Headlines

ಗಂಟೆಗಳ ಕಾಲ ಕುಳಿತು ಕೆಲಸ ಮಾಡ್ತೀರಾ? ಹಾಗಿದ್ರೆ ಇನ್ನಾದರೂ ತಪ್ಪದೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಇಂದಿನ ಜೀವನಶೈಲಿಯಲ್ಲಿ, ಆಫೀಸ್, ಮನೆ ಕೆಲಸ ಅಥವಾ ಆನ್‌ಲೈನ್ ಅಧ್ಯಯನಕ್ಕಾಗಿ ಹಲವು ಗಂಟೆಗಳ ಕಾಲ ಕುಳಿತುಕೊಂಡು ಕೆಲಸ ಮಾಡುವುದು ಬಹಳ ಸಾಮಾನ್ಯವಾಗಿದೆ. ಜನರು ಕಂಪ್ಯೂಟರ್, ಲ್ಯಾಪ್‌ಟಾಪ್ ಅಥವಾ ಮೊಬೈಲ್ ಮುಂದೆ ನಿರಂತರವಾಗಿ ಕುಳಿತುಕೊಂಡಿರುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸವನ್ನು ನಿರ್ಲಕ್ಷ್ಯ ಮಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹೌದು, ಡಾ. ಅಜಯ್ ಕುಮಾರ್ ಹೇಳುವ ಪ್ರಕಾರ, ದೀರ್ಘಕಾಲ ಕುಳಿತುಕೊಳ್ಳುವುದರಿಂದ ಸ್ನಾಯುಗಳು ದುರ್ಬಲವಾಗುತ್ತವೆ ಮತ್ತು ಬೆನ್ನುಹುರಿಯ ಮೇಲೆ ಒತ್ತಡ ಹೆಚ್ಚುತ್ತದೆ. ಇದರಿಂದ ಬೆನ್ನು ನೋವು (Back Pain) ಸಾಮಾನ್ಯವಾಗುತ್ತದೆ. ರಕ್ತ…

Read More

ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಸಂಜೆ ಹೊತ್ತಲ್ಲಿ ತಪ್ಪದೇ ಈ ಕೆಲಸಗಳನ್ನು ಮಾಡಿ

ಇಂದಿನ ಈ ಬ್ಯುಸಿ ಜೀವನದಲ್ಲಿ ಅನೇಕರಿಗೆ ನೆಮ್ಮದಿ ಅನ್ನೋದೇ ಇಲ್ಲದಾಗಿದೆ. ಹೆಚ್ಚಿನವರು ಒತ್ತಡದ  ಜೀವನವನ್ನೇ (stressful Life) ನಡೆಸುತ್ತಿದ್ದಾರೆ. ಮನಸ್ಸು ನಿರಾಳವಾಗಿದ್ದರೆ ಮಾತ್ರ ಸಂತೋಷ, ನೆಮ್ಮದಿ, ಶಾಂತಿ ಜೀವನದಲ್ಲಿ ನೆಲೆಸುತ್ತದೆ. ಹಾಗಾಗಿ ಮನಸ್ಸನ್ನು ನಿರಾಳವಾಗಿಸಲು ಶಾಂತಿ ನೆಮ್ಮದಿಯನ್ನು ಪಡೆಯಲು ಹಲವರು ಸಾಕಷ್ಟು ಸರ್ಕಸ್‌ಗಳನ್ನು ಮಾಡುತ್ತಿರುತ್ತಾರೆ. ಏನೇ ಮಾಡಿದ್ರೂ ನೆಮ್ಮದಿ ಅನ್ನೋದೇ ಸಿಗುತ್ತಿಲ್ಲ ಅಂತ ಅನೇಕರು ಹೇಳುತ್ತಿರುತ್ತಾರೆ. ನೀವು ಕೂಡ ಇದೇ ರೀತಿ ಮನಸ್ಸಿನ ಶಾಂತಿ, ನೆಮ್ಮದಿಗಾಗಿ ಹಂಬಲಿಸುತ್ತಿದ್ದೀರಾ? ಹಾಗಿದ್ರೆ ಸಂಜೆಯ ಹೊತ್ತಲ್ಲಿ ತಪ್ಪದೆ ಈ ಕೆಲವು ಕೆಲಸಗಳನ್ನು…

Read More

ರಾಮಚಂದ್ರ ರಾವ್ ಕೇಸ್​​​​: ವೈರಲ್​ ಆಗಿರುವ ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು, ಮಾರ್ಚ್​​ 19: ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ಕೆ. ರಾಮಚಂದ್ರ ರಾವ್ ವರ್ತಿಸಿರುವ ವಿಡಿಯೋ ವೈರಲ್​​ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, ಅವು ಡೀಪ್‌ಫೇಕ್, AI ನಿರ್ಮಿತ ಅಥವಾ ಯಾವುದೇ ರೀತಿಯಲ್ಲಿ ಎಟಿಟ್​​ ಆಗಿರುವ ದೃಶ್ಯಗಳಲ್ಲ ಎಂಬುದು ದೃಢ ಪಟ್ಟಿದೆ. ಈ ಕುರಿತು ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ 4 ಮಂದಿ ಐಪಿಎಸ್​​ ಅಧಿಕಾರಿಗಳ ತಂಡ 100 ಪುಟಗಳ…

Read More

ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿರುವುದು ಯಾಕೆ? ಮತ್ತೆ ಯಾವಾಗ ಏರಿಕೆಯಾಗುತ್ತೆ?

ನವದೆಹಲಿ, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಕಳೆದ ಕೆಲ ವಾರಗಳಿಂದ ಕುಸಿತ ಕಾಣುತ್ತಿವೆ. ಭೌತಿಕ ಚಿನ್ನ ಮತ್ತು ಬೆಳ್ಳಿ ಮಾತ್ರವಲ್ಲ, ಎಂಸಿಎಕ್ಸ್​ನಲ್ಲಿ ಗೋಲ್ಡ್ ಫ್ಯೂಚರ್ಸ್ ದರ ಒಂದು ತಿಂಗಳ ಕನಿಷ್ಠಕ್ಕೆ ಜಾರಿದೆ. ಗೋಲ್ಡ್ ಇಟಿಎಫ್, ಸಿಲ್ವರ್ ಇಟಿಎಫ್​ಗಳೂ ಕೂಡ ಕುಸಿತ ಕಾಣುತ್ತಿವೆ. ಗುರುವಾರ ಚಿನ್ನದ ಬೆಲೆ ಸತತ ಏಳನೇ ಬಾರಿ ಇಳಿಕೆಯಾಗಿದೆ. ಆರು ವಾರಗಳ ಕನಿಷ್ಠ ಮಟ್ಟ ತಲುಪಿದೆ. ಚಿನ್ನ, ಬೆಳ್ಳಿ ಬೆಲೆಗಳ ಕುಸಿತಕ್ಕೆ ಎರಡು ಸಂಭಾವ್ಯ ಕಾರಣಗಳು…

Read More

ಚಿತ್ರದುರ್ಗದಲ್ಲಿ ಐವರ ಮೇಲೆ ಆ್ಯಸಿಡ್ ದಾಳಿ; ಮಚ್ಚಿನಿಂದ ಹಲ್ಲೆ ಮಾಡಿ ವ್ಯಕ್ತಿ ಪರಾರಿ

ಚಿತ್ರದುರ್ಗ, ಮಾರ್ಚ್​ 19: ಮಹಿಳೆ ಮೇಲೆ ಮಚ್ಚಿನಿಂದ ಹಲ್ಲೆ (Attack) ಮಾಡಿ ಬಳಿಕ ಮನೆ ಮಂದಿಯ ಮೇಲೆ ಆ್ಯಸಿಡ್ ದಾಳಿ (Acid Attack) ಮಾಡಿ ವ್ಯಕ್ತಿಯೋರ್ವ ಪರಾರಿ ಆಗಿರುವಂತಹ ಘಟನೆ ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಸುಹೈಲ್ ಭಾಷಾನಿಂದ ದುಷ್ಕೃತ್ಯ ಎಸಗಲಾಗಿದೆ. ಘಟನೆಯಲ್ಲಿ ಮಹಿಳೆ ತಾಸಿನಾ ಬಾನು ಸೇರಿದಂತೆ ಆಕೆಯ ಸಹೋದರಿ ನೇಹಾ, ಪುತ್ರಿ ಇಕ್ರಾ, ನಗ್ಮಾ ನಾಯ್ಕ್ ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ತಾಸಿನಾ ಬಾನು ಮತ್ತು…

Read More

ಕೊಟ್ಟ ಮಾತು ಉಳಿಸಿಕೊಂಡ ನಟ ಅಲ್ಲು ಅರ್ಜುನ್: ಭೇಷ್ ಎಂದ ನೆಟ್ಟಿಗರು

ಅಲ್ಲು ಅರ್ಜುನ್ (Allu Arjun), ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟ. ‘ಪುಷ್ಪ’, ‘ಪುಷ್ಪ 2’ ಸಿನಿಮಾಗಳ ಬಳಿಕ ಅಲ್ಲು ಅರ್ಜುನ್ ರೇಂಜ್ ಭಾರತದ ಗಡಿ ದಾಟಿದೆ. ಇದೀಗ ಭಾರತದ ಸ್ಟಾರ್ ನಿರ್ದೇಶಕರುಗಳು ಒಬ್ಬರಾದ ಬಳಿಕ ಒಬ್ಬರೆಂಬಂತೆ ಅಲ್ಲು ಅರ್ಜುನ್ ಜೊತೆ ಸಾಲುಗಟ್ಟಿ ಸಿನಿಮಾ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಈ ಹಿಂದೆ ಹಲವು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ಅವರು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ಸಹ ಮಾನವೀಯ ಕಾರ್ಯವೊಂದನ್ನು ಮಾಡಿದ್ದ…

Read More

IPL 2026: ಸ್ಟಾರ್ ವೇಗಿಗಳಿಗೆ ಇಂಜುರಿ; ಥಂಡಾ ಹೊಡೆದ ತಂಡಗಳು

ಐಪಿಎಲ್ (IPL 2026) ಆರಂಭಕ್ಕೆ ಇನ್ನು ಹೆಚ್ಚು ದಿನಗಳು ಉಳಿದಿಲ್ಲ. ಹೀಗಾಗಿ ಎಲ್ಲಾ ಫ್ರಾಂಚೈಸಿಗಳು ತಯಾರಿಯಲ್ಲಿ ತೊಡಗಿದ್ದು, ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ತಂತ್ರ ರೂಪಿಸುತ್ತಿವೆ. ಆದಾಗ್ಯೂ ಕೆಲವು ತಂಡಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ಸ್ಟಾರ್ ವೇಗಿಗಳೇ ಗಾಯದಿಂದ ಬಳಲುತ್ತಿರುವುದು ತಂಡಗಳನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೌಲರ್​ಗಳ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ತಂಡಗಳ ಪಟ್ಟಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH), ಕೋಲ್ಕತ್ತಾ ನೈಟ್ ರೈಡರ್ಸ್ (KKR)…

Read More

Chanakya Niti: ಜೀವನದಲ್ಲಿ ಈ ಮೂರು ವಿಷಯಗಳ ನಿರ್ಲಕ್ಷ್ಯ ಸಲ್ಲದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹಲವಾರು ಮೌಲ್ಯಯುತ ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಚಾಣಕ್ಯರ ಈ ಬೋಧನೆಗಳನ್ನು  ಜೀವನದಲ್ಲಿ ಅಳವಡಿಸಿಕೊಂಡರೆ, ಯಶಸ್ವಿ ಮತ್ತು ಸಮೃದ್ಧ ಜೀವನವನ್ನು ಸಾಗಿಸಬಹುದು ಎಂದು ಹೇಳಲಾಗುತ್ತದೆ. ಇದೇ ರೀತಿ ನೀವು ಕೂಡ ಯಶಸ್ವಿ ಜೀವನವನ್ನು ನಡೆಸಬೇಕೆಂದರೆ, ಈ ಕೆಲವೊಂದು ವಿಚಾರಗಳ ಬಗ್ಗೆ ಅಸಡ್ಡೆ ತೋರುವುದನ್ನು ನಿಲ್ಲಿಸಿ. ಹೌದು ಮುಖ್ಯವಾಗಿ ಜೀವನದ ಈ ಮೂರು ವಿಷಯಗಳನ್ನು ಹಗುರವಾಗಿ ಪರಿಗಣಿಸಿದರೆ, ಮುಂದೊಂದು ದಿನ ವಿಷಾದಪಡಬೇಕಾಗುತ್ತದೆ ಅದೇ ಈ ಅಂಶಗಳ…

Read More

ಹುತ್ತಕ್ಕೆ ಕೈಹಾಕಿ ಹಾವನ್ನೆತ್ತಿ ಆಡಿದ ಬಾಲಕ; ಶಾಕಿಂಗ್ ವಿಡಿಯೋ ನೋಡಿ

ನವದೆಹಲಿ, ಮಾರ್ಚ್ 19: ಈಗಿನ ಮಕ್ಕಳು ಸದಾ ಮೊಬೈಲ್ ಫೋನ್​ನಲ್ಲೇ ಮುಳುಗಿರುತ್ತಾರೆ. ಆದರೆ, ಹಳ್ಳಿಗಳಲ್ಲಿ ಇನ್ನೂ ಮಕ್ಕಳು ಪ್ರಕೃತಿಯ ಜೊತೆ ಹೆಚ್ಚು ಒಡನಾಡುತ್ತಾರೆ. ಇಲ್ಲೊಬ್ಬ ಪುಟ್ಟ ಬಾಲಕ ಬರಿಗೈಯಲ್ಲಿ ಹುತ್ತದೊಳಗೆ ಕೈಹಾಕಿ ಹಾವಿನ ಬಾಲ ಹಿಡಿದು ಹೊರಗೆ ಎಳೆದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗುತ್ತಿದೆ. ಆ ಬಾಲಕನ ಆತ್ಮವಿಶ್ವಾಸ ಎಲ್ಲರನ್ನೂ ಬೆರಗುಗೊಳಿಸಿದೆ. ಆ ಬಾಲಕನ ಬಲ ಎಷ್ಟು ಗಟ್ಟಿಯಾಗಿತ್ತೆಂದರೆ ಆ ಹಾವಿಗೆ ಮಿಸುಕಾಡಲೂ ಆಗಲಿಲ್ಲ. ಈ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ…

Read More

IPL 2026: ಸಿಎಸ್​ಕೆಗೆ ಬಿಗ್ ಶಾಕ್; ಸ್ಟಾರ್ ವೇಗಿ ಟೂರ್ನಿಯಿಂದಲೇ ಔಟ್

2026 ರ ಐಪಿಎಲ್ ಆರಂಭಕ್ಕೂ ಮುನ್ನವೇ ಐದು ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಕಳೆದ ಕೆಲವು ಆವೃತ್ತಿಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿರುವ ಸಿಎಸ್​ಕೆ ಈ ಬಾರಿ ಉತ್ತಮ ತಂಡ ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿತ್ತು. ಆದರೆ ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ವೇಗಿ ಇಂಜುರಿಯಿಂದಾಗಿ ಇಡೀ ಆವೃತ್ತಿಯಿಂದಲೇ ಹೊರಬಿದ್ದಿದ್ದಾರೆ. ಸ್ಪೋರ್ಟ್‌ಸ್ಟಾರ್ ವರದಿಯ ಪ್ರಕಾರ, ಆಸ್ಟ್ರೇಲಿಯಾದ ವೇಗಿ ನಾಥನ್ ಎಲಿಸ್ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದು, ಅವರು ಪಂದ್ಯಾವಳಿ ಪ್ರಾರಂಭಕ್ಕೂ ಮುನ್ನ…

Read More