ಏಕೈಕ ವೇಗಿ, ಮೂವರು ಸ್ಪಿನ್ನರ್​: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ – Kannada News | T20 World Cup 2026: India will make spin puzzle against Pakistan

T20 World Cup 2026: ಟಿ20 ವಿಶ್ವಕಪ್​​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಭಾರತ ತಂಡದ ಆಡುವ ಬಳಗದಲ್ಲಿ 2 ಬದಲಾವಣೆಯಾಗುವುದು ಬಹುತೇಕ ಖಚಿತ.

ಈ ಬದಲಾವಣೆಯೊಂದಿಗೆ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅನಾರೋಗ್ಯದ ಕಾರಣ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಅಭಿಷೇಕ್ ಸಂಪೂರ್ಣ ಚೇತರಿಸಿಕೊಂಡಿದ್ದು, ಪಾಕ್ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ದೃಢಪಡಿಸಿದ್ದಾರೆ.

ಹಾಗೆಯೇ ಕುಲ್ದೀಪ್ ಯಾದವ್ ಅವರನ್ನು ಸಹ ಪ್ಲೇಯಿಂಗ್ ಇಲೆವೆನ್​​ನಲ್ಲಿ ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಕಾರಿಯಾಗಿದೆ. ಚೈನಾಮನ್ ಬೌಲರ್ ಆಗಿರುವ ಕುಲ್ದೀಪ್ ಇಂತಹ ಪಿಚ್‌ಗಳಲ್ಲಿ ಹೆಚ್ಚು ಪರಿಣಾಮಕಾರಿ. ಹೀಗಾಗಿ ಅವರು ಸಹ ಪ್ಲೇಯಿಂಗ್ ಇಲೆವೆನ್​​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಪಾಕ್ ವಿರುದ್ಧ ಕುಲ್ದೀಪ್ ದಾಖಲೆ ಹೇಗಿದೆ?

2025ರ ಏಷ್ಯಾ ಕಪ್ ಫೈನಲ್‌ನಲ್ಲಿ ಕುಲ್ದೀಪ್ ಯಾದವ್ ಪಾಕಿಸ್ತಾನ್ ವಿರುದ್ಧ 30 ರನ್ ನೀಡಿ 4 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದರು. ಅಲ್ಲದೆ ಆ ಟೂರ್ನಿಯಲ್ಲಿ ಒಟ್ಟು 17 ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆ ಬರೆದಿದ್ದರು.

ಹಾಗೆಯೇ ಪಾಕಿಸ್ತಾನ್ ವಿರುದ್ಧ ಈವರೆಗೆ 10 ಪಂದ್ಯಗಳನ್ನಾಡಿರುವ ಕುಲ್ದೀಪ್ ಯಾದವ್ 12.56 ಸರಾಸರಿಯಲ್ಲಿ ಒಟ್ಟು 23 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಕೊಲಂಬೊ ಪಿಚ್​​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ಕುಲ್ದೀಪ್ ಯಾದವ್ ಟ್ರಂಪ್ ಕಾರ್ಡ್ ಆಗಿ ಪರಿಣಮಿಸಬಹುದು.

ಏಕೈಕ ವೇಗಿ?

ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸುವುದರಿಂದ ಟೀಮ್ ಇಂಡಿಯಾ ಏಕೈಕ ವೇಗಿಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾ ಪರ ಪ್ರಮುಖ ವೇಗಿಯಾಗಿ ಜಸ್​​ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಹೆಚ್ಚುವರಿ ವೇಗದ ಬೌಲರ್​​​ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಸಾಥ್ ನೀಡಲಿದ್ದಾರೆ. ಅಂದರೆ ಕುಲ್ದೀಪ್ ಯಾದವ್​ಗೆ ಚಾನ್ಸ್ ನೀಡಲು ಅರ್ಷದೀಪ್ ಸಿಂಗ್ ಅವರನ್ನು ಕೈ ಬಿಡಬಹುದು.

ಸ್ಪಿನ್ನಿಂಗ್ ತಂತ್ರ:

ಶ್ರೀಲಂಕಾದ ಈ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಕಾರಿಯಾಗಿರುವುದರಿಂದ, ಭಾರತ ತಂಡವು ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇಲ್ಲಿನ ಪಿಚ್ ಸಾಂಪ್ರದಾಯಿಕವಾಗಿ ಕಪ್ಪು ಮಣ್ಣಿನಿಂದ ಕೂಡಿದ್ದು, ಪಂದ್ಯ ಮುಂದುವರೆದಂತೆ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ನೀಡುತ್ತದೆ. ಚೆಂಡು ಪಿಚ್‌ನಲ್ಲಿ ಸ್ವಲ್ಪ ಹಿಡಿತ ಪಡೆಯುವುದರಿಂದ ಬ್ಯಾಟರ್‌ಗಳಿಗೆ ದೊಡ್ಡ ಹೊಡೆತಗಳನ್ನು ಬಾರಿಸುವುದು ಸವಾಲಾಗಬಹುದು.

ಇದನ್ನೂ ಓದಿ: ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ

ಇದಾಗ್ಯೂ ಆರಂಭದಲ್ಲಿ ವೇಗಿಗಳು ಹೊಸ ಚೆಂಡಿನಲ್ಲಿ ಸ್ವಲ್ಪ ಸ್ವಿಂಗ್ ಮಾಡಬಲ್ಲರು. ಹೀಗಾಗಿ ಟೀಮ್ ಇಂಡಿಯಾ ಆರಂಭದಲ್ಲಿ ಬುಮ್ರಾ ಹಾಗೂ ಹಾರ್ದಿಕ್​ನಿಂದ ಬೌಲಿಂಗ್ ಮಾಡಿಸಿ ಆ ಬಳಿಕ ಸ್ಪಿನ್ನರ್​​​ಗಳ ಮೂಲಕ ರಣತಂತ್ರ ರೂಪಿಸುವ ಸಾಧ್ಯತೆಯಿದೆ.

5+3+3 ಸಂಯೋಜನೆ:

ಪಾಕಿಸ್ತಾನ್ ವಿರುದ್ಧದ ಈ ಹೈವೋಲ್ಟೇಜ್ ಪಂದ್ಯಕ್ಕೆ ಟೀಮ್ ಇಂಡಿಯಾ 5+3+3 ಸಂಯೋಜನೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಅಂದರೆ ಇಲ್ಲಿ ಐವರು ಬ್ಯಾಟರ್​ಗಳು + ಮೂವರು ಆಲ್​ರೌಂಡರ್​ಗಳು + ಮೂವರು ಬೌಲರ್​ಗಳು ಇರಲಿದ್ದಾರೆ.

ಬ್ಯಾಟರ್​ಗಳಾಗಿ ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಕಣಕ್ಕಿಳಿದರೆ, ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್​​ಗಳಾಗಿ ಜಸ್​ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ ಹಾಗೂ ಕುಲ್ದೀಪ್ ಯಾದವ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.  ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ 11 ಈ ಕೆಳಗಿನಂತಿರಲಿದೆ…

  • ಅಭಿಷೇಕ್ ಶರ್ಮಾ
  • ಇಶಾನ್ ಕಿಶನ್ (ವಿಕೇಟ್ ಕೀಪರ್)
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್ (ನಾಯಕ)
  • ಹಾರ್ದಿಕ್ ಪಾಂಡ್ಯ
  • ಶಿವಂ ದುಬೆ
  • ರಿಂಕು ಸಿಂಗ್
  • ಅಕ್ಷರ್ ಪಟೇಲ್
  • ವರುಣ್ ಚಕ್ರವರ್ತಿ
  • ಕುಲ್ದೀಪ್ ಯಾದವ್
  • ಜಸ್ಪ್ರೀತ್ ಬುಮ್ರಾ

Source link

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ – Kannada News | Karnataka Weather Updates, Coastal Districts on Yellow Alert as Temperatures Soar

ಬೆಂಗಳೂರು, ಫೆಬ್ರವರಿ 15: ಕರ್ನಾಟಕ(Karnataka)ದಾದ್ಯಂತ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ವಿಪರೀತವಾಗಿದ್ದು, ಸೆಕೆಯ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸೆಕೆ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರದಲ್ಲಿ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಯಿಲ್ಲದಿದ್ದರೂ ಉಷ್ಣಾಂಶದಲ್ಲಿ ಏರಿಕೆ ಇದೆ.

ದಾವಣಗೆರೆಯಲ್ಲಿ 12. ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಶುಭ್ರ ಆಕಾಶ ಇರಲಿದ್ದು, ಕೆಲವೆಡೆ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿರಲಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ

ಬೆಳಗಾವಿ ಏರ್​​ಪೋರ್ಟ್​​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಹಾಸನದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ – Kannada News | Maha Shivratri 2026: Chant these Powerful Shiva mantra’s on the auspicious occasion of Shivaratri

ಮಹಾಶಿವರಾತ್ರಿಯು (Maha Shivratri) ಶಿವನ ಆರಾಧನೆಗೆ ಮೀಸಲಾಗಿರುವ ವಿಶೇಷ ಹಬ್ಬವಾಗಿದೆ. ಈ ದಿನದಂದು ಪ್ರಾಮಾಣಿಕ, ನಿಷ್ಕಲ್ಮಶ ಹೃದಯದಿಂದ ಶಿವನನ್ನು ಪೂಜಿಸುವುದು, ಉಪವಾಸ ವ್ರತ ಆಚರಿಸುವುದು ಮತ್ತು ಮಂತ್ರಗಳನ್ನು ಪಠಿಸುವುದರಿಂದ ಜೀವನದ ತೊಂದರೆಗಳು ದೂರವಾಗುತ್ತವೆ ಮತ್ತು ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.  ಅಲ್ಲದೆ  ಶಿವನನ್ನು ಮೆಚ್ಚಿಸಲು ಮತ್ತು ಮಹಾದೇವನ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಶುಭವೆಂದು ಪರಿಗಣಿಸಲಾಗಿದೆ. ಸಂಕಷ್ಟವೆಲ್ಲಾ ದೂರವಾಗಿ ನಿಮ್ಮ ಜೀವನದಲ್ಲೂ ಸಕಾರಾತ್ಮಕತೆ ನೆಲೆಗೊಳ್ಳಬೇಕು ಎಂದರೆ ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನಿಗೆ ಸಮರ್ಪಿತವಾಗಿರುವ ಈ ಕೆಲವೊಂದು ಶಕ್ತಿಶಾಲಿ ಮಂತ್ರಗಳನ್ನು ಪಠಿಸಿ.

ಶಿವರಾತ್ರಿಯಂದು ಭಕ್ತರು ಪಠಿಸಬೇಕಾದ ಶಿವ ಮಂತ್ರಗಳು:

ಮಹಾಮೃತ್ಯುಂಜಯ ಮಂತ್ರ: “ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ. ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತತ್” ಮಹಾಶಿವರಾತ್ರಿಯ ದಿನ ಈ ಮಂತ್ರವನ್ನು 108 ಬಾರಿ ಪಠಿಸುವುದರಿಂದ ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ.

ಪಂಚಾಕ್ಷರಿ ಮಂತ್ರ: ಶಿವನಿಗೆ ಸಂಬಂಧಿಸಿದ ಅತ್ಯಂತ ಪ್ರಸಿದ್ಧ ಮತ್ತು ಸರಳ ಮಂತ್ರವೆಂದರೆ ಓಂ ನಮಃ ಶಿವಾಯ” ಇದನ್ನು ಪಂಚಾಕ್ಷರಿ ಮಂತ್ರ ಎಂದೂ ಕರೆಯುತ್ತಾರೆ. ಮಹಾಶಿವರಾತ್ರಿಯಂದು ಈ ಮಂತ್ರವನ್ನು 108 ಬಾರಿ ಪಠಿಸುವುದರಿಂದ ಜೀವನದಲ್ಲಿನ ದುಃಖಗಳು ಕಡಿಮೆಯಾಗುತ್ತವೆ. ಇದು ಮಾನಸಿಕ ಶಾಂತಿಯನ್ನು ತರುತ್ತದೆ ಮತ್ತು ಶಿವನ ಆಶೀರ್ವಾದವೂ ಲಭಿಸುತ್ತದೆ.

ರುದ್ರ ಮಂತ್ರ: “ಓಂ ನಮೋ ಭಗವತೇ ರುದ್ರಾಯ” ಮಹಾಶಿವರಾತ್ರಿಯಂದು ಈ ಮಂತ್ರವನ್ನು ಪಠಿಸುವುದರಿಂದ ಮಾನಸಿಕ ಧೈರ್ಯ ಮತ್ತು ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದು ಪರಿಗಣಿಸಲಾಗಿದೆ. ಮಹಾಶಿವರಾತ್ರಿಯಂದು ಇದನ್ನು ಪಠಿಸುವುದರಿಂದ ಮಾನಸಿಕ ಶಕ್ತಿ ದೊರೆಯುತ್ತದೆ.

ಓಂ ನಮೋ ಭಗವತೇ ರುದ್ರಾಯ ನಮಃ” ಇದು ಇಷ್ಟಾರ್ಥಗಳನ್ನು ಈಡೇರಿಸುವ ಮಂತ್ರ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಶಿವನ ರುದ್ರ ಮಂತ್ರವನ್ನು ನಿಯಮಿತವಾಗಿ ಪಠಿಸುವುದರಿಂದ ಪ್ರತಿಯೊಂದು ಆಸೆಯೂ ಈಡೇರುತ್ತದೆ. ಮಹಾಶಿವರಾತ್ರಿಯಂದು ಈ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಇಷ್ಟಾರ್ಥಗಳು ಖಂಡಿತವಾಗಿಯೂ ಈಡೇರುತ್ತವೆ. ಈ ಮಂತ್ರವು ಆಸೆಗಳನ್ನು ಈಡೇರಿಸಲು ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.

ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರಃ ಪ್ರಚೋದ್ಯಾತ್” ಈ ಮಂತ್ರವು ಆತ್ಮಬಲವನ್ನು ಹೆಚ್ಚಿಸುತ್ತದೆ, ಆಲೋಚನೆಗಳನ್ನು ಶುದ್ಧೀಕರಿಸುತ್ತದೆ ಮತ್ತು ಜ್ಞಾನದ ಮಾರ್ಗವನ್ನು ತೆರೆಯುತ್ತದೆ.

“ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮ್ಹಿತನ್ನೋ ರುದ್ರ: ಪ್ರಚೋದಯಾತ್” ಈ ಮಂತ್ರವನ್ನು ಸಂತೋಷ ಮತ್ತು ಸಮೃದ್ಧಿಗಾಗಿ ಜಪಿಸಬಹುದು. ಶಿವನಿಗೆ ಅರ್ಪಿತವಾದ ಈ ಗಾಯತ್ರಿ ಮಂತ್ರವನ್ನು ಸರ್ವಶಕ್ತ ಮಂತ್ರವೆಂದು ಪರಿಗಣಿಸಲಾಗಿದೆ. ಈ ಮಂತ್ರವನ್ನು ನಿಯಮಿತವಾಗಿ ಜಪಿಸುವವರಿಗೆ ಅವರ ಜೀವನದಲ್ಲಿ ಎಲ್ಲಾ ಸಂತೋಷ ಮತ್ತು ಶಾಂತಿ ದೊರೆಯುತ್ತದೆ.

ಓಂ ಐಂ ಹ್ರೀಂ ಸರಸ್ವತ್ಯೈ ನಮಃ” ಮಹಾಶಿವರಾತ್ರಿಯಂದು ವಿದ್ಯಾರ್ಥಿಗಳು ಈ ಮಂತ್ರವನ್ನು 21 ಬಾರಿ ಜಪಿಸಬೇಕು. ಶಿಕ್ಷಣ ಮತ್ತು ವೃತ್ತಿ ಎರಡರಲ್ಲೂ ಯಶಸ್ಸು ಲಭಿಸಲು ನೀವು ಈ ಮಂತ್ರವನ್ನು ಜಪಿಸಬಹುದು.

ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿ ಪುಷ್ಟಿವರ್ಧನಂ. ಉರ್ವಾರುಕಮಿವ್ ಬನ್ಧನಾನ್ ಮೃತ್ಯೋರ್ಮುಕ್ಷೀಯ ಮಾಮೃತಾತ್” ತೊಂದರೆಗಳಿಂದ ಪರಿಹಾರ ಪಡೆಯಲು, ಮಹಾಶಿವರಾತ್ರಿಯಂದು ಮಹಾಮೃತ್ಯುಂಜಯ ಮಂತ್ರವನ್ನು 108 ಬಾರಿ ಜಪಿಸಿ. ಈ ಮಂತ್ರವು ಅಹಿತಕರ ಘಟನೆಗಳಿಂದ ರಕ್ಷಣೆ ನೀಡುತ್ತದೆ. ಅಲ್ಲದೆ ಈ ಮಂತ್ರವನ್ನು ನಿಯಮಿತವಾಗಿ ಪಠಿಸುವುದರಿಂದ ಅಕಾಲಿಕ ಮರಣದ ಭಯದಿಂದ ಮುಕ್ತರಾಗಬಹುದು.

ಇದನ್ನೂ ಓದಿ: ಶಿವರಾತ್ರಿಯಂದು ಮಹಾದೇವನನ್ನು ಮೆಚ್ಚಿಸಲು ನೈವೇದ್ಯಗಳನ್ನು ಅರ್ಪಿಸಿ

ಮಂತ್ರ ಪಠಣದ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಪ್ರಯೋಜನಗಳೇನು?

ಮಂತ್ರ ಪಠಣೆ ಮಾಡುವಾಗ ಉತ್ಪತ್ತಿಯಾಗುವ ಶಕ್ತಿ ತರಂಗಗಳು ಮನಸ್ಸು ಮತ್ತು ದೇಹವನ್ನು ಸಕಾರಾತ್ಮಕತೆಯತ್ತ ಕೊಂಡೊಯ್ಯುತ್ತವೆ ಮತ್ತು  ಆರೋಗ್ಯವನ್ನು ಸುಧಾರಿಸುತ್ತವೆ ಎಂದು ವಿವಿಧ ವೈಜ್ಞಾನಿಕ ಸಂಶೋಧನೆಗಳು ಸಾಬೀತುಪಡಿಸಿವೆ. ಮಹಾಶಿವರಾತ್ರಿಯ ಪವಿತ್ರ ದಿನದಂದು ಈ ಜಪಗಳನ್ನು ಪಠಿಸಿದರೆ, ಅದರ ಪ್ರಯೋಜನಗಳು ಹಲವು ಪಟ್ಟು ಹೆಚ್ಚಾಗುತ್ತವೆ. ‘ಓಂ ನಮಃ ಶಿವಾಯ’ ಎಂಬ ಮಹಾಮಂತ್ರವನ್ನು ಮನಸ್ಸಿನಲ್ಲಿಟ್ಟುಕೊಂಡು ಪಠಿಸುವವರಿಗೆ ಬೇರೆ ಯಾವುದೇ ಮಂತ್ರಗಳು, ತೀರ್ಥಯಾತ್ರೆಗಳು, ತಪಸ್ಸುಗಳು ಅಥವಾ ಯಜ್ಞಗಳ ಅಗತ್ಯವಿಲ್ಲ ಎಂದು ಸ್ಕಂದ ಪುರಾಣದಲ್ಲಿ ಹೇಳಲಾಗಿದೆ. ಈ ಮಂತ್ರವು ಮೋಕ್ಷವನ್ನು ನೀಡುತ್ತದೆ ಮತ್ತು ಪಾಪಗಳನ್ನು ನಾಶಪಡಿಸುತ್ತದೆ ಎಂಬ ನಂಬಿಕೆಯಿದೆ.

 ಮಂತ್ರಗಳನ್ನು ಪಠಿಸಲಿರುವ ನಿಯಮಗಳೇನು?

  • ಯಾವಾಗಲೂ ಪೂರ್ವ ಅಥವಾ ಉತ್ತರಕ್ಕೆ ಮುಖ ಮಾಡಿ ಮಾಡಿ ಮಂತ್ರಗಳನ್ನು ಪಠಿಸಬೇಕು.
  • ಶಿವ ದೇವಾಲಯ, ಪುಣ್ಯಸ್ಥಳ ಅಥವಾ ಮನೆಯಲ್ಲಿ ಸ್ವಚ್ಛ, ಶಾಂತ ಮತ್ತು ಏಕಾಂತ ಸ್ಥಳದಲ್ಲಿ ಕುಳಿತು ಜಪಿಸುವುದು ಉತ್ತಮವೆಂದು ಪರಿಗಣಿಸಲಾಗಿದೆ.
  • ರುದ್ರಾಕ್ಷ ಮಾಲೆಯೊಂದಿಗೆ ಪ್ರತಿದಿನ ಕನಿಷ್ಠ 108 ಬಾರಿ ಜಪ ಮಾಡಬೇಕು, ಏಕೆಂದರೆ ರುದ್ರಾಕ್ಷ ಶಿವನಿಗೆ ತುಂಬಾ ಪ್ರಿಯವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ವಿಧಾನ ಹೇಗೆ? ಇಲ್ಲಿದೆ ಮಾಹಿತಿ – Kannada News | Maha Shivaratri: Rituals, Significance, and Spiritual Benefits

ಮಹಾಶಿವರಾತ್ರಿಯು ಹಿಂದೂ ಧರ್ಮದ ಒಂದು ಪವಿತ್ರ ಹಬ್ಬವಾಗಿದ್ದು, ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ. ಇದು ಶಿವ-ಶಕ್ತಿಯ ಸಮ್ಮಿಲನದ ಹಬ್ಬ. ಶಿವ-ಪಾರ್ವತಿಯರ ವಿವಾಹವಾದ ದಿನ ಮತ್ತು ಶಿವ ಲಿಂಗರೂಪಿಯಾಗಿ ಅವತರಿಸಿದ ದಿನವಿದು. ಬ್ರಹ್ಮ ಮತ್ತು ವಿಷ್ಣು ನಡುವೆ ಶ್ರೇಷ್ಠತೆಯ ಪ್ರಶ್ನೆ ಬಂದಾಗ, ಶಿವ ಲಿಂಗರೂಪಿಯಾಗಿ ಪ್ರಕಟಗೊಂಡ ಪರ್ವ ಸಮಯ ಇದಾಗಿದೆ. ಮಹಾಶಿವರಾತ್ರಿಯಂದು ಉಪವಾಸ, ಜಾಗರಣೆ ಮತ್ತು ಶಿವ ಪೂಜೆಗೆ ವಿಶೇಷ ಮಹತ್ವವಿದೆ. ಇಡೀ ದಿನ ನಿರ್ಜಲ ಉಪವಾಸ ಆಚರಿಸುವುದರಿಂದ ದೇಹ ಮತ್ತು ಮನಸ್ಸಿನ ಸಮತೋಲನ ಹೆಚ್ಚುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ಶಿವನು ವಿಷವನ್ನು ಸೇವಿಸಿದಾಗ, ಆ ವಿಷದ ಪ್ರಭಾವ ದೇಹಕ್ಕೆ ಆಗದಿರಲೆಂದು ಪಾರ್ವತಿ ದೇವಿ ಅವನ ಕುತ್ತಿಗೆಯನ್ನು ಹಿಡಿದು ರಾತ್ರಿ ಇಡೀ ಎಲ್ಲರೂ ಜಾಗರಣೆ ಮಾಡಿದರು. ಇದರ ಪ್ರತೀಕವಾಗಿ ಇಂದು ಜಾಗರಣೆ ಆಚರಿಸಲಾಗುತ್ತದೆ. ಈ ದಿನ ಶಿವನಾಮ ಸ್ಮರಣೆ, ಭಜನೆ ಮತ್ತು ಧ್ಯಾನದಲ್ಲಿ ತೊಡಗಿಸಿಕೊಳ್ಳುವುದು ಮಂಗಳಕರ.

ಶಿವನಿಗೆ ಅಭಿಷೇಕ ಪ್ರಿಯ. ಹಾಲು, ಮೊಸರು, ವಿಭೂತಿ, ಗಂಧ, ಪಂಚಾಮೃತಗಳಿಂದ ನಾಲ್ಕು ಯಾಮಗಳಲ್ಲಿ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ ಅರ್ಪಣೆ ಮತ್ತು ಓಂ ನಮಃ ಶಿವಾಯ ಮಂತ್ರ ಜಪಿಸುವುದರಿಂದ ರೋಗರುಜಿನಗಳು ಕಡಿಮೆಯಾಗಿ ಅನುಗ್ರಹ ಲಭಿಸುತ್ತದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ – Kannada News | South Africa misses world record by only 3 balls

T20 World Cup 2026: ಟಿ20 ವಿಶ್ವಕಪ್​​ನ 25ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು.

Source link

Horoscope Today 15 February​: ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ – Kannada News | Daily Horoscope for 15 February 2026: Dr. Basavaraj Gurujis Astrological Predictions on Maha Shivaratri

ಪ್ರಸನ್ನ ಹೆಗಡೆ |

Updated on:Feb 15, 2026 | 7:29 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಫೆಬ್ರವರಿ 15, ಭಾನುವಾರದ ಮಹಾಶಿವರಾತ್ರಿ ದಿನದ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಮಹಾಶಿವರಾತ್ರಿಯ ಮಹತ್ವವನ್ನು ವಿವರಿಸಲಾಗಿದೆ. ಮೇಷ ರಾಶಿ ಸೇರಿದಂತೆ ದ್ವಾದಶ ರಾಶಿಗಳ ಮೇಲೆ ಗ್ರಹಗಳ ಶುಭ ಫಲಗಳ ಕುರಿತು ಮಾಹಿತಿ ಒದಗಿಸಲಾಗಿದೆ.

Published on: Feb 15, 2026 07:29 AM

Source link

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ – Kannada News | Rajinikanth fan celebrates Shivaratri by performing puja on actor photo

ನಟ ರಜನಿಕಾಂತ್ (Rajinikanth) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಆದರೆ ಜನರು ಕೆಲವೊಮ್ಮೆ ಅತಿರೇಕದ ಅಭಿಮಾನ ಪ್ರದರ್ಶಿಸುತ್ತಾರೆ. ಅದಕ್ಕೆ ಇಲ್ಲೊಂದು ಹೊಸ ಉದಾಹರಣೆ ಇದೆ. ಫೆಬ್ರವರಿ 15ರಂದು ಎಲ್ಲೆಡೆ ಸಂಭ್ರಮದಿಂದ ಶಿವರಾತ್ರಿ (Shivaratri) ಆಚರಿಸಲಾಗುತ್ತಿದೆ. ಇಲ್ಲೊಬ್ಬ ಅಭಿಮಾನಿಯು ರಜನಿಕಾಂತ್ ಫೋಟೋಗೆ ಪೂಜೆ ಮಾಡುವ ಮೂಲಕ ಶಿವರಾತ್ರಿ ಆಚರಿಸಿದ್ದಾನೆ! ಆ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ರಜನಿಕಾಂತ್ ಅವರು ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದರು. ಆ ಪೋಸ್ಟರ್ ಇಟ್ಟುಕೊಂಡು ಕಾರ್ತಿಕ್ ಎಂಬ ಅಭಿಮಾನಿ ಈ ರೀತಿ ಪೂಜೆ ಮಾಡಿದ್ದಾರೆ. ಶಿವನ ಗೆಟಪ್ ಧರಿಸಿರುವ ರಜನಿಕಾಂತ್ ಫೋಟೋಗೆ ಆತ ಹಾಲಿನ ಅಭಿಷೇಕ ಕೂಡ ಮಾಡಿದ್ದಾನೆ. ಆರತಿ ಬೆಳಗಿ ಕೈ ಮುಗಿಯಲಾಗಿದೆ. ಹೂವಿನ ಹಾರದ ಜೊತೆಗೆ ವಡೆಯ ಹಾರವನ್ನೂ ಹಾಕಲಾಗಿದೆ.

ಅಭಿಮಾನಿಯ ಮನೆಯೊಳಗೆ ರಜನಿಕಾಂತ್ ಅವರಿಗಾಗಿ ದೇವಸ್ಥಾನ ಕಟ್ಟಲಾಗಿದೆ. ಕಳೆದ ಮೂರು ವರ್ಷಗಳಿಂದ ಪ್ರತಿ ಶಿವರಾತ್ರಿ ಹಬ್ಬವನ್ನು ಇದೇ ರೀತಿ ಆತ ಆಚರಣೆ ಮಾಡುತ್ತಿದ್ದಾನೆ. ರಜನಿಕಾಂತ್ ಅವರ 50 ವರ್ಷದ ಸಿನಿಮಾ ಜರ್ನಿಯನ್ನು ಸೆಲೆಬ್ರೇಟ್ ಮಾಡುವ ಸಲುವಾಗಿ 500 ವಡೆಗಳ ಹಾರ ಹಾಕಿರುವುದಾಗಿ ಆ ಅಭಿಮಾನಿ ಹೇಳಿದ್ದಾನೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋ ನೋಡಿ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ‘ಇಂಥ ಕಳಪೆ ಕೆಲಸವನ್ನು ನೋಡಿದರೆ ಸ್ವತಃ ರಜನಿಕಾಂತ್ ಅವರು ನಗುತ್ತಾರೆ. ಅವರು ಇಂಥದ್ದನ್ನೆಲ್ಲ ಒಪ್ಪುವುದಿಲ್ಲ’ ಎಂದು ಒಬ್ಬರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಮನುಷ್ಯರನ್ನು ಮನುಷ್ಯರನ್ನಾಗಿ ನೋಡಿ. ಇಂಥ ವರ್ತನೆಯನ್ನು ಎಂದಿಗೂ ಪ್ರೋತ್ಸಾಹಿಸಬಾರದು’ ಎಂಬ ಕಮೆಂಟ್ ಕೂಡ ಬಂದಿದೆ.

ಇದನ್ನೂ ಓದಿ: ಆಪ್ತ ಗೆಳೆಯನಿಗೂ ಇಲ್ಲ ರಿಯಾಯಿತಿ, ಕಮಲ್ ಜೊತೆ ಸಿನಿಮಾಕ್ಕೆ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು?

‘ಸೂಪರ್ ಸ್ಟಾರ್’ ರಜನಿಕಾಂತ್ ಅವರಿಗೆ ಈಗ 75 ವರ್ಷ ವಯಸ್ಸು. ಇಂದಿಗೂ ಅವರಿಗೆ ಸಖತ್ ಬೇಡಿಕೆ ಇದೆ. ಕಳೆದ ವರ್ಷ ಅವರು ನಟಿಸಿದ ‘ಕೂಲಿ’ ಸಿನಿಮಾ ಬಿಡುಗಡೆ ಆಗಿ ಯಶಸ್ಸು ಕಂಡಿತ್ತು. ಆ ಸಿನಿಮಾದಲ್ಲಿ ಆಮಿರ್ ಖಾನ್, ನಾಗಾರ್ಜುನ, ರಚಿತಾ ರಾಮ್, ಉಪೇಂದ್ರ, ಶ್ರುತಿ ಹಾಸನ್ ಮುಂತಾದವರು ಅಭಿನಯಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು

ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತ ಹರ್ಷಿತ್​​ ರಾಜನಕುಂಟೆ ಸಾಯಿ ವಿದ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ದ್ವಿತೀಯ ವರ್ಷದ ಡಿಗ್ರಿ ಓದುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಮಾಹಿತಿ ಅಪ್ಡೇಟ್​​ ಆಗುತ್ತಿದೆ.

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಲಹರಣಕ್ಕೆ ಹೊಸ ದಾರಿ ಕಂಡುಕೊಳ್ಳುವರು – Kannada News | Horoscope 15 February 2026; Dina Rashi Bhavishya Today, Checkout the details here

ಮೇಷ ರಾಶಿ:

ಮುಖಂಡದರಾಗಿ ಕರೆದೊಯ್ಯುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು.

ವೃಷಭ ರಾಶಿ:

ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ ವರ್ತನೆಯಿಂದ ಮನಸ್ಸಿಗೆ ಕಿರಿಕಿರಿ. ಯಾರ ಬಳಿಯೋ ಹಣವನ್ನು ಹೊಂದಿಸಿ ಮಿತ್ರರಿಗೆ ಕೊಡುವಿರಿ. ನಿಮ್ಮ ಬಣ್ಣದ ಮಾತುಗಳು ಕೆಲವು ಅವಧಿಗೆ ಮಾತ್ರ ಸೀಮಿತ. ಮನೆಯಲ್ಲಿ ಭಿನ್ನಾಭಿಪ್ರಾಯವು ಬರಬಹುದು.

ಮಿಥುನ ರಾಶಿ:

ಸಣ್ಣ ವಿಚಾರಗಳಿಗೂ ಸಿಟ್ಟಾಗುವುದನ್ನು ಕಡಿಮೆ ಮಾಡಿಕೊಳ್ಳಿ. ನಿಮಗೆ ಬೇಕಾದ ಹಣವು ಸರಿಯಾದ ಸಮಯಕ್ಕೆ ಸಿಗದೆ ಆಂತಕವಾಗುವುದು. ನಿಮ್ಮ ಪಾವಿತ್ರ್ಯಯನ್ನು ಉಳಿಸಿಕೊಳ್ಳಲಾಹದು.‌ ಅಪರಿಚಿತರು ನಿಮ್ಮ ಬಗ್ಗೆ ನಕಾರಾತ್ಮಕವಾಗಿ ಮಾತನಾಡುವರು. ಕಛೇರಿಯಲ್ಲಿ ಇಂದು ಹೇಳಿದ್ದಷ್ಟನ್ನು ಮಾತ್ರ ಮಾಡಿ. ನಿಮಗೆ ಯಾರ ಬೆಂಬಲದಿದ್ದರೂ ಕಾರ್ಯವನ್ನು ಮಾಡುವವರು ನೀವೇ. ಬರಬೇಕಾದ ಪೂರ್ಣವಾಗಿ ಬಾರದು.

ಕರ್ಕಾಟಕ ರಾಶಿ:

ನಿಮ್ಮ ಬಗ್ಗೆ ಸುಳ್ಳು ವಿಚಾರವನ್ನು ಹೇಳುವರು. ಬಹಳ ಕೆಲಸವಿದ್ದರೂ ಒತ್ತಡದಿಂದ ಇರುವಿರಿ. ನಿಮ್ಮ ಬಗ್ಗೆ ನಿಮಗೇ ಪೂರ್ಣ ಪ್ರಮಾಣದ ನಂಬಿಕೆ ಸಾಲದು. ನೌಕರರಿಂದ ಕೆಟ್ಟ ಹೆಸರು ಬರಬಹುದು. ಹೂಡಿಕೆಯನ್ನು ಮಾಡಿ ಒತ್ತಡವನ್ನು ಅನುಭವಿಸಬೇಕಾಗುವುದು. ಮಕ್ಕಳಿಗಾಗಿ ಹಣವನ್ನು ಖರ್ಚು ಮಾಡುವಿರಿ. ಕೃತಜ್ಞೆಯನ್ನು ಅರ್ಪಿಸುವ ಮನೋಭಾವವಿರದು. ಆಲಸ್ಯದಿಂದ ಈ ದಿನವನ್ನು ಕಳೆಯುವಿರಿ. ಉನ್ನತಸ್ಥಾನಕ್ಕೆ ಏರಲು ನಿಮಗೆ ಎಲ್ಲ ಮಾರ್ಗಗಳೂ ಮುಚ್ಚಿದಂತೆ ಕಾಣಿಸುವುದು.

ಸಿಂಹ ರಾಶಿ:

ಅಧ್ಯಾತ್ಮದಿಂದ ಏನೋ ಕಲ್ಪನೆಗಳನ್ನು ಮಾಡಿಕೊಳ್ಳುವಿರಿ. ದೈನಂದಿನ ಬಳಕೆಯ ಉತ್ಪನ್ನಗಳ ವ್ಯಾಪಾರಿಗಳು ಲಾಭ ಗಳಿಸುವರು. ಯಾವುದೇ ಊಹೆಗಳಿಗೆ ಬೆಲೆ ಕೊಡದೇ ಸ್ಪಷ್ಟವಾದುದನ್ನು ನಂಬಿ. ಸಂಗಾತಿಯ ಇಷ್ಟವನ್ನು ಕೇಳಿ ಅವರಿಗೆ ಸಂತೋಷವನ್ನು ನೀಡುವಿರಿ. ಕೆಲ ದಿನಗಳಿಂದ ನಿಮ್ಮ ಆರೋಗ್ಯ ಹದಗೆಟ್ಟಿದ್ದು, ಮನಸ್ಸೂ ಸರಿಯಾಗಿರದು. ಇಂದು ಸಹೋದರರ ನಡುವೆ ವಾಗ್ವಾದವು ಅಗಲಿದ್ದು ಹಿರಿಯ ಮಧ್ಯಸ್ತಿಕೆಯಿಂದ ಶಾಂತವಾಗುವುದು.

ಕನ್ಯಾ ರಾಶಿ:

ಮನೆಯ ವಾತಾವರಣದಿಂದ ನಿಮ್ಮ ವೃತ್ತಿಯೂ ಸರಿಯಾಗಿರದು.‌ ವ್ಯಾಪರದಿಂದ ಆದ ಲಾಭವು ನಿಮಗೆ ಇನ್ನಷ್ಟು ಉತ್ಸಾಹವನ್ನು ವರ್ಧಿಸುವುದು. ಸಹೋದರಿಯ ವಿವಾಹದ ಜವಾಬ್ದಾರಿಯು ಇರಲಿದೆ. ನಿಮ್ಮ ವ್ರತಕ್ಕೆ ಭಂಗ ಬರುವ ಸಾಧ್ಯತೆ ಇದೆ. ಅಪರಿಚಿತರು ನಿಮ್ಮಿಂದ ಹಣವನ್ನು ಕೇಳಬಹುದು. ಪರರಿಗೆ ನೋವಾಗದಂತೆ ಸ್ಪಂದಿಸುವಿರಿ. ನಿಮ್ಮ ಮನಸ್ಸಿಗೆ ತೋಚಿದ್ದನ್ನೆಲ್ಲವನ್ನೂ ಹೇಳುವಿರಿ.

ತುಲಾ ರಾಶಿ:

ಹಳೆಯ ಸಂಬಂಧವು ಮತ್ತೆ ಚಿಗುರಬಹುದು. ಆಕಸ್ಮಿಕವಾಗಿ ಶುಭ ಸಮಾಚಾರವು ಬರಬಹುದು ಎಂಬ ನಿರೀಕ್ಷೆಯು ಸುಳ್ಳಾಗುವುದು. ಏನು ಬೇಕಾದರೂ ಮಾಡಬಹುದು, ಆದರೆ ಏನೂ ಆಗದು. ನಿಮ್ಮ ಮಾತುಗಳು ಖಾರವಾಗುವುದು. ಕೋಪಕ್ಕೆ ಸರಿಯಾದ ಕಾರಣವಿರಲಿ. ನಿಮ್ಮ ಕರ್ಮವೇ ನಿಮಗೆ ಹಿಂದಿರುಗಿ ಬರುವಂತೆ ಕಾಣಿಸುವುದು. ನಿಮ್ಮ ಜವಾಬ್ದಾರಿಯ ಕಾರ್ಯಕ್ಕೆ ಕೆಲವು ಅಡೆತಡೆಗಳು ಬರಬಹುದು.

ವೃಶ್ಚಿಕ ರಾಶಿ:

ಯಾವುದೇ ನಿರೀಕ್ಷೆಯನ್ನು ಇಟ್ಟುಕೊಳ್ಳದೇ ಕರ್ತವ್ಯಪರರಾಗಿ ಕಾರ್ಯವನ್ನು ಮಾಡಿ. ಅನಿರೀಕ್ಷಿತ ಧನಾಗಮನವು ನಿಮ್ಮ ಕಾರ್ಯಗಳಿಗೆ ಸರಿಯಾಗಿ ದೊರೆತಂತೆ ಆಗುವುದು. ಈ ದಿನಗಳಲ್ಲಿ ವ್ಯವಹಾರದಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲದಿದ್ದರೆ, ತಾಳ್ಮೆಯಿಂದ ಏನನ್ನಾದರೂ ಸಾಧಿಸಲು ಪ್ರಯತ್ನಿಸಿ. ಅಪರಿಚಿತ ಕರೆ ಮನಸ್ಸು ಹಾಳಾಗುವುದು. ನಿಮ್ಮನ್ನು ನೀವು ಕೆಲಸದ ಮೂಲಕ ಪರಿಚಯಿಸಿಕೊಳ್ಳುವಿರಿ.

ಧನು ರಾಶಿ:

ಉದ್ಯಮಿಗಳು ಇಂದು ಹಣವನ್ನು ಗಳಿಸುವ ಸಾಧ್ಯತೆಯಿದೆ. ಸಿಹಿ ಎಷ್ಟೇ ಇಷ್ಟವಾದರೂ ಮಿತಿಯಲ್ಲಿ ಸೇವಿಸಿದರೆ ಆಪತ್ತಿಲ್ಲ. ನಿಮ್ಮ ಆಸ್ತಿಗೆ ಸಂಬಂಧಿಸಿದ ಕಾರ್ಯಗಳಿಗೆ ಹೆಚ್ಚು ಓಡಾಟವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬಂದರೂ ಅದನ್ನು ನಗಣ್ಯ ಮಾಡುವಿರಿ. ನಿಮ್ಮ ಧಾರ್ಮಿಕ ಶ್ರದ್ಧೆಗೆ ಇನ್ನಷ್ಟು ಬಲವು ಬರಲಿದೆ. ನಿಮ್ಮ ಪ್ರತಿಭೆಯನ್ನು ತೋರಿಸಲು ಸಂಕೋಚವಾಗುವುದು. ನಿಮ್ಮ ನಿಮಗೆ ಸಿಕ್ಕ ಬೆಂಬಲವನ್ನು ಇನ್ನೊಬ್ಬರಿಗೂ ಕೊಡುವ ಮನಸ್ಸು ಮಾಡಿ. ದೈಹಿಕ ಕಸರತ್ತನ್ನು ಮಿತವಾಗಿ ಮಾಡಿ.

ಮಕರ ರಾಶಿ:

ನೀವು ಯಾವುದನ್ನೂ ಗುಟ್ಟಾಗಿ ಇಡಲಾರಿರಿ. ಹಳೆಯ ಸ್ನೇಹಿತರನ್ನು ನೀವು ಭೇಟಿಯಾಗಿ ಎಲ್ಲ ಸಂಗತಿಗಳನ್ನು ಹಂಚಿಕೊಳ್ಳುವಿರಿ. ನೀವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಖರ್ಚನ್ನು ನಿಮ್ಮ ಯೋಜನೆಯು ತೆಗೆದುಕೊಂಡಿದ್ದು ನಿಮಗೆ ಚಿಂತೆಯಾಗಬಹುದು. ಯಾವುದೋ ಸಂಸ್ಥೆಯಲ್ಲಿ ಹಣ ಹೂಡಿಕೆಯನ್ನು ಮಾಡಲು ಹೋಗುವಿರಿ. ಕರಕುಶಲ ವಸ್ತುಗಳ ಮಾರಾಟವನ್ನು ನೀವು ಮಾಡಲು ಉತ್ಸಾಹದಿಂದ ಇರುವಿರಿ. ಕಛೇರಿಯ ಕೆಲಸದಲ್ಲಿ ಮೇಲಧಿಕಾರಿಗಳಿಂದ ಅಕ್ಷೇಪವು ಬರಬಹುದು.

ಕುಂಭ ರಾಶಿ:

ಸೌಂದರ್ಯದಿಂದ ಸ್ತ್ರೀಯರು ಆಕರ್ಷಕವಾಗಿ ಕಾಣುವಿರಿ. ಸಣ್ಣ ವ್ಯವಹಾರಗಳಿಂದ ನೀವು ಹೆಚ್ಚಿನ ಲಾಭವನ್ನು ಪಡೆಯುವಿರಿ. ಮೇಲಿಂದ ಮೇಲೆ ಒತ್ತಡಗಳು ಕಾಣಿಸಿಕೊಳ್ಳುವುದು. ಎಂತಹ ಕಷ್ಟದಲ್ಲಿಯೂ ನೀವು ನಿಮ್ಮವರನ್ನು ಬಿಟ್ಟುಕೊಡಲಾರಿರಿ. ಗುರಿಯ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ವೈಫಲ್ಯಕ್ಕೆ ಕಾರಣವಾಗುವುದು. ದುರ್ಬಲವಾದ ಮನಸ್ಸನ್ನು ನೀವು ಬಲಮಾಡಿಕೊಳ್ಳುವ ಅವಶ್ಯಕತೆ ಇರಲಿದೆ. ನಿಮ್ಮಲ್ಲಿ ಯಾರೂ ಸಾಧಿಸದಿರುವ ಹಾಗೂ ತಾನು ಸಾಧಿಸಿದೆನೆಂಬ ತೃಪ್ತಿ.

ಮೀನ ರಾಶಿ:

ಹೊಸ ಆರ್ಥಿಕ ವ್ಯವಹಾರಕ್ಕೆ ಮೊದಲು ಕಾನೂನಿನ ಜ್ಞಾನ ಅಗತ್ಯ. ವ್ಯಾಪಾರವನ್ನು ನೀವು ವಿಸ್ತಾರ ಮಾಡಿಕೊಳ್ಳುವ ಯೋಜನೆಯನ್ನು ಹೊಂದುವಿರಿ. ಪ್ರಭಾವೀ ವ್ಯಕ್ತಿಗಳ ಬಗ್ಗೆ ನಿಮಗೆ ಮುಜುಗರವಾಗಬಹುದು. ಆಕಸ್ಮಿಕವಾಗಿ ದ್ರವ್ಯಪ್ರಾಪ್ತಿಯಾಗುವುದು. ದಾಂಪತ್ಯದಲ್ಲಿ ನಂಬಿಕೆ ಹೆಚ್ಚಾಗುವುದು. ಆದಾಯದ ಮೂಲದಲ್ಲಿ ಬದಲಾವಣೆಯಾಗಲಿದೆ. ಕೆಲವನ್ನು ನೀವು ಬೇಕೆಂದೇ ಬಿಟ್ಟುಕೊಳ್ಳುವಿರಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ವಜ್ರ, ಕರಣ : ತೈತಿಲ, ಸೂರ್ಯೋದಯ – 06 – 49 am, ಸೂರ್ಯಾಸ್ತ – 06 – 27 pm, ಇಂದಿನ ಶುಭಾಶುಭ ಕಾಲ : ರಾಹು 17:11 – 18:28, ಯಮಗಂಡ ಕಾಲ 12:39 – 14:06, ಗುಳಿಕ ಕಾಲ 15:33 – 17:01

-ಲೋಹಿತ ಹೆಬ್ಬಾರ್ – 8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 15ರ ದಿನಭವಿಷ್ಯ – Kannada News | February 15th Sunday Horoscope: Birth Numbers 1,2,3 Daily Forecast and Life Advice

ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ, ಶೈಕ್ಷಣಿಕವಾಗಿ ಬಹಳ ಮುಖ್ಯವಾದ ಪರೀಕ್ಷೆಗಳನ್ನು ಇನ್ನೇನು ಎದುರಿಸಲಿದ್ದೀರಿ ಎಂದಾದಲ್ಲಿ ಗ್ರೀನ್ ಅವೆಂಚೂರಿಯನ್ ಸ್ಟೋನ್ ಬಳಸಿ. ಇನ್ನು ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದೀರಿ ಅಂಥವರಿಗೂ ಈ ಸ್ಟೋನ್ ಸೂಕ್ತ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಯಾರು ಹಳೇ ನಾಣ್ಯ, ಅಂಚೆ ಚೀಟಿ ಅಥವಾ ಪುರಾತನ ವಸ್ತುಗಳ ಖರೀದಿ ಹಾಗೂ ಮಾರಾಟವನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುತ್ತೀರೋ ಅಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಸಾಧ್ಯತೆ ಇದೆ. ಕ್ಯಾಟರಿಂಗ್ ಮಾಡುತ್ತಿರುವವರು ದಿಢೀರನೆ ನಾನಾ ಸವಾಲುಗಳನ್ನು ಎದುರಿಸುವಂತಾಗಲಿದೆ. ಕೆಲಸಕ್ಕೆ ಬರುವುದಾಗಿ ಮಾತು ನೀಡಿದ್ದಂಥ ವ್ಯಕ್ತಿಗಳು ಏಕಾಏಕಿ ತಮ್ಮಿಂದ ಬರುವುದಕ್ಕೆ ಸಾಧ್ಯವಿಲ್ಲ ಎಂದುಬಿಡಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಮಸಾಲೆಯುಕ್ತ ಆಹಾರ ಪದಾರ್ಥಗಳಿಂದ ಈ ದಿನ ಸಾಧ್ಯವಾದಷ್ಟೂ ದೂರದಲ್ಲಿ ಇರುವುದು ಕ್ಷೇಮ. ಬಾಯಿ ರುಚಿಗೆ ಬಿದ್ದಲ್ಲಿ ಹೊಟ್ಟೆ ನೋವು, ಹೊಟ್ಟೆಯುಬ್ಬರ ಅಥವಾ ಹೊಟ್ಟೆಯುರಿ ಇಂಥ ಆರೋಗ್ಯ ಸಮಸ್ಯೆಗಳಿಂದ ಬಳಲುವಂತೆ ಆಗಲಿದೆ. ಈ ಹಿಂದೆ ಬಹಳ ಹಣ ಖರ್ಚು ಮಾಡಿ, ಖರೀದಿಸಿ ತಂದಂಥ ಸಲಕರಣೆ ಅಥವಾ ಉಪಕರಣಗಳು ಏನಾದರೊಂದು ಸಮಸ್ಯೆ ತರಬಹುದು. ತಕ್ಷಣಕ್ಕೆ ಇದಕ್ಕೆ ಏನು ಪರಿಹಾರ ಎಂಬುದು ತಿಳಿಯದೆ ಬೇಸರ ಪಡುವಂತೆ ಆಗಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಏಕ ಕಾಲಕ್ಕೆ ಹಲವು ಕೆಲಸಗಳನ್ನು ನಿಗಾ ಮಾಡಬೇಕಾದ ಸನ್ನಿವೇಶ ಎದುರಾಗಲಿದೆ. ಇದು ಒತ್ತಡವಾಗಿ ಮಾರ್ಪಡಲಿದೆ. ಇನ್ನು ಮಕ್ಕಳಿರುವವರಿಗೆ ಅವರ ಆರೋಗ್ಯ ಸ್ಥಿತಿಯು ಏಕಾಗ್ರತೆಯಿಂದ ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲದಂಥ ಸ್ಥಿತಿಯನ್ನು ಸೃಷ್ಟಿ ಮಾಡಲಿವೆ. ನೀವು ಬಹಳ ಆಸ್ಥೆ ವಹಿಸಿ, ಶ್ರಮ ಪಟ್ಟು ಮಾಡಿದ ಪ್ರಾಜೆಕ್ಟ್- ಕಾರ್ಯಗಳ ಬಗ್ಗೆ ಇತರರು ಉದಾಸೀನ- ಉಡಾಫೆಯಿಂದ ಮಾತನಾಡಿದರು ಎಂಬುದು ಸಿಟ್ಟಿಗೆ ಕಾರಣವಾಗಲಿದೆ.

ಲೇಖನ- ಸ್ವಾತಿ ಎನ್.ಕೆ.

Published On – 12:15 am, Sun, 15 February 26

Source link

Exit mobile version