ಸೋಲು ಹೀನಾಯ ಸೋಲು… ಪಾಕಿಸ್ತಾನ್ ವೈಟ್ ವಾಶ್ಡ್​..! – Kannada News | Pakistan whitewashed by Bangladesh

ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಬಾಂಗ್ಲಾದೇಶ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಬಾಂಗ್ಲಾ ಪಡೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಸಿಲ್ಹೆಟ್ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮೊದಲ ಇನಿಂಗ್ಸ್​ನಲ್ಲಿ 278 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಪಾಕಿಸ್ತಾನ್ 232 ರನ್​ಗಳಿಗೆ ಆಲೌಟ್ ಆಗಿದ್ದರು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಬಾಂಗ್ಲಾದೇಶ್ 390 ರನ್​ ಗಳಿಸಿತು. ಅದರಂತೆ ದ್ವಿತೀಯ ಇನಿಂಗ್ಸ್​ನಲ್ಲಿ 437 ರನ್​ಗಳ ಗುರಿ ಪಡೆದ ಪಾಕಿಸ್ತಾನ್ ತಂಡವು 358 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಬಾಂಗ್ಲಾದೇಶ್ ತಂಡವು ದ್ವಿತೀಯ ಟೆಸ್ಟ್​ ಪಂದ್ಯದಲ್ಲಿ ಬರೋಬ್ಬರಿ 78 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಐತಿಹಾಸಿಕ ಸಾಧನೆ:

  • ಇದು ಬಾಂಗ್ಲಾದೇಶ್ ತಂಡವು ಪಾಕಿಸ್ತಾನ್ ವಿರುದ್ಧ ಸಾಧಿಸಿದ ಸತತ ಎರಡನೇ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಆಗಿದೆ. ಇದಕ್ಕೂ ಮುನ್ನ 2024ರ ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದ ನೆಲದಲ್ಲೇ ಬಾಂಗ್ಲಾದೇಶ 2-0 ಸರಣಿ ಜಯಿಸಿ ಇತಿಹಾಸ ನಿರ್ಮಿಸಿತ್ತು. ಈಗ ತನ್ನದೇ ತಾಯ್ನಾಡಿನಲ್ಲಿ ಆ ಪ್ರಾಬಲ್ಯವನ್ನು ಮುಂದುವರಿಸಿದೆ.
  • ಹಾಗೆಯೇ ಬಾಂಗ್ಲಾದೇಶ್ ತಂಡವು ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಎರಡು ಸರಣಿಗಳಲ್ಲಿ ಸೋಲಿಸಿದೆ. ಅಂದರೆ ಈ ಟೆಸ್ಟ್​ ಸರಣಿಗೂ ಮುನ್ನ  ಪಾಕಿಸ್ತಾನ್ ವಿರುದ್ಧ 2-1 ಅಂತರದಿಂದ ಏಕದಿನ  ಸರಣಿ ಗೆದ್ದುಕೊಂಡಿತ್ತು. ಇದೀಗ 2-0 ಅಂತರದಿಂದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC)

ಪಾಕಿಸ್ತಾನ್ ವಿರುದ್ಧದ ಈ ಭರ್ಜರಿ ಗೆಲುವಿನೊಂದಿಗೆ ಬಾಂಗ್ಲಾದೇ್ಶ​ ತಂಡವು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಪಟ್ಟಿಯಲ್ಲಿ ಶೇಕಡಾ 58.33 ರಷ್ಟು ಗೆಲುವಿನ ಸರಾಸರಿಯೊಂದಿಗೆ 5ನೇ ಸ್ಥಾನಕ್ಕೆ ಜಿಗಿದಿದೆ.

ಇದನ್ನೂ ಓದಿ: ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!

ಮತ್ತೊಂದೆಡೆ, ಈ ಸರಣಿ ಸೋಲಿನೊಂದಿಗೆ ಪಾಕಿಸ್ತಾನ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿರುವ ಪಾಕಿಸ್ತಾನ್ ತಂಡ ಈವರೆಗೆ ಪಡೆದಿರುವುದು ಕೇವಲ 4 ಅಂಕಗಳನ್ನು ಮಾತ್ರ. ಹೀಗಾಗಿ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಬೇಕಿದ್ದರೆ ಇನ್ನುಳಿದ ಎಲ್ಲಾ ಮ್ಯಾಚ್​ಗಳಲ್ಲೂ ಜಯ ಸಾಧಿಸಬೇಕಾಗುತ್ತದೆ.

Source link

ಗಡಿಪಾರಾಗಿದ್ದ ರೌಡಿಯನ್ನು ಮಗಳ ಮದುವೆ ಮಂಟಪದಿಂದಲೇ ಸಿನಿಮೀಯ ಶೈಲಿಯಲ್ಲಿ ಎಳೆದೊಯ್ದ ಪೊಲೀಸರು: ವಿಡಿಯೋ ವೈರಲ್ – Kannada News | KGF Rowdy Sheeter Arrested From Daughter Marriage Hall: Extortionist Stanley Nabbed in Filmy Style by Kolar Police

ಕೋಲಾರ, ಮೇ 20: ಕೋಲಾರ ಜಿಲ್ಲೆಯ ಕೆಜಿಎಫ್‌ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್‌ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ ವೈರಲ್ ಆಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಮಗಳ ಮದುವೆಗೆ ಪೆಂಡಾಲ್ ಹಾಗೂ ಡೆಕೋರೇಷನ್ ಕೆಲಸ ಮಾಡಿಕೊಡುತ್ತಿದ್ದ ಅಂಗಡಿ ಮಾಲೀಕ ಮೊಹಮ್ಮದ್ ಸಕ್ಲೇನ್ ಎಂಬುವರಿಗೆ ರೌಡಿಶೀಟರ್ ಸ್ಟಾನ್ಲಿ ಭೀತಿ ಹುಟ್ಟಿಸಿದ್ದ. ತನಗೆ ಹೆದರಿಸಿ, ಬೆದರಿಕೆ ಹಾಕಿ ತನ್ನ ಮಗಳ ಮದುವೆಗೆ ಹಣ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಸಂತ್ರಸ್ತ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ಈಗಾಗಲೇ ನಗರದಿಂದ ಗಡಿಪಾರಾಗಿದ್ದರೂ ಕಾನೂನು ಉಲ್ಲಂಘಿಸಿ ನಗರದೊಳಗೆ ಪ್ರವೇಶಿಸಿದ್ದಲ್ಲದೆ, ಸಾರ್ವಜನಿಕರಿಗೆ ಹಪ್ತಾ ವಸೂಲಿಗಾಗಿ ಕಿರುಕುಳ ನೀಡುತ್ತಿದ್ದ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಅಲರ್ಟ್ ಆಗಿದ್ದಾರೆ.

ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶಿವಾಂಶು ರಜಪೂತ್ ಅವರ ಖಡಕ್ ಸೂಚನೆ ಮೇರೆಗೆ ಕಾರ್ಯಾಚರಣೆಗೆ ಇಳಿದ ಆಂಡರ್ಸನ್‌ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡ, ಸುಸೈಪಾಳ್ಯಂ ಚರ್ಚ್‌ನಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಲಗ್ಗೆ ಇಟ್ಟಿದ್ದಾರೆ. ಮದುವೆ ಮಂಟಪದಲ್ಲೇ ಇದ್ದ ಆರೋಪಿ ಸ್ಟಾನ್ಲಿಯನ್ನು ಸುತ್ತುವರಿದು ಸಿನಿಮೀಯ ಶೈಲಿಯಲ್ಲಿ ಎಳೆದೊಯ್ದಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಕರೆದೊಯ್ಯುತ್ತಿರುವ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆಪರೇಷನ್ ಎಪಿಕ್ ಫ್ಯೂರಿಯಲ್ಲಿ ಅಮೆರಿಕಕ್ಕೆ ಭಾರಿ ಪೆಟ್ಟು, ಇರಾನ್​ ಮೇಲಿನ ದಾಳಿಯಲ್ಲಿ 42 ಯುದ್ಧ ವಿಮಾನಗಳು, ಡ್ರೋನ್​ಗಳು ಧ್ವಂಸ – Kannada News | The Ghostly Cost of Epic Fury How a Single U.S. Operation Against Iran Left 42 Warplanes Damaged or Destroyed

ವಾಷಿಂಗ್ಟನ್, ಮೇ 20: ಅಮೆರಿಕ(America)ವು ಫೆಬ್ರವರಿ 28ರಂದು ಇರಾನ್ ವಿರುದ್ಧ ನಡೆಸಿದ ಹೈ-ವೋಲ್ಟೇಜ್ ಮಿಲಿಟರಿ ಕಾರ್ಯಾಚರಣೆ ‘ಆಪರೇಷನ್ ಎಪಿಕ್ ಫ್ಯೂರಿ’ ವೇಳೆ ತನ್ನ ಅತ್ಯಂತ ಆಧುನಿಕ ಫೈಟರ್ ಜೆಟ್‌ಗಳು ಮತ್ತು ಡ್ರೋನ್‌ಗಳು ಸೇರಿದಂತೆ ಕನಿಷ್ಠ 42 ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಅಥವಾ ಭೀಕರವಾಗಿ ಹಾನಿಗೊಳಿಸಿಕೊಂಡಿದೆ ಎಂದು ಅಧಿಕೃತ ವರದಿ ಬಹಿರಂಗಪಡಿಸಿದೆ.

ಮಿಲಿಟರಿ ಕಾರ್ಯಾಚರಣೆಗಳ ರಹಸ್ಯ ವರ್ಗೀಕರಣ ನಿರ್ಬಂಧಗಳು, ಆ ಪ್ರದೇಶದಲ್ಲಿ ಇನ್ನೂ ನಡೆಯುತ್ತಿರುವ ಯುದ್ಧ ಮತ್ತು ಹಾನಿಯ ನಿಖರ ಮೌಲ್ಯಮಾಪನದ ಸವಾಲುಗಳಿಂದಾಗಿ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಸಿಆರ್ಎಸ್ (CRS) ವರದಿ ಹೇಳಿದೆ. ಯುಎಸ್ ರಕ್ಷಣಾ ಇಲಾಖೆ (Pentagon) ಮತ್ತು ಯುನೈಟೆಡ್ ಸ್ಟೇಟ್ಸ್ ಸೆಂಟ್ರಲ್ ಕಮಾಂಡ್ (CENTCOM) ನೀಡಿದ ಆಂತರಿಕ ಹೇಳಿಕೆಗಳು ಹಾಗೂ ಮಾಧ್ಯಮ ವರದಿಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ಈ ಕರಡು ಸಿದ್ಧಪಡಿಸಲಾಗಿದೆ.

ಇರಾನ್‌ನ ಪ್ರತಿದಾಳಿ ಅಥವಾ ತಾಂತ್ರಿಕ ವೈಫಲ್ಯದಿಂದಾಗಿ ಅಮೆರಿಕ ಕಳೆದುಕೊಂಡ ವಿಮಾನಗಳ ಪಟ್ಟಿ ಹೀಗಿದೆ.

ಫೈಟರ್ ಜೆಟ್‌ಗಳು: 4 ಅತ್ಯಂತ ಶಕ್ತಿಶಾಲಿ F-15E ಸ್ಟ್ರೈಕ್ ಈಗಲ್ ಮತ್ತು 1 ಅತ್ಯಾಧುನಿಕ F-35A ಲೈಟ್ನಿಂಗ್ II ಜಂಟಿ ದಾಳಿ ವಿಮಾನ.

ಟ್ಯಾಂಕರ್ ವಿಮಾನಗಳು: ಶತ್ರುಗಳ ಹೆಡೆಮುರಿ ಕಟ್ಟುವ 1 A-10 ಥಂಡರ್ಬೋಲ್ಟ್ II, ಇಂಧನ ಮರುಪೂರಣ ಮಾಡುವ 7 ಬೃಹತ್ KC-135 ಸ್ಟ್ರಾಟೋಟ್ಯಾಂಕರ್ ವಿಮಾನಗಳು ಮತ್ತು 2 MC-130J ಕಮಾಂಡೋ II ವಿಮಾನಗಳು.

ಹೆಲಿಕಾಪ್ಟರ್: ಇಡೀ ಯುದ್ಧವನ್ನು ನಿಯಂತ್ರಿಸುವ 1 E-3 ಸೆಂಟ್ರಿ ವಾಯುಗಾಮಿ ಎಚ್ಚರಿಕೆ (AWACS) ವಿಮಾನ ಮತ್ತು ರಕ್ಷಣಾ ಕಾರ್ಯಾಚರಣೆಯ 1 HH-60W ಜಾಲಿ ಗ್ರೀನ್ II ​​ಹೆಲಿಕಾಪ್ಟರ್.

ಡ್ರೋನ್ ಪಡೆಗೆ ಮಾರಣಾಂತಿಕ ಪೆಟ್ಟು: ಅಮೆರಿಕದ ಹೆಮ್ಮೆಯ 24 MQ-9 ರೀಪರ್ ಡ್ರೋನ್‌ಗಳು ಮತ್ತು 1 ಹೈ-ಟೆಕ್ MQ-4C ಟ್ರೈಟಾನ್ ಕಣ್ಗಾವಲು ಡ್ರೋನ್ ಸಂಪೂರ್ಣ ನಾಶವಾಗಿವೆ.

ಮತ್ತಷ್ಟು ಓದಿ: ಭಾರತ-ಅಮೆರಿಕದಲ್ಲಲ್ಲ, ಪ್ರಧಾನಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಆತಿಥ್ಯ ವಹಿಸಲಿದೆ ಈ ರಾಷ್ಟ್ರ

29 ಬಿಲಿಯನ್ ಡಾಲರ್‌ಗೆ ಏರಿದ ಯುದ್ಧದ ವೆಚ್ಚ
ಮೇ 12 ರಂದು ನಡೆದ ಯುಎಸ್ ಸದನದ ವಿನಿಯೋಗ ಉಪಸಮಿತಿಯ ಗಂಭೀರ ವಿಚಾರಣೆಯ ಸಂದರ್ಭದಲ್ಲಿ, ಪೆಂಟಗನ್‌ನ ಕಾರ್ಯಕಾರಿ ನಿಯಂತ್ರಕ ಜೂಲ್ಸ್ ಡಬ್ಲ್ಯೂ ಹರ್ಸ್ಟ್ III ಈ ಆಘಾತಕಾರಿ ಆರ್ಥಿಕ ನಷ್ಟವನ್ನು ಒಪ್ಪಿಕೊಂಡಿದ್ದಾರೆ. ಇರಾನ್‌ನಲ್ಲಿನ ಮಿಲಿಟರಿ ಕಾರ್ಯಾಚರಣೆಗಳಿಗಾಗಿ ಅಮೆರಿಕದ ಒಟ್ಟು ವೆಚ್ಚವು ಬರೋಬ್ಬರಿ 29 ಶತಕೋಟಿ ಡಾಲರ್‌ಗಳಿಗೆ (ಸುಮಾರು 2,42,000 ಕೋಟಿ ರೂಪಾಯಿ) ಏರಿಕೆಯಾಗಿದೆ ಎಂದು ಅವರು ಸಾಕ್ಷ್ಯ ನುಡಿದಿದ್ದಾರೆ.

ಯುದ್ಧದ ವೆಚ್ಚ ಇಷ್ಟು ದೊಡ್ಡ ಮಟ್ಟದಲ್ಲಿ ಏರಿಕೆಯಾಗಲು ಪ್ರಮುಖ ಕಾರಣ, ರಣಾಂಗಣದಲ್ಲಿ ಹಾನಿಗೊಳಗಾದ ಬಿಲಿಯನ್ ಡಾಲರ್ ಮೌಲ್ಯದ ಯುದ್ಧೋಪಕರಣಗಳ ದುರಸ್ತಿ ಮತ್ತು ಧ್ವಂಸಗೊಂಡ ವಿಮಾನಗಳ ಬದಲಿ ವೆಚ್ಚದ ಪರಿಷ್ಕೃತ ಅಂದಾಜೇ ಆಗಿದೆ ಎಂದು ಹರ್ಸ್ಟ್ ಕಳವಳ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ, ಇರಾನ್ ವಿರುದ್ಧ ಜಯಭೇರಿ ಬಾರಿಸಲು ಹೋದ ಸೂಪರ್ ಪವರ್ ಅಮೆರಿಕಗೆ, ‘ಆಪರೇಷನ್ ಎಪಿಕ್ ಫ್ಯೂರಿ’ ಇತಿಹಾಸದಲ್ಲೇ ಎಂದಿಗೂ ಮರೆಯಲಾಗದ ಆರ್ಥಿಕ ಹಾಗೂ ಮಿಲಿಟರಿ ಆಘಾತವನ್ನು ನೀಡಿದೆ ಎಂಬುದು ಈಗ ಸಾಬೀತಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹುಡುಗಿ ಕೈಕೊಟ್ಟಿದ್ದಕ್ಕೆ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಯುವಕನ ಹೈಡ್ರಾಮಾ: ಪ್ರೇಮಿಯ ಹುಚ್ಚಾಟಕ್ಕೆ ಜನರು ಕಂಗಾಲು – Kannada News | Anekal Love Failure Drama: Dejected Lover Climbs High Tension Electric Pole After Girl Rejects Marriage Proposal

ಹೈಟೆನ್ಷನ್ ಕಂಬ ಹತ್ತಿದ ಭಗ್ನ ಪ್ರೇಮಿImage Credit source: tv9

ಆನೇಕಲ್, ಮೇ 20: ಪ್ರೀತಿಸಿದ ಹುಡುಗಿ ಮದುವೆಗೆ ನಿರಾಕರಿಸಿ ಕೈಕೊಟ್ಟಿದ್ದಾಳೆಂಬ ಕಾರಣಕ್ಕೆ ಬೇಸತ್ತ ಯುವಕನೊಬ್ಬ ಅಪಾಯಕಾರಿ ಸಾಹಸ ಮಾಡಿದ್ದಾನೆ. ಆತ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಆನೇಕಲ್ (Anekal) ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ. ಚಿನ್ನಯ್ಯನಪಾಳ್ಯದ ನಿವಾಸಿಯಾದ ಸೋಮಶೇಖರ್ ಎಂಬಾತನೇ ವಿದ್ಯುತ್ ಕಂಬದ ಮೇಲೇರಿ ಹೈಡ್ರಾಮಾ ಸೃಷ್ಟಿಸಿರುವ ಪ್ರೇಮಿ. ಈತನ ಹುಚ್ಚಾಟದಿಂದಾಗಿ ಇಡೀ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಗಂಟೆಗಟ್ಟಲೆ ಆತಂಕದಲ್ಲಿ ಕಳೆಯುವಂತಾಯಿತು.

ಮುಖ್ಯಾಂಶಗಳು

  • ಕಳೆದ 3 ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಸೋಮಶೇಖರ್.
  • ಆಕೆ ಮದುವೆ ನಿರಾಕರಿಸಿ ಲವ್ ಬ್ರೇಕಪ್ ಮಾಡಿಕೊಂಡಿದ್ದಕ್ಕೆ ಮನನೊಂದು ಈ ಕೃತ್ಯ .
  • ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ.

ಸ್ಥಳೀಯ ಮೂಲಗಳ ಪ್ರಕಾರ, ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ, ಇತ್ತೀಚೆಗೆ ಯುವತಿಯು ಮದುವೆಗೆ ನಿರಾಕರಿಸಿ, ಪ್ರೇಮ ಸಂಬಂಧವನ್ನು ಮುರಿದುಕೊಳ್ಳಲು (ಲವ್ ಬ್ರೇಕಪ್) ಮುಂದಾಗಿದ್ದಾಳೆ. ಇದರಿಂದ ತೀವ್ರ ಆಕ್ರೋಶಗೊಂಡ ಸೋಮಶೇಖರ್, ಮೊದಲು ತನ್ನ ಮನೆಯ ಮೇಲ್ಛಾವಣಿಯ ಶೀಟ್‌ಗಳನ್ನು ಒಡೆದು ದಾಂಧಲೆ ನಡೆಸಿದ್ದಾನೆ. ಅದಾದ ಬಳಿಕವೂ ಆಕ್ರೋಶ ತಣಿಯದೇ, ಮನೆ ಸಮೀಪದಲ್ಲೇ ಇದ್ದ ಭಾರಿ ಗಾತ್ರದ ಹೈಟೆನ್ಷನ್ ವಿದ್ಯುತ್ ಕಂಬದ ಮೇಲೇರಿದ್ದಾನೆ. ‘ತಾನು ಪ್ರೀತಿಸಿದ ಹುಡುಗಿ ಸ್ಥಳಕ್ಕೆ ಬರುವವರೆಗೂ ತಾನು ಯಾವುದೇ ಕಾರಣಕ್ಕೂ ಕೆಳಗೆ ಇಳಿಯುವುದಿಲ್ಲ’ ಎಂದು ಕಂಬದ ಮೇಲಿಂದಲೇ ಪಟ್ಟು ಹಿಡಿದು ಕಿರುಚಾಡಿದ್ದಾನೆ.

ಹೈಟೆನ್ಷನ್ ಕಂಬದಲ್ಲಿ ಯುವಕ: ವಿಡಿಯೋ ಇಲ್ಲಿ ನೋಡಿ

ವಿಷಯ ತಿಳಿಯುತ್ತಿದ್ದಂತೆಯೇ ಆನೇಕಲ್ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಕಂಬದ ಸುತ್ತಲೂ ನೂರಾರು ಗ್ರಾಮಸ್ಥರು ಜಮಾಯಿಸಿದ್ದು, ಯುವಕನಿಗೆ ತಿಳಿಹೇಳಿ ಕೆಳಗಿಳಿಸಲು ಶತಪ್ರಯತ್ನ ನಡೆಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಎಷ್ಟೇ ಮನವೊಲಿಸಿದರೂ ಯುವಕ ಮಾತ್ರ ಕೆಳಗಿಳಿಯಲು ಒಪ್ಪದೆ ಹಠ ಹಿಡಿದಿದ್ದಾನೆ. ಕಂಬದಲ್ಲಿ ಹೈವೋಲ್ಟೇಜ್ ವಿದ್ಯುತ್ ಪ್ರವಹಿಸುವ ಆಪಾಯವಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಲು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜೂ ಎನ್​​ಟಿಆರ್​​ಗೆ ಏನಾಗಿದೆ? ಕಾಡುತ್ತಿದ್ದೆಯೇ ಅನಾರೋಗ್ಯ?

ಇಂದು (ಮೇ 20) ತೆಲುಗು ಚಿತ್ರರಂಗದ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ವರ್ಷದ ಹುಟ್ಟುಹಬ್ಬವನ್ನು ಜೂ ಎನ್​​ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ಭಾರಿ ಸಂಖ್ಯೆಯ ಅಭಿಮಾನಿಗಳು ನಟನ ಮನೆ ಬಳಿ ತೆರಳಿ ನೆಚ್ಚಿನ ನಟನಿಗೆ ಶುಭಾಶಯಗಳನ್ನು ತಿಳಿಸಿದರು. ಜೂ ಎನ್​​ಟಿಆರ್ ಸಹ ಮಧ್ಯರಾತ್ರಿ ಎದ್ದು ಬಂದು ಅಭಿಮಾನಿಗಳತ್ತ ಕೈಬೀಸಿ ಧನ್ಯವಾದ ಹೇಳಿದರು. ಜೂ ಎನ್​​ಟಿಆರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುವ ಜೊತೆಗೆ ಅವರ ಬಗ್ಗೆ ಅವರ ಆರೋಗ್ಯದ ಬಗ್ಗೆ ಕೆಲವರು ಕಾಳಜಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ವರ್ಷಗಳಿಂದಲೂ ಜೂ ಎನ್​​ಟಿಆರ್ ಅವರನ್ನು ನೋಡುತ್ತಾ ಬಂದವರಿಗೆ ಇತ್ತೀಚೆಗೆ ಅವರಲ್ಲಾಗಿರುವ ಬದಲಾವಣೆ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಜೂ ಎನ್​​ಟಿಆರ್ ಖಂಡಿತ ಹೀಗಿರಲಿಲ್ಲ. ಅವರಿಗೆ ಏನೋ ಆಗಿದೆ.

ಜೂ ಎನ್​​ಟಿಆರ್ ಮೊದಲು ಬಹಳ ದಪ್ಪ ಇದ್ದರು. ಆದರೆ 2007 ರಲ್ಲಿ ತೂಕ ಇಳಿಸಿಕೊಂಡು ಸಣ್ಣಗಾದರು. ಬಳಿಕ ಅವರ ವೃತ್ತಿ ಜೀವನ ಇನ್ನೂ ಏರುಗತಿ ಹಿಡಿಯಿತು. ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದರು. ತೆರೆಯ ಮೇಲೆ ಮತ್ತು ತೆರೆಯಾಚೆಯ ವ್ಯಕ್ತಿತ್ವದಿಂದಲೂ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದರು. ಜೂ ಎನ್​​ಟಿಆರ್ ಅನ್ನು ತೆರೆಯ ಮೇಲೆ ನೋಡುವುದೇ ಒಂದು ಆನಂದವಾಗಿತ್ತು.

ಅವರ ಸಿನಿಮಾಗಳಷ್ಟೆ ಅವರ ಸಂದರ್ಶನಗಳು ಸಹ ಬಹಳ ಮಜವಾಗಿರುತ್ತಿದ್ದವು. ಜೂ ಎನ್​​ಟಿಆರ್ ಅದ್ಭುತವಾದ ಮಾತುಗಾರ. ಬಹಳ ತಮಾಷೆ ಪ್ರವೃತ್ತಿಯ ವ್ಯಕ್ತಿತ್ವ ಅವರದ್ದು. ಮುಖದ ಮೇಲೆ ಸದಾ ನಗು ಇದ್ದೇ ಇರುತ್ತಿತ್ತು. ಆದರೆ ಅದೆಲ್ಲ ಈಗ ಮಾಯವಾದಂತೆ ಕಾಣುತ್ತಿದೆ. ಇತ್ತೀಚೆಗಿನ ಜೂ ಎನ್​​ಟಿಆರ್ ಅವರ ವಿಡಿಯೋ, ಫೋಟೊಗಳು ನೋಡಿದರೆ ಜೂ ಎನ್​​ಟಿಆರ್ ಯಾವುದೋ ನೋವಿನಲ್ಲಿರುವಂತೆ ಭಾಸವಾಗುತ್ತದೆ. ಅವರ ಮುಖದಲ್ಲಿ ಹಿಂದಿನ ಕಳೆಯೇ ಇಲ್ಲವಲ್ಲ ಎನಿಸುತ್ತದೆ. ಮುಖ್ಯವಾದ ಅವರ ಮುಖದಲ್ಲಿ ಆ ಅದ್ಭುತ ನಗು ಮಾಯವಾಗಿದೆ.

ಇದನ್ನೂ ಓದಿ:ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ

ಜೂ ಎನ್​​ಟಿಆರ್ ಅವರಿಗೆ ಅದ್ಭುತವಾದ ಚುರುಕುತನ, ಎನರ್ಜಿ ಇತ್ತು. ಅವರು ಯಾವುದೇ ವೇದಿಕೆಯಲ್ಲಿ ಕಾಣಿಸಿಕೊಂಡರು ಆ ಎನರ್ಜಿ, ಚುರುಕುತನ ಎದ್ದು ಕಾಣುತ್ತಿತ್ತು. ನಗುತ್ತಾ, ಜೊತೆಗಿದ್ದವರ ನಗಿಸುತ್ತಾ ಇರುತ್ತಿದ್ದರು. ‘ಆರ್​ಆರ್​​ಆರ್’ ಸಿನಿಮಾ ಸಮಯದ ಯಾವುದೇ ಸಂದರ್ಶನ ತೆಗೆದು ನೋಡಿ, ಅಲ್ಲಿ ಶೈನ್ ಆಗಿದ್ದೇ ಜೂ ಎನ್​​ಟಿಆರ್. ತಮ್ಮ ತಮಾಷೆ ಉತ್ತರಗಳು, ರಾಮ್ ಚರಣ್ ಜೊತೆಗೆ ತುಂಟಾಟ ಸಖತ್ ಮಜಾ ಕೊಡುತ್ತಿದ್ದವು. ಆದರೆ ಇತ್ತೀಚೆಗೆ ಜೂ ಎನ್​​ಟಿಆರ್ ಮುಖದಲ್ಲಿ ಸಪ್ಪೆ ತನ ತುಂಬಿಕೊಂಡಿದೆ.

ಇಂದು ‘ಡ್ರ್ಯಾಗನ್’ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಟೀಸರ್​​ನಲ್ಲಿ ಜೂ ಎನ್​​ಟಿಆರ್ ಸಖತ್ ಫಿಟ್ ಆಗಿ ಕಾಣುತ್ತಿದ್ದಾರೆ ಆದರೆ ಮುಖದಲ್ಲಿ ಹಿಂದೆ ಇದ್ದ ಕಳೆ ಮಾಯವಾಗಿದೆ. ಜೂ ಎನ್​​ಟಿಆರ್ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆಯೇ? ಅಥವಾ ಮಾನಸಿಕ ಸಮಸ್ಯೆಗಳು ಏನಾದರೂ ಎದುರಾಗಿದೆಯೇ ಎಂದು ಅಭಿಮಾನಿಗಳು ಕಾಳಜಿ ವ್ಯಕ್ತಪಡಿಸುತ್ತಿದ್ದಾರೆ. ಮತ್ತೆ ಹಿಂದಿನ ಜೂ ಎನ್​​ಟಿಆರ್ ಅನ್ನು ಕಾಣಲು ಬಯಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್ – Kannada News | Bigg Boss Fame Rakshita Shetty feed Chicken To Dogs

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More

Source link

Gold Rate: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಸತತ ಇಳಿಕೆ – Kannada News | Gold Price Today on 20th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 20: ಚಿನ್ನದ ಬೆಲೆ ಮತ್ತೆ ಏರಿದೆ. ನಿನ್ನೆ 75 ರೂ ಹೆಚ್ಚಿದ್ದ ಇದರ ಬೆಲೆ ಇವತ್ತು ಬುಧವಾರ 120 ರೂಗಳಷ್ಟು ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ತುಸು ಇಳಿದಿದೆ. ಭಾರತದಲ್ಲಿ ಬಂಗಾರದ ದರ (Gold Rate) ಹಿಗ್ಗಿದೆ. ರುಪಾಯಿ ಮೌಲ್ಯ ಕುಸಿತದಿಂದ ಬೆಲೆ ಏರಿಕೆ ಹೆಚ್ಚು ಅಗಾಧವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂನಿಂದ 15 ರೂವರೆಗೆ ಕುಸಿತ ಕಂಡಿದೆ. ನಿನ್ನೆಯೂ ಇದರ ಬೆಲೆಯಲ್ಲಿ ಇಳಿಕೆ ಆಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 20ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,835 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,515 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,876 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,835 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,515 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,515 ರೂ
  • ಚೆನ್ನೈ: 14,750 ರೂ
  • ಮುಂಬೈ: 14,515 ರೂ
  • ದೆಹಲಿ: 14,530 ರೂ
  • ಕೋಲ್ಕತಾ: 14,515 ರೂ
  • ಕೇರಳ: 14,515 ರೂ
  • ಅಹ್ಮದಾಬಾದ್: 14,520 ರೂ
  • ಜೈಪುರ್: 14,530 ರೂ
  • ಲಕ್ನೋ: 14,530 ರೂ
  • ಭುವನೇಶ್ವರ್: 14,515 ರೂ

ಇದನ್ನೂ ಓದಿ: ಅಮೆರಿಕದ ಡೆಟ್ ಮಾರುಕಟ್ಟೆಯನ್ನು ತೊರೆಯುತ್ತಿರುವ ಹೂಡಿಕೆದಾರರು; ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 549 ರಿಂಗಿಟ್ (13,375 ರುಪಾಯಿ)
  • ದುಬೈ: 502 ಡಿರಾಮ್ (13,241 ರುಪಾಯಿ)
  • ಅಮೆರಿಕ: 140.50 ಡಾಲರ್ (13,605 ರುಪಾಯಿ)
  • ಸಿಂಗಾಪುರ: 181.50 ಸಿಂಗಾಪುರ್ ಡಾಲರ್ (13,710 ರುಪಾಯಿ)
  • ಕತಾರ್: 499.50 ಕತಾರಿ ರಿಯಾಲ್ (13,288 ರೂ)
  • ಸೌದಿ ಅರೇಬಿಯಾ: 511 ಸೌದಿ ರಿಯಾಲ್ (13,192 ರುಪಾಯಿ)
  • ಓಮನ್: 53.75 ಒಮಾನಿ ರಿಯಾಲ್ (13,525 ರುಪಾಯಿ)
  • ಕುವೇತ್: 41.42 ಕುವೇತಿ ದಿನಾರ್ (12,979 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 285 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 285 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​ – Kannada News | Bengaluru Man’s Post On 3 Hour Traffic Nightmare Goes Viral in Social Media

ಬೆಂಗಳೂರು, ಮೇ 20: ಮಳೆ ಬಂತೆಂದರೆ ಸಾಕು ಬೆಂಗಳೂರಿನ (Bengaluru) ರಸ್ತೆಗಳು ಹೊಳೆಯಂತಾಗೋದು ನಗರ ನಿವಾಸಿಗಳಿಗೆ ಹೊಸದೇನೂ ಅಲ್ಲ. ಈ ವೇಳೆ ಉಂಟಾಗುವ ಟ್ರಾಫಿಕ್​​ ಸಮಸ್ಯೆಯ ಕುರಿತಂತೂ ಮತ್ತೆ ಹೇಳಬೇಕಿಲ್ಲ. ಯಾವಾಗ ಮನೆ, ಕಚೇರಿ ಅಥವಾ ಗಮ್ಯ ಸ್ಥಾನ ತಲುಪುತ್ತೇವೆ ಎಂದು ವಾಹನ ಸವಾರರು ಹೇಳಲು ಸಾಧ್ಯವೇ ಇಲ್ಲ. ಈ ನಡುವೆ ಮೊನ್ನೆ ಬೆಂಗಳೂರಲ್ಲಿ ಸುರಿದ ಮಳೆಯ ವೇಳೆ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಸುಮಾರು 4 ಕಿ.ಮೀ. ಕ್ರಮಿಸಲು ವ್ಯಕ್ತಿಯೋರ್ವರು ಒಂದೂವರೆ ಗಂಟೆ ಸಮಯ ತೆಗೆದುಕೊಂಡ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​​ ಆಗಿದೆ.

ಮೇ 18ರ ಸೋಮವಾರ ಸಂಜೆ ಸುರಿದ ಭಾರೀ ಮಳೆಯು ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿತು. ಇದರಿಂದ ಬೇಸತ್ತ ವರುಣ್​​ ರಂಗರಾಜನ್​​ ಎಂಬವರು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ಪ್ರಕಾರ, ಅವರು ಸಂಜೆ 5:17ಕ್ಕೆ ಬೆಳ್ಳಂದೂರಿನಿಂದ ಹೊರಟಿದ್ದು, ಔಟರ್ ರಿಂಗ್ ರೋಡ್‌ನಲ್ಲಿ ಭಾರೀ ಟ್ರಾಫಿಕ್‌ಗೆ ಸಿಲುಕಿದ್ದಾರೆ. ಹೀಗಾಗಿ ಬರೋಬ್ಬರಿ 3 ಗಂಟೆಗಳ ಕಾಲ ತಾನು ಟ್ರಾಫಿಕ್​​ನಲ್ಲಿ ಸಿಲುಕಿದ್ದೆ. ಕೇವಲ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಬರಲು ಸುಮಾರು ಒಂದೂವರೆ ಗಂಟೆ ಸಮಯ ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ 

ಪರಿಸ್ಥಿತಿ ಹೀಗಿದ್ದರೂ ಮಾರ್ಗಮಧ್ಯೆ ಒಬ್ಬ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೂ ಕಾಣಿಸಲಿಲ್ಲ. ಗೂಗಲ್ ಮ್ಯಾಪ್ ಪ್ರಕಾರ ಮನೆಗೆ ನಡೆದು ಹೋದರೂ ಇದೇ ಸಮಯ ತೆಗೆದುಕೊಳ್ಳುತ್ತಿತ್ತು ಎಂದು ಎಕ್ಸ್​​ ಪೋಸ್ಟ್​​ನಲ್ಲಿ ವರುಣ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಈ ಪೋಸ್ಟ್​​ಗೆ ಅನೇಕರು ಪ್ರತಿಕ್ರಿಯಿಸಿದ್ದು, ಹಲವರು ಇದು ನಮ್ಮ ದೈನಂದಿನ ಕಥೆ ಎಂದು ಹೇಳಿಕೊಂಡಿದ್ದಾರೆ. ಮಳೆ ಬಂತೆಂದರೆ ಬೆಂಗಳೂರಿನ ಅನೇಕ ರಸ್ತೆಗಳು ಜಲಾವೃತಗೊಂಡು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಳ್ಳೂವುದು ಹೊಸತೇನಲ್ಲ ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಲೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು – Kannada News | Rs 6.5 Crore for 3BHK Flat in Bengaluru’s Miller’s Road Goes Viral on Reddit

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ!

ಬೆಂಗಳೂರು, ಮೇ 20: ನಗರದಲ್ಲಿ ಮನೆ ಕೊಳ್ಳುವುದು ಸಾಮಾನ್ಯ ಮಧ್ಯಮ ವರ್ಗದವರಿರಲಿ (Middle Class), ಲಕ್ಷ ಲಕ್ಷ ಸಂಬಳ ಪಡೆಯುವ ಐಟಿ ಉದ್ಯೋಗಿಗಳಿಗೂ ಈಗ ಮರೀಚಿಕೆಯಂತಾಗಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಆದ ರೆಡ್ಡಿಟ್‌ನ ಬೆಂಗಳೂರು ರಿಯಲ್ ಎಸ್ಟೇಟ್ಸ್ (BangaloreRealEstates) ಕಮ್ಯುನಿಟಿಯಲ್ಲಿ ಪೋಸ್ಟ್ ಮಾಡಲಾದ ಒಂದು ಅಪಾರ್ಟ್‌ಮೆಂಟ್‌ನ ಮಾರಾಟದ ಜಾಹೀರಾತು ಮತ್ತು ಅದರ ಬೆಲೆ ಇಂಟರ್ನೆಟ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ.

ಮುಖ್ಯಾಂಶಗಳು

  • ಬೆಂಗಳೂರಿನ ಬೆನ್ಸನ್ ಟೌನ್ 3BHK ಫ್ಲ್ಯಾಟ್ ಬೆಲೆ ಇಂಟರ್ನೆಟ್‌ನಲ್ಲಿ ಭಾರಿ ವೈರಲ್.
  • 2,850 ಚದರ ಅಡಿಯ ಐಷಾರಾಮಿ ಫ್ಲ್ಯಾಟ್‌ಗೆ 6.5 ಕೋಟಿ ರೂ.
  • ದುಬಾರಿ ಬೆಲೆ ಕಂಡು ಮಧ್ಯಮ ವರ್ಗದ ನೆಟ್ಟಿಗರಿಂದ ತೀವ್ರ ಆಕ್ರೋಶ.

ಬೆಂಗಳೂರಿನ ಅತ್ಯಂತ ಐಷಾರಾಮಿ ಮತ್ತು ಪ್ರತಿಷ್ಠಿತ ಪ್ರದೇಶವಾದ ಬೆನ್ಸನ್ ಟೌನ್‌ನ (Benson Town) ಮಿಲ್ಲರ್ಸ್ ರಸ್ತೆಯಲ್ಲಿರುವ ಈ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಈ ಬೆಲೆಯನ್ನು ನೋಡಿ ನೆಟ್ಟಿಗರು ತಬ್ಬಿಬ್ಬಾಗಿದ್ದಾರೆ.

ಫ್ಲ್ಯಾಟ್‌ನಲ್ಲೇನಿದೆ ಅಂಥಾ ವಿಶೇಷ?

ವೈರಲ್ ಆಗಿರುವ ಮಾಹಿತಿ ಪ್ರಕಾರ, ಈ ಅಪಾರ್ಟ್‌ಮೆಂಟ್ ಕಟ್ಟಡದ 6ನೇ ಮಹಡಿಯಲ್ಲಿದೆ. 2,850 ಚದರ ಅಡಿ ವಿಸ್ತೀರ್ಣ ಹೊಂದಿರುವ ಈ ಫ್ಲ್ಯಾಟ್ ಸಂಪೂರ್ಣವಾಗಿ ಪೀಠೋಪಕರಣಗಳಿಂದ ಸಜ್ಜುಗೊಂಡಿದೆ (Fully Furnished). ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಯೇ ಶುರುವಾಗಿದೆ. ಯುವ ಜನತೆ ತಮಗೆ ಎದುರಾಗಿರುವ ಆರ್ಥಿಕ ಅಸಹಾಯಕತೆಯನ್ನು ಕಮೆಂಟ್‌ಗಳ ಮೂಲಕ ಹೊರಹಾಕುತ್ತಿದ್ದಾರೆ.

ನೆಟ್ಟಿಗರ ರಿಯಾಕ್ಷನ್ ಏನು?

ಒಬ್ಬ ಬಳಕೆದಾರರು ಕಮೆಂಟ್ ಮಾಡಿ, ಇದು ನಿಜಕ್ಕೂ ನನ್ನ ಕನಸಿನ ಮನೆ. ನಾನು ವರ್ಷಕ್ಕೆ 30 ಲಕ್ಷ ರೂ. ಸಂಬಳ ಪಡೆಯುತ್ತಿದ್ದೇನೆ. ಆದರೂ ನಾನು ಕೆಳ ಮಧ್ಯಮ ವರ್ಗದಿಂದ ಬಂದವನು. ಇನ್ನು ಎಷ್ಟು ವರ್ಷ ಕಷ್ಟಪಟ್ಟು ದುಡಿದರೂ ನನ್ನ ಜೀವನದಲ್ಲಿ ಇಷ್ಟೊಂದು ಹಣ ಕೊಟ್ಟು ಇಂತಹ ಮನೆ ಖರೀದಿಸಲು ಸಾಧ್ಯವೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬರು ಅಪಾರ್ಟ್‌ಮೆಂಟ್‌ನ ವಿನ್ಯಾಸವನ್ನು ಮೆಚ್ಚಿಕೊಂಡಿದ್ದಾರಾದರೂ, ಕೇವಲ ಒಂದು ಫ್ಲ್ಯಾಟ್‌ಗೆ ಇಷ್ಟೊಂದು ಕೋಟಿ ಸುರಿಯುವ ಬದಲು, ಬೇರೆ ಕಡೆ ವಿಶಾಲವಾದ ಸೈಟ್ ತಗೆದುಕೊಂಡು ಸ್ವತಂತ್ರವಾಗಿ ದೊಡ್ಡ ಬಂಗಲೆಯನ್ನೇ ಕಟ್ಟಬಹುದು ಎಂದು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ ಫುಟ್​ಪಾತ್​ಗೂ ಬಂತು​ ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ!

ಇಷ್ಟೆಲ್ಲಾ ಟ್ರೋಲ್‌ಗಳ ನಡುವೆ ಕೆಲವರು ಬೆಂಗಳೂರಿನ ರಿಯಲ್ ಎಸ್ಟೇಟ್ ಮಾರುಕಟ್ಟೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದು ನಗರದ ಹೃದಯಭಾಗದಲ್ಲಿದೆ ಮತ್ತು ಅತ್ಯಂತ ಪ್ರೀಮಿಯಂ ಏರಿಯಾ ಆಗಿದೆ. ಇಲ್ಲಿನ ಸೌಲಭ್ಯಗಳಿಗೆ ಈ ಬೆಲೆ ನಿರೀಕ್ಷಿತವೇ. ಬೆಂಗಳೂರಿನ ಐಷಾರಾಮಿ ಹೌಸಿಂಗ್ ಮಾರ್ಕೆಟ್ ಸಖತ್ ಡಿಮ್ಯಾಂಡ್‌ನಲ್ಲಿದೆ, ಇದನ್ನು ಕೊಳ್ಳುವ ಶ್ರೀಮಂತರು ಇದ್ದೇ ಇರುತ್ತಾರೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್: ಕಾರಣ ಇಲ್ಲಿದೆ – Kannada News | MP Sunil Bose Scolds PDO Over Absence from Public Meeting

ಮೈಸೂರು, ಮೇ 20: ಸಾರ್ವಜನಿಕ ಸಭೆಯಲ್ಲಿ ಗೈರುಹಾಜರಿಯ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ಸಂಸದ ಸುನೀಲ್ ಬೋಸ್ ತರಾಟೆಗೆ ಪಡೆದ ಪ್ರಸಂಗ ನಡೆದಿದೆ. ಕೊತ್ತನಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡ ಉದ್ಘಾಟನೆಗೆ ಆಗಮಿಸಿದ್ದ ಸಂಸದ ಸುನಿಲ್ ಬೋಸ್ ಅವರಿಗೆ ಸ್ಥಳೀಯರು ಸಮಸ್ಯೆಗಳ ಅರ್ಜಿ ನೀಡಿದ್ದರು.  ಸಂಸದರು ಬಂದರೂ ಪಿಡಿಒ ಗೈರಾಗಿದ್ದ ಕಾರಣ ಸಿಟ್ಟಾದ ಸುನೀಲ್ ಬೋಸ್, ನಂಜನಗೂಡು ದೇವರಾಯಶೆಟ್ಟಿ ಪುರ ಗ್ರಾಮ ಪಂಚಾಯ್ತಿ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಒಗೆ ದೂರವಾಣಿ ಕರೆ ಮಾಡಿ ಗೈರಿನ ಬಗ್ಗೆ ವಿಚಾರಿಸಿದ್ದು, ಈ ವೇಳೆ ಕೆಡಿಪಿ ಸಭೆಯಲ್ಲಿ ಇರೋದಾಗಿ ಉತ್ತರ ಬಂದಿದೆ.  ಕೂಡಲೇ ಗರಂ ಆದ ಸಂಸದರು ನಾನು ಮಾಡದ ಕೆಡಿಪಿ ಸಭೆಯಾ? ಕೆಡಿಪಿ ಸಭೆಗೆ ಇಒಗಳು ಏಕೆ ಹೋಗಬೇಕು? ನಿನಗೇನು ಕೆಲಸ? ಯಾವ ಪಿಡಿಓ ಕೆಡಿಪಿ ಸಭೆಗೆ ಹೋಗಿದ್ದಾನೆ? ಕಥೆ ಹೇಳಬೇಡ, ನೀವೆಲ್ಲಾ ನಾಟಕ ಆಡ್ತಿದ್ದೀರ. ಯಾರಿಗಯ್ಯ ಹೂವು ಮುಡಿಸ್ತಿದ್ದೀಯ ಎಂದು ಕ್ಲಾಸ್​​ ತೆಗೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version