ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ ನಮ್ಮನ್ನು ಕಾಪಾಡುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳುವ ಪ್ರಯತ್ನವನ್ನು ತಂಡ ಮಾಡಿದೆ. ಎಲ್ಲಿಯೂ ಆಡಂಬರವಿಲ್ಲದೆ, ದೈವಾರಾಧನೆ ತೋರಿಸದೇ ಸಿನಿಮಾ ತಯಾರಾಗಿದೆ.  ತುಳುನಾಡಿನ ನಂಬಿಕೆಗಳ  ಬಗ್ಗೆಯೂ ಚಿತ್ರದಲ್ಲಿ ಹೇಳಲಾಗಿತ್ತಿದೆ. ಈ ಚಿತ್ರದಲ್ಲಿ ಪ್ರೇಮಕಥೆ, ಸಸ್ಪೆನ್ಸ್ ವಿಷಯಗಳು ಕೂಡ ಇವೆ. ಎಲ್ಲವನ್ನು ಹದವಾಗಿ ಬೆರೆಸಿ, ಸಿನಿಮಾ ಸಿದ್ಧಪಡಿಸಲಾಗಿದೆ ಎಂಬುದು ತಂಡದ ಮಾತು.

‘ಕಟ್ಟೆಮಾರ್’ ಚಿತ್ರವನ್ನು ರಕ್ಷಿತ್ ಗಾಣಿಗ ಹಾಗೂ ಸಚಿನ್ ಕಟ್ಲ ನಿರ್ದೇಶನ ಮಾಡಿದ್ದಾರೆ. ಜನವರಿ 23ರಂದು ಈ ಚಿತ್ರ ತುಳುವಿನಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಕನ್ನಡದಲ್ಲಿ ಡಬ್ ಆಗಿದ್ದು, ಮುಂದಿನ ದಿನಗಳಲ್ಲಿ ಬಿಡುಗಡೆ ಕಾಣಲಿದೆ. ಬಿಡುಗಡೆ ಕಂಡಿರುವ ಟ್ರೇಲರ್ ಗಮನ ಸೆಳೆದಿದೆ.

‘ಸು ಫ್ರಮ್ ಸೋ’ ಬಳಿಕ ಜೆಪಿ ತುಮಿನಾಡು ಜನಪ್ರಿಯತೆ ಹೆಚ್ಚಿದೆ. ಅವರು ಒಂದು ಕಥೆ ಒಪ್ಪಿಕೊಳ್ಳುತ್ತಾರೆ ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಈಗ ‘ಕಟ್ಟೆಮಾರ್’ ಸಿನಿಮಾ ಮೂಲಕ ಅವರು ಮತ್ತೆ ಪ್ರೇಕ್ಷಕರ ಎದುರು ಬರಲು ಸಿದ್ಧರಾಗಿದ್ದಾರೆ. ಆದಷ್ಟು ಬೇಗ ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗಲಿ ಎಂಬುದು ಅಭಿಮಾನಿಗಳ ಕೋರಿಕೆ.

ಇದನ್ನೂ ಓದಿ: ಜೆಪಿ ತುಮಿನಾಡುಗೆ ಮುಂದಿದೆ ದೊಡ್ಡ ಸವಾಲು 

ಸಂತೋಷ್ ಆಚಾರ್ಯ ಛಾಯಾಗ್ರಹಣ, ಗಣೇಶ್ ನಿರ್ಚಾಲ್ ಸಂಕಲನ ಚಿತ್ರಕ್ಕಿದೆ. ವಿಶ್ವಾಸ್ ಅಡ್ಯಾರ್, ಆರ್.ಕೆ.ಮುಲ್ಕಿ, ವಿನೋದ್ ಶೆಟ್ಟಿ ಕೃಷ್ಣಾಪುರ, ಸಂದೇಶ್ ಉಕ್ಕುಡ ನಿರ್ದೇಶನ ತಂಡದಲಿದ್ದಾರೆ. ಅಸ್ತ್ರ ಪ್ರೊಡಕ್ಷನ್ ಚಿತ್ರವನ್ನು ಪ್ರಸ್ತುತಪಡಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಿಚ್ಛೇಧನದ ಬಳಿಕ ಸ್ಟಾರ್ ನಟಿಯ ವಿವಾಹವಾಗಲು ಮುಂದಾದ ನಟ ಧನುಶ್ – Kannada News | Mrunal Thakur and Dhanush may get married on February 14

ಧನುಶ್ (Dhanush) ದಕ್ಷಿಣ ಭಾರತದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹಿಂದಿಯಲ್ಲಿಯೂ ನಟಿಸಿ ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಧನುಶ್​​ಗೆ ದೊಡ್ಡ ಅಭಿಮಾನಿ ವರ್ಗವಿದೆ. ಕೇವಲ ಕಮರ್ಶಿಯಲ್, ಮಾಸ್ ಮಸಾಲ ಸಿನಿಮಾಗಳನ್ನು ಮಾಡದೆ ಕತೆ ಆಧರಿತ, ನಟನೆಗೆ ಅವಕಾಶ ಇರುವ ಸಿನಿಮಾಗಳಲ್ಲೇ ಹೆಚ್ಚು ನಟಿಸುತ್ತಾರೆ ಧನುಶ್. ನಟ ಧನುಶ್ ಅವರ ವೃತ್ತಿ ಜೀವನ ಅದ್ಭುತವಾಗಿ ಸಾಗುತ್ತಿದೆ ಆದರೆ ಅವರ ಖಾಸಗಿ ಜೀವನದಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಸ್ಟಾರ್ ನಟ ರಜನೀಕಾಂತ್ ಪುತ್ರಿಯ ವಿವಾಹವಾಗಿದ್ದ ಧನುಶ್, ಬರೋಬ್ಬರಿ 20 ವರ್ಷಗಳ ಬಳಿಕ ವಿಚ್ಛೇದನ ಪಡೆದರು. ಇದೀಗ ಸ್ಟಾರ್ ನಟಿಯೊಬ್ಬರ ಮದುವೆ ಆಗಲು ಧನುಶ್ ಮುಂದಾಗಿದ್ದಾರೆ.

ಧನುಶ್ ಅವರು ರಜನೀಕಾಂತ್ ಪುತ್ರಿ ಐಶ್ವರ್ಯ ಜೊತೆಗೆ 2004 ರಲ್ಲಿ ವಿವಾಹವಾದರು. ಇಬ್ಬರಿಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ ತಾವು ಬೇರೆ ಆಗುತ್ತಿರುವುದಾಗಿ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಘೋಷಿಸಿದರು. 2024ರಲ್ಲಿ ಇವರಿಗೆ ನ್ಯಾಯಾಲಯವು ವಿಚ್ಛೇದನ ನೀಡಿತು. ಇದೀಗ ಧನುಶ್, ಸ್ಟಾರ್ ನಟಿಯೊಬ್ಬರನ್ನು ವಿವಾಹ ಆಗುವ ಯೋಜನೆ ಹಾಕಿಕೊಂಡಿದ್ದಾರಂತೆ.

ಧನುಶ್ ಹಾಗೂ ನಟಿ ಮೃಣಾಲ್ ಠಾಕೂರ್ ಅವರುಗಳು ಪರಸ್ಪರ ಪ್ರೀತಿಯಲ್ಲಿದ್ದು, ಇಬ್ಬರೂ ಸಹ ಶೀಘ್ರವೇ ಮದುವೆ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೃಣಾಲ್ ಠಾಕೂರ್ ಮತ್ತು ಧನುಶ್ ಕಳೆದ ಎರಡು ವರ್ಷಗಳಿಂದ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಮೃಣಾಲ್ ನಟಿಸಿದ್ದ ‘ಸನ್ ಆಫ್ ಸರ್ದಾರ್ 2’ ಪ್ರೀಮಿಯರ್ ಶೋನಲ್ಲಿ ಧನುಶ್ ಭಾಗವಹಿಸಿದ್ದರು. ಧನುಶ್ ನಟಿಸಿದ್ದ ಹಿಂದಿ ಸಿನಿಮಾ ‘ತೇರೆ ಇಷ್ಕ್ ಮೇ’ ರ್ಯಾಪ್ ಅಪ್ ಪಾರ್ಟಿಯಲ್ಲಿ ಮೃಣಾಲ್ ಭಾಗವಹಿಸಿದ್ದರು. ಆಗಲೇ ಈ ಇಬ್ಬರ ಪ್ರೀತಿಯ ಬಗ್ಗೆ ಪುಕಾರುಗಳು ಹರಿದಾಡಿದ್ದವು.

ಇದನ್ನೂ ಓದಿ:ಅಶ್ವಿನಿಯ ಫಿನಾಲೆಗೆ ಕರೆದೊಯ್ಯುವ ಜವಾಬ್ದಾರಿ ಧನುಶ್​​​ಗೆ ವಹಿಸಿದ ಗಿಲ್ಲಿ

ಇದೀಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ಮೃಣಾಲ್ ಠಾಕೂರ್ ಮತ್ತು ಧನುಶ್ ಮದುವೆ ಆಗಲಿದ್ದಾರಂತೆ. ಈ ಇಬ್ಬರ ವಿವಾಹ ಫೆಬ್ರವರಿ 14 ರಂದು ನಡೆಯಲಿದೆ. ಈ ಮದುವೆ ಸಮಾರಂಭದಲ್ಲಿ ಎರಡೂ ಕುಟುಂಬದ ಅತ್ಯಾಪ್ತರು ಮಾತ್ರ ಭಾಗಿ ಆಗಲಿದ್ದಾರೆ. ಧನುಶ್ ಅವರಿಗೆ ಇದು ಎರಡನೇ ಮದುವೆ ಆದರೆ ಮೃಣಾಲ್ ಅವರಿಗೆ ಇದು ಮೊದಲ ಮದುವೆ ಆಗಲಿದೆ. ಮೃಣಾಲ್ ಠಾಕೂರ್ ಅವರಿಗೆ ಈಗ 33 ವರ್ಷ ವಯಸ್ಸು, ಧನುಶ್ ಅವರಿಗೆ 42 ವರ್ಷ. ಇಬ್ಬರೂ ಸಹ ಯಶಸ್ವಿ ನಟ ಮತ್ತು ನಟಿಯರು. ಈ ಇಬ್ಬರ ದಾಂಪತ್ಯ ಜೀವನ ಹೇಗೆ ಸಾಗುತ್ತದೆ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು-ಮುಂಬೈ ದುರಂತೋ ಎಕ್ಸ್‌ಪ್ರೆಸ್‌: ಪ್ರಯಾಣಾವಧಿ 18 ಗಂಟೆಗೆ ಇಳಿಕೆಯಾಗುತ್ತಾ?

ಬೆಂಗಳೂರು, ಜನವರಿ 16: ಬೆಂಗಳೂರು–ಮುಂಬೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಎರಡು ಮಹಾನಗರಗಳ ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ ಕಡಿತಗೊಳಿಸುವ ಉದ್ದೇಶದಿಂದ ದುರಂತೋ ಎಕ್ಸ್‌ಪ್ರೆಸ್ ರೈಲು ಆರಂಭಿಸುವ ಕುರಿತು ರೈಲ್ವೆ ಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ರೈಲು ಸೇವೆ ಆರಂಭವಾದರೆ, ಬೆಂಗಳೂರು–ಮುಂಬೈ ಪ್ರಯಾಣದ ಸಮಯ ಸುಮಾರು 18 ಗಂಟೆಗಳವರೆಗೆ ಇಳಿಯುವ ಸಾಧ್ಯತೆ ಇದೆ.

ಏನೆಲ್ಲಾ ಸೌಲಭ್ಯ ನೀಡಲಿದೆ ದುರಂತೋ ಎಕ್ಸ್‌ಪ್ರೆಸ್‌?

ಇತ್ತೀಚೆಗೆ ಬೆಂಗಳೂರು ಎಸ್‌ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ (LTT) ನಡುವೆ ವಾರಕ್ಕೆ ಎರಡು ಬಾರಿ ಸಂಚರಿಸುವ ಹೊಸ ಸೂಪರ್‌ಫಾಸ್ಟ್ ರೈಲು ಸೇವೆಗೆ ಅನುಮೋದನೆ ದೊರೆತಿತ್ತು. 1,209 ಕಿಲೋಮೀಟರ್ ದೂರವನ್ನು ಈ ರೈಲು ಕ್ರಮಿಸಿದರೂ, ಸುಮಾರು 24 ಗಂಟೆಗಳ ಪ್ರಯಾಣ ಸಮಯ ಹೊಂದಿರುವುದರಿಂದ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಡಿಸೆಂಬರ್ 9 ರಂದು ಆರಂಭವಾದ ಈ ರೈಲು ಹುಬ್ಬಳ್ಳಿ, ಪುಣೆ ಸೇರಿದಂತೆ 14 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ.

ಈ ಹಿನ್ನೆಲೆ, ಕೆಎಸ್‌ಆರ್ ಬೆಂಗಳೂರು ಮತ್ತು ಸಿಎಸ್ಎಂಟಿ ಮುಂಬೈ ನಡುವೆ ದುರಂತೋ ಎಕ್ಸ್‌ಪ್ರೆಸ್ ಆರಂಭಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಮೀರಜ್ ಹಾಗೂ ಪುಣೆ ಮಾರ್ಗವಾಗಿ ಈ ರೈಲು ಸಂಚರಿಸುವ ಸಾಧ್ಯತೆ ಇದೆ. ನಿಲ್ದಾಣದ ಸಂಖ್ಯೆ ಕಡಿಮೆಯಿದ್ದು, ವೇಗದ ಸಂಚಾರ ಹಾಗೂ ಟಿಕೆಟ್‌ ಜೊತೆ ಊಟದ ಸೌಲಭ್ಯವೂ ಇರುವ ದುರಂತೋ ರೈಲುಗಳು ದೂರ ಪ್ರಯಾಣಕ್ಕೆ ಹೇಳಿ ಮಾಡಿಸಿದ್ದಾಗಿದೆ.

ತಾತ್ಕಾಲಿಕ ವೇಳಾಪಟ್ಟಿ

ರೈಲು ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.30ಕ್ಕೆ ಮುಂಬೈ ತಲುಪಬಹುದು. 3ಎಸಿ ಟಿಕೆಟ್ ದರ ಸುಮಾರು 2,500 ರೂ. ಇರಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ರೈಲ್ವೆ ಅಧಿಕಾರಿಗಳು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’ – Kannada News | Gilli Fans talks about him, says he will become hero

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆಗೆ ಕೆಲವೇ ದಿನ ಬಾಕಿ ಉಳಿದಿದೆ. ಗಿಲ್ಲಿ ನಟ ಈ ಬಾರಿಯ ಗೆಲ್ಲು ಸ್ಪರ್ಧಿ ಎನಿಸಿಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಗಿಲ್ಲಿಗೆ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ ಆಗಿದೆ. ಗಿಲ್ಲಿಯ ಅಭಿಮಾನಿಗಳು ಕೆಲವರು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬಾರಿಯ ವಿನ್ನರ್ ಆಗುವುದು ಗ್ಯಾರೆಂಟಿ. ಮಾತ್ರವೇ ಅಲ್ಲ ಗಿಲ್ಲಿ ಹೊರಗೆ ಬಂದ ಮೇಲೆ ಹೀರೋ ಆಗುತ್ತಾರೆ, ನಾವೇ ಸಿನಿಮಾ ನಿರ್ಮಾಣ ಮಾಡಲು ರೆಡಿ ಇದ್ದೀವಿ, ಜಗ್ಗೇಶ್ ಅವರು ಗಿಲ್ಲಿ ಬಗ್ಗೆ ಹೇಳಿರುವ ಮಾತು ನಿಜ ಆಗಲಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮಗುವಿಗೆ ಎದೆಹಾಲುಣಿಸುತ್ತಿದ್ದಾಗ ಪತ್ನಿಯನ್ನು ಕೊಂದ ಪತಿ, ಶಿಶು ಕೂಡಾ ಉಸಿರುಗಟ್ಟಿ ಸಾವು – Kannada News | Woman Killed Following Domestic Dispute in MP’s Khargone

ಮಧ್ಯಪ್ರದೇಶ, ಜನವರಿ 16: ಮಗುವಿಗೆ ಎದೆಹಾಲುಣಿಸುತ್ತಿದ್ದ ಪತ್ನಿ ಮೇಲೆ ಪತಿ ಹಲ್ಲೆ(Attack) ನಡೆಸಿದ ಪರಿಣಾಮ ಆಕೆ ಎಲ್ಲಿಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಖಾರ್ಗೋನ್​ನಲ್ಲಿ ನಡೆದಿದೆ. ಹಲ್ಲೆಯ ಸಮಯದಲ್ಲಿ ದಂಪತಿಯ ಆರು ತಿಂಗಳ ಮಗು ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಜಿಲ್ಲೆಯ ಬೇಡ್ಯಾ ಪೊಲೀಸ್ ಠಾಣೆ ಪ್ರದೇಶದ ಬಕಾವಾ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ಚಂಪಾಬಾಯಿ ಮಾನ್ಕರ್ ಮತ್ತು ಅವರ ಶಿಶು ಶವಗಳು ಅವರ ಮನೆಯಲ್ಲಿ ಪತ್ತೆಯಾಗಿತ್ತು. ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ವರ್ಮಾ ತಿಳಿಸಿದ್ದಾರೆ. ಮಹಿಳೆಯ ಪತಿ ಸುನಿಲ್ ಶವಗಳ ಬಳಿ ಕುಳಿತಿರುವುದು ಕಂಡುಬಂದಿದ್ದು, ಅನುಮಾನದ ಮೇಲೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಚಂಪಾಬಾಯಿಯ ದೇಹದ ಮೇಲೆ ಹಲವು ಗಾಯದ ಗುರುತುಗಳು ಕಂಡುಬಂದಿವೆ. ವಿಚಾರಣೆಯ ಸಮಯದಲ್ಲಿ, ಸುನಿಲ್ ತನ್ನ ಹೆಂಡತಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಆಕೆಯ ಪಾತ್ರದ ಮೇಲಿನ ಅನುಮಾನದಿಂದಾಗಿ ಈ ಅಪರಾಧ ನಡೆದಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಓದಿ: ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಬುಧವಾರ ರಾತ್ರಿ ದಂಪತಿ ನಡುವೆ ಜಗಳವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಜಗಳದಲ್ಲಿ, ಚಂಪಾಬಾಯಿ ತಮ್ಮ ಮಗುವಿಗೆ ಹಾಲುಣಿಸುತ್ತಿದ್ದಾಗ ಸುನಿಲ್ ಆಕೆಯ ಮೇಲೆ ಹಲ್ಲೆ ನಡೆಸಿ, ಬಾಗಿಲಿಗೆ ತಳ್ಳಿ, ಕೈ, ಕಾಲಿನ ಮೇಲೆ ಕೋಲಿನಿಂದ ಹೊಡೆದಿದ್ದಾನೆ. ಆಕೆ ಮೂರ್ಛೆ ಹೋಗಿದ್ದಾಳೆಂದು ನಂಬಿ ಆರೋಪಿ ನಿದ್ರೆಗೆ ಜಾರಿದ್ದ ಎಂದು ವರದಿಯಾಗಿದೆ.

ಅವರ ಇಬ್ಬರು ಮಕ್ಕಳು ಈ ಘಟನೆಯನ್ನು ಕಣ್ಣಾರೆ ಕಂಡಿದ್ದಾರೆ.ಮರಣೋತ್ತರ ಪರೀಕ್ಷೆಯ ನಂತರ ಎರಡೂ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:12 am, Fri, 16 January 26

Source link

Vastu Tips: ವಾಸ್ತು ಪ್ರಕಾರ ಆಫೀಸಿನಲ್ಲಿ ಯಾವ ದೇವರ ಫೋಟೋ ಇಡುವುದು ಶುಭ ಗೊತ್ತಾ? – Kannada News | Vastu Tips for Deity Photos: Maximize Prosperity at Home and Office

ವಾಸ್ತು ಶಾಸ್ತ್ರದ ಪ್ರಕಾರ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಮನೆ ಮತ್ತು ಕಚೇರಿಯಲ್ಲಿ ಇಡುವುದು ತುಂಬಾ ಶುಭವೆಂದು ಪರಿಗಣಿಸಲಾಗುತ್ತದೆ. ಇದು ಒಂದು ರೀತಿಯ ಸಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಆದರೆ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಇಡುವಾಗ ಯಾವಾಗಲೂ ಜಾಗರೂಕರಾಗಿರಬೇಕು. ಯಾಕೆಂದರೆ ಈ ಫೋಟೋಗಳನ್ನು ಸರಿಯಾದ ಸ್ಥಳದಲ್ಲಿ ಮತ್ತು ಸರಿಯಾದ ದಿಕ್ಕಿನಲ್ಲಿ ಇಡದಿದ್ದರೆ ಶುಭಕ್ಕಿಂತ ಅಶುಭವೇ ಹೆಚ್ಚಾಹಬಹುದು.

ಕುಬೇರನ ಫೋಟೋ ಇದ್ದರೆ ಹಣದ ಕೊರತೆ ಇರುವುದಿಲ್ಲ:

ಉದಾಹರಣೆಗೆ, ನೀವು ಕುಬೇರನ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಇಟ್ಟರೆ, ನಿಮ್ಮ ಮನೆಯಲ್ಲಿ ಎಂದಿಗೂ ಹಣದ ಕೊರತೆ ಇರುವುದಿಲ್ಲ. ನೀವು ಸಾಲದಲ್ಲಿದ್ದರೆ, ಸಾಲವೂ ಬೇಗನೆ ತೀರುತ್ತದೆ. ಅನಗತ್ಯ ಖರ್ಚುಗಳು ಕಡಿಮೆಯಾಗುತ್ತವೆ ಮತ್ತು ಹಣ ಉಳಿತಾಯವಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತಿನ ದೇವತೆಯಾಗಿರುವಂತೆ, ಕುಬೇರನು ಸಂಪತ್ತಿನ ದೇವರು ಕೂಡ. ಉತ್ತರವು ಕುಬೇರನ ನೆಚ್ಚಿನ ದಿಕ್ಕು, ಆದ್ದರಿಂದ ಕುಬೇರನ ಫೋಟೋ ಯಾವಾಗಲೂ ಉತ್ತರ ದಿಕ್ಕಿನಲ್ಲಿರಬೇಕು. ಅದೇ ರೀತಿ, ವಾಸ್ತು ಶಾಸ್ತ್ರದ ಪ್ರಕಾರ, ದೇವರು ಮತ್ತು ದೇವತೆಗಳ ಫೋಟೋಗಳನ್ನು ಮನೆಯ ದಕ್ಷಿಣ ದಿಕ್ಕಿನಲ್ಲಿ ಎಂದಿಗೂ ಇಡಬಾರದು, ಏಕೆಂದರೆ ಅದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಇಂದು, ನಾವು ಕಚೇರಿಯಲ್ಲಿ ಯಾವ ದೇವರು ಮತ್ತು ದೇವತೆಗಳನ್ನು ಇಡಬಹುದು ಎಂಬುದನ್ನು ಕಂಡುಹಿಡಿಯೋಣ.

ಗಣೇಶನ ಫೋಟೋ:

ಗಣೇಶ ಜ್ಞಾನದ ದೇವರು. ಗಣೇಶನು ತನ್ನ ಭಕ್ತರ ಎಲ್ಲಾ ರೀತಿಯ ಕಷ್ಟಗಳನ್ನು ನಿವಾರಿಸುತ್ತಾನೆ. ಆದ್ದರಿಂದ, ಕಚೇರಿಯಲ್ಲಿ ಗಣೇಶನ ಫೋಟೋವನ್ನು ಇಡುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ. ಕಚೇರಿಯಲ್ಲಿ ನೀವು ಕುಳಿತುಕೊಳ್ಳುವ ಪಶ್ಚಿಮ ಭಾಗದಲ್ಲಿ ಗಣೇಶನ ಫೋಟೋ ಅಥವಾ ವಿಗ್ರಹವನ್ನು ಇಡಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಕಚೇರಿಯಲ್ಲಿ ಗಣೇಶನ ಫೋಟೋ ಇದ್ದರೆ, ನಿಮ್ಮ ಎಲ್ಲಾ ಕಷ್ಟಗಳು ದೂರವಾಗುತ್ತವೆ. ನೀವು ನಿಮ್ಮ ಕೆಲಸದಲ್ಲಿ ಪ್ರಗತಿ ಸಾಧಿಸುವಿರಿ. ನಿಮಗೆ ಆರ್ಥಿಕ ಸಮೃದ್ಧಿ ಸಿಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಲಕ್ಷ್ಮಿ ದೇವಿಯ ಫೋಟೋ:

ಕಚೇರಿಯಲ್ಲಿ ಲಕ್ಷ್ಮಿ ದೇವಿಯ ಫೋಟೋವನ್ನು ಸಹ ಇಡಬಹುದು. ಲಕ್ಷ್ಮಿ ದೇವಿಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ. ಲಕ್ಷ್ಮಿ ದೇವಿಯ ಅನುಗ್ರಹದಿಂದ, ನೀವು ನಿಮ್ಮ ಕೆಲಸದಲ್ಲಿ ಉತ್ತಮ ಯಶಸ್ಸನ್ನು ಸಾಧಿಸುವಿರಿ, ನೀವು ಪ್ರಗತಿ ಸಾಧಿಸುವಿರಿ. ಲಕ್ಷ್ಮಿ ದೇವಿಯ ಆಶೀರ್ವಾದ ಯಾವಾಗಲೂ ನಿಮ್ಮೊಂದಿಗೆ ಇರುತ್ತದೆ. ಕಚೇರಿಯಲ್ಲಿ ಸಕಾರಾತ್ಮಕ ಶಕ್ತಿ ಸೃಷ್ಟಿಯಾಗುತ್ತದೆ. ಆದಾಗ್ಯೂ, ಕಚೇರಿಯಲ್ಲಿ ಲಕ್ಷ್ಮಿ ದೇವಿಯ ಫೋಟೋವನ್ನು ಇಡುವಾಗ ಜಾಗರೂಕರಾಗಿರಬೇಕಾದ ಒಂದು ವಿಷಯವೆಂದರೆ ನೀವು ಲಕ್ಷ್ಮಿ ದೇವಿಯ ಫೋಟೋವನ್ನು ಎಂದಿಗೂ ಕತ್ತಲೆಯ ಸ್ಥಳದಲ್ಲಿ ಇಡಬಾರದು. ಹಾಗೆ ಮಾಡುವುದರಿಂದ ನಕಾರಾತ್ಮಕ ಪರಿಣಾಮ ಬೀರಬಹುದು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಲ್ಲರ ಚಿತ್ತ ಲಕ್ಕುಂಡಿಯತ್ತ: ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಆರಂಭ – Kannada News | Historic Lakkundi Unveils Secrets: Excavation at Kote Veerabhadreshwara Temple

ಗದಗ, ಜ.16: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಇಂದಿನಿಂದ ಪ್ರಾರಂಭಗೊಂಡಿದೆ. ಸಿದ್ಧರಕೊಳ್ಳ ಎಂಬ ಸ್ಥಳದಲ್ಲಿ ಕೇವಲ 10 ಮೀಟರ್‌ ವ್ಯಾಪ್ತಿಯಲ್ಲಿ ಉತ್ಖನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಕುಂಡಿಯು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರು ಸೇರಿದಂತೆ ಅನೇಕ ರಾಜ ಮಹಾರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಬಾದಾಮಿಗಿಂತಲೂ ಹೆಚ್ಚು ಐತಿಹಾಸಿಕ ಮಹತ್ವವನ್ನು ಹೊಂದಿದೆ ಎಂದು ಶಾಸನಗಳಲ್ಲಿ ಉಲ್ಲೇಖವಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿದರೆ ಅಪಾರ ಪ್ರಮಾಣದ ಇತಿಹಾಸ ಬೆಳಕಿಗೆ ಬರಲಿದೆ ಎಂಬ ನಂಬಿಕೆ ಇದೆ. ದೇವಸ್ಥಾನದ 50 ಮೀಟರ್ ವ್ಯಾಪ್ತಿಯಲ್ಲಿ ನಾಣ್ಯಗಳನ್ನು ತಯಾರಿಸುತ್ತಿದ್ದ ಟಂಕಸಾಲೆ ಅಥವಾ ನಾಣ್ಯಗಾರರ ಕುಟುಂಬದ ಕುರುಹುಗಳು, ಅಕ್ಕಸಾಲಿಗರ ಮನೆತನಕ್ಕೆ ಸಂಬಂಧಿಸಿದ ಅವಶೇಷಗಳು ಕಂಡುಬಂದಿವೆ. ಈ ಸಂಪದ್ಭರಿತ ನಾಡಿನಲ್ಲಿ ಹಿಂದೆಯೂ ಅನೇಕ ಕಡೆ ಉತ್ಖನನ ನಡೆದಾಗ ವಜ್ರ, ವೈಡೂರ್ಯ, ಮುತ್ತು, ರತ್ನ ಮತ್ತು ಆಭರಣಗಳು ದೊರೆತಿವೆ. ಲಕ್ಕುಂಡಿಯು 101 ದೇವಸ್ಥಾನಗಳು ಮತ್ತು 101 ಬಾವಿಗಳನ್ನು ಹೊಂದಿರುವ ಪವಿತ್ರ ಸ್ಥಳವಾಗಿದೆ. ಉತ್ಖನನಕ್ಕಾಗಿ ಅಧಿಕಾರಿಗಳು ಸ್ಥಳವನ್ನು ಗುರುತಿಸಿ, ಅಳತೆ ಕಾರ್ಯ ನಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಇತರ ಗುರುತಿಸಲಾದ ಪ್ರದೇಶಗಳಲ್ಲೂ ಉತ್ಖನನ ಕಾರ್ಯ ಆರಂಭವಾಗಲಿದೆ. ಈ ಉತ್ಖನನದಲ್ಲಿ ಹಲವು ವಾಸ್ತುಶಿಲ್ಪಗಳು, ಅಮೂಲ್ಯ ರತ್ನಗಳು, ಆಭರಣಗಳು ಸಿಗುವ ನಿರೀಕ್ಷೆಯಿದೆ. ಗದಗ ಜಿಲ್ಲೆಯ ಜನರ ಚಿತ್ತ ಈಗ ಲಕ್ಕುಂಡಿಯತ್ತ ನೆಟ್ಟಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್! ಕಳ್ಳತನ ಮಾಡಿದ್ದು ಅವನಲ್ಲ ಅವಳು! – Kannada News | Bengaluru Burglary Case: Sampigehalli Police Nab Women Thieves in Boy Guise

ಕಳ್ಳರನ್ನು ಬಂಧಿಸಿ ಠಾಣೆಗೆ ಕರೆತಂದ ಪೊಲೀಸರಿಗೆ ಕಾದಿತ್ತು ಶಾಕ್!

ಬೆಂಗಳೂರು, ಜನವರಿ 16: ಅವರು ನೋಡಲು ಹುಡುಗರಂತೆ ಕಾಣುತ್ತಿದ್ದರು. ಶರ್ಟ್​, ಪ್ಯಾಂಟ್ ಹಾಕಿ, ಸ್ಟೈಲಿಷ್ ಆಗಿ ಓಡಾಡಿಕೊಂಡು ಹಾಡುಹಗಲೇ ಮನೆಗಳಿಗೆ ಕನ್ನ ಹಾಕುತ್ತಿದ್ದರು. ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಾಗಲೇ ಗೊತ್ತಾಗಿದ್ದು ಅವರು ಹುಡುಗಿಯರು ಎಂದು! ಈ ರೀತಿ ವೇಷ ಬದಲಿಸಿ ನಗರದ ಹೊರವಲಯದ ಸಂಪಿಗೆಹಳ್ಳಿಯಲ್ಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಯುವತಿಯರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಯಾರೂ ಇಲ್ಲದ ಮನೆಯೇ ಟಾರ್ಗೆಟ್

ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು–ನೀಲು ಎಂಬ ಯುವತಿಯರು ಹುಡುಗರ ವೇಷದಲ್ಲಿ ಬೈಕ್‌ನಲ್ಲಿ ಓಡಾಡುತ್ತಾ, ಮನೆ ಮಾಲೀಕರು ಹೊರಗೆ ಹೋದ ಸಮಯವನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು. ಇದೇ ರೀತಿ ಜನವರಿ 13ರಂದು ಯಲಹಂಕ ಸಮೀಪದ ಅಗ್ರಹಾರ ಲೇಔಟ್‌ನಲ್ಲಿರುವ ಆಟೋ ಚಾಲಕ ಸಂಗಮೇಶ್ ಮನೆಗೆ ನುಗ್ಗಿದ್ದ ಕಳ್ಳಿಯರು, ಹಾಡಹಗಲೇ ಕನ್ನ ಹಾಕಿದ್ದರು. ಮನೆಯವರು ಹೊರಗೆ ಹೋಗಿದ್ದನ್ನೇ ಕಾದು, ನಂತರ ಮನೆಯಲ್ಲಿದ್ದ ನಗದು ಹಾಗೂ ಮೌಲ್ಯವಸ್ತುಗಳನ್ನು ದೋಚಿದ್ದರು.

ಇದನ್ನೂ ಓದಿ ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ

ಹುಡುಗರ ವೇಷದಲ್ಲಿದ್ದಿದ್ದು ಹುಡುಗಿಯರು!

ಮನೆಗೆ ವಾಪಸ್ ಬಂದ ಸಂಗಮೇಶ್, ಕಳ್ಳತನವಾಗಿರುವುದು ತಿಳಿದು ದಂಗಾಗಿದ್ದರು. ಬಳಿಕ ಸಂಪಿಗೆಹಳ್ಳಿ ಪೊಲೀಸರಿಗೆ ಚಾಲಕ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಈ ವೇಳೆ ಕಳ್ಳತನದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಳ್ಳಿಯರು ಬಳಸಿದ್ದ ಸ್ಕೂಟಿಯ ನಂಬರ್ ಪೊಲೀಸರ ಕಣ್ಣಿಗೆ ಬಿದ್ದಿತ್ತು. ಸಿಸಿಟಿವಿ ಹಾಗೂ ವಾಹನ ನೋಂದಣಿ ಸಂಖ್ಯೆ ಆಧಾರವಾಗಿ ಆರೋಪಿಗಳನ್ನು ಬಂಧಿಸಿದ ಪೊಲೀಸರು, ಠಾಣೆಗೆ ಕರೆತಂದಾಗ ಶಾಕ್ ಆಗಿದ್ದರು. ಹುಡುಗರಂತೆ ಕಾಣುತ್ತಿದ್ದ ಕಳ್ಳರು ಶಾಲು ಮತ್ತು ನೀಲು ಎಂಬ ಯುವತಿಯರು ಎನ್ನುವುದು ಬೆಳಕಿಗೆ ಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿಜಯಪುರ: ಟ್ರ್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಚಡಚಣದಲ್ಲಿ ಪತ್ತೆ, ಬಯಲಾಯ್ತು ರಹಸ್ಯ! – Kannada News | GPS Tracked Vulture Found in Vijayapura Farm Reveals Maharashtra Forest Department Research

ವಿಜಯಪುರ, ಜನವರಿ 16: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋಟ್ಯಾಳ ಗ್ರಾಮದ ತೋಟದಲ್ಲಿ ಟ್ರ್ಯಾಕರ್, ಜಿಪಿಎಸ್ ಹಾಗೂ ಕ್ಯಾಮರಾ ಮಾದರಿಯ ಉಪಕರಣಗಳನ್ನು ಹೊಂದಿದ್ದ ರಣಹದ್ದು ಪತ್ತೆಯಾಗಿದ್ದು, ಈ ಘಟನೆ ಹಲವು ಅನುಮಾನಗಳಿಗೆ ತೆರೆ ಎಳೆದಿದೆ. ತೋಟದಲ್ಲಿ ಅಸಹಜ ಸ್ಥಿತಿಯಲ್ಲಿ ಕುಳಿತಿದ್ದ ದೊಡ್ಡ ಪಕ್ಷಿಯನ್ನು ಕಂಡ ಸ್ಥಳೀಯರು ತಕ್ಷಣ 112 ಗೆ ಕರೆ ಮಾಡಿದರು. ಸ್ಥಳಕ್ಕೆ ಧಾವಿಸಿದ 112 ಪೊಲೀಸರು ರಣಹದ್ದನ್ನು ವಶಕ್ಕೆ ಪಡೆದು, ಝಳಕಿ ಪೊಲೀಸ್ ಠಾಣೆಗೆ ಸ್ಥಳಾಂತರಿಸಿದರು. ರಣಹದ್ದಿನ ಕಾಲಿಗೆ ಗುರುತಿನ ಸಂಖ್ಯೆಯ ಟ್ಯಾಗ್ ಅಳವಡಿಸಿರುವುದು ಕಂಡು ಬಂದಿದ್ದು, ಇದರಿಂದ ಪಕ್ಷಿಯ ಮೇಲೆ ವೈಜ್ಞಾನಿಕ ಅಧ್ಯಯನ ನಡೆಯುತ್ತಿರುವುದು ಸ್ಪಷ್ಟವಾಗಿದೆ.

ಪೊಲೀಸ್ ಠಾಣೆಗೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ, ಈ ರಣಹದ್ದು ಮಹಾರಾಷ್ಟ್ರದ ನಾಗಪೂರ ಸಮೀಪದ ಮೇಲಘಾಟ ಪ್ರದೇಶದಿಂದ ಬಂದಿರುವುದು ತಿಳಿದುಬಂದಿದೆ. ಮಹಾರಾಷ್ಟ್ರ ಅರಣ್ಯ ಇಲಾಖೆಯು ರಣಹದ್ದುಗಳ ಜೀವನ ಶೈಲಿ, ಸಂಚರಣೆ ಮಾರ್ಗ ಹಾಗೂ ಇತರೆ ಪಕ್ಷಿಗಳ ಕುರಿತು ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಜಿಪಿಎಸ್ ಮತ್ತು ಟ್ರ್ಯಾಕರ್ ಅಳವಡಿಸಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಜಿಪಿಎಸ್ ಮತ್ತು ಟ್ರ್ಯಾಕರ್‌ಗಳ ಭಾರದಿಂದ ರಣಹದ್ದು ಬಸವಳಿದ ಸ್ಥಿತಿಯಲ್ಲಿ ಇದ್ದು, ಅದೇ ಕಾರಣದಿಂದ ಹಾರಲು ಸಾಧ್ಯವಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಅರಣ್ಯಾಧಿಕಾರಿಗಳು ರಣಹದ್ದನ್ನು ತಮ್ಮ ಸುಪರ್ಧಿಗೆ ಪಡೆದು ಅಗತ್ಯ ಆರೈಕೆ ನೀಡುತ್ತಿದ್ದಾರೆ.

ಸದ್ಯ ರಣಹದ್ದಿನ ಆರೋಗ್ಯ ಸ್ಥಿತಿಯನ್ನು ನಿಗಾ ವಹಿಸಿ ನೋಡಲಾಗುತ್ತಿದ್ದು, ಸಂಪೂರ್ಣ ಚೇತರಿಸಿಕೊಂಡ ಬಳಿಕ ಹಾರಿ ಬಿಡುವ ಕುರಿತು ಮಹಾರಾಷ್ಟ್ರ ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಅವರ ಸೂಚನೆಗಳಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿಜಯಪುರ ಜಿಲ್ಲಾ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

70 ಸಾವಿರ ರೂ. ಕಾರನ್ನು ಮಾಡಿಫೈ ಮಾಡಿದ ವಿದ್ಯಾರ್ಥಿಗೆ 1 ಲಕ್ಷ ರೂ. ದಂಡ: ಫೈನ್ ಹಾಕಬೇಡಿ ಎಂದು ರಾಜಕಾರಣಿಗಳ ಒತ್ತಡ – Kannada News | Illegal Car Mod: Bangalore Student Pays 1.11 Lakh Fine for Loud Silencer

ಬೆಂಗಳೂರು, ಜ.16: ಬೆಂಗಳೂರಿನಲ್ಲಿ ಸಂಚಾರ ನಿಯಮ (Bangalore traffic fine) ಉಲ್ಲಂಘನೆ ಮಾಡಿ ದಂಡ ಹಾಕಿಸಿಕೊಳ್ಳುವುದು ಒಂದು ಕಡೆ ಹೆಚ್ಚಾಗುತ್ತಿದ್ದಾರೆ. ಮತ್ತೊಂದು ಕಡೆ ವಾಹನ ಮಾಡಿಫೈ ಮಾಡಿ ದಂಡ ಹಾಕಿಕೊಳ್ಳುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬ 70 ಸಾವಿರ ಕಾರಿಗೆ 1.11 ಲಕ್ಷ ರೂ. ದಂಡ ಹಾಕಿಸಿಕೊಂಡಿದ್ದಾನೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ಅಷ್ಟಕ್ಕೂ ಈ ವಿದ್ಯಾರ್ಥಿಗೆ ಅಷ್ಟೊಂದು ದಂಡ ಯಾಕೆ ಹಾಕಿದ್ದಾರೆ ಗೊತ್ತಾ? ಈ ಯುವಕ ತನ್ನ ಕಾರಿನ ಸೈಲೆನ್ಸರ್​​ನ್ನು ಅಕ್ರಮವಾಗಿ ಮಾಡಿಫೈ ಮಾಡಿದ್ದಾನೆ ಎಂದು ದಂಡ ಹಾಕಿದ್ದಾರೆ. ಈ ಸೈಲೆನ್ಸರ್​​ ಹಾಕಿದ ಕಾರಣ ವಿಪರೀತ ಶಬ್ದ ಮಾಲಿನ್ಯ ಆಗುತ್ತಿದೆ. ಜತೆಗೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಪೊಲೀಸರು ಈ ವಿದ್ಯಾರ್ಥಿಗೆ ಭಾರೀ ದಂಡ ಹಾಕಿದ್ದಾರೆ. ಈ ಮೂಲಕ ಯುವಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಕೇರಳ ಮೂಲದ ವಿದ್ಯಾರ್ಥಿಯೊಬ್ಬರು ಜನವರಿ 2 ರಂದು ನಗರದ ಹೆಣ್ಣೂರು ರಸ್ತೆ ಬಳಿ ಕಾರು ಚಲಾಯಿಸುತ್ತಿದ್ದಾಗ, ಕಾರಿನ ಹಿಂದೆಯಿಂದ ಬೆಂಕಿಯ ಕಿಡಿ ಹಾಗೂ ದೊಡ್ಡ ಶಬ್ದ ಬರುವುದನ್ನು ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಈ ಬಗ್ಗೆ ದಾರಿಹೋಕರೊಬ್ಬರು ಪೊಲೀಸರಿಗೆ ದೂರ ನೀಡಿದ್ದರು. ಈ ದೂರಿನ ಆಧಾರ ಮೇಲೆ ಸಂಚಾರಿ ಪೊಲೀಸರು ಕ್ಷಿಪ್ರ ಕಾರ್ಯಪವೃತ್ತರಾಗಿ ವಾಹನ ಹಾಗೂ ವಿದ್ಯಾರ್ಥಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದರು.

ಸಂಚಾರ ಪೊಲೀಸರು ಪ್ರಕರಣ ದಾಖಲಿಸುವ ಬದಲು ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್‌ಟಿಒ) ನಿಯಮ ಉಲ್ಲಂಘನೆಯ ಬಗ್ಗೆ ದೂರು ನೀಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆ ನಂತರ ಈ ಬಗ್ಗೆ ತನಿಖೆ ನಡೆಸಿದಾಗ, ಆರ್‌ಟಿಒ ಅಧಿಕಾರಿಗಳು ಕಾರಿನಲ್ಲಿ ಅಕ್ರಮವಾಗಿ ಮಾರ್ಪಡಿಸಿದ ಸೈಲೆನ್ಸರ್ ಇರುವುದನ್ನು ದೃಢಪಡಿಸಿದ್ದರು. ಅದು ಅತಿಯಾದ ಶಬ್ದವನ್ನು ಮಾತ್ರವಲ್ಲದೆ ಇತರ ವಾಹನ ಚಾಲಕರಲ್ಲಿ ಭಯವನ್ನು ಉಂಟು ಮಾಡುವಂತೆ ಸೈಲೆನ್ಸರ್​​​​ನಿಂದ ಕಿಡಿ ಬರುತ್ತಿತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಚಿಣ್ಣರಿಗೆ ಹೊಸ ಹಾಟ್‌ಸ್ಪಾಟ್! ಕಬ್ಬನ್ ಪಾರ್ಕ್​ ಬಾಲಭವನದಲ್ಲಿ ಆರಂಭವಾಗಲಿದೆ ಸ್ಕೇಟಿಂಗ್ ಬೋರ್ಡ್ ಪಾರ್ಕ್

ಈ ಮಾಡಿಫೈ ಮೋಟಾರು ವಾಹನ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಇದು ಅಪಾಯಕಾರಿಯಾಗಿದ್ದು, ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿತು ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಈ ವಿದ್ಯಾರ್ಥಿಗೆ ರಾಜಕೀಯ ಪ್ರಭಾವ ಕೂಡ ಇತ್ತು ಎಂದು ಹೇಳಲಾಗಿದೆ. ಕಡಿಮೆ ದಂಡವನ್ನು ಹಾಕಿ ಬಿಟ್ಟು ಕಳಿಸಿ ಎಂದು ಒತ್ತಡವನ್ನು ಕೂಡ ಪೊಲೀಸರ ಮೇಲೆ ಹಾಕಲಾಗಿತ್ತು. ಆದರೆ ಪೊಲೀಸರು ಇದನ್ನು ಲೆಕ್ಕಿಸದೆ 1,11,500 ಲಕ್ಷ ರೂ. ದಂಡವನ್ನು ವಿಧಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ (DH) ವರದಿ ಮಾಡಿದೆ. ವಿದ್ಯಾರ್ಥಿ ಈ ದಂಡವನ್ನು ಪಾವತಿಸಿದ ನಂತರ ಕಾರನ್ನು ಬಿಟ್ಟು ಕಳಿಸಿದ್ದಾರೆ. ಈ ಉಲ್ಲಂಘನೆಯನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version