Headlines

ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಕೊಂದ ಪತಿ, ಶಿಶು ಕೂಡಾ ಉಸಿರುಗಟ್ಟಿ ಸಾವು – Kannada News | Woman Killed Following Domestic Dispute in MP’s Khargone

ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ…

Read More

Vastu Tips: ವಾಸ್ತು ಪ್ರಕಾರ ಆಫೀಸಿನಲ್ಲಿ ಯಾವ ದೇವರ ಫೋಟೋ ಇಡುವುದು ಶುಭ ಗೊತ್ತಾ? – Kannada News | Vastu Tips for Deity Photos: Maximize Prosperity at Home and Office

ವಾಸ್ತು ಶಾಸ್ತ್ರದ ಪ್ರಕಾರ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಮನೆ ಮತ್ತು ಕಚೇರಿಯಲ್ಲಿ ಇಡುವುದು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಇದು ಒಂದು ರೀತಿಯ ಸಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಆದರೆ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಇಡುವಾಗ ಯಾವಾಗಲೂ ಜಾಗರೂಕರಾಗಿರಬೇಕು. ಯಾಕೆಂದರೆ ಈ ಫೋಟೋಗಳನ್ನು ಸರಿಯಾದ ಸ್ಥಳದಲ್ಲಿ ಮತ್ತು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಶುಭಕ್ಕಿಂತ ಅಶುಭವೇ ಹೆಚ್ಚಾಹಬಹುದು. ಕುಬೇರನ ಫೋಟೋ ಇದ್ದರೆ ಹಣದ ಕೊರತೆ ಇರುವುದಿಲ್ಲ: ಉದಾಹರಣೆಗೆ, ನೀವು ಕುಬೇರನ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಇಟ್ಟರೆ, ನಿಮ್ಮ ಮನೆಯಲ್ಲಿ…

Read More

ಎಲ್ಲರ ಚಿತ್ತ ಲಕ್ಕುಂಡಿಯತ್ತ: ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಆರಂಭ – Kannada News | Historic Lakkundi Unveils Secrets: Excavation at Kote Veerabhadreshwara Temple

ಗದಗ, ಜ.16: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಇಂದಿನಿಂದ ಪ್ರಾರಂಭಗೊಂಡಿದೆ. ಸಿದ್ಧರಕೊಳ್ಳ ಎಂಬ ಸ್ಥಳದಲ್ಲಿ ಕೇವಲ 10 ಮೀಟರ್‌ ವ್ಯಾಪ್ತಿಯಲ್ಲಿ ಉತ್ಖನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಕುಂಡಿಯು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರು ಸೇರಿದಂತೆ ಅನೇಕ ರಾಜ ಮಹಾರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಬಾದಾಮಿಗಿಂತಲೂ ಹೆಚ್ಚು ಐತಿಹಾಸಿಕ ಮಹತ್ವವನ್ನು ಹೊಂದಿದೆ ಎಂದು ಶಾಸನಗಳಲ್ಲಿ ಉಲ್ಲೇಖವಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿದರೆ ಅಪಾರ ಪ್ರಮಾಣದ ಇತಿಹಾಸ ಬೆಳಕಿಗೆ ಬರಲಿದೆ ಎಂಬ ನಂಬಿಕೆ…

Read More

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಕಳ್ಳತನ ಮಾಡಿದ್ದು ಅವನಲ್ಲ ಅವಳು! – Kannada News | Bengaluru Burglary Case: Sampigehalli Police Nab Women Thieves in Boy Guise

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಬೆಂಗಳೂರು, ಜನವರಿ 16: ಅವರು ನೋಡಲು ಹುಡುಗರಂತೆ ಕಾಣುತ್ತಿದ್ದರು. ಶರ್ಟ್​, ಪ್ಯಾಂಟ್ ಹಾಕಿ, ಸ್ಟೈಲಿಷ್ ಆಗಿ ಓಡಾಡಿಕೊಂಡು ಹಾಡುಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದರು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಾಗಲೇ ಗೊತ್ತಾಗಿದ್ದು ಅವರು ಹುಡುಗಿಯರು ಎಂದು! ಈ ರೀತಿ ವೇಷ ಬದಲಿಸಿ ನಗರದ ಹೊರವಲಯದ ಸಂಪಿಗೆಹಳ್ಳಿಯಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಯುವತಿಯರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಯಾರೂ ಇಲ್ಲದ ಮನೆಯೇ ಟಾರ್ಗೆಟ್ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು–ನೀಲು ಎಂಬ…

Read More

ವಿಜಯಪುರ: ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಚಡಚಣದಲ್ಲಿ ಪತ್ತೆ, ಬಯಲಾಯ್ತು ರಹಸ್ಯ! – Kannada News | GPS Tracked Vulture Found in Vijayapura Farm Reveals Maharashtra Forest Department Research

ವಿಜಯಪುರ, ಜನವರಿ 16: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ಉಪಕರಣಗಳನ್ನು ಹೊಂದಿದ್ದ ರಣಹದ್ದು ಪತ್ತೆಯಾಗಿದ್ದು, ಈ ಘಟನೆ ಹಲವು ಅನುಮಾನಗಳಿಗೆ ತೆರೆ ಎಳೆದಿದೆ. ತೋಟದಲ್ಲಿ ಅಸಹಜ ಸ್ಥಿತಿಯಲ್ಲಿ ಕುಳಿತಿದ್ದ ದೊಡ್ಡ ಪಕ್ಷಿಯನ್ನು ಕಂಡ ಸ್ಥಳೀಯರು ತಕ್ಷಣ 112 ಗೆ ಕರೆ ಮಾಡಿದರು. ಸ್ಥಳಕ್ಕೆ ಧಾವಿಸಿದ 112 ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದರು. ರಣಹದ್ದಿನ ಕಾಲಿಗೆ ಗುರುತಿನ ಸಂಖ್ಯೆಯ ಟ್ಯಾಗ್ ಅಳವಡಿಸಿರುವುದು…

Read More

70 ಸಾವಿರ ರೂ. ಕಾರನ್ನು ಮಾಡಿಫೈ ಮಾಡಿದ ವಿದ್ಯಾರ್ಥಿಗೆ 1 ಲಕ್ಷ ರೂ. ದಂಡ: ಫೈನ್ ಹಾಕಬೇಡಿ ಎಂದು ರಾಜಕಾರಣಿಗಳ ಒತ್ತಡ – Kannada News | Illegal Car Mod: Bangalore Student Pays 1.11 Lakh Fine for Loud Silencer

ಬೆಂಗಳೂರು, ಜ.16: ಬೆಂಗಳೂರಿನಲ್ಲಿ ಸಂಚಾರ ನಿಯಮ (Bangalore traffic fine) ಉಲ್ಲಂಘನೆ ಮಾಡಿ ದಂಡ ಹಾಕಿಸಿಕೊಳ್ಳುವುದು ಒಂದು ಕಡೆ ಹೆಚ್ಚಾಗುತ್ತಿದ್ದಾರೆ. ಮತ್ತೊಂದು ಕಡೆ ವಾಹನ ಮಾಡಿಫೈ ಮಾಡಿ ದಂಡ ಹಾಕಿಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ 70 ಸಾವಿರ ಕಾರಿಗೆ 1.11 ಲಕ್ಷ ರೂ. ದಂಡ ಹಾಕಿಸಿಕೊಂಡಿದ್ದಾನೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ಅಷ್ಟಕ್ಕೂ ಈ ವಿದ್ಯಾರ್ಥಿಗೆ ಅಷ್ಟೊಂದು ದಂಡ ಯಾಕೆ ಹಾಕಿದ್ದಾರೆ ಗೊತ್ತಾ? ಈ ಯುವಕ ತನ್ನ ಕಾರಿನ ಸೈಲೆನ್ಸರ್​​ನ್ನು ಅಕ್ರಮವಾಗಿ ಮಾಡಿಫೈ…

Read More

Peacock Feather Vastu: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು! – Kannada News | Peacock Feather Vastu: Attract Wealth and Positive Energy with Kuber’s Blessings

ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರಗಳ ಪ್ರಕಾರ ನವಿಲು ಗರಿ ಸಕಾರಾತ್ಮಕ ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸುವ ಶಕ್ತಿಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ನಿಮ್ಮ ಮನೆಯಲ್ಲಿ ಸರಿಯಾದ ಸ್ಥಳಗಳಲ್ಲಿ ನವಿಲು ಗರಿಗಳನ್ನು ಇರಿಸುವ ಮೂಲಕ, ನೀವು ಆರ್ಥಿಕ ಸಮಸ್ಯೆಗಳನ್ನು ನಿವಾರಿಸಬಹುದು. ಕುಬೇರನ ಆಶೀರ್ವಾದದ ಜೊತೆಗೆ ಆರ್ಥಿಕ ಸಮಸ್ಯೆಗಳನ್ನು ನಿವಾರಿಸಲು ಮನೆಯ ಈ ಜಾಗಗಗಳಲ್ಲಿ ನವಿಲು ಗರಿಯನ್ನು ಇರಿಸಿ. ಪೂಜಾ ಕೊಠಡಿ: ಮನೆಯ ಪೂಜಾ ಮಂಟಪದಲ್ಲಿ 3 ಅಥವಾ 7 ನವಿಲು ಗರಿಗಳನ್ನು ಇರಿಸಿ. ಇದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು…

Read More

‘ಗಿಲ್ಲಿ ಮೇಲಿನ ಅಭಿಪ್ರಾಯ ಬದಲಾಗಿದೆ’; ಅಶ್ವಿನಿ ಗೌಡ ಪ್ರೀತಿಯ ಮಾತು – Kannada News | Gilli Ashwini Gowda Fight: Bigg Boss Journey From Conflicts to Understanding and Forgiveness

ಗಿಲ್ಲಿ ನಟ (Gilli Nata) ಹಾಗೂ ಅಶ್ವಿನಿ ಗೌಡ ಮಧ್ಯೆ ಆದ ಕಿತ್ತಾಟಗಳು ಒಂದೆರಡಲ್ಲ. ಇಬ್ಬರೂ ಸಾಕಷ್ಟು ಬಾರಿ ಕಿತ್ತಾಡಿಕೊಂಡಿದ್ದು ಇದೆ. ಇವರ ಮಾತುಗಳು ಸಾಕಷ್ಟು ಬಾರಿ ಮಿತಿಮೀರಿದ್ದವು. ಈ ಬಗ್ಗೆ ಇಬ್ಬರಿಗೂ ಬೇಸರ ಇತ್ತು. ಇದನ್ನು ಓಪನ್ ಆಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಕೊಟ್ಟ ಚಟುವಟಿಕೆ ವೇಳೆ ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದಾರೆ. ಈ ವೇಳೆ ಕ್ಷಮೆ ಕೂಡ ಕೇಳಿದ್ದಾರೆ. ಈ ಪ್ರೀತಿಯ ಮಾತುಗಳು ವೀಕ್ಷಕರಿಗೆ ಇಷ್ಟ ಆಗಿದೆ. ಬಿಗ್ ಬಾಸ್ ಚಟುವಟಿಕೆ ಒಂದನ್ನು ನೀಡಿದ್ದರು….

Read More

Video: ಪುಟ್ಟ ಬಾಲಕ ಸಿಎಂ ಯೋಗಿ ಬಳಿ ಇಟ್ಟ ಬೇಡಿಕೆ ಏನು ಗೊತ್ತೇ? – Kannada News | A Simple Wish Steals the Show During CM Yogi’s Interaction With a Child

ಲಕ್ನೋ, ಜನವರಿ 16: ಪುಟ್ಟ ಬಾಲಕ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಳಿ ಹೋಗಿ ಕಿವಿಯಲ್ಲಿ ಪಿಸುಗುಟ್ಟಿದ್ದಾನೆ. ಏನೋ ದೊಡ್ಡ ಬೇಡಿಕೆಯಲ್ಲ ಕೇಳಿದ್ದು ಒಂದು ಪ್ಯಾಕೆಟ್ ಚಿಪ್ಸ್​. ಆ ವಿಡಿಯೋದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರ್ಚಿಯ ಮೇಲೆ ಕುಳಿತಿದ್ದಾರೆ. ಅಷ್ಟರಲ್ಲಿ ಒಂದು ಪುಟ್ಟ ಮಗು ಅವರ ಬಳಿಗೆ ಬರುತ್ತಾನೆ. ಯೋಗಿ ಮಗುವನ್ನು ನೋಡಿ ನಗುತ್ತಾ ಮಾತನಾಡುತ್ತಾನೆ. ಏನು ಬೇಕು ನಿನಗೆ ಎಂದು ಕೇಳುತ್ತಾರೆ. ಬಾಲಕ ಸಿಎಂ ಕಿವಿಯಲ್ಲಿ ನನಗೆ ಚಿಪ್ಸ್ ಬೇಕು ಎಂದು…

Read More

ಬಿಗ್​​ಬಾಸ್ ಮನೆಗೆ ಬಂದ ‘ಗಿಚ್ಚಿ ಗಿಲಿ ಗಿಲಿ’ ತಂಡ: ನಗುವೋ ನಗು – Kannada News | Bigg Boss Kannada 12: Gichi Gili Gili team arrived as guest

ಬಿಗ್​​ಬಾಸ್ (Bigg Boss) ಫಿನಾಲೆ ವಾರ ಚಾಲ್ತಿಯಲ್ಲಿದೆ. ಹಿಂದೆಲ್ಲ ಜನರಿಂದ ತುಂಬಿಕೊಂಡಿರುತ್ತಿದ್ದ ಮನೆಯಲ್ಲಿ ಈಗ ಉಳಿದಿರುವುದು ಕೇವಲ ಆರು ಜನ ಮಾತ್ರ. ಮನೆಯೆಲ್ಲ ಖಾಲಿ-ಖಾಲಿ ಎನಿಸುತ್ತಿದೆ. ಆದರೆ ಅತಿಥಿಗಳು ಬಂದು ಮನೆಯನ್ನು ತುಂಬಿಸುತ್ತಿದ್ದಾರೆ. ಇಂದಿನ ಎಪಿಸೋಡ್​​ನಲ್ಲಿ ಭಾರಿ ಸಂಖ್ಯೆಯ ಅತಿಥಿಗಳೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ‘ಗಿಚ್ಚಿ ಗಿಲಿ ಗಿಲಿ’ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದು, ‘ಜೂನಿಯರ್ ಗಿಚ್ಚಿ ಗಿಲಿ ಗಿಲಿ’ ಬಗ್ಗೆ ಸಹ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಸ್ಪರ್ಧಿಗಳು ಸಹ ಹಾಸ್ಯ ಮಾಡಿ ನಕ್ಕು-ನಲಿದಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ…

Read More