ಮಾದಪ್ಪನ ಭಕ್ತರಿಗೂ ಚಿರತೆ ಕಾಟ: ರಸ್ತೆಯ ಬದಿಯೇ‌ ಸೇತುವೆ ಮೇಲೆ ಕುಳಿತ ಚಿರತೆ! ಪಾದಯಾತ್ರೆ ಬರುವ ಭಕ್ತರೇ ಎಚ್ಚರ – Kannada News | Leopard Scare for Male Mahadeshwara Devotees: Big Cat Spotted Sitting on Bridge Along Pilgrimage Route

ಚಾಮರಾಜನಗರ, ಜನವರಿ 16: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಆಗಮಿಸುವ ಮಾದಪ್ಪನ ಭಕ್ತರಲ್ಲಿ ಚಿರತೆ ಭೀತಿ ಹೆಚ್ಚಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತಿದೆ ಎನ್ನಲಾಗಿದೆ. ಚಿರತೆ ರಸ್ತೆ ಬದಿ ಇರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿರುವುದರಿಂದಾಗಿ ಇದೀಗ ಪಾದಯಾತ್ರೆ ಮೂಲಕ ಸಾಗುತ್ತಿದ್ದ ಭಕ್ತರು ಭಯಭೀತರಾಗಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲೇ ಆಗಮಿಸುವುದರಿಂದ ಎಚ್ಚರ ವಹಿಸಲೇಬೇಕಾದ ಸನ್ನಿವೇಶ ಎದುರಾಗಿದೆ.

ತಾಳಬೆಟ್ಟ ಮಾರ್ಗವು ಭಕ್ತರ ಪಾದಯಾತ್ರೆಗೆ ಪ್ರಮುಖ ದಾರಿಯಾಗಿದ್ದು, ಚಿರತೆ ಕಾಣಿಸಿಕೊಂಡ ಬಳಿಕ ಭಕ್ತರು ಭಯದಲ್ಲಿ ಸಾಗುವಂತಾಗಿದೆ. ವಿಶೇಷವಾಗಿ ಬೆಳಗ್ಗೆ ಮತ್ತು ರಾತ್ರಿ ಸಮಯದಲ್ಲಿ ಅಪಾಯ ಹೆಚ್ಚಿರುವುದರಿಂದ, ಮಕ್ಕಳು, ವೃದ್ಧರು ಹಾಗೂ ಮಹಿಳಾ ಭಕ್ತರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು, ಭಕ್ತರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ. ಅಲ್ಲದೆ, ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಗೆ ಮನವಿ ಸಲ್ಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Bengaluru Air Quality: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! – Kannada News | Bangalore Air Pollution Crisis: Bengaluru’s Air quality is poor, need precautions

ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ!

ಬೆಂಗಳೂರು, ಜನವರಿ 16: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ ಎಂದೆನಿಸಿದರೂ ಇಂದಿನ ಸೂಚ್ಯಂಕ ನೋಡಿದರೆ ಮತ್ತೊಮ್ಮೆ ನಗರದ ಗಾಳಿಯ ಗುಣಮಟ್ಟ ಹದಗೆಟ್ಟಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಬೆಂಗಳೂರಿನ ಗಾಳಿಯ ಗುಣಮಟ್ಟ 170 ಇದ್ದು, ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳಿನಲ್ಲಿ ಒಮ್ಮೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್​, ವೈಟ್​ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ಇಂದು ಬೆಂಗಳೂರಿನ PM2.5 82 ಮತ್ತು PM10 108 ಇದೆ. PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –170
  • ಮಂಗಳೂರು-167
  • ಮೈಸೂರು – 89
  • ಬೆಳಗಾವಿ – 128
  • ಕಲಬುರ್ಗಿ-68
  • ಶಿವಮೊಗ್ಗ – 138
  • ಬಳ್ಳಾರಿ – 168
  • ಹುಬ್ಬಳ್ಳಿ- 93
  • ಉಡುಪಿ –162
  • ವಿಜಯಪುರ –69

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸುಪ್ರೀಂಕೋರ್ಟ್​​ನಲ್ಲಿ ‘ಜನ ನಾಯಗನ್’ಗೆ ಹಿನ್ನಡೆ, ಚೆಂಡು ಮತ್ತೆ ಹೈಕೋರ್ಟ್ ಅಂಗಳಕ್ಕೆ – Kannada News | Jana Nayagan vs CBFC: Supreme Court says matter should resolve in High court

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಬಿಡುಗಡೆ ಭಾಗ್ಯ ಸದ್ಯಕ್ಕೆ ದೊರಕುವ ಹಾಗೆ ಕಾಣುತ್ತಿಲ್ಲ. ವಿಜಯ್ ಸಿನಿಮಾ ಜನವರಿ 09 ರಂದು ಬಿಡುಡಗೆ ಆಗಬೇಕಿತ್ತು ಆದರೆ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲಿಲ್ಲ. ಇದರಿಂದ ಸಿಟ್ಟಾದ ನಿರ್ಮಾಣ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತು. ಹೈಕೋರ್ಟ್, ಮೊದಲಿಗೆ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವಂತೆ ಆದೇಶಿಸಿತಾದರೂ ಕೇವಲ ಕೆಲವೇ ಗಂಟೆಗಳಲ್ಲಿ ತಮ್ಮದೇ ಆದೇಶಕ್ಕೆ ತಡೆ ನೀಡಿತು. ಬಳಿಕ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತು. ಆದರೆ ಅಲ್ಲಿಯೂ ಸಹ ಸಿನಿಮಾಕ್ಕೆ ಬೇಕಾದ ನ್ಯಾಯ ಧಕ್ಕಿಲ್ಲ.

ಶೀಘ್ರವೇ ಪ್ರಮಾಣ ಪತ್ರ ಕೊಡಿಸುವಂತೆ ನಿರ್ಮಾಪಕರು ಹಾಕಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಕರಣವನ್ನು ಮದ್ರಾಸ್ ಹೈಕೋರ್ಟ್​​ನಲ್ಲಿಯೇ ಇತ್ಯರ್ಥ ಮಾಡಿಕೊಳ್ಳಿ ಎಂದು ಸೂಚಿಸಿದೆ. ಅಲ್ಲದೆ, ಈ ಅರ್ಜಿಯ ವಿಚಾರಣೆಯ ಅವಶ್ಯಕತೆ ಅಥವಾ ಆಸಕ್ತಿ ಇಲ್ಲ ಎಂದು ಸುಪ್ರೀಂಕೋರ್ಟ್, ಅರ್ಜಿದಾರರಿಗೆ ಹೇಳಿದೆ. ಆ ಮೂಲಕ ಪ್ರಕರಣ ಮತ್ತೆ ಮದ್ರಾಸ್ ಹೈಕೋರ್ಟ್​​ಗೆ ಬಂದು ತಲುಪಿದೆ.

ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮೊದಲು ಪ್ರಮಾಣ ಪತ್ರ ನೀಡುವಂತೆ ಆದೇಶಿಸಿ ಬಳಿಕ ಕೆಲವೇ ಗಂಟೆಗಳಲ್ಲಿ ತನ್ನದೇ ಆದೇಶಕ್ಕೆ ತಡೆ ನೀಡಿತ್ತು. ಇದರಿಂದಾಗಿ ಚಿತ್ರತಂಡಕ್ಕೆ ಹೈಕೋರ್ಟ್​​ ಆದೇಶದ ಮೇಲೆ ಅಸಮಾಧಾನ ಮೂಡಿ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಆದರೆ ಸುಪ್ರೀಂಕೋರ್ಟ್ ಸಹ ಮತ್ತೆ ಹೈಕೋರ್ಟ್​​ಗೆ ಹೋಗಲು ತಿಳಿಸಿರುವುದು ಚಿತ್ರತಂಡಕ್ಕೆ ಇಕ್ಕಟ್ಟಾಗಿ ಪರಿಣಮಿಸಿದೆ.

ಇದನ್ನೂ ಓದಿ:‘ಜನ ನಾಯಗನ್’ ಪ್ರಕರಣ ಕೋರ್ಟ್​​ನಲ್ಲಿರುವಾಗ ವಿಜಯ್​ಗೆ ಸಿಬಿಐನಿಂದ ಸಂಕಷ್ಟ

ಈ ಹಿಂದೆ ಪ್ರಮಾಣ ಪತ್ರ ಆದೇಶಕ್ಕೆ ತಡೆ ನೀಡಿದ್ದ ಮದ್ರಾಸ್ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜನವರಿ 23ರಂದು ಮಾಡುವುದಾಗಿ ಹೇಳಿತ್ತು. ಈಗ ಸುಪ್ರೀಂಕೋರ್ಟ್​​ಗೆ ಹೋಗಿ ಬಂದರೂ ಸಹ ಪ್ರಕರಣದ ಮುಂದಿನ ವಿಚಾರಣೆ 23 ರಂದೇ ನಡೆಯಲಿದ್ದು, ಅಂದು ಸಹ ಪ್ರಕರಣದ ವಿಷಯವಾಗಿ ಆದೇಶ ಹೊರಬೀಳುವುದು ಅನುಮಾನವೇ ಆಗಿದೆ.

ಇನ್ನು ಕೆಲವೇ ತಿಂಗಳಲ್ಲಿ ತಮಿಳುನಾಡಿನಲ್ಲಿ ಚುನಾವಣೆ ಘೋಷಣೆ ಆಗಲಿದೆ. ಒಂದೊಮ್ಮೆ ಚುನಾವಣೆ ಘೋಷಣೆ ಆದರೆ ಸ್ವತಃ ಈ ಬಾರಿ ಚುನಾವಣಾ ಸ್ಪರ್ಧಿ ಆಗಿರುವ ವಿಜಯ್ ಅವರ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದೇ ಇರಬಹುದು. ಸಿನಿಮಾ ಬಿಡುಗಡೆ ಆಗಬಾರದೆಂದೇ ಕೆಲವರು ಪಿತೂರಿ ಮಾಡಿ ಹೀಗೆ ಮಾಡುತ್ತಿದ್ದಾರೆ ಎಂಬ ಅನುಮಾನಗಳು ಸಹ ವಿಜಯ್ ಅಭಿಮಾನಿಗಳಿಗೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 8:10 am, Fri, 16 January 26

Source link

Video: ಪೂಂಚ್​ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆ, ವಾರದಲ್ಲಿ ಮೂರನೇ ಘಟನೆ – Kannada News | Third Drone Sighting Raises Concern in Jammu and Kashmir’s Poonch Region

ಶ್ರೀನಗರ,ಜನವರಿ 16: ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ನಂತರವೂ ಇಂಥಾ ಘಟನೆಗಳು ಮುಂದುವರೆದಿವೆ. ಮೊದಲು ಡ್ರೋನ್​ಗಳು ಪತ್ತೆಯಾದಾಗ ಎರಡೂ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMOಗಳು) ಉನ್ನತ ಮಟ್ಟದ ಮಾತುಕತೆ ನಡೆಸಿದ್ದರು.ಭಾರತವು ತನ್ನ ಕಳವಳವನ್ನು ವ್ಯಕ್ತಪಡಿಸಿತ್ತು. ಮುಂಬರುವ ಗಣರಾಜ್ಯೋತ್ಸವದ ಆಚರಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸಶಸ್ತ್ರ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಹೆಚ್ಚಿನ ಕಟ್ಟೆಚ್ಚರವಹಿಸಿವೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೊನೆಗೂ ಡೊನಾಲ್ಡ್​ ಟ್ರಂಪ್​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ – Kannada News | Donald Trump’s Symbolic Nobel Peace Prize: Machado’s Political Move for Venezuela

ವಾಷಿಂಗ್ಟನ್, ಜನವರಿ 16: ಕೊನೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump)​ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿಬಿಟ್ಟಿದೆ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪುರಸ್ಕಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಗೌರವ ಸೂಚಕವಾಗಿ ಪ್ರದಾನ ಮಾಡಿದ್ದಾರೆ.

ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ. ಈ ವಿಷಯದ ಕುರಿತು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮಚಾದೊ ನಿರಾಕರಿಸಿದರು. ವೆನೆಜುವೆಲಾದ ಸ್ವಾತಂತ್ರ್ಯಕ್ಕೆ ಅವರ ವಿಶೇಷ ಕೊಡುಗೆಗಾಗಿ ಪುರಸ್ಕಾರವನ್ನು ಅವರಿಗೆ ಅರ್ಪಿಸಿದ್ದೇನೆ ಎಂದಷ್ಟೇ ಹೇಳಿದ್ದಾರೆ.

ಮಚಾದೊ ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಶ್ವೇತಭವನದಲ್ಲಿ ಬಿಟ್ಟು ಹೋಗಿದ್ದಾರೆ. ಮೂಲಗಳು ಹೇಳುವಂತೆ ಪದಕವು ಪ್ರಸ್ತುತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಳಿ ಇದೆ ಮತ್ತು ಟ್ರಂಪ್ ಅದನ್ನು ಇಟ್ಟುಕೊಂಡಿದ್ದಾರೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಇದೇ ನೊಬೆಲ್ ಪ್ರಶಸ್ತಿಯು ಒಮ್ಮೆ ಮಚಾದೊ ಮತ್ತು ಟ್ರಂಪ್ ನಡುವಿನ ಸಂಬಂಧದಲ್ಲಿ ಪ್ರಮುಖ ಉದ್ವಿಗ್ನತೆಗೆ ಕಾರಣವಾಗಿತ್ತು.

2025ರಲ್ಲಿ ಮಚಾದೊಗೆ ಈ ಗೌರವ ನೀಡಲಾಗಿತ್ತು. ಟ್ರಂಪ್ ಈ ಪ್ರಶಸ್ತಿಯನ್ನು ಬಹಳ ಹಿಂದಿನಿಂದಲೂ ಬಯಸಿದ್ದರು ಮತ್ತು ಮಚಾದೊ ಅವರ ಸ್ವೀಕಾರವು ಅವರನ್ನು ವೈಯಕ್ತಿಕವಾಗಿ ನೋಯಿಸಿದೆ ಎಂದು ಶ್ವೇತಭವನಕ್ಕೆ ಹತ್ತಿರವಿರುವ ಮೂಲಗಳು ತಿಳಿಸಿದ್ದವು. ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಬಂಧನದ ನಂತರ, ಟ್ರಂಪ್  ಮಚಾದೊ ಅವರಿಂದ ದೂರವಾಗಿದ್ದರು.

ಮತ್ತಷ್ಟು ಓದಿ: 8 ಯುದ್ಧ ನಿಲ್ಲಿಸಿದರೂ ನೊಬೆಲ್ ಶಾಂತಿ ಪ್ರಶಸ್ತಿ ಟ್ರಂಪ್ ಕೈ ತಪ್ಪಿದ್ದೇಕೆ?; ಇಲ್ಲಿವೆ 4 ಕಾರಣ

ಆದ್ದರಿಂದ, ನೊಬೆಲ್ ಪದಕ ಪ್ರದಾನವನ್ನು ಕೇವಲ ಗೌರವವಾಗಿ ನೋಡಲಾಗುವುದಿಲ್ಲ, ಆದರೆ ಟ್ರಂಪ್ ಅವರನ್ನು ಸಮಾಧಾನಪಡಿಸಲು ಮತ್ತು ಅಮೆರಿಕದ ಬೆಂಬಲವನ್ನು ಬಲಪಡಿಸಲು ಉದ್ದೇಶಪೂರ್ವಕ ರಾಜಕೀಯ ನಡೆ ಎಂದು ನೋಡಲಾಗುತ್ತಿದೆ.

ನಾರ್ವೇಜಿಯನ್ ನೊಬೆಲ್ ಸಂಸ್ಥೆಯು ಪ್ರಶಸ್ತಿಯ ಹಣವನ್ನು ವಿಜೇತರು ಬಯಸುವವರೊಂದಿಗೆ ಮಾತ್ರ ಹಂಚಿಕೊಳ್ಳಬಹುದು ಆದರೆ ಬಹುಮಾನವನ್ನು ಬೇರೆಯವರೊಂದಿಗೆ ವರ್ಗಾಯಿಸಲು ಅಥವಾ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. ನೊಬೆಲ್ ಪ್ರಶಸ್ತಿ ವಿಜೇತೆ ಮತ್ತು ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಹಂಚಿಕೊಳ್ಳುವುದಾಗಿ ಕೆಲವು ದಿನಗಳ ಹಿಂದೆ ವಾಗ್ದಾನ ಮಾಡಿದ್ದರು.

ನೊಬೆಲ್ ಶಾಂತಿ ಪುರಸ್ಕಾರ ಪಡೆಯುವುದು ಟ್ರಂಪ್​ರ ಹೆಬ್ಬಯಕೆ
ಡೊನಾಲ್ಡ್ ಟ್ರಂಪ್ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆಯುವ ಬಯಕೆಯನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಿದ್ದರು ಎಂಬುದು ಗಮನಿಸಬೇಕಾದ ಸಂಗತಿ. ಪ್ರಶಸ್ತಿಯನ್ನು ವರ್ಗಾಯಿಸಲು ಸಾಧ್ಯವಿಲ್ಲ ಎಂದು ನೊಬೆಲ್ ಸಮಿತಿ ಹೇಳಿಕೊಂಡಿದೆ. ಶ್ವೇತಭವನದಲ್ಲಿ ನಡೆದ ಸಭೆಯ ನಂತರ ಯುಎಸ್ ಕ್ಯಾಪಿಟಲ್ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ನಾನು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದೇನೆ ಎಂದು ಹೇಳಿದರು.

ಟ್ರಂಪ್ ಹೇಳಿದ್ದೇನು?
ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರನ್ನು ಭೇಟಿಯಾಗಲು ತಮಗೆ ಸಿಕ್ಕ ದೊಡ್ಡ ಗೌರವ ಎಂದು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಉತ್ತಮ ಕೆಲಸಕ್ಕಾಗಿ ಮಾರಿಯಾ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿದ್ದಾರೆ ಎಂದು ಟ್ರಂಪ್ ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ – Kannada News | Bengaluru temperature: Dry Weather Persists allover the state including Bengaluru

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ

ಬೆಂಗಳೂರು, ಜನವರಿ 16: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ (Weather Forecast) ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಚಳಿ

ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೂ ತಲುಪಿದ ರಾಜೀವ್ ಗೌಡ ಪ್ರಕರಣ: ‘ಕೈ’ ಮುಖಂಡನ ವಿರುದ್ಧ ಇದೆ 9 ಕ್ರಿಮಿನಲ್ ಕೇಸ್ – Kannada News | Police Launch 3 Search Teams to Arrest Rajeev Gowda as Sidlaghatta Abuse Case Reaches Congress High Command

ಚಿಕ್ಕಬಳ್ಳಾಪುರ, ಜನವರಿ 16: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಅಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ವಿರುದ್ಧ ಈಗಾಗಲೇ ಎಫ್​ಐಆರ್ ದಾಖಲಾಗಿದೆ. ಎರಡು ದಿನಗಳಿಂದ ರಾಜೀವ್‌ ಗೌಡ (Rajeev Gowda) ತಲೆಮರೆಸಿಕೊಂಡಿದ್ದು, ಫೋನ್‌ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಪೊಲೀಸರು 3 ತಂಡ ರಚನೆ ಮಾಡಿದ್ದಾರೆ. ಗುರುವಾರ ರಾಜೀವ್ ಗೌಡ ಮನೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಶೋಧ ನಡೆಸಲಾಯಿತು. ರಾಜೀವ್ ಗೌಡ ಪತ್ನಿ ಪೊಲೀಸರ ಜೊತೆ ರಂಪಾಟ ಮಾಡಿದ್ದಾರೆ. ಸರ್ಚ್ ವಾರಂಟ್ ಇಲ್ಲದೇ ಮನೆಗೆ ಬರಬೇಡಿ ಎಂದು ಆವಾಜ್ ಹಾಕಿದ್ದಾರೆ.

ಏತನ್ಮಧ್ಯೆ, ರಾಜೀವ್‌ಗೌಡ ವರ್ತನೆ ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೂ ಮುಜುಗರ ತಂದಿದೆ. ಇದೇ ಪ್ರಕರಣ ಹೈಕಮಾಂಡ್ ಅಂಗಳಕ್ಕೂ ತಲುಪಿದೆ. ಈ ಬಗ್ಗೆ ವರದಿ ನೀಡುವಂತೆ ಕೆಪಿಸಿಸಿ ಸೂಚಿಸಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​​ಗೆ ನೇರವಾಗಿ ಫೋನ್ ಕರೆ ಮಾಡಿ ವರದಿ ಕೇಳಿರುವ ಬಗ್ಗೆ ಎಐಸಿಸಿ ಉನ್ನತ ಮೂಲಗಳಿಂದ ‘ಟಿವಿ9’ಗೆ ಮಾಹಿತಿ ಲಭ್ಯವಾಗಿದೆ. ಎಐಸಿಸಿ ಸೂಚನೆ ಬೆನ್ನಲ್ಲೇ ಕೆಪಿಸಿಸಿ ರಾಜೀವ್‌ ಗೌಡಗೆ ನೋಟಿಸ್ ನೀಡಿದ್ದು, ವಾರದೊಳಗೆ ಸೂಕ್ತ ಉತ್ತರ ನೀಡದಿದ್ದರೆ ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ.

ರಾಜೀವ್ ಗೌಡ ಬಂಧನಕ್ಕೆ ಆಗ್ರಹಿಸಿ ಇಂದು ಪ್ರತಿಭಟನೆ

ಮಹಿಳಾ ಅಧಿಕಾರಿಗೆ ಅನ್ಯಾಯವಾದರೂ ಸರ್ಕಾರಿ ನೌಕರರ ಸಂಘ ಮೌನವಾಗಿದ್ದ ಬಗ್ಗೆ ‘ಟಿವಿ9’ ವರದಿ ಮಾಡಿತ್ತು. ಸುದ್ದಿಪ್ರಸಾರದ ಬೆನ್ನಲ್ಲೇ ರಾಜೀವ್ ಗೌಡ ವಿರುದ್ಧ ಜಿಲ್ಲಾ ಸರ್ಕಾರಿ ನೌಕರರ ಸಂಘ ತಿರುಗಿಬಿದ್ದಿದೆ. ರಾಜೀವ್ ಗೌಂಡ ಬಂಧನಕ್ಕಾಗಿ ಆಗ್ರಹಿಸಿ ಇಂದು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಿದೆ.
ಇನ್ನೊಂದೆಡೆ ಪೌರಾಡಳಿತ ಸಚಿವ ರಹೀಂ ಖಾನ್, ತಮ್ಮ ಇಲಾಖೆಯ ಮಹಿಳಾ ಅಧಿಕಾರಿಗೆ ಅನ್ಯಾಯವಾದರೂ ತುಟಿ ಬಿಚ್ಚದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ರಾಜೀವ್ ಗೌಡ ವಿರುದ್ಧ ಇದೆ 9 ಕ್ರಿಮಿನಲ್ ಕೇಸ್

ಈ ಮಧ್ಯೆ, ಪೊಲೀಸರು ರಾಜೀವ್ ಗೌಡನ ಕ್ರಿಮಿನಲ್ ಇತಿಹಾಸ ಕೆದಕಲು ಶುರುಮಾಡಿದ್ದಾರೆ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಈವರೆಗೆ 9 ಕೇಸ್‌ ಕೇಸ್ ದಾಖಲಾಗಿರುವುದು ಬಯಲಾಗಿದೆ. ಶಿಡ್ಲಘಟ್ಟ ನಗರ, ಹೊಸಕೋಟೆ, ದೇವನಹಳ್ಳಿ ಸೇರಿ ಬೆಂಗಳೂರಲ್ಲಿ ಕೇಸ್‌ಗಳಿವೆ. ರಿಯಲ್ ಎಸ್ಟೇಟ್‌ನಲ್ಲಿ ಮೋಸ, ವಂಚನೆ ಸೇರಿ ವಿವಿಧ ಪ್ರಕರಣಗಳು ದಾಖಲಾಗಿದ್ದ ಬಗ್ಗೆ ‘ಟಿವಿ9’ಗೆ ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೈಕ್​ನಲ್ಲಿ ಬರುವಾಗ ಗಾಳಿಪಟದ ದಾರ ತಪ್ಪಿಸಲು ಹೋಗಿ ಪತ್ನಿ, ಮಗಳ ಸಮೇತ ಸೇತುವೆಯಿಂದ ಬಿದ್ದ ಸವಾರ, ಮೂವರು ಸಾವು – Kannada News | Surat Kite String Tragedy: Family of 3 Dies After Bike Falls 70 Feet from Bridge

ಸೂರತ್, ಜನವರಿ 16: ಹುಟ್ಟು ಸಾವು ಎರಡೂ ದೈವ ನಿರ್ಣಯ ಅಂತಾರೆ, ಯಾವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ತಪ್ಪಿಸಲು ಹೋದರೂ ಯಾವುದೇ ಪ್ರಯೋಜನವಾಗುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬೈಕ್​ನಲ್ಲಿ ಬರುವಾಗ ಗಾಳಿಪಟ(Kite)ದ ದಾರವನ್ನು ತಪ್ಪಿಸಲು ಹೋಗಿ ವ್ಯಕ್ತಿಯೊಬ್ಬ ಪತ್ನಿ, ಮಗಳ ಸಮೇತ ಸೇತುವೆಯಿಂದ ಕೆಳಗೆಬಿದ್ದು ಸಾವನ್ನಪ್ಪಿರುವ ಘಟನೆ ಗುಜರಾತಿನ ಸೂರತ್​ನಲ್ಲಿ ನಡೆದಿದೆ. ಮಕರ ಸಂಕ್ರಾಂತಿ ದಿನದಂದು ಆಕಸ್ಮಿಕವಾಗಿ ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ 35 ವರ್ಷದ ರೆಹಾನ್ ರಹೀಮ್ ಶೇಖ್ ಎಂಬ ವ್ಯಕ್ತಿ ತನ್ನ ಪತ್ನಿ ರೆಹಾನಾ (33) ಮತ್ತು ಮಗಳು ಅಲಿಶಾ (10) ಅವರೊಂದಿಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಗಾಳಿಪಟದ ದಾರ ಇದ್ದಕ್ಕಿದ್ದಂತೆ ಅವರ ಎದುರು ಬಂದಿತ್ತು. ಅದನ್ನು ತಪ್ಪಿಸಲು ಹೋಗಿ ಬೈಕ್ ಸೇತುವೆಯ ಮೇಲಿನ ವಿಭಜಕಕ್ಕೆ ಡಿಕ್ಕಿ ಹೊಡೆದು 70 ಅಡಿ ಕೆಳಗೆ ಬಿದ್ದಿದೆ.

ಆ ವ್ಯಕ್ತಿ ಮತ್ತು ಅವರ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಆದರೆ ಅವರ ಪತ್ನಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಸಮೀಪದಲ್ಲಿ ಇರಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಅಪಘಾತದ ದೃಶ್ಯಗಳನ್ನು ಸೆರೆಹಿಡಿದಿದೆ. ಜನವರಿ 14 ರಂದು ಸಂಜೆ 5 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಗಾಳಿಪಟದ ದಾರವೊಂದು ಬೈಕಿನ ಮುಂದೆ ಬಂದಿರುವುದನ್ನು ಅದು ತೋರಿಸಿದೆ.

ಮತ್ತಷ್ಟು ಓದಿ: ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಏಕೆ ಹಾರಿಸಲಾಗುತ್ತದೆ ಎಂದು ತಿಳಿದಿದೆಯೇ?

ರೆಹಮಾನ್ ಒಂದು ಕೈಯಿಂದ ಅದನ್ನು ತೆಗೆದುಹಾಕಲು ಪ್ರಯತ್ನಿಸಿದಾಗ, ಅವರ ನಿಯಂತ್ರಣ ತಪ್ಪಿತು, ಮತ್ತು ಬೈಕ್ ವಿಭಜಕಕ್ಕೆ ಡಿಕ್ಕಿ ಹೊಡೆದು, ತಕ್ಷಣವೇ ಸೇತುವೆಯಿಂದ ಬಿದ್ದು, ಆಟೋ ರಿಕ್ಷಾದ ಮೇಲೆ ಬಿದ್ದಿತು.

ಆಟೋ ಚಾಲಕ ಮತ್ತು ಪ್ರತ್ಯಕ್ಷದರ್ಶಿ ಇಕ್ಬಾಲ್ ಮಾತನಾಡಿ, ನಾನು ಸಂಜೆ 5.15 ರ ಸುಮಾರಿಗೆ ಚಹಾ ಕುಡಿಯಲು ಇಲ್ಲಿಗೆ ಬಂದಿದ್ದೆ. ಚಹಾ ಕುಡಿದು ನನ್ನ ರಿಕ್ಷಾದೊಳಗೆ ಕುಳಿತ ತಕ್ಷಣ, ಮೂವರು ಮೇಲಿನಿಂದ ಬಿದ್ದರು, ಒಬ್ಬ ಮಹಿಳೆ, ಒಬ್ಬ ಪುಟ್ಟ ಹುಡುಗಿ ಮತ್ತು ಒಬ್ಬ ಪುರುಷ. ಅವರೆಲ್ಲರೂ ನನ್ನ ಮತ್ತು ನನ್ನ ರಿಕ್ಷಾದ ಮೇಲೆ ಬಿದ್ದರು. ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ, ಮತ್ತು ನನಗೂ ಕೆಲವು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಿದರು.

ಅಪಘಾತದ ಬಗ್ಗೆ ವರದಿಯಾದ ತಕ್ಷಣ, ಪೊಲೀಸರು ಸ್ಥಳಕ್ಕೆ ಬಂದು ಶವಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ತರೆಹಾನ್ ಆಭರಣ ತಯಾರಕರಾಗಿದ್ದು, ಅವರ ಕುಟುಂಬದ ಏಕೈಕ ಜೀವನಾಧಾರವಾಗಿದ್ದರು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

ಬೆಂಗಳೂರು, ಜನವರಿ 16: ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತಿ ಮತ್ತು ಭಾವನೆ ಮುಖ್ಯವಾದರೂ, ಕೆಲವು ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳನ್ನು ಪಡೆಯಬಹುದು ಎಂದು ನಂಬಲಾಗಿದೆ.

ಉದಾಹರಣೆಗೆ, ಬಾಳೆಹಣ್ಣನ್ನು ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ತೆಂಗಿನಕಾಯಿ ಅರ್ಪಣೆಯು ಹೊಸ ಯೋಜನೆಗಳಿಗೆ ಆಲೋಚನೆಗಳನ್ನು ನೀಡಿ ಉದ್ಯೋಗದಲ್ಲಿ ಶುಭವನ್ನು ತರುತ್ತದೆ ಮತ್ತು ಅಧಿಕಾರಿಗಳೊಂದಿಗಿನ ಸಂಬಂಧಗಳನ್ನು ಸುಧಾರಿಸುತ್ತದೆ. ಸೇಬು ಹಣ್ಣು ರೋಗಗಳನ್ನು ನಿವಾರಿಸಿ ದಾರಿದ್ರ್ಯವನ್ನು ಕಡಿಮೆ ಮಾಡುತ್ತದೆ. ದ್ರಾಕ್ಷಿ ಸುಖ, ಸಂತೋಷ, ಮಾನಸಿಕ ತೃಪ್ತಿ ಮತ್ತು ಒಳ್ಳೆಯ ಆಲೋಚನೆಗಳನ್ನು ನೀಡುತ್ತದೆ. ಈ ರೀತಿ, ಪ್ರತಿಯೊಂದು ಹಣ್ಣಿಗೂ ತನ್ನದೇ ಆದ ಮಹತ್ವ ಮತ್ತು ಫಲವಿದೆಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿಯಾಗ್ತಾರಾ, ಸಿಗುತ್ತಾ ಕುರ್ಚಿ ಅಭಯ? – Kannada News | DK Shivakumar Two Day Delhi Visit Sparks Speculation: Rahul Gandhi Meeting and Power Play Buzz in Karnataka Congress

ಇಂದಿನಿಂದ 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ

ಬೆಂಗಳೂರು, ಜನವರಿ 16: ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದರೆ ಸಂಕ್ರಾಂತಿಗೆ ಕಾಂಗ್ರೆಸ್‌ನಲ್ಲಿ (Congress)  ಪಥಬದಲಾಗುತ್ತದೆ, ಕ್ರಾಂತಿಯಾಗುತ್ತದೆ ಎಂಬೆಲ್ಲ ಗೊಂದಲಗಳಿಗೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ ಸಂಬಂಧಪಟ್ಟಂತೆ ಸದ್ಯಕ್ಕೆ ಕಾಂಗ್ರೆಸ್‌ನಲ್ಲಿ ಅಂತಾ ಮಹತ್ವದ ಬೆಳವಣಿಗೆ ನಡೆಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಮೈಸೂರಿಗೆ ಬಂದಿದ್ದ ರಾಹುಲ್ ಗಾಂಧಿಯನ್ನು ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ದರು. ಅದರಲ್ಲೂ ಡಿಕೆ ಶಿವಕುಮಾರ್‌ (DK Shivakumar) ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು ಎನ್ನಲಾಗಿತ್ತು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದೂ ಮೂಲಗಳು ತಿಳಿಸಿದ್ದವು. ಅದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯಗೂ ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದರು.

ರಾಹುಲ್ ಗಾಂಧಿ ಭೇಟಿಯಾಗೋದು ಹೊಸದೇನು ಅಲ್ಲ ಎಂದ ಡಿಕೆಶಿ!

ರಾಹುಲ್‌ ಗಾಂಧಿಯವರ ಆಹ್ವಾನ ದೊರೆಯುತ್ತಿದ್ದಂತೆಯೇ ಡಿಕೆ ಶಿವಕುಮಾರ್‌ ಉತ್ಸಾಹದಲ್ಲಿ ಸಂಕ್ರಾಂತಿ ಹಬ್ಬದ ನಡುವೆಯೇ ಇಂದು ದೆಹಲಿಯತ್ತ ಮುಖ ಮಾಡಿದ್ದಾರೆ. ಮುಂದಿನ ವಾರ ರಾಹುಲ್‌ ಗಾಂಧಿ ವಿದೇಶ ಪ್ರವಾಸಕ್ಕಾಗಿ ತೆರಳುತ್ತಿದ್ದು, ಅದಕ್ಕೂ ಮುನ್ನವೇ ದೆಹಲಿಯಲ್ಲಿ ಭೇಟಿ ಮಾಡಿ ತಮ ಗೊಂದಲವನ್ನು ಬಗೆ ಹರಿಸಿಕೊಳ್ಳಲು ಡಿಕೆ ಶಿವಕುಮಾರ್‌ ಕಾತರರಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ದೆಹಲಿಗೆ ಹೋಗುತ್ತಿದ್ದೇನೆ. ಪಕ್ಷದ ಎಲ್ಲ ನಾಯಕರನ್ನು ಅಲ್ಲಿ ಭೇಟಿ ಮಾಡುತ್ತೇನೆ. ರಾಹುಲ್ ಗಾಂಧಿ ಭೇಟಿಯಾಗುವುದು ಹೊಸದೇನು ಅಲ್ಲ. ಅವುಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ ಎಂದರು. ಇನ್ನು ರಾಹುಲ್ ಗಾಂಧಿ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ. ಅವರ ಅಪೇಕ್ಷೆಯನ್ನು ರಾಹುಲ್ ಬಳಿ ಹೇಳಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ರಾಹುಲ್ ನಮ್ಮ ಪಕ್ಷದ ನಾಯಕರು. ಬಯಕೆಯನ್ನು ಅವರ ಮುಂದೆ ಪ್ರಸ್ತಾಪಿಸುತ್ತೇನೆ ಎಂದು ಹೇಳಿರುವುದು ಕುತೂಹಲ ಹುಟ್ಟಿಸಿದೆ.

ಅಸ್ಸಾಂ ಚುನಾವಣೆ ನೆಪ: ಕುರ್ಚಿ ಆಟದ್ದೇ ಜಪ!

ಇಂದು ಬೆಳಗ್ಗೆ 10.55ಕ್ಕೆ ಡಿಕೆಶಿ ದೆಹಲಿಗೆ ತೆರಳುತ್ತಿದ್ದಾರೆ. ಅಸ್ಸಾಂ, ಪಶ್ಚಿಮಬಂಗಾಳ, ಕೇರಳ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ಸಿನ ಉಸ್ತುವಾರಿ ನಾಯಕರ ಮಹತ್ವದ ಸಭೆ ನಡೆಯಲಿದೆ. ಅಸ್ಸಾಂ ಚುನಾವಣೆಗೆ ಕಾಂಗ್ರೆಸ್‌‍ ವೀಕ್ಷಕರಾಗಿರುವ ಡಿ.ಕೆ.ಶಿವಕುಮಾರ್‌, ಸಂಸದೆ ಪ್ರಿಯಾಂಕಾ ಗಾಂಧಿ ಅವರ ಜೊತೆ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಆದರೆ ಅಸ್ಸಾಂ ಚುನಾವಣೆ ಕೇವಲ ನೆಪಮಾತ್ರವಾಗಿದ್ದು ಅಧಿಕಾರ ಹಂಚಿಕೆ ವಿಚಾರವೇ ಡಿಕೆ ದೆಹಲಿ ಭೇಟಿಗೆ ಪ್ರಧಾನ ಕಾರಣ ಎನ್ನಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಜೊತೆ ಡಿಕೆಶಿ ಚರ್ಚಿಸಿದ್ದೇನು?

ಸಂಕ್ರಾಂತಿ ದಿನ ರಾಜಕೀಯ ಚಟುವಟಿಕೆಗೆಳು ಗಮನ ಸೆಳೆದವು. ಡಿಸಿಎಂ ಡಿಕೆ ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿದ್ದು, ಇದಕ್ಕೂ ಮುನ್ನ ಸಚಿವ ಪ್ರಿಯಾಂಕ್ ಖರ್ಗೆ ಡಿಸಿಎಂ ಡಿಕೆಶಿ ನಿವಾಸಕ್ಕೆ ಭೇಟಿಯಾಗಿ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಜೊತೆ ಮಾತುಕತೆ ನಡೆಸಿದ್ದು ಕುತೂಹಲ ಹುಟ್ಟಿಸಿತು. ಸಂದೇಶ ವಾಹಕರಂತೆ ಕೆಲಸ ಮಾಡುತ್ತಿರುವ ಪ್ರಿಯಾಂಕ ಖರ್ಗೆ, ಡಿ.ಕೆ.ಶಿವಕುಮಾರ್‌ ಅವರಿಗೆ ಸಿದ್ದರಾಮಯ್ಯ ಮತ್ತು ಹೈಕಮಾಂಡ್‌ ನೀಡಿದ ಸಂದೇಶಗಳನ್ನು ತಲುಪಿಸಿದರಾ ಎಂಬ ಪ್ರಶ್ನೆ ಮೂಡಿದೆ.

ಕರ್ನಾಟಕ ಕಾಂಗ್ರೆಸ್ ಕ್ರಾಂತಿ, ಶಿವರಾತ್ರಿಗೆ ಮುಂದೂಡಿಕೆ?

ಸಂಕ್ರಾಂತಿ ಬಳಿಕ ನಡೆಯಬೇಕಿದ್ದ ಕಾಂಗ್ರೆಸ್​​​ನ ಕ್ರಾಂತಿ, ಶಿವರಾತ್ರಿಗೆ ಮುಂದೂಡಿಕೆ ಆಗುತ್ತಾ ಎಂಬ ಅನುಮಾನ ಶುರುವಾಗಿದೆ. ಜನವರಿ 22ರ ಒಳಗಾಗಿ ಗೊಂದಲ ಬಗೆಹರಿದರೆ ಸರಿ. ಇಲ್ಲದಿದ್ದರೆ ಮತ್ತೆ ಒಂದರ ಹಿಂದೊಂದು ಬೆಳವಣಿಗೆಗಳ ಅಡೆತಡೆ ರಾಜ್ಯ ಕಾಂಗ್ರೆಸ್ ಗೊಂದಲವನ್ನು ಹೆಚ್ಚು ಮಾಡಲಿದೆ‌‌.

ದಾಳ ಉರುಳಿಸಿದ್ರಾ ಸಿದ್ದರಾಮಯ್ಯ?

ಡಿಸಿಎಂ ಡಿಕೆ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಮತ್ತೆ ಜನವರಿ 22ರ ಬಳಿಕ ದೆಹಲಿಗೆ ಪ್ಲ್ಯಾನ್ ಮಾಡಿದ್ದಾರೆ. ಆದರೆ ಜನವರಿ 22 ರಿಂದ 31ವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಆಯೋಜನೆ ಮಾಡಲಾಗಿದೆ. ಹೀಗಾಗಿ ದೆಹಲಿಯ ನಾಯಕರು ಸಿಎಂಗೆ ದೆಹಲಿ ಬುಲಾವ್ ಕೊಡೋದು ಬಹುತೇಕ ಅನುಮಾನ. ಈ ಮಧ್ಯೆ ಜನವರಿ 28ರಿಂದ ಸಂಸತ್ ಬಜೆಟ್ ಅಧಿವೇಶ ಆರಂಭವಾಗಲಿದೆ. ಹೈಕಮಾಂಡ್ ನಾಯಕರು ಸಂಸತ್​​ನಲ್ಲಿಯೇ 1 ತಿಂಗಳು ವ್ಯಸ್ತರಾಗಿರಲಿದ್ದಾರೆ. ಈ ಹಿನ್ನೆಲೆ ಸಂಕ್ರಾಂತಿಯ ಕ್ರಾಂತಿ ಮತ್ತೆ ಫೆಬ್ರವರಿಗೆ ಮುಂದೂಡಿಕೆ ಆಗುತ್ತದಯೇ ಎಂಬ ಚರ್ಚೆ ಕಾಂಗ್ರೆಸ್​ ಆಂತರಿಕ ವಲದಲ್ಲಿ ಶುರುವಾಗಿದೆ.

ಇದನ್ನೂ ಓದಿ: ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್​​ ನಿರ್ಧಾರ: ಕಾರಣ ಏನು?

ಒಟ್ಟಾರೆ, ಉತ್ತರಾಯಣದ ಪುಣ್ಯ ಕಾಲದಲ್ಲಿ ಸೂರ್ಯನ ಪಥ ಬದಲಾಗಿದೆ. ರಾಜ್ಯ ಕಾಂಗ್ರೆಸ್​​​ನ ಗೊಂದಲದ ದಿಕ್ಕು ಯಾವಾಗ ಬದಲಾಗುತ್ತದೆ ಎಂಬುದಷ್ಟೇ ಬಾಕಿ ಉಳಿದಿರುವ ಕುತೂಹಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version