ತರಕಾರಿ ಮಾರಿ ಬಂದ ಹಣದಲ್ಲಿ ದೇಗುಲಕ್ಕೆ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ – Kannada News | Son in law Kills mother in law for property dispute Who donated silver Door To Temple In Bagalkot

ಬಾಲಕೋಟೆ, (ಜನವರಿ 15): ತರಕಾರಿ ಮಾರಿ ತೇರದಾಳ ಪಟ್ಟಣದ ಪ್ರಭುಲಿಂಗ ದೇವರಿಗೆ 12 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿ ದಾನಜ್ಜಿ ಎಂದು ಹೆಸರಾಗಿದ್ದ ಚಂದ್ರವ್ವ ನಿಲಜಗಿ ಅಜ್ಜಿ ಕೊಲೆಯಾಗಿದೆ. ಬಾಗಲಕೋಟೆ (Bagalkot) ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಜಗದಾಳ ಬಳಿಯ ಕಾಲುವೆಗೆ ತಳ್ಳಿ ಕೊಲೆ ಮಾಡಲಾಗಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಸರ್ವೆ ಮಾಡುತ್ತಿದ್ದ ವೇಳೆ ಅಲ್ಲೇ ಇದ್ದ ಕಾಲುವೆಗೆ ಅಳಿಯಂದಿರು ( ಚಂದ್ರವ್ವನ ಅಣ್ಣನ ‌ಮಕ್ಕಳು), ಅಜ್ಜಿಯನ್ನು ಕಾಲುವೆಗೆ ತಳ್ಳಿ ಕೊಂದಿದ್ದಾರೆ. ಬಳಿಕ ರಕ್ಷಣೆ ಮಾಡುವ ನಾಟಕವಾಡಿದ್ದಾರೆ. ಆದ್ರೆ, ಅಷ್ಟೊತ್ತಿಗೆ ಅಜ್ಕಿಯ ಜೀವ ಹೋಗಿದ್ದು, ಅವಸರದಲ್ಲಿ ಅಂತ್ಯಸಂಸ್ಕಾರ ಮಾಡಲು ಅಜ್ಜಿಯ ಮೃತದೇಹಕ್ಕೆ ಹೊಸ ಸೀರೆ ಉಡಿಸಿ ಸಿಂಗರಿಸಿ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದ್ದಾರೆ. ಆದ್ರೆ, ಸ್ಥಳೀಯರಿಗೆ ಸಂಶಯ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬನಹಟ್ಟಿ ಪೊಲೀಸರು ದೌಡಾಯಿಸಿದಾಗ ದಾನಜ್ಜಿಯ ಕೊಲೆ ರಹಸ್ಯ ಬಯಲಿಗೆ ಬಂದಿದೆ.

ಅಜ್ಜಿ ಮದುವೆಯಾಗಿ ಕೆಲವೇ ವರ್ಷದಲ್ಲಿ ಗಂಡ ತೀರಿಕೊಂಡಿದ್ದ. ಮಕ್ಕಳು ಸಹ ಇರಲಿಲ್ಲ. ಇದರಿಂದ ಕಳೆದ 60 ವರ್ಷಗಳಿಂದ ತೇರದಾಳ ಪಟ್ಟಣದ ಪ್ರಭುಲಿಂಗ ದೇವಸ್ಥಾನದ ಮುಂದೆ ತರಕಾರಿ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಇದರಿಂದ ಬಂದ ಹಣದಿಂದ ದೇಗುಲಕ್ಕೆ 2022ರಲ್ಲಿ 20 ಕೆಜಿ ತೂಕದ 16 ಲಕ್ಷ ರೂ. ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿದ್ದಳು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ – Kannada News | Shivamogga: Husband kills wife for opposing second marriage; Arrested

ಶಿವಮೊಗ್ಗ, ಜನವರಿ 15: ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ.

ನಡೆದದ್ದೇನು?

ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ ಬೇರೆ ಜಾತಿಯವರಾಗಿದ್ದು, ಇಬ್ಬರು ಪ್ರೀತಿಸಿ ಓಡಿ ಹೋಗಿ ಮದುವೆ ಮಾಡಿಕೊಂಡಿದ್ದರು. ಕೆಲವು ದಿನ ತಲೆಮರೆಸಿಕೊಂಡಿದ್ದರು. ಬಳಿಕ ವಾಪಸ್ ಊರಿಗೆ ಬಂದು ಸಂಸಾರ ನಡೆಸಿದ್ದರು. ಇವರ ಪ್ರೀತಿ ಸಂಕೇತಕ್ಕೆ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.

ಇದನ್ನೂ ಓದಿ: ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ

ಈ ನಡುವೆ ಮತ್ತೊಂದು ಯುವತಿಯ ಜೊತೆ ಗೋಪಿಗೆ ಲವ್​ ಆಗಿದೆ. ಆ ಯುವತಿಯ ಜೊತೆ ಮದುವೆಗೆ ಮುಂದಾಗಿದ್ದ. ಆದರೆ ಪತ್ನಿ ಚಂದನಾಬಾಯಿ ಈ ಎರಡನೇ ಮದುವೆಗೆ ವಿರೋಧಿಸಿದ್ದಾರೆ. ವಿರೋಧಿಸಿದ ಪತ್ನಿಯನ್ನು ತನ್ನ ಮನೆಯಲ್ಲೇ ಕುತ್ತಿಗೆ ಹಿಸುಕಿ ಗೋಪಿ ಹತ್ಯೆ ಮಾಡಿದ್ದಾನೆ. ಹತ್ಯೆ ಮಾಡಿದಲ್ಲದೇ ಕೊಲೆಗೂ ತನಗೂ ಸಂಬಂಧವಿಲ್ಲದಂತೆ ಹೈಡ್ರಾಮಾ ಮಾಡಿದ್ದಾನೆ. ಆದರೆ ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಅಸಲಿ ಬಣ್ಣ ಬಯಲಾಗಿದೆ. ಇದೀಗ ಪೊಲೀಸರು ಗೋಪಿಯನ್ನು ಬಂಧಿಸಿದ್ದಾರೆ. ಗೋಪಿ ವಿಕೃತಿ ಪ್ರೀತಿಗೆ ಇಬ್ಬರು ಗಂಡು ಮಕ್ಕಳು ಅನಾಥವಾಗಿವೆ.

ಬೈಕ್ ಸವಾರ ಸಾವು

ನಿಯಂತ್ರಣ ತಪ್ಪಿ ಡಿವೈಡರ್​​ಗೆ ಬೈಕ್ ಸವಾರ ಡಿಕ್ಕಿ ಹೊಡೆದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಟೌನ್ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ. ಹೊಸೂರಿನ ಆರೋಗ್ಯ ರಾಜ್(26) ಮೃತ ವ್ಯಕ್ತಿ.

ಇದನ್ನೂ ಓದಿ: ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ

ಇಂದು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತ ಆರೋಗ್ಯ ರಾಜ್​​ ವಿಪ್ರೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್​​ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RBI Office Attendant Recruitment 2026: 572 Posts for 10th Pass | Apply Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶವನ್ನು ಒದಗಿಸಿದೆ. 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 15rರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 4 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

ಒಟ್ಟು 572 ಹುದ್ದೆಗಳಲ್ಲಿ 291 ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ, 83 ಒಬಿಸಿಗಳಿಗೆ, 51 ಇಡಬ್ಲ್ಯೂಎಸ್‌ಗೆ, 58 ಎಸ್‌ಟಿಗಳಿಗೆ ಮತ್ತು 89 ಎಸ್‌ಸಿಗಳಿಗೆ ಮೀಸಲಾಗಿವೆ. ಈ ಹುದ್ದೆಗಳನ್ನು ದೆಹಲಿ, ಮುಂಬೈ, ಕೋಲ್ಕತ್ತಾ, ಕಾನ್ಪುರ-ಲಕ್ನೋ, ಜೈಪುರ, ಪಾಟ್ನಾ, ಗುವಾಹಟಿ ಮತ್ತು ಹೈದರಾಬಾದ್ ಸೇರಿದಂತೆ ದೇಶಾದ್ಯಂತ ಬಹು ಕೇಂದ್ರಗಳಲ್ಲಿ ಭರ್ತಿ ಮಾಡಲಾಗುತ್ತದೆ.

ಅರ್ಜಿ ಪ್ರಕ್ರಿಯೆ:

ಈ ನೇಮಕಾತಿಗಾಗಿ, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ opportunities.rbi.org.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 4, 2026 ಆಗಿದ್ದು, ಈ ದಿನಾಂಕದವರೆಗೆ ಅರ್ಜಿ ಶುಲ್ಕವನ್ನು ಪಾವತಿಸಬಹುದು.

ಅರ್ಹತೆ ಏನು?

ಈ ನೇಮಕಾತಿಯಲ್ಲಿ ಭಾಗವಹಿಸಲು, ಅಭ್ಯರ್ಥಿಗಳು 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅವರು ಜನವರಿ 1, 2026 ರೊಳಗೆ ಪದವಿಪೂರ್ವ ವಿದ್ಯಾರ್ಥಿಗಳಾಗಿರಬೇಕು. ಸ್ನಾತಕೋತ್ತರ ಪದವಿ ಅಥವಾ ಅದಕ್ಕಿಂತ ಹೆಚ್ಚಿನ ಪದವಿ ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಹರಲ್ಲ ಎಂಬುದನ್ನು ಗಮನಿಸುವುದು ಮುಖ್ಯ.

ವಯಸ್ಸಿನ ಮಿತಿ ಎಷ್ಟು?

ವಯಸ್ಸು 18 ರಿಂದ 25 ವರ್ಷಗಳ ನಡುವೆ ಇರಬೇಕು, ಅಂದರೆ, ಫೆಬ್ರವರಿ 2, 1996 ಕ್ಕಿಂತ ಮೊದಲು ಅಥವಾ ಫೆಬ್ರವರಿ 1, 2003 ರ ನಂತರ ಜನನವಾಗಿರಬಾರದು. SC ಮತ್ತು ST ವರ್ಗಗಳಿಗೆ 5 ವರ್ಷಗಳ ಗರಿಷ್ಠ ವಯೋಮಿತಿ ಸಡಿಲಿಕೆ ಮತ್ತು OBC ವರ್ಗಗಳಿಗೆ 3 ವರ್ಷಗಳ ಗರಿಷ್ಠ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕಗಳು:

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಕ್ಕೆ ಅರ್ಜಿ ಶುಲ್ಕ 450 ರೂ., ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಕೇವಲ 50 ರೂ.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಸಂಬಳ ಎಷ್ಟು ಸಿಗುತ್ತದೆ?

ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನ 24,250 ರೂ. ನೀಡಲಾಗುವುದು. ಎಲ್ಲಾ ಭತ್ಯೆಗಳನ್ನು ಒಳಗೊಂಡಂತೆ, ಆರಂಭಿಕ ಒಟ್ಟು ವೇತನವು ತಿಂಗಳಿಗೆ ಸುಮಾರು 46,029 ರೂ. ಆಗಿರುತ್ತದೆ. ಬ್ಯಾಂಕ್ ವಸತಿ ಲಭ್ಯವಿಲ್ಲದಿದ್ದರೆ ಹೆಚ್ಚುವರಿಯಾಗಿ ಶೇ. 15 HRA ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಆಯ್ಕೆಯು ಮೊದಲು ಆನ್‌ಲೈನ್ ಲಿಖಿತ ಪರೀಕ್ಷೆಯನ್ನು ಆಧರಿಸಿರುತ್ತದೆ, ಇದು ತಾರ್ಕಿಕತೆ, ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅರಿವು ಮತ್ತು ಸಂಖ್ಯಾತ್ಮಕ ಸಾಮರ್ಥ್ಯದಿಂದ 120 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯು 90 ನಿಮಿಷಗಳ ಕಾಲ ಇರುತ್ತದೆ. ಯಶಸ್ವಿ ಅಭ್ಯರ್ಥಿಗಳನ್ನು ಪ್ರಾದೇಶಿಕ ಭಾಷಾ ಪರೀಕ್ಷೆಗೆ ಕರೆಯಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಸ್ಸಾಂ ಮೂಲದ ಕಾರ್ಮಿಕನ ಸಾವಿಗೆ ಸಿನಿಮೀಯ ಟ್ವಿಸ್ಟ್​​: ಮಗನಿಂದಲೇ ತಂದೆಯ ಹತ್ಯೆ! – Kannada News | Drunken Brawl Leads to Son Killing Father in Madikeri

ಮಡಿಕೇರಿ, ಜನವರಿ 15: ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮದಲ್ಲಿ ಭಾನುವಾರ ಅಸಹಜ ಸಾವಿನ ಪ್ರಕರಣವೊಂದು ನಡೆದಿತ್ತು. ಅಸ್ಸಾಂ ಮೂಲದ ಕಾರ್ಮಿಕ ಬೂನೋ ಎಂಬಾತ ಮೃತಪಟ್ಟಿದ್ದು, ಬಿದ್ದು ಗಾಯಗೊಂಡ ಕಾರಣ ಆತ ಇಹಲೋಕ ತ್ಯಜಿಸಿರೋದಾಗಿ ಹೇಳಲಾಗಿತ್ತು. ಹೀಗಾಗಿ ಆತನ ಅಂತ್ಯ ಸಂಸ್ಕಾರವನ್ನೂ ಮಕ್ಕಳು ಮತ್ತು ಆತ ಕೆಲಸಕ್ಕಿದ್ದ ಎಸ್ಟೇಟ್ ಮಾಲೀಕ ಸೇರಿ ನಡೆಸಿದ್ದರು. ಆದರೆ ಕಾರ್ಮಿಕನ ಸಾವಿನ ಬಗ್ಗೆ ಊರಿನವರಿಗೆ ಮೂಡಿದ್ದ ಅನುಮಾನವೀಗ ಇಡೀ ಪ್ರಕರಣದ ದಿಕ್ಕನ್ನೇ ಬದಲಾಯಿಸಿದೆ. ಬೂನೋದು ಅಸಹಜ ಸಾವಲ್ಲ ಬದಲಾಗಿ ಮರ್ಡರ್​​ ಎಂಬ ಸತ್ಯ ಬಯಲಾಗಿದೆ.

ಬೂನೋ ಪುತ್ರ ಪ್ರಶಾಂತ್ ಎಂಬಾತನೇ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ತಂದೆಯನ್ನು ಕೊಂದಿದ್ದ ಆತ ಘಟನೆಯನ್ನು ಅಸಹಜ ಸಾವು ಎಂಬಂತೆ ಬಿಂಬಿಸಿ ಎಲ್ಲರನ್ನು ನಂಬಿಸಿದ್ದ. ಎಸ್ಟೇಟ್ ಮಾಲೀಕರ ಜೊತೆ ಸೇರಿ ಮಡಿಕೇರಿ ನಗರದ ಹಿಂದೂ ರುದ್ರ ಭೂಮಿಯಲ್ಲಿ ತಂದೆಯ ಅಂತ್ಯ ಸಂಸ್ಕಾರವನ್ನೂ ನಡೆಸಿದ್ದ. ಇದಕ್ಕೆ ಆತನ ಸಹೋದರ ಕೂಡ ನೆರವಾಗಿದ್ದ ಎನ್ನಲಾಗಿದೆ. ಆದ್ರೆ ಬೂನೋ ಸಾವಿನ ಸುತ್ತ ಹಲವು ಅನುಮಾನಗಳಿದ್ದವು. ಹೀಗಾಗಿ ಈ ಕುರಿತು ಊರಿನ ಕೆಲವರು ಮಡಿಕೇರಿ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಂಕಿತರನ್ನ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕುಡಿದ ಮತ್ತಿನಲ್ಲಿ ತಾನೇ ತಂದೆಯನ್ನು ಕೊಲೆ ಮಾಡಿರೋದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಸೀನಿಯರ್​​ನನ್ನೇ ಕೊಂದ ಜೂನಿಯರ್; ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ಜನವರಿ 11ರ ಭಾನುವಾರ ರಾತ್ರಿ ಕುಡಿದ ಮತ್ತಿನಲ್ಲಿ ತೋಟದ ಮನೆಯಲ್ಲಿ ತಂದೆ ಮತ್ತು ಮಗನ ಮಧ್ಯೆ ಗಲಾಟೆಯಾಗಿದೆ. ಈ ಸಂದರ್ಭ ಗಲಾಟೆ ತಾರಕಕ್ಕೇರಿ ಮಗ ಪ್ರಶಾಂತ್​​ ದೊಣ್ಣೆಯಿಂದ ತಂದೆ ಬೂನೋನ ತಲೆಗೆ ಹೊಡೆದಿದ್ದಾನೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೂನೋ ಅಲ್ಲೇ ಸಾವನ್ನಪ್ಪಿದ್ದಾನೆ. ತಕ್ಷಣವೇ ಉಳಿದ ಕಾರ್ಮಿಕರು ವಿಷಯವನ್ನು ಎಸ್ಟೇಟ್ ಮಾಲೀಕ ದೇವಯ್ಯನಿಗೆ ತಿಳಿಸಿದ್ದು, ಬಳಿಕ ದೇಹವನ್ನು ಹಿಂದೂ ರುದ್ರಭೂಮಿಗೆ ತೆಗೆದುಕೊಂಡು ಹೋಗಿ ಸುಟ್ಟು ಆರೋಪಿಗಳು ಸಾಕ್ಷ್ಯ ನಾಶ ಮಾಡಿರೋದು ತನಿಖೆ ವೇಳೆ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ಆರೋಪಿ ಪ್ರಶಾಂತ್, ಎಸ್ಟೇಟ್ ಮಾಲಿಕ ದೇವಯ್ಯನನ್ನ ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ರಾಜ್ಯಸಭೆಯಲ್ಲಿ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕನ್ನಡ ಚಿತ್ರರಂಗದ ಬೆಂಬಲ ಇಲ್ವಾ? – Kannada News | Jaggesh gives update about steps taken by Central Government to curb Movie Piracy

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಪೈರಸಿ (Piracy) ವಿರುದ್ಧ ಧ್ವನಿ ಎತ್ತಿದ್ದಾರೆ. ರಾಜ್ಯಸಭೆಯಲ್ಲಿ ಅವರು ಈ ಬಗ್ಗೆ ಚರ್ಚಿಸಿದ್ದಾರೆ. ಅದರ ಫಲವಾಗಿ ಸರ್ಕಾರದಿಂದ ಭರವಸೆ ಸಿಕ್ಕಿದೆ. ಆ ಬಗ್ಗೆ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗಕ್ಕೂ ಪೈರಸಿ ಎಂಬುದು ಮಾರಕ ಆಗಿದೆ. ಇದರ ವಿರುದ್ಧ ಹೋರಾಡಲು ಕನ್ನಡ ಚಿತ್ರರಂಗದ ಯಾರೂ ಕೂಡ ತಮಗೆ ಬೆಂಬಲ ನೀಡಲಿಲ್ಲ ಎಂದು ಜಗ್ಗೇಶ್ (Jaggesh) ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಮಾಡಿದ ಪೋಸ್ಟ್ ಈ ರೀತಿ ಇದೆ..

‘ರಾಜ್ಯಸಭೆಯಲ್ಲಿ ಸಿನಿಮಾ #piracy ಕಳ್ಳರ ಮಟ್ಟಹಾಕಲು ಶೂನ್ಯ ವೇಳೆಯಲ್ಲಿ ರಾಷ್ಟ್ರಸರ್ಕಾರವನ್ನು ಒತ್ತಾಯ ಮಾಡಿದ ಪ್ರತಿಫಲಕ್ಕೆ ರಾಷ್ಟ್ರಸರ್ಕಾರ ಒಪ್ಪಿಗೆ ಸೂಚಿಸಿ ಆಧುನಿಕ ತಂತ್ರಜ್ಞಾನ ಬಳಸಿ ಅಂತಹ ಸಿನಿಮಾ ಕಳ್ಳರನ್ನು ಕಂಡುಹಿಡಿದು ದಂಡ, ಜೈಲು ಕ್ರಮ ತೆಗೆದುಕೊಳ್ಳುವ ಹಾಗು ಸಿನಿಮಾ ಪೈರಸಿ app ಬಂದ್ ಮಾಡುವ ನಿರ್ಧಾರ ಮಾಡಿದ್ದು, ವೈಯಕ್ತಿಕವಾಗಿ ಹಾಗು ಭಾರತೀಯ ಚಿತ್ರರಂಗದ ಪರ ಹರ್ಷ ವ್ಯಕ್ತಪಡಿಸುವೆ.’

‘ಚಿತ್ರರಂಗದ ಅನ್ನ 45 ವರ್ಷದಿಂದ ತಿಂದು ಬೆಳೆದ ನಾನು ಅದರ ಋಣ ತೀರಿಸುವ ನನ್ನ ಯತ್ನಕ್ಕೆ ಚಿತ್ರರಂಗದ ಯಾರೊಬ್ಬರೂ ಬೆಂಬಲ ವ್ಯಕ್ತಪಡಿಸಲಿಲ್ಲ (ಭಾಮಾ ಹರೀಶ್, ಬಣಕಾರ್, ಯೂಟೂಬ್ ಅನಿಲ್ ಯಾದವ್ ಗೆಳೆಯರು ಹಾಗು ಕೋಣ ನಿರ್ಮಾಪಕರ ಸಹಕಾರ ಹೊರತುಪಡಿಸಿ) ಎಂಬ ದುಃಖ ಕಾಡಿತು. ಆದರೂ ಪರವಾಗಿಲ್ಲ ನನ್ನ ಜೀವನದ ಪ್ರತಿ ಘಟ್ಟದಲ್ಲಿಯೂ ನಾನು ಏಕಾಂಗಿ ಹೋರಾಟ ಮಾಡಿ ನನ್ನ ಕನ್ನಡದ ಜನರ ಆಶೀರ್ವಾದದಿಂದ ಗಟ್ಟಿನೆಲೆ ಪಡೆದು ಕಂಬದಂತೆ ನಿಂತಿರುವೆ.’

‘ನನ್ನ ಕೊನೆ ಉಸಿರಿನವರೆಗೂ ಉತ್ತಮ ಕಾರ್ಯಕ್ಕೆ ರಾಯರ ಆಶೀರ್ವಾದ ಪಡೆದು ನುಗ್ಗಿ ಕಾರ್ಯ ಮಾಡಿ ದೇವರು ಹಾಗು ದೇವರ ರೂಪದ ಜನರು ಮೆಚ್ಚುವಂತೆ ಬಾಳುವೆ. ಹರಸಿ ಹಾರೈಸಿ ಕನ್ನಡ ಚಿತ್ರರಂಗದ ಉಳಿವಿಗೆ’ ಎಂದು ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಅವರ ಕಾರ್ಯಕ್ಕೆ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?

ಪೈರಸಿಯಿಂದಾಗಿ ಕನ್ನಡದ ಎಷ್ಟೋ ಸಿನಿಮಾಗಳಿಗೆ ತೊಂದರೆ ಆಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆದ ‘ದಿ ಡೆವಿಲ್’ ಸಿನಿಮಾ ಪೈರಸಿ ಆಯಿತು. ಅದರಿಂದ ಚಿತ್ರತಂಡಕ್ಕೆ ನಷ್ಟ ಆಯಿತು. ಅಲ್ಲದೇ, ‘ಮಾರ್ಕ್’ ಮತ್ತು ‘45’ ಸಿನಿಮಾಗಳಿಗೂ ಪೈರಸಿಯಿಂದ ತೊಂದರೆ ಆಗಿದೆ. ಸಿನಿಮಾ ಬಿಡುಗಡೆಗೂ ಮುನ್ನ ಪೈರಸಿ ವಿರುದ್ಧ ಕಿಚ್ಚ ಸುದೀಪ್ ಅವರು ಗುಡುಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ – Kannada News | Magh Mela 2026 Over 36 lakh devotees take dip at Sangam Watch Drone Video

ಪ್ರಯಾಗರಾಜ್, ಜನವರಿ 15: ಮಕರ ಸಂಕ್ರಾಂತಿಯ (Makara Sankranti) ಸಂದರ್ಭದಲ್ಲಿ ಇಂದು ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಾಘ ಮೇಳದಲ್ಲಿ (Magh Mela) 36 ಲಕ್ಷಕ್ಕೂ ಹೆಚ್ಚು ಭಕ್ತರು ಗಂಗಾ ಮತ್ತು ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿಯಿಂದ ತೀರ್ಥ ಸ್ನಾನ ಪ್ರಾರಂಭವಾಯಿತು. ಇಂದು ಬೆಳಿಗ್ಗೆ 10 ಗಂಟೆಯ ಹೊತ್ತಿಗೆ 36 ಲಕ್ಷಕ್ಕೂ ಹೆಚ್ಚು ಜನರು ಧಾರ್ಮಿಕ ಸ್ನಾನ ಮಾಡಿದರು ಎಂದು ಮಾಘ ಮೇಳದ ಆಡಳಿತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕರ ಸಂಕ್ರಾಂತಿಯ ಶುಭ ಅವಧಿ ದಿನವಿಡೀ ಮುಂದುವರಿದಿರುವುದರಿಂದ, ಇಂದು ಸಂಜೆಯ ವೇಳೆಗೆ ಯಾತ್ರಾರ್ಥಿಗಳ ಸಂಖ್ಯೆ 1 ಕೋಟಿ ದಾಟುವ ನಿರೀಕ್ಷೆಯಿದೆ. ಮಾಘ ಮೇಳದ ಡ್ರೋನ್ ದೃಶ್ಯಾವಳಿ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

U19 World Cup: ಮೊದಲ ಪಂದ್ಯದಲ್ಲೇ 16 ರನ್​ಗೆ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್ – Kannada News | U19 World Cup 2026: Henil Patel’s 5 Wicket Haul Crushes USA in India’s Dominant Opener

ಅಂಡರ್-19 ವಿಶ್ವಕಪ್‌ ಪಂದ್ಯಾವಳಿ ಇಂದಿನಿಂದ ಆರಂಭವಾಗಿದೆ. ಭಾರತ ಯುವ ಪಡೆ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಮೆರಿಕ ಕೇವಲ 107 ರನ್​ಗಳಿಗೆ ಆಲೌಟ್ ಆಯಿತು. ಎದುರಾಳಿ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ಯುವ ವೇಗಿ ಹೆನಿಲ್ ಪಟೇಲ್ ತಮ್ಮ ಮೊದಲ ಪಂದ್ಯದಲ್ಲೇ ಅದ್ಭುತ ಪ್ರದರ್ಶನ ನೀಡಿದರು. ಕೇವಲ 16 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸಿದರು.

ಬೌಲಿಂಗ್‌ಗೆ ಅನುಕೂಲಕರವಾದ ಬುಲವಾಯೊ ಪಿಚ್‌ನಲ್ಲಿ ವೇಗಿ ಹೆನಿಲ್ ಪಟೇಲ್ ತಮ್ಮ ಮೊದಲ ಓವರ್‌ನಲ್ಲೇ ಭೀಕರ ದಾಳಿ ನಡೆಸಿದರು. ಆರಂಭಿಕ ಅಮರಿಂದರ್ ಗಿಲ್ ಅವರನ್ನು ಔಟ್ ಮಾಡಿದ ಹೆನಿಲ್ ನಂತರ ಅರ್ಜುನ್ ಮಹೇಶ್ ಅವರ ವಿಕೆಟ್ ಪಡೆದರು. ಆ ಬಳಿಕ ಯುಎಸ್ ನಾಯಕ ಉತ್ಕರ್ಷ್ ಶ್ರೀವಾಸ್ತವ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗಟ್ಟಿದರು. ತಮ್ಮ ಮೊದಲ ಸ್ಪೆಲ್‌ನಲ್ಲಿ ಮೂರು ವಿಕೆಟ್‌ಗಳನ್ನು ಪಡೆದ ಹೆನಿಲ್, 35 ನೇ ಓವರ್‌ನಲ್ಲಿ ಸತತ ಎಸೆತಗಳಲ್ಲಿ ಎರಡು ವಿಕೆಟ್‌ಗಳೊಂದಿಗೆ ಐದು ವಿಕೆಟ್‌ಗಳನ್ನು ಪೂರ್ಣಗೊಳಿಸಿದರು.

Source link

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ – Kannada News | Makar Sankranti 2026: Sun Rays Touching On Gavi Gangadhareshwara Temple in, here Is Live Video of sun light on shivalinga

ಬೆಂಗಳೂರು, (ಜನವರಿ 15): ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಸೂರ್ಯ ಕಿರಣವು ಶಿವ ಲಿಂಗವನ್ನು ಸ್ಪರ್ಶಿಸಲಿದ್ದು, ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಸೂರ್ಯನ ಕಿರಣಗಳು ನಂದಿಯ ತಲೆಯ ಮಧ್ಯಭಾಗದ ಮೂಲಕ ಹಾದು ಗುಹೆಯೊಳಗಿರುವ ಶಿವಲಿಂಗದ ತಳಭಾಗವನ್ನು ಸ್ಪರ್ಶಿಸುವ ನೇರಪ್ರಸಾರ ಇಲ್ಲಿದೆ ನೋಡಿ.

Source link

ಏಕದಿನ ಸರಣಿ ಬಳಿಕ ಟಿ20 ಸರಣಿಯಿಂದಲೂ ವಾಷಿಂಗ್ಟನ್ ಸುಂದರ್ ಔಟ್ – Kannada News | Washington Sundar Injured: Out of NZ T20s, Raises T20 World Cup Concerns for India

ವಾಷಿಂಗ್ಟನ್ ಸುಂದರ್ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿರುವ ಕಾರಣ, ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರನ್ನು ಅಪಾಯಕ್ಕೆ ಸಿಲುಕಿಸಲು ತಂಡದ ಆಡಳಿತ ಮಂಡಳಿ ಬಯಸಲಿಲ್ಲ ಎಂದು ವರದಿಯಾಗಿದೆ. ಆರಂಭದಲ್ಲಿ, ಅವರು ಸರಣಿಯ ನಂತರದ ಪಂದ್ಯಗಳಲ್ಲಿ ಆಡಬಹುದು ಎಂದು ಆಶಿಸಲಾಗಿತ್ತು, ಆದರೆ ಈಗ ಅವರು ಈ ಸರಣಿಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಟಿ20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಅವರು ನಂತರದ ಹಂತಗಳಲ್ಲಿ ತಂಡವನ್ನು ಸೇರುವ ಸಾಧ್ಯತೆಯಿದೆ.

Source link

ರಾಮನಗರದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ ಮುಸ್ಲಿಂ ಶಾಸಕ, ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು – Kannada News | Congress Muslim MLA Iqbal Hussain performs Pooja to Sriram During ramotsav at ramanagara

ರಾಮನಗರ, (ಜನವರಿ 15): ರೇಷ್ಮೆನಗರಿ ರಾಮನಗರದಲ್ಲಿ (Ramanagara( ನಾಲ್ಕು ದಿನ ರಾಮೋತ್ಸವ (ramotsav) ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ಇಂದು (ಜನವರಿ 15( ಮಕರ ಸಂಕ್ರಾಂತಿ ದಿನದಂದು ಶ್ರೀ ರಾಮತಾರಕ ಜಪ‌ ಯಜ್ಞ ‌ಪೂಜೆ ಮಾಡಲಾಗಿದೆ. ಅಚ್ಚರಿ ಅಂದ್ರೆ ಈ ಪೂಜೆಯಲ್ಲಿ ಮುಸ್ಲಿಂ ಶಾಸಕ ಇಕ್ಬಾಲ್ ಹುಸೇನ್ (Congress MLA Iqbal Hussain) ಪಾಲ್ಗೊಂಡಿದ್ದು, ರಾಮನಿಗೆ ಪೂಜೆ ಸಲ್ಲಿಸಿ ಗಮನಸೆಳೆದಿದ್ದಾರೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಇತಿಹಾಸದ ಪುಟದಲ್ಲಿ ಬರೆಯುವ ರಾಮೋತ್ಸವ ಕಾರ್ಯಕ್ರಮವನ್ನು ಜಾತ್ಯತೀತವಾಗಿ ಮಾಡುತ್ತಿದ್ದೇವೆ. ಅದಕ್ಕಾಗಿ ರಾಮತಾರಕ ಯಜ್ಞ ಪೂಜೆಯನ್ನು ಹಿಂದೂಧರ್ಮ ಕಾಪಾಡಲೂ ಮಾಡಿದ್ದೇವೆ. ಜಗತ್ತಿನಲ್ಲಿ ದೇವನೊಬ್ಬ ನಾಮ ಹಲವು. ಎಲ್ಲ ಧರ್ಮವನ್ನು ಗೌರವಿಸಬೇಕು. ಹೀಗಾಗಿ ಕ್ಷೇತ್ರದ ಶಾಸಕನಾಗಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ರಾಮನಗರಕ್ಕೆ ಸಾಕಷ್ಟು ಇತಿಹಾಸ ಇದೆ. ರಾಮ ವನವಾಸದ ಕಾಲದಲ್ಲಿ ರಾಮನಗರಕ್ಕೆ ಬಂದಿದ್ದ.ಇತಿಹಾಸವುಳ್ಳ ಪವಿತ್ರ ಭೂಮಿ. ಹಿಂದೂ ಧರ್ಮದ ಸಂಪತ್ತು ಇದು ಯುವ ಪೀಳಿಗೆಗೆ ತಿಳಿಸಬೇಕು. ಆಗ ಮಾತ್ರ ಹಿಂದೂಧರ್ಮದ ಸಂಪತ್ತು ಉಳಿಸಿಕೊಳ್ಳಲು ಸಾಧ್ಯ. ಎಲ್ಲ ದೇಹದಲ್ಲಿ ಒಂದೇ ರಕ್ತ. ನಾನೂ ಮಸೀದಿಗೂ ಹೋಗುತ್ತೇನೆ. ಹಿಂದೂ ದೇವರಿಗೂ ಪೂಜೆ ಮಾಡುತ್ತೇನೆ ಎಂದು ಹೇಳಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version