‘ಕಿರಾತಕ’ ಸುಂದರಿ ಓವಿಯಾ ಈಗೇನು ಮಾಡುತ್ತಿದ್ದಾರೆ? ಇಲ್ಲಿದೆ ವಿವರ

Source link

ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ? – Kannada News | National Investigation Agency Chargesheet Details Alleged Cross Border Role in Pahalgam Attack

ನವದೆಹಲಿ, ಮೇ 21: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್​(Pahalgam)ನಲ್ಲಿ 2025ರ ಏಪ್ರಿಲ್​ನಲ್ಲಿ 26 ಪ್ರವಾಸಿಗರನ್ನು ಬಲಿ ಪಡೆದಿದ್ದ ಭಯೋತ್ಪಾದಕ ದಾಳಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದಲೇ ನಿಯಂತ್ರಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ಚಾರ್ಜ್‌ಶೀಟ್‌ನಲ್ಲಿ ಬಹಿರಂಗಪಡಿಸಿದೆ.

ಲಾಹೋರ್‌ನಿಂದ ರಿಯಲ್-ಟೈಮ್ ಕಮಾಂಡ್ ನೀಡಿದ್ದ ಲಂಗ್ಡಾ
ಲಷ್ಕರ್-ಎ-ತೊಯ್ಬಾ (LeT) ಮತ್ತು ಅದರ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಅಲಿಯಾಸ್ ಸಾಜಿದ್ ಜಟ್ ಅಲಿಯಾಸ್ ‘ಲಂಗ್ಡಾ’ ಈ ದಾಳಿಯ ಮಾಸ್ಟರ್‌ಮೈಂಡ್ ಆಗಿದ್ದ.
ಪಾಕಿಸ್ತಾನದ ಲಾಹೋರ್​​ನಲ್ಲಿ ಕುಳಿತುಕೊಂಡು ಈತ ಭಾರತಕ್ಕೆ ನುಸುಳಿದ್ದ ಮೂವರು ಉಗ್ರರಾದ ಫೈಸಲ್ ಜಟ್, ಹಬೀಬ್ ತಾಹಿರ್ ಮತ್ತು ಹಮ್ಜಾ ಅಫ್ಘಾನಿಗೆ ದಾಳಿ ನಡೆಸಲು ಬೈಸರನ್ ಕಣಿವೆಯ ನೈಜ-ಸಮಯದ ಸ್ಥಳ ಮಾಹಿತಿ ಹಾಗೂ ನಿರ್ದೇಶನಗಳನ್ನು ನೀಡುತ್ತಿದ್ದ.

ಇವರಿಗೆ ಪರ್ವೇಜ್ ಮತ್ತು ಬಶೀರ್ ಎಂಬ ಇಬ್ಬರು ಸ್ಥಳೀಯರು ನೆರವಾಗಿದ್ದರು. ತನಿಖೆಯ ವೇಳೆ ಉಗ್ರರಿಂದ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳನ್ನು ಪಾಕಿಸ್ತಾನದ ಲಾಹೋರ್ ಮತ್ತು ಕರಾಚಿಯಿಂದ ಖರೀದಿಸಿರುವುದು ತಾಂತ್ರಿಕ ತನಿಖೆಯಲ್ಲಿ ಸಾಬೀತಾಗಿದೆ.

ಜಗತ್ತನ್ನು ದಾರಿ ತಪ್ಪಿಸಲು ನೋಡಿದ ಪಾಕಿಸ್ತಾನ

ದಾಳಿಯ ನಂತರ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದಾಗ, ಪಾಕಿಸ್ತಾನವು ಜಗತ್ತನ್ನು ದಾರಿ ತಪ್ಪಿಸಲು ಹೊಸ ನಾಟಕವಾಡಿತ್ತು. ದಾಳಿಯ ಹೊಣೆ ಹೊತ್ತಿದ್ದ ಟೆಲಿಗ್ರಾಮ್ ಚಾನೆಲ್ ಹ್ಯಾಕ್ ಆಗಿತ್ತೆಂದು ಸುಳ್ಳು ಹೇಳಿ, ಇದು ಭಾರತವೇ ಮಾಡಿದ್ದು ಎಂದು ಸುಳ್ಳಿನ ಕತೆ ಹೆಣೆಯಲು ಯತ್ನಿಸಿತು. ಆದರೆ, ಎನ್‌ಐಎ ನಡೆಸಿದ ತಾಂತ್ರಿಕ ತನಿಖೆಯಲ್ಲಿ ಈ ಟೆಲಿಗ್ರಾಮ್ ಚಾನೆಲ್‌ಗಳು ಪಾಕಿಸ್ತಾನದ ರಾವಲ್ಪಿಂಡಿ ಮತ್ತು ಖೈಬರ್ ಪಖ್ತುಂಖ್ವಾದಿಂದಲೇ ಕಾರ್ಯನಿರ್ವಹಿಸುತ್ತಿದ್ದವು ಎಂಬುದು ಪತ್ತೆಯಾಗಿದೆ.

ಮತ್ತಷ್ಟು ಓದಿ: Pahalgam Attack: ಹಸಿರು ಕಣಿವೆಯಲ್ಲಿ ಹರಿಯಿತು ಅಮಾಯಕರ ರಕ್ತ: ವರ್ಷ ಕಳೆದರೂ ಚೇತರಿಸಿಕೊಳ್ಳದ ಪಹಲ್ಗಾಮ್ ಸಂತ್ರಸ್ತ ಕುಟುಂಬಗಳು

ಭಾರತದ ದಿಟ್ಟ ಪ್ರತಿಕಾರ: ಆಪರೇಷನ್ ಸಿಂಧೂರ್
ಈ ಭೀಕರ ಪ್ರವಾಸಿಗರ ಹತ್ಯಾಕಾಂಡಕ್ಕೆ ಭಾರತ ಸುಮ್ಮನೆ ಕುಳಿತುಕೊಳ್ಳಲಿಲ್ಲ. ಈ ದಾಳಿಯು ಭಾರತದ ಅತ್ಯಂತ ರಹಸ್ಯ ಹಾಗೂ ನಿರ್ಣಾಯಕ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ್’ ಅನ್ನು ಪ್ರಚೋದಿಸಿತು. ಭಾರತೀಯ ವಾಯುಪಡೆಯು (IAF) ಅತ್ಯಾಧುನಿಕ ಗ್ಲೈಡ್ ಬಾಂಬ್‌ಗಳು, ಡ್ರೋನ್‌ಗಳು ಮತ್ತು ಅತ್ಯಂತ ಶಕ್ತಿಶಾಲಿ ‘ಬ್ರಹ್ಮೋಸ್’ ಕ್ರೂಸ್ ಕ್ಷಿಪಣಿಗಳ ಮೂಲಕ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಲಷ್ಕರ್-ಎ-ತೊಯ್ಬಾದ ಉಡಾವಣಾ ನೆಲೆಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿತು. ಈ ಮೂಲಕ ಪಾಕಿಸ್ತಾನದ ವಾಯು ರಕ್ಷಣೆ ಮತ್ತು ಪ್ರಮುಖ ಮಿಲಿಟರಿ ಮೂಲಸೌಕರ್ಯಗಳನ್ನು ಭಾರತೀಯ ಸೇನೆ ಯಶಸ್ವಿಯಾಗಿ ದುರ್ಬಲಗೊಳಿಸಿ, ತಕ್ಕ ಪಾಠ ಕಲಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Karnataka Air Quality: ಮಳೆರಾಯನ ಕೃಪೆಯಿಂದ ನಿಟ್ಟುಸಿರು ಬಿಟ್ಟ ಬೆಂಗಳೂರಿಗರು; ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಗಾಳಿಯ ಮಟ್ಟದಲ್ಲಿ ‘ಗ್ರೀನ್ ಜೋನ್’ – Kannada News | Post Rain Karnataka AQI Report: Major Cities See Significant Air Quality Boost

ಬೆಂಗಳೂರು, ಮೇ.21 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಕಡಿಮೆಯಾಗಿದ್ದು, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (Air Quality) ಗಣನೀಯವಾಗಿ ಸುಧಾರಿಸಿದೆ. ಭಾರತೀಯ ವಾಯು ಗುಣಮಟ್ಟ ಸೂಚ್ಯಂಕದ (AQI) ಇಂದಿನ ಅಧಿಕೃತ ವರದಿ ಇಲ್ಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ‘ಉತ್ತಮ’ (Good – AQI 0-50) ಮತ್ತು ‘ಸಮರ್ಪಕ’ (Satisfactory – AQI 51-100) ಮಟ್ಟದಲ್ಲಿದೆ. ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ಜಯನಗರದಂತಹ ಕೈಗಾರಿಕಾ ಹಾಗೂ ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರದೇಶಗಳಲ್ಲೂ ಸಹ ಮಳೆಯ ಕಾರಣದಿಂದಾಗಿ ಗಾಳಿ ಶುದ್ಧವಾಗಿದೆ. ಇಂದು ಬೆಂಗಳೂರಿನ ಸರಾಸರಿ AQI 45 ರಿಂದ 65 ರ ನಡುವೆ ದಾಖಲಾಗಿದೆ.

ಮಂಗಳೂರು, ಉಡುಪಿ ಮತ್ತು ಕಾರವಾರ ಸೇರಿದಂತೆ ಕರಾವಳಿ ಭಾಗದಲ್ಲಿ ಸಮುದ್ರದ ತಂಗಾಳಿ ಮತ್ತು ಮಳೆಯ ಮುನ್ಸೂಚನೆಯಿಂದಾಗಿ ವಾಯು ಗುಣಮಟ್ಟ ಅತ್ಯಂತ ಶ್ರೇಷ್ಠ ಮಟ್ಟದಲ್ಲಿದ್ದು, ಸರಾಸರಿ AQI 35 ರಷ್ಟಿದೆ. ಇನ್ನು ಸಾಂಸ್ಕೃತಿಕ ನಗರಿ ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 50 ರ ಒಳಗೆ ದಾಖಲಾಗುವ ಮೂಲಕ ನಾಗರಿಕರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಹವಾಮಾನ ಇಲಾಖೆ ಇಂದು ಕೂಡ ಭಾರಿ ಮಳೆಯ ಮುನ್ಸೂಚನೆ ನೀಡಿರುವುದರಿಂದ ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ಇದೇ ಶುದ್ಧ ವಾತಾವರಣ ಮುಂದುವರಿಯಲಿದೆ.

ಇದನ್ನೂ ಓದಿ: ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:22 am, Thu, 21 May 26

Source link

‘ಇಡೀ ಕುಟುಂಬ ಶಪಿಸಿತು’; ಜೂ. ಎನ್​​ಟಿಆರ್ ಈ ಸ್ಥಿತಿಗೆ ಪ್ರಶಾಂತ್ ನೀಲ್ ಕಾರಣ – Kannada News | Junior NTR’s Stunning Weight Loss: Prashanth Neel Reveals Film Role Dedication

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (JR NTR) ಇತ್ತೀಚಿನ ದಿನಗಳಲ್ಲಿ ಅತಿಯಾಗಿ ತೆಳ್ಳಗಾಗಿ ಕಾಣಿಸಿಕೊಂಡಿದ್ದಾರೆ. ಇದು ಅವರ ಆರೋಗ್ಯದ ಬಗ್ಗೆ ಸಾಕಷ್ಟು ಆತಂಕ ಮೂಡಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹತ್ತಾರು ಪ್ರಶ್ನೆಗಳು ಎದ್ದಿದ್ದವು. ಆದರೆ, ಅವರು ಈ ರೀತಿ ಬದಲಾಗಲು ಯಾವುದೇ ಅನಾರೋಗ್ಯ ಕಾರಣವಲ್ಲ, ಬದಲಿಗೆ ತಮ್ಮ ಮುಂಬರುವ ಚಿತ್ರದ ಪಾತ್ರಕ್ಕಾಗಿ ಅವರು ಮಾಡಿದ ಕಠಿಣ ಪರಿಶ್ರಮ ಕಾರಣ ಎಂಬ ಅಸಲಿ ರಹಸ್ಯವನ್ನು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈಗ ಬಹಿರಂಗಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಶಾಂತ್ ನೀಲ್, ‘ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸಗಳು ಮುಗಿಸಿ ಶೂಟಿಂಗ್ ಆರಂಭಿಸಲು ನಾವು ಸಿದ್ಧರಾಗಿದ್ದೆವು. ಆ ಸಮಯದಲ್ಲಿ ಜೂನಿಯರ್ ಎನ್​​ಟಿಆರ್ ಅವರಿಗೆ ಒಂದು ಲುಕ್ ಟೆಸ್ಟ್ ಮಾಡಲಾಯಿತು. ಆ ಲುಕ್ ಟೆಸ್ಟ್ ಮುಗಿದ ನಂತರ, ನಾನು ಅವರ ಬಳಿ ಹೋಗಿ, ನೀವು ನಿರ್ವಹಿಸುತ್ತಿರುವ ಹಂತಕ ಪಾತ್ರಕ್ಕೆ ಸ್ವಲ್ಪ ತೆಳ್ಳಗಾದರೆ ಚೆನ್ನಾಗಿರುತ್ತದೆ, ಅದು ಚಿತ್ರಕ್ಕೆ ಸಹಾಯ ಮಾಡುತ್ತದೆ ಎಂದು ಕೇವಲ ಒಂದು ಮಾತು ಹೇಳಿದ್ದೆ’ ಎಂದಿದ್ದಾರೆ.

ನಿರ್ದೇಶಕರು ಹೇಳಿದ ಆ ಒಂದು ಮಾತನ್ನು ಜೂನಿಯರ್ ಎನ್​​ಟಿಆರ್ ಅತ್ಯಂತ ಗಂಭೀರವಾಗಿ ತೆಗೆದುಕೊಂಡರಂತೆ. ‘ಮುಂದಿನ ನಾಲ್ಕು ತಿಂಗಳುಗಳ ಕಾಲ ಅವರು ಶೂಟಿಂಗ್ ಮಾಡದೆ ಕೇವಲ ತೂಕ ಇಳಿಸಿಕೊಳ್ಳುವತ್ತಲೇ ಗಮನ ಹರಿಸಿದರು. ನೋಡನೋಡುತ್ತಿದ್ದಂತೆ ಅವರು ಬರೋಬ್ಬರಿ 15 ರಿಂದ 16 ಕೆಜಿಯಷ್ಟು ತೂಕವನ್ನು ಇಳಿಸಿಕೊಂಡರು. ನೀವು ಬರೆದಿರುವ ಕಥೆಗೆ ಮತ್ತು ನಿಮ್ಮ ಕಲ್ಪನೆಗೆ ತಕ್ಕಂತೆ ನಾನು ಬದಲಾಗುತ್ತೇನೆ ಎಂದು ಹಠಕ್ಕೆ ಬಿದ್ದವರಂತೆ ಜೂನಿಯರ್ ಎನ್​​ಟಿಆರ್ ಪರಿಶ್ರಮ ಪಟ್ಟರು’ ಎಂದು ನೀಲ್ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

ಒಂದು ಹಂತದಲ್ಲಿ ಎನ್​​ಟಿಆರ್ ತುಂಬಾ ಸುಸ್ತಾಗಿ, ಪೇಲವವಾಗಿ ಕಾಣಿಸಲು ಆರಂಭಿಸಿದಾಗ ಪ್ರಶಾಂತ್ ನೀಲ್ ಅವರೇ ಗಾಬರಿಯಾಗಿ, ತೂಕ ಇಳಿಸುವುದನ್ನು ನಿಲ್ಲಿಸುವಂತೆ ಹಲವು ಬಾರಿ ಮನವಿ ಮಾಡಿದ್ದರಂತೆ. ಅಷ್ಟೇ ಅಲ್ಲದೆ, ಎನ್​​ಟಿಆರ್ ಅವರ ಈ ಕಠಿಣ ಡಯಟ್ ನೋಡಿ ಅವರ ಪತ್ನಿ, ತಾಯಿ, ಸ್ನೇಹಿತರು ಹಾಗೂ ಪ್ರಶಾಂತ್ ನೀಲ್ ಅವರ ಇಡೀ ಚಿತ್ರತಂಡವೇ ನೀಲ್ ಅವರ ಮೇಲೆ ಕೋಪ ಮಾಡಿಕೊಂಡಿತ್ತಂತೆ. ಸಿನಿಮಾ ಪಾತ್ರಕ್ಕಾಗಿ ಎನ್​​ಟಿಆರ್ ಅನುಭವಿಸಿದ ಆ ನಾಲ್ಕು ತಿಂಗಳ ಕಷ್ಟ ಮತ್ತು ಅವರಲ್ಲಿದ್ದ ಆ ಹಠ ಬೇರೆಲ್ಲೂ ನೋಡಲು ಸಾಧ್ಯವಿಲ್ಲ ಎಂದು ಪ್ರಶಾಂತ್ ನೀಲ್ ಕೊಂಡಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು? ಇದು ಮಹಿಳೆಯರ ಆರೋಗ್ಯ ಮತ್ತು ಶಕ್ತಿ – Kannada News | Unlocking Strength: Traditional Benefits of Pearl and Coral in Jewellery

ಬೆಂಗಳೂರು, ಮೇ.21: ಮಹಿಳೆಯರ ಸಬಲೀಕರಣಕ್ಕೆ ನವರತ್ನಗಳ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ್​​ ಗುರೂಜಿ ಅವರು ತಿಳಿಸಿದ್ದಾರೆ. ವಿಶೇಷವಾಗಿ ಮಾಂಗಲ್ಯ ಸರದಲ್ಲಿ ಮುತ್ತು ಮತ್ತು ಹವಳ ಧರಿಸುವುದರಿಂದಾಗುವ ಪ್ರಯೋಜನಗಳನ್ನು ವಿವರಿಸಲಾಗಿದೆ. ಮುತ್ತು ಮತ್ತು ಹವಳಗಳು ಮಹಿಳೆಯರ ಆರೋಗ್ಯದ ಏರುಪೇರುಗಳನ್ನು ಸರಿಪಡಿಸಲು, ಮಾನಸಿಕ ಸ್ಥಿತಿಯನ್ನು ಸುಧಾರಿಸಲು, ಧೈರ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ ಎಂದು ನಂಬಲಾಗಿದೆ. ಹವಳವು ಕುಜನ ಪ್ರತೀಕವಾಗಿದ್ದು, ಮುತ್ತು ಚಂದ್ರನ ಪ್ರತೀಕವಾಗಿದೆ. ಈ ರತ್ನಗಳನ್ನು ಧರಿಸುವುದರಿಂದ ನಕಾರಾತ್ಮಕ ಆಲೋಚನೆಗಳು ಕಡಿಮೆಯಾಗಿ, ಎದುರಿಸುವ ಶಕ್ತಿ ಹೆಚ್ಚುತ್ತದೆ. ಧಾರ್ಮಿಕ ಮತ್ತು ವೈಜ್ಞಾನಿಕವಾಗಿ ಈ ರತ್ನಗಳು ಪ್ರಾಮುಖ್ಯತೆಯನ್ನು ಹೊಂದಿವೆ. ಮಾಂಗಲ್ಯ ಸರದಲ್ಲಿ ಈ ರತ್ನಗಳನ್ನು ಧರಿಸಿದಾಗ, ದುಷ್ಟ ಶಕ್ತಿಗಳು ಹತ್ತಿರ ಬರುವುದಿಲ್ಲ ಎಂಬ ನಂಬಿಕೆಯಿದೆ. ಇದು ಸ್ತ್ರೀಯರಿಗೆ ಶಕ್ತಿ ನೀಡುವುದರ ಜೊತೆಗೆ, ತಾಳ್ಮೆ ಮತ್ತು ಸಹನೆಯಿಂದ ಕುಟುಂಬವನ್ನು ನಿರ್ವಹಿಸಲು ಪ್ರೇರೇಪಿಸುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತೆರೆದ ವಾಹನಗಳಲ್ಲಿ ವನ್ಯಜೀವಿ ಸಫಾರಿಗಿ ಬ್ರೇಕ್​​: ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮಹತ್ವದ ಕ್ರಮ – Kannada News | Karnataka Bans Open Top Vehicles For Wildlife Safaris After Dubare Elephant Camp Tragedy

ತೆರೆದ ವಾಹನಗಳಲ್ಲಿ ವನ್ಯಜೀವಿ ಸಫಾರಿಗಿ ಬ್ರೇಕ್Image Credit source: shutterstock.com

ಬೆಂಗಳೂರು, ಮೇ 21: ಆನೆಗಳ ಕಾದಾಟದ ವೇಳೆ ಕುಶಾಲನಗರದ ದುಬಾರೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಮೃತಪಟ್ಟಿರುವ ಬೆನ್ನಲ್ಲೇ ಅರಣ್ಯ ಇಲಾಖೆ ಅಲರ್ಟ್​​ ಆಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತೆರೆದ ವಾಹನಗಳಲ್ಲಿ ನಡೆಸಲಾಗುತ್ತಿದ್ದ ವನ್ಯಜೀವಿ ಸಫಾರಿಗಳಿಗೆ ಬ್ರೇಕ್​​ ಹಾಕಿದೆ. ಇನ್ನುಮುಂದೆ ತೆರೆದ ವಾಹನಗಳನ್ನು ಸಫಾರಿಗೆ ಬಳಸಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳು ಸೇರಿದಂತೆ ಇತರ ಸಂರಕ್ಷಿತ ಪ್ರದೇಶಗಳಲ್ಲಿ ಈಗಲೂ ತೆರೆದ ಜೀಪ್‌ಗಳಲ್ಲಿ ಸಫಾರಿ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧಾರದಲ್ಲಿ, ಈ ವಿಷಯವನ್ನು ಕರ್ನಾಟಕದ ಮುಖ್ಯ ವನ್ಯಜೀವಿ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚಿಸಿರೋದಾಗಿಯೂ ಸಚಿವ ಈಶ್ವರ್​​ ಖಂಡ್ರೆ ತಿಳಿಸಿದ್ದಾರೆ.

ಮುಖ್ಯಾಂಶಗಳು

  • ಸಫಾರಿ ನಿಯಮಗಳಲ್ಲಿ ಕೆಲ ಬದಲಾವಣೆ ಮಾಡಿದ ಅರಣ್ಯ ಇಲಾಖೆ
  • ದುಬಾರೆ ಘಟನೆ ಬೆನ್ನಲ್ಲೇ ತೆರೆದ ವಾಹನಗಳಲ್ಲಿ ಸಫಾರಿಗೆ ಬಿತ್ತು ಬ್ರೇಕ್​​
  • ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ಎಂದ ಸಚಿವ ಈಶ್ವರ್​​ ಖಂಡ್ರೆ

ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡುತೆರೆದ ವಾಹನಗಳ ಬದಲು ಉಕ್ಕಿನ ಕಂಬಿಗಳಿಂದ ಬಲಪಡಿಸಿದ ಟಫೆಂಡ್ ಗ್ಲಾಸ್ ಹೊಂದಿದ ಮುಚ್ಚಿದ ವಾಹನಗಳನ್ನು ಸಫಾರಿಗೆ ಬಳಸಲು ತೀರ್ಮಾನಿಸಿದ್ದೇವೆ. ರಾಜ್ಯದ ವಿವಿಧ ಭಾಗಗಳು ಮತ್ತು ವಿದೇಶಗಳಿಂದ ನಮ್ಮ ಸಂರಕ್ಷಿತ ಪ್ರದೇಶಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿರೋದಾಗಿ ಸಚಿವ ಖಂಡ್ರೆ ಹೇಳಿದ್ದಾರೆ. ಎಲ್ಲಾ ಸಫಾರಿ ವಾಹನಗಳಲ್ಲಿ ಪ್ರಥಮ ಚಿಕಿತ್ಸೆ ಪೆಟ್ಟಿಗೆ ಕಡ್ಡಾಯವಾಗಿರಬೇಕು ಮತ್ತು ತುರ್ತು ಪರಿಸ್ಥಿತಿಗೆ ಸಫಾರಿ ಕೇಂದ್ರಗಳ ಬಳಿ ಆಂಬುಲೆನ್ಸ್ ವ್ಯವಸ್ಥೆ ಇರಬೇಕು ಎಂದು ನಿರ್ದೇಶನ ನೀಡಲಾಗಿರುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಎರಡೆರಡು ಬಾರಿ ಸೆರೆ, ಮನೆಗಳ ಬಾಗಿಲು ಮುರಿದು ಪುಂಡಾಟ; ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ

ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ದುಬಾರೆ ಸಾಕಾನೆ ಶಿಬಿರದಲ್ಲಿ ಕಂಜನ್​​ ಮತ್ತು ಮಾರ್ತಾಂಡ ಆನೆಗಳನ್ನು ಕಾವೇರಿ ನದಿಗೆ ಸ್ನಾನಕ್ಕೆಂದು ಮಾವುತರು ಕರೆತಂದಿದ್ದರು. ಈ ವೇಳೆ ಕಂಜನ್​​ ಆನೆ ಮಾರ್ತಾಂಡನ ಮೇಲೆ ದಾಳಿ ಮಾಡಿದ್ದು, ಉಭಯ ಆನೆಗಳು ಪರಸ್ಪರ ಕಾದಾಡಿಕೊಂಡಿದ್ದವು. ಇವುಗಳ ನಡುವೆ ಸಿಲುಕಿದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದರು. ಆ ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಮಾರ್ತಾಂಡ ಆನೆ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಿನ ಭವಿಷ್ಯ: ಇಂದು ಅಪರೂಪದ ಗಜಕೇಸರಿ ಯೋಗ! ಯಾರಿಗೆ ಒಲಿಯಲಿದೆ ರಾಯರ-ಸಾಯಿಬಾಬಾ ಕೃಪೆ?

ಬೆಂಗಳೂರು, ಮೇ,21: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಇಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ ಮತ್ತು ಪುನರ್ವಸು ನಕ್ಷತ್ರ, ಗಂಡ ಯೋಗ, ಬಾಲವ ಕರಣ ಇವೆ. ಈ ದಿನದ ರಾಹುಕಾಲ ಮಧ್ಯಾಹ್ನ 1:50 ರಿಂದ 3:26 ರವರೆಗೆ ಇದ್ದರೆ, ಶುಭಕಾಲ ಬೆಳಗ್ಗೆ 12:16 ರಿಂದ ಮಧ್ಯಾಹ್ನ 1:50 ರವರೆಗೆ ಇರುತ್ತದೆ. ರವಿ ವೃಷಭ ರಾಶಿಯಲ್ಲಿ, ಚಂದ್ರ ಕರ್ಕಾಟಕ ರಾಶಿಯ ಪುನರ್ವಸು ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಇದು ಗಜಕೇಸರಿ ಯೋಗವನ್ನು ಸೃಷ್ಟಿಸಿದ್ದು, ಈ ದಿನವು ರಾಯರ ಆರಾಧನೆ, ಸಾಯಿಬಾಬಾ ಆರಾಧನೆ ಹಾಗೂ ವಿದ್ಯೆ ಕಲಿಸಿದ ಗುರುಗಳ ಆರಾಧನೆಗೆ ಅತ್ಯಂತ ಪರ್ವಕಾಲವಾಗಿದೆ. ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭ ಹಾರೈಸಲಾಗಿದೆ. ಡಾ. ಗುರೂಜಿ ಅವರು ಪ್ರತಿ ರಾಶಿಯವರಿಗೆ ಗ್ರಹಗಳ ಶುಭಫಲ, ವೃತ್ತಿ, ಹಣಕಾಸು, ಆರೋಗ್ಯ, ಸಂಬಂಧಗಳು, ವಾಹನ ಯೋಗ, ಪ್ರಯಾಣ, ಉದ್ಯೋಗಾವಕಾಶಗಳು, ಹಾಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ಮಾಹಿತಿ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಜಿ ಪ್ರಧಾನಿ ದೇವೇಗೌಡರ ಬೆಂಗಳೂರು ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಬೆಂಗಳೂರು, ಮೇ 21: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಪ್ರಮೋದ್ ಸಾವಂತ್ ಅವರು ದೇವೇಗೌಡರ ಆರೋಗ್ಯ ಕುಶಲೋಪರಿಯನ್ನ ವಿಚಾರಿಸಿದ್ದಾರೆ. ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯವನ್ನೂ ಕೋರಿದ್ದಾರೆ. ರಾಜಕೀಯ ವಲಯದಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Weather Report: ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ! – Kannada News | Karnataka Weather Update: IMD Predicts Heavy Rain, Thunderstorms, Yellow Alert for Coastal and Malnad Regions

ಬೆಂಗಳೂರು, ಮೇ 21: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್

ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಆಕಾಶ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುಂಗಾರು ಮೇ 26 ಕ್ಕೆ ಕೇರಳ ಪ್ರವೇಶಿಸುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:04 am, Thu, 21 May 26

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಅಹಂಕಾರಕ್ಕೆ ಪೆಟ್ಟುಬೀಳಿಸುವರು – Kannada News | Horoscope May 21 Thursday 2026; Dina Rashi Bhavishya Today, Checkout the details here

ಮೇಷ ರಾಶಿ :

ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ಉತ್ತಮ ಮನೋಭಾವವನ್ನು ಹೊಂದುವಿರಿ. ನಿಮ್ಮವರು ನಿಮಗೆ ಕೆಲವು ಕಿವಿಮಾತನ್ನು ಹೇಳಬಹುದು. ದುರ್ಬಲತೆಯ ಸಮಯದಲ್ಲೂ ಧೈರ್ಯವಿರಲಿ. ಇಂದು ಕಾರ್ಯಕ್ಷಮತೆ ಹೆಚ್ಚಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಜವಾಬ್ದಾರಿಯುತ ಕ್ರಮ ತೆಗೆದುಕೊಳ್ಳಿ. ಇಂದು ಸಂಗಾತಿಯು ನಿಮ್ಮ ಸಂತೋಷವನ್ನು ಹೆಚ್ಚಿಸಬಹುದು. ಅಚ್ಚರಿ ಉಡುಗೊರೆಯೊಂದು ಸಿಗುವ ಸಾಧ್ಯತೆ ಇದೆ. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು.

ವೃಷಭ ರಾಶಿ :

ಇಂದು ಹೊಸ ಮನೆಯ ಖರೀದಿಯೇ ನಿಮಗೆ ಉತ್ತಮ ಎನಿಸಬಹುದು. ಆಂತರಿಕ ಆಳದ ಬಲ ನಿಮ್ಮನ್ನು ಪ್ರಭಾವಶಾಲಿಯಾಗಿ ಉಳಿಸುತ್ತದೆ. ನಿಮ್ಮ ಮಾತಿಗೆ ಅಪರಿಚಿತರ ಬೆಂಬಲವೂ ಸಿಗಲಿದೆ. ಉದ್ಯೋಗದಲ್ಲಿ ಸೃಜನಶೀಲತೆಗೆ ಸ್ಪಷ್ಟತೆ ತರಲು ಇಂದಿನ ದಿನ ಪೂರಕವಾಗಿದೆ. ಯಾವುದನ್ನೂ ಕೃತಕವಾಗಿ ತೋರಿಸಲು ಹೋಗುವುದು ಬೇಡ. ಸಹಜತೆಯು ನಿಮ್ಮ ಸ್ವಭಾವವಾಗಿರಲಿ. ಸಂಗಾತಿಯ ಸ್ವಭಾವವನ್ನು ಸುಲಭದಿಂದ ತಿಳಿಯಲು ಸಾಧ್ಯವಾಗದು.

ಮಿಥುನ ರಾಶಿ :

ನಿಮ್ಮನ್ನು ತಾತ್ಸಾರ ಮಾಡುತ್ತಿದ್ದಾರೆ ಎಂಬ ಭಾವನೆ ಮೂಡುವುದು. ಹವ್ಯಾಸಗಳಲ್ಲಿ ಸಮಾನತೆ ಹೊಂದಿದರೆ ಪ್ರೀತಿ ಬೆಳೆದುಹೋಗುತ್ತದೆ. ಕೃಷಿಯ ಕೆಲಸದಲ್ಲಿ ಅನುಭವಿಗಳನ್ನು ಜೋಡಿಸಿಕೊಳ್ಳಿ. ಪ್ರಯಾಣ ನಿಮಗೆ ಆಧ್ಯಾತ್ಮಿಕ ಮತ್ತು ಮನರಂಜನೆಯ ಅನುಭವ ನೀಡುತ್ತದೆ. ಇನ್ನೊಬ್ಬರಿಗೆ ಕೊಡುವ ಸಮಯವಿದ್ದರೆ ಒಪ್ಪಿಕೊಳ್ಳಿ. ಸಮಯ ವ್ಯಾಪಾರಿಗಳಿಗೆ ಅನುಕೂಲಕರವಾಗಿಲ್ಲ. ಇಂದು ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಮಕ್ಕಳ ಮೇಲೆ ಪ್ರೀತಿ ಅಧಿಕವಾಗುವುದು.

ಕರ್ಕಾಟಕ ರಾಶಿ :

ಬೇಕಾದಷ್ಟು ಮಾಡಲು ಕೆಲಸಗಳಿದ್ದರೂ ಮಾಡದೇ ಸಮಯವನ್ನು ಹಾಳುಮಾಡುವಿರಿ. ನೈಜತೆಯನ್ನು ಮರೆಯಬೇಡಿ. ಕಲ್ಪನೆ ಮತ್ತು ಭಾವನೆಗಳು ಜತೆಯಾಗಿ ಕೆಲಸ ಮಾಡಲಿ. ಉದ್ಯೋಗದಲ್ಲಿ ನೂತನ ಕಲಿಕೆಗಳು ಸಿಗುತ್ತವೆ. ಆರೋಗ್ಯದಲ್ಲಿ ನೀರಿನ ಸೇವನೆ ಹೆಚ್ಚಿಸಬೇಕು. ನೀವು ದೀರ್ಘಕಾಲದವರೆಗೆ ಕೆಲಸದಲ್ಲಿ ಹೆಚ್ಚಿನ ಯಶಸ್ಸನ್ನು ಗಳಿಸಲಿಲ್ಲ, ಆದರೆ ಇಂದು ನೀವು ನಿಮ್ಮ ಅತ್ಯುತ್ತಮವಾದದನ್ನು ನೀಡುವ ಮೂಲಕ ಎಲ್ಲರನ್ನು ಆಶ್ಚರ್ಯಗೊಳಿಸುತ್ತೀರಿ.

ಸಿಂಹ ರಾಶಿ :

ಉಲ್ಲಾಸ ಮತ್ತು ಸಂತೋಷಗಳು ಎಂದಿಗಿಂತ ಹೆಚ್ಚು ಇರಲಿದೆ. ನಿಮಗಿಷ್ಟವಾದ ಸಮಾರಂಭಕ್ಕೆ ಭೇಟಿ ಕೊಡುವಿರಿ. ಆಪ್ತರನ್ನು ಭೇಟಿಯಾಗುವಿರಿ. ಅಧಿಕಾರವನ್ನು ಬಳಸಿಕೊಳ್ಳುವ ಆಲೋಚನೆ ಸರಿಯಾದುದಲ್ಲ. ಏಕಾಂಗಿಯಾಗಿ ಜೀವನವನ್ನೂ ನಿಭಾಯಿಸಬಹುದು ಎಂಬ ಬಲದ ಅರಿವು ಬರಲಿದೆ. ನಿಮ್ಮವರಿಂದ ಇಂದು ಯಾವುದನ್ನೂ ನಿರೀಕ್ಷಿಸದೇ ಇದ್ದರೂ ತಾನಾಗಿಯೇ ಬಂದು ಒದಗುವುದು. ತಪ್ಪು ಹಾದಿಗೆ ಯಾರಿಂದಲಾದರೂ ಪ್ರೇರಣೆ ಸಿಗಲಿದೆ.

ಕನ್ಯಾ ರಾಶಿ :

ಹೆಚ್ಚು ಮಾತನಾಡಿ ಇನ್ನೊಂದಕ್ಕೆ ವಿವಾದಕ್ಕೆ ನಾಂದಿ ಹಾಡಬೇಡಿ. ಭವಿಷ್ಯದ ಕುರಿತು ಅತಿಯಾದ ಚಿಂತನೆಯನ್ನು ಮಾಡಲಿದ್ದೀರಿ. ಸ್ಥಿತಿಗತಿಗಳ ಒತ್ತಡ ನಿಮ್ಮ ಮನಸ್ಸನ್ನು ಹಿಂಡಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ನಿರ್ಣಯಗಳು ಮುಂದಿನ ಪ್ರಗತಿಗೆ ಕಾರಣವಾಗಬಹುದು. ನಿಮಗೆ ಮಕ್ಕಳು ನೆಮ್ಮದಿ ಕೊಡುವರು ಎಂಬ ಸಮಾಧಾನ ಕಾಣಿಸುವುದು. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ನಿಮ್ಮ ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ.

ತುಲಾ ರಾಶಿ :

ನಿಮಗೆ ಅಪಮಾನ ಮಾಡಲು ಪಿತೂರಿಗಳನ್ನು ನಡೆಸಬಹುದು. ನೀವು ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿಡಿ. ವೇತನವನ್ನು ಹೆಚ್ಚು ಮಾಡಿಕೊಳ್ಳಲು ನಿಮಗೆ ದಾರಿ ಕಾಣಲಿದೆ. ಅಸ್ಪಷ್ಟವಾದ ವಿಚಾರಗಳನ್ನು ತಿಳಿಯುವ ಕುತೂಹಲ ನಿಮಗೆ. ಜೀವನದಲ್ಲಿ ದೃಷ್ಟಿಕೋನ ಬದಲಿಸಿದರೆ ಸಂತೋಷವಿದೆ. ನೆರೆಹೊರೆಯರ ಜೊತೆ ಹೊಂದಾಣಿಕೆಯ ಮನಃಸ್ಥಿತಿಯಲ್ಲಿಯೇ ಇರಬೇಕಾಗುವುದು. ಅತಿಯಾದ ಲೋಭವು ನಿಮ್ಮ ಕಾರ್ಯವನ್ನು ಹಾಳು ಮಾಡುವುದು. ಸಮಯಪಾಲನೆಯಿಂದ ನಿಮ್ಮ ಕೆಲಸಗಳು ಸರಿಯಾಗುವುದು.

ವೃಶ್ಚಿಕ ರಾಶಿ :

ಇಂದು ನಿಮ್ಮ ಖಾಲಿ ಮನಸ್ಸಿಗೆ ಸಲ್ಲದ ಆಲೋಚ‌ನೆಗಳು ಒಂದೊಂದಾಗಿಯೇ ಬರಬಹುದು. ಸುಮ್ಮನೇ ಕುಳಿತುಕೊಳ್ಳುವುದು ಬೇಡ. ಏನಾದರೂ ಕಾರ್ಯವನ್ನು ಮಾಡುತ್ತಲೇ ಇರಿ. ನಿಮ್ಮೊಳಗಿನ ಆಸೆಯು ಪ್ರಿಯತೆಯನ್ನು ತಣಿಸುತ್ತದೆ. ಹಣಕಾಸಿನಲ್ಲಿ ಲಾಭ, ಅದೇ ಕಾರಣಕ್ಕೆ ಸಹೋದ್ಯೋಗಿಗಳಿಂದ ದೂರವಿರಲು ಪ್ರಯತ್ನಿಸಿ. ನಿಮ್ಮ ಕಾರ್ಯದ ವೇಗವು ಹೆಚ್ಚುವ ಅವಶ್ಯಕತೆ ಇದೆ. ಮಹಿಳೆಯ ಕಾರಣದಿಂದ ನಿಮಗೆ ಧನನಷ್ಟವು ಆಗಬಹುದು. ಭೂಮಿಯನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನವೂ ಸಫಲ.

ಧನು ರಾಶಿ :

ನಿದ್ರಾಹೀನತೆಯಿಂದ ಕೆಲಸದಲ್ಲಿ ಸ್ವಲ್ಪ ಆಲಸ್ಯವೂ ಇರಲಿದೆ. ಸಂಗಾತಿಯ ಜೊತೆ ದೂರಪ್ರಯಾಣ ಮಾಡಬಹುದು. ಪ್ರೀತಿಯ ಹೊಸ ಆಯಾಮಕ್ಕೆ ಹೆಜ್ಜೆ ಹಾಕಿ. ಗಾಂಭೀರ್ಯದಿಂದ ಇರಲು ಹೆಚ್ಚು ಸಮಯ ಆಗದು. ಭಾವನೆಗಳಲ್ಲಿ ಭಾರವಿದ್ದರೆ ಏಕಾಂತ ಬೇಕು. ಕುಟುಂಬದ ಬೆಂಬಲ ನಿಮ್ಮ ಶಕ್ತಿ ಆಗಲಿದೆ. ಯಾರದೋ ಕಾರಣಕ್ಕೆ ನೀವು ಓಡಾಟ ಮಾಡಬೇಕಾಗುವುದು. ಅಂದುಕೊಂಡ ಕೆಲಸವನ್ನು ಪೂರೈಸಲು ನಿಮಗೆ ಸಮಸ್ಯೆಯು ಬರಬಹುದು.

ಮಕರ ರಾಶಿ :

ಒತ್ತಡಕ್ಕೆ ಸಿಲುಕದೇ ಆಪ್ತರ ಜೊತೆ ಸಮಾಲೋಚನೆ ಮಾಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ನೀತಿಯ ಜೊತೆಗಿನ ನಡಿಗೆ ಕಷ್ಟಕರವಾಗಬಹುದು. ಸಾಲಕೊಟ್ಟ ಹಣವು ನಿಮಗೆ ಸಿಗಲಿದೆ. ನಿರೀಕ್ಷೆಗಳಿಲ್ಲದ ಸಂಬಂಧಗಳು ನೆಮ್ಮದಿಯನ್ನು ಕೊಡುತ್ತವೆ. ಏಕಾಗ್ರತೆಯ ಕೊರತೆ ಕಾಣಲಿದೆ. ಮನೆಯಲ್ಲಿ ಹಬ್ಬದ ವಾತಾವರಣವು ಇರಲಿದೆ. ಇಂದು ನಿಮಗೆ ಕೇಳುವ ಪ್ರಶ್ನೆಗಳಿಗೆ ಉತ್ತರವನ್ನು ಕೊಡಲಾರಿರಿ. ಧನವು ನಷ್ಟವಾದ ವಿಚಾರಗಳನ್ನು ಯಾರ ಬಳಿಯೂ ಹೇಳಲಾರಿರಿ.

ಕುಂಭ ರಾಶಿ :

ಇಂದು ಅನಿರೀಕ್ಷಿತವಾಗಿ ನೀವಿರುವ ವಾತಾವರಣವು ನಿಮಗೆ ಹಾಯೆನಿಸಬಹುದು. ಯಾರ ಜೊತೆ ಬೆರೆಯಬೇಕು ಎನ್ನುವುದು ನಿಮ್ಮ ಬುದ್ಧಿಗೆ ಬಿಟ್ಟಿದ್ದು. ಪ್ರೀತಿಗೆ ಮುಕ್ತ ಮನಸ್ಸು ಅಗತ್ಯ. ಸಂಪರ್ಕ ಹೊಂದುವ ಪ್ರತಿಯೊಬ್ಬರಿಗೂ ಶ್ರದ್ಧೆಯಿಂದ ವರ್ತಿಸಿ. ಪತಿಯ ಪ್ರೀತಿ ಇಂದು ಸಿಗಲಿದೆ. ಇಂದಿನ ದುಡಿಮೆಯು ಕಷ್ಟವೆನಿಸಬಹುದು. ನೋವಿಗೆ ಸ್ಪಂದಿಸುವ ಸ್ವಭಾವವು ನಿಮಗೆ ಇಷ್ಟವಾಗುವುದು. ಬಂಧುಗಳ ಮಾತು ನಿಮಗೆ ಕಿರಿಕಿರಿ ತರಿಸಬಹುದು. ನಿಮ್ಮ ಸೌಂದರ್ಯಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ.

ಮೀನ ರಾಶಿ :

ಇಂದು ನಿಮಗೆ ಕೆಲವು ವಿಚಾರದಲ್ಲಿ ತಿಳಿವಳಿಕೆ ಬಂದು ಅದನ್ನು ವಿವೇಕದಿಂದ ನೋಡುವಿರಿ. ಇಂದು ನಡೆಯುವ ನಕಾರಾತ್ಮಕ ವಾರ್ತೆಯನ್ನು ಲೆಕ್ಕಿಸದೇ ನಿಮ್ಮ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಮೋಸದ ಅನುಭವದಿಂದ ಪಾಠ ಕಲಿಯಿರಿ. ಬಾಂಧವ್ಯದ ಶೈಥಿಲ್ಯವನ್ನು ಗಟ್ಟಿ ಮಾಡಿಕೊಳ್ಳಬೇಕಿದೆ. ನಿಮ್ಮ ಅಧ್ಯಯನ ಶೀಲತೆಯಲ್ಲಿ ಹಿನ್ನಡೆ ಆಗಿರುವುದು ನಿಮ್ಮ ಅರಿವಿಗೆ ಬರಲಿದೆ. ವ್ಯಾಪಾರಿಯಾಗಿದ್ದರೆ ಇಂದು ನೀವು ದೊಡ್ಡ ವ್ಯವಹಾರ ವಹಿವಾಟು ಸಿಗಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪುಷ್ಯಾ, ಯೋಗ : ಶೂಲಿ, ಕರಣ : ಕೌಲವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:57 – 15:33, ಯಮಗಂಡ ಕಾಲ 05:57 – 07:33, ಗುಳಿಕ ಕಾಲ 09:09 – 10:45

-ಲೋಹಿತ ಹೆಬ್ಬಾರ್-8762924271 (what’s app only)

Source link

Exit mobile version