Headlines

ಸಿದ್ದರಾಮಯ್ಯ ಸಂಧಾನ ಯಶಸ್ವಿ: ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಫೈನಲ್

ಬೆಂಗಳೂರು/ಬಾಗಲಕೋಟೆ, (ಮಾರ್ಚ್ 18): ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (Bagalkot By Election) ಘೋಷಣೆಯಾಗು ತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷಕ್ಕೆ ‘ಕುಟುಂಬ ರಾಜಕಾರಣ’ದ ಬಿಸಿ ತಟ್ಟಿದ್ದು, ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಹೌದು…ಮಾಜಿ ಶಾಸಕ ಎಚ್.ವೈ. ಮೇಟಿ ಅವರ ಕುಟುಂಬದಲ್ಲಿ (HY Meti Family) ಟಿಕೆಟ್‌ಗಾಗಿ ಭಿನ್ನಮತ ಸ್ಪೋಟಗೊಂಡಿತ್ತು. ಇದರ ಬೆನ್ನಲ್ಲೇ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರನ್ನು ಬೆಂಗಳೂರಿಗೆ…

Read More

2035ಕ್ಕೆ 300 ಬಿಲಿಯನ್ ಡಾಲರ್ ದಾಟಲಿದೆ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಾತ್ರ

ನವದೆಹಲಿ, ಮಾರ್ಚ್ 18: ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ (Semiconductor Market) ಮುಂದಿನ ನಾಲ್ಕು ವರ್ಷದಲ್ಲಿ ಮೂರು ಪಟ್ಟು ಬೆಳೆಯುವ ನಿರೀಕ್ಷೆ ಇದೆ. 2030ರೊಳಗೆ ಈ ಚಿಪ್ ಉದ್ಯಮ 120 ಬಿಲಿಯನ್ ಡಾಲರ್​ನಷ್ಟಾಗಬಹುದು. 2035ರೊಳಗೆ ಇದು ಬರೋಬ್ಬರಿ 300 ಬಿಲಿಯನ್ ಡಾಲರ್ ಮಾರುಕಟ್ಟೆಯಾಗಲಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಆಟೊಮೋಟಿವ್ ಗ್ರೋತ್, ಡಾಟಾ ಸೆಂಟರ್ ವಿಸ್ತರಣೆ ಇತ್ಯಾದಿ ಬಳಕೆ ಹೆಚ್ಚುವುದರಿಂದ ಭಾರತದ ಸೆಮಿಕಂಡಕ್ಟರ್ ಮಾರುಕಟ್ಟೆ ಗಣನೀಯವಾಗಿ ಹಿಗ್ಗಬಹುದು ಎಂದು ಡುಲಾಯ್ಟ್ (Deloitte) ವರದಿಯಲ್ಲಿ ಅಭಿಪ್ರಾಯಪಡಲಾಗಿದೆ. ಭಾರತದಲ್ಲಿ ಸದ್ಯಕ್ಕೆ ಅದಕ್ಕೆ ಇರುವ ಸೆಮಿಕಂಡಕ್ಟರ್…

Read More

ಎಂಥಾ ಕಾಲ ಬಂತಪ್ಪ: LPG ಸಿಲಿಂಡರ್​​ಗಳ ವಿತರಣೆ ವೇಳೆ ಪೊಲೀಸ್​​ ಭದ್ರತೆ!

ಬೆಂಗಳೂರು, ಮಾರ್ಚ್​​ 18: ಎಲ್​​ಪಿಜಿ ಸಿಲಿಂಡರ್‌ಗಳ ಬಿಕ್ಕಟ್ಟುಬೆಂಗಳೂರಿನಲ್ಲಿ ತೀವ್ರಗೊಂಡಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಕೊರತೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಆತಂಕ ಇದೀಗ ಗೃಹಬಳಕೆಯ ಸಿಲಿಂಡರ್‌ಗಳ ಬಳಕೆದಾರರಿಗೂ ಹಬ್ಬಿದೆ. ಸಿಲಿಂಡರ್‌ಗಳು ಸಿಗುವುದಿಲ್ಲ ಎಂಬ ಭಯದಲ್ಲಿ ಜನಸಾಮಾನ್ಯರು, ಅದರಲ್ಲೂ ವಿಶೇಷವಾಗಿ ಗೃಹಬಳಕೆ ಗ್ರಾಹಕರು, ಏಜೆನ್ಸಿಗಳ ಬಳಿ ಮುಗಿಬೀಳುತ್ತಿದ್ದಾರೆ. ಶಿವಾಜಿನಗರ ಬಸ್ ನಿಲ್ದಾಣದ ಸಮೀಪ ದೊಡ್ಡ ಸಂಖ್ಯೆಯ ಗ್ರಾಹಕರು ಸಿಲಿಂಡರ್‌ಗಳನ್ನು ಪಡೆಯಲು ಸರತಿ ಸಾಲಿನಲ್ಲಿ ನಿಂತ ದೃಶ್ಯಗಳು ಕಂಡುಬಂದಿವೆ. ಸಾಮಾನ್ಯವಾಗಿ ಏಜೆನ್ಸಿಗಳು ಮನೆಗಳಿಗೆ ಸಿಲಿಂಡರ್‌ಗಳನ್ನು ಪೂರೈಸುತ್ತಿದ್ದವು….

Read More

ಉಡುಪಿಯಲ್ಲಿ ಮತಾಂತರ ಪ್ರಚೋದಿತ ಕಾರ್ಯಕ್ರಮ: ಹಿಂದೂ ಜಾಗರಣ ವೇದಿಕೆ ಗಂಭೀರ ಆರೋಪ

ಉಡುಪಿ, ಮಾರ್ಚ್​​ 18: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್ (Mohan C. Lazarus)​ ನೇತೃತ್ವದಲ್ಲಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ಮಾರ್ಚ್ 20, 21, 22 ರಂದು ಸಮಾಧಾನ ಮಹೋತ್ಸವ ಆಯೋಜಿಸಲಾಗಿದೆ. ಸದ್ಯ ಈ ಕಾರ್ಯಕ್ರಮದ ವಿರುದ್ಧ ಮತಾಂತರ ಆರೋಪ ಕೇಳಿಬಂದಿದ್ದು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತಕ್ಷಣ ಜಿಲ್ಲಾಡಳಿತ ತಡೆ ನೀಡಬೇಕೆಂದು ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಒತ್ತಾಯಿಸಿದ್ದಾರೆ. ಮಾರ್ಚ್​​ 20,21 ಮತ್ತು 22ರಂದು ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಜರಸ್​…

Read More

‘ನಮ್ಮ ಇತಿಹಾಸ ಇಡೀ ಜಗತ್ತಿಗೆ ಗೊತ್ತು’; ಭಾರತದಲ್ಲಿ ನಿಂತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಎಂಐ ಆಟಗಾರ

2026 ರ ಐಪಿಎಲ್ (IPL 2026) ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹಾಗಾಗಿ ಎಲ್ಲಾ ಫ್ರಾಂಚೈಸಿಗಳು ತಮ್ಮ ಸಿದ್ಧತೆಗಳನ್ನು ಅಂತಿಮಗೊಳಿಸುತ್ತಿವೆ. ಇತ್ತ ದೇಶೀಯ ಹಾಗೂ ವಿದೇಶಿಯ ಆಟಗಾರರು ಕೂಡ ಭಾರತಕ್ಕೆ ಬಂದಿಳಿದು ತಮ್ಮ ತಮ್ಮ ತಂಡಗಳನ್ನು ಸೇರಿಕೊಳ್ಳುತ್ತಿದ್ದಾರೆ. ಅದರಂತೆ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಂಬೈ ಇಂಡಿಯನ್ಸ್ ಪರ ಆಡಲಿರುವ ಅಲ್ಲಾಹ್ ಗಜನ್‌ಫರ್, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಪಾಕಿಸ್ತಾನ ವಾಯುಪಡೆಯು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿನ ಆಸ್ಪತ್ರೆಯ ಮೇಲೆ ರಾಕೆಟ್ ದಾಳಿ ನಡೆಸಿ 400…

Read More

ಮಾಜಿ ಆಪ್ತರಿಂದಲೇ ಪ್ರಜ್ವಲ್​​ ರೇವಣ್ಣಗೆ ಖೆಡ್ಡಾ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​

ಹಾಸನ, ಮಾರ್ಚ್​​ 18: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಇರುವ ಪೆನ್​​ಡ್ರೈವ್​​ ಹಂಚಿಕೆ ಪ್ರಕರಣ ಸಂಬಂಧ 2024ರ ಲೋಕಸಭಾ ಚುನಾವಣೆಯ ವೇಳೆ ಜೆಡಿಎಸ್ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ್ದ ಎಸ್​​ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಹಾಸನದ ಸಿವಿಲ್​​ ಕೋರ್ಟ್​​ಗೆ ಸಲ್ಲಿಸಲಾಗಿರುವ ಒಟ್ಟು 13,712 ಪುಟಗಳ ಚಾರ್ಜ್​​ಶೀಟ್​​ನಲ್ಲಿ ಕೆಲವು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿವೆ. ಮಾಜಿ ಆಪ್ತರೇ ತೋಡಿದ್ದ ಖೆಡ್ಡಾಗೆ ಪ್ರಜ್ವಲ್​​ ರೇವಣ್ಣ ಬಿದ್ದಿದ್ದಾರೆ….

Read More

ಪ್ರೇಮ್​​ಗೆ ಆ ದಿನವೇ ಎಚ್ಚರಿಕೆ ನೀಡಿದ್ದೆ: ಅಶ್ಲೀಲ ಹಾಡಿನ ವಿವಾದಕ್ಕೆ ನೋರಾ ಫತೇಹಿ ತಿರುಗೇಟು

ಭಾರಿ ವಿವಾದಕ್ಕೆ ಕಾರಣ ಆಗಿರುವ ‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ಬಗ್ಗೆ ನಟಿ ನೋರಾ ಫತೇಹಿ ಅವರು ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಿಂದಿ ವರ್ಷನ್ (Sarke Chunar Teri Sarke) ಹಾಡನ್ನು ಕೂಡಲೇ ಡಿಲೀಟ್ ಮಾಡಲಾಯಿತು. ಇಷ್ಟೆಲ್ಲ ವಿವಾದ ಆಗಿದ್ದಕ್ಕೆ ನಟಿ ನೋರಾ ಫತೇಹಿ (Nora Fatehi) ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹಾಡಿನಲ್ಲಿ ಇಷ್ಟು ಕೆಟ್ಟ ಸಾಹಿತ್ಯ…

Read More

ಇರಾನ್​ಗೆ ಮೆಡಿಕಲ್ ಕಿಟ್ ಕಳುಹಿಸಿ ಮಾನವೀಯತೆ ತೋರಿದ ಭಾರತ

ನವದೆಹಲಿ, ಮಾರ್ಚ್ 18: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ದಾಳಿ ಇನ್ನೂ ನಿಂತಿಲ್ಲ. ಅತ್ತ ಇರಾನ್ ಕೂಡ ದಾಳಿ ನಡೆಸುವುದನ್ನು ನಿಲ್ಲಿಸಿಲ್ಲ. ಈ ಯುದ್ಧದಲ್ಲಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳಿಗೆ ಹಾನಿಯಾಗಿದ್ದು ಬಿಟ್ಟರೆ ಅಮೆರಿಕ ದೇಶದ ಮೇಲೆ ಯಾವುದೇ ದಾಳಿ ನಡೆದಿಲ್ಲ. ಆದರೆ, ಇಸ್ರೇಲ್ ಮತ್ತು ಇರಾನ್ ಅಕ್ಷರಶಃ ಸ್ಮಶಾನದಂತಾಗಿದೆ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಇರಾನ್ ವಿರುದ್ಧ ಬೇರೆ ದೇಶಗಳು ಯುದ್ಧನೌಕೆಗಳನ್ನು ಕಳುಹಿಸಿ ಎಚ್ಚರಿಕೆ ನೀಡಬೇಕೆಂದು ಅಮೆರಿಕ ಅಧ್ಯಕ್ಷ ಟ್ರಂಪ್ (Donald Trump) ಘೋಷಿಸಿದ್ದರು. ಇರಾನ್…

Read More

ಸಿನಿಮಾ ಬಿಡುಗಡೆಗೆ ಕೆಲವೇ ಗಂಟೆಗಳಿರುವಾಗ ‘ಧುರಂಧರ್’​ ನಿರ್ದೇಶಕ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾದ ಮೊದಲ ಸಾರ್ವಜನಿಕ ಪ್ರದರ್ಶನಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ. ರಣವೀರ್ ಸಿಂಗ್ ಅಭಿನಯದ ಈ ಬಹುನಿರೀಕ್ಷಿತ ಚಿತ್ರ ನಾಳೆ (ಮಾರ್ಚ್ 19) ಬಿಡುಗಡೆಯಾಗುತ್ತಿದೆ. ಆದರೆ ಈ ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋಗಳು ಇಂದೇ ಪ್ರದರ್ಶನಗೊಳ್ಳಲಿದ್ದು, ಪ್ರೀಮಿಯರ ಶೋನ ಲಕ್ಷಾಂತರ ಟಿಕೆಟ್​​ಗಳು ಮುಂಗಡವಾಗಿ ಮಾರಾಟವಾಗಿವೆ. ಬೆಂಗಳೂರು ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಂಜೆ ಐದು ಗಂಟೆಯಿಂದ ‘ಧುರಂಧರ್ 2’ ಸಿನಿಮಾದ ಶೋಗಳ ಪ್ರದರ್ಶನ ಆರಂಭವಾಗಲಿದೆ. ಸಿನಿಮಾದ ಮೊದಲ ಶೋ ಪ್ರಾರಂಭಕ್ಕೆ ಕೆಲವೇ…

Read More

2 ವರ್ಷದಿಂದ ಮದುವೆಗೆ ದುಂಬಾಲು: ಯುವಕ ಕೊನೆಗೆ ಪೇಯಸಿಗೆ ಮಾಡಿದ್ದೇನು ಗೊತ್ತಾ?

ಬೆಳಗಾವಿ, ಮಾರ್ಚ್​ 18: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವಕನೋರ್ವ ಯುವತಿಯ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದಿದ್ದು (Assault), ಅಷ್ಟೇ ಅಲ್ಲದೆ ಆಕೆಯ ತಂದೆ, ತಾಯಿ ಮೇಲೂ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ  ಜೋಡಕುರಳಿಯಲ್ಲಿ ನಡೆದಿದೆ. ವಿದ್ಯಾಶ್ರೀ ಕಿಲಾರಿ ಮೇಲೆ ಬೀರಪ್ಪ ರಾಮಪ್ಪ ಕಜ್ಜನ್ನವರ ಎಂಬಾತನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಎರಡು ವರ್ಷಗಳಿಂದ ವಿದ್ಯಾಶ್ರೀ ಮದುವೆ ಮಾಡಿಕೊಡುವಂತೆ ಬೀರಪ್ಪ ರಾಮಪ್ಪ ಕಜ್ಜನ್ನವರ ದುಂಬಾಲು ಬಿದ್ದಿದ್ದ. ಆದರೆ ಬೀರಪ್ಪನಿಗೆ…

Read More