Karnataka Weather Forecast: ರಾಜ್ಯದಲ್ಲಿ 2-3 ದಿನ ಮಳೆ ಅಬ್ಬರ; ಎಲ್ಲೆಲ್ಲಿ ವರುಣಾರ್ಭಟ? – Kannada News | Karnataka Weather Update: IMD Predicts Heavy Rainfall Across the State for Next 2 3 Days

ಬೆಂಗಳೂರು, ಜೂನ್​​ 15: ಮುಂಗಾರು ಮಳೆ ದೇಶದ ಹಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆ ಸಾಧಿಸಿದ್ದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಎರಡರಿಂದ ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಸೇರಿ ರಾಜ್ಯಾದ್ಯಂತ ಗುಡುಗು ಹಾಗೂ ಮಿಂಚು ಸಹಿತ ಮಳೆಯನ್ನು ಅಂದಾಜಿಸಲಾಗಿದ್ದು, ಬೆಂಗಳೂರಲ್ಲಿಯೂ ವರುಣನ ಅಬ್ಬರವಿರಲಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದಿನ 2-3 ದಿನಗಳು ವರುಣನ ಅಬ್ಬರ
  • ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ
  • ಬೆಂಗಳೂರಲ್ಲಿಯೂ ಭಾರಿ ಮಳೆಯಾಗುವ ಎಚ್ಚರಿಕೆ

ಇಂದು ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಇರಲಿದೆ. ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ವರುಣಾರ್ಭಟ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ

ಹೇಗಿರಲಿದೆ ಬೆಂಗಳೂರಿನ ವಾತಾವರಣ?

ರಾಜಧಾನಿ ಬೆಂಗಳೂರಿನಲ್ಲಿ ಹಲವೆಡೆ ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇದ್ದು ಮಳೆಯನ್ನು ಅಂದಾಜಿಸಲಾಗಿದೆ. ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್​​ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್​​ ತಲುಪಲಿದೆ. ಗಾಳಿಯ ವೇಗ ಗಂಟೆಗೆ ಸುಮಾರು 20 ಕಿಲೋ ಮೀಟರ್​​ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಾಗಲಕೋಟೆ: ಭಾರಿ ಮಳೆಗೆ ಜಮಖಂಡಿ ತರಕಾರಿ ಮಾರುಕಟ್ಟೆ ಜಲಾವೃತ – Kannada News | Bagalkot Rain Fury: Heavy Rains Flood Gotay Vegetable Market in Jamkhandi; Trees Uprooted on Vijayapura

ಬಾಗಲಕೋಟೆ, ಜೂನ್ 15: ಬಾಗಲಕೋಟೆ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜಮಖಂಡಿ ತಾಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ವ್ಯಾಪಕ ಅವಾಂತರಗಳು ಸೃಷ್ಟಿಯಾಗಿವೆ. ಜಮಖಂಡಿ ತಾಲೂಕಿನ ಗೋಟೆ ಗ್ರಾಮದ ಸಾಪ್ತಾಹಿಕ ಸಂತೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತು. ಮಾರುಕಟ್ಟೆಯ ಮೈದಾನದಲ್ಲೆಲ್ಲಾ ಮಂಡಿಯುದ್ದ ನೀರು ನಿಂತಿದ್ದರಿಂದ ತರಕಾರಿ ಬುಟ್ಟಿಗಳು ಹಾಗೂ ಕ್ರೇಟ್‌ಗಳು ನೀರಿನಲ್ಲಿ ಮುಳುಗಡೆಯಾದವು. ಹಠಾತ್ ಮಳೆಯಿಂದ ಕಂಗಾಲಾದ ವ್ಯಾಪಾರಿಗಳು ತಮಗಾಗುವ ಭಾರಿ ನಷ್ಟವನ್ನು ತಪ್ಪಿಸಲು ಟೊಮೆಟೊ, ಹಸಿರು ಸೊಪ್ಪು ಹಾಗೂ ಇತರೆ ತರಕಾರಿಗಳನ್ನು ನೀರಿನಿಂದ ರಕ್ಷಿಸಲು ಹರಸಾಹಸ ಪಟ್ಟರು. ಅದರಲ್ಲೂ ವಿಶೇಷವಾಗಿ ಮಹಿಳಾ ವ್ಯಾಪಾರಿಗಳು ಮಳೆಯಲ್ಲೇ ನೆನೆಯುತ್ತಾ ತರಕಾರಿ ಬುಟ್ಟಿಗಳನ್ನು ಎತ್ತರದ ಸ್ಥಳಗಳಿಗೆ ಸಾಗಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಹಳದಿ ಟಾರ್ಪಲ್‌ಗಳನ್ನು ಮುಚ್ಚಿ ತರಕಾರಿಗಳನ್ನು ರಕ್ಷಿಸಲು ವ್ಯಾಪಾರಿಗಳು ಯತ್ನಿಸಿದರಾದರೂ, ಬಹುತೇಕ ತರಕಾರಿಗಳು ಕೊಳೆತು ಹೋಗುವ ಸ್ಥಿತಿ ತಲುಪಿರುವುದರಿಂದ ಸಣ್ಣ ವ್ಯಾಪಾರಿಗಳು ಕಣ್ಣೀರು ಹಾಕುವಂತಾಗಿದೆ.

ಇದೇ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬೃಹತ್ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿವೆ. ಜಮಖಂಡಿ-ವಿಜಯಪುರ ಮುಖ್ಯ ರಸ್ತೆಯಲ್ಲೇ ಈ ಘಟನೆ ಸಂಭವಿಸಿದ್ದರಿಂದ ರಸ್ತೆಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು, ಸಾರ್ವಜನಿಕರು ಹಾಗೂ ಪ್ರಯಾಣಿಕರು ತೀವ್ರ ಪರದಾಡುವಂತಾಯಿತು. ಸದ್ಯ ಜಮಖಂಡಿ-ವಿಜಯಪುರ ರಸ್ತೆಯಲ್ಲಿ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಹಾರಾಷ್ಟ್ರ: ಸೋಲಾಪುರದಲ್ಲಿ ಯಾತ್ರಿಕರಿದ್ದ ವ್ಯಾನ್ ಬಾವಿಗೆ ಉರುಳಿ 8 ಮಂದಿ ಸಾವು, 7 ಮಂದಿಗೆ ಗಾಯ, ಪ್ರಧಾನಿ ನೆರವು – Kannada News | Solapur Van Accident: 8 Dead, 7 Injured as Pilgrim Vehicle Falls into Well; PM Announces Aid

ಸೋಲಾಪುರ, ಜೂನ್ 15: ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಭಾನುವಾರ( ಜೂ.14) ಸಂಜೆ ಅಪಘಾತ(Accident)ವೊಂದು ಸಂಭವಿಸಿದೆ. ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ರಸ್ತೆ ಬದಿಯಿದ್ದ ಬಾವಿಗೆ ಉರುಳಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಮಕ್ಕಳು ಸೇರಿ 8 ಮಂದಿ ಪ್ರಾಣಬಿಟ್ಟಿದ್ದಾರೆ. ಅಪಘಾತದಲ್ಲಿ ಇತರೆ 7 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟವರು ಪಂಢರಪುರ ಪ್ರದೇಶದ ರಂಜನಿ ಗ್ರಾಮದ ನಿವಾಸಿಗಳಾಗಿದ್ದು, ದುರಂತ ಸಂಭವಿಸಿದಾಗ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಸೋಲಾಪುರ ಅಪಘಾತ ಸಂಭವಿಸಿದ್ಹೇಗೆ?
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್​ನ ತಂಡುಲ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವ್ಯಾನ್ ಇದ್ದಕ್ಕಿದ್ದಂತೆ ರಸ್ತೆಯಿಂದ ಹೊರಟು ರಸ್ತೆ ಬದಿಯ ಬಾವಿಗೆ ಉರುಳಿ ಬಿದ್ದಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಸೋಲಾಪುರ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ನಿನ್ನೆಯೇ ಧಾವಿಸಿತ್ತು.

ವಾಹನ ಬಾವಿಗೆ ಬಿದ್ದ ಕೂಡಲೇ ಸ್ಥಳೀಯ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಪ್ರತಿಕ್ರಿಯೆ ನೀಡುವವರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗಾಯಾಳುಗಳನ್ನು ಹೊರತೆಗೆದು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು.

ಮತ್ತಷ್ಟು ಓದಿ: ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್

ಗಾಯಾಳುಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಮತ್ತು ಆಸ್ಪತ್ರೆ ಅಧಿಕಾರಿಗಳಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಪಿಕಪ್ ವ್ಯಾನ್‌ನಲ್ಲಿದ್ದ 15 ಮಂದಿಯೂ ರಂಜನಿ ಗ್ರಾಮಕ್ಕೆ ಸೇರಿದವರಾಗಿದ್ದು, ಧಾರ್ಮಿಕ ಪ್ರಯಾಣದ ಭಾಗವಾಗಿ ಒಟ್ಟಿಗೆ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತವು ಸ್ಥಳೀಯ ಸಮುದಾಯದಲ್ಲಿ ಆಘಾತದ ಅಲೆಗಳನ್ನು ಉಂಟುಮಾಡಿದ್ದು, ತಮ್ಮ ಪ್ರೀತಿಪಾತ್ರರನ್ನು ಹಠಾತ್ ಕಳೆದುಕೊಂಡ ಕುಟುಂಬಗಳು ಶೋಕದಲ್ಲಿ ಮುಳುಗಿವೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ವಿಡಿಯೋ

ಮಹಾರಾಷ್ಟ್ರದ ಸೋಲಾಪುರ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಜಯ್ ದೇವರಕೊಂಡ ಮೇಲೆ ರಶ್ಮಿಕಾಗೆ ಎಷ್ಟು ಕಾಳಜಿ ನೋಡಿ; ವಿಡಿಯೋ ವೈರಲ್ – Kannada News | Vijay Deverakonda and Rashmika’s Viral Scholarship Video: Couple Goals and Philanthropy

ತೆಲುಗು ಚಿತ್ರರಂಗದ ಸ್ಟಾರ್ ಜೋಡಿಯಾದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭದ ಇವರಿಬ್ಬರ ಕ್ಯೂಟ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಪರಸ್ಪರ ಪ್ರೀತಿಸಿ, ಸಪ್ತಪದಿ ತುಳಿದಿರುವ ಈ ಜೋಡಿಯ ನಡುವೆ ಎಂತಹ ಆಪ್ತತೆ ಮತ್ತು ಪ್ರೀತಿ ಇದೆ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ ಎನ್ನುತ್ತಿದ್ದಾರೆ ಅಭಿಮಾನಿಗಳು.

ವಿವಾಹದ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡು ಒಂದು ಭರವಸೆ ನೀಡಿದ್ದರು. ತಮ್ಮ ತಂದೆಯ ಹುಟ್ಟೂರಾದ ತೆಲಂಗಾಣದ ತುಂಬನಪೇಟ್ ಗ್ರಾಮದ ಸರ್ಕಾರಿ ಶಾಲೆಯ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡೋದಾಗಿ ಹೇಳಿದ್ದರು. ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಗ್ರಾಮದಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಈ ಇಬ್ಬರು ಭಾಗವಹಿಸಿದ್ದರು.

ವೇದಿಕೆ ಮೇಲೆ ವಿಜಯ್ ಹಾಗೂ ರಶ್ಮಿಕಾ ನಿಂತಿದ್ದರು. ತುಂಬಾನೇ ಸೆಖೆ ಇದ್ದ ಕಾರಣ ವಿಜಯ್ ದೇವರಕೊಂಡ ಅವರ ಹಣೆಯ ಮೇಲಿದ್ದ ಬೆವರಿನ ಹನಿಗಳನ್ನು ರಶ್ಮಿಕಾ ಅತ್ಯಂತ ಪ್ರೀತಿಯಿಂದ ನಾಪ್ಕಿನ್‌ನಿಂದ ಒರೆಸಿದ್ದಾರೆ. ಅಷ್ಟೇ ಅಲ್ಲದೆ, ವಿಜಯ್ ಅವರ ಮೀಸೆಯನ್ನು ಕೈಯಿಂದ ಸರಿಪಡಿಸಿಕೊಟ್ಟಿದ್ದಾರೆ.

ಸದಾ ಸಾರ್ವಜನಿಕವಾಗಿ ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲುವ ಈ ದಂಪತಿ, ಇಲ್ಲಿಯೂ ತಮ್ಮ ನಡುವಿನ ಪ್ರೀತಿ ಎಂತದ್ದು ಎಂಬುದನ್ನು ತೋರಿಸಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ‘ಇವರಿಬ್ಬರು ನಿಜಕ್ಕೂ ಮೇಡ್ ಫಾರ್ ಈಚ್ ಅದರ್’ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಎಷ್ಟು ಜನಕ್ಕೆ ವಿದ್ಯಾರ್ಥಿ ವೇತನ?

9 ಮತ್ತು 10ನೇ ತರಗತಿಯ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 180 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡುವುದು ವಿಜಯ್-ರಶ್ಮಿಕಾ ಉದ್ದೇಶ. ತಮ್ಮೂರಿನ ಮಗ ಮತ್ತು ಸೊಸೆ ಇಂತಹದ್ದೊಂದು ಸತ್ಕಾರ್ಯ ಮಾಡಿರುವುದಕ್ಕೆ ಹಳ್ಳಿಯ ಜನರೇ ಹೆಮ್ಮೆ ಪಟ್ಟಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?

‘ಗೀತ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೇಡ್’ ಸಿನಿಮಾಗಳ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದ ಈ ಜೋಡಿ, ಈಗ ‘ರಣಬಾಲಿ’ ಎಂಬ ಪಿರಿಯಾಡಿಕಲ್ ಆಕ್ಷನ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಲವು ಯುದ್ಧದ ಬಳಿಕ ಜಗತ್ತಿಗೆ ಶುಭ ಸುದ್ದಿ: ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮ, ಹೊರ್ಮುಝ್ ತೆರವು – Kannada News | US Iran War Ends! President Donald Trump Announces Peace Deal and Reopening of Strait of Hormuz

ಅಮೆರಿಕ-ಇರಾನ್ ಶಾಂತಿ ಒಪ್ಪಂದ ಅಂತಿಮImage Credit source: TV9 Network

ನವದೆಹಲಿ, ಜೂನ್ 15: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಮಹಾ ಸಮರಕ್ಕೆ (US Iran War) ಕೊನೆಗೂ ಶಾಶ್ವತ ಬ್ರೇಕ್ ಬೀಳುವ ಕಾಲ ಸನ್ನಿಹಿತವಾಗಿದೆ. ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಮತ್ತು ರಾಜತಾಂತ್ರಿಕ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಇಡೀ ಜಗತ್ತಿಗೆ ತೈಲ ಬಿಕ್ಕಟ್ಟಿನ ಆತಂಕದಿಂದ ದೊಡ್ಡ ಮುಕ್ತಿ ಸಿಕ್ಕಂತಾಗಿದೆ.

ಮುಖ್ಯಾಂಶಗಳು

  • ಅಮೆರಿಕ-ಇರಾನ್ ನಡುವೆ ಶಾಂತಿ ಒಪ್ಪಂದ ಅಂತಿಮ
  • ಹೊರ್ಮುಝ್ ಜಲಸಂಧಿಯ ನೌಕಾ ದಿಗ್ಬಂಧನ ತೆರವು
  • ಜೂನ್ 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಅಧಿಕೃತ ಸಹಿ

ವಿಶ್ವದ ಹಡಗುಗಳ ಮೂಲಕ ತೈಲ ಹರಿಯಲಿ: ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರೂತ್ ಸೋಷಿಯಲ್’ ಖಾತೆಯಲ್ಲಿ ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ‘ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಜೊತೆಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ನಾನು ಇಂದಿನಿಂದ ಹಾರ್ಮುಜ್ ಜಲಸಂಧಿಯನ್ನು ಟೋಲ್-ಮುಕ್ತವಾಗಿ ಮುಕ್ತಗೊಳಿಸಲು ಸಂಪೂರ್ಣ ಅಧಿಕಾರ ನೀಡುತ್ತಿದ್ದೇನೆ. ಹಾಗೆಯೇ, ಅಮೆರಿಕ ನೌಕಾಪಡೆಯ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಲು ಆದೇಶಿಸುತ್ತಿದ್ದೇನೆ. ವಿಶ್ವದ ಹಡಗುಗಳೇ, ನಿಮ್ಮ ಇಂಜಿನ್‌ಗಳನ್ನು ಸ್ಟಾರ್ಟ್ ಮಾಡಿ. ತೈಲವು ಮುಕ್ತವಾಗಿ ಹರಿಯಲಿ!’ ಎಂದು ಟ್ರಂಪ್ ಬರೆದುಕೊಂಡಿದ್ದಾರೆ. ಫೆಬ್ರವರಿ 28ರಂದು ಆರಂಭವಾಗಿದ್ದ ಈ ಯುದ್ಧದಿಂದಾಗಿ ಹೊರ್ಮುಝ್ ಜಲಸಂಧಿ ಬಂದ್ ಆಗಿತ್ತು. ಆದರೆ ಈಗ ಇರಾನ್ ಕೂಡ ಈ ಒಪ್ಪಂದವನ್ನು ಖಚಿತಪಡಿಸಿದ್ದು, ಇವತ್ತು ರಾತ್ರಿಯಿಂದಲೇ ಹೊರ್ಮುಝ್ ಮುಕ್ತಗೊಳ್ಳಲಿದೆ ಎಂದು ತಿಳಿಸಿದೆ.

ಅಮೆರಿಕದ ಮೇಲೆ ಇರಾನ್​ಗೆ ಇನ್ನೂ ಅನುಮಾನ!

ಇರಾನ್ ಮಾಧ್ಯಮಗಳ ಪ್ರಕಾರ, ‘ದೇವರ ಕೃಪೆಯಿಂದಾಗಿ ದುಷ್ಟ ಅಮೆರಿಕನ್ ಮತ್ತು ಜಿಯೋನಿಸ್ಟ್ ಶತ್ರುಗಳಿಗೆ ಶರಣಾಗುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂಬುದನ್ನು ನಮ್ಮ ಹೋರಾಟಗಾರರು ಸಾಬೀತುಪಡಿಸಿದ್ದಾರೆ. ಆದರೆ, ಈ ಒಪ್ಪಂದದ ಅರ್ಥ ನಮ್ಮ ಶತ್ರುವನ್ನು ಪೂರ್ತಿಯಾಗಿ ನಂಬುವುದು ಎಂದಲ್ಲ. ಇದನ್ನು ಅಪನಂಬಿಕೆಯೊಂದಿಗೇ ಅಂತಿಮಗೊಳಿಸಲಾಗಿದೆ. ಅಮೆರಿಕದ ಬದ್ಧತೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತೇವೆ’ ಎಂದು ಇರಾನ್ ಹೇಳಿದೆ. ಮುಂದಿನ 60 ದಿನಗಳ ಕದನ ವಿರಾಮದ ಅವಧಿಯಲ್ಲಿ ಅಂತಿಮ ಒಪ್ಪಂದದ ಮಾತುಕತೆಗಳು ಮುಂದುವರಿಯಲಿವೆ.

ಪಾಕಿಸ್ತಾನದ ಮಧ್ಯಸ್ಥಿಕೆ, ಜೂನ್ 19ಕ್ಕೆ ಸಹಿ

ಅಮೆರಿಕ ಮತ್ತು ಇರಾನ್ ನಡುವಿನ ಈ ಸಂಘರ್ಷವನ್ನು ತಣ್ಣಗಾಗಿಸಲು ಪಾಕಿಸ್ತಾನ ಪ್ರಮುಖ ಮಧ್ಯಸ್ಥಿಕೆ ವಹಿಸಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ‘ವ್ಯಾಪಕ ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಲು ಸಂತೋಷವಾಗುತ್ತಿದೆ. ಲೆಬನಾನ್ ಸೇರಿದಂತೆ ಎಲ್ಲಾ ರಂಗಗಳಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಮತ್ತು ಶಾಶ್ವತವಾಗಿ ಕೊನೆಗೊಳಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ. ಜೂನ್ 19ರ ಶುಕ್ರವಾರದಂದು ಸ್ವಿಟ್ಚರ್ಲೆಂಡ್‌ನಲ್ಲಿ ಅಧಿಕೃತ ಸಹಿ ಸಮಾರಂಭ ನಡೆಯಲಿದೆ’ ಎಂದು ತಿಳಿಸಿದ್ದಾರೆ. ಜುಲೈ ಆರಂಭದಲ್ಲಿ ಇರಾನ್‌ನ ಮಾಜಿ ಸುಪ್ರೀಂ ಲೀಡರ್ ಆಯತೊಲ್ಲಾ ಖಮೇನಿ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನವೇ ಈ ಕದನ ವಿರಾಮ ಜಾರಿಗೆ ಬರುತ್ತಿರುವುದು ಗಮನಾರ್ಹ.

ನೆತನ್ಯಾಹು ವಿರುದ್ಧ ಟ್ರಂಪ್ ಆಕ್ರೋಶ

ಒಂದೆಡೆ ಶಾಂತಿ ಮಾತುಕತೆಗಳು ಅಂತಿಮ ಹಂತ ತಲುಪಿದ್ದಾಗಲೇ, ಇಸ್ರೇಲ್ ಸೇನೆ ಲೆಬನಾನ್ ಮೇಲೆ ಭೀಕರ ದಾಳಿ ನಡೆಸಿತ್ತು. ಇಸ್ರೇಲ್‌ನ ಈ ಕ್ರಮಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಯುದ್ಧ ನಿಲ್ಲುವ ಮುನ್ಸೂಚನೆ ಸಿಕ್ಕಿದ್ದರೂ, ಲೆಬನಾನ್ ಮೇಲಿನ ದಾಳಿಯನ್ನು ಇಸ್ರೇಲ್ ಸಂಪೂರ್ಣವಾಗಿ ನಿಲ್ಲಿಸುತ್ತದೆಯೇ ಮತ್ತು ಇಸ್ರೇಲ್ ಈ ಒಪ್ಪಂದದ ಭಾಗವಾಗಿದೆಯೇ ಇಲ್ಲವೇ ಎಂಬುದು ಜಿನೇವಾದಲ್ಲಿ ನಡೆಯುವ ಸುದ್ದಿಗೋಷ್ಠಿಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕೊಲ್ಲೂರು ಮೂಕಾಂಬಿಕೆಯ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಅನಂತ್​​ ಅಂಬಾನಿ – Kannada News | Business Tycoon Mukesh Ambani’s Son Anant Ambani Visits Udupi Krishna Mutt

ಉಡುಪಿ, ಜೂನ್​​ 15: ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಕುಟುಂಬದ ಗುರೂಜಿ ಅವರೊಂದಿಗೆ ಆಗಮಿಸಿದ್ದ ಅವರು ಕೊಲ್ಲೂರು ಮೂಕಾಂಬಿಕೆಯ ದರ್ಶನದ ಬಳಿಕ ಉಡುಪಿ ಕೃಷ್ಣನನ್ನೂ ಕಣ್ತುಂಬಿಕೊಂಡಿದ್ದಾರೆ. ಉಡುಪಿ ಮಠದ ಆಡಳಿತ ಮಂಡಳಿಯು ಅನಂತ್ ಅಂಬಾನಿ ಅವರನ್ನು ಸ್ವಾಗತಿಸಿದ್ದು, ಕೃಷ್ಣನ ದರ್ಶನದ ಬಳಿಕ ಪರ್ಯಾಯ ಶೀರೂರು ಮಠದ ಶ್ರೀಗಳನ್ನೂ ಅನಂತ್​​ ಭೇಟಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಯಜ್ಞ-ಯಾಗಾದಿಗಳಲ್ಲಿ ಯಾವ ಸಮಿತ್ತುಗಳನ್ನು ಅರ್ಪಿಸಿದರೆ ಏನು ಫಲ? ಇಲ್ಲಿದೆ ವಿವರಣೆ

ಹಿಂದೂ ಸನಾತನ ಧರ್ಮದಲ್ಲಿ ಪಾಪ ಕರ್ಮಗಳನ್ನು ಕಳೆಯಲು, ಕಷ್ಟಗಳನ್ನು ನಿವಾರಿಸಲು ಮತ್ತು ಭಗವಂತನ ಸಂತೃಪ್ತಿಗಾಗಿ ಯಜ್ಞ, ಯಾಗಾದಿ ಹೋಮ ಹವನಗಳನ್ನು ನಡೆಸುವ ಪದ್ಧತಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈ ಹೋಮಗಳಿಗೆ ನಿರ್ದಿಷ್ಟ ಸಮಿಧೆ ಅಥವಾ ಸಮಿತ್ತುಗಳನ್ನು (ಪವಿತ್ರ ಮರದ ತುಂಡುಗಳು) ಬಳಸಲಾಗುತ್ತದೆ. ಹೋಮ ಹವನಗಳ ಸಂಪೂರ್ಣ ಫಲ ಪ್ರಾಪ್ತಿಗಾಗಿ, ಯಜ್ಞವನ್ನು ನಡೆಸುವ ಕರ್ತನು ಕನಿಷ್ಠ ಒಂದೆರಡು ಸಮಿತ್ತುಗಳನ್ನಾದರೂ ಸ್ವತಃ ತನ್ನ ಕೈಯಾರೆ ಸಂಗ್ರಹಿಸಿ ಅರ್ಪಿಸಬೇಕು ಎಂದು ಶಾಸ್ತ್ರಗಳು ತಿಳಿಸುತ್ತವೆ ಎಂಬುದಾಗಿ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್​’ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.

ಅಂಗಡಿಯಿಂದ ಎಲ್ಲವನ್ನೂ ಖರೀದಿಸುವುದಕ್ಕಿಂತ ಅಥವಾ ಮತ್ತೊಬ್ಬರಿಗೆ ವಹಿಸುವುದಕ್ಕಿಂತ ವೈಯಕ್ತಿಕ ಶ್ರಮವು ಮಹತ್ವಪೂರ್ಣವಾಗಿದೆ. ಅಶ್ವತ್ಥ ವೃಕ್ಷ, ತುಳಸಿ, ಬಿಲ್ವ, ಅರಳಿಮರ, ಶಮಿಮರ ಮುಂತಾದ ವಿವಿಧ ಸಮಿತ್ತುಗಳನ್ನು ನಿರ್ದಿಷ್ಟ ದೇವತೆಗಳು ಮತ್ತು ಗ್ರಹಗಳಿಗೆ ಅನುಗುಣವಾಗಿ ಬಳಸಲಾಗುತ್ತದೆ. ಉದಾಹರಣೆಗೆ, ಸೂರ್ಯನಿಗೆ ಮದರ, ಚಂದ್ರನಿಗೆ ಪಲಾಶ, ಶನಿಗೆ ಶಮಿ. ಈ ಸಮಿತ್ತುಗಳನ್ನು ಭೂಸ್ಪರ್ಶ ಮಾಡದಂತೆ ತಂದು ಯಜ್ಞಕ್ಕೆ ಅರ್ಪಿಸಿದಾಗ ಯಜ್ಞವು ಹೆಚ್ಚು ಪರಿಪೂರ್ಣವಾಗಿ, ಶೀಘ್ರ ಫಲ ನೀಡುತ್ತದೆ ಎಂಬುದು ನಂಬಿಕೆ. ಋಷಿಮುನಿಗಳ ಕಾಲದಿಂದಲೂ ನಡೆದುಬಂದ ಈ ಪದ್ಧತಿಯು ನಮ್ಮ ಭಕ್ತಿ ಮತ್ತು ಸಮರ್ಪಣೆಯನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

Source link

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಸಣ್ಣ ಕಲಹಗಳಾಗಬಹುದು ಎಚ್ಚರ!

ಇಂದು ಪರಾಭವ ನಾಮ ಸಂವತ್ಸರ, ಅಧಿಕ ಜೇಷ್ಠ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯಾ ತಿಥಿ ಇರತಕ್ಕಂತದ್ದು. ಇಂದು ಎರಡು ವಿಶೇಷತೆಗಳಿವೆ. ರವಿಯು ಮಧ್ಯಾಹ್ನ 12:58ಕ್ಕೆ ಮಿಥುನ ರಾಶಿಗೆ ಪ್ರವೇಶಿಸುತ್ತಿದ್ದು, ಬುಧ ಗ್ರಹ ಅಲ್ಲಿಯೇ ಇರುವುದರಿಂದ ಬುಧಾದಿತ್ಯ ಯೋಗ ಸೃಷ್ಟಿಯಾಗಿದೆ. ಅಲ್ಲದೆ, ಅಧಿಕ ಜೇಷ್ಠ ಮಾಸದ ಅಮಾವಾಸ್ಯೆ ಇರುವುದರಿಂದ ಪಿತೃಗಳ ಸ್ಮರಣೆಗೆ ಮತ್ತು ಕಾಲಭೈರವ, ಶಿವ, ದುರ್ಗಾ ಆರಾಧನೆಗೆ ಇದು ಬಹಳ ಶ್ರೇಷ್ಠವಾದ ದಿನವಾಗಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರ ಮೇಲೂ ಅವಲಂಬಿತರಾಗಲು ಬಯಸರು… – Kannada News | Horoscope June 15 Monday 2026; Dina Rashi Bhavishya Today, Checkout the details here

ಮೇಷ ರಾಶಿ:

ಇಂದು ನಿಮಗೆ ಆರ್ಥಿಕವಾಗಿ ಅತ್ಯಂತ ಲಾಭದಾಯಕ ದಿನವಾಗಿರುತ್ತದೆ. ದೀರ್ಘಕಾಲದಿಂದ ಬಾಕಿ ಉಳಿದಿದ್ದ ಹಣ ಕೈಸೇರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ವ್ಯಾಪಾರಸ್ಥರಿಗೆ ಹೊಸ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದ್ದು, ಹಿರಿಯರ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಕಾರ್ಯಸಿದ್ಧಿಯಾಗಲಿದೆ.

​ವೃಷಭ ರಾಶಿ:

ಇಂದು ಅನಗತ್ಯ ಖರ್ಚು ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರ್ಥಿಕ ಶಿಸ್ತು ಅತ್ಯಗತ್ಯ. ಆತುರದ ನಿರ್ಧಾರಗಳಿಂದ ವ್ಯವಹಾರದಲ್ಲಿ ನಷ್ಟ ಉಂಟಾಗಬಹುದು, ಜಾಗರೂಕರಾಗಿರಿ. ಉದ್ಯೋಗಸ್ಥರು ಕಚೇರಿಯಲ್ಲಿ ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸುವುದು ಒಳ್ಳೆಯದು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿ. ನಕಾರಾತ್ಮಕ ಆಲೋಚನೆಗಳಿಂದ ದೂರವಿದ್ದು, ಸಂಗಾತಿಯೊಂದಿಗೆ ಸಮಯ ಕಳೆಯುವುದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ.

​ಮಿಥುನ ರಾಶಿ:

ನಿಮಗೆ ಕೌಟುಂಬಿಕವಾಗಿ ಅತ್ಯಂತ ಸುಖಕರವಾದ ದಿನವಿದು. ಮನೆಯಲ್ಲಿ ಶುಭ ಕಾರ್ಯಗಳು ನೆರವೇರುವ ಬಗ್ಗೆ ಚರ್ಚೆಗಳು ನಡೆಯಲಿವೆ. ಉದ್ಯೋಗಾಕಾಂಕ್ಷಿಗಳಿಗೆ ಹೊಸ ಮತ್ತು ಉತ್ತಮ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸಮಾಜದಲ್ಲಿ ನಿಮ್ಮ ಗೌರವ ಮತ್ತು ಪ್ರತಿಷ್ಠೆ ಹೆಚ್ಚಾಗಲಿದೆ. ಹಳೆಯ ಸ್ನೇಹಿತರನ್ನು ಭೇಟಿಯಾಗುವ ಯೋಗವಿದ್ದು, ದಿನವು ಅತ್ಯಂತ ಉತ್ಸಾಹದಿಂದ ಕೂಡಿರುತ್ತದೆ. ಆರೋಗ್ಯವು ಉತ್ತಮವಾಗಿರುತ್ತದೆ, ಧನಲಾಭವಾಗಲಿದೆ.

​ಕರ್ಕಾಟಕ ರಾಶಿ:

ಉದ್ಯೋಗಸ್ಥರಿಗೆ ಇಂದು ಕಚೇರಿಯಲ್ಲಿ ಮಹತ್ತರ ಪ್ರಗತಿ ಕಂಡುಬರಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆ ಹಾಗೂ ಹೊಸ ಜವಾಬ್ದಾರಿಗಳು ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆತು ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ದೂರದ ಸಂಬಂಧಿಗಳಿಂದ ಶುಭ ವಾರ್ತೆಗಳನ್ನು ಕೇಳುವಿರಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಯಶಸ್ಸು ಸಿಗಲಿದೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ದಿನವು ಇನ್ನಷ್ಟು ಸುಖಮಯವಾಗುತ್ತದೆ.

​ಸಿಂಹ ರಾಶಿ:

ಇಂದು ನಿಮಗೆ ಭೂಮಿ ಅಥವಾ ಆಸ್ತಿ ಖರೀದಿ ಮಾಡುವ ಯೋಗವಿದೆ. ದೀರ್ಘಕಾಲದ ಆಸೆಗಳು ಈಡೇರುವ ಸಮಯವಿದು. ಮನಸ್ಸಿನಲ್ಲಿದ್ದ ಆತಂಕಗಳು ದೂರವಾಗಿ ದೈಹಿಕ ಮತ್ತು ಮಾನಸಿಕ ನೆಮ್ಮದಿ ಸಿಗಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಕೌಟುಂಬಿಕ ಜೀವನದಲ್ಲಿ ಸಾಮರಸ್ಯ ಇರಲಿದ್ದು, ಮಕ್ಕಳ ಪ್ರಗತಿಯಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದ್ದು, ನಾಯಕತ್ವದ ಗುಣಕ್ಕೆ ಗೌರವ ಸಿಗಲಿದೆ.

​ಕನ್ಯಾ ರಾಶಿ:

ಕಳೆದ ಕೆಲವು ದಿನಗಳಿಂದ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗಳು ಇಂದು ಸುಧಾರಿಸಲಿವೆ. ಉದ್ಯೋಗ ಅಥವಾ ವ್ಯವಹಾರದ ನಿಮಿತ್ತ ದೂರದ ಪ್ರಯಾಣ ಬೆಳೆಸಬೇಕಾಗಬಹುದು, ಈ ಪ್ರಯಾಣವು ನಿಮಗೆ ಲಾಭದಾಯಕವಾಗಿರುತ್ತದೆ. ಹೊಸ ಕೆಲಸವನ್ನು ಪ್ರಾರಂಭಿಸಲು ಇದು ಸೂಕ್ತ ದಿನವಾಗಿದೆ. ಆರ್ಥಿಕ ಪರಿಸ್ಥಿತಿ ಸ್ಥಿರವಾಗಿರುತ್ತದೆ. ಸಂಗಾತಿಯ ಬೆಂಬಲದಿಂದ ಕಠಿಣ ಸವಾಲುಗಳನ್ನು ಸುಲಭವಾಗಿ ಎದುರಿಸುವಿರಿ. ದಿನದ ಅಂತ್ಯಕ್ಕೆ ಶುಭ ಫಲವಿದೆ.

​ತುಲಾ ರಾಶಿ:

ವ್ಯಾಪಾರ ಮತ್ತು ವ್ಯವಹಾರ ರಂಗದಲ್ಲಿರುವವರಿಗೆ ಇಂದು ನಿರೀಕ್ಷೆಗೂ ಮೀರಿದ ಲಾಭ ದೊರೆಯಲಿದೆ. ಹೊಸ ಗ್ರಾಹಕರ ಸಂಪರ್ಕದಿಂದ ವ್ಯಾಪಾರ ವಿಸ್ತರಣೆಯಾಗಲಿದೆ. ಕೌಟುಂಬಿಕ ಕಲಹಗಳು ಬಗೆಹರಿದು ಮನೆಯಲ್ಲಿ ಶಾಂತಿ ನೆಲೆಸುತ್ತದೆ. ಬರಬೇಕಾಗಿದ್ದ ಬಾಕಿ ಹಣ ವಾಪಸ್ ಸಿಗುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಸ್ನೇಹಿತರೊಂದಿಗೆ ಆನಂದವಾಗಿ ಸಮಯ ಕಳೆಯುವಿರಿ. ಕಲಾತ್ಮಕ ಕ್ಷೇತ್ರಗಳ ಜನರಿಗೆ ಅಪಾರ ಮನ್ನಣೆ ಸಿಗಲಿದೆ.

​ವೃಶ್ಚಿಕ ರಾಶಿ:

ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಕೆಲಸದ ಒತ್ತಡ ಹೆಚ್ಚಾಗುವುದರಿಂದ ಸುಸ್ತು ಎನಿಸಬಹುದು, ತಾಳ್ಮೆಯಿಂದ ಕೆಲಸ ಮಾಡಿ. ಆತುರದಲ್ಲಿ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ ವಿಷಯದಲ್ಲಿ ಯಾರನ್ನೂ ಕುರುಡಾಗಿ ನಂಬಬೇಡಿ. ವಾಹನ ಚಾಲನೆ ಮಾಡುವಾಗ ಜಾಗರೂಕತೆ ಅತ್ಯಗತ್ಯ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ತಡವಾಗಿಯಾದರೂ ಸಿಗಲಿದೆ, ಧೃತಿಗೆಡಬೇಡಿ.

​ಧನು ರಾಶಿ:

ಇಂದು ನಿಮ್ಮ ಕೀರ್ತಿ ಮತ್ತು ಜನಪ್ರಿಯತೆ ಸಮಾಜದಲ್ಲಿ ವೃದ್ಧಿಯಾಗಲಿದೆ. ಕೈಗೆ ಬರಬೇಕಾಗಿದ್ದ ಹಣ ಸಕಾಲದಲ್ಲಿ ಸಿಗುವುದರಿಂದ ಆರ್ಥಿಕ ಸಂಕಷ್ಟಗಳು ದೂರವಾಗಲಿವೆ. ಉದ್ಯೋಗದಲ್ಲಿ ನಿಮ್ಮ ಕಾರ್ಯದಕ್ಷತೆಗೆ ದೊಡ್ಡ ಪ್ರಶಂಸೆ ಸಿಗಲಿದೆ. ದಂಪತಿಗಳ ನಡುವೆ ಮಧುರ ಬಾಂಧವ್ಯ ಇರಲಿದೆ. ಯುವಕರಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುವ ಅವಕಾಶಗಳು ಒದಗಿ ಬರಬಹುದು. ದಿನವು ಒಟ್ಟಾರೆಯಾಗಿ ಅತ್ಯಂತ ಉತ್ಸಾಹದಾಯಕವಾಗಿರುತ್ತದೆ.

​ಮಕರ ರಾಶಿ:

ನಿಮ್ಮ ದೀರ್ಘಕಾಲದ ಕಠಿಣ ಶ್ರಮಕ್ಕೆ ಇಂದು ತಕ್ಕ ಪ್ರತಿಫಲ ಸಿಗಲಿದೆ. ಕಚೇರಿಯಲ್ಲಿ ಉನ್ನತ ಹುದ್ದೆ ಅಥವಾ ವೇತನ ಹೆಚ್ಚಳದ ಸುದ್ದಿ ಕೇಳುವಿರಿ. ನ್ಯಾಯಾಲಯದ ವ್ಯವಹಾರಗಳು ನಿಮ್ಮ ಪರವಾಗಿ ತೀರ್ಪು ನೀಡುವ ಸಾಧ್ಯತೆ ಇದೆ. ಆರ್ಥಿಕವಾಗಿ ಪರಿಸ್ಥಿತಿ ಸದೃಢವಾಗಲಿದ್ದು, ಹಳೆಯ ಸಾಲಗಳನ್ನು ತೀರಿಸಲು ಸಾಧ್ಯವಾಗುತ್ತದೆ. ಸೃಜನಾತ್ಮಕ ಕೆಲಸಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ.

​ಕುಂಭ ರಾಶಿ:

ಮನೆಗೆ ಹತ್ತಿರದ ಬಂಧು-ಮಿತ್ರರ ಆಗಮನವಾಗಲಿದ್ದು, ಇದರಿಂದ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ. ಹಳೆಯ ನೆನಪುಗಳನ್ನು ಹಂಚಿಕೊಳ್ಳುವ ಮೂಲಕ ಮನಸ್ಸು ಹಗುರಾಗಲಿದೆ. ಕುಟುಂಬದವರೊಂದಿಗೆ ಸುಂದರ ಸಮಯ ಕಳೆಯುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿಯೇ ಇರಲಿದ್ದು, ಭವಿಷ್ಯಕ್ಕಾಗಿ ಉಳಿತಾಯ ಮಾಡಲು ಯೋಜನೆ ರೂಪಿಸುವಿರಿ. ವ್ಯಾಪಾರದಲ್ಲಿ ಸಣ್ಣಪುಟ್ಟ ಪ್ರಗತಿ ಕಂಡುಬರುತ್ತದೆ. ದಾಂಪತ್ಯ ಜೀವನ ಮಧುರವಾಗಿರುತ್ತದೆ.

​ಮೀನ ರಾಶಿ:

ಇಂದು ನೀವು ಕೈಗೊಳ್ಳುವ ಎಲ್ಲಾ ಕಾರ್ಯಗಳಲ್ಲೂ ಜಯ ಸಿಗಲಿದೆ. ನಿಮ್ಮ ಕಾರ್ಯಕ್ಷಮತೆಯಿಂದ ಎದುರಾಳಿಗಳನ್ನು ಸುಲಭವಾಗಿ ಸೋಲಿಸುವಿರಿ. ಪ್ರಮುಖ ವ್ಯಕ್ತಿಗಳ ಭೇಟಿಯಿಂದ ವ್ಯವಹಾರದಲ್ಲಿ ಹೊಸ ತಿರುವು ಸಿಗಲಿದೆ. ನೂತನ ವಸ್ತುಗಳು ಅಥವಾ ಆಭರಣಗಳನ್ನು ಖರೀದಿಸುವ ಯೋಗವಿದೆ. ಆರೋಗ್ಯವು ಸಂಪೂರ್ಣವಾಗಿ ಸ್ಥಿರವಾಗಿರುತ್ತದೆ. ಮನಸ್ಸಿನಲ್ಲಿ ಹೊಸ ಆಲೋಚನೆಗಳು ಮೂಡಲಿದ್ದು, ಭವಿಷ್ಯದ ದೃಷ್ಟಿಯಿಂದ ದಿನವು ಅತ್ಯಂತ ಶುಭಪ್ರದವಾಗಿದೆ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಸುಕರ್ಮಾ, ಕರಣ : ಕೌಲವ, ಸೂರ್ಯೋದಯ – 05 – 54 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:30 – 09:47, ಯಮಗಂಡ ಕಾಲ 10:44 – 12:20, ಗುಳಿಕ ಕಾಲ 13:57 – 15:33

-ಲೋಹಿತ್ ಹೆಬ್ಬಾರ್ – 8762924271 (what’s app only)

Source link

ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು: ವಿಡಿಯೋ – Kannada News | Doddanna talks about Dr Rajkumar, Vishnuvardhan, Shankar Nag and Ambareesh

ನಟ ದೊಡ್ಡಣ್ಣ, ಕನ್ನಡ ಚಿತ್ರರಂಗದ (Sandalwood) ಹಿರಿಯ ನಟ. ದೊಡ್ಡಣ್ಣ ಅವರು ಚಿತ್ರರಂಗಕ್ಕೆ ಕಾಲಿರಿಸಿ ನಲವತ್ತು ವರ್ಷಗಳನ್ನು ದಾಟಿದ್ದಾಗಿದೆ. ಹಲವಾರು ಖ್ಯಾತ ನಟ, ನಿರ್ಮಾಪಕರು ನಿರ್ದೇಶಕರೊಟ್ಟಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ನಟ ದೊಡ್ಡಣ್ಣ ಚಿತ್ರರಂಗದ ದಿಗ್ಗಜರುಗಳ ಬಗ್ಗೆ ಬಲು ಸ್ವಾರಸ್ವಕರವಾಗಿ ವಿಷಯಗಳನ್ನು ಹೇಳುತ್ತಾರೆ. ಇತ್ತೀಚೆಗೆ ‘ಕನಕರಾಜ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ದೊಡ್ಡಣ್ಣ ಅವರು ಚಿತ್ರರಂಗದ ದಿಗ್ಗಜರಾದ ಡಾ ರಾಜ್​​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮತ್ತು ಶಂಕರ್​​ನಾಗ್ ಅವರುಗಳ ಬಗ್ಗೆ ಮಾತನಾಡಿದರು. ಅವರು ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version