Video: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್

Video: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಕೋಲಿನಿಂದ ನಿರ್ದಯವಾಗಿ ಥಳಿಸಿದ ಹಾಸ್ಟೆಲ್ ವಾರ್ಡನ್

ಉಜ್ಜಯಿನಿ, ಮಾರ್ಚ್​ 22: ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಹಾಸ್ಟೆಲ್ ವಾರ್ಡನ್ ಕೋಲಿನಿಂದ ನಿರ್ದಯವಾಗಿ ಥಳಿಸಿರುವ ಘಟನೆ ಮಧ್ಯಪ್ರದೇಶ ಉಜ್ಜಯಿನಿಯಲ್ಲಿರುವ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದವಿದ್ಯಾ ಪ್ರತಿಷ್ಠಾನದ ಹಾಸ್ಟೆಲ್​​ನಲ್ಲಿ ನಡೆದಿದೆ. ಈ ಘಟನೆ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೇವಲ ಬೇರೆಯವರ ಹಾಸಿಗೆಯಲ್ಲಿ ಮಲಗಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆ ಕೊಡುವ ಅಗತ್ಯವಿರಲಿಲ್ಲ, ಮುಂದೆ ಹೀಗೆ ಮಾಡಬಾರದು ಎಂದು ಬುದ್ಧಿ ಹೇಳಬಹುದಿತ್ತು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧದ ಪರಿಣಾಮ ಹಲವಾರು ಕ್ಷೇತ್ರಗಳ ಮೇಲೆ ಆಗುತ್ತಿದೆ. ವಿಮಾನಯಾನ ಸೆಕ್ಟರ್ (Aviation Sector) ಮೇಲೂ ಪರಿಣಾಮವಾಗುತ್ತಿದೆ. ಮುಂಬರುವ ತಿಂಗಳಿಂದ ವಿಮಾನ ಪ್ರಯಾಣ ದುಬಾರಿಯಾಗಲಿದೆ. ವಿಮಾನಗಳಿಗೆ ಬಳಸುವ ಎಟಿಎಫ್ (ATF- Aviation Turbine Fuel) ಅಥವಾ ಜೆಟ್ ಫುಯೆಲ್​ಗಳ ಬೆಲೆ ಪ್ರತೀ ತಿಂಗಳ ಆರಂಭದಲ್ಲಿ ಪರಿಷ್ಕರಣೆ ಆಗುತ್ತದೆ. ಈ ಬಾರಿ, ಏಪ್ರಿಲ್ 1ರಂದು ಎಟಿಎಫ್ ಬೆಲೆ ಸಿಕ್ಕಾಪಟ್ಟೆ ಏರುವ ಸಾಧ್ಯತೆ ಇದೆ. ಇದು ಹೆಚ್ಚಿದರೆ ವಿಮಾನ ಪ್ರಯಾಣದ ಟಿಕೆಟ್ ದರ ಗಣನೀಯವಾಗಿ ಹೆಚ್ಚಬಹುದು.

ಸರ್ಕಾರದಿಂದ ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ

ದೇಶೀಯ ವಿಮಾನ ಹಾರಾಟದಲ್ಲಿ ಟಿಕೆಟ್ ದರಗಳಿಗೆ ಸರ್ಕಾರ ಮಿತಿ ಹಾಕಿತ್ತು. ಈ ಮಿತಿಗಿಂತ ಹೆಚ್ಚಿನ ದರ ವಿಧಿಸಬೇಕಿದ್ದರೆ ವಿಮಾನ ಕಂಪನಿಗಳು ಸರ್ಕಾರದ ಅನುಮತಿ ಕೇಳಬೇಕಿತ್ತು. ಮೊನ್ನೆ ಸರ್ಕಾರ ಈ ವಿಮಾನ ಪ್ರಯಾಣ ದರದ ಮಿತಿಯನ್ನು ಹಿಂಪಡೆದುಕೊಂಡಿದೆ. ಇದರೊಂದಿಗೆ ವಿಮಾನ ಸಂಸ್ಥೆಗಳು ಸರ್ಕಾರದ ಅನುಮೋದನೆ ಇಲ್ಲದೇ ಟಿಕೆಟ್ ದರ ಏರಿಸಲು ಸಾಧ್ಯ.

ಇದನ್ನೂ ಓದಿ: ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ಹೀಗಾಗಿ, ವಿಮಾನ ಪ್ರಯಾಣ ಸಂಸ್ಥೆಗಳು ಇಂಧನದ ಬೆಲೆಗೆ ಅನುಗುಣವಾಗಿ ಮುಕ್ತವಾಗಿ ಬೆಲೆ ಪರಿಷ್ಕರಣೆ ಮಾಡಬಹುದು. ಈ ಏಪ್ರಿಲ್​ನಲ್ಲಿ ಎಟಿಎಫ್ ಇಂಧನದ ಬೆಲೆ ಸಾಕಷ್ಟು ಹೆಚ್ಚುವುದರಿಂದ, ಟಿಕೆಟ್ ದರಗಳೂ ಸಹಜವಾಗಿ ಏರಿಕೆಯಾಗಬಹುದು.

ಇದೇ ವೇಳೆ, ಏರ್ ಇಂಡಿಯಾ, ಆಕಾಶ ಏರ್ ಸಂಸ್ಥೆಗಳು ಫುಯೆಲ್ ಸರ್ಚಾರ್ಜ್ ಅನ್ನು ಏರಿಸಿವೆ. ಇದು ಟಿಕೆಟ್ ಬುಕಿಂಗ್​ಗಳಲ್ಲಿ ಅನ್ವಯ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!

ಬೆಳಗಾವಿ, ಮಾರ್ಚ್​ 22: ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ 12ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ಪ್ಯಾಟಿ ಓಣಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂದು ಶಂಕಿಸಲಾಗಿದೆ. ರಸಗೊಬ್ಬರ ಅಂಗಡಿ, ಹೊಟೆಲ್, ಫೋಟೋ ಸ್ಟೂಡಿಯೋ, ಐಸ್‌ಕ್ರೀಂ ಅಂಗಡಿಗಳು, ರೈತರ ನೀರಾವರಿ ಸಂಘದ ಕಚೇರಿ ಸೇರಿದಂತೆ ಹಲವು ವ್ಯಾಪಾರ ಮಳಿಗೆಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಹಾನಿಯಾಗಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಘಟನೆ ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆ

ಕಾಮರೆಡ್ಡಿ, ಮಾರ್ಚ್​ 22: ತೆಲಂಗಾಣದ ಕಾಮರೆಡ್ಡಿಯಲ್ಲಿ ದುರಂತವೊಂದು ಸಂಭವಿಸಿದೆ. ಇತ್ತೀಚೆಗಷ್ಟೇ ಅವಳಿ ಸಹೋದರಿಯರನ್ನು ಮದುವೆಯಾಗಿದ್ದ ಅವಳಿ ಸಹೋದರರಲ್ಲಿ ಓರ್ವ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ನಡೆದಿದೆ. ಇತ್ತೀಚೆಗಷ್ಟೇ ನಾಲ್ವರು ಹಸೆಮಣೆ ಏರಿದ್ದರು, ಸಂಭ್ರದ ನಡುವೆ ಈ ದುರ್ಘಟನೆ ನಡೆದಿದೆ. ಮದುವೆಯಾದ ಒಂದು ತಿಂಗಳೊಳಗೆ ಈ ದುರಂತ ಸಂಭವಿಸಿದ್ದು, ಎರಡೂ ಕುಟುಂಬಗಳು ತೀವ್ರ ದುಃಖದಲ್ಲಿ ಮುಳುಗಿವೆ.

ಕಾಮರೆಡ್ಡಿ ಜಿಲ್ಲೆಯ ಮಾಚರೆಡ್ಡಿ ಮಂಡಲದ ಘನಪುರ ಗ್ರಾಮದ ವಿನಯ್ ಕುಮಾರ್ (31) ಮತ್ತು ವಿಜಯ್ ಕುಮಾರ್ ಅವಳಿ ಸಹೋದರರು ಕೀರ್ತಿ ಮತ್ತು ಕೀರ್ತನಾ ಅವರನ್ನು ವಿವಾಹವಾಗಿದ್ದರು. ವಿನಯ್ ಹೈದರಾಬಾದ್ ನಗರದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ತಿಂಗಳು ಫೆಬ್ರವರಿ 22 ರಂದು ವಿವಾಹವಾಗಿದ್ದರು.

ಯುಗಾದಿ ಹಬ್ಬದ ದಿನದಂದು ಮನೆಯಿಂದ ಹೊರಗೆ ಹೋಗಿದ್ದ ವಿನಯ್ ಕುಮಾರ್ ಹಿಂತಿರುಗಲಿಲ್ಲ. ಅವರ ಕುಟುಂಬ ಸದಸ್ಯರು ವ್ಯಾಪಕವಾಗಿ ಹುಡುಕಾಡಿದರೂ ಅವರು ಪತ್ತೆಯಾಗಲಿಲ್ಲ. ಸಿರಿಸಿಲ್ಲಾ ಜಿಲ್ಲೆಯ ಗಂಭೀರೋಪೇಟೆ ಮಂಡಲದ ನರ್ಮಲಾದ ಮನೇರು ಹೊಳೆಯಲ್ಲಿ ಸ್ಥಳೀಯರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ತನಿಖೆ ನಡೆಸಿದಾಗ, ಅದು ವಿನಯ್ ಕುಮಾರ್ ಅವರ ಶವ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ಪೊಲೀಸರು ಆರಂಭದಲ್ಲಿ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಂಬಿದ್ದರು. ಆದರೆ, ಮದುವೆಯಾದ ಕೆಲವೇ ದಿನಗಳಲ್ಲಿ ಅವರು ಇಷ್ಟೊಂದು ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣಗಳು ಸ್ಪಷ್ಟವಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ.

ತಮ್ಮ ಸಂತೋಷದ ಜೀವನದಲ್ಲಿ ಸಂಭವಿಸಿದ ದುರಂತದಿಂದ ಗ್ರಾಮಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ.
ಈ ಘಟನೆಯ ಹಿಂದಿನ ಕಾರಣಗಳೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿನಯ್ ಅವರ ಮೊಬೈಲ್ ಫೋನ್ ಡೇಟಾವನ್ನು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ನಿರ್ಬಂಧದ ನಡುವೆಯೂ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

ಕೊಪ್ಪಳ, ಮಾರ್ಚ್​ 22: ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ಪುನೀತ್ ಕೆರಹಳ್ಳಿಗೆ (Puneeth Kerehalli) ಮಾರ್ಚ್ 21ರಿಂದ 23ರವರೆಗೆ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ನಡುವೆಯೂ ದರ್ಶನಕ್ಕೆ ಒತ್ತಾಯಿಸಿದ ಕೆರಹಳ್ಳಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿ, ನಂತರ ಅಧಿಕಾರಿಗಳೊಂದಿಗೇ ಅಂಜನಾದ್ರಿ ಬೆಟ್ಟ ಏರಿದ್ದಾರೆ.

ಈ ಹಿಂದೆ ಕೋಮು ವಿವಾದ ಎಬ್ಬಿಸಿದ್ದ ಕೆರೆಹಳ್ಳಿ!

ಕನಕಗಿರಿಯಲ್ಲಿ ಈ ಹಿಂದೆ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರಹಳ್ಳಿ ಭಾಗವಹಿಸಿದ ಕಾರ್ಯಕ್ರಮದಲ್ಲಿ ಮತೀಯ ಭಾವನೆಗಳಿಗೆ ಪ್ರಚೋದನೆ ಉಂಟು ಮಾಡುವ ವಿವಾದಾತ್ಮಕ ಭಾಷಣ ಮಾಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಕೇಸ್ ಕೂಡ ದಾಖಾಗಿತ್ತು. ಹೀಗಾಗಿ ಯಲಬುರ್ಗಾ ತಾಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ನಡೆಯಲಿದ್ದ ಶಿವಾಜಿ ಜಯಂತೋತ್ಸವದಲ್ಲಿ ಭಾಗವಹಿಸಲು ಮುತಾಲಿಕ್ ಹಾಗೂ ಕೆರಹಳ್ಳಿ ಆಗಮಿಸುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಈ ಆದೇಶ ಹೊರಡಿಸಿದ್ದಾರೆ.

ಪೊಲೀಸರೊಂದಿಗಿನ ವಾಗ್ವಾದದ ವೀಡಿಯೋ ಇಲ್ಲಿದೆ 

ಇದನ್ನೂ ಓದಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಮುಂದಾದ ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

ನಿರ್ಬಂಧದ ನೋಟೀಸ್ ನಕಲಿ ಎಂದು ವಾದ

ಈ ನಡುವೆ ನಿರ್ಬಂಧದ ನಡುವೆಯೂ ಪುನೀತ್ ಕೆರಹಳ್ಳಿ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ್ದು, ಅವರಿಗೆ ನೋಟಿಸ್ ನೀಡಲು ಮುಂದಾದ ಯಲಬುರ್ಗಾ ಪೊಲೀಸರೊಂದಿಗೆ ಅವರು ವಾಗ್ವಾದ ನಡೆಸಿದ್ದಾರೆ. ನೋಟಿಸ್ ನಕಲಿ, ಇದು ಕಲರ್ ಝರಾಕ್ಸ್ ಎಂದು ವಾದಿಸಿದ ಪುನೀತ್, ತಾವು ದರ್ಶನ ಮಾಡುವುದಾಗಿ ಒತ್ತಾಯಿಸಿದ್ದಾರೆ. ಪೊಲೀಸರು ನಿಯಮ ಪಾಲನೆಗೆ ಒತ್ತಾಯಿಸಿ ಸ್ಥಳ ತೊರೆಯುವಂತೆ ಸೂಚಿಸಿದ ನಂತರ ಕೆಲಕಾಲದ ವಾಗ್ವಾದ ನಡೆದಿದೆ. ಬಳಿಕ ಪೊಲೀಸರೊಂದಿಗೆ ಪುನೀತ್ ಅಂಜನಾದ್ರಿ ಬೆಟ್ಟ ಏರಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹೂ ಬೆಳೆಗಾರರ ಅನ್ನ ಕಸಿದ ಅಕಾಲಿಕ ಮಳೆ: ವರುಣನ ಅಬ್ಬರಕ್ಕೆ ಕೈ ಸುಟ್ಟುಕೊಂಡ ರೈತರು

ಗದಗ, ಮಾರ್ಚ್​​ 22: ಅಕಾಲಿಕವಾಗಿ ಸುರಿದ ಮಳೆಗೆ ಗದಗ ಜಿಲ್ಲೆಯ ಹೂ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ಉತ್ತಮ ಆದಾಯ ನಿರೀಕ್ಷಿಸಿದ್ದ ರೈತರಿಗೆ ಮಳೆಯಿಂದ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಲಕ್ಕುಂಡಿ, ಕಣವಿ, ಹೊಸೂರು, ದಂಬಳ, ಕಡಕೋಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳೆದ ಹೂಗಳು ಮಳೆಯಿಂದ ಹೆಚ್ಚು ಹಾನಿಗೊಳಗಾಗಿವೆ. ಈ ಪ್ರದೇಶಗಳಲ್ಲಿ ಬೆಳೆಯುವ ಹೂಗಳು ಧಾರವಾಡ, ಬೆಳಗಾವಿ ಸೇರಿದಂತೆ ವಿವಿಧ ಕಡೆ ಸಾಗಾಟವಾಗುತ್ತಿತ್ತು. ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಚಂಡು ಹೂ, ಸೇವಂತಿಗೆ ಹಾಗೂ ಮಲ್ಲಿಗೆ ಬೆಳೆದ ರೈತರು ಉತ್ತಮ ಲಾಭದ ನಿರೀಕ್ಷೆಯಲ್ಲಿ ಇದ್ದರು. ಆದರೆ ಮಳೆಯಿಂದ ತೇವಾಂಶಕ್ಕೆ ಹೂಗಳು ಕೊಳೆತು, ರೈತರ ಅನ್ನ ಕಸಿದಿದೆ.

ಕಪ್ಪತ್ತಗುಡ್ಡ ಪಾದಭಾಗದ ಗ್ರಾಮಗಳಲ್ಲಿ ವರ್ಷಪೂರ್ತಿ ಹೂ ಬೆಳೆಯುತ್ತಿದ್ದ ರೈತರು, ಕಳೆದ ದೀಪಾವಳಿಯಲ್ಲಿ ಉತ್ತಮ ಬೆಲೆ ದೊರೆತು ಲಾಭ ಪಡೆದಿದ್ದರು. ಹೀಗಾಗಿ ಯುಗಾದಿ ಮುನ್ನವೇ ಹಲವು ರೈತರು ಚಂಡು ಹೂ, ಸೇವಂತಿಗೆ ಮತ್ತು ಮಲ್ಲಿಗೆ ಬೆಳೆಸಿ, ಪಕ್ಕದ ಜಿಲ್ಲೆಗಳ ಖರೀದಿದಾರರಿಂದ ದೊಡ್ಡ ಆರ್ಡರ್‌ಗಳನ್ನೂ ಪಡೆದಿದ್ದರು. ಆದರೆ ನಾಲ್ಕು ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ಹೂಗಳು ಹಾಳಾಗಿವೆ. ಸಾಮಾನ್ಯವಾಗಿ ಕಿಲೋಗೆ 300 ರೂ.ಗೆ ಮಾರಾಟವಾಗುತ್ತಿದ್ದ ಮಲ್ಲಿಗೆ ಹೂ ಬೆಲೆ ಈಗ 150ಕ್ಕೆ ಇಳಿದಿದೆ. ಯುಗಾದಿ ಸಮಯದಲ್ಲಿ ಸಾಮಾನ್ಯವಾಗಿ ಇವುಗಳ ಬೆಲೆ 500–700 ರೂ.ವರೆಗೆ ಬೆಲೆ ಏರಿಕೆಯಾಗುತ್ತಿತ್ತು. ಆದರೆ ಈ ಬಾರಿ ಅಕಾಲಿಕ ಮಳೆಯಿಂದ ಬೆಲೆ ಭಾರೀ ಕುಸಿತ ಕಂಡಿದೆ. ಚಂಡು ಹೂ ಸಾಮಾನ್ಯವಾಗಿ ಕೆಜಿಗೆ 350 ರೂ. ಇದ್ದರೆ, ಈಗ ಅವನ್ನು ಕೆಜಿಗೆ 100ಕ್ಕೆ ಮಾರಬೇಕಾದ ಪರಿಸ್ಥಿತಿ ಬಂದಿದೆ.

ಇದನ್ನೂ ಓದಿ: ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ; ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ಯುಗಾದಿ ಹಬ್ಬದ ವೇಳೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಹೆಚ್ಚು ಬೇಡಿಕೆ ಇರುತ್ತಿತ್ತು. ಆದರೆ ಈ ಬಾರಿ ಹೂಗಳ ಗುಣಮಟ್ಟ ಕುಸಿದು, ಬೆಲೆ ಕೂಡ ತಳಮಟ್ಟಕ್ಕೆ ಇಳಿದಿದೆ. ಇದರಿಂದ ಭಾರೀ ನಷ್ಟ ಅನುಭವಿಸಿರೋದಾಗೀ ರೈತರು ಕೂಡ ಅಲವತ್ತುಕೊಂಡಿದ್ದಾರೆ. ಈ ನಡುವೆ ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಉಂಟಾದ ಬೆಳೆ ಹಾನಿಯನ್ನು ಅಂದಾಜಿಸಲು ತಕ್ಷಣ ಸಮೀಕ್ಷೆ ನಡೆಸುವಂತೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಮ್ಮ ‘X’ ಪೋಸ್ಟ್‌ನಲ್ಲಿ, 10ಕ್ಕೂ ಹೆಚ್ಚು ಜಿಲ್ಲೆಗಳ 56,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಧಾರವಾಡ, ಹಾವೇರಿ, ಗದಗ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಜೋಳ, ಕಡಲೆ, ಗೋಧಿ, ಮೆಕ್ಕೆಜೋಳ ಬೆಳೆಗಳು ನೀರುಪಾಲಾಗಿವೆ. ಹಾಸನ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಾವು, ಹಲಸು ಮತ್ತು ಕಲ್ಲಂಗಡಿ ಬೆಳೆಗಾರರೂ ಕೈ ಸುಟ್ಉಕೊಂಡಿದ್ದಾರೆ. ಹೀಗಾಗಿ ಆಲಿಕಲ್ಲು ಮಳೆಯಿಂದ ನಷ್ಟ ಅನುಭವಿಸಿದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಐಟಂ ಸಾಂಗ್ ಮಾಡಲು ಒಪ್ಪಿಕೊಂಡ ಮೃಣಾಲ್ ಠಾಕೂರ್; ಅಭಿಮಾನಿಗಳಿಗೆ ಹಬ್ಬ

ಚಿತ್ರರಂಗದಲ್ಲಿ ಕೆಲವು ನಟಿಯರಿಗೆ ಒಂದು ಕಾಲಘಟ್ಟದಲ್ಲಿ ಅದೃಷ್ಟ ಒಲಿದು ಬರುತ್ತದೆ. ಸದ್ಯ ನಟಿ ಮೃಣಾಲ್ ಠಾಕೂರ್ (Mrunal Thakur) ಅಂತಹದ್ದೇ ಒಂದು ಸುವರ್ಣ ಯುಗದಲ್ಲಿದ್ದಾರೆ. ಇದುವರೆಗೆ ಮಧ್ಯಮ ಬಜೆಟ್ ಚಿತ್ರಗಳಲ್ಲಿ ನಟಿಸಿ ಗಮನ ಸೆಳೆದಿದ್ದ ಈ ಸುಂದರಿ, ಇದೀಗ ಟಾಲಿವುಡ್‌ನ ಅತಿ ದೊಡ್ಡ ಸ್ಟಾರ್‌ ನಟರ ಚಿತ್ರಗಳಿಗೆ ಆಯ್ಕೆ ಆಗುತ್ತಿದ್ದಾರೆ. ನಟ ಅಲ್ಲು ಅರ್ಜುನ್ ಮತ್ತು ನಿರ್ದೇಶಕ ಅಟ್ಲಿ ಕಾಂಬಿನೇಷನ್​ನ ಸಿನಿಮಾಗೆ ಈಗ ಮೃಣಾಲ್ ಠಾಕೂರ್ ಎಂಟ್ರಿ ನೀಡಿದ್ದಾರೆ. ‘ಪೆದ್ದಿ’ (Peddi) ಚಿತ್ರದಲ್ಲೂ ಅವರು ನಟಿಸಲಿದ್ದಾರೆ.

‘ಪುಷ್ಪ 2’ ಸಿನಿಮಾದಿಂದ ಸೂಪರ್ ಸಕ್ಸಸ್ ಕಂಡ ಅಲ್ಲು ಅರ್ಜುನ್ ಅವರು ಈಗ ಸ್ಟಾರ್ ಡೈರೆಕ್ಟರ್ ಅಟ್ಲಿ ಜೊತೆ ಹೊಸ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಬಹುನಿರೀಕ್ಷಿತ ಚಿತ್ರದಲ್ಲಿ ಮೃಣಾಲ್ ಒಂದು ಪ್ರಮುಖ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನೂ ಬಾಕಿ ಇದ್ದರೂ, ಮೂಲಗಳ ಪ್ರಕಾರ ಮೃಣಾಲ್ ಈಗಾಗಲೇ ಈ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ ಎನ್ನಲಾಗಿದೆ.

ಇದು ಮೃಣಾಲ್ ವೃತ್ತಿಜೀವನಕ್ಕೆ ದೊಡ್ಡ ಮೈಲಿಗಲ್ಲಾಗಲಿದೆ. ಇಷ್ಟೇ ಅಲ್ಲದೇ, ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರದಲ್ಲಿ ಕೂಡ ಮೃಣಾಲ್ ಠಾಕೂರ್ ಅವರು ಅಭಿಮಾನಿಗಳಿಗೆ ಕಿಕ್ ನೀಡಲಿದ್ದಾರೆ. ಹೌದು, ರಾಮ್ ಚರಣ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಚಿತ್ರದ ಒಂದು ವಿಶೇಷ ಹಾಡಿಗೆ ಮೃಣಾಲ್ ಹೆಜ್ಜೆ ಹಾಕಲಿದ್ದಾರೆ.

‘ಪೆದ್ದಿ’ ಸಿನಿಮಾದಲ್ಲಿ ಗ್ರಾಮೀಣ ಭಾಗದ ಕ್ರೀಡೆ ಮತ್ತು ರಾಜಕೀಯದ ಕಥೆ ಇರಲಿದೆ. ಈ ಚಿತ್ರದಲ್ಲಿ ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಮೃಣಾಲ್ ಅವರು ಸ್ಪೆಷಲ್ ಸಾಂಗ್​ನಲ್ಲಿ ಹೆಜ್ಜೆ ಹಾಕಲು ಒಪ್ಪಿದ್ದಾರೆ. ಈ ಹಾಡಿನಲ್ಲಿ ಅವರು ರಾಮ್ ಚರಣ್ ಮತ್ತು ಜಾನ್ವಿ ಇಬ್ಬರ ಜೊತೆಗೂ ಸ್ಕ್ರೀನ್ ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಧನುಷ್ ಬಗ್ಗೆ ಮೊದಲ ಬಾರಿ ಅಸಲಿ ವಿಷಯ ಬಾಯಿಬಿಟ್ಟ ಮೃಣಾಲ್ ಠಾಕೂರ್

ಸ್ಟಾರ್ ಹೀರೋಯಿನ್​ಗಳು ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿರುವಾಗ ವಿಶೇಷ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಮಾಮೂಲಿ. ‘ಪುಷ್ಪ’ ಸಿನಿಮಾದಲ್ಲಿ ಸಮಂತಾ, ‘ಕೂಲಿ’ ಸಿನಿಮಾದಲ್ಲಿ ಪೂಜಾ ಹೆಗ್ಡೆ ಐಟಂ ಸಾಂಗ್ ಮಾಡಿದ ರೀತಿಯಲ್ಲೇ ಈಗ ಮೃಣಾಲ್ ಕೂಡ ಅವರು ‘ಪೆದ್ದಿ’ ಮತ್ತು AA22xA6 ಸಿನಿಮಾಗಳಲ್ಲಿ ಐಟಂ ಸಾಂಗ್ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Weekly Horoscope 2026: ಮಾರ್ಚ್ ನಾಲ್ಕನೇ ವಾರ ಹೇಗಿರಲಿದೆ? ನಿಮ್ಮ ರಾಶಿಗನುಗುಣವಾಗಿ ವಾರ ಭವಿಷ್ಯ ತಿಳಿಯಿರಿ

ಇದು 2026ರ ಮಾರ್ಚ್ ನ ನಾಲ್ಕನೇ ವಾರವಾಗಿದ್ದು ಗ್ರಹಗತಿಗಳ ಬದಲಾವಣೆಯಾಗಲಿದೆ. ಸೂರ್ಯ ಮತ್ತು ಶನಿಯ ಸಂಯೋಗವಿರಲಿದೆ. ತಂದೆ ಮಕ್ಕಳ ನಡುವೆ ವೈಷಮ್ಯ, ನೌಕರ, ಬಾಸ್ ಗಳ‌ ನಡುವೆ ಕಲಹ ಇರಲಿದ್ದು ಸರ್ಕಾರದ ಕಾರ್ಯಕ್ಕೆ ವಿಘ್ನಗಳೂ ಇರಲಿದೆ. ಯಾವುದನ್ನಾದರೂ ಸ್ವೀಕರಿಸುವ ಮನೋಭಾವ ನಿಮ್ಮದಾಗಲಿ.

ಮೇಷ ರಾಶಿ:

ಈ ವಾರ ನಿಮಗೆ ಶುಭ ಫಲಗಳಿವೆ. ವೃತ್ತಿಯಲ್ಲಿ ಪ್ರಗತಿ ಕಂಡುಬರಲಿದ್ದು, ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಕುಟುಂಬದೊಂದಿಗೆ ಸಮಯ ಕಳೆಯುವಿರಿ. ಆರೋಗ್ಯದ ಕಡೆ ಸ್ವಲ್ಪ ಗಮನಹರಿಸಿ. ಹೊಸ ಹೂಡಿಕೆಗೆ ಇದು ಸಕಾಲ.

ವೃಷಭ ರಾಶಿ:

ಕೆಲಸದ ಒತ್ತಡ ಹೆಚ್ಚಿರಲಿದ್ದು, ತಾಳ್ಮೆಯಿಂದ ಇರುವುದು ಒಳಿತು. ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ದೂರದ ಪ್ರಯಾಣದ ಸಾಧ್ಯತೆ ಇದೆ.

ಮಿಥುನ ರಾಶಿ:

ವ್ಯಾಪಾರದಲ್ಲಿ ಲಾಭದಾಯಕ ದಿನಗಳು. ಹೊಸ ಮಿತ್ರರ ಭೇಟಿಯಾಗಲಿದೆ. ಮನೆ ರಿಪೇರಿ ಅಥವಾ ಶುಭ ಕಾರ್ಯಗಳ ಬಗ್ಗೆ ಆಲೋಚಿಸುವಿರಿ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಮನಸ್ಸು ಪ್ರಸನ್ನವಾಗಿರುತ್ತದೆ.

​ಕರ್ಕಾಟಕ ರಾಶಿ:

ಉದ್ಯೋಗ ಬದಲಾವಣೆಗೆ ಯತ್ನಿಸುತ್ತಿದ್ದರೆ ಈ ವಾರ ಶುಭ ವಾರ್ತೆ ಕೇಳುವಿರಿ. ಭೂಮಿ ಅಥವಾ ವಾಹನ ಖರೀದಿ ಯೋಗವಿದೆ. ತಾಯಿಯ ಆರೋಗ್ಯದ ಬಗ್ಗೆ ಎಚ್ಚರವಿರಲಿ. ಹಿರಿಯರ ಆಶೀರ್ವಾದದಿಂದ ಕಾರ್ಯಗಳು ಸುಗಮವಾಗಿ ಸಾಗಲಿವೆ.

ಸಿಂಹ ರಾಶಿ:

ಆತ್ಮವಿಶ್ವಾಸ ಹೆಚ್ಚಾಗಲಿದೆ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುವುದು. ಸಹೋದರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬರಬಹುದು, ಎಚ್ಚರ. ಆರ್ಥಿಕ ಲಾಭ ಮಧ್ಯಮವಾಗಿರುತ್ತದೆ.

ಕನ್ಯಾ ರಾಶಿ:

ಮಾತಿನ ಮೇಲೆ ಹಿಡಿತವಿರಲಿ, ವಾದ, ವಿವಾದಗಳಿಂದ ದೂರವಿರಿ. ಕಣ್ಣಿನ ಅಥವಾ ಹಲ್ಲಿನ ಸಮಸ್ಯೆ ಕಾಣಿಸಿಕೊಳ್ಳಬಹುದು. ಸಾಲದ ವ್ಯವಹಾರ ಮಾಡಬೇಡಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಹಠಾತ್ ಧನಲಾಭದ ಸಾಧ್ಯತೆಯಿದೆ.

ತುಲಾ ರಾಶಿ:

ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಸೃಜನಶೀಲ ಕೆಲಸಗಳಿಗೆ ಮನ್ನಣೆ ಸಿಗುವುದು. ಆರೋಗ್ಯ ಉತ್ತಮವಾಗಿರುತ್ತದೆ. ಹೊಸ ಯೋಜನೆಗಳನ್ನು ಜಾರಿಗೆ ತರಲು ಇದು ಅತ್ಯುತ್ತಮ ಸಮಯವಾಗಿದೆ.

​ವೃಶ್ಚಿಕ ರಾಶಿ:

ಶತ್ರುಗಳ ಕಾಟವಿದ್ದರೂ ನೀವು ಜಯಶೀಲರಾಗುವಿರಿ. ಕೋರ್ಟ್ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಖರ್ಚುಗಳು ಆದಾಯಕ್ಕಿಂತ ಹೆಚ್ಚಿರಬಹುದು. ವಿದೇಶಿ ಸಂಬಂಧಿತ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ವಿಶ್ರಾಂತಿಗೆ ಸಮಯ ಮೀಸಲಿಡಿ.

​ಧನು ರಾಶಿ:

ಸಂತಾನ ಭಾಗ್ಯದ ನಿರೀಕ್ಷೆಯಲ್ಲಿರುವವರಿಗೆ ಶುಭ ಸುದ್ದಿ ಸಿಗಲಿದೆ. ಷೇರು ಮಾರುಕಟ್ಟೆಯಲ್ಲಿ ಲಾಭದ ನಿರೀಕ್ಷೆಯಿದೆ. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಹಳೆಯ ಬಾಕಿ ವಸೂಲಿಯಾಗಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ.

​ಮಕರ ರಾಶಿ:

ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿವೆ. ಮನೆಯಲ್ಲಿ ಸುಖ-ಸಂತೋಷ ನೆಲೆಸಲಿದೆ. ಅಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ರಕ್ತದೊತ್ತಡ ಇರುವವರು ಜಾಗರೂಕರಾಗಿರಬೇಕು. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗಲಿದೆ.

​ಕುಂಭ ರಾಶಿ:

ಧೈರ್ಯ ಮತ್ತು ಪರಾಕ್ರಮ ಹೆಚ್ಚಾಗಲಿದೆ. ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ನೆರೆಹೊರೆಯವರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ಕೆಲಸದಲ್ಲಿ ಬದಲಾವಣೆ ಇಷ್ಟಪಡುವವರಿಗೆ ಅವಕಾಶಗಳು ಸಿಗಲಿವೆ. ಅದೃಷ್ಟ ನಿಮ್ಮ ಪರವಾಗಿರಲಿದೆ.

ಮೀನ ರಾಶಿ:

ಆರ್ಥಿಕವಾಗಿ ಬಲಿಷ್ಠರಾಗುವಿರಿ. ಕುಟುಂಬದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ರುಚಿಕರವಾದ ಭೋಜನ ಸವಿಯುವಿರಿ. ಹೂಡಿಕೆಗಳಿಗೆ ಉತ್ತಮ ಆದಾಯ ಸಿಗಲಿದೆ. ನಿಮ್ಮ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುವಿರಿ. ಮಾನಸಿಕ ಶಾಂತಿ ಲಭಿಸಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

Source link

Video: ಈದ್ ಪ್ರಾರ್ಥನೆ ಬಳಿಕ ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ

ಇಸ್ಲಾಮಾಬಾದ್, ಮಾರ್ಚ್​ 22: ಪಾಕಿಸ್ತಾನದ ಮುರಿಯ್ಕೆಯ ಮರ್ಕಜ್ ತೈಬಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಮಾಂಡರ್ ಬಿಲಾಲ್ ಆರಿಫ್ ಸಲಾಫಿ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗುಂಡು ಹಾರಿಸುವುದರ ಜತೆಗೆ ಹರಿತವಾದ ಆಯುಧದಿಂದ ಇರಿದಿದ್ದಾರೆ.ಈದ್ ಪ್ರಾರ್ಥನೆಯ ಕೆಲವೇ ಕ್ಷಣಗಳ ನಂತರ ಈ ದಾಳಿ ನಡೆದಿದೆ. ಬಿಲಾಲ್ ಆರಿಫ್ ಸಲಾಫಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಆಗಿದ್ದ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Gold Rates: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 22: ಚಿನ್ನದ ಬೆಲೆ (Gold Rates) ಭರ್ಜರಿಯಾಗಿ ಇಳಿಯುವ ಟ್ರೆಂಡ್ ಮುಂದುವರಿದಿದೆ. ಈ ವಾರಾಂತ್ಯದಲ್ಲಿ ಇದರ ಬೆಲೆ ಗ್ರಾಮ್​ಗೆ 300 ರೂ ಹತ್ತಿರದಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಎಲ್ಲಾ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಮಾರ್ಚ್ ತಿಂಗಳಿಂದ ಈಚೆ ಮೂರು ವಾರದಲ್ಲಿ ಎರಡು ಸಾವಿರ ರೂಗೂ ಹೆಚ್ಚಿನ ಮೊತ್ತದಷ್ಟು ಇಳಿಕೆ ಆಗಿದೆ. ಮಾರ್ಚ್ ಆರಂಭದಲ್ಲಿ ಅಪರಂಜಿ ಚಿನ್ನಕ್ಕೆ ಇದ್ದುದಕ್ಕಿಂತ ಕಡಿಮೆ ಬೆಲೆಗೆ ಆಭರಣ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯ ಇಳಿಕೆಯೂ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಇದರ ಬೆಲೆಯಲ್ಲಿ 15 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,597 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,380 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,948 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,597 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,380 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,380 ರೂ
  • ಚೆನ್ನೈ: 13,620 ರೂ
  • ಮುಂಬೈ: 13,380 ರೂ
  • ದೆಹಲಿ: 13,395 ರೂ
  • ಕೋಲ್ಕತಾ: 13,380 ರೂ
  • ಕೇರಳ: 13,380 ರೂ
  • ಅಹ್ಮದಾಬಾದ್: 13,385 ರೂ
  • ಜೈಪುರ್: 13,395 ರೂ
  • ಲಕ್ನೋ: 13,395 ರೂ
  • ಭುವನೇಶ್ವರ್: 13,380 ರೂ

ಇದನ್ನೂ ಓದಿ: ಕೈಗಾರಿಕಾ ಡೀಸಲ್ ಬೆಲೆಯಲ್ಲಿ ಶೇ. 25ರಷ್ಟು ಏರಿಕೆ; ಯಾರ ಮೇಲಾಗಲಿದೆ ಇದರ ಪರಿಣಾಮ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 550 ರಿಂಗಿಟ್ (13,095 ರುಪಾಯಿ)
  • ದುಬೈ: 501.50 ಡಿರಾಮ್ (12,803 ರುಪಾಯಿ)
  • ಅಮೆರಿಕ: 143 ಡಾಲರ್ (13,409 ರುಪಾಯಿ)
  • ಸಿಂಗಾಪುರ: 187 ಸಿಂಗಾಪುರ್ ಡಾಲರ್ (13,674 ರುಪಾಯಿ)
  • ಕತಾರ್: 506 ಕತಾರಿ ರಿಯಾಲ್ (13,014 ರೂ)
  • ಸೌದಿ ಅರೇಬಿಯಾ: 527 ಸೌದಿ ರಿಯಾಲ್ (13,161 ರುಪಾಯಿ)
  • ಓಮನ್: 53.15 ಒಮಾನಿ ರಿಯಾಲ್ (12,995 ರುಪಾಯಿ)
  • ಕುವೇತ್: 41.86 ಕುವೇತಿ ದಿನಾರ್ (12,803 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version