ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಹಬ್ಬದ ಸಂದರ್ಭದಲ್ಲಿ ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 21: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ಕಚ್ಛಾ ತೈಲ ಪೂರೈಕೆಯಲ್ಲಿ ಮಾತ್ರ ಸಮಸ್ಯೆಯಾಗಿಲ್ಲ. ಪ್ಲಾಸ್ಟಿಕ್, ಫೈಬರ್, ಐರನ್​​ ಮತ್ತು ಇತರೆ ಲೋಹಗಳ ಸರಬರಾಜಿನಲ್ಲೂ ವ್ಯತ್ಯಯವಾಗಿದೆ. ಇದ್ರಿಂದ ಆಟೋಮೊಬೈಲ್​​ ಇಂಡಸ್ಟ್ರಿಗೂ ಬಿಸಿ ತಟ್ಟಿದೆ. ಮುಂದಿನ ವಾರದ ಬಳಿಕ ಕಾರು ಹಾಗೂ ಬೈಕ್​​ಗಳ ದರ ಶೇಕಡ 10ರಿಂದ 15ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಪ್ರತಿ ಕಾರುಗಳ ಮೇಲೆ 40ರಿಂದ 50ಸಾವಿರದಷ್ಟು ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ. ಮಾರುತಿ ಸುಜಕಿ, ಟಾಟಾ ಮೋಟಾರ್ಸ್, ಮಹೀಂದ್ರಾ, ಕಿಯಾ, ಮರ್ಸಿಡಿಸ್​​​ ಬೆಂಜ್​ನಂತಹ ಕಂಪನಿಗಳು ಕೂಡ ಬೆಲೆ ಹೆಚ್ಚಿಸಲು ಪ್ಲ್ಯಾನ್ ಮಾಡಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

2027 ರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾದಲ್ಲಿ ಯಾರಿಗೆಲ್ಲಾ ಸ್ಥಾನ?

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ (T20 World Cup) ಗೆದ್ದಿರುವ ಟೀಂ ಇಂಡಿಯಾದ (Team India) ಮುಂದಿನ ಗುರಿ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ (2027 World Cup) ಗೆಲ್ಲುವುದಾಗಿದಾಗಿದೆ. ಇದಕ್ಕೆ ಪೂರಕವಾಗಿ ಟಿ20 ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಹೆಡ್ ಕೋಚ್ ಗೌತಮ್ ಗಂಭೀರ್, ಐಪಿಎಲ್ ಮುಗಿದ ಬಳಿಕ ಏಕದಿನ ವಿಶ್ವಕಪ್‌ಗೆ ಸಿದ್ಧತೆಗಳು ಪ್ರಾರಂಭವಾಗಲಿವೆ ಎಂದಿದ್ದರು. ಆದರೆ ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ, ಐಪಿಎಲ್​ಗೂ ಮುನ್ನವೇ ತನ್ನ ತಯಾರಿಯನ್ನು ಶುರು ಮಾಡಿದೆ. ಅದರಂತೆ ಆಯ್ಕೆ ಸಮಿತಿಯು 2027ರ ಏಕದಿನ ವಿಶ್ವಕಪ್​ಗಾಗಿ 20 ಆಟಗಾರರ ಕಿರುಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ವರದಿಯಾಗಿದೆ. ಹಾಗಿದ್ದರೆ ಆ 20 ಆಟಗಾರರ ಪಟ್ಟಿಯಲ್ಲಿ ಯಾರ್ಯಾರಿಬಹುದು? ಎಂಬುದನ್ನು ನೋಡುವುದಾದರೆ..

ಮಾರ್ಚ್ 28 ರಂದು ಪ್ರಾರಂಭವಾಗುವ ಐಪಿಎಲ್‌ನಿಂದಾಗಿ ಭಾರತ ತಂಡವು ಎರಡು ತಿಂಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಿರಲಿದೆ. ಅದರ ನಂತರ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮರಳಲಿದೆ. ಮುಂದಿನ ವರ್ಷ ಏಕದಿನ ವಿಶ್ವಕಪ್ ಇರುವ ಕಾರಣ, ಈ ಮಾದರಿಯ ಸರಣಿಗೆ ಬಿಸಿಸಿಐ ಹೆಚ್ಚು ಒತ್ತು ನೀಡಲಿದೆ. ಆದರೆ, ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಏಕದಿನ ವಿಶ್ವಕಪ್‌ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದ್ದ ಆಟಗಾರರಿಗೆ ನಿರಾಸೆ ಎದುರಾಗಿದೆ. ಏಕೆಂದರೆ ಆಯ್ಕೆದಾರರು ಈಗಾಗಲೇ ಏಕದಿನ ವಿಶ್ವಕಪ್‌ಗೆ 20 ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಈ 20 ಆಟಗಾರರಲ್ಲಿ ಯಾರು ಉತ್ತಮ ಪ್ರದರ್ಶನ ನೀಡುತ್ತಾರೋ ಅವರು ಪ್ಲೇಯಿಂಗ್ 11 ನಲ್ಲಿ ಸ್ಥಾನ ಪಡೆಯಲಿದ್ದಾರೆ.

ಈ ಆಟಗಾರರಿಗೆ ತಂಡದಲ್ಲಿ ಸ್ಥಾನ?

ಈಗ ಪ್ರಶ್ನೆಯೆಂದರೆ ಆಯ್ಕೆ ಮಂಡಳಿ ಸಿದ್ಧಪಡಿಸಿರುವ 20 ಆಟಗಾರರ ಪಟ್ಟಿಯಲ್ಲಿ ಯಾರ್ಯಾರಿಬಹುದು ಎಂಬುದು. ಸಧ್ಯಕ್ಕೆ ಆ 20 ಆಟಗಾರರ ಹೆಸರುಗಳನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ. ಆದರೆ ಕಳೆದ ಕೆಲವು ತಿಂಗಳುಗಳಿಂದ ಟೀಮ್ ಇಂಡಿಯಾದ ಏಕದಿನ ಸರಣಿ ಮತ್ತು ಈ ಸ್ವರೂಪದಲ್ಲಿರುವ ಸಾಮಾನ್ಯ ಆಟಗಾರರನ್ನು ಪರಿಗಣಿಸಿದರೆ, ಊಹಿಸುವುದು ಕಷ್ಟವೇನಲ್ಲ. ನಾಯಕನಾಗಿರುವ ಶುಭ್​ಮನ್ ಗಿಲ್ ಹಾಗೂ ಉಪನಾಯಕನಾಗಿರುವ ಶ್ರೇಯಸ್ ಅಯ್ಯರ್ ತಂಡದಲ್ಲಿರುವುದು ಖಚಿತ. ಹಾಗೆಯೇ ಅನುಭವಿಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೂಡ ತಂಡದಲ್ಲಿ ಇರುತ್ತಾರೆ.

ಇವರಲ್ಲದೆ, ನಿಯಮಿತ ಏಕದಿನ ವಿಕೆಟ್ ಕೀಪರ್ ಕೆಎಲ್ ರಾಹುಲ್, ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ವೇಗಿ ಜಸ್ಪ್ರಿತ್ ಬುಮ್ರಾ ಮತ್ತು ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವುದು ಖಚಿತವಾಗಿದೆ. ಇವರ ಜೊತೆಗೆ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರರ್ಥ ಕಳೆದ ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ ವೃತ್ತಿಜೀವನ ಮುಗಿದಿದೆ ಎನ್ನಬಹುದು.

ಸ್ಪಿನ್ ವಿಭಾಗದಲ್ಲಿ ಯಾರು?

ಸ್ಪಿನ್ ವಿಭಾಗದಲ್ಲಿ, ಕುಲ್ದೀಪ್ ಜೊತೆಗೆ ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ತಂಡದಲ್ಲಿ ಇರುತ್ತಾರೆ ಎಂದು ನಿರೀಕ್ಷಿಸಲಾಗಿದೆ. ರವೀಂದ್ರ ಜಡೇಜಾ ಅವರ ಸೇರ್ಪಡೆಯ ಬಗ್ಗೆ ಪ್ರಶ್ನೆ ಉಳಿದಿದೆ. ಆದಾಗ್ಯೂ, ಅವರ ಅನುಭವವನ್ನು ಗಮನಿಸಿದರೆ, ಅವರು 20 ಜನರ ಪಟ್ಟಿಯಲ್ಲಿ ಸ್ಥಾನ ಪಡೆಯುವುದು ಖಚಿತ. ಯಶಸ್ವಿ ಜೈಸ್ವಾಲ್ ಮತ್ತು ಅಭಿಷೇಕ್ ಶರ್ಮಾ ಅವರನ್ನು ಬ್ಯಾಕಪ್ ಆರಂಭಿಕ ಆಟಗಾರರೆಂದು ಪರಿಗಣಿಸಬಹುದು. ಆದಾಗ್ಯೂ, ಬ್ಯಾಕಪ್ ವಿಕೆಟ್ ಕೀಪರ್​ಗಾಗಿ ಪೈಪೋಟಿ ತೀವ್ರವಾಗಿದ್ದು, ರಿಷಭ್ ಪಂತ್, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಪಂತ್ ಮತ್ತು ಇಶಾನ್ 20 ಜನರ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

2027 ರ ಏಕದಿನ ವಿಶ್ವಕಪ್​ಗೆ ಈಗಲೇ 20 ಆಟಗಾರರ ಪಟ್ಟಿ ಸಿದ್ಧಪಡಿಸಿದ ಬಿಸಿಸಿಐ

ಆ 20 ಆಟಗಾರರು ಇವರೇ..

ಶುಭ್​ಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ಇಶಾನ್ ಕಿಶನ್, ಅಭಿಷೇಕ್ ಶರ್ಮಾ, ರವೀಂದ್ರ ಜಡೇಜಾ, ಸಂಜು ಸ್ಯಾಮ್ಸನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತದ ಧಾರ್ಮಿಕ ಸ್ವಾತಂತ್ರ್ಯದ ಕುರಿತ USCIRF ವರದಿಗೆ 275 ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳಿಂದ ವಿರೋಧ

ಬೆಂಗಳೂರು, ಮಾರ್ಚ್ 21: ಭಾರತದ ಬಗ್ಗೆ ಅಮೆರಿಕದ ಸ್ವತಂತ್ರ ಸಂಸ್ಥೆಯಾದ USCIRF (ಯುನೈಟೆಡ್ ಸ್ಟೇಟ್ಸ್ ಕಮಿಷನ್ ಫಾರ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್) ನೀಡಿದ ವರದಿಯನ್ನು ಭಾರತದ ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು, ಮಿಲಿಟರಿ ಸಿಬ್ಬಂದಿ ಸೇರಿದಂತೆ ಒಟ್ಟು 275 ಜನರು ತೀವ್ರವಾಗಿ ವಿರೋಧಿಸಿದ್ದಾರೆ. ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಕುಸಿತವಾಗಿದೆ ಎಂದು USCIRF ಹೇಳಿತ್ತು. ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಒತ್ತಡ ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಮುಸ್ಲಿಮರು ಮತ್ತು ಕ್ರೈಸ್ತರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು USCIRF ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಹಾಗೇ, USCIRF ಭಾರತದ ಕೆಲವು ಕಾನೂನುಗಳ ಬಗ್ಗೆಯೂ ಪ್ರಶ್ನೆ ಎತ್ತಿತ್ತು. ಮತಾಂತರ ವಿರೋಧಿ ಕಾನೂನುಗಳು (Anti-conversion laws), ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act/ CAA) ಇವುಗಳು ಕೆಲ ಸಮುದಾಯಗಳಿಗೆ ಅನ್ಯಾಯ ಮಾಡಬಹುದು ಎಂದು ಈ ವರದಿ ಹೇಳಿತ್ತು. ಭಾರತದಲ್ಲಿ ಕೆಲವು ಕಡೆ ಹಿಂಸಾಚಾರ ಮತ್ತು ದ್ವೇಷ ಭಾಷಣದ ಘಟನೆಗಳು ಹೆಚ್ಚಾಗಿವೆ. ಕೆಲವು ಸಂದರ್ಭಗಳಲ್ಲಿ ಅಧಿಕಾರಿಗಳು ಸರಿಯಾಗಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಟೀಕಿಸಲಾಗಿತ್ತು.

ಇದೆಲ್ಲದರ ಜೊತೆಗೆ, ಭಾರತದ ಆರ್​ಎಸ್​ಎಸ್ (RSS)​, ರಾ (RAW)ನಂತಹ ಕೆಲವು ಭಾರತೀಯ ಸಂಸ್ಥೆಗಳ ಮೇಲೆ ನಿಷೇಧ ಹೇರಬೇಕೆಂಬ ಶಿಫಾರಸನ್ನೂ USCIRF ವರದಿ ಮಾಡಿತ್ತು. ಈ USCIRF ಅಮೆರಿಕದ ಒಂದು ಸಲಹಾ ಸಂಸ್ಥೆಯಾಗಿದ್ದು, ಅದರ ವರದಿಯನ್ನು ಭಾರತ ತೀವ್ರವಾಗಿ ವಿರೋಧಿಸಿದೆ. USCIRF ಭಾರತದ ಬಗ್ಗೆ ತಪ್ಪುಚಿತ್ರಣ ನೀಡುತ್ತಿದೆ, ಭಾರತದ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಭಾರತ ಆರೋಪಿಸಿದೆ.

ಇದನ್ನೂ ಓದಿ: ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ಭಾರತದ 275 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಮಿಲಿಟರಿ ಸಿಬ್ಬಂದಿ USCIRF ವರದಿಯನ್ನು ಖಂಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರು, ಮಾಜಿ ಅಧಿಕಾರಿಗಳು ಮತ್ತು ಮಿಲಿಟರಿ ಪರಿಣತರು ಸೇರಿದಂತೆ 275 ಭಾರತೀಯರ ಗುಂಪು ಇಂದು ಯುನೈಟೆಡ್ ಸ್ಟೇಟ್ಸ್ ಕಮಿಷನ್ ಫಾರ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ (USCIRF) ನೀಡಿದ ಭಾರತದ ಕುರಿತ “ಆಫ್-ದಿ-ಮಾರ್ಕ್” ವರದಿಯನ್ನು ಟೀಕಿಸಿದೆ.

“ನಾವು ಕೆಳಗೆ ಸಹಿ ಮಾಡಿರುವವರು ಯುನೈಟೆಡ್ ಸ್ಟೇಟ್ಸ್ ಕಮಿಷನ್ ಫಾರ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ (USCIRF) ಸಿದ್ಧಪಡಿಸಿದ ಅತ್ಯಂತ ಗೊಂದಲಮಯ ಮತ್ತು ಸಂಪೂರ್ಣವಾಗಿ ಆಫ್-ದಿ-ಮಾರ್ಕ್ ವರದಿಯನ್ನು ನಿಮ್ಮ ಗಮನಕ್ಕೆ ತರುತ್ತೇವೆ” ಎಂದು ಅವರು ಬಿಡುಗಡೆ ಮಾಡಿದ ಬಹಿರಂಗ ಪತ್ರದಲ್ಲಿ ತಿಳಿಸಲಾಗಿದೆ.

ಭಾರತದ ವಿದೇಶಿ ಗುಪ್ತಚರ ಸಂಸ್ಥೆ, ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ (RA&AW) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮೇಲೆ ನಿರ್ಬಂಧಗಳನ್ನು ಶಿಫಾರಸು ಮಾಡುವ USCIRF ವರದಿಗೆ ಈ ಗುಂಪು ಆಕ್ಷೇಪಿಸಿದೆ. ಈ ತಂಡದಲ್ಲಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮತ್ತು NGT ಅಧ್ಯಕ್ಷ ಅಧ್ಯಕ್ಷ ಆದರ್ಶ್ ಕುಮಾರ್ ಗೋಯೆಲ್, ಕೇರಳದ ಮಾಜಿ DGP ಪಿ. ಚಂದ್ರಶೇಖರನ್ ಮತ್ತು ಮಾಜಿ ರಾಯಭಾರಿಗಳಾದ ಭಾಸ್ವತಿ ಮುಖರ್ಜಿ ಮತ್ತು ಶ್ಯಾಮಲಾ ಬಿ. ಕೌಸಿಕ್ ಕೂಡ ಸೇರಿದ್ದಾರೆ.

 

ತಮ್ಮ ಬಹಿರಂಗ ಪತ್ರದಲ್ಲಿ ಅಧಿಕೃತ ದತ್ತಾಂಶವನ್ನು ಉಲ್ಲೇಖಿಸಿರುವ ಅವರು, ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯ ಪಾಲು 1951ರಲ್ಲಿ ಶೇ. 9.8 ರಷ್ಟಿತ್ತು. 2011ರಲ್ಲಿ ಶೇ. 14.2ಕ್ಕೆ ಏರಿತು. ಕ್ರಿಶ್ಚಿಯನ್ ಜನಸಂಖ್ಯೆಯು 1951ರಲ್ಲಿ ಶೇ. 2.3ರಷ್ಟಿತ್ತು. 2011ರಲ್ಲಿ ಶೇ. 2.3 ರಷ್ಟಿತ್ತು. 1951ರಲ್ಲಿ ಶೇ. 1.79ರಷ್ಟಿದ್ದ ಸಿಖ್ ಜನಸಂಖ್ಯೆಯು 2011ರಲ್ಲಿ ಶೇ 1.72ಕ್ಕೆ ಇಳಿದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್​ಗೆ ಮತ್ತೊಂದು ಹೊಡೆತ; ಅಮೆರಿಕ- ಇಸ್ರೇಲ್ ದಾಳಿಯಲ್ಲಿ ಐಆರ್‌ಜಿಸಿ ವಕ್ತಾರ ಅಲಿ ನೈನಿ ಹತ್ಯೆ

“ಈ ಡೇಟಾವನ್ನು ಅಧಿಕೃತ ಜನಗಣತಿ ದತ್ತಾಂಶದಿಂದ ತೆಗೆದುಕೊಳ್ಳಲಾಗಿದೆ. ಇದು ಭಾರತದಲ್ಲಿ 6 ದಶಕಗಳಿಗೂ ಹೆಚ್ಚು ಕಾಲ ಸ್ವತಂತ್ರ ಸಾಂವಿಧಾನಿಕ ಆಡಳಿತದಲ್ಲಿ ಪ್ರಮುಖ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಜನಸಂಖ್ಯಾ ವಿಸ್ತರಣೆ ಅಥವಾ ಸ್ಥಿರತೆಯ ವಿಶಾಲ ಮಾದರಿಯನ್ನು ಪ್ರತಿಬಿಂಬಿಸುತ್ತದೆ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“USCIRFನ ಎಲ್ಲಾ 6 ಆಯುಕ್ತರನ್ನು US ಸರ್ಕಾರವು ನೇಮಿಸುತ್ತದೆ. US ಕಾಂಗ್ರೆಸ್ ಮೂಲಕ ಅಮೇರಿಕನ್ ತೆರಿಗೆದಾರರು ಅವರಿಗೆ ಹಣಕಾಸು ಒದಗಿಸುತ್ತಾರೆ. USCIRFನಲ್ಲಿ ಈ ವರದಿಗೆ ಕೊಡುಗೆ ನೀಡಿದ ಎಲ್ಲರ ಕಟ್ಟುನಿಟ್ಟಿನ ಹಿನ್ನೆಲೆಯನ್ನು ಪರಿಶೀಲನೆ ನಡೆಸುವಂತೆ ನಾವು US ಸರ್ಕಾರವನ್ನು ಒತ್ತಾಯಿಸುತ್ತೇವೆ. ಇದು USCIRF ನಿಂದ ಅತ್ಯಂತ ಪೂರ್ವಾಗ್ರಹ ಪೀಡಿತ ಮತ್ತು ಅಸಮರ್ಥನೀಯ ವರದಿಗಳನ್ನು ತಯಾರಿಸಲು ಬಳಸಲ್ಪಡುತ್ತಿರುವ US ತೆರಿಗೆದಾರರ ಕಣ್ಣು ತೆರೆಸುತ್ತದೆ ಎಂದು ನಾವು ಭಾವಿಸುತ್ತೇವೆ. ಏಕೆಂದರೆ ಅಲ್ಲಿನ ಪ್ರಜೆಗಳ ಹಣವನ್ನು ಕೆಲವು ಭಾರತ ವಿರೋಧಿ ಹಿತಾಸಕ್ತಿಗಳು ಭಾರತದ ಜನರೊಂದಿಗೆ ಅವರ ಸದ್ಭಾವನೆಯನ್ನು ಹಾಳುಮಾಡಲು ಗುಪ್ತ ಕಾರ್ಯಸೂಚಿಯನ್ನು ಉತ್ತೇಜಿಸಲು ಬಳಸುತ್ತಿವೆ” ಎಂದು ಮಾಜಿ ಐಎಎಸ್ ಅಧಿಕಾರಿಗಳಾದ ಎಂ. ಮದನ್ ಗೋಪಾಲ್, ಒ.ಪಿ. ಪಾಠಕ್ ಮತ್ತು ಸಿ.ಎಸ್. ತಲ್ವಾರ್ ಮತ್ತು ಇತರರು ಸಹಿ ಮಾಡಿದ ಪತ್ರದಲ್ಲಿ ತಿಳಿಸಲಾಗಿದೆ.

“ಇತ್ತೀಚಿನ ವರದಿಯನ್ನು ನಾವು ಗಮನಿಸಿದ್ದೇವೆ. ಭಾರತದ ಬಗ್ಗೆ ಮಾಡಲಾದ ಆರೋಪ ಸಂಪೂರ್ಣ ಸುಳ್ಳು. ಹಲವಾರು ವರ್ಷಗಳಿಂದ USCIRF ಭಾರತದ ಕುರಿತು ವಿಕೃತ ಮತ್ತು ಆಯ್ದ ಚಿತ್ರಣವನ್ನು ಪ್ರಸ್ತುತಪಡಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ” ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಕೂಡ ಹೇಳಿದ್ದರು.

ಭಾರತದ ಬಗ್ಗೆ ಆಯ್ದ ಟೀಕೆಗಳನ್ನು ಮುಂದುವರಿಸುವ ಬದಲು, USCIRF ಅಮೆರಿಕದಲ್ಲಿ ಹಿಂದೂ ದೇವಾಲಯಗಳ ಮೇಲಿನ ವಿಧ್ವಂಸಕ ಕೃತ್ಯಗಳು ಮತ್ತು ದಾಳಿಗಳು, ಭಾರತವನ್ನು ಟಾರ್ಗೆಟ್ ಮಾಡುವುದು ಮತ್ತು ಅಮೆರಿಕದಲ್ಲಿ ಭಾರತೀಯ ವಲಸೆಗಾರರ ​​ಸದಸ್ಯರ ಮೇಲೆ ಹೆಚ್ಚುತ್ತಿರುವ ಅಸಹಿಷ್ಣುತೆ ಮತ್ತು ಬೆದರಿಕೆಯ ಬಗ್ಗೆ ಚಿಂತಿಸುವುದು ಒಳ್ಳೆಯದು” ಎಂದು ಜೈಸ್ವಾಲ್ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಾಣಿಜ್ಯ ಬಳಕೆ ಸಿಲಿಂಡರ್​ ಅಭಾವ: ಬೆಂಗಳೂರು ಹೋಟೆಲ್​​ಗಳಿಗೆ 150 ಕೋಟಿ ರೂ ನಷ್ಟ

ಬೆಂಗಳೂರು, ಮಾರ್ಚ್​ 21: ಗಲ್ಫ್ ಯುದ್ಧದಿಂದ ಇರಾನ್ ಹೊರ್ಮುಝ್ ಜಲಸಂಧಿ ಮುಚ್ಚಿದೆ. ಭಾರತಕ್ಕೆ ಅಡುಗೆ ಅನಿಲ, ತೈಲ ಹೊತ್ತು ಬರ್ತಿದ್ದ 22 ಹಡಗುಗಳು ಇರಾನ್ ಹಿಡಿತದಲ್ಲಿವೆ. ಇದರಿಂದ ಕರ್ನಾಟಕ ಸೇರಿದಂತೆ ದೇಶದಾದ್ಯಂತೆ ಗ್ಯಾಸ್​ ಸಿಲಿಂಡರ್ ಕೊರತೆ ತಾಂಡವವಾಡುತ್ತಿದೆ. ವಾಣಿಜ್ಯ ಬಳಕೆ ಸಿಲಿಂಡರ್​ (Commercial Gas) ಅಭಾವದಿಂದ ಬೆಂಗಳೂರಿನ ಹೋಟೆಲ್‌ಗಳಿಗೆ 150 ಕೋಟಿ ರೂ ನಷ್ಟವಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​​​ಗಳ ಸಮಸ್ಯೆಯಿಂದ ಎದುರಾಗಿರುವ ಸಂಕಷ್ಟ ಅಷ್ಟಿಷ್ಟಲ್ಲ. ಹೋಟೆಲ್​ ಸೇರಿದಂತೆ ಹಲವು ವಲಯಗಳ ಮೇಲೆ ಇದರ ಬಿಸಿ ತಟ್ಟಿದೆ. ಹೋಟೆಲ್​​ ಮಾಲೀಕರು ಗ್ಯಾಸ್​ ಸಿಲಿಂಡರ್​​ ಸಿಗದೇ ವಿಲ ವಿಲ ಎನ್ನುತ್ತಿದ್ದಾರೆ. ಹೋಟೆಲ್​​ ಮಾಲೀಕರು ಸೌದೆ ಒಲೆ ಮೊರೆ ಹೋಗಿದ್ದಾರೆ. ಜನರು ಕೂಡ ಇದರಿಂದಾಗಿ ಕಂಗಾಲಾಗಿದ್ದಾರೆ.

ಬೆಂಗಳೂರು ಹೋಟೆಲ್​​ಗಳಿಗೆ 150 ಕೋಟಿ ರೂ ನಷ್ಟ

ಈ ಬಗ್ಗೆ ಹೋಟೆಲ್​ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್​​ ಹೇಳಿಕೆ ನೀಡಿದ್ದು, ಗ್ಯಾಸ್​ ಅಭಾವದಿಂದ ಬೆಂಗಳೂರಲ್ಲಿ ನೂರಾರು ಹೋಟೆಲ್​​ಗಳು ಬಂದ್​ ಆಗಿವೆ. ಇದರಿಂದಾಗಿ ಕಳೆದ ವಾರವೇ ಹೋಟೆಲ್​​ಗಳಿಗೆ 100 ಕೋಟಿ ರೂ ನಷ್ಟವಾಗಿತ್ತು. ಈ ವಾರ 50 ಕೋಟಿ ರೂ ನಷ್ಟವಾಗಿದೆ. ಕಳೆದೆರಡು ವಾರದಲ್ಲಿ 150 ಕೋಟಿ ರೂ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಒಂದು ಕೆಜಿ ಸೌದೆಗೆ 9 ರೂಪಾಯಿ

ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​​​ಗಳ ಅಭಾವದಿಂದಾಗಿ ಬೆಳಗಾವಿಯಲ್ಲಿ ಹೋಟೆಲ್​​ ಮಾಲೀಕರು ಸೌದೆ ಒಲೆ ಮೊರೆ ಹೋಗಿದ್ದಾರೆ. ಬಡಕಲ್ ಗಲ್ಲಿಯ ದುರ್ಗಾದೇವಿ ಖಾನಾವಳಿಯವರು ಸೌದೆ ಬಳಸಿ ಅಡುಗೆ ಮಾಡುತ್ತಿದ್ದಾರೆ. ಆದರೆ ಕೆಜಿ ಕಟ್ಟಿಗೆಗೆ 9 ರೂಪಾಯಿ ನೀಡ್ತಿದ್ದು, ದಿನಕ್ಕೆ 25 ಕೆಜಿ ಕಟ್ಟಿಗೆ ಬಳಕೆ ಆಗುತ್ತಿದೆ. ಅದು ಕೂಡ ನಮಗೆ ಲಾಸ್​​ ಅಂತ ಹೋಟೆಲ್ ಮಾಲೀಕರು ಅಳಲು ತೋಡಿಕೊಂಡಿದಿದ್ದಾರೆ.

ಇದನ್ನೂ ಓದಿ: ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

ಕಳೆದ ವಾರವೂ ಶಿವಾಲಿಕ್ ಹಾಗೂ ನಂದಾದೇವಿ ಹೆಸರಿನ ಹಡುಗುಗಳು ಭಾರತಕ್ಕೆ ಬಂದಿದ್ವು. ಸುಮಾರು 92 ಸಾವಿರ ಮೆಟ್ರಿಕ್ ಟನ್ LPG ಹೊತ್ತು ತಂದಿದ್ವು. ಇಷ್ಟಾದ್ರೂ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿದೆ.

ವರದಿ: ನಟರಾಜ್​​ ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಟಿ ಭಾವನಾ ರಾಮಣ್ಣ ಪುತ್ರಿಯ ನಾಮಕರಣ, ಮಗಳಿಗೆ ಅಜ್ಜಿಯ ಹೆಸರು: ಚಿತ್ರಗಳ ನೋಡಿ

Source link

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾಗಳು ಪಟ್ಟಿ ಇಲ್ಲಿದೆ

Source link

ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು? ಆರ್​ಸಿಬಿಗೆ ಯಾವ ಸ್ಥಾನ?

Source link

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

ದೆಹಲಿ, ಮಾ.21: ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ.

ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ (Community Kitchens) ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಗ್ಯಾಸ್ ಟ್ರಬಲ್: ಹೋಟೆಲ್ ಮಾಲೀಕರು ವಿಲ ವಿಲ; ಸೌದೆ ಒಲೆ ದರ ದುಪ್ಪಟ್ಟು

ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ (FTL) ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ, ಹಿಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಜನರಿಗೆ ಯಾವುದೇ ಪ್ರಯೋಜನವನ್ನು ತಲುಪಿಸಲಿಲ್ಲ ಎಂದು ಆರೋಪಿಸಿದರು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 100-130 ಡಾಲರ್ ಇದ್ದ ಕಚ್ಚಾ ತೈಲಕ್ಕೆ ಸಬ್ಸಿಡಿ ನೀಡಲಾಗಿತ್ತು. ಆದರೆ, ಆ ನಂತರದ 10-12 ವರ್ಷಗಳ ಕಾಲ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಲಾಭ ಮಾಡಿಕೊಂಡಿತೇ ಹೊರತು ಜನರಿಗೆ ಇದರ ಲಾಭ ಸಿಗಲಿಲ್ಲ ಎಂದು ಹೇಳಿದರು. ರಾಜ್ಯ ಸರ್ಕಾರ ಬಸ್ ದರ ಹೆಚ್ಚಿಸುವುದಿಲ್ಲ, ಕೇಂದ್ರ ಸರ್ಕಾರ ಇಂಧನ ಬೆಲೆ ಹೆಚ್ಚಳ ಮಾಡಬಹುದು ಎಂದು ಅವರು ಪುನರುಚ್ಚರಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗಾಯಾಳುಗಳ ಕೂಪವಾದ ಕೆಕೆಆರ್; ಲೀಗ್​ನಿಂದ ತಂಡದ ಮೂರನೇ ಬೌಲರ್​ ಔಟ್

Source link

Exit mobile version