ದಿನ ಭವಿಷ್ಯ: ಇಂದು ಅಪರೂಪದ ಗಜಕೇಸರಿ ಯೋಗ! ಯಾರಿಗೆ ಒಲಿಯಲಿದೆ ರಾಯರ-ಸಾಯಿಬಾಬಾ ಕೃಪೆ?

ಬೆಂಗಳೂರು, ಮೇ,21: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರ ದ್ವಾದಶ ರಾಶಿಗಳ ದಿನಭವಿಷ್ಯವನ್ನು ಪ್ರಸ್ತುತಪಡಿಸಿದೆ. ಇಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ ಮತ್ತು ಪುನರ್ವಸು ನಕ್ಷತ್ರ, ಗಂಡ ಯೋಗ, ಬಾಲವ ಕರಣ ಇವೆ. ಈ ದಿನದ ರಾಹುಕಾಲ ಮಧ್ಯಾಹ್ನ 1:50 ರಿಂದ 3:26 ರವರೆಗೆ ಇದ್ದರೆ, ಶುಭಕಾಲ ಬೆಳಗ್ಗೆ 12:16 ರಿಂದ ಮಧ್ಯಾಹ್ನ 1:50 ರವರೆಗೆ ಇರುತ್ತದೆ. ರವಿ ವೃಷಭ ರಾಶಿಯಲ್ಲಿ, ಚಂದ್ರ ಕರ್ಕಾಟಕ ರಾಶಿಯ ಪುನರ್ವಸು ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ. ಇದು ಗಜಕೇಸರಿ ಯೋಗವನ್ನು ಸೃಷ್ಟಿಸಿದ್ದು, ಈ ದಿನವು ರಾಯರ ಆರಾಧನೆ, ಸಾಯಿಬಾಬಾ ಆರಾಧನೆ ಹಾಗೂ ವಿದ್ಯೆ ಕಲಿಸಿದ ಗುರುಗಳ ಆರಾಧನೆಗೆ ಅತ್ಯಂತ ಪರ್ವಕಾಲವಾಗಿದೆ. ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವವರಿಗೆ ಶುಭ ಹಾರೈಸಲಾಗಿದೆ. ಡಾ. ಗುರೂಜಿ ಅವರು ಪ್ರತಿ ರಾಶಿಯವರಿಗೆ ಗ್ರಹಗಳ ಶುಭಫಲ, ವೃತ್ತಿ, ಹಣಕಾಸು, ಆರೋಗ್ಯ, ಸಂಬಂಧಗಳು, ವಾಹನ ಯೋಗ, ಪ್ರಯಾಣ, ಉದ್ಯೋಗಾವಕಾಶಗಳು, ಹಾಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ಮಾಹಿತಿ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಾಜಿ ಪ್ರಧಾನಿ ದೇವೇಗೌಡರ ಬೆಂಗಳೂರು ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಬೆಂಗಳೂರು, ಮೇ 21: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿದ ಪ್ರಮೋದ್ ಸಾವಂತ್ ಅವರು ದೇವೇಗೌಡರ ಆರೋಗ್ಯ ಕುಶಲೋಪರಿಯನ್ನ ವಿಚಾರಿಸಿದ್ದಾರೆ. ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯವನ್ನೂ ಕೋರಿದ್ದಾರೆ. ರಾಜಕೀಯ ವಲಯದಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Weather Report: ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ! – Kannada News | Karnataka Weather Update: IMD Predicts Heavy Rain, Thunderstorms, Yellow Alert for Coastal and Malnad Regions

ಬೆಂಗಳೂರು, ಮೇ 21: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ, ಇಂದು ( ಮೇ.21) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳು ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್

ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲೂ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಆಕಾಶ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮುಂಗಾರು ಮೇ 26 ಕ್ಕೆ ಕೇರಳ ಪ್ರವೇಶಿಸುತ್ತಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:04 am, Thu, 21 May 26

Source link

ದಿನ ಭವಿಷ್ಯ: ಇಂದು ಈ ರಾಶಿಯವರ ಅಹಂಕಾರಕ್ಕೆ ಪೆಟ್ಟುಬೀಳಿಸುವರು – Kannada News | Horoscope May 21 Thursday 2026; Dina Rashi Bhavishya Today, Checkout the details here

ಮೇಷ ರಾಶಿ :

ನಿಮ್ಮ ಸಂಗಾತಿಯು ನಿಮ್ಮ ಬಗ್ಗೆ ಉತ್ತಮ ಮನೋಭಾವವನ್ನು ಹೊಂದುವಿರಿ. ನಿಮ್ಮವರು ನಿಮಗೆ ಕೆಲವು ಕಿವಿಮಾತನ್ನು ಹೇಳಬಹುದು. ದುರ್ಬಲತೆಯ ಸಮಯದಲ್ಲೂ ಧೈರ್ಯವಿರಲಿ. ಇಂದು ಕಾರ್ಯಕ್ಷಮತೆ ಹೆಚ್ಚಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಜವಾಬ್ದಾರಿಯುತ ಕ್ರಮ ತೆಗೆದುಕೊಳ್ಳಿ. ಇಂದು ಸಂಗಾತಿಯು ನಿಮ್ಮ ಸಂತೋಷವನ್ನು ಹೆಚ್ಚಿಸಬಹುದು. ಅಚ್ಚರಿ ಉಡುಗೊರೆಯೊಂದು ಸಿಗುವ ಸಾಧ್ಯತೆ ಇದೆ. ವಾಹನದಲ್ಲಿ ಸಂಚಾರಕ್ಕೆ ತೊಂದರೆ ಬರಬಹುದು.

ವೃಷಭ ರಾಶಿ :

ಇಂದು ಹೊಸ ಮನೆಯ ಖರೀದಿಯೇ ನಿಮಗೆ ಉತ್ತಮ ಎನಿಸಬಹುದು. ಆಂತರಿಕ ಆಳದ ಬಲ ನಿಮ್ಮನ್ನು ಪ್ರಭಾವಶಾಲಿಯಾಗಿ ಉಳಿಸುತ್ತದೆ. ನಿಮ್ಮ ಮಾತಿಗೆ ಅಪರಿಚಿತರ ಬೆಂಬಲವೂ ಸಿಗಲಿದೆ. ಉದ್ಯೋಗದಲ್ಲಿ ಸೃಜನಶೀಲತೆಗೆ ಸ್ಪಷ್ಟತೆ ತರಲು ಇಂದಿನ ದಿನ ಪೂರಕವಾಗಿದೆ. ಯಾವುದನ್ನೂ ಕೃತಕವಾಗಿ ತೋರಿಸಲು ಹೋಗುವುದು ಬೇಡ. ಸಹಜತೆಯು ನಿಮ್ಮ ಸ್ವಭಾವವಾಗಿರಲಿ. ಸಂಗಾತಿಯ ಸ್ವಭಾವವನ್ನು ಸುಲಭದಿಂದ ತಿಳಿಯಲು ಸಾಧ್ಯವಾಗದು.

ಮಿಥುನ ರಾಶಿ :

ನಿಮ್ಮನ್ನು ತಾತ್ಸಾರ ಮಾಡುತ್ತಿದ್ದಾರೆ ಎಂಬ ಭಾವನೆ ಮೂಡುವುದು. ಹವ್ಯಾಸಗಳಲ್ಲಿ ಸಮಾನತೆ ಹೊಂದಿದರೆ ಪ್ರೀತಿ ಬೆಳೆದುಹೋಗುತ್ತದೆ. ಕೃಷಿಯ ಕೆಲಸದಲ್ಲಿ ಅನುಭವಿಗಳನ್ನು ಜೋಡಿಸಿಕೊಳ್ಳಿ. ಪ್ರಯಾಣ ನಿಮಗೆ ಆಧ್ಯಾತ್ಮಿಕ ಮತ್ತು ಮನರಂಜನೆಯ ಅನುಭವ ನೀಡುತ್ತದೆ. ಇನ್ನೊಬ್ಬರಿಗೆ ಕೊಡುವ ಸಮಯವಿದ್ದರೆ ಒಪ್ಪಿಕೊಳ್ಳಿ. ಸಮಯ ವ್ಯಾಪಾರಿಗಳಿಗೆ ಅನುಕೂಲಕರವಾಗಿಲ್ಲ. ಇಂದು ಯಾವುದೇ ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಮಕ್ಕಳ ಮೇಲೆ ಪ್ರೀತಿ ಅಧಿಕವಾಗುವುದು.

ಕರ್ಕಾಟಕ ರಾಶಿ :

ಬೇಕಾದಷ್ಟು ಮಾಡಲು ಕೆಲಸಗಳಿದ್ದರೂ ಮಾಡದೇ ಸಮಯವನ್ನು ಹಾಳುಮಾಡುವಿರಿ. ನೈಜತೆಯನ್ನು ಮರೆಯಬೇಡಿ. ಕಲ್ಪನೆ ಮತ್ತು ಭಾವನೆಗಳು ಜತೆಯಾಗಿ ಕೆಲಸ ಮಾಡಲಿ. ಉದ್ಯೋಗದಲ್ಲಿ ನೂತನ ಕಲಿಕೆಗಳು ಸಿಗುತ್ತವೆ. ಆರೋಗ್ಯದಲ್ಲಿ ನೀರಿನ ಸೇವನೆ ಹೆಚ್ಚಿಸಬೇಕು. ನೀವು ದೀರ್ಘಕಾಲದವರೆಗೆ ಕೆಲಸದಲ್ಲಿ ಹೆಚ್ಚಿನ ಯಶಸ್ಸನ್ನು ಗಳಿಸಲಿಲ್ಲ, ಆದರೆ ಇಂದು ನೀವು ನಿಮ್ಮ ಅತ್ಯುತ್ತಮವಾದದನ್ನು ನೀಡುವ ಮೂಲಕ ಎಲ್ಲರನ್ನು ಆಶ್ಚರ್ಯಗೊಳಿಸುತ್ತೀರಿ.

ಸಿಂಹ ರಾಶಿ :

ಉಲ್ಲಾಸ ಮತ್ತು ಸಂತೋಷಗಳು ಎಂದಿಗಿಂತ ಹೆಚ್ಚು ಇರಲಿದೆ. ನಿಮಗಿಷ್ಟವಾದ ಸಮಾರಂಭಕ್ಕೆ ಭೇಟಿ ಕೊಡುವಿರಿ. ಆಪ್ತರನ್ನು ಭೇಟಿಯಾಗುವಿರಿ. ಅಧಿಕಾರವನ್ನು ಬಳಸಿಕೊಳ್ಳುವ ಆಲೋಚನೆ ಸರಿಯಾದುದಲ್ಲ. ಏಕಾಂಗಿಯಾಗಿ ಜೀವನವನ್ನೂ ನಿಭಾಯಿಸಬಹುದು ಎಂಬ ಬಲದ ಅರಿವು ಬರಲಿದೆ. ನಿಮ್ಮವರಿಂದ ಇಂದು ಯಾವುದನ್ನೂ ನಿರೀಕ್ಷಿಸದೇ ಇದ್ದರೂ ತಾನಾಗಿಯೇ ಬಂದು ಒದಗುವುದು. ತಪ್ಪು ಹಾದಿಗೆ ಯಾರಿಂದಲಾದರೂ ಪ್ರೇರಣೆ ಸಿಗಲಿದೆ.

ಕನ್ಯಾ ರಾಶಿ :

ಹೆಚ್ಚು ಮಾತನಾಡಿ ಇನ್ನೊಂದಕ್ಕೆ ವಿವಾದಕ್ಕೆ ನಾಂದಿ ಹಾಡಬೇಡಿ. ಭವಿಷ್ಯದ ಕುರಿತು ಅತಿಯಾದ ಚಿಂತನೆಯನ್ನು ಮಾಡಲಿದ್ದೀರಿ. ಸ್ಥಿತಿಗತಿಗಳ ಒತ್ತಡ ನಿಮ್ಮ ಮನಸ್ಸನ್ನು ಹಿಂಡಬಹುದು. ಕೆಲಸದ ಸ್ಥಳದಲ್ಲಿ ನಿಮ್ಮ ನಿರ್ಣಯಗಳು ಮುಂದಿನ ಪ್ರಗತಿಗೆ ಕಾರಣವಾಗಬಹುದು. ನಿಮಗೆ ಮಕ್ಕಳು ನೆಮ್ಮದಿ ಕೊಡುವರು ಎಂಬ ಸಮಾಧಾನ ಕಾಣಿಸುವುದು. ನಿಮ್ಮದೇ ಆದ ಚಿಂತನೆಯಿಂದ ಕಾರ್ಯವನ್ನು ಮಾಡುವಿರಿ. ನಿಮ್ಮ ಬೌದ್ಧಿಕ ಕಸರತ್ತನ್ನು ಪ್ರದರ್ಶಿಸುವಿರಿ.

ತುಲಾ ರಾಶಿ :

ನಿಮಗೆ ಅಪಮಾನ ಮಾಡಲು ಪಿತೂರಿಗಳನ್ನು ನಡೆಸಬಹುದು. ನೀವು ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನವಿಡಿ. ವೇತನವನ್ನು ಹೆಚ್ಚು ಮಾಡಿಕೊಳ್ಳಲು ನಿಮಗೆ ದಾರಿ ಕಾಣಲಿದೆ. ಅಸ್ಪಷ್ಟವಾದ ವಿಚಾರಗಳನ್ನು ತಿಳಿಯುವ ಕುತೂಹಲ ನಿಮಗೆ. ಜೀವನದಲ್ಲಿ ದೃಷ್ಟಿಕೋನ ಬದಲಿಸಿದರೆ ಸಂತೋಷವಿದೆ. ನೆರೆಹೊರೆಯರ ಜೊತೆ ಹೊಂದಾಣಿಕೆಯ ಮನಃಸ್ಥಿತಿಯಲ್ಲಿಯೇ ಇರಬೇಕಾಗುವುದು. ಅತಿಯಾದ ಲೋಭವು ನಿಮ್ಮ ಕಾರ್ಯವನ್ನು ಹಾಳು ಮಾಡುವುದು. ಸಮಯಪಾಲನೆಯಿಂದ ನಿಮ್ಮ ಕೆಲಸಗಳು ಸರಿಯಾಗುವುದು.

ವೃಶ್ಚಿಕ ರಾಶಿ :

ಇಂದು ನಿಮ್ಮ ಖಾಲಿ ಮನಸ್ಸಿಗೆ ಸಲ್ಲದ ಆಲೋಚ‌ನೆಗಳು ಒಂದೊಂದಾಗಿಯೇ ಬರಬಹುದು. ಸುಮ್ಮನೇ ಕುಳಿತುಕೊಳ್ಳುವುದು ಬೇಡ. ಏನಾದರೂ ಕಾರ್ಯವನ್ನು ಮಾಡುತ್ತಲೇ ಇರಿ. ನಿಮ್ಮೊಳಗಿನ ಆಸೆಯು ಪ್ರಿಯತೆಯನ್ನು ತಣಿಸುತ್ತದೆ. ಹಣಕಾಸಿನಲ್ಲಿ ಲಾಭ, ಅದೇ ಕಾರಣಕ್ಕೆ ಸಹೋದ್ಯೋಗಿಗಳಿಂದ ದೂರವಿರಲು ಪ್ರಯತ್ನಿಸಿ. ನಿಮ್ಮ ಕಾರ್ಯದ ವೇಗವು ಹೆಚ್ಚುವ ಅವಶ್ಯಕತೆ ಇದೆ. ಮಹಿಳೆಯ ಕಾರಣದಿಂದ ನಿಮಗೆ ಧನನಷ್ಟವು ಆಗಬಹುದು. ಭೂಮಿಯನ್ನು ನಿಮ್ಮದಾಗಿಸಿಕೊಳ್ಳುವ ಪ್ರಯತ್ನವೂ ಸಫಲ.

ಧನು ರಾಶಿ :

ನಿದ್ರಾಹೀನತೆಯಿಂದ ಕೆಲಸದಲ್ಲಿ ಸ್ವಲ್ಪ ಆಲಸ್ಯವೂ ಇರಲಿದೆ. ಸಂಗಾತಿಯ ಜೊತೆ ದೂರಪ್ರಯಾಣ ಮಾಡಬಹುದು. ಪ್ರೀತಿಯ ಹೊಸ ಆಯಾಮಕ್ಕೆ ಹೆಜ್ಜೆ ಹಾಕಿ. ಗಾಂಭೀರ್ಯದಿಂದ ಇರಲು ಹೆಚ್ಚು ಸಮಯ ಆಗದು. ಭಾವನೆಗಳಲ್ಲಿ ಭಾರವಿದ್ದರೆ ಏಕಾಂತ ಬೇಕು. ಕುಟುಂಬದ ಬೆಂಬಲ ನಿಮ್ಮ ಶಕ್ತಿ ಆಗಲಿದೆ. ಯಾರದೋ ಕಾರಣಕ್ಕೆ ನೀವು ಓಡಾಟ ಮಾಡಬೇಕಾಗುವುದು. ಅಂದುಕೊಂಡ ಕೆಲಸವನ್ನು ಪೂರೈಸಲು ನಿಮಗೆ ಸಮಸ್ಯೆಯು ಬರಬಹುದು.

ಮಕರ ರಾಶಿ :

ಒತ್ತಡಕ್ಕೆ ಸಿಲುಕದೇ ಆಪ್ತರ ಜೊತೆ ಸಮಾಲೋಚನೆ ಮಾಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ನೀತಿಯ ಜೊತೆಗಿನ ನಡಿಗೆ ಕಷ್ಟಕರವಾಗಬಹುದು. ಸಾಲಕೊಟ್ಟ ಹಣವು ನಿಮಗೆ ಸಿಗಲಿದೆ. ನಿರೀಕ್ಷೆಗಳಿಲ್ಲದ ಸಂಬಂಧಗಳು ನೆಮ್ಮದಿಯನ್ನು ಕೊಡುತ್ತವೆ. ಏಕಾಗ್ರತೆಯ ಕೊರತೆ ಕಾಣಲಿದೆ. ಮನೆಯಲ್ಲಿ ಹಬ್ಬದ ವಾತಾವರಣವು ಇರಲಿದೆ. ಇಂದು ನಿಮಗೆ ಕೇಳುವ ಪ್ರಶ್ನೆಗಳಿಗೆ ಉತ್ತರವನ್ನು ಕೊಡಲಾರಿರಿ. ಧನವು ನಷ್ಟವಾದ ವಿಚಾರಗಳನ್ನು ಯಾರ ಬಳಿಯೂ ಹೇಳಲಾರಿರಿ.

ಕುಂಭ ರಾಶಿ :

ಇಂದು ಅನಿರೀಕ್ಷಿತವಾಗಿ ನೀವಿರುವ ವಾತಾವರಣವು ನಿಮಗೆ ಹಾಯೆನಿಸಬಹುದು. ಯಾರ ಜೊತೆ ಬೆರೆಯಬೇಕು ಎನ್ನುವುದು ನಿಮ್ಮ ಬುದ್ಧಿಗೆ ಬಿಟ್ಟಿದ್ದು. ಪ್ರೀತಿಗೆ ಮುಕ್ತ ಮನಸ್ಸು ಅಗತ್ಯ. ಸಂಪರ್ಕ ಹೊಂದುವ ಪ್ರತಿಯೊಬ್ಬರಿಗೂ ಶ್ರದ್ಧೆಯಿಂದ ವರ್ತಿಸಿ. ಪತಿಯ ಪ್ರೀತಿ ಇಂದು ಸಿಗಲಿದೆ. ಇಂದಿನ ದುಡಿಮೆಯು ಕಷ್ಟವೆನಿಸಬಹುದು. ನೋವಿಗೆ ಸ್ಪಂದಿಸುವ ಸ್ವಭಾವವು ನಿಮಗೆ ಇಷ್ಟವಾಗುವುದು. ಬಂಧುಗಳ ಮಾತು ನಿಮಗೆ ಕಿರಿಕಿರಿ ತರಿಸಬಹುದು. ನಿಮ್ಮ ಸೌಂದರ್ಯಕ್ಕೆ ಹೆಚ್ಚು ಮಹತ್ವವನ್ನು ಕೊಡುವಿರಿ.

ಮೀನ ರಾಶಿ :

ಇಂದು ನಿಮಗೆ ಕೆಲವು ವಿಚಾರದಲ್ಲಿ ತಿಳಿವಳಿಕೆ ಬಂದು ಅದನ್ನು ವಿವೇಕದಿಂದ ನೋಡುವಿರಿ. ಇಂದು ನಡೆಯುವ ನಕಾರಾತ್ಮಕ ವಾರ್ತೆಯನ್ನು ಲೆಕ್ಕಿಸದೇ ನಿಮ್ಮ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ಮೋಸದ ಅನುಭವದಿಂದ ಪಾಠ ಕಲಿಯಿರಿ. ಬಾಂಧವ್ಯದ ಶೈಥಿಲ್ಯವನ್ನು ಗಟ್ಟಿ ಮಾಡಿಕೊಳ್ಳಬೇಕಿದೆ. ನಿಮ್ಮ ಅಧ್ಯಯನ ಶೀಲತೆಯಲ್ಲಿ ಹಿನ್ನಡೆ ಆಗಿರುವುದು ನಿಮ್ಮ ಅರಿವಿಗೆ ಬರಲಿದೆ. ವ್ಯಾಪಾರಿಯಾಗಿದ್ದರೆ ಇಂದು ನೀವು ದೊಡ್ಡ ವ್ಯವಹಾರ ವಹಿವಾಟು ಸಿಗಲಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪುಷ್ಯಾ, ಯೋಗ : ಶೂಲಿ, ಕರಣ : ಕೌಲವ, ಸೂರ್ಯೋದಯ – 05 – 57 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:57 – 15:33, ಯಮಗಂಡ ಕಾಲ 05:57 – 07:33, ಗುಳಿಕ ಕಾಲ 09:09 – 10:45

-ಲೋಹಿತ ಹೆಬ್ಬಾರ್-8762924271 (what’s app only)

Source link

KKR vs MI: ಕನ್ನಡಿಗ ಮನೀಶ್, ಪೊವೆಲ್ ಆಟಕ್ಕೆ ಕೆಕೆಆರ್​ಗೆ ಒಲಿದ ಜಯ – Kannada News | KKR vs MI IPL 2026: Manish Pandey Powers Kolkata Knight Riders to Crucial Win, Playoff Hopes Alive

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ (KKR vs MI) ತಂಡಗಳು ಐಪಿಎಲ್‌ 2026 (IPL 2026) ರ 65 ನೇ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮುಂಬೈ ತಂಡವನ್ನು ಮಣಿಸಿದ ಕೆಕೆಆರ್ ತನ್ನ ಪ್ಲೇಆಫ್‌ ಕನಸನ್ನು ಹಾಗೆಯೇ ಜೀವಂತವಾಗಿರಿಸಿಕೊಂಡಿದೆ. ಇತ್ತ ಮುಂಬೈ ತನ್ನ 9ನೇ ಸೋಲಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ ಮುಂಬೈ ತಂಡ ಕೇವಲ 148 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್. ಕನ್ನಡಿಗ ಮನೀಶ್ ಪಾಂಡೆ ಅವರ ಸಮಯೋಜಿತ ಬ್ಯಾಟಿಂಗ್​ನಿಂದಾಗಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು.

ಮುಂಬೈ ಕಳಪೆ ಬ್ಯಾಟಿಂಗ್

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈಗೆ ಉತ್ತಮ ಆರಂಭ ಸಿಗಲಿಲ್ಲ. ರಯಾನ್ ರಿಕಲ್ಟನ್ ಕೇವಲ 6 ರನ್​ಗಳಿಗೆ ಔಟಾದರೆ, ನಮನ್ ಧೀರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಇವರಿಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲರೂ ಎರಡಂಕಿಯ ಮೊತ್ತ ದಾಟುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಅವರಲ್ಲಿ ಯಾರೂ ಮುಂಬೈ ಪರ ದೊಡ್ಡ ಇನ್ನಿಂಗ್ಸ್ ಮಾಡಲು ಸಾಧ್ಯವಾಗಲಿಲ್ಲ. ಕೊನೆಯಲ್ಲಿ ಏಕಾಂಗಿ ಹೋರಾಟ ನೀಡಿದ ಕಾರ್ಬಿನ್ ಬಾಷ್ ಸುಮಾರು 200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ ಅತ್ಯಧಿಕ 32 ರನ್​ಗಳ ಇನ್ನಿಂಗ್ಸ್ ಆಡಿದರು.

ನಾಯಕ ಹಾರ್ದಿಕ್ ಪಾಂಡ್ಯ 26 ರನ್​ಗಳ ಇನ್ನಿಂಗ್ಸ್ ಆಡಿದರೆ, ತಿಲಕ್ ವರ್ಮಾ 20 ರನ್ ಬಾರಿಸಿದರು. ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಇನ್ನಿಂಗ್ಸ್ ತಲಾ 15 ರನ್​ಗಳಿಗೆ ಅಂತ್ಯವಾಯಿತು. ಇತ್ತ ಕೆಕೆಆರ್ ಪರ ಬೌಲಿಂಗ್‌ನಲ್ಲಿ ಮಿಂಚಿದ ಸೌರಭ್ ದುಬೆ, ಕ್ಯಾಮರೂನ್ ಗ್ರೀನ್ ಹಾಗೂ ಕಾರ್ತಿಕ್ ತ್ಯಾಗಿ ತಲಾ 2 ವಿಕೆಟ್ ಪಡೆದರು.

KKR vs MI Live Updates, IPL 2026: ಕೆಕೆಆರ್ 5ನೇ ವಿಕೆಟ್ ಪತನ

ಮನೀಶ್- ಪೊವೆಲ್ ಜೊತೆಯಾಟ

ಈ ಗುರಿ ಬೆನ್ನಟ್ಟಿದ ಕೆಕೆಆರ್​ಗೂ ಉತ್ತಮ ಆರಂಭ ಸಿಗಲಿಲ್ಲ. ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಫಿನ್ ಅಲೆನ್ 8 ರನ್​ಗೆ ಔಟಾದರು. ನಾಯಕ ರಹಾನೆ ಕೂಡ 21 ರನ್​ಗಳಿಗೆ ಸುಸ್ತಾದರು. ಆ ಬಳಿಕ ಬಂದ ಗ್ರೀನ್ ಇನ್ನಿಂಗ್ಸ್ ಕೇವಲ 4 ರನ್​ಗಳಿಗೆ ಅಂತ್ಯವಾಯಿತು. ಆ ಬಳಿಕ ಜೊತೆಯಾದ ಕನ್ನಡಿಗ ಮನೀಶ್ ಹಾಗೂ ಪೊವೆಲ್ ಜೊತೆಯಾಟ ನಡೆಸಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು.

ಮನೀಶ್ ಪಾಂಡೆ 33 ಎಸೆತಗಳಲ್ಲಿ 6 ಬೌಂಡರಿ ಸಹಿತ 45 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿ ಔಟಾದರೆ, ಪೊವೆಲ್ ಇನ್ನಿಂಗ್ಸ್ ಕೂಡ 40 ರನ್​ಗಳಿಗೆ ಅಂತ್ಯವಾಯಿತು. ಕೊನೆಯಲ್ಲಿ ರಿಂಕು ಸಿಂಗ್ ಗೆಲುವಿನ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಅಮೋಘ ಜಯ ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭೀಕರ ಅಪಘಾತ ಆದರೂ ಬಿಡದ ದ್ವೇಷ; ಅನುರಾಗ್ ದೊಭಾಲ್ ತಂದೆಯಿಂದ 60 ಪುಟಗಳ ದೂರು – Kannada News | Youtuber Anurag Dobhal UK07 Rider alleges family conspiracy recalls hospital ordeal after Accident

ಪ್ರಖ್ಯಾತ ಯೂಟ್ಯೂಬರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಭಾಲ್ (UK07 Rider) ಮತ್ತೊಮ್ಮೆ ತಮ್ಮ ವೈಯಕ್ತಿಕ ಜೀವನದ ವಿವಾದಗಳಿಂದಾಗಿ ಭಾರಿ ಸುದ್ದಿಯಲ್ಲಿದ್ದಾರೆ. ತಮ್ಮ ಅಂತರ್ ಜಾತಿ ವಿವಾಹದ ಕಾರಣಕ್ಕಾಗಿ ಕುಟುಂಬಸ್ಥರು ತಮಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಅವರು ಈ ಹಿಂದೆ ಆರೋಪಿಸಿದ್ದರು. ಈಗ ಪೋಷಕರೇ ತಮ್ಮ ವಿರುದ್ಧ ಮತ್ತೆ ದೊಡ್ಡ ಸಂಚು ರೂಪಿಸುತ್ತಿದ್ದಾರೆ ಎಂದು ಅನುರಾಗ್ ದೊಭಾಲ್ (Anurag Dobhal) ಅವರು ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಕಾರು ಅಪಘಾತದ ಬಳಿಕ ಆಸ್ಪತ್ರೆಯಲ್ಲಿ ತಾವು ಅನುಭವಿಸಿದ ನರಕಯಾತನೆಯನ್ನು ಬಿಚ್ಚಿಟ್ಟಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಲೈವ್ ಸ್ಟ್ರೀಮ್ ನಡೆಯುತ್ತಿದ್ದಾಗಲೇ ಕಾರು ಅಪಘಾತಕ್ಕೀಡಾಗಿ, ಆತ್ಮಹತ್ಯೆಗೆ ಯತ್ನಿಸಿದ ಆರೋಪ ಎದುರಿಸಿದ್ದ ಅನುರಾಗ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಬುಧವಾರ (ಮೇ 20) ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ತಾವು ಹಳೆಯದ್ದನ್ನೆಲ್ಲಾ ಮರೆತು ಹೊಸ ಜೀವನ ಆರಂಭಿಸಲು ನಿರ್ಧರಿಸಿದ್ದರೂ, ಕುಟುಂಬದವರು ಮಾತ್ರ ತಮಗೆ ತೊಂದರೆ ಕೊಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದ್ದಾರೆ.

ಮಾರ್ಚ್ 8ರಂದು ತಮಗೆ ಭೀಕರ ಕಾರು ಅಪಘಾತವಾದಾಗ ಹೆತ್ತವರು ತಮ್ಮ ಜೊತೆಗಿರುತ್ತಾರೆ ಎಂದು ಅನುರಾಗ್ ಭಾವಿಸಿದ್ದರು. ಆದರೆ ವಾಸ್ತವವೇ ಬೇರೆಯಾಗಿತ್ತು. ಇತ್ತೀಚೆಗೆ ಕೆಲಸದ ನಿಮಿತ್ತ ಡೆಹ್ರಾಡೂನ್‌ಗೆ ಹೋದಾಗ ಪೊಲೀಸರಿಂದ ಕರೆ ಬಂದಿದ್ದು, ಅಲ್ಲಿ ತಮಗೆ ಶಾಕಿಂಗ್ ಸತ್ಯವೊಂದು ತಿಳಿದುಬಂದಿದೆ ಎಂದು ಅನುರಾಗ್ ಹೇಳಿದ್ದಾರೆ.

‘ನನಗೆ ಅಪಘಾತವಾದ ಅದೇ ರಾತ್ರಿ, ನನ್ನ ತಂದೆ ಪೊಲೀಸ್ ಠಾಣೆಗೆ ಹೋಗಿ ನನ್ನ ವಿರುದ್ಧವೇ ದೂರು ದಾಖಲಿಸಿದ್ದರು. ಆ ಪತ್ರದಲ್ಲಿ ನನ್ನ ವಿರುದ್ಧ ಹಲವು ವಿಷಯಗಳನ್ನು ಬರೆಯಲಾಗಿತ್ತು. ಈಗ ತನಿಖೆ ಮುಂದುವರಿದಿದ್ದು, ನನ್ನ ಕುಟುಂಬದವರು ನನ್ನ ವಿರುದ್ಧ 50-60 ಪುಟಗಳ ಸುದೀರ್ಘ ದೂರನ್ನು ನೀಡಿದ್ದಾರೆ. ಅದರಲ್ಲಿ ಬರೆದಿರುವ ವಿಷಯಗಳನ್ನು ಓದಿ ನನ್ನ ತಲೆ ಕೆಟ್ಟುಹೋಗಿದೆ’ ಎಂದು ಅನುರಾಗ್ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ ಸ್ಥಿತಿ ಗಂಭೀರ: ಹೆಚ್ಚಿದೆ ಶ್ವಾಸಕೋಶದ ಸೋಂಕು

ಅಪಘಾತದ ನಂತರ ಆಸ್ಪತ್ರೆಯಲ್ಲಿದ್ದ ಕಠಿಣ ದಿನಗಳನ್ನು ನೆನೆದು ಅನುರಾಗ್ ತೀವ್ರ ಭಾವುಕರಾಗಿದ್ದಾರೆ. ಅಪಘಾತದ ಗಾಯಗಳಿಂದಾಗಿ ಇಡೀ ಒಂದು ತಿಂಗಳು ಹಾಸಿಗೆಯಿಂದ ಏಳಲು ಸಾಧ್ಯವಾಗಿರಲಿಲ್ಲ. ‘ಒಂದು ತಿಂಗಳು ನಾನು ಹೇಗೆ ಕಾಲ ಕಳೆದಿದ್ದೇನೆ ಎಂದು ನನಗೆ ಮಾತ್ರ ಗೊತ್ತು. ಮಲಮೂತ್ರ ವಿಸರ್ಜನೆಗೂ ನಾನು ಡೈಪರ್ ಬಳಸಬೇಕಾಗಿತ್ತು. ಅದು ನನ್ನ ಪಾಲಿಗೆ ಅತ್ಯಂತ ನಾಚಿಕೆಗೇಡಿನ ಮತ್ತು ಅವಮಾನಕರ ವಿಷಯವಾಗಿತ್ತು. ನನ್ನ ಜೀವನದ ಅತ್ಯಂತ ಕೆಟ್ಟ ಹಂತ ಅದು’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

2026-27 ರ ದೇಶೀಯ ಕ್ರಿಕೆಟ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – Kannada News | BCCI Unveils 2026 27 Domestic Cricket Schedule: 1,788 Matches, Ranji and Nayudu Changes

ಐಪಿಎಲ್ (IPL 2026) ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 2026-27ರ ದೇಶೀಯ ಕ್ರಿಕೆಟ್ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಅವೃತ್ತಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳೆರಡನ್ನು ಸೇರಿ ಒಟ್ಟು 1,788 ಪಂದ್ಯಗಳು ನಡೆಯಲಿವೆ. ಈ ದೇಶೀಯ ಸೀಸನ್ ಆಗಸ್ಟ್ 23, 2026 ರಂದು ದುಲೀಪ್ ಟ್ರೋಫಿಯೊಂದಿಗೆ ಪ್ರಾರಂಭವಾಗುತ್ತದೆ. ಆರು ವಲಯ ತಂಡಗಳ ನಡುವೆ ಈ ಪಂದ್ಯಾವಳಿ ಟೆಸ್ಟ್ ಮಾದರಿಯಲ್ಲಿ ನಡೆಯಲಿದೆ. ಆ ನಂತರ ಅಕ್ಟೋಬರ್ 1 ರಂದು ಇರಾನಿ ಕಪ್ ನಡೆಯಲಿದೆ. ಬಿಸಿಸಿಐ ಬಹು-ದಿನದ ಕ್ರಿಕೆಟ್‌ಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಣಜಿ ಟ್ರೋಫಿ ಮತ್ತು ಕರ್ನಲ್ ಸಿ.ಕೆ. ನಾಯುಡು ಟ್ರೋಫಿಯನ್ನು ಎರಡು ಹಂತಗಳಲ್ಲಿ ಆಡಲು ನಿರ್ಧರಿಸಿದೆ. ಇದು ಆಟಗಾರರ ತಯಾರಿಗೆ ಸಮಯವನ್ನು ನೀಡುತ್ತದೆ. ರಣಜಿ ಟ್ರೋಫಿಯ ಎಲೈಟ್ ಗುಂಪು ನಾಲ್ಕು ಗುಂಪುಗಳಲ್ಲಿ ಆಡುವ 32 ತಂಡಗಳನ್ನು ಒಳಗೊಂಡಿರುತ್ತದೆ, ಪ್ಲೇಟ್ ಗುಂಪು ಆರು ತಂಡಗಳನ್ನು ಒಳಗೊಂಡಿರುತ್ತದೆ.

ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆಗಳು

ಕರ್ನಲ್ ಸಿ.ಕೆ. ನಾಯುಡು ಟ್ರೋಫಿ ಹಾಲಿ ವಿಜೇತ ತಂಡ ಹಾಗೂ ರೆಸ್ಟ್ ಆಫ್ ಇಂಡಿಯಾ ತಂಡಗಳ ನಡುವೆ ಅಕ್ಟೋಬರ್ 1 ರಿಂದ 4 ರವರೆಗೆ ನಡೆಯಲಿದೆ. ಇದಲ್ಲದೆ, ಪುರುಷರ U23 ರಾಜ್ಯ A ಟ್ರೋಫಿ ಮತ್ತು ವಿಜಯ್ ಟ್ರೋಫಿಯನ್ನು ಈಗ ಏಕದಿನ ಮಾದರಿಯ ಬದಲಿಗೆ ಟಿ20 ಸ್ವರೂಪದಲ್ಲಿ ಆಡಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ, ಕೂಚ್ ಬೆಹಾರ್ ಟ್ರೋಫಿಯ (ಎಲೈಟ್ ಗ್ರೂಪ್) ನಾಕೌಟ್ ಪಂದ್ಯಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಆಡಿಸಲಾಗುತ್ತಿದೆ. ಏತನ್ಮಧ್ಯೆ, ವಿಜಯ್ ಮರ್ಚೆಂಟ್ ಟ್ರೋಫಿ (U16) ಯನ್ನು ಮರು ನಿಗದಿಪಡಿಸಲಾಗಿದ್ದು, ಈ ಟ್ರೋಫಿ ನವೆಂಬರ್‌ನಿಂದ ಜನವರಿವರೆಗೆ ನಡೆಯಲಿದೆ.

IND vs AFG: ರಿಷಭ್ ಪಂತ್​ಗೆ ಡಬಲ್ ಶಾಕ್ ನೀಡಿದ ಬಿಸಿಸಿಐ

ರಣಜಿ ಟ್ರೋಫಿಗೆ ಗುಂಪುಗಳು ಇಂತಿವೆ

  • ಎಲೈಟ್ ಎ – ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ವಿದರ್ಭ, ಬರೋಡಾ, ಉತ್ತರ ಪ್ರದೇಶ, ಪುದುಚೇರಿ, ಗೋವಾ.
  • ಎಲೈಟ್ ಬಿ – ಕರ್ನಾಟಕ, ಆಂಧ್ರ, ಸೌರಾಷ್ಟ್ರ, ಛತ್ತೀಸ್‌ಗಢ, ಹೈದರಾಬಾದ್, ತ್ರಿಪುರ, ಪಂಜಾಬ್, ಅಸ್ಸಾಂ.
  • ಎಲೈಟ್ ಸಿ – ಬಂಗಾಳ, ಜಾರ್ಖಂಡ್, ಮಹಾರಾಷ್ಟ್ರ, ಸರ್ವೀಸಸ್, ಗುಜರಾತ್, ಕೇರಳ, ದೆಹಲಿ, ಒಡಿಶಾ.
  • ಎಲೈಟ್ ಡಿ – ಉತ್ತರಾಖಂಡ, ಮುಂಬೈ, ಹರಿಯಾಣ, ರೈಲ್ವೇಸ್, ರಾಜಸ್ಥಾನ, ತಮಿಳುನಾಡು, ಹಿಮಾಚಲ ಪ್ರದೇಶ, ಚಂಡೀಗಢ.
  • ಪ್ಲೇಟ್ – ನಾಗಾಲ್ಯಾಂಡ್, ಮಣಿಪುರ, ಮೇಘಾಲಯ, ಸಿಕ್ಕಿಂ, ಮಿಜೋರಾಂ, ಅರುಣಾಚಲ ಪ್ರದೇಶ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ? ಹೇಳಿ ನಿಟ್ಟುಸಿರು ಬಿಟ್ಟ ಅಧಿಕಾರಿ

ಬೆಂಗಳೂರು, (ಮೇ 21): ಆನೇಕಲ್ (Anekal) ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ಪ್ರೀತಿಸಿದ (Love) ಯುವತಿ ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದ ಸೋಮಶೇಖರ್ ಎಂಬ ಯುವಕ ಟವರ್ ಹತ್ತಿ ಹೈಡ್ರಾಮಾ ಸೃಷ್ಟಿಸಿದ್ದ. ವಿಷಯ ತಿಳಿಯುತ್ತಿದ್ದಂತೆಯೇ ಕುಡಲೇ ಸ್ಥಳಕ್ಕೆ ದೌಡಾಯಿಸಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ, ಯುವಕನ್ನ ಕೆಳಗಿಳಿಸಲು ಹರಸಾಹಸವೇ ಪಟ್ಟರು. ಆರಂಭದಲ್ಲಿ ಎಷ್ಟು ಮನವೊಲಿಸಿದರೂ ಸಹ ಸೋಮಶೇಖರ್ ಕೆಳಗೆ ಇಳಿಯಲೇ ಇಲ್ಲ. ಅಂತಿಮವಾಗಿ ಅದ್ಹೇಗೋ ಕಸರತ್ತು ಮಾಡಿ ಮನವೊಲಿಸಿ ಸೋಮಶೇಖರ್ ನನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ, ಸೋಮಶೇಖರ್ ಮನವೊಲಿಸಿ ಟವರ್ ಮೇಲಿಂದ ಕೆಳಗಿಳಿಸುವಷ್ಟರಲ್ಲೇ ಜನ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪಟ್ಟ ಪಡಿಪಾಟಲು ಅಷ್ಟಿಷ್ಟಲ್ಲ. ಇನ್ನು ಏನಂತ ಮನವೊಲಿಸಿ ಸೋಮಶೇಖರ್ ನನ್ನು ಕೆಳಗೆ ಇಳಿಸಲಾಯ್ತು? ಹೇಗೆಲ್ಲಾ ಹರಸಾಹಸಪಡಬೇಕಾಯ್ತು ಎನ್ನುವುದನ್ನು ಅಗ್ನಿ ಶಾಮಕದ ದಳ ಅಧಿಕಾರಿ ಎಳೆಎಳೆಯಾಗಿ ಹೇಳಿ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ: ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಯುವಕನ ಹೈಡ್ರಾಮಾ: ಪ್ರೇಮಿಯ ಹುಚ್ಚಾಟಕ್ಕೆ ಜನರು ಕಂಗಾಲು

Source link

100 ಸಿಬ್ಬಂದಿಯಿಂದ 36 ಅಡ್ಡೆಗಳ ಮೇಲೆ ದಾಳಿ: ಇಡೀ ಬಾಗಲಕೋಟೆಯ ಅಕ್ರಮ ಮರಳು ಜಾಲಾಡಿದ ಲೋಕಾಯುಕ್ತ – Kannada News | 100 Personnel Raid 36 Locations: Lokayukta Cracks Down on Illegal Sand Mining Across Bagalkote

ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಲೋಕಾ ದಾಳಿ
Image Credit source: tv9 kannada

ಬಾಗಲಕೋಟೆ, ಮೇ 20: ಜಿಲ್ಲಾದ್ಯಂತ ದೀರ್ಘಕಾಲದಿಂದ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ (Illegal sand mining) ಬ್ರೇಕ್ ಹಾಕಲು ಲೋಕಾಯುಕ್ತ ಪೊಲೀಸರು (Lokayukta raid) ಭರ್ಜರಿ ಬೇಟೆಯಾಡಿದ್ದಾರೆ. ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಮಾರ್ಗದರ್ಶನದಲ್ಲಿ ಹಾಗೂ ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಹಾನಿಂಗ ನಂದಗಾವಿ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ ಮಾಡಲಾಗಿದೆ. ಆ ಮೂಲಕ ಜಿಲ್ಲೆಯ ಇತಿಹಾಸದಲ್ಲೇ ಅತ್ಯಂತ ಬೃಹತ್ ಕಾರ್ಯಾಚರಣೆ ಇದಾಗಿದೆ.

ಮುಖ್ಯಾಂಶಗಳು

  • ಬಾಗಲಕೋಟೆ ಅಕ್ರಮ ಮರಳು ಗಣಿಗಾರಿಕೆ ಮೇಲೆ ಲೋಕಾಯುಕ್ತರ ಭರ್ಜರಿ ದಾಳಿ
  • ಅಕ್ರಮ ತಡೆಗಟ್ಟಲು ವಿಫಲರಾದ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು
  • ತಪ್ಪಿತಸ್ಥ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ

ಅಧಿಕಾರಿಗಳ ವಿರುದ್ಧವೇ ದೂರು 

ಅಕ್ರಮ ಮರಳುಗಾರಿಕೆಯನ್ನು ತಡೆಯುವಲ್ಲಿ ಸಂಪೂರ್ಣ ವಿಫಲರಾದ ಹಿನ್ನೆಲೆ ಬಾಗಲಕೋಟೆ ಜಿಲ್ಲಾಧಿಕಾರಿ ಸೇರಿದಂತೆ ಬೆಂಗಳೂರಿನ ಗಣಿಗಾರಿಕೆ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕರು, ಬಾದಾಮಿ, ಮುಧೋಳ, ಜಮಖಂಡಿ, ಹುನಗುಂದ ಹಾಗೂ ಇಳಕಲ್ ತಾಲೂಕುಗಳ ತಹಶೀಲ್ದಾರ್​​ಗಳ ವಿರುದ್ಧವೇ ಲೋಕಾಯುಕ್ತ ಅಧಿಕಾರಿಗಳು ಸ್ವಯಂಪ್ರೇರಿತ (ಸುಮೋಟೋ) ದೂರು ದಾಖಲಿಸಿದ್ದಾರೆ.

100ಕ್ಕೂ ಹೆಚ್ಚು ಸಿಬ್ಬಂದಿ, 8 ಜಿಲ್ಲೆಗಳ ಅಧಿಕಾರಿಗಳಿಂದ ಜಂಟಿ ಆಪರೇಷನ್

ಬಾಗಲಕೋಟೆ ಜಿಲ್ಲೆಯ ಮುಧೋಳ, ಬಾದಾಮಿ, ಹುನಗುಂದ, ಇಳಕಲ್, ಜಮಖಂಡಿ ಹಾಗೂ ಬಾಗಲಕೋಟೆ ತಾಲೂಕುಗಳ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದೆ. ಜಿಲ್ಲೆಯ ಒಟ್ಟು 24 ಪ್ರಮುಖ ಸ್ಥಳಗಳಲ್ಲಿದ್ದ 36 ಅಕ್ರಮ ಮರಳು ಸಂಗ್ರಹಣಾ ಅಡ್ಡೆಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪಡೆ ದಾಳಿ ಮಾಡಿದೆ. ಈ ಬೃಹತ್ ಕಾರ್ಯಾಚರಣೆಗಾಗಿ ಕೇವಲ ಬಾಗಲಕೋಟೆ ಅಷ್ಟೇ ಅಲ್ಲದೆ ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ, ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಸೇರಿದಂತೆ ಒಟ್ಟು 8 ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ. ಸುಮಾರು 30 ಲೋಕಾಯುಕ್ತ ಅಧಿಕಾರಿಗಳು ಹಾಗೂ 100ಕ್ಕೂ ಹೆಚ್ಚು ಸಿಬ್ಬಂದಿ ವರ್ಗದವರು ಈ ಜಂಟಿ ಆಪರೇಷನ್‌ನಲ್ಲಿ ಪಾಲ್ಗೊಂಡಿದ್ದರು.

ಹಿಟಾಚಿ, ದೋಣಿ, ಟಿಪ್ಪರ್‌ಗಳು ಜಪ್ತಿ

ಅಕ್ರಮವಾಗಿ ಮರಳು ಎತ್ತಲು ಮತ್ತು ಸಾಗಿಸಲು ಬಳಸುತ್ತಿದ್ದ ಕೋಟ್ಯಂತರ ರೂ ಮೌಲ್ಯದ ಯಂತ್ರೋಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಲೋಕಾಯುಕ್ತ ದಾಳಿ ವೇಳೆ 65 ಟಿಪ್ಪರ್‌ಗಳು, 18 ಹಿಟಾಚಿ ಯಂತ್ರಗಳು, ನದಿಗಳಿಂದ ಮರಳು ತೆಗೆಯಲು ಬಳಸುತ್ತಿದ್ದ 14 ಯಾಂತ್ರೀಕೃತ ದೋಣಿಗಳು, 6 ಟ್ರ್ಯಾಕ್ಟರ್‌ಗಳು ಹಾಗೂ 1 ಜೆಸಿಬಿಯನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ಓದಿ: ರಾಯಚೂರು: ಅಕ್ರಮ ಮರಳುಗಾರಿಕೆ ಮಟ್ಟಹಾಕಲು ಜಿಲ್ಲಾಡಳಿತ ಸನ್ನದ್ಧ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

ಗಣಿ, ಪರಿಸರ, ಪೊಲೀಸ್, ಅರಣ್ಯ, ತೆರಿಗೆ, ಸಾರಿಗೆ ಇಲಾಖೆ ಮತ್ತು ತಾಲೂಕು ಪಂಚಾಯತ್ ಇಒಗಳಿಗೆ ಅಕ್ರಮದಲ್ಲಿ ತೊಡಗಿದವರ ವಿರುದ್ಧ ಕೂಡಲೇ ಕಾನೂನು ಕ್ರಮಕೈಗೊಂಡು ವರದಿ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳು ಸೂಚಿಸಿದ್ದಾರೆ. ಜಿಲ್ಲೆಯಾದ್ಯಂತ ಅಕ್ರಮ ಮರಳುಗಾರಿಕೆ ಪ್ರಾಥಮಿಕವಾಗಿ ಗುರುತಿಸಲ್ಪಟ್ಟಿದ್ದು, ತನಿಖೆ ನಂತರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೇ 21ರಂದು ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಇಲ್ಲಿದೆ ಪರ್ಯಾಯ ಮಾರ್ಗ – Kannada News | Traffic diversions around Freedom Park in Bengaluru On May 21 Over Youth Congress Protest Against NEET Scam

ಬೆಂಗಳೂರು, (ಮೇ 20): NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆಯಲ್ಲಿ
ಕೇಂದ್ರದ ವಿರುದ್ಧ ನಾಳೆ (ಗುರುವಾರ) ಯುವ ಕಾಂಗ್ರೆಸ್  ಫ್ರೀಡಂಪಾರ್ಕ್​ನಲ್ಲಿ ಪ್ರತಿಭಟನೆ (Youth Congress Protest) ನಡೆಸಲಿದೆ. ಇದರಿಂದ ಮೇ 21ರ ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ (Bengaluru) ಫ್ರೀಡಂಪಾರ್ಕ್​ ಸುತ್ತಮುತ್ತ ವಾಹನ ಸಂಚಾರ ಮಾರ್ಗ ಬದಲಾವಣೆ (Traffic diversions) ಮಾಡಲಾಗಿದೆ. ಫ್ರೀಡಂಪಾರ್ಕ್ (Freedom Park)​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಇದಕ್ಕೆ ಪರ್ಯಾಯ ಮಾರ್ಗ ಈ ಕೆಳಗಿನಂತಿದೆ ನೋಡಿ.

ಮುಖ್ಯಾಂಶಗಳು

  • NEET UG ಪ್ರಶ್ನೆಸೋರಿಕೆಯಿಂದ 4 ವಿದ್ಯಾರ್ಥಿಗಳು ಆತ್ಮಹತ್ಯೆ ಹಿನ್ನೆಲೆ
  • ಕೇಂದ್ರದ ವಿರುದ್ಧ ಫ್ರೀಡಂಪಾರ್ಕ್​ನಲ್ಲಿ ನಾಳೆ ಯುವ ಕಾಂಗ್ರೆಸ್ ಪ್ರತಿಭಟನೆ
  • ಬೆಂಗಳೂರಿನ ಫ್ರೀಡಂಪಾರ್ಕ್​ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
  • ನಾಳೆ (ಮೇ 21) ಬೆಳಗ್ಗೆ 7.30ರಿಂದ ಸಂಜೆ 4 ಗಂಟೆಯವರೆಗೆ ಮಾರ್ಗ ಬದಲಾವಣೆ

ವಾಹನ ಸಂಚಾರ ಮಾರ್ಗ ಬದಲಾವಣೆ

ಫ್ರೀಡಂಪಾರ್ಕ್​​ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಹೀಗಾಗಿ ಕೆ.ಜಿ.ರಸ್ತೆ ಮೂಲಕ ಮೈಸೂರು ಬ್ಯಾಂಕ್​ ವೃತ್ತದಿಂದ ಬಲತಿರುವು ಪಡೆದು ಫ್ರೀಡಂಪಾರ್ಕ್​​ ಕಡೆಗೆ ಬರುವ ವಾಹನಗಳು ಅರಮನೆ ರಸ್ತೆ ಮೂಲಕ ಮಹಾರಾಣಿ ಅಂಡರ್​ಪಾಸ್ ರಸ್ತೆಯನ್ನು ಕಡ್ಡಾಯವಾಗಿ ಬಳಸಬೇಕು ಎಂದು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​

ಪ್ರತಿಭಟನೆಕಾರರು ರೈಲು ನಿಲ್ದಾಣದಿಂದ ಫ್ಲೈಓವರ್ ರಸ್ತೆಯಲ್ಲಿ ಆಗಮಿಸಲಿದ್ದಾರೆ. ಕಾಲ್ನಡಿಗೆಯಲ್ಲಿ ಬರುವುದರಿಂದ ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್​.ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ಹಳೇ ಜೆಡಿಎಸ್​​ ಕಚೇರಿ ರಸ್ತೆಯನ್ನು ಬಳಸಲು ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ.

ತಾತ್ಕಾಲಿಕವಾಗಿ ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್​​ ಜಂಕ್ಷನ್ ಕಡೆಗೆ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಗಾಂಧಿನಗರ ಕಡೆಗೆ ಬರುವ ವಾಹನಗಳು ಈ ರಸ್ತೆ ಬಳಸಬಹುದಾಗಿದೆ. ಇನ್ನು ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್​ವರೆಗೆ, ವೈ.ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಅರಮನೆ ರಸ್ತೆ, ಕೆ.ಜಿ.ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version