Headlines

Bengaluru Air Quality: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! – Kannada News | Bangalore Air Pollution Crisis: Bengaluru’s Air quality is poor, need precautions

ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! ಬೆಂಗಳೂರು, ಜನವರಿ 16: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ ಎಂದೆನಿಸಿದರೂ ಇಂದಿನ ಸೂಚ್ಯಂಕ ನೋಡಿದರೆ ಮತ್ತೊಮ್ಮೆ ನಗರದ ಗಾಳಿಯ ಗುಣಮಟ್ಟ ಹದಗೆಟ್ಟಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

ಸುಪ್ರೀಂಕೋರ್ಟ್​​ನಲ್ಲಿ ‘ಜನ ನಾಯಗನ್’ಗೆ ಹಿನ್ನಡೆ, ಚೆಂಡು ಮತ್ತೆ ಹೈಕೋರ್ಟ್ ಅಂಗಳಕ್ಕೆ – Kannada News | Jana Nayagan vs CBFC: Supreme Court says matter should resolve in High court

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಬಿಡುಗಡೆ ಭಾಗ್ಯ ಸದ್ಯಕ್ಕೆ ದೊರಕುವ ಹಾಗೆ ಕಾಣುತ್ತಿಲ್ಲ. ವಿಜಯ್ ಸಿನಿಮಾ ಜನವರಿ 09 ರಂದು ಬಿಡುಡಗೆ ಆಗಬೇಕಿತ್ತು ಆದರೆ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲಿಲ್ಲ. ಇದರಿಂದ ಸಿಟ್ಟಾದ ನಿರ್ಮಾಣ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತು. ಹೈಕೋರ್ಟ್, ಮೊದಲಿಗೆ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವಂತೆ ಆದೇಶಿಸಿತಾದರೂ ಕೇವಲ ಕೆಲವೇ ಗಂಟೆಗಳಲ್ಲಿ ತಮ್ಮದೇ ಆದೇಶಕ್ಕೆ ತಡೆ ನೀಡಿತು. ಬಳಿಕ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತು. ಆದರೆ ಅಲ್ಲಿಯೂ ಸಹ ಸಿನಿಮಾಕ್ಕೆ…

Read More

Video: ಪೂಂಚ್​ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆ, ವಾರದಲ್ಲಿ ಮೂರನೇ ಘಟನೆ – Kannada News | Third Drone Sighting Raises Concern in Jammu and Kashmir’s Poonch Region

ಶ್ರೀನಗರ,ಜನವರಿ 16: ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ನಂತರವೂ ಇಂಥಾ ಘಟನೆಗಳು ಮುಂದುವರೆದಿವೆ. ಮೊದಲು ಡ್ರೋನ್​ಗಳು ಪತ್ತೆಯಾದಾಗ ಎರಡೂ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMOಗಳು) ಉನ್ನತ ಮಟ್ಟದ ಮಾತುಕತೆ ನಡೆಸಿದ್ದರು.ಭಾರತವು ತನ್ನ ಕಳವಳವನ್ನು ವ್ಯಕ್ತಪಡಿಸಿತ್ತು. ಮುಂಬರುವ ಗಣರಾಜ್ಯೋತ್ಸವದ ಆಚರಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸಶಸ್ತ್ರ ಪಡೆಗಳು ಜಮ್ಮು…

Read More

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ – Kannada News | Donald Trump’s Symbolic Nobel Peace Prize: Machado’s Political Move for Venezuela

ವಾಷಿಂಗ್ಟನ್, ಜನವರಿ 16: ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿಬಿಟ್ಟಿದೆ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ. ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry Weather Persists allover the state including Bengaluru

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ ಬೆಂಗಳೂರು, ಜನವರಿ 16: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ,…

Read More

ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೂ ತಲುಪಿದ ರಾಜೀವ್ ಗೌಡ ಪ್ರಕರಣ: ‘ಕೈ’ ಮುಖಂಡನ ವಿರುದ್ಧ ಇದೆ 9 ಕ್ರಿಮಿನಲ್ ಕೇಸ್ – Kannada News | Police Launch 3 Search Teams to Arrest Rajeev Gowda as Sidlaghatta Abuse Case Reaches Congress High Command

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಅಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ವಿರುದ್ಧ ಈಗಾಗಲೇ ಎಫ್​ಐಆರ್ ದಾಖಲಾಗಿದೆ. ಎರಡು ದಿನಗಳಿಂದ ರಾಜೀವ್‌ ಗೌಡ (Rajeev Gowda) ತಲೆಮರೆಸಿಕೊಂಡಿದ್ದು, ಫೋನ್‌ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಪೊಲೀಸರು 3 ತಂಡ ರಚನೆ ಮಾಡಿದ್ದಾರೆ. ಗುರುವಾರ ರಾಜೀವ್ ಗೌಡ ಮನೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಶೋಧ ನಡೆಸಲಾಯಿತು. ರಾಜೀವ್ ಗೌಡ ಪತ್ನಿ ಪೊಲೀಸರ ಜೊತೆ ರಂಪಾಟ…

Read More

ಬೈಕ್​ನಲ್ಲಿ ಬರುವಾಗ ಗಾಳಿಪಟದ ದಾರ ತಪ್ಪಿಸಲು ಹೋಗಿ ಪತ್ನಿ, ಮಗಳ ಸಮೇತ ಸೇತುವೆಯಿಂದ ಬಿದ್ದ ಸವಾರ, ಮೂವರು ಸಾವು – Kannada News | Surat Kite String Tragedy: Family of 3 Dies After Bike Falls 70 Feet from Bridge

ಸೂರತ್, ಜನವರಿ 16: ಹುಟ್ಟು ಸಾವು ಎರಡೂ ದೈವ ನಿರ್ಣಯ ಅಂತಾರೆ, ಯಾವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ತಪ್ಪಿಸಲು ಹೋದರೂ ಯಾವುದೇ ಪ್ರಯೋಜನವಾಗುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬೈಕ್​ನಲ್ಲಿ ಬರುವಾಗ ಗಾಳಿಪಟ(Kite)ದ ದಾರವನ್ನು ತಪ್ಪಿಸಲು ಹೋಗಿ ವ್ಯಕ್ತಿಯೊಬ್ಬ ಪತ್ನಿ, ಮಗಳ ಸಮೇತ ಸೇತುವೆಯಿಂದ ಕೆಳಗೆಬಿದ್ದು ಸಾವನ್ನಪ್ಪಿರುವ ಘಟನೆ ಗುಜರಾತಿನ ಸೂರತ್​ನಲ್ಲಿ ನಡೆದಿದೆ. ಮಕರ ಸಂಕ್ರಾಂತಿ ದಿನದಂದು ಆಕಸ್ಮಿಕವಾಗಿ ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ 35 ವರ್ಷದ…

Read More

Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

ಬೆಂಗಳೂರು, ಜನವರಿ 16: ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತಿ ಮತ್ತು ಭಾವನೆ ಮುಖ್ಯವಾದರೂ, ಕೆಲವು ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳನ್ನು ಪಡೆಯಬಹುದು ಎಂದು ನಂಬಲಾಗಿದೆ. ಉದಾಹರಣೆಗೆ, ಬಾಳೆಹಣ್ಣನ್ನು ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ತೆಂಗಿನಕಾಯಿ ಅರ್ಪಣೆಯು ಹೊಸ ಯೋಜನೆಗಳಿಗೆ ಆಲೋಚನೆಗಳನ್ನು ನೀಡಿ ಉದ್ಯೋಗದಲ್ಲಿ…

Read More

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿಯಾಗ್ತಾರಾ, ಸಿಗುತ್ತಾ ಕುರ್ಚಿ ಅಭಯ? – Kannada News | DK Shivakumar Two Day Delhi Visit Sparks Speculation: Rahul Gandhi Meeting and Power Play Buzz in Karnataka Congress

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಬೆಂಗಳೂರು, ಜನವರಿ 16: ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದರೆ ಸಂಕ್ರಾಂತಿಗೆ ಕಾಂಗ್ರೆಸ್‌ನಲ್ಲಿ (Congress)  ಪಥಬದಲಾಗುತ್ತದೆ, ಕ್ರಾಂತಿಯಾಗುತ್ತದೆ ಎಂಬೆಲ್ಲ ಗೊಂದಲಗಳಿಗೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಸದ್ಯಕ್ಕೆ ಕಾಂಗ್ರೆಸ್‌ನಲ್ಲಿ ಅಂತಾ ಮಹತ್ವದ ಬೆಳವಣಿಗೆ ನಡೆಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯನ್ನು ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ದರು. ಅದರಲ್ಲೂ ಡಿಕೆ ಶಿವಕುಮಾರ್‌ (DK Shivakumar) ಪ್ರತ್ಯೇಕವಾಗಿ ನಿಂತು ಅಧಿಕಾರ…

Read More

ಗೆದ್ರೆ ತಾನೇ? ಧ್ರುವಂತ್ ಕುರಿತ ಫನ್ ಮೀಮ್ ವೈರಲ್ – Kannada News | Dhruvanth Fun Meme Goes viral after Bigg Boss Elimination

ಧ್ರುವಂತ್ ಅವರಿಗೆ ಸೀಸನ್ ಚಪ್ಪಾಳೆ ಸಿಕ್ಕಿತ್ತು. ಅದಕ್ಕೂ ಮೊದಲು ಅವರು ಅಷ್ಟಾಗಿ ಸ್ಟ್ರಾಂಗ್ ಸ್ಪರ್ಧಿಯೇ ಅಲ್ಲ ಎಂಬಂತೆ ಆಗಿತ್ತು. ಯಾವಾಗ ಅವರು ಸೀಕ್ರೆಟ್ ರೂಂ ಹೋದರೋ ಅಲ್ಲಿಂದ ಅವರ ಆಟ ಸಂಪೂರ್ಣವಾಗಿ ಬದಲಾಗಿತ್ತು ಎಂದರೂ ತಪ್ಪಾಗಲಿಕ್ಕಿಲ್ಲ. ಈಗ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಈ ಬೆನ್ನಲ್ಲೇ ಅವರ ಕುರಿತ ಮೀಮ್ ಒಂದು ವೈರಲ್ ಆಗಿ ಗಮನ ಸೆಳೆದಿದೆ. ಅಷ್ಟಕ್ಕೂ ಏನು ಆ ಮೀಮ್? ಇಲ್ಲಿದೆ ವಿವರ. ಧ್ರುವಂತ್ ಅವರು ಫಿನಾಲೆಗೂ ಮೊದಲು ವಾರದ ಮಧ್ಯವೇ…

Read More