Video: ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ಡ್ಯಾನ್ಸ್​ – Kannada News | Chasing Likes and Views, Woman Risks Children’s Lives Internet Outrage Follows

ಛೇ ಇದೇನಿದು ಹುಚ್ಚಾಟ, ರೀಲ್ಸ್​ ಹುಚ್ಚಿಗಾಗಿ ಮಹಿಳೆ ತನ್ನ ಮಕ್ಕಳನ್ನೇ ಕಳೆದುಕೊಳ್ಳಬಹುದಿತ್ತು, ಲೈಕ್ಸ್​, ಕಮೆಂಟ್​ಗಾಗಿ ಜೀವವನ್ನೇ ಪಣಕ್ಕಿಟ್ಟು ಅಪಾಯಕಾರಿ ಸಾಹಸ ಮಾಡುವುದು ಎಷ್ಟು ಸರಿ. ರೀಲ್ಸ್​ಗಾಗಿ ಮಹಿಳೆ ಬಾವಿಯ ಮೇಲೆ ಮಕ್ಕಳನ್ನು ನಿಲ್ಲಿಸಿಕೊಂಡು ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಸೀರೆ ಉಟ್ಟ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಯ ಅಂಚಿನಲ್ಲಿ ನಿಂತಿರುವುದನ್ನು ನೀವು ನೋಡಬಹುದು. ಭೋಜ್‌ಪುರಿ ಹಾಡು ಪ್ಲೇ ಆಗುತ್ತಿದ್ದಂತೆ, ಅವರು ನೃತ್ಯ ಮಾಡಲು ಪ್ರಾರಂಭಿಸುತ್ತಾರೆ. ಮಕ್ಕಳ ಕೈಗಳನ್ನು ಬಿಡದಿರುವುದು ಆ ಮಕ್ಕಳ ಅದೃಷ್ಟವೇ ಸರಿ….

Read More

ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ – Kannada News | Love Fraud Case in Ramanagara: Woman Attempts self harm Near Police Station After Betrayal Allegations

ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಆತ್ಮಹತ್ಯೆಗೆ ಯತ್ನಿಸಿದ ಯುವತಿ ರಾಮನಗರ, ಜನವರಿ 15: ರಾಮನಗರದಲ್ಲಿ (Ramanagara) ಪ್ರೇಮ ವೈಫಲ್ಯದಿಂದ ಮನನೊಂದು ಯುವತಿಯೊಬ್ಬಳು ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪವೇ ಈ ಘಟನೆ ನಡೆದಿದ್ದು, ಸಮಯಕ್ಕೆ ಸರಿಯಾಗಿ ಗಮನಿಸಿದ ಪೊಲೀಸರು ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಗಟ್ಟಿಗುಂದ ಗ್ರಾಮದ ನಿವಾಸಿಯಾಗಿದ್ದಾರೆ….

Read More

ನಾನಾ… ಹೌದು ನೀನೇ… ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!

ವುಮೆನ್ಸ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲೂ ರಿಟೈರ್ಡ್ ಔಟ್ ಸದ್ದು ಮಾಡಿದೆ. ಈ ಬಾರಿ ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ಮರಳಿದ್ದು ಹರ್ಲೀನ್ ಡಿಯೋಲ್. ಮುಂಬೈನ ಡಿವೈ ಪಾಟೀಲ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಯುಪಿ ವಾರಿಯರ್ಸ್ ಪರ ಹರ್ಲೀನ್ ಡಿಯೋಲ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಅಲ್ಲದೆ 36 ಎಸೆತಗಳನ್ನು ಎದುರಿಸಿದ ಹರ್ಲೀನ್ 7 ಫೋರ್​ಗಳೊಂದಿಗೆ 47 ರನ್​…

Read More

ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ – Kannada News | Chaithra Kundapura Starts her Own Youtube Channel on the occasion of Sankranthi

ಚೈತ್ರಾ ಕುಂದಾಪುರ ಅವರು ಸಂಕ್ರಾಂತಿ ಸಂದರ್ಭದಲ್ಲಿ ಹೊಸ ಸುದ್ದಿ ನೀಡಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್ ಚಾನೆಲ್ ಆರಂಭಿಸುತ್ತಿದ್ದಾರೆ. ಇದರ ಮೂಲಕ ಪಾಡ್​ಕಾಸ್ಟ್ ನಡೆಸಲಿದ್ದಾರೆ ಎಂಬುದು ವಿಶೇಷ. ಚೈತ್ರಾಗೆ ಈಗಾಗಲೇ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ. ಅದನ್ನು ಅವರು ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಆಧ್ಯಾತ್ಮ ಸೇರಿದಂತೆ ಹಲವು ವಿಷಯಗಳ ಕುರಿತು ಈ ಪಾಡ್​​ಕಾಸ್ಟ್​​ನಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರದವರನ್ನು ಇದರಲ್ಲಿ ಕರೆಸಿ ಮಾತುಕತೆ ನಡೆಸಲು ಅವರು ನಿರ್ಧರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ – Kannada News | Siddaramananda Swamiji of Tinthani Kaginele Kanaka Gurupeetha Passes Away Due to Heart Attack

ರಾಯಚೂರು, ಜನವರಿ 15: ರಾಯಚೂರಿನ (Raichur) ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) (Siddaramananda Swamiji) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ. ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು. ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ…

Read More

IND vs NZ: ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ..!

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕಿವೀಸ್ ಪಡೆ ಭಾರತೀಯ ಪಿಚ್​ನಲ್ಲಿ ಐತಿಹಾಸಿಕ ಸಾಧನೆಯನ್ನು ಸಹ ಮಾಡಿದೆ. ಅಂದರೆ ಇದು ನ್ಯೂಝಿಲೆಂಡ್ ತಂಡದ್ದು ಅಂತಿಂಥ ಗೆಲುವಲ್ಲ. ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮೈಕೆಲ್ ಬ್ರೇಸ್​ವೆಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (112) ಅಜೇಯ ಶತಕ ಸಿಡಿಸಿದ್ದರು….

Read More

ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲ ನಿಂದನೆ ಮಾಡಿದ ಕಾಂಗ್ರೆಸ್ ಮುಖಂಡನಿಗೆ ಎದುರಾಯ್ತು ಎರಡೆರಡು ಸಂಕಷ್ಟ – Kannada News | Congress Leader Faces Double Trouble for Obscene Abuse Against Shidlaghatta Municipal Commissioner

ರಾಜೀವ್ ಗೌಡ (ಎಡಚಿತ್ರ) ಹಾಗೂ ಅವರ ವಿರುದ್ಧ ದೂರು ನೀಡುತ್ತಿರುವುದು ಚಿಕ್ಕಬಳ್ಳಾಪುರ, ಜನವರಿ 15: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡಗೆ (Rajeev Gowda) ಈಗ ಎರಡೆರಡು ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ, ಇದೀಗ ಜೆಡಿಎಸ್ ಮುಖಂಡರು ಕೂಡ ದೂರು ನೀಡಿದ್ದಾರೆ. ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ…

Read More

ಐದು ವರ್ಷದ ಬಾಲಕಿಯನ್ನು ಬೆದರಿಸಿ 55 ವರ್ಷದ ವ್ಯಕ್ತಿಯಿಂದ 5 ದಿನಗಳ ಕಾಲ ಅತ್ಯಾಚಾರ – Kannada News | Chhattisgarh man, Physically assaults 5 year old, threatens to kill her if she complains

ಛತ್ತೀಸ್​ಗಢ, ಜನವರಿ 15: ಐದು ವರ್ಷದ ಬಾಲಕಿ(Girl)ಗೆ ಐದು ದಿನಗಳ ಕಾಲ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಚಾಕೊಲೇಟ್ ಕೊಟ್ಟು ಮನೆಗೆ ಕರೆದೊಯ್ದ ಅನ್ಸಾರಿ ಜನವರಿ 7ರಿಂದ 11ರವರೆಗೆ ಐದು ದಿನಗಳ ಕಾಲ ನಿರಂತರವಾಗಿ ದೌರ್ಜನ್ಯವೆಸಗಿರುವುದು ಬೆಳಕಿಗೆ ಬಂದಿದೆ. ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಆರೋಪಿ ಬೆದರಿಕೆ ಹಾಕಿದ್ದರಿಂದ ಬಾಲಕಿ ಭಯದಿಂದ ಮೌನವಾಗಿಯೇ ಉಳಿದಿದ್ದಳು. ದೈಹಿಕ ನೋವು ಸಹಿಸಲಾಗದಿದ್ದಾಗ ಬಾಲಕಿ ನಡೆದಿರುವ ವಿಚಾರವನ್ನು ಮನೆಯಲ್ಲಿ ಹೇಳಿಕೊಂಡಿದ್ದಾಳೆ. ಜನವರಿ 12 ರಂದು ಬಾಲಕಿಗೆ ಚಿಕ್ಕಮ್ಮ ಸ್ನಾನ ಮಾಡಿಸುವಾಗ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಜಿಲ್ಲೆಗಳಲ್ಲಿ ಶೀತಗಾಳಿ ವಾತಾವರಣ, ಆರೋಗ್ಯದ ಕಡೆ ಇರಲಿ ಗಮನ – Kannada News | Bangalore Temperature 28°C: IMD Forecasts Mixed Karnataka Weather and Cold Wave

ಬೆಂಗಳೂರು, ಜ.15: ಇಂದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ (Karnataka Weather) ವಾತಾವರಣ ಹೇಗಿದೆ. ಹವಾಮಾನ ಇಲಾಖೆ ನೀಡಿದ ಸೂಚನೆಗಳೇನು?  ಎಂಬುದನ್ನು ಇಲ್ಲಿ ತಿಳಿದುಕೊಳ್ಳಬಹುದು,  ಕರ್ನಾಟಕದಾದ್ಯಂತ ಹವಾಮಾನವು ಮಿಶ್ರವಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹಿತಕರವಾದ ವಾತಾವರಣವಿದೆ.  ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ನಗರದಲ್ಲಿ ಇಂದು ಗರಿಷ್ಠ ತಾಪಮಾನ 28°C ರಿಂದ 29°C ವರೆಗೆ ಇರಲಿದ್ದು, ಕನಿಷ್ಠ ತಾಪಮಾನ 16°C ಇರಲಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣವಿದ್ದು, ದಿನವಿಡೀ ಮೋಡ ಕವಿದ…

Read More

ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ – Kannada News | Fire Breaks Out at Scrap Warehouse in Bengaluru’s Begur, Plastic Materials Gutted

ಬೆಂಗಳೂರು, ಜನವರಿ 15: ನಗರದ ಬೇಗೂರು ಪ್ರದೇಶದ ಅಕ್ಷಯನಗರದಲ್ಲಿರುವ ಸ್ಕ್ರಾಪ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗೋದಾಮಿನಲ್ಲಿ ಸಂಗ್ರಹಿಸಿದ್ದ ಹಳೆಯ ಪ್ಲಾಸ್ಟಿಕ್ ವಸ್ತುಗಳು ಧಗಧಗನೆ ಹೊತ್ತಿ ಉರಿದಿದ್ದು, ಇಡೀ ಪ್ರದೇಶದಲ್ಲಿ ಆತಂಕ ಉಂಟಾಯಿತು. ಬೆಂಕಿಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಹಾಗೂ 20ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಸದ್ಯ…

Read More