LPG ಸಿಲಿಂಡರ್​​ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ

LPG ಸಿಲಿಂಡರ್​​ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ

ಬೆಂಗಳೂರು, ಮಾರ್ಚ್​​ 19: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಹೋಟೆಲ್​​ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರೆಸ್ಟೋರೆಂಟ್​​ಗಳು ಈಗಾಗಲೇ ಬಂದ್​​ ಆಗಿವೆ. ಪರಿಣಾಮ ಅದನ್ನೇ ನಂಬಿಕೊಂಡಿದ್ದ ಲಕ್ಷಾಂತರ ಕಾರ್ಮಿಕರು ಮತ್ತು ಕುಟುಂಬ ಬೀದಿಗೆ ಬಿದ್ದಿದೆ. ಹೀಗಾಗಿ ಸಿಲಿಂಡರ್​​ಗಳ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅದಾಗಲೇ ಹೈಕೋರ್ಟ್​​ಗೆ ರಿಟ್​​ ಅರ್ಜಿ ಸಲ್ಲಿಸಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಅಸೋಸಿಯೇಷನ್ ಪತ್ರ ಬರೆದಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಉದ್ಭವಿಸಿರುವ ಸಮಸ್ಯೆ ಬಗ್ಗೆ ಚರ್ಚೆಗೆ ಅವಕಾಶ  ಮತ್ತು ಭೇಟಿಗೆ ಸಮಯ ನೀಡುವಂತೆ ಪತ್ರದಲ್ಲಿ ಆಗ್ರಹಿಸಲಾಗಿದೆ.

ಪ್ರಧಾನಿ ಮೋದಿಗೆ ಬರೆದಿರುವ ಪತ್ರದ ಸಾರಾಂಶ

ಬೆಂಗಳೂರು ನಗರದಲ್ಲೇ 40,000ಕ್ಕೂ ಹೆಚ್ಚು ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿವೆ. ನಾವು ಅಗತ್ಯ ಸೇವೆಗಳ ವಿಭಾಗಕ್ಕೆ ಸೇರಿದ್ದು, ಪ್ರಸ್ತುತ ವಾಣಿಜ್ಯ LPG ಸಿಲಿಂಡರ್‌ಗಳ ಕೊರತೆ ಮತ್ತು ಸರಬರಾಜಿನ ವ್ಯತ್ಯಯದಿಂದ ನಾವು ಗಂಭೀರ ಸಂಕಷ್ಟವನ್ನು ಎದುರಿಸುತ್ತಿದ್ದೇವೆ. ಈ ತುರ್ತು ಪರಿಸ್ಥಿತಿಯಲ್ಲಿ, ದಯವಿಟ್ಟು ಪೆಟ್ರೋಲಿಯಂ ಸಚಿವರಿಗೆ ಸೂಚನೆ ನೀಡಿ ನಮ್ಮ ದೈನಂದಿನ LPG ಅಗತ್ಯದ ಕನಿಷ್ಠ ಶೇ.50ರಷ್ಟು ಸರಬರಾಜು ಮಾಡಲು ಸಹಕರಿಸಬೇಕೆಂದು ಕೇಳಿಕೊಳ್ಳುತ್ತಿದ್ದೇವೆ ಹೋಟೆಲ್‌ಗಳು ಮತ್ತು ಉಪಾಹಾರ ಮಂದಿರಗಳು ಸಾಮಾನ್ಯ ಜನರಿಗೆ ಪ್ರತಿದಿನದ ಆಹಾರವನ್ನು ಒದಗಿಸುತ್ತವೆ. ಇದರಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರು, ಆನ್‌ಲೈನ್ ಡೆಲಿವರಿ ಕೆಲಸಗಾರರು, ನಿರ್ಮಾಣ ಕಾರ್ಮಿಕರು, ಆಸ್ಪತ್ರೆಯ ರೋಗಿಗಳು, ಬ್ಯಾಚುಲರ್‌ಗಳು, ಹಿರಿಯ ನಾಗರಿಕರು ಮತ್ತು ಪಿಜಿ ವಸತಿಯಲ್ಲಿ ವಾಸಿಸುವವರು ಸೇರಿದ್ದಾರೆ ಎಂಬ ಅಂಶವನ್ನು ಪ್ರಧಾನಿಯವರ ಗಮನಕ್ಕೆ ತರಲಾಗಿದೆ.

ಇದನ್ನೂ ಓದಿ: ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್; ರಿಟ್​​ ಅರ್ಜಿ ಸಲ್ಲಿಕೆ

ವಾಣಿಜ್ಯ LPG ಸರಬರಾಜು ಸಂಪೂರ್ಣವಾಗಿ ನಿಂತಿರುವುದು ಸುಮಾರು 40,000 ಸ್ವಯಂ ಉದ್ಯೋಗ ಹೊಂದಿರುವ ಹೋಟೆಲ್ ಮಾಲೀಕರಿಗೂ ಮತ್ತು ಈ ಕ್ಷೇತ್ರದ ಮೇಲೆ ಅವಲಂಬಿತವಾಗಿರುವ 6 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿಗೆ ಭಾರೀ ಹೊಡೆತವಾಗಿದೆ. ಇದಲ್ಲದೆ, ನಮ್ಮ ಅಡುಗೆಮನೆಗಳಲ್ಲಿ ಬಳಕೆಯಾಗುವ ಹಾಲು, ಹಣ್ಣುಗಳು ಮತ್ತು ತರಕಾರಿಗಳಂತಹ ಕೃಷಿ ಉತ್ಪನ್ನಗಳ ಮೇಲೂ ಇದು ಪರಿಣಾಮ ಬೀರುತ್ತದೆ. ಜೊತೆಗೆ, ನಾವು ಪ್ರತಿದಿನ ಸಾಮಾನ್ಯ ಜನರಿಗೆ ಉಚಿತ ಕುಡಿಯುವ ನೀರು ಮತ್ತು ಶೌಚಾಲಯ ಸೌಲಭ್ಯಗಳನ್ನೂ ಒದಗಿಸುತ್ತೇವೆ. ಈ ಎಲ್ಲಾ ವಿಚಾರಗಳನ್ನು ಪರಿಗಣಿಸಿ, ಪ್ರಸ್ತುತ ವಾಣಿಜ್ಯ LPG ಸಮಸ್ಯೆಗಳು ಮತ್ತು ನಮ್ಮ ಆತಂಕಗಳ ಬಗ್ಗೆ ಚರ್ಚಿಸಲು ನಿಮ್ಮೊಂದಿಗೆ ಭೇಟಿಗೆ ಅವಕಾಶ ನೀಡುವಂತೆ ಕೋರುವುದಾಗಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ವರದಿ: ನಟರಾಜ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Video: ಪಂಚ್ ಕೋತಿಗೆ ಸಿಕ್ಳು ಹೊಸ ಗರ್ಲ್ಫ್ರೆಂಡ್, ಗೊಂಬೆ ಜತೆ ಇರೋಕೆ ಬಿಡ್ತಿಲ್ಲ ಆಕೆ

ಜಪಾನ್, ಮಾರ್ಚ್​ 19: ತಮ್ಮ ತಾಯಿಯಿಂದ ತಿರಸ್ಕರಿಸಲ್ಪಟ್ಟು ಜಪಾನ್ ಮೃಗಾಲಯದಲ್ಲಿ ಒಬ್ಬಂಟಿಯಾಗಿದ್ದ ಪಂಚ್ ಕೋತಿಗೆ ಅಂತೂ ಗರ್ಲ್​ಫ್ರೆಂಡ್ ಸಿಕ್ಕಿದ್ದಾಳೆ. ಆಕೆ ಪಂಚ್ ಕೋತಿಗೆ ಅದರ ಪ್ರೀತಿಯ ಗೊಂಬೆಯ ಜತೆ ಇರಲು ಆಕೆ ಬಿಡುತ್ತಿಲ್ಲ. ಪ್ರತಿ ಐದು ಹತ್ತು ನಿಮಷಕ್ಕೊಮ್ಮೆ ಬಂದು ಪಂಚ್ ಕೋತಿಯನ್ನು ಪ್ರೀತಿಯಿಂದ ಹಗ್ ಮಾಡುತ್ತಾಳೆ, ಇಬ್ಬರೂ ಜತೆಯಾಗಿ ಆಟವಾಡುತ್ತಾ ಕಾಲ ಕಳೆಯುತ್ತಾರೆ. ಇಷ್ಟು ದಿನ ಒಂಟಿಯಾಗಿ ಬೇರೆ ಕೋತಿಗಳಿಂದ ಹಲ್ಲೆಗೆ ಒಳಗಾಗಿದ್ದ ಪಂಚ್ ಕೋತಿ ಈಗ ಸ್ನೇಹಿತೆ ಜತೆ ಖುಷಿಯಾಗಿ ಕಾಲ ಕಳೆಯುತ್ತಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು, ಆಮೇಲೆ ನಡೆದಿದ್ದೇ ಬೇರೆ

ಪಠಾಣ್, ಮಾರ್ಚ್​ 19: ಹರಿತವಾದ ಆಯುಧಗಳ ಜತೆ ಬಂದಿದ್ದ 18 ಮಂದಿ ದುಷ್ಕರ್ಮಿಗಳು ಪೊಲೀಸರನ್ನೇ ಹೆಸರಿಸಿ ಓಡಿಸಿರುವ ಆತಂಕಕಾರಿ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಮಾರ್ಚ್​ 15ರಂದು ರಾತ್ರಿ ಈ ಘಟನೆ ನಡೆದಿದೆ. ಗುಂಪೊಂದು ಕತ್ತಿ, ಮಚ್ಚಿನ ಜತೆ ಹಳ್ಳಿಯಲ್ಲಿರುವ ತೋಟದ ಮನೆಗೆ ನುಗ್ಗಿತ್ತು. ಎರಡು ಪೊಲೀಸ್ ವ್ಯಾನ್​ಗಳು ಸ್ಥಳದಲ್ಲಿ ನಿಂತು ಅಲ್ಲಿಂದ ಹೊರಟುಹೊದವು, ನಂತರ ನಡೆದಿದ್ದು ಹಿಂಸಾಚಾರ.

ಕೆಲವು ದಿನಗಳ ನಂತರ ಅದೇ ಗುಂಪಿನಲ್ಲಿರುವ ಜನರನ್ನು ಬೀದಿಗೆ ಎಳೆದುಕೊಂಡು ಹೋಗಿ ಲಾಠಿ ಏಟು ಕೊಟ್ಟು ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಒತ್ತಾಯಿಸಲಾಯಿತು. ಚನಸ್ಮಾ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಸುಮಾರು ಎಂಟು ವಾಹನಗಳಲ್ಲಿ 15 ರಿಂದ 20 ಜನರು ಬಂದು ಭವೇಶ್ ದೇಸಾಯಿ ಅವರ ತೋಟದ ಮನೆಯನ್ನು ಗುರಿಯಾಗಿಸಿಕೊಂಡಿದ್ದರು. ಗೇಟ್‌ಗಳನ್ನು ಬೀಳಿಸಿ, ಅಲ್ಲಿರುವ ವಸ್ತುಗಳೆಲ್ಲವನ್ನೂ ಧ್ವಂಸಗೊಳಿಸಿ, ಕೊಲೆ ಬೆದರಿಕೆ ಹಾಕಿದ್ದರು.ಜಿತುಭಾ, ಜಹುಭಾ, ದಲ್ಪುಜಿ ಸೇರಿದಂತೆ ಹಲವರ ಹೆಸರುಗಳು ಮುನ್ನೆಲೆಗೆ ಬಂದಿದ್ದವು. ದೇವಾಲಯದ ದೇಣಿಗೆ ಸಂಬಂಧಿಸಿದ ವಿವಾದವೇ ಹಿಂಸಾಚಾರದ ಮೂಲವಾಗಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ ಬಳಿಕ ಇನ್​​ಸ್ಟಾದಿಂದ ಮಾಯವಾದ ಐಶ್ವರ್ಯಾ ರಂಗರಾಜನ್

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ರಿಲೀಸ್ ಆಗಿ ವಿವಾದ ಸೃಷ್ಟಿ ಮಾಡಿತು. ಈ ಹಾಡಿನ ಸಾಲುಗಳು ಚರ್ಚೆಯನ್ನು ಹುಟ್ಟುಹಾಕಿದವು. ಇದರಿಂದ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್, ಹಾಡಲ್ಲಿ ಡ್ಯಾನ್ಸ್ ಮಾಡಿದ ನೋರಾ ಫತೇಹಿ ಅವರನ್ನು ಟೀಕೆ ಮಾಡಲಾಗುತ್ತಿದೆ. ಈ ಘಟನೆ ಬಳಿಕ ಹಾಡಿನ ಗಾಯಕಿ ಐಶ್ವರ್ಯಾ ರಂಗರಾಜನ್ ಅವರು ಸೋಶಿಯಲ್ ಮೀಡಿಯಾದಿಂದ ಮಾಯವಾಗಿದ್ದಾರೆ.

‘ಕೆಡಿ’ ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಶನಿವಾರ (ಮಾರ್ಚ್ 14) ರಿಲೀಸ್ ಆಯಿತು. ಹಾಡು ಬಿಡುಗಡೆ ಆದ ಕೆಲವೇ ದಿನಕ್ಕೆ ವಿವಾದದ ಹೊಗೆ ಕಾಣಿಸಿಕೊಂಡಿತು. ಕನ್ನಡದಿಂದ ಹಿಡಿದು ಬಾಲಿವುಡ್​​ವರೆಗೆ ಈ ಚಿತ್ರದ ಹಾಡನ್ನು ಟೀಕಿಸಿದರು. ಸಾಹಿತ್ಯ ಅಶ್ಲೀಲವಾಗಿದೆ ಎಂದು ಟೀಕಿಸಲಾಯಿತು. ಈಗ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡನ್ನು ಯೂಟ್ಯೂಬ್​​ನಿಂದ ತೆಗೆಯಲಾಗಿದೆ.

‘ಸರ್ಸೆ’ ಹಾಡಿಗೆ ಕನ್ನಡದಲ್ಲಿ ಸಾಂಗ್ ಬರೆದಿದ್ದು ಜೋಗಿ ಪ್ರೇಮ್ ಅವರು. ಈ ಹಾಡನ್ನು ಹಾಡಿದ್ದು ಐಶ್ವರ್ಯಾ ಅವರು. ಈ ಕಾರಣಕ್ಕೆ ಅವರ ಇನ್​​ಸ್ಟಾ ಖಾತೆಗೆ ಸಾಕಷ್ಟು ಸಂದೇಶ ಹಾಗೂ ಕಮೆಂಟ್​​ಗಳು ಬಂದಿರಬಹುದು. ಈ ಕಾರಣದಿಂದ ಇನ್​​ಸ್ಟಾಗ್ರಾಮ್​​ನಿಂದ ದೂರ ಉಳಿದರೇ ಎನ್ನುವ ಪ್ರಶ್ನೆ ಮೂಡಿದೆ. ವಿವಾದ ತಣ್ಣಗಾದ ಬಳಿಕ ಅವರು ಕಂಬ್ಯಾಕ್ ಮಾಡಬಹುದು ಎಂಬ ನಿರೀಕ್ಷೆ ಇದೆ.

ಇನ್​​ಸ್ಟಾಗ್ರಾಮ್ ಖಾತೆಯನ್ನು ಡಿ ಆ್ಯಕ್ಟಿವೇಟ್ ಮಾಡಲು ಕಾರಣ ಏನು ಎಂಬುದನ್ನು ಅವರು ರಿವೀಲ್ ಮಾಡಿಲ್ಲ. ಈಗ ಹಾಡಿನ ವಿವಾದ ಸಂದರ್ಭದಲ್ಲೇ ಅವರು ಡಿ ಆ್ಯಕ್ಟಿವೇಟ್ ಮಾಡಿರುವುದರಿಂದ ಸಾಕಷ್ಟು ಚರ್ಚೆ ಆಗಿದೆ. ಇದು ಕಾಕತಾಳೀಯ ಕೂಡ ಇರಬಹುದು ಎಂದು ಹೇಳಲಾಗುತ್ತಾ ಇದೆ.

ಇದನ್ನೂ ಓದಿ: ‘ಸರ್ಸೆ ಸೆರಗು’ ಹಾಡು ವಿವಾದ: ಆರೋಪಗಳಿಗೆ ಸ್ಪಷ್ಟನೆ ಕೊಟ್ಟ ಪ್ರೇಮ್

‘ಸರ್ಸೆ ನಿನ್ನ ಸೆರಗ ಸರ್ಸೆ’ ಸಾಂಗ್​​​ನ ಲಿರಿಕ್ಸ್​​ನ ಸಂಪೂರ್ಣವಾಗಿ ಬದಲಿಸಿ ಹೊಸ ಹಾಡಿನ ಮೂಲಕ ಬರೋದಾಗಿ ಜೋಗಿ ಪ್ರೇಮ್ ಹೇಳಿದ್ದಾರೆ. ಸಿನಿಮಾ ರಿಲೀಸ್​​ಗೆ ಕೆಲವೇ ವಾರಗಳು ಬಾಕಿ ಇರುವಾಗ ವಿವಾದ ಜೋರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಜೂನ್‌ನಿಂದ ಈ ರಾಶಿಗೆ ರಾಜಯೋಗ ಆರಂಭ

ಮಕರ ರಾಶಿಯವರಿಗೆ ಯುಗಾದಿ 2026 ಶುಭಕರವಾಗಿದ್ದು, ಕಳೆದ ಎಂಟು ವರ್ಷಗಳಿಂದ ಅನುಭವಿಸಿದ ತೊಂದರೆಗಳಿಗೆ ಪರಿಹಾರ ದೊರೆಯಲಿದೆ. ಜೂನ್‌ನಿಂದ ಮಕರ ರಾಶಿಯವರಿಗೆ ರಾಜಯೋಗ ಆರಂಭವಾಗಲಿದೆ ಎಂದು ಜ್ಯೋತಿಷಿ ಕೆ ವೆಂಕಟೇಶ್ ಶರ್ಮಾ ಭವಿಷ್ಯ ನುಡಿದಿದ್ದಾರೆ. ವ್ಯಾಪಾರದಲ್ಲಿ ನಿಧಾನಗತಿಯ ಬೆಳವಣಿಗೆ ಕಂಡುಬರಲಿದ್ದು, ಹಣಕಾಸು ಉಳಿತಾಯ ಉತ್ತಮವಾಗಲಿದೆ. ಕುಟುಂಬದಲ್ಲಿ ಜವಾಬ್ದಾರಿಗಳು ಹೆಚ್ಚಾಗಬಹುದು. ಆರೋಗ್ಯದ ವಿಚಾರದಲ್ಲಿ ಸಂಧಿ ನೋವುಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಜೂನ್ ಎರಡರಂದು ಗುರು ಉಚ್ಚ ಸ್ಥಾನಕ್ಕೆ ಬರುವುದರಿಂದ ಹಣಕಾಸು, ಮದುವೆ ಆಗದವರಿಗೆ, ವಿದ್ಯಾರ್ಥಿಗಳಿಗೆ, ಹೊಸ ಕೆಲಸ ಹುಡುಕುವವರಿಗೆ ಇದು ಉತ್ತಮ ಸಮಯವಾಗಿದೆ.

ಗ್ರಹಗಳ ಸ್ಥಾನಗಳ ಆಧಾರದ ಮೇಲೆ ಕೆಲವು ಸವಾಲುಗಳೂ ಇವೆ. ರಾಹುವಿನಿಂದ ಆರೋಗ್ಯ ಸಮಸ್ಯೆಗಳು ಎದುರಾಗಬಹುದು, ಇದಕ್ಕೆ ಸುಬ್ರಹ್ಮಣ್ಯೇಶ್ವರ ಮತ್ತು ಲಕ್ಷ್ಮೀನರಸಿಂಹನ ಆರಾಧನೆ ಸೂಚಿಸಲಾಗಿದೆ. ಕೇತುವಿನಿಂದ ಮೃತ್ಯುಭಯ ಇರಬಹುದು, ಗಣಪತಿಯ ಆರಾಧನೆ ಮಾಡುವುದು ಉತ್ತಮ. ಶನಿ ಸ್ತೋತ್ರ ಪಠಿಸುವುದು, ಕಪ್ಪು ಬಟ್ಟೆಯಲ್ಲಿ ಉಪ್ಪು, ಬೆಲ್ಲ, ಒಣಮೆಣಸಿನಕಾಯಿ ಕಟ್ಟಿ ಮೂರು ಸುತ್ತು ತಿರುಗಿಸಿ ನದಿ ಅಥವಾ ನೀರಿನಲ್ಲಿ ಬಿಡುವುದರಿಂದ ದೃಷ್ಟಿ ದೋಷಗಳು ನಿವಾರಣೆಯಾಗಿ ಉತ್ತಮ ಫಲ ಸಿಗಲಿದೆ.

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

Video: ಲಿಫ್ಟ್​ನಲ್ಲಿ ಕ್ಲೋಸ್ ಬಟನ್ ಒತ್ತಿ, ಏನೋ ಮರೆತೆ ಎಂದು ಆಚೆ ಹೋದ ತಾಯಿ, ಲಿಫ್ಟ್​ ಒಳಗೆ ಸಿಲುಕಿದ ಬಾಲಕಿ

ತಾಯಿ ಮಗಳಿಬ್ಬರು ಲಿಫ್ಟ್​ ಒಳಗೆ ಪ್ರವೇಶಿಸಿದ್ದಾರೆ, ಕ್ಲೋಸ್ ಬಟನ್ ಒತ್ತಿದ್ದಾರೆ, ಆ ಸಮಯಕ್ಕೆ ಸರಿಯಾಗಿ ಮಹಿಳೆ ಏನೋ ಮರೆತು ಹೋಗಿದ್ದೀನೆಂದು  ಲಿಪ್ಟ್​​ನಿಂದ ಆಚೆ ಹೋಗಿದ್ದಾಳೆ. ಆ ಬಾಲಕಿ ಲಿಫ್ಟ್​ ಒಳಗೆ ಇರುವ ಸಮಯದಲ್ಲಿ ಬಾಗಿಲು ಮುಚ್ಚಿದೆ. ಆಗ ಬಾಲಕಿ ಗಾಬರಿಗೊಂಡು ಅಳುವುದರ ಜತೆಗೆ ಲಿಫ್ಟ್​ ಬಟನ್ ಪ್ರೆಸ್ ಮಾಡುತ್ತಿತ್ತು. ಒಮ್ಮೆ ಲಿಫ್ಟ್​ ಬಾಗಿಲು ತೆರೆಯಿತು ಆದರೆ ಅದು ತನ್ನ ಫ್ಲೋರ್ ಅಲ್ಲ ಎಂಬ ಅರಿವು ಮಗುವಿಗಿದ್ದ ಕಾರಣ ಅದು ಹೊರಗೆ ಹೋಗಲಿಲ್ಲ, ಅಂತಿಮವಾಗಿ ತಾಯಿ ಇದ್ದ ಫ್ಲೋರ್​​ಗೆ ಲಿಫ್ಟ್​ ಬಂದು ಬಾಗಿಲು ತೆರೆದಾಗ ಆ ಬಾಲಕಿಗೆ ಆದ ಖುಷಿ ಅಷ್ಟಿಷ್ಟಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಧನು ರಾಶಿಯವರಿಗೆ ಹೇಗಿರಲಿದೆ?

ಧನು ರಾಶಿಯವರಿಗೆ 2026ರ ಯುಗಾದಿ ವರ್ಷವು ಉದ್ಯೋಗ ಮತ್ತು ವ್ಯಾಪಾರದಲ್ಲಿ ಮಿಶ್ರಫಲಗಳನ್ನು ನೀಡಲಿದೆ. ನಾಲ್ಕನೇ ಶನಿಯ ಪ್ರಭಾವದಿಂದ ಕುಟುಂಬದಲ್ಲಿ ಮಿಶ್ರಫಲಗಳಿದ್ದು, ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲು ನೋವು ಮತ್ತು ಇತರ ದೈಹಿಕ ತೊಂದರೆಗಳು ಎದುರಾಗುವ ಸಾಧ್ಯತೆಯಿದೆ. ಬುಧನ ಪ್ರಭಾವದಿಂದ ಬುದ್ಧಿ ಕ್ಲೇಶ, ರಾಹುವಿನಿಂದ ಹಣಕಾಸಿನ ವ್ಯವಸ್ಥೆ, ರವಿಯಿಂದ ಶತ್ರು ಭಯ, ಕುಜನಿಂದ ವಿರೋಧ, ಹಾಗೂ ಶನಿಯಿಂದ ಭಯ ಮತ್ತು ಕಾರ್ಯನಷ್ಟ ಉಂಟಾಗಬಹುದು. ಆದಾಗ್ಯೂ, ಐದರಲ್ಲಿರುವ ಶುಕ್ರ ದ್ರವ್ಯ ಲಾಭ ತರಲಿದ್ದು, ಹಣಕಾಸಿನ ವ್ಯವಹಾರಗಳು ಉತ್ತಮವಾಗಿ ನಡೆಯುತ್ತವೆ. ಕೇತುವಿನಿಂದ ಕಲಹ ಸಾಧ್ಯತೆಯಿದ್ದು, ಗಣಪತಿ ಆರಾಧನೆ ಅಗತ್ಯ. ರೋಗ ವೃದ್ಧಿಗೆ ಕಾರಣವಾಗುವ ಎಂಟನೇ ಚಂದ್ರನ ಪ್ರಭಾವವೂ ಇರುತ್ತದೆ. ಆಂಜನೇಯ ಸ್ವಾಮಿ ಪೂಜೆ, ಗುರು ಮಂತ್ರ ಮತ್ತು ಶನಿ ದೋಷ ನಿವಾರಣೆಗೆ ಎಳ್ಳು ದಾನದಂತಹ ಪರಿಹಾರಗಳನ್ನು ಅನುಸರಿಸಲು ಜ್ಯೋತಿಷಿ ಕೆ. ವೆಂಕಟೇಶ್ ಶರ್ಮಾ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಕುಡಿದ ಅಮಲಿನಲ್ಲಿ ಬಿಎಂಟಿಸಿ ಬಸ್ ಚಾಲನೆ: ಸರಣಿ ಅಪಘಾತಗಳಾಗುತ್ತಿದ್ದರೂ ಚಾಲಕರಿಗೆ ಬುದ್ಧಿ ಬರುತ್ತಿಲ್ಲವೇ?

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಬಿಎಂಟಿಸಿ ಚಾಲಕರ ಅಟ್ಟಹಾಸ ಮುಂದುವರಿದಿದೆ. ನಿನ್ನೆ ರಾತ್ರಿ ಸುಮಾರು 7:30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಳಿ ಮದ್ಯದ ಅಮಲಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನೊಬ್ಬ ಮಹಿಳಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡಿದ್ದಾನೆ. KA 57 F 3660 ನೋಂದಣಿ ಸಂಖ್ಯೆಯ ಬಿಎಂಟಿಸಿ ಬಸ್ ಚಾಲಕ ಪೂರ್ಣ ಪ್ರಮಾಣದಲ್ಲಿ ಮದ್ಯ ಸೇವಿಸಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದುದನ್ನು ಕಂಡು ಪ್ರಯಾಣಿಕರು ಭೀತಿಗೊಳಗಾಗಿದ್ದರು. ಚಾಲಕನ ವರ್ತನೆಯಿಂದ ಗಾಬರಿಗೊಂಡ ಮಹಿಳೆಯೊಬ್ಬರು ಬಸ್ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. ಈ ವೇಳೆ ಬಸ್ ನಿಲ್ಲಿಸದ ಚಾಲಕ, ಮಹಿಳೆಯ ಜೊತೆ ಉದ್ಧಟತನದಿಂದ ವಾಗ್ವಾದಕ್ಕಿಳಿದಿದ್ದಾನೆ. ಚಾಲಕನ ಅಸಭ್ಯ ವರ್ತನೆ ಮತ್ತು ಆತ ಮದ್ಯ ಸೇವಿಸಿರುವುದನ್ನು ಖಚಿತಪಡಿಸಿಕೊಳ್ಳಲು ಮಹಿಳೆ ತನ್ನ ಮೊಬೈಲ್‌ನಲ್ಲಿ ವಿಡಿಯೋ ಸೆರೆಹಿಡಿದಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ವರದಿ: ನಟರಾಜ್ ಟಿವಿ9 ಕನ್ನಡ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಮಳೆಯ ನಡುವೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಮಿನಿ ವಾಟರ್ ಫಾಲ್ಸ್’? ಚರ್ಚೆಗೆ ಗ್ರಾಸವಾದ ವೈರಲ್ ವಿಡಿಯೋ

ಬೆಂಗಳೂರು, ಮಾರ್ಚ್ 19: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ ಹಲವೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಆವರಣದಲ್ಲಿಯೂ ಭಾರಿ ಮಳೆಯಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಕೆಲವು ವಿಮಾನಗಳನ್ನು ಬೇರೆಡೆಗೆ ಕಳುಹಿಸಲಾಗಿತ್ತು. ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್​​ನಲ್ಲಿ ಮೇಲ್ಛಾವಣಿಯಿಂದ ನೀರು ಸೋರಿದ ಹಾಗೂ ಪೈಪ್ ಒಡೆದು ನೀರು ಚಿಮ್ಮಿದ ವಿಡಿಯೋವೊಂದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಕರ್ನಾಟಕ ಪೋರ್ಟ್​​ಫೋಲಿಯೋ ಎಂಬ ಎಕ್ಸ್​ ಹ್ಯಾಂಡಲ್​​ನಲ್ಲಿ ಹಂಚಲಾಗಿರುವ ವಿಡಿಯೋದಲ್ಲಿ, ಏರ್‌ಪೋರ್ಟ್‌ ಟರ್ಮಿನಲ್‌ನ ಮೇಲ್ಛಾವಣಿಯಿಂದ ನೀರು ಸುರಿಯುತ್ತಿರುವುದು ಕಾಣುತ್ತದೆ. ಹೊರಭಾಗದಲ್ಲೂ ಪೈಪ್‌ಗಳಿಂದ ನೀರು ಹೊರಬಂದು ಸುತ್ತಮುತ್ತ ಪ್ರದೇಶದಲ್ಲಿ ನೀರು ತುಂಬಿರುವ ದೃಶ್ಯಗಳು ಕಾಣಿಸಿಕೊಂಡಿವೆ. ಈ ಕಾರಣದಿಂದ ಪ್ರಯಾಣಿಕರಿಗೆ ಅಸೌಕರ್ಯ ಉಂಟಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಕರ್ನಾಟಕ ಪೋರ್ಟ್​​ಫೋಲಿಯೋ ಎಕ್ಸ್ ವಿಡಿಯೋ

‘ಮಳೆಯ ಪರಿಣಾಮ ಏರ್‌ಪೋರ್ಟ್‌ನಲ್ಲಿ ಮಿನಿ ಜಲಪಾತದಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ನಿರ್ವಹಣೆ ಎಲ್ಲಿದೆ’ ಎಂದು ಕರ್ನಾಟಕ ಪೋರ್ಟ್​​ಫೋಲಿಯೋ ಎಕ್ಸ್ ತಾಣದಲ್ಲಿ ಪ್ರಶ್ನಿಸಲಾಗಿದೆ.

ಮೂಲಗಳ ಪ್ರಕಾರ, ಟರ್ಮಿನಲ್ 1 ರ ಹೊರಭಾಗದಲ್ಲಿ ಛಾವಣಿ ಸೋರಿಕೆ, ಪೈಪ್ ಒಡೆದು ನೀರು ಚಿಮ್ಮಿದೆ ಎನ್ನಲಾಗಿದೆ. ಆದರೆ, ವೈರಲ್ ಆಗಿರುವ ಈ ವಿಡಿಯೋ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳು ಈವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಬೆಂಗಳೂರು ವಿಮಾನ ನಿಲ್ದಾಣವು ಇಂತಹ ದೃಶ್ಯಗಳಿಗೆ ಸಾಕ್ಷಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ವಿಮಾನ ನಿಲ್ದಾಣದ ಛಾವಣಿ ಸೋರುತ್ತಿರುವ ಮತ್ತು ನೀರು ಟರ್ಮಿನಲ್​​ನಲ್ಲಿ ನೀರು ಸಂಗ್ರಹವಾಗುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು. 2024 ರ ಮೇ ತಿಂಗಳಲ್ಲಿಯೂ ಸಹ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ ಛಾವಣಿಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು. ಇದರಿಂದಾಗಿ ಮಳೆ ನೀರು ಸೋರಿಕೆಯಾಗಿತ್ತು. ಇದೀಗ ಮತ್ತೆ ಅಂಥದ್ದೇ ವಿಡಿಯೋ ವೈರಲ್ ಆಗಿರುವುದು ಮಹಾನಗರದ ಮೂಲಸೌಕರ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ: ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್

ಒಟ್ಟಿನಲ್ಲಿ, ಮಳೆ ಬಂದಾಗಲೆಲ್ಲ ಏರ್‌ಪೋರ್ಟ್ ಮೂಲಸೌಕರ್ಯ ಮತ್ತು ನಿರ್ವಹಣೆ ಕುರಿತು ಪ್ರಶ್ನೆಗಳು ಎದ್ದುಕೊಳ್ಳುತ್ತಿರುವುದು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ

ಬಾಗಲಕೋಟೆ, ಮಾರ್ಚ್​​ 19: ಉಪ ಚುನಾವಣೆಯ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮಾರ್ಚ್ 23ರ ಸೋಮವಾರದಂದು ತಮ್ಮ ನಾಮಪತ್ರವನ್ನು ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ, ಯಡಿಯೂರಪ್ಪ ಸೇರಿ ರಾಜ್ಯಾದ್ಯ ಪ್ರಮುಖ ನಾಯಕರು ಮತ್ತು ಮಾಜಿ ಮಂತ್ರಿಗಳು ಭಾಗವಹಿಸಲಿದ್ದಾರೆ.  ಪ್ರಧಾನಮಂತ್ರಿಗಳ ಸೂಚನೆಯಂತೆ ಚುನಾವಣೆಯನ್ನು ಹಬ್ಬದಂತೆ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಬರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜೊತೆಗೆ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ ಯತ್ನಾಳ್​​ ಕೂಡ ವೈಯಕ್ತಿಕ ಸಂಬಂಧಗಳ ಆಧಾರದ ಮೇಲೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿರೋದು ಅಚ್ಚರಿ ಮೂಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version