Headlines

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೌಕೆಗಳಿಗೆ ಇರಾನ್​ನ ‘ಸೊಳ್ಳೆ ಪಡೆಗಳ’ ಕಾಟ – Kannada News | Irans mosquito fleet becomes big threat to us navy in hormuz strait

ಟೆಹರಾನ್, ಏಪ್ರಿಲ್ 19: ಜಗತ್ತಿನ ಶೇ. 20 ತೈಲ ಸಾಗಣೆಯಾಗುವ ಹಾರ್ಮುಜ್ ಜಲಸಂಧಿಯಲ್ಲಿ (hormuz strait) ಅಮೆರಿಕ ಹಾಗೂ ಇರಾನ್ ಮಧ್ಯೆ ತಡೆಗಾಗಿ ಜಂಗೀಕುಸ್ತಿ ನಡೆದಿದೆ. ನೀವು ಪಟ್ಟುಹಾಕಿದರೆ ನಾ ಪಟ್ಟು ಹಾಕುತ್ತೇನೆ ಎಂಬಂತಾಗಿದೆ. ಅಮೆರಿಕದ ನೌಕಾಪಡೆಯು ಈ ಹಾರ್ಮುಜ್ ಜಲಸಂಧಿಗೆ ದಿಗ್ಬಂಧನ ಹಾಕಿದ ಬಳಿಕ ತನ್ನ ಮುಷ್ಟಿಯನ್ನು ಸಡಿಲಿಸಿದ್ದ ಇರಾನ್ ಇದೀಗ ಮತ್ತೊಮ್ಮೆ ತಡೆ ಹಾಕಿದೆ. ಜಲಸಂಧಿಯಲ್ಲಿ ಇರುವ ಅಮೆರಿಕನ್ ನೌಕೆಗಳಿಗೆ ಈಗ ಇರಾನ್​ನ ‘ಸೊಳ್ಳೆ ಪಡೆ’ಗಳ (Iran’s mosquito fleet) ಕಾಟ ಶುರುವಾಗಿದೆ. ಈ…

Read More

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Agriculture Jobs 2026: 890 AO/AAO Posts by KSDA KEA Apply Now!

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗಳ ವಿವರ ಮತ್ತು…

Read More

ದೆಹಲಿಗೆ ಹೋಗುವ ಮುನ್ನ ಡಿಕೆಶಿ ವಿಶೇಷ ಪೂಜೆ: ಪ್ರಾರ್ಥನೆಯ ರಹಸ್ಯ ಬಹಿರಂಗಪಡಿಸಿದ ಸ್ವಾಮೀಜಿ – Kannada News | Karnataka leadership change Row: DCM DK Shivakumar Talks after Special Pooja in Mukti Mandir at Gadag

ಗದಗ, (ಏಪ್ರಿಲ್ 19): ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆ ಮುಗಿಯುತ್ತಿದ್ದಂತೆಯೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಂದೆಡೆ ಮುಸ್ಲಿಂ ನಾಯಕರ ಅಸಮಾಧಾನ, ಇನ್ನೊಂದೆಡೆ ಸಂಪುಟ ಪುನಾರಚನೆ ಕೂಗು, ಮತ್ತೊಂದೆಡೆ ಇದೀಗ ನಾಯಕತ್ವ ಬದಲಾವಣೆ ಮತ್ತೆ ಮುನ್ನಲೆಗೆ ಬಂದಿದೆ. ಹೌದು….ಸಿಎಂ ಕುರ್ಚಿಗೆ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ಆದ್ರೆ, ಅದಕ್ಕೂ ಮುನ್ನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರದ ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ವಿಶೇಷ ಪೂಜೆ…

Read More

ಜೆಸಿಬಿಯಿಂದ ಕಟ್ಟಡಗಳ ನೆಲಸಮ: ಕರಾವಳಿಯಲ್ಲಿ ಬುಲ್ಡೋಜರ್ ಬಾಬಾ ಆದ ಕಾಂಗ್ರೆಸ್ ಶಾಸಕ – Kannada News | Puttur MLA Ashok Rai Faces FIR: Unauthorized Demolition by JCB in Mangaluru

ಖಾಸಗಿ ಕಟ್ಟಡ ನೆಲಸಮ ಮಾಡಿದ ಅಶೋಕ್ ರೈImage Credit source: tv9 kannada ಮಂಗಳೂರು, ಏಪ್ರಿಲ್​ 19: ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai)​​ ಸ್ವತಃ ಜೆಸಿಬಿ ಚಲಾಯಿಸಿ ಖಾಸಗಿ ಕಟ್ಟಡವನ್ನು ಅನಧಿಕೃತವಾಗಿ ನೆಲಸಮಗೊಳಿಸಿರುವ (Demolition) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಖಾಸಗಿ ಜಾಗದಲ್ಲಿ ನಡೆದಿದೆ. ಸದ್ಯ ಶಾಸಕರ ಈ ನಡೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ಪುತ್ತೂರು ಠಾಣೆಗೆ ದೇಗುಲ ಆಡಳಿತ ಮಂಡಳಿ ಹಾಗೂ…

Read More

KSFES Recruitment 2026: KSFES ನೇಮಕಾತಿ; 1828 ಅಗ್ನಿಶಾಮಕ ಹುದ್ದೆಗಳ ಬೃಹತ್ ಅಧಿಸೂಚನೆ! – Kannada News | Ksfes recruitment 2026 1828 fire operator and driver jobs in karnataka

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು (KSFES) ಶೀಘ್ರದಲ್ಲೇ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಿದೆ. ಒಟ್ಟು 1,828 ಹುದ್ದೆಗಳಿಗೆ ಅಧಿಸೂಚನೆ ಹೊರಬೀಳಲಿದ್ದು, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ. ವಿಶೇಷವೆಂದರೆ, ಇಲಾಖೆಯು ಅಗ್ನಿಶಾಮಕ ಸಿಬ್ಬಂದಿ, ಚಾಲಕ ಮತ್ತು ತಂತ್ರಜ್ಞ ಹುದ್ದೆಗಳನ್ನು ವಿಲೀನಗೊಳಿಸಿ ‘ಅಗ್ನಿಶಾಮಕ ನಿರ್ವಾಹಕ’ ಎಂಬ ಹೊಸ ಶ್ರೇಣಿಯನ್ನು ಸೃಷ್ಟಿಸಿದೆ. ಹುದ್ದೆಗಳ ವಿವರ ಮತ್ತು ವೇತನ: ಈ ನೇಮಕಾತಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಅತಿ ಹೆಚ್ಚು ಅಂದರೆ 1,502 ಸ್ಥಾನಗಳನ್ನು ಮೀಸಲಿಡಲಾಗಿದೆ. ಉಳಿದಂತೆ…

Read More

ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವಾಗ ಅಗತ್ಯವಾಗಿ ಈ ವಸ್ತುಗಳನ್ನು ನಿಮ್ಮೊಂದಿಗೆ ಒಯ್ಯಿರಿ – Kannada News | Summer Safety Tips: Keep these things with you when you go out in the hot summer

ಬೇಸಿಗೆಯ (Summer) ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಜೊತೆಗೆ ಸೆಖೆಯನ್ನು ತಡೆಯಲು ನಾವು ಧರಿಸುವ ಬಟ್ಟೆ, ಪಾದರಕ್ಷೆ ಸಹಿತ ಸೇವನೆ ಮಾಡುವಂತಹ ಆಹಾರದ ಬಗ್ಗೆಯೂ ಈ ಸಮಯದಲ್ಲಿ ಗಮನ ವಹಿಸುವ ಅತ್ಯಗತ್ಯ. ಅದರಲ್ಲೂ ಈ ಉರಿ ಬಿಸಿಲಿಗೆ ಮನೆಯಿಂದ ಹೊರಗೆ ಹೋಗುವ ಸಂದರ್ಭದಲ್ಲಿ ಶಾಖದ ಅಲೆಯಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಕೆಲವೊಂದು ಅಗತ್ಯ ವಸ್ತುಗಳನ್ನು ನಮ್ಮೊಂದಿಗೆ ಕೊಂಡೊಯ್ಯಲೇಬೇಕು. ಈ ಸಣ್ಣ ಈ ವಿಷಯಗಳು ಶಾಖದ ಹೊಡೆತ,…

Read More

KKR vs RR: ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡಕ್ಕೆ ಎಂದಿನಂತೆ ಇಬ್ಬರು ಯುವ ಸ್ಫೋಟಕ ಬ್ಯಾಟರ್​ಗಳಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 8.4 ಓವರ್​ಗಳಲ್ಲಿ 81 ರನ್​​ಗಳ ಜೊತೆಯಾಟ ನೀಡಿದರು. ಇಬ್ಬರಿಗೂ ಮುಕ್ತವಾಗಿ ಬ್ಯಾಟ್ ಬೀಸಲು ಕೆಕೆಆರ್ ಬೌಲರ್​ಗಳು ಅವಕಾಶ ನೀಡದಿದ್ದರೂ, ಕಳಪೆ ಬೌಲಿಂಗ್​ ಅನ್ನು ಸರಿಯಾಗಿ ದಂಡಿಸಿದರು….

Read More

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ – Kannada News | Optical Illusion: If you can find the sheep hidden in this picture, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ನೀವು ಈಗಾಗಲೇ ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸಲು ಪ್ರಯತ್ನಿಸಿದ್ದೀರಬಹುದು. ಆದರೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಹೀಗಾಗಿ ಕೆಲವೇ ಕೆಲವು ಜನರಿಗೆ ಇಂತಹ ಒಗಟುಗಳನ್ನು ಬಿಡಿಸಲು ಸಾಧ್ಯವಾಗುತ್ತದೆ. ಇದೀಗ ಫೋಟೋವೊಂದು ವೈರಲ್‌ ಆಗಿದ್ದು, ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ರಿಂದ 30…

Read More

‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು – Kannada News | No one can deny Iran its nuclear rights, says president Masoud Pezeshkian

ಟೆಹ್ರಾನ್, ಏಪ್ರಿಲ್ 19: ಇರಾನ್‌ನ ಪರಮಾಣು ಕಾರ್ಯಕ್ರಮದ ಸುತ್ತಲಿನ ಅಂತರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. “ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು?” ಎಂದು ಪ್ರಶ್ನಿಸುವ ಮೂಲಕ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಭಾನುವಾರ (ಏಪ್ರಿಲ್ 19) ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ತ್ಯಜಿಸಬೇಕು ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಕಠಿಣವಾಗಿ…

Read More

ರಾಜ್ಯಸಭೆ ಸಚಿವಾಲಯದ ಕಾರ್ಯದರ್ಶಿಯಾದ ಕನ್ನಡಿಗ: ಭಾಷಾಂತರಕಾರಾಗಿ ಉನ್ನತ ಹುದ್ದೆಗೇರಿದ ಸೋಮಶೇಖರ್ ಯಾರು? – Kannada News | Kolar Based K S Somashekhar appointed as Rajya Sabha secretary, Who Is He?

ಬೆಂಗಳೂರು, (ಏಪ್ರಿಲ್ 19): ಕರ್ನಾಟಕದ ಡಾ. ಕೆ.ಎಸ್. ಸೋಮಶೇಖರ್ (Dr KS Somashekhar) ಅವರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ (Rajya Sabha secretary) ನೇಮಕಗೊಂಡಿದ್ದಾರೆ. ಕೋಲಾರ (Kolar) ಮೂಲದ ಡಾ. ಕೆ.ಎಸ್‌.ಸೋಮಶೇಖರ್‌ ಅವರನ್ನು ನೇಮಕ ಮಾಡಿ ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಸಂಸದೀಯ ಸೇವೆಯಲ್ಲಿರುವ ಇವರು, ಭಾಷಾಂತರಕಾರರಾಗಿ ವೃತ್ತಿ ಆರಂಭಿಸಿ ಇದೀಗ ಉನ್ನತ ಹುದ್ದೆಗೇರಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆ ಮತ್ತು ಕಳೆದ 3 ದಶಕಗಳಿಂದ ವಿವಿಧ…

Read More