Headlines

ರಾಹುಲ್ ದ್ರಾವಿಡ್​ಗೆ ನಾನು ಸದಾ ಚಿರಋಣಿ: ವಿರಾಟ್ ಕೊಹ್ಲಿ ಮನದಾಳದ ಮಾತು – Kannada News | Virat Kohli Opens Up On ‘Impostor Syndrome’ and Dravid’s Healing Touch

ವಿಶ್ವ ಕ್ರಿಕೆಟ್‌ನ ರನ್‌ ಮಷೀನ್, ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಸದಾ ಮೈದಾನದಲ್ಲಿ ಅಗ್ರೆಸ್ಸಿವ್ ಆಗಿ ಕಾಣುವ ಆಟಗಾರ. ಆದರೆ, ಸದಾ ಆತ್ಮವಿಶ್ವಾಸದಿಂದ ಬೀಗುವ ಕೊಹ್ಲಿ ಅವರನ್ನೂ ಕೂಡ ತೀವ್ರವಾದ ಮಾನಸಿಕ ಆತಂಕ ಕಾಡಿತ್ತು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸ್ಪೋರ್ಟ್ಸ್ ಸಮ್ಮಿಟ್‌ನಲ್ಲಿ ಸ್ವತಃ ಮನದಾಳ ಬಿಚ್ಚಿಟ್ಟಿರುವ ಕಿಂಗ್ ಕೊಹ್ಲಿ, ತಾವು ಸುದೀರ್ಘ ಕಾಲ ‘ಇಂಪೋಸ್ಟರ್ ಸಿಂಡ್ರೋಮ್’ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಕಠಿಣ…

Read More

ಬೀದರ್​ನಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ: ಬರೋಬ್ಬರಿ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ನಾಶ – Kannada News | Bidar Rain Havoc: One Acre of Papaya Crop Destroyed as Hailstorm Lashes Kollar B Village; Farmer In Deep Distress

ಬೀದರ್, ಮೇ 20: ಬೀದರ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯು ರೈತರ ಬದುಕಿಗೆ ಭಾರಿ ಹೊಡೆತ ನೀಡಿದೆ. ಬೀದರ್ ತಾಲೂಕಿನ ಕೊಳ್ಳಾರ ಬಿ ಗ್ರಾಮದ ಬಾಬ್ ಶೆಟ್ಟಿ ಅವರ ಒಂದು ಎಕರೆಯ ಪಪ್ಪಾಯಿ ತೋಟ ಸಂಪೂರ್ಣವಾಗಿ ನಾಶವಾಗಿದೆ. ಐದು ತಿಂಗಳ ಹಿಂದೆ ನಾಟಿ ಮಾಡಿದ್ದ ಪಪ್ಪಾಯಿ ಬೆಳೆ ಇನ್ನೆರಡು ತಿಂಗಳಲ್ಲಿ ಕಟಾವಿಗೆ ಬರಬೇಕಿತ್ತು. ರೈತರು ಈ ಬೆಳೆಯ ಮೇಲೆ ಸುಮಾರು ಒಂದರಿಂದ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಆದರೆ, ಭಾರಿ…

Read More

Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ – Kannada News | Narendra Modi Gifts Melody Toffees to Giorgia Meloni in Lighthearted Moment

ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು…

Read More

ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್​​ನಿಂದ ಹೊಸ ಡೆಡ್​​ಲೈನ್​​: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ – Kannada News | Supreme Court Extends Deadline For Greater Bengaluru Authority Elections Till August 31

ನವದೆಹಲಿ/ಬೆಂಗಳೂರು, ಮೇ 20: ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಜೂನ್​​ 30ರ ವರೆಗೆ ಈ ಮುಂಚೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಸಮಯಾವಕಾಶ ನೀಡಿರುವ ಕೋರ್ಟ್​​, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಗಡುವು ವಿಸ್ತರಣೆ ಈ ಹಿಂದೆ ಜೂನ್​​ 30ರ…

Read More

ಓವರ್‌ ಆ್ಯಕ್ಟಿಂಗ್ ಮಾಡಿದ್ರೆ 50 ಪೈಸೆ ಕಟ್ ಮಾಡ್ತೀವಿ: ರಿಝ್ವಾನ್ ಫುಲ್ ಟ್ರೋಲ್! – Kannada News | Bangladesh Players Trolls Mohammad Rizwan

ಸಿಲ್ಹೆಟ್‌ನಲ್ಲಿ ನಡೆದ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಹೈ-ಡ್ರಾಮಾ ನಡೆದಿದೆ. ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ ಅವರ ವರ್ತನೆಗೆ ಬೇಸತ್ತ ಬಾಂಗ್ಲಾದೇಶ್ರ ಆಟಗಾರರು, ಬಾಲಿವುಡ್‌ನ ಪ್ರಸಿದ್ಧ ‘ಹೇರಾ ಫೇರಿ’ ಸಿನಿಮಾದ ಡೈಲಾಗ್ ಬಳಸಿ ಮೈದಾನದಲ್ಲೇ ಕಾಲೆಳೆದಿದ್ದಾರೆ.  ಮೊಹಮ್ಮದ್ ರಿಝ್ವಾನ್ ಟ್ರೋಲ್: ಪಾಕಿಸ್ತಾನ್ ತಂಡವು 437 ರನ್‌ಗಳ ಬೃಹತ್ ಗುರಿ ಬೆನ್ನಟ್ಟುತ್ತಿದ್ದಾಗ, 72ನೇ ಓವರ್‌ನಲ್ಲಿ ಎಡಗೈ ಸ್ಪಿನ್ನರ್ ತೈಜುಲ್ ಇಸ್ಲಾಂ ಬೌಲಿಂಗ್ ಮಾಡಲು ಬಂದರು. ಈ ವೇಳೆ…

Read More

ಬಾಲಕೃಷ್ಣ ಸಿನಿಮಾನಲ್ಲಿ ವಿಲನ್ ಆದ ‘ನಾಯಕ ನಟ’, ಭರ್ಜರಿ ಆಕ್ಷನ್ ನಿರೀಕ್ಷೆ – Kannada News | Manchu Manoj is getting ready to play villain in Nandamuri Balakrishna’s movie

ನಂದಮೂರಿ ಬಾಲಕೃಷ್ಣ (Nandamuri Balakrishna) ತಮ್ಮ 111ನೇ ಸಿನಿಮಾನಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡಲಿದ್ದು, ಅದ್ಧೂರಿ ಆಕ್ಷನ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ತೆಲುಗು ಚಿತ್ರರಂಗದಲ್ಲಿ ನಾಯಕನಾಗಿ ಹೆಸರು ಮಾಡಿದ್ದ ನಟನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಬಾಲಯ್ಯ ಎದುರು ಮಂಚು ಮನೋಜ್ ಅವರು ವಿಲನ್ ಆಗಿ ನಟಿಸಲಿದ್ದಾರೆ. ಇಂದು (ಮೇ 20) ಮಂಚು ಮನೋಜ್ ಅವರ ಜನ್ಮದಿನವಾಗಿದ್ದು, ವಿಶೇಷ ಸಂದರ್ಭದಲ್ಲಿ ಚಿತ್ರತಂಡವು ಈ ಅಧಿಕೃತ…

Read More

Solar Eclipse: ಆಗಸ್ಟ್ 12 ರಂದು ಸಂಭವಿಸಲಿದೆ ಸಂಪೂರ್ಣ ಸೂರ್ಯಗ್ರಹಣ; ಭಾರತದಲ್ಲಿ ಇದು ಗೋಚರಿಸುತ್ತಾ? – Kannada News | August 12, 2026 Total Solar Eclipse: Global Spectacle and Scientific Insights

ಖಗೋಳಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳಿಗೆ 2026ರ ವರ್ಷ ಅತ್ಯಂತ ರೋಮಾಂಚನಕಾರಿ ವರ್ಷವಾಗಿದೆ. ಈ ಒಂದೇ ವರ್ಷದಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣಗಳು ಸೇರಿದಂತೆ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸುತ್ತಿವೆ. ಕೆಲವು ಗ್ರಹಣಗಳು ಈಗಾಗಲೇ ಮುಗಿದಿದ್ದು, ಈಗ ವಿಶ್ವದಾದ್ಯಂತ ಎಲ್ಲರ ಕಣ್ಣು ಆಗಸ್ಟ್ 12 ರಂದು ಸಂಭವಿಸಲಿರುವ ವರ್ಷದ ಎರಡನೇ ಹಾಗೂ ಅತ್ಯಂತ ಪ್ರಮುಖ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಮೇಲಿದೆ. ವಿಜ್ಞಾನ ಲೋಕದಲ್ಲಿ ಈ ಘಟನೆಯನ್ನು ಒಂದು ದೊಡ್ಡ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಗ್ರಹಣದ ಸಂಪೂರ್ಣ…

Read More

ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ! ಹಿಂದೂ ಮಹಿಳೆಯಿಂದ ತರಾಟೆ – Kannada News | Badami Temple Controversy: Muslim Woman Questioned for Wearing Slippers Inside Historic Temple, Viral Video

ಬಾಗಲಕೋಟೆ, ಮೇ 20: ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣ ಬಾದಾಮಿ ಪಟ್ಟಣದ ಪ್ರಸಿದ್ಧ ದೇಗುಲವೊಂದರಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ ಧರಿಸಿ ಕುಳಿತಿದ್ದಕ್ಕೆ ಹಿಂದೂ ಪ್ರವಾಸಿ ಮಹಿಳೆಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ರೋಷನಿ ಮುಸ್ತಾಫಿ ಎಂಬ ಯುವತಿ ದೇಗುಲದ ಆವರಣದಲ್ಲಿ ಚಪ್ಪಲಿ ಧರಿಸಿ ಕೂತಿದ್ದಾಗ, ಹಿಂದೂ ಮಹಿಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾವು ದರ್ಗಾಕ್ಕೆ ಚಪ್ಪಲಿ ಹಾಕಿಕೊಂಡು ಹೋಗುತ್ತೇವಾ? ಎಷ್ಟು ಹೇಳಿದ್ರೂ ಕೇಳಲ್ಲ, ಕೇಳಿದ್ರೆ ‘ಸ್ಟಾಪ್’ ಅಂತೀಯಾ ಎಂದು ತರಾಟೆಗೆ ಪಡೆದಿದ್ದಾರೆ. ಈ ವೇಳೆ ಇಬ್ಬರ ನಡುವೆ…

Read More

ಹಾರ್ಮುಜ್ ಜಲಸಂಧಿ ಯಾಕೆ ಬೇಕು? ಅದರ ಅವಶ್ಯಕತೆಯೇ ಇಲ್ಲವಾಗುತ್ತದೆ: ಆರ್ಥಿಕ ತಜ್ಞ ಆಂಡ್ರ್ಯೂ ಫ್ರೆರಿಸ್ ಅನಿಸಿಕೆ – Kannada News | Hormuz Strait might become irrelevant in coming days, says Andrew Freris

ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿರುವ ಹಡಗುImage Credit source: AP ನವದೆಹಲಿ, ಮೇ 20: ಅಮೆರಿಕವು ಇರಾನ್ ಮೇಲೆ ಯುದ್ಧ ಮಾಡುತ್ತಿರುವ ಪರಿಣಾಮ ಹಾರ್ಮುಜ್ ಜಲಸಂಧಿಗೆ (Strait of Hormuz) ತಡೆಯಾಗುತ್ತಿದ್ದು, ಜಗತ್ತಿನ ಶೇ. 20ಕ್ಕೂ ಅಧಿಕ ತೈಲ ಪೂರೈಕೆ ವ್ಯತ್ಯಯವಾಗುತ್ತಿದೆ. ಭಾರತ ಸೇರದಂತೆ ಹಲವು ಏಷ್ಯನ್ ದೇಶಗಳಿಗೆ ಪೆಟ್ರೋಲ್, ಗ್ಯಾಸ್ ಕೊರತೆಯ ಸಂಕಷ್ಟ ಎದುರಾಗಿದೆ. ಅದರ ಸೈಡ್ ಎಫೆಕ್ಟ್​ಗಳಾಗಿ ಹಣದುಬ್ಬರ ಇತ್ಯಾದಿ ಆರ್ಥಿಕ ಸಮಸ್ಯೆಗಳು ತಲೆದೋರಿವೆ. ಇರಾನ್ ಅಮೆರಿಕ ಯುದ್ಧ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲದಿರುವುದು ಜಗತ್ತಿಗೆ…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್;‌ ಗೂಬೆಗಳ ನಡುವೆ ಅಡಗಿರುವ ಬೆಕ್ಕನ್ನು ಹುಡುಕಬಲ್ಲಿರಾ? – Kannada News | Optical Illusion: Can you find the cat hiding among the owls

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: TinEye ನಿಮ್ಮ ಬುದ್ಧಿವಂತಿಕೆ ಮತ್ತು ದೃಷ್ಟಿ ತೀಕ್ಷ್ಣತೆ ಪರೀಕ್ಷಿಸಲು ನೀವು ಮುಂದಾಗಿದ್ದೀರಾ. ಹಾಗಾದ್ರೆ ನೀವು ಈ ಇಲ್ಯೂಷನ್ ಚಿತ್ರವನ್ನು ಏಕಾಗ್ರತೆಯಿಂದ ನೋಡುವುದು ಒಳ್ಳೆಯದು. ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಗೂಬೆಗಳ ನಡುವೆ ಇರುವಾಗ ಬೆಕ್ಕನ್ನು 10 ಸೆಕೆಂಡುಗಳೊಳಗೆ ಹುಡುಕಬೇಕು. ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. ಈ ಚಿತ್ರದಲ್ಲಿ ಏನು ಕಾಣಿಸುತ್ತದೆ? ಈ…

Read More