IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್​ಗಳು ಐಪಿಎಲ್​ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್​ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ..

10 ತಂಡಗಳಲ್ಲಿರುವ ಗೇಮ್ ಫಿನಿಷರ್ಸ್

  • ಮುಂಬೈ ಇಂಡಿಯನ್ಸ್ ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಈ ತಂಡ ಮೂವರು ಗೇಮ್ ಫಿನಿಷರ್‌ಗಳನ್ನು ಹೊಂದಿದೆ. ಅವರಲ್ಲಿ ಹಾರ್ದಿಕ್ ಪಾಂಡ್ಯ, ನಮನ್ ಧೀರ್ ಮತ್ತು ವಿಲ್ ಜ್ಯಾಕ್ಸ್ ಸೇರಿದ್ದಾರೆ.
  • ಮುಂಬೈ ಇಂಡಿಯನ್ಸ್​ನಂತೆಯೇ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್​ನಲ್ಲೂ ಎಂಎಸ್ ಧೋನಿ, ಶಿವಂ ದುಬೆ, ಕಾರ್ತಿಕ್ ಶರ್ಮಾ ಮತ್ತು ಡೆವಾಲ್ಡ್ ಬ್ರೆವಿಸ್ ಎಂಬ ನಾಲ್ಕು ಬಲಿಷ್ಠ ಫಿನಿಷರ್‌ಗಳಿದ್ದಾರೆ.
  • ಐಪಿಎಲ್‌ನ ಹಾಲಿ ಚಾಂಪಿಯನ್ ಆಗಿರುವ ಆರ್‌ಸಿಬಿ ತಂಡದಲ್ಲೂ ಅಪಾಯಕಾರಿ ಗೇಮ್ ಫಿನಿಷರ್​ಗಳಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿ ತಂಡ ಚಾಂಪಿಯನ್ ಆಗುವಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಅದರಂತೆ ಈ ಆವೃತ್ತಿಯಲ್ಲೂ ಆರ್​ಸಿಬಿ ತಂಡದಲ್ಲಿ ಟಿಮ್ ಡೇವಿಡ್, ಜಿತೇಶ್ ಶರ್ಮಾ ಮತ್ತು ರೊಮಾರಿಯೊ ಶೆಫರ್ಡ್‌ರಂತಹ ಮೂವರು ಗೇಮ್ ಫಿನಿಶರ್‌ಗಳಿದ್ದಾರೆ.
  • ಡೆಲ್ಲಿ ಕ್ಯಾಪಿಟಲ್ಸ್ ತಂಡ ಇನ್ನೂ ಐಪಿಎಲ್ ಟ್ರೋಫಿ ಎತ್ತಿಹಿಡಿದಿಲ್ಲದಿರಬಹುದು, ಆದರೆ ಈ ತಂಡದಲ್ಲೂ ಮೂವರು ಅತ್ಯುತ್ತಮ ಫಿನಿಷರ್‌ಗಳಿದ್ದಾರೆ. ಡೇವಿಡ್ ಮಿಲ್ಲರ್, ಸಮೀರ್ ರಿಜ್ವಿ ಮತ್ತು ಅಶುತೋಷ್ ಶರ್ಮಾ ಅವರಂತಹ ಮ್ಯಾಚ್-ಫಿನಿಶಿಂಗ್ ಪವರ್‌ಹೌಸ್‌ಗಳು ಅವರಲ್ಲಿವೆ.
  • ಸನ್‌ರೈಸರ್ಸ್ ಹೈದರಾಬಾದ್ ತಂಡ 2026 ರ ಐಪಿಎಲ್​ಗಾಗಿ ಲಿಯಾಮ್ ಲಿವಿಂಗ್‌ಸ್ಟೋನ್ ಎಂಬ ಹೊಸ ಫಿನಿಷರ್ ಅನ್ನು ತಂಡಕ್ಕೆ ಸೇರಿಸಿಕೊಂಡಿದೆ. ತಂಡದಲ್ಲಿ ಈಗಾಗಲೇ ಹೆನ್ರಿಚ್ ಕ್ಲಾಸೆನ್ ಮತ್ತು ಅನಿಕೇತ್ ವರ್ಮಾ ಎಂಬ ಇಬ್ಬರು ಮ್ಯಾಚ್-ಫಿನಿಷರ್‌ಗಳಿದ್ದಾರೆ.
  • ಗುಜರಾತ್ ಟೈಟಾನ್ಸ್ ತಂಡ ಕೂಡ ಮೂವರು ಬಲಿಷ್ಠ ಫಿನಿಶರ್‌ಗಳನ್ನು ಹೊಂದಿದ್ದು, ಇದರಲ್ಲಿ ಜೇಸನ್ ಹೋಲ್ಡರ್, ರಾಹುಲ್ ತೇವಾಟಿಯಾ ಮತ್ತು ಗ್ಲೆನ್ ಫಿಲಿಪ್ಸ್ ಅವರ ಹೆಸರುಗಳು ಸೇರಿವೆ.
  • ಐಪಿಎಲ್ 2026 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ನಿಕೋಲಸ್ ಪೂರನ್, ಆಯುಷ್ ಬಡೋನಿ ಮತ್ತು ಅಬ್ದುಲ್ ಸಮದ್ ಪಂದ್ಯಗಳನ್ನು ಮುಗಿಸುವ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
  • ರಾಜಸ್ಥಾನ್ ರಾಯಲ್ಸ್ ತಂಡದಲ್ಲಿಯೂ ಮ್ಯಾಚ್ ಫಿನಿಷರ್‌ಗಳ ಕೊರತೆಯಿಲ್ಲ. ತಂಡವು ವೈಭವ್ ಸೂರ್ಯವಂಶಿಯಂತಹ ಸ್ಫೋಟಕ ಆರಂಭಿಕನನ್ನು ಹೊಂದಿದ್ದರೆ, ಫಿನಿಷರ್‌ಗಳಲ್ಲಿ ಶಿಮ್ರಾನ್ ಹೆಟ್ಮೆಯರ್, ಶುಭಂ ದುಬೆ ಮತ್ತು ಡೊನೊವನ್ ಫೆರೇರಾ ಸೇರಿದ್ದಾರೆ.
  • ಐಪಿಎಲ್ 2026 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಮ್ಯಾಚ್-ಫಿನಿಷರ್ ಆಂಡ್ರೆ ರಸೆಲ್ ಅವರ ಸೇವೆಯನ್ನು ಹೊಂದಿರುವುದಿಲ್ಲ. ಆದಾಗ್ಯೂ, ತಂಡವು ಇನ್ನೂ ರಿಂಕು ಸಿಂಗ್, ರಮಣದೀಪ್ ಸಿಂಗ್ ಮತ್ತು ಪೊವೆಲ್ ಅವರಂತಹ ಆಟಗಾರರನ್ನು ಹೊಂದಿದೆ.
  • ಪಂಜಾಬ್ ಕಿಂಗ್ಸ್ ತಂಡವು ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್ ಮತ್ತು ಮಾರ್ಕೊ ಯಾನ್ಸೆನ್ ಸೇರಿದಂತೆ 3 ಅತ್ಯುತ್ತಮ ಫಿನಿಷರ್‌ಗಳನ್ನು ಹೊಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WITT Summit 2026: ರಾಜಕೀಯದಿಂದ ಕ್ರೀಡೆಯವರೆಗೆ; ವಿಟ್ ಶೃಂಗಸಭೆಯ 2ನೇ ದಿನದ ಆಕರ್ಷಣೆಗಳಿವು

ನವದೆಹಲಿ, ಮಾರ್ಚ್ 21: ದೆಹಲಿಯಲ್ಲಿ ಮಾರ್ಚ್ 23 ಮತ್ತು 24ರಂದು ನಡೆಯಲಿರುವ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಮತ್ತು ಕಾರ್ಪೊರೇಟ್ ನಾಯಕರನ್ನು ಒಟ್ಟುಗೂಡಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಮುಖ್ಯ ಅತಿಥಿಯಾಗಿ ಈ ವೇದಿಕೆಯನ್ನು ಅಲಂಕರಿಸಲಿದ್ದಾರೆ. ಈ ಬಾರಿ ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ ಇಂಧನ, ಮೂಲಸೌಕರ್ಯ ಮತ್ತು ಭಾರತದ ಕೈಗಾರಿಕಾ ಭವಿಷ್ಯದ ಕುರಿತು ಆಳವಾದ ಚರ್ಚೆಗೆ ವೇದಿಕೆಯಾಗಲಿದೆ.

“ಭಾರತ ಮತ್ತು ಜಗತ್ತು” ಎಂಬ ವಿಷಯವನ್ನು ಆಧರಿಸಿದ ಈ ಕಾರ್ಯಕ್ರಮವು ರಾಜಕೀಯ ನಾಯಕತ್ವ, ಜಾಗತಿಕ ಚಿಂತಕರು, ಕೈಗಾರಿಕೆ ಮತ್ತು ನಾಗರಿಕ ಸಮಾಜವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿ ದೇಶದ ಅಭಿವೃದ್ಧಿ ಪಥದ ಬಗ್ಗೆ ಚರ್ಚಿಸಲಿದೆ. ‘ಭಾರತ ಮತ್ತು ಜಗತ್ತು’ ಎಂಬ ವಿಷಯದೊಂದಿಗೆ ವಿಟ್ ಶೃಂಗಸಭೆಯಲ್ಲಿ ಚಿಂತಕರು, ಉದ್ಯಮಿಗಳು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ: WITT Summit: ಜಗತ್ತಿನ ಅನಿಶ್ಚಿತತೆಯ ನಡುವೆಯೂ ಜಾಗತಿಕ ದಿಕ್ಕನ್ನು ರೂಪಿಸಲು ಭಾರತ ಸಜ್ಜಾಗಿದೆ; ಟಿವಿ9 ಎಂಡಿ ಮತ್ತು ಸಿಇಒ ಬರುಣ್ ದಾಸ್

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಭಾಷಣ ಮಾಡಿದ ಶೃಂಗಸಭೆಯ ನಂತರ, ಎರಡನೇ ದಿನವು ‘ಭಾರತ ಮತ್ತು ಜಗತ್ತು’ ಎಂಬ ವಿಷಯದ ಸುತ್ತ ನಡೆಯುತ್ತಿದ್ದು, ದೇಶದ ಉನ್ನತ ರಾಜಕೀಯ ನಾಯಕರು ಭಾಷಣ ಮಾಡುತ್ತಾರೆ. ಮಾಜಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ , ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ಪಿಯೂಷ್ ಗೋಯಲ್ ಮತ್ತು ಈಶಾನ್ಯ ಪ್ರದೇಶದ ಸಂವಹನ ಮತ್ತು ಅಭಿವೃದ್ಧಿ ಸಚಿವೆ ಜ್ಯೋತಿರಾದಿತ್ಯ ಸಿಂಧಿಯಾ ಅವರ ಭಾಷಣಗಳು ಕಾರ್ಯಕ್ರಮದ ಎರಡನೇ ದಿನದ ಪ್ರಮುಖ ಅಂಶಗಳಾಗಿವೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ , ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಷಣ ಮಾಡಲಿದ್ದಾರೆ. ಲೋಕಸಭಾ ಸದಸ್ಯರಾದ ಅಖಿಲೇಶ್ ಯಾದವ್ ಮತ್ತು ಅಸಾದುದ್ದೀನ್ ಓವೈಸಿ ಕೂಡ ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: WITT Summit 2026: WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯಿಂದ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಹತ್ವದ ಚರ್ಚೆ

ಈ ಶೃಂಗಸಭೆಯ ಎರಡನೇ ದಿನದ ಮುಖ್ಯ ಅಂಶಗಳಲ್ಲಿ ಭಾರತೀಯ ಕ್ರೀಡಾ ದಂತಕಥೆಗಳೊಂದಿಗಿನ ಅನೇಕ ಮಾತುಕತೆಗಳು ಕೂಡ ಸೇರಿವೆ. ಅವರಲ್ಲಿ ಪ್ರಮುಖರು ಕ್ರಿಕೆಟ್ ದಂತಕಥೆ ಸೌರವ್ ಗಂಗೂಲಿ, ಯುವ ಭಾರತೀಯ ಕ್ರಿಕೆಟಿಗರಾದ ಅಕ್ಷರ್ ಪಟೇಲ್ ಮತ್ತು ಅರ್ಶ್ದೀಪ್ ಸಿಂಗ್ .

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುನೀತ್ ರಾಜ್​​ಕುಮಾರ್ ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ 800 ಕೆಜಿ ತೂಕದ ಕಂಚಿನ ಪುತ್ಥಳಿಯನ್ನು ಅನಾವರಣ ಮಾಡಲಾಯ್ತು. ಕಾರ್ಯಕ್ರಮದಲ್ಲಿ ಶಾಸಕ ಅಶ್ವಥ್ ನಾರಾಯಣ್, ಅಶ್ವಿನಿ ಪುನೀತ್ ರಾಜ್​​ಕುಮಾರ್ ಮತ್ತು ಅವರ ಪುತ್ರಿ ಧೃತಿ, ಚಲನಚಿತ್ರ ನಿರ್ದೇಶಕರಾದ ಡಾ ರಾಜೇಂದ್ರ ಸಿಂಗ್ ಬಾಬು ಇನ್ನೂ ಹಲವರು ಭಾಗಿ ಆಗಿದ್ದರು. ಕಾರ್ಯಕ್ರದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಿಜೆಡಿ ಶಾಸಕರ ಅಮಾನತು

ಒಡಿಶಾ, ಮಾರ್ಚ್ 21: ಇತ್ತೀಚೆಗೆ ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ (Rajya Sabha Elections) ಸಂದರ್ಭದಲ್ಲಿ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಿಜು ಜನತಾದಳ (ಬಿಜೆಡಿ) ತನ್ನ 6 ಶಾಸಕರನ್ನು ಅಮಾನತುಗೊಳಿಸಿದೆ. ಶಾಸಕರು ಅಡ್ಡ ಮತದಾನದಲ್ಲಿ ತೊಡಗಿದ್ದಾರೆ ಎಂದು ಪತ್ತೆಯಾದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಶೋಕಾಸ್ ನೋಟಿಸ್‌ಗೆ ಅವರು ನೀಡಿದ ಉತ್ತರಗಳ ಪರಿಶೀಲನೆ ಮತ್ತು ಬಿಜೆಡಿ ಶಿಸ್ತು ಸಮಿತಿಯ ಸಂಪೂರ್ಣ ಪರಿಶೀಲನೆಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಒಡಿಶಾದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗಮನಾರ್ಹ ಅಡ್ಡ ಮತದಾನ ಕಂಡುಬಂದಿತು. 8 ಬಿಜೆಡಿ ಶಾಸಕರು (ಈಗ ಅಮಾನತುಗೊಂಡಿರುವ ಆರು ಮಂದಿ ಮತ್ತು ಈಗಾಗಲೇ ಅಮಾನತುಗೊಂಡಿರುವ ಇಬ್ಬರು ಸದಸ್ಯರು ಸೇರಿದಂತೆ) ಬಿಜೆಡಿ, ಕಾಂಗ್ರೆಸ್ ಮತ್ತು ಎಡ ಪಕ್ಷಗಳು ಜಂಟಿಯಾಗಿ ಸ್ಪರ್ಧಿಸಿದ್ದ ಸಾಮಾನ್ಯ ವಿರೋಧ ಪಕ್ಷದ ಅಭ್ಯರ್ಥಿ ದತ್ತೇಶ್ವರ ಹೋಟಾ ಬದಲಿಗೆ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ದಿಲೀಪ್ ರೇ ಅವರಿಗೆ ಮತ ಚಲಾಯಿಸಿದ್ದರು. ಇದು ದಿಲೀಪ್ ರೇ ಅವರ ಗೆಲುವಿಗೆ ಕಾರಣವಾಯಿತು.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ

ಇದರ ಪರಿಣಾಮವಾಗಿ ಬಿಜೆಪಿ 2 ಸ್ಥಾನಗಳನ್ನು, ಬಿಜೆಡಿ 1 ಸ್ಥಾನ ಮತ್ತು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ 4ನೇ ಸ್ಥಾನಗಳನ್ನು ಪಡೆದರು. ಬಿಜೆಡಿ ಈ ಹಿಂದೆ ಮಾರ್ಚ್ 17ರಂದು 6 ಶಾಸಕರಿಗೆ ಪಕ್ಷದ ವಿಪ್ ಅನ್ನು ಧಿಕ್ಕರಿಸಿದ್ದಕ್ಕಾಗಿ ವಿವರಣೆಗಳನ್ನು ಕೋರಿ ಶೋಕಾಸ್ ನೋಟಿಸ್‌ಗಳನ್ನು ನೀಡಿತ್ತು. ಇದೀಗ ಅವರನ್ನು ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಶಾಸಕರು:

ಬಲಿಗುಡದ ಶಾಸಕರಾದ ಚಕ್ರಮಣಿ ಕನ್ಹಾರ್

ಜಯದೇವ್‌ನ ಶಾಸಕರಾದ ನಬಾ ಕಿಶೋರ್ ಮಲ್ಲಿಕ್

ಚೌದ್ವಾರ-ಕಟಕ್‌ನ ಶಾಸಕರಾದ ಸೌವಿಕ್ ಬಿಸ್ವಾಲ್

ಬಸ್ತಾದ ಶಾಸಕರಾದ ಸುಬಾಸಿನಿ ಜೆನಾ

ತಿರ್ಟೋಲ್‌ನ ಶಾಸಕ ರಮಾಕಾಂತ ಭೋಯ್

ಬಂಕಿಯ ಶಾಸಕರಾದ ದೇವಿ ರಂಜನ್ ತ್ರಿಪಾಠಿ

ಇದನ್ನೂ ಓದಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಸನ್ನದ್ಧ: ಮತದಾನಕ್ಕೆ ಶಾಸಕರ ಬ್ಯಾಚ್ ರಚನೆ, ಅದಕ್ಕೆ ಓರ್ವ ಲೀಡರ್

ಈ ಶಾಸಕರು ಬಿಜೆಡಿ ಪಕ್ಷದ ಮೂಲ ತತ್ವವನ್ನು ಉಲ್ಲಂಘಿಸಿದ್ದಾರೆ ಎಂದು ಆದೇಶದಲ್ಲಿ ಹೇಳಲಾಗಿದೆ. ಮಾರ್ಚ್ 16ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನವು ಪಕ್ಷದ ವಿಪ್ ಮತ್ತು ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿನಿಮಾ ರಂಗದಿಂದ ದೂರಾಗಲು ನಿರ್ಧರಿಸಿದ್ದರು ಶ್ರೀಲೀಲಾ: ಕಾರಣ ಏನು?

ಶ್ರೀಲೀಲಾ (Sreeleela), ಕನ್ನಡದ ನಟಿ. ಈಗ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಸಖತ್ ಮಿಂಚುತ್ತಿದ್ದಾರೆ. ತೆಲುಗಿನಲ್ಲಂತೂ ನಂಬರ್ 1 ನಟಿ ಎನಿಸಿಕೊಂಡಿದ್ದಾರೆ. ಮಹೇಶ್ ಬಾಬು, ಪವನ್ ಕಲ್ಯಾಣ್ ಇನ್ನೂ ಕೆಲವು ಸ್ಟಾರ್ ನಟರುಗಳೊಟ್ಟಿಗೆ ನಟಿಸಿದ್ದಾರೆ. ತಮಿಳಿನಲ್ಲೂ ಸಹ ಸ್ಟಾರ್ ನಟರುಗಳೊಟ್ಟಿಗೆ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಆಗಲೇ ಮೂರು ಸಿನಿಮಾಕ್ಕೆ ಎಸ್ ಹೇಳಿದ್ದು, ಒಂದು ಸಿನಿಮಾದ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ಸ್ಟಾರ್ ಪ್ಯಾನ್ ಇಂಡಿಯಾ ನಟಿ ಎನಿಸಿಕೊಂಡಿದ್ದಾರೆ. ಇಷ್ಟು ಯಶಸ್ವಿ ನಟಿ ಆಗಿರುವ ಶ್ರೀಲೀಲಾ, ಕೆಲ ವರ್ಷಗಳ ಹಿಂದೆ ನಟನೆಯನ್ನು ತ್ಯಜಿಸಿ, ಚಿತ್ರರಂಗದಿಂದಲೇ ದೂರಾಗುವ ನಿರ್ಧಾರ ಮಾಡಿದ್ದರಂತೆ.

ಶ್ರೀಲೀಲಾ, ಪವನ್ ಕಲ್ಯಾಣ್ ಜೊತೆಗೆ ನಟಿಸಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ನಟಿ ಶ್ರೀಲೀಲಾ ಭಾಗವಹಿಸಿದ್ದರು. ತೆಲುಗಿನ ಖ್ಯಾತ ನಿರೂಪಕಿ ಸುಮಾ ಕನಕಾಲ ಅವರೊಟ್ಟಿಗೆ ತಮಾಷೆಯ ಸಂದರ್ಶನದಲ್ಲಿ ಶ್ರೀಲೀಲಾ ಭಾಗಿ ಆಗಿದ್ದರು. ಅದೇ ಸಂದರ್ಶನದಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಮತ್ತೊಬ್ಬ ನಾಯಕ ನಟಿ ರಾಶಿ ಖನ್ನಾ ಸಹ ಭಾಗಿ ಆಗಿದ್ದರು.

ಕಾರ್ಯಕ್ರಮದಲ್ಲಿ ಟ್ರೋಲ್​​ಗಳ ಬಗ್ಗೆ ನಿರೂಪಕಿ ಸುಮಾ ಕನಕಾಲ ಅವರು ಶ್ರೀಲೀಲಾಗೆ ಪ್ರಶ್ನೆ ಕೇಳಿದರು. ಅದಕ್ಕೆ ಶ್ರೀಲೀಲಾ, ‘”ನಾನು ಸಿನಿಮಾಗಳಲ್ಲಿ ನಟಿಸುವುದನ್ನು ಆರಂಭಿಸಿದ್ದಾಗ ಟ್ರೋಲ್​​ಗಳ ಬಗ್ಗೆ ಬಹಳ ಭಯ ಆಗುತ್ತಿತ್ತು, ಟ್ರೋಲ್​​ಗಳು ಬಹಳ ಕೆಟ್ಟದು ಅನಿಸುತ್ತಿದ್ದವು. ಹಲವು ಬಾರಿ ಅತ್ತಿದ್ದು ಸಹ ಇದೆ. ಟ್ರೋಲ್​​ಗಳು ನನ್ನ ಮನಸ್ಸಿನ ಮೇಲೆ ಬಹಳ ಪ್ರಭಾವ ಬೀರುತ್ತಿದ್ದವು. ಎಷ್ಟರ ಮಟ್ಟಿಗೆಂದರೆ ನಾನು ಚಿತ್ರರಂಗವನ್ನೇ ಬಿಟ್ಟುಬಿಡಲು ತೀರ್ಮಾನಿಸಿದ್ದೆ. ‘ನನಗೆ ನಟಿಸಲು ಸಾಧ್ಯವಾಗುತ್ತದೆ ಎಂದು ಅನಿಸುತ್ತಿಲ್ಲ ಎಂದು ನಾನು ನನ್ನ ತಾಯಿಗೆ ಹೇಳಿದೆ. ನಾನು ಶಾಲೆ ಅಥವಾ ಕಾಲೇಜಿಗೆ ಹಿಂತಿರುಗಿಬಿಡುತ್ತೇನೆ’ ಎಂದಿದ್ದೆ. ನಾನು ತುಂಬಾ ಸೂಕ್ಷ್ಮವಾಗಿದ್ದೆ, ಆದರೆ ಈಗ ಹಾಗಿಲ್ಲ, ಟ್ರೋಲ್​​ಗಳು, ಅವರ ನಿಂದನೆ, ವ್ಯಂಗ್ಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ’ ಎಂದಿದ್ದಾರೆ ನಟಿ.

ಇದನ್ನೂ ಓದಿ:ನಟಿ ರಾಶಿ ಖನ್ನಾ ಜೊತೆಗೆ ಶ್ರೀಲೀಲಾ ಸಖತ್ ಮಸ್ತಿ: ವಿಡಿಯೋ ನೋಡಿ

ಅದೇ ಸಂದರ್ಶನದಲ್ಲಿ ಮುಂದುವರೆದು ಮಾತನಾಡಿ, ‘ಇತ್ತೀಚೆಗೆ ಜನ ತುಸು ಬುದ್ಧಿವಂತರು ಸಂವೇದಶೀಲರು ಆಗಿದ್ದಾರೆ ಅನಿಸುತ್ತದೆ. ಮೊದಲು ಬಹಳ ಒರಟಾಗಿ ಕಮೆಂಟ್ ಮಾಡುತ್ತಿದ್ದರು. ಆದರೆ ಈಗ ನೆಗೆಟಿವಿ ಇದೆಯೆಂದರೆ ತುಸು ಯೋಚಿಸುತ್ತಾರೆ, ಸರಿಯಾ? ತಪ್ಪಾ? ಎಂದು ಅವಲೋಕಿಸುತ್ತಾರೆ’ ಎಂದಿದ್ದಾರೆ ಶ್ರೀಲೀಲಾ. ಅದೇ ಸಂದರ್ಶನದಲ್ಲಿ ಇದ್ದ ರಾಶಿ ಖನ್ನಾ, ಟ್ರೋಲ್​​ಗಳ ಬಗ್ಗೆ ಮಾತನಾಡಿ, ‘ನನಗೆ ಟ್ರೋಲ್​​ಗಳು ಮಾನಸಿಕವಾಗಿ ಹಿಂಸೆ ನೀಡುತ್ತವೆ. ಏಕೆಂದರೆ ನಿಜ ಗೊತ್ತಿಲ್ಲದೇ ಅವರು ನಿರ್ಧಾರಗಳನ್ನು ಪ್ರಕಟಿಸುತ್ತಾರೆ, ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಮಾತನಾಡುತ್ತಾರೆ. ಹಾಗಾಗಿ ನನಗೆ ಅದರ ಬಗ್ಗೆ ಈಗಲೂ ಬೇಸರ ಇದೆ’ ಎಂದಿದ್ದಾರೆ.

ಶ್ರೀಲೀಲಾ ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಾರ್ತಿಕ್ ಆರ್ಯನ್ ಜೊತೆ ‘ಆಶಿಖಿ 3’ನಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಇನ್ನೂ ಎರಡು ಹಿಂದಿ ಸಿನಿಮಾಗಳಲ್ಲಿ ನಟಿಸಲಿದ್ದಾರೆ. ತಮಿಳಿನಲ್ಲಿ ನಟ ಧನುಶ್ ಜೊತೆಗೆ ಒಂದು ಹಾಗೂ ಶಿವಕಾರ್ತಿಕೇಯನ್ ಜೊತೆಗೆ ಹೊಸದೊಂದು ಸಿನಿಮಾನಲ್ಲಿ ನಟಿಸಲಿದ್ದಾರೆ. ಇನ್ನು ತೆಲುಗಿನಲ್ಲಿ ರವಿತೇಜ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲಿದ್ದಾರೆ. ಮತ್ತೊಂದು ಹೊಸ ಸಿನಿಮಾವನ್ನು ಸಹ ಶ್ರೀಲೀಲಾ ಒಪ್ಪಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾರವಾರ: ಪ್ರವಾಸಿಗರು ಹೆಚ್ಚಳದ ಮಧ್ಯೆ ದರ ಸಮರ: ಏಜೆಂಟರು ಮತ್ತು ಕಂಪನಿಗಳ ನಡುವೆ ಬಿಗ್ ಫೈಟ್

ಕಾರವಾರ, ಮಾರ್ಚ್​ 21: ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಉತ್ತರ ಕನ್ನಡ ಜಿಲ್ಲೆಗೆ ಬರುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಟ್ರಾವೆಲ್ ಏಜೆಂಟ್ಸ್​ ಮತ್ತು ಜಲಸಾಹಸ ಕ್ರಿಡಾ ಕಂಪನಿಗಳ ನಡುವೆ ದರ ನಗದಿ ವಿಚಾರವಾಗಿ ಭಾರೀ ಜಟಾಪಟಿ ನಡೆದಿದ್ದು, ಪ್ರವಾಸಿಗರು (Tourists) ಜಾಸ್ತಿ ಬಂದರೂ ನಿರೀಕ್ಷಿಸಿದಷ್ಟು ಲಾಭ ಸಿಗದೆ ಎಜೆಂಟರು ಒದ್ದಾಡುತ್ತಿದ್ದಾರೆ.

ಸದ್ಯ ಒಂದು ಕಡೆ ಸಾಲು ಸಾಲು ಹಬ್ಬ ಹಿನ್ನೆಲೆ ರಜೆ. ಮತ್ತೊಂದು ಕಡೆ ಮಕ್ಕಳ ಪರೀಕ್ಷೆ ಮುಗಿದಿದ್ದು, ಜಾಲಿ ಮಾಡುವ ಸಂದರ್ಭ. ಹೀಗಾಗಿ ಪ್ರವಾಸಿಗರು ವಾಟರ್ ಸ್ಪೋರ್ಟ್ಸ್​ಗಾಗಿ ಉತ್ತರ ಕನ್ನಡ ಜಿಲ್ಲೆಯತ್ತ ಮುಖ ಮಾಡುತ್ತಿದ್ದಾರೆ. ಆದರೆ ಇದೆ ಸಂದರ್ಭದಲ್ಲಿ ಜಲಸಾಹಸ ಕ್ರೀಡಾ ಕಂಪನಿಗಳು ಮತ್ತು ಟ್ರಾವೆಲ್ ಏಜೆಂಟ್ಸ್​​​ಗಳ ನಡುವಿನ ಜಟಾಪಟಿ ಕೂಡ ಉಂಟಾಗಿದೆ. ಪರಿಣಾಮ ನಿರೀಕ್ಷಿಸಿದ ಪ್ರಮಾಣದಲ್ಲಿ ಹಣ ಮಾಡುವುದಕ್ಕೆ ಆಗದ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ: ಬಡವರ ಹತ್ತಿರ ಹಣ ಸುಲಿಗೆ ಮಾಡಿದ್ರೆ ಕೈ-ಕಾಲು ಮುರಿಯುತ್ತೇನೆ: ವೈದ್ಯರಿಗೆ ಚಳಿ ಬಿಡಿಸಿದ ಶಾಸಕ ದೇಶಪಾಂಡೆ

ಜಲಸಾಹಸ ನಡೆಸುವವ ನಡುವಿನ ವ್ಯಾಪಾರವನ್ನು ಏಜೆಂಟ್​ಗಳು  ಬಂಡಾವಳ ಮಾಡಿಕೊಂಡಿದ್ದಾರೆ. ಅತ್ಯಂತ ಕಡಿಮೆ ದರದಲ್ಲಿ ಜಲಸಾಹಸ ಕ್ರೀಡೆ ಮಾಡಿಸಿ ಪ್ರವಾಸಿಗರಿಂದ ಹೆಚ್ಚಿನ ಹಣ ಪಿಕುತ್ತಿದ್ದಾರೆ. ಆದರೆ ಈಗ ಜಲಸಾಹಸ ಕಂಪನಿಗಳು ಒಂದಾಗಿ ಸಿಂಗಲ್ ವಿಂಡೊ ಸಿಸ್ಟಮ್ ಜಾರಿಗೆ ತಂದಿದ್ದು, ಏಜೆಂಟ್​ಗಳು ಪಡೆಯುತ್ತಿದ್ದ ದೊಡ್ಡ ಮಟ್ಟದ ಕಮಿಷನ್​ಗೆ ಬ್ರೇಕ್ ಬಿದ್ದಂತಾಗಿದೆ.

ವಿಷಯ ಏನೆಂದರೆ ಜೋಯಿಡಾ ತಾಲೂಕಿನ ಗಣೇಶ ಗುಡಿಯ ಅತ್ಯಾಕರ್ಷಣೀಯ ನಿಸರ್ಗತಾಣದಲ್ಲಿ ಹರಿಯುವ ಕಾಳಿ ನದಿಯಲ್ಲಿ ಸುಮಾರು 5 ಕ್ಕೂ ಹೆಚ್ಚು ಬಗೆಯ ಜಲಸಾಹಸ ಕ್ರೀಡೆಗಳನ್ನ ನಡೆಸುತ್ತಾರೆ. ಇದಕ್ಕಾಗಿ ರಾಜ್ಯ ಹೊರರಾಜ್ಯಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಇತ್ತೀಚೆಗೆ ಜಲಸಾಹಸ ಕ್ರೀಡೆ ನಡೆಸುವ ಜೆಟ್ಟಿಗಳು ಹೆಚ್ಚಾಗಿದ್ದಾರೆ.

ಈ ಟ್ರಾವೆಲ್ ಏಜೆಂಟ್ಸ್​​ ಮಾತ್ರ ಪ್ರವಾಸಿಗರಿಂದ ತಲಾ 1500 ರೂ ಪಡೆದು ದೊಡ್ಡ ಮಟ್ಟದ ಲಾಭ ಗಳಿಸುತ್ತಿದ್ದರು. ಇತ್ತೀಚೆಗೆ ಜೆಟ್ಟಿ ಮಾಲಿಕರಿಗೆ ಆಗುತ್ತಿರುವ ನಷ್ಟವನ್ನ ಮನಗಂಡು ತಮ್ಮಲ್ಲಿನ ವೈಮನಸ್ಸು ಬದಿಗಿಟ್ಟು, ಕಳೆದ ಒಂದು ತಿಂಗಳಿನಿಂದ ಸಿಂಗಲ್ ವಿಂಡೋ ಸಿಸ್ಟಮ್ ಜಾರಿಗೆ ತಂದಿದ್ದಾರೆ. ಯಾರೇ ಪ್ರವಾಸಿಗರು ಬಂದರು ಒಂದೇ ಕಡೆ ಬುಕ್ಕಿಂಗ ಮಾಡಬೇಕಾಗಿದ್ದು, ತಲಾ 750 ರೂ ದರ ನಿಗದಿ ಮಾಡಿದ್ದಾರೆ. ಇದು ಏಜೆಂಟ್​ಗಳಿಗೆ ನುಂಗಲಾರದ ತುತ್ತಾಗಿದ್ದು, ದೊಡ್ಡ ಮಟ್ಟದಲ್ಲಿ ನಷ್ಟ ಅನುಭವಿಸುವಂತಾಗಿದೆ.

ಇದನ್ನೂ ಓದಿ: ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಇನ್ನು ತಮಗಾಗುತ್ತಿರುವ ನಷ್ಟವನ್ನ ಸಹಿಸಲಾರದ ಏಜೆಂಟ್​ಗಳು ದೊಡ್ಡ ಮಟ್ಟದಲ್ಲಿ ಗಲಾಟೆ ಮಾಡಿಕೊಂಡಿದ್ದು, ಸದ್ಯ ಈ ವಿಚಾರ ಜೋಯಿಡಾ ತಹಶೀಲ್ದಾರ್ ಅಂಗಳಕ್ಕೆ ಬಂದು ತಲುಪಿದೆ. ನಿನ್ನೆ ಈ ಬಗ್ಗೆ ಮೂರು ಗಂಟೆಗಳ ಕಾಲ ಸಭೆ ಮಾಡಿದರು ಸಹಿತ, ಇದುವರೆಗೂ ಇಬ್ಬರ ನಡುವಿನ ಜಟಾಪಟಿ ಅಂತ್ಯ ಆಗಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ರಾಶಿಯವರು ಒಂದು ಧೈರ್ಯದ ನಿರ್ಧಾರ ತೆಗೆದುಕೊಳ್ಳಿ, ಜೀವನವೇ ಬದಲಾಗುತ್ತದೆ

ಮಾರ್ಚ್ 22ರಿಂದ 28ರವರೆಗೆ ನಾಲ್ಕನೇ ವಾರ. ದಶಮಾಧಿಪತಿಗಳ ಸಂಚಾರದಲ್ಲಿ ವ್ಯತ್ಯಾಸ ಆಗುವ ಕಾರಣ ಉದ್ಯೋಗದಲ್ಲಿ ಉದ್ಯಮದಲ್ಲಿ ಏರಿಳಿತಗಳು ಇರಲಿವೆ. ಸೂಕ್ಷ್ಮಮತಿಗಳಾಗಿ ನಿರ್ವಹಣೆ ಮಾಡುವುದು ಇರುತ್ತದೆ.

​ಮೇಷ

​ಅಧಿಪತಿ ಮಂಗಳ ಲಾಭ ಸ್ಥಾನದಲ್ಲಿದ್ದಾನೆ. ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ಬರಲಿವೆ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದರೂ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಶನಿ ಪ್ರಭಾವದಿಂದ ಕೆಲಸದಲ್ಲಿ ವಿಳಂಬ ಸಾಧ್ಯತೆ ಇದೆ.

ವೃಷಭ

​ಶುಕ್ರನ ಬಲದಿಂದ ಸುಖ, ಸಂತೋಷ ಹೆಚ್ಚಲಿದೆ. ದಶಮಾಧಿಪತಿ ಶನಿ ಹತ್ತನೇ ಮನೆಯಲ್ಲಿ ಇರುವುದರಿಂದ ಉದ್ಯೋಗದಲ್ಲಿ ಬಡ್ತಿ ಸಿಗುವ ಯೋಗವಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾಗಬಹುದು, ಎಚ್ಚರವಿರಲಿ.

ಮಿಥುನ

​ಬುಧನ ಸಂಚಾರದಿಂದ ಬುದ್ಧಿವಂತಿಕೆ ಕೆಲಸ ಮಾಡಲಿದೆ. ವ್ಯಾಪಾರದಲ್ಲಿ ಲಾಭದಾಯಕ ಒಪ್ಪಂದಗಳು ಕೈಗೂಡಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ದಶಮಾಧಿಪತಿ ಗುರು ಹನ್ನೆರಡನೇ ಮನೆಯಲ್ಲಿ ಇರುವುದರಿಂದ ದೂರದ ಪ್ರಯಾಣ ಮತ್ತು ಧಾರ್ಮಿಕ ಕಾರ್ಯಗಳಿಗೆ ಧನವ್ಯಯವಾಗುವ ಸಾಧ್ಯತೆ ಇದೆ.

​ಕರ್ಕಾಟಕ

​ಚಂದ್ರನ ಚಲನೆ ಮಿಶ್ರಫಲ ನೀಡಲಿದೆ. ಮಾನಸಿಕವಾಗಿ ಸ್ವಲ್ಪ ಗೊಂದಲವಿರಬಹುದು. ದಶಮಾಧಿಪತಿ ಮಂಗಳ ಅಷ್ಟಮದಲ್ಲಿ ಇರುವುದರಿಂದ ವಾಹನ ಚಲಾಯಿಸುವಾಗ ಜಾಗ್ರತೆ ಅಗತ್ಯ. ಹಠಾತ್ ಧನಲಾಭದ ಸಾಧ್ಯತೆಯಿದೆ. ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರ ಪಡೆಯುವಿರಿ.

ಸಿಂಹ

​ರವಿ ಎಂಟನೇ ಮನೆಯಲ್ಲಿ ಇರುವುದರಿಂದ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ದಶಮಾಧಿಪತಿ ಶುಕ್ರ ಸಪ್ತಮದಲ್ಲಿದ್ದು, ಸಂಗಾತಿಯಿಂದ ಸಂಪೂರ್ಣ ಬೆಂಬಲ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭವಿರುತ್ತದೆ. ಸಾರ್ವಜನಿಕ ರಂಗದಲ್ಲಿ ಗೌರವ ಹೆಚ್ಚಾಗಲಿದೆ.

ಕನ್ಯಾ

​ದಶಮಾಧಿಪತಿ ಬುಧ ಎಂಟನೇ ಮನೆಯಲ್ಲಿ ಇರುವುದರಿಂದ ವೃತ್ತಿಯಲ್ಲಿ ಅಡೆತಡೆಗಳು ಎದುರಾಗಬಹುದು. ಶತ್ರುಗಳ ಬಾಧೆ ನಿವಾರಣೆಯಾಗಲಿದೆ. ಸಾಲದ ಹೊರೆ ಕಡಿಮೆಯಾಗುವ ಸಂಭವವಿದೆ. ಸಂವಹನದಲ್ಲಿ ಸ್ಪಷ್ಟತೆ ಇರಲಿ. ಧೈರ್ಯದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.

ತುಲಾ

​ಶುಕ್ರನ ಅನುಗ್ರಹದಿಂದ ಕಲಾತ್ಮಕ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ದಶಮಾಧಿಪತಿ ಚಂದ್ರನ ಸಂಚಾರದಿಂದ ಮನಸ್ಸು ಚಂಚಲವಾಗಬಹುದು. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಹೂಡಿಕೆ ಮಾಡಲು ಇದು ಸಕಾಲ. ಮಕ್ಕಳ ಸಾಧನೆ ಸಂತಸ ತರಲಿದೆ.

ವೃಶ್ಚಿಕ

​ದಶಮಾಧಿಪತಿ ರವಿ ಐದನೇ ಮನೆಯಲ್ಲಿ ಇರುವುದರಿಂದ ಗೌರವ ಸಿಗಲಿದೆ. ಮಂಗಳನ ಬಲದಿಂದ ಆಸ್ತಿ ಖರೀದಿ ಯೋಗವಿದೆ. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕೆಲಸದ ಒತ್ತಡ ಹೆಚ್ಚಿದ್ದರೂ ಗುರಿ ತಲುಪುವಿರಿ. ಆತುರದ ನಿರ್ಧಾರ ಬೇಡ.

ಧನು

​ದಶಮಾಧಿಪತಿ ಬುಧನ ಅನುಗ್ರಹದಿಂದ ವ್ಯಾಪಾರ ವೃದ್ಧಿಯಾಗಲಿದೆ. ಸಣ್ಣ ಪ್ರವಾಸಗಳು ಲಾಭದಾಯಕವಾಗಿರಲಿವೆ. ಸಹೋದರರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ಆತ್ಮವಿಶ್ವಾಸದಿಂದ ಹೊಸ ಕೆಲಸಗಳನ್ನು ಆರಂಭಿಸಬಹುದು. ಆಧ್ಯಾತ್ಮಿಕ ಚಿಂತನೆ ಹೆಚ್ಚಲಿದೆ.

ಮಕರ

​ಶನಿ ಸ್ವಕ್ಷೇತ್ರದಲ್ಲಿ ಇರುವುದರಿಂದ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದಶಮಾಧಿಪತಿ ಶುಕ್ರ ಎರಡನೇ ಮನೆಯಲ್ಲಿ ಇರುವುದರಿಂದ ಆರ್ಥಿಕವಾಗಿ ಸದೃಢರಾಗುವಿರಿ. ಸಿಹಿ ಮಾತುಗಳಿಂದ ಕೆಲಸ ಸಾಧಿಸಿಕೊಳ್ಳುವಿರಿ. ಕೌಟುಂಬಿಕ ವಾತಾವರಣ ಸುಖಮಯವಾಗಿರಲಿದೆ.

​ಕುಂಭ

​ಲಗ್ನದಲ್ಲೇ ಶನಿ ಇರುವುದರಿಂದ ಜವಾಬ್ದಾರಿಗಳು ಹೆಚ್ಚಲಿವೆ. ದಶಮಾಧಿಪತಿ ಮಂಗಳ ಲಗ್ನದಲ್ಲೇ ಇರುವುದರಿಂದ ಕೋಪದ ಮೇಲೆ ನಿಯಂತ್ರಣವಿರಲಿ. ಹಣಕಾಸಿನ ಹರಿವು ಸಾಧಾರಣವಾಗಿರಲಿದೆ. ಹಳೆಯ ಮಿತ್ರರ ಭೇಟಿಯಾಗುವ ಸಾಧ್ಯತೆಯಿದೆ.

ಮೀನ

​ಗುರು ಲಗ್ನದಲ್ಲಿದ್ದು ಜ್ಞಾನ ವೃದ್ಧಿಸಲಿದೆ. ದಶಮಾಧಿಪತಿ ಗುರು ಶುಭ ಸ್ಥಾನದಲ್ಲಿದ್ದಾನೆ. ಹೊಸ ಹೂಡಿಕೆಗಳಿಗೆ ಇದು ಸೂಕ್ತ ಸಮಯವಲ್ಲ. ವಿದೇಶಿ ಸಂಬಂಧಗಳಿಂದ ಲಾಭವಾಗಲಿದೆ. ದಾನ, ಧರ್ಮದಲ್ಲಿ ಆಸಕ್ತಿ ಹೆಚ್ಚಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ.

– ಲೋಹಿತ ಹೆಬ್ಬಾರ್ – 8762924271

Source link

ಎಸಿಯಿಂದ ಹೊರಬಂದ ತಕ್ಷಣ ತಲೆನೋವು, ಸುಸ್ತಾದಂತೆ ಅನಿಸುವುದಕ್ಕೆ ಕಾರಣವೇನು?

ಬೇಸಿಗೆ ಕಾಲದಲ್ಲಿ ಬಿಸಿಲಿನ ಧಗೆಯಿಂದ ತಪ್ಪಿಸಿಕೊಳ್ಳಲು ಅನೇಕರು ಎಸಿ (AC) ಬಳಕೆ ಮಾಡುತ್ತಾರೆ. ಆದರೆ ಕೆಲವರಿಗೆ ಎಸಿ ಇದ್ದಲ್ಲಿಂದ ಹೊರಬಂದ ಕೂಡಲೇ ತಲೆನೋವು, ಒಂದು ರೀತಿಯ ಸುಸ್ತಾದಂತೆ ಅನುಭವವಾಗುತ್ತದೆ. ಕೆಲವರಿಗೆ ತಲೆಸುತ್ತು, ಕಣ್ಣಿನಲ್ಲಿ ನೋವು, ಮೂಗು ಬ್ಲಾಕ್ ಆಗುವುದು, ಗಂಟಲು ಒಣಗುವುದು ಮತ್ತು ದೇಹದಲ್ಲಿ ಸ್ವಲ್ಪ ದುರ್ಬಲತೆ ಕೂಡ ಕಾಣಿಸಬಹುದು. ತಣ್ಣನೆಯ ವಾತಾವರಣದಿಂದ ಏಕಾಏಕಿ ಬಿಸಿ ವಾತಾವರಣಕ್ಕೆ ಬರುವಾಗ ದೇಹಕ್ಕೆ ಹೊಂದಿಕೊಳ್ಳಲು ಸಮಯ ಬೇಕಾಗುತ್ತದೆ. ಇದರಿಂದ ಅಸಹಜತೆ ಹೆಚ್ಚಾಗುತ್ತದೆ. ಹಲವರು ಈ ರೀತಿ ಆಗುವುದನ್ನು ನಿರ್ಲಕ್ಷಿಸುತ್ತಾರೆ, ಆದರೆ ಈ ರೀತಿ ಪದೇ ಪದೇ ಆಗುತ್ತಿದ್ದರೆ ಅದನ್ನು ಕಡೆಗಣಿಸುವುದು ಒಳ್ಳೆಯದಲ್ಲ. ಆದರೆ ಅದಕ್ಕೂ ಮೊದಲು ಈ ರೀತಿ ಆಗುವುದಕ್ಕೆ ಕಾರಣವೇನು, ಇದನ್ನು ತಡೆಯಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕಾರಣವೇನು?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಹೇಳುವ ಪ್ರಕಾರ, ಎಸಿಯಲ್ಲಿ ಹೆಚ್ಚು ಸಮಯ ಕಳೆದರೆ ದೇಹ ತಣ್ಣಗಿರುವ ತಾಪಮಾನಕ್ಕೆ ಹೊಂದಿಕೊಳ್ಳುತ್ತದೆ. ನಂತರ ಏಕಾಏಕಿ ಹೊರಗಿನ ಬಿಸಿ ಗಾಳಿಗೆ ಬಂದಾಗ ದೇಹಕ್ಕೆ ತಾಪಮಾನ ಬದಲಾವಣೆಗೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಇದರಿಂದ ತಲೆನೋವು ಮತ್ತು ದೌರ್ಬಲ್ಯ ಉಂಟಾಗಬಹುದು. ತಣ್ಣನೆಯ ಗಾಳಿಯಲ್ಲಿ ಹೆಚ್ಚು ಸಮಯ ಕಳೆದರೆ ದೇಹದಲ್ಲಿ ನೀರಿನ ಕೊರತೆ (ಡಿಹೈಡ್ರೇಷನ್) ಉಂಟಾಗಬಹುದು. ಹಾಗಾದಾಗಲೂ ಈ ರೀತಿಯ ಸಮಸ್ಯೆ ಉಂಟಾಗುತ್ತದೆ. ಎಸಿ ಗಾಳಿ ಸಾಮಾನ್ಯವಾಗಿ ಒಣಗಿದಂತಿರುತ್ತದೆ. ಇದು ಮೂಗು ಮತ್ತು ಗಂಟಲಿನ ಮೇಲೆ ಪರಿಣಾಮ ಬೀರಿ ಅಸಹಜತೆಯನ್ನು ಉಂಟುಮಾಡುತ್ತದೆ. ಜೊತೆಗೆ, ಎಸಿಯನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಅದರಲ್ಲಿ ಧೂಳು ಅಥವಾ ಅಲರ್ಜಿ ಉಂಟುಮಾಡುವ ಕಣಗಳು ಸಂಗ್ರಹವಾಗುತ್ತವೆ, ಇದು ಸಮಸ್ಯೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ನಿಮ್ಮ ಮಕ್ಕಳು ಕೂಡ ಎಸಿ ಕೊಠಡಿಯಲ್ಲಿ ಮಲಗುತ್ತಾರಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಸಮಸ್ಯೆ ತಡೆಗಟ್ಟಲು ಏನು ಮಾಡಬೇಕು?

  • ಎಸಿಯ ತಾಪಮಾನವನ್ನು ತುಂಬಾ ಕಡಿಮೆ ಮಾಡಬೇಡಿ, ಸಾಮಾನ್ಯ ಮಟ್ಟದಲ್ಲೇ ಇಡಿ.
  • ನಿರಂತರವಾಗಿ ಎಸಿಯಲ್ಲಿ ಹೆಚ್ಚು ಸಮಯ ಕಳೆಯಬೇಡಿ.
  • ಮಧ್ಯೆ ಮಧ್ಯೆ ಹೊರಗಿನ ತಾಜಾ ಗಾಳಿಯನ್ನು ಪಡೆಯಿರಿ.
  • ದಿನಪೂರ್ತಿ ಸಾಕಷ್ಟು ನೀರು ಕುಡಿಯಿರಿ.
  • ಹೊರಗೆ ಹೋಗುವ ಮೊದಲು ಎಸಿಯ ತಾಪಮಾನವನ್ನು ನಿಧಾನವಾಗಿ ಹೆಚ್ಚಿಸಿ.
  • ಸಮಸ್ಯೆ ಪದೇ ಪದೇ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: 42 ಎಸೆತಗಳಲ್ಲಿ 94 ರನ್ ಬಾರಿಸಿದ ಅಭಿಷೇಕ್ ಶರ್ಮಾ

ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 2026 ರ ಟಿ20 ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲದಿರಬಹುದು, ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್‌ನಲ್ಲಿ ಅದ್ಭುತ ಇನ್ನಿಂಗ್ಸ್ ಆಡಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ 2026 ರ ಐಪಿಎಲ್​ನಲ್ಲೂ (IPL 2026) ಅದೇ ಆಟವನ್ನು ಮುಂದುವರೆಸಲು ಅಭಿಷೇಕ್ ಶರ್ಮಾ ಸಜ್ಜಾಗಿದ್ದಾರೆ. ಲೀಗ್​ನ ಮೊದಲ ಪಂದ್ಯದಲ್ಲೇ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್‌ (RCB vs SRH) ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಆದರೆ ಅದಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಅಭಿಷೇಕ್ 94 ರನ್​ಗಳ ಅಬ್ಬರದ ಇನ್ನಿಂಗ್ಸ್ ಆಡಿದರು.

ಸನ್‌ರೈಸರ್ಸ್ ಹೈದರಾಬಾದ್ ತಂಡವು ಮಾರ್ಚ್ 21 ರ ಶನಿವಾರದಂದು ತಮ್ಮ ತವರು ಮೈದಾನವಾದ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಮ್ಮ ಮೊದಲ ಅಭ್ಯಾಸ ಪಂದ್ಯವನ್ನು ಆಡಿತು. ತಂಡದ ಸದಸ್ಯರ ನಡುವೆ ನಡೆದ ಈ ಪಂದ್ಯದಲ್ಲಿ ಅಭಿಷೇಕ್ , ಇಶಾನ್, ಹೆನ್ರಿಕ್ ಕ್ಲಾಸೆನ್ ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್‌ರಂತಹ ಸ್ಫೋಟಕ ಬ್ಯಾಟ್ಸ್‌ಮನ್‌ಗಳು ಎಲ್ಲರೂ ಒಂದೇ ತಂಡದಲ್ಲಿದ್ದರು.

ಅಭಿಷೇಕ್ ಸ್ಫೋಟಕ ಇನ್ನಿಂಗ್ಸ್

ಎಸ್​ಆರ್​ಹೆಚ್​ ಎ ಮತ್ತು ಎಸ್​ಆರ್​ಹೆಚ್ ಬಿ ತಂಡಗಳ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಎಸ್​ಆರ್​ಹೆಚ್ ಎ ತಂಡದ ಪರ ಇಶಾನ್ ಕಿಶನ್ ಮತ್ತು ಅಭಿಷೇಕ್ ಜೋಡಿ ಇನ್ನಿಂಗ್ಸ್ ಆರಂಭಿಸಿತು. ಆದಾಗ್ಯೂ ಇಶಾನ್ ಕಿಶನ್ 14 ಎಸೆತಗಳಲ್ಲಿ ಕೇವಲ 18 ರನ್‌ಗಳಿಸಿ ಔಟಾದರು. ಇತ್ತ ಅಬ್ಬರದ ಆರಂಭ ಪಡೆದ ಅಭಿಷೇಕ್ ಶರ್ಮಾ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈದರು. ಇದರ ಪರಿಣಾಮವಾಗಿ ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಶತಕದಂಚಿನಲ್ಲಿ ಎಡವಿದ ಅಭಿಷೇಕ್ ಕೇವಲ 42 ಎಸೆತಗಳಲ್ಲಿ 94 ರನ್ ಗಳಿಸಿದರು.

ಅಭಿಷೇಕ್ ಶರ್ಮಾ ಜೊತೆಗೆ ಹೆನ್ರಿಕ್ ಕ್ಲಾಸೆನ್ ಕೂಡ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಇವರಿಬ್ಬರ ಆಟದಿಂದಾಗಿ ಈ ಎಸ್​ಆರ್​ಹೆಚ್ ಎ ತಂಡವು ಕೇವಲ 13 ಓವರ್‌ಗಳಲ್ಲಿ 160 ಕ್ಕಿಂತ ಹೆಚ್ಚು ಸ್ಕೋರ್ ಕಲೆಹಾಕಿತು. ಅಂತಿಮವಾಗಿ 20 ಓವರ್‌ಗಳಲ್ಲಿ ಎಸ್​ಆರ್​ಹೆಚ್ ಎ ತಂಡ 9 ವಿಕೆಟ್​ಗಳ ನಷ್ಟಕ್ಕೆ 253 ರನ್ ಕಲೆಹಾಕಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ 11 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ನವದೆಹಲಿ, ಮಾರ್ಚ್ 21: ಕೇರಳ ವಿಧಾನಸಭಾ ಚುನಾವಣೆಗೆ (Kerala Assembly Elections) ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನೇತೃತ್ವದ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಮಾರ್ಚ್ 18ರಂದು ಸಭೆ ಸೇರಿ ಪಟ್ಟಿಗಳನ್ನು ಬಿಡುಗಡೆ ಮಾಡಿತು. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಸಭೆಯಲ್ಲಿ ಹಾಜರಿದ್ದರು.

ಮಾರ್ಚ್ 16ರಂದು ಬಿಜೆಪಿ ಕೇರಳದ ಮೊದಲ 47 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ನಂತರ ಮಾರ್ಚ್ 19ರಂದು 39 ಹೆಸರುಗಳನ್ನು ಒಳಗೊಂಡ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತು. ಇದುವರೆಗೆ ಬಿಜೆಪಿ 97 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ಇದನ್ನೂ ಓದಿ: ಕೇರಳ ಚುನಾವಣೆಗೆ ಬಿಜೆಪಿಯ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ನೇಮಮ್​ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಇಂದು ಘೋಷಿಸಲಾದ ಬಿಜೆಪಿಯ ಪಟ್ಟಿಯ ಪ್ರಕಾರ, ಬಿಜೆಪಿ ತಿರುವನಂತಪುರಂನಿಂದ ಜಿಲ್ಲಾಧ್ಯಕ್ಷ ಕರಮಣ ಜಯನ್ ಅವರನ್ನು ಕಣಕ್ಕಿಳಿಸಿದೆ. ಅವರು ಎಲ್‌ಡಿಎಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಟ ಸುಧೀರ್ ಕರಮಣ ಮತ್ತು ಯುಡಿಎಫ್ ನಾಯಕ ಸಿ.ಪಿ ಜಾನ್ ಅವರನ್ನು ಎದುರಿಸಲಿದ್ದಾರೆ. ಎಲ್‌ಡಿಎಫ್ ಮಿತ್ರ ಪಕ್ಷವಾದ ಜನಾಧಿಪತ್ಯ ಕೇರಳ ಕಾಂಗ್ರೆಸ್ (ಜೆಕೆಸಿ)ನ ಹಾಲಿ ಶಾಸಕ ಆಂಥೋನಿ ರಾಜು ಅವರನ್ನು ಸಾಕ್ಷ್ಯ ತಿರುಚುವ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಯಿತು.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

ಉದ್ಯಮಿ ಎಸ್ ರಾಜಶೇಖರನ್ ನಾಯರ್ ಅವರನ್ನು ನೆಯ್ಯಟ್ಟಿಂಕರದಿಂದ ಕಣಕ್ಕಿಳಿಸಲಾಗಿದೆ. ಇದಕ್ಕೂ ಮೊದಲು, 2021ರಲ್ಲಿ ಅವರು ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ನಟ ವಿವೇಕ್ ಗೋಪನ್ ಅವರನ್ನು ಪುತ್ತುಪ್ಪಳ್ಳಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಕೇರಳ ವಿಧಾನಸಭಾ ಚುನಾವಣೆಗಳು ಏಪ್ರಿಲ್ 9ರಂದು ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಕೇರಳದ ಎಲ್ಲಾ 140 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version