‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

‘ಧುರಂಧರ್ 2’ ಸಿನಿಮಾ ಒಟಿಟಿ ರಿಲೀಸ್ ಯಾವಾಗ? ಇಲ್ಲಿದೆ ವಿವರ

‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ನಂತರ, ಅದನ್ನು OTT ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಾಯಿತು. ಈಗ ಈ ಚಿತ್ರದ ಮುಂದುವರಿದ ಭಾಗವು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುವುದಿಲ್ಲ. ಬದಲಾಗಿ ಮತ್ತೊಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರವು ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಆಗಲಿದೆ. ಈ ಮುಂದುವರಿದ ಭಾಗದ ಡಿಜಿಟಲ್ ಹಕ್ಕುಗಳು 150 ಕೋಟಿ ರೂ.ಗಳಿಗೆ ಮಾರಾಟವಾಗಿವೆ. ಇದನ್ನು, ಇದುವರೆಗಿನ ಅತಿದೊಡ್ಡ ಒಪ್ಪಂದವೆಂದು ಪರಿಗಣಿಸಲಾಗುತ್ತಿದೆ.

‘ಧುರಂಧರ್ 2’ ಚಿತ್ರದ ಒಟಿಟಿ ಬಿಡುಗಡೆಗೆ ಇನ್ನೂ ಅಧಿಕೃತ ದಿನಾಂಕವಿಲ್ಲ . ಆದರೆ ಇಂಡಸ್ಟ್ರಿ ಟ್ರೆಂಡ್ಸ್ ಮತ್ತು ಪಿಂಕ್ವಿಲ್ಲಾ, ಇಂಡಿಯಾ ಟುಡೇ ವರದಿಗಳ ಪ್ರಕಾರ, ಚಿತ್ರವು ಥಿಯೇಟ್ರಿಕಲ್ ಬಿಡುಗಡೆಯಾದ 45 ರಿಂದ 60 ದಿನಗಳಲ್ಲಿ ಒಟಿಟಿನಲ್ಲಿ ಸ್ಟ್ರೀಮ್ ಆಗುವ ಸಾಧ್ಯತೆಯಿದೆ. ಇದರರ್ಥ ರಣವೀರ್ ಅವರ ಚಿತ್ರವು ಜೂನ್ ಎರಡನೇ ವಾರದ ವೇಳೆಗೆ ಪ್ರಸಾರ ಕಾಣಬಹುದು.

ಇದನ್ನೂ ಓದಿ: ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

ಈ ಚಿತ್ರದ ಪೇಯ್ಡ್ ಪ್ರಿವ್ಯೂಗೂ ಭಾರಿ ಪ್ರತಿಕ್ರಿಯೆ ಸಿಕ್ಕಿದೆ. ಹಲವು ನಗರಗಳ ಚಿತ್ರಮಂದಿರಗಳು ಪ್ರೇಕ್ಷಕರಿಂದ ತುಂಬಿದ್ದವು. ಪೇಯ್ಡ್ ಪ್ರಿವ್ಯೂ ನಿಂದಲೇ ‘ಧುರಂಧರ್ 2’ ಚಿತ್ರ 43 ಕೋಟಿ ರೂಪಾಯಿಗಳ ಬಂಪರ್ ಕಲೆಕ್ಷನ್ ಗಳಿಸಿದೆ. ಮೊದಲ ದಿನದ ಕಲೆಕ್ಷನ್ 100 ಕೋಟಿ ರೂಪಾಯಿಗಳನ್ನು ದಾಟಿದೆ. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಸಿಂಗ್, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಂಜಯ್ ದತ್, ರಾಕೇಶ್ ಬೇಡಿ, ಸಾರಾ ಅರ್ಜುನ್ ನಟಿಸಿದ್ದಾರೆ.

‘ಧುರಂಧರ್ 2 ಸಿನಿಮಾ ಎಲ್ಲಾ ಕಡೆಗಳಿಂದ ಉತ್ತಮ ವಿಮರ್ಶೆ ಪಡೆದಿದೆ. ಈ ಚಿತ್ರ ಅನೇಕ ಕಡೆಗಳಲ್ಲಿ ಹೌಸ್​​ಫುಲ್ ಪ್ರದರ್ಶನ ಕಾಣುತ್ತಿರುವುದು ಚಿತ್ರದ ಹೆಚ್ಚುಗಾರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೀಕಿಸಿ, ಟ್ರೋಲ್ ಮಾಡಿದವರಿಗೆ ಅವಾರ್ಡ್​ ಮೂಲಕ ಉತ್ತರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಅವರು ಅನೇಕ ವಿಷಯಗಳಿಗೆ ಟ್ರೋಲ್ ಆದ ಉದಾಹರಣೆ ಇದೆ. ಈಗ ಅವರು ಟ್ರೋಲ್ ಮಾಡುವ ಎಲ್ಲರಿಗೂ ತಮ್ಮ ಕೆಲಸದ ಮೂಲಕ ಉತ್ತರ ನೀಡಿದ್ದಾರೆ. ತೆಲಂಗಾಣ ಗದ್ದರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಅವಾರ್ಡ್ ಸ್ವೀಕರಿಸಿದರು. ಅಂದರೆ ಅವರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿದ್ದು, ಅದನ್ನು ಸಿಎಂ ಕೈಯಿಂದ ಪಡೆದರು. ಈ ಸಂದರ್ಭದಲ್ಲಿ ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡರು. ಅವರು ಉತ್ತರಿಸಿದ್ದು ಹಿಗೆ.

‘ಹಿಂದೆ ನಾನು ಟ್ರೋಲ್‌ಗಳನ್ನು ಎದುರಿಸಿದ್ದೆ. ಆದರೆ ಈಗ ರಾಜ್ಯ ಪ್ರಶಸ್ತಿ ಪಡೆದಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದೂ ಗರ್ಲ್ಫ್ರೆಂಡ್ ಚಿತ್ರಕ್ಕಾಗಿ ಪ್ರಶಸ್ತಿ ಪಡೆದಿದ್ದಕ್ಕೆ ತುಂಬಾ ಖುಷಿ ಇದೆ’ ಎಂದು ರಶ್ಮಿಕಾ ಹೇಳಿದರು. ಅವರು ಪಡೆದಿರುವ ಈ ಅವಾರ್ಡ್ ಟ್ರೋಲ್ಗಳಿಗೆ ನೀಡಿದ ಉತ್ತರ ಎಂದು ಪರಿಗಣಿಸಲಾಗಿದೆ.

ರಶ್ಮಿಕಾ ಮಂದಣ್ಣ ಅವರು ಈಗ ತೆಲಂಗಾಣದ ಸೊಸೆಯಾಗಿದ್ದಾರೆ. ಇದಕ್ಕೆ ಅವರಿಗೆ ಖುಷಿ ಇದೆ. ಈ ಖುಷಿಯನ್ನು ವೇದಿಕೆ ಮೇಲೆ ಹೊರಹಾಕಿದರು. ರಶ್ಮಿಕಾ ಮಂದಣ್ಣ ಅವರು ಈಗಲೂ ಟ್ರೋಲ್ ಎದುರಿಸುತ್ತಾರೆ. ಆದರೆ, ಅವರಿಗೆ ಇದು ಅಷ್ಟಾಗಿ ಪ್ರಭಾವ ಬೀರುತ್ತಿಲ್ಲ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹಳದಿ ಶಾಸ್ತ್ರದ ಕಲರ್​ಫುಲ್ ಫೋಟೋ ಗ್ಯಾಲರಿ

‘ರೆವಂತ್ ರೆಡ್ಡಿ ಸರ್, ನಿಮ್ಮ ಕೈಯಿಂದ ಪ್ರಶಸ್ತಿ ಸ್ವೀಕರಿಸುತ್ತಿರುವುದು ತುಂಬಾ ವಿಶೇಷ. ಎಲ್ಲಾ ತೀರ್ಪುಗಾರರಿಗೆ ತುಂಬಾ ಧನ್ಯವಾದಗಳು. ನನ್ನ ಅಭಿನಯಕ್ಕಾಗಿ ಪ್ರಶಸ್ತಿ ಪಡೆದಿರುವುದು ನನಗೆ ತುಂಬಾ ಹೆಮ್ಮೆ ತಂದಿದೆ. ಈ ಪ್ರಶಸ್ತಿ ನನಗೆ ಇನ್ನೂ ಇಂತಹ ಚಿತ್ರಗಳನ್ನು ಮಾಡಲು ಆತ್ಮವಿಶ್ವಾಸ ನೀಡಿದೆ. ಈ ಚಿತ್ರವನ್ನು ರಾಹುಲ್ ರವೀಂದ್ರನ್ ಅವರಿಂದ ಸಾಧ್ಯವಾಯಿತು. ಚಿತ್ರಕ್ಕಾಗಿ ಕೆಲಸ ಮಾಡಿದ ಎಲ್ಲರಿಗೂ ಧನ್ಯವಾದಗಳು. ನಾನು ಈ ಚಿತ್ರರಂಗಕ್ಕೆ ಬಂದಾಗ, ಎಲ್ಲರೂ ನನ್ನನ್ನು ಮಗಳಂತೆ ನೋಡಿಕೊಂಡರು. ಈಗ ನಾನು ನಿಮ್ಮ ಮುಂದೆ ಸೊಸೆಯಂತೆ ಇದ್ದೇನೆ. ಎಲ್ಲರೂ, ನನ್ನ ನೋಡಿಕೊಳ್ಳಿ’ ಎಂದು ರಶ್ಮಿಕಾ ಹೇಳಿದರು. ರಶ್ಮಿಕಾ ಮಾತನಾಡುತ್ತಿರುವಾಗ, ವಿಜಯ್ ದೇವರಕೊಂಡ ಅವರ ತಾಯಿ ಮತ್ತು ರಶ್ಮಿಕಾ ಅವರ ಅತ್ತೆ ಭಾವುಕರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಬಂಟ್ವಾಳ: ಮಸೀದಿ ಮೆಟ್ಟಿಲೇರಿ ‘ಸೀಯಾಳ’ ಸ್ವೀಕರಿಸಿದ ದೈವ

ಬಂಟ್ವಾಳ, ಮಾ. 20: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಮನುಷ್ಯತ್ವ ಮತ್ತು ಧಾರ್ಮಿಕ ಸಹಬಾಳ್ವೆಯ ಸುಂದರ ದೃಶ್ಯವೊಂದು ಅನಾವರಣಗೊಂಡಿದೆ. ಅರಸರ ಕಾಲದ ಪುರಾತನ ಪರಂಪರೆಯಂತೆ, ಮಂಜದಗೋಳಿ ಜಾತ್ರೆಯ ಸಂದರ್ಭದಲ್ಲಿ ದೈವದ ಭಂಡಾರವು ಮಸೀದಿಯ ಮೆಟ್ಟಿಲೇರಿ ಸೀಯಾಳ (ಎಳನೀರು) ಸ್ವೀಕರಿಸುವ ಮೂಲಕ ಸಮಾಜಕ್ಕೆ ಸಾಮರಸ್ಯದ ಸಂದೇಶ ಸಾರಿದೆ. ಪ್ರತಿ ವರ್ಷವೂ ಈ ಆಚರಣೆಗಳು ಇಲ್ಲಿ ನಡೆಯುತ್ತ ಬಂದಿದೆ. ಮುಸ್ಲಿಂ ಧರ್ಮದ ಜನ ದೈವಗಳಿಗೆ ಈ ಮೂಲಕ ವಿಶೇಷ ಗೌರವವನ್ನು ನೀಡುತ್ತಾರೆ.

ಸಜೀಪನಡು ಮೂಲಸ್ಥಾನದಿಂದ ಮಂಜದಗೋಳಿ ಕ್ಷೇತ್ರಕ್ಕೆ ಭಂಡಾರ ಸಾಗುವ ಹಾದಿಯಲ್ಲಿ ಈ ವಿಶಿಷ್ಟ ಆಚರಣೆ ನಡೆಯುತ್ತದೆ. ನಂದಾವರ ಕೇಂದ್ರ ಜುಮಾ ಮಸೀದಿಯ ಪ್ರಮುಖರು ದೈವದ ಭಂಡಾರಕ್ಕೆ ಭಕ್ತಿಯಿಂದ ಸೀಯಾಳ ಅರ್ಪಿಸುತ್ತಾರೆ. ದೈವವು ಮಸೀದಿಯ ನಾಲ್ಕು ಮೆಟ್ಟಿಲುಗಳನ್ನು ಹತ್ತಿ ಈ ಸೇವೆಯನ್ನು ಸ್ವೀಕರಿಸುವುದು ಇಲ್ಲಿನ ವಿಶೇಷವಾಗಿದೆ.

ಇದನ್ನೂ ಓದಿ: ಒಂದು ದಿನ ಮೊದಲೇ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬ ಆಚರಣೆ: ಮಾ 20ರಂದು ಸಾರ್ವತ್ರಿಕ ರಜೆ ಘೋಷಣೆ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಮಂಜದಗೋಳಿ ಜಾತ್ರೆಯ ಅಂಗವಾಗಿ ನಡೆಯುವ ಈ ಸಂಪ್ರದಾಯವು ಈ ವರ್ಷವೂ (ಮಾರ್ಚ್ 17) ಅತ್ಯಂತ ಶ್ರದ್ಧೆಯಿಂದ ನೆರವೇರಿದೆ. ಇಂದಿನ ಕಾಲಘಟ್ಟದಲ್ಲಿ ಧರ್ಮಗಳ ನಡುವೆ ಗೋಡೆಗಳು ನಿರ್ಮಾಣವಾಗುತ್ತಿರುವಾಗ, ನಂದಾವರದ ಈ ಆಚರಣೆಯು ಸಹಬಾಳ್ವೆ ಮತ್ತು ಪರಸ್ಪರ ಗೌರವಕ್ಕೆ ಮಾದರಿಯಾಗಿದೆ. ಮಸೀದಿ ಹಾಗೂ ದೇವಸ್ಥಾನಗಳ ನಡುವಿನ ಈ ಅವಿನಾಭಾವ ಸಂಬಂಧ ಕರಾವಳಿಯ ಸಾಂಸ್ಕೃತಿಕ ಹೆಮ್ಮೆಯಾಗಿದೆ. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋ ದೈವ ಮಸೀದಿಯ ಬಳಿ ಬಂದು, ನಿಂತು ಎಲ್ಲರಿಗೂ ಅಭಯ ನೀಡುವುದನ್ನು ಕಾಣಬಹುದು. ದೈವ ಬರುವ ಮಾರ್ಗದಲ್ಲಿ ನಿಂತು ಸಾವಿರಾರೂ ಮುಸ್ಲಿಂ ಜನರು ಭಕ್ತಿಯಿಂದ ನೋಡುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗ್ಯಾಸ್ ಸಿಗದೆ ಸಂಕಷ್ಟದಲ್ಲಿ ಸ್ಟೀಲ್ ವೆಲ್ಡಿಂಗ್, ಕಟ್ಟಿಂಗ್ ಉದ್ಯಮ: ಕೆಆರ್ ಮಾರುಕಟ್ಟೆಯಲ್ಲಿ ಮುಚ್ಚಿಕೊಳ್ತಿವೆ ಒಂದೊಂದೇ ಅಂಗಡಿಗಳು

ಬೆಂಗಳೂರು, ಮಾರ್ಚ್ 20: ಬೆಂಗಳೂರಿನ (Bangalore) ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರ್ (LPG Cylinder) ಅಭಾವ ಕೈ ಮೀರುವ ಹಂತಕ್ಕೆ ಬರುತ್ತಿದೆ. ಉದ್ಯಮಗಳು ಹಳ್ಳಹಿಡಿಯುತ್ತಿವೆ. ಹೋಟೆಲ್, ಪಿಜಿ ಸೇರಿದಂತೆ ಅನೇಕ ಉದ್ಯಮಗಳಿಗೆ ಭಾರೀ ಹೊಡೆತ ಬಿದ್ದಿದೆ. ಇದೀಗ ಸ್ಟೀಲ್ ಇಂಡಸ್ಟ್ರೀಸ್​ಗೂ ಏಟು ಬಿದ್ದಿದ್ದು, ಕೆಆರ್ ಮಾರುಕಟ್ಟೆಯ ಸ್ಟೀಲ್ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳು ಒಂದೊಂದೇ ಆಗಿ ಮುಚ್ಚಿಕೊಳ್ಳುತ್ತಿವೆ.

ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸಿಗದೆ ನಗರದ ಉದ್ಯಮಗಳು ಅಯೋಮಯಗೊಂಡಿವೆ. ಹೋಟೆಲ್ ಉದ್ಯಮಗಳಿಗೆ, ಗ್ಯಾಸ್ ಇಲ್ಲದಿದ್ದರೂ ಕನಿಷ್ಠ ಎಲೆಕ್ಟ್ರಿಕ್ ಅಥವಾ ಸೌದೆ‌ ಒಲೆಯಲ್ಲಾದರೂ ಆಹಾರ ತಯಾರಿಸಿ ಉದ್ಯಮ ನಡೆಸುವ ಅವಕಾಶ ಇದೆ. ಕೆಲವು ಹೋಟೆಲ್ ಮಾಲೀಕರು ಸೌದೆ ಒಲೆ, ಎಲೆಕ್ಟ್ರಿಕ್ ಒಲೆ ಮೇಲೆ ವ್ಯಾಪಾರ ನಡೆಸುತ್ತಿದ್ದಾರೆ. ಆದರೆ ಗ್ಯಾಸ್ ಸಿಗದೆ ಬೇರೆ ಪರ್ಯಾಯ ಮಾರ್ಗವೇ ಇಲ್ಲದ ಸ್ಟೀಲ್ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಉದ್ಯಮ ಇದೀಗ ಸಂಪೂರ್ಣ ನಷ್ಟದ ಸುಳಿಗೆ ಸಿಲುಕಿದೆ.

400ಕ್ಕೂ ಅಧಿಕ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳಿಗೆ ಕುತ್ತು

ಕೆಆರ್ ಮಾರ್ಕೆಟ್​ನ ಬಿ ಉಸ್ಮಾನ್ ಬೀದಿ ಹಾಗೂ ಅದರ ಸುತ್ತಮುತ್ತ ಬರೋಬ್ಬರಿ 400ಕ್ಕೂ ಅಧಿಕ ವೆಲ್ಡಿಂಗ್ ಹಾಗೂ ಕಟ್ಟಿಂಗ್ ಅಂಗಡಿಗಳಿವೆ. ಲಘು ಹಾಗೂ ಭಾರೀ ವಾಹನದ ಬಿಡಿ ಭಾಗಗಳ ಜೋಡಣೆ, ಕಬ್ಬಿಣದ ಪ್ಲೇಟ್​ಗಳ‌ ಕಟ್ಟಿಂಗ್ ಸೇರಿದಂತೆ ಕಮರ್ಷಿಯಲ್ ಗ್ಯಾಸ್ ಬಳಸಿಕೊಂಡು ನಡೆಯುವ ಉದ್ಯಮವಿದು. ಇದೇ ಕಾರಣಕ್ಕೆ ಪ್ರತಿ ದಿನ ಲಕ್ಷಾಂತರ ರೂಪಾಯಿ ವಹಿವಾಟು ಇಲ್ಲಿ ನಡೆಯುತ್ತದೆ. ಆದರೆ ಕಳೆದ ಒಂದು ವಾರದಿಂದ ಕಮರ್ಷಿಯಲ್ ಗ್ಯಾಸ್ ಸಿಗದೆ ವಹಿವಾಟು ಸಂಪೂರ್ಣ ಕುಸಿದು ಹೋಗಿದೆ. ಹೋಟೆಲ್​ಗಳಿಗೆ ಗ್ಯಾಸ್ ಇಲ್ಲದಿದ್ದರೆ ಸೌದೆ ಒಲೆಯಾದರೂ ಇದೆ. ನಮಗೆ ಗ್ಯಾಸ್ ಇಲ್ಲದಿದ್ದರೆ ಜೀವನವೇ ನಡೆಯಲ್ಲ ಎನ್ನುತ್ತಿದ್​ದಾರೆ ಇಲ್ಲಿನ ಅಂಗಡಿಗಳ ಮಾಲೀಕರು.

ಇದನ್ನೂ ಓದಿ: ಎಲ್​ಪಿಜಿ ಗ್ಯಾಸ್ ಸಮಸ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ! ಪೆಟ್ರೋಲ್ ಡೀಸೆಲ್​ಗೂ ಎದುರಾಗಲಿದೆ ಅಭಾವ? ಇಲ್ಲಿದೆ ಬಲವಾದ ಕಾರಣ

ಒಟ್ಟಿನಲ್ಲಿ, ಕಮರ್ಷಿಯಲ್ ಗ್ಯಾಸ್ ಅಭಾವ ಪ್ರತಿ ದಿನ ನಗರದಲ್ಲಿ ನೂರೆಂಟು ಸಮಸ್ಯೆಗಳನ್ನು ತಂದೊಡ್ಡುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರೆದರೆ ನಗರದ ಆರ್ಥಿಕ ಏಳಿಗೆಗೆ ಭಾರೀ ಹೊಡೆತ ತಟ್ಟುವುದಂತೂ ಗ್ಯಾರಂಟಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂದರ್ 2’ ಚಿತ್ರದ ಎದುರು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಗಳಿಸಿದ್ದೆಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ಎಷ್ಟು ದೊಡ್ಡ ಸಿನಿಮಾ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ರಿಲೀಸ್ ಆಗಬೇಕು ಎಂದರೆ ಚಿತ್ರದ ಬಗ್ಗೆ ಅಷ್ಟು ಕಾನ್ಫಿಡೆನ್ಸ್ ಇರಬೇಕು. ಡಾರ್ಲಿಂಗ್ ಕೃಷ್ಣ ಅವರಿಗೆ ‘ಲವ್ ಮಾಕ್ಟೇಲ್ 3’ ಚಿತ್ರದ ಬಗ್ಗೆ ಆ ವಿಶ್ವಾಸ ಇದೆ. ಈ ಕಾರಣದಿಂದಲೇ ‘ಧುರಂಧರ್ 2’ ಸಿನಿಮಾ ಎದುರು ‘ಲವ್ ಮಾಕ್ಟೇಲ್ 3’ ಚಿತ್ರವನ್ನು ರಿಲೀಸ್ ಮಾಡಿದ್ದಾರೆ. ಈ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ.

‘ಲವ್ ಮಾಕ್ಟೇಲ್’, ‘ಲವ್ ಮಾಕ್ಟೇಲ್ 2’ ಹಿಟ್ ಆದ ಬಳಿಕ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ಕೃಷ್ಣ ಕೈಗೆತ್ತಿಕೊಂಡರು. ಇದು ಬೇಕಿತ್ತಾ ಎಂದು ಪ್ರಶ್ನೆ ಮಾಡಿದವರು ಅನೇಕರಿದ್ದಾರೆ. ಈ ರೀತಿ ಪ್ರಶ್ನೆ ಮಾಡಿದವರೆಲ್ಲ ‘ಲವ್ ಮಾಕ್ಟೇಲ್ 3’ ಚಿತ್ರವನ್ನು ಇಷ್ಟಪಡುತ್ತಿದ್ದಾರೆ. ಈ ಸಿನಿಮಾ ಅಭಿಮಾನಿಗಳಿಗೆ ಇಷ್ಟ ಆಗುತ್ತಿದೆ. ‘ಧುರಂಧರ್ 2’ ಮಧ್ಯೆಯೂ ಶೋ ಪಡೆದು ಸಿನಿಮಾ ಬೀಗುತ್ತಿದೆ.

ಏಪ್ರಿಲ್ ತಿಂಗಳಲ್ಲಿ ‘ಲವ್ ಮಾಕ್ಟೇಲ್ 3’ ರಿಲೀಸ್ ಆಗಬೇಕಿತ್ತು. ಆದರೆ, ‘ಟಾಕ್ಸಿಕ್’ ಸಿನಿಮಾ ಮುಂದಕ್ಕೆ ಹೋಗಿದ್ದರಿಂದ ‘ಲವ್ ಮಾಕ್ಟೇಲ್ 3’ ಚಿತ್ರ ಈ ದಿನಾಂಕದಂದು (ಮಾರ್ಚ್ 19) ಬರಲು ಸಿದ್ಧವಾಯ್ತು.ಇದು ನಿಜಕ್ಕೂ ಒಂದು ದೊಡ್ಡ ಚಾಲೆಂಜ್. ಈ ಚಾಲೆಂಜ್​​ನ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಸ್ವೀಕರಿಸಿ ಗೆದ್ದಿದ್ದಾರೆ.

‘ಲವ್ ಮಾಕ್ಟೇಲ್ 3’ ಸಿನಿಮಾ ಮೊದಲ ದಿನ 1.52 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ನೆಟ್ ಕಲೆಕ್ಷನ್ 1.36 ಕೋಟಿ ರೂಪಾಯಿ ಆಗಿದೆ ಎಂದು sacnilk ವರದಿ ಮಾಡಿದೆ. ‘ಧುರಂಧರ್ 2’ ಅಬ್ಬರದ ಮಧ್ಯೆಯೂ ‘ಲವ್ ಮಾಕ್ಟೇಲ್ 3’ ಸಿನಿಮಾ ಬೀಗುತ್ತಿದೆ ಅನ್ನೋದು ವಿಶೇಷ. ‘ಲವ್ ಮಾಕ್ಟೇಲ್ 3’ ಚಿತ್ರದ ಬಜೆಟ್ ಕಡಿಮೆ. ಹೀಗಾಗಿ, ಇದು ಸಿನಿಮಾಗೆ ಸಹಕಾರಿ ಆಗಲಿದೆ.

ಇದನ್ನೂ ಓದಿ: ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ ಆ್ಯಕ್ಷನ್ ಓರಿಯೆಂಟೆಡ್ ಚಿತ್ರ. ಈ ಸಿನಿಮಾ ಎ ಪ್ರಮಾಣಪತ್ರ ಪಡೆದಿದೆ. ಹೀಗಾಗಿ, ಎಲ್ಲಾ ವಯಸ್ಸಿನವರೂ ಸಿನಿಮಾ ನೋಡಲು ಸಾಧ್ಯವಿಲ್ಲ. ಆದರೆ, ‘ಲವ್ ಮಾಕ್ಟೇಲ್ 3’ ಸಿನಿಮಾ ಆ ರೀತಿ ಅಲ್ಲ. ಈ ಕಾರಣಕ್ಕೆ ಸಿನಿಮಾ ‘ಧುರಂಧರ್ 3’ ಚಿತ್ರದ ಎದುರು ರಿಲೀಸ್ ಆದರೂ ಒಳ್ಳೆಯ ಗಳಿಕೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವ್ಯಕ್ತಿಗೆ ಬಲವಂತವಾಗಿ ಮೂತ್ರ ಕುಡಿಸಿದ ಹಳ್ಳಿ ಜನ

ಲಾತೇಹಾರ್, ಮಾರ್ಚ್​ 20: ವ್ಯಕ್ತಿಯೊಬ್ಬರಿಗೆ ಹಳ್ಳಿಯ ಜನರು ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಜಾರ್ಖಂಡ್​​ನ ಲಾತೇಹಾರ್​​ ಜಿಲ್ಲೆಯಲ್ಲಿ ನಡೆದಿದೆ. ವೃದ್ಧರೊಬ್ಬರು ಮಾಟಮಂತ್ರ(Witchcraft) ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರಿಗೆ ಮೂತ್ರ ಕುಡಿಸಿದ್ದಾರೆ. ಗ್ರಾಮದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತಕ್ಕೂ ಹಾಗೂ ಅವರಿಗೂ ಸಂಬಂಧ ಕಲ್ಪಿಸಿ ಈ ಕೃತ್ಯವೆಸಗಿದ್ದಾರೆ. ಮಗ ಬ್ರಜೇಶ್ ಮುಂಡಾ ಅವರ ಪ್ರಕಾರ, ಈ ಘಟನೆ ಮಂಗಳವಾರ ನಡೆದಿದೆ. ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ವೀರೇಂದ್ರ ಸಿಂಗ್ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಅವರು ಮಾಟಮಂತ್ರದ ಮೂಲಕ ಇದನ್ನು ಮಾಡಿಸಿದ್ದಾರೆ ಎಂದು ದೂರಿದ್ದಾರೆ. ಸುಮಾರು 15 ಗ್ರಾಮಸ್ಥರು ಸಭೆ ನಡೆಸಿ, ವೃದ್ಧರೊಬ್ಬರ ಮೇಲೆ ಮಾಟಮಂತ್ರದ ಆರೋಪ ಹೊರಿಸಿ, ಮೂತ್ರ ಸೇವಿಸುವಂತೆ ಒತ್ತಾಯಿಸಿದ್ದಾರೆ.

ಗ್ರಾಮಸ್ಥರು ತನ್ನ ತಾಯಿಯ ಬಳಿ ಕೂಡ ಮೂತ್ರ ಕುಡಿಯುವಂತೆ ಒತ್ತಾಯಿಸಲು ಪ್ರಯತ್ನಿಸಿದ್ದಾರೆ, ಆದರೆ ಆಕೆಗೆ ಅವಮಾನವಾಗದಂತೆ ತಡೆಯಲು ತಾನು ಮಧ್ಯಪ್ರವೇಶಿಸಿದ್ದೇನೆ ಎಂದು ಮುಂಡಾ ಹೇಳಿದ್ದಾರೆ. ಘಟನೆಯ ಸಮಯದಲ್ಲಿ, ಸಮುದಾಯ ಆರೋಗ್ಯ ಕಾರ್ಯಕರ್ತೆ ಹೀನಾ ದೇವಿ ಗ್ರಾಮಸ್ಥರನ್ನು ತಡೆಯಲು ಪ್ರಯತ್ನಿಸಿದ್ದಾರೆ.

ಮತ್ತಷ್ಟು ಓದಿ: ಗಂಡ-ಹೆಂಡತಿಯನ್ನು ಜೀವಂತವಾಗಿ ಸುಟ್ಟುಹಾಕಿದ ಗ್ರಾಮಸ್ಥರು; ಕಾರಣ ಕೇಳಿದರೆ ಶಾಕ್ ಆಗ್ತೀರ

ಆರೋಪಗಳ ನಂತರ, ವೃದ್ಧ ವ್ಯಕ್ತಿ ದೂರು ದಾಖಲಿಸಲು ನೇತರ್ಹತ್ ಪೊಲೀಸ್ ಠಾಣೆಗೆ ಹೋಗಿದ್ದರು, ಅವರನ್ನು ವಾಪಸ್ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಔಪಚಾರಿಕ ದೂರು ದಾಖಲಾದ ನಂತರ ಈ ವಿಷಯವನ್ನು ತನಿಖೆ ಮಾಡಲು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಠಾಣೆಯ ಉಸ್ತುವಾರಿಗೆ ನಿರ್ದೇಶಿಸಲಾಗಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಪಿನ್ ಕುಮಾರ್ ದುಬೆ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಗ್ರಾಮಸ್ಥರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ ಎಂದು ಎಸ್ಪಿ ಕುಮಾರ್ ಗೌರವ್ ದೃಢಪಡಿಸಿದ್ದಾರೆ ಆದರೆ ಪ್ರಕರಣವನ್ನು ಇನ್ನೂ ಅಧಿಕೃತವಾಗಿ ಪರಿಶೀಲಿಸಬೇಕಾಗಿದೆ ಎಂದು ಹೇಳಿದರು.

ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸೂಚಿಸಿದ್ದರೂ, ಇಲ್ಲಿಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ. ಅಧಿಕಾರಿಗಳು ಗ್ರಾಮಸ್ಥರು ತನಿಖೆಗೆ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಮತ್ತು ಹಲ್ಲೆ ಮತ್ತು ಬೆದರಿಕೆಗೆ ಒಳಗಾದವರ ವಿರುದ್ಧ ಕಠಿಣ ಕಾನೂನು ಕ್ರಮಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು, ಮಾ.20: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ ನಡೆಸುವ ವೇಳೆ ಕಾಂತರಾಜು ಅವರ ಮೇಲೆ ಹಲ್ಲೆ ಮಾಡಿದ್ದಾರೆ, ಇದರಿಂದ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂಬುದು ಮೃತನ ಗೆಳೆಯರು ಮತ್ತು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಯಳನಾಡು ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಘೋಷಣೆ ಕೂಗಿದರು.ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ತುಮಕೂರು ಎಸ್ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಾಯು ಗುಣಮಟ್ಟ: ಮಲೆನಾಡಿನಲ್ಲಿ ಶುದ್ಧ ಗಾಳಿ! ನಿಮ್ಮ ನಗರದ AQI ಎಷ್ಟಿದೆ?

ಪೊಲೀಸರ ಮಾಹಿತಿ ಪ್ರಕಾರ, ಸಂಜೆ 5 ಗಂಟೆಗೆ ಆರು ಮಂದಿಯನ್ನು ಕರೆತರಲಾಗಿತ್ತು. ರಾತ್ರಿ 8:30ಕ್ಕೆ ವಿಚಾರಣೆ ಮುಗಿಸಿ ಕಳುಹಿಸಿದ ಬಳಿಕ ಕಾಂತರಾಜು ಅವರು ಠಾಣೆಯಿಂದ ಹೊರಬಂದ ಮೇಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದ್ದು, ಮೃತರ ಕುಟುಂಬಸ್ಥರಿಂದ ದೂರು ಪಡೆಯುವ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇವರ ವಿಗ್ರಹ ಅಥವಾ ಫೋಟೋ ಶುಚಿಗೊಳಿಸುವ ಮುನ್ನ ಈ ವಿಷಯ ತಿಳಿದುಕೊಳ್ಳಿ

ಪ್ರತಿಯೊಂದು ಮನೆಯ ಪೂಜಾ ಕೊಠಡಿಯು ಅತ್ಯಂತ ಪವಿತ್ರವಾದ ಸ್ಥಳವಾಗಿದೆ. ಆದರೆ ದೇವರ ವಿಗ್ರಹಗಳು ಮತ್ತು ಫೋಟೋಗಳನ್ನು ಯಾವಾಗ ಬೇಕೆಂದರೆ ಆಗ ಸ್ವಚ್ಛಗೊಳಿಸಬಾರದು ಎಂದು ಶಾಸ್ತ್ರಗಳು ಮತ್ತು ಹಿರಿಯರು ಹೇಳುತ್ತಾರೆ. ಸಾಮಾನ್ಯವಾಗಿ ತಿಂಗಳಿಗೊಮ್ಮೆ ದೇವರ ವಿಗ್ರಹಗಳನ್ನು ಸ್ವಚ್ಛಗೊಳಿಸುವುದು ಶುಭಕರ. ಆದರೆ ಈ ಕಾರ್ಯವನ್ನು ಮಂಗಳವಾರ ಮತ್ತು ಶುಕ್ರವಾರದಂದು ಮಾಡಬಾರದು. ಅದರಂತೆ ಅಮಾವಾಸ್ಯೆ, ಏಕಾದಶಿ ಮತ್ತು ದ್ವಾದಶಿ ತಿಥಿಗಳಂದು ಕೂಡ ವಿಗ್ರಹಗಳನ್ನು ಸ್ಥಳಾಂತರಿಸುವುದು ಅಥವಾ ಶುಚಿಗೊಳಿಸುವುದು ನಿಷಿದ್ಧ. ಈ ಐದು ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಪಂಚಾಂಗವನ್ನು ಗಮನಿಸಿ ಶುಚಿಗೊಳಿಸುವ ಕಾರ್ಯ ಕೈಗೊಳ್ಳುವುದು ಸೂಕ್ತ ಎಂದು ಆಧ್ಯಾತ್ಮಿಕ ವಿದ್ವಾಂಸರು ಸಲಹೆ ನೀಡುತ್ತಾರೆ.

ವಿಗ್ರಹಗಳು ಹೊಳೆಯುವಂತೆ ಮಾಡುವ ಸುಲಭ ವಿಧಾನಗಳು:

ಪೂಜಾ ಸಮಯದಲ್ಲಿ ನಿರಂತರವಾಗಿ ಧೂಪ, ದೀಪ ಮತ್ತು ಕರ್ಪೂರ ಬಳಸುವುದರಿಂದ ವಿಗ್ರಹಗಳು ಹಾಗೂ ಫೋಟೋಗಳು ಜಿಗುಟಾಗುವುದು ಸಹಜ. ಇವುಗಳನ್ನು ಮತ್ತೆ ಹೊಳೆಯುವಂತೆ ಮಾಡಲು ನೈಸರ್ಗಿಕ ವಿಧಾನಗಳು ಅತ್ಯುತ್ತಮ. ಹುಣಸೆಹಣ್ಣಿನ ತಿರುಳು ಅಥವಾ ಹುಣಸೆಹಣ್ಣಿಗೆ ಸ್ವಲ್ಪ ಉಪ್ಪು ಸೇರಿಸಿ ವಿಗ್ರಹಗಳನ್ನು ಉಜ್ಜುವುದರಿಂದ ಅವು ಹೊಸದರಂತೆ ಕಂಗೊಳಿಸುತ್ತವೆ. ಹಿಂದೆ ಸುಟ್ಟ ಹುಲ್ಲಿನ ಬೂದಿಯನ್ನು ಕೂಡ ಬಳಸಲಾಗುತ್ತಿತ್ತು. ದೇವರ ಫೋಟೋಗಳನ್ನು ಮೊದಲು ಒದ್ದೆ ಬಟ್ಟೆಯಿಂದ ಒರೆಸಿ, ನಂತರ ಒಣಗಿದ ಮೇಲೆ ಸ್ವಲ್ಪ ಶ್ರೀಗಂಧದ ಪುಡಿಯನ್ನು ಉಜ್ಜಿದರೆ ಅವುಗಳಿಗೆ ವಿಶೇಷ ಕಳೆ ಬರುತ್ತದೆ. ಇನ್ನು ಅರಿಶಿನ-ಕುಂಕುಮ ಉದುರಿ ಹೋಗದಂತೆ ಇರಲು, ಅದಕ್ಕೆ ಸ್ವಲ್ಪ ಹಸುವಿನ ತುಪ್ಪ ಅಥವಾ ಎಳ್ಳೆಣ್ಣೆಯನ್ನು ಬೆರೆಸಿ ಹಚ್ಚುವುದು ಒಂದು ಉತ್ತಮ ತಂತ್ರವಾಗಿದೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಪೂಜೆಗೆ ಬಳಸಿದ ಹೂವುಗಳನ್ನು ಏನು ಮಾಡಬೇಕು?

ಪೂಜೆಗೆ ಬಳಸಿದ ಹೂವುಗಳನ್ನು ಏನು ಮಾಡಬೇಕು ಎಂಬ ಗೊಂದಲ ಅನೇಕರಲ್ಲಿ ಇರುತ್ತದೆ. ಹೂವುಗಳು ಬಾಡದಿದ್ದರೂ ಸಹ, ನಿನ್ನೆಯ ಹೂವುಗಳನ್ನು ಇಂದಿನ ಪೂಜೆಗೆ ಬಳಸಬಾರದು. ಬಳಸಿದ ಹೂವುಗಳು ಮತ್ತು ಮಾವಿನ ಎಲೆಗಳನ್ನು ಎಲ್ಲೆಂದರಲ್ಲಿ ಎಸೆಯುವುದು ಅಥವಾ ಕಾಲು ಬೀಳುವ ಜಾಗದಲ್ಲಿ ಹಾಕುವುದು ತಪ್ಪು. ಇವುಗಳನ್ನು ಗಿಡಗಳ ಬುಡದಲ್ಲಿ ಅಥವಾ ಅಂಗಳದ ಒಂದು ಮೂಲೆಯಲ್ಲಿ ಮಣ್ಣಿನಡಿ ಹೂತು ಹಾಕಬೇಕು. ಇದು ಕಾಲಕ್ರಮೇಣ ಅತ್ಯುತ್ತಮ ಸಾವಯವ ಗೊಬ್ಬರವಾಗಿ ಬದಲಾಗುತ್ತದೆ, ಜೊತೆಗೆ ಪರಿಸರಕ್ಕೂ ಪೂರಕವಾಗಿರುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ದಿನವೇ 250 ಕೋಟಿ ರೂಪಾಯಿ ಕ್ಲಬ್ ಸೇರಿದ ‘ಧುರಂಧರ್ 2’ ಸಿನಿಮಾ

‘ಧುರಂಧರ್ 2’ ಸಿನಿಮಾ (Dhurandhar 2 Movie) ದಾಖಲೆಯ ಮೇಲೆ ದಾಖಲೆ ಬರೆದಿದೆ. ಮೊದಲ ದಿನವೇ ಚಿತ್ರ ಅದ್ಭುತ ಯಶಸ್ಸು ಕಂಡಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 250 ಕೋಟಿ ರೂಪಾಯಿ ಸಮೀಪಿಸಿದೆ. ಇದು ಚಿತ್ರದ ಅಬ್ಬರವನ್ನು ತೋರಿಸುತ್ತದೆ. ಸಿನಿಮಾದ ಒಟ್ಟಾರೆ ಕಲೆಕ್ಷನ್ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ. ಭಾರತ ಚಿತ್ರರಂಗದ ಇತಿಹಾಸದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಇದು ಬದಲಾಗಲಿದೆಯೇ ಎಂಬ ಕುತೂಹಲ ಮೂಡಿದೆ.

‘ಧುರಂಧರ್ 2’ ಸಿನಿಮಾದಲ್ಲಿ ರಣವೀರ್ ಸಿಂಗ್ ನಟಿಸಿದ್ದಾರೆ. ಈ ಚಿತ್ರದುದ್ದಕ್ಕೂ ಅವರೇ ಹೈಲೈಟ್ ಆಗುತ್ತಾರೆ. ಸಂಜಯ್ ದತ್ ಅರ್ಜುನ್ ರಾಮ್​​ಪಾಲ್ ಸೇರಿದಂತೆ ಅನೇಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಗಳಿಕ ವಿವರ ಸಿಕ್ಕಿದೆ.

‘ಧುರಂಧರ್ 2’ ಸಿನಿಮಾ ಪ್ರೀಮಿಯರ್ ಹಾಗೂ ಮೊದಲ ದಿನದ ಕಲೆಕ್ಷನ್ ಸೇರಿದರೆ 236 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರಲ್ಲಿ ಭಾರತದಿಂದ 172 ಕೋಟಿ ರೂಪಾಯಿ ಹಾಗೂ ವಿದೇಶದಿಂದ 64 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಭಾರತದ ನೆಟ್ ಕಲೆಕ್ಷನ್ 140 ಕೋಟಿ ರೂಪಾಯಿ ಇದೆ ಎಂದು sacnilk ವರದಿ ಮಾಡಿದೆ.

ಈ ಸಿನಿಮಾ ಮಾರ್ಚ್ 19ರಂದು ಸಿನಿಮಾ ಹಿಂದಿಯಲ್ಲಿ 103 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಅತಿ ದೊಡ್ಡ ಓಪನಿಂಗ್ ಪಡೆದ ಹಿಂದಿ ಚಿತ್ರ ಎಂಬ ಹೆಗ್ಗಳಿಕೆ ಈ ಸಿನಿಮಾಗೆ ಬಂದಿದೆ. ‘ಧುರಂಧರ್ 2’ ಪ್ರೀಮಿಯರ್ ಶೋನಿಂದ 40 ಕೋಟಿ ರೂಪಾಯಿ ಗಳಿಸುತ್ತು. ಈ ಸಿನಿಮಾ ಅನಾಯಾಸವಾಗಿ 2000 ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಲಲಕ್ಷಣ ಗೋಚರವಾಗಿದೆ. ಈ ಸಿನಿಮಾಗೆ ಬರೋಬ್ಬರಿ 34 ಸಾವಿರ ಶೋಗಳು ಸಿಕ್ಕಿದ್ದವು ಎಂಬುದು ವಿಶೇಷ.

ಇದನ್ನೂ ಓದಿ: ಅಬ್ಬಬ್ಬಾ, ಪೇಯ್ಡ್​ ಪ್ರೀಮೀಯರ್​ನಿಂದ ‘ಧುರಂಧರ್ 2’ ಸಿನಿಮಾ ಗಳಿಸಿದ್ದು ಇಷ್ಟೊಂದಾ?

‘ಧುರಂಧರ್’ ಸಿನಿಮಾ ಹಲವು ದಾಖಲೆಗಳನ್ನು ಮಾಡಿತ್ತು. ಇದು ಸೀಕ್ವಲ್​​ಗೆ ಸಹಕಾರಿ ಆಗುತ್ತಿದೆ. ಈ ಕಾರಣದಿಂದಲೇ ಚಿತ್ರದ ಕಲೆಕ್ಷನ್ ಜೋರಾಗಿದೆ. ಈ ಚಿತ್ರದ ಮೂಲಕ ನಿರ್ಮಾಪಕರು ದೊಡ್ಡ ಮಟ್ಟದಲ್ಲಿ ಲಾಭ ಮಾಡುವ ಸೂಚನೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ವಾಯು ಗುಣಮಟ್ಟ: ಮಲೆನಾಡಿನಲ್ಲಿ ಶುದ್ಧ ಗಾಳಿ! ನಿಮ್ಮ ನಗರದ AQI ಎಷ್ಟಿದೆ?

ಬೆಂಗಳೂರು, ಮಾ.20: ಬೇಸಿಗೆಯ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟದಲ್ಲಿ ಏರುಪೇರು ಕಂಡುಬರುತ್ತಿದೆ. ವಾಹನ ಸಂಚಾರ ಮತ್ತು ಧೂಳಿನ ಪ್ರಮಾಣ ಹೆಚ್ಚಾಗಿರುವುದರಿಂದ ರಾಜಧಾನಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ ‘ಸಾಧಾರಣ’ ಮಟ್ಟಕ್ಕೆ ಕುಸಿದಿದೆ. ಸಿಲ್ಕ್ ಬೋರ್ಡ್, ಪೀಣ್ಯ ಮತ್ತು ವೈಟ್‌ಫೀಲ್ಡ್ ಭಾಗಗಳಲ್ಲಿ ಮಾಲಿನ್ಯದ ಮಟ್ಟ ಕೊಂಚ ಹೆಚ್ಚಾಗಿದೆ. ಉಸಿರಾಟದ ತೊಂದರೆ ಇರುವವರು ಹೊರಬರುವಾಗ ಮಾಸ್ಕ್ ಧರಿಸುವುದು ಸೂಕ್ತ.

ಮೈಸೂರಿನಲ್ಲಿ ಇಂದು AQI ಮಟ್ಟ 55 – 75 ಇದೆ. ಇದು ಉತ್ತಮ ಗಾಳಿಯ ಮಟ್ಟವಾಗಿದೆ. ಸಾಂಸ್ಕೃತಿಕ ನಗರಿಯ ಗಾಳಿಯ ಗುಣಮಟ್ಟ ತೃಪ್ತಿದಾಯಕವಾಗಿದೆ. ಹುಬ್ಬಳ್ಳಿ-ಧಾರವಾಡ ಗಾಳಿಯ ಮಟ್ಟ 85 – 105 ಇದೆ. ರಸ್ತೆ ಕಾಮಗಾರಿ ಮತ್ತು ಒಣ ಹವಾಮಾನದಿಂದಾಗಿ ಧೂಳಿನ ಕಣಗಳ ಪ್ರಮಾಣ ಹೆಚ್ಚಿದೆ. ಮಂಗಳೂರಿನಲ್ಲಿ ಇಂದು ಗಾಳಿಯ ಮಟ್ಟ 45 – 60 ಉತ್ತಮವಾಗಿದೆ. ಸಮುದ್ರ ತೀರದ ಗಾಳಿಯು ಶುದ್ಧವಾಗಿದ್ದು, ಆರೋಗ್ಯಕ್ಕೆ ಪೂರಕವಾಗಿದೆ.

ಶಿವಮೊಗ್ಗ ಮತ್ತು ಕೊಡಗಿನಲ್ಲಿ ಇಂದು ಗಾಳಿಯ ಮಟ್ಟ 30 – 50 ಉತ್ತಮವಾಗಿದೆ. ಮಲೆನಾಡು ಭಾಗದಲ್ಲಿ ವಾಯು ಮಾಲಿನ್ಯ ಅತ್ಯಂತ ಕನಿಷ್ಠ ಮಟ್ಟದಲ್ಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಾಯು ಗುಣಮಟ್ಟ ಅತ್ಯಂತ ಉತ್ತಮವಾಗಿದ್ದು, ಆರೋಗ್ಯಕ್ಕೆ ಪೂರಕವಾಗಿದೆ.AQI 100 ದಾಟಿದ ನಗರಗಳಲ್ಲಿ ಹಿರಿಯ ನಾಗರಿಕರು ಮತ್ತು ಮಕ್ಕಳು ಬೆಳಗಿನ ಜಾವ ಹೊರಾಂಗಣ ವ್ಯಾಯಾಮ ಮಾಡುವಾಗ ಎಚ್ಚರಿಕೆ ವಹಿಸುವುದು ಉತ್ತಮ.

ಇದನ್ನೂ ಓದಿ: ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ಹೆಚ್ಚಿದ ಸೆಕೆ; ಉತ್ತರ ಕರ್ನಾಟಕದಲ್ಲಿ ಸೂರ್ಯನ ಪ್ರತಾಪ! ಮಳೆಯ ಮುನ್ಸೂಚನೆ ಇದೆಯೇ?

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version