ಸಿಂಹ ರಾಶಿಯವರಿಗೆ ಈ ವರ್ಷ ರಾಜಯೋಗ! ಪ್ರತಿಷ್ಠೆ, ಹಣ ಎಲ್ಲವೂ ನಿಮ್ಮ ಕೈಯಲ್ಲಿ

ಸಿಂಹ ರಾಶಿಯವರಿಗೆ ಈ ವರ್ಷ ರಾಜಯೋಗ! ಪ್ರತಿಷ್ಠೆ, ಹಣ ಎಲ್ಲವೂ ನಿಮ್ಮ ಕೈಯಲ್ಲಿ

ಬೆಂಗಳೂರು. ಮಾ.19: ಕೆ. ವೆಂಕಟೇಶ್ ಶರ್ಮಾ ಅವರು ಯುಗಾದಿ ಭವಿಷ್ಯ 2026ರಂದು ಸಿಂಹ ರಾಶಿಯ ಫಲಗಳ ಬಗ್ಗೆ ವಿವರಿಸಿದ್ದಾರೆ. ಈ ವರ್ಷ ಸಿಂಹ ರಾಶಿಯವರಿಗೆ ಗೌರವ ಮತ್ತು ಪ್ರತಿಷ್ಠೆ ಹೆಚ್ಚಲಿದೆ. ಉದ್ಯೋಗ ಹಾಗೂ ವ್ಯಾಪಾರದಲ್ಲಿ ಉನ್ನತ ಸ್ಥಿತಿ ದೊರೆಯುತ್ತದೆ. ಹಣಕಾಸು ಹೂಡಿಕೆಯಲ್ಲಿ ಲಾಭ ನಿರೀಕ್ಷಿಸಬಹುದು. ಕುಟುಂಬ ಮತ್ತು ಮಕ್ಕಳಿಂದ ಸಂತೋಷವಿರುತ್ತದೆ. ಆರೋಗ್ಯದ ವಿಷಯದಲ್ಲಿ, ಸಿಂಹ ರಾಶಿಯವರು ತಮ್ಮ ಹೃದಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಜಿಡ್ಡಿನ ಪದಾರ್ಥಗಳನ್ನು ತ್ಯಜಿಸಿ, ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಉತ್ತಮ. ಗ್ರಹಣದ ಪ್ರಭಾವದಿಂದ ಎಚ್ಚರಿಕೆ ಅಗತ್ಯ. ಕೆಲವು ಗ್ರಹಗಳ ಪ್ರಭಾವಗಳು ಸವಾಲುಗಳನ್ನು ತರಬಹುದು. ಮೊದಲನೇ ಕೇತು ಬುದ್ಧಿ ಕ್ಲೇಶ, ಎರಡನೇ ಚಂದ್ರ ಧನಹಾನಿ, ಎರಡನೇ ಬುಧ ಶೋಕ ನೀಡಬಹುದು. ಏಳನೇ ರಾಹು ಭಯ ಮತ್ತು ಕಲಹಕ್ಕೆ ಕಾರಣನಾಗಬಹುದು. ಇವುಗಳಿಗೆ ಪರಿಹಾರವಾಗಿ ಗಣಪತಿ ಮತ್ತು ದಶ ಲಕ್ಷ್ಮೀನರಸಿಂಹ ಸ್ವಾಮಿಯನ್ನು ಆರಾಧಿಸುವುದು ಸೂಕ್ತ. ಎಂಟನೇ ರವಿ ಶರೀರ ಪೀಡೆ, ಎಂಟನೇ ಕುಜ ಗಾಡಿಗಳಿಂದ ಎಚ್ಚರಿಕೆ, ಎಂಟನೇ ಶನಿ ಭಯ ನೀಡಬಹುದು. ಒಂಬತ್ತನೇ ಶುಕ್ರ ದ್ರವ್ಯಲಾಭ, ಹನ್ನೊಂದನೇ ಗುರು ಹಣದ ಹರಿವನ್ನು ಹೆಚ್ಚಿಸಲಿದ್ದಾರೆ. ಒಟ್ಟಾರೆ, ಈ ಯುಗಾದಿ ವರ್ಷವು ಸಿಂಹ ರಾಶಿಯವರಿಗೆ ಅದೃಷ್ಟದ ವರ್ಷವಾಗಿದ್ದು, ಉತ್ತಮ ಫಲಗಳನ್ನು ನೀಡಲಿದೆ ಎಂದು ಶರ್ಮಾ ಅವರು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಬೃಂದಾವಿಹಾರಿ’ ಆದ ಗೋಲ್ಡನ್ ಸ್ಟಾರ್ ಗಣೇಶ್; ಹೊಸ ಸಿನಿಮಾ ಟೈಟಲ್ ಅನೌನ್ಸ್

Source link

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವುದು ಅಗತ್ಯ

ಯುಗಾದಿ 2026ರ ವೃಶ್ಚಿಕ ರಾಶಿ ಭವಿಷ್ಯದ ಪ್ರಕಾರ, ಈ ರಾಶಿಯವರು ದೃಢ ಸಂಕಲ್ಪದಿಂದ ಮುನ್ನಡೆಯಬೇಕಾಗುತ್ತದೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಕೆ. ವೆಂಕಟೇಶ್ ಶರ್ಮಾ ಅವರು ಭವಿಷ್ಯ ನುಡಿದಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಹಠದಿಂದ ಯಶಸ್ಸು ಸಾಧಿಸುವ ಅವಕಾಶಗಳಿವೆ. ಆರ್ಥಿಕ ವಿಷಯದಲ್ಲಿ ಗುಪ್ತ ಆದಾಯದ ಮೂಲಗಳು ತೆರೆದುಕೊಳ್ಳಬಹುದು. ಕುಟುಂಬದಲ್ಲಿನ ಹಳೆಯ ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ ಇದೆ. ಆರೋಗ್ಯದ ವಿಚಾರದಲ್ಲಿ ವಿಶೇಷ ಜಾಗ್ರತೆ ವಹಿಸಬೇಕು, ವಿಶೇಷವಾಗಿ ರಕ್ತದೊತ್ತಡದ ಬಗ್ಗೆ ಗಮನ ಹರಿಸುವುದು ಉತ್ತಮ.

ಗ್ರಹಗತಿಗಳ ಪ್ರಭಾವದಿಂದ ನಾಲ್ಕನೇ ಮನೆಯಲ್ಲಿರುವ ಬುಧ ಜ್ಞಾನ ವೃದ್ಧಿಗೆ ಕಾರಣನಾದರೆ, ರಾಹು ಕೆಲವು ವಿರೋಧಗಳನ್ನು ತರಬಹುದು. ರವಿ ರೋಗ ತಂದರೆ, ಕುಜ ಕಷ್ಟಗಳನ್ನು ನೀಡಬಹುದು. ಶನಿಯು ಉದ್ಯೋಗದಲ್ಲಿ ಭಯ ತರಬಹುದಾದರೂ, ಸೂಕ್ತ ಆರಾಧನೆಗಳಿಂದ ದೋಷ ನಿವಾರಣೆ ಸಾಧ್ಯ. ಇಷ್ಟಾರ್ಥ ಸಿದ್ಧಿಗಾಗಿ ಚಂದ್ರನ ಅನುಕೂಲವೂ ಇದೆ. ರಾಹು ದೋಷ ನಿವಾರಣೆಗೆ ನಿಂಬೆಹಣ್ಣು ಅಥವಾ ಬೆಲ್ಲದ ದೀಪ, ಕುಜನ ಪ್ರಭಾವಕ್ಕೆ ಸುಬ್ರಹ್ಮಣ್ಯ ಅಥವಾ ಲಕ್ಷ್ಮೀನರಸಿಂಹ ಆರಾಧನೆ, ಶನಿ ದೋಷಕ್ಕೆ ಆಂಜನೇಯ ಸ್ವಾಮಿ ದರ್ಶನ ಮತ್ತು ಹನುಮಾನ್ ಚಾಲೀಸಾ ಪಠಣ, ಕೇತು ಬಾಧೆಗೆ ಗಣಪತಿ ಆರಾಧನೆ ಮತ್ತು ಸಂಕಷ್ಟ ಚತುರ್ಥಿ ವ್ರತಗಳನ್ನು ಸೂಚಿಸಲಾಗಿದೆ. ವೃಶ್ಚಿಕ ರಾಶಿಯವರ ಶುಭ ದಿನಾಂಕಗಳು 1, 10, 27 ಆಗಿದ್ದು, ಈ ದಿನಗಳಲ್ಲಿ ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

 

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

4 ಕಿ.ಮೀಗೆ 1 ರೂ ವೆಚ್ಚ, 10 ನಿಮಿಷಗಳಲ್ಲಿ ಡೆಲಿವರಿ: ರೋಗಿಗಳ ಜೀವ ಉಳಿಸುತ್ತಿವೆ ಈ ಡ್ರೋನ್​​ ಸೇವೆ

Source link

Gold Rates: ಚಿನ್ನದ ಬೆಲೆ ಗುರುವಾರವೂ ಕುಸಿತ; ಈ ತಿಂಗಳು 10 ಗ್ರಾಮ್ ಬೆಲೆ 17,000 ರೂ ಇಳಿಕೆ

ಬೆಂಗಳೂರು, ಮಾರ್ಚ್ 19: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 265 ರೂಗಳಷ್ಟು ಇಳಿಕೆ ಆಗಿದೆ. ಕಳೆದ 10 ದಿನದಲ್ಲಿ ಅದರ ಬೆಲೆ ಗ್ರಾಮ್​ಗೆ 700 ರೂಗೂ ಅಧಿಕ ಮೊತ್ತದಷ್ಟು ಕಡಿಮೆಗೊಂಡಿದೆ. ಮಾರ್ಚ್ ತಿಂಗಳ ಈ 19 ದಿನದಲ್ಲಿ ಇದರ ಬೆಲೆಯಲ್ಲಿ ಬರೋಬ್ಬರಿ 1,700 ರೂಗಳಷ್ಟು ತಗ್ಗಿದೆ. ಅಂದರೆ 10 ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ 17,000 ರೂಗಳಷ್ಟು ತಗ್ಗಿರುವುದು ಗಮನಾರ್ಹ. ಬೆಳ್ಳಿ ಬೆಲೆಯೂ ಸತತವಾಗಿ ಇಳಿದಿದೆ. ಈ ಮಾರ್ಚ್ ತಿಂಗಳಲ್ಲಿ ಅದರ ಬೆಲೆ 315 ರೂನಿಂದ 260 ರೂಗೆ ಇಳಿದಿರುವುದು ವಿಶೇ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,464 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,175 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,598 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,464 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,175 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,175 ರೂ
  • ಚೆನ್ನೈ: 14,300 ರೂ
  • ಮುಂಬೈ: 14,175 ರೂ
  • ದೆಹಲಿ: 14,190 ರೂ
  • ಕೋಲ್ಕತಾ: 14,175 ರೂ
  • ಕೇರಳ: 14,175 ರೂ
  • ಅಹ್ಮದಾಬಾದ್: 14,180 ರೂ
  • ಜೈಪುರ್: 14,190 ರೂ
  • ಲಕ್ನೋ: 14,190 ರೂ
  • ಭುವನೇಶ್ವರ್: 14,175 ರೂ

ಇದನ್ನೂ ಓದಿ: ಏಪ್ರಿಲ್ 1ರಿಂದ ಹೊಸ ಪ್ಯಾನ್ ಅಪ್ಲಿಕೇಶನ್ ನಿಯಮಗಳು ಜಾರಿಗೆ; ಅರ್ಜಿ ಪ್ರಕ್ರಿಯೆ ಸುಲಭವಿರಲ್ಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 585 ರಿಂಗಿಟ್ (13,845 ರುಪಾಯಿ)
  • ದುಬೈ: 544.50 ಡಿರಾಮ್ (13,811 ರುಪಾಯಿ)
  • ಅಮೆರಿಕ: 152 ಡಾಲರ್ (14,168 ರುಪಾಯಿ)
  • ಸಿಂಗಾಪುರ: 193.30 ಸಿಂಗಾಪುರ್ ಡಾಲರ್ (14,037 ರುಪಾಯಿ)
  • ಕತಾರ್: 541 ಕತಾರಿ ರಿಯಾಲ್ (13,833 ರೂ)
  • ಸೌದಿ ಅರೇಬಿಯಾ: 553 ಸೌದಿ ರಿಯಾಲ್ (13,730 ರುಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (14,055 ರುಪಾಯಿ)
  • ಕುವೇತ್: 44.74 ಕುವೇತಿ ದಿನಾರ್ (13,600 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕನ್ಯಾ ರಾಶಿಯವರಿಗೆ ‘ಲಕ್ಷ್ಮೀ’ ಯೋಗ ಇದ್ರೂ ಆಸ್ತಿ ಕಳೆದುಕೊಳ್ಳವ ಸಾಧ್ಯತೆ!

ಬೆಂಗಳೂರು, ಮಾ.19: ಯುಗಾದಿ ಭವಿಷ್ಯ 2026 ರ ಪ್ರಕಾರ, ಕನ್ಯಾ ರಾಶಿಯವರಿಗೆ ಈ ವರ್ಷ ಶ್ರಮದಿಂದ ಸಾಧನೆ ಲಭಿಸಲಿದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಹೊಸ ಕಲಿಕೆ ಸಿಗಲಿದ್ದು, ಹಣಕಾಸು ಹಾಗೂ ಲೆಕ್ಕಪತ್ರಗಳ ವಿಷಯದಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಮನೆಯ ದಾಖಲೆಗಳನ್ನು ಸುರಕ್ಷಿತವಾಗಿರಿಸಿಕೊಳ್ಳುವುದು ಮುಖ್ಯ. ಕುಟುಂಬದಲ್ಲಿ ಸಹೋದರರ ನೆರವು ದೊರೆಯುತ್ತದೆ. ಆರೋಗ್ಯದ ದೃಷ್ಟಿಯಿಂದ ಚರ್ಮದ ಸಮಸ್ಯೆಗಳ ಬಗ್ಗೆ ಜಾಗರೂಕರಾಗಿರುವುದು ಅವಶ್ಯಕ. ಉಷ್ಣ ಪದಾರ್ಥಗಳ ಸೇವನೆಯಿಂದ ದೂರವಿರುವುದು ಒಳಿತು. ಗ್ರಹಗತಿಗಳ ಬಗ್ಗೆ ನೋಡುವುದಾದರೆ, ಚಂದ್ರನ ಸ್ಥಾನ ದೇಹ ಸೌಖ್ಯವನ್ನು ನೀಡಿದರೆ, ಬುಧ ಮತ್ತು ರಾಹುವಿನ ಸ್ಥಾನಗಳು ದ್ರವ್ಯಲಾಭ ಮತ್ತು ಲಕ್ಷ್ಮಿಕರ ಯೋಗವನ್ನು ತರುತ್ತವೆ. ಆದಾಗ್ಯೂ, ರವಿ, ಕುಜ, ಶನಿ, ಗುರು ಮತ್ತು ಕೇತುಗಳ ಸ್ಥಾನಗಳು ಸ್ಥಾನಚಲನೆ, ಭಯ, ಕಲಹ, ಸ್ಥಾನನಾಶ ಮತ್ತು ಶತ್ರುಭಯವನ್ನು ಸೂಚಿಸುತ್ತವೆ. ಈ ಪ್ರತಿಕೂಲ ಪ್ರಭಾವಗಳನ್ನು ಕಡಿಮೆ ಮಾಡಲು ದೇವರ ಆರಾಧನೆ ಮತ್ತು ಧಾನ್ಯ ದಾನಗಳಂತಹ ಪರಿಹಾರಗಳನ್ನು ಕೈಗೊಳ್ಳುವುದು ಸೂಕ್ತ. ಇದರಿಂದ ಒಂಬತ್ತು ಗ್ರಹಗಳ ಶಾಂತಿ ನೆಲೆಸಲಿದ್ದು, ಉತ್ತಮ ಫಲಿತಾಂಶಗಳು ಸಿಗುತ್ತವೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಯವರ ಸಮಗ್ರ ಭವಿಷ್ಯ ಮತ್ತು ಪರಿಹಾರಗಳು

2026ರ ಯುಗಾದಿ ತುಲಾ ರಾಶಿಯವರಿಗೆ ಸಮತೋಲನದ ವರ್ಷವಾಗಿರಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತುತಜ್ಞ ವೇದಬ್ರಹ್ಮ ಕೆ. ವೆಂಕಟೇಶ್ ಶರ್ಮಾ ಅವರು ಭವಿಷ್ಯ ನುಡಿದಿದ್ದಾರೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪಾಲುದಾರಿಕೆಯಿಂದ ಉತ್ತಮ ಫಲಿತಾಂಶಗಳು ಸಿಗುವ ಸಾಧ್ಯತೆಯಿದೆ. ಆದಾಯ ಮತ್ತು ಖರ್ಚು ಸಮನಾಗಿರುವುದರಿಂದ ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ. ಕುಟುಂಬ ಮತ್ತು ದಾಂಪತ್ಯ ಜೀವನದಲ್ಲಿ ಉತ್ತಮ ಹೊಂದಾಣಿಕೆ ಹಾಗೂ ಅನ್ಯೋನ್ಯತೆ ಹೆಚ್ಚುತ್ತದೆ. ಕಳೆದ ವರ್ಷದ ಕಲಹಗಳು ದೂರವಾಗಿ ಸಂಬಂಧಗಳಲ್ಲಿ ಸಾಮರಸ್ಯ ಮೂಡಲಿದೆ.

ಆರೋಗ್ಯದ ವಿಷಯದಲ್ಲಿ ಬೆನ್ನುನೋವು ಕುರಿತು ಎಚ್ಚರ ವಹಿಸುವುದು ಅಗತ್ಯ. ಐದನೇ ರಾಹುವಿನ ಪ್ರಭಾವದಿಂದ ಕಷ್ಟಪ್ರಾಪ್ತಿಯಾಗುವ ಸಾಧ್ಯತೆಗಳಿದ್ದು, ಇದನ್ನು ನಿವಾರಿಸಲು ಸ್ವಾತಿ ನಕ್ಷತ್ರದ ದಿನ ಬೆಲ್ಲದ ಅಥವಾ ನಿಂಬೆಹಣ್ಣಿನ ದೀಪ ಹಚ್ಚುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಆರನೇ ಕುಜ, ಬುಧ ಮತ್ತು ಶನಿ ಗ್ರಹಗಳು ಲಕ್ಷ್ಮೀಕರರಾಗಿರುವುದರಿಂದ ಧನಲಾಭವಾಗುವ ಸೂಚನೆಗಳಿವೆ. ದೋಷ ಪರಿಹಾರಕ್ಕಾಗಿ ಹಿಮಕುಂದಮೃಣಾಲಾಭಂ ಶ್ಲೋಕ ಪಠಣ ಹಾಗೂ ಶುಕ್ರಾಯ ನಮಃ ಜಪದಿಂದ ಶುಭ ಫಲಗಳನ್ನು ಪಡೆಯಬಹುದು ಎಂದು ಗುರೂಜಿ ಸಲಹೆ ನೀಡಿದ್ದಾರೆ.

 

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ ಎಂಬುವರು ಪ್ರಯಾಣಿಸುತ್ತಿದ್ದರು.

ಚುನಾವಣೆ ಹಿನ್ನಲೆಯಲ್ಲಿ ನಿಯೋಜಿಸಲಾದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ ಸಂಜೆ ಸುಮಾರು 7 ಗಂಟೆಯ ಸುಮಾರಿಗೆ ವಾಹನ ತಪಾಸಣೆ ನಡೆಸಿದಾಗ, ಯಾವುದೇ ಸರಿಯಾದ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ನಗದು ಪತ್ತೆಯಾಯಿತು. ತಕ್ಷಣವೇ ಹಣವನ್ನು ವಶಕ್ಕೆ ಪಡೆದು ಮುಂದಿನ ಪರಿಶೀಲನೆಗೆ ಒಪ್ಪಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪ ಚುನಾವಣೆ: ಕಾಂಗ್ರೆಸ್​​ನಲ್ಲಿ ಬಗೆಹರಿಯದ ಟಿಕೆಟ್​​ ಕಗ್ಗಂಟು; ಮುಂದುವರಿದ ಗೊಂದಲ

ಬೆಂಗಳೂರು, ಮಾರ್ಚ್​​ 19: ದಾವಣೆಗೆರೆ ದಕ್ಷಿನ ಮತ್ತು ಬಾಗಲಕೋಟೆ ಉಪ ಚುನಾವಣೆಗಳಿಗೆ ವಿಪಕ್ಷ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಆದರೆ ಆಡಳಿತಾರೂಢ ಕಾಂಗ್ರೆಸ್​​ನಲ್ಲಿ ಈ ಬಗ್ಗೆ ಗೊಂದಲ ಮುಂದುವರಿದಿದ್ದು ಅಭ್ಯರ್ಥಿಗಳ ಆಯ್ಕೆಯೇ ಕಗ್ಗಂಟಾಗಿ ಮಾರ್ಪಟ್ಟಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬಸ್ಥರಿಗೇ ಟಿಕೆಟ್​​ ಪಕ್ಕಾ ಎನ್ನಲಾಗಿದ್ದರೂ ನಾಲ್ವರು ಮಕ್ಕಳ ಪೈಕಿ ಯಾರಿಗೆ ಪಕ್ಷ ಮಣೆ ಹಾಕಲಿದೆ ಎಂಬ ಪ್ರಶ್ನೆ ಸದ್ಯ ಉದ್ಭವಿಸಿದೆ. ಮತ್ತೊಂದೆಡೆ ದಾವಣಗೆರೆ ದಕ್ಷಿಣ ಕ್ಕ್ಷೆತ್ರದಲ್ಲಿ ಟಿಕೆಟ್​​ಗಾಗಿ ಕೈಮನೆಯ ಒಳಗೆಯೇ ಭಾರಿ ಗುದ್ದಾಟ ನಡೆಯುತ್ತಿರುವ ಕಾರಣ ಅಭ್ಯರ್ಥಿ ಯಾರಾಗಬಹುದೆಂಬ ಬಗ್ಗೆ ಸ್ವಪಕ್ಷ ನಾಯಕರಿಗೇ ಸ್ಪಷ್ಟತೆ ಸಿಕ್ಕಿಲ್ಲ.

ಮೇಟಿ ಮಕ್ಕಳ ನಡುವೆಯೇ ವಾರ್​​

ಬಾಗಲಕೋಟೆ ಉಪಚುನಾವಣೆ ಟಿಕೆಟ್​​ ವಿಚಾರವಾಗಿ ಹೆಚ್​​.ವೈ. ಮೇಟಿ ಅವರ ಮಕ್ಕಳ ನಡುವೆಯೇ ದಂಗಲ್​​ ಶುರುವಾಗಿದೆ. ಈ ಕುಟುಂಬದರೇ ಪಕ್ಕಾ ಕಾಂಗ್ರೆಸ್​​ ಕ್ಯಾಂಡಿಡೇಟ್​​ ಎನ್ನಲಾಗಿದ್ದರೂ ಮೇಟಿ ಮಕ್ಕಳ ಪೈಕಿ ಯಾರನ್ನು ಪಕ್ಷ ಆಯ್ಕೆ ಮಾಡಲಿದೆ ಎಂಬ ಗೊಂದಲ ಉದ್ಭವಿಸಿದೆ. ಯಾರಿಗೆ ಟಿಕೆಟ್​​ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮೇಟಿ ಮಕ್ಕಳಿಗೆ ಸಿಎಂ ಸಲಹೆ, ಸೂಚನೆಯನ್ನು ಅದಾಗಲೇ ನೀಡಿದ್ದಾರೆ. ಹೀಗಿದ್ದರೂ ಟಿಕೆಟ್​​ ಕೊಡದಿದ್ದರೆ ಬಂಡಾಯ ಸ್ಪರ್ಧೆ ಎಂದು ಮೇಟಿಯವರ ಕಿರಿಯ ಪುತ್ರಿ ಮಹಾದೇವಿ ಮೇಟಿ ಹೇಳುತ್ತಿರೋದು ತಲೆನೋವಾಗಿ ಮಾರ್ಪಟ್ಟಿದೆ. ಮಲ್ಲಿಕಾರ್ಜುನ ಮೇಟಿ ಅಥವಾ ಉಮೇಶ್ ಮೇಟಿ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್​​ ನೀಡಲು ಕೈ ನಾಯಕರು ಚರ್ಚೆ ನಡೆಸಿದ್ದು, ಆ ಪೈಕಿ ಉಮೇಶ್ ಮೇಟಿಗೆ ಬಹುತೇಕ ಟಿಕೆಟ್​​ ಸಿಗುವ ಸಾಧ್ಯತೆ ಇದೆ. ಒಂದೊಮ್ಮೆ ಹೀಗೇ ಆದಲ್ಲಿ ಮಹಾದೇವಿ ಮೇಟಿ ನಡೆ ಏನು ಎಂಬ ಬಗ್ಗೆಯೂ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ:  ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ, ಯಾರು ಗೊತ್ತಾ?

ದಾವಣೆಗೆರೆ ‘ಕೈ’ ಮನೆಯಲ್ಲಿ ದಂಗಲ್​

ಇತ್ತ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್​​ಗಾಗಿ ದೊಡ್ಡ ಪೈಪೋಟಿಯೇ ನಡೆಯುತ್ತಿದೆ. ಅಲ್ಪಸಂಖ್ಯಾತ ಸಮುದಾಯದವರೇ ಅಭ್ಯರ್ಥಿ ಆಗಬೇಕು ಎಂದು ಮುಸ್ಲಿಂ ನಾಯಕರು ಪಟ್ಟು ಹಿಡಿದ್ದರೆ, ಮತ್ತೊಂದೆಡೆ ತಮ್ಮ ಪುತ್ರ ಸಮರ್ಥ್​​ನನ್ನು ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸಬೇಕೆಂದು ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಹಠ ಹಿಡಿದಿದ್ದಾರೆ. ಕಳೆದ ಮೂರು ದಿನಗಳಿಂದ ವಿಧಾನಸಭಾ ಅಧಿವೇಶನಕ್ಕೂ ಹಾಜರಾಗದ ಮಲ್ಲಿಕಾರ್ಜುನ್​​, ಉಸ್ತುವಾರಿ ಸಮಿತಿ ಸಭೆಗೂ ಗೈರಾಗಿದ್ದಾರೆ. ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ವಿಚಾರದಲ್ಲಿ ಕಾಂಗ್ರೆಸ್​​ ನಾಯಕರ ನಡುವೆಯೇ ಭಿನ್ನಾಭಿಪ್ರಾಯ ವ್ಯಕ್ತವಾಗುತ್ತಿದೆ. ಶಾಮನೂರು ಕುಟುಂಬಸ್ಥರ ಪರ ಕೆಲವು ಸಚಿವರು ಬ್ಯಾಟಿಂಗ್​​ ಮಾಡಿದ್ದರೆ, ಇನ್ನು ಕೆಲವರು ಮುಸ್ಲಿಂ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಆಗ್ರಹಿಸಿದ್ದಾರೆ. ಉಸ್ತುವಾರಿ ಸಮಿತಿ ಸಭೆಯಲ್ಲೂ ಎಂಟು ಮಂದಿಯ ಹೆಸರು ಪ್ರಸ್ತಾಪವಾಗಿದ್ದು, ಆ ಪೈಕಿ ಐವರ ಹೆಸರು ಅಲ್ಪಸಂಖ್ಯಾತ ಸಮುದಾಯದವರದ್ದಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮಿಥುನ ರಾಶಿಯವರಿಗೆ ಹೇಗಿರಲಿದೆ?

2026ರ ಯುಗಾದಿ ಮಿಥುನ ರಾಶಿಯವರಿಗೆ ಹಲವು ಬದಲಾವಣೆಗಳನ್ನು ತರಲಿದೆ ಎಂದು ಜ್ಯೋತಿಷಿ ಕೆ. ವೆಂಕಟೇಶ್ ಶರ್ಮಾ ತಿಳಿಸಿದ್ದಾರೆ. ಈ ವರ್ಷ ಹೊಸ ಅವಕಾಶಗಳು ಮಿಥುನ ರಾಶಿಯವರನ್ನು ಹುಡುಕಿಕೊಂಡು ಬರಲಿದ್ದು, ಉದ್ಯೋಗ ಮತ್ತು ವ್ಯಾಪಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ನಿರೀಕ್ಷಿತವಾಗಿವೆ. ಹಣಕಾಸಿನ ವಿಚಾರದಲ್ಲಿ ಮಿಶ್ರ ಫಲಿತಾಂಶಗಳು ಕಂಡುಬರುತ್ತವೆ. ಕುಟುಂಬದಲ್ಲಿ ಸಹೋದರ, ಸಹೋದರಿಯರಿಂದ ಬೆಂಬಲ ಸಿಗಲಿದೆ.

ಆರೋಗ್ಯದ ವಿಷಯದಲ್ಲಿ ವಿಶೇಷ ಕಾಳಜಿ ವಹಿಸಬೇಕು, ವಿಶೇಷವಾಗಿ ನರ ಸಂಬಂಧಿತ ಸಮಸ್ಯೆಗಳ ಬಗ್ಗೆ ಜಾಗ್ರತೆ ಅಗತ್ಯ. ಗುರು ಗ್ರಹದ ಪ್ರಭಾವದಿಂದ ಮನಸ್ಸಿಗೆ ಕಷ್ಟವಾಗಬಹುದು. ಇದಕ್ಕೆ ದತ್ತಾತ್ರೇಯ ಸ್ವಾಮಿಯ ಪ್ರಾರ್ಥನೆ ಉತ್ತಮ ಪರಿಹಾರ. ಕೇತು ಗ್ರಹವು ಹಣಕಾಸಿನ ಲಾಭವನ್ನು ತಂದರೆ, ಚಂದ್ರನು ರೋಗಭಯವನ್ನು ಉಂಟುಮಾಡಬಹುದು. ಈಶ್ವರನಿಗೆ ಅಭಿಷೇಕ ಮಾಡಿಸುವುದು ಶುಭ. ಬುಧ ಮತ್ತು ರಾಹು ಗ್ರಹಗಳು ಕಾರ್ಯ ನಷ್ಟಕ್ಕೆ ಕಾರಣವಾಗಬಹುದು. ಲಕ್ಷ್ಮಿ ನರಸಿಂಹ ಮತ್ತು ಸುಬ್ರಮಣ್ಯ ಸ್ವಾಮಿಯನ್ನು ಸ್ವಾತಿ ನಕ್ಷತ್ರದಂದು ದರ್ಶನ ಮಾಡುವುದರಿಂದ ರಾಹು ದೋಷ ನಿವಾರಣೆಯಾಗುತ್ತದೆ. ರವಿ ಧನಲಾಭವನ್ನು ತಂದರೆ, ಶನಿ ಮತ್ತು ಕುಜ ದ್ರವ್ಯ ನಷ್ಟಕ್ಕೆ ಕಾರಣರಾಗಬಹುದು. 11ನೇ ಶುಕ್ರನು ಸುಖ ಭೋಜನ ಮತ್ತು ಉತ್ತಮ ಅನುಕೂಲಗಳನ್ನು ತರಲಿದ್ದಾನೆ. ಎಳ್ಳು, ಹೆಸರು ಕಾಳು, ಉದ್ದಿನ ಕಾಳುಗಳನ್ನು ದೇವಸ್ಥಾನಗಳಿಗೆ ದಾನ ಮಾಡುವುದು ಮತ್ತು “ಓಂ ಬುಧಾಯ ನಮಃ” ಮಂತ್ರ ಜಪಿಸುವುದು ಉತ್ತಮ ಪರಿಹಾರಗಳಾಗಿವೆ.

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version