ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ: ಯಶ್ ಸಿನಿಮಾದ ತೆರೆಹಿಂದೆ 10 ಸಾವಿರಕ್ಕೂ ಹೆಚ್ಚು ತಂತ್ರಜ್ಞರು – Kannada News | Yash starrer Ramayana is first Indian movie to have 10000 crew members

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಚಿತ್ರವಾಗಿ ‘ರಾಮಾಯಣ’ (Ramayana) ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ನಟ ಯಶ್ (Yash) ಅವರು ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಅಭಿನಯಿಸುತ್ತಿದ್ದಾರೆ. ಬೃಹತ್ ಬಜೆಟ್‌ನಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ. ನಿರ್ಮಾಪಕ ನಮಿತ್ ಮಲ್ಹೋತ್ರಾ, ನಿರ್ದೇಶಕ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾವನ್ನು ಭಾರಿ ದೊಡ್ಡ ಮಟ್ಟದಲ್ಲಿ ಸಿದ್ಧಪಡಿಸುತ್ತಿದ್ದಾರೆ. ಅತಿ ಹೆಚ್ಚು ತಂತ್ರಜ್ಞರು ಕೆಲಸ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿಗೆ ಈ ಸಿನಿಮಾ ಪಾತ್ರವಾಗುತ್ತಿದೆ.

ಭಾರತೀಯ ಚಿತ್ರರಂಗದಲ್ಲೇ ಮೊದಲ ಬಾರಿಗೆ, ಈ ಒಂದು ಸಿನಿಮಾಕ್ಕಾಗಿ ವಿಶ್ವದಾದ್ಯಂತ ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ತಂತ್ರಜ್ಞರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಮೂಲಕ ಭಾರತೀಯ ಚಲನಚಿತ್ರ ಇತಿಹಾಸದಲ್ಲೇ ಅತ್ಯಂತ ದೊಡ್ಡ ತಾಂತ್ರಿಕ ತಂಡವನ್ನು ಹೊಂದಿದ ಮೊದಲ ಸಿನಿಮಾ ಇದಾಗಿದೆ. ಯಶ್ ಅವರು ಈ ಸಿನಿಮಾದಲ್ಲಿ ನಟಿಸುವುದು ಮಾತ್ರವಲ್ಲದೇ ನಿರ್ಮಾಣದಲ್ಲೂ ಪಾಲುದಾರಿಕೆ ಹೊಂದಿದ್ದಾರೆ.

‘ಪ್ರೈಮ್ ಫೋಕಸ್ ಸ್ಟುಡಿಯೋಸ್’, ‘ಡಿಎನ್‌ಇಜಿ’ ಮತ್ತು ‘ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್’ ಸಂಸ್ಥೆಗಳು ಜಂಟಿಯಾಗಿ ‘ರಾಮಾಯಣ’ ಸಿನಿಮಾವನ್ನು ನಿರ್ಮಿಸುತ್ತಿವೆ. ಭಾರತದ ಸಾಂಪ್ರದಾಯಿಕ ಕಥಾ ಶೈಲಿಗೆ ಜಾಗತಿಕ ಮಟ್ಟದ ಅದ್ಭುತ ತಂತ್ರಜ್ಞಾನದ ಸ್ಪರ್ಶ ನೀಡಿ, ಈ ಚಿತ್ರವನ್ನು ಎರಡು ಭಾಗಗಳ ದೃಶ್ಯ ವೈಭವವಾಗಿ ಬೆಳ್ಳಿತೆರೆಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ.

ಈ ಬೃಹತ್ ತಂಡದಲ್ಲಿ ವಿಶ್ವದ ಅತ್ಯುತ್ತಮ ಪ್ರೊಡಕ್ಷನ್ ಡಿಸೈನರ್‌ಗಳು, ವಿಷುವಲ್ ಎಫೆಕ್ಟ್ಸ್ (VFX) ಪರಿಣಿತರು, ಸಾಹಸ ನಿರ್ದೇಶಕರು, ವಸ್ತ್ರ ವಿನ್ಯಾಸಕರು ಸೇರಿದಂತೆ ಹಲವು ಪ್ರಮುಖ ತಾಂತ್ರಿಕ ವಿಭಾಗಗಳ ಜಾಗತಿಕ ತಜ್ಞರು ಹಗಲಿರುಳು ಶ್ರಮಿಸುತ್ತಿದ್ದಾರೆ. ರಾಮಾಯಣದ ಭವ್ಯ ಜಗತ್ತನ್ನು ಮರುಸೃಷ್ಟಿಸಲು ಬೃಹತ್ ಸೆಟ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಇದು ಕೇವಲ ಒಂದು ಸಾಧಾರಣ ಚಿತ್ರವಾಗಿರದೆ ಚಿತ್ರಮಂದಿರಗಳಲ್ಲಿ ಒಂದು ಮೈಲಿಗಲ್ಲು ಎನಿಸುವಂತಹ ಅನುಭವ ನೀಡಲಿದೆ ಎಂದು ಚಿತ್ರತಂಡ ಹೇಳಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು

ಈ ಚಿತ್ರದ ಮತ್ತೊಂದು ದೊಡ್ಡ ವಿಶೇಷತೆಯೆಂದರೆ, ಜಾಗತಿಕವಾಗಿ ಅತ್ಯಂತ ಪ್ರಸಿದ್ಧ ಹಾಗೂ ಆಸ್ಕರ್ ಪ್ರಶಸ್ತಿ ವಿಜೇತ ದೃಶ್ಯ ವೈಭವದ ಸಂಸ್ಥೆಯಾದ ‘DNEG’ ಜೊತೆಗಿನ ಸಹಭಾಗಿತ್ವ. ಈ ಹಿಂದೆ ಹಲವು ಅಂತಾರಾಷ್ಟ್ರೀಯ ಬ್ಲಾಕ್‌ಬಸ್ಟರ್ ಸಿನಿಮಾಗಳಿಗೆ ಕೆಲಸ ಮಾಡಿರುವ ಈ ಸಂಸ್ಥೆಯು, ರಾಮಾಯಣದ ಕಥೆಯನ್ನು ಇಂದಿನ ಆಧುನಿಕ ಪ್ರೇಕ್ಷಕರಿಗೆ ಕಣ್ಣಿಗೆ ಕಟ್ಟುವಂತೆ ಅದ್ಭುತ ವಿಷುವಲ್ ಎಫೆಕ್ಟ್ಸ್ ಮೂಲಕ ಪ್ರಸ್ತುತಪಡಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಸಾಧನಾ ಸಮಾವೇಶದಲ್ಲಿ ಪ್ರಮಾಣಪತ್ರ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ – Kannada News | Tumakuru Creates Guinness Record by Uploading 21,529 Land Titles; CM Siddaramaiah Receives Certificate

ತುಮಕೂರು, ಮೇ 19: ತುಮಕೂರು ಜಿಲ್ಲೆಯು 21,529 ಹಕ್ಕುಪತ್ರಗಳನ್ನು ಯಶಸ್ವಿಯಾಗಿ ಅಪ್‌ಲೋಡ್ ಮಾಡುವ ಮೂಲಕ ಗಿನ್ನಿಸ್​ ವಿಶ್ವ ದಾಖಲೆಯಲ್ಲಿ ನೋಂದಾಯಿತವಾಗಿದೆ. ಈ ಅಸಾಮಾನ್ಯ ಸಾಧನೆಗಾಗಿ ಗಿನ್ನಿಸ್​ ವರ್ಲ್ಡ್​ ರೆಕಾರ್ಡ್ಸ್‌ನ ಪ್ರತಿನಿಧಿಗಳಾದ ಮಿಸ್ಟರ್ ಸ್ವಪ್ನಿಲ್ ಡಂಗರಿಕರ್ ಮತ್ತು ಶ್ರೀಮತಿ ಶೈಲಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಹಸ್ತಾಂತರಿಸಿದರು. ನಂತರ, ಮುಖ್ಯಮಂತ್ರಿಗಳು ಈ ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ ಅವರಿಗೆ ಹಸ್ತಾಂತರಿಸಿದರು. ಕಂದಾಯ ಗ್ರಾಮಗಳ ಗುರುತಿಸುವಿಕೆ, ಹಕ್ಕುಪತ್ರಗಳ ಸಿದ್ಧತೆ ಮತ್ತು ಇ-ಸ್ವತ್ತು ನೋಂದಣಿಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ 10 ತಾಲೂಕುಗಳ ತಹಸೀಲ್ದಾರ್‌ಗಳಿಗೆ ಸರ್ಕಾರದಿಂದ ಪ್ರಶಂಸಾಪತ್ರಗಳನ್ನೂ ಈ ವೇಳೆ ವಿತರಿಸಲಾಯಿತು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಇದು ಮಾನ್ಯತಾ ಟೆಕ್ ಪಾರ್ಕ್ ಅಲ್ಲ, ಮಾನ್ಯತಾ ವಾಟರ್ ಪಾರ್ಕ್! ಮಳೆಯಿಂದ ಹೊಳೆಯಂತಾದ ರಸ್ತೆಯ ವಿಡಿಯೋ ವೈರಲ್ – Kannada News | Manyata Water Park? Netizens Troll Bengaluru’s Premium Tech Hub After Heavy Rains Flood Infrastructure, Viral Video

ಮಳೆಯಿಂದ ಹೊಳೆಯಂತಾದ ಮಾನ್ಯತಾ ಟೆಕ್ ಪಾರ್ಕ್ ರಸ್ತೆImage Credit source: @karnatakaportf

ಬೆಂಗಳೂರು, ಮೇ 19: ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿಯಾಗಿರುವ ಬೆಂಗಳೂರಿನ (Bengaluru) ಜಾಗತಿಕ ಐಟಿ ಇಮೇಜ್‌ಗೆ ಸೋಮವಾರ ಸಂಜೆ ಸುರಿದ ಭಾರಿ ಮಳೆ ಮತ್ತೊಮ್ಮೆ ಮಸಿ ಬಳಿದಿದೆ. ದೇಶದ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠಿತ ಟೆಕ್ ಪಾರ್ಕ್‌ಗಳಲ್ಲಿ ಒಂದಾದ ಹೆಣ್ಣೂರು ರಸ್ತೆಯ ‘ಮಾನ್ಯತಾ ಟೆಕ್ ಪಾರ್ಕ್’ ಏರಿಯಾವು ಕೇವಲ ಒಂದು ಸಂಜೆಯ ಮಳೆಗೆ ಸಂಪೂರ್ಣ ಜಲಾವೃತಗೊಂಡಿದೆ. ಕಚೇರಿ ಮುಗಿಸಿ ಮನೆಗೆ ಹೊರಟ ಸಾವಿರಾರು ಐಟಿ ಉದ್ಯೋಗಿಗಳು ರಸ್ತೆಯಲ್ಲಿ ಮೊಣಕಾಲುದ್ದ ನಿಂತಿದ್ದ ನೀರಿನಲ್ಲಿ ಪರದಾಡಿದ್ದಾರೆ.

ಸದ್ಯ, ಮಾನ್ಯತಾ ಟೆಕ್ ಪಾರ್ಕ್‌ನ ಈ ದುಸ್ಥಿತಿಯ ವೀಡಿಯೊ ‘ಕರ್ನಾಟಕ ಪೋರ್ಟ್‌ಫೋಲಿಯೋ’ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಭಾರಿ ವೈರಲ್ ಆಗುತ್ತಿದೆ. ನೆಟ್ಟಿಗರು ಇದನ್ನು ‘ಮಾನ್ಯತಾ ಟೆಕ್ ಪಾರ್ಕ್ ಅಲ್ಲ, ಮಾನ್ಯತಾ ವಾಟರ್ ಪಾರ್ಕ್’ ಅಥವಾ ‘ಮಾನ್ಯತಾ ಸರೋವರ’ ಎಂದು ಲೇವಡಿ ಮಾಡುತ್ತಿದ್ದಾರೆ.

ಮುಖ್ಯಾಂಶಗಳು

  • ಜಿಬಿಎ ಆಡಳಿತ ನಿರ್ಲಕ್ಷ್ಯದ ವಿರುದ್ಧ ಜನಾಕ್ರೋಶ.
  • ಐಟಿ ಉದ್ಯೋಗಿಗಳಿಂದ ತೀವ್ರ ಅಸಮಾಧಾನ.
  • ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ.

‘ಗ್ಲಾಸ್ ಬಿಲ್ಡಿಂಗ್ ಇದ್ದರೆ ಸಾಲದು, ಸರಿಯಾದ ರಸ್ತೆ ಇರಬೇಕು’

ಪ್ರತಿ ವರ್ಷ ಮುಂಗಾರು ಆರಂಭವಾಗುವ ಮುನ್ನವೇ ಬೆಂಗಳೂರಿನಲ್ಲಿ ಇದೇ ಅವಸ್ಥೆ ಮರುಕಳಿಸುತ್ತಿದೆ. ಮಳೆ ಬಂದ ತಕ್ಷಣ ರಸ್ತೆಗಳು ಕಣ್ಮರೆಯಾಗುತ್ತವೆ, ಟ್ರಾಫಿಕ್ ವ್ಯವಸ್ಥೆ ಸಂಪೂರ್ಣ ಕುಸಿಯುತ್ತದೆ ಮತ್ತು ಸಾರ್ವಜನಿಕರು ರಸ್ತೆಯಲ್ಲೇ ಗಂಟೆಗಟ್ಟಲೆ ನರಕಯಾತನೆ ಅನುಭವಿಸುತ್ತಾರೆ. ಕೇವಲ ದೊಡ್ಡ ದೊಡ್ಡ ಗ್ಲಾಸ್ ಬಿಲ್ಡಿಂಗ್‌ಗಳು ಹಾಗೂ ಆಕರ್ಷಕ ಕಚೇರಿಗಳನ್ನು ನಿರ್ಮಿಸಿದರೆ ಅಭಿವೃದ್ಧಿ ಎನಿಸಿಕೊಳ್ಳುವುದಿಲ್ಲ, ಅದಕ್ಕೆ ತಕ್ಕಂತೆ ಸೂಕ್ತ ಒಳಚರಂಡಿ ಮತ್ತು ಪ್ರವಾಹ ನಿರ್ವಹಣಾ ವ್ಯವಸ್ಥೆ ಇರಬೇಕು ಎಂದು ಉದ್ಯೋಗಿಗಳು ಆಗ್ರಹಿಸಿರುವುದಾಗಿ ‘ಕರ್ನಾಟಕ ಪೋರ್ಟ್‌ಫೋಲಿಯೋ’ ಎಕ್ಸ್​​​​ ಖಾತೆಯಲ್ಲಿ ಉಲ್ಲೇಖಿಸಲಾಗಿದೆ.

ವೈರಲ್ ವಿಡಿಯೋ

ದೇಶದ ನಂಬರ್ ಒನ್ ಐಟಿ ಹಬ್‌ನ ಸ್ಥಿತಿಯೇ ಹೀಗಾದರೆ, ಇನ್ನು ನಗರದ ಉಳಿದ ಸಾಮಾನ್ಯ ಪ್ರದೇಶಗಳ ಗತಿ ಏನು ಎಂದು ಸಾರ್ವಜನಿಕರು ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Congress Sadhana Samavesha Live: ತುಮಕೂರಿನಲ್ಲಿ ಸರ್ಕಾರದಿಂದ ಸಾಧನಾ ಸಮಾವೇಶ ನೇರಪ್ರಸಾರ – Kannada News | Karnataka Congress Govt’s 3rd Year Sadhana Samavesha Today in Tumakuru

ತುಮಕೂರು, ಮೇ 19: ಇಂದು ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ 3ನೇ ವರ್ಷದ ಭವ್ಯ ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಕ್ರಮ ನೆರವೇರಲಿದೆ.

ಈ ಮಹಾವೇದಿಕೆಯಲ್ಲಿ ಜಿಲ್ಲೆಯ 1.52 ಲಕ್ಷ ಫಲಾನುಭವಿಗಳಿಗೆ ಇ-ಖಾತಾ, ಹಕ್ಕುಪತ್ರ ಹಾಗೂ ನಿವೇಶನ ಪತ್ರಗಳು ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಜೊತೆಗೆ, 600 ಅಂಗನವಾಡಿ ಕಾರ್ಯಕರ್ತೆಯರಿಗೆ ನೇಮಕಾತಿ ಆದೇಶ ಪತ್ರ ಹಾಗೂ 687 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಲಿದೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 3 ಸಾವಿರಕ್ಕೂ ಹೆಚ್ಚು ಬಸ್‌ಗಳು ಹಾಗೂ ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನನ್ನ ಜಾತಿ ಯಾವುದೆಂದು ಗೊತ್ತೇ’; ಸಚಿವ ಗಡ್ಕರಿಗೆ ನಟ ನಾನಾ ಪಾಟೇಕರ್ ನೇರ ಪ್ರಶ್ನೆ – Kannada News | Nana Patekar Slams Caste Politics: Humanity is Your Only Religion at Jalakranti

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ (Nana Patekar) ತಮ್ಮ ನೇರ ನಡೆ-ನುಡಿಗೆ ಹೆಸರುವಾಸಿ. ಇತ್ತೀಚೆಗೆ ನಾಗ್ಪುರದ ರೇಷ್ಮಿಬಾಗ್‌ನಲ್ಲಿ ನಡೆದ ‘ಜಲಕ್ರಾಂತಿ’ ಸಮಾವೇಶದಲ್ಲಿ ಅವರು ಸಮಾಜದಲ್ಲಿ ಹೆಚ್ಚುತ್ತಿರುವ ಜಾತಿ ಮತ್ತು ಧರ್ಮದ ರಾಜಕಾರಣದ ವಿರುದ್ಧ ತೀವ್ರವಾಗಿ ಗುಡುಗಿದ್ದಾರೆ. ವೇದಿಕೆಯ ಮೇಲಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ, ‘ಗಡ್ಕರಿ ಸಾಹೇಬರೇ, ನನ್ನ ಜಾತಿ ಯಾವುದು ಎಂದು ನಿಮಗೆ ಗೊತ್ತೇ?’ ಎಂದು ನೇರವಾಗಿ ಪ್ರಶ್ನಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ನಾನಾ ಪಾಟೇಕರ್, ‘ನಾನು ಯಾರಿಗೂ ನನ್ನ ಜಾತಿಯನ್ನು ಹೇಳಿಲ್ಲ, ಅದರ ಅಗತ್ಯವೂ ನನಗಿಲ್ಲ. ‘ಮಾನವ ಜನ್ಮವೇ ನಿನ್ನ ಜಾತಿ, ಮಾನವೀಯತೆಯೇ ನಿನ್ನ ಧರ್ಮ’ ಎಂದು ನನ್ನ ತಾಯಿ ನನಗೆ ಬಾಲ್ಯದಲ್ಲೇ ಕಲಿಸಿದ್ದರು. ಸಮಾಜದಲ್ಲಿನ ಈ ಜಾತಿ ಪದ್ಧತಿಯು ಕೇವಲ ಜ್ಞಾನ ಮತ್ತು ಗುಣಮಟ್ಟದ ಶಿಕ್ಷಣದಿಂದ ಮಾತ್ರ ಕೊನೆಗೊಳ್ಳಲು ಸಾಧ್ಯ’ ಎಂದು ಭಾಷಣದಲ್ಲಿ ಮಾರ್ಮಿಕವಾಗಿ ನುಡಿದರು.

ಇಂದು ಸಮಾಜ ಮತ್ತು ರಾಜಕೀಯದಲ್ಲಿ ಜಾತಿವಾದ ಹೆಚ್ಚುತ್ತಿರುವುದಕ್ಕೆ ನಾನಾ ಪಾಟೇಕರ್ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ‘ಒಬ್ಬ ವ್ಯಕ್ತಿಯ ಗುರುತನ್ನು ಆತನ ಗುಣ ಅಥವಾ ಸಾಧನೆಗಳಿಂದ ಅಳೆಯದೆ, ಆತ ಹುಟ್ಟಿದ ಜಾತಿಯಿಂದ ನಿರ್ಧರಿಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ನಾವೆಲ್ಲರೂ ಮನುಷ್ಯರಾಗಿ ಒಂದಾಗದಿದ್ದರೆ ಈ ಜಾತಿವಾದದ ಗೋಡೆಗಳನ್ನು ಉರುಳಿಸಲು ಸಾಧ್ಯವಿಲ್ಲ’ ಎಂದು ಕಟುವಾಗಿ ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನಾನಾ ಪಾಟೇಕರ್ ಮುಕ್ತಕಂಠದಿಂದ ಶ್ಲಾಘಿಸಿದರು. ರಾಜಕೀಯದಲ್ಲಿ ನಿತಿನ್ ಗಡ್ಕರಿ ಅವರು ಅಜಾತಶತ್ರು ಎಂದು ಬಣ್ಣಿಸಿದ ನಟ, ನೀರಿನ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ‘ನಾಮ್ ಫೌಂಡೇಶನ್’ ಮತ್ತು ಆಮಿರ್ ಖಾನ್ ಅವರ ‘ಪಾನಿ ಫೌಂಡೇಶನ್’ ಕಾರ್ಯಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: ‘ನನ್ನ ಜೀವನ, ನನ್ನದೇ ಆದ ರೀತಿಯಲ್ಲಿ ಬದುಕಲು ಬಿಡಿ’; ನಟನೆಯಿಂದ ನಿವೃತ್ತಿ ಘೋಷಿಸಿದ ನಾನಾ ಪಾಟೇಕರ್

ಇನ್ನು ಸಿನಿಮಾಗಳ ವಿಷಯಕ್ಕೆ ಬಂದರೆ, ನಾನಾ ಪಾಟೇಕರ್ ಇತ್ತೀಚೆಗೆ ನಟನೆಗೆ ವಿದಾಯ ಹೇಳುವ ಸುಳಿವು ನೀಡಿ ಸುದ್ದಿಯಾಗಿದ್ದರು. ಇತ್ತೀಚಿನ ತಮ್ಮ ಸಿನಿಮಾಗಳ ಪ್ರಚಾರದ ವೇಳೆ ಮಾತನಾಡಿದ್ದ ಅವರು, ತಮಗೆ ಈಗ ವಯಸ್ಸಾಗುತ್ತಿರುವುದರಿಂದ ಮತ್ತು ಚಿತ್ರರಂಗದಲ್ಲಿ ಹೊಸ ತಲೆಮಾರಿನ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಸಿಗಬೇಕಿರುವುದರಿಂದ ತಾವು ಶೀಘ್ರದಲ್ಲೇ ನಟನೆಯಿಂದ ಸಂಪೂರ್ಣವಾಗಿ ದೂರ ಸರಿಯುವುದಾಗಿ ಹೇಳಿ ಅಭಿಮಾನಿಗಳಿಗೆ ಕೊಂಚ ಬೇಸರ ಮೂಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ! – Kannada News | 10 Foot King Cobra Found Sleeping Outside House Door in Mudigere

ಚಿಕ್ಕಮಗಳೂರು, ಮೇ 19: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಗ್ರಾಮದ ಮಂಜುನಾಥ್ ಆಚಾರ್ ಎಂಬುವವರ ಮನೆ ಬಾಗಿಲಿಗೆ ತಂಪಾದ ನೆರಳು ಹುಡುಕಿಕೊಂಡು ಬಂದ ಈ ಹಾವು, ಹೊಸ್ತಿಲಲ್ಲೇ ತಣ್ಣಗೆ ಮಲಗಿತ್ತು. ಮುಂಜಾನೆ ಇದನ್ನು ಕಂಡ ಮನೆಯವರು ಭಯಭೀತರಾಗಿದ್ದಾರೆ.

ಸುಮಾರು 10 ಅಡಿ ಉದ್ದವಿದ್ದ ಈ ಬೃಹತ್ ಕಾಳಿಂಗ ಸರ್ಪವನ್ನು ಕಂಡು ಗ್ರಾಮಸ್ಥರು ತಕ್ಷಣವೇ ಉರಗ ತಜ್ಞ ಸ್ನೇಕ್ ಆರೀಫ್ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆರೀಫ್, ಹಾವನ್ನು ಜಾಗರೂಕತೆಯಿಂದ ಸೆರೆಹಿಡಿದಿದ್ದಾರೆ. ಬಳಿಕ ಅದನ್ನು ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದ್ದು, ಸದ್ಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ; ಹೇಗಿತ್ತು ನೋಡಿ ಮದುವೆ ಆಮಂತ್ರಣ ಪತ್ರ – Kannada News | Darshan Vijayalakshmi 23rd Anniversary: Wedding Invitation Photo goes viral

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಹಾಗೂ ವಿಜಯಲಕ್ಷ್ಮೀ ದಂಪತಿ ಇಂದು (ಮೇ 19) ತಮ್ಮ 23ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಪತಿಯ ಫೋಟೋ ಹಂಚಿಕೊಂಡು ಗಮನ ಸೆಳೆದಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದರ ನಡುವೆ, ಇವರ ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಅಭಿಮಾನಿಗಳು ಭಾವನಾತ್ಮಕವಾಗಿ ಕಮೆಂಟ್ ಮಾಡುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಜೈಲು ವಾಸದ ಕಾರಣದಿಂದಾಗಿ ಈ ಬಾರಿ ದರ್ಶನ್ ಅವರಿಗೆ ಪತ್ನಿ ಬಳಿ ಇದ್ದು ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿಶೇಷ ಭೇಟಿಗೆ ವಿಜಯಲಕ್ಷ್ಮೀ ಅವರು ಅವಕಾಶ ಕೇಳಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿದ್ದ ಸರಳ ವಿವಾಹ:

2003ರ ಮೇ 19ರ ಸೋಮವಾರದಂದು ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಬೆಳಿಗ್ಗೆ 9:10 ರಿಂದ 9:50 ರವರೆಗಿನ ಮಿಥುನ ಲಗ್ನದಲ್ಲಿ ದರ್ಶನ್ ಹಾಗೂ ವಿಜಯಲಕ್ಷ್ಮೀ ವಿವಾಹ ನಡೆದಿತ್ತು. ಕೆಮಿಕಲ್ ಇಂಜಿನಿಯರಿಂಗ್ ಪದವೀಧರೆಯಾಗಿರೋ ವಿಜಯಲಕ್ಷ್ಮೀ ಹಾಗೂ ನಟ ದರ್ಶನ್ ಮಧ್ಯೆ ಪ್ರೀತಿ ಮೂಡಿ, ನಂತರ ಹಿರಿಯರ ಸಮ್ಮುಖದಲ್ಲಿ ಯಾವುದೇ ಆಡಂಬರವಿಲ್ಲದೆ ಸರಳವಾಗಿ ಮದುವೆ ನಡೆಯಿತು

ಈ ದಂಪತಿಗೆ ವಿನೀಶ್ ಹೆಸರಿನ ಮಗನಿದ್ದಾನೆ. ಇವರ ದಾಂಪತ್ಯ ಜೀವನವು ಸಾಕಷ್ಟು ಏಳುಬೀಳುಗಳನ್ನು ಕಂಡಿದ್ದರೂ, ಪತಿಯಿಂದ ಎಷ್ಟೇ ನೋವಾದರೂ ವಿಜಯಲಕ್ಷ್ಮೀ ಅವರು ಪ್ರತಿ ಹಂತದಲ್ಲೂ ದರ್ಶನ್ ಅವರ ಬೆನ್ನಲುಬಾಗಿ ನಿಂತಿದ್ದಾರೆ. ಈ ಮೊದಲು ದರ್ಶನ್ ಅವರಿಗೆ ಪೂರ್ಣ ಪ್ರಮಾಣದ ಜಾಮೀನು ದೊರಕಿಸಿಕೊಡುವಲ್ಲಿ ವಿಜಯಲಕ್ಷ್ಮೀ ಪ್ರಮುಖ ಪಾತ್ರ ವಹಿಸಿದ್ದರು. ಆ ಬಳಿಕ ಸುಪ್ರೀಂಕೋರ್ಟ್ ದರ್ಶನ್ ಜಾಮೀನನ್ನು ರದ್ದು ಮಾಡಿತ್ತು.

‘ಸಾಕ್ಷ್ಯ ವಿಚಾರಣೆ ವಿಳಂಬ ಆಗುತ್ತಿದೆ ಹಾಗೂ ಒಪ್ಪಿಕೊಂಡ ಸಿನಿಮಾ ಕೆಲಸ ಪೂರ್ಣಗೊಳಿಸಬೇಕಿದೆ ಎಂದು ದರ್ಶನ್ ಅವರು ಕೋರ್ಟ್ ಎದುರು ಅಲವತ್ತುಕೊಂಡಿದ್ದರು. ಆದಾಗ್ಯೂ ಸುಪ್ರೀಂಕೋರ್ಟ್ ಜಾಮೀನು ನೀಡಿಲ್ಲ. ಹೀಗಾಗಿ, ಇನ್ನೂ ಒಂದು ವರ್ಷ ಅವರು ಜೈಲಿನಲ್ಲೇ ಇರಬೇಕಿದೆ.

ಇದನ್ನೂ ಓದಿ: ವಿವಾಹ ವಾರ್ಷಿಕೋತ್ಸವ: ದರ್ಶನ್-ವಿಜಯಲಕ್ಷ್ಮಿ ಮುಖಾಮುಖಿ ಭೇಟಿಗೆ ಅವಕಾಶ ಇದೆಯಾ?

ವಿವಾಹ ವಾರ್ಷಿಕೋತ್ಸವ ಮಿಸ್ಸಿಂಗ್

ದರ್ಶನ್ ಜೈಲಿನಿಂದ ಹೊರಗಿದ್ದಾಗ ಪತ್ನಿ ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದರು. ಆದರೆ, ಈಗ ಇಬ್ಬರೂ ದೂರ ದೂರ ಇದ್ದಾರೆ. ಹೀಗಾಗಿ, ಅದ್ದೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಣೆ ಅಸಾಧ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:36 am, Tue, 19 May 26

Source link

ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ? – Kannada News | Chemists and Druggists nation wide strike on May 20th, to protest against online pharmacies

ನವದೆಹಲಿ, ಮೇ 19: ಆನ್‌ಲೈನ್ ಔಷಧ ಮಾರಾಟ ವೇದಿಕೆಗಳು (e-pharmacies) ಮತ್ತು ಇ-ಕಾಮರ್ಸ್ ಸಂಸ್ಥೆಗಳ ಅನಿಯಂತ್ರಿತ ವ್ಯವಹಾರವನ್ನು ಪ್ರತಿಭಟಿಸಿ, ಮೇ 20ರಂದು ದೇಶಾದ್ಯಂತ ಔಷಧ ವ್ಯಾಪಾರಿಗಳು (Chemists) ಬೃಹತ್ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗಿಸ್ಟ್ಸ್ (AIOCD) ಎನ್ನುವ ಸಂಘಟನೆಯ ನೇತೃತ್ವದಲ್ಲಿ ಈ ಬಂದ್ ನಡೆಯುತ್ತಿದ್ದು, ದೇಶದ ಸುಮಾರು 12 ರಿಂದ 15 ಲಕ್ಷ ಔಷಧ ವ್ಯಾಪಾರಿಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.

ಈ ಸುದ್ದಿಯ ಮುಖ್ಯಾಂಶಗಳು

  • ಆನ್ಲೈನ್ ಪ್ಲಾಟ್​ಫಾರ್ಮ್​ಗಳಿಂದ ಔಷಧ ಮಾರಾಟ ವಿರೋಧಿಸಿ ದೇಶಾದ್ಯಂತ ಔಷಧ ವ್ಯಾಪಾರಿಗಳು ಮೇ 20ರಂದು ಮುಷ್ಕರ ನಡೆಸಲಿದ್ದಾರೆ.
  • ಆಸ್ಪತ್ರೆಗಳ ಒಳಗೆ ಮತ್ತು ಹೊರಗಿನ ಆವರಣಗಳಲ್ಲಿರುವ ಮೆಡಿಕಲ್ ಸ್ಟೋರ್​ಗಳು ತೆರೆದಿರುತ್ತವೆ. ತುರ್ತು ಔಷಧ ಸೇವೆಗಳು ಲಭ್ಯ ಇರುತ್ತವೆ.
  • ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳ ಔಷಧ ವ್ಯಾಪಾರಿಗಳ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಜನೌಷಧ ಸೆಂಟರ್​ಗಳು ತೆರೆದಿರುತ್ತವೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ಔಷಧ ವ್ಯಾಪಾರಿಗಳ ಮುಷ್ಕರಕ್ಕೆ ಪ್ರಮುಖ ಕಾರಣಗಳೇನು?

  1. ಅನಿಯಂತ್ರಿತ ಇ-ಫಾರ್ಮಸಿಗಳು: ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಆನ್‌ಲೈನ್ ಔಷಧ ವಿತರಣೆಗೆ ಸರ್ಕಾರ ನೀಡಿದ್ದ ತಾತ್ಕಾಲಿಕ ಸಡಿಲಿಕೆಗಳನ್ನು (GSR 220E ಮತ್ತು 817E ನಿಯಮಗಳು) ಈಗಲೂ ಮುಂದುವರಿಸಲಾಗುತ್ತಿದ್ದು, ಆನ್‌ಲೈನ್ ಕಂಪನಿಗಳು ಇದರ ದುರುಪಯೋಗ ಮಾಡಿಕೊಳ್ಳುತ್ತಿವೆ ಎಂದು ಕೆಮಿಸ್ಟ್ ಸಂಘಟನೆಗಳು ಆರೋಪಿಸಿವೆ.
  2. ಅನ್ಯಾಯದ ಸ್ಪರ್ಧೆ ಮತ್ತು ಭಾರಿ ರಿಯಾಯಿತಿ: ದೊಡ್ಡ ಕಾರ್ಪೊರೇಟ್ ಆನ್‌ಲೈನ್ ಸಂಸ್ಥೆಗಳು ಶೇಕಡಾ 20 ರಿಂದ 50 ರಷ್ಟು ಭಾರಿ ರಿಯಾಯಿತಿಗಳನ್ನು (Discounts) ನೀಡುತ್ತಿರುವುದರಿಂದ ಸಣ್ಣ ಮತ್ತು ಸ್ಥಳೀಯ ಮೆಡಿಕಲ್ ಸ್ಟೋರ್‌ಗಳ ವ್ಯವಹಾರಕ್ಕೆ ಭಾರಿ ಹೊಡೆತ ಬಿದ್ದಿದೆ.
  3. ನಕಲಿ ಪ್ರಿಸ್ಕ್ರಿಪ್ಷನ್ ಮತ್ತು ಸುರಕ್ಷತೆಯ ಆತಂಕ: ಆನ್‌ಲೈನ್‌ನಲ್ಲಿ ಸೂಕ್ತ ವೈದ್ಯರ ಚೀಟಿ (Prescription) ಇಲ್ಲದೆ ಅಥವಾ ಎಐ (AI) ಮೂಲಕ ಸೃಷ್ಟಿಸಿದ ನಕಲಿ ಚೀಟಿಗಳನ್ನು ಬಳಸಿ ಆಂಟಿಬಯೋಟಿಕ್ಸ್ ಮತ್ತು ಮಾದಕ ಶೈಲಿಯ ಔಷಧಗಳನ್ನು ಸುಲಭವಾಗಿ ಆರ್ಡರ್ ಮಾಡಲಾಗುತ್ತಿದೆ. ಇದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯಕಾರಿ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ಸರ್ಕಾರಕ್ಕೆ ಪ್ರತಿಭಟನಾಕಾರರು ಮುಂದಿಟ್ಟಿರುವ ಬೇಡಿಕೆಗಳು

  • ಆನ್‌ಲೈನ್ ಔಷಧ ಮಾರಾಟದ ಮೇಲೆ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಬೇಕು.
  • ಕೋವಿಡ್ ಸಮಯದಲ್ಲಿ ನೀಡಲಾಗಿದ್ದ ಇ-ಫಾರ್ಮಸಿ ಸಡಿಲಿಕೆಗಳನ್ನು ತಕ್ಷಣವೇ ಹಿಂಪಡೆಯಬೇಕು.
  • ಸ್ಥಳೀಯ ಔಷಧ ವ್ಯಾಪಾರಿಗಳ ಹಿತರಕ್ಷಣೆಗಾಗಿ ಸೂಕ್ತ ನೀತಿಗಳನ್ನು ರೂಪಿಸಬೇಕು.

ಇದನ್ನೂ ಓದಿ: ದಿಲ್ಲಿಯಲ್ಲಿ ಟ್ಯಾಕ್ಸಿ, ಆಟೊ ಚಾಲಕರಿಂದ 3 ದಿನ ಮುಷ್ಕರ; ಏನಿವೆ ಅವರ ಬೇಡಿಕೆಗಳು?

12 ರಾಜ್ಯಗಳಲ್ಲಿ ಇಲ್ಲವಾ ಮುಷ್ಕರ?

ಎನ್​ಡಿಟಿವಿ ವರದಿ ಪ್ರಕಾರ, ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಸೇರಿದಂತೆ 12ಕ್ಕೂ ಹೆಚ್ಚು ರಾಜ್ಯಗಳ ಔಷಧ ವ್ಯಾಪಾರಿಗಳ ಸಂಘಟನೆಗಳು ಈ ಮೇ 20ರ ಮುಷ್ಕರದಿಂದ ದೂರ ಉಳಿಯಲು ನಿರ್ಧರಿಸಿವೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಈ ರಾಜ್ಯಗಲ್ಲಿರುವ ಜನರು ಆತಂಕಪಡಬೇಕಿಲ್ಲ.

ಮೇ 20ರಂದು ನಿಮ್ಮ ಮನೆಯ ಹತ್ತಿರದ ಸಾಮಾನ್ಯ ಮೆಡಿಕಲ್ ಸ್ಟೋರ್‌ಗಳು ಮುಚ್ಚುವ ಸಾಧ್ಯತೆ ಇಲ್ಲದೇ ಇಲ್ಲ. ಆದ್ದರಿಂದ ನಿಮಗೆ ಅಗತ್ಯವಿರುವ ನಿಯಮಿತ ಅಥವಾ ತುರ್ತು ಜೀವರಕ್ಷಕ ಔಷಧಗಳನ್ನು ಮುಂಚಿತವಾಗಿಯೇ ಖರೀದಿಸಿ ಇಟ್ಟುಕೊಳ್ಳುವುದು ಉತ್ತಮ. ತುರ್ತು ಸಂದರ್ಭಗಳಲ್ಲಿ ಸರ್ಕಾರಿ ಆಸ್ಪತ್ರೆಗಳು ಅಥವಾ ಪ್ರಮುಖ ಆಸ್ಪತ್ರೆಗಳ ಔಷಧಾಲಯಗಳನ್ನು ಸಂಪರ್ಕಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ – Kannada News | Sanjay Dutt starrer Aakhri Sawal Movie makers announce Buy 1 Get 1 Free Ticket offer

ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಲಿವುಡ್‌ನ ಬಹುಚರ್ಚಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ನಿರ್ಮಾಪಕರು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಪ್ರೇಮಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ಸೆಳೆಯುವ ಉದ್ದೇಶದಿಂದ ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಅವರು ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ’ (Buy 1 Get 1 Free) ಎಂಬ ವಿಶೇಷ ಪ್ರಚಾರದ ಆಫರ್ ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿನಿಮಾ ಪ್ರೇಕ್ಷಕರು ಟಿಕೆಟ್ ಬುಕ್ ಮಾಡುವಾಗ AAKHRISAWAL ಎಂಬ ಪ್ರೋಮೋ ಕೋಡ್ ಬಳಸುವ ಮೂಲಕ ಈ ಕೊಡುಗೆಯ ಲಾಭವನ್ನು ಪಡಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ಮಾಪಕ ನಿಖಿಲ್ ನಂದಾ, ‘ಒಂದು ಪ್ರಶ್ನೆ. ಒಂದು ಟಿಕೆಟ್. ಡಬಲ್ ಥ್ರಿಲ್. ಚಿತ್ರಮಂದಿರದ ಸೀಟುಗಳು ಭರ್ತಿಯಾಗುವ ಮುನ್ನವೇ ನಿಮ್ಮ ಆಫರ್ ಪಡೆದುಕೊಳ್ಳಿ. ನಿಮ್ಮವರ ಜೊತೆ ಬಂದು ಈ ನಿಗೂಢ ರಹಸ್ಯವನ್ನು ಒಟ್ಟಿಗೆ ವೀಕ್ಷಿಸಿ’ ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಐತಿಹಾಸಿಕ ಮತ್ತು ರಾಜಕೀಯ ಹಿನ್ನೆಲೆಯನ್ನು ಒಳಗೊಂಡಿರುವ ಕಾರಣದಿಂದಾಗಿ, ಈ ಚಿತ್ರದ ಟ್ರೇಲರ್ ಬಿಡುಗಡೆಯಾದ ದಿನದಿಂದಲೇ ಭಾರಿ ಕುತೂಹಲ ಮೂಡಿಸಿತ್ತು. ತನಿಖಾ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರವು ಇತ್ತೀಚೆಗೆ ಹಲವು ಗಣ್ಯರ ವಿಶೇಷ ಪ್ರದರ್ಶನಗಳ ಮೂಲಕ ಗಮನ ಸೆಳೆದಿದೆ.

ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಈ ಚಿತ್ರದ ವಿಶೇಷ ಪ್ರದರ್ಶನವನ್ನು ವೀಕ್ಷಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರೀಮಿಯರ್ ಶೋನಲ್ಲಿ ಭಾಗವಹಿಸಿದ್ದ ಪ್ರಮುಖ ರಾಜಕೀಯ ಮುಖಂಡರಾದ ರೇಖಾ ಗುಪ್ತಾ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲದೇ, ಈ ಚಿತ್ರದ ವಿಶೇಷ ಪ್ರದರ್ಶನವೊಂದು ರಾಷ್ಟ್ರಪತಿ ಭವನದಲ್ಲೂ ಆಯೋಜನೆಗೊಂಡಿತ್ತು ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: ಆರ್​ಎಸ್​ಎಸ್ ಸಿನಿಮಾ: ವಿವಾದದ ನಡುವೆಯೂ ರಾಷ್ಟ್ರಪತಿ ಭವನದಲ್ಲಿ ‘ಆಖ್ರಿ ಸವಾಲ್’ ಪ್ರದರ್ಶನ?

ಚಿತ್ರವು ಒಂದು ಕಡೆ ಪ್ರಶಂಸೆ ಪಡೆಯುತ್ತಿದ್ದರೆ, ಮತ್ತೊಂದು ಕಡೆ ವಿವಾದಗಳನ್ನೂ ಎದುರಿಸಿದೆ. ಯುಎಇ (UAE) ಸೆನ್ಸಾರ್ ಮಂಡಳಿಯು ಈ ಚಿತ್ರದ ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ಮತ್ತು ಬದಲಾವಣೆ ಮಾಡಲು ಸೂಚಿಸಿತ್ತು. ಆದರೆ ಚಿತ್ರದ ಮೂಲ ಕಥೆಗೆ ಧಕ್ಕೆಯಾಗಬಾರದು ಎಂದು ನಿರ್ಮಾಪಕರು ಆ ಬದಲಾವಣೆಗಳನ್ನು ಮಾಡಲು ನಿರಾಕರಿಸಿದ್ದರಿಂದ ಯುಎಇನಲ್ಲಿ ಈ ಚಿತ್ರದ ಬಿಡುಗಡೆಗೆ ಅನುಮತಿ ಸಿಕ್ಕಿಲ್ಲ. ಇದರ ಜೊತೆಗೆ ಚಿತ್ರದ ಕೆಲವು ಅಂಶಗಳ ವಿರುದ್ಧ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಕೂಡ ದಾಖಲಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಿರುಕುಳ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿ, ಹೆಣಕ್ಕೆ ತಾಳಿ ಕಟ್ಟಿದ ವ್ಯಕ್ತಿ – Kannada News | Jharkhand: Fiance Marries Deceased Bride Amid Ongoing Questions Around Her Death

ಗಿರಿದಿಹ್ , ಮೇ 19: ತನ್ನ ಕಿರುಕುಳಕ್ಕೆ ಬಲಿಯಾಗಿ ಹೆಣವಾಗಿ ಮಲಗಿದ್ದ ಯುವತಿ ಕತ್ತಿಗೆ ವ್ಯಕ್ತಿಯೊಬ್ಬ ತಾಳಿ ಕಟ್ಟಿರುವ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ. ಆಕೆಯನ್ನು ಆತ್ಮಹತ್ಯೆ(Suicide)ಗೆ ತಳ್ಳಿದ ಆರೋಪಿ ಯುವಕನೇ ಪೊಲೀಸರ ಸಮ್ಮುಖದಲ್ಲಿ ಮದುವೆಯಾಗಿರುವ ವಿಲಕ್ಷಣ ಪ್ರಸಂಗ ನಡೆದಿದೆ. ಮೃತರ ಹಣೆಗೆ ಸಿಂಧೂರ ಹಚ್ಚಿ, ಸಾಂಕೇತಿಕವಾಗಿ ವಿವಾಹ ವಿಧಿವಿಧಾನಗಳನ್ನು ಮುಗಿಸಿದ ನಂತರವೇ ಆಕೆಯ ಅಂತ್ಯಕ್ರಿಯೆ ನಡೆಸಲು ಸಾಧ್ಯವಾಗಿದೆ.

ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿ ಯುವಕ ಮನೀಶ್ ಮುರ್ಮು ಮತ್ತು ಮೃತ ಯುವತಿಗೆ ಸುಮಾರು ನಾಲ್ಕು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಎರಡೂ ಕುಟುಂಬಗಳ ಒಪ್ಪಿಗೆಯ ಮೇರೆಗೆ ಶೀಘ್ರದಲ್ಲೇ ಮದುವೆ ಮಾಡುವುದಾಗಿ ನಂಬಿಸಿ, ಯುವತಿಯನ್ನು ಮನೀಶ್ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಆದರೆ, ಮನೆಗೆ ಬಂದ ದಿನದಿಂದಲೇ ಆಕೆಗೆ ನಿರಂತರವಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಲು ಪ್ರಾರಂಭಿಸಿದ್ದನ.

ಇತ್ತ ಯುವತಿಯ ತಂದೆ ಮದುವೆ ದಿನಾಂಕ ನಿಗದಿಪಡಿಸುವಂತೆ ಒತ್ತಡ ಹೇರಲು ಪ್ರಾರಂಭಿಸಿದಾಗ, ಶುಕ್ರವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಮಗಳು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾಳೆ ಎಂಬ ಸುದ್ದಿ ಸಿಕ್ಕಿದೆ. ಆತಂಕಗೊಂಡ ಪೋಷಕರು ಹುಡುಗನ ಮನೆಗೆ ಧಾವಿಸಿ ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರಾದರೂ, ಆಕೆ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮನೀಶ್ ನೀಡಿದ ನರಕಯಾತನೆಯನ್ನು ತಡೆಯಲಾರದೆ ನನ್ನ ಮಗಳು ವಿಷ ಸೇವಿಸಿದ್ದಾಳೆ, ಇದಕ್ಕೆ ಆತನೇ ಕಾರಣ ಎಂದು ಯುವತಿಯ ತಂದೆ ನೇರವಾಗಿ ಆಕ್ರೋಶ ಹೊರಹಾಕಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿ ಮನೀಶ್ ಮುರ್ಮುನನ್ನು ತಕ್ಷಣವೇ ಬಂಧಿಸಿದರು. ಆದರೆ, ಮರಣೋತ್ತರ ಪರೀಕ್ಷೆಯ ನಂತರ ಘಟನೆ ತೀವ್ರ ಉದ್ವಿಗ್ನ ರೂಪ ಪಡೆಯಿತು. ಎರಡೂ ಕುಟುಂಬಗಳ ನಡುವೆ ಜಗಳ ತಾರಕಕ್ಕೇರಿ, ಯಾರೂ ಕೂಡ ಯುವತಿಯ ಶವವನ್ನು ಸ್ವೀಕರಿಸಲು ಸಿದ್ಧರಿರಲಿಲ್ಲ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಪೊಲೀಸರು ಅನಿವಾರ್ಯವಾಗಿ ಶವವನ್ನು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲೇ ಇಟ್ಟುಕೊಳ್ಳಬೇಕಾಯಿತು.

ಮತ್ತಷ್ಟು ಓದಿ: ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ಕಸ್ಟಡಿಯಿಂದ ಬಂದು ಹೆಣಕ್ಕೆ ತಾಳಿ ಕಟ್ಟಿದ ವರ
ಮರುದಿನ ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ಶವವನ್ನು ಯುವಕನ ಗ್ರಾಮಕ್ಕೆ ತರಲಾಯಿತು. ಈ ವೇಳೆ ಗ್ರಾಮಸ್ಥರು ಮತ್ತು ಯುವತಿಯ ಕುಟುಂಬಸ್ಥರು ವಿಚಿತ್ರ ಹಠಕ್ಕೆ ಬಿದ್ದರು. ಮನೀಶ್ ಶವವನ್ನು ಮದುವೆಯಾಗಲೇಬೇಕು ಎಂದು ಪಟ್ಟುಹಿಡಿದರು. ಕೊನೆಗೆ ಉದ್ರಿಕ್ತ ಜನಸಮೂಹವನ್ನು ನಿಯಂತ್ರಿಸಲು ಪೊಲೀಸರು ಕಸ್ಟಡಿಯಲ್ಲಿದ್ದ ಆರೋಪಿ ಮನೀಶ್‌ನನ್ನು ಸ್ಥಳಕ್ಕೆ ಕರೆತಂದರು.

ನೂರಾರು ಜನರ ಸಮ್ಮುಖದಲ್ಲಿ, ಪೊಲೀಸ್ ಅಧಿಕಾರಿಗಳ ಕಣ್ಣೆದುರೇ ಆರೋಪಿ ಮನೀಶ್ ಜೀವವಿಲ್ಲದ ಆ ಮುಗ್ಧ ಯುವತಿಯ ಹಣೆಗೆ ಸಿಂಧೂರ ಹಚ್ಚಿ, ಸಾಂಕೇತಿಕ ವಿವಾಹದ ವಿಧಿವಿಧಾನಗಳನ್ನು ನೆರವೇರಿಸಿದನು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version