Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು – Kannada News | Ghaziabad Bike Accident: Iqra Dies, Hashim Critically Injured in Viral Speed Crash Video

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಇಕ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಹಾಶಿಮ್ ಪ್ರಸ್ತುತ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ – Kannada News | Vijayapura: Father Kills 6 Year Old Son: Pushed into Krishna River over Resemblance

ವಿಜಯಪುರ, ಏಪ್ರಿಲ್​ 14: ವಿಜಯಪುರದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆ ನಡೆದಿದೆ. ನೋಡಲು ತನ್ನಂತೆ ಇಲ್ಲ ಎಂದು 6 ವರ್ಷದ ತನ್ನ ಮಗನನ್ನೇ ತಂದೆ (Father) ಕೊಲೆ (Kill) ಮಾಡಿರುವಂತಹ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಯ ಕೃಷ್ಣಾ ನದಿ ಬಳಿ ಮಗ ಸಿದ್ದಾರ್ಥನನ್ನ ಕರೆದುಕೊಂಡು ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ನದಿಗೆ ತಳ್ಳಿ ಹತ್ಯೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಮತ್ತು ಭಾಗ್ಯಶ್ರೀ ದಂಪತಿ ವಾಸವಾಗಿದ್ದಾರೆ. ಇವರ ಮಗ ಸಿದ್ದಾರ್ಥ. ಮಗನ ಹೋಲಿಕೆ ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಛೇಡಿಸಿದ್ದರು. ಇದರಿಂದಾಗಿ ರೋಸಿಹೋದ ಮಲ್ಲಿಕಾರ್ಜುನ ಇಂತಹದೊಂದು ಕೆಟ್ಟ ನಿರ್ಧಾರಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಯುವತಿಯೊಂದಿಗಿನ ಫೋಟೋ ಕಳುಹಿಸಿದ ಪ್ರೇಮಿ; ಮುಂದಾಗಿದ್ದು ದುರಂತ

ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಮಲ್ಲಿಕಾರ್ಜುನ ಕರೆದೊಯ್ದಿದ್ದಾರೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಗೆ ಕರೆದುಕೊಂಡು ಬಂದಿದ್ದ ತಂದೆ, ಕೃಷ್ಣಾ ನದಿಗೆ ತಳ್ಳಿ ಸಿದ್ದಾರ್ಥನನ್ನು ಹತ್ಯೆಗೈದ್ದಾರೆ. ಬಳಿಕ ಮನೆಯಲ್ಲಿ ಶಾಲೆಗೆ ಸೇರಿಸಿ ಹಾಸ್ಟೆಲ್​ನಲ್ಲಿ ಬಿಟ್ಟಿದ್ದಾಗಿ ಹೇಳಿದ್ದಾರೆ. ಏಪ್ರಿಲ್ 1ರಂದು ಮಗ ಸಿದ್ದಾರ್ಥ ಹುಟ್ಟುಹಬ್ಬ ಇರುವ ಹಿನ್ನೆಲೆ ಮಗನನ್ನು ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರೀ ಪಟ್ಟುಹಿಡಿದಿದ್ದಾರೆ.

ಪೊಲೀಸ್ ವಿಚಾರಣೆ ವೇಳೆ ಅಸಲಿ ಕಹಾನಿ ಬಾಯಿಬಿಟ್ಟ ತಂದೆ 

ಈ ಬಗ್ಗೆ ಹೆಚ್ಚು ವಿಚಾರಿಸಿದಾಗ ಮಲ್ಲಿಕಾರ್ಜುನ ಮನೆಯಿಂದ ಪರಾರಿ ಆಗಿದ್ದಾರೆ. ಇದರಿಂದ ಅನುಮಾನ ಬಂದು ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮಹಾರಾಷ್ಟ್ರದಲ್ಲಿ ಕೊಲೆಗೈದಿರುವುದಾಗಿ ಆರೋಪಿ ಮಲ್ಲಿಕಾರ್ಜುನ ಅಸಲಿ ಸತ್ಯ ಬಾಯಿಬಿಟ್ಟಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನ ನನ್ನು ಬಂಧಿಸಿ‌ದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ತಾಯಿಯೂ ಆತ್ಮಹತ್ಯೆ

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳು ಕಾರುಣ್ಯ ಕೊಲೆಗೈದು ತಾಯಿ ಸುವರ್ಣಾ(40) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಇಮ್ಮಡಿಹಳ್ಳಿಯ ಮನೆಯ ಕೋಣೆಯಲ್ಲಿ ಮಗಳನ್ನು ಕೊಂದು ಬಳಿಕ ತಾಯಿ ಸುವರ್ಣಾ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IPL vs PSL: KKR ಆಟಗಾರ 2 ವರ್ಷ ಬ್ಯಾನ್..!

Source link

ಬಿಹಾರದಲ್ಲಿ ಬಿಜೆಪಿ ಯುಗ ಆರಂಭ; ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ – Kannada News | Bihar Gets First BJP Chief Minister, Samrat Chaudhary To Take Oath as Bihar new CM Tomorrow

ಪಾಟ್ನಾ, ಏಪ್ರಿಲ್ 14: ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ (Nitish Kumar) ಇಂದು ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಪಾಟ್ನಾದಲ್ಲಿ ಎನ್​ಡಿಎ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹೀಗಾಗಿ, ಇದು ಬಿಜೆಪಿ ಪಾಲಿಗೆ ಮಹತ್ವದ ಕ್ಷಣವಾಗಿದೆ.

Published On – 4:26 pm, Tue, 14 April 26

Source link

Vastu Secrets: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ – Kannada News | Vastu Secrets: Choosing the Right Pooja Lamp Wick for Prosperity and Peace

ಮನೆಯ ಪೂಜಾ ಸ್ಥಳವು ಅತ್ಯಂತ ಪವಿತ್ರವಾದುದು. ಇಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಮನೆಯ ವಾತಾವರಣ ಮತ್ತು ವಾಸ್ತುವಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೀಪ ಬೆಳಗಿಸುವುದು ಪೂಜೆಯ ಪ್ರಮುಖ ಭಾಗ. ಆದರೆ, ನೀವು ಬಳಸುವ ಹತ್ತಿಯ ಬತ್ತಿಯ ಆಕಾರವು ಎಷ್ಟು ಮುಖ್ಯ ಎಂದು ನಿಮಗೆ ತಿಳಿದಿದೆಯೇ? ವಾಸ್ತು ಶಾಸ್ತ್ರದ ಪ್ರಕಾರ, ಉದ್ದ ಮತ್ತು ದುಂಡಗಿನ ಬತ್ತಿಗಳು ವಿಭಿನ್ನ ಧಾರ್ಮಿಕ ಮಹತ್ವವನ್ನು ಹೊಂದಿವೆ.

ಉದ್ದನೆಯ ಬತ್ತಿ ಮತ್ತು ದುಂಡು ಬತ್ತಿ: ಯಾವುದು ಶ್ರೇಷ್ಠ?

ವಾಸ್ತು ಶಾಸ್ತ್ರದ ಪ್ರಕಾರ, ಎರಡೂ ರೀತಿಯ ಬತ್ತಿಗಳು ತನ್ನದೇ ಆದ ವಿಶೇಷ ಫಲಿತಾಂಶಗಳನ್ನು ನೀಡುತ್ತವೆ.

  • ಉದ್ದನೆಯ ಬತ್ತಿ (Long Wick): ಇದು ಸಂಪತ್ತು, ಸಮೃದ್ಧಿ ಮತ್ತು ವಂಶದ ಬೆಳವಣಿಗೆಯ ಸಂಕೇತ. ಲಕ್ಷ್ಮಿ ದೇವತೆ, ಸರಸ್ವತಿ, ದುರ್ಗಾ ಮಾತೆ ಅಥವಾ ನಿಮ್ಮ ಕುಲದೇವತೆಯ ಮುಂದೆ ದೀಪ ಹಚ್ಚುವಾಗ ಉದ್ದನೆಯ ಬತ್ತಿಯನ್ನು ಬಳಸುವುದು ಅತ್ಯಂತ ಶುಭ.
  • ದುಂಡು ಬತ್ತಿ (Round Wick): ಮನಸ್ಸಿನ ಸ್ಥಿರತೆ ಮತ್ತು ಆಧ್ಯಾತ್ಮಿಕ ಶಾಂತಿಗಾಗಿ ಇದನ್ನು ಬಳಸಲಾಗುತ್ತದೆ. ಭಗವಾನ್ ವಿಷ್ಣು, ಶಿವ ಅಥವಾ ಹನುಮಂತನ ಮುಂದೆ ದೀಪ ಬೆಳಗಿಸಲು ದುಂಡು ಬತ್ತಿ ಶ್ರೇಷ್ಠವೆಂದು ಪರಿಗಣಿಸಲಾಗಿದೆ.

ದೀಪದ ಬತ್ತಿಯ ದಿಕ್ಕು ನಿಮ್ಮ ಯಶಸ್ಸಿನ ದಾರಿ:

ದೀಪ ಹಚ್ಚುವಾಗ ಬತ್ತಿಯು ಯಾವ ದಿಕ್ಕಿಗೆ ಮುಖ ಮಾಡಿದೆ ಎಂಬುದು ಮುಖ್ಯ:

  • ಪೂರ್ವ ದಿಕ್ಕು: ಆರೋಗ್ಯ ಸುಧಾರಿಸುತ್ತದೆ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ.
  • ಉತ್ತರ ದಿಕ್ಕು: ಆರ್ಥಿಕ ಲಾಭ, ಹಣಕಾಸಿನ ಮುಗ್ಗಟ್ಟು ನಿವಾರಣೆ ಮತ್ತು ಯಶಸ್ಸಿಗೆ ಈ ದಿಕ್ಕು ಸೂಕ್ತ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಸಮಸ್ಯೆಗಳ ನಿವಾರಣೆಗೆ ವಿಶೇಷ ಪರಿಹಾರಗಳು:

  • ನಕಾರಾತ್ಮಕತೆ ದೂರವಾಗಲು: ಮನೆಯಲ್ಲಿ ಅಶಾಂತಿ ಅಥವಾ ಉದ್ವಿಗ್ನತೆ ಇದ್ದರೆ ತುಪ್ಪದ ದೀಪವನ್ನು ಬೆಳಗಿಸಿ. ಅದರಲ್ಲೂ ಮಂಗಳವಾರ ಮತ್ತು ಶನಿವಾರದಂದು ಹನುಮಂತನ ಮುಂದೆ ಮಲ್ಲಿಗೆ ಎಣ್ಣೆಯ ದೀಪ ಹಚ್ಚುವುದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.
  • ಆರ್ಥಿಕ ಅಭಿವೃದ್ಧಿಗೆ: ನೀವು ಆರ್ಥಿಕ ಸಂಕಷ್ಟದಿಂದ ಹೊರಬರಲು ಬಯಸಿದರೆ, ಬತ್ತಿಯನ್ನು ತಯಾರಿಸುವಾಗ ಅದಕ್ಕೆ ಸ್ವಲ್ಪ ಶ್ರೀಗಂಧದ ಪೇಸ್ಟ್ ಹಚ್ಚಿ, ನಂತರ ತುಪ್ಪದಿಂದ ದೀಪ ಬೆಳಗಿಸಿ. ಇದು ಮನೆಯಲ್ಲಿ ಸಕಾರಾತ್ಮಕ ಸುಗಂಧದ ಜೊತೆಗೆ ಸಮೃದ್ಧಿಯನ್ನು ತರುತ್ತದೆ.

ದೀಪವು ಕೇವಲ ಕತ್ತಲನ್ನು ಓಡಿಸುವುದಲ್ಲದೆ, ನಮ್ಮ ಜೀವನದ ಅಡೆತಡೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ. ಸರಿಯಾದ ನಿಯಮಗಳೊಂದಿಗೆ ದೀಪ ಬೆಳಗಿಸುವ ಮೂಲಕ ನಿಮ್ಮ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಕಾರಾತ್ಮಕತೆಯನ್ನು ಹೆಚ್ಚಿಸಿಕೊಳ್ಳಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಖಾಲಿ ಹುದ್ದೆಗಳ ಭರ್ತಿಗೆ ಹೋರಾಟಕ್ಕಿಳಿದವರ ಬಂಧನ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಬಿತ್ತು ಬ್ರೇಕ್ – Kannada News | Karnataka Job Vacancies: Dharwad Protest for 2.84 Lakh Posts Faces Police Crackdown

ಪ್ರತಿಭಟನಾಕಾರರ ಬಂಧಿಸಿದ ಪೊಲೀಸ್​Image Credit source: tv9 kannada

ಧಾರವಾಡ, ಏಪ್ರಿಲ್​ 14: ರಾಜ್ಯದಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಭರ್ತಿಗಾಗಿ (government jobs) ಧಾರವಾಡದಲ್ಲಿ ನಿರಂತರವಾಗಿ ಉದ್ಯೋಗಾಕಾಂಕ್ಷಿಗಳು ಹೋರಾಟ (Protest) ಮಾಡುತ್ತಲೇ ಬಂದಿದ್ದಾರೆ. ಸಾವಿರಾರು ಉದ್ಯೋಗಾಕಾಂಕ್ಷಿಗಳು ಹೋರಾಟ ಮಾಡಿದ ಬಳಿಕವಷ್ಟೇ ಸರಕಾರ ಹುದ್ದೆಗಳ ಭರ್ತಿ ಮಾಡಿಕೊಳ್ಳುವುದಾಗಿ ಘೋಷಿಸಿತ್ತು. ಇದೀಗ ಹೋರಾಟದ ಮುಂದುವರೆದ ಭಾಗವಾಗಿ ಇಂದು ವಿದ್ಯಾರ್ಥಿಗಳ ಸಂಘಟನೆಯಿಂದ ಹೋರಾಟವನ್ನು ಆಯೋಜಿಸಲಾಗಿತ್ತು. ಆದರೆ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು, ಬೆಳಿಗ್ಗೆಯೇ ಮುಖಂಡರನ್ನು ಬಂಧಿಸಿ, ಹೋರಾಟಕ್ಕೆ ಬ್ರೇಕ್ ಹಾಕಿದರು.

ರಾಜ್ಯದಲ್ಲಿ ಖಾಲಿ ಇರುವ 2.84 ಲಕ್ಷ ಸರಕಾರಿ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಕರೆ ಕೊಟ್ಟಿತ್ತು. ಈ ಕರೆಗೆ ರೈತ ಸಂಘಟನೆ ಹಾಗೂ ಇತರೆ ಎಡಪಂಥೀಯ ಸಂಘಟನೆಗಳು ಕೂಡ ಸಾಥ್ ನೀಡಿದ್ದವು. ಆದರೆ ಹೋರಾಟಕ್ಕೆ ಉಪನಗರ ಠಾಣೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿಂದೆ ನಡೆದಿದ್ದ ಅನೇಕ ಹೋರಾಟದ ವೇಳೆಯಲ್ಲಿ ಅಹಿತಕರ ಘಟನೆಗಳು ನಡೆದಿದ್ದವಲ್ಲದೇ ಸಾರ್ವಜನಿಕರಿಗೆ ಸಮಸ್ಯೆಯಾಗಿತ್ತು. ಇದನ್ನೇ ಕಾರಣವಾಗಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೂ ಹೋರಾಟ ಮಾಡೋದಾಗಿ ವಿದ್ಯಾರ್ಥಿ ಸಂಘಟನೆ ಮುಖಂಡರು ಹೇಳಿದ್ದರು.

ಐವರು ಮುಖಂಡರ ಬಂಧನ 

ಅಲ್ಲದೇ ಅಂಬೇಡ್ಕರ್ ಜಯಂತಿ ದಿನವೇ ನಮ್ಮ ನಡಿಗೆ ಭೀಮನೆಡೆಗೆ ಘೋಷವಾಕ್ಯದಡಿ ಪ್ರತಿಭಟನೆ ನಡೆಸಲು ಯೋಚಿಸಿದ್ದರು. ಆದರೆ ಪೊಲೀಸರು ಅನುಮತಿ ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ಮುಖಂಡರು ಹೋರಾಟ ಮಾಡಿಯೇ ತೀರೋದಾಗಿ ಹೇಳಿ ಬೀದಿಗೆ ಇಳಿದರು. ಈ ವೇಳೆ ಯಲ್ಲಪ್ಪ ಹೆಗಡೆ, ನಾಗರಾಜ ಸೇರಿದಂತೆ ಐವರು ಮುಖಂಡರನ್ನು ಪೊಲೀಸರು ಜಯನಗರ ವೃತ್ತದ ಬಳಿ ಬಂಧಿಸಿ, ಕರೆದೊಯ್ದರು. ಪೊಲೀಸರ ಈ ಕ್ರಮಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​: ಷರತ್ತು ಅನ್ವಯ

ಕಳೆದ ವರ್ಷ ಸೆಪ್ಟೆಂಬರ್ ಹಾಗೂ ಈ ವರ್ಷದ ಫೆಬ್ರವರಿಯಲ್ಲಿ ನಡೆದಿದ್ದ ಹೋರಾಟದಿಂದಾಗಿ ರಾಜ್ಯ ಸರಕಾರಕ್ಕೆ ಮುಜುಗರ ಉಂಟಾಗಿತ್ತು. ಇದೇ ವೇಳೆ ನಗರದ ಜ್ಯುಬಿಲಿ ವೃತ್ತದ ಬಳಿ ರಸ್ತೆ ತಡೆ ನಡೆಸಿದ್ದಕ್ಕೆ ಗಂಟೆಗಳ ಕಾಲ ಇಡೀ ಧಾರವಾಡ ಸ್ತಬ್ಧವಾಗಿತ್ತು. ಈ ಹಿನ್ನೆಲೆ ಮುಂದಿನ ದಿನಗಳಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ ಧಾರವಾಡ ಹೈಕೋರ್ಟ್ ಮೊರೆ ಹೋಗಿತ್ತು. ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಂಘಟನೆಗೆ ಹೋರಾಟ ಮಾಡಲು ಅನುಮತಿ ನೀಡಿ, ಹುಬ್ಬಳ್ಳಿಯ ನೆಹರು ಮೈದಾನದಲ್ಲಿ 100 ಜನರಷ್ಟೇ ಹೋರಾಟ ಮಾಡಲು ಸೂಚಿಸಿತ್ತು.

ಸರಕಾರ ಸ್ಪಂದಿಸಿದಲೂ ಹೋರಾಟ ಮಾಡೋದು ಎಷ್ಟು ಸರಿ? ಸಚಿವ ಸಂತೋಷ ಲಾಡ್

ಅಲ್ಲದೇ ಹೋರಾಟದಲ್ಲಿ ಭಾಗಿಯಾಗುವವರ ಮಾಹಿತಿಯನ್ನು ಮುಂಚೆಯೇ ಪೊಲೀಸರಿಗೆ ನೀಡಿ, ಬಳಿಕ ಹೋರಾಟ ಮಾಡುವಂತೆ ಸೂಚನೆ ನೀಡಿತ್ತು. ಇದೇ ಕಾರಣಗಳನ್ನಿಟ್ಟುಕೊಂಡು ಪೊಲೀಸರು ಅನುಮತಿ ನಿರಾಕರಿಸಿದ್ದರು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹೋರಾಟಕ್ಕೆ ರಾಜ್ಯ ಸರಕಾರ ಸ್ಪಂದಿಸಿದೆ. ಆದರೂ ಅದೇಕೆ ಮತ್ತೆ ಹೋರಾಟ ಮಾಡುತ್ತಿದ್ದಾರೋ ಗೊತ್ತಿಲ್ಲ. ಅವರ ಹೋರಾಟವನ್ನು ನಾನು ಕೂಡ ಬೆಂಬಲಿಸುವೆ. ಆದರೆ ಇಷ್ಟೆಲ್ಲಾ ಸ್ಪಂದನೆ ಸಿಕ್ಕ ಬಳಿಕವೂ ಹೋರಾಟ ಮಾಡೋದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗಾಕಾಕ್ಷಿಗಳಿಂದ ಮತ್ತೊಂದು ಸುತ್ತಿನ ಹೋರಾಟಕ್ಕೆ ಕರೆ: ಧಾರವಾಡದಲ್ಲಿ ನಾಳೆ ನಡೆಯಲಿದ್ಯಾ ಹೈಡ್ರಾಮಾ?

ಇದೇ ವೇಳೆ ಹೋರಾಟಕ್ಕೆ ದಲಿತ ಸಂಘಟನೆಗಳು ಕೂಡ ವಿರೋಧ ವ್ಯಕ್ತಪಡಿಸಿದ್ದವು. ಅಂಬೇಡ್ಕರ್ ಜಯಂತಿ ದಿನ ಇಂಥ ಹೋರಾಟ ಮಾಡುವ ಅವಶ್ಯಕತೆ ಇದೆಯೇ ಅನ್ನೋದು ದಲಿತ ಸಂಘಟನೆಗಳ ಪ್ರಶ್ನೆಯಾಗಿತ್ತು. ಈ ಎಲ್ಲ ಕಾರಣಗಳಿಂದ ಪೊಲೀಸರು ಹೋರಾಟಕ್ಕೆ ಬ್ರೇಕ್ ಹಾಕಿದ್ದರು. ಆದರೆ ಇದೀಗ ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ ಅನ್ನೋ ಆರೋಪಕ್ಕೆ ಪೊಲೀಸರು ಗುರಿಯಾಗಿದ್ದಂತೂ ಸತ್ಯ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಹೊಸ ಸರ್ಕಾರಕ್ಕೆ ಪೂರ್ಣ ಬೆಂಬಲದ ಪ್ರತಿಜ್ಞೆ – Kannada News | Nitish Kumar resigns as Bihar chief minister says New Government Will Have My Full Cooperation

ಪಾಟ್ನಾ, ಏಪ್ರಿಲ್ 14: ಬಿಹಾರದ ರಾಜಕೀಯದಲ್ಲಿ ನಿತೀಶ್ ಕುಮಾರ್ (Nitish Kumar) ಯುಗ ಇಂದು ಅಂತ್ಯಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಟ್ನಾದಲ್ಲಿ ಇಂದು ತಮ್ಮ ಅಂತಿಮ ಸಚಿವ ಸಂಪುಟ ಸಭೆ ನಡೆಸಿದರು. ಈ ವೇಳೆ ಅವರು ತುಂಬಾ ಭಾವುಕರಾದರು. ಸಂಪುಟ ಸಭೆಯ ನಂತರ ನಿತೀಶ್ ಕುಮಾರ್ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಬಿಹಾರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಹೊಸ ಮುಖ್ಯಮಂತ್ರಿಯ ಜೊತೆಗೆ, ಇತರ ಇಬ್ಬರು ಉಪಮುಖ್ಯಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂತಿಮ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾವುಕರಾದರು. ಅವರು ಹೊಸ ಸರ್ಕಾರಕ್ಕೆ ತಮ್ಮ ಶುಭಾಶಯಗಳನ್ನು ಸಹ ಸಲ್ಲಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಪ್ರಕ್ರಿಯೆ ಆರಂಭವಾಗಲಿದೆ. ಹೊಸ ಸರ್ಕಾರ ನಾಳೆ ಬುಧವಾರ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ರಾಜೀನಾಮೆ ನೀಡಿರುವುದರಿಂದ ಬಿಜೆಪಿಯ ಅಭ್ಯರ್ಥಿ ಸಿಎಂ ಆಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ರಾಜ್ಯಸಭಾ ಸಂಸದರಾಗಿ ನಿತೀಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. 2 ದಶಕಗಳ ಕಾಲ ಬಿಹಾರ ಸಿಎಂ ಆಗಿ ಸೇವೆ ಸಲ್ಲಿಸಿದ ನಂತರ ನಿತೀಶ್ ಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ಅವರು ಏಪ್ರಿಲ್ 11ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಅವರು ಮಾರ್ಚ್ 30ರಂದು ಬಿಹಾರದ ವಿಧಾನಸಭೆಯ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಿತೀಶ್ ಕುಮಾರ್ ಮಾರ್ಚ್ 16ರಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ನಿಯಮದ ಪ್ರಕಾರ, ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾದ 14 ದಿನಗಳ ಒಳಗೆ ಚುನಾಯಿತ ಸದಸ್ಯರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಹೀಗಾಗಿ, ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:03 pm, Tue, 14 April 26

Source link

ವಿದ್ಯಾ ಬಾಲನ್ ಕಂಡರೆ ಬೆಚ್ಚಿ ಬೀಳುತ್ತಿದ್ದ ಅಕ್ಷಯ್ ಕುಮಾರ್ ಮಗ; ಕಾರಣ ಏನು? – Kannada News | Akshay Kumar says Aarav Bhatia was scared of Vidya Balan Manjulika character for 6 Years

ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅವರು ಈಗ ‘ಭೂತ್ ಬಂಗ್ಲ’ (Bhooth Bangla) ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಅವರು ತಮ್ಮ ಮಗ ಆರವ್ ಭಾಟಿಯಾಗೆ ಸಂಬಂಧಿಸಿದ ಒಂದು ಸ್ವಾರಸ್ಯಕರ ಹಾಗೂ ಅಚ್ಚರಿಯ ವಿಷಯವನ್ನು ಹಂಚಿಕೊಂಡಿದ್ದಾರೆ. 2007ರಲ್ಲಿ ತೆರೆಕಂಡು ಸೂಪರ್ ಹಿಟ್ ಆದ ‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ನಟಿ ವಿದ್ಯಾ ಬಾಲನ್ (Vidya Balan) ಅವರು ಮಾಡಿದ್ದ ಮಂಜುಲಿಕಾ ಪಾತ್ರವನ್ನು ಕಂಡು ಆರವ್ ಎಷ್ಟು ಭಯಬಿದ್ದಿದ್ದರೆಂದರೆ, ಬರೋಬ್ಬರಿ 6 ವರ್ಷಗಳ ಕಾಲ ಅವರು ವಿದ್ಯಾ ಬಾಲನ್ ಎದುರು ಬರಲು ಹೆದರುತ್ತಿದ್ದರಂತೆ.

ಅಕ್ಷಯ್ ಕುಮಾರ್ ಈ ಕುರಿತು ಮಾತನಾಡುತ್ತಾ, ‘ಆರವ್ ಸುಮಾರು 6 ವರ್ಷಗಳ ಕಾಲ ವಿದ್ಯಾ ಬಾಲನ್ ಅವರನ್ನು ಕಂಡು ಹೆದರುತ್ತಿದ್ದ. ವಿದ್ಯಾ ಅವರು ನಮ್ಮ ಮನೆಗೆ ಬಂದಾಗಲೆಲ್ಲಾ ಅವರನ್ನು ಆರವ್ ಭೇಟಿಯಾಗದೇ ತಪ್ಪಿಸಿಕೊಳ್ಳುತ್ತಿದ್ದ. ಅವರ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಕೂಡ ಆತನಿಗೆ ಧೈರ್ಯವಿರಲಿಲ್ಲ. ತನ್ನ ಎದುರಿಗಿರುವುದು ಮಂಜುಲಿಕಾ ಎಂಬ ಭೂತವೇ ಹೊರತು ನಟಿ ವಿದ್ಯಾ ಬಾಲನ್ ಅಲ್ಲ ಎಂದು ಆತ ಗಾಬರಿಪಡುತ್ತಿದ್ದ’ ಎಂದು ಹಳೆಯ ನೆನಪನ್ನು ಸ್ಮರಿಸಿದ್ದಾರೆ.

ತಮ್ಮ ಮಗನ ಭಯವನ್ನು ಹೋಗಲಾಡಿಸಲು ಅಕ್ಷಯ್ ಸಾಕಷ್ಟು ಪ್ರಯತ್ನಪಟ್ಟಿದ್ದರಂತೆ. ‘ಅವಳು ಮಂಜುಲಿಕಾ ಅಲ್ಲ, ವಿದ್ಯಾ. ಅವಳು ತುಂಬಾ ಒಳ್ಳೆಯವಳು ಎಂದು ನಾನು ಎಷ್ಟೇ ವಿವರಿಸಿದರೂ ಆರವ್ ಸಮಾಧಾನ ಆಗುತ್ತಿರಲಿಲ್ಲ’ ಎಂದು ಅಕ್ಷಯ್ ಹೇಳಿದ್ದಾರೆ. ಅಷ್ಟರಮಟ್ಟಿಗೆ ವಿದ್ಯಾ ಬಾಲನ್ ಅಭಿನಯವು ಆರವ್ ಭಾಟಿಯಾ ಮನಸ್ಸಿನ ಮೇಲೆ ಪರಿಣಾಮ ಬೀರಿತ್ತು.

‘ಭೂತ್ ಬಂಗ್ಲ’ ಚಿತ್ರವು ‘ಭೂಲ್ ಭುಲಯ್ಯ’ ಸಿನಿಮಾ ರೀತಿಯೇ ಇರಬಹುದಾ ಎಂಬ ಪ್ರಶ್ನೆಗೆ ಅಕ್ಷಯ್ ಕುಮಾರ್ ಅವರು ಉತ್ತರಿಸಿದ್ದಾರೆ. ‘ಇದು ಸಂಪೂರ್ಣವಾಗಿ ವಿಭಿನ್ನವಾದ ಸಿನಿಮಾ. ಇದು ಡಿಸ್ನಿ ಶೈಲಿಯ ಹಾರರ್-ಫ್ಯಾಂಟಸಿ ಚಿತ್ರವಾಗಿದ್ದು, ಮಕ್ಕಳು ಕೂಡ ಇದನ್ನು ಇಷ್ಟಪಡುತ್ತಾರೆ. ಇದರಲ್ಲಿ ನಿಜವಾದ ಭೂತಗಳ ಕಥೆಯಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

ನಿರ್ದೇಶಕ ಪ್ರಿಯದರ್ಶನ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಭೂಲ್ ಭುಲಯ್ಯ ಒಂದು ಸೈಕಲಾಜಿಕಲ್ ಥ್ರಿಲ್ಲರ್ ಆಗಿತ್ತು. ಆದರೆ ಭೂತ್ ಬಂಗ್ಲ ಒಂದು ಫ್ಯಾಂಟಸಿ ಲೋಕದ ಕಥೆ. ಎರಡನ್ನೂ ಹೋಲಿಕೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಚಿತ್ರವು ಏಪ್ರಿಲ್ 17ರಂದು ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ? – Kannada News | Karnataka Government Released 2026 27 School Academic year schedule, here Is working days And Holidays details

ಬೆಂಗಳೂರು, (ಏಪ್ರಿಲ್ 14) : 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ  ( School Academic year schedule) ಪ್ರಕಟವಾಗಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ.

ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್ 3ರಿಂದ 21, 2026ರವರೆಗೆ ದಸರಾ ರಜೆ ಹಾಗೂ ಏಪ್ರಿಲ್ 11, 2027ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. 2027ರ ಜೂನ್ ಮೊದಲ ವಾರದಲ್ಲೇ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಗೆ ಆದೇಶಿಸಿರುವ ಇಲಾಖೆಯು, ದಾಖಲಾತಿ ಅಭಿಯಾನದ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರಲು ವಿಶೇಷ ಒತ್ತು ನೀಡಿದೆ.

ಇದನ್ನೂ ಓದಿ: Karnataka Government Jobs: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಗಮನಕ್ಕೆ; KEAಯಿಂದ ನೇಮಕಾತಿ ಪರೀಕ್ಷೆಗಳ ದಿನಾಂಕ ಪ್ರಕಟ

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಅಕ್ಟೋಬರ್ .3 ರಿಂದ ಅ.21ರವರೆಗೆ ದಸರಾ ರಜೆ

ಶಾಲೆಗಳ ಮೊದಲ ಅವಧಿ ಮೇ 29 ರಿಂದ ಅ.2 ರವರೆಗೆ ಮತ್ತು ಎರಡನೇ ಅವಧಿ ಅಕ್ಟೋಬರ್ .22 ರಿಂದ 2027ರ ಏಪ್ರಿಲ್.10ರವರೆಗೆ ನಡೆಯಲಿದೆ. ಇನ್ನು ಅಕ್ಟೋಬರ್ .3 ರಿಂದ ಅ.21ರವರೆಗೆ ದಸರಾ ರಜೆ ಇರಲಿದೆ. . ಹೀಗಾಗಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರ ಒಳಗೆ ಪೂರ್ಣಗೊಳಿಸಬೇಕು, ಶಾಲೆ ಬಿಟ್ಟಿರುವ 6 ವರ್ಷದಿಂದ 18 ವರ್ಷದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ದಾಖಲಾತಿ ಜಾಗೃತಿ ಅಭಿಯಾನವನ್ನು ನಡೆಸಬೇಕು ಎಂದು ತಿಳಿಸಲಾಗಿದೆ.

ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳು

ಶೈಕ್ಷಣಿಕ ವರ್ಷದ ಒಟ್ಟು 365 ದಿನಗಳಲ್ಲಿ 119 ರಜಾ ದಿನಗಳಿರಲಿದ್ದು, 245 ಕರ್ತವ್ಯದ ದಿನಗಳೆಂದು ಪರಿಗಣಿಸಲಾಗಿದೆ. ಈ ದಿನಗಳಲ್ಲಿ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳು, ಪಠ್ಯೇತರ ಚಟುವಟಿಕೆಗಳ ನಿರ್ವಹಣೆಗಾಗಿ 24 ದಿನಗಳು, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು, ಶಾಲಾ ಸ್ಥಳೀಯ ರಜೆ 4 ದಿನಗಳು ಮತ್ತು ಕಲಿಕಾ ಪ್ರಕ್ರಿಯೆಗೆ 181 ದಿನಗಳನ್ನು ಮೀಸಲಿಡಲಾಗಿದೆ. ಇನ್ನುಳಿದಂತೆ ದಾಖಲಾತಿ ಆಂದೋಲನ, ಶಾಲಾ ಪ್ರಾರಂಭೋತ್ಸವ ಕುರಿತು ಎಂದಿನಂತೆ ಚಟುವಟಿಕೆಯನ್ನು ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಹಿತಿಂಡಿಗಳ ಮಹಾರಾಜ ಸ್ವಾದಿಷ್ಟಮಯ “ಮೈಸೂರು ಪಾಕ್‌” – Kannada News | Do you know why Mysore Pak is called the king of sweets? Here is the information

ಭಾರತೀಯ ಹಬ್ಬ ಹರಿದಿನಗಳು, ಮದುವೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸಿಹಿತಿನಿಸು ಇರಲೇಬೇಕು. ಈ ಸಿಹಿ ಖಾದ್ಯಗಳು ಎಂದಾಕ್ಷಣ ನೆನಪಾಗುವುದೇ ಮೈಸೂರ್‌ ಪಾಕ್‌ (Mysore Pak), ಗುಲಾಬ್‌ ಜಾಮೂನ್‌, ರಸಗುಲ್ಲಾ. ಇದಲ್ಲದೇ ಪ್ರದೇಶದಿಂದ ಪ್ರದೇಶಕ್ಕೆ  ಸ್ಥಳೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ಅನೇಕಾರು ಸಿಹಿ ಖಾದ್ಯಗಳಿವೆ. ಈ ಎಲ್ಲಾ ಸಿಹಿ ತಿನಿಸುಗಳ ರಾಜನೆಂದು ಮೈಸೂರ್‌ ಪಾಕನ್ನು ಕರೆಯಲಾಗುತ್ತದೆ. ಹೌದು ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುವಂತೆ ಮೈಸೂರ್‌ ಪಾಕನ್ನು ಸಿಹಿ ತಿಂಡಿಗಳ ರಾಜ ಎಂದು ಕರೆಯಲಾಗುತ್ತದೆ.  ವಿಶೇಷವಾಗಿ ಕರ್ನಾಟಕದ ಸಂಸ್ಕೃತಿ ಮತ್ತು ಇತಿಹಾಸದ ಪ್ರತೀಕವಾಗಿರುವ ಈ ಖಾದ್ಯವನ್ನೇ ಏಕೆ ಸಿಹಿತಿಂಡಿಗಳ ರಾಜ ಎಂದು ಕರೆಯೋದೇಕೆ ಗೊತ್ತಾ? ಇದರ ಹಿಂದಿನ ಇಂಟರೆಸ್ಟಿಂಗ್‌ ಮಾಹಿತಿ ಇಲ್ಲಿದೆ.

ಮೈಸೂರು ಪಾಕನ್ನೇ  ಸಿಹಿತಿಂಡಿಗಳ ರಾಜ ಎಂದು ಕರೆಯೋದೇಕೆ?

ಮೈಸೂರು ಪಾಕನ್ನು “ಸಿಹಿಗಳ ರಾಜ” ಎಂದು ಕರೆಯಲಾಗುತ್ತದೆ. ಕಡಲೆ ಹಿಟ್ಟು, ಸಕ್ಕರೆ ಮತ್ತು ತುಪ್ಪದಿಂದ ತಯಾರಿಸಲಾದ ಈ ಸಿಹಿತಿಂಡಿಯು ಮೈಸೂರಿನ ರಾಜಮನೆತನದ ಪಾಕಶಾಲೆಯೊಂದಿಗೆ ಸಂಬಂಧ ಹೊಂದಿದೆ. ಹೀಗೆ ಮೈಸೂರ್‌ ಪಾಕ್‌ನ  ರಾಜಮನೆತನದ ಹಿನ್ನೆಲೆ, ಅದರ ಶ್ರೀಮಂತ ರುಚಿ ಮತ್ತು ರಾಷ್ಟ್ರೀಯ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಸಿಹಿ ಖಾದ್ಯವನ್ನು ಸಿಹಿ ತಿಂಡಿಗಳ ರಾಜ ಎಂದು ಕರೆಯಲಾಗುತ್ತದೆ

ಮೈಸೂರು ಪಾಕ್ ಇತಿಹಾಸ:

ಮೈಸೂರು ಪಾಕ್ ಅನ್ನು ಮೊದಲು ಒಡೆಯರ್ ರಾಜವಂಶದ ಆಳ್ವಿಕೆಯಲ್ಲಿ ಮೈಸೂರಿನ ಅರಮನೆಯ ಪಾಕಶಾಲೆಯಲ್ಲಿ ತಯಾರಿಸಲಾಯಿತು.  ಸುಮಾರು 1930 ರ ದಶಕದಲ್ಲಿ ಮೈಸೂರಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಆಳ್ವಿಕೆಯ ಸಮಯದಲ್ಲಿ ಕಡಲೆ ಹಿಟ್ಟು, ಸಕ್ಕರೆ ಮತ್ತು ತುಪ್ಪದ ಸಮ್ಮಿಲನವಾದ ಮೈಸೂರ್‌ ಪಾಕನ್ನು ಮೊದಲ ಬಾರಿಗೆ   ತಯಾರಿಸಲಾಯಿತು. ಸರಳ ಪದಾರ್ಥಗಳನ್ನು ಬಳಸಿ ತಯಾರಿಸಲಾದ ಈ ಈ ಸಿಹಿತಿಂಡಿಯ ಸೃಷ್ಟಿಯ ಶ್ರೇಯಸ್ಸು ಅರಮನೆಯ ಮುಖ್ಯ ಬಾಣಸಿಗರಾಗಿದ್ದ ಕಾಕಾಸುರ ಮಾದಪ್ಪ ಅವರಿಗೆ ಸಲ್ಲುತ್ತದೆ.   ಸರಳ ಪದಾರ್ಥಗಳನ್ನು ಬಳಸಿ ತಯಾರಿಸಿದ ಈ ಸಿಹಿತಿಂಡಿ ರಾಜಮನೆತನದವರಿಗೆ ಬಲು ಇಷ್ಟವಾಯಿತು.  ಈ ಖಾದ್ಯ ಅರಮನೆಯಲ್ಲಿ ಮೊದಲು ತಯಾರಿಸಲಾದ ಕಾರಣ ಬಾಣಸಿಗ ಮಾದಪ್ಪ ಇದಕ್ಕೆ ಮೈಸೂರ್‌ ಪಾಕ್‌ ಎಂದು ಹೆಸರಿಟ್ಟರು. ಇಂದು ಕರ್ನಾಟಕದ ಸಂಸ್ಕೃತಿ ಮತ್ತು ಇತಿಹಾಸದ ಪ್ರತೀಕವಾಗಿರುವ ಈ ಸಿಹಿ ಖಾದ್ಯ ವಿಶ್ವಾದ್ಯಂತ ಜನಪ್ರಿಯತೆಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಹಣ್ಣು ತರಕಾರಿಗಳಲ್ಲಿ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದು ಹಾಕಲು ಸರಳ ವಿಧಾನ ಅನುಸರಿಸಿ

ಮೈಸೂರು ಪಾಕ್ ಏಕೆ ಇಷ್ಟೊಂದು ಜನಪ್ರಿಯವಾಗಿದೆ?

ಮೈಸೂರು ಪಾಕ್ ತನ್ನ ಶ್ರೀಮಂತ ರುಚಿ ಮತ್ತು ಸುಲಭವಾಗಿ ಲಭ್ಯವಿರುವ ಪದಾರ್ಥಗಳನ್ನು ಬಳಸಿಕೊಂಡು ತಯಾರಿಸುವ ಸರಳ ವಿಧಾನದಿಂದಾಗಿ ಜನಪ್ರಿಯವಾಗಿದೆ. ಮೃದುವಾದ ಮತ್ತು ಸ್ವಲ್ಪ ಪುಡಿಪುಡಿಯಾದ ವಿನ್ಯಾಸವನ್ನು ಹೊಂದಿರುವ, ಬಾಯಿಯಲ್ಲಿಟ್ಟರೆ ಸುಲಭವಾಗಿ ಕರಗುವ ಈ ಸಿಹಿ ಖಾದ್ಯ ಎಲ್ಲಾ ವಯೋಮಾನದ ಜನರಿಗೆ ಇಷ್ಟವಾಗುತ್ತದೆ. ಇತರ ಅನೇಕ ಸಿಹಿತಿಂಡಿಗಳಿಗೆ ಹೋಲಿಸಿದರೆ ಇದು ಸುದೀರ್ಘ ಬಾಳಿಕೆ ಬರುತ್ತದೆ. ಹೀಗೆ ಇದರ ರುಚಿ ಇದರ ರಾಜಮನೆತನದ ಮೂಲ ಮತ್ತು ಸಾಂಪ್ರದಾಯಿಕ ತಯಾರಿಕೆಯ ಶೈಲಿಯು ಭಾರತದಾದ್ಯಂತ ಇದರ ಖ್ಯಾತಿಯನ್ನು ಹೆಚ್ಚಿಸಿದೆ.

ಭಾರತದಲ್ಲಿ ಅತಿ ಹೆಚ್ಚು ಸಿಹಿತಿಂಡಿ ಉತ್ಪಾದಿಸುವ ರಾಜ್ಯ ಯಾವುದು?

ಭಾರತದಲ್ಲಿ ಅತಿ ಹೆಚ್ಚು ಸಿಹಿತಿನಿಸುಗಳನ್ನು ಉತ್ಪಾದಿಸುವ ರಾಜ್ಯ ಉತ್ತರ ಪ್ರದೇಶವನ್ನು ಕರೆಯಲಾಗುತ್ತದೆ.  ಏಕೆಂದರೆ ಈ ರಾಜ್ಯ ಹೆಚ್ಚಿನ ಸಂಖ್ಯೆಯ ಸಿಹಿತಿಂಡಿ ಅಂಗಡಿಗಳನ್ನು ಹೊಂದಿದೆ ಮತ್ತು ಸಾಂಪ್ರದಾಯಿಕ ಸಿಹಿತಿಂಡಿಗಳನ್ನು ಅಪಾರ ಪ್ರಮಾಣದಲ್ಲಿ ಉತ್ಪಾದಿಸುತ್ತದೆ. ಆಗ್ರಾ ಮತ್ತು ಕಾನ್ಪುರದಂತಹ ನಗರಗಳು ವಿಶೇಷವಾಗಿ ದೊಡ್ಡ ಸಿಹಿ ಮಾರುಕಟ್ಟೆಗಳು ಮತ್ತು ಉತ್ಪಾದನಾ ಘಟಕಗಳಿಗೆ ಹೆಸರುವಾಸಿಯಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version