಪೇಯಿಂಗ್ ಗೆಸ್ಟ್ ವಸತಿ ಗೃಹ ಉದ್ದಿಮೆಗಳ ತಪಾಸಣೆ ನಡೆಸಿದ್ದಾರೆ. 7 ದಿನಗಳ ಒಳಗಾಗಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಕಾರ್ಯನಿರ್ವಹಣೆ ಮಾಡುವುದಕ್ಕೆ ಪಿಜಿ ಮಾಲೀಕರಿಗೆ ತಿಳುವಳಿಕೆ ಪತ್ರ ನೀಡಿ, ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ವೇಳೆ ಚಿಕ್ಕಪೇಟೆ ಮತ್ತು ಶಿವಾಜಿನಗರ ಆರೋಗ್ಯ ವೈದ್ಯಾಧಿಕಾರಿಗಳಿದ್ದರು.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ, ಈ ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಕರೆಂಟ್​​ ಇರುವುದಿಲ್ಲ

ಅನಧಿಕೃತ ಪಿಜಿಗಳ ಹಾವಳಿ

ಬೆಂಗಳೂರಿನಾದ್ಯಂತ ಸಾಕಷ್ಟು ಜೆಂಟ್ಸ್, ಗರ್ಲ್ಸ್ ಪಿಜಿಗಳು ಇದ್ದು. ರಾಜ್ಯದ ಬೇರೆ ಬೇರೆ ಭಾಗಗಳಿಂದ ನಗರಕ್ಕೆ ಬರುವ ಸಾವಿರಾರು ಜನರು ಪಿಜಿಗಳಲ್ಲಿ ವಾಸಿಸುತ್ತಿದ್ದಾರೆ. ಜನ ಹೆಚ್ಚಾದಂತೆ ಕಟ್ಟಡ ನಿಯಮ, ಸುರಕ್ಷತಾ ಮಾನದಂಡ ಉಲ್ಲಂಘಿಸಿ ಪಿಜಿಗಳನ್ನು ನಡೆಸಲಾಗುತ್ತಿದೆ. ಹೌದು.. ರಾಜಧಾನಿ ಬೆಂಗಳೂರಿನಲ್ಲಿ ಅಧಿಕೃತ ಪಿಜಿಗಳಿಗಿಂತ ಅನಧಿಕೃತ ಪಿಜಿಗಳ ಹಾವಳಿ ಹೆಚ್ಚಾಗಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಪರವಾನಗಿ ಪಡೆಯದೆ ಕಾರ್ಯಾಚರಿಸುತ್ತಿರುವ 165 ಪಿಜಿಗಳು ಪತ್ತೆಯಾಗಿದ್ದವು.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಿರಾತಂಕವಾಗಿ ಕಟ್ಟಡ ಬೈಲಾ, ಮಾರ್ಗಸೂಚಿ, ಪರವಾನಗಿ ನಿಯಮ ಉಲ್ಲಂಘನೆ, ಸುರಕ್ಷತಾ ಮಾನದಂಡಗಳನ್ನು ಅನುಸರಿಸದೇ ರಾಜಾರೋಷವಾಗಿ ಪಿಜಿಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಪಿಜಿಗಳ ಮೇಲೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆರೋಗ್ಯ ಅಧಿಕಾರಿಗಳ ತಂಡ, ದಾಳಿ ನಡೆಸಿ ಬಿಸಿ ಮುಟ್ಟಿಸುವ ಕೆಲಸ ಮಾಡಿತ್ತು.

ಕಳೆದ ವರ್ಷದ ಆಗಸ್ಟ್‌ನಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ – 2020ರ ಕಾಯಿದೆಯಡಿ ಪಿಜಿಗಳಿಗೆ ಮಾರ್ಗಸೂಚಿ ಪ್ರಕಟಿಸಲಾಗಿತ್ತು. ಅಲ್ಲದೆ, ವಲಯ ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿಗಳು ಮತ್ತು ಹಿರಿಯ ಆರೋಗ್ಯ ಪರಿವೀಕ್ಷಕರು ತಮ್ಮ – ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಆದರೂ, ಮಾರ್ಗಸೂಚಿ ಪಾಲನೆ ಮಾಡದ 187 ಪಿಜಿಗಳಿಗೆ ಬೀಗ ಜಡಿದಿದ್ದರು.

ವರದಿ: ಲಕ್ಷ್ಮಿ ನರಸಿಂಹ ಟಿವಿ9 ಬೆಂಗಳೂರು

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜನರೊಂದಿಗಿನ ಎನ್​ಡಿಎ ಬಾಂಧವ್ಯವನ್ನು ಸೂಚಿಸುತ್ತದೆ; ಬಿಎಂಸಿ ಚುನಾವಣೆಯ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ – Kannada News | Thank You Maharashtra PM Modi hails Mahayutis Big Win in Municipal Corporation elections

ನವದೆಹಲಿ, ಜನವರಿ 16: ಮಹಾರಾಷ್ಟ್ರದ (Maharashtra) ಪುರಸಭೆ ಚುನಾವಣೆಯಲ್ಲಿ ಎನ್‌ಡಿಎ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ (PM Modi) ಶ್ಲಾಘಿಸಿದ್ದಾರೆ. ಈ ಫಲಿತಾಂಶಗಳು ಎನ್​ಡಿಎ ಮೈತ್ರಿಕೂಟದ ಜನಪರ ಉತ್ತಮ ಆಡಳಿತಕ್ಕೆ ಹೆಚ್ಚುತ್ತಿರುವ ಸಾರ್ವಜನಿಕ ಬೆಂಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಧನ್ಯವಾದಗಳು ಮಹಾರಾಷ್ಟ್ರ! ರಾಜ್ಯದ ಕ್ರಿಯಾಶೀಲ ಜನರು ಎನ್‌ಡಿಎಯ ಜನಪರ ಉತ್ತಮ ಆಡಳಿತದ ಕಾರ್ಯಸೂಚಿಯನ್ನು ಆಶೀರ್ವದಿಸಿದ್ದಾರೆ” ಎಂದು ಹೇಳಿದ್ದಾರೆ.

ಇನ್ನೊಂದು ಎಕ್ಸ್ ಪೋಸ್ಟ್‌ನಲ್ಲಿ ಪ್ರಧಾನಿ ಮೋದಿ ಜನರ ನಡುವೆ ದಣಿವರಿಯಿಲ್ಲದೆ ಕೆಲಸ ಮಾಡಿದ್ದಕ್ಕಾಗಿ ಎನ್‌ಡಿಎಯ ಕಾರ್ಯಕರ್ತರನ್ನು ಶ್ಲಾಘಿಸಿದ್ದಾರೆ. “ಕಾರ್ಯಕರ್ತರು ಎನ್‌ಡಿಎಯ ದೃಷ್ಟಿಕೋನವನ್ನು ಜನರಿಗೆ ಎತ್ತಿ ತೋರಿಸಿದರು ಮತ್ತು ವಿರೋಧ ಪಕ್ಷದ ಸುಳ್ಳುಗಳನ್ನು ಬಹಿರಂಗಪಡಿಸಿದರು. ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು ಮತ್ತು ಶುಭಾಶಯಗಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಎಂಸಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ; ಭರ್ಜರಿ ಗೆಲುವಿನತ್ತ ಬಿಜೆಪಿ ಮೈತ್ರಿಕೂಟ; ಠಾಕ್ರೆ ಸಹೋದರರಿಗೆ ಹಿನ್ನಡೆ

ಮಹಾಯುತಿ ಮೈತ್ರಿ ಮಹಾರಾಷ್ಟ್ರದ ಪುರಸಭೆ ಚುನಾವಣೆಯಲ್ಲಿ ಭಾರೀ ಜಯ ಸಾಧಿಸಿದೆ. ಬಿಜೆಪಿ 2,869 ವಾರ್ಡ್‌ಗಳಲ್ಲಿ 1,300ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಂತರ ಏಕನಾಥ್ ಶಿಂಧೆ ಅವರ ಶಿವಸೇನೆ 360ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದಿತು. ಕಾಂಗ್ರೆಸ್ ಕೂಡ ಅಚ್ಚರಿ ಮೂಡಿಸಿ 300ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಶಿವಸೇನೆ (ಯುಬಿಟಿ) ಸುಮಾರು 160 ವಾರ್ಡ್‌ಗಳನ್ನು ಗೆದ್ದಿತು ಮತ್ತು ಪ್ರತ್ಯೇಕವಾಗಿ ಸ್ಪರ್ಧಿಸಿದ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 150ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದಿತು. ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಸಹ 90ಕ್ಕೂ ಹೆಚ್ಚು ವಾರ್ಡ್‌ಗಳನ್ನು ಗೆದ್ದಿತು. ಶರದ್ ಪವಾರ್ ಅವರ ಎನ್‌ಸಿಪಿ (ಎಸ್‌ಪಿ) 28 ವಾರ್ಡ್‌ಗಳನ್ನು ಗೆದ್ದಿತು. ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಸಹ ಸುಮಾರು 18 ವಾರ್ಡ್‌ಗಳನ್ನು ಗೆದ್ದಿತು. ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ್ ಆಘಾಡಿ (ವಿಬಿಎ) 14 ವಾರ್ಡ್‌ಗಳನ್ನು ಗೆದ್ದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

BBL: ಸಿಂಗಲ್ ಬೇಡ ವಾಪಸ್ ಹೋಗು; ಬಾಬರ್ ಆಝಂಗೆ ಇದೆಂಥಾ ಅವಮಾನ! ವಿಡಿಯೋ – Kannada News | Babar Azam Humiliated by Steve Smith in BBL: Single Denied Sparks Controversy

ಕೆಲವೇ ಕೆಲವು ದಿನಗಳ ಹಿಂದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ಅವರ ಆಮೆಗತಿಯ ಬ್ಯಾಟಿಂಗ್​ನಿಂದಾಗಿ ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಡಗೌಟ್​ಗೆ ವಾಪಸ್ ಕರೆಸಿಕೊಳ್ಳಲಾಗಿತ್ತು. ಇದು ಪಾಕ್ ನಾಯಕನಿಗೆ ಸಾರ್ವಕನಿಕವಾಗಿ ಸಾಕಷ್ಟು ಮುಜುಗರ ತಂದಿತ್ತು. ಇದೀಗ ಅದೇ ರೀತಿಯ ಅವಮಾನ ಪಾಕಿಸ್ತಾನದ ಮತ್ತೊಬ್ಬ ಮಾಜಿ ನಾಯಕ ಬಾಬರ್ ಆಝಂ ಬ್ಯಾಟಿಂಗ್‌ ವಿಚಾರದಲ್ಲಿ ನಡೆದಿದೆ. ಬ್ಯಾಟಿಂಗ್‌ ವೇಳೆ ಹೆಚ್ಚು ಬಾಲ್​ಗಳನ್ನು ಡಾಟ್ ಮಾಡಿ ಓವರ್​ನ ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ಪ್ರಯತ್ನಿಸಿದ ಬಾಬರ್​ಗೆ ಸಿಂಗಲ್ ತೆಗೆದುಕೊಳ್ಳಲು ನಿರಾಕರಿಸಿ ಸ್ಟೀವ್ ಸ್ಮಿತ್ ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ. ಸ್ವತಃ ಬಾಬರ್ ಅವರೇ ತನಗಾದ ಅವಮಾನದಿಂದ ಮೈದಾನದಲ್ಲೇ ಅಸಮಾಧಾನಗೊಂಡ ಘಟನೆಯೂ ನಡೆದಿದೆ.

2025-26ರ ಬಿಗ್ ಬ್ಯಾಷ್ ಲೀಗ್‌ನ 37ನೇ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ಮತ್ತು ಸಿಡ್ನಿ ಥಂಡರ್ ಮುಖಾಮುಖಿಯಾಗಿದ್ದವು. ಪಂದ್ಯದ ಸಮಯದಲ್ಲಿ, ಸ್ಟೀವ್ ಸ್ಮಿತ್ 11ನೇ ಓವರ್‌ನ ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ನಿರಾಕರಿಸಿದರು. ಇದು ಸ್ಟ್ರೈಕ್​ನಲ್ಲಿದ್ದ ಬ್ಯಾಟ್ಸ್‌ಮನ್ ಬಾಬರ್ ಆಝಂ ಅವರನ್ನು ಕೆರಳಿಸಿತು. ಈ ಘಟನೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಎಲ್ಲರನ್ನೂ ಅಚ್ಚರಿಗೊಳಿಸಿದೆ.

ಸಿಡ್ನಿ ಸಿಕ್ಸರ್ಸ್ ತಂಡದ ಪರ ಸ್ಟೀವ್ ಸ್ಮಿತ್ ಸ್ಫೋಟಕವಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಇತ್ತ ಇದಕ್ಕೆ ತದ್ವಿರುದ್ಧವಾಗಿ ಬಾಬರ್ ಅವರ ಸ್ಟ್ರೈಕ್ ರೇಟ್ ಅವರಿಗಿಂತ ಗಮನಾರ್ಹವಾಗಿ ಕಡಿಮೆಯಾಗಿತ್ತು. ಆ ಓವರ್‌ನಲ್ಲಿ ಬಾಬರ್ ಸತತ ಮೂರು ಡಾಟ್ ಬಾಲ್‌ಗಳನ್ನು ಎದುರಿಸಿ, ಕೊನೆಯ ಎಸೆತದಲ್ಲಿ ಸಿಂಗಲ್ ತೆಗೆದುಕೊಳ್ಳಲು ಯತ್ನಿಸಿದರು. ಆದರೆ ಸ್ಮಿತ್ ರನ್ ತೆಗೆದುಕೊಳ್ಳಲು ನಿರಾಕರಿಸಿದರು. ಇದು ಬಾಬರ್ ಅಸಮಾಧಾನಗೊಳ್ಳುವಂತೆ ಮಾಡಿತು.

ಸ್ಟೀವ್ ಸ್ಮಿತ್ ಅವರ ನಿರ್ಧಾರಕ್ಕೆ ಪವರ್ ಸರ್ಜ್ ನಿಯಮವೇ ಕಾರಣ. ಪವರ್ ಸರ್ಜ್ ಎಂಬುದು ಬಿಬಿಎಲ್‌ನಲ್ಲಿನ ನಿಯಮವಾಗಿದ್ದು, ಆರಂಭಿಕ ನಾಲ್ಕು ಓವರ್‌ಗಳ ಪವರ್‌ಪ್ಲೇ ನಂತರ, ಬ್ಯಾಟಿಂಗ್ ತಂಡವು ಇನ್ನಿಂಗ್ಸ್‌ನ 11 ನೇ ಓವರ್‌ನ ನಂತರ ಯಾವುದೇ ಸಮಯದಲ್ಲಿ ಮತ್ತೊಂದು ಎರಡು ಓವರ್‌ಗಳ ಪವರ್‌ಪ್ಲೇ ಅನ್ನು ಆಯ್ಕೆ ಮಾಡಬಹುದು. ಈ ನಿಯಮದ ಪ್ರಕಾರ ಕೇವಲ ಇಬ್ಬರು ಫೀಲ್ಡರ್‌ಗಳನ್ನು 30-ಗಜ ವೃತ್ತದ ಹೊರಗೆ ಇರಿಸಲಾಗುತ್ತದೆ. ಹೀಗಾಗಿ ಇದರ ಲಾಭ ಪಡೆಯಲು ಸ್ಟೀವ್ ಸ್ಮಿತ್ ಬಯಸಿದ್ದರು. ಅದರಂತೆ ಇನ್ನಿಂಗ್ಸ್‌ನ 12 ನೇ ಓವರ್‌ನಲ್ಲಿ ಸ್ಮಿತ್ 30 ರನ್ ಗಳಿಸಿದರು. ಆದರೆ ಸ್ಮಿತ್ ಮಾಡಿದ್ದು ಮಾತ್ರ ಬಾಬರ್ ಅವರನ್ನು ಕೋಪಗೊಳಿಸಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಒತ್ತಡದಿಂದ ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಯಾಗುತ್ತೆ ಗೊತ್ತಾ? ತಿಳಿದ್ರೆ ಶಾಕ್ ಆಗ್ತೀರಾ! – Kannada News | Stress: The Silent Health Threat

ಒತ್ತಡ (Stress) ಇಲ್ಲದ ವ್ಯಕ್ತಿ ಇರಲು ಸಾಧ್ಯವೇ… ಎಂಬ ಪ್ರಶ್ನೆಗೆ ಸಹಜವಾಗಿ ಇಲ್ಲ ಎಂಬ ಉತ್ತರವೇ ಬರುತ್ತೆ. ಹಣಕಾಸಿನ ತೊಂದರೆ, ಕಚೇರಿ ಕೆಲಸ, ಕುಟುಂಬದ ಜವಾಬ್ದಾರಿ ಹೀಗೆ ನಾನಾ ರೀತಿಯ ಕಾರಣಗಳು ವ್ಯಕ್ತಿಯನ್ನು ಒಳಗಿನಿಂದ ಹಿಂಡಿ ಹಿಪ್ಪೆ ಮಾಡಿಬಿಡಬಹುದು, ಆದರೆ ನಿಮಗೆ ಗೊತ್ತಾ… ನಿಮಗೆ ತಿಳಿದೋ ತಿಳಿಯದೆಯೋ ಅನುಭವಿಸುವ ಒತ್ತಡ ಅಕಾಲಿಕ ವಯಸ್ಸಾಗುವಿಕೆಗೆ ಕಾರಣವಾಗುತ್ತದೆ. ಹೌದು, ಅತಿಯಾಗಿ ಯೋಚಿಸುವುದರಿಂದ ಕೂದಲು ಉದುರುವಿಕೆಯಿಂದ ಹಿಡಿದು ಹೃದಯ ಸಂಬಂಧಿ ಕಾಯಿಲೆಗಳವರೆಗೆ ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಷ್ಟೇ ಅಲ್ಲ, ಒತ್ತಡಕ್ಕೆ ನಿರಂತರವಾಗಿ ಒಡ್ಡಿಕೊಳ್ಳುವುದರಿಂದ ನಮ್ಮ ದೇಹದಲ್ಲಿ ‘ಕಾರ್ಟಿಸೋಲ್’ ನಂತಹ ಹಾರ್ಮೋನುಗಳು ಬಿಡುಗಡೆಯಾಗುತ್ತವೆ. ಇವು ವಿಷಕ್ಕಿಂತಲೂ ಅಪಾಯಕಾರಿಯಾಗಿದ್ದು ಹೃದಯ, ಮೆದುಳು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಹಾನಿಗೊಳಿಸುತ್ತವೆ. ಈ ರೀತಿ ಆರೋಗ್ಯಕ್ಕೆ ಹಾನಿ ಮಾಡಬಹುದಾದ ಒತ್ತಡದಿಂದ ದೇಹದಲ್ಲಿ ಏನೆಲ್ಲಾ ಆಗುತ್ತದೆ, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹಾರ್ಮೋನುಗಳ ಅಸಮತೋಲನ: ಒತ್ತಡ ಹೆಚ್ಚಾದಾಗ, ಕಾರ್ಟಿಸೋಲ್ ಮತ್ತು ಅಡ್ರಿನಾಲಿನ್ ಹಾರ್ಮೋನುಗಳು ಅತಿಯಾಗಿ ಬಿಡುಗಡೆಯಾಗುತ್ತವೆ. ಇದು ರಕ್ತದೊತ್ತಡವನ್ನು (ಬಿಪಿ) ಹೆಚ್ಚಿಸುತ್ತದೆ ಮತ್ತು ಹೃದಯದ ಮೇಲೆ ಒತ್ತಡವನ್ನುಂಟು ಮಾಡುತ್ತದೆ.

ಜೀರ್ಣಕಾರಿ ಸಮಸ್ಯೆಗಳು: ಉದ್ವೇಗವು ಆಮ್ಲೀಯತೆ, ಮಲಬದ್ಧತೆಗೆ ಕಾರಣವಾಗಬಹುದು ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ನಿಧಾನಗೊಳಿಸುತ್ತದೆ. ಕೆಲವರಲ್ಲಿ ಹಸಿವು ಕಡಿಮೆಯಾಗುತ್ತದೆ, ಇನ್ನು ಕೆಲವರು ಅತಿಯಾಗಿ ತಿಂದು ಬೊಜ್ಜನ್ನು ಹೆಚ್ಚಿಸಿಕೊಳ್ಳುತ್ತಾರೆ.

ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ: ನಿರಂತರ ಒತ್ತಡ ದೇಹದ ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಶೀತ, ಜ್ವರ ಮತ್ತು ಸೋಂಕುಗಳು ಆಗಾಗ ಕಂಡುಬರುತ್ತದೆ.

ಪುರುಷರು ಮತ್ತು ಮಹಿಳೆಯರ ಸಮಸ್ಯೆಗಳು: ಮಹಿಳೆಯರು ಮುಟ್ಟಿನ ಸಮಸ್ಯೆ ಮತ್ತು ಪುರುಷರಲ್ಲಿ ಹಾರ್ಮೋನುಗಳ ಅಸಮತೋಲನವಾಗಬಹುದು. ಇದು ಬಂಜೆತನಕ್ಕೂ ಕಾರಣವಾಗಬಹುದು.

ಮೆದುಳಿನ ಮೇಲೆ ಪರಿಣಾಮ: ಸ್ಮರಣಶಕ್ತಿ ನಷ್ಟ, ಏಕಾಗ್ರತೆಯ ಕೊರತೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥತೆ ಉಂಟಾಗಬಹುದು.

ಇದನ್ನೂ ಓದಿ: ರಾತ್ರಿ ಮಲಗುವ ಮುನ್ನ ಈ 5 ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ ಒತ್ತಡದಿಂದ ಮುಕ್ತರಾಗಿ

ಒತ್ತಡವನ್ನು ತಡೆಗಟ್ಟಲು ಸಲಹೆಗಳು?

  • ಪ್ರತಿದಿನ ಕನಿಷ್ಠ 30 ನಿಮಿಷ ವ್ಯಾಯಾಮ ಅಥವಾ ಯೋಗ ಮಾಡಿ.
  • ಪ್ರತಿದಿನ 7- 8 ಗಂಟೆ ಚೆನ್ನಾಗಿ ನಿದ್ರೆ ಮಾಡಿ.
  • ಸಕಾರಾತ್ಮಕ ಮನಸ್ಥಿತಿಯನ್ನು ಅಳವಡಿಸಿಕೊಳ್ಳಿ. ಅಗತ್ಯವಿದ್ದರೆ, ಚಿಕಿತ್ಸಕರಿಂದ ಸಲಹೆ ಪಡೆಯಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್​ಗೆ ಚುನಾವಣೆಯಲ್ಲಿ ಗೆಲುವು – Kannada News | Jalna Civic Election Shock: Gauri Lankesh Murder Case Accused Shrikant Secures Independent Victory

ಮುಂಬೈ, ಜನವರಿ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು.

ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಯಿತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 13 ರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಶ್ರೀಕಾಂತ್ ಪಂಗಾರ್ಕರ್ ಅವರು ನೃತ್ಯ ಮಾಡುತ್ತಾ ಮತ್ತು ಡ್ರಮ್ಸ್ ಬಾರಿಸುತ್ತಾ ಹೂವುಗಳನ್ನು ಎಸೆಯುವ ಮೂಲಕ ಸಂಭ್ರಮಿಸಿದ್ದು ಪಿಟಿಐ ಈ ವಿಡಿಯೋ ಹಂಚಿಕೊಂಡಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ವಾರ್ಡ್‌ನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಜನವರಿ 15 ರಂದು ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳು ನಡೆದಿದ್ದವು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗಿಲ್ಲಿ ನಟನ ಹುಟ್ಟೂರಲ್ಲಿ ಬ್ಯಾನರ್, ಕಟೌಟ್: ಹಳ್ಳಿ ಮಂದಿ ಖುಷಿ ನೋಡಿ.. – Kannada News | Gilli Nata native Dadadapura Celebrates ahead of Bigg Boss Kannada Season 12 Finale

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (Bigg Boss Kannada Season 12 Finale) ತಲುಪಿರುವ ಗಿಲ್ಲಿ ಪರವಾಗಿ ರಾಜ್ಯಾದ್ಯಂತ ಅಭಿಮಾನಿಗಳು ಪ್ರಚಾರ ಮಾಡುತ್ತಿದ್ದಾರೆ. ಗಿಲ್ಲಿ ಅವರ ಹುಟ್ಟೂರಿನಲ್ಲಿ ಜನರು ದೊಡ್ಡ ದೊಡ್ಡ ಬ್ಯಾನರ್, ಕಟೌಟ್ ಹಾಕಿ ಸಂಭ್ರಮಿಸುತ್ತಿದ್ದಾರೆ. ಹೌದು, ಗಿಲ್ಲಿ ಅವರ ಊರು ದಡದಪುರದಲ್ಲಿ (Dadadapura) ಗ್ರಾಮಸ್ಥರ ಸಂಭ್ರಮ ಜೋರಾಗಿದೆ. ‘ವೋಟ್ ಫಾರ್ ಗಿಲ್ಲಿ’ ಎಂದು ಘೋಷಣೆ ಕೂಗಲಾಗುತ್ತಿದೆ. ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ಎಲ್ಲರನ್ನು ಮನರಂಜಿಸಿದ್ದಾರೆ. ಅವರೇ ಈ ಬಾರಿ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಜನರಿಗೆ ಇದೆ. ರಕ್ಷಿತಾ ಶೆಟ್ಟಿ, ಕಾವ್ಯಾ ಶೈವ, ಅಶ್ವಿನಿ ಗೌಡ, ಧ್ರುವಂತ್, ಮ್ಯೂಟೆಂಟ್ ರಘು ಕೂಡ ಬಿಗ್ ಬಾಸ್ ಫಿನಾಲೆ ಕಣದಲ್ಲಿ ಇದ್ದಾರೆ. ಜನವರಿ 18ರಂದು ಬಿಗ್ ಬಾಸ್ ಬಾಸ್ ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶುಂಠಿ, ಈರುಳ್ಳಿ, ಬೆಳ್ಳುಳ್ಳಿಯನ್ನು ಫ್ರಿಡ್ಜ್‌ನಲ್ಲಿ ಇಡುವುದು ಸೂಕ್ತವೇ? – Kannada News | Is it right or wrong to store ginger, onions, and garlic in the refrigerator

ಬೆಳ್ಳುಳ್ಳಿ, ಶುಂಠಿ ಮತ್ತು ಈರುಳ್ಳಿ ದೈನಂದಿನ ಅಡುಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬರೂ ಸಹ ಈ ಮೂರು ವಸ್ತುಗಳನ್ನು ಅಡುಗೆಯಲ್ಲಿ ಬಳಸುತ್ತಾರೆ. ಹಾಗಾಗಿ ಒಮ್ಮೆಲೇ ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಮಾರುಕಟ್ಟೆಯಿಂದ ತಂದು ಅನೇಕರು ಫ್ರಿಡ್ಜ್‌ನಲ್ಲಿ (refrigerator) ಸ್ಟೋರ್‌ ಮಾಡಿ ಇಡುತ್ತಾರೆ. ಇತರೆ ತರಕಾರಿಯಂತೆ ಶುಂಠಿ, ಬೆಳ್ಳುಳ್ಳಿ ಮತ್ತು  ಈರುಳ್ಳಿಯನ್ನು ರೆಫ್ರಿಜರೇಟರ್‌ನಲ್ಲಿ ಇಡಬಾರದಂತೆ ಜೊತೆಗೆ ಇವುಗಳನ್ನು ಫ್ರಿಡ್ಜ್‌ನಲ್ಲಿ ಇಡುವ ಯಾವುದೇ ಅವಶ್ಯಕತೆಯೂ ಇಲ್ಲ ಏಕೆಂದರೆ ಇವು ಮೂರು ಒಣ ಪದಾರ್ಥಗಳಾಗಿದ್ದು, ಅವು ಬಹಳ ಕಡಿಮೆ ನೀರನ್ನು ಹೊಂದಿರುತ್ತವೆ ಹಾಗಾಗಿ ಅವು ಬಹು ಬೇಗನೆ ಹಾಳಾಗುವುದಿಲ್ಲ.  ಹಾಗಾದ್ರೆ ಇವುಗಳನ್ನು ಫ್ರಿಡ್ಜ್‌ನಲ್ಲಿ ಇಟ್ಟರೆ ಏನಾಗುತ್ತದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಿ.

ಈರುಳ್ಳಿ, ಬೆಳ್ಳುಳ್ಳಿ, ಶುಂಠಿಯನ್ನು ಫ್ರಿಡ್ಜ್‌ನಲ್ಲಿ ಇಡುವುದು ಸೂಕ್ತವೇ?

ಬೆಳ್ಳುಳ್ಳಿ, ಶುಂಠಿ ಮತ್ತು ಈರುಳ್ಳಿಗಳನ್ನು ರೆಫ್ರಿಜರೇಟರ್‌ನಲ್ಲಿ ಇರಿಸಿದಾಗ, ಫ್ರಿಡ್ಜ್‌ನ ತಂಪಾದ ಮತ್ತು ಆರ್ದ್ರ ಗಾಳಿಯು ಈ ಪದಾರ್ಥದೊಳಗೆ ತೇವಾಂಶವನ್ನು ಸೆಳೆಯುತ್ತದೆ. ಈ ವಸ್ತುಗಳು ತೇವಾಂಶಕ್ಕೆ ಒಡ್ಡಿಕೊಂಡಾಗ ಹೈಡ್ರೇಟ್ ಆಗಲು ಪ್ರಾರಂಭಿಸುತ್ತವೆ, ಇದು ಅವುಗಳ ಕೊಳೆಯುವಿಕೆಯನ್ನು ವೇಗಗೊಳಿಸುತ್ತದೆ. ಇದರ ಜೊತೆಗೆ, ರೆಫ್ರಿಜರೇಟರ್‌ನಲ್ಲಿರುವ ಆರ್ದ್ರ ಗಾಳಿಯು ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳಿಗೆ ಸಂತಾನೋತ್ಪತ್ತಿ ಮಾಡಲು ಉತ್ತಮ ಜಗವಾಗಿದೆ. ಅದಕ್ಕಾಗಿಯೇ ಕೆಲವೊಮ್ಮೆ ರೆಫ್ರಿಜರೇಟರ್‌ನಲ್ಲಿ ಇರಿಸಲಾದ ಬೆಳ್ಳುಳ್ಳಿ, ಶುಂಠಿ ಮತ್ತು ಈರುಳ್ಳಿ ಬೇಗನೇ  ಹಾಳಾಗುತ್ತವೆ. ಬ್ಯಾಕ್ಟೀರಿಯಾ ಅಂಟಿಕೊಂಡ ಪದಾರ್ಥಗಳನ್ನು ತಿನ್ನುವುದು ಆರೋಗ್ಯದ ದೃಷ್ಟಿಯಿಂದಲೂ ಸೂಕ್ತವಲ್ಲ.

ಇದನ್ನೂ ಓದಿ: ಮನೆಯಲ್ಲಿ ಹಲ್ಲಿಗಳಿದ್ದರೆ ತುಂಬಾ ಒಳ್ಳೆಯದಂತೆ; ಯಾಕೆ ಗೊತ್ತಾ ?

ಬೆಳ್ಳುಳ್ಳಿ, ಶುಂಠಿ ಮತ್ತು ಈರುಳ್ಳಿಯನ್ನು ಎಲ್ಲಿ ಮತ್ತು ಹೇಗೆ ಸಂಗ್ರಹಿಸಬೇಕು?

ಈ ವಸ್ತುಗಳನ್ನು ತೆರೆದ, ಒಣ ಮತ್ತು ಚೆನ್ನಾಗಿ ಗಾಳಿ ಇರುವ ಸ್ಥಳದಲ್ಲಿ ಸಂಗ್ರಹಿಸುವುದು ಉತ್ತಮ. ಅವುಗಳನ್ನು ಬುಟ್ಟಿ ಅಥವಾ ಜಾಲರಿಯ ಪೆಟ್ಟಿಗೆಯಲ್ಲಿ ಇಡುವುದರಿಂದ, ಅವುಗಳಲ್ಲಿ ತೇವಾಂಶ ಸಂಗ್ರಹವಾಗುವುದಿಲ್ಲ ಮತ್ತು ಅವು ದೀರ್ಘಕಾಲ ಸುರಕ್ಷಿತವಾಗಿ ಉಳಿಯುತ್ತವೆ. ಹಾಗೆ ಮಾಡುವುದರಿಂದ, ಅವುಗಳ ಹಾಳಾಗುವ ಸಾಧ್ಯತೆ ಕಡಿಮೆಯಾಗುತ್ತದೆ ಜೊತೆಗೆ ರುಚಿ ಮತ್ತು ಗುಣಮಟ್ಟ ಕೂಡ ಹಾಳಾಗುವುದಿಲ್ಲ.

ಈ ಪದಾರ್ಥಗಳನ್ನು ರೆಫ್ರಿಜರೇಟರ್‌ನಲ್ಲಿ ಇಡುವುದರಿಂದ ಯಾವುದೇ ವಿಷಕಾರಿ ರಾಸಾಯನಿಕಗಳು ಉತ್ಪತ್ತಿಯಾಗುವುದಿಲ್ಲ, ಆದರೆ ತಪ್ಪಾಗಿ ಸಂಗ್ರಹಿಸುವುದರಿಂದ ಅವು ಬೇಗನೆ ಹಾಳಾಗುವ ಅಪಾಯ ಹೆಚ್ಚು. ಆದ್ದರಿಂದ ಈರುಳ್ಳಿ, ಬೆಳ್ಳುಳ್ಳಿ ಮತ್ತು ಶುಂಠಿಯನ್ನು ಕೋಣೆಯ ಉಷ್ಣಾಂಶದಲ್ಲಿ ಸಂಗ್ರಹಿಸಿಡುವುದು ಸೂಕ್ತ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ! – Kannada News | Chanakya Niti: These habits can ruin your entire life, be careful

ನಮ್ಮ ಅಭ್ಯಾಸಗಳಿಂದಲೂ (habits) ನಮ್ಮ ಒಳಿತು ಕೆಡುಕು ನಿರ್ಧಾರವಾಗುತ್ತದೆ. ಅದಕ್ಕಾಗಿಯೇ ಒಳ್ಳೆಯ ಅಭ್ಯಾಸಗಳನ್ನು, ಸದ್ಗುಣಗಳನ್ನು ಬೆಳೆಸಬೇಕು ಎಂದು ಹಿರಿಯರು ಆಗಾಗ್ಗೆ ಹೇಳುವುದು. ಅದರಲ್ಲೂ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನವೇ ಸರ್ವನಾಶವಾಗುವ ಸಾಧ್ಯತೆ ಇದೆ, ಅಂತಹ ಅಭ್ಯಾಸಗಳನ್ನು ಕೂಡಲೇ ತ್ಯಜಿಸಬೇಕು. ಯುವ ಜನರಂತೂ ಆ ಅಭ್ಯಾಸಗಳನ್ನು ತ್ಯಜಿಸದಿದ್ದರೆ ಖಂಡಿತವಾಗಿಯೂ ಜೀವನದಲ್ಲಿ  ಮುಂದೆ ಬರಲು ಸಾಧ್ಯವಿಲ್ಲ  ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಜೀವನವನ್ನು ಹಾಳು ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.

ಈ ಅಭ್ಯಾಸಗಳು ನಿಮ್ಮ ಜೀವನವನ್ನೇ ಹಾಳು ಮಾಡುತ್ತದೆ

ಮಾದಕ ವಸ್ತುಗಳು: ಮಾದಕ ವಸ್ತುಗಳ ಸೇವನೆಯಿಂದ ಜೀವನವೇ ನಾಶವಾಗಬಹುದು. ಅದರಲ್ಲೂ ಈ ಅಭ್ಯಾಸ
ಯುವಜನರಿಗೆ ಶಾಪವಾಗಿದೆ. ಇದು ಅವರನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ದುರ್ಬಲಗೊಳಿಸುವುದಲ್ಲದೆ, ಅವರ ಸಮಯವನ್ನು ವ್ಯರ್ಥ ಮಾಡುತ್ತದೆ. ಮಾದಕ ವಸ್ತುಗಳ ವ್ಯಸನವು ಯುವ ಜನರನ್ನು ಕೆಟ್ಟ ಸಹವಾಸಕ್ಕೆ ಮತ್ತಷ್ಟು ಕರೆದೊಯ್ಯುತ್ತದೆ ಮತ್ತು ಅವರು ಎಂದಿಗೂ ಜೀವನದಲ್ಲಿ ಮುಂದೆ ಬರಲು ಸಾಧ್ಯವೇ ಇಲ್ಲ ಎಂದಿದ್ದಾರೆ ಚಾಣಕ್ಯ. ಆದ್ದರಿಂದ ಈ ಅಭ್ಯಾಸವನ್ನು ತ್ಯಜಿಸಿದರೆ ಉತ್ತಮ.

ಸೋಮಾರಿತನ:  ಸೋಮಾರಿತನ ಯುವ ಜನರ ಅತೀ ದೊಡ್ಡ ಶತ್ರು ಎಂದಿದ್ದಾರೆ ಚಾಣಕ್ಯ. ಒಬ್ಬ ಯುವಕ ಯಶಸ್ವಿಯಾಗಲು ಬಯಸಿದರೆ, ಆತ ಸೋಮಾರಿತನ ಎಂಬ ಈ ಶತ್ರುವನ್ನು ತೊಡೆದುಹಾಕಬೇಕು. ಇಲ್ಲದಿದ್ದರೆ, ಆತ ಎಂದಿಗೂ ಯಶಸ್ಸನ್ನು ಪಡೆಯಲು ಸಾಧ್ಯವೇ ಇಲ್ಲ.

ಇದನ್ನೂ ಓದಿ: ಪುರುಷರು ವಿಷಯಗಳನ್ನು ಯಾರ ಬಳಿಯೂ ಶೇರ್‌ ಮಾಡಲೇಬಾರದು

ಕೆಟ್ಟವರ ಸಹವಾಸ: ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಯಾವಾಗಲೂ ಕೆಟ್ಟ ಸಹವಾಸದಿಂದ ದೂರವಿರಬೇಕು. ಏಕೆಂದರೆ ಆತನೂ ದಾರಿ ತಪ್ಪುವ ಸಾಧ್ಯತೆ ಇರುತ್ತದೆ, ಕೆಟ್ಟವರ ಸಹವಾಸದಿಂದ ಹಣ ಮಾತ್ರವಲ್ಲ ಗೌರವವನ್ನೂ ಕಳೆದುಕೊಳ್ಳಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ.

ಹಣ ಖರ್ಚು ಮಾಡುವುದು: ಅತಿಯಾದ ಹಣ ಖರ್ಚು ಮಾಡುವುದು ಕೂಡ ಒಳ್ಳೆಯ ಅಭ್ಯಾಸವಲ್ಲ, ಇದು ಒಬ್ಬ ವ್ಯಕ್ತಿಯನ್ನು ಬಡತನಕ್ಕೆ ನೂಕುತ್ತದೆ. ಶ್ರೀಮಂತಿಕೆಯನ್ನು ಗಳಿಸಬೇಕು ಎಂಬ ಆಸೆಯಿರುವವರು ಯೋಚಿಸಿ ಖರ್ಚು ಮಾಡಬೇಕು, ಅದರಲ್ಲೂ ಯುವಕರು ಈ ವಿಚಾರದಲ್ಲಿ ತುಂಬಾನೇ ಜಾಗರೂಕರಾಗಿರಬೇಕು ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

4 ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನೇ ಕೊಂದ ಅಣ್ಣ, ಕಾರಣವೇನು? – Kannada News | Groom Murder: Man Kills His Brother For property Dispute at mandya

ಮಂಡ್ಯ, (ಜನವರಿ 16):  ಇದೇ ಜನವರಿ 21ರಂದು ಮದುವೆ (marriage) ಫಿಕ್ಸ್ ಆಗಿತ್ತು. ಹೀಗಾಗಿ ಮದುವೆ ಎಲ್ಲಾ ರೀತಿಯ  ಸಿದ್ಧತೆಗಳು ನಡೆದಿದ್ದವು. ಲಗ್ನ ಪತ್ರಿಕೆ ಸಹ ಸಂಬಂಧಿಕರಿಗೆ ಹಂಚಿ ಮದುವೆಗೆ ಬರಬೇಕೆಂದು ಆಹ್ವಾನ ನೀಡಲಾಗಿತ್ತು. ಆದ್ರೆ, ಮದುವೆಗೆ ಇನ್ನೇನು ನಾಲ್ಕು ದಿನ ಇರುವಾಗಲೇ ಯುವಕ ಮಸಣ ಸೇರಿದ್ದಾನೆ. ಹೌದು.. ಅಣ್ಣನೇ (Brother) ತನ್ನ ಮಕ್ಕಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದಿರುವ ಘಟನೆ ಘಟನೆ ಮಂಡ್ಯದ (Mandya) ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ಯುವಕ. ಸಹೋದರ ಲಿಂಗರಾಜು ಹಾಗೂ ಈತನ ಮಕ್ಕಳಾದ ಭರತ್, ದರ್ಶನ್‍ ಈ ಕೊಲೆ ಮಾಡಿದ್ದು, ಇದೀಗ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: ಮದುವೆ ಸಂಭ್ರಮದಲ್ಲಿದ್ದ ತಮ್ಮನಿಗೆ ಚಟ್ಟ ಕಟ್ಟಿದ ಅಣ್ಣ: ಹಸೆಮಣೆ ಏರಬೇಕಿದ್ದವ ಸೇರಿದ್ದು ಸ್ಮಶಾನಕ್ಕೆ

ಹಲವು ವರ್ಷಗಳಿಂದ ಲಿಂಗರಾಜು ಹಾಗೂ ಕೊಲೆಯಾದ‌ ಯೋಗೇಶ್ ನಡುವೆ ಆಸ್ತಿ ಕಲಹವಿತ್ತು. ಆಸ್ತಿ ವಿಷಯಕ್ಕೆ ಆಗಾಗ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು. ಅದೇ ಕಾರಣಕ್ಕೆ ಯೋಗೇಶ್ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇದೇ ಜನವರಿ 21 ರಂದು ಯೋಗೇಶ್ ಮದುವೆ ನಿಗದಿಯಾಗಿತ್ತು. ಮದುವೆ ಆಹ್ವಾನ ಪತ್ರದಲ್ಲಿ ಅಣ್ಣನ ಹೆಸರನ್ನೂ ಹಾಕಿ ಊರಿಗೆಲ್ಲ ಹಂಚಿದ್ದ. ದುರಾದೃಷ್ಟವಶಾತ್‌ ಅದೇ ಅಣ್ಣನಿಂದ ಯೋಗೇಶ್ ಬರ್ಬರವಾಗಿ ಹತ್ಯೆಯಾಗಿದ್ದು, ನಗು ನಗುತ್ತ ಹೊಸ ಜೀವನ ಆರಂಭಿಸಬೇಕಿದ್ದ ಯೋಗೇಶ್ ಮಸಣ ಸೇರುವಂತಾಗಿದೆ. ಇದರಿಂದ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಲ್ಲೆಲ್ಲೂ ಗಿಲ್ಲಿ, ಎಲ್ಲೆಲ್ಲೂ ಗಿಲ್ಲಿ: ಅಭಿಮಾನಿಗಳ ಪ್ರೀತಿಯ ಅಭಿಯಾನ ನೋಡಿ – Kannada News | Bigg Boss Kannada 12: Gilli fans vote campaign in Davangere

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಫಿನಾಲೆಗೆ ಇನ್ನು ಎರಡು ದಿನಗಳಷ್ಟೆ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೆವರೇಟ್ ಆಗಿದ್ದಾರೆ. ಅಶ್ವಿನಿ, ಧನುಶ್ ಅವರಿಂದ ಪ್ರತಿಸ್ಪರ್ಧೆಯೂ ಇದೆ. ವೋಟಿಂಗ್ ಲೈನ್ ಈಗಾಗಲೇ ಆರಂಭ ಆಗಿದ್ದು ಭಾನುವಾರ 10 ಗಂಟೆ ವರೆಗೂ ಇಷ್ಟದ ಸ್ಪರ್ಧಿಗಳ ಪರವಾಗಿ ಮತಗಳನ್ನು ಚಲಾಯಿಸಬಹುದಾಗಿದೆ. ಗಿಲ್ಲಿಯ ಅಭಿಮಾನಿಗಳು ಪ್ರೀತಿಯಿಂದ ಗಿಲ್ಲಿ ಪರವಾಗಿ ಮತ ಅಭಿಯಾನ ಆರಂಭಿಸಿದ್ದಾರೆ. ದಾವಣಗೆರೆಯಲ್ಲಿ ಗಿಲ್ಲಿ ಅಭಿಮಾನಿಗಳು ಪೆಂಡಾಲ್-ಮೈಕ್ ಹಾಕಿಸಿ ಗಿಲ್ಲಿ ಪರವಾಗಿ ಮತ ಯಾಚನೆ ಮಾಡಿದ್ದಾರೆ. ರಸ್ತೆಯಲ್ಲಿ ಹೋಗುವವರ ಬಳಿಯೆಲ್ಲ ಮೊಬೈಲ್ ಪಡೆದುಕೊಂಡು ಅವರಿಂದ ಮತ ಚಲಾವಣೆ ಮಾಡಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version