ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು, ಏಪ್ರಿಲ್​ 19: ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾಸಿನ್(23), ಫಾತಿಮ್(30), ಹುಮಾಯೂನ್(7), ನೇಹಾನ್(19), ಅಲೀಂ(13) ಸೇರಿ 6 ಜನ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ.

Source link

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕೆಗಳಿಗೆ ಇರಾನ್​ನ ‘ಸೊಳ್ಳೆ ಪಡೆಗಳ’ ಕಾಟ – Kannada News | Irans mosquito fleet becomes big threat to us navy in hormuz strait

ಟೆಹರಾನ್, ಏಪ್ರಿಲ್ 19: ಜಗತ್ತಿನ ಶೇ. 20 ತೈಲ ಸಾಗಣೆಯಾಗುವ ಹಾರ್ಮುಜ್ ಜಲಸಂಧಿಯಲ್ಲಿ (hormuz strait) ಅಮೆರಿಕ ಹಾಗೂ ಇರಾನ್ ಮಧ್ಯೆ ತಡೆಗಾಗಿ ಜಂಗೀಕುಸ್ತಿ ನಡೆದಿದೆ. ನೀವು ಪಟ್ಟುಹಾಕಿದರೆ ನಾ ಪಟ್ಟು ಹಾಕುತ್ತೇನೆ ಎಂಬಂತಾಗಿದೆ. ಅಮೆರಿಕದ ನೌಕಾಪಡೆಯು ಈ ಹಾರ್ಮುಜ್ ಜಲಸಂಧಿಗೆ ದಿಗ್ಬಂಧನ ಹಾಕಿದ ಬಳಿಕ ತನ್ನ ಮುಷ್ಟಿಯನ್ನು ಸಡಿಲಿಸಿದ್ದ ಇರಾನ್ ಇದೀಗ ಮತ್ತೊಮ್ಮೆ ತಡೆ ಹಾಕಿದೆ. ಜಲಸಂಧಿಯಲ್ಲಿ ಇರುವ ಅಮೆರಿಕನ್ ನೌಕೆಗಳಿಗೆ ಈಗ ಇರಾನ್​ನ ‘ಸೊಳ್ಳೆ ಪಡೆ’ಗಳ (Iran’s mosquito fleet) ಕಾಟ ಶುರುವಾಗಿದೆ. ಈ ಸಣ್ಣ ಸಣ್ಣ ದೋಣಿಗಳ ಉಪಟಳಕ್ಕೆ ಅಮೆರಿಕದವರು ಹೈರಾಣಾಗಿ ಹೋಗುತ್ತಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಅಮೆರಿಕದ ಪ್ರಯತ್ನ ಪದೇ ಪದೇ ವಿಫಲವಾಗುತ್ತಿದೆ. ಇರಾನ್​ನ ದೊಡ್ಡ ಹಡಗುಗಳನ್ನು ಹೊಡೆದುಹಾಕುವ ಅಮೆರಿಕಕ್ಕೆ ಈ ಸಣ್ಣ ದೋಣಿಗಳು ಬಹಳ ಅಪಾಯಕಾರಿ ಎನಿಸಿವೆ.

ಇದನ್ನೂ ಓದಿ: ‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು

ಇರಾನ್​ನ ಸೊಳ್ಳೆ ಪಡೆ ದೋಣಿಗಳು ಯಾಕೆ ಅಪಾಯಕಾರಿ?

ವಿಹಾರಕ್ಕೆಂದು ಬಳಸಲಾಗುವ ದೋಣಿಗಳನ್ನೇ ಇರಾನ್ ಮಾರ್ಪಡಿಸಿಕೊಂಡು ಸಂಗ್ರಾಮಕ್ಕೆ ಬಳಸುತ್ತಿದೆ. ಈ ದೋಣಿಗಳಿಗೆ ರಾಕೆಟ್ ಚಾಲಿತ ಗ್ರೆನೇಡ್ ಬಾಂಬುಗಳನ್ನು ಉಡಾಯಿಸುವ ವ್ಯವಸ್ಥೆ ಮಾಡಲಾಗಿರುತ್ತದೆ. ಇನ್ನೂ ಹಲವು ದೋಣಿಗಳಲ್ಲಿ ಮೆಷೀನ್ ಗನ್​ಗಳಿರುತ್ತವೆ. ಇವು ಬಹಳ ವೇಗವಾಗಿ ಸಾಗಿ ಹೋಗಬಲ್ಲುವು. 100 ನಾಟ್​ವರೆಗಿನ ವೇಗ ಅಥವಾ ಗಂಟೆಗೆ 185 ಕಿಮೀವರೆಗಿನ ವೇಗದಲ್ಲಿ ಇವು ಓಡಬಲ್ಲುವು.

ಇರಾನ್​ನ ಸರ್ವೋಚ್ಚ ನಾಯಕರ ವೈಯಕ್ತಿಕ ಸೈನ್ಯ ಪಡೆಯಾದ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ ಈ ದೋಣಿ ಪಡೆಗಳನ್ನು ನಿಭಾಯಿಸುತ್ತದೆ. ಈ ಸೇನೆ ಅಸಾಂಪ್ರದಾಯಿಕ ಯುದ್ಧ ಕಲೆಗಳನ್ನು ಕರಗತ ಮಾಡಿಕೊಂಡಿದೆ. ಅದರ ವಿವಿಧ ರಣತಂತ್ರಗಳಲ್ಲಿ ಈ ಸೊಳ್ಳೆ ದೋಣಿ ತಂತ್ರವೂ ಇದೆ.

ಇದನ್ನೂ ಓದಿ: ಜಾಗತಿಕ ರಾಜಕೀಯದಲ್ಲಿ ಸಂಚಲನ, ಟ್ರಂಪ್ ಮತ್ತು ಪಾಕ್ ಸೇನಾ ಮುಖ್ಯಸ್ಥರ ‘ದೋಸ್ತಿ’ ಮೇಲೆ ಅಮೆರಿಕ ಗುಪ್ತಚರ ಇಲಾಖೆ ಕಣ್ಣು

ಹಾಗೆಯೇ, ಇರಾನ್​ನ ಸೊಳ್ಳೆ ಪಡೆಗಳಲ್ಲಿ ಸಣ್ಣ ಸಬ್​ಮರೈನ್​ಗಳು ಹಾಗೂ ಡ್ರೋನ್​ಗಳೂ ಇವೆ. ಇವುಗಳನ್ನು ಟ್ರ್ಯಾಕ್ ಮಾಡುವುದು ಅಷ್ಟು ಸುಲಭವಲ್ಲ. ಸೆಟಿಲೈಟ್​ಗಳ ಕಣ್ಣಿಗೆ ಇವು ಅಷ್ಟು ಸುಲಭಕ್ಕೆ ಬೀಳುವುದಿಲ್ಲ. ಇರಾನ್​ನ ಸೊಳ್ಳಿ ಪಡೆಯಲ್ಲಿ ಈ ಸಣ್ಣ ಸಣ್ಣ ದೋಣಿಗಳು, ಪುಟ್ಟ ಸಬ್​ಮರೈನ್​ಗಳು, ಡ್ರೋನ್​ಗಳು, ಮಿಸೈಲ್​ಗಳು ಮೊದಲಾದವು ಇವೆ. ಬಹಳ ಕ್ಷಿಪ್ರವಾಗಿ ಸಾಗಿ ಹಡಗುಗಳ ಮೇಲೆ ಆಕ್ರಮಣ ಮಾಡಿ, ಅಷ್ಟೇ ಬೇಗವಾಗಿ ಇವು ವಾಪಸ್ ಹೋಗಬಲ್ಲುವು. ಹೀಗಾಗಿ, ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕಾಪಡೆಗೆ ಇರಾನ್​ನ ಸೊಳ್ಳೆ ಪಡೆ ಮಗ್ಗುಲಮುಳ್ಳಾಗಿ ಪರಿಣಮಿಸಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Agriculture Jobs 2026: 890 AO/AAO Posts by KSDA KEA Apply Now!

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ:

ಈ ನೇಮಕಾತಿಯಲ್ಲಿ ಒಟ್ಟು 890 ಹುದ್ದೆಗಳಿದ್ದು, ಇವುಗಳಲ್ಲಿ ಕೃಷಿ ಅಧಿಕಾರಿ (AO) ಹುದ್ದೆಗಳು ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳು ಸೇರಿವೆ. ಈ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ (KK) ಮತ್ತು ಉಳಿಕೆ ಮೂಲ ವೃಂದ (RPC) ಎಂದು ವಿಂಗಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69,250 ರಿಂದ ರೂ. 1,34,200 ರವರೆಗಿನ ಅತ್ಯುತ್ತಮ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು, ರಾಜ್ಯದಾದ್ಯಂತ ವಿವಿಧ ಕೃಷಿ ಕೇಂದ್ರಗಳಲ್ಲಿ ಕೆಲಸ ಮಾಡುವ ಅವಕಾಶ ದೊರೆಯಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ ಕೃಷಿ (B.Sc Agriculture), ಬಿ.ಟೆಕ್ ಬಯೋಟೆಕ್ ಅಥವಾ ಕೃಷಿ ಎಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿಯನ್ನು ಕನಿಷ್ಠ 21 ವರ್ಷ ಮತ್ತು ಗರಿಷ್ಠ 40 ವರ್ಷಗಳವರೆಗೆ ನಿಗದಿಪಡಿಸಲಾಗಿದೆ. ನಿಯಮದಂತೆ ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಅಂಗವಿಕಲ ಮತ್ತು ವಿಧವೆಯರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ:

ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಒಬಿಸಿ ವರ್ಗದವರಿಗೆ ರೂ. 750, ಎಸ್‌ಸಿ/ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 500 ಹಾಗೂ ಮಾಜಿ ಸೈನಿಕರಿಗೆ ರೂ. 250 ಶುಲ್ಕ ನಿಗದಿಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲನೆಯದಾಗಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಎರಡನೆಯದಾಗಿ ಆಫ್‌ಲೈನ್ OMR ಮಾದರಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹರನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕ್ರಮ:

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಪೂರ್ಣವಾಗಿ ಓದಿ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು. ನಂತರ ಆನ್‌ಲೈನ್‌ನಲ್ಲಿ ಅಗತ್ಯ ದಾಖಲೆಗಳಾದ ಶೈಕ್ಷಣಿಕ ಪ್ರಮಾಣಪತ್ರಗಳು, ವಯಸ್ಸಿನ ಪುರಾವೆ ಮತ್ತು ಇತ್ತೀಚಿನ ಫೋಟೋಗಳೊಂದಿಗೆ ವಿವರಗಳನ್ನು ಭರ್ತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಿ, ಅರ್ಜಿಯನ್ನು ಸಲ್ಲಿಸಿದ (Submit) ನಂತರ ಅದರ ಪ್ರತಿಯನ್ನು ತೆಗೆದಿಟ್ಟುಕೊಳ್ಳುವುದು ಅತ್ಯಗತ್ಯ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:50 pm, Sun, 19 April 26

Source link

ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ – Kannada News | Karnataka leadership change Row: DCM DK Shivakumar Talks after Special Pooja in Mukti Mandir at Gadag

ಗದಗ, (ಏಪ್ರಿಲ್ 19): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡೆ ಸಂಪುಟ ಪುನಾರಚನೆ ಕೂಗು, ಮತ್ತೊಂದೆಡೆ ಇದೀಗ ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ ಬಂದಿದೆ. ಹೌದು….ಸಿಎಂ ಕುರ್ಚಿಗೆ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ಆದ್ರೆ, ಅದಕ್ಕೂ ಮುನ್ನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರದ ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಸಿಎಂ ಸ್ಥಾನದ ಬಗ್ಗೆ ವಿಶೇಷ ಪ್ರಾರ್ಥನೆ ಮಾಡಿಕೊಂಡಿದ್ದಾರೆಂದು ವಿಮಲ ರೇಣುಕಾಮುನಿ ಶಿವಾಚಾರ್ಯರು ತಿಳಿಸಿದ್ದಾರೆ.

ಈ ಬಗ್ಗೆ ಮುಕ್ತಿಮಂದಿರದ ವಿಮಲ ರೇಣುಕಾಮುನಿ ಶಿವಾಚಾರ್ಯರ ಮಾಧ್ಯಮಗಳಿಗೆ ಮಾತನಾಡಿದ್ದು,
ಸಿಎಂ ಸ್ಥಾನದ ಬಗ್ಗೆ ಸಂಕಲ್ಪ ಮಾಡಿ ಡಿಕೆ ಶಿವಕುಮಾರ್ ಅವರು ಪೂಜೆ ಮಾಡಿದ್ದಾರೆ. ಹಾಗೇ ಅವರಿಗೆ ಬಂದಿರುವ ಕಷ್ಟ ನಷ್ಟಗಳು ದೂರ ಆಗಲೆಂದು ಪ್ರಾರ್ಥಿಸಿದ್ದು, ವೀರಗಂಗಾಧರ ಗುರುಗಳು ಡಿ.ಕೆ.ಶಿವಕುಮಾರ್​ಗೆ ಆಶೀರ್ವಾದ ಮಾಡಲಿ ಎಂದಿದ್ದಾರೆ.

ಇದನ್ನೂ ನೋಡಿ: ಸಚಿವ ಜಮೀರ್ ಮತ್ತೆ ಜೆಡಿಎಸ್​​​​ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ

ಇನ್ನು ಈ ಬಗ್ಗೆ ಸ್ವತಃ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಾನು ಏನೂ ಮಾತನಾಡುವುದಿಲ್ಲ, ಕಾಲವೇ ಉತ್ತರ ಕೊಡುತ್ತದೆ. ವಿಶೇಷವಾದ ಪವಿತ್ರ ಸ್ಥಳ, ವೀರಗಂಗಾಧರ ಶ್ರೀಗಳ‌ ಲಿಂಗೈಕ್ಯರಾದ ಸ್ಥಳ. ಇಡೀ ಪ್ರಪಂಚ ಮಾನವ ಧರ್ಮದ ಮೇಲೆ ನಿಂತಿದೆ. ಬಿಡುವು ಸಿಕ್ಕಾಗ ಪುಸ್ತಕ ಬರೆದು ಸಮಾಜಕ್ಕೆ ತಿಳಿಸುತ್ತೇನೆ. ಈ ಮಠದ ಆಶೀರ್ವಾದ ಪಡೆದಿದ್ದೇನೆ, ದೊಡ್ಡ ಶಕ್ತಿ ಬಂದಿದೆ. ಯಾರೂ ಧರ್ಮ ಬೇಡ ಎನ್ನಲ್ಲ, ಅವರವರ ಧರ್ಮ ಕಾಪಾಡುತ್ತಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೆಸಿಬಿಯಿಂದ ಕಟ್ಟಡಗಳ ನೆಲಸಮ: ಕರಾವಳಿಯಲ್ಲಿ ಬುಲ್ಡೋಜರ್ ಬಾಬಾ ಆದ ಕಾಂಗ್ರೆಸ್ ಶಾಸಕ – Kannada News | Puttur MLA Ashok Rai Faces FIR: Unauthorized Demolition by JCB in Mangaluru

ಖಾಸಗಿ ಕಟ್ಟಡ ನೆಲಸಮ ಮಾಡಿದ ಅಶೋಕ್ ರೈImage Credit source: tv9 kannada

ಮಂಗಳೂರು, ಏಪ್ರಿಲ್​ 19: ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai)​​ ಸ್ವತಃ ಜೆಸಿಬಿ ಚಲಾಯಿಸಿ ಖಾಸಗಿ ಕಟ್ಟಡವನ್ನು ಅನಧಿಕೃತವಾಗಿ ನೆಲಸಮಗೊಳಿಸಿರುವ (Demolition) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಖಾಸಗಿ ಜಾಗದಲ್ಲಿ ನಡೆದಿದೆ. ಸದ್ಯ ಶಾಸಕರ ಈ ನಡೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ಪುತ್ತೂರು ಠಾಣೆಗೆ ದೇಗುಲ ಆಡಳಿತ ಮಂಡಳಿ ಹಾಗೂ ಶಾಸಕರ ವಿರುದ್ಧ ಕೋರ್ಟ್​ ರಿಸೀವರ್ ದೂರು ನೀಡಿದ್ದಾರೆ.

ಘಟನೆ ಹಿನ್ನೆಲೆ

ಜಿಲ್ಲೆಯ ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಖಾಸಗಿ ಜಾಗವಿದೆ. ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ದೈವ-ದೇವರ ಸಮಾಗಮದ ಆಚರಣೆಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಭಕ್ತರು ಸೇರುತ್ತಾರೆ. ಈ ಆಚರಣೆಗೆ ಜಾಗದ ಅಭಾವವಿದೆ ಎಂಬ ಕಾರಣ ನೀಡಿ, ಶಾಸಕ ಅಶೋಕ್ ರೈ ಅವರು ಜೆಸಿಬಿ ಮೂಲಕ ಅಲ್ಲಿನ ಖಾಸಗಿ ಕಟ್ಟಡಗಳನ್ನು ನೆಲಸಮಗೊಳಿಸಿದ್ದಾರೆ.

ಇದನ್ನೂ ಓದಿ: ಕೋಳಿ‌ ಕಾಳಗಕ್ಕೆ ಪೊಲೀಸ ‌ನಿರ್ಬಂಧ: ತಾವೇ ಮುಂದೆ ನಿಂತು ಕೋಳಿ‌ ಅಂಕ ಮಾಡಿಸಿದ ಕಾಂಗ್ರೆಸ್​ ಶಾಸಕ

ಇನ್ನು ಕಟ್ಟಡ ನೆಲಸಮ ಮಾಡಲು ಕೋರ್ಟ್ ಅನುಮತಿ ಇದೆ ಎಂದು ಹೇಳಿದ್ದಾರೆ. ಆದರೆ ಕಟ್ಟಡ ನೆಲಸಮ ಮಾಡಲು ಕೋರ್ಟ್​ನಿಂದ ಯಾವುದೇ ಆದೇಶ ಮಾಡಿರಲಿಲ್ಲ. ಹೀಗಾಗಿ ಇದು ಸದ್ಯ ವಿವಾದಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

ಜಾಗವನ್ನ ರಿಸೀವರ್ ಸುಪರ್ದಿಗೆ ನೀಡಿದ ಕೋರ್ಟ್ 

ಖಾಸಗಿ ಜಾಗದ ಮಾಲೀಕರ ನಡುವೆ ಆಸ್ತಿಯ ವಿಭಜನೆಗೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಯುತ್ತಿದೆ. ಈ ಕಾರಣದಿಂದ ನ್ಯಾಯಾಲಯವು ಡಾ. ಕೇದಿಗೆ ಅರವಿಂದ ರಾವ್ ಅವರನ್ನು ಕೋರ್ಟ್ ರಿಸೀವರ್ ಆಗಿ ನೇಮಿಸಿ, ಜಾಗವನ್ನು ಅವರ ಸುಪರ್ದಿಗೆ ನೀಡಿತ್ತು. ಕೋರ್ಟ್ ಸುಪರ್ದಿಯಲ್ಲಿರುವ ಜಾಗದಲ್ಲಿ ಕಾನೂನು ಬಾಹಿರವಾಗಿ ಪ್ರವೇಶಿಸಿ ಕಟ್ಟಡ ಧ್ವಂಸಗೊಳಿಸಿರುವುದು ಇದೀಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ.

ಇದನ್ನೂ ಓದಿ: ರಸ್ತೆ ಗುಂಡಿ ಕಂಡು ಶಾಸಕ ಅಶೋಕ್ ಕುಮಾರ್ ರೈ ಗರಂ: ನಗರಸಭೆ ಕಮಿಷನರ್​​ಗೆ ಖಡಕ್​ ಎಚ್ಚರಿಕೆ

ಈ ಘಟನೆಗೆ ಸಂಬಂಧಿಸಿದಂತೆ ಕೋರ್ಟ್ ರಿಸೀವರ್ ಡಾ. ಕೇದಿಗೆ ಅರವಿಂದ ರಾವ್ ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವಸ್ಥಾನದ ಆಡಳಿತ ಮಂಡಳಿಯ ಮೋಕ್ತೇಸರಾದ ಈಶ್ವರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಾಸಕರ ವಿರುದ್ಧ ಕ್ರಮಕ್ಕೆ ಮನವಿ

ಇನ್ನು ಘಟನಾ ಸ್ಥಳದಲ್ಲಿ ಸ್ವತಃ ಶಾಸಕರೇ ಭಾಗಿಯಾಗಿರುವುದರಿಂದ, ಎಫ್‌ಐಆರ್‌ನಲ್ಲಿ ಶಾಸಕ ಅಶೋಕ್ ರೈ ಅವರ ಹೆಸರನ್ನು ಸೇರಿಸಿಕೊಳ್ಳಲು ಪೊಲೀಸ್ ಇಲಾಖೆಯು ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 5:22 pm, Sun, 19 April 26

Source link

KSFES Recruitment 2026: KSFES ನೇಮಕಾತಿ; 1828 ಅಗ್ನಿಶಾಮಕ ಹುದ್ದೆಗಳ ಬೃಹತ್ ಅಧಿಸೂಚನೆ! – Kannada News | Ksfes recruitment 2026 1828 fire operator and driver jobs in karnataka

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ. ಒಟ್ಟು 1,828 ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ವಿಶೇಷವೆಂದರೆ, ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ಚಾಲಕ ಮತ್ತು ತಂತ್ರಜ್ಞ ಹುದ್ದೆಗಳನ್ನು ವಿಲೀನಗೊಳಿಸಿ ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಶ್ರೇಣಿಯನ್ನು ಸೃಷ್ಟಿಸಿದೆ.

ಹುದ್ದೆಗಳ ವಿವರ ಮತ್ತು ವೇತನ:

ಈ ನೇಮಕಾತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಅತಿ ಹೆಚ್ಚು ಅಂದರೆ 1,502 ಸ್ಥಾನಗಳನ್ನು ಮೀಸಲಿಡಲಾಗಿದೆ. ಉಳಿದಂತೆ 294 ಎಂಜಿನ್ ಚಾಲಕರು ಮತ್ತು 32 ಚಾಲಕ ತಂತ್ರಜ್ಞ ಹುದ್ದೆಗಳು ಭರ್ತಿಯಾಗಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 ರಿಂದ ರೂ. 83,700 ರವರೆಗಿನ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಕರ್ನಾಟಕದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಈ ಉದ್ಯೋಗಿಗಳು ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 10ನೇ ತರಗತಿ, ಪಿಯುಸಿ ಅಥವಾ ರಸಾಯನಶಾಸ್ತ್ರ ವಿಷಯದಲ್ಲಿ ವಿಜ್ಞಾನ ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿಯನ್ನು 18 ರಿಂದ 38 ವರ್ಷಗಳವರೆಗೆ ನಿಗದಿಪಡಿಸಲಾಗಿದೆ. ಸರ್ಕಾರಿ ನಿಯಮದಂತೆ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ. ಸಾಮಾನ್ಯ ವರ್ಗದವರಿಗೆ ರೂ. 250 ಹಾಗೂ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕವಿರುತ್ತದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ದೈಹಿಕ ಸಾಮರ್ಥ್ಯ ಮತ್ತು ಆಯ್ಕೆ ಪ್ರಕ್ರಿಯೆ:

ಅಗ್ನಿಶಾಮಕ ದಳದ ಕೆಲಸಕ್ಕೆ ದೈಹಿಕ ಸದೃಢತೆ ಅತ್ಯಗತ್ಯ. ಆದ್ದರಿಂದ ಕನಿಷ್ಠ 168 ಸೆಂ.ಮೀ ಎತ್ತರ, 50 ಕೆ.ಜಿ ತೂಕ ಮತ್ತು ಎದೆಯ ಅಳತೆ 81-86 ಸೆಂ.ಮೀ ಇರುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದವರಿಗೆ ದೈಹಿಕ ಸಹಿಷ್ಣುತೆ ಮತ್ತು ಸಾಮರ್ಥ್ಯ ಪರೀಕ್ಷೆಗಳನ್ನು (PST/PET) ನಡೆಸಿ ಅಂತಿಮವಾಗಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅಧಿಕೃತ ಅಧಿಸೂಚನೆ ಪ್ರಕಟವಾದ ನಂತರ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ, ಫೋನ್ ಸಂಖ್ಯೆ ಮತ್ತು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಮುಖ್ಯ. ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ, ಶುಲ್ಕ ಪಾವತಿಸಿದ ನಂತರ ಅರ್ಜಿಯನ್ನು ಸಲ್ಲಿಸಿ ಅದರ ಪ್ರತಿಯನ್ನು ಮುಂದಿನ ದಾಖಲಾತಿಗಳಿಗಾಗಿ ತೆಗೆದಿಟ್ಟುಕೊಳ್ಳಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ – Kannada News | Summer Safety Tips: Keep these things with you when you go out in the hot summer

ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಜೊತೆಗೆ ಸೆಖೆಯನ್ನು ತಡೆಯಲು ನಾವು ಧರಿಸುವ ಬಟ್ಟೆ, ಪಾದರಕ್ಷೆ ಸಹಿತ ಸೇವನೆ ಮಾಡುವಂತಹ ಆಹಾರದ ಬಗ್ಗೆಯೂ ಈ ಸಮಯದಲ್ಲಿ ಗಮನ ವಹಿಸುವ ಅತ್ಯಗತ್ಯ. ಅದರಲ್ಲೂ ಈ ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಖದ ಅಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲವೊಂದು ಅಗತ್ಯ ವಸ್ತುಗಳನ್ನು ನಮ್ಮೊಂದಿಗೆ ಕೊಂಡೊಯ್ಯಲೇಬೇಕು. ಈ ಸಣ್ಣ ಈ ವಿಷಯಗಳು ಶಾಖದ ಹೊಡೆತ, ನಿರ್ಜಲೀಕರಣ ಮತ್ತು ಬಿಸಿಲಿನ ಬೇಗೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಲು ಸಹಾಯ ಮಾಡುತ್ತವೆ. ಹಾಗಿದ್ರೆ ಈ ಉರಿ ಬಿಸಿಲಲ್ಲಿ ಮನೆಯಿಂದ ಹೊರಗೆ ಹೋಗುವಾಗ ಯಾವೆಲ್ಲಾ ವಸ್ತುಗಳನ್ನು ಕೊಂಡೊಯ್ಯಬೇಕು ಎಂಬುದನ್ನು ನೋಡೋಣ ಬನ್ನಿ.

ಬೇಸಿಗೆಯಲ್ಲಿ ಮನೆಯಿಂದ ಹೊರಗೆ ಹೋಗುವಾಗ ನಿಮ್ಮ ಬಳಿ ಈ ವಸ್ತುಗಳು ಇರಲಿ:

ನೀರಿನ ಬಾಟಲ್: ಈ ಸುಡುವ ಬಿಸಿಲಿನಲ್ಲಿ, ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು, ಇಲ್ಲದಿದ್ದರೆ ನೀವು ಹಲವಾರು ಕಾಯಿಲೆಗಳಿಗೆ ಗುರಿಯಾಗಬಹುದು. ಈ ಸಮಯದಲ್ಲಿ ನಿರ್ಜಲೀಕರಣ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ  ಹೊರಗೆ ಹೋಗುವಾಗ ಅಗತ್ಯವಾಗಿ ನೀರಿನ ಬಾಟಲ್‌ ನಿಮ್ಮ ಜೊತೆ ಇಟ್ಟುಕೊಳ್ಳಿ. ಮತ್ತು ಆಗಾಗ್ಗೆ ನೀರನ್ನು ಸೇವನೆ ಮಾಡುತ್ತಲೇ ಇರಿ.

ಸನ್‌ಗ್ಲಾಸ್: ಬೇಸಿಗೆಯಲ್ಲಿ ಹೊರಗೆ ಹೋಗುವಾಗ ಯಾವಾಗಲೂ ನಿಮ್ಮ ಬ್ಯಾಗ್‌ನಲ್ಲಿ ಸನ್ಗ್ಲಾಸ್ ಅನ್ನು ಇಟ್ಟುಕೊಳ್ಳಬೇಕು. ಇವು ನಿಮ್ಮ ಕಣ್ಣುಗಳನ್ನು ಸೂರ್ಯನ ಪ್ರಕರ ಶಾಖದಿಂದ ರಕ್ಷಿಸಲು ಅತ್ಯಗತ್ಯ. ಅಲ್ಲದೆ ಸನ್‌ಗ್ಲಾಸ್ ಕಣ್ಣಿನ ಸೋಂಕನ್ನು ತಡೆಗಟ್ಟಲು ಸಹ ಸಹಾಯ ಮಾಡುತ್ತವೆ. ಅವು ಯಾವಾಗಲೂ ನಿಮ್ಮ ಬ್ಯಾಗ್‌ನಲ್ಲಿ ಇರಲೇಬೇಕು.

ಸನ್‌ಸ್ಕ್ರೀನ್:  ಸೂರ್ಯನ ಹಾನಿಕಾರಕ ಕಿರಣಗಳಿಂದ ನಿಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಲು ನೀವು ನಿಮ್ಮ ಬ್ಯಾಗ್‌ನಲ್ಲಿ ಯಾವಾಗಲೂ ಸನ್‌ಸ್ಕ್ರೀನ್‌ ಇಟ್ಟುಕೊಳ್ಳಿ.  ನಿಮ್ಮ ಚರ್ಮವು ಒಣಗಲು ಅಥವಾ ಒರಟಾಗಲು ಪ್ರಾರಂಭಿಸಿದರೆ, ನೀವು ತಕ್ಷಣ ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಿ.

ಇದನ್ನೂ ಓದಿ: ಬೇಸಿಗೆಯ ಉರಿ ಬಿಸಿಲಿನಲ್ಲೂ ದೇಹವನ್ನು ತಂಪಾಗಿರಿಸಲು ಸುಲಭ ಸಲಹೆಗಳನ್ನು ಪ್ರಯತ್ನಿಸಿ

ಛತ್ರಿ: ಈ ಉರಿ ಬಿಸಿಲಿನಲ್ಲಿ ಹೊರಗೆ ಹೋಗುವ ಸಂದರ್ಭದಲ್ಲಿ ನೀವು ಖಂಡಿತವಾಗಿಯೂ ಒಂದು ಛತ್ರಿಯನ್ನು ಇಟ್ಟುಕೊಳ್ಳಬೇಕು. ಇದು ಸೂರ್ಯನ ಪ್ರಕರ ಶಾಖದಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ.

ಸ್ಕಾರ್ಫ್ : ಹೆಂಗಳೆಯರು ಹೊರಗೆ ಹೋಗುವ ಮೊದಲು ಖಂಡಿತವಾಗಿಯೂ ತಮ್ಮ ಬ್ಯಾಗಿನಲ್ಲಿ ಸ್ಕಾರ್ಫ್ ಇಟ್ಟುಕೊಳ್ಳಬೇಕು. ಇದು ನಿಮ್ಮನ್ನು  ಸೂರ್ಯನ ಹಾನಿಕಾರಕ ಕಿರಣಗಳಿಂದ ರಕ್ಷಿಸುತ್ತದೆ ಮತ್ತು ಬಿಸಿಲು ಮತ್ತು ಟ್ಯಾನಿಂಗ್ ಅನ್ನು ತಡೆಯುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

KKR vs RR: ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡಕ್ಕೆ ಎಂದಿನಂತೆ ಇಬ್ಬರು ಯುವ ಸ್ಫೋಟಕ ಬ್ಯಾಟರ್​ಗಳಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 8.4 ಓವರ್​ಗಳಲ್ಲಿ 81 ರನ್​​ಗಳ ಜೊತೆಯಾಟ ನೀಡಿದರು.

ಇಬ್ಬರಿಗೂ ಮುಕ್ತವಾಗಿ ಬ್ಯಾಟ್ ಬೀಸಲು ಕೆಕೆಆರ್ ಬೌಲರ್​ಗಳು ಅವಕಾಶ ನೀಡದಿದ್ದರೂ, ಕಳಪೆ ಬೌಲಿಂಗ್​ ಅನ್ನು ಸರಿಯಾಗಿ ದಂಡಿಸಿದರು. ಅದರಲ್ಲೂ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಅಬ್ಬರಿಸಿದ್ದ ವೈಭವ್ ಸೂರ್ಯವಂಶಿ ಈ ಪಂದ್ಯದಲ್ಲೂ ಮತ್ತೊಂದು ಅರ್ಧಶತಕದತ್ತ ದಾಪುಗಾಲಿಡುತ್ತದ್ದರು. ಆದರೆ ವರುಣ್ ಚಕ್ರವರ್ತಿ ಬೌಲಿಂಗ್​ನಲ್ಲಿ ಬಿಗ್ ಶಾಟ್ ಆಡಲು ಯತ್ನಿಸಿದ ವೈಭವ್ ರಮಣ್​ದೀಪ್​ಗೆ ಕ್ಯಾಚಿತ್ತು ಔಟಾದರು. ತಮ್ಮ ಇನ್ನಿಂಗ್ಸ್​ನಲ್ಲಿ 28 ಎಸೆತಗಳನ್ನು ಎದುರಿಸಿದ ವೈಭವ್ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 46 ರನ್ ಬಾರಿಸಿ ಔಟಾದರು.

Source link

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ – Kannada News | Optical Illusion: If you can find the sheep hidden in this picture, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ನೀವು ಈಗಾಗಲೇ ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸಲು ಪ್ರಯತ್ನಿಸಿದ್ದೀರಬಹುದು. ಆದರೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಹೀಗಾಗಿ ಕೆಲವೇ ಕೆಲವು ಜನರಿಗೆ ಇಂತಹ ಒಗಟುಗಳನ್ನು ಬಿಡಿಸಲು ಸಾಧ್ಯವಾಗುತ್ತದೆ. ಇದೀಗ ಫೋಟೋವೊಂದು ವೈರಲ್‌ ಆಗಿದ್ದು, ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ರಿಂದ 30 ಸೆಕೆಂಡುಗಳು ಮಾತ್ರ. ನೀವು ಜಾಣರೆಂದು ಈ ಒಗಟು ಬಿಡಿಸಿ ಪರೀಕ್ಷಿಸಿಕೊಳ್ಳಿ.

ಈ ಚಿತ್ರವು ಏನು ಹೇಳುತ್ತದೆ?

FindTheSpiner ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಇಲ್ಯೂಷನ್ ಚಿತ್ರ ಹಂಚಿಕೊಳ್ಳಲಾಗಿದೆ. ಈ ಇಲ್ಯೂಷನ್ ಚಿತ್ರದಲ್ಲಿ ಬಂಡೆ ಕಲ್ಲುಗಳಿಂದ ಕೂಡಿದ ದೈತ್ಯಾಕಾರದ ಬೆಟ್ಟವನ್ನು ಕಾಣಬಹುದು. ಕಡಿದಾದ ಹಾಗೂ ಒರಟಾದ ಬೆಟ್ಟದ ಇಳಿಜಾರನ್ನು ಹೊಂದಿದೆ. ದೊಡ್ಡ ದೊಡ್ಡ ಬಂಡೆ ಕಲ್ಲುಗಳಿಂದ ಕೂಡಿದೆ. ಇಲ್ಲಿ ಸಣ್ಣ ಹಚ್ಚ ಹಸಿರಿನ ಸಸ್ಯಗಳನ್ನು ಕಾಣಬಹುದು. ಈ ಬೆಟ್ಟದ ಮೇಲೆ ಅಡಗಿ ಕುಳಿತಿರುವ ದೊಡ್ಡ ಕೊಂಬಿನ ಪ್ರಾಣಿಯನ್ನು ಕಂಡುಹಿಡಿಯಲು ಕಷ್ಟಕರ. 30 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ. ನೀವು ಈ ಸವಾಲನ್ನು ಸ್ವೀಕರಿಸಲು ರೆಡಿ ಇದ್ದೀರಾ.

ವೈರಲ್ ಪೋಸ್ಟ್ ಇಲ್ಲಿದೆ

Find the Bighorn Sheep
by
u/chalon9 in
FindTheSniper

ಇದನ್ನೂ ಓದಿ: ಜಸ್ಟ್‌ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಎಷ್ಟು ಘೇಂಡಾಮೃಗಗಳಿವೆ ಗುರುತಿಸಿ ನೋಡೋಣ

ದೊಡ್ಡ ಕೊಂಬಿನ ಕುರಿ ಗುರುತಿಸಲು ಸಾಧ್ಯವಾಯಿತೇ?

ಈ ಚಿತ್ರವು ಒರಟಾದ ಇಳಿಜಾರಿನ ಬೆಟ್ಟವನ್ನು ಕಾಣಬಹುದು. ಬಂಡೆಗಳು ಪ್ರತಿಯೊಂದು ಭಾಗವನ್ನು ಆಕ್ರಮಿಸಿಕೊಂಡಿವೆ. ಬಂಡೆಗಳ ಬಣ್ಣವು ಕುರಿಗಳ ನೈಸರ್ಗಿಕ ಬಣ್ಣದೊಂದಿಗೆ ಚೆನ್ನಾಗಿ ಬೆರೆಯುತ್ತದೆ. ಇದು ಆಪ್ಟಿಕಲ್ ಭ್ರಮೆಯನ್ನು ಆರಂಭದಲ್ಲಿ ಕಾಣಿಸಿಕೊಳ್ಳುವುದಕ್ಕಿಂತ ಹೆಚ್ಚು ಕಷ್ಟಕರವಾಗಿಸುತ್ತದೆ. ನಿಮಗೆ ದೊಡ್ಡ ಕೊಂಬಿನ ಕುರಿಯನ್ನು ಕಂಡು ಹಿಡಿಯಲು ನಿಮಗೆ ಸಾಧ್ಯವಾಗದೇ ಇರಬಹುದು. ಈ ಕೆಳಗಿನ ಚಿತ್ರದಲ್ಲಿ ಕುರಿ ಎಲ್ಲಿದೆ ಎಂದು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು – Kannada News | No one can deny Iran its nuclear rights, says president Masoud Pezeshkian

ಟೆಹ್ರಾನ್, ಏಪ್ರಿಲ್ 19: ಇರಾನ್‌ನ ಪರಮಾಣು ಕಾರ್ಯಕ್ರಮದ ಸುತ್ತಲಿನ ಅಂತರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. “ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು?” ಎಂದು ಪ್ರಶ್ನಿಸುವ ಮೂಲಕ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಭಾನುವಾರ (ಏಪ್ರಿಲ್ 19) ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ತ್ಯಜಿಸಬೇಕು ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಕಠಿಣವಾಗಿ ಪ್ರತಿಕ್ರಿಯಿಸಿದ ಪೆಜೆಶ್ಕಿಯಾನ್, “ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ಬಳಸಬಾರದು ಎಂದು ಹೇಳುತ್ತಾರೆ, ಆದರೆ ನಾವು ಮಾಡಿದ ‘ಅಪರಾಧ’ ಏನು ಎಂಬುದನ್ನು ಅವರು ಹೇಳುತ್ತಿಲ್ಲ. ಒಂದು ಸಾರ್ವಭೌಮ ರಾಷ್ಟ್ರದ ಹಕ್ಕುಗಳನ್ನು ಕಿತ್ತುಕೊಳ್ಳಲು ಅವರ ಅಧಿಕಾರವೇನು?” ಎಂದು ಪ್ರಶ್ನಿಸಿದ್ದಾರೆ.

ಸಂಘರ್ಷದ ಹಾದಿ ಮತ್ತು ಮಾತುಕತೆ

2026ರ ಫೆಬ್ರುವರಿ ಕೊನೆಯಲ್ಲಿ ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ದೊಡ್ಡ ಮಟ್ಟದ ಮಿಲಿಟರಿ ಸಂಘರ್ಷ ಆರಂಭವಾಯಿತು. ತಿಂಗಳು ಕಾಲ ನಡೆದ ಭೀಕರ ಸಂಘರ್ಷದ ಬಳಿಕ ಈಗ ಕದನ ವಿರಾಮ ಸ್ಥಿತಿ ಇದೆ. ಪ್ರಸ್ತುತ ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿವೆ. ಇರಾನ್​ನ ಪರಮಾಣು ಯೋಜನೆಗಳನ್ನು ನಿಲ್ಲಿಸಬೇಕು, ಪರಮಾಣು ಶಸ್ತ್ರಾಸ್ತ್ರ ತಯಾರಿಕೆ ತ್ಯಜಿಸಬೇಕು ಎಂಬುದು ಅಮೆರಿಕದ ಹಠ. ಆದರೆ, ಶಾಂತಿ ಮತ್ತು ವಿದ್ಯುತ್ ಉದ್ದೇಶಕ್ಕೆ ಪರಮಾಣು ಬಳಸುತ್ತಿರುವುದಾಗಿ ಇರಾನ್ ಹೇಳಿದೆ.

ಇದನ್ನೂ ಓದಿ: ಜಾಗತಿಕ ರಾಜಕೀಯದಲ್ಲಿ ಸಂಚಲನ, ಟ್ರಂಪ್ ಮತ್ತು ಪಾಕ್ ಸೇನಾ ಮುಖ್ಯಸ್ಥರ ‘ದೋಸ್ತಿ’ ಮೇಲೆ ಅಮೆರಿಕ ಗುಪ್ತಚರ ಇಲಾಖೆ ಕಣ್ಣು

ಪರಮಾಣು ಶಕ್ತಿ ಉತ್ಪಾದನೆಗೆ ಬೇಕಾದ ಯುರೇನಿಯಂ ಎನ್​ರಿಚ್ಮೆಂಟ್ ಅನ್ನು ಇರಾನ್ ಸಾಕಷ್ಟು ತಯಾರಿಸಿದೆ. ಇನ್ನು ಸ್ವಲ್ಪ ಮಟ್ಟದ ಯುರೇನಿಯಂ ಎನ್​ರಿಚ್ಮೆಂಟ್ ಮಾಡಿದರೆ ಅದು ಪರಮಾಣು ಶಸ್ತ್ರ ತಯಾರಿಕೆಗೆ ಉಪಯೋಗಿಸಬಲ್ಲ ದರ್ಜೆಯದ್ದಾಗಿರುತ್ತದೆ. ಈ ವಿಚಾರಕ್ಕೆ ಅಮೆರಿಕ ತಕರಾರು ಹೊಂದಿದೆ.

ಸದ್ಯ 15 ದಿನಗಳ ಕದನ ವಿರಾಮವು ಇದೇ ಬುಧವಾರದಂದು (ಏಪ್ರಿಲ್ 23) ಅಂತ್ಯಗೊಳ್ಳಲಿದೆ. ತನ್ನ ಪರಮಾಣು ಹಕ್ಕು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಇರಾನ್ ಅಧ್ಯಕ್ಷರು ಹೇಳಿರುವುದು, ಈ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ.

ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು

ಪರಮಾಣು ಹಕ್ಕಿನ ಜೊತೆಗೆ, ವಿಶ್ವದ ಅತಿ ದೊಡ್ಡ ತೈಲ ಸಾರಿಗೆ ಮಾರ್ಗವಾದ ಹೋರ್ಮುಜ್ ಜಲಸಂಧಿಯನ್ನು (Strait of Hormuz) ಬಂದ್ ಮಾಡುವ ಎಚ್ಚರಿಕೆಯನ್ನು ಇರಾನ್ ಪುನರುಚ್ಚರಿಸಿದೆ.

“ನಮ್ಮ ಬಂದರುಗಳ ಮೇಲೆ ಅಮೆರಿಕ ದಿಗ್ಬಂಧನ ಹೇರಿರುವಾಗ, ಇತರ ದೇಶಗಳ ಹಡಗುಗಳು ಸುಗಮವಾಗಿ ಸಂಚರಿಸಲು ನಾವು ಬಿಡುವುದಿಲ್ಲ” ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗರ್ ಘಾಲಿಬಾಫ್ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕದಿಂದಾಗಿ ಮತ್ತೆ ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

ಇರಾನ್‌ನ ಬೇಡಿಕೆಗಳೇನು?

  • ಯುದ್ಧವನ್ನು ‘ಗೌರವಯುತವಾಗಿ’ (With Dignity) ಕೊನೆಗೊಳಿಸಲು ಇರಾನ್ ಬಯಸುತ್ತಿದೆ.
  • ಅಮೆರಿಕ ಹೇರಿರುವ ಆರ್ಥಿಕ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು ಎಂಬುದು ಇರಾನ್‌ನ ಪ್ರಮುಖ ಷರತ್ತು.
  • ತನ್ನ ಬಳಿ ಇರುವ ಸಂಸ್ಕರಿಸಿದ ಯುರೇನಿಯಂ ಅನ್ನು ಅಮೆರಿಕಕ್ಕೆ ಹಸ್ತಾಂತರಿಸುವ ಪ್ರಸ್ತಾವನೆಯನ್ನು ಇರಾನ್ ತಳ್ಳಿಹಾಕಿದೆ.

ವಿಶ್ವಸಂಸ್ಥೆಯ ನಿಯಮಗಳ ಪ್ರಕಾರ ಶಾಂತಿಯುತ ಉದ್ದೇಶಗಳಿಗಾಗಿ ಪರಮಾಣು ತಂತ್ರಜ್ಞಾನ ಹೊಂದುವ ಹಕ್ಕು ನಮಗಿದೆ ಎಂದು ಇರಾನ್ ವಾದಿಸುತ್ತಿದೆ. ಆದರೆ ಅಮೆರಿಕವು ಇದು ಅಣ್ವಸ್ತ್ರ ತಯಾರಿಕೆಗೆ ದಾರಿ ಮಾಡಿಕೊಡುತ್ತದೆ ಎಂಬ ಆತಂಕದಲ್ಲಿದೆ. ಮುಂಬರುವ ದಿನಗಳಲ್ಲಿ ನಡೆಯುವ ರಾಜತಾಂತ್ರಿಕ ಮಾತುಕತೆಗಳು ಈ ಪ್ರದೇಶದ ಭವಿಷ್ಯವನ್ನು ನಿರ್ಧರಿಸಲಿವೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version