ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ನಿಂದನೆ ಪ್ರಕರಣ: ಬ್ಯಾನರ್ ತೆಗೆಸೋಕೆ ಇತ್ತು ಬಲವಾದ ಕಾರಣ

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯ ಕೋಟೆ ಸರ್ಕಲ್‌ನಲ್ಲಿ ಅಳವಡಿಸಿದ್ದ ಅಕ್ರಮ ಬ್ಯಾನರ್ ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಒಂದು ಚಲನಚಿತ್ರದ ಪ್ರಮೋಷನ್‌ಗಾಗಿ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಈ ಬ್ಯಾನರ್‌ನಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಗಾಳಿಗೆ ಅದು ಬೈಕ್ ಸವಾರರ ಮುಖಕ್ಕೆ ಅಪ್ಪಳಿಸಿ ಗಾಯಗೊಳಿಸುವ ಸಾಧ್ಯತೆಯೂ ಇತ್ತು ಎಂದು ಸ್ಥಳೀಯರು ಮತ್ತು ನಗರಸಭೆ ಸಿಬ್ಬಂದಿ ತಿಳಿಸಿದ್ದಾರೆ.

ಸಾರ್ವಜನಿಕ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರ ಸೂಚನೆ ಮೇರೆಗೆ ಸಿಬ್ಬಂದಿ ಬ್ಯಾನರ್ ಅನ್ನು ತೆರವುಗೊಳಿಸಿದ್ದರು. ಈ ಕ್ರಮದಿಂದ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಆಕ್ರೋಶಗೊಂಡಿದ್ದು, ಪೌರಾಯುಕ್ತ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವಬೆದರಿಕೆ ಹಾಕದ್ದರು ಎಂದು ಆರೋಪಿಸಲಾಗಿದೆ. ಈ ಘಟನೆಯು ಶಿಡ್ಲಘಟ್ಟದಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜೀವ್ ಗೌಡರ ವರ್ತನೆಯನ್ನು ಜನ ಖಂಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್: ವೋಟ್ ಮಾಡಲು ಭಾನುವಾರದವರೆಗೆ ಅವಕಾಶ; ಗಮನಿಸಬೇಕಾದ ವಿಷಯಗಳಿವು – Kannada News | Bigg Boss Kannada 12 Finale Voting: How to Vote, Last Date, Winner and Finalists Guide

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆಗೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜನವರಿ 18) ಒಬ್ಬರು ಕಪ್ ಎತ್ತಲಿದ್ದಾರೆ. ಈ ಸೀಸನ್ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಇದೆ. ವೋಟ್ ಮಾಡೋದು ಹೇಗೆ? ಎಲ್ಲಿಯವರೆಗೆ ಇದಕ್ಕೆ ಅವಕಾಶ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಬಿಗ್ ಬಾಸ್ ಫಿನಾಲೆಯಲ್ಲಿ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಅಶ್ವಿನಿ ಗೌಡ, ರಘು, ಧನುಶ್ ಇದ್ದಾರೆ. ಇವರ ಪೈಕಿ ಒಬ್ಬರಿಗೆ ವಿಜಯಲಕ್ಷ್ಮೀ ಒಲಿಯಲಿದೆ. ಆ ವ್ಯಕ್ತಿ ಯಾರು ಎಂಬ ಕುತೂಹಲ ಮೂಡಿದೆ. ಇದನ್ನು ತಿಳಿಯಲು ಭಾನುವಾರದವರೆಗೆ ಕಾಯಲೇಬೇಕು. ಆದರೆ, ನೀವು ನಿಮ್ಮ ಮತ ಹಾಕಿ ವಿನ್ನರ್ ಯಾರು ಎಂಬುದನ್ನು ನಿರ್ಧರಿಸಬಹುದು.

ಜಿಯೋ ಹಾಟ್​​ಸ್ಟಾರ್​ನಲ್ಲಿ ವೋಟಿಂಗ್ ಲೈನ್ ಆರಂಭ ಆಗಿದೆ. ಭಾನುವಾರದ (ಜನವರಿ 11)ಎಲಿಮಿನೇಷನ್ ಬಳಿಕ ಓಪನ್ ಆಗಿದ್ದು ಮಧ್ಯವಾರದ ಎಲಿಮಿನೇಷನ್​ ವೋಟಿಂಗ್ ಲೈನ್. ಈ ಮತಗಳನ್ನು ಫಿನಾಲೆಗೆ ಪರಿಗಣನೆ ಮಾಡಲಾಗುವುದಿಲ್ಲ. ಬುಧವಾರ (ಜನವರಿ 14) ಹೊಸ ವೋಟಿಂಗ್ ಲೈನ್ ಓಪನ್ ಆಗಿದ್ದು, ಇದನ್ನು ಮಾತ್ರ ಫಿನಾಲೆಗೆ ಪರಿಗಣಿಸಲಾಗುತ್ತದೆ. ಹೀಗಾಗಿ, ನಾನು ಸೋಮವಾರವೇ ವೋಟ್ ಹಾಕಿದ್ದೇನೆ, ಮಂಗಳವಾರವೇ ವೋಟ್ ಹಾಕಿದ್ದೇನೆ ಎಂದರೆ ಅದು ಪರಿಗಣನೆಗೆ ಬರೋದಿಲ್ಲ. ಇದು ಮೊದಲು ಗಮನಿಸಬೇಕಾದ ವಿಷಯ.

ಇನ್ನು, ಭಾನುವಾರ ಮುಂಜಾನೆ 10 ಗಂಟೆವರೆಗೆ ವೋಟ್ ಮಾಡಲು ಅವಕಾಶ ಇದೆ. ಪ್ರತಿ ಖಾತೆಗೆ 99 ಮತ ಹಾಕಲು ಅವಕಾಶ ಇದೆ. ಆರು ಜನರ ಪೈಕಿ ಓರ್ವ ಸ್ಪರ್ಧಿಗೆ 99 ಮತ ಹಾಕಬಹುದು. ಅಥವಾ ಎಲ್ಲಾ ಸ್ಪರ್ಧಿಗಳಿಗೂ ಸ್ವಲ್ಪ ಸ್ವಲ್ಪ ಮತ ಹಾಕಬಹುದು. ಒಮ್ಮೆ ವೋಟ್ ಸಲ್ಲಿಕೆ ಮಾಡಿದ ಬಳಿಕ ಮತ್ತೆ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಹೀಗಾಗಿ, ಆ ಬಗ್ಗೆ ಗಮನ ಬೇಕು.

ಇದನ್ನೂ ಓದಿ: ‘ಹೊರ ಹೋದ್ಮೇಲೆ ಬ್ಲಾಕ್ ಮಾಡ್ತೀನಿ’; ಬ್ಲ್ಯಾಕ್​​ಮೇಲ್ ಮಾಡಿದ ಕಾವ್ಯಾಗೆ ತಿರುಗೇಟು ಕೊಟ್ಟ ಗಿಲ್ಲಿ

ಭಾನುವಾರದವರೆಗೆ ವೋಟ್ ಮಾಡಲು ಅವಕಾಶ ಕೊಟ್ಟಿರುವುದರಿಂದ ಶನಿವಾರ ಎಲಿಮಿನೇಷನ್ ನಡೆಯುವುದು ಅನುಮಾನ ಎಂದು ಹೇಳಲಾಗುತ್ತಾ ಇದೆ. ಈ ಬಗ್ಗೆ ಶನಿವಾರವರೇ ಘೋಷಣೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rate Today Bangalore: ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 16th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಕಡಿಮೆಗೊಂಡಿವೆ. ನಿನ್ನೆ ಗುರುವಾರ ಬೆಳಗ್ಗೆ 40 ರೂ ಕಡಿಮೆಗೊಂಡು, ಸಂಜೆ 60 ರೂ ಹೆಚ್ಚಿದ್ದ ಚಿನ್ನದ ಬೆಲೆ (gold rate) ಇವತ್ತು 20 ರೂ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 3-4 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,200 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,755 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,340 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,145 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 292 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,145 ರೂ
  • ಚೆನ್ನೈ: 13,230 ರೂ
  • ಮುಂಬೈ: 13,145 ರೂ
  • ದೆಹಲಿ: 13,160 ರೂ
  • ಕೋಲ್ಕತಾ: 13,145 ರೂ
  • ಕೇರಳ: 13,145 ರೂ
  • ಅಹ್ಮದಾಬಾದ್: 13,150 ರೂ
  • ಜೈಪುರ್: 13,160 ರೂ
  • ಲಕ್ನೋ: 13,160 ರೂ
  • ಭುವನೇಶ್ವರ್: 13,145 ರೂ

ಇದನ್ನೂ ಓದಿ: ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,068 ರುಪಾಯಿ)
  • ದುಬೈ: 514.75 ಡಿರಾಮ್ (12,709 ರುಪಾಯಿ)
  • ಅಮೆರಿಕ: 143.50 ಡಾಲರ್ (13,011 ರುಪಾಯಿ)
  • ಸಿಂಗಾಪುರ: 184.70 ಸಿಂಗಾಪುರ್ ಡಾಲರ್ (13,003 ರುಪಾಯಿ)
  • ಕತಾರ್: 511 ಕತಾರಿ ರಿಯಾಲ್ (12,712 ರೂ)
  • ಸೌದಿ ಅರೇಬಿಯಾ: 521 ಸೌದಿ ರಿಯಾಲ್ (12,597 ರುಪಾಯಿ)
  • ಓಮನ್: 54.60 ಒಮಾನಿ ರಿಯಾಲ್ (12,887 ರುಪಾಯಿ)
  • ಕುವೇತ್: 41.94 ಕುವೇತಿ ದಿನಾರ್ (12,437 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 292 ರೂ
  • ಚೆನ್ನೈ: 306 ರೂ
  • ಮುಂಬೈ: 292 ರೂ
  • ದೆಹಲಿ: 292 ರೂ
  • ಕೋಲ್ಕತಾ: 292 ರೂ
  • ಕೇರಳ: 306 ರೂ
  • ಅಹ್ಮದಾಬಾದ್: 292 ರೂ
  • ಜೈಪುರ್: 292 ರೂ
  • ಲಕ್ನೋ: 292 ರೂ
  • ಭುವನೇಶ್ವರ್: 306 ರೂ
  • ಪುಣೆ: 292

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬಾಲಕಿ ಕಣ್ಣೆದುರೇ ತಂದೆಯ ಕೊಲೆ ಪ್ರಕರಣ: ನಿಗೂಢ ಕೊಲೆಯ ಸುಳಿವು ನೀಡಿದ್ದ ಕಾರು! ಕೊನೆಗೂ ಬಲೆಗೆ ಬಿದ್ದ ಹಂತಕರು – Kannada News | Father Murdered Before Daughter’s Eyes in Tumakuru: Car Clue Leads Police to Killers Within 48 Hours

ಆರೋಪಿಗಳಾದ ಅರುಣ್, ಕವಿತೇಶ್ವರನ್ ಹಾಗೂ ಕೇಶವನ್

ತುಮಕೂರು, ಜನವರಿ 16: ಅದೊಂದು ಕೊಲೆಗೆ ಇಡೀ ತುಮಕೂರು (Tumakur) ಜಿಲ್ಲೆ ಬೆಚ್ಚಿ ಬಿದಿತ್ತು. ಮಕ್ಕಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿ ಅರಿಚಿತ ಮುಸುಕುಧಾರಿಗಳ ದಾಳಿಗೆ ಮೃತಪಟ್ಟಿದ್ದರು. ಸಮಾಜದಲ್ಲಿ ಒಳ್ಳೆಯ ಹೆಸರು ಹೊಂದಿದ್ದ ಮಂಜುನಾಥನ ಕೊಲೆ ತುಮಕೂರು ಪೊಲೀಸರಿಗೆ ಸವಾಲಾಗಿತ್ತು. ಆದರೆ ಸಿಕ್ಕ ಅದೊಂದು ಸುಳಿವು ಆಧರಿಸಿ ಶಿವಮೊಗ್ಗ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆ ನಡೆಸಿದ ತುಮಕೂರು ಪೊಲೀಸರು ಕೃತ್ಯ ನಡೆದ 48 ಗಂಟೆಗಳಲ್ಲೇ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ.

ಆರೋಪಿಗಳು ಮೂಲತಃ ತಮಿಳುನಾಡಿನವರಾದ ಸತೀಶ, ಕೇಶವನ್, ಕವಿತೇಶ್ವರನ್ ಹಾಗೂ ಅರುಣ್ ಎಂಬುದು ಗೊತ್ತಾಗಿದೆ. ಇವರು ಬೆಂಗಳೂರಿನ ಆನೆಕಲ್ ಭಾಗದ ಅತ್ತಿಬೆಲೆಯ ನಿವಾಸಿಗಳಾಗಿದ್ದಾರೆ. ವೃತ್ತಿಪರ ಕಳ್ಳರಾಗಿದ್ದು, ರಾಜ್ಯದ ವಿವಿಧೆಡೆ ಕಳ್ಳತನ ಕೃತ್ಯ ಎಸಗಿರುವ ಈ ಆರೋಪಿಗಳು ತುಮಕೂರಿಗೂ ಎಂಟ್ರಿ ಕೊಟ್ಟಿದ್ದರು. ಅದರಂತೆ ಚಿಕ್ಕನಾಯಕನಹಳ್ಳಿಯ ಕೆಂಕೆರೆಗೆ ಬಂದಿದ್ದ ಆರೋಪಿಗಳು, ಇದೇ ಮಂಜುನಾಥ್ ಮನೆಯ ಕಳ್ಳತನಕ್ಕೆ ಹೊಂಚು ಹಾಕಿದ್ದರು. ಹಿಂದಿನ ದಿನವೇ ಸಿದ್ಧತೆ ಮಾಡಿ ಜನವರಿ 11 ರಂದು ರಾತ್ರಿ 9ಗಂಟೆಗೆ ಕಳ್ಳತನಕ್ಕೆ ಬಂದಿದ್ದರು. ಕೈಗೆ ಗ್ಲೌಸ್ ಮುಖಕ್ಕೆ ಮಾಸ್ಕ್ ಧರಿಸಿ ಬಂಧವರೇ ಗೇಟ್ ಬಳಿಯೇ‌ ಮಕ್ಕಳ ಜೊತೆ ನಿಂತಿದ್ದ ಮಂಜುನಾಥ್ ಹಿಡಿದು ಅಂಗಡಿ ಬಾಗಿಲು ತೆರೆಯಲು ಹೇಳಿದ್ದರು. ನಿರಾಕರಿಸಿದ ಮಂಜುನಾಥ್​ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಇನ್ನು ಈ ವೇಳೆ ಮಂಜುನಾಥ್ ಅವರ 12 ವರ್ಷದ ಮಗಳು ಈ ಘಟನೆಯನ್ನು ಕಣ್ಣಾರೆ ಕಂಡು ಬೆಚ್ಚಿ ಬಿದಿದ್ದಳು.

ಆರೋಪಿಗಳ ಸುಳಿವು ಸಿಕ್ಕಿದ್ಹೇಗೆ?

ಘಟನೆ ಬಳಿಕ ಪ್ರಕರಣ ದಾಖಲಿಸಿದ್ದ ಹುಳಿಯಾರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ನಡುವೆ ಶಿವಮೊಗ್ಗದ ವಿನೋಭನಗರ ಪೊಲೀಸರಿಗೆ ಬೇಕಾದ ಕಳ್ಳರ ಗ್ಯಾಂಗ್​​ನ ಕಾರು ಕೊಲೆ ನಡೆದ ಊರಿನಲ್ಲಿ ಓಡಾಡಿದ್ದ ಮಾಹಿತಿ ಲಭ್ಯವಾಗಿತ್ತು. ಜೊತೆಗೆ ಅದೇ ಕಾರು ತುಮಕೂರಿನ ಶಿರಾ ತಾಲೂಕಿನ ಮನೆಗಳ್ಳತನಕ್ಕೂ ಬಳಕೆಯಾಗಿತ್ತು. ಇದೇ ಅನುಮಾನದಲ್ಲಿ ಕಾರಿನ ಬೆನ್ನು ಬಿದ್ದ ಪೊಲೀಸರಿಗೆ ಬೆಂಗಳೂರಿನ ಅತ್ತಿಬೆಲೆಯಲ್ಲಿ ಆರೋಪಿಗಳು ಪತ್ತೆಯಾಗಿದ್ದು, ನಾಲ್ವರು ಹಂತಕರ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ತುಮಕೂರು: ಮಗಳ ಕಣ್ಣೆದುರೇ ತಂದೆಯನ್ನ ಬರ್ಬರವಾಗಿ ಕೊಂದ ದುಷ್ಕರ್ಮಿಗಳು

ಇನ್ನು ಬಂಧಿತರು ಅಂತರರಾಜ್ಯ ಕಳ್ಳರಾಗಿದ್ದು, ರಾಜ್ಯದ ಹಲವು ಕಡೆ ಕಳ್ಳತನ ಕೃತ್ಯ ಎಸಗಿದ್ದಾರೆ. ಜೊತೆಗೆ 2018ರಲ್ಲಿ ಆನೇಕಲ್ ಬಳಿ ನಡೆದಿದ್ದ ಕೊಲೆ ಪ್ರಕರಣ ಒಂದರಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.

ಅಸಲಿಗೆ ಕೊಲೆಯಲ್ಲಿ ಐವರು ಶಾಮೀಲಾಗಿದ್ದು, ನಾಲ್ವರ ಬಂಧನವಾಗಿದೆ. ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದು ಆತನಿಗಾಗಿ ಹುಳಿಯಾರು ಪೊಲೀಸರು ಹುಡುಕಾಟ ನಡೆಸುತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ ಆತ್ಮಹತ್ಯೆ, ಕಾರಣ ಏನು ಗೊತ್ತಾ? – Kannada News | Prisoner Suicide: Eshwarappa Pujar, Convicted for Wife’s Murder, Found Dead in Dharwad Jail

ಧಾರವಾಡ, ಜ.16: ಪತ್ನಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿ ಜೈಲಿನ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ (Dharwad Jail) ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಬಸಾಪುರ ಗ್ರಾಮದ ಈಶ್ವರಪ್ಪ ಪೂಜಾರ್ ಎಂದು ಹೇಳಲಾಗಿದೆ. ಸುಮಾರು ಏಳು ವರ್ಷಗಳ ಹಿಂದೆ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ತಮ್ಮ ಶಿಕ್ಷೆಯ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಜೈಲಿನಲ್ಲೇ ಅನುಭವಿಸಿದ್ದಾರೆ. ಈಶ್ವರಪ್ಪ ಪೂಜಾರ್ ಅವರು ಜೈಲಿನ ಆವರಣದಲ್ಲಿರುವ ನಿರ್ಮಾಣ ಕಟ್ಟಡದ ಸ್ಥಳದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಜೈಲಿನಲ್ಲಿ ಕೆಲಸ ಮುಗಿಸಿದ ನಂತರ ಈಶ್ವರಪ್ಪ ಪೂಜಾರ್ ಸೇಲ್​​ಗೆ ಬಂದಿಲ್ಲ. ನಂತರ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ನಿರ್ಮಾಣ ಕಟ್ಟಡದ ಬಳಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಆಸ್ಪತ್ರೆ ಸಾಗಿಸಲಾಗಿದ್ದು, , ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರು ಯಾವ ಕಾರಣಕ್ಕೆ ಈ ನಿರ್ಧಾರ ಯಾವ ಕಾರಣಕ್ಕೆ ತೆಗೆದುಕೊಂಡರು ಎಂದು ತಿಳಿದು ಬಂದಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! ಅಸಲಿಗೆ ಆಗಿದ್ದೇನು ಗೊತ್ತೇ?

ಇನ್ನು ಕಟ್ಟಡ ನಿರ್ಮಾಣಕ್ಕೆಂದು ಅಲ್ಲಿ ಬಳಸಲಾಗಿದ್ದ ಹಗ್ಗದಿಂದಲ್ಲೇ ನೇಣು ಬಿಗಿದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೈದಿಗಳ ಕೆಲಸ ಮುಗಿದ ನಂತರ ಕೈದಿಗಳನ್ನು ಸೇಲ್​ಗೆ ಕರೆದುಕೊಂಡು ಬರುವ ಜವಾಬ್ದಾರಿಯನ್ನು ಅಲ್ಲಿ ಸಿಬ್ಬಂದಿಗಳಿಗೆ ನೀಡಲಾಗಿತ್ತು. ಆದರೆ ಈ ಜವಾಬ್ದಾರಿಯನ್ನು ನಿಭಾಯಿಸಲು ಅಧಿಕಾರಿಗಳು ವಿಫಲಗಿದ್ದಾರೆ ಎಂದು ಅವರ ವಿರುದ್ಧ ಕೂಡ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಕಾರಾಗೃಹದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೂಜಾರ್ ಜೈಲಿನಲ್ಲಿ ಉತ್ತಮ ನಡವಳಿಕೆ ಕೂಡ ಇತ್ತು. ಅವರ ಆ ನಡುವಳಿಕೆ ಮೇಲೆ ಅವರನ್ನು ಕೂಡ ಬಿಡಗುಡೆ ಮಾಡುವ ಯೋಚನೆ ಕೂಡ ಇತ್ತು ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:51 pm, Fri, 16 January 26

Source link

BJP National President Election Date: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ – Kannada News | Bjp National President Election Date Announced Nominations Will Be on 19 January, Election to be held on Jan 20

ನವದೆಹಲಿ, ಜನವರಿ 16: ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20 ರಂದು ಹೊಸ ಅಧ್ಯಕ್ಷರ ಹೆಸರನ್ನು ಔಪಚಾರಿಕವಾಗಿ ಘೋಷಿಸಲಾಗುವುದು. ಬಿಜೆಪಿ ನಿತಿನ್ ನಬಿನ್(Nitin Nabin) ಅವರನ್ನು ಪಕ್ಷದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಆದ್ದರಿಂದ, ನಿತಿನ್ ನಬಿನ್ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತವೆಂದು ಹೇಳಲಾಗುತ್ತಿದೆ. ಅವರು ಪಕ್ಷದ ಅತ್ಯಂತ ದೀರ್ಘಾವಧಿಯ ನಾಯಕರಾದ ಜೆಪಿ ನಡ್ಡಾ ಅವರ ಸ್ಥಾನಕ್ಕೆ ಬರಲಿದ್ದಾರೆ.ನಿತಿನ್ ನಬಿನ್ ಜನವರಿ 19 ರಂದು ನಾಮಪತ್ರ ಸಲ್ಲಿಸಲಿದ್ದಾರೆ.ನಾಮನಿರ್ದೇಶನ ಪ್ರಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಕರಾಗಿ ಹಾಜರಿರುತ್ತಾರೆ .

ಇದು ಪಕ್ಷದ ಹಿರಿಯ ನಾಯಕರಲ್ಲಿ ನಬಿನ್ ಅವರ ನಾಯಕತ್ವದ ಮೇಲಿನ ಬಲವಾದ ಬೆಂಬಲ ಮತ್ತು ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ . ಹಲವಾರು ಹಿರಿಯ ನಾಯಕರು, ಕೇಂದ್ರ ನಾಯಕತ್ವದ ಸದಸ್ಯರು ಮತ್ತು ಪ್ರಮುಖ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಮತ್ತಷ್ಟು ಓದಿ: ಮತ್ತೊಂದು ಅಚ್ಚರಿ ಆಯ್ಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಯುವ ನಾಯಕನಿಗೆ ಮಣೆ

ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ ಈಗ ಪಕ್ಷದ ಶಾಶ್ವತ ಅಧ್ಯಕ್ಷರಾಗಲಿದ್ದಾರೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ಮಾತ್ರ ನಾಮಪತ್ರ ಸಲ್ಲಿಸಲಿದ್ದು, ಬೇರೆ ಯಾವುದೇ ನಾಯಕರು ಅವರ ವಿರುದ್ಧ ನಾಮಪತ್ರ ಸಲ್ಲಿಸುವುದಿಲ್ಲ. ಪರಿಣಾಮವಾಗಿ, ನಿತಿನ್ ನಬಿನ್ ಅವರ ಅವಿರೋಧ ಆಯ್ಕೆ ಖಚಿತ ಎಂದು ಹೇಳಲಾಗಿದೆ. ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದರೆ, ಅವರು ಬಿಜೆಪಿ ಇತಿಹಾಸದಲ್ಲಿ ಈ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗುತ್ತಾರೆ.

ನಿತಿನ್ ನಬಿನ್ ಅವರ ಅಧಿಕಾರಾವಧಿಯು ಜನವರಿ 2029 ರವರೆಗೆ ಇರಲಿದೆ. 2029 ರ ಲೋಕಸಭಾ ಚುನಾವಣೆಗಳು ನಿಗದಿಯಾಗಿರುವುದರಿಂದ, ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ.

2020 ರ ಆರಂಭದಲ್ಲಿ, ಜೆಪಿ ನಡ್ಡಾ ಅವರನ್ನು ಮೊದಲು ಹಂಗಾಮಿ ಅಧ್ಯಕ್ಷರನ್ನಾಗಿ ಮತ್ತು ನಂತರ ಪಕ್ಷದ ಶಾಶ್ವತ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಈ ಬಾರಿಯೂ ಸಹ, ಚುನಾವಣಾ ಪ್ರಕ್ರಿಯೆಯ ನಂತರ ಹೊಸ ಅಧ್ಯಕ್ಷರ ಹೆಸರನ್ನು ಅಂತಿಮಗೊಳಿಸಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:53 pm, Fri, 16 January 26

Source link

Ballari: ಪಾಮ್ ಆಯಿಲ್ ಟ್ಯಾಂಕರ್ ಲಾರಿ ಪಲ್ಟಿ; ಅಡುಗೆ ಎಣ್ಣೆಗಾಗಿ ಮುಗಿಬಿದ್ದ ಜನ – Kannada News | Palm Oil Tanker Overturns in Bellary District, Locals Rush to Collect Spilled Oil

ಬಳ್ಳಾರಿ, ಜನವರಿ 16: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಬಳಿ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು,  ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ಸೋರಿಕೆ ಆಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳೀಯ ಜನರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಪಾಮ್ ಆಯಿಲ್​​ ಸಂಗ್ರಹಿಸಲು ಸ್ಥಳಕ್ಕೆ ಮುಗಿಬಿದ್ದಿದ್ದಾರೆ. ಬಕೆಟ್‌, ಕ್ಯಾನ್‌ಗಳು ಮತ್ತು ವಿವಿಧ ಪಾತ್ರೆಗಳನ್ನು ಹಿಡಿದು ಬಂದು ತೈಲವನ್ನು ತುಂಬಿಸಿಕೊಂಡಿದ್ದಾರೆ. ಅಪಘಾತದಲ್ಲಿ ಅದೃಷ್ಟವಶಾತ್ ಲಾರಿಯ ಚಾಲಕ ಮತ್ತು ಕ್ಲೀನರ್‌ ಪ್ರಾಣಾಪಾಯದಿಂದ ಪಾರಾಗಿದ್ದು, ಕಂಪ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ – Kannada News | Rare Trigrahi Yoga Jan 16: Sun, Venus, Mars in Capricorn – Golden Age for 4 Zodiac Signs!

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ಸಂಕ್ರಾಂತಿಯ ನಂತರ ಕೆಲ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗುತ್ತದೆ. ಆ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ.

ಮಕರ ಸಂಕ್ರಾಂತಿಯ ನಂತರ ಚಲನೆಯಲ್ಲಿರುವ ಗ್ರಹಗಳ ಸಂಚಾರವು ವಿವಿಧ ರಾಶಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸಂಕ್ರಾಂತಿಯ ನಂತರ, ಶುಕ್ರ, ಮಂಗಳ ಮತ್ತು ಶನಿಯ ಸಂಯೋಗದಿಂದಾಗಿ ಅಪರೂಪದ ಯೋಗವು ರೂಪುಗೊಳ್ಳುತ್ತಿದೆ. ಜನವರಿ 13 ರಂದು ಶುಕ್ರ ಮಕರ ರಾಶಿಯನ್ನು ಪ್ರವೇಶಿಸಿದೆ. ನಂತರ ಜನವರಿ 14 ರಂದು ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸಿದೆ. ಈಗ ಜನವರಿ 16 ರಂದು ಮಂಗಳ ಮಕರ ರಾಶಿಯನ್ನು ಪ್ರವೇಶಿಸಲಿದೆ.

ಈ ಮೂರು ಗ್ರಹಗಳು ಮಕರ ರಾಶಿಗೆ ಪ್ರವೇಶಿಸುತ್ತಿದ್ದಂತೆ, ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ರಾಶಿಯ ನಂತರ ಅನೇಕ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗಲಿದೆ.

ವೃಷಭ ರಾಶಿ:

ವೃಷಭ ರಾಶಿಯವರಿಗೆ ಈ ತ್ರಿಗ್ರಹಿ ಯೋಗವು ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ. ಸೂರ್ಯನ ನೇರ ಅಂಶವು ನಿಮ್ಮ ವೃತ್ತಿಪರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ. ನೀವು ನಿಮ್ಮ ವೃತ್ತಿಜೀವನದಲ್ಲಿ ಶ್ರೇಷ್ಠರಾಗುವಿರಿ. ದೊಡ್ಡ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ. ನಿಮ್ಮ ವೃತ್ತಿಪರ ಜೀವನದಲ್ಲಿನ ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ. ನೀವು ಹಳೆಯ ಸಾಲಗಳನ್ನು ತೀರಿಸುವಿರಿ. ನೀವು ಈಗಾಗಲೇ ಮಾಡುತ್ತಿರುವ ಕೆಲಸದಿಂದ ಆದಾಯ ಹೆಚ್ಚಾಗುತ್ತದೆ. ನಿಮ್ಮ ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ಬಗೆಹರಿಯುತ್ತವೆ. ಸಂಕ್ರಾಂತಿಯ ನಂತರ, ಎಲ್ಲವೂ ನಿಮ್ಮ ಪರವಾಗಿ ಬದಲಾಗುತ್ತದೆ. ನಿಮ್ಮ ಕುಟುಂಬವು ಸಮಸ್ಯೆಗಳಿಂದ ಮುಕ್ತವಾಗುತ್ತದೆ. ಸಂಪತ್ತು ಮತ್ತು ಅದೃಷ್ಟ ಒಟ್ಟಿಗೆ ಬರುತ್ತದೆ.

ವೃಶ್ಚಿಕ ರಾಶಿ:

ತ್ರಿಗ್ರಹಿ ಯೋಗವು ವೃಶ್ಚಿಕ ರಾಶಿಯವರಿಗೆ ಆತ್ಮವಿಶ್ವಾಸ ಮತ್ತು ಧೈರ್ಯವನ್ನು ತರುತ್ತದೆ. ನೀವು ನಿಮ್ಮ ಯೋಜಿತ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ನಿಮಗೆ ಹೊಸ ಆದಾಯ ಮತ್ತು ಲಾಭಗಳು ಸಿಗುತ್ತವೆ. ನಿಮ್ಮ ವೃತ್ತಿಪರ ಜೀವನದಲ್ಲಿನ ಅಡೆತಡೆಗಳು ದೂರವಾಗುತ್ತವೆ. ಜಂಟಿ ವ್ಯವಹಾರಗಳ ಮೂಲಕ ನೀವು ಅನಿರೀಕ್ಷಿತ ಲಾಭವನ್ನು ಪಡೆಯುತ್ತೀರಿ. ಕೆಲಸದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ನಿಮ್ಮ ಸಹೋದ್ಯೋಗಿಗಳ ಬೆಂಬಲ ನಿಮಗೆ ಇರುತ್ತದೆ. ವಿದೇಶಕ್ಕೆ ಹೋಗಲು ನಿಮಗೆ ಹೆಚ್ಚಿನ ಅವಕಾಶಗಳಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನೀವು ಯಶಸ್ವಿಯಾಗುತ್ತೀರಿ. ಮದುವೆಯಲ್ಲಿನ ಅಡೆತಡೆಗಳು ದೂರವಾಗುತ್ತವೆ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಧನು ರಾಶಿ:

ತ್ರಿಗ್ರಹಿ ಯೋಗವು ಧನು ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಈ ಶುಭ ಸಮಯದಲ್ಲಿ, ನೀವು ಅನಿರೀಕ್ಷಿತ ಆರ್ಥಿಕ ಲಾಭಗಳನ್ನು ಪಡೆಯುತ್ತೀರಿ. ನೀವು ವೃತ್ತಿಪರವಾಗಿ ಪ್ರಗತಿ ಸಾಧಿಸುವಿರಿ. ವಿದ್ಯಾರ್ಥಿಗಳು ಉತ್ತಮ ಅವಕಾಶಗಳನ್ನು ಪಡೆಯುತ್ತಾರೆ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಉದ್ಯಮಿಗಳು ಉತ್ತಮ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ನಿಮ್ಮ ಕುಟುಂಬ ಜೀವನವು ಸಂತೋಷವಾಗಿರುತ್ತದೆ.

ಮಕರ ರಾಶಿ:

ಮಕರ ರಾಶಿಯವರಿಗೆ ತ್ರಿಗ್ರಹಿ ಯೋಗವು ಅನೇಕ ಪ್ರಯೋಜನಗಳನ್ನು ತರುತ್ತದೆ. ಈ ಅವಧಿಯಲ್ಲಿ ಅವಿವಾಹಿತರು ಉತ್ತಮ ಸಂಬಂಧಗಳನ್ನು ಕಂಡುಕೊಳ್ಳುತ್ತಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಪ್ರಗತಿ ಸಾಧಿಸುತ್ತಾರೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಸಿಗುವ ಸಾಧ್ಯತೆಯಿದೆ. ಹೊಸದಾಗಿ ಮದುವೆಯಾದವರು ಮಕ್ಕಳ ಬಗ್ಗೆ ಒಳ್ಳೆಯ ಸುದ್ದಿ ಕೇಳುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಾಗತಿಕ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್​; ಕೆಐಎಬಿಯಿಂದ ದಾಖಲೆಯ 5.2 ಲಕ್ಷ ಮೆಟ್ರಿಕ್ ಟನ್ ಸರಕು ಸಾಗಾಟ! – Kannada News | KIAB Sets New Air Cargo Record: 5 percent Growth at Bengaluru Airport

ವಿಶ್ವಮಟ್ಟದ ಸಾಧನೆ ಮಾಡಿದ ಬೆಂಗಳೂರು ಏರ್​ಪೋರ್ಟ್

ದೇವನಹಳ್ಳಿ, ಜನವರಿ 16: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಸರಕು ಸಾಗಾಟ ಕ್ಷೇತ್ರದಲ್ಲೂ ಹೊಸ ದಾಖಲೆ ನಿರ್ಮಿಸಿದೆ. ಕಳೆದ ವರ್ಷ ಕೆಐಎಬಿಯಿಂದ ಒಟ್ಟು 5 ಲಕ್ಷ 20 ಸಾವಿರ 985 ಮೆಟ್ರಿಕ್ ಟನ್ ಸರಕು ಸಾಗಾಟವಾಗಿದ್ದು, ಇದು ವಿಮಾನ ನಿಲ್ದಾಣದ ಇತಿಹಾಸದಲ್ಲೇ ಮಹತ್ವದ ಸಾಧನೆಯಾಗಿದೆ. 2024ರ ಅವಧಿಗೆ ಹೋಲಿಸಿದರೆ 2025ರಲ್ಲಿ ಸರಕು ಸಾಗಾಟದಲ್ಲಿ ಶೇ5ರಷ್ಟು ಏರಿಕೆಯಾಗಿದೆ.

ಒಂದೇ ದಿನದಲ್ಲಿ ಸಾವಿರಾರು ಮೆಟ್ರಿಕ್ ಟನ್ ಸರಕು ಸಾಗಾಟ

ಆಗಸ್ಟ್ 7ರಂದು ಒಂದೇ ದಿನದಲ್ಲಿ 2,207 ಮೆಟ್ರಿಕ್ ಟನ್ ಸರಕು ಸಾಗಾಟ ಮಾಡುವ ಮೂಲಕ ಕೆಐಎಬಿ ಗರಿಷ್ಠ ದೈನಂದಿನ ಸರಕು ಸಾಗಾಟದ ದಾಖಲೆಯನ್ನೂ ತನ್ನ ಮುಡಿಗೆ ಏರಿಸಿಕೊಂಡಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ದೇಶೀಯ ಹಾಗೂ ಅಂತಾರಾಷ್ಟ್ರೀಯವಾಗಿ ಒಟ್ಟು 37 ವಿಮಾನ ನಿಲ್ದಾಣಗಳಿಗೆ ಸರಕು ಸಾಗಾಟ ನಡೆಯುತ್ತಿದೆ. ಭಾರತದ ಅತಿದೊಡ್ಡ ದೇಶೀಯ ಸರಕು ಟರ್ಮಿನಲ್ ಎಂಬ ಹೆಗ್ಗಳಿಕೆಯನ್ನು ಹೊಂದಿರುವ ಕೆಐಎಬಿ, 8.2 ಎಕರೆ ವಿಸ್ತೀರ್ಣದಲ್ಲಿ 3 ಲಕ್ಷ 70 ಸಾವಿರ ಚದರ ಅಡಿ ವಿಸ್ತಾರದ ಎ-ಗ್ರೇಡ್ ಗೋದಾಮು ಹೊಂದಿದೆ.

ಜಾಗತಿಕ ಮಹತ್ವ ಇನ್ನಷ್ಟು ಹೆಚ್ಚು

ಕೆಐಎಬಿಯಿಂದ ಹೆಚ್ಚಾಗಿ ಕೃಷಿ ಉತ್ಪನ್ನಗಳು, ಔಷಧಿಗಳು, ಆಟೋ ಭಾಗಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಸಾಗಾಟ ನಡೆಯುತ್ತಿದೆ. ಚಿಕಾಗೋ, ಸಿಂಗಾಪುರ, ಲಂಡನ್, ಹೀಥ್ರೋ, ಫ್ರಾಂಕ್‌ಫರ್ಟ್ ಮತ್ತು ಲೀಪ್ಜಿಗ್ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ನಗರಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ರಫ್ತು ನಡೆಯುತ್ತಿದೆ. ಈ ಸಾಧನೆಯಿಂದ ಬೆಂಗಳೂರು ವಿಮಾನ ನಿಲ್ದಾಣದ ಜಾಗತಿಕ ಮಹತ್ವ ಇನ್ನಷ್ಟು ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಪ್ಪನಿಗೆ ಏಡ್ಸ್​ ಬಂದಾಗಲೂ ಯಾರೂ ಇರಲಿಲ್ಲ, ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು – Kannada News | Orphaned by AIDS: Heartbreaking Story of Boy Losing Parents to HIV in Etah

ಅಮ್ಮನ ಶವದ ಮುಂದೆ ಮಗನ ರೋದನೆ Image Credit source: Free Press Journal

ಎಟಾ, ಜನವರಿ 16: ಎಚ್​ಐವಿ(HIV)ಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು 10 ವರ್ಷದ ಬಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ.

ಗುರುವಾರ ಬೆಳಗ್ಗೆ ಆತ ತಾಯಿಯನ್ನು ಕಳೆದುಕೊಂಡಿದ್ದಾನೆ. ಎಟಾ ವೈದ್ಯಕೀಯ ಕಾಲೇಜಿನಲ್ಲಿ ಎಚ್ಐವಿ ಮತ್ತು ಏಡ್ಸ್ ಚಿಕಿತ್ಸೆ ಪಡೆಯುತ್ತಿದ್ದ ಆಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ವರ್ಷ ಇದೇ ಕಾಯಿಲೆಯಿಂದ ತನ್ನ ತಂದೆಯನ್ನು ಕಳೆದುಕೊಂಡಿದ್ದಾಗಿ ಬಾಲಕ ಹೇಳಿದ್ದಾನೆ.

ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ ತಾಯಿಯನ್ನು ಉಳಿಸಿಕೊಳ್ಳಲು ಸಾರ್ಧಯವಾಗಿಲ್ಲ, ಮರಣೋತ್ತರ ಪರೀಕ್ಷೆ ನಡೆಸಿರುವ ಕೋಣೆಯಲ್ಲಿ ತಾಯಿಯ ಶವದ ಪಕ್ಕ ಕುಳಿತು ತನ್ನ ದುಃಖ ತೋಡಿಕೊಂಡಿದ್ದಾನೆ.

ಮತ್ತಷ್ಟು ಓದಿ: ಎಚ್‌ಐವಿ ಏಡ್ಸ್ ಕುರಿತು ಈಗಲೂ ತಿಳಿದುಕೊಳ್ಳಬೇಕಾದ ಅಂಶಗಳಿವು

ಅಪ್ಪನಿಗೆ ಏಡ್ಸ್​ ಬಂದಾಗ ನೆಂಟಿರಿಷ್ಟರೆಲ್ಲಾ ನಮ್ಮ ಜತೆ ಮಾತನಾಡುವುದನ್ನೇ ನಿಲ್ಲಿಸಿದ್ದರು, ಅಧಿಕಾರಿಗಳು ಬರುವವರೆಗೂ ಅಲ್ಲಿಂದ ಬಾಲಕ ಹೊರಟಿರಲಿಲ್ಲ ಎಂದು ಸಿಬ್ಬಂದಿ ಹೇಳಿದ್ದಾರೆ. ಜೈತ್ರ ಪೊಲೀಸ್ ಠಾಣೆಯ ನಾಗ್ಲಾ ಧೀರಜ್ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.

ಪತಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ 45 ವರ್ಷದ ಮಹಿಳೆ ಒಂದು ವರ್ಷದ ಹಿಂದೆ ಎಚ್‌ಐವಿ ಸೋಂಕಿನಿಂದಾಗಿ ತನ್ನ ಗಂಡನನ್ನು ಕಳೆದುಕೊಂಡಿದ್ದರು. ಅಂದಿನಿಂದ, ಆ ಮಹಿಳೆ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದರು, ಮತ್ತು ಇದರಿಂದಾಗಿ ಅವರು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

HIV (ಮಾನವ ಇಮ್ಯುನೊ ಡಿಫಿಷಿಯನ್ಸಿ ವೈರಸ್) ದೇಹದ ಪ್ರತಿರಕ್ಷಣಾ ವ್ಯವಸ್ಥೆಗೆ ಹಾನಿ ಮಾಡುವ ವೈರಸ್ ಆಗಿದೆ. ಚಿಕಿತ್ಸೆ ನೀಡದೆ ಬಿಟ್ಟರೆ, ಅದು AIDS (ಸ್ವಾಧೀನಪಡಿಸಿಕೊಂಡ ಇಮ್ಯುನೊ ಡಿಫಿಷಿಯನ್ಸಿ ಸಿಂಡ್ರೋಮ್) ಗೆ ಮುಂದುವರೆಯಬಹುದು.ಯಾವುದೇ ಯಶಸ್ವಿ ಚಿಕಿತ್ಸೆ ಇಲ್ಲ. ವ್ಯಕ್ತಿಗಳು ಎಚ್​ಐವಿಗೆ ಒಮ್ಮೆ ತುತ್ತಾದರೆ, ಅದು ಅವರ ಜೊತೆ ಜೀವನದುದ್ದಕ್ಕೂ ಇರುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version