Headlines

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿದ ಶಿವಣ್ಣ ಫ್ಯಾನ್ಸ್ – Kannada News | Fans celebrate Geetha Shivarajkumar birthday in Chennai amid shooting

ಗೀತಾ ಶಿವರಾಜ್​ಕುಮಾರ್ (Geetha Shiva Rajkumar) ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಅವರ ಜನ್ಮದಿನವನ್ನು ಅಭಿಮಾನಿಗಳು ಸಡಗರದಿಂದ ಆಚರಿಸಿದ್ದಾರೆ. ಕೇಕ್ ಕಟ್ ಮಾಡಿ ಸಂಭ್ರಮಿಸಲಾಗಿದೆ. ಶಿವರಾಜ್​ಕುಮಾರ್ ಅವರು ಈಗ ಶೂಟಿಂಗ್ ಸಲುವಾಗಿ ಚೆನ್ನೈನಲ್ಲಿ ಇದ್ದಾರೆ. ಅವರ ಜೊತೆ ಗೀತಾ ಕೂಡ ಇದ್ದಾರೆ. ಹಾಗಾಗಿ ಅಭಿಮಾನಿಗಳು ಕರ್ನಾಟಕದಿಂದ ಚೆನ್ನೈಗೆ ಹೋಗಿ ಅಲ್ಲಿಯೇ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಶಿವರಾಜ್​ಕುಮಾರ್ ಅವರ ವೃತ್ತಿಜೀವನಕ್ಕೆ ಗೀತಕ್ಕ ಸದಾ ಬೆಂಬಲವಾಗಿ ನಿಂತಿದ್ದಾರೆ. ಅನಾರೋಗ್ಯದ ಕಷ್ಟದ ದಿನಗಳಲ್ಲಿ ಕೂಡ ಕಾಳಜಿ ಮಾಡಿದ್ದಾರೆ….

Read More

ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?

ಬೆಂಗಳೂರು, ಜುಲೈ 16: ‘‘ರಾಜ್ಯದಲ್ಲಿ ಅಕ್ರಮ ಬಿಪಿಎಲ್​ ಕಾರ್ಡ್​ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ’’ ಎಂದು ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಸ್ಮಾರ್ಟ್ ಪಿಡಿಎಸ್ ಸುಧಾರಣೆಗಳ ಭಾಗವಾಗಿ, ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಪಾಸ್ ಯಂತ್ರಗಳು ಮತ್ತು ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಇದು ಗ್ರಾಹಕರಿಗೆ ತೂಕದಲ್ಲಿ ಆಗುತ್ತಿದ್ದ ಸಮಸ್ಯೆಗಳನ್ನು ನಿವಾರಿಸಲಿದೆ. ಜೊತೆಗೆ, ವಿತರಣಾ ವಾಹನಗಳಿಗೆ ಜಿಪಿಎಸ್ ಅಳವಡಿಸಿ, ಅವುಗಳ ಚಲನವಲನವನ್ನು ಪತ್ತೆಹಚ್ಚಲು ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗುತ್ತಿದೆ. ಇದು…

Read More

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಆರ್​ಎಸ್​ಎಸ್​ ಕರೆ – Kannada News | RSS First Reaction on Ram Temple donation theft case Dattatreya Hosabale urges Hindus to exercise restraint

ನವದೆಹಲಿ, ಜುಲೈ 3: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಡೆದಿದೆ ಎನ್ನಲಾದ ಕಾಣಿಕೆ ಹಣದ ದುರುಪಯೋಗದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಕರೆ ನೀಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಹೇಳಿದೆ. ರಾಮ ಮಂದಿರ ನಿರ್ಮಾಣಕ್ಕೆ ಭಕ್ತರು ನೀಡಿದ ಚಿನ್ನಾಭರಣ, ಹಣವನ್ನು ಲೂಟಿ ಮಾಡಿರುವುದರ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರ್​ಎಸ್​ಎಸ್​…

Read More

ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಕೋಮಲ್‌ ಕುಮಾರ್‌ (Komal Kumar), ಮೇಘನಾ ರಾಜ್‌, ಅನುಷಾ ರೈ ಅವರು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಸಿನಿಮಾಗೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ವಿಕಾಸ್‌ ಶೆಟ್ಟಿ ಅವರು ಬಂಡವಾಳ ಹೂಡಿದ್ದಾರೆ. 2 ಹಂತಗಳಲ್ಲಿ 75 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಚಿತ್ರೀಕರಣ ಮುಗಿಸಿಕೊಂಡಿರುವ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ (Sangeetha Bar and Restaurant) ಚಿತ್ರತಂಡ…

Read More

ಇಸ್ಲಾಮಾಬಾದ್‌ನಲ್ಲಿ ನಡೆದ ಬಾಂಬ್ ದಾಳಿಯ ವಿಡಿಯೋ ಇಲ್ಲಿದೆ – Kannada News | Intensity of the suicide bomb Blast in Islamabad Pakistan Watch Video

ಇಸ್ಲಾಮಾಬಾದ್, ಫೆಬ್ರವರಿ 6: ಪಾಕಿಸ್ತಾನದ (Pakistan Bomb Blast) ರಾಜಧಾನಿ ಇಸ್ಲಮಾಬಾದ್​​ನಲ್ಲಿರುವ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಆತ್ಮಾಹುತಿ ಬಾಂಬ್ ದಾಳಿಯ ತೀವ್ರತೆ ಎಷ್ಟರಮಟ್ಟಿಗೆ ಇತ್ತು ಎಂಬ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ  Source link

Read More

ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಬೆಂಗಳೂರು, ಮಾ.25: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ಬೆಂಗಳೂರಿನ ರಸ್ತೆಗಳ ಮೇಲೂ ಬಿದ್ದಿದೆ. ಯುದ್ಧದ ಹಿನ್ನೆಲೆಯಲ್ಲಿ ಬಿಟುಮೆನ್ (Bitumen) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಡಾಂಬರು ಮಿಶ್ರಣಕ್ಕೆ ಅತ್ಯಗತ್ಯವಾಗಿರುವ ‘ಬಿಟುಮೆನ್’ ಕಚ್ಚಾ ತೈಲದ ಉಪ ಉತ್ಪನ್ನವಾಗಿದೆ. ಭಾರತಕ್ಕೆ ಇದರ ಬಹುಪಾಲು ಪೂರೈಕೆ ಕೊಲ್ಲಿ ರಾಷ್ಟ್ರಗಳಿಂದ ಆಗುತ್ತದೆ. ಯುದ್ಧದಿಂದಾಗಿ ಹಡಗುಗಳ ಸಂಚಾರ ಮತ್ತು ಪೂರೈಕೆಗೆ ಪೆಟ್ಟು…

Read More

ನಿಮ್ಮಂತ ಕೋಚ್ ನಮಗೆ ಬೇಡ: ಗಂಭೀರ್​ನ ಅಣಕಿಸಿದ ​ಐಸ್‌ಲ್ಯಾಂಡ್ ಕ್ರಿಕೆಟ್ – Kannada News | Iceland Cricket Trolls Team India Coach Gautam Gambhir

ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಆಘಾತಕಾರಿ ಸೋಲನುಭವಿಸಿದೆ. ಮೊದಲ ಮ್ಯಾಚ್​ನಲ್ಲಿ 34 ರನ್​ಗಳಿಂದ ಸೋತಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ 1 ರನ್​ನಿಂದ ಸೋಲೊಪ್ಪಿಕೊಂಡಿದೆ. ಈ ಎರಡು ಸೋಲುಗಳೊಂದಿಗೆ ಭಾರತ ತಂಡವು ಇದೇ ಮೊದಲ ಬಾರಿಗೆ ಐರ್ಲೆಂಡ್ ವಿರುದ್ಧ ಸರಣಿ ಸೋತಂತಾಗಿದೆ. ಈ ಸೋಲಿನ ಬೆನ್ನಲ್ಲೇ ಐಸ್‌ಲ್ಯಾಂಡ್ ಕ್ರಿಕೆಟ್ ವ್ಯಂಗ್ಯಭರಿತ ಪೋಸ್ಟ್​ವೊಂದು ಹಂಚಿಕೊಂಡು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಕಾಲೆಳೆದಿದ್ದಾರೆ. ಐಸ್‌ಲ್ಯಾಂಡ್ ಕ್ರಿಕೆಟ್ ಪೋಸ್ಟ್: ಕ್ರಿಕೆಟ್ ಅಂಗಳದಲ್ಲಿ ನಡೆಯುವ ಕೆಲ ಸನ್ನಿವೇಶಗಳಿಗೆ ತಮ್ಮ…

Read More

ಶಿವಣ್ಣ ಫ್ಯಾನ್ಸ್ ಕ್ರೇಜ್ ಯಾವತ್ತೂ ಕಡಿಮೆ ಆಗಲ್ಲ: ಸಾಕ್ಷಿ ತೋರಿಸಿದ ಕೆ.ಪಿ. ಶ್ರೀಕಾಂತ್ – Kannada News | KP Srikanth talks about Shivarajkumar fans craze during 45 Kannada Movie release

‘ಹ್ಯಾಟ್ರಿಕ್ ಹೀರೋ’ ಶಿವರಾಜ್​​ಕುಮಾರ್ ನಟನೆಯ ‘45’ ಸಿನಿಮಾ (45 Kannada Movie) ಡಿಸೆಂಬರ್ 25ಕ್ಕೆ ಎಲ್ಲೆಡೆ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಮತ್​ತು ಉಪೇಂದ್ರ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಡಿಸೆಂಬರ್ 24ರಂದು ಈ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಬೆಂಗಳೂರಿನ ‘ಪ್ರಸನ್ನ’ ಚಿತ್ರಮಂದಿರದಲ್ಲಿ 2 ಪ್ರೀಮಿಯರ್ ಶೋ ಹೌಸ್​ಫುಲ್ ಆಗಿದೆ. ಶಿವರಾಜ್​​ಕುಮಾರ್ (Shivarajkumar) ಅವರ ಆಪ್ತರಾದ ಕೆ.ಪಿ. ಶ್ರೀಕಾಂತ್ ಕೂಡ ಸಿನಿಮಾ ನೋಡಲು ಬಂದಿದ್ದಾರೆ. ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ…

Read More

Viral: ನನಗೆ ಯಾರು ಶತ್ರುಗಳಿಲ್ಲ, ಇರೋದೆಲ್ಲ ಶಕುನಿಗಳೆ; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲುಗಳು – Kannada News | The line written on the back of the auto, reddit post goes viral

ನೀವು ಆಟೋ, ಬೈಕ್ ಅಥವಾ ಕಾರಿನ ಹಿಂಭಾಗದಲ್ಲಿ ಕೆಲ ತಮಾಷೆಭರಿತ ಅಥವಾ ಅರ್ಥಪೂರ್ಣ ಸಾಲುಗಳನ್ನು ನೋಡಿರಬಹುದು. ಕೆಲವರು ತಮ್ಮ ವಾಹನದ ಹಿಂಭಾಗದಲ್ಲಿ ತಂದೆ ತಾಯಿಯ ಆಶೀರ್ವಾದ, ಕೈಕೊಟ್ಟ ಪ್ರೇಮಿಯ ಹೆಸರು ಹೀಗೆ ಕೆಲ ಸಾಲುಗಳನ್ನು ಬರೆದಿರುತ್ತಾರೆ. ಆದರೆ ಇಲ್ಲೊಬ್ಬ ಆಟೋ ಚಾಲಕ (Auto driver) ತನ್ನ ಆಟೋದ ಹಿಂಬದಿಯಲ್ಲಿ ಬರೆದ ಸಾಲುಗಳಲ್ಲಿ ಶಕುನಿಗಳನ್ನು ನೆನಪಿಸಿಕೊಂಡಿದ್ದಾನೆ. ನನಗೆ ಯಾರು ಶತ್ರುಗಳು ಇಲ್ಲ, ಇರೋದೆಲ್ಲ ಶಕುನಿಗಳೆ ಎಂದು ಬರೆದ ಸಾಲೊಂದು ನೆಟ್ಟಿಗರ ಗಮನ ಸೆಳೆಯುತ್ತಿದೆ. ಆರ್‌/ ಬೆಂಗಳೂರು (r/Bengaluru) ಹೆಸರಿನ…

Read More

ಕರ್ನಾಟಕದಲ್ಲಿ ಹೇಗಿದೆ ‘ಧುರಂಧರ್ 2’ ಹವಾ? ಗಳಿಕೆ ಎಷ್ಟು?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಇಂದು (ಮಾರ್ಚ್ 19) ಬಿಡುಗಡೆ ಆಗಿದೆ. ‘ಧುರಂಧರ್ 2’ ಸಿನಿಮಾ ಭಾರತದಾದ್ಯಂತ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ. ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್​​ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಹಾಗಿದ್ದರೂ ಸಹ ಬಹುತೇಕ ಶೋಗಳು ಹೌಸ್​​ಫುಲ್ ಆಗಿದ್ದು, ಬೆಂಗಳೂರಿನಲ್ಲಿ ಭರ್ಜರಿ ಕಲೆಕ್ಷನ್ ಅನ್ನೇ ಸಿನಿಮಾ…

Read More