Pearl Ring: ಮುತ್ತಿನ ಉಂಗುರ ಧರಿಸುವುದರಿಂದ ಸಿಗುತ್ತೆ ಅಪಾರ ಪ್ರಯೋಜನ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Benefits of Pearl Ring: Enhance Mental Peace and Financial Stability

ಭಾರತೀಯ ಸಂಪ್ರದಾಯದಲ್ಲಿ ರತ್ನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ವಿಶೇಷವಾಗಿ ಮುತ್ತನ್ನು ಬಹಳ ಶುಭ ರತ್ನವೆಂದು ಪರಿಗಣಿಸಲಾಗುತ್ತದೆ. ಮುತ್ತಿನ ಉಂಗುರವನ್ನು ಧರಿಸುವುದರಿಂದ ಮಾನಸಿಕ ಶಾಂತಿಯಿಂದ ಹಿಡಿದು ಆರ್ಥಿಕ ಸ್ಥಿರತೆಯವರೆಗೆ ಅನೇಕ ಪ್ರಯೋಜನಗಳಿವೆ ಎಂದು ಜ್ಯೋತಿಷಿಗಳು ಹೇಳುತ್ತಾರೆ.

ಜ್ಯೋತಿಷ್ಯದ ಪ್ರಕಾರ, ಮುತ್ತು ಚಂದ್ರ ಗ್ರಹಕ್ಕೆ ಸಂಬಂಧಿಸಿದ ರತ್ನವಾಗಿದೆ. ಚಂದ್ರನು ನಮ್ಮ ಮನಸ್ಸು, ಭಾವನೆಗಳು, ಶಾಂತಿ, ತಾಯಿಯೊಂದಿಗಿನ ಸಂಬಂಧ ಮತ್ತು ಸ್ಮರಣೆಯನ್ನು ಪ್ರತಿನಿಧಿಸುತ್ತಾನೆ. ಆದ್ದರಿಂದ, ಚಂದ್ರನ ಪ್ರಭಾವದಿಂದ ದುರ್ಬಲರಾಗಿರುವವರಿಗೆ ಮುತ್ತು ತುಂಬಾ ಪ್ರಯೋಜನಕಾರಿಯಾಗಿದೆ.

ಮುತ್ತಿನ ಉಂಗುರ ಧರಿಸುವುದರಿಂದಾಗುವ ಪ್ರಯೋಜನಗಳು:

ಮುತ್ತುಗಳನ್ನು ಧರಿಸುವುದರಿಂದ ಮಾನಸಿಕ ಶಾಂತಿ ಹೆಚ್ಚಾಗುತ್ತದೆ ಮತ್ತು ಒತ್ತಡ, ಆತಂಕ ಮತ್ತು ಕೋಪ ಕಡಿಮೆಯಾಗುತ್ತದೆ, ಮನಸ್ಸಿಗೆ ಶಾಂತಿ ಸಿಗುತ್ತದೆ ಎಂದು ನಂಬಲಾಗಿದೆ . ಹೆಚ್ಚಿನ ಮಟ್ಟದ ಉದ್ವೇಗಕ್ಕೆ ಒಳಗಾಗುವವರಿಗೆ ಇದು ವಿಶೇಷವಾಗಿ ಒಳ್ಳೆಯದು.

ನಿದ್ರೆಯ ಸಮಸ್ಯೆಯಿಂದ ಮುಕ್ತಿ:

ನಿದ್ರಾಹೀನತೆ, ಚಡಪಡಿಕೆ ಮುಂತಾದ ಸಮಸ್ಯೆಗಳಿರುವವರು ಮುತ್ತುಗಳನ್ನು ಧರಿಸುವುದರಿಂದ ಉತ್ತಮ ನಿದ್ರೆ ಪಡೆಯಬಹುದು ಎಂದು ಜ್ಯೋತಿಷಿಗಳು ಹೇಳುತ್ತಾರೆ. ಮುತ್ತು ಅನಗತ್ಯ ಚಿಂತೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಆಲೋಚನೆಗಳಲ್ಲಿ ಸ್ಥಿರತೆಯನ್ನು ತರುತ್ತದೆ.

ಆರ್ಥಿಕ ಸ್ಥಿರತೆ:

ಚಂದ್ರನು ಬಲವಾಗಿದ್ದರೆ, ಕುಟುಂಬ ಜೀವನ ಮತ್ತು ಸಂಪತ್ತಿನ ವಿಷಯಗಳು ಸ್ಥಿರವಾಗಿರುತ್ತವೆ ಎಂದು ನಂಬಲಾಗಿದೆ. ಖರ್ಚುಗಳನ್ನು ನಿಯಂತ್ರಿಸಬಹುದು ಮತ್ತು ಆದಾಯವು ಸ್ಥಿರವಾಗಿರುತ್ತದೆ.

ಆರೋಗ್ಯಕ್ಕೆ ಒಳ್ಳೆಯದು:

ಜ್ಯೋತಿಷ್ಯದ ಪ್ರಕಾರ, ಮುತ್ತುಗಳು ದೇಹದಲ್ಲಿನ ದ್ರವಗಳ ಸಮತೋಲನವನ್ನು ಸುಧಾರಿಸುತ್ತದೆ. ಇದು ಹಾರ್ಮೋನುಗಳ ಅಸಮತೋಲನ ಮತ್ತು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಪರಿಹಾರವನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.

ಮಹಿಳೆಯರಿಗೆ ವಿಶೇಷ ಪ್ರಯೋಜನ:

ಮಹಿಳೆಯರಲ್ಲಿ ಹಾರ್ಮೋನುಗಳ ಸಮಸ್ಯೆಗಳು ಮತ್ತು ಮಾನಸಿಕ ಒತ್ತಡಕ್ಕೆ ಮುತ್ತು ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಕೆಲವು ಸಂದರ್ಭಗಳಲ್ಲಿ ಗರ್ಭಧಾರಣೆಯ ಸಮಸ್ಯೆಗಳಿರುವವರಿಗೂ ಇದನ್ನು ಶಿಫಾರಸು ಮಾಡಲಾಗುತ್ತದೆ.

ಮುತ್ತು ಯಾರು ಧರಿಸಬೇಕು?

ಸಾಮಾನ್ಯವಾಗಿ ದುರ್ಬಲ ಚಂದ್ರ, ಕರ್ಕಾಟಕ ರಾಶಿಯ ಜನರಿಗೆ ಸೂಕ್ತವಾಗಿದೆ. ಮಿಥುನ, ತುಲಾ, ಮೀನ ರಾಶಿಯವರು ತಜ್ಞರ ಸಲಹೆಯೊಂದಿಗೆ ಇದನ್ನು ಧರಿಸಬಹುದು.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಮುತ್ತಿನ ಉಂಗುರ ಧರಿಸುವುದು ಹೇಗೆ?

ಬೆಳ್ಳಿಯ ಉಂಗುರದಲ್ಲಿ ಮುತ್ತು ಹುದುಗಿದ್ದರೆ ಉತ್ತಮ. ಬಲಗೈಯ ಕಿರುಬೆರಳಿಗೆ ಧರಿಸುವುದು ಶುಭ. ಸೋಮವಾರ ಬೆಳಿಗ್ಗೆ ಶುಭ ಸಮಯದಲ್ಲಿ ಇದನ್ನು ಧರಿಸಬೇಕು. ಧರಿಸುವ ಮೊದಲು ಚಂದ್ರ ಮಂತ್ರವನ್ನು ಪಠಿಸುವುದು ಒಳ್ಳೆಯದು. “ಓಂ ಸೋಮಾಯ ನಮಃ” ಎಂದು 11 ಅಥವಾ 108 ಬಾರಿ ಜಪಿಸಿ.

ನಕಲಿ ಮುತ್ತು ಧರಿಸಿದರೆ ಏನಾಗುತ್ತದೆ?

ನಕಲಿ ಅಥವಾ ಕಳಪೆ ಗುಣಮಟ್ಟದ ಮುತ್ತುಗಳನ್ನು ಧರಿಸುವುದರಿಂದ ಅಪೇಕ್ಷಿತ ಫಲಿತಾಂಶ ದೊರೆಯದಿರಬಹುದು ಮತ್ತು ಕೆಲವು ಸಂದರ್ಭಗಳಲ್ಲಿ ನಕಾರಾತ್ಮಕ ಪರಿಣಾಮಗಳೂ ಉಂಟಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಸುತ್ತಾರೆ. ಆದ್ದರಿಂದ, ವಿಶ್ವಾಸಾರ್ಹ ರತ್ನ ವ್ಯಾಪಾರಿಗಳಿಂದ ಮಾತ್ರ ಖರೀದಿಸಬೇಕು. ತಜ್ಞರ ಸಲಹೆಯನ್ನು ತೆಗೆದುಕೊಳ್ಳಬೇಕು.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಬ್ಬದ ದಿನವೇ ಪ್ರಯಾಣಿಕರಿಗೆ ಶುಭ ಸುದ್ದಿ​​ ಕೊಟ್ಟ ನಮ್ಮ ಮೆಟ್ರೋ: ಇಂದಿನಿಂದ ಕ್ಯೂಆರ್​ ಆಧಾರಿತ ಪಾಸ್​​ ಲಭ್ಯ – Kannada News | BMRCL Introduces QR Code Passes for Unlimited Metro Travel from Today

ಬೆಂಗಳೂರು, ಜನವರಿ 15: ಸಂಕ್ರಾಂತಿ ಹಬ್ಬದ ದಿನವೇ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ಕೊಟ್ಟಿದ್ದು, ಇಂದಿನಿಂದ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್​ ಆಧಾರಿತ ದಿನ,‌ ಮೂರು ದಿನ ಮತ್ತು 5 ದಿನಗಳ ಪಾಸ್ ಲಭ್ಯವಿರಲಿದೆ. 1, 3, 5 ದಿನಗಳ ಅನಿಯಮಿತ ಪ್ರಯಾಣದ ಪಾಸ್​​ನ BMRCL ಪರಿಚಯಿಸಿದ್ದು, ಡಿಜಿಟಲ್ ಟಿಕೆಟ್ ವ್ಯವಸ್ಥೆ ಉತ್ತೇಜಿಸಲು ಈ​ ಕ್ರಮ ಕೈಗೊಳ್ಳಲಾಗಿದೆ. ಇಷ್ಟುದಿನ ಕಾಂಟ್ಯಾಕ್ಟ್ ಲೆಸ್ ಸ್ಮಾರ್ಟ್​​ ಕಾರ್ಡ್​ ಮೂಲಕ ಮಾತ್ರ ಅನಿಯಮಿತ ಪಾಸ್ ಇತ್ತು. ಅದಕ್ಕಾಗಿ ಭದ್ರತಾ ಠೇವಣಿ 50 ರೂಪಾಯಿ ಪಾವತಿ ಮಾಡಬೇಕಿತ್ತು. ಆದರಿನ್ನು ಮೊಬೈಲ್‌ನಲ್ಲೇ QR ಕೋಡ್ ಬಳಸಿ ಪಾಸ್ ಪಡೆಯಬಹುದಾಗಿದ್ದು, ಯಾವುದೇ ಭದ್ರತಾ ಠೇವಣಿ ಇರುವುದಿಲ್ಲ. 1 ದಿನದ ಮೆಟ್ರೋ ಪ್ರಯಾಣ ಪಾಸ್​​ಗೆ 250 ರೂ., 3 ದಿನಗಳ ಮೆಟ್ರೋ ಪ್ರಯಾಣ ಪಾಸ್​​ಗೆ 550 ರೂ. ಮತ್ತು 5 ದಿನಗಳ ಮೆಟ್ರೋ ಪ್ರಯಾಣ ಪಾಸ್​ಗೆ 850 ರೂ. ನಿಗದಿ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಪಾಕಿಸ್ತಾನ, ಬಾಂಗ್ಲಾ ಸೇರಿ 75 ದೇಶಗಳ ಜನರಿಗೆ ಇಲ್ಲ ಅಮೆರಿಕದ ವಲಸೆ ವೀಸಾ; ಇಲ್ಲಿದೆ ಪಟ್ಟಿ – Kannada News | US immigrant visa freeze on 75 countries, including Pakistan, Bangladesh

ವಾಷಿಂಗ್ಟನ್, ಜನವರಿ 15: ದೇಶದೊಳಗೆ ಸಾಮಾಜಿಕ ಮತ್ತು ಕಾನೂನಾತ್ಮಕವಾಗಿ ಸಮಸ್ಯೆಗಳನ್ನು ತರಬಲ್ಲಂತಹ ವಿದೇಶೀಯರನ್ನು ನಿರ್ಬಂಧಿಸುವ ಸಲುವಾಗಿ ಅಮೆರಿಕ ಸರ್ಕಾರ ಕೆಲ ದೇಶಗಳ ನಿವಾಸಿಗಳಿಗೆ ವೀಸಾ ನೀಡುವಿಕೆಯನ್ನು (US Immigration Visa) ಸ್ಥಗಿತಗೊಳಿಸಿದೆ. ಒಟ್ಟು 75 ದೇಶಗಳಿಗೆ ಅಮೆರಿಕದ ವೀಸಾ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿವರೆಗೆ ಫ್ರೀಜ್ ಮಾಡಲಾಗಿದೆ. ಈ 75 ದೇಶಗಳ ಪೈಕಿ ಪಾಕಿಸ್ತಾನ, ಬಾಂಗ್ಲಾದೇಶ ಮೊದಲಾದವರು ಸೇರಿವೆ. ಪಾಕಿಸ್ತಾನದೊಂದಿಗೆ ಅಮೆರಿಕದ ಸಂಬಂಧಕ್ಕೆ ಹೊಸ ಪುಷ್ಟಿ ಸಿಕ್ಕಿರುವ ಹೊತ್ತಲ್ಲೇ ಈ ಬೆಳವಣಿಗೆ ನಡೆದಿದೆ.

ಗಮನಿಸಬೇಕಾದ ಸಂಗತಿ ಎಂದರೆ ಮೇಲಿನ ವೀಸಾ ನಿರ್ಬಂಧವು ವಲಸಿಗರಿಗೆ ಮಾತ್ರವೇ ಅನ್ವಯ ಆಗುವುದು. ಇಮ್ಮೈಗ್ರೇಶನ್ ವೀಸಾ ಅರ್ಜಿ ಸಲ್ಲಿಸಿರುವವರ ಪೈಕಿ ಆಯ್ದ 75 ದೇಶಗಳ ಜನರ ಅರ್ಜಿ ಪ್ರಕ್ರಿಯೆ ಮುಂದುವರಿಯುವುದಿಲ್ಲ. ಆದರೆ, ಪ್ರವಾಸ, ಬ್ಯುಸಿನೆಸ್ ಇತ್ಯಾದಿ ತಾತ್ಕಾಲಿಕವಾಗಿ ಬಂದು ಹೋಗುವವರಿಗೆ ತಡೆ ಇರುವುದಿಲ್ಲ, ವೀಸಾ ನಿರಾಕರಿಸಲಾಗುವುದಿಲ್ಲ.

ಇದನ್ನೂ ಓದಿ: 2025ರಲ್ಲಿ ಚೀನಾಗೆ ವ್ಯಾಪಾರ ಸುಗ್ಗಿ; ಭಾರತದ ರಫ್ತಿನಲ್ಲೂ 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಳ

ಅಮೆರಿಕದ ವಲಸೆ ವೀಸಾ ಸ್ಥಗಿತಗೊಂಡಿರುವ 75 ದೇಶಗಳ ಪಟ್ಟಿ

  1. ಅಫ್ಗಾನಿಸ್ತಾನ
  2. ಆಲ್ಬೇನಿಯಾ
  3. ಆಲ್ಜೀರಿಯಾ
  4. ಆಂಟಿಗುವಾ ಬರ್ಬುಡಾ
  5. ಆರ್ಮೇನಿಯಾ
  6. ಅಜರ್ಬೈಜಾನ್
  7. ಬಹಾಮಸ್
  8. ಬಾಂಗ್ಲಾದೇಶ
  9. ಬಾರ್ಬಡಾಸ್
  10. ಬೆಲಾರಸ್
  11. ಬೆಲಿಜೆ
  12. ಭೂತಾನ್
  13. ಬೋಸ್ನಿಯಾ ಹರ್ಜೆಗೋವಿನಾ
  14. ಬ್ರೆಜಿಲ್
  15. ಕಾಂಬೋಡಿಯಾ
  16. ಕ್ಯಾಮರೂನ್
  17. ಕೇಪ್ ವೆರ್ಡೆ
  18. ಕೊಲಂಬಿಯಾ
  19. ಕೋಟೆ ಡೀ ಐವೋರೆ (ಐವರಿ ಕೋಸ್ಟ್)
  20. ಕ್ಯೂಬಾ
  21. ಕಾಂಗೊ ಡೆಮಾಕ್ರಟಿಕ್ ರಿಪಬ್ಲಿಕ್
  22. ಡಾಮಿನಿಕಾ
  23. ಈಜಿಪ್ಟ್
  24. ಎರಿಟ್ರಿಯಾ
  25. ಇಥಿಯೋಪಿಯಾ
  26. ಫಿಜಿ
  27. ಗಾಂಬಿಯಾ
  28. ಜಾರ್ಜಿಯಾ
  29. ಘಾನಾ
  30. ಗ್ರೆನಾಡಾ
  31. ಗಾಟಿಮಾಲ
  32. ಗಿನಿಯಾ
  33. ಹೈಟಿ
  34. ಇರಾನ್
  35. ಇರಾಕ್
  36. ಜಮೈಕಾ
  37. ಜಾರ್ಡಾನ್
  38. ಕಜಕಸ್ತಾನ್
  39. ಕೊಸೋವೋ
  40. ಕುವೇತ್
  41. ಕಿರ್ಗಿಸ್ತಾನ್
  42. ಲಾವೋಸ್
  43. ಲೆಬನಾನ್
  44. ಲೈಬೀರಿಯಾ
  45. ಲಿಬಿಯಾ
  46. ನಾರ್ತ್ ಮೆಸಿಡೋನಿಯಾ
  47. ಮಾಲ್ಡೋವಾ
  48. ಮಂಗೋಲಿಯಾ
  49. ಮಾಂಟೆನೀಗ್ರೋ
  50. ಮೊರಾಕ್ಕೋ
  51. ಮಯನ್ಮಾರ್
  52. ನೇಪಾಳ್
  53. ನಿಕಾರಾಗುವಾ
  54. ನೈಜೀರಿಯಾ
  55. ಪಾಕಿಸ್ತಾನ್
  56. ಕಾಂಗೋ ರಿಪಬ್ಲಿಕ್
  57. ರಷ್ಯಾ
  58. ರುವಾಂಡ
  59. ಸೇಂಟ್ ಕಿಟ್ಸ್ ಅಂಡ್ ನೆವಿಸ್
  60. ಸೇಂಟ್ ಲೂಸಿಯಾ
  61. ಸೇಂಟ್ ವಿನ್ಸೆಂಟ್ ಅಂಡ್ ಗ್ರಿನಾಡಿನ್ಸ್
  62. ಸೆನೆಗಲ್
  63. ಸಿಯೆರಾ ಲಿಯೋನೆ
  64. ಸೊಮಾಲಿಯಾ
  65. ಸೌತ್ ಸುಡಾನ್
  66. ಸುಡಾನ್
  67. ಸಿರಿಯಾ
  68. ತಾಂಜಾನಿಯಾ
  69. ಥಾಯ್ಲೆಂಡ್
  70. ಟೋಗೋ
  71. ಟುನಿಶಿಯಾ
  72. ಉಗಾಂಡ
  73. ಉರುಗ್ವೆ
  74. ಉಜ್ಬೆಕಿಸ್ತಾನ್
  75. ಯೆಮೆನ್

ಅಕ್ರಮ ವಲಸಿಗರ ಹಾವಳಿ ತಪ್ಪಿಸಲು ಈ ಕ್ರಮ

ಅಮೆರಿಕದಲ್ಲಿ ಸಾಮಾಜಿಕ ಭದ್ರತಾ ಸೌಲಭ್ಯಗಳು ಉತ್ತಮವಾಗಿವೆ. ವಲಸಿಗರು ಈ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದು, ಡ್ರಗ್ಸ್, ಅಪರಾಧ, ಭಯೋತ್ಪಾದನೆ ಇತ್ಯಾದಿ ಕೃತ್ಯಗಳ ಮೂಲಕ ಸಮಾಜ ಹಾಗೂ ದೇಶದ ಭದ್ರತೆಗೆ ಅಪಾಯ ತರಬಹುದು. ಇದನ್ನು ನಿಯಂತ್ರಿಸಲು ಟ್ರಂಪ್ ಸರ್ಕಾರ ಈ ಕ್ರಮ ಕೈಗೊಂಡಿದೆ. ಜನವರಿ 21ರಿಂದ ಮೇಲೆ ತಿಳಿಸಿದ 75 ದೇಶಗಳ ಜನರ ವಲಸೆ ಅರ್ಜಿಗಳನ್ನು ಪ್ರೋಸಸ್ ಮಾಡಲಾಗುವುದಿಲ್ಲ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು – Kannada News | Priyank Kharge Slams Congress Leader for Abuse of Sidlaghatta Municipal Woman Commissioner

ಬೆಂಗಳೂರು, ಜನವರಿ 15: ಶಿಡ್ಲಘಟ್ಟ ಪೌರಾಯುಕ್ತೆಯನ್ನು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜೀವ್ ಗೌಡ ಅಥವಾ ಬೇರೆ ಯಾರೇ ಆಗಿರಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಬೇರೆಯವರನ್ನು ನಿಂದಿಸಲು ಅಥವಾ ಅವಾಚ್ಯ ಶಬ್ದಗಳನ್ನು ಬಳಸಲು ಯಾರಿಗೂ ಹಕ್ಕಿಲ್ಲ ಎಂದರು. ಅಲ್ಲದೆ, ಪಕ್ಷದ ಅಧ್ಯಕ್ಷರು ಅವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಬಿಜೆಪಿ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಿಂದ ಸಂಸ್ಕೃತಿ ಕಲಿಯಬೇಕಿಲ್ಲ. ಮುನಿರತ್ನ, ಸಿ.ಟಿ. ರವಿ ಯಾವ ರೀತಿ ಮಾತನಾಡಿದ್ದಾರೆ ಎಂಬುದನ್ನು ಜನ ನೋಡಿದ್ದಾರೆ ಎಂದು ಉಲ್ಲೇಖಿಸಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿಗೆ ಸಂಸ್ಕೃತಿ ಇಲ್ಲ ಎಂದು ಟೀಕಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಫ್ರಾನ್ಸ್‌ಗಿಂತ ಭಾರತ ಉತ್ತಮ; ವಿದೇಶಿ ಮಹಿಳೆ ನೀಡಿದ ಕಾರಣ ನೋಡಿ – Kannada News | These are the reasons a French woman gave why India is better than France

ಭಾರತ ಅಂದ್ರೆ ವಿದೇಶಿಗರಿಗೆ (foreigner) ಅದೇನೋ ಸೆಳೆತ. ಹೀಗಾಗಿ ವಿದೇಶಿಗರು ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಇಲ್ಲಿನ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇಲ್ಲಿನ ವಿವಿಧ ಖಾದ್ಯಗಳ ರುಚಿಯನ್ನು ಸವಿಯುತ್ತಾರೆ. ಇನ್ನು ಕೆಲ ವಿದೇಶಿಗರು ಒಂದು ಹೆಜ್ಜೆ ಮುಂದೆ ಹೋಗಿ ಇಲ್ಲಿಯೇ ನೆಲೆಸುತ್ತಾರೆ. ಇದೀಗ ಭಾರತದಲ್ಲಿ ಫ್ರೆಂಚ್ ಮೂಲದ ಮಹಿಳೆಯೂ (France woman) ಭಾರತದಲ್ಲಿ ವಾಸಿಸುತ್ತಿದ್ದು, ಭಾರತ ನನಗೆ ಇಷ್ಟವಾಗಿದ್ದು ಯಾಕೆ ಎನ್ನುವುದನ್ನು ವಿವರಿಸಿದ್ದಾರೆ. ಫ್ರಾನ್ಸ್‌ಗಿಂತ ಭಾರತ ಉತ್ತಮ ಎನ್ನಲು ಐದು ಕಾರಣಗಳನ್ನು ನೀಡಿದ್ದಾರೆ. ವಿದೇಶಿ ಮಹಿಳೆ ಭಾರತವನ್ನು ಹಾಡಿ ಹೊಗಳಿದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

freldaway ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಭಾರತದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿರುವುದನ್ನು ಕಾಣಬಹುದು. ಭಾರತ ಇಷ್ಟ ಎನ್ನಲು ಕಾರಣವಾಗಿರುವ ಐದು ವಿಚಾರಗಳನ್ನು ಈ ವಿಡಿಯೋದಲ್ಲಿ ಉಲ್ಲೇಖಿಸಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಈ ವಿಡಿಯೋಗೆ ಥಿಂಗ್ಸ್ ಇಂಡಿಯಾ ಡಸ್ ಬೆಟರ್ ದೆನ್ ಫ್ರಾನ್ಸ್” ಎಂಬ ಶೀರ್ಷಿಕೆ ನೀಡಲಾಗಿದೆ. ಕೆಲಸಕ್ಕಾಗಿ ಭಾರತಕ್ಕೆ ಬಂದು ಇಲ್ಲಿ ನೆಲೆಸಿರುವ ಫ್ರಾನ್ಸ್ ಮಹಿಳೆಗೆ ಭಾರತದ ಬೀದಿಬದಿ ಆಹಾರ, ಭಾರತೀಯ ಆಕರ್ಷಕ ಆಭರಣಗಳು, ಆರಾಮದಾಯಕ ಬಸ್ ಹಾಗೂ ರೈಲು ಪ್ರಯಾಣ, ಕೂದಲ ಆರೈಕೆಗೆ ಅಳವಡಿಸಿಕೊಂಡ ಸಾಂಪ್ರದಾಯಿಕ ವಿಧಾನ ಹಾಗೂ ಭಾರತೀಯ ಅತಿಥಿ ಸತ್ಕಾರ ಈ ಎಲ್ಲಾ ಅಂಶಗಳು ಇಷ್ಟವಾಗಿದೆಯಂತೆ. ಫ್ರಾನ್ಸ್‌ನಲ್ಲಿ ಈ ಎಲ್ಲಾ ವಿಚಾರಗಳು ಕಾಣಸಿಗಲ್ಲ  ಎಂದು ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಸ್ನೇಹಿತೆಯ ಜತೆಗೆ ರಸ್ತೆ ದಾಟಲು ಹರಸಾಹಸ ಪಡುತ್ತಿರುವ ವಿದೇಶಿ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಳ್ಳುತ್ತಿದ್ದಂತೆ ಒಬ್ಬ ಬಳಕೆದಾರ ಭಾರತೀಯನಾಗಿ ಹುಟ್ಟಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ಅಂಶಗಳು ಭಾರತದಲ್ಲಿ ಮಾತ್ರ ಕಾಣಲು ಸಾಧ್ಯ ಎಂದಿದ್ದಾರೆ. ಇನ್ನೊಬ್ಬರು, ಭಾರತೀಯರನ್ನು ವಿದೇಶಿಗರು ಎಷ್ಟು ಗಮನ ಹರಿಸುತ್ತಾರೆ ಎನ್ನುವುದಕ್ಕೆ ಈ ಮಾತುಗಳೇ ಸಾಕ್ಷಿ. ನಿಜಕ್ಕೂ ಖುಷಿಯಾಗುತ್ತದೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದರ್ಶನ್ ಗೈರು ಹಾಜರಿ ನಡುವೆ ವಿಜಯಲಕ್ಷ್ಮಿ ಮುಂದಾಳತ್ವದಲ್ಲಿ ಸಂಕ್ರಾಂತಿ ಆಚರಣೆ: ವಿಡಿಯೋ – Kannada News | Vijayalakshmi Darshan celebrated Sankranthi in Darshan’s farm house

ನಟ ದರ್ಶನ್ (Darshan) ಪಾಲಿಗೆ ಸಂಕ್ರಾಂತಿ ಹಬ್ಬ ಅತ್ಯಂತ ಮಹತ್ವದ್ದಾಗಿತ್ತು. ಈ ಹಬ್ಬವನ್ನು ಅವರೇ ತಪ್ಪದೇ ಆಚರಿಸುತ್ತಿದ್ದರು. ಪ್ರಾಣಿ ಪ್ರಿಯರಾಗಿರುವ ನಟ ದರ್ಶನ್ ತಮ್ಮ ಫಾರಂಹೌಸ್​​ನಲ್ಲಿರುವ ಎಲ್ಲ ಪ್ರಾಣಿಗಳಿಗೂ ಸ್ನಾನ ಮಾಡಿಸಿ, ಹೂವುಗಳಿಂದ ಸಿಂಗರಿಸಿ ಕಿಚ್ಚು ಹಾಯಿಸುತ್ತಿದ್ದರು. ಪ್ರತಿ ವರ್ಷವೂ ಇದನ್ನು ತಪ್ಪದೇ ಆಚರಿಸಿಕೊಂಡು ಬಂದಿದ್ದಾರೆ. ಆದರೆ ಈ ಬಾರಿ ದರ್ಶನ್ ಜೈಲಿನಲ್ಲಿದ್ದಾರೆ ಆದರೆ ಅವರ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ನಿಂತಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರ ಮುಂದಾಳತ್ವದಲ್ಲಿ ಫಾರಂ ಹೌಸ್​​ನಲ್ಲಿ ಸಂಕ್ರಾಂತಿ ಆಚರಣೆ ನಡೆದಿದೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ವಿದ್ಯುತ್ ಪೋಲು ತಡೆಯುವುದಕ್ಕೂ ಬಂತು ಎಐ ಸಿಸ್ಟಂ: ವಾರ್ಷಿಕ 40 ಕೋಟಿ ರೂ. ಉಳಿತಾಯ! – Kannada News | AI based pump monitoring to Prevent Power Wastage: Bengaluru Water Board Targets Rs 40 Crore Annual Savings

ಬೆಂಗಳೂರು, ಜನವರಿ 15: ಈ ಹಿಂದೆ ಪೈಪ್‌ಲೈನ್ ಸೇರಿದಂತೆ ವಿವಿಧ ಕಡೆ ನೀರು ಸೋರಿಕೆಯಾಗಿ ವ್ಯರ್ಥವಾಗುವುದನ್ನು ತಡೆಯಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುದ್ದಿಯಾಗಿದ್ದ ಬೆಂಗಳೂರು ಜಲಮಂಡಳಿ (BWSSB) ಇದೀಗ ಇಂಧನ ಕ್ಷಮತೆ ಹೆಚ್ಚಿಸಲು ಮತ್ತು ವಿದ್ಯುತ್ ಪೋಲಾಗುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ ಆಧಾರಿತ ಪಂಪ್ ಮಾನಿಟರಿಂಗ್ ಆರಂಭಿಸಿದೆ. ಬೆಂಗಳೂರಿನ (Bangalore) 78 ಸ್ಟೇಷನ್ಗಳಲ್ಲಿ ಎಐ ಆಧಾರಿತ ಪಂಪು ಮಾನಿಟರಿಂಗ್ ಸಾಧನೆಗಳನ್ನು ಅಳವಡಿಸಲಾಗಿದೆ. ಇದರಿಂದ ವಾರ್ಷಿಕ 40 ಕೋಟಿ ರೂಪಾಯಿ ಉಳಿತಾಯ ನಿರೀಕ್ಷಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

78 ಕಡೆಗಳಲ್ಲಿ ಎಐ ಪಂಪ್ ಮಾನಿಟರಿಂಗ್ IPUMPNET ಅಳವಡಿಸಿಕೊಳ್ಳುವ ಮೂಲಕ, ಈ ಮಟ್ಟದಲ್ಲಿ ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಂಡ ವಿಶ್ವದ ಮೊದಲ ನೀರು ಸರಬರಾಜು ಮಂಡಳಿ ಎಂಬ ಹೆಗ್ಗಳಿಕೆಗೆ ಬೆಂಗಳೂರು ಜಲ ಮಂಡಳಿ ಪಾತ್ರವಾಗಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಉಲ್ಲೇಖಿಸಿದೆ.

ಹೇಗೆ ಕಾರ್ಯನಿರ್ವಹಿಸುತ್ತೆ IPUMPNET?

IPUMPNET ಹೆಸರಿನ ಈ ಎಐ ಆಧಾರಿತ ವ್ಯವಸ್ಥೆಯು ರಿಯಲ್ ಟೈಮ್ ಸೆನ್ಸರ್‌ಗಳನ್ನು ಒಳಗೊಂಡಿದೆ. ಸಾಂಪ್ರದಾಯಿಕ ಸಾಧನಗಳಂತಲ್ಲದೆ ಇದು ಪ್ರತಿಕ್ಷಣವೂ ಪಂಪ್ಗಳ ಕ್ಷಮತೆಯನ್ನು ಗಮನಿಸುತ್ತಿರುತ್ತದೆ. ಅತಿಯಾದ ಇಂಧನ ಬಳಕೆ, ವಿದ್ಯುತ್ ಪೋಲಾಗುವುದನ್ನು ಗಮನಿಸಿ ಅಲರ್ಟ್ ಮಾಡುತ್ತದೆ. ಈ IPUMPNET ವ್ಯವಸ್ಥೆಯು ಈಗಾಗಲೇ ಹಲವಾರು ಪಂಪ್‌ಗಳು ಮಿತಿಗಳಿಗಿಂತ ಹೆಚ್ಚಿನ ವಿದ್ಯುತ್ ಬಳಸುತ್ತಿರುವುದನ್ನು ಗುರುತಿಸಿದೆ. ಈ ಡೇಟಾವನ್ನು ಆಧರಿಸಿ, ಜಲ ಮಂಡಳಿಯು ಕಡಿಮೆ-ದಕ್ಷತೆಯ ಪಂಪ್‌ಗಳನ್ನು ಬದಲಾಯಿಸಿ ಹೆಚ್ಚಿನ-ದಕ್ಷತೆಯ ಪಂಪ್‌ಗಳನ್ನು ಅಳವಡಿಸುವ ಕೆಲಸದಲ್ಲಿ ನಿರತವಾಗಿದೆ ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಇದನ್ನೂ ಓದಿ: ಲಿಂಗರಾಜಪುರದಲ್ಲಿ ಕುಡಿಯುವ ನೀರಿಗೆ ಕೊಳಚೆ ಮಿಶ್ರಣ; ರೊಬೊಟಿಕ್ ತನಿಖೆ ಆರಂಭಿಸಿದ ಜಲಮಂಡಳಿ

ಈ ಎಐ ವ್ಯವಸ್ಥೆಯಿಂದಾಗಿ, ಇಂಧನ ಪೋಲಾಗುವುದನ್ನು ತಡೆಗಟ್ಟುವುದರ ಜತೆಗೆ ಜಲಮಂಡಳಿಗೆ ಆರ್ಥಿಕವಾಗಿಯೂ ಉಳಿತಾಯವಾಗಲಿದೆ. ಇಂಗಾಲದ ಹೊರಸೂಸುವಿಕೆ ಕಡಿಮೆ ಮಾಡುವುದೂ ಸಾಧ್ಯವಾಗಲಿದೆ. ಇದರಿಂದಾಗಿ ಬೆಂಗಳೂರಿನ ಪರಿಸರ ಸುಸ್ಥಿರತೆಗೆ ಗಮನಾರ್ಹವಾಗಿ ಕೊಡುಗೆ ನೀಡಿದಂತಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜೀವ್​​ ಗೌಡ ವಿರುದ್ಧ ಮತ್ತೊಂದು ಆರೋಪ: ತಹಶೀಲ್ದಾರ್​​ಗೂ ನಿಂದಿಸಿದ್ದನಾ ‘ಕೈ’ ಮುಖಂಡ? – Kannada News | New Allegation Against Rajeev Gowda: Congress Leader Accused of Abusing Shidlaghatta Tahsildar

ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಕಾಂಗ್ರೆಸ್​​ ಮುಖಂಡ ರಾಜೀವ್ ಗೌಡ ವಿರುದ್ಧ ಇಂತಹುದ್ದೇ ಮತ್ತೊಂದು ಆರೋಪ ಕೇಳಿಬಂದಿದೆ. ಶಿಡ್ಲಘಟ್ಟ ತಹಶೀಲ್ದಾರ್ ಗಗನಸಿಂಧು ಅವರಿಗೂ ಏಕವಚನದಲ್ಲಿ ನಿಂದಿಸಿದ್ದ ಎನ್ನಲಾಗಿದ್ದು, ಆದರೆ ತಾನು ಆಡಿಯೋ ರೆಕಾರ್ಡ್​​ ಮಾಡಿಕೊಂಡಿಲ್ಲ ಎಂದವರು ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆ ಆಯುಕ್ತೆ ಅಮೃತಾ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ.

ಆರೋಪಿಗಾಗಿ 3 ತಂಡಗಳಿಂದ ಹುಡುಕಾಟ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ವಿಚಾರವಾಗಿ ತಲೆಮರೆಸಿಕೊಂಡಿರುವ ರಾಜೀವ್​ಗೌಡಗೆ 3 ತಂಡಗಳಿಂದ ಹುಡುಕಾಟ ನಡೆಸಲಾಗುತ್ತಿದೆ. ಶಿಡ್ಲಘಟ್ಟ ಠಾಣೆಯ ಸರ್ಕಲ್ ಇನ್ಸ್​ಪೆಕ್ಟರ್ ಆನಂದಕುಮಾರ್, ಚಿಂತಾಮಣಿ ಗ್ರಾಮಾಂತರ ಠಾಣೆಯ ಇನ್ಸ್​ಪೆಕ್ಟರ್​ ಶಿವರಾಜ್ ಮತ್ತು ಸೈಬರ್ ಪೊಲೀಸ್ ಠಾಣೆ ಪಿಐ ಸೂರ್ಯಪ್ರಕಾಶ್ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಬಂಧನ ಭೀತಿಯಿಂದ ನಿನ್ನೆ ರಾತ್ರಿ ರಾಜೀವ್ ಗೌಡ ಪರಾರಿಯಾಗಿದ್ದು, ಆತನ 2 ಮೊಬೈಲ್​ಗಳು ಕೂಡ​ ಸ್ವಿಚ್​ಆಫ್ ಆಗಿವೆ. ಹೀಗಾಗಿ ಬೆಂಗಳೂರಿನ ಇಂದಿರಾನಗರದಲ್ಲಿ 1 ತಂಡ, ಸಂಜಯ್ ನಗರದಲ್ಲಿ 1 ತಂಡ ಮತ್ತು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಒಂದು ತಂಡದಿಂದ ಆರೋಪಿಗೆ ಹುಡುಕಾಟ ನಡೆಯುತ್ತಿದೆ. ಮತ್ತೊಂದೆಡೆ ರಾಜೀವ್ ಗೌಡನನ್ನು ಬಂಧಿಸದಿದ್ರೆ ಶಿಡ್ಲಘಟ್ಟ ಬಂದ್ ಮಾಡುವುದಾಗಿ ಎನ್​​ಡಿಎ ಮುಖಂಡರು ಪೊಲೀಸರಿಗೆ ಎಚ್ಚರಿಕೆ ಕೂಡ ನೀಡಿರುವ ಕಾರಣ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ: ಶಿಡ್ಲಘಟ್ಟ ಕಮಿಷನರ್​​ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ; ಕಾಂಗ್ರೆಸ್ ಮುಖಂಡನಿಗೆ ಶುರುವಾಯ್ತು ಬಂಧನದ ಭೀತಿ

ಮತ್ತೊಂದೆಡೆ ಪ್ರಾಣ ಬೆದರಿಕೆ ಆಡಿಯೋ ವೈರಲ್​​ ಆಗುತ್ತಿದ್ದಂತೆ, ಸಂಬಂಧಿಕರು ಹಾಗೂ ಪ್ರಭಾವಿ ಗುತ್ತಿಗೆದಾರನ ಮೂಲಕ ಪೌರಾಯುಕ್ತೆ ಅಮೃತಾರನ್ನು ರಾಜೀವ್​​ ಗೌಡ ಪರೋಕ್ಷವಾಗಿ ಸಂಪರ್ಕಿಸಿದ್ದ. ರಾಜಕಾರಣಿಗಳ ವಿರೋಧ ಕಟ್ಟಿಕೊಂಡರೆ ಮುಂದೆ ಪೋಸ್ಟಿಂಗ್ ಸಿಗಲ್ಲ. ಇದೆಲ್ಲ ಯಾಕೆ ಬೇಕು ಬಿಟ್ಟು ಬಿಡು ಎಂದು ರಾಜೀವ್​​ ಗೌಡ ಅಣಿತಿಯಂತೆ ಗುತ್ತಿಗೆದಾರರೊಬ್ಬರು ನಗರಸಭೆ ಪೌರಾಯುಕ್ತೆಗೆ ತಿಳಿಸಿದ್ದರು. ಆದರೆ ಹುದ್ದೆಗಿಂತ ಆತ್ಮಗೌರವ ಮುಖ್ಯ, ಬೇಕಾದರೆ ಮತ್ತೆ ಸ್ವಾಫ್ಟ್​​ವೇರ್​​ ಕೆಲಸಕ್ಕೆ ಸೇರುತ್ತೇನೆ ಎಂದು ಅಮೃತಾ ಅವರು ಈ ವೇಳೆ ಹೇಳಿದ್ದಾರೆ. ಸರ್ಕಾರಿ ಕೆಲಸಕ್ಕೆ ಸೇರುವ ಮುನ್ನ ಮಾಸಿಕ 3 ಲಕ್ಷ ರೂಪಾಯಿ ಸಂಬಳ ಪಡೆಯುತ್ತಿದ್ದೆ. ರಾಜೀವ್ ಗೌಡ ಮಾತಿನಿಂದ ಮನೆಯವರು ಬೇಸರಗೊಂಡಿದ್ದಾರೆ ಎಂದು ಅಮೃತಾ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Puja Room Vastu: ಪೂಜಾ ಕೋಣೆಯಲ್ಲಿ ಈ ವಸ್ತುಗಳನ್ನು ಇಡಲೇಬೇಡಿ; ಸಮಸ್ಯೆ ತಪ್ಪಿದ್ದಲ್ಲ! – Kannada News | Puja Room Vastu: Avoid These 5 Things for Positive Energy and Harmony at Home

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಮನೆ ನಿರ್ಮಾಣದಿಂದ ವಸ್ತುಗಳ ಜೋಡಣೆಯ ವರೆಗೂ ವಾಸ್ತು ಶಾಸ್ತ್ರದಲ್ಲಿ ಹಲವು ನಿಯಮಗಳಿವೆ. ಇದಲ್ಲದೆ, ಮನೆಯಲ್ಲಿರುವ ಪೂಜಾ ಕೊಠಡಿಗೆ ಸಂಬಂಧಿಸಿದ ವಿಷಯಗಳನ್ನು ವಾಸ್ತು ಸ್ಪಷ್ಟಪಡಿಸಿದೆ. ಈ ವಾಸ್ತು ನಿಯಮಗಳನ್ನು ನಿರ್ಲಕ್ಷಿಸುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ.

ಮುರಿದ ವಿಗ್ರಹ:

ಪೂಜಾ ಕೊಠಡಿಯಲ್ಲಿ ಎಂದಿಗೂ ಮುರಿದ ದೇವರ ವಿಗ್ರಹಗಳನ್ನು ಇಡಬೇಡಿ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪೂಜಾ ಕೋಣೆಯಲ್ಲಿ ಮುರಿದ ವಿಗ್ರಹಗಳನ್ನು ಪೂಜಿಸುವುದರಿಂದ ನಕಾರಾತ್ಮಕತೆ ಹೆಚ್ಚಾಗುತ್ತದೆ, ಇದು ಜೀವನದಲ್ಲಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದಲ್ಲದೆ, ಪೂಜೆಯು ಯಾವುದೇ ಫಲಿತಾಂಶವನ್ನು ನೀಡುವುದಿಲ್ಲ.

ಒಣಗಿದ ಹೂವು:

ಪೂಜೆಯ ಸಮಯದಲ್ಲಿ ಪ್ರತಿದಿನ ದೇವರಿಗೆ ಹೂವುಗಳನ್ನು ಅರ್ಪಿಸಲಾಗುತ್ತದೆ. ಮರುದಿನ ಬೆಳಿಗ್ಗೆ, ದೇವರ ಅಲಂಕಾರದ ಸಮಯದಲ್ಲಿ, ಒಣಗಿದ ಹೂವುಗಳನ್ನು ತೆಗೆದುಹಾಕಿ. ಒಣಗಿದ ಹೂವುಗಳನ್ನು ಇಡುವುದರಿಂದ ಮನೆಯೊಳಗೆ ನಕಾರಾತ್ಮಕ ಶಕ್ತಿ ಆಕರ್ಷಿಸುತ್ತದೆ ಎಂದು ನಂಬಲಾಗಿದೆ.

ಪೂರ್ವಜರ ಫೋಟೋ:

ಪೂಜಾ ಮಂದಿರದಲ್ಲಿ ಪೂರ್ವಜರ ಚಿತ್ರಗಳನ್ನು ಇಡದಂತೆ ವಾಸ್ತು ಶಾಸ್ತ್ರ ಸಲಹೆ ನೀಡುತ್ತದೆ. ಪೂರ್ವಜರು ಮತ್ತು ದೇವತೆಗಳ ಸ್ಥಾನವನ್ನು ಧರ್ಮಗ್ರಂಥಗಳು ಪ್ರತ್ಯೇಕವಾಗಿ ವ್ಯಾಖ್ಯಾನಿಸುತ್ತವೆ. ಆದ್ದರಿಂದ ಪೂರ್ವಜರ ಫೋಟೋಗಳನ್ನು ಇಡುವುದರಿಂದ ಅಶಾಂತಿ ಉಂಟಾಗುತ್ತದೆ ಎಂದು ನಂಬಲಾಗಿದೆ. ವಾಸ್ತು ಪ್ರಕಾರ, ಮನೆಯಲ್ಲಿ ಪೂರ್ವಜರ ಚಿತ್ರಗಳನ್ನು ಇಡಲು ದಕ್ಷಿಣ ದಿಕ್ಕು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಹರಿದ ಧಾರ್ಮಿಕ ಪುಸ್ತಕ:

ಪೂಜಾ ಕೋಣೆಯಲ್ಲಿ ಹರಿದ ಧಾರ್ಮಿಕ ಪುಸ್ತಕಗಳನ್ನು ಇಡಬೇಡಿ. ಪೂಜಾ ಕೋಣೆಯಲ್ಲಿ ಹರಿದ ಧಾರ್ಮಿಕ ಪುಸ್ತಕಗಳನ್ನು ಇಡುವುದರಿಂದ ವ್ಯಕ್ತಿಯ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.

ಚೂಪಾದ ವಸ್ತು:

ವಾಸ್ತು ಶಾಸ್ತ್ರದ ಪ್ರಕಾರ, ಕತ್ತರಿ ಮತ್ತು ಚಾಕುಗಳಂತಹ ಹರಿತವಾದ ವಸ್ತುಗಳನ್ನು ಪೂಜಾ ಮಂದಿರದಲ್ಲಿ ಇಡಬಾರದು. ಹರಿತವಾದ ವಸ್ತುಗಳು ನಕಾರಾತ್ಮಕತೆಯನ್ನು ಪ್ರತಿನಿಧಿಸುತ್ತವೆ ಎಂದು ಹೇಳಲಾಗುತ್ತದೆ, ಆದ್ದರಿಂದ ವಾಸ್ತು ಶಾಸ್ತ್ರದಲ್ಲಿ ವಿವರಿಸಿದ ಈ ನಿಯಮಗಳನ್ನು ಪಾಲಿಸಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

2025ರಲ್ಲಿ ಚೀನಾಗೆ ವ್ಯಾಪಾರ ಸುಗ್ಗಿ; ಭಾರತದ ರಫ್ತಿನಲ್ಲೂ 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಳ – Kannada News | India’s exports to China rise almost 9pc in 2025, as bilateral trade reach all time high

ನವದೆಹಲಿ, ಜನವರಿ 15: ಕಳೆದ ವರ್ಷ ಚೀನಾ ದೇಶಕ್ಕೆ (China) ಭಾರತದ ರಫ್ತು ಸಖತ್ ಏರಿದೆ. 2024ರ ವರ್ಷಕ್ಕೆ ಹೋಲಿಸಿದರೆ 2025ರಲ್ಲಿ ಚೀನಾಗೆ ಭಾರತದ ರಫ್ತು 5.5 ಬಿಲಿಯನ್ ಡಾಲರ್​ನಷ್ಟು ಹೆಚ್ಚಿದೆ. 2024ರಲ್ಲಿ ಭಾರತವು ಚೀನಾಗೆ 14.25 ಬಿಲಿಯನ್ ಡಾಲರ್​​ನಷ್ಟು ರಫ್ತು ಮಾಡಿತ್ತು. 2025ರಲ್ಲಿ ಭಾರತದ ರಫ್ತು 19.75 ಬಿಲಿಯನ್ ಡಾಲರ್ ಮಟ್ಟ ಮುಟ್ಟಿದೆ. ಅಂದರೆ, ರಫ್ತಿನಲ್ಲಿ ಶೇ. 8.7ರಷ್ಟು ಏರಿಕೆ ಆಗಿದೆ.

ಚೀನಾದಿಂದ ಇನ್ನೂ ಹೆಚ್ಚು ಆಮದು…

ಚೀನಾಗೆ ಭಾರತದ ರಫ್ತು ಹೆಚ್ಚಿದೆಯಾದರೂ, ಅದಕ್ಕಿಂತ ಹೆಚ್ಚಳ ಆಗಿರುವುದು ಚೀನಾ ಭಾರತಕ್ಕೆ ಮಾಡಿದ ರಫ್ತಿನಲ್ಲಿ. 2025ರಲ್ಲಿ ಭಾರತಕ್ಕೆ ಚೀನಾದ ರಫ್ತಿನಲ್ಲಿ ಬರೋಬ್ಬರಿ ಶೇ. 12.8 ರಷ್ಟು ಹೆಚ್ಚಳ ಆಗಿದೆ. 2024ರಲ್ಲಿ ಭಾರತಕ್ಕೆ ಚೀನಾ 113.45 ಬಿಲಿಯನ್ ಡಾಲರ್​ನಷ್ಟು ರಫ್ತು ಮಾಡಿತ್ತು. 2025ರಲ್ಲಿ ಅದು 135.87 ಬಿಲಿಯನ್ ಡಾಲರ್​ಗೆ ಏರಿದೆ.

ಇದನ್ನೂ ಓದಿ: ರಷ್ಯನ್ ತೈಲ, ಕಲ್ಲಿದ್ದಲು ಖರೀದಿ: ಭಾರತವನ್ನು ಹಿಂದಿಕ್ಕಿದ ಟರ್ಕಿ

ದಾಖಲೆ ಮಟ್ಟದ ಟ್ರೇಡ್ ಡೆಫಿಸಿಟ್

ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ವ್ಯಾಪಾರ 2025ರಲ್ಲಿ ಒಟ್ಟು 155.62 ಬಿಲಿಯನ್ ಡಾಲರ್​ನಷ್ಟು ಇದೆ. ಇದು ಸಾರ್ವಕಾಲಿಕ ಗರಿಷ್ಠ ಮೊತ್ತವಾಗಿದೆ. ಭಾರತದ ರಫ್ತು ಹೆಚ್ಚಳಕ್ಕಿಂತಲೂ ಚೀನಾದ ರಫ್ತು ಹೆಚ್ಚಳ ಅಧಿಕ ಇರುವುದರಿಂದ ಚೀನಾದೊಂದಿಗಿನ ಭಾರತದ ಟ್ರೇಡ್ ಡೆಫಿಸಿಟ್ ಕೂಡ ಅಧಿಕಗೊಂಡಿದೆ. ಇದರೊಂದಿಗೆ ಈ ಟ್ರೇಡ್ ಡೆಫಿಸಿಟ್ 116.12 ಬಿಲಿಯನ್ ಡಾಲರ್​ಗೆ ಹೆಚ್ಚಿದೆ. ಇದು ಭಾರತಕ್ಕೆ ಎದುರಾಗಿರುವ ಅತಿದೊಡ್ಡ ಟ್ರೇಡ್ ಡೆಫಿಸಿಟ್ ಆಗಿದೆ.

ಸಕಾರಾತ್ಮಕ ಅಂಶವೆಂದರೆ ಚೀನಾದ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಭಾರತದ ಸರಕುಗಳು ಪ್ರವೇಶ ಮಾಡಿ ಸ್ಪರ್ಧೆಯೊಡ್ಡುವುದು ಹೆಚ್ಚಾಗುತ್ತಿದೆ. ಟೆಲಿಕಾಂ ಉಪಕರಣ, ಮಸಾಲೆ ಪದಾರ್ಥ, ಮೀನು ಇತ್ಯಾದಿ ವಸ್ತುಗಳು ಚೀನಾಗೆ ರಫ್ತಾಗುವುದು ಹೆಚ್ಚಿದೆ. ಇದೇ ವೇಳೆ, ಚೀನಾದ ಐಟಿ, ಫಾರ್ಮಾ ಮತ್ತು ಕೃಷಿ ಕ್ಷೇತ್ರದ ಮಾರುಕಟ್ಟೆಯ ಮೇಲೂ ಭಾರತ ಕಣ್ಣಿಟ್ಟಿದೆ.

ಇದನ್ನೂ ಓದಿ: ರಫ್ತು ಸಜ್ಜಿತ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ನಂ. 1; ಕರ್ನಾಟಕದ ಸ್ಥಾನವೆಷ್ಟು?

ಅಮೆರಿಕ ಟ್ಯಾರಿಫ್ ನಡುವೆಯೂ ಚೀನಾ ರಫ್ತು ಭಯಂಕರ ಹೆಚ್ಚಳ

ಇದೇ ವೇಳೆ ಚೀನಾದ ಒಟ್ಟಾರೆ ರಫ್ತು 2025ರಲ್ಲಿ ಗಣನೀಯವಾಗಿ ಹೆಚ್ಚಿದೆ. 2025ರಲ್ಲಿ ಅದರ ರಫ್ತು 3.77 ಟ್ರಿಲಿಯನ್ ಡಾಲರ್ ಇದ್ದರೆ, ಆಮದು 2.58 ಟ್ರಿಲಿಯನ್ ಡಾಲರ್ ಇದೆ. ಅಂದರೆ, ಚೀನಾಗೆ ದಾಖಲೆಯ 1.2 ಟ್ರಿಲಿಯನ್ ಡಾಲರ್​ನಷ್ಟು ಟ್ರೇಡ್ ಸರ್​ಪ್ಲಸ್ ಆದಂತಾಯಿತು. ಅಂದರೆ, ಆಮದಿಗಿಂತ ರಫ್ತು ಬಹಳ ಅಧಿಕ ಇದೆ. ಅಮೆರಿಕದ ಟ್ಯಾರಿಫ್ ನಡುವೆಯೂ ಚೀನಾದ ವ್ಯಾಪಾರ ಹೆಚ್ಚಿರುವುದು ಅದು ಹಲವಾರು ಕ್ಷೇತ್ರಗಳಲ್ಲಿ ರಫ್ತು ಉದ್ಯಮಗಳನ್ನು ನೆಲಗೊಳಿಸಿರುವುದು ಕಾರಣ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version