‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್​​ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ರಾಮ್ ಚರಣ್ ಅವರ ಮಾಸ್ ಲುಕ್ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಅನ್ನು ಕೊಂಡಾಡಿರುವ ರಿಷಬ್ ಶೆಟ್ಟಿ, ‘ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ಪ್ರತಿಯೊಂದು ಫ್ರೇಮ್‌ನಲ್ಲೂ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಅವರ ನಟನೆ ಮತ್ತು ಸ್ಕ್ರೀನ್ ಮೇಲಿನ ಎನರ್ಜಿ ಪ್ರತಿ ದೃಶ್ಯದಲ್ಲೂ ಬೆಂಕಿಯಂತೆ ಮೂಡಿಬಂದಿದೆ’ ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ಚಿತ್ರದಲ್ಲಿ ಪ್ರಮುಖ ಪಾತ್ರ ಪೋಷಿಸಿರುವ ಕನ್ನಡಿಗರ ನೆಚ್ಚಿನ ಸೆಂಚುರಿ ಸ್ಟಾರ್ ಶಿವ ರಾಜ್‌ಕುಮಾರ್ ಅವರ ಬಗ್ಗೆಯೂ ರಿಷಬ್ ವಿಶೇಷವಾಗಿ ಉಲ್ಲೇಖಿಸಿದ್ದು, ‘ನಮ್ಮ ಶಿವಣ್ಣನ ಸ್ಕ್ರೀನ್ ಪ್ರೆಸೆನ್ಸ್ ಈ ಸಿನಿಮಾಗೆ ಒಂದು ಭವ್ಯವಾದ ಹಾಗೂ ವಿಶಿಷ್ಟವಾದ ಮೆರುಗನ್ನು ನೀಡಿದೆ. ಇನ್ನು ನಾಯಕಿ ಜಾನ್ವಿ ಕಪೂರ್ ಅವರು ತಮ್ಮ ಸುಂದರ ಹಾಗೂ ರೋಮಾಂಚಕ ನಟನೆಯ ಮೂಲಕ ಚಿತ್ರಕ್ಕೆ ಒಂದು ಆಕರ್ಷಕ ಸ್ಪಾರ್ಕ್ ತಂದಿದ್ದಾರೆ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾ ನಾಯಕಿಯಾಗಿ ಆಯ್ಕೆ ಆಗಿದ್ದು ಈ ನಟಿ, ಕೈತಪ್ಪಿದ್ದೇಕೆ?

ಚಿತ್ರದ ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ಅದ್ಭುತ ಕೆಲಸವನ್ನು ಶ್ಲಾಘಿಸಿರುವ ರಿಷಬ್, ಇಡೀ ತಾಂತ್ರಿಕ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್‌ನ ಕೊನೆಯಲ್ಲಿ ಅವರು, ಛಾಯಾಗ್ರಾಹಕ ರತ್ನವೇಲು, ನಿರ್ಮಾಪಕರು, ವೃದ್ಧಿ ಸಿನಿಮಾಸ್, ಇನ್ನೂ ಹಲವರಿಗೆ ರಿಷಬ್ ಶೆಟ್ಟಿ ಅಭಿನಂದನೆಗಳನ್ನು ಹೇಳಿದ್ದು, ಸಿನಿಮಾದ ಯಶಸ್ಸಿಗೆ ಹಾರೈಸಿದ್ದಾರೆ.

‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಾಮ್ ಚರಣ್ ಕ್ರಿಕೆಟರ್ ಮತ್ತು ಕುಸ್ತಿ ಪಟುವಾಗಿ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅವರು ಕುಸ್ತಿ ಹೇಳಿಕೊಡುವ ಗುರುವಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಾಯಕಿ. ಜಗಪತಿ ಬಾಬು ಸಹ ಸಿನಿಮಾನಲ್ಲಿದ್ದಾರೆ. ಸಿನಿಮಾ ಅನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:22 pm, Tue, 19 May 26

Source link

ಚಿಕನ್ ನೆಕ್ ಕಾರಿಡಾರ್​​ನ 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದ ಪಶ್ಚಿಮ ಬಂಗಾಳದ ಸಿಎಂ – Kannada News | West Bengal CM Suvendu Adhikari Governmet decided to transfer 120 Acres In Chicken Neck Corridor To Centre

ಕೊಲ್ಕತ್ತಾ, ಮೇ 19: ಪಶ್ಚಿಮ ಬಂಗಾಳ ಸರ್ಕಾರವು ಸಿಲಿಗುರಿ ಕಾರಿಡಾರ್‌ನಲ್ಲಿರುವ (Siliguri Corridor) 120 ಎಕರೆ ಭೂಮಿಯನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಿದೆ. ಈಶಾನ್ಯ ಭಾರತವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ “ಚಿಕನ್ ನೆಕ್” (Chicken Neck Corridor) ಕಾರಿಡಾರ್ ಉದ್ದಕ್ಕೂ ಭದ್ರತೆ, ಗಡಿ ಬೇಲಿ ಮತ್ತು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ಹಿರಿಯ ಬಿಎಸ್ಎಫ್ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

ಸಿಲಿಗುರಿ ಕಾರಿಡಾರ್ ಭಾರತದ ಈಶಾನ್ಯ ರಾಜ್ಯಗಳನ್ನು ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಕಿರಿದಾದ, 20-22 ಕಿಲೋಮೀಟರ್ ಅಗಲವಾದ ಪ್ರದೇಶವಾಗಿದೆ. ಇದು ನೇಪಾಳ, ಭೂತಾನ್, ಬಾಂಗ್ಲಾದೇಶ ಮತ್ತು ಚೀನಾದ ಗಡಿಗಳನ್ನು ಹೊಂದಿದೆ. ಈ ಕಾರಿಡಾರ್ ಮೇಲಿನ ನಿಯಂತ್ರಣವನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಕೋನದಿಂದ ನಿರ್ಣಾಯಕವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: 78 ವರ್ಷ ಹಳೆಯದಾದ ಸಿಲಿಗುರಿ ಕಾರಿಡಾರ್ ಅನ್ನು 1971ರಲ್ಲೇ ಸರಿಪಡಿಸಬೇಕಿತ್ತು; ಸದ್ಗುರು ಅಭಿಮತ

ಹೊಸ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಈ ದಿಕ್ಕಿನಲ್ಲಿ ದೃಢವಾದ ಕ್ರಮಗಳನ್ನು ತೆಗೆದುಕೊಂಡಿತು. ಕೇಂದ್ರ ಸರ್ಕಾರವು ಈಗ ಈ ಭೂಮಿಯಲ್ಲಿ ಗಡಿ ಭದ್ರತಾ ಪಡೆಗಳಿಗೆ ಮೂಲಸೌಕರ್ಯಗಳನ್ನು ನಿರ್ಮಿಸಲು ಸಾಧ್ಯವಾಗುತ್ತದೆ. ಇದು ಈ ಪ್ರದೇಶದಲ್ಲಿ ಭದ್ರತೆಯನ್ನು ಮತ್ತಷ್ಟು ಬಲಪಡಿಸುತ್ತದೆ. ಈ ಕಾರಿಡಾರ್ ಈಶಾನ್ಯ ರಾಜ್ಯಗಳನ್ನು ಭಾರತದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ಭೂ ಮಾರ್ಗವಾಗಿದೆ. ಈ ಕಿರಿದಾದ ರಸ್ತೆಯು ಈಶಾನ್ಯ ರಾಜ್ಯಗಳನ್ನು ಭಾರತದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುತ್ತದೆ. ವ್ಯಾಪಾರ, ಸರಕುಗಳ ಸಾಗಣೆ ಮತ್ತು ಮಿಲಿಟರಿ ಚಲನೆಗೆ ಇದು ಏಕೈಕ ಭೂ ಮಾರ್ಗವಾಗಿದೆ. ಈ ಪ್ರದೇಶವು ದೇಶದ ಭದ್ರತೆ ಮತ್ತು ಗಡಿ ರಕ್ಷಣೆಗೆ ಅತ್ಯಗತ್ಯ.

ಈ ಭೂಮಿಯನ್ನು ಮಿಲಿಟರಿ ಮೂಲಸೌಕರ್ಯವನ್ನು ನಿರ್ಮಿಸಲು, ರಸ್ತೆಗಳನ್ನು ಸುಧಾರಿಸಲು ಅಥವಾ ಭದ್ರತೆಯನ್ನು ಹೆಚ್ಚಿಸಲು ಬಳಸಲಾಗುತ್ತದೆ ಎನ್ನಲಾಗಿದೆ. ಕೇಂದ್ರ ಸರ್ಕಾರಕ್ಕೆ ಬಂಗಾಳ ಸರ್ಕಾರ ಈ ಭೂಮಿಯನ್ನು ಏಕೆ ವರ್ಗಾಯಿಸಿದೆ ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ಬಾಂಗ್ಲಾ ಗಡಿಗೆ ಫೆನ್ಸಿಂಗ್​ನಿಂದ ಹಿಡಿದು ಬಿಎನ್​ಎಸ್ ಜಾರಿವರೆಗೆ ಸುವೇಂದು ಕ್ಯಾಬಿನೆಟ್ ಕೈಗೊಂಡ ಪ್ರಮುಖ ನಿರ್ಧಾರಗಳಿವು

ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾದ ನಂತರ ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಬಂಗಾಳದಲ್ಲಿ ಬಿಜೆಪಿ ಗೆದ್ದಿರುವುದು ಇದೇ ಮೊದಲು. ಸುವೇಂದು ಎರಡು ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡರಲ್ಲೂ ಗೆದ್ದರು. ಅಧಿಕಾರ ವಹಿಸಿಕೊಂಡಾಗಿನಿಂದ, ಅಧಿಕಾರಿ ನೇತೃತ್ವದ ಆಡಳಿತವು ಅಧಿಕಾರಿಗಳ ಪುನರ್ ರಚನೆ, ಕಾನೂನು ಮತ್ತು ಸುವ್ಯವಸ್ಥೆ ಕ್ರಮಗಳು, ಟಿಎಂಸಿ ನಾಯಕರ ವಿರುದ್ಧದ ಅಕ್ರಮಗಳ ಆರೋಪಗಳ ತನಿಖೆ ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದು ಗಮನಾರ್ಹ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ – Kannada News | Rishab Shetty praised Ram Charan’s Peddi movie trailer

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ಯ (Peddi) ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಟ್ರೈಲರ್​​ಗೆ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಟ್ರೈಲರ್​​ ನೋಡಿ ಮೆಚ್ಚು ಗೆ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಹೆಮ್ಮೆಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ಟ್ರೈಲರ್ ವೀಕ್ಷಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚಿತ್ರತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಪೆದ್ದಿ’ ಟ್ರೈಲರ್ ಅತ್ಯಂತ ಅದ್ಭುತವಾಗಿ ಮೂಡಿಬಂದಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ರಾಮ್ ಚರಣ್ ಅವರ ಮಾಸ್ ಲುಕ್ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಅನ್ನು ಕೊಂಡಾಡಿರುವ ರಿಷಬ್ ಶೆಟ್ಟಿ, ‘ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ಪ್ರತಿಯೊಂದು ಫ್ರೇಮ್‌ನಲ್ಲೂ ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಅವರ ನಟನೆ ಮತ್ತು ಸ್ಕ್ರೀನ್ ಮೇಲಿನ ಎನರ್ಜಿ ಪ್ರತಿ ದೃಶ್ಯದಲ್ಲೂ ಬೆಂಕಿಯಂತೆ ಮೂಡಿಬಂದಿದೆ’ ಎಂದು ಬರೆದುಕೊಂಡಿದ್ದಾರೆ.

ಇದೇ ವೇಳೆ ಚಿತ್ರದಲ್ಲಿ ಪ್ರಮುಖ ಪಾತ್ರ ಪೋಷಿಸಿರುವ ಕನ್ನಡಿಗರ ನೆಚ್ಚಿನ ಸೆಂಚುರಿ ಸ್ಟಾರ್ ಶಿವ ರಾಜ್‌ಕುಮಾರ್ ಅವರ ಬಗ್ಗೆಯೂ ರಿಷಬ್ ವಿಶೇಷವಾಗಿ ಉಲ್ಲೇಖಿಸಿದ್ದು, ‘ನಮ್ಮ ಶಿವಣ್ಣನ ಸ್ಕ್ರೀನ್ ಪ್ರೆಸೆನ್ಸ್ ಈ ಸಿನಿಮಾಗೆ ಒಂದು ಭವ್ಯವಾದ ಹಾಗೂ ವಿಶಿಷ್ಟವಾದ ಮೆರುಗನ್ನು ನೀಡಿದೆ. ಇನ್ನು ನಾಯಕಿ ಜಾನ್ವಿ ಕಪೂರ್ ಅವರು ತಮ್ಮ ಸುಂದರ ಹಾಗೂ ರೋಮಾಂಚಕ ನಟನೆಯ ಮೂಲಕ ಚಿತ್ರಕ್ಕೆ ಒಂದು ಆಕರ್ಷಕ ಸ್ಪಾರ್ಕ್ ತಂದಿದ್ದಾರೆ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:‘ಪೆದ್ದಿ’ ಸಿನಿಮಾ ನಾಯಕಿಯಾಗಿ ಆಯ್ಕೆ ಆಗಿದ್ದು ಈ ನಟಿ, ಕೈತಪ್ಪಿದ್ದೇಕೆ?

ಚಿತ್ರದ ನಿರ್ದೇಶಕ ಬುಚ್ಚಿ ಬಾಬು ಸನಾ ಅವರ ಅದ್ಭುತ ಕೆಲಸವನ್ನು ಶ್ಲಾಘಿಸಿರುವ ರಿಷಬ್, ಇಡೀ ತಾಂತ್ರಿಕ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್‌ನ ಕೊನೆಯಲ್ಲಿ ಅವರು, ಛಾಯಾಗ್ರಾಹಕ ರತ್ನವೇಲು, ನಿರ್ಮಾಪಕರು, ವೃದ್ಧಿ ಸಿನಿಮಾಸ್, ಇನ್ನೂ ಹಲವರಿಗೆ ರಿಷಬ್ ಶೆಟ್ಟಿ ಅಭಿನಂದನೆಗಳನ್ನು ಹೇಳಿದ್ದು, ಸಿನಿಮಾದ ಯಶಸ್ಸಿಗೆ ಹಾರೈಸಿದ್ದಾರೆ.

‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಾಮ್ ಚರಣ್ ಕ್ರಿಕೆಟರ್ ಮತ್ತು ಕುಸ್ತಿ ಪಟುವಾಗಿ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅವರು ಕುಸ್ತಿ ಹೇಳಿಕೊಡುವ ಗುರುವಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಾಯಕಿ. ಜಗಪತಿ ಬಾಬು ಸಹ ಸಿನಿಮಾನಲ್ಲಿದ್ದಾರೆ. ಸಿನಿಮಾ ಅನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:22 pm, Tue, 19 May 26

Source link

ಅಮ್ಮ-ಅಪ್ಪ ಸ್ವಾರಿ, ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ: ಪತ್ರ ಬರೆದಿಟ್ಟು ಸಹೋದರಿಯರು ನಾಪತ್ತೆ – Kannada News | Shocking incident In Mandya, two sisters went missing from their home after leaving a letter

ಮಂಡ್ಯ, (ಮೇ 19): ತಾಯಿ ಬೈದಿದ್ದಕ್ಕೆ ಅಪ್ರಾಪ್ತ ಸಹೋದರಿಯರು (Sisters) ಭಾವುಕವಾಗಿ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸಹೋದರಿಯರು. ಯಾವುದೋ ವಿಷಯಕ್ಕೆ ಮನೆತಲ್ಲಿ ತಾಯಿ ಬೈದಿದ್ದಾರೆ. ಇದರಿಂದ ಮನನೊಂದು ಸಹೋದರಿಯರು, ಮನೆಬಿಟ್ಟು ಹೋಗಿದ್ದಾರೆ.ಹೋಗುವ ಮುನ್ನ ಭಾವುಕ ಪತ್ರವೊಂದು ಬರೆದಿಟ್ಟಿದ್ದಾರೆ. ಅಮ್ಮ-ಅಪ್ಪ ಸ್ವಾರಿ. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ಆಗಲ್ಲ. ಹೀಗಾಗಿ ನಾವು ದೂರ ಹೋಗಿ ಸತ್ತಿದ್ದೇವೆ ಎಂದು ಆಘಾತಕಾರಿ ಪತ್ರ ಬರೆದಿಟ್ಟು ಹೋಗಿರುವುದು ಆತಂಕಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • ತಾಯಿ ಬೈದಿದ್ದಕ್ಕೆ ಆಘಾತಕಾರಿ ಬರೆದಿಟ್ಟು ಸಹೋದರಿಯರು ನಾಪತ್ತೆ
  • ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಘಟನೆ
  • ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ನಾಪತ್ತೆ
  • ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಪೊಲೀಸರಿಂದ ಶೋಧ ಕಾರ್ಯ

ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಆತಂಕ

ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿ ಗ್ರಾಮದ ರಾಮಚಂದ್ರ ಎಂಬುವರ ಮಕ್ಕಳಾದ ಸುಜಾತ ಮತ್ತು ರುಕ್ಮಿಣಿ ಮನೆ ಬಿಟ್ಟು ಹೋಗಿದ್ದು, ಮನೆಯಿಂದ ಹೋಗುವ ಮುನ್ನ ಬರೆದಿಟ್ಟಿರುವ ಪತ್ರದಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ. ಅಪ್ಪ-ಅಮ್ಮ ಸ್ಸಾರಿ ನಿಮ್ಮ ಕಣ್ಮುಂದೆ ಸಾಯೋಕೆ ಆಗಲ್ಲ ಅಂತಾ ನಾವು ದೂರ ಹೋಗಿ ಸತ್ತಿದ್ದೇವೆ ಸ್ಸಾರಿ ಎಂದು ಪತ್ರದಲ್ಲಿ ಬರೆದಿದ್ದು, ಈ ಪತ್ರ ಪೋಷಕರು ಹಾಗೂ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಆತಂಕದಿಂದಲೇ ಪೊಲಿಸರ ಮೊರೆ ಹೋದ ಪೋಷಕರು

ಈ ಪತ್ರ ಓದಿದ ಕೂಡಲೇ ಆತಂಕಗೊಂಡ ಪೋಷಕರು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಮಕ್ಕಳನ್ನ ಹುಡುಕಿಕೊಡಿ ಎಂದು ಕಣ್ಣೀರಿಟ್ಟಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿಕೊಂಡು ಮಕ್ಕಳ ಪತ್ತೆಗೆ ಶೋಧಕಾರ್ಯ ನಡೆಸಿದ್ದಾರೆ. ಮಕ್ಕಳು ಏನಾದರೂ ಪ್ರಾಣಕ್ಕೆ ಅಪಾಯ ಮಾಡಿಕೊಂಡಿರಬಹುದೇ ಎಂದು ಕುಟುಂಬಸ್ಥರು ಆತಂಕಗೊಂಡು ಕಣ್ಣೀರು ಹಾಕುತ್ತಿದ್ದಾರೆ.

ಹುಟ್ಟಿಸಿ ಬೆಳೆಸಿದ ಪೋಷಕರು ಅಂದಮೇಲೆ ಮಕ್ಕಳು ತಪ್ಪು ಮಾಡಿದ್ರೆ ಬೈದು ಬುದ್ಧಿ ಹೇಳುತ್ತಾರೆ. ಆದ್ರೆ, ಮಕ್ಕಳಾದವರು, ತಂದೆ ತಾಯಿ ಬೈದರು ಎಂದು ಮನನೊಂದು ಈ ರೀತಿಯ ನಿರ್ಧಾರ ಕೈಗೊಳ್ಳುವುದು ತಪ್ಪು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಇಂಡಿಯಾಸ್ ಗಾಟ್ ಲೇಟೆಂಟ್ ಸೀಸನ್ 2’ ಮೊದಲ ಎಪಿಸೋಡ್​​ಗೆ ಬಾಲಿವುಡ್ ಸ್ಟಾರ್ ನಟಿ ಅತಿಥಿ – Kannada News | Alia Bhatt And Sharvari Leaked Photo From India’s Got Latent 2 Goes Viral

ಖ್ಯಾತ ಸ್ಟ್ಯಾಂಡಪ್ ಕಾಮಿಡಿಯನ್ ಸಮಯ್ ರೈನಾ ಅವರ ಜನಪ್ರಿಯ ಹಾಗೂ ವಿವಾದಾತ್ಮಕ ರಿಯಾಲಿಟಿ ಶೋ ಎಂದರೆ ಅದು ‘ಇಂಡಿಯಾಸ್ ಗಾಟ್ ಲೇಟೆಂಟ್’. ಈ ಶೋಗೆ ಎರಡನೇ ಸೀಸನ್ ಬರಲಿದೆ ಎಂದು ಸಮಯ್ ಇತ್ತೀಚೆಗೆ ಹೇಳಿದ್ದರು. ಈಗ ಮೊದಲ ಎಪಿಸೋಡ್‌ನ ಶೂಟಿಂಗ್ ಸೆಟ್‌ನಿಂದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಲೀಕ್ ಆಗಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಸೋರಿಕೆಯಾದ ಫೋಟೋದಲ್ಲಿ ಬಾಲಿವುಡ್ ತಾರೆಯರಾದ ಆಲಿಯಾ ಭಟ್ ಮತ್ತು ಶಾರ್ವರಿ ಜಡ್ಜ್‌ಗಳ ಸೀಟಿನಲ್ಲಿ ಕುಳಿತಿರುವುದು ಕಾಣಿಸಿದೆ.

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಈ ಫೋಟೋದಲ್ಲಿ ಆಲಿಯಾ ಮತ್ತು ಶಾರ್ವರಿ ಜೊತೆಗೆ ಹಾಸ್ಯನಟರಾದ ಬಾಲರಾಜ್ ಸಿಂಗ್ ಘಾಯ್ ಮತ್ತು ಆಶಿಶ್ ಸೋಲಂಕಿ ತೀರ್ಪುಗಾರರ ಪ್ಯಾನೆಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ರಾಜ್ ಫಿಲ್ಮ್ಸ್‌ನ ಬಹುನಿರೀಕ್ಷಿತ ಮಹಿಳಾ ಪ್ರಧಾನ ಸ್ಪೈ ಯುನಿವರ್ಸ್ ಚಿತ್ರ ‘ಆಲ್ಫಾ’ ಪ್ರಚಾರಕ್ಕಾಗಿ ಇವರಿಬ್ಬರು ಈ ಶೋಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ‘ಎಲ್ಲರೂ ಕಲ್ಲು ಹೊಡೆಯುತ್ತಾರೆ’; ಕಪಿಲ್ ಶರ್ಮಾ ಶೋನಲ್ಲಿ ಸಮಯ್ ರೈನಾ ನೇರ ಮಾತು

ಸಮಯ್ ರೈನಾ ಕಾರ್ಯಕ್ರಮದ ಅಪ್ಪಟ ಅಭಿಮಾನಿಗಳು ಈ ಲೀಕ್ಡ್ ಫೋಟೋ ನೋಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಆಲಿಯಾ ಭಟ್ ಎಲ್ಲ ಕಡೆಯೂ ಕಾಣಿಸಿಕೊಳ್ಳುತ್ತಿದ್ದಾರೆ. ಕೇವಲ ಸಿನಿಮಾಗಳ ಪ್ರಚಾರಕ್ಕಾಗಿ ಇಂತಹ ಶೋಗಳನ್ನು ಬಳಸಿಕೊಂಡರೆ ಶೋನ ಅಸಲಿ ಆತ್ಮವೇ ಹೊರಟುಹೋಗುತ್ತದೆ’ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

ಹಳೆಯ ವಿವಾದ:

ಕಳೆದ ಸೀಸನ್‌ನಲ್ಲಿ ಪಾಡ್‌ಕಾಸ್ಟರ್ ರಣವೀರ್ ಅಲಹಾಬಾದಿಯಾ ಅವರು ಸ್ಪರ್ಧಿಯೊಬ್ಬರಿಗೆ ಕೇಳಿದ ಅಶ್ಲೀಲ ಮತ್ತು ವಿವಾದಾತ್ಮಕ ಪ್ರಶ್ನೆಯಿಂದಾಗಿ ಈ ಶೋ ದೊಡ್ಡ ಮಟ್ಟದ ಕಾನೂನು ಸಂಕಷ್ಟಕ್ಕೆ ಸಿಲುಕಿತ್ತು. ಸಮಯ್ ರೈನಾ ಸೇರಿದಂತೆ ಹಲವರ ವಿರುದ್ಧ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಹೀಗಾಗಿ ಸಮಯ್ ತಮ್ಮ ಯೂಟ್ಯೂಬ್ ಚಾನೆಲ್‌ನಿಂದ ಎಲ್ಲಾ ಎಪಿಸೋಡ್‌ಗಳನ್ನು ಡಿಲೀಟ್ ಮಾಡಬೇಕಾಗಿ ಬಂದಿತ್ತು. ಇದೀಗ ವರ್ಷಗಳ ಬಳಿಕ ಶೋ ಮತ್ತೆ ಆರಂಭವಾಗುತ್ತಿದ್ದು, ಸಿನಿಮಾ ಪ್ರಚಾರದ ನಡುವೆಯೂ ಹಳೆಯ ಕ್ರೇಜ್ ಉಳಿಸಿಕೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಶಾರ್ವರಿ, ಆಲಿಯಾ ನಟನೆಯ ‘ಆಲ್ಫಾ’ ಸಿನಿಮಾ ಜುಲೈ 10 ರಂದು ತೆರೆಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯತ್ನಾಳ್​​ ಹೇಳಿಕೆಗೆ ಬೆಂಬಲವಿದೆ ಎಂದ ಜನಾರ್ದನ ರೆಡ್ಡಿ: ಖಡಕ್​​ ರಿಯಾಕ್ಷನ್​​ ಕೊಟ್ಟ ಗಂಗಾವತಿ ಶಾಸಕ – Kannada News | Janardhana Reddy Backs Yatnals Jai Shri Ram Call in Schools

ಕೊಪ್ಪಳ, ಮೇ 19: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ಶಾಲಾ ಹಾಜರಾತಿಯ ಸಂದರ್ಭದಲ್ಲಿ ಯೆಸ್ ಸರ್ ಬದಲು ಜೈ ಶ್ರೀರಾಮ್ ಎಂದು ಹೇಳಬೇಕೆಂಬ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕರೆಯನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ರೆಡ್ಡಿ, ಈ ವಿಷಯಕ್ಕೆ ನೂರಕ್ಕೆ ನೂರು ನನ್ನ ಬೆಂಬಲ ಇದೆ ಎಂದು ಘೋಷಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರೆಡ್ಡಿ, ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುತ್ತಿದೆ. ಹಿಜಾಬ್ ವಿವಾದದ ಕುರಿತು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿಷಯವಿದ್ದರೂ, ಸರ್ಕಾರವು ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷವು ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದೇವಸ್ಥಾನಗಳ ಚಿನ್ನದ ನಗದೀಕರಣದ ಯಾವ ಯೋಜನೆಯೂ ಇಲ್ಲ; ವೈರಲ್ ಸುದ್ದಿ ಕೇವಲ ವದಂತಿ: ಕೇಂದ್ರ ಸರ್ಕಾರ ಸ್ಪಷ್ಟನೆ – Kannada News | Temple Gold Monetization Rumor Debunked: PIB Confirms No New Scheme

ನವದೆಹಲಿ, ಮೇ 19: ದೇವಸ್ಥಾನದಲ್ಲಿರುವ ಚಿನ್ನವನ್ನು ನಗದೀಕರಣಗೊಳಿಸಲು (Gold Monetisation scheme) ಸರ್ಕಾರ ಯೋಜಿಸುತ್ತಿದೆ ಎಂಬಂತಹ ಕೆಲ ಸುದ್ದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. “ಕೇಂದ್ರ ಸರ್ಕಾರವು ದೇಶದ ದೇವಸ್ಥಾನಗಳಿಗಾಗಿ ಹೊಸ ‘ಚಿನ್ನದ ಬಾಂಡ್ ಯೋಜನೆ’ (Gold Bond Scheme) ಯನ್ನು ಜಾರಿಗೊಳಿಸಲು ಮತ್ತು ದೇವಸ್ಥಾನದ ಗೋಪುರ ಇತ್ಯಾದಿ ಕಟ್ಟಡಗಳಲ್ಲಿ ಹಾಕಲಾಗಿರುವ ಗೋಲ್ಡ್ ಪ್ಲೇಟ್ ಇತ್ಯಾದಿ ಚಿನ್ನವನ್ನು ದೇಶದ ಸ್ಟ್ರಾಟಿಜಿಕ್ ರಿಸರ್ವ್ ಎಂದು ಪರಿಗಣಿಸಲು ಯೋಜಿಸುತ್ತಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಯನ್ನು ಭಾರತ ಸರ್ಕಾರ ಅಧಿಕೃತವಾಗಿ ನಿರಾಕರಿಸಿದೆ ಮತ್ತು ಇದು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟಪಡಿಸಿದೆ.

ಸುದ್ದಿಯ ಮುಖ್ಯಾಂಶಗಳು

  • ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರ ನಿಯಂತ್ರಣ ಪಡೆದು ಅದರ ನಗದೀಕರಣ ಮಾಡಲು ಯೋಜಿಸಿದೆ ಎನ್ನುವಂತಹ ವದಂತಿಗಳು ಹರಿದಾಡುತ್ತಿವೆ.
  • ಈ ಸುದ್ದಿಯನ್ನು ಸರ್ಕಾರ ಅಲ್ಲಗಳೆದಿದೆ. ದೇವಸ್ಥಾನದ ಚಿನ್ನದ ಮೇಲೆ ನಿಯಂತ್ರಣ ಹೊಂದುವ ಯಾವ ಉದ್ದೇಶ ಇಲ್ಲ ಎಂದು ಪಿಐಬಿ ಹೇಳಿದೆ.
  • ದೇಶದಲ್ಲಿ ಚಿನ್ನಕ್ಕೆ ಬಹಳ ಬೇಡಿಕೆ ಇದ್ದು, ಹೆಚ್ಚಿನ ಚಿನ್ನವನ್ನು ಆಮದು ಮಾಡಬೇಕಿದೆ. ಚಿನ್ನದ ಖರೀದಿ ಕಡಿಮೆ ಮಾಡಿ ಎಂದು ಮೊನ್ನೆ ಪಿಎಂ ಹೇಳಿದ್ದರು.

ಇದನ್ನೂ ಓದಿ: ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ?

ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದುದು ವದಂತಿ…

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಕೆಲವು ವರದಿಗಳಲ್ಲಿ ಕೇಂದ್ರ ಸರ್ಕಾರವು ದೇವಸ್ಥಾನಗಳ ಬಳಿ ಇರುವ ಹೆಚ್ಚುವರಿ ಚಿನ್ನವನ್ನು ಬ್ಯಾಂಕುಗಳಲ್ಲಿ ಇಟ್ಟು ಅದರ ಮೂಲಕ ಬಾಂಡ್‌ಗಳನ್ನು ವಿತರಿಸುವ ಹೊಸ ಚಿನ್ನದ ನಗದೀಕರಣ ಯೋಜನೆಯನ್ನು (Gold Monetisation Scheme) ಜಾರಿಗೆ ತರುತ್ತಿದೆ ಎಂದು ವ್ಯಾಪಕವಾಗಿ ಪ್ರಚಾರ ಮಾಡಲಾಗಿತ್ತು. ಇದರಿಂದಾಗಿ ದೇವಸ್ಥಾನಗಳ ಒಡೆತನದ ಚಿನ್ನದ ಮೇಲೆ ಸರ್ಕಾರದ ನಿಯಂತ್ರಣ ಬರಲಿದೆ ಎಂಬಂತಹ ಚರ್ಚೆಗಳು ಶುರುವಾಗಿದ್ದವು.

ಈ ಸುದ್ದಿ ತೀವ್ರವಾಗಿ ಹರಡುತ್ತಿದ್ದಂತೆ, ಸರ್ಕಾರದ ಅಧಿಕೃತ ಮಾಹಿತಿ ಸಂಸ್ಥೆಯಾದ ಪಿಐಬಿ ಫ್ಯಾಕ್ಟ್ ಚೆಕ್ (PIB Fact Check) ಈ ಬಗ್ಗೆ ತನಿಖೆ ನಡೆಸಿ ಸ್ಪಷ್ಟನೆ ನೀಡಿದೆ. ಸರ್ಕಾರವು ದೇವಸ್ಥಾನಗಳಿಗಾಗಿ ಇಂತಹ ಯಾವುದೇ ಹೊಸ ಚಿನ್ನದ ಬಾಂಡ್ ಯೋಜನೆಯನ್ನು ಘೋಷಿಸಿಲ್ಲ ಅಥವಾ ಜಾರಿಗೆ ತರುತ್ತಿಲ್ಲ ಎಂದು ಪಿಐಬಿ ಖಚಿತಪಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆ ಸುದ್ಧಿ ಕೇವಲ ವದಂತಿ ಮತ್ತು ಸುಳ್ಳು (Fake News) ಎಂದು ಸರ್ಕಾರ ಹೇಳಿದೆ.

ಈಗ ಜಾರಿಯಲ್ಲಿರುವ ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ಏನು?

ಸರ್ಕಾರ ಚಿನ್ನಕ್ಕೆ ಸಂಬಂಧಿಸಿದ ಕೆಲ ಯೋಜನೆಗಳನ್ನು ಮತ್ತು ಸ್ಕೀಮ್​ಗಳನ್ನು ಜಾರಿಗೊಳಿಸಿದೆ. ಸಾವರೀನ್ ಗೋಲ್ಡ್ ಬಾಂಡ್ ಮತ್ತು ಗೋಲ್ಡ್ ಮಾನಿಟೈಸೇಶನ್ ಸ್ಕೀಮ್, ಇವು ಪ್ರಮುಖವಾದುವು. ಸಾವರಿನ್ ಗೋಲ್ಡ್ ಬಾಂಡ್ 2015ರಲ್ಲಿ ಆರಂಭವಾಗಿದೆ. ಆದರೆ, ಕಳೆದ ಒಂದು ವರ್ಷದಿಂದ ಹೊಸ ಸರಣಿಯ ಬಾಂಡ್​ಗಳನ್ನು ಬಿಡುಗಡೆ ಮಾಡಲಾಗಿಲ್ಲ. ಇನ್ನು, ಗೋಲ್ಡ್ ಮಾನಿಟೈಸೇಶನ್ ಸ್ಕೀಮ್​ನಲ್ಲಿ ಅಲ್ಪಾವಧಿ ಪ್ಲಾನ್ ಅನ್ನು ಮಾತ್ರ ಮುಂದುವರಿಸಲಾಗಿದೆ. 3 ವರ್ಷ ಮೇಲ್ಪಟ್ಟ ಅವಧಿಯ ಪ್ಲಾನ್​ಗಳನ್ನು ನಿಲ್ಲಿಸಲಾಗಿದೆ. ಗೋಲ್ಡ್ ಮಾನಿಟೈಸೇಶನ್​ನಲ್ಲಿ ನೀವು ಬಳಸದೇ ಇರುವ ಚಿನ್ನವನ್ನು ಡೆಪಾಸಿಟ್ ಆಗಿ ಇಟ್ಟು ಅದರಿಂದ ಬಡ್ಡಿ ಪಡೆಯುವ ಅವಕಾಶ ಇರುತ್ತದೆ. 1ರಿಂದ 3 ವರ್ಷದ ಡೆಪಾಸಿಟ್​ಗೆ ಅವಕಾಶ ಇದೆ. ಬಡ್ಡಿ ಶೇ. 1ಕ್ಕಿಂತಲೂ ಕಡಿಮೆ ಇರುವುದರಿಂದ ಈ ಸ್ಕೀಮ್ ಹೆಚ್ಚು ಜನಪ್ರಿಯತೆ ಪಡೆದಿಲ್ಲ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಇದೇ ಮಾದರಿಯ ಮಾನಿಟೈಸೇಶನ್ ಸ್ಕೀಮ್ ಅನ್ನು ದೇವಸ್ಥಾನಗಳಿಗೆ ತರಲು ಹೊರಟಿದೆ ಎನ್ನುವಂತಹ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಸರ್ಕಾರ ಈ ಸುದ್ದಿಯನ್ನು ಅಲ್ಲಗಳೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ (WhatsApp, Facebook, X) ಇಂತಹ ಸೂಕ್ಷ್ಮ ವಿಷಯಗಳ ಕುರಿತು ಬರುವ ಅನಧಿಕೃತ ಸುದ್ದಿಗಳನ್ನು ನಂಬಬೇಡಿ ಮತ್ತು ಅವುಗಳನ್ನು ಇತರರಿಗೆ ಶೇರ್ ಮಾಡುವ ಮುನ್ನ ಸರ್ಕಾರದ ಅಧಿಕೃತ ಮೂಲಗಳಿಂದ ಪರಿಶೀಲಿಸಿಕೊಳ್ಳಿ ಎಂದು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಜನರಲ್ಲಿ ಮನವಿ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಎರಡೆರಡು ಬಾರಿ ಸೆರೆ, ಮನೆಗಳ ಬಾಗಿಲು ಮುರಿದು ಪುಂಡಾಟ: ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ – Kannada News | Dubare Camp Elephant Martanda Dies in Fight; Had a Fearsome Past

ಕಾದಾಟದಲ್ಲಿ ಮೃತಪಟ್ಟ ಮಾರ್ತಾಂಡ ಆನೆಗಿತ್ತು ಭಯಂಕರ ಇತಿಹಾಸ

ಮಡಿಕೇರಿ, ಮೇ 19: ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ಕಾದಾಟದ ವೇಳೆ ಆನೆ ಕಂಜನ್​​ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಇಂದು (ಮೇ 19  ಮೃತಪಟ್ಟಿದೆ. ಮೂರು ವರ್ಷಗಳ ಹಿಂದೆ ಮೇ 19ರಂದೇ ಮಾರ್ತಾಂಡನನ್ನು ಸೆರೆಹಿಡಿಯಲಾಗಿತ್ತು.  ಕಾಕತಾಳೀಯ ಎಂಬಂತೆ ಅದೇ ತಾರೀಕಿನಂದು ಆನೆಯೀಗ ಮೃತಪಟ್ಟಿದೆ. 2023ರಲ್ಲಿ ಸೆರೆಯಾಗಿ ಪಳಗಿದ ಬಳಿಕ ಮಾರ್ತಾಂಡ ಶಾಂತ ಸ್ವಭಾವದಿಂದ ಇರುತ್ತಿತ್ತು ಎನ್ನಲಾಗಿದೆ. ಡಾ‌. ಚಿಟ್ಟಿಯಪ್ಪ ನೇತೃತ್ವದಲ್ಲಿ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ದುಬಾರೆ ಅರಣ್ಯದಲ್ಲಿಯೇ ಅಂತ್ಯ ಸಂಸ್ಕಾರಕ್ಕೆ ನಿರ್ಧರಿಸಲಾಗಿದೆ.

2022ರ ಜೂನ್ 29ರಂದು ಸಕಲೇಶಪುರ ತಾಲೂಕಿನ ಕರೆಗರ್ಜೆ ಬಳಿ ಮಾರ್ತಾಂಡ ಆನೆಯನ್ನು ಮೊದಲ ಬಾರಿ ಅರಣ್ಯ ಇಲಾಖೆ ಸೆರೆ ಹಿಡಿತ್ತು. ಆ ಬಳಿಕ ರೇಡಿಯೊ ಕಾಲರ್ ಅಳವಡಿಸಿ ಬಂಡಿಪುರಕ್ಕೆ ಬಿಡಲಾಗಿತ್ತು. ಒಂದೇ ತಿಂಗಳಲ್ಲಿ ನೂರಾರು ಕಿಲೋ ಮೀಟರ್ ಸಾಗಿ ಮರಳಿ ಹಾಸನಕ್ಕೆ ಮರಳಿದ್ದ ಮಾರ್ತಾಂಡ, ಕೆಲ ತಿಂಗಳು ಸೈಲೆಂಟ್ ಆಗಿ ಮರೆಯಾಗಿತ್ತು. ಆ ಬಳಿಕ ಭತ್ತ ಅರಸಿ ಊರೂರು ಅಲೆಯಲು ಶುರುಮಾಡಿದ್ದು, ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಮುರಿದು ಭತ್ತ ತಿನ್ನಲು ಶುರು ಮಾಡಿತ್ತು. ಹೀಗಾಗಿ ಎರಡನೇ ಬಾರಿಗೆ 2023ರ ಮೇ 19ರಂದು ಮಾರ್ತಾಂಡ ಆನೆಯನ್ನು ಸಕಲೇಶಪುರ ತಾಲೂಕಿನ ಒಸ್ಸೂರು ಬಳಿಯ ಕಾಫಿತೋಟದಲ್ಲಿ ಸೆರೆ ಹಿಡಿಯಲಾಗಿತ್ತು.

ಇದನ್ನೂ ಓದಿ: ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು

ಈಶ್ವರ ಖಂಡ್ರೆ ಸಂತಾಪ

ದುಬಾರೆ ಆನೆ ಶಿಬಿರದಲ್ಲಿ ಮಾರ್ತಾಂಡ ಆನೆ ಮೃತಪಟ್ಟಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್​​ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅನಿರೀಕ್ಷಿತವಾದ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ ಮತ್ತು ಒಂದು ಆನೆ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ . ಹಾಸನ ಜಿಲ್ಲೆಯಲ್ಲಿ ಸೆರೆ ಹಿಡಿಯಲಾಗಿದ್ದ ಮಾರ್ತಾಂಡ ಆನೆ 4,500 ಕೆ.ಜಿ. ತೂಕವಿತ್ತು ಎಂದು ತಿಳಿಸಿದ್ದಾರೆ. ಅಲ್ಲದೆ ಹಾಸನ ಜಿಲ್ಲೆ ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ಕಂಜನ್ ಆನೆ 3 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು. ಆದರೆ ಇನ್ನು ಮುಂದೆ ದಸರಾಗೆ ಈ ಆನೆಯನ್ನು ಬಳಸದಂತೆ ಸೂಚಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.

ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಸೂಚನೆ

ಇನ್ನು ದುಬಾರೆಯಲ್ಲಿ ಪ್ರವಾಸಿ‌ ಮಹಿಳೆ ಮತ್ತು ಸಾಕಾನೆ ಸಾವು ವಿಚಾರ ಸಂಬಂಧ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಸೂಚಿಸಿದ್ದಾರೆ. ಘಟನೆ ಕುರಿತು ಜಿಲ್ಲಾಡಳಿತದ ಜೊತೆ ಸಚಿವರು ಚರ್ಚಿಸಿದ್ದು, ಪ್ರವಾಸಿ ಮಾರ್ಗಸೂಚಿಯಲ್ಲಿ ಲೋಪವಾಗಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರವಾಸಿಗರು ಅರಣ್ಯ ಇಲಾಖೆಯ ನಿಯಮಗಳನ್ನು ಕಡ್ಡಾಯ ಪಾಲಿಸಬೇಕು. ಕಾಡು ಪ್ರಾಣಿಗಳಿಂದ ಅಂತರ ಕಾಯ್ದುಕೊಳ್ಳಬೇಕು. ಪ್ರವಾಸಿಗರ ಸುರಕ್ಷತೆ ಬಗ್ಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಭಯ ಬೇಡ ನಾನಿದ್ದೀನಿ, ಪತ್ನಿ ಸಮಾಧಿ ಪಕ್ಕ ತನ್ನ ಸಮಾಧಿ ನಿರ್ಮಿಸಿಕೊಂಡ ಪತಿ – Kannada News | Heartbroken Husband Builds Resting Place Beside Wife’s Grave in Andhra Pradesh

ಕಡಪ, ಮೇ 19: ಬದುಕಿನ ಪಯಣದಲ್ಲಿ ಸಪ್ತಪದಿ ತುಳಿದು ಒಂದಾದ ನಾವು, ಸಾವಿನ ನಂತರವೂ ಬೇರೆಯಾಗಬಾರದು ಎಂಬ ಈ ಮಾತುಗಳನ್ನು ಅಕ್ಷರಶಃ ನಿಜವಾಗಿಸಿದ್ದಾರೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚಿನ್ನ ಚೌಕ್‌ನ ಸಹಕಾರಿ ಕಾಲೋನಿ ನಿವಾಸಿ ಪಿ. ರಾಮಮೋಹನ್ ರಾಜು. ಕ್ಯಾನ್ಸರ್‌(Cancer)ನಿಂದ ಮೃತಪಟ್ಟ ಪತ್ನಿಯ ಮೇಲಿನ ಪ್ರೀತಿಗಾಗಿ, ಅವರು ಸ್ಮಶಾನದಲ್ಲೇ ಆಕೆಯ ಸಮಾಧಿಯ ಪಕ್ಕದಲ್ಲಿ ತನಗಾಗಿಯೂ ಒಂದು ಸಮಾಧಿಯನ್ನು ನಿರ್ಮಿಸಿಕೊಂಡಿದ್ದಾರೆ.

ನಿವೃತ್ತ ಸರ್ಕಾರಿ ಉದ್ಯೋಗಿಯಾದ ಪಿ. ರಾಮಮೋಹನ್ ರಾಜು ಅವರು ಭವಿಷ್ಯ ನಿಧಿ (PF) ಕಚೇರಿಯಲ್ಲಿ ಅಧಿಕಾರಿಯಾಗಿ ಹಾಗೂ ಆಂಧ್ರಪ್ರದೇಶದ ವೈದ್ಯಕೀಯ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು. ಇವರಿಗೂ ಮತ್ತು ರಾಜ್ಯಲಕ್ಷ್ಮಿ ಅವರಿಗೂ 1978 ರಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದಾರೆ. ಸುಮಾರು 33 ವರ್ಷಗಳ ಕಾಲ ಅತ್ಯಂತ ಸಾಮರಸ್ಯದಿಂದ ಸಂಸಾರ ನಡೆಸಿದ ಈ ಜೋಡಿಗೆ ವಿಧಿ 2011 ರಲ್ಲಿ ಕ್ರೂರ ಆಘಾತ ನೀಡಿತು. ರಾಮಮೋಹನ್ ಅವರ ಪತ್ನಿ ರಾಜ್ಯಲಕ್ಷ್ಮಿ ಕ್ಯಾನ್ಸರ್ ಕಾಯಿಲೆಯಿಂದಾಗಿ ನಿಧನರಾದರು.

ಪತ್ನಿ ತೀರಿಕೊಂಡ ನಂತರ ಮಕ್ಕಳ ಸಮ್ಮುಖದಲ್ಲಿ ಆಕೆಯ ಅಂತ್ಯಕ್ರಿಯೆ ನಡೆಸಿ, ಸಮಾಧಿ ನಿರ್ಮಿಸಲಾಯಿತು. ಆದರೆ, ಅರ್ಧಾಂಗಿಯ ಅಗಲಿಕೆಯನ್ನು ರಾಮಮೋಹನ್ ರಾಜು ಅವರಿಗೆ ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಹೆಂಡತಿಯಿಲ್ಲದ ಜೀವನ ಅವರಿಗೆ ಶೂನ್ಯವೆನಿಸಿತು. ಸಾವು ನಮ್ಮನ್ನು ಕೇವಲ ದೈಹಿಕವಾಗಿ ಮಾತ್ರ ಬೇರ್ಪಡಿಸಿದೆ, ಆದರೆ ತನ್ನ ಆತ್ಮ ಸದಾ ಆಕೆಯೊಂದಿಗೇ ಇರಬೇಕೆಂದು ಅವರು ಬಯಸಿದರು. ಅದಕ್ಕಾಗಿಯೇ ಅವರು ಒಂದು ವಿಭಿನ್ನ ಹಾಗೂ ಭಾವನಾತ್ಮಕ ನಿರ್ಧಾರಕ್ಕೆ ಬಂದರು.

ರಾಮಮೋಹನ್ ರಾಜು ನೇರವಾಗಿ ಸ್ಮಶಾನದ ವ್ಯವಸ್ಥಾಪಕರನ್ನು ಸಂಪರ್ಕಿಸಿದರು. ನನ್ನ ಪತ್ನಿಯ ಸಮಾಧಿಯ ಪಕ್ಕದಲ್ಲೇ ನನಗೂ ಸ್ವಲ್ಪ ಜಾಗವನ್ನು ನೀಡಿ, ನಾನು ಬದುಕಿರುವಾಗಲೇ ನನಗಾಗಿ ಅಲ್ಲಿ ಸಮಾಧಿಯನ್ನು ನಿರ್ಮಿಸಿಕೊಳ್ಳುತ್ತೇನೆ ಎಂದು ವಿನಂತಿಸಿದರು. ಅವರ ಅಪರಿಮಿತ ಪ್ರೀತಿಯನ್ನು ಕಂಡು ಮನಕರಗಿದ ಸ್ಮಶಾನದ ಆಡಳಿತ ಮಂಡಳಿ ಅದಕ್ಕೆ ಒಪ್ಪಿಗೆ ನೀಡಿತು. ತಕ್ಷಣವೇ ಅವರು ತಮಗಾಗಿ ಹೆಂಡತಿಯ ಸಮಾಧಿಯ ಪಕ್ಕದಲ್ಲೇ ಮತ್ತೊಂದು ಸಮಾಧಿಯನ್ನು ನಿರ್ಮಿಸಿಕೊಂಡರು.

ಮತ್ತಷ್ಟು ಓದಿ: ಕ್ಯಾನ್ಸರ್ ಸಂಬಂಧಿತ ಚಿಕಿತ್ಸೆಗೆ ದಾಖಲಾಗಿದ್ದ ವೃದ್ಧೆ ಸಾವು! ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ

ಕೇವಲ ಸಮಾಧಿ ನಿರ್ಮಿಸುವುದಷ್ಟೇ ಅಲ್ಲ, ತಾವು ಮರಣ ಹೊಂದಿದ ನಂತರ ಯಾವುದೇ ಅಡೆತಡೆಯಿಲ್ಲದೆ ಹೆಂಡತಿಯ ಪಕ್ಕದಲ್ಲೇ ತನ್ನನ್ನು ಮಲಗಿಸಬೇಕು ಎಂದು ತಮ್ಮ ನಾಲ್ಕು ಹೆಣ್ಣುಮಕ್ಕಳನ್ನು ಒಪ್ಪಿಸಿ, ಅದಕ್ಕಾಗಿ ತಮ್ಮ ಪಿಂಚಣಿ ಹಣದಿಂದ ಬರೋಬ್ಬರಿ 4 ಲಕ್ಷ ರೂಪಾಯಿಗಳನ್ನು ತೆಗೆದಿಟ್ಟಿದ್ದಾರೆ.

ಇದಲ್ಲದೆ, ತಾವು ಸತ್ತ ನಂತರ ತಮ್ಮ ಅಂತ್ಯಕ್ರಿಯೆಯು ಯಾವುದೇ ಅಳುಕಿಲ್ಲದೆ,ಸಾಂಪ್ರದಾಯಿಕ ಸಮಾರಂಭದಂತೆ ಸಾಗಬೇಕು ಎಂದು ತಮ್ಮ ಆಪ್ತ ಸ್ನೇಹಿತರೊಬ್ಬರಿಗೆ 50 ಸಾವಿರ ರೂಪಾಯಿಗಳನ್ನು ಮುಂಗಡವಾಗಿ ನೀಡಿ ಜವಾಬ್ದಾರಿ ವಹಿಸಿದ್ದಾರೆ!

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತಾಜ್ ಮಹಲ್ ಕಟ್ಟಿದವರ ನಡುವೆ, ತನ್ನ ನಿವೃತ್ತಿಯ ಹಣದಲ್ಲಿ ಹೆಂಡತಿಯ ಸಮಾಧಿಯ ಪಕ್ಕದಲ್ಲೇ ತನಗೊಂದು ಸಮಾಧಿ ನಿರ್ಮಿಸಿಕೊಂಡ ಈ ಸಾಮಾನ್ಯ ಅಧಿಕಾರಿಯ ಕಥೆ, ಕಡಪ ಜಿಲ್ಲೆಯಾದ್ಯಂತ ಮನೆಮಾತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಶಿವರಾಜ್ ಕುಮಾರ್ ಗೀತಾ ದಂಪತಿಗಳ ವಿವಾಹ ವಾರ್ಷಿಕೋತ್ಸವ: ಇಲ್ಲಿವೆ ಚಿತ್ರಗಳು

Source link

Exit mobile version