Headlines

ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು, ಮಾ.20: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ…

Read More

ದೇವರ ವಿಗ್ರಹ ಅಥವಾ ಫೋಟೋ ಶುಚಿಗೊಳಿಸುವ ಮುನ್ನ ಈ ವಿಷಯ ತಿಳಿದುಕೊಳ್ಳಿ

ಪ್ರತಿಯೊಂದು ಮನೆಯ ಪೂಜಾ ಕೊಠಡಿಯು ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ಆದರೆ ದೇವರ ವಿಗ್ರಹಗಳು ಮತ್ತು ಫೋಟೋಗಳನ್ನು ಯಾವಾಗ ಬೇಕೆಂದರೆ ಆಗ ಸ್ವಚ್ಛಗೊಳಿಸಬಾರದು ಎಂದು ಶಾಸ್ತ್ರಗಳು ಮತ್ತು ಹಿರಿಯರು ಹೇಳುತ್ತಾರೆ. ಸಾಮಾನ್ಯವಾಗಿ ತಿಂಗಳಿಗೊಮ್ಮೆ ದೇವರ ವಿಗ್ರಹಗಳನ್ನು ಸ್ವಚ್ಛಗೊಳಿಸುವುದು ಶುಭಕರ. ಆದರೆ ಈ ಕಾರ್ಯವನ್ನು ಮಂಗಳವಾರ ಮತ್ತು ಶುಕ್ರವಾರದಂದು ಮಾಡಬಾರದು. ಅದರಂತೆ ಅಮಾವಾಸ್ಯೆ, ಏಕಾದಶಿ ಮತ್ತು ದ್ವಾದಶಿ ತಿಥಿಗಳಂದು ಕೂಡ ವಿಗ್ರಹಗಳನ್ನು ಸ್ಥಳಾಂತರಿಸುವುದು ಅಥವಾ ಶುಚಿಗೊಳಿಸುವುದು ನಿಷಿದ್ಧ. ಈ ಐದು ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಪಂಚಾಂಗವನ್ನು ಗಮನಿಸಿ ಶುಚಿಗೊಳಿಸುವ…

Read More

ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ (Dhurandhar 2 Movie) ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ. ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ. ‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ….

Read More

ಕರ್ನಾಟಕ ವಾಯು ಗುಣಮಟ್ಟ: ಮಲೆನಾಡಿನಲ್ಲಿ ಶುದ್ಧ ಗಾಳಿ! ನಿಮ್ಮ ನಗರದ AQI ಎಷ್ಟಿದೆ?

ಬೆಂಗಳೂರು, ಮಾ.20: ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದಲ್ಲಿ ಏರುಪೇರು ಕಂಡುಬರುತ್ತಿದೆ. ವಾಹನ ಸಂಚಾರ ಮತ್ತು ಧೂಳಿನ ಪ್ರಮಾಣ ಹೆಚ್ಚಾಗಿರುವುದರಿಂದ ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ ‘ಸಾಧಾರಣ’ ಮಟ್ಟಕ್ಕೆ ಕುಸಿದಿದೆ. ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ಮಾಲಿನ್ಯದ ಮಟ್ಟ ಕೊಂಚ ಹೆಚ್ಚಾಗಿದೆ. ಉಸಿರಾಟದ ತೊಂದರೆ ಇರುವವರು ಹೊರಬರುವಾಗ ಮಾಸ್ಕ್ ಧರಿಸುವುದು ಸೂಕ್ತ. ಮೈಸೂರಿನಲ್ಲಿ ಇಂದು AQI ಮಟ್ಟ 55 – 75 ಇದೆ. ಇದು ಉತ್ತಮ…

Read More

ಎಲ್​ಪಿಜಿ ಗ್ಯಾಸ್ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ! ಪೆಟ್ರೋಲ್ ಡೀಸೆಲ್​ಗೂ ಎದುರಾಗಲಿದೆ ಅಭಾವ? ಇಲ್ಲಿದೆ ಬಲವಾದ ಕಾರಣ

ನವದೆಹಲಿ/ಬೆಂಗಳೂರು, ಮಾರ್ಚ್ 20: ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧದ ಪರಿಣಾಮ ಭಾರತದಲ್ಲಿ (India) ಎಲ್‌ಪಿಜಿ (LPG) ಗ್ಯಾಸ್ ಕೊರತೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ಇದುವರೆಗೆ ಹೊರ್ಮುಝ್ ಜಲಸಂಧಿ ಸಮಸ್ಯೆಯಿಂದ ಅಡಚಣೆ ಉಂಟಾಗಿದೆ ಎನ್ನಲಾಗುತ್ತಿತ್ತು. ಆ ಮಾರ್ಗದ ಮೂಲಕ ಗ್ಯಾಸ್ ತುಂಬಿದ ಹಡಗುಗಳು ಬರುವಂತೆ ಮಾಡಲು ಕೇಂದ್ರ ಸರ್ಕಾರ ಹೇಗೋ ವ್ಯವಸ್ಥೆ ಮಾಡಿದೆ. ಆದರೆ ಇದೀಗ ಗಲ್ಫ್ ರಾಷ್ಟ್ರಗಳ ತೈಲ ಹಾಗೂ ಅನಿಲ ಉತ್ಪಾದನಾ ಘಟಕಗಳ ಮೇಲಿನ ದಾಳಿಗಳಿಂದ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಇರಾನ್, ಇಸ್ರೇಲ್ ಮತ್ತು ಅಮೆರಿಕ…

Read More

ದೈವಾರಾಧನೆಯಲ್ಲಿ ‘ಮಡಿ’ ಎಂದರೆ ಭಯವಲ್ಲ, ಅದು ಪರಮ ಶುಚಿತ್ವದ ಸಂಕೇತ!

ಬೆಂಗಳೂರು, ಮಾ.20: ಭಗವಂತನ ಆರಾಧನೆಯಲ್ಲಿ ಮಡಿಯ ಮಹತ್ವದ ಕುರಿತು ಅನೇಕ ಪ್ರಶ್ನೆಗಳು ಮೂಡುತ್ತವೆ. ಮಡಿ ಎಂದರೆ ಕೇವಲ ಸ್ವಚ್ಛತೆ ಮತ್ತು ಶುಭ್ರತೆ ಎಂದು ಅರ್ಥೈಸಬಹುದು. ಇದು ಯಾವುದೇ ಭಯಾನಕ ಪದವಲ್ಲ, ಬದಲಾಗಿ ಶುಚಿತ್ವದ ಪ್ರತೀಕವಾಗಿದೆ. ದೇವರು ಮಡಿಯನ್ನು ಕೇಳಿಲ್ಲವಾದರೂ, ಶುಭ್ರತೆ, ಸ್ವಚ್ಛ ಮನಸ್ಸು ಮತ್ತು ಒಳ್ಳೆಯ ಭಾವನೆಗಳೊಂದಿಗೆ ಭಗವಂತನನ್ನು ಆರಾಧಿಸಲು ಮಡಿಯನ್ನು ಅನುಸರಿಸಲಾಗುತ್ತದೆ. ಮಡಿಯು ಹಿಂದೂ ಸಂಪ್ರದಾಯದಲ್ಲಿ ಶುಚಿತ್ವದ ಸಂಕೇತವಾಗಿದೆ. ಹಿರಿಯರು ಮತ್ತು ಗುರುಗಳು ಇದನ್ನು ಸಂಪ್ರದಾಯವಾಗಿ ರೂಢಿಸಿಕೊಂಡು ಬಂದಿದ್ದಾರೆ. ಇದು ಭಗವಂತನಿಗೆ ಏಕಾಗ್ರತೆಯಿಂದ ಮತ್ತು ಶ್ರದ್ಧೆಯಿಂದ…

Read More

ಇಂದು ಶುಕ್ರವಾರ ಮಹಾಲಕ್ಷ್ಮಿಯ ಆರಾಧನೆಯಿಂದ ಸಕಲ ಐಶ್ವರ್ಯ ಸಿದ್ಧಿ! ನಿಮ್ಮ ರಾಶಿಯ ಫಲ ಇಲ್ಲಿದೆ

ಬೆಂಗಳೂರು, ಮಾ.20: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 20ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಪರಾಭವ ನಾಮ ಸಂವತ್ಸರದ ಪ್ರಥಮ ದಿನವಾದ ಇಂದು, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ, ರೇವತಿ ನಕ್ಷತ್ರ, ಬ್ರಹ್ಮ ಯೋಗ, ಬಾಲವಕರಣದ ವೈಶಿಷ್ಟ್ಯಗಳನ್ನು ವಿವರಿಸಲಾಗಿದೆ. ಇಂದು ರಾಹು ಕಾಲ ಬೆಳಿಗ್ಗೆ 10:56ರಿಂದ ಮಧ್ಯಾಹ್ನ 12:27ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು…

Read More

ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ಹೆಚ್ಚಿದ ಸೆಕೆ; ಉತ್ತರ ಕರ್ನಾಟಕದಲ್ಲಿ ಸೂರ್ಯನ ಪ್ರತಾಪ! ಮಳೆಯ ಮುನ್ಸೂಚನೆ ಇದೆಯೇ?

ಬೆಂಗಳೂರು, ಮಾ,20: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬೇಸಿಗೆಯ ಬಿಸಿ ಕನ್ನಡಿಗರನ್ನು ಕಂಗಾಲಾಗಿಸಿದೆ. ಇಂದು (ಮಾರ್ಚ್ 20, 2026) ರಾಜ್ಯದ ಪ್ರಮುಖ ನಗರಗಳಲ್ಲಿ ದಾಖಲಾದ ಹವಾಮಾನ ಬದಲಾವಣೆಗಳ ವಿವರ ಇಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 34°C – 35°C ತಲುಪುವ ಸಾಧ್ಯತೆಯಿದೆ. ಸಂಜೆಯ ವೇಳೆ ಭಾಗಶಃ ಮೋಡ ಕವಿದ ವಾತಾವರಣವಿದ್ದರೂ, ಉಷ್ಣಾಂಶ ಕಡಿಮೆಯಾಗುವ ಲಕ್ಷಣಗಳಿಲ್ಲ. ಕಲ್ಬುರ್ಗಿ, ರಾಯಚೂರು ಮತ್ತು ಬಳ್ಳಾರಿಯಲ್ಲಿ ತಾಪಮಾನವು 40°C ಗಡಿ ದಾಟುತ್ತಿದೆ. ಈ ಭಾಗದಲ್ಲಿ ಬಿಸಿ ಗಾಳಿ (Heat…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 20ರ ದಿನಭವಿಷ್ಯ

ಅತಿ ಹೆಚ್ಚಿನ ಶತ್ರು ಬಾಧೆ ಇದ್ದಲ್ಲಿ ಈ ದಿನ ‘ನಾರಾಯಣ ಕವಚ’ ಅಥವಾ ‘ದೇವಿ ಕವಚ’ ಪಾರಾಯಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ನಿಮ್ಮಲ್ಲಿ ಉದ್ಯೋಗ ಬದಲಾವಣೆಯ ಆಸಕ್ತಿ ಕೆರಳಲಿದೆ. ಒಂದು ವೇಳೆ ಕೆಲ ತಿಂಗಳ ಹಿಂದೆ ಪ್ರಯತ್ನ ಪಟ್ಟು, ಆ ನಂತರದಲ್ಲಿ ಬೇಡ ಎಂದುಕೊಂಡು ಸುಮ್ಮನಾಗಿದ್ದವರು ಸಹ ಈ ದಿನ ಜಾಬ್ ಕನ್ಸಲ್ಟೆನ್ಸಿಗಳ ಮೂಲಕವಾಗಿ ಕೆಲಸಕ್ಕೆ ಪ್ರಯತ್ನಿಸಲಿದ್ದೀರಿ. ನೀವು ಯಾರಿಗಾದರೂ ಸಾಲ ಕೊಟ್ಟು, ಬಹಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 20ರ ದಿನಭವಿಷ್ಯ

ಮನೆಯ ಅಂಗಳದಲ್ಲಿರುವ ತುಳಸಿ ಗಿಡಕ್ಕೆ ಪ್ರತಿದಿನ ಸಂಜೆ ತುಪ್ಪದ ದೀಪ ಹಚ್ಚಿ ಪ್ರದಕ್ಷಿಣೆ ಹಾಕಿ. ಹೀಗೆ ಮಾಡುವುದರಿಂದ ಕುಟುಂಬದಲ್ಲಿನ ಭಿನ್ನಾಭಿಪ್ರಾಯಗಳು ದೂರ ಆಗಲಿವೆ. ಉದ್ಯೋಗ ಸ್ಥಳದಲ್ಲಿ ಇರುವ ಗೊಂದಲ ಬಗೆಹರಿಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮಲ್ಲಿ ಕೆಲವರು ದೂರ ಪ್ರಯಾಣಕ್ಕಾಗಿ ಸಿದ್ಧತೆ ಮಾಡಿಕೊಳ್ಳಬಹುದು ಅಥವಾ ಹೊರಟು ಬಿಡಬಹುದು. ಇದರಿಂದ ದೀರ್ಘಾವಧಿಯಲ್ಲಿ ಬಹಳ ದೊಡ್ಡ ಮಟ್ಟದ ಅನುಕೂಲ ಇದೆ. ಆದರೆ ಹೊರಡುವ ಮುನ್ನ ಕುಟುಂಬದ ಕಡೆಯಿಂದ…

Read More