ದೇಶಕ್ಕೆ ಅಪ್ಪಳಿಸುತ್ತಿದೆ ಆರ್ಥಿಕ ಚಂಡಮಾರುತ; ಕುಸಿಯಲಿದೆ ಅರ್ಥ ವ್ಯವಸ್ಥೆ: ರಾಹುಲ್ ಗಾಂಧಿ ಆತಂಕ – Kannada News | Rahul Gandhi Warns India of “Economic Storm” Amid Fuel Price Hikes, Blames Modi Govt

ನವದೆಹಲಿ, ಮೇ 19: ಐದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತವು ಹಿಂದೆಂದೂ ಕಾಣದ ದೊಡ್ಡ “ಆರ್ಥಿಕ ಚಂಡಮಾರುತ” (Economic Storm) ಎದುರಿಸುವ ಹಂತದಲ್ಲಿದೆ ಎಂದು ಎಚ್ಚರಿಸಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ರಾಯ್‌ಬರೇಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೂಪಿಸಿರುವ ಆರ್ಥಿಕ ನೀತಿಗಳು ಸಂಪೂರ್ಣವಾಗಿ ಕುಸಿಯಲಿದ್ದು, ಅದರ ಭೀಕರ ಪರಿಣಾಮವನ್ನು ಸಾಮಾನ್ಯ ನಾಗರಿಕರು ಅನುಭವಿಸಬೇಕಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಸುದ್ದಿಯ ಮುಖ್ಯಾಂಶಗಳು

  • ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿರುವ ಆರ್ಥಿಕ ನೀತಿಗಳು ಅದಾನಿ, ಅಂಬಾನಿಯಂಥವರಿಗೆ ಉಪಯೋಗವಾಗುವಂತಿವೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
  • ಸರ್ಕಾರ ರೂಪಿಸಿದ ಆರ್ಥಿಕ ರಚನೆಗಳು ಹೆಚ್ಚು ದಿನ ಉಳಿಯುವುದಿಲ್ಲ. ದುರದೃಷ್ಟಕ್ಕೆ ಈ ಕುಸಿತವು ಅದಾನಿಯಂತಹ ಉದ್ಯಮಿಗಳಿಗೆ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ.
  • ವಿದೇಶೀ ಪ್ರವಾಸ ಮಾಡಬೇಡಿ ಎಂದು ಜನಸಾಮಾನ್ಯರಿಗೆ ಹೇಳುವ ಮೋದಿಯವರು ತಾವೇ ದೇಶ ದೇಶ ಸುತ್ತುತ್ತಿರುತ್ತಾರೆ ಎಂದು ರಾಹುಲ್ ಗಾಂಧಿ ಸಿಡಿಗುಟ್ಟಿದ್ದಾರೆ.

ಕೋಟ್ಯಾಧಿಪತಿಗಳ ಪರವಾದ ಆರ್ಥಿಕ ರಚನೆ

ಕೇಂದ್ರದ ಆರ್ಥಿಕ ನೀತಿಗಳು ಕೇವಲ ಅದಾನಿ ಮತ್ತು ಅಂಬಾನಿಯಂತಹ ಆಯ್ದ ಕೆಲವು ಕೋಟ್ಯಧಿಪತಿ ಉದ್ಯಮಿಗಳಿಗೆ ಮಾತ್ರ ಪ್ರಯೋಜನವನ್ನು ನೀಡುವಂತೆ ವ್ಯವಸ್ಥಿತವಾಗಿ ರೂಪಿಸಲ್ಪಟ್ಟಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ?

“ಮೋದಿ ಜಿ ಬದಲಾಯಿಸಿರುವ ಈ ಆರ್ಥಿಕ ರಚನೆಯು ಹೆಚ್ಚು ದಿನ ಉಳಿಯುವುದಿಲ್ಲ; ಇದು ಸಂಪೂರ್ಣವಾಗಿ ಕುಸಿಯುವುದು ನಿಶ್ಚಿತ. ಆದರೆ, ಈ ಕುಸಿತದ ಹೊರೆ ಸಾಮಾನ್ಯ ಜನರಿಗೆ ಆಗುತ್ತದೆಯೇ ಹೊರತು ಅಂಬಾನಿಯಂಥವರಿಗಲ್ಲ” ಎಂದು ಅವರು ಹೇಳಿದ್ದಾರೆ.

ಸಾಮಾನ್ಯ ಜನರಿಗೆ ಆಘಾತ, ಶ್ರೀಮಂತರು ಸುರಕ್ಷಿತ

ಮುಂಬರುವ ಆರ್ಥಿಕ ಆಘಾತವು ಕಾರ್ಪೊರೇಟ್ ದಿಗ್ಗಜರನ್ನಾಗಲಿ ಅಥವಾ ರಾಜಕೀಯ ನಾಯಕರನ್ನಾಗಲಿ ಮುಟ್ಟುವುದಿಲ್ಲ. ಅವರು ತಮ್ಮ ಅರಮನೆಗಳಲ್ಲಿ ಸುರಕ್ಷಿತವಾಗಿ ಇರುತ್ತಾರೆ. ಆದರೆ ಇದರ ನೇರ ಹೊಡೆತ ಬೀಳುವುದು ದೇಶದ ಯುವಕರು, ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿಗಳ ಮೇಲೆ. ವಿಶೇಷವಾಗಿ ಉತ್ತರ ಪ್ರದೇಶದ ಜನತೆ ಮತ್ತು ಯುವಸಮುದಾಯ ಇದರ ಸಂಪೂರ್ಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಪ್ರಧಾನಿ ಮೋದಿ ವಿದೇಶಿ ಪ್ರವಾಸಗಳ ವಿರುದ್ಧ ವಾಗ್ದಾಳಿ

ದೇಶದ ಆಂತರಿಕ ರಚನಾತ್ಮಕ ಬಿಕ್ಕಟ್ಟುಗಳನ್ನು ಪರಿಹರಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. “ಮೋದಿ ಅವರು ದೇಶದ ಜನರಿಗೆ ವಿದೇಶಿ ಪ್ರವಾಸಗಳನ್ನು ಕಡಿಮೆ ಮಾಡಲು ಬುದ್ಧಿವಾದ ಹೇಳುತ್ತಾರೆ, ಆದರೆ ಸ್ವತಃ ತಾವೇ ಜಗತ್ತಿನಾದ್ಯಂತ ಸದಾ ಸುತ್ತುತ್ತಿರುತ್ತಾರೆ” ಎಂದು ಟೀಕಿಸಿದ ರಾಹುಲ್, ಮುಂಬರುವ ದಿನಗಳಲ್ಲಿ ದೇಶವು ಕಠಿಣ ಪರಿಸ್ಥಿತಿಯನ್ನು ಎದುರಿಸಲಿದ್ದು, ಕಳೆದ ಹಲವು ವರ್ಷಗಳಲ್ಲೇ ಕಾಣದಷ್ಟು ತೀವ್ರ ಸ್ವರೂಪದ ಆರ್ಥಿಕ ಆಘಾತ ಎದುರಾಗಲಿದೆ ಎಂದಿದ್ದಾರೆ.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ (West Asian crisis) ಕಾರಣದಿಂದಾಗಿ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರುಪೇರಾಗಿದ್ದು, ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿದೆ. ಕಮರ್ಷಿಯಲ್ ಎಲ್​ಪಿಜಿ ದರಗಳು ಬಹಳಷ್ಟು ಏರಿಕೆ ಆಗಿದೆ. ಗೃಹಬಳಕೆ ಎಲ್​ಪಿಜಿ ದರವೂ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಇದೇ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ, ಇದು “ಮೋದಿ ಸರ್ಕಾರವೇ ಸೃಷ್ಟಿಸಿದ ಬಿಕ್ಕಟ್ಟು” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪ್ರವಾಸಿಗರಿಗೆ ನಿರಾಸೆ: ಹವಾಮಾನ ವೈಪರಿತ್ಯ ಹಿನ್ನೆಲೆ ಉತ್ತರ ಕನ್ನಡದಲ್ಲಿ ಜಲಸಾಹಸ ಕ್ರೀಡೆಗೆ ನಿರ್ಬಂಧ – Kannada News | Monsoon Impact: Uttara Kannada Bans Water Sports and Tourist Boating for Safety

ಕಾರವಾರ, ಮೇ 19: ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನೀರಲ್ಲಿ ಮೋಜು ಮಸ್ತಿ ಮಾಡಲೆಂದೇ ಜಿಲ್ಲೆಗೆ ಹೆಚ್ಚಾಗಿ ಆಗಮಿಸುತ್ತಿದ್ದ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಬೀಚ್​​ನಲ್ಲಿ ಪ್ರೀವೆಡ್ಡಿಂಗ್ ಸೆಟ್ ಅಳವಡಿಕೆಗೂ ಬ್ರೇಕ್​​ ಹಾಕಲಾಗಿದೆ.

ಮುಖ್ಯಾಂಶಗಳು

  • ಹವಾಮಾನ ವೈಪರಿತ್ಯ ಹಿನ್ನೆಲೆ ಜಲಸಾಹಸ ಕ್ರೀಡೆಗಿಲ್ಲ ಅವಕಾಶ​​
  • ಮಳೆಗಾಲ ಮುಕ್ತಾಯವರೆಗೂ ಜಲಸಾಹಸ ಕ್ರೀಡೆಗೆಗಳಿಗೆ ನಿರ್ಬಂಧ
  • ಜಲಾಸಾಹಸ ಕ್ರಿಡೆ ನಿರ್ವಹಣೆ & ಮೇಲುಸ್ತುವಾರಿ ಸಮಿತಿ ಆದೇಶ

ಆದೇಶದಲ್ಲಿ ಏನಿದೆ?

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮುಖ್ಯ ಬೀಚ್, ಓಂ ಬೀಚ್, ಕುಡ್ಲೆ ಬೀಚ್, ಹಾಫ್‌ಮೂನ್​​ ಬೀಚ್, ಪ್ಯಾರಡೈಸ್ ಬೀಚ್, ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಬೀಚ್ ಮತ್ತು ಕಾರವಾರ ಬೀಚ್​ಗಳಲ್ಲಿ ಪ್ರವಾಸಿ ಬೋಟಿಂಗ್ ಹಾಗೂ ಜಲಸಾಹಸ ಕ್ರೀಡೆ ಚಟುವಟಿಕೆಗೆ ಪ್ರವಾಸೋದ್ಯಮ ಇಲಾಖೆಯಿಂದ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು. ಮುರ್ಡೇಶ್ವರದ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ ಚಟುವಟಿಕೆ ನಡೆಸಲೂ ಅನುಮತಿ ನೀಡಲಾಗಿತ್ತು. ಹಾಗೆಯೇ ಕುಮಟಾ ತಾಲೂಕಿನ ತದಡಿ ಅಘನಾಶಿನಿ ನದಿ ತೀರ, ಹೊನ್ನಾವರ ಮತ್ತು ಕಾಸರಕೋಡು ಭಾಗದ ಶರಾವತಿ ಹಿನ್ನೀರಿನಲ್ಲಿ ಪ್ರವಾಸಿ ಬೋಟಿಂಗ್ ಚಟುವಟಿಕೆ ಕೈಗೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ ಇವೆಲ್ಲವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರೋದಾಗಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ; ಲಂಗರು ಹಾಕಿದ ನೂರಾರು ಬೋಟ್​​​ಗಳು

ಜೊತೆಗೆ ಹೊನ್ನಾವರದ ಅಪ್ಸರಕೊಂಡ ಕಡಲ ತೀರದಲ್ಲಿ ಪ್ರೀ ವೆಡ್ಡಿಂಗ್ ಸೆಟ್ ಅಳವಡಿಕೆಗೂ ಅವಕಾಶ ಇರುವುದಿಲ್ಲ. ಹವಾಮಾನ ಇಲಾಖೆಯಿಂದ ಚಂಡಮಾರುತ ಹಾಗೂ ಭಾರಿ ಗಾಳಿ ಬೀಸುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಮಳೆಗಾಲಕೂಡ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆ ಕಡಲತೀರಗಳಲ್ಲಿ ಹಾಗೂ ನದಿತೀರಗಳಲ್ಲಿ ನಡೆಸುತ್ತಿರುವ ಜಲಸಾಹಸ ಕ್ರೀಡೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ – Kannada News | Punjabi singer Inder Kaur kidnapped found dead in Ludhiana Canal Case Details

ಕಳೆದ 6 ದಿನಗಳ ಹಿಂದೆ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಅವರಿಗೆ ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಈಗ ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ (Punjabi Singer) ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ಮೇ 13ರಂದು ರಾತ್ರಿ ಸುಮಾರು 8.30ಕ್ಕೆ ಇಂದರ್ ಕೌರ್ ಅವರು ತಮ್ಮ ಫೋರ್ಡ್ ಫಿಗೊ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರಟಿದ್ದರು. ಆದರೆ ಅವರು ಮತ್ತೆ ಮನೆಗೆ ಮರಳಲೇ ಇಲ್ಲ. ಗಾಯಕಿ ನಾಪತ್ತೆಯಾದ ನಂತರ, ಆಕೆಯ ಸಹೋದರ ಜೋತಿಂದರ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದರು. ಇಂದರ್ ಕೌರ್ ಮನೆಗೆ ಮರಳುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಆಘಾತ ಆಗಿದೆ.

ಪೊಲೀಸ್ ತನಿಖೆಯ ಪ್ರಕಾರ, ಇಂದರ್ ಕೌರ್ ಮತ್ತು ಆರೋಪಿ ಸುಖ್ವಿಂದರ್ ಸಿಂಗ್ ಮೂರು ವರ್ಷಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಸ್ನೇಹಿತರಾಗಿದ್ದರು. ಆದರೆ, ಸುಖ್ವಿಂದರ್‌ನಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ ಎಂಬ ಸತ್ಯ ತಿಳಿದ ತಕ್ಷಣ ಇಂದರ್ ಆತನೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದರು. ಅಲ್ಲದೆ ಆತನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿ ಸುಖ್ವಿಂದರ್, ಗಾಯಕಿಯ ಮೇಲೆ ತೀವ್ರ ದ್ವೇಷ ಸಾಧಿಸುತ್ತಿದ್ದ ಎನ್ನಲಾಗಿದೆ.

ಈ ಕೊಲೆ ಪ್ರಕರಣದ ಹಿಂದೆ ದೊಡ್ಡ ಸಂಚು ಅಡಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿ ಸುಖ್ವಿಂದರ್ ಸಿಂಗ್ ಗಾಯಕಿಯನ್ನು ಕೊಲ್ಲಲೆಂದೇ ಕೆನಡಾದಿಂದ ನೇಪಾಳ ಮಾರ್ಗವಾಗಿ ಪಂಜಾಬ್‌ಗೆ ಬಂದಿದ್ದ ಎನ್ನಲಾಗಿದೆ. ಮೇ 13ರಂದು ಆತ ತನ್ನ ಸಹಚರರೊಂದಿಗೆ ಸೇರಿ ಗಾಯಕಿಯ ಕಾರನ್ನು ಅಡ್ಡಗಟ್ಟಿ, ಗನ್ ಪಾಯಿಂಟ್‌ನಲ್ಲಿ ಅಪಹರಿಸಿದ್ದನು. ನಂತರ ಅವರನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ನೀಲೋ ಕಾಲುವೆಗೆ ಎಸೆದಿದ್ದನು. ಕೃತ್ಯ ಎಸಗಿದ ತಕ್ಷಣವೇ ಆರೋಪಿ ಮತ್ತೆ ಅದೇ ನೇಪಾಳ ಮಾರ್ಗವಾಗಿ ಕೆನಡಾಕ್ಕೆ ಪರಾರಿಯಾಗಿದ್ದಾನೆ.

ಇದನ್ನೂ ಓದಿ: 33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?

ಆರೋಪಿ ಸುಖ್ವಿಂದರ್ ಸಿಂಗ್ ಮತ್ತು ಆತನ ಸಹಚರ ಕರಮ್‌ಜೀತ್ ಸಿಂಗ್ ವಿರುದ್ಧ ಮೇ 15ರಂದೇ ಜಮಾಲ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಆದರೆ ಪೊಲೀಸರು ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದರೆ ಆಕೆಯ ಪ್ರಾಣ ಉಳಿಯುತ್ತಿತ್ತು ಎಂದು ಗಾಯಕಿಯ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೀನು ಮದುವೆಯಾಗುತ್ತಿರುವ ಗಂಡು ನನ್ನಪ್ಪ; ವಧುವಿಗೆ ಕರೆಮಾಡಿ ಶಾಕ್ ಕೊಟ್ಟ ಯುವತಿ – Kannada News | The man you are marrying is my father little girl shocks bride in phone call

ಮೊರಾದಾಬಾದ್, ಮೇ 19: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಮದುವೆಯಾಗಿ, ಇಬ್ಬರು ಮಕ್ಕಳಾದ ಮೇಲೆ ಇನ್ನೊಂದು ಮದುವೆಯಾಗಲು (Wedding) ಪ್ಲಾನ್ ಮಾಡಿದ್ದರು. ಈ ಯೋಜನೆಯನ್ನು ಆತನ 2ನೇ ಮಗಳೇ ವಿಫಲಗೊಳಿಸಿದ್ದಾಳೆ. ಮೊರಾದಾಬಾದ್‌ನಲ್ಲಿ ಇಬ್ಬರು ಮಕ್ಕಳ ತಂದೆಯೊಬ್ಬರು ತಮ್ಮ ಮೊದಲ ಮದುವೆಯನ್ನು ಮುಚ್ಚಿಟ್ಟು ಮತ್ತೆ ಮದುವೆಯಾಗಲು ಮುಂದಾಗಿದ್ದರು. ಆದರೆ, ಮದುವೆ ಮೆರವಣಿಗೆಗೂ ಮುನ್ನ ಮಗಳು ವಧುವಿನ ಕುಟುಂಬಕ್ಕೆ ಕರೆ ಮಾಡಿ ಆತನ ಮದುವೆಯ ಪುರಾವೆಯನ್ನು ಕಳುಹಿಸಿದ್ದಳು. ಈ ವಿಷಯ ಪೊಲೀಸರಿಗೆ ಗೊತ್ತಾದ ಬಳಿಕ ಆರೋಪಿ ವರನಿಗೆ 5.20 ಲಕ್ಷ ರೂ. ದಂಡ ವಿಧಿಸಲಾಯಿತು.

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಈ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಇಬ್ಬರು ಮಕ್ಕಳ ತಂದೆಯೊಬ್ಬರು ತಮ್ಮ ಮೊದಲ ಪತ್ನಿಯನ್ನು ವಂಚಿಸಿ ಎರಡನೇ ಮದುವೆಯಾಗಲು ಪ್ರಯತ್ನಿಸಿದರು. ಆದರೆ, ಮದುವೆ ಮೆರವಣಿಗೆ ಹೊರಡುವ ಸ್ವಲ್ಪ ಸಮಯದ ಮೊದಲು ವರನ ಮುಗ್ಧ ಮಗಳು ಚಾಣಾಕ್ಷತನದಿಂದ ವಧುವಿನ ಕುಟುಂಬಕ್ಕೆ ಕರೆ ಮಾಡಿದಳು. ನಂತರ ಕಣ್ಣೀರಿಡುತ್ತಾ ಅವಳು ತನ್ನ ತಂದೆಯ ನಿಜವಾದ ಗುರುತನ್ನು ಬಹಿರಂಗಪಡಿಸಿದಳು.

ಇದನ್ನೂ ಓದಿ: Video: ಮಾನಸಿಕ ಒತ್ತಡವೇ ಕೆಲಸ ಬಿಡಲು ಕಾರಣ; 20 ಲಕ್ಷ ರೂ ಸಂಬಳದ ಉದ್ಯೋಗ ತೊರೆದ ಯುವಕ

‘ನೀವು ಮದುವೆಯಾಗುತ್ತಿರುವುದು ನನ್ನ ಅಪ್ಪನನ್ನು. ಆತ 2 ಮಕ್ಕಳ ತಂದೆ’ ಎಂದು ಆಕೆ ಹೇಳಿದಾಗ ವಧುವಿನ ಮನೆಯವರು ನಂಬಲಿಲ್ಲ. ಕೊನೆಗೆ ಆ ಹುಡುಗಿ ತನ್ನ ತಂದೆಯ ಮೊದಲ ಮದುವೆಯ ದಾಖಲೆಗಳನ್ನು ನೀಡಿದ ಬಳಿಕ ವಧುವಿನ ಮನೆಯವರಿಗೆ ಶಾಕ್ ಆಗಿತ್ತು. ತಕ್ಷಣ ವಧುವಿನ ಕುಟುಂಬಸ್ಥರು ಮದುವೆಯ ಆಚರಣೆಗಳನ್ನು ನಿಲ್ಲಿಸಿ ಪೊಲೀಸರಿಗೆ ವಿಷಯ ತಿಳಿಸಿದರು. ನಂತರ ಗಣ್ಯರ ಸಮ್ಮುಖದಲ್ಲಿ ತುರ್ತು ಪಂಚಾಯತ್ ಕರೆಯಲಾಯಿತು.

ಇದನ್ನೂ ಓದಿ: ಅಸ್ವಸ್ಥ ಪ್ರಯಾಣಿಕನಿಗೆ ಸೀಟು ನೀಡದೆ ಬೇಜವಾಬ್ದಾರಿತನ; ಕೆಎಸ್ಸಾರ್ಟಿಸಿಗೆ 30,000 ರೂ ದಂಡ

ಆರೋಪಿ ತಂದೆಯ ಈ ಅನೈತಿಕ ಕೃತ್ಯದ ವಿರುದ್ಧ ಪಂಚಾಯತ್ ಬಲವಾದ ನಿಲುವನ್ನು ತೆಗೆದುಕೊಂಡಿತು. ಮದುವೆಯಾದರೂ ಮತ್ತೊಂದು ಮದುವೆಗೆ ರೆಡಿಯಾಗಿ ವಧುವಿನ ಕುಟುಂಬವನ್ನು ಅವಮಾನಿಸಿದ್ದಕ್ಕಾಗಿ ಮತ್ತು ಮದುವೆಯ ಸಿದ್ಧತೆಗಳ ಸಮಯದಲ್ಲಿ ಉಂಟಾದ ಆರ್ಥಿಕ ನಷ್ಟವನ್ನು ಸರಿದೂಗಿಸಲು ಪಂಚಾಯತ್ ವರನಿಗೆ 5.20 ಲಕ್ಷ ರೂ. ದಂಡ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್ – Kannada News | Residents Trapped Inside Home After Tree Uproots On A House At Pulkeshinagar In Bengaluru

ಬೆಂಗಳೂರು, (ಮೇ 19):  ಮನೆಯ ಮೇಲೆ  ಬೃಹತ್​ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಪುಲಕೇಶಿ ನಗರ ಬಳಿಯ ಫ್ರೆಜರ್​​ಟೌನ್​​​ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA ಅರಣ್ಯ ವಿಭಾಗದ ಸಿಬ್ಬಂದಿ ಮರದ ಕೊಂಬೆ ತೆರವು ಮಾಡದೆ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶ ತೀವ್ರಗೊಳ್ಳುತ್ತಿದ್ದಂತೆಯೇ ನಾಲ್ಕು ಗಂಟೆ ಬಳಿಕ ಸ್ಥಳಕ್ಕೆ ಜಿಬಿಎ ಅರಣ್ಯ ಸಿಬ್ಬಂದಿ ಆಗಮಿಸಿ ಮರವನ್ನು ತೆರವುಗೊಳಿಸಿದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | Do you know what happens when you meditate for 10 minutes every day?

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಬಹುತೇಕ ಹೆಚ್ಚಿನವರು ಜಿಮ್‌, ವ್ಯಾಯಾಮದ ಮೊರೆ ಹೋಗ್ತಾರೆ. ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುವಂತೆ, ಇಂದಿನ ಈ ಬ್ಯುಸಿ ಜೀವನದಲ್ಲಿ ಒತ್ತಡದಿಂದ ಮುಕ್ತಿ ಪಡೆಯಲು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಧ್ಯಾನ (meditation) ಮಾಡಬೇಕು. ಹೌದು ಧ್ಯಾನ ನಮ್ಮ ಜೀವನದ ದೈನಂದಿನ ಭಾಗವಾಗಬೇಕು, ಏಕೆಂದರೆ ಇದು ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ನಮ್ಮ ಒಟ್ಟಾರೆ ಯೋಗಕ್ಷೇಮವನ್ನು ಚೆನ್ನಾಗಿರಿಸಲು ಉತ್ತೇಜನ ನೀಡುತ್ತದೆ. ಹಾಗಿದ್ರೆ ಪ್ರತಿನಿತ್ಯ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಪ್ರತಿನಿತ್ಯ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಲಭಿಸುವ ಪ್ರಯೋಜನಗಳು:

ಪ್ರತಿದಿನ ಬೆಳಿಗ್ಗೆ ಎದ್ದ ನಂತರ ನಿಮ್ಮ ಫೋನ್ ಅನ್ನು ಕೈಯಲ್ಲಿ ಹಿಡಿದುಕೊಂಡು ವೀಡಿಯೊಗಳನ್ನು ನೋಡುತ್ತಾ ಗಂಟೆಗಟ್ಟಲೆ ಕಳೆಯುವ ಬದಲು, ನಿಮ್ಮ ದಿನವನ್ನು 10 ನಿಮಿಷಗಳ ಧ್ಯಾನದೊಂದಿಗೆ ಪ್ರಾರಂಭಿಸಿ. ಬೆಳಿಗ್ಗೆ ಧ್ಯಾನ ಮಾಡುವುದರಿಂದ ದೇಹದಲ್ಲಿ ಒತ್ತಡ ಉಂಟುಮಾಡುವ ಹಾರ್ಮೋನ್ ಕಾರ್ಟಿಸೋಲ್ ಮಟ್ಟ ಕಡಿಮೆಯಾಗುತ್ತದೆ. ಧ್ಯಾನದೊಂದಿಗೆ ದಿನವನ್ನು ಪ್ರಾರಂಭಿಸುವುದು ಮಾನಸಿಕ ಒತ್ತಡ ಮತ್ತು ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮತ್ತು ಇದು ಭಾವನಾತ್ಮಕ ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಕೆಲಸದ ಮೇಲೆ ಗಮನಹರಿಸಲು ಸಹಾಯ ಮಾಡುತ್ತದೆ.

ಗಮನ ಹೆಚ್ಚುತ್ತದೆ: ಪ್ರತಿದಿನ ಬೆಳಿಗ್ಗೆ 10 ನಿಮಿಷಗಳ ಕಾಲ ಧ್ಯಾನ ಮಾಡುವ ಅಭ್ಯಾಸ ಮಾಡಿಕೊಂಡರೆ, ಗೊಂದಲದ ಸಮಸ್ಯೆ ಕಡಿಮೆಯಾಗುತ್ತದೆ. ಧ್ಯಾನವು ಮಾನಸಿಕ ಶಕ್ತಿ ಮತ್ತು ಗಮನ ಕೇಂದ್ರೀಕರಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಿಯಮಿತವಾಗಿ 10 ನಿಮಿಷಗಳ ಧ್ಯಾನ ಮಾಡುವುದರಿಂದ ಗಮನ ಸುಧಾರಿಸುತ್ತದೆ. ಪ್ರತಿದಿನ ಬೆಳಿಗ್ಗೆ ಧ್ಯಾನ ಮಾಡುವ ಜನರು ಸ್ಪಷ್ಟ ಆಲೋಚನೆಗಳನ್ನು ಹೊಂದಿರುತ್ತಾರೆ, ತ್ವರಿತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ, ಮತ್ತು ಅವರು ಮಾನಸಿಕವಾಗಿ ಬಲಶಾಲಿಯಾಗಿರುತ್ತಾರೆ.

ಒತ್ತಡವು ತಕ್ಷಣವೇ ನಿವಾರಣೆಯಾಗುತ್ತದೆ: ಇಂದಿನ ಈ ಬ್ಯುಸಿ ಜಮಾನದಲ್ಲಿ ಪ್ರತಿಯೊಬ್ಬರೂ ಯಾವುದಾದರೂ ಒಂದು ಕಾರಣಕ್ಕೆ ಒತ್ತಡಕ್ಕೆ ಒಳಗಾಗುತ್ತಲೇ ಇರುತ್ತಾರೆ. ಈ ರೀತಿಯ ಒತ್ತಡವನ್ನು ತೆಗೆದುಹಾಕಲು ಧ್ಯಾನವು ಅತ್ಯುತ್ತಮ ಔಷಧವಾಗಿದೆ. ಪ್ರತಿದಿನ ಧ್ಯಾನ ಮಾಡುವ ಮೂಲಕ, ನೀವು ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಬಹುದು. ನಿಯಮಿತ ಧ್ಯಾನವು ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ. ಧ್ಯಾನವು ಮನಸ್ಸನ್ನು ಶಾಂತವಾಗಿ ಮತ್ತು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಜೊತೆಗೆ ಧ್ಯಾನವು ನಿಮ್ಮನ್ನು ಭಾವನಾತ್ಮಕವಾಗಿ ಸ್ಥಿರವಾಗಿಡಲು ಸಹಾಯ ಮಾಡುತ್ತದೆ.

ಶಕ್ತಿಯ ಮಟ್ಟಗಳು ಹೆಚ್ಚಾಗುತ್ತದೆ: ಒಬ್ಬ ವ್ಯಕ್ತಿಯು ಮಾನಸಿಕವಾಗಿ ಚಿಂತಿತನಾಗಿದ್ದಾಗ ಅಥವಾ ಒತ್ತಡಕ್ಕೊಳಗಾದಾಗ, ಅವನ ಶಕ್ತಿಯ ಮಟ್ಟವು ಕಡಿಮೆಯಾಗುತ್ತದೆ. ಹೀಗಿರುವಾಗ ನೀವು ಬೆಳಿಗ್ಗೆ ಧ್ಯಾನ ಮಾಡಿದರೆ, ಶಕ್ತಿಯ ಮಟ್ಟವು ಹೆಚ್ಚಾಗುತ್ತದೆ. ಧ್ಯಾನವು ನರಮಂಡಲವನ್ನು ಸುಧಾರಿಸುತ್ತದೆ ಮತ್ತು ದೇಹದಲ್ಲಿ ಆಮ್ಲಜನಕದ ಹರಿವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ನೀವು ದಿನವಿಡೀ ಚೈತನ್ಯಶೀಲರಾಗಿರುತ್ತೀರಿ.

ಇದನ್ನೂ ಓದಿ: ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ರೋಗನಿರೋಧಕ ವ್ಯವಸ್ಥೆ ಬಲಗೊಳ್ಳುತ್ತದೆ: ಹೆಚ್ಚುವರಿಯಾಗಿ, ಧ್ಯಾನವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ನೀವು ವಿಶ್ರಾಂತಿ ಪಡೆದಾಗ, ನಿಮ್ಮ ದೇಹವು ಹೆಚ್ಚು ವೇಗವಾಗಿ ಗುಣವಾಗುತ್ತದೆ. ನಿಯಮಿತವಾಗಿ ಧ್ಯಾನ ಮಾಡುವ ಜನರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ. ಹಾಗಾಗಿ ಪ್ರತಿನಿತ್ಯ 10 ನಿಮಿಷಗಳ ಕಾಲ ವ್ಯಾಯಾಮ ಮಾಡಿ.

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ: ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು  ಧ್ಯಾನ ಪ್ರಯೋಜನಕಾರಿಯಾಗಿದೆ. ಧ್ಯಾನವು ರಕ್ತದ ಹರಿವನ್ನು ಸುಧಾರಿಸುತ್ತದೆ, ಇದು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಕ್ರಮೇಣ ಸಮತೋಲನಗೊಳಿಸುತ್ತದೆ. ಇದಲ್ಲದೆ, ಇದು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ನಿದ್ರೆಯನ್ನು ಸುಧಾರಿಸುತ್ತದೆ: ನೀವು ನಿದ್ರೆಯ ಸಮಸ್ಯೆಯಿಂದ ಬಳಲುತ್ತಿದ್ದರೆ, ಪ್ರತಿನಿತ್ಯ ಧ್ಯಾನ ಮಾಡಿ.  ಧ್ಯಾನವು ಮಾನಸಿಕ ಉದ್ರೇಕವನ್ನು ಕಡಿಮೆ ಮಾಡುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್ – Kannada News | Darshan met fis family in Jail with special permission spent half hour time

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್​​ಗೆ ಸಿಕ್ಕಿದ್ದ ಜಾಮೀನು ಕಳೆದ ವರ್ಷ ಆಗಸ್ಟ್​​ನಲ್ಲಿ ರದ್ದಾಗಿ ಅವರು ಮತ್ತೆ ಜೈಲು ಸೇರಿದ್ದು, ಆಗಿನಿಂದ ಈಗಿನ ವರೆಗೆ ಜೈಲಿನಲ್ಲಿದ್ದಾರೆ. ಇನ್ನೂ ಒಂದು ವರ್ಷ ಅವರು ಜಾಮೀನಿಗೆ ಅರ್ಜಿ ಸಹ ಹಾಕುವಂತಿಲ್ಲ. ಕುಟುಂಬವನ್ನು ಆಗಾಗ್ಗೆ ಭೇಟಿ ಮಾಡುತ್ತಿರುತ್ತಾರಾದರೂ ಅದು ಖಾಸಗಿ ಭೇಟಿ ಅಲ್ಲ, ಬದಲಿಗೆ ಪೊಲೀಸರ ಬೆಂಗಾವಲಿನಲ್ಲಿ ಸರಳುಗಳ ಆಚೆ-ಈಚೆ ನಿಂತು ನೋಡುವುದಷ್ಟೆ ಆಗಿತ್ತು. ಆದರೆ ಇಂದು (ಮೇ 19) ದರ್ಶನ್ ಸುಮಾರು ಹತ್ತು ತಿಂಗಳ ಬಳಿಕ ತಮ್ಮ ಕುಟುಂಬವನ್ನು ಮುಖಾ-ಮುಖಿ ಭೇಟಿ ಆಗಿದ್ದಾರೆ.

ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ವಿವಾಹ ವಾರ್ಷಿಕೋತ್ಸವ ಇಂದು (ಮೇ 19). ಹಾಗಾಗಿ ವಿಜಯಲಕ್ಷ್ಮಿ ಅವರು ಡಿಜಿಪಿ ಅಲೋಕ್ ಕುಮಾರ್ ಅವರನ್ನು ಭೇಟಿಯಾಗಿ, ತಮಗೆ ದರ್ಶನ್ ಅವರ ಮುಖಾಮುಖಿ ಭೇಟಿಗೆ ಅವಕಾಶ ಕೊಡಬೇಕು ಎಂದು ಮನವಿ ಮಾಡಿದ್ದರು. ನಟ ದರ್ಶನ್ ಸಹ ತಮ್ಮ ಕುಟುಂಬವನ್ನು ಮುಖಾ-ಮುಖಿ ಭೇಟಿಗೆ ಅವಕಾಶ ಕೊಡಬೇಕು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಜೈಲಧಿಕಾರಿಗಳು ಮುಖಾ-ಮುಖಿ ಭೇಟಿಗೆ ಅವಕಾಶ ನೀಡಿದ್ದು, ಅರ್ಧ ಗಂಟೆ ಕಾಲಾವಕಾಶವನ್ನು ನೀಡಿದ್ದಾರೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಪ್ರಕರಣ: ಸುಳ್ಳು ಸಾಕ್ಷ್ಯ ಆರೋಪಕ್ಕೆ ಎಸ್​​ಪಿಪಿ ಪ್ರಸನ್ನ ತಿರುಗೇಟು

ದರ್ಶನ್ ಇರುವ ಜೈಲು ಕೊಠಡಿಯಲ್ಲಿಯೇ ವಿಜಯಲಕ್ಷ್ಮಿ ಮತ್ತು ಪುತ್ರ ವಿನೀಶ್ ಅವರು ದರ್ಶನ್ ಅನ್ನು ಭೇಟಿ ಆಗಿದ್ದಾರೆ. ಸುಮಾರು ಅರ್ಧ ಗಂಟೆ ಸಮಯವನ್ನು ನಟ ದರ್ಶನ್ ಅವರು ಕುಟುಂಬದ ಜೊತೆಗೆ ಕಳೆದಿದ್ದಾರೆ. ಜಾಮೀನು ರದ್ದಾಗುವ ಮುಂಚೆ ಕುಟುಂಬದ ಜೊತೆಗಿದ್ದ ದರ್ಶನ್ ಈಗ ಹತ್ತು ತಿಂಗಳ ಬಳಿಕ ಮೊದಲ ಬಾರಿಗೆ ಮಗ ಹಾಗೂ ಪತ್ನಿಯ ತಬ್ಬಿ ಮಾತನಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 4:35 pm, Tue, 19 May 26

Source link

ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳು ಪ್ರಕಟ – Kannada News | India Squad For Afghanistan Series

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆದರೆ ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಟೆಸ್ಟ್ ತಂಡದಲ್ಲಿ ಹೊಸ ಮುಖಗಳು:

  • ಮಾನವ್ ಸುತಾರ್ (ಸ್ಪಿನ್ನರ್)
  • ಗುರ್ನೂರ್ ಬ್ರಾರ್ (ವೇಗದ ಬೌಲರ್).

ಏಕದಿನ ತಂಡದಲ್ಲಿ ಹೊಸ ಮುಖಗಳು:

  • ಗುರ್ನೂರ್ ಬ್ರಾರ್ (ವೇಗದ ಬೌಲರ್)
  • ಪ್ರಿನ್ಸ್ ಯಾದವ್ (ವೇಗದ ಬೌಲರ್)
  • ಹರ್ಷ್ ದುಬೆ (ಸ್ಪಿನ್ನರ್)

ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.

ಇದನ್ನೂ ಓದಿ:BBL 2026: ಭಾರತದಲ್ಲಿ ಬಿಗ್ ಬ್ಯಾಷ್ ಲೀಗ್..!

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

Published On – 4:54 pm, Tue, 19 May 26

Source link

Video: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು – Kannada News | Children playing with a stray dog, video goes viral

ಈ ಜಗತ್ತಿನಲ್ಲಿ ಎಲ್ಲ ಬಂಧಗಳನ್ನು ಮೀರಿದ ಸಂಬಂಧವೇ ಈ ಸ್ನೇಹ (friendship). ಈ ಸುಂದರವಾದ ಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹೌದು, ಈ ಮೂಕ ಪ್ರಾಣಿಗಳ ಜತೆಗೆ ಸ್ನೇಹ ಬೆಳೆಸಿದರೆ ಅವುಗಳು ಜೀವನ ಪರ್ಯಂತ ಜತೆಗಿರುತ್ತವೆ. ಇದೀಗ ಪುಟಾಣಿಗಳು ರಸ್ತೆ ಬದಿಯಲ್ಲಿದ್ದ ಶ್ವಾನದ ಜತೆಗೆ ಆಟ ಆಡಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ.

md_royal_teams ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಗಳ ಜತೆಗೆ ಶ್ವಾನದ ಸ್ನೇಹ ಸಂಬಂಧವನ್ನು ಕಾಣಬಹುದು. ರಸ್ತೆ ಬದಿಯಲ್ಲಿ ಕುಳಿತ ಮಕ್ಕಳ ಗುಂಪಿನಲ್ಲಿ ಶ್ವಾನವೊಂದಿರುವುದನ್ನು ನೀವು ಗಮನಿಸಬಹುದು. ಮೂವರು ಮಕ್ಕಳು ಶ್ವಾನದ ಜತೆಗೆ ಆಟ ಆಡುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಗ್ಧ ಮನಸ್ಸುಗಳ ಶುದ್ಧ ಸಂಭಾಷಣೆ; ಕರುವಿನ ಜತೆಗೆ ಮಾತಿಗಿಳಿದ ಪುಟಾಣಿ

ಈ ವಿಡಿಯೋ ಐವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಮುದ್ದಾಗಿದೆ ಎಂದಿದ್ದಾರೆ. ಮತ್ತೊಬ್ಬರು, ನನ್ನ ಬಾಲ್ಯವು ಇದೆ ರೀತಿಯಿತ್ತು ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಈ ದೃಶ್ಯವನ್ನು ಯಾರು ರೆಕಾರ್ಡ್ ಮಾಡುತ್ತಿದ್ದೀರೋ ಅವರು ದಯವಿಟ್ಟು ಈ ಶ್ವಾನಕ್ಕೆ ತಿನ್ನಲು ಆಹಾರ ಕೊಡಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಳೆ ಎಂದಿನಂತೆ ಬಸ್​​ ಸಂಚಾರ: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಮುಷ್ಕರ ಹಿಂಪಡೆದ ಸಾರಿಗೆ ನೌಕರರು – Kannada News | KSRTC Bus Services Resume: Transport Workers Withdraw Strike After High Court Order

ಬೆಂಗಳೂರು, ಮೇ 19: ಹೈಕೋರ್ಟ್​​ ಆದೇಶದ ಬೆನ್ನಲ್ಲೇ ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹಿಂಪಡೆದಿದ್ದಾರೆ. ಹೈಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ತಿಳಿಸಿದ್ದಾರೆ. ನಾವು ಮುಷ್ಕರದ ಸಂಬಂಧ ಸರ್ಕಾರಕ್ಕೆ ಮೊದಲೇ ಮಾಹಿತಿ ಕೊಟ್ಟಿದ್ದೆವು. ಈ ನಡುವೆ ಹೈಕೋರ್ಟ್ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನಂತರ ಮುಷ್ಕರ ಹಿಂದಕ್ಕೆ ಪಡೆಯಬೇಕು ಎಂದು ಕೋರ್ಟ್​​ ನಿರ್ದೇಶನ ಕೊಟ್ಟಿದೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ ಸಭೆ ಮಾಡಬೇಕು ಅಂತಲೂ ಹೇಳಿದೆ. ಹೈಕೋರ್ಟ್ ಆದೇಶದ ಪ್ರಕಾರ ಮುಷ್ಕರ ಹಿಂಪಡೆದಿದ್ದೇವೆ ಎಂದವರು ತಿಳಿಸಿದ್ದಾರೆ.

ಎಲ್ಲಾ ಕಾರ್ಮಿಕರಿಗೂ ಪ್ರತಿಭಟನೆ ಮಾಡುವ ಹಕ್ಕು ಇದ್ದು, ಏಕಪಕ್ಷೀಯವಾಗಿ ನೀವು ತೀರ್ಮಾನ ಮಾಡಿದ್ದೀರಿ. ಯಾರೋ ಹಾಕಿದ PILನಿಂದಾಗಿ ಸರ್ಕಾರ ನಮ್ಮ ಜೊತೆ ಸಭೆ ಮಾಡಬೇಕಿದೆ. ಅದನ್ನ ಸರ್ಕಾರವೇ ನಿರ್ಧಾರ ಮಾಡಿ ಸಭೆ ಮಾಡಬಹುದಿತ್ತು. ಹೈಕೋರ್ಟ್ ಸೂಚಿಸಿರುವ ಪ್ರಕಾರ ಸರ್ಕಾರದ ಜೊತೆಗಿನ ಸಭೆಯನ್ನು ಸದುಪಯೋಗ ಮಾಡಿಕೊಳ್ಳುತ್ತೇವೆ . ನಮ್ಮ ಒಂದಷ್ಟು ಮನವಿಯನ್ನು ಕೂಡ ಹೈಕೋರ್ಟ್ ಗಮನಿಸಿದೆ ಎಂದು ಜಂಟಿ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಹೇಳಿದ್ದಾರೆ.

(ಮಾಹಿತಿ ಅಪ್ಡೇಟ್​​ ಆಗುತ್ತಿದೆ)

Published On – 4:40 pm, Tue, 19 May 26

Source link

Exit mobile version