ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿಎಂ ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ – Kannada News | BJP MLC H Vishwanath Makes Serious Allegations Against Yathindra Siddaramaiah Over Loan Assault Case

ಮೈಸೂರು, (ಮೇ 20):ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಂಎಲ್‌ಸಿ ಎಚ್‌.ವಿಶ್ವನಾಥ್‌, ಈ ಪ್ರಕರಣದ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕುಮ್ಮಕ್ಕಿದೆ. ಪ್ರಕರಣ ಸಂಬಂಧ ಪೊಲೀಸರ ನೋಟಿಸ್​ಗೆ ಉತ್ತರ ಕೊಟ್ಟಿದ್ದೇನೆ. ಆದರೂ ಕೂಡ ಎಫ್‌ಐಆರ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಇದರಲ್ಲಿ ಯತೀಂದ್ರ ಕುಮ್ಮಕ್ಕು ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನಿನಗೆ ಸಾಲ ಕೊಡಲು 55 ಲಕ್ಷ ರೂಪಾಯಿ ಎಲ್ಲಿಂದ ಬಂತು? ನಾನು 50 ವರ್ಷದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ನಾನು ಸದನದಲ್ಲೇ‌ ಸತ್ಯವಂತ ಎಂದು ಪ್ರಮಾಣ ಮಾಡಿದ್ದೇನೆ. ಕೋಟೆಹುಂಡಿ ಮಹದೇವ ನಮ್ಮ ಮನೆ ಮುಂದೆ ಬಂದು ನಿಲ್ಲುತ್ತಿದ್ದ. ಸಿದ್ದರಾಮಯ್ಯ ಮಗನನ್ನು ನಾನು ಹೆಚ್​ಎಂ ಎಂದು ಹೇಳಿದ್ದೆ. ಈಗ ಅದನ್ನು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಎಫ್‌ಐಆರ್ ವಿರುದ್ಧ ಹೈಕೋರ್ಟ್ ಮೆಟ್ಟಿಲೇರುತ್ತೇನೆ ಎಂದು ಎಂದರು.

ಇದನ್ನೂ ನೋಡಿ: ನನ್ನ ಮಕ್ಕಳು ಸಹ ಸ್ಪರ್ಧಿಸಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ

Source link

ಟಾಕ್ ಶೋ ಮೂಲಕ ಮರಳಿ ಬಂದ ‘ಓಜಿ’ ಕಮಿಡಿಯನ್ ಶೇಖರ್ ಸುಮನ್ – Kannada News | Shekhar Suman started talk show named Shekhar Tonite

ಶೇಖರ್ ಸುಮನ್ (Shekhar Suman), ಭಾರತದ ‘ಓಜಿ’ ಕಮಿಡಿಯನ್. ಇಂದು ಚಾಲ್ತಿಯಲ್ಲಿರುವ ಸ್ಟಾಂಡಪ್ ಕಾಮಿಡಿ, ಪೊಲಿಟಿಕಲ್ ಸಟೈರ್, ರಾಜಕಾರಣಿಗಳ ಮಿಮಿಕ್ರಿ, ಕ್ರಿಟಿಕಲ್ ಕಾಮಿಡಿ ಇನ್ನೂ ಹಲವು ವಿಭಾಗಗಳಲ್ಲಿ ಶೇಖರ್ ಸುಮನ್ ನೈಪುಣ್ಯತೆ ಹೊಂದಿದ್ದರು ಹಾಗೂ ಭಾರತದಲ್ಲಿ ಮೊದಲ ಬಾರಿಗೆ ಇದನ್ನೆಲ್ಲ ಪ್ರಯೋಗಿಸಿ ಯಶಸ್ವಿ ಆಗಿದ್ದಲ್ಲದೆ ಭಾರಿ ಜನಪ್ರಿಯತೆಯನ್ನೂ ಸಹ ಗಳಿಸಿದ್ದರು. ದಶಕಗಳಿಂದಲೂ ಭಾರತೀಯ ಟಿವಿ ಕ್ಷೇತ್ರದಲ್ಲಿ ಮೆರೆದ ಶೇಖರ್ ಸುಮನ್ ಕಮಿಡಿಯನ್​​ಗಳ ಹೊಸ ಅಲೆ ಬಂದ ಬಳಿಕ ತುಸು ಮಂಕಾಗಿದ್ದರು. ಇದೀಗ ಸುಮಾರು 14 ವರ್ಷಗಳ ನಂತರ ಮತ್ತೆ ತಮ್ಮದೇ ಆದ ವಿಶಿಷ್ಟ ಶೈಲಿಯ ಶೋ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ‘ಶೇಖರ್ ಟುನೈಟ್’ ಹೆಸರಿನ ಹೊಸ ಟಾಕ್ ಶೋ ಒಂದನ್ನು ಶೇಖರ್ ಸುಮನ್ ಯೂಟ್ಯೂಬ್​​ನಲ್ಲಿ ಪ್ರಾರಂಭಿಸಿದ್ದಾರೆ.

90ರ ದಶಕದಲ್ಲಿ ಸೂಪರ್ ಹಿಟ್ ಆಗಿದ್ದ ‘ಮೂವರ್ಸ್ ಅಂಡ್ ಶೇಕರ್ಸ್’ ಕಾರ್ಯಕ್ರಮದ ಮೂಲಕ ಭಾರತದಲ್ಲಿ ಲೇಟ್-ನೈಟ್ ಟಾಕ್ ಶೋ ಸಂಸ್ಕೃತಿಯನ್ನು ಪರಿಚಯಿಸಿದ ಶೇಖರ್ ಸುಮನ್, ಈಗ ಅದೇ ಮಾದರಿಯನ್ನು ಆಧುನಿಕ ಡಿಜಿಟಲ್ ಆಡಿಯನ್ಸ್‌ಗೆ ತಕ್ಕಂತೆ ತೆಗೆದುಕೊಂಡು ಬಂದಿದ್ದಾರೆ. ಶೋನ ಹೆಸರು ‘ಶೇಖರ್ ಟುನೈಟ್’. ಪ್ರತಿ ಶುಕ್ರವಾರ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಶೋದ ಹೊಸ ಸಂಚಿಕೆಗಳು ಬಿಡುಗಡೆಯಾಗುತ್ತಿವೆ. ವಿಶೇಷವೆಂದರೆ, ಶೇಖರ್ ಸುಮನ್ ಅವರ ಪುತ್ರ ಅಧ್ಯಯನ್ ಸುಮನ್ ಈ ಹೊಸ ಶೋ ಅನ್ನು ಕ್ರಿಯೇಟ್ ಮಾಡಿದ್ದಾರೆ.

ಇದನ್ನೂ ಓದಿ:ಜೈಲಿಗೆ ಹೋದ ಖ್ಯಾತ ಕಮಿಡಿಯನ್ ಸಹಾಯಕ್ಕೆ ಧಾವಿಸಿದ ಸೋನು ಸೂದ್

‘ಶೇಖರ್ ಟುನೈಟ್’ ಕೇವಲ ಸೆಲೆಬ್ರಿಟಿಗಳ ಸಾಂಪ್ರದಾಯಿಕ ಸಂದರ್ಶನವಲ್ಲ, ಬದಲಿಗೆ ಇದು ಯಾವುದೇ ಸ್ಕ್ರಿಪ್ಟ್ ಇಲ್ಲದ, ಸ್ವಾಭಾವಿಕವಾಗಿ ನಡೆಯುವ ಸಂಭಾಷಣೆಯಾಗಿದೆ. ಚಿತ್ರರಂಗ, ರಾಜಕೀಯ, ಕ್ರೀಡೆ, ಸಂಗೀತ ಮತ್ತು ಉದ್ಯಮ ರಂಗದ ಪ್ರಮುಖ ಗಣ್ಯರು ಈ ಶೋನಲ್ಲಿ ಭಾಗವಹಿಸಲಿದ್ದಾರೆ. ಹಾಸ್ಯ, ವಿಡಂಬನೆ, ರಾಜಕೀಯ ಚುಟುಕುಗಳು ಮತ್ತು ಭಾವುಕ ಕ್ಷಣಗಳ ಸಮ್ಮಿಶ್ರಣವಾಗಿ ಈ ಶೋ ಮೂಡಿಬರುತ್ತಿದೆ.

ಶೋನಲ್ಲಿ ಈಗಾಗಲೇ ಕೇಂದ್ರ ಮಂತ್ರಿ ನಿತಿನ್ ಗಡ್ಕರಿ, ಸಿನಿಮಾ ನಟರುಗಳಾದ ಬಾಬಿ ಡಿಯೋಲ್, ಮನೋಜ್ ಬಾಜಪೇಯಿ, ಅಲಿ ಫಜಲ್, ಫರಾ ಖಾನ್ ಇನ್ನೂ ಹಲವರು ಭಾಗವಹಿಸಿದ್ದಾರೆ. ಈ ಸಂಚಿಕೆಯಲ್ಲಿ ಶೇಖರ್ ಸುಮನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೂ ಸೇರಿದಂತೆ ಹಲವು ರಾಜಕೀಯ ನಾಯಕರ ಬಗ್ಗೆ ತಮ್ಮದೇ ಆದ ವಿಡಂಬನಾತ್ಮಕ ಶೈಲಿಯಲ್ಲಿ ಹಾಸ್ಯದ ಚಾಟಿ ಬೀಸಿದ್ದಾರೆ.

ಹಾಲಿವುಡ್​ನಲ್ಲಿ ಬಲು ಜನಪ್ರಿಯವಾಗಿರುವ ‘ಜಿಮ್ಮಿ ಕ್ಯಾಮೆಲ್ ಶೋ’ ಮಾದರಿಯಲ್ಲಿಯೇ ಇದೆ ಶೇಖರ್ ಸುಮನ್ ಅವರ ‘ಶೇಖರ್ ಟುನೈಟ್’. ಅಲ್ಲಿ ಲೇಟ್ ನೈಟ್ ಟಾಕ್ ಶೋಗಳು ಬಲು ಜನಪ್ರಿಯತೆ ಪಡೆದುಕೊಂಡಿವೆ. ಇದೀಗ ಶೇಖರ್ ಸುಮನ್ ಸಹ ಅದೇ ಮಾದರಿಯನ್ನು ಅನುಸರಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’ – Kannada News | Bigg Boss Kannada Season 12 winner Gilli Nata new movie Survey Number 45

ಕಾಮಿಡಿ ಇಷ್ಟಪಡುವ ಪ್ರೇಕ್ಷಕರಿಗೆ ಗಿಲ್ಲಿ ನಟ ಎಂದರೆ ಸಖತ್ ಇಷ್ಟ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಸ್ಪರ್ಧಿಸಿ ವಿನ್ ಆದ ಬಳಿಕ ಗಿಲ್ಲಿ ನಟ ಅವರ ಖ್ಯಾತಿ ಹೆಚ್ಚಾಯಿತು. ಇದರಿಂದಾಗಿ ಅವರಿಗೆ ಸಿನಿಮಾಗಳಲ್ಲಿ ಅವಕಾಶ ಜಾಸ್ತಿ ಆಗಿದೆ. ಗಿಲ್ಲಿ ನಟ (Gilli Nata) ಅವರು ಪಕ್ಕಾ ಹಳ್ಳಿ ಹೈದ. ಅವರ ಆ ಗುಣವನ್ನೇ ಬಿಗ್ ಬಾಸ್ ಆಟದಲ್ಲಿ ಪ್ರೇಕ್ಷಕರು ಇಷ್ಟಪಟ್ಟಿದ್ದರು. ವಿಶೇಷ ಏನೆಂದರೆ, ಈಗ ಗಿಲ್ಲಿ ನಟ ಅವರು ಹಳ್ಳಿ ಸೊಗಡಿನ ಕಥೆ ಇರುವ ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ‘ಸರ್ವೇ ನಂಬರ್ 45’ (Survey Number 45) ಎಂದು ಹೆಸರು ಇಡಲಾಗಿದೆ.

‘ಸರ್ವೇ ನಂಬರ್ 45’ ಸಿನಿಮಾದ ಶೀರ್ಷಿಕೆ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಗಿಲ್ಲಿ ನಟ ಅವರು ಹಳ್ಳಿ ಹೈದನ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯಕ್ಕೆ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತದಲ್ಲಿವೆ. ‘ವರನಂದಿ ಸಿನಿ ಸಂಸ್ಥೆ’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಆನಂದ್ ಎಸ್.ವಿ. ಮತ್ತು ಹನುಮಂತರೆಡ್ಡಿ ಎಸ್.ಆರ್. ಅವರು ಸಹ-ನಿರ್ಮಾಪಕರಾಗಿದಾರೆ.

ಶಿವಕುಮಾರ್ ಎಂ. ಶೆಟ್ಟಿಹಳ್ಳಿ ಅವರು ‘ಸರ್ವೇ ನಂಬರ್ 45’ ಸಿನಿಮಾಗೆ ಕಥೆ, ಚಿತ್ರಕಥೆ ಹಾಗೂ ಎರಡು ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ. ವಿಶಾಲ್ ಅಲಾಪ್ ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ದೀಪಕ್ ಕುಮಾರ್ ಜಿ.ಕೆ. ಅವರ ಛಾಯಾಗ್ರಹಣ, ರಾಮಾರ್ಜುನ್ ಅವರ ಸಂಕಲನ, ಚಕ್ರಿ ಕಿರಿಸಾವೆ ಅವರ ಸಂಭಾಷಣೆ, ರಘು ಆರ್.ಜೆ. ಅವರ ನೃತ್ಯ ನಿರ್ದೇಶನ ಈ ಸಿನಿಮಾಗಿದೆ. ಹುಣಸೂರು ಸುತ್ತಮುತ್ತ ಶೂಟಿಂಗ್ ನಡೆದಿದೆ.

Survey Number 45 Movie Team

ಸಿನಿಮಾದ ಪಾತ್ರವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಮುಖ್ಯ ಭೂಮಿಕೆಯಲ್ಲಿ ಗಿಲ್ಲಿ ನಟ ಅವರು ಅಭಿನಯಿಸಿದ್ದರೆ ಕಿರುತೆರೆಯ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಂತೋಷ್, ಮಹಾನಟಿ ಖ್ಯಾತಿಯ ಪ್ರಾವಲಿಕ, ಮೌನ ಹಾಸನ್, ಕುಮಾರ್ ಅರಸೇಗೌಡ, ಮಾಲತಿ, ಮನು ಕಲ್ಲಹಳ್ಳಿ, ಶಿವಣ್ಣ, ಜ್ಯೂ. ದ್ವಾರಕೀಶ್, ಮಂಜು, ರಾಘವೇಂದ್ರ ಕುಮಾರ್, ವೀರೇಶ್, ಹನುಮಂತಪ್ಪ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಕಾವ್ಯಾನ ಮದುವೆ ಆಗಲ್ಲ: ಎಲ್ಲರ ಎದುರು ನೇರವಾಗಿ ಹೇಳಿದ ಗಿಲ್ಲಿ ನಟ

ಕಥೆಯ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ರೈತನ ಜಮೀನಿಗೆ ಸರ್ಕಾರವು ಸರ್ವೇ ನಂಬರ್ ನೀಡಿರುತ್ತದೆ. ಇದರ ಮಧ್ಯೆ ಆತನಿಗೆ ಅನೇಕ ಕಷ್ಟ ಬರುತ್ತಲೇ ಇರುತ್ತದೆ. ಅದನ್ನು ಚಾಣಾಕ್ಷತನದಿಂದ ಒಳ್ಳೆತನದಲ್ಲಿ ಹೇಗೆ ಬಗೆ ಹರಿಸಿಕೊಳ್ಳುತ್ತಾನೆ ಎಂಬ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ನಾವು ಒಳಿತನ್ನು ಬಯಸಿದರೆ ಒಳ್ಳೆಯದೇ ನಡೆಯುತ್ತದೆ. ಕೆಟ್ಟತನವನ್ನು ಆಯ್ಕೆ ಮಾಡಿಕೊಂಡರೆ ಅದೇ ಆಗುತ್ತದೆ ಎಂಬ ಸಂದೇಶವನ್ನು ಈ ಚಿತ್ರದ ಮೂಲಕ ನೀಡಲಾಗುವುದು ಎಂದು ತಂಡ ಹೇಳಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

TV9 kannada News Live: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಬಹಿರಂಗ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Tv9 Kannada News Live: Bowring Hospital Mishap Report, PM Modi’s Italy Visit and Rs 34 Crore Drug Bust

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

ಬೆಂಗಳೂರು, ಮೇ 20: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಜೀವಗಳು ಬಲಿಯಾದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಅಧಿಕಾರಿಗಳ ಹಿತಾಸಕ್ತಿ ರಹಿತ ನಡೆ ಹಾಗೂ ತ್ಯಾಜ್ಯ ವಿಲೇವಾರಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಮುಖ್ಯ ಕಾರ್ಯದರ್ಶಿಗಳ ವರದಿ ಬಹಿರಂಗಪಡಿಸಿದೆ. ಇತ್ತ, ಜಾಗತಿಕ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಭಾರತದ ‘ಮೆಲೋಡಿ’ ಚಾಕೊಲೇಟ್ ಉಡುಗೊರೆ ನೀಡುವ ಮೂಲಕ ಉಭಯ ದೇಶಗಳ ಬಾಂಧವ್ಯವನ್ನು ಮತ್ತಷ್ಟು ಮಧುರಗೊಳಿಸಿದ್ದಾರೆ. ಇವೆಲ್ಲದರ ನಡುವೆ, ಬೆಂಗಳೂರಿನ ಹೆಬ್ಬಾಳ ಪೊಲೀಸರು ದೆಹಲಿಯಿಂದ ಅತ್ಯಂತ ವ್ಯವಸ್ಥಿತವಾಗಿ ರೈಲಿನಲ್ಲಿ ಸಾಗಣೆಯಾಗುತ್ತಿದ್ದ ಬರೋಬ್ಬರಿ 34 ಕೋಟಿ ರೂಪಾಯಿ ಮೌಲ್ಯದ ಬೃಹತ್ ಡ್ರಗ್ ಜಾಲವನ್ನು ಭೇದಿಸಿ ಮಹಾ ಕಾರ್ಯಾಚರಣೆ ನಡೆಸಿದ್ದಾರೆ.

ಮುಖ್ಯಾಂಶಗಳು

  • ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣವೆಂದು ತನಿಖಾ ವರದಿ ಬಹಿರಂಗ.
  • ಪ್ರಧಾನಿ ಮೋದಿ ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಉಡುಗೊರೆ ನೀಡಿದ್ದಾರೆ.
  • ಹೆಬ್ಬಾಳ ಪೊಲೀಸರಿಂದ ಬರೋಬ್ಬರಿ 34 ಕೋಟಿ ಮೌಲ್ಯದ ಡ್ರಗ್ಸ್ ಜಾಲ ಪತ್ತೆ.

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ, ನಾಲ್ವರು ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಶಿಫಾರಸು

ಏಪ್ರಿಲ್ 29ರಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಜನ ಮೃತಪಟ್ಟು, 7 ಜನ ಗಾಯಗೊಂಡಿದ್ದ ಭೀಕರ ದುರಂತದ ತನಿಖಾ ವರದಿಯನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಲ್ಲಿಸಿದ್ದಾರೆ. ಮೇ 14ರಂದು ಸ್ಥಳ ಪರಿಶೀಲನೆ ನಡೆಸಿ ಸಿದ್ಧಪಡಿಸಲಾದ ಈ ವರದಿಯಲ್ಲಿ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಘೋರ ನಿರ್ಲಕ್ಷ್ಯ ಬಯಲಾಗಿದೆ. ಆಸ್ಪತ್ರೆ ಆವರಣದ 22 ಸಾವಿರ ಚದರ ಅಡಿ ಪ್ರದೇಶದಲ್ಲಿ ಎಎಸ್‌ಆರ್ ಟ್ರೇಡರ್ಸ್ (ASR Traders) ಸಂಸ್ಥೆಯು ಅವೈಜ್ಞಾನಿಕವಾಗಿ ಜಿಬಿಎ ಕಟ್ಟಡ ತ್ಯಾಜ್ಯ ಹಾಗೂ ಮಣ್ಣನ್ನು ರಾಶಿ ಹಾಕಿತ್ತು. ಇದರಿಂದಾಗಿ ಗೋಡೆಯ ಮೇಲೆ ಒತ್ತಡ ಬಿದ್ದಿದೆ. ಜೊತೆಗೆ ಮಳೆನೀರು ಹರಿವಿಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಗೋಡೆ ಕುಸಿದಿದೆ ಎಂದು ವರದಿ ಹೇಳಿದೆ. ಈ ಹಿನ್ನೆಲೆಯಲ್ಲಿ ಎಎಸ್‌ಆರ್ ಟ್ರೇಡರ್ಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಮತ್ತು ಇಲಾಖೆಯ ಇಂಜಿನಿಯರ್‌ಗಳಾದ ಸೋಮರಾಜು, ಮಹೇಶ್ ಕುಮಾರ್, ತಿಮ್ಮಪ್ಪ ಹಾಗೂ ಉದಯ ಶಂಕರ್ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಶಿಫಾರಸು ಮಾಡಲಾಗಿದ್ದು, ತಕ್ಷಣವೇ 200 ಮೀಟರ್ ಹೊಸ ಗೋಡೆ ನಿರ್ಮಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೆಲೋನಿಗೆ ‘ಮೆಲೋಡಿ’ ಚಾಕೊಲೇಟ್ ಗಿಫ್ಟ್!

ತಮ್ಮ ಐದು ರಾಷ್ಟ್ರಗಳ ಅಧಿಕೃತ ಪ್ರವಾಸದ ಕೊನೆಯ ಹಂತವಾಗಿ ಮಂಗಳವಾರ ರೋಮ್‌ಗೆ ತಲುಪಿರುವ ಪ್ರಧಾನಿ ನರೇಂದ್ರ ಮೋದಿ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಭಾರತದ ಪ್ರಸಿದ್ಧ ‘ಮೆಲೋಡಿ ಚಾಕೊಲೇಟ್’ ಪ್ಯಾಕ್ ಅನ್ನು ಉಡುಗೊರೆಯಾಗಿ ನೀಡುವ ಮೂಲಕ ಉಭಯ ದೇಶಗಳ ನಡುವಿನ ಸ್ನೇಹವನ್ನು ಮಧುರವಾಗಿಸಿದ್ದಾರೆ. ಎರಡೂ ದೇಶಗಳ ಸಂಬಂಧ ಈ ಚಾಕೊಲೇಟ್‌ನಷ್ಟೇ ಸಿಹಿಯಾಗಿರಲಿ ಎಂದು ಮೋದಿ ಹಾರೈಸಿದ್ದು, ಮೆಲೋನಿಯವರು ಈ ಅಪರೂಪದ ಭೇಟಿಯ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಭಾರತ ಮತ್ತು ಇಟಲಿ ನಡುವಿನ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029 ರ ಅಡಿಯಲ್ಲಿ ವ್ಯಾಪಾರ, ಹೂಡಿಕೆ, ರಕ್ಷಣೆ, ಶುದ್ಧ ಇಂಧನ ಹಾಗೂ ತಂತ್ರಜ್ಞಾನ ವಲಯದಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಉನ್ನತ ಮಟ್ಟದ ಭೇಟಿ ಜಾಗತಿಕವಾಗಿ ತೀವ್ರ ಕುತೂಹಲ ಮೂಡಿಸಿದೆ.

ಇದನ್ನೂ ಓದಿ Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ

34 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ, ಎಂಟು ಜನ ಅರೆಸ್ಟ್

ಬೆಂಗಳೂರಿನ ಹೆಬ್ಬಾಳ ಠಾಣೆ ಪೊಲೀಸರು ಅಂತರರಾಜ್ಯ ಮಾದಕ ವಸ್ತು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಬರೋಬ್ಬರಿ 34 ಕೋಟಿ ರೂಪಾಯಿ ಮೌಲ್ಯದ 17 ಕೆಜಿಗೂ ಅಧಿಕ ಎಂಡಿಎಂಎ (MDMA) ಡ್ರಗ್ಸ್ ವಶಪಡಿಸಿಕೊಂಡು ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಗ್ಯಾಂಗ್ ದೆಹಲಿಯಿಂದ ರೈಲಿನ ಮೂಲಕ ಸೀರೆಗಳು, ಬಟ್ಟೆ ಇಸ್ತ್ರಿ ಮಾಡುವ ಟೇಬಲ್ ಮತ್ತು ಚೇರ್‌ಗಳ ಒಳಗೆ ಗಿಫ್ಟ್ ಪ್ಯಾಕ್ ಮಾದರಿಯಲ್ಲಿ ಡ್ರಗ್ಸ್ ಅಡಗಿಸಿಟ್ಟು ಬೆಂಗಳೂರಿಗೆ ಸಾಗಿಸುತ್ತಿತ್ತು. ರೈಲಿನಿಂದ ಕಾರಿಗೆ ಮಾದಕ ವಸ್ತು ಶಿಫ್ಟ್ ಮಾಡುವಾಗ ದಾಳಿ ನಡೆಸಿದ ಪೊಲೀಸರು ಮೊದಲು 4.3 ಕೆಜಿ ಡ್ರಗ್ಸ್ ವಶಕ್ಕೆ ಪಡೆದರು. ಬಳಿಕ ಆರೋಪಿಗಳ ಮಾಹಿತಿ ಮೇರೆಗೆ ಪೆಡ್ಲರ್ ಮನ್ಸೂರ್‌ನ ಸರ್ಜಾಪುರ ನಿವಾಸದ ಮೇಲೆ ದಾಳಿ ನಡೆಸಿ 10 ಕೆಜಿ ಹಾಗೂ ಹೆಣ್ಣೂರಿನಲ್ಲಿದ್ದ ಅಬ್ದುಲ್ ಸಮಾದ್ ನಿವಾಸದಿಂದ 3.5 ಕೆಜಿ ಎಂಡಿಎಂಎ ಪತ್ತೆ ಹಚ್ಚಿದ್ದಾರೆ. ಈ ಜಾಲವು ಅತ್ಯಂತ ವ್ಯವಸ್ಥಿತವಾಗಿ ಮೂರು ಲೇಯರ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ? – Kannada News | Jr. NTR Birthday Wish by Hombale Fuels Big Movie Deal Speculation

ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ.

ಜೂನಿಯರ್ ಎನ್​ಟಿಆರ್ ನಟನೆಯ ‘ಡ್ರ್ಯಾಗನ್’ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಆಗಿದೆ. ಇದನ್ನು ಹೊಂಬಾಳೆ ಸಂಭ್ರಮಿಸಿದೆ. ಜೂನಿಯರ್ ಎನ್​​​​ಟಿಆರ್​​ಗೆ ವಿಶ್ ಮಾಡುವಾಗ ‘ಡ್ರ್ಯಾಗನ್’ ಸಿನಿಮಾ ಬಗ್ಗೆಯೂ ಮೆಚ್ಚುಗೆ ಸೂಚಿಸಿದೆ. ಇದರ ಹಿಂದೆ ದೊಡ್ಡದೊಂದು ಲೆಕ್ಕಾಚಾರ ಅಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೊಂಬಾಳೆ ಫಿಲ್ಮ್ಸ್ ಈಗಾಗಲೇ ಪ್ರಭಾಸ್ ಅವರ ‘ಸಲಾರ್’ ಚಿತ್ರಕ್ಕೆ ಬಂಡವಾಳ ಹೂಡಿದೆ. ಹಿಂದಿ, ತಮಿಳಿನಲ್ಲೂ ಈ ಸಂಸ್ಥೆ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಶೀಘ್ರದಲ್ಲೇ ಜೂ.ಎನ್​​ಟಿಆರ್ ಜೊತೆ ಹೊಂಬಾಳೆ ಸಿನಿಮಾ ಮಾಡೋ ಸಾಧ್ಯತೆ ಇದೆ ಎನ್ನಲಾಗಿದೆ. ತೆರೆಮರೆಯಲ್ಲಿ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ. ಈ ಚಿತ್ರವನ್ನು ನಿರ್ದೇಶನ ಮಾಡುವವರು ಯಾರು ಎಂಬ ಕುತೂಹಲ ಮೂಡಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂಬುದು ಅನೇಕರ ಆಸೆ.

ಇದನ್ನೂ ಓದಿ: ಎರಡು ವರ್ಷಕ್ಕೊಂದು ಅನಿಮೇಟೆಡ್ ಸಿನಿಮಾ; 10 ವರ್ಷದ ಪ್ಲ್ಯಾನ್ ರೆಡಿ ಮಾಡಿದ ಹೊಂಬಾಳೆ

ಹೊಂಬಾಳೆ ಫಿಲ್ಮ್ಸ್ ಇತ್ತೀಚೆಗೆ ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರ ವಿದೇಶಿ ಹಾಗೂ ಕರ್ನಾಟಕದ ಹಂಚಿಕೆ ಹಕ್ಕನ್ನು ಪಡೆದಿದೆ. ‘ಡ್ರ್ಯಾಗನ್’ ಚಿತ್ರದ ಥಿಯೇಟ್ರಿಕಲ್ ರಿಲೀಸ್ ಮತ್ತು ವಿತರಣೆಯ ಜವಾಬ್ದಾರಿಯನ್ನು ಹೊಂಬಾಳೆ ವಹಿಸಿಕೊಳ್ಳುವ ಸಾಧ್ಯತೆಗಳೂ ದಟ್ಟವಾಗಿವೆ. ಈ ಕಾರಣಕ್ಕೆ ಅದು ತಮ್ಮದೇ ಸಿನಿಮಾ ಎಂಬ ರೀತಿಯಲ್ಲಿ ಸಂಭ್ರಮಿಸಿದೆ ಎಂದು ವಿಶ್ಲೇಷಿಸಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಊಟದ ತಟ್ಟೆಯಿಂದ ಅನ್ನವೇ ಔಟ್, ಹೈ-ಪ್ರೋಟೀನ್ ಡಯಟ್ ಮೊರೆಹೋದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು – Kannada News | N Chandrababu Naidu Adopts High Protein Diet, Cuts Rice From Meals

ಅಮರಾವತಿ, ಮೇ 20: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರು ಇತ್ತೀಚಿನ ದಿನಗಳಲ್ಲಿ ತಮ್ಮ ಅತ್ಯುತ್ತಮ ಆರೋಗ್ಯ ಮತ್ತು ಫಿಟ್‌ನೆಸ್ ದಿನಚರಿಯನ್ನು ಸಾರ್ವಜನಿಕ ವೇದಿಕೆಗಳಲ್ಲಿ ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನೆಲ್ಲೂರು ಜಿಲ್ಲೆಯಲ್ಲಿ ನಡೆದ ‘ಮತ್ಸ್ಯಕರ ಸೇವಾಲೋ’ (ಮೀನುಗಾರರ ಸೇವಾ ಕಾರ್ಯಕ್ರಮ) ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ತಮ್ಮ ದೈನಂದಿನ ಆಹಾರ ಪದ್ಧತಿಯನ್ನು ಬಹಿರಂಗಪಡಿಸುವ ಮೂಲಕ ಜನರಲ್ಲಿ  ಆರೋಗ್ಯದ ಜಾಗೃತಿ ಮೂಡಿಸಲು ಪ್ರಯತ್ನಿಸಿದ್ದಾರೆ.

ಊಟದ ತಟ್ಟೆಯಿಂದ ಅನ್ನವೇ ಔಟ್, ಮೀನಿಗೆ ಮೊದಲ ಆದ್ಯತೆ
ಚಂದ್ರಬಾಬು ನಾಯ್ಡು ಅವರು ಕಾರ್ಬೋಹೈಡ್ರೇಟ್‌ಗಳನ್ನು, ವಿಶೇಷವಾಗಿ ದಕ್ಷಿಣ ಭಾರತದ ಪ್ರಧಾನ ಆಹಾರವಾದ ಬಿಳಿ ಅಕ್ಕಿಯ (ಅನ್ನ) ಸೇವನೆಯನ್ನು ತಮ್ಮ ಆಹಾರ ಕ್ರಮದಿಂದ ಸಂಪೂರ್ಣವಾಗಿ ಹೊರಗಿಡುವ ದೊಡ್ಡ ನಿರ್ಧಾರವನ್ನು ತಗೆದುಕೊಂಡಿದ್ದಾರೆ. ಅವರ ದೈನಂದಿನ ಆಹಾರವು ಈಗ ಮುಖ್ಯವಾಗಿ ಪ್ರೋಟೀನ್ ಆಧಾರಿತವಾಗಿದೆ.

ಪ್ರೋಟೀನ್ ಭರಿತ ಆಹಾರವು ಮಧುಮೇಹವನ್ನು (Diabetes) ನಿಯಂತ್ರಣದಲ್ಲಿಡಲು ಮತ್ತು ದೇಹದ ಶಕ್ತಿಯನ್ನು ಕಾಪಾಡಿಕೊಳ್ಳಲು ಅತ್ಯಂತ ಸಹಕಾರಿ ಎಂದು ನಂಬಿರುವ ಅವರು ಜತೆಗೆ ಆಹಾರದಲ್ಲಿ ಎಣ್ಣೆ ಮತ್ತು ಉಪ್ಪಿನ ಬಳಕೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಿಯಂತ್ರಣದಲ್ಲಿಡಲು ಅವರು ಸದಾ ಸೂಚಿಸುತ್ತಾರೆ.

ತಂತ್ರಜ್ಞಾನದ ಮೂಲಕ ನಡೆಯುತ್ತೆ ಡಯಟ್ ಲೆಕ್ಕಾಚಾರ
ಚಂದ್ರಬಾಬು ನಾಯ್ಡು ಅವರ ಆರೋಗ್ಯ ನಿರ್ವಹಣೆಯು ಕೇವಲ ಸಾಮಾನ್ಯ ಆಹಾರ ಪದ್ಧತಿಯನ್ನು ಅವಲಂಬಿಸಿಲ್ಲ, ಬದಲಿಗೆ ಅದು ಸಂಪೂರ್ಣವಾಗಿ ಆಧುನಿಕ ತಂತ್ರಜ್ಞಾನದ ಲೆಕ್ಕಾಚಾರದ ಮೇಲೆ ನಡೆಯುವ ವ್ಯವಸ್ಥೆಯಾಗಿದೆ!

ಸಿಎಂ ಚಂದ್ರಬಾಬು ಅವರು ತಮ್ಮ ಬೆರಳಿಗೆ ವಿಶೇಷವಾದ ‘ಆರೋಗ್ಯ ಟ್ರ್ಯಾಕಿಂಗ್ ರಿಂಗ್’ (Health Tracking Ring) ಒಂದನ್ನು ಧರಿಸುತ್ತಾರೆ. ಈ ಸ್ಮಾರ್ಟ್ ರಿಂಗ್ ಅವರ ದೇಹದ ನಿದ್ರೆಯ ಪ್ರಮಾಣ, ಪ್ರೋಟೀನ್ ಮಟ್ಟಗಳು ಮತ್ತು ದೈಹಿಕ ಚಟುವಟಿಕೆಗಳನ್ನು ಸೆಕೆಂಡ್ ಸೆಕೆಂಡಿಗೆ ಟ್ರ್ಯಾಕ್ ಮಾಡುತ್ತದೆ. ಅವರು ದಿನದಲ್ಲಿ ಸರಿಯಾಗಿ ನಿದ್ರೆ ಮಾಡದಿದ್ದರೆ ಅಥವಾ ಅವರ ದೇಹದಲ್ಲಿ ಪ್ರೋಟೀನ್ ಮಟ್ಟ ಕಡಿಮೆಯಾದರೆ, ಈ ಹೈಟೆಕ್ ರಿಂಗ್ ತಕ್ಷಣವೇ ಅವರಿಗೆ ಎಚ್ಚರಿಕೆಯ ಸಂದೇಶವನ್ನು (Alert) ರವಾನಿಸುತ್ತದೆ. ಆ ಅಲರ್ಟ್ ಬಂದ ತಕ್ಷಣವೇ ಅವರು ತಮ್ಮ ಆಹಾರದಲ್ಲಿ ಪ್ರೋಟೀನ್ ಪ್ರಮಾಣವನ್ನು ಹೆಚ್ಚಿಸಿಕೊಳ್ಳುತ್ತಾರೆ.

ಮತ್ತಷ್ಟು ಓದಿ: ದೇಶದ ಶ್ರೀಮಂತ ಸಿಎಂಗಳು: ನಾಯ್ಡು ನಂ.1, ಸಿದ್ದರಾಮಯ್ಯ 3ನೇ ಸ್ಥಾನ, ಆಸ್ತಿ ಎಷ್ಟಿದೆ ಗೊತ್ತಾ?

ಆರೋಗ್ಯಕರ ಜೀವನಶೈಲಿಯ ಹೊಸ ಸಂದೇಶ
ಸಂಕ್ಷಿಪ್ತವಾಗಿ ಹೇಳುವುದಾದರೆ, ಚಂದ್ರಬಾಬು ನಾಯ್ಡು ಅವರು ಆಂಧ್ರದ ಜನತೆಗೆ ಹೊಸ ಮಾದರಿಯ ಜೀವನಶೈಲಿಯ ಸಂದೇಶವನ್ನು ನೀಡುತ್ತಿದ್ದಾರೆ. ಅನ್ನದ ಪ್ರಮಾಣವನ್ನು ಕಡಿಮೆ ಮಾಡಿ, ಪ್ರೋಟೀನ್ ಭರಿತ ಆಹಾರವನ್ನು ಅಳವಡಿಸಿಕೊಳ್ಳುವ ಮೂಲಕ ಹೇಗೆ ಆರೋಗ್ಯವಾಗಿರಬಹುದು ಎಂಬುದನ್ನು ಸ್ವತಃ ತಾವೇ ಪಾಲಿಸಿ ತೋರಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮೊದಲಿಗೆ ವರ್ಕ್ ಫ್ರಂ ಹೋಮ್, ನಂತರ ಬೆಳ್ಳಂಬೆಳಗ್ಗೆ ಇಮೇಲ್ ಶಾಕ್; ಮೆಟಾದಲ್ಲಿ 8,000 ಮಂದಿಗೆ ಕೆಲಸದಿಂದ ಕೊಕ್ – Kannada News | Meta Layoffs: 8,000 Employees Sacked by Email as AI Reshapes Workforce

ನವದೆಹಲಿ, ಮೇ 20: ಫೇಸ್​ಬುಕ್, ವಾಟ್ಸಾಪ್, ಇನ್ಸ್​ಟಾಗ್ರಾಮ್ ಆ್ಯಪ್​ಗಳ ಮಾತೃಸಂಸ್ಥೆಯಾದ ಮೆಟಾದ (Meta) ಶೇ. 10ರಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ವರದಿ ಪ್ರಕಾರ ಸುಮಾರು 8,000 ಉದ್ಯೋಗಿಗಳನ್ನು ಮೆಟಾ ಲೇ ಆಫ್ ಮಾಡಿದೆ. ಎಚ್​ಆರ್ ಚೇಂಬರ್​ಗೆ ಕರೆದು ಒಬ್ಬೊಬ್ಬರಿಗೂ ಪಿಂಕ್ ಸ್ಲಿಪ್ ಕೊಡುವ ಬದಲು ಮೆಟಾ ಬೇರೆಯದೇ ತಂತ್ರ ಅನುಸರಿಸಿದೆ. ಎಲ್ಲಾ ಉದ್ಯೋಗಿಗಳಿಗೂ ವರ್ಕ್ ಫ್ರಂ ಹೋಮ್ ಕೊಟ್ಟು, ನಂತರ 8,000 ಮಂದಿಗೆ ಇಮೇಲ್ ಮೂಲಕವೇ ಲೇ ಆಫ್ ಮಾಡಿದೆ. ಬೆಳಗ್ಗೆ 4 ಗಂಟೆಗೆ ಲೇ ಆಫ್ ಇಮೇಲ್ ಕಂಡು ಉದ್ಯೋಗಿಗಳಿಗೆ ಆಗಿತ್ತು ಶಾಕ್.

ಈ ಸುದ್ದಿಯ ಮುಖ್ಯಾಂಶಗಳು

  • ಮೆಟಾ ಸಂಸ್ಥೆ ತನ್ನಲ್ಲಿ ಕೆಲಸ ಮಾಡುತ್ತಿರುವ 78,000 ಉದ್ಯೋಗಿಗಳ ಪೈಕಿ 8,000 ಮಂದಿಯನ್ನು ಲೇ ಆಫ್ ಮಾಡುತ್ತಿದೆ.
  • ಕಚೇರಿಯಲ್ಲಿ ಭಾವನಾತ್ಮಕ ವಾತಾವರಣ ತಪ್ಪಿಸಲು ಮೆಟಾ ಸಂಸ್ಥೆ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಕೊಟ್ಟು ನಂತರ ಇಮೇಲ್ ಮೂಲಕ ಲೇ ಆಫ್ ಮಾಡಿದೆ.
  • ಮೆಟಾ ಸಂಸ್ಥೆ ಎಐಗೆ ಭಾರೀ ಹೂಡಿಕೆ ಮಾಡುತ್ತಿದ್ದು, ಸಣ್ಣ ತಂಡಗಳನ್ನು ಇಟ್ಟುಕೊಂಡು ಕೆಲಸ ನಿರ್ವಹಿಸಲು ಆದ್ಯತೆ ಕೊಡುತ್ತಿದೆ.

ಇದನ್ನೂ ಓದಿ: ಚೀನಾದ ಡಾರ್ಕ್ ಫ್ಯಾಕ್ಟರಿಗಳು… ಮನುಷ್ಯರು, ಬೆಳಕು ಇಲ್ಲದ ಕಾರ್ಖಾನೆಗಳು, ರೋಬೋಗಳದ್ದೇ ಆಟ; ಭವಿಷ್ಯವೇ ಪ್ರತ್ಯಕ್ಷ

ಮೆಟಾ ಸಂಸ್ಥೆಯಲ್ಲಿ ಒಟ್ಟು 78,000 ಉದ್ಯೋಗಿಗಳ ಬಳಗ ಹೊಂದಿತ್ತು. ಈ ಪೈಕಿ 8,000 ಮಂದಿಗೆ ಕೆಲಸ ಹೋಗಿದೆ. ಮ್ಯಾನೇಜರ್ ಮಟ್ಟದ ಹುದ್ದೆಗಳಲ್ಲಿ ಹೆಚ್ಚಿನವನ್ನು ತೆಗೆದುಹಾಕಲಾಗಿದೆ. 6,000 ಓಪನ್ ರೋಲ್​ಗಳನ್ನು ಮುಚ್ಚಲಾಗಿದೆ. 7,000 ಉದ್ಯೋಗಿಗಳನ್ನು ಹೊಸ ಎಐ ಟೀಮ್​ಗಳಿಗೆ ಸೇರಿಸಿಕೊಳ್ಳಲಾಗುತ್ತಿದೆ.

ಮೆಟಾದಲ್ಲಿ ಲೇ ಆಫ್ ಆಗಿರುವ ಉದ್ಯೋಗಿಗಳಲ್ಲಿ ಎಂಜಿನಿಯರಿಂಗ್ ಮತ್ತು ಪ್ರಾಡಕ್ಟ್ ತಂಡಗಳಲ್ಲಿ ಕೆಲಸ ಮಾಡುತ್ತಿರುವವರೇ ಹೆಚ್ಚು. ಲೇ ಆಫ್ ಪ್ರಕ್ರಿಯೆ ಈಗ ಆರಂಭಗೊಂಡಿದೆ. ಎಲ್ಲಾ 8,000 ಮಂದಿಗೆ ಒಮ್ಮೆಲೇ ಇಮೇಲ್ ಬಂದಿಲ್ಲ. ಹಂತ ಹಂತವಾಗಿ ಈ ಕೆಲಸ ಮಾಡಲಾಗುತ್ತದೆ. ಆತಂಕದ ಸಂಗತಿ ಎಂದರೆ ಲೇ ಆಫ್ ಭೀತಿ 8,000 ಮಂದಿಗೆ ಸೀಮಿತವಾಗಿರುವುದಿಲ್ಲ. ಈ ವರ್ಷ ಇನ್ನಷ್ಟು ಜಾಬ್ ಕಟ್ ಮಾಡಲು ಮೆಟಾ ಸಿದ್ಧ ಇದೆ.

ಮೆಟಾ ಸಂಸ್ಥೆಯು ಎಐ ಅಳವಡಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ. ಕೃತಕ ಬುದ್ಧಿಮತ್ತೆಗಾಗಿ ಮೆಟಾ ಈ ವರ್ಷ 125ರಿಂದ 145 ಬಿಲಿಯನ್ ಡಾಲರ್​ನಷ್ಟು ವ್ಯಯಿಸಲು ಸಿದ್ಧ ಇದೆ. ಈ ಹಿನ್ನೆಲೆಯಲ್ಲಿ ಬಹಳ ಸಣ್ಣ ತಂಡಗಳನ್ನು ಇಟ್ಟುಕೊಂಡು ಎಐ ಪ್ರಾಧಾನ್ಯದ ಸಂಸ್ಥೆಯಾಗಿ ಮೆಟಾವನ್ನು ಪರಿವರ್ತಿಸಲು ಮಾರ್ಕ್ ಜುಕರ್ಬರ್ಗ್ ಅಣಿಗೊಂಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಶೀತವಾದರೆ ಅಮೆರಿಕದಲ್ಲಿ ನೆಗಡಿ..! ಭಾರತದ ಎಲ್​ಪಿಜಿ ಬಿಕ್ಕಟ್ಟಿನಿಂದ ಕ್ಯಾಲಿಫೋರ್ನಿಯಾ ತತ್ತರ; ಹೇಗೆ?

ವರ್ಕ್ ಫ್ರಂ ಕೊಟ್ಟು ಬಲಿಹಾಕುವ ಟ್ರೆಂಡ್

8,000 ಮಂದಿಯನ್ನು ಲೇ ಆಫ್ ಮಾಡಲಿರುವ ಸುದ್ದಿ ತಿಂಗಳುಗಳ ಹಿಂದೆಯೇ ಚಾಲ್ತಿಯಲ್ಲಿತ್ತು. ಕಳೆದ ತಿಂಗಳು ಮೆಟಾ ಸಂಸ್ಥೆಯೇ ಇದನ್ನು ಖಚಿತಪಡಿಸಿತ್ತು. ಅದಾದ ಬಳಿಕ ಕಚೇರಿಯೊಳಗೆ ಉದ್ಯೋಗಿಗಳಲ್ಲಿ ಆತಂಕದ ವಾತಾವರಣ ಮಡುಗಟ್ಟಿತ್ತು. ನಿರುತ್ಸಾಹ ಎದ್ದುಕಾಣುತ್ತಿತ್ತು. ನಂತರ ಎಲ್ಲರಿಗೂ ವರ್ಕ್ ಫ್ರಂ ಹೋಮ್ ಆದೇಶ ಕೊಡಲಾಯಿತು. ಆಗಲೇ ಹಲವು ಉದ್ಯೋಗಿಗಳಿಗೆ ಲೇ ಆಫ್ ಪ್ಲಾನ್ ಇರಬಹುದು ಎನ್ನುವ ಸುಳಿವು ಸಿಕ್ಕಿತ್ತು.

ವರ್ಕ್ ಫ್ರಂ ಹೋಂ ಇದ್ದಾಗ ಲೇ ಆಫ್ ಮಾಡಿದರೆ ಕಚೇರಿಯೊಳಗೆ ಎಮೋಶನಲ್ ಪ್ರಸಂಗಗಳನ್ನು ತಪ್ಪಿಸಬಹುದು ಎಂಬುದು ಮೆಟಾ ಎಣಿಕೆ. ಮೆಟಾ ಮಾತ್ರವಲ್ಲ ವಿವಿಧ ಟೆಕ್ ಕಂಪನಿಗಳು ಕೂಡ ಒಂದು ಇಮೇಲ್ ಮೂಲಕ ಉದ್ಯೋಗಿಗಳನ್ನು ಲೇ ಆಫ್ ಮಾಡುತ್ತಿವೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಭವಿಷ್ಯದಲ್ಲಿ ಉದ್ಯೋಗಗಳ ಕಥೆ?

ಪರಿಣಿತರ ಪ್ರಕಾರ ಕಾರ್ಪೊರೇಟ್ ಸೆಕ್ಟರ್​ನಲ್ಲಿ ಈಗ ಕೆಲಸದ ಪರಿಮಾಣ ಮತ್ತು ಗುಣ ಬದಲಾಗುತ್ತಿದೆ. ಕೆಲಸವನ್ನು ವೇಗವಾಗಿ ಪೂರ್ಣಗೊಳಿಸುವ ಸ್ಕಿಲ್ ಸಾಕಾಗುವುದಿಲ್ಲ. ಕೋಡ್ ಬ್ಲಾಕ್ ಬರೆಯುವ ಸಾಮರ್ಥ್ಯ ಸಾಕಾಗಲ್ಲ. ಬಹಳ ಸಂಕೀರ್ಣವಾದ ಮತ್ತು ಪ್ರಾಬಬಿಲಿಸ್ಟಿಕ್ ಸಿಸ್ಟಂಗಳನ್ನು ನಿರ್ವಹಿಸುವ ಸಾಮರ್ಥ್ಯ ಇರಬೇಕಾಗುತ್ತದೆ.

ಎಐ ಸಿಸ್ಟಂಗಳನ್ನು ಆಪರೇಟ್ ಮಾಡುವುದಷ್ಟೇ ಅಲ್ಲ, ಅದನ್ನು ಡಿಸೈನ್ ಮಾಡುವ ತಂತ್ರಜ್ಞರಿಗೆ ಭವಿಷ್ಯ ಇರುತ್ತದೆ ಎಂದೆನ್ನುತ್ತಾರೆ ತಜ್ಞರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ? – Kannada News | KD Movie Box Office: 20 Day Collection, Profit or Loss for Producers

‘ಕೆಡಿ’ ಸಿನಿಮಾ (KD Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಜೋಗಿ ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ ನಟನೆ ಸಿನಿಮಾದ ಹೈಲೈಟ್ ಆಗಿತ್ತು. ಈಗ ಸಿನಿಮಾ ರಿಲೀಸ್ ಆಗಿ 20 ದಿನಗಳು ಕಳೆದಿವೆ. ಕೆಲವರು ಚಿತ್ರವನ್ನು ಇಷ್ಟಪಟ್ಟರೆ, ಇನ್ನೂ ಕೆಲವರು ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆಯಾಗಿ ‘ಕೆಡಿ’ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ? ನಿರ್ಮಾಪಕರಿಗೆ ಲಾಭವೋ ಅಥವಾ ನಷ್ಟವೋ? ಆ ಬಗ್ಗೆ ಇಲ್ಲಿದೆ ವಿವರ.

‘ಕೆಡಿ’ ಸಿನಿಮಾ ರಿಲೀಸ್ ಆಗಿದ್ದು ಮೇ 1ರಂದು. ಅಂದರೆ ಸಿನಿಮಾ ತೆರೆಗೆ ಬಂದು ಇಂದಿಗೆ (ಮೇ 20) ಮೂರು ವಾರಗಳು ಪೂರ್ಣಗೊಳ್ಳಲಿವೆ. ಇಂದಿನ ಗಳಿಕೆಯ ಸಂಪೂರ್ಣ ಲೆಕ್ಕಾಚಾರ ಈಗಲೇ ಸಿಗೋದಿಲ್ಲ. ಹೀಗಾಗಿ, 20 ದಿನಗಳ ಗಳಿಕೆಯ ವಿವರವನ್ನು ನಾವು ನೀಡುತ್ತಿದ್ದೇವೆ.

‘ಕೆಡಿ’ ಸಿನಿಮಾ ಮೊದಲ ನಾಲ್ಕು ದಿನ ಅಬ್ಬರದ ಕಲೆಕ್ಷನ್ ಮಾಡಿತ್ತು. ಮೊದಲ ನಾಲ್ಕು ದಿನಕ್ಕೆ ಸಿನಿಮಾ 13.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಆ ಬಳಿಕ ಸಿನಿಮಾದ ಕಲೆಕ್ಷನ್ ಕುಗ್ಗುತ್ತಾ ಸಾಗಿತು. ಮಂಗಳವಾರ (ಮೇ 19) ಸಿನಿಮಾ ಕೇವಲ 19 ಲಕ್ಷ ಗಳಿಕೆ ಮಾಡಿದೆ. ರಾಜ್ಯಾದ್ಯಂತ ಚಿತ್ರಕ್ಕೆ 300 ಶೋಗಳನ್ನು ನೀಡಲಾಗಿದೆ.

‘ಕೆಡಿ’ ಸಿನಿಮಾದ ವಿಶ್ವ ಬಾಕ್ಸ್ ಆಫೀಸ್ ಕಲೆಕ್ಷನ್ 23 ಕೋಟಿ ರೂಪಾಯಿ ಆಗಿದೆ. ಈ ಚಿತ್ರದ ಒಟಿಟಿ ಹಕ್ಕು, ಟಿವಿ ಹಕ್ಕು ಹಾಗೂ ಮ್ಯೂಸಿಕ್ ಹಕ್ಕುಗಳು ಒಳ್ಳೆಯ ಮೊತ್ತಕ್ಕೆ ಮಾರಾಟ ಆಗಿವೆ ಎನ್ನಲಾಗಿದೆ. ಕೆಲವು ವರದಿ ಪ್ರಕಾರ ಚಿತ್ರದ ಬಜೆಟ್ 100-120 ಕೋಟಿ ರೂಪಾಯಿ ಎನ್ನಲಾಗಿದೆ. ಇದನ್ನು ಲೆಕ್ಕಾಚಾರ ಹಾಕಿದರೆ ನಿರ್ಮಾಣ ಸಂಸ್ಥೆಗೆ ಭಾರೀ ನಷ್ಟ ಆಗಿರಬಹುದು ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ.

ಇದನ್ನೂ ಓದಿ: ಮೂರನೇ ಭಾನುವಾರ ‘ಕೆಡಿ’ ಗಳಿಸಿದ್ದೆಷ್ಟು? ಒಟ್ಟೂ ಕಲೆಕ್ಷನ್ ವಿವರ ಇಲ್ಲಿದೆ

ಜೋಗಿ ಪ್ರೇಮ್ ನಿರ್ದೇಶನದ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಕೆಡಿ’ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಬಾಲಿವುಡ್ ನಟ ಸಂಜಯ್ ದತ್ ಮುಖ್ಯ ವಿಲನ್ ಆಗಿ ಕಾಣಿಸಿಕೊಂಡರೆ, ಶಿಲ್ಪಾ ಶೆಟ್ಟಿ ‘ಸತ್ಯವತಿ’ ಎಂಬ ಪ್ರಮುಖ ಪಾತ್ರದಲ್ಲಿದ್ದಾರೆ. ಕ್ರೇಜಿ ಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ಪ್ರೇರಣಾ ಕಂಬಂ ಚಿತ್ರದ ಇತರ ಪ್ರಮುಖ ಪಾತ್ರವರ್ಗದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ – Kannada News | Bengaluru Mega Drug Bust: Hebbal Police Seize MDMA Worth Rupees 34 Crore, Arrest 8 Accused

ವಶಕ್ಕೆ ಪಡೆಯಲಾದ ಡ್ರಗ್ಸ್​​Image Credit source: Tv9 Kannada

ಬೆಂಗಳೂರು, ಮೇ 20: ಹೆಬ್ಬಾಳ ಪೊಲೀಸರು ಬೃಹತ್​​ ಡ್ರಗ್​​ ಜಾಲವೊಂದನ್ನು ಭೇದಿಸಿದ್ದು, ದೆಹಲಿಯಿಂದ ಬೆಂಗಳೂರಿಗೆ (Bengaluru) ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್​​ನ ಹೆಡೆಮುರಿ ಕಟ್ಟಿದ್ದಾರೆ. ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು, ಈ ಒಂದೇ ತಂಡದಿಂದ ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​​ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಈ ಜಾಲ ಮೂರು ಲೇಯರ್​​ಗಳಲ್ಲಿ ಕೆಲಸ ಮಾಡುತ್ತಿತ್ತು. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು ನಾನಾ ದಾರಿಗಳನ್ನು ಕಂಡುಕೊಂಡಿದ್ದರು ಎಂಬುದು ಕೂಡ ತನಿಖೆ ವೇಳೆ ಗೊತ್ತಾಗಿದೆ.

ಮುಖ್ಯಾಂಶಗಳು

  • ಬೃಹತ್​​ ಡ್ರಗ್​​ ಜಾಲ ಭೇದಿಸಿದ ಬೆಂಗಳೂರಿನ ಹೆಬ್ಬಾಳ ಪೊಲೀಸರು
  • ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು​​ ವಶಕ್ಕೆ
  • ಪ್ರಕರಣ ಸಂಬಂಧ  8 ಮಂದಿ ಆರೋಪಿಗಳನ್ನು ಬಂಧಿಸಿದ ಖಾಕಿ

ದೆಹಲಿಯಿಂದ ರೈಲಿನಲ್ಲಿ ಡ್ರಗ್ಸ್ ಸಾಗಿಸಿದ್ದ ಆರೋಪಿಗಳು ಅವನ್ನು ಸೀರೆ , ಐರನ್ ಮಾಡಲು ಬಳಸುವ ಟೇಬಲ್ ಮತ್ತು ಚೇರ್​​ಗಳಲ್ಲಿ ಅಡಗಿಸಿಟ್ಟು ತಂದಿದ್ದರು. ಗಿಫ್ಟ್ ರೀತಿಯಲ್ಲಿ ಪ್ಯಾಕ್ ಮಾಡಿ ಅವುಗಳಣ್ನ ಸಾಗಾಟ ಮಾಡಿದ್ದರು. ರೈಲಲ್ಲಿ ಸಾಗಿಸಿ ತಂದಿದ್ದ ಈ ಮಾದಕ ವಸ್ತುಗಳನ್ನು ಕಾರಿಗೆ ಶಿಫ್ಟ್​​ ಮಾಡುವ ವೇಳೆ ದಾಳಿ ನಡೆಸಿರುವ ಪೊಲೀಸರು 4 ಕೆಜಿ 300 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಸರ್ಜಾಪುರದ ಮನೆಯೊಂದರಲ್ಲಿ ಬಾಕಿ ಡ್ರಗ್ಸ್ ಇಟ್ಟಿರುವ ಮಾಹಿತಿ ಸಿಕ್ಕ ಹಿನ್ನೆಲೆ ಬೆಂಗಳೂರಿನ ಪೆಡ್ಲರ್ ಮನ್ಸೂರ್ ನಿವಾಸದಲ್ಲಿ ದಾಳಿ ನಡೆಸಲಾಗಿತ್ತು. ರೇಡ್​​ ವೇಳೆ ಮನೆಯಲ್ಲಿ 10 ಕೆಜಿ ಎಂಡಿಎಂಎ ಪತ್ತೆಯಾಗಿದೆ. ಬಳಿಕ ಅಬ್ದುಲ್ ಸಮಾದ್ ನಿವಾಸದಲ್ಲಿಯೂ ಡ್ರಗ್ಸ್ ಇರುವ ಬಗ್ಗೆ ಮಾಹಿತಿ ಆಧಾರದಲ್ಲಿ ಆತನ ಹೆಣ್ಣೂರು ನಿವಾಸದಲ್ಲಿ ತಪಾಸಣೆ ನಡೆಸಿದಾಗ 3.5 ಕೆಜಿ ಎಂಡಿಎಂಎ ಸಿಕ್ಕಿದೆ. ಆ ಮೂಲಕ ಒಟ್ಟು 34 ಕೋಟಿ ಮೌಲ್ಯದ 17 ಕೆಜಿಗೂ ಹೆಚ್ಚಿನ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್

ಇನ್ನು ಉತ್ತರ ಭಾರತ ಅಥವಾ ವಿದೇಶದಿಂದ ಡ್ರಗ್ಸ್ ದೆಹಲಿಗೆ ಬರುತ್ತಿದ್ದ ಡ್ರಗ್ಸ್​​ನ ಅಲ್ಲಿಂದ ದೇಶದ ವಿವಿಧ ಭಾಗಕ್ಕೆ ಆರೋಪಿಗಳು ಸರಬರಾಜು ಮಾಡುತ್ತಿದ್ದರು. ಸೆನೆಗಲ್​ನ ಡನ್ಫಾ ಗೆರಾಲ್ಡ್, ತಾಂಜೇನಿಯಾದ ಮೆಗ್ರಾತ್ ಮತ್ತು ನೈಜೀರಿಯಾ ಮೂಲದ ಒಬಿಯಾನಿಜ್ ರೀಟಾ ದೆಹಲಿಯ ಡೀಲರ್​​ಗಳಾಗಿದ್ದರೆ, ದೆಹಲಿ ಮೂಲದ ರೀನಾ ಯಾದವ್ , ದೆಬಶಿಶ್ ಬ್ಯಾನರ್ಜಿ ಮತ್ತು ಧೀರಜ್ ಬೆಂಗಳೂರಿನ ಟ್ರಾನ್ಸ್‌ಪೋರ್ಟರ್​​ಗಳಾಗಿ ಕೆಲಸ ಮಾಡುತ್ತಿದ್ದರು. ಮಂಗಳೂರು ಮೂಲದ ಬೆಂಗಳೂರು ನಿವಾಸಿಗಳಾಗಿರುವ ಮಹಮ್ಮದ್ ಮನ್ಸೂರ್ ಮತ್ತು ಅಬ್ದುಲ್ ಸಮಾದ್ ಬೆಂಗಳೂರಲ್ಲಿ ಪೆಡ್ಲರ್ಸ್​ಗಳಾಗಿದ್ದರು ಎಂಬುದು ತಿಳಿದುಬಂದಿದೆ.

ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿನಲ್ಲಿ ಐದು ಕೇಸ್ ದಾಖಲಾಗಿತ್ತು. ಈ ಸಂಬಂಧ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗ ವಿಚಾರಣೆ ವೇಳೆ ಡ್ರಗ್ಸ್ ಜಾಲದ ಮುಂದಿನ ಲೇಯರ್ ಪತ್ತೆಯಾಗಿತ್ತು. ಆ ಮಾಹಿತಿ ಅಧಾರದಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದೆಹಲಿ ಮತ್ತು ದೆಹಲಿ ಎನ್​​ಸಿಆರ್​​ನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಇದಕ್ಕಾಗಿ ಹೆಬ್ಬಾಳ ಮತ್ತು ಉತ್ತರ ವಿಭಾಗದ ಸುಮಾರು ನಲವತ್ತು ಪೊಲೀಸರನ್ನೊಳಗೊಂಡ ತಂಡ ರಚನೆ ಮಾಡಲಾಗಿತ್ತು. ತಂಡ ಕಳೆದ ಒಂದು ತಿಂಗಳಿಂದ ಈ ಕುರಿತು ಕೆಲಸ ಮಾಡಿದ್ದು, ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಮತ್ತು ಪೆಡ್ಲರ್ಸ್​​ಗಳನ್ನು ಹಂತ ಹಂತವಾಗಿ ಅರೆಸ್ಟ್​​ ಮಾಡಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಹಾಲಿವುಡ್ ಸ್ಟಾರ್ ನಟನಿಗೆ ‘ಧುರಂಧರ್’ ನೋಡುವಾಸೆ – Kannada News | Jack Ryan star John Krasinski says he wants to watch Dhurandhar movie

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ದೊಡ್ಡ ಹಿಟ್ ಆಗಿದೆ. ಎರಡೂ ಸಿನಿಮಾಗಳ ಒಟ್ಟು ಗಳಿಕೆ 4000 ಕೋಟಿಗಳ ಹತ್ತಿರಕ್ಕಿದೆ. ‘ಧುರಂಧರ್’ ಸರಣಿ ಭಾರತೀಯ ಪ್ರೇಕ್ಷಕರನ್ನು ಮಾತ್ರವಲ್ಲ, ವಿದೇಶಿ ಸಿನಿಮಾ ಪ್ರೇಮಿಗಳನ್ನೂ ಸೆಳೆದಿದೆ. ಇದೀಗ ಹಾಲಿವುಡ್​ನ ಸ್ಟಾರ್ ನಟರೊಬ್ಬರು ‘ಧುರಂಧರ್’ ಸಿನಿಮಾ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಹಾಲಿವುಡ್​ನ ಸೂಪರ್ ಹಿಟ್ ಸಿನಿಮಾಗಳಾದ ‘13 ಹವರ್ಸ್’, ‘ಡಾಕ್ಟರ್ ಸ್ಟ್ರೇಂಜ್’, ‘ಕ್ವೈಟ್ ಪ್ಲೇಸ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ ಮತ್ತು ವಿಶ್ವದಾದ್ಯಂತ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ವೆಬ್ ಸರಣಿ ‘ಜಾಕ್ ರಯಾನ್’ನ ನಾಯಕ ಜಾನ್ ಕ್ರಾಸಿನ್​ಸ್ಕಿ ತಮ್ಮ ಹೊಸ ಸಿನಿಮಾ ‘ಜಾಕ್ ರಯಾನ್’ ಪ್ರಚಾರದಲ್ಲಿದ್ದು, ಇತ್ತೀಚೆಗಷ್ಟೆ ಅವರು ಭಾರತದ ಟಿವಿ ವಾಹಿನಿಯೊಟ್ಟಿಗೆ ಮಾತನಾಡುತ್ತಾ, ‘ಧುರಂಧರ್’ ಸಿನಿಮಾ ನೋಡುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

ನಿಮಗೆ ‘ಧುರಂಧರ್’ ಚಿತ್ರದ ಬಗ್ಗೆ ತಿಳಿದಿದೆಯೇ ಮತ್ತು ಒಟ್ಟಾರೆಯಾಗಿ ಭಾರತೀಯ ಚಿತ್ರರಂಗದ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಜಾನ್, ‘ನಾನು ಇನ್ನೂ ಆ (ಧುರಂಧರ್) ಚಿತ್ರವನ್ನು ನೋಡಿಲ್ಲ. ಆದರೆ ಭಾರತೀಯ ಚಿತ್ರರಂಗದ ಬಗ್ಗೆ ಹೇಳುವುದಾದರೆ, ಅಲ್ಲಿ ಅತ್ಯಂತ ಅತ್ಯಾಧುನಿಕ ಮತ್ತು ತಾಂತ್ರಿಕವಾಗಿ ಗುಣಮಟ್ಟದ ಸಿನಿಮಾಗಳು ತಯಾರಾಗುತ್ತಿವೆ. ಸಿನಿಮಾ ನಿರ್ದೇಶಿಸಲು ಪ್ರಯತ್ನಿಸುತ್ತಿರುವ ನನ್ನ ಅನೇಕ ನಿರ್ದೇಶಕ ಸ್ನೇಹಿತರು, ಅಲ್ಲಿಂದ ಬರುತ್ತಿರುವ ಚಿತ್ರಗಳನ್ನು ನೋಡಿ ನಿರಂತರವಾಗಿ ಆಶ್ಚರ್ಯ ಚಕಿತರಾಗುತ್ತಿರುತ್ತಾರೆ’ ಎಂದಿದ್ದಾರೆ.

ಇದನ್ನೂ ಓದಿ:ಪಾಕಿಸ್ತಾನದಲ್ಲಿ ‘ಧುರಂಧರ್ 2’ ಅಬ್ಬರ: ಮುಗಿಬಿದ್ದು ನೋಡಿದ ಜನ, ಸರ್ವರ್ ಕ್ರ್ಯಾಶ್

‘ಅವಕಾಶ ಸಿಕ್ಕರೆ ಖಂಡಿತವಾಗಿಯೂ ‘ಧುರಂಧರ್’ ಸಿನಿಮಾವನ್ನು ನೋಡಬಯಸುತ್ತೇನೆ ಎಂದು ಹೇಳಿದ ಅವರು, ‘ಖಂಡಿತವಾಗಿ, ನನಗೆ ಯಾವುದೇ ಸಿನಿಮಾ ನೋಡಲು ಇಷ್ಟ. ಬೇರೆಯವರು ಏನು ಮಾಡುತ್ತಿದ್ದಾರೆ ಎಂಬುದನ್ನು ನೋಡುವುದು ಯಾವಾಗಲೂ ನಮಗೆ ಸ್ಫೂರ್ತಿ ನೀಡುತ್ತದೆ. ‘ಧುರಂಧರ್’ ಸಿನಿಮಾ ಸಹ ನನಗೆ ಸ್ಪೂರ್ತಿ ನೀಡುವ ವಿಶ್ವಾಸವಿದೆ’ ಎಂದಿದ್ದಾರೆ ಜಾನ್.

‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಭಾರಿ ಯಶಸ್ಸು ಗಳಿಸಿದ್ದು, ಇತ್ತೀಚೆಗಷ್ಟೆ ‘ಧುರಂಧರ್ 2’ ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಆದರೆ ಭಾರತದ ಹೊರಗೆ ಮಾತ್ರ. ಸಿನಿಮಾ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆದ ಕೂಡಲೇ ಪಾಕಿಸ್ತಾನ ಸೇರಿದಂತೆ ಇನ್ನೂ ಕೆಲ ದೇಶಗಳಲ್ಲಿ ಟಾಪ್ ಟ್ರೆಂಡಿಂಗ್​​ನಲ್ಲಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version