ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ – Kannada News | Snake rescue at Salman Khan home Galaxy Apartment video viral on social media

ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್​ಹೌಸ್​ನಲ್ಲಿ ಹಾವು ಕಚ್ಚಿತ್ತು. ಈ ಬಾರಿ ಯಾವುದೇ ತೊಂದರೆ ಆಗಿಲ್ಲ. ಸಲ್ಮಾನ್ ಖಾನ್ ಮನೆಯಲ್ಲಿ ಹಾವು ಹಿಡಿದಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ರಗಡೋ ರಕ್ಕಿ’ ಹಾಡಿನಲ್ಲಿ ಹೀರೋ ಮಾಸ್ ಎಂಟ್ರಿ; ‘ಪಿಆರ್​ಕೆ ಆಡಿಯೋ’ ಮೂಲಕ ರಿಲೀಸ್ – Kannada News | Ragado Rakky new song ft Rakky Suresh released on PRK Audio

ರಕ್ಕಿ ಸುರೇಶ್ ಅಭಿನಯದ ‘ರಕ್ಕಿ’ (Rakky) ಸಿನಿಮಾದ ಪ್ರಚಾರ ಕಾರ್ಯ ಶುರುವಾಗಿದೆ. ಈ ಸಿನಿಮಾದಿಂದ ‘ರಗಡೋ ರಕ್ಕಿ’ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಪಿಆರ್​ಕೆ ಆಡಿಯೋ’ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಯುವಜನತೆಗೆ ಇಷ್ಟವಾಗುವ ರೀತಿಯಲ್ಲಿ ಹಾಡು ಮೂಡಿಬಂದಿದೆ. ಇದು ಹೀರೋ ಆಗಿ ರಕ್ಕಿ ಸುರೇಶ್ (Rakky Suresh) ನಟಿಸಿರುವ ಮೊದಲ ಸಿನಿಮಾ. ಚೊಚ್ಚಲ ಪ್ರಯತ್ನದಲ್ಲೇ ಅವರು ಯುವ ಪ್ರೇಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

‘ರಗಡೋ ರಕ್ಕಿ’ ಹಾಡಿನಲ್ಲಿ ರಕ್ಕಿ ಸುರೇಶ್ ಅವರ ಎನರ್ಜಿಟಿಕ್ ಡ್ಯಾನ್ಸ್ ಮತ್ತು ಸ್ಟೈಲಿಶ್ ಲುಕ್ ಹೈಲೈಟ್ ಆಗಿದೆ. ಕಲರ್​ಫುಲ್ ಆಗಿ ಈ ಹಾಡು ಮೂಡಿಬಂದಿದೆ. ಈ ಸಿನಿಮಾದಲ್ಲಿ ಅವರನ್ನು ಹೊಸ ತಲೆಮಾರಿನ ಮಾಸ್ ಹೀರೋ ಆಗಿ ಪರಿಚಯಿಸಲಾಗುತ್ತಿದೆ. ಜೆನ್ ಜೀ ಟ್ರೆಂಡ್ ಪ್ರತಿಬಿಂಬಿಸುವ ರೀತಿಯಲ್ಲಿ ಹಾಡಿನ ಮೇಕಿಂಗ್ ಇದೆ. ಈ ಮೂಲಕ ಸಿನಿಮಾ ಬಗ್ಗೆ ಕುತೂಹಲ ಮೂಡುವಂತಾಗಿದೆ.

‘ರಕ್ಕಿ’ ಸಿನಿಮಾಗೆ ವೆಂಕಟ್ ಭಾರದ್ವಾಜ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ಯ ಈ ಸಿನಿಮಾ ಸೆನ್ಸಾರ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿದೆ. ಈ ಸಿನಿಮಾಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಬೆಂಬಲ ದೊರೆತಿದೆ. ಪಿಆರ್​ಕೆ ಆಡಿಯೋ ಮೂಲಕ ಹಾಡುಗಳು ರಿಲೀಸ್ ಆಗುತ್ತಿವೆ. ಇದರಿಂದ ಚಿತ್ರತಂಡದ ಬಲ ಹೆಚ್ಚಿದೆ.

‘ರಗಡೋ ರಕ್ಕಿ’ ಹಾಡು:

ಲೋಕಿ ತವಸ್ಯ ಅವರು ಈ ಹಾಡಿಗೆ ಸಂಗೀತ ನೀಡಿದ್ದಾರೆ ಹಾಗೂ ಸಾಹಿತ್ಯ ಬರೆದಿದ್ದಾರೆ. ಕಂಬಿರಾಜು ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ. ಐ ಸಾಕ್ ಪ್ರಭಾಕರ್ ಅವರ ಛಾಯಾಗ್ರಹಣದಲ್ಲಿ ಎಲ್ಲವೂ ಕಲರ್​ಫುಲ್ ಆಗಿವೆ. ಈ ಚಿತ್ರದಲ್ಲಿ ರಕ್ಕಿ ಸುರೇಶ್ ಜೊತೆ ಪಲ್ಲವಿ ಮಂಜುನಾಥ್, ಆಶಿಕಾ ಸೋಮಶೇಖರ್, ಸಂಪತ್ ಮೈತ್ರೇಯ, ಬಿ. ಸುರೇಶ, ರಮೇಶ್ ಪಂಡಿತ್, ಬಲ ರಾಜವಾಡಿ, ಜಿಜಿ, ಹರಿಣಿ ಶ್ರೀಕಾಂತ್ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಚಾರ್ಜ್​ಶೀಟ್’, ‘ರಕ್ಕಿ’ ಸಿನಿಮಾಗಳ ಚಿತ್ರೀಕರಣ ಪೂರ್ಣಗೊಳಿಸಿದ ವೆಂಕಟ್​ ಭಾರದ್ವಾಜ್

ಈ ಸಿನಿಮಾವನ್ನು ‘ಎಸ್​ಎನ್​ಆರ್​ ಪ್ರೊಡಕ್ಷನ್ಸ್’ ಮೂಲಕ ಸುರೇಶ್ ಸಾಲಿಗ್ರಾಮ ಅವರು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಆ್ಯಕ್ಷನ್, ಎಮೋಷನ್, ಸಂಗೀತ, ಪ್ರೇಮ ಮತ್ತು ಮಾಸ್ ಅಂಶಗಳು ಇರಲಿವೆ ಎಂದು ಚಿತ್ರತಂಡ ಹೇಳಿದೆ. ಆದ್ದರಿಂದ ಯುವ ಪ್ರೇಕ್ಷಕರಿಗೆ ಈ ಸಿನಿಮಾ ಇಷ್ಟ ಆಗಲಿದೆ ಎಂಬುದು ಚಿತ್ರತಂಡದ ನಂಬಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಿಲ್ಲಿಯಲ್ಲಿ ಟ್ಯಾಕ್ಸಿ, ಆಟೊ ಚಾಲಕರಿಂದ 3 ದಿನ ಮುಷ್ಕರ; ಏನಿವೆ ಅವರ ಬೇಡಿಕೆಗಳು? – Kannada News | Delhi Auto, tax drivers strike on May 21 23, demanding for fare increase due to rising fuel prices

ದೆಹಲಿಯಲ್ಲಿ ಟ್ಯಾಕ್ಸಿ ಚಾಲಕರಿಂದ ಮುಷ್ಕರImage Credit source: AI/Mediaforge/TV9

ನವದೆಹಲಿ, ಮೇ 19: ರಾಷ್ಟ್ರ ರಾಜಧಾನಿನಗರಿಯಲ್ಲಿನ ಕಮರ್ಷಿಯಲ್ ವಾಹನಗಳ ಚಾಲಕರ ಒಕ್ಕೂಟಗಳು (Commercial vehicle drivers unions ಮೂರು ದಿನಗಳ ಮುಷ್ಕರ (Strike) ನಡೆಸುವುದಾಗಿ ಘೋಷಿಸಿವೆ. ಮೇ 21, ಗುರುವಾರದಿಂದ ಮೇ 23, ಶನಿವಾರದವರೆಗೆ ಈ ಪ್ರತಿಭಟನೆ ನಡೆಯಲಿದೆ. ದೆಹಲಿಯಲ್ಲಿ ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ಟ್ಯಾಕ್ಸಿ ಮತ್ತು ಆಟೊರಿಕ್ಷಾ ದರಗಳನ್ನು (Taxi fares) ಹೆಚ್ಚಿಸಬೇಕೆಂದು ಆಗ್ರಹಿಸಿ ಈ ಮುಷ್ಕರ ನಡೆಸಲಾಗುತ್ತಿದೆ.

ಈ ಸುದ್ದಿಯ ಮುಖ್ಯಾಂಶಗಳು

  • ದೆಹಲಿಯಲ್ಲಿ ಸತತವಾಗಿ ಇಂಧನ ಏರಿಕೆ ಹಿನ್ನೆಲೆಯಲ್ಲಿ ಆಟೊರಿಕ್ಷಾ ಮತ್ತು ಟ್ಯಾಕ್ಸಿ ದರಗಳನ್ನು ಹೆಚ್ಚಿಸಬೇಕು ಎಂದು ಚಾಲಕರ ಒಕ್ಕೂಟಗಳ ಒತ್ತಾಯ.
  • ಪ್ರಯಾಣ ದರ ಹೆಚ್ಚಿಸುವಂತೆ ಆಗ್ರಹಿಸಿ ದೆಹಲಿಯ ಚಾಲಕರ ಒಕ್ಕೂಟಗಳು ಮೇ 21-23ರವರೆಗೆ ಮುಷ್ಕರ ನಡೆಸಲಿವೆ.
  • ಚಾಲಕರ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಮುಷ್ಕರ ಸ್ವರೂಪ ತೀವ್ರಗೊಳ್ಳಲಿದೆ ಎಂದು ಒಕ್ಕೂಟವು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಮೈಕ್ರೋಸಾಫ್ಟ್ ಎಐ ಮುಖ್ಯಸ್ಥರ ಎಚ್ಚರಿಕೆ; ಇನ್ನು, 12-18 ತಿಂಗಳಲ್ಲಿ ಇನ್ನಿಲ್ಲವಾಗುತ್ತವಂತೆ ವೈಟ್ ಕಾಲರ್ ಜಾಬ್​ಗಳು

ದೆಹಲಿಯಲ್ಲಿ ಸಿಎನ್​ಜಿ, ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಮರ್ಷಿಯಲ್ ವಾಹನಗಳ ಪ್ರಯಾಣ ದರ ಪರಿಷ್ಕರಣೆ ಮಾಡಬೇಕು ಮತ್ತು ಬೆಲೆ ಏರಿಕೆಯಿಂದ ಬಾಧಿತರಾದ ಚಾಲಕರಿಗೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದು ಈ ಸಂಘಟನೆಗಳ ಪ್ರಮುಖ ಒತ್ತಾಯವಾಗಿದೆ. ಈ ಸಂಬಂಧ ಅಖಿಲ ಭಾರತ ಮೋಟಾರು ಸಾರಿಗೆ ಸಂಸ್ಥೆಯು (All India Motor Transport Congress) ನಿನ್ನೆ ಸೋಮವಾರ (ಮೇ 18) ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೆ ಪತ್ರ ಬರೆದು ಒತ್ತಾಯಪಡಿಸಿತ್ತು.

‘ಇಂಧನ ಬೆಲೆಗಳು ಸತತವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಮಧ್ಯಮ ವರ್ಗದ ಚಾಲಕರು ತಮ್ಮ ಜೀವನ ನಿರ್ವಹಿಸಲು ಪರದಾಡುವಂತಾಗಿದೆ. ಆದ್ದರಿಂದ ದೆಹಲಿಯ ಇತರ ಸಂಘಟನೆಗಳೊಂದಿಗೆ ಸಹಕಾರದಲ್ಲಿ ಚಾಲಕ ಶಕ್ತಿ ಒಕ್ಕೂಟವು ಚಕ್ಕಾ ಜಾಮ್​ಗೆ (ಮುಷ್ಕರ) ಕರೆ ನೀಡಿದೆ. ಮೇ 21, 22 ಮತ್ತು 23ರಂದು ವಾಹನ ಚಲಾಯಿಸದಿರಿ ಎಂದು ಮನವಿ ಮಾಡಲಾಗಿದೆ’ ಎಂದು ಚಾಲಕ್ ಶಕ್ತಿ ಯೂನಿಯನ್ನ ಉಪಾಧ್ಯಕ್ಷ ಅನುಜ್ ಕುಮಾರ್ ರಾಥೋಡ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೈಕು, ಬಸ್ಸು, ಕಾರು, ರೈಲು, ಹೀಗೆ ನೀವು ಯಾವುದರಲ್ಲಿ ಪ್ರಯಾಣಿಸಿದ್ದು ಎಂಬುದು ಗೂಗಲ್​ಗೆ ಗೊತ್ತಾಗೋದು ಹೇಗೆ?

ಒಂದು ವೇಳೆ, ದೆಹಲಿ ಸರ್ಕಾರವು ಮುಂದಿನ ಒಂದೆರಡು ವಾರದೊಳಗೆ ಟ್ಯಾಕ್ಸಿ ಪ್ರಯಾಣದರವನ್ನು ಪರಿಷ್ಕರಿಸಲು ವಿಫಲವಾದಲ್ಲಿ ಈ ಪ್ರತಿಭಟನೆ ಉಗ್ರ ರೂಪ ಪಡೆಯುತ್ತದೆ. ದೊಡ್ಡ ಮಟ್ಟದಲ್ಲಿ ಮುಷ್ಕರ ನಡೆಸಲಾಗುತ್ತದೆ. ಇದಕ್ಕೆ ದೆಹಲಿ ಸರ್ಕಾರವೇ ಹೊಣೆಯಾಗುತ್ತದೆ ಎಂದೂ ಚಾಲಕರ ಒಕ್ಕೂಟವು ಎಚ್ಚರಿಕೆ ನೀಡಿದೆ.

ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಇತ್ತೀಚೆಗೆ ರಾಷ್ಟ್ರಾದ್ಯಂತ 3 ರೂ ಏರಿಕೆ ಆಗಿವೆ. ಇದಕ್ಕೆ ಹೆಚ್ಚುವರಿಯಾಗಿ ದೆಹಲಿಯಲ್ಲಿ ಸಿಎನ್​ಜಿ ಮತ್ತು ಪೆಟ್ರೋಲ್, ಡೀಸಲ್ ದರಗಳನ್ನು ಹೆಚ್ಚಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​: ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಆದೇಶ – Kannada News | Big Shock to Transport Employees: Karnataka High Court Bars Planned Strike on May 20

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​

ಬೆಂಗಳೂರು, ಮೇ 19: ನಾಳೆ (ಮೇ 20) ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್​​ ಶಾಕ್​​ ಕೊಟ್ಟಿದೆ. ನ್ಯಾ.ಸೂರಜ್ ಗೋವಿಂದರಾಜ್ ಮತ್ತು ನ್ಯಾ.ಕೆ.ಮನ್ಮಥರಾವ್ ಅವರಿದ್ದ ಪೀಠ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಿದೆ. ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ, ಮುಷ್ಕರ ಬೇಡ ಎಂದು ಕೋರ್ಟ್​ ಹೇಳಿದೆ. ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಸೂಚಿಸಿದೆ.

ಮುಖ್ಯಾಂಶಗಳು

  • ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ನೌಕರರಿಗೆ ಬಿಗ್​​ ಶಾಕ್​​
  • ಮುಷ್ಕರ ನಡೆಸದಂತೆ ನಿರ್ಬಂಧ ವಿಧಿಸಿದ ಹೈಕೋರ್ಟ್​​
  • ಸರ್ಕಾರ ಚರ್ಚೆ ನಡೆಸಲಿ, ಮುಷ್ಕರ ಬೇಡ ಎಂದ ನ್ಯಾಯಾಲಯ

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್​ಗೆ ಕೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕ ಪಿಐಎಲ್ ಸಲ್ಲಿಸಿದ್ದರು. KESMA ಅಡಿ ಜ.1ರಿಂದ ಜೂ.30ರವರೆಗೆ ಮುಷ್ಕರ ನಿರ್ಬಂಧಿಸಲಾಗಿದೆ. 2025ರ ಜು.18ರ ಕಾರ್ಮಿಕ ಆಯುಕ್ತರ ರಾಜಿ ಸಂಧಾನ ಪ್ರಕ್ರಿಯೆ ಮುಂದುವರಿದಿದೆ. ರಾಜಿ ಸಂಧಾನದ ಮುಂದಿನ ವಿಚಾರಣೆ ಮೇ 25ಕ್ಕೆ ನಿಗದಿಯಾಗಿದೆ. ಈ ಮಧ್ಯೆ ಮುಷ್ಕರ ನಡೆಸುವುದು ಕಾನೂನುಬಾಹಿರ. 14 ದಿನಗಳ ನೋಟಿಸ್ ಬದಲು ಮುಷ್ಕರಕ್ಕೆ 7 ದಿನಗಳ ನೋಟಿಸ್ ನೀಡಲಾಗಿದೆ. SSLC ಪೂರಕ ಪರೀಕ್ಷೆಗಳೂ ಇದೇ ಅವಧಿಯಲ್ಲಿ ನಿಗದಿಯಾಗಿರುವ ಕಾರಣ ಮೇ 20ರಂದು ಕರೆ ನೀಡಿರುವ ಸಾರಿಗೆ ನೌಕರರ ಮುಷ್ಕರ ನಿರ್ಬಂಧಿಸಲು ಮನವಿ ಮಾಡಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ಆದೇಶ ನೀಡಿದ್ದು, ಇದೇ ವೇಳೆ ಪಿಐಎಲ್ ಅರ್ಜಿದಾರರ ಬಗ್ಗೆ ಅಚ್ಚರಿ ಕೂಡ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾತುಕತೆಗೆ ಪಟ್ಟು; ಸಾರಿಗೆ ನೌಕರರ ಸಂಧಾನ ವಿಫಲ

ವಿಫಲವಾಗಿದ್ದ ಸಂಧಾನ ಸಭೆ

ಸಾರಿಗೆ ನೌಕರರ ಮುಷ್ಕರ ವಿಚಾರ ಸಂಬಂಧ ಬೆಂಗಳೂರಿನಬನ್ನೇರುಘಟ್ಟದ ಕಾರ್ಮಿಕ ಭವನದಲ್ಲಿ ನಿನ್ನೆ ನಡೆದ ಸಂಧಾನ ಸಭೆ ವಿಫಲವಾಗಿತ್ತು. ಎಷ್ಟೇ ಮನವೊಲಿಕೆಗೆ ಯತ್ನಿಸಿದರೂ ಸಾರಿಗೆ ನೌಕರರು ಪಟ್ಟು ಬಿಟ್ಟಿರಲಿಲ್ಲ. ಮತ್ತೆ ಮೇ 25ಕ್ಕೆ ಸಭೆಗೆ ಬರಲು ಅಧಿಕಾರಿಗಳು ಆಹ್ವಾನ ನೀಡಿದರೂ ನಿಗಮದ ಅಧಿಕಾರಿಗಳ ಮನವಿಗೆ ಒಪ್ಪದ ಸಾರಿಗೆ ಮುಖಂಡರು, ಸಿಎಂ ಜೊತೆಗೆ ಸಭೆಗೆ ಪಟ್ಟು ಹಿಡಿದಿದ್ದರು. ಯಾವುದೇ ಮನವೊಲಿಕೆಗೂ ಬಗ್ಗದ ನೌಕರರು, ಇಂದು (ಮೇ 19) ಮಧ್ಯಾಹ್ನದ ಒಳಗಾಗಿ ಸಭೆ ಕರೆದು ಬೇಡಿಕೆ ಈಡೇರಿಕೆ ಸಂಬಂಧ ಮಾತನಾಡುವಂತೆ ಆಗ್ರಹಿಸಿದ್ದರು. ಈ ವೇಳೆ ಸರ್ಕಾರ ಸದ್ಯದ ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ವಿವರಿಸಿದರೂ, ಸಿಎಂ ಜೊತೆ ಸಭೆಗೆ ಸಾರಿಗೆ ನೌಕರರ ಸಂಘಟನೆ ಆಗ್ರಹಿಸಿತ್ತು. ಅಲ್ಲದೆ ಸಭೆ ಮಾಡಿಲ್ಲ ಅಂದ್ರೆ ಮುಷ್ಕರ ಫಿಕ್ಸ್ ಎಂದು ವಾರ್ನಿಂಗ್ ಕೂಡ ನೀಡಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Guru Sanchara Rashi Phala 2026: ಗುರು ಸಂಚಾರ ಮೇಷ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Aries Horoscope 2026: Jupiter Transit Predictions by Dr. Basavaraj Guruji

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಪ್ರಪ್ರಥಮವಾಗಿ ಮೇಷ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮೇಷರಾಶಿಯ ನಾಲ್ಕನೇ ಮನೆಯಲ್ಲಿ ಗುರುವು (ಸುಖಸ್ಥಾನ) ಸಂಚಾರ ಮಾಡಲಿದ್ದಾನೆ. ಈ ಸಂಚಾರವು ಇವರ ಜೀವನದಲ್ಲಿ ಹಲವು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ.

ಈ ಅವಧಿಯಲ್ಲಿ, ಮೇಷ ರಾಶಿಯವರಿಗೆ ಮನೆ ಕಟ್ಟುವ, ನಿವೇಶನ ಅಥವಾ ಭೂಮಿ ಖರೀದಿಸುವ ಯೋಗ ಬಲಗೊಳ್ಳಲಿದೆ. ವಾಹನ ಯೋಗವೂ ಚೆನ್ನಾಗಿದ್ದು, ಉದ್ಯೋಗದಲ್ಲಿ ಬಡ್ತಿ ಅಥವಾ ಬದಲಾವಣೆಗಳ ಸಾಧ್ಯತೆಗಳಿವೆ. ಆಂತರಿಕ ಶಾಂತಿ ಮತ್ತು ವ್ಯಾಪಾರದಲ್ಲಿ ವೃದ್ಧಿಯನ್ನು ಕಾಣಬಹುದು. ರಿಯಲ್ ಎಸ್ಟೇಟ್, ಸೇನಾ ಮತ್ತು ಪೊಲೀಸ್ ವೃತ್ತಿಯಲ್ಲಿರುವವರಿಗೆ ಮನಸ್ಸಿನ ತೃಪ್ತಿ ಸಿಗಲಿದೆ. ಪಿತೃಾರ್ಜಿತ ಆಸ್ತಿ ದೊರೆಯುವ ಹಾಗೂ ಐಷಾರಾಮಿ ಜೀವನ ನಡೆಸುವ ಅವಕಾಶಗಳು ಒದಗಿ ಬರಲಿವೆ ಎಂದು ಗುರೂಜಿ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ನಾಯಿ ಕಡಿತ ನಿರ್ಲಕ್ಷಿಸಲು ಸಾಧ್ಯವಿಲ್ಲ, ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಖಡಕ್ ಆದೇಶ – Kannada News | Supreme Court of India Calls for Action on Rising Stray Dog Concerns

ನವದೆಹಲಿ, ಮೇ 19: ದೇಶಾದ್ಯಂತ ಸಾರ್ವಜನಿಕ ಸ್ಥಳಗಳು ಮತ್ತು ರಸ್ತೆಗಳಿಂದ ಬೀದಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಹಾಗೂ ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಾನು ನವೆಂಬರ್ 2025 ರಲ್ಲಿ ನೀಡಿದ್ದ ಐತಿಹಾಸಿಕ ಆದೇಶವನ್ನು ಮಾರ್ಪಡಿಸಲು ಅಥವಾ ಹಿಂಪಡೆಯಲು ಕೋರಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯವು ಸಂಪೂರ್ಣವಾಗಿ ವಜಾಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಉಪಸ್ಥಿತಿಯು ಮತ್ತು ಅವುಗಳ ಜನಸಂಖ್ಯೆ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ಎಂದು ನ್ಯಾಯಾಲಯ ಬಣ್ಣಿಸಿದೆ.

ಪ್ರಾಣಿ ಹಕ್ಕುಗಳ ಕಾರ್ಯಕರ್ತರ ವಾದ ತಳ್ಳಿಹಾಕಿದ ಕೋರ್ಟ್
ಸಾರ್ವಜನಿಕ ಸ್ಥಳಗಳಿಂದ ಹಿಡಿದುಕೊಂಡು ಹೋಗುವ ಬೀದಿ ನಾಯಿಗಳಿಗೆ ಕ್ರಿಮಿನಾಶಕ (Sterilization) ಚಿಕಿತ್ಸೆ ನೀಡಿದ ನಂತರ, ಅವುಗಳನ್ನು ಮತ್ತೆ ಅದೇ ಹಳೆಯ ಸ್ಥಳಗಳಿಗೆ ಬಿಡಬಾರದು ಎಂದು ನ್ಯಾಯಾಲಯ ಈ ಹಿಂದೆ ಆದೇಶಿಸಿತ್ತು. ಆದರೆ, ನಾಯಿಗಳನ್ನು ಬೇರೆ ಸ್ಥಳಗಳಿಗೆ ಸ್ಥಳಾಂತರಿಸುವುದರಿಂದ ಅವುಗಳು ದಿಗ್ಭ್ರಮೆಗೊಳ್ಳಬಹುದು, ಗೊಂದಲಕ್ಕೊಳಗಾಗಬಹುದು ಮತ್ತು ಇದರಿಂದ ಜನರ ಮೇಲಿನ ದಾಳಿಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರು ನ್ಯಾಯಾಲಯದಲ್ಲಿ ವಾದಿಸಿದ್ದರು.

ಆದರೆ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರಿದ್ದ ತ್ರಿಸದಸ್ಯ ಪೀಠವು ಈ ವಾದವನ್ನು ಒಪ್ಪಲು ನಿರಾಕರಿಸಿತು.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

Source link

Video: ಆತುರದಿಂದ ಹಳಿ ದಾಟುವಾಗ ಬಂದೇ ಬಿಡ್ತು ರೈಲು, ಮಕ್ಕಳನ್ನು ಎದೆಗಪ್ಪಿ ಕುಳಿತ ಮಹಿಳೆ – Kannada News | Mother Shields Child on Railway Tracks as Train Passes Overhead

ಸಮಷ್ಟಿಪುರ, ಮೇ 19: ಬಿಹಾರದ ಸಮಷ್ಟಿಪುರದ ರೈಲ್ವೆ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಮ್ಮ ಮಕ್ಕಳೊಂದಿಗೆ ಆತುರದಿಂದ ಹಳಿ ದಾಟುವಾಗ ರೈಲು ಬಂದಿರುವ ವಿಡಿಯೋ ವೈರಲ್ ಆಗಿದೆ. ಶಹಪುರ್ ಪಟೋರಿ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ತಾಯಿಯೊಬ್ಬರು ತನ್ನ ಪ್ರಾಣವನ್ನು ಪಣಕ್ಕಿಟ್ಟು ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮಹಿಳೆಯ ಧೈರ್ಯ ಮತ್ತು ಸಹಾನುಭೂತಿಗೆ ಜನರಿಂದ ಪ್ರಶಂಸೆ ಗಳಿಸಿದೆ.

ವರದಿಗಳ ಪ್ರಕಾರ, ಮೂವರು ಮಹಿಳೆಯರು ಇಬ್ಬರು ಚಿಕ್ಕ ಮಕ್ಕಳೊಂದಿಗೆ ರೈಲ್ವೆ ಹಳಿಗಳನ್ನು ದಾಟುತ್ತಿದ್ದರು. ಅವರು ಆತುರದಿಂದ ಹಳಿಗಳನ್ನು ದಾಟಲು ಪ್ರಯತ್ನಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಅತಿ ವೇಗದ ರೈಲು ಬಂದಿತ್ತು. ರೈಲು ತುಂಬಾ ಹತ್ತಿರದಲ್ಲಿ ಬಂದದ್ದನ್ನು ನೋಡಿ, ಅವರೆಲ್ಲರೂ ಭಯಭೀತರಾಗಿದ್ದರು ಮತ್ತು ಏನು ಮಾಡಬೇಕೆಂದು ತಿಳಿಯಲಿಲ್ಲ. ಇಂತಹ ಕಷ್ಟದ ಸಮಯದಲ್ಲಿ, ಒಬ್ಬ ತಾಯಿಯ ನಿರ್ಧಾರ ಎಲ್ಲರನ್ನೂ ಅಚ್ಚರಿಗೊಳಿಸಿತು. ತಡಮಾಡದೆ, ಆ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಹಳಿಯಿಂದ ತಳ್ಳಿ ಪ್ಲಾಟ್​ಫಾರಂ ಕಡೆ ಮಲಗಿಸಿದ್ದಾರೆ. ಯಾವುದೇ ಗಾಯಗಳಾಗದಂತೆ ತಡೆಯಲು ಮಕ್ಕಳಿಗೆ ಅಡ್ಡಲಾಗಿ ತಾಯಿ ಇದ್ದರು. ಮಹಿಳೆ ಗಾಯಗೊಂಡಿದ್ದರೂ ಕೂಡ ಮಕ್ಕಳಿಗೆ ಏನೂ ಆಗದಂತೆ ನೋಡಿಕೊಂಡಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Source link

Gold Rate: ಚಿನ್ನದ ಬೆಲೆ ಅಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ – Kannada News | Gold Price Today on 19th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 19: ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಮಂಗಳವಾರ ಗ್ರಾಮ್​ಗೆ 75 ರೂನಷ್ಟು ಹೆಚ್ಚಿದೆ. ಕಳೆದ ಹತ್ತು ದಿನದಲ್ಲಿ ಇದರ ಬೆಲೆ ಸುಮಾರು 430 ರೂಗಳಷ್ಟು ಹೆಚ್ಚಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಬಂಗಾರದ ದರ ಏರಿಕೆ ಆಗಿದೆ. ನಿನ್ನೆ ಏರಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,778 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,395 ರೂ
  • ಚೆನ್ನೈ: 14,870 ರೂ
  • ಮುಂಬೈ: 14,395 ರೂ
  • ದೆಹಲಿ: 14,410 ರೂ
  • ಕೋಲ್ಕತಾ: 14,395 ರೂ
  • ಕೇರಳ: 14,395 ರೂ
  • ಅಹ್ಮದಾಬಾದ್: 14,400 ರೂ
  • ಜೈಪುರ್: 14,410 ರೂ
  • ಲಕ್ನೋ: 14,410 ರೂ
  • ಭುವನೇಶ್ವರ್: 14,395 ರೂ

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 559 ರಿಂಗಿಟ್ (13,557 ರುಪಾಯಿ)
  • ದುಬೈ: 510.25 ಡಿರಾಮ್ (13,389 ರುಪಾಯಿ)
  • ಅಮೆರಿಕ: 142 ಡಾಲರ್ (13,684 ರುಪಾಯಿ)
  • ಸಿಂಗಾಪುರ: 181.50 ಸಿಂಗಾಪುರ್ ಡಾಲರ್ (13,666 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (13,326 ರೂ)
  • ಸೌದಿ ಅರೇಬಿಯಾ: 519 ಸೌದಿ ರಿಯಾಲ್ (13,329 ರುಪಾಯಿ)
  • ಓಮನ್: 53.85 ಒಮಾನಿ ರಿಯಾಲ್ (13,480 ರುಪಾಯಿ)
  • ಕುವೇತ್: 41.73 ಕುವೇತಿ ದಿನಾರ್ (13,054 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 300 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 300 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

TV9 Kannada News Live: ಬೆಳಗಾವಿ ವಂಚನೆ ಪ್ರಕರಣದಲ್ಲಿ ನೂರಾರು ಕೋಟಿ ಹಣ ಪತ್ತೆ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Belagavi 4500 Crore Scam, Fuel Price Hike and Lahore’s Historic Name Change

ಬೆಂಗಳೂರು, ಮೇ 19: ಬೆಳಗಾವಿಯ 4,500 ಕೋಟಿ ರೂ. ಮಹಾವಂಚನೆ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ, ನೂರಾರು ಕೋಟಿ ರೂ. ಪತ್ತೆ ಮಾಡಿದೆ. ಇತ್ತ ವಾರದಲ್ಲೇ ಎರಡನೇ ಬಾರಿ ಇಂಧನ (Petrol) ದರ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇವೆಲ್ಲದರ ನಡುವೆ, ಪಾಕಿಸ್ತಾನದ ಲಾಹೋರ್‌ನಲ್ಲಿ ಐತಿಹಾಸಿಕ ಸ್ಥಳಗಳಿಗೆ ಹಳೆಯ ಹಿಂದೂ ಮತ್ತು ಸಿಖ್ ಹೆಸರುಗಳನ್ನು ಮರುಸ್ಥಾಪಿಸುವ ಮಹತ್ವದ ಬದಲಾವಣೆ ನಡೆದಿದೆ.

ಮುಖ್ಯಾಂಶಗಳು

ಬೆಳಗಾವಿ ವಂಚನೆ ಪ್ರಕರಣದಲ್ಲಿ ಆರೋಪಿಯ ಹದಿನೈದು ಬ್ಯಾಂಕ್ ಖಾತೆಗಳನ್ನು ಸಿಐಡಿ ಫ್ರೀಜ್ ಮಾಡಿದೆ.
ವಾರದಲ್ಲಿ ಎರಡನೇ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.
ಪಾಕಿಸ್ತಾನದ ಲಾಹೋರ್ ರಸ್ತೆಗಳಿಗೆ ಹಳೆಯ ಹಿಂದೂ ಹಾಗೂ ಸಿಖ್ ಹೆಸರು ಮರುಸ್ಥಾಪಿಸಲಾಗುತ್ತಿದೆ.

ಆರೋಪಿ ಶಿವಾನಂದ ನೀಲಣ್ಣವರ್‌ಗೆ ಸೇರಿದ 15 ಬ್ಯಾಂಕ್ ಖಾತೆಗಳು ಫ್ರೀಜ್!

ಜಿಲ್ಲೆಯಲ್ಲಿ ನಡೆದಿರುವ ಬರೋಬ್ಬರಿ 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿ (CID) ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಪ್ರಕರಣದ ಮುಖ್ಯ ಆರೋಪಿ ಶಿವಾನಂದ ನೀಲಣ್ಣವರ್‌ಗೆ ಸೇರಿದ 15 ಬ್ಯಾಂಕ್ ಖಾತೆಗಳನ್ನು ಅಧಿಕಾರಿಗಳು ಪತ್ತೆಹಚ್ಚಿ ಫ್ರೀಜ್ ಮಾಡಿದ್ದಾರೆ. ಆಘಾತಕಾರಿ ವಿಷಯವೆಂದರೆ, ಈ ಪ್ರತಿಯೊಂದು ಖಾತೆಯಲ್ಲೂ ತಲಾ 100 ಕೋಟಿ, 80 ಕೋಟಿ, 50 ಕೋಟಿ ಹಾಗೂ 20 ಕೋಟಿ ರೂ.ವರೆಗೂ ಹಣ ಪತ್ತೆಯಾಗಿದೆ. ಸಾವಿರಾರು ಕೋಟಿ ರೂಪಾಯಿ ವರ್ಗಾವಣೆಯಾಗುತ್ತಿದ್ದರೂ ಇಡಿ (ED) ಅಥವಾ ಐಟಿ (IT) ಇಲಾಖೆಯ ಗಮನಕ್ಕೆ ತರದೆ, ಬ್ಯಾಂಕ್ ಖಾತೆಗಳನ್ನು ಯಾರಿಗೂ ಕಾಣದಂತೆ ಮುಚ್ಚಿಟ್ಟಿದ್ದ ಅಧಿಕಾರಿಗಳ ನಡೆ ಸಂಶಯ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, 5 ಪ್ರಮುಖ ಬ್ಯಾಂಕುಗಳಿಗೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.

ಇದನ್ನೂ ಓದಿ 4,500 ಕೋಟಿ ರೂ. ವಂಚನೆ ಕೇಸ್​​: ಆರೋಪಿ ಶಿವಾನಂದ ನೀಲಣ್ಣವರ್​​ 10 ದಿನ ಸಿಐಡಿ ಕಸ್ಟಡಿಗೆ

ಒಂದೇ ವಾರದಲ್ಲಿ ಎರಡನೇ ಬಾರಿ ಇಂಧನ ದರ ಏರಿಕೆ!

ದೇಶಾದ್ಯಂತ ಗ್ರಾಹಕರಿಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿವೆ. ಕಳೆದ ಶುಕ್ರವಾರವಷ್ಟೇ (ಮೇ 15) ಇಂಧನ ದರ 3 ರೂ. ಏರಿಕೆಯಾಗಿದ್ದ ಬೆನ್ನಲ್ಲೇ, ಇಂದು ಮುಂಜಾನೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ ಸರಾಸರಿ 94 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ 4 ದಿನಗಳ ಹಿಂದೆ 106.17 ರೂ. ಇದ್ದ ಪೆಟ್ರೋಲ್ ಬೆಲೆ 107.16 ರೂ. ಗೆ ಹಾಗೂ 94.10 ರೂ. ಇದ್ದ ಡೀಸೆಲ್ ಬೆಲೆ 95.03 ರೂ. ಗೆ ತಲುಪಿದೆ. ಒಂದೇ ವಾರದಲ್ಲಿ ಎರಡು ಬಾರಿ ರೇಟ್ ಜಾಸ್ತಿ ಆಗಿರುವುದರಿಂದ ಸಾರ್ವಜನಿಕರ ಜೇಬಿಗೆ ಭಾರಿ ಕತ್ತರಿ ಬಿದ್ದಂತಾಗಿದೆ.

ಇದನ್ನೂ ಓದಿ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್

ಪಾಕಿಸ್ತಾನದಲ್ಲಿ ಲಾಹೋರ್ ರಸ್ತೆಗಳಿಗೆ ಹಳೇ ಹಿಂದೂ-ಸಿಖ್ ಹೆಸರು

ಭಾರತ ಮತ್ತು ಪಾಕಿಸ್ತಾನ ವಿಭಜನೆಯಾಗಿ 79 ವರ್ಷಗಳ ನಂತರ, ಪಾಕಿಸ್ತಾನ ಸರ್ಕಾರವು ಲಾಹೋರ್‌ನ ಇತಿಹಾಸವನ್ನು ಪುನಃ ಬರೆಯುವ ಮಹತ್ವದ ಕಾರ್ಯಕ್ಕೆ ಕೈಹಾಕಿದೆ. ದಶಕಗಳ ಹಿಂದೆ ಇಸ್ಲಾಮೀಕರಣದ ಭಾಗವಾಗಿ ಬದಲಾಗಿದ್ದ ರಸ್ತೆಗಳು ಮತ್ತು ಐತಿಹಾಸಿಕ ಸ್ಥಳಗಳಿಗೆ ಅವುಗಳ ಮೂಲ ಹಿಂದೂ, ಸಿಖ್ ಮತ್ತು ಬ್ರಿಟಿಷ್ ಯುಗದ ಹೆಸರುಗಳ ಸೈನ್ ಬೋರ್ಡ್‌ಗಳನ್ನು ಮರುಸ್ಥಾಪಿಸಲಾಗುತ್ತಿದೆ. ಕೇವಲ ಎರಡು ತಿಂಗಳಲ್ಲೇ 9 ಪ್ರಮುಖ ಸ್ಥಳಗಳು ತಮ್ಮ ಮೂಲ ಗುರುತನ್ನು ಪಡೆದಿವೆ. ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಪಂಜಾಬ್ ಸಿಎಂ ಮರ್ಯಮ್ ನವಾಜ್ ನೇತೃತ್ವದಲ್ಲಿ ‘ಲಾಹೋರ್ ಅಥಾರಿಟಿ ಫಾರ್ ಹೆರಿಟೇಜ್ ರಿವೈವಲ್’ ಸಂಸ್ಥೆಯು 50 ಬಿಲಿಯನ್ ಪಾಕಿಸ್ತಾನಿ ರೂಪಾಯಿ ವೆಚ್ಚದಲ್ಲಿ ಈ ನಗರ ಸಂರಕ್ಷಣಾ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಇದನ್ನೂ ಓದಿ ಇತಿಹಾಸಕ್ಕೆ ಮರುಜೀವ ನೀಡಿದ ಪಾಕ್: ವಿಭಜನೆ ಪೂರ್ವದ ಹಿಂದೂ-ಸಿಖ್ ಹೆಸರುಗಳು ಲಾಹೋರ್ ಬೀದಿಗಳಿಗೆ ವಾಪಸ್, ಇಸ್ಲಾಂಪುರ ಈಗ ಕೃಷ್ಣ ನಗರ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 10:47 am, Tue, 19 May 26

Source link

Garuda Purana: ಗರುಡ ಪುರಾಣವನ್ನು ಮನೆಯಲ್ಲಿ ಇಡಬಾರದು ಎಂಬುದು ನಿಜವೇ? ಇದರ ಹಿಂದಿನ ಅಸಲಿ ರಹಸ್ಯ ಇಲ್ಲಿದೆ! – Kannada News | Garuda Purana at Home: Myth vs. Truth. Is it Inauspicious? Find Out the Real Benefits

ಸನಾತನ ಧರ್ಮದಲ್ಲಿ 18 ಮಹಾಪುರಾಣಗಳಿಗೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಅವುಗಳಲ್ಲಿ ಭಗವಾನ್ ವಿಷ್ಣು ಮತ್ತು ಆತನ ವಾಹನವಾದ ಗರುಡನ ನಡುವಿನ ಸಂವಾದವೇ ‘ಗರುಡ ಪುರಾಣ‘. ಆದರೆ, ಇಂದಿಗೂ ಅನೇಕ ಮನೆಗಳಲ್ಲಿ ಗರುಡ ಪುರಾಣವನ್ನು ಇಡಲು ಅಥವಾ ಓದಲು ಜನರು ಹಿಂಜರಿಯುತ್ತಾರೆ. ಮನೆಯಲ್ಲಿ ಗರುಡ ಪುರಾಣವನ್ನು ಇಟ್ಟರೆ ಅಪಶಕುನವಾಗುತ್ತದೆ, ಸಾವು ಸಂಭವಿಸುತ್ತದೆ ಅಥವಾ ನಕಾರಾತ್ಮಕ ಶಕ್ತಿಗಳು ಆವರಿಸುತ್ತವೆ ಎಂಬ ಭೀತಿ ಅನೇಕರಲ್ಲಿದೆ.

ಆದರೆ ಧರ್ಮಶಾಸ್ತ್ರಗಳ ಪ್ರಕಾರ ಇದು ಸಂಪೂರ್ಣವಾಗಿ ಸುಳ್ಳು ಮತ್ತು ತಪ್ಪು ಕಲ್ಪನೆಯಾಗಿದೆ! ಹೌದು, ಗರುಡ ಪುರಾಣವನ್ನು ಮನೆಯಲ್ಲಿ ಖಂಡಿತವಾಗಿಯೂ ಇಡಬಹುದು. ಹಾಗಾದರೆ ಈ ತಪ್ಪು ಕಲ್ಪನೆ ಜನರಲ್ಲಿ ಮೂಡಿದ್ದು ಹೇಗೆ? ಇದನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಈ ತಪ್ಪು ಕಲ್ಪನೆ ಬರಲು ಕಾರಣವೇನು?

ಗರುಡ ಪುರಾಣದಲ್ಲಿ ಸಾವಿನ ನಂತರ ಆತ್ಮದ ಪ್ರಯಾಣ, ಪುನರ್ಜನ್ಮ, ಸ್ವರ್ಗ-ನರಕಗಳ ಕಲ್ಪನೆ ಮತ್ತು ಪಾಪ-ಪುಣ್ಯಗಳ ಬಗ್ಗೆ ಅತ್ಯಂತ ವಿವರವಾಗಿ ವಿವರಿಸಲಾಗಿದೆ.

ಅಂತಿಮ ಸಂಸ್ಕಾರದ ನಂಟು:

ಯಾರಾದರೂ ತೀರಿಕೊಂಡಾಗ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬ ಉದ್ದೇಶದಿಂದ 11 ರಿಂದ 13 ದಿನಗಳ ಶೋಕಾಚರಣೆಯ ಅವಧಿಯಲ್ಲಿ ಗರುಡ ಪುರಾಣದ ಒಂದು ನಿರ್ದಿಷ್ಟ ಭಾಗವನ್ನು (ಪ್ರೇತ ಕಲ್ಪ) ಪಠಿಸುವ ಸಂಪ್ರದಾಯವಿದೆ. ಇದೇ ಕಾರಣಕ್ಕಾಗಿ, ಜನರು ಈ ಪವಿತ್ರ ಗ್ರಂಥವನ್ನು ಕೇವಲ ಸಾವು, ದುಃಖ ಮತ್ತು ಸ್ಮಶಾನ ವೈರಾಗ್ಯಕ್ಕೆ ಮಾತ್ರ ಸೀಮಿತಗೊಳಿಸಿಬಿಟ್ಟರು. ಇದರ ಪುಸ್ತಕವನ್ನು ಮನೆಯಲ್ಲಿ ಇಟ್ಟರೆ ಸಾವು ಹತ್ತಿರವಾಗುತ್ತದೆ ಎಂದು ತಪ್ಪಾಗಿ ಭಾವಿಸಿದರು.

ಇದನ್ನೂ ಓದಿ: ನಿಮ್ಮ ಜನ್ಮ ದಿನಾಂಕದಲ್ಲೇ ಅಡಗಿದೆ ಮದುವೆಯ ರಹಸ್ಯ; ನಿಮಗಾಗುವುದು ಪ್ರೇಮ ವಿವಾಹವೋ ಅಥವಾ ಅರೇಂಜ್ ಮ್ಯಾರೇಜ್?

ಅಸಲಿ ಸತ್ಯ:

ಹಿಂದೂ ಧರ್ಮದಲ್ಲಿ ಯಾವುದೇ ಪವಿತ್ರ ಗ್ರಂಥವನ್ನು (ವೇದ, ಉಪನಿಷತ್ ಅಥವಾ ಪುರಾಣ) ಅಶುಭ ಅಥವಾ ಅಮಂಗಳ ಎಂದು ಪರಿಗಣಿಸಲಾಗಿಲ್ಲ. ಗರುಡ ಪುರಾಣವು ಕೇವಲ ಸಾವಿನ ಬಗ್ಗೆ ಮಾತ್ರ ಮಾತನಾಡುವುದಿಲ್ಲ, ಬದಲಿಗೆ ಅದು ನಾವು ಬದುಕಿರುವಾಗ ಹೇಗೆ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂಬುದನ್ನು ಕಲಿಸುವ ‘ಕರ್ಮ ಸಿದ್ಧಾಂತ’ದ ದಿಕ್ಸೂಚಿಯಾಗಿದೆ. ಈ ಗ್ರಂಥದಲ್ಲಿ ಸದಾಚಾರ, ನೀತಿ, ದಾನ ಧರ್ಮದ ಮಹತ್ವ, ಆರೋಗ್ಯ ಸೂತ್ರಗಳು ಮತ್ತು ಭಗವಾನ್ ವಿಷ್ಣುವಿನ ಭಕ್ತಿಯ ಬಗ್ಗೆ ಸುಂದರವಾಗಿ ವಿವರಿಸಲಾಗಿದೆ.

  • ಸಾವಿನ ಭಯ ನಿವಾರಣೆ: ಆತ್ಮದ ಅಮರತ್ವದ ಬಗ್ಗೆ ತಿಳಿಸಿಕೊಡುವ ಮೂಲಕ ಇದು ಮನುಷ್ಯನಲ್ಲಿರುವ ಸಾವಿನ ಭಯವನ್ನು ಹೋಗಲಾಡಿಸುತ್ತದೆ.
  • ಕರ್ಮ ಪ್ರಜ್ಞೆ: ನಮ್ಮ ಇಂದಿನ ಕರ್ಮಗಳೇ ನಮ್ಮ ನಾಳಿನ ಭವಿಷ್ಯವನ್ನು ನಿರ್ಧರಿಸುತ್ತವೆ ಎಂಬ ಪ್ರಜ್ಞೆಯನ್ನು ಮೂಡಿಸಿ, ತಪ್ಪು ಹಾದಿಗೆ ಹೋಗದಂತೆ ನಮ್ಮನ್ನು ತಡೆಯುತ್ತದೆ.

ಮನೆಯಲ್ಲಿ ಗರುಡ ಪುರಾಣ ಇಡುವಾಗ ಪಾಲಿಸಬೇಕಾದ ನಿಯಮಗಳು:

ಭಗವದ್ಗೀತೆ ಅಥವಾ ರಾಮಾಯಣವನ್ನು ನಾವು ಎಷ್ಟು ಭಕ್ತಿ-ಗೌರವಗಳಿಂದ ಮನೆಯಲ್ಲಿ ಇಡುತ್ತೇವೆಯೋ, ಗರುಡ ಪುರಾಣವನ್ನೂ ಅಷ್ಟೇ ಪವಿತ್ರವಾಗಿ ಇಡಬೇಕು:

  • ಶುದ್ಧವಾದ ಸ್ಥಳದಲ್ಲಿಡಿ: ಇದನ್ನು ನಿಮ್ಮ ದೇವರ ಕೋಣೆಯಲ್ಲಿ (ಪೂಜಾ ಗೃಹ) ಅಥವಾ ಸ್ವಚ್ಛವಾದ ಪುಸ್ತಕದ ಕಪಾಟಿನಲ್ಲಿ ಗೌರವಪೂರ್ವಕವಾಗಿ ಇಡಿ. ಬೆಡ್‌ರೂಮ್‌ಗಳಲ್ಲಾಗಲಿ ಅಥವಾ ಅಶುದ್ಧ ಜಾಗಗಳಲ್ಲಾಗಲಿ ಇಡಬೇಡಿ.
  • ಸ್ವಚ್ಛತೆ ಮುಖ್ಯ: ಪುಸ್ತಕವನ್ನು ಮುಟ್ಟುವ ಮುನ್ನ ಕೈ-ಕಾಲುಗಳನ್ನು ತೊಳೆದು ಶುದ್ಧವಾಗಿರಿ.
  • ಓದುವ ಸರಿಯಾದ ಸಮಯ: ಗರುಡ ಪುರಾಣದ ಜ್ಞಾನವನ್ನು ಪಡೆಯಲು ಬಯಸುವವರು, ಅದನ್ನು ತಡರಾತ್ರಿಯಲ್ಲಿ ಓದುವ ಬದಲು ಹಗಲಿನ ವೇಳೆಯಲ್ಲಿ ಪ್ರಶಾಂತ ಮನಸ್ಸಿನಿಂದ ಓದುವುದು ಸೂಕ್ತ ಎಂದು ವಿದ್ವಾಂಸರು ಹೇಳುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version