ಮೀರತ್, ಜನವರಿ 16: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್ನ ಕಂಕರ್ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ ಅಲ್ಲದೆ, ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹುಟ್ಟುಹಾಕಿದೆ. ಸಿಟಿ ಗರ್ಲ್ ರೆಸ್ಟೋರೆಂಟ್ ಕಡೆಗೆ ಹೋಗಿ ಆವರಣದ ಹೊರಗೆ ನಿಂತಿದ್ದ ರೆಸ್ಟೋರೆಂಟ್ ಮಾಲೀಕ ಧೀರಜ್ ರಥಿ ಮೇಲೆ ದಾಳಿ ಮಾಡಿದೆ. ಇದು ರೆಸ್ಟೋರೆಂಟ್ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ, ಮತ್ತು ಚಿಕಿತ್ಸೆಯ ನಂತರ ಅವರು ಮನೆಗೆ ಮರಳಿದ್ದಾರೆ.
ರಾಯಚೂರು, ಜನವರಿ 16: ತಿಂಥಣಿ ಕಾಗಿನೆಲೆಪೀಠದ ಸಿದ್ದರಾಮಾನಂದಪುರಿ ಶ್ರೀಗಳು ಬ್ರಹ್ಮೈಕ್ಯರಾದ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಶ್ರೀಗಳಿಗೆ ಎರಡು ಕಿಡ್ನಿ ವಿಫಲವಾದಾಗ ಕಣ್ಣೀರಿಟ್ಟಿದ್ದ ತಾಯಿ ಜಯಮ್ಮ, ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ತಮ್ಮ ಕಿಡ್ನಿಯನ್ನೇ ದಾನ ಮಾಡಿದ್ದರು ಎಂಬ ವಿಷಯ ರಿವೀಲ್ ಆಗಿದೆ. ಈ ಬಗ್ಗೆ ಟಿವಿ9 ಜೊತೆ ಸ್ವತಃ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಜಯಮ್ಮ ಅವರ ಎಡಭಾಗದ ಕಿಡ್ನಿಯನ್ನು, ಶ್ರೀಗಳ ಬಲಭಾಗಕ್ಕೆ ಕಿಡ್ನಿ ಕಸಿ ಮಾಡಲಾಗಿತ್ತು. 7 ವರ್ಷದ ಹಿಂದೆ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು ಎಂಬ ವಿಷಯ ಪ್ರಸ್ತಾಪಿಸಿ ಜಯಮ್ಮ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇನ್ನು ತಮ್ಮ ಪೂರ್ವಾಶ್ರಮದ ತಾಯಿ ಕಿಡ್ನಿ ಕೊಡುತ್ತೇನೆ ಎಂದಿದ್ದಕ್ಕೆ ಶ್ರೀಗಳು ಬೇಡ ಎಂದಿದ್ದರು. ಬಳಿಕ ಸಿದ್ದರಾಮಯ್ಯನವರಿಂದ ಮನವೊಲಿಕೆ ಬಳಿಕ ಶ್ರೀಗಳು ಒಪ್ಪಿದ್ದರು ಎನ್ನಲಾಗಿದೆ.
ಹುಬ್ಬಳ್ಳಿ, ಜನವರಿ 16: ಬೀದಿ ನಾಯಿ (Stray Dog) ವಿಚಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲೂ ವಿಚಾರಣೆಗೆ ಬಂದಿರುವುದು ನಮಗೆಲ್ಲ ಗೊತ್ತೇ ಇದೆ. ಬೀದಿ ನಾಯಿ ಕಾಟದ ವಿಚಾರ ಸದಾ ಚರ್ಚೆಗೆ ಒಳಗಾಗುತ್ತಿದೆ. ಆದರೆ, ಅಚ್ಚರಿಯೆಂಬಂತೆ ಹುಬ್ಬಳ್ಳಿಯಲ್ಲಿ ಸಾಕು ನಾಯಿ (Pet Dog) ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹುಬ್ಬಳ್ಳಿ (Hubballi) ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಅಲ್ಲದೆ, ಸಾಕು ನಾಯಿ ಉಪಟಳ ವಿಚಾರ ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ ಆತಂಕ ಮೂಡಿದೆ.
ಗುರುದೇವ ನಗರ ನಿವಾಸಿ ಪರಶುರಾಮ ಎಂಬವರು ಸಾಕು ನಾಯಿ ವಿಚಾರವಾಗಿ ವಿಲ್ಸನ್ ಹಾಗೂ ವೈಷ್ಣವಿ ಎಂಬ ದಂಪತಿ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಅವರ ದೂರಿನ ಪ್ರಕಾರ, ವಿಲ್ಸನ್ ಹಾಗೂ ವೈಷ್ಣವಿ ದಂಪತಿ ಸಾಕಿರುವ ರಾಟ್ ವೀಲರ್ ನಾಯಿ ಮದನ ಎಂಬ ಬಾಲಕನಿಗೆ ಕಚ್ಚಿದೆ. ಈ ವೇಳೆ ಬಾಲಕನನ್ನು ರಕ್ಷಿಸಲು ಮಧ್ಯ ಪ್ರವೇಶಿಸಿದ ಪರಶುರಾಮ ಮೇಲೆಯೇ ಆರೋಪಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನಮ್ಮ ನಾಯಿಗೆ ಹೊಡೆದಿದ್ದೀರಿ’ ಎಂದು ಆರೋಪಿಸಿ ಪರಶುರಾಮ ಮೇಲೆ ವಿಲ್ಸನ್ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ವಿಲ್ಸನ್ ಮನೆಗೆ ಬಂದು ಹಲ್ಲೆ ಮಾಡಿ ಹೋಗಿದ್ದಾರೆ ಎಂಬ ಆರೋಪವೂ ಮಾಡಲಾಗಿದೆ. ಈ ಘಟನೆ ಜನವರಿ 14ರಂದು ನಡೆದಿದ್ದು, ಅದೇ ದಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಕು ನಾಯಿಗಳ ಅಟ್ಟಹಾಸದಿಂದಾಗಿ ಗುರುದೇವ ನಗರ ನಿವಾಸಿಗಳು ಕಂಗಾಲಾಗಿದ್ದು, ಈ ಹಿಂದೆ ಕೂಡ ಸಾಕು ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಶುರಾಮ ಆಗ್ರಹಿಸಿದ್ದಾರೆ.
ದೂರು ಸ್ವೀಕರಿಸಿರುವ ಅಶೋಕ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ದಾಖಲೆಗಳು ಹಾಗೂ ವೈದ್ಯಕೀಯ ವರದಿಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದಾರೆ. ಸಾಕು ನಾಯಿಗಳ ನಿಯಂತ್ರಣ ಮತ್ತು ಸಾರ್ವಜನಿಕರ ಸುರಕ್ಷತೆ ಕುರಿತು ಹುಬ್ಬಳ್ಳಿಯಲ್ಲಿ ಮತ್ತೆ ಚರ್ಚೆ ಶುರುವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್ನಲ್ಲಿ ಈ ಮಲ್ಟಿಪ್ಲೆಕ್ಸ್ ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್ನ ಝಲಕ್ ಇಲ್ಲಿದೆ.
ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು ಹೊಂದಿದೆ.
‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ ನಮ್ಮನ್ನು ಕಾಪಾಡುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳುವ ಪ್ರಯತ್ನವನ್ನು ತಂಡ ಮಾಡಿದೆ. ಎಲ್ಲಿಯೂ ಆಡಂಬರವಿಲ್ಲದೆ, ದೈವಾರಾಧನೆ ತೋರಿಸದೇ ಸಿನಿಮಾ ತಯಾರಾಗಿದೆ. ತುಳುನಾಡಿನ ನಂಬಿಕೆಗಳ ಬಗ್ಗೆಯೂ ಚಿತ್ರದಲ್ಲಿ ಹೇಳಲಾಗಿತ್ತಿದೆ. ಈ ಚಿತ್ರದಲ್ಲಿ ಪ್ರೇಮಕಥೆ, ಸಸ್ಪೆನ್ಸ್ ವಿಷಯಗಳು ಕೂಡ ಇವೆ. ಎಲ್ಲವನ್ನು ಹದವಾಗಿ ಬೆರೆಸಿ, ಸಿನಿಮಾ ಸಿದ್ಧಪಡಿಸಲಾಗಿದೆ ಎಂಬುದು ತಂಡದ ಮಾತು.
‘ಕಟ್ಟೆಮಾರ್’ ಚಿತ್ರವನ್ನು ರಕ್ಷಿತ್ ಗಾಣಿಗ ಹಾಗೂ ಸಚಿನ್ ಕಟ್ಲ ನಿರ್ದೇಶನ ಮಾಡಿದ್ದಾರೆ. ಜನವರಿ 23ರಂದು ಈ ಚಿತ್ರ ತುಳುವಿನಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಕನ್ನಡದಲ್ಲಿ ಡಬ್ ಆಗಿದ್ದು, ಮುಂದಿನ ದಿನಗಳಲ್ಲಿ ಬಿಡುಗಡೆ ಕಾಣಲಿದೆ. ಬಿಡುಗಡೆ ಕಂಡಿರುವ ಟ್ರೇಲರ್ ಗಮನ ಸೆಳೆದಿದೆ.
‘ಸು ಫ್ರಮ್ ಸೋ’ ಬಳಿಕ ಜೆಪಿ ತುಮಿನಾಡು ಜನಪ್ರಿಯತೆ ಹೆಚ್ಚಿದೆ. ಅವರು ಒಂದು ಕಥೆ ಒಪ್ಪಿಕೊಳ್ಳುತ್ತಾರೆ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಈಗ ‘ಕಟ್ಟೆಮಾರ್’ ಸಿನಿಮಾ ಮೂಲಕ ಅವರು ಮತ್ತೆ ಪ್ರೇಕ್ಷಕರ ಎದುರು ಬರಲು ಸಿದ್ಧರಾಗಿದ್ದಾರೆ. ಆದಷ್ಟು ಬೇಗ ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗಲಿ ಎಂಬುದು ಅಭಿಮಾನಿಗಳ ಕೋರಿಕೆ.
ಧನುಶ್ (Dhanush) ದಕ್ಷಿಣ ಭಾರತದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹಿಂದಿಯಲ್ಲಿಯೂ ನಟಿಸಿ ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಧನುಶ್ಗೆ ದೊಡ್ಡ ಅಭಿಮಾನಿ ವರ್ಗವಿದೆ. ಕೇವಲ ಕಮರ್ಶಿಯಲ್, ಮಾಸ್ ಮಸಾಲ ಸಿನಿಮಾಗಳನ್ನು ಮಾಡದೆ ಕತೆ ಆಧರಿತ, ನಟನೆಗೆ ಅವಕಾಶ ಇರುವ ಸಿನಿಮಾಗಳಲ್ಲೇ ಹೆಚ್ಚು ನಟಿಸುತ್ತಾರೆ ಧನುಶ್. ನಟ ಧನುಶ್ ಅವರ ವೃತ್ತಿ ಜೀವನ ಅದ್ಭುತವಾಗಿ ಸಾಗುತ್ತಿದೆ ಆದರೆ ಅವರ ಖಾಸಗಿ ಜೀವನದಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಸ್ಟಾರ್ ನಟ ರಜನೀಕಾಂತ್ ಪುತ್ರಿಯ ವಿವಾಹವಾಗಿದ್ದ ಧನುಶ್, ಬರೋಬ್ಬರಿ 20 ವರ್ಷಗಳ ಬಳಿಕ ವಿಚ್ಛೇದನ ಪಡೆದರು. ಇದೀಗ ಸ್ಟಾರ್ ನಟಿಯೊಬ್ಬರ ಮದುವೆ ಆಗಲು ಧನುಶ್ ಮುಂದಾಗಿದ್ದಾರೆ.
ಧನುಶ್ ಅವರು ರಜನೀಕಾಂತ್ ಪುತ್ರಿ ಐಶ್ವರ್ಯ ಜೊತೆಗೆ 2004 ರಲ್ಲಿ ವಿವಾಹವಾದರು. ಇಬ್ಬರಿಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ತಾವು ಬೇರೆ ಆಗುತ್ತಿರುವುದಾಗಿ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಘೋಷಿಸಿದರು. 2024ರಲ್ಲಿ ಇವರಿಗೆ ನ್ಯಾಯಾಲಯವು ವಿಚ್ಛೇದನ ನೀಡಿತು. ಇದೀಗ ಧನುಶ್, ಸ್ಟಾರ್ ನಟಿಯೊಬ್ಬರನ್ನು ವಿವಾಹ ಆಗುವ ಯೋಜನೆ ಹಾಕಿಕೊಂಡಿದ್ದಾರಂತೆ.
ಧನುಶ್ ಹಾಗೂ ನಟಿ ಮೃಣಾಲ್ ಠಾಕೂರ್ ಅವರುಗಳು ಪರಸ್ಪರ ಪ್ರೀತಿಯಲ್ಲಿದ್ದು, ಇಬ್ಬರೂ ಸಹ ಶೀಘ್ರವೇ ಮದುವೆ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೃಣಾಲ್ ಠಾಕೂರ್ ಮತ್ತು ಧನುಶ್ ಕಳೆದ ಎರಡು ವರ್ಷಗಳಿಂದ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಮೃಣಾಲ್ ನಟಿಸಿದ್ದ ‘ಸನ್ ಆಫ್ ಸರ್ದಾರ್ 2’ ಪ್ರೀಮಿಯರ್ ಶೋನಲ್ಲಿ ಧನುಶ್ ಭಾಗವಹಿಸಿದ್ದರು. ಧನುಶ್ ನಟಿಸಿದ್ದ ಹಿಂದಿ ಸಿನಿಮಾ ‘ತೇರೆ ಇಷ್ಕ್ ಮೇ’ ರ್ಯಾಪ್ ಅಪ್ ಪಾರ್ಟಿಯಲ್ಲಿ ಮೃಣಾಲ್ ಭಾಗವಹಿಸಿದ್ದರು. ಆಗಲೇ ಈ ಇಬ್ಬರ ಪ್ರೀತಿಯ ಬಗ್ಗೆ ಪುಕಾರುಗಳು ಹರಿದಾಡಿದ್ದವು.
ಇದೀಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ಮೃಣಾಲ್ ಠಾಕೂರ್ ಮತ್ತು ಧನುಶ್ ಮದುವೆ ಆಗಲಿದ್ದಾರಂತೆ. ಈ ಇಬ್ಬರ ವಿವಾಹ ಫೆಬ್ರವರಿ 14 ರಂದು ನಡೆಯಲಿದೆ. ಈ ಮದುವೆ ಸಮಾರಂಭದಲ್ಲಿ ಎರಡೂ ಕುಟುಂಬದ ಅತ್ಯಾಪ್ತರು ಮಾತ್ರ ಭಾಗಿ ಆಗಲಿದ್ದಾರೆ. ಧನುಶ್ ಅವರಿಗೆ ಇದು ಎರಡನೇ ಮದುವೆ ಆದರೆ ಮೃಣಾಲ್ ಅವರಿಗೆ ಇದು ಮೊದಲ ಮದುವೆ ಆಗಲಿದೆ. ಮೃಣಾಲ್ ಠಾಕೂರ್ ಅವರಿಗೆ ಈಗ 33 ವರ್ಷ ವಯಸ್ಸು, ಧನುಶ್ ಅವರಿಗೆ 42 ವರ್ಷ. ಇಬ್ಬರೂ ಸಹ ಯಶಸ್ವಿ ನಟ ಮತ್ತು ನಟಿಯರು. ಈ ಇಬ್ಬರ ದಾಂಪತ್ಯ ಜೀವನ ಹೇಗೆ ಸಾಗುತ್ತದೆ ಕಾದು ನೋಡಬೇಕಿದೆ.
ಬೆಂಗಳೂರು, ಜನವರಿ 16: ಬೆಂಗಳೂರು–ಮುಂಬೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಎರಡು ಮಹಾನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸುವ ಉದ್ದೇಶದಿಂದ ದುರಂತೋ ಎಕ್ಸ್ಪ್ರೆಸ್ ರೈಲು ಆರಂಭಿಸುವ ಕುರಿತು ರೈಲ್ವೆ ಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ರೈಲು ಸೇವೆ ಆರಂಭವಾದರೆ, ಬೆಂಗಳೂರು–ಮುಂಬೈ ಪ್ರಯಾಣದ ಸಮಯ ಸುಮಾರು 18 ಗಂಟೆಗಳವರೆಗೆ ಇಳಿಯುವ ಸಾಧ್ಯತೆ ಇದೆ.
ಏನೆಲ್ಲಾ ಸೌಲಭ್ಯ ನೀಡಲಿದೆ ದುರಂತೋ ಎಕ್ಸ್ಪ್ರೆಸ್?
ಇತ್ತೀಚೆಗೆ ಬೆಂಗಳೂರು ಎಸ್ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ (LTT) ನಡುವೆ ವಾರಕ್ಕೆ ಎರಡು ಬಾರಿ ಸಂಚರಿಸುವ ಹೊಸ ಸೂಪರ್ಫಾಸ್ಟ್ ರೈಲು ಸೇವೆಗೆ ಅನುಮೋದನೆ ದೊರೆತಿತ್ತು. 1,209 ಕಿಲೋಮೀಟರ್ ದೂರವನ್ನು ಈ ರೈಲು ಕ್ರಮಿಸಿದರೂ, ಸುಮಾರು 24 ಗಂಟೆಗಳ ಪ್ರಯಾಣ ಸಮಯ ಹೊಂದಿರುವುದರಿಂದ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಡಿಸೆಂಬರ್ 9 ರಂದು ಆರಂಭವಾದ ಈ ರೈಲು ಹುಬ್ಬಳ್ಳಿ, ಪುಣೆ ಸೇರಿದಂತೆ 14 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.
ಈ ಹಿನ್ನೆಲೆ, ಕೆಎಸ್ಆರ್ ಬೆಂಗಳೂರು ಮತ್ತು ಸಿಎಸ್ಎಂಟಿ ಮುಂಬೈ ನಡುವೆ ದುರಂತೋ ಎಕ್ಸ್ಪ್ರೆಸ್ ಆರಂಭಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಮೀರಜ್ ಹಾಗೂ ಪುಣೆ ಮಾರ್ಗವಾಗಿ ಈ ರೈಲು ಸಂಚರಿಸುವ ಸಾಧ್ಯತೆ ಇದೆ. ನಿಲ್ದಾಣದ ಸಂಖ್ಯೆ ಕಡಿಮೆಯಿದ್ದು, ವೇಗದ ಸಂಚಾರ ಹಾಗೂ ಟಿಕೆಟ್ ಜೊತೆ ಊಟದ ಸೌಲಭ್ಯವೂ ಇರುವ ದುರಂತೋ ರೈಲುಗಳು ದೂರ ಪ್ರಯಾಣಕ್ಕೆ ಹೇಳಿ ಮಾಡಿಸಿದ್ದಾಗಿದೆ.
ತಾತ್ಕಾಲಿಕ ವೇಳಾಪಟ್ಟಿ
ರೈಲು ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.30ಕ್ಕೆ ಮುಂಬೈ ತಲುಪಬಹುದು. 3ಎಸಿ ಟಿಕೆಟ್ ದರ ಸುಮಾರು 2,500 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ರೈಲ್ವೆ ಅಧಿಕಾರಿಗಳು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.
ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆಗೆ ಕೆಲವೇ ದಿನ ಬಾಕಿ ಉಳಿದಿದೆ. ಗಿಲ್ಲಿ ನಟ ಈ ಬಾರಿಯ ಗೆಲ್ಲು ಸ್ಪರ್ಧಿ ಎನಿಸಿಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಗಿಲ್ಲಿಗೆ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ ಆಗಿದೆ. ಗಿಲ್ಲಿಯ ಅಭಿಮಾನಿಗಳು ಕೆಲವರು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬಾರಿಯ ವಿನ್ನರ್ ಆಗುವುದು ಗ್ಯಾರೆಂಟಿ. ಮಾತ್ರವೇ ಅಲ್ಲ ಗಿಲ್ಲಿ ಹೊರಗೆ ಬಂದ ಮೇಲೆ ಹೀರೋ ಆಗುತ್ತಾರೆ, ನಾವೇ ಸಿನಿಮಾ ನಿರ್ಮಾಣ ಮಾಡಲು ರೆಡಿ ಇದ್ದೀವಿ, ಜಗ್ಗೇಶ್ ಅವರು ಗಿಲ್ಲಿ ಬಗ್ಗೆ ಹೇಳಿರುವ ಮಾತು ನಿಜ ಆಗಲಿದೆ’ ಎಂದಿದ್ದಾರೆ.
ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ. ಮಹಿಳೆಯ ಪತಿ ಸುನಿಲ್ ಶವಗಳ ಬಳಿ ಕುಳಿತಿರುವುದು ಕಂಡುಬಂದಿದ್ದು, ಅನುಮಾನದ ಮೇಲೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಚಂಪಾಬಾಯಿಯ ದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ವಿಚಾರಣೆಯ ಸಮಯದಲ್ಲಿ, ಸುನಿಲ್ ತನ್ನ ಹೆಂಡತಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಆಕೆಯ ಪಾತ್ರದ ಮೇಲಿನ ಅನುಮಾನದಿಂದಾಗಿ ಈ ಅಪರಾಧ ನಡೆದಿದೆ ಎಂದು ತಿಳಿದುಬಂದಿದೆ.
ಬುಧವಾರ ರಾತ್ರಿ ದಂಪತಿ ನಡುವೆ ಜಗಳವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಜಗಳದಲ್ಲಿ, ಚಂಪಾಬಾಯಿ ತಮ್ಮ ಮಗುವಿಗೆ ಹಾಲುಣಿಸುತ್ತಿದ್ದಾಗ ಸುನಿಲ್ ಆಕೆಯ ಮೇಲೆ ಹಲ್ಲೆ ನಡೆಸಿ, ಬಾಗಿಲಿಗೆ ತಳ್ಳಿ, ಕೈ, ಕಾಲಿನ ಮೇಲೆ ಕೋಲಿನಿಂದ ಹೊಡೆದಿದ್ದಾನೆ. ಆಕೆ ಮೂರ್ಛೆ ಹೋಗಿದ್ದಾಳೆಂದು ನಂಬಿ ಆರೋಪಿ ನಿದ್ರೆಗೆ ಜಾರಿದ್ದ ಎಂದು ವರದಿಯಾಗಿದೆ.
ಅವರ ಇಬ್ಬರು ಮಕ್ಕಳು ಈ ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ.ಮರಣೋತ್ತರ ಪರೀಕ್ಷೆಯ ನಂತರ ಎರಡೂ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ವಾಸ್ತು ಶಾಸ್ತ್ರದ ಪ್ರಕಾರ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಮನೆ ಮತ್ತು ಕಚೇರಿಯಲ್ಲಿ ಇಡುವುದು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಇದು ಒಂದು ರೀತಿಯ ಸಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಆದರೆ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಇಡುವಾಗ ಯಾವಾಗಲೂ ಜಾಗರೂಕರಾಗಿರಬೇಕು. ಯಾಕೆಂದರೆ ಈ ಫೋಟೋಗಳನ್ನು ಸರಿಯಾದ ಸ್ಥಳದಲ್ಲಿ ಮತ್ತು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಶುಭಕ್ಕಿಂತ ಅಶುಭವೇ ಹೆಚ್ಚಾಹಬಹುದು.
ಕುಬೇರನ ಫೋಟೋ ಇದ್ದರೆ ಹಣದ ಕೊರತೆ ಇರುವುದಿಲ್ಲ:
ಉದಾಹರಣೆಗೆ, ನೀವು ಕುಬೇರನ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಇಟ್ಟರೆ, ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ. ನೀವು ಸಾಲದಲ್ಲಿದ್ದರೆ, ಸಾಲವೂ ಬೇಗನೆ ತೀರುತ್ತದೆ. ಅನಗತ್ಯ ಖರ್ಚುಗಳು ಕಡಿಮೆಯಾಗುತ್ತವೆ ಮತ್ತು ಹಣ ಉಳಿತಾಯವಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತಿನ ದೇವತೆಯಾಗಿರುವಂತೆ, ಕುಬೇರನು ಸಂಪತ್ತಿನ ದೇವರು ಕೂಡ. ಉತ್ತರವು ಕುಬೇರನ ನೆಚ್ಚಿನ ದಿಕ್ಕು, ಆದ್ದರಿಂದ ಕುಬೇರನ ಫೋಟೋ ಯಾವಾಗಲೂ ಉತ್ತರ ದಿಕ್ಕಿನಲ್ಲಿರಬೇಕು. ಅದೇ ರೀತಿ, ವಾಸ್ತು ಶಾಸ್ತ್ರದ ಪ್ರಕಾರ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಮನೆಯ ದಕ್ಷಿಣ ದಿಕ್ಕಿನಲ್ಲಿ ಎಂದಿಗೂ ಇಡಬಾರದು, ಏಕೆಂದರೆ ಅದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಇಂದು, ನಾವು ಕಚೇರಿಯಲ್ಲಿ ಯಾವ ದೇವರು ಮತ್ತು ದೇವತೆಗಳನ್ನು ಇಡಬಹುದು ಎಂಬುದನ್ನು ಕಂಡುಹಿಡಿಯೋಣ.
ಗಣೇಶನ ಫೋಟೋ:
ಗಣೇಶ ಜ್ಞಾನದ ದೇವರು. ಗಣೇಶನು ತನ್ನ ಭಕ್ತರ ಎಲ್ಲಾ ರೀತಿಯ ಕಷ್ಟಗಳನ್ನು ನಿವಾರಿಸುತ್ತಾನೆ. ಆದ್ದರಿಂದ, ಕಚೇರಿಯಲ್ಲಿ ಗಣೇಶನ ಫೋಟೋವನ್ನು ಇಡುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ. ಕಚೇರಿಯಲ್ಲಿ ನೀವು ಕುಳಿತುಕೊಳ್ಳುವ ಪಶ್ಚಿಮ ಭಾಗದಲ್ಲಿ ಗಣೇಶನ ಫೋಟೋ ಅಥವಾ ವಿಗ್ರಹವನ್ನು ಇಡಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಕಚೇರಿಯಲ್ಲಿ ಗಣೇಶನ ಫೋಟೋ ಇದ್ದರೆ, ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತವೆ. ನೀವು ನಿಮ್ಮ ಕೆಲಸದಲ್ಲಿ ಪ್ರಗತಿ ಸಾಧಿಸುವಿರಿ. ನಿಮಗೆ ಆರ್ಥಿಕ ಸಮೃದ್ಧಿ ಸಿಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.
ಕಚೇರಿಯಲ್ಲಿ ಲಕ್ಷ್ಮಿ ದೇವಿಯ ಫೋಟೋವನ್ನು ಸಹ ಇಡಬಹುದು. ಲಕ್ಷ್ಮಿ ದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮಿ ದೇವಿಯ ಅನುಗ್ರಹದಿಂದ, ನೀವು ನಿಮ್ಮ ಕೆಲಸದಲ್ಲಿ ಉತ್ತಮ ಯಶಸ್ಸನ್ನು ಸಾಧಿಸುವಿರಿ, ನೀವು ಪ್ರಗತಿ ಸಾಧಿಸುವಿರಿ. ಲಕ್ಷ್ಮಿ ದೇವಿಯ ಆಶೀರ್ವಾದ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ಕಚೇರಿಯಲ್ಲಿ ಸಕಾರಾತ್ಮಕ ಶಕ್ತಿ ಸೃಷ್ಟಿಯಾಗುತ್ತದೆ. ಆದಾಗ್ಯೂ, ಕಚೇರಿಯಲ್ಲಿ ಲಕ್ಷ್ಮಿ ದೇವಿಯ ಫೋಟೋವನ್ನು ಇಡುವಾಗ ಜಾಗರೂಕರಾಗಿರಬೇಕಾದ ಒಂದು ವಿಷಯವೆಂದರೆ ನೀವು ಲಕ್ಷ್ಮಿ ದೇವಿಯ ಫೋಟೋವನ್ನು ಎಂದಿಗೂ ಕತ್ತಲೆಯ ಸ್ಥಳದಲ್ಲಿ ಇಡಬಾರದು. ಹಾಗೆ ಮಾಡುವುದರಿಂದ ನಕಾರಾತ್ಮಕ ಪರಿಣಾಮ ಬೀರಬಹುದು.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ