ಕರ್ನಾಟಕ ಹವಾಮಾನ ವರದಿ: ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಸಾಧಾರಣ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರು, ಮಾರ್ಚ್ 22: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು (Weather Forecast) ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್ವರೆಗೆ ಒಟ್ಟೂ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ…