Karnataka Weather Update: ರಾಜ್ಯದ ಹಲವೆಡೆ ವರುಣಾರ್ಭಟ! ಬೆಂಗಳೂರಲ್ಲಿ ಮರ ಬಿದ್ದು ವಾಹನಗಳು ಚೂರು, ಕೋಲಾರದಲ್ಲಿ 90 ಲಕ್ಷದ ಬೆಳೆ ನಾಶ – Kannada News | Karnataka Rain Update: Heavy Damages in Bengaluru, Kolar, and Davanagere Due to Storm
ಬೆಂಗಳೂರು, ಮೇ 22: ಗುರುವಾರ ಸಂಜೆ ಸುರಿದ ಭಾರೀ ಮಳೆಗೆ (Weather) ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರು ಸೇರಿದಂತೆ ದಾವಣಗೆರೆ , ಕೋಲಾರ, ಚಿತ್ರದುರ್ಗ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೋರು ಮಳೆಗೆ ಕೆಲವೆಡೆ ಮನೆಗಳಿಗೆ ನೀರು ನಿಗ್ಗಿದರೆ, ಇನ್ನೂ ಕೆಲ ಕಡೆ ಮರಗಳು ಧರೆಗುರುಳಿವೆ. ವರುಣಾರ್ಭಟಕ್ಕೆ ರಾಜ್ಯದ ಜನತೆ ತತ್ತರಿಸಿಹೋಗಿದ್ದಾರೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಹೀಗೆ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮರ ಬಿದ್ದು ನಾಲ್ಕು…