Headlines

IND vs SL: ಮೂರನೇ ದಿನ 3 ಸೆಷನ್​ನಲ್ಲೂ ಮಳೆ ಭೀತಿ! – Kannada News | IND vs SL Test: Rain Threat Looms Large on Day 3

ಭಾರತ ಮತ್ತು ಶ್ರೀಲಂಕಾ ನಡುವೆ ಗಾಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನಕ್ಕೂ ಮಳೆಯ ಭೀತಿ ಎದುರಾಗಿದೆ. ಈಗಾಗಲೇ ಎರಡನೇ ದಿನದ ಆಟವು ಮಳೆಯಿಂದಾಗಿ ಕಡಿತಗೊಂಡಿದ್ದು, ಇಂದು (3ನೇ ದಿನ) ಕೂಡ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ವರದಿಗಳು ಮುನ್ಸೂಚನೆ ನೀಡಿವೆ. ಇತ್ತೀಚಿನ ಹವಾಮಾನ ವರದಿಯ ಪ್ರಕಾರ, ಇಂದು ಗಾಲೆ ನಗರದಲ್ಲಿ ಮಳೆಯಾಗುವ ಒಟ್ಟಾರೆ ಸಂಭವನೀಯತೆ ಶೇಕಡಾ 83 ರಷ್ಟಿದೆ. ಎರಡನೇ ದಿನದಲ್ಲಿ ಒಂದೂವರೆ ಸೆಷನ್‌ಗಿಂತಲೂ ಹೆಚ್ಚು…

Read More

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ: ಕರ್ನಾಟಕದ ಮನವಿ ಮೇರೆಗೆ EtO ಬಳಕೆಗೆ ಬ್ರೇಕ್ ಹಾಕಲು ಸಮಿತಿ ರಚಿಸಿದ ಕೇಂದ್ರ – Kannada News | Karnataka Food Safety Department Flags EtO in Spices, FSSAI Moves to Set New Standards

ಬೆಂಗಳೂರು, ಆಗಸ್ಟ್ 17: ಸ್ಟಾರ್ ಹೋಟೆಲ್‌ಗಳು, ಪ್ರತಿಷ್ಠಿತ ರೆಸ್ಟೋರೆಂಟ್‌ಗಳು ಹಾಗೂ ವಿವಿಧ ಆಹಾರ ಉತ್ಪನ್ನಗಳ ಮೇಲೆ ದಾಳಿ ನಡೆಸುತ್ತಿರುವ ಆಹಾರ ಸುರಕ್ಷತಾ ಇಲಾಖೆ (Food Saftey Department) ಇದೀಗ ಮಸಾಲೆ ಪದಾರ್ಥಗಳತ್ತವೂ (Masala Items) ಗಮನ ಹರಿಸಿದೆ. ಗರಂ ಮಸಾಲೆ, ಚಿಕನ್ ಮಸಾಲೆ, ಬಿರಿಯಾನಿ ಪೌಡರ್, ಸಾಂಬಾರ್ ಪೌಡರ್, ರಸಂ ಪೌಡರ್ ಸೇರಿದಂತೆ ರೆಡಿಮೇಡ್ ಮಸಾಲೆಗಳಲ್ಲಿ ಕೃತಕ ಬಣ್ಣ ಹಾಗೂ ಇತರ ರಾಸಾಯನಿಕಗಳ ಬಳಕೆಯ ಕುರಿತು ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಇಲಾಖೆ ಈ ಕ್ರಮ ಕೈಗೊಂಡಿದೆ. ಅಡುಗೆಗೆ…

Read More

Vehicle Emission Test Price Hike: ವಾಹನ ಸವಾರರ ಜೇಬಿಗೆ ಕತ್ತರಿ: ರಾಜ್ಯದಲ್ಲಿ ಎಮಿಷನ್ ಟೆಸ್ಟ್ ದರ ಏರಿಕೆ! – Kannada News | Karnataka Vehicle Emission Test Price Hike: New Rates for Bike, Car and Commercial Vehicles

ಬೆಂಗಳೂರು, ಆಗಸ್ಟ್ 17: ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮತ್ತೊಂದು ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ಇಂದಿನಿಂದಲೇ ಜಾರಿಗೆ ಬರುವಂತೆ ವಾಹನಗಳ ಎಮಿಷನ್ ಸರ್ಟಿಫಿಕೇಟ್ (ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ/PUC) ದರವನ್ನು ಹೆಚ್ಚಳ ಮಾಡಲಾಗಿದೆ. 4 ವರ್ಷಗಳ ಬಳಿಕ ಮತ್ತೆ ಏರಿಕೆಯಾದ ಎಮಿಷನ್ ದರ ದ್ವಿಚಕ್ರ ವಾಹನ, ಆಟೋ, ಕಾರು, ಲಾರಿ ಹಾಗೂ ಬಸ್ ಸೇರಿದಂತೆ ಯಾವುದೇ ಮಾದರಿಯ ವಾಹನ ಮಾಲೀಕರಿಗೂ ಇಂದಿನಿಂದ ಈ ದರ ಏರಿಕೆಯ…

Read More

ಚಾಂಪಿಯನ್ ಪಟ್ಟ ಅಲಂಕರಿಸಿದ ‘ಸೂಪರ್ ಜೈಂಟ್ಸ್​’ – Kannada News | Manchester Super Giants win The Hundred Title

ದಿ ಹಂಡ್ರೆಡ್ ಲೀಗ್​ನಲ್ಲಿ ಮ್ಯಾಚೆಂಸ್ಟರ್ ಸೂಪರ್ ಜೈಂಟ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.  ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆದ ರೋಮಾಂಚನಕಾರಿ ಫೈನಲ್ ಪಂದ್ಯದಲ್ಲಿ ಟ್ರೆಂಟ್ ರಾಕೆಟ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ರಾಕೆಟ್ಸ್ ಬೃಹತ್ ಮೊತ್ತ: ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟ್ರೆಂಟ್…

Read More

‘ಕನ್ನಡ್’ ಅಲ್ಲ ‘ಕನ್ನಡ’: ರಜತ್ ಶರ್ಮಾಗೆ ವೇದಿಕೆಯಲ್ಲೇ ಪ್ರೀತಿಯಿಂದ ತಿದ್ದಿ ಹೇಳಿದ ನಟ ಯಶ್ – Kannada News | Yash Corrects Rajat Sharma On Aap Ki Adalat It Is Kannada, Not Kannad

ರಾಕಿಂಗ್ ಸ್ಟಾರ್ ಯಶ್ ಅವರಿಗೆ (Yash) ಮಾತೃಭಾಷೆ ಕನ್ನಡದ ಮೇಲಿರುವ ಗೌರವ ಮತ್ತು ಪ್ರೀತಿ ಅಪಾರ. ಜಾಗತಿಕ ಮಟ್ಟದಲ್ಲಿ ಕನ್ನಡ ಚಿತ್ರರಂಗದ ಹಿರಿಮೆಯನ್ನು ಎತ್ತಿಹಿಡಿದಿರುವ ಯಶ್, ವಿದೇಶಿ ಅಥವಾ ರಾಷ್ಟ್ರೀಯ ವೇದಿಕೆಗಳಲ್ಲಾದರೂ ಸರಿ, ಕನ್ನಡ ಭಾಷೆಯನ್ನು ಸರಿಯಾಗಿ ಉಚ್ಚರಿಸಬೇಕು ಎಂಬುದನ್ನು ಪ್ರತಿಪಾದಿಸುತ್ತಾ ಬಂದಿದ್ದಾರೆ. ಇತ್ತೀಚೆಗೆ ಪ್ರಸಿದ್ಧ ‘ಆಪ್ ಕೀ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಇಂತಹದೇ ಒಂದು ಆಸಕ್ತಿಕರ ಪ್ರಸಂಗ ನಡೆಯಿತು. ಕನ್ನಡವನ್ನು ಯಾರೇ ತಪ್ಪಾಗಿ ಮಾತನಾಡಿದರೂ ಯಶ್ ಅವರು ಸಹಿಸಿಕೊಳ್ಳೋದಿಲ್ಲ. ಹಾಗಂತ ಸಿಟ್ಟು ಮಾಡಿಕೊಳ್ಳುವುದಿಲ್ಲ. ಬದಲಿಗೆ ಪ್ರೀತಿಯಿಂದಲೇ…

Read More

Bengaluru Air Quality: ಬಿಟಿಎಂ ಲೇಔಟ್ ಮತ್ತು ಬನಶಂಕರಿ ಸೇರಿದಂತೆ ಬೆಂಗಳೂರಿನ ವಾಯುಗುಣಮಟ್ಟದಲ್ಲಿ ಸುಧಾರಣೆ – Kannada News | Karnataka AQI Today: August 17 Bengaluru Air Quality, City Updates

ಬೆಂಗಳೂರು, ಆಗಸ್ಟ್ 17: ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚಿ (AQI) ಒಟ್ಟಾರೆಯಾಗಿ ಸಾಧಾರಣ ಹಾಗೂ ಉತ್ತಮ ಮಟ್ಟದಲ್ಲಿದೆ. ಮಳೆಗಾಲದ ವಾತಾವರಣ ಮತ್ತು ಗಾಳಿಯ ಚಲನೆಯಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ. ಬೆಂಗಳೂರಿನ ಇಂದಿನ ವಾಯು ಗುಣಮಟ್ಟ (AQI) ಇಂದು ಬೆಂಗಳೂರಿನ ಸರಾಸರಿ AQI ಮಟ್ಟ 63 ರಿಂದ 64ರಷ್ಟಿದ್ದು, ಇದನ್ನು ‘ಸಾಧಾರಣ’ ಭಾಗದಲ್ಲಿ ವರ್ಗೀಕರಿಸಲಾಗಿದೆ. ನಗರದಲ್ಲಿ PM2.5 ಮಟ್ಟವು ಸುಮಾರು 18 µg/m³ ಮತ್ತು PM10 ಮಟ್ಟವು 62…

Read More

ಕೇವಲ ಸಂಭಾವನೆ ಅಲ್ಲ, ಲಾಭದಲ್ಲೂ ಪಾಲು ಪಡೆಯುತ್ತಾರೆ ಯಶ್; ‘ಕೆಜಿಎಫ್’ಗೂ ಮೊದಲಿನಿಂದಲೇ ಈ ತಂತ್ರ – Kannada News | Earn together, lose together Yash on charging Rs 50 cr and his profit sharing model

ರಾಕಿಂಗ್ ಸ್ಟಾರ್ ಯಶ್ (Yash) ಭಾರತದ ಅತ್ಯಧಿಕ ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ಅವರು ಪ್ರತಿ ಸಿನಿಮಾಗೆ 50 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಪಡೆಯುತ್ತಾರೆ ಎಂಬ ಮಾತಿದೆ. ಆದರೆ ಅವರು ಕೇವಲ ನಿಗದಿತ ಸಂಭಾವನೆಗೆ ಸೀಮಿತವಾಗಿಲ್ಲ. ಲಾಭ ಹಂಚಿಕೆ ಮಾದರಿಯ ಮೂಲಕ ಅವರು ಇನ್ನಷ್ಟು ಹೆಚ್ಚು ಗಳಿಕೆ ಮಾಡುತ್ತಿದ್ದಾರೆ. ಈ ಕುರಿತು ಯಶ್ ಇತ್ತೀಚೆಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಆಪ್ ಕಿ ಅದಾಲತ್’ ಶೋನಲ್ಲಿ ಮಾತನಾಡಿದ್ದಾರೆ ಯಶ್. ತಾವು ಎಂದಿಗೂ ಕೇವಲ ನಟನಾಗಿ ಕೆಲಸ ಮಾಡಿಲ್ಲ…

Read More

ಬೆಂಗಳೂರಿನಲ್ಲಿ 800 ಕೆಜಿಗೂ ಹೆಚ್ಚು ಜಿಲೆಟಿನ್ ಸೀಜ್: ಬಂಡೆ ಒಡೆಯಲು ಅಕ್ರಮ ಸ್ಫೋಟ ಆರೋಪ – Kannada News | Bengaluru: Over 800 Kg Gelatin Seized in Bellandur Over Alleged Illegal Blasting

ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ 800 ಕೆಜಿಗೂ ಹೆಚ್ಚು ಜಿಲೆಟಿನ್ ಪತ್ತೆImage Credit source: tv9 ಬೆಂಗಳೂರು, ಆಗಸ್ಟ್ 17: ಬೆಂಗಳೂರು (Bengaluru) ನಗರದ ಬೆಳ್ಳಂದೂರು ಸಮೀಪದ ಭೋಗನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಅಕ್ರಮವಾಗಿ ಜಿಲೆಟಿನ್ (Gelatin) ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು 800 ಕೆಜಿಗೂ ಹೆಚ್ಚು ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ. ಭೋಗನಹಳ್ಳಿಯಲ್ಲಿ ಆದರ್ಶ ಕಂಪನಿಯಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯ ವೇಳೆ ದೊಡ್ಡ ಕಲ್ಲಿನ ಬಂಡೆಗಳು ಪತ್ತೆಯಾಗಿವೆ. ಅವುಗಳನ್ನು…

Read More

Karnataka Weather Forecast: ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ, ಒಳನಾಡಿನಲ್ಲೂ ಮಳೆಯ ಮುನ್ಸೂಚನೆ – Kannada News | Karnataka Weather Forecast: Rain Likely Across Coastal and Interior Districts on August 17 18

ಬೆಂಗಳೂರು, ಆಗಸ್ಟ್ 17: ಕರ್ನಾಟಕದಲ್ಲಿ (Karnataka) ಮಳೆಯ ವಾತಾವರಣ ಮುಂದುವರಿದಿದ್ದು, ಆಗಸ್ಟ್ 17 ಮತ್ತು 18ರಂದು ಕರಾವಳಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ (Weather Forecast) ನೀಡಲಾಗಿದೆ. ವಾಯವ್ಯ ಬಂಗಾಳ ಕೊಲ್ಲಿ ಹಾಗೂ ಪಶ್ಚಿಮ ಬಂಗಾಳ-ಉತ್ತರ ಒಡಿಶಾ ಕರಾವಳಿ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಆಗಸ್ಟ್ 16ರ ಬೆಳಗ್ಗೆ 8.30ರ ವೇಳೆಗೆ ಅದೇ ಪ್ರದೇಶದಲ್ಲಿ ಮುಂದುವರಿದಿತ್ತು. ಇದು ಸಮುದ್ರಮಟ್ಟದಿಂದ ಸುಮಾರು…

Read More

Horoscope Today: ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ! – Kannada News | Horoscope Today 17th August​ 2026: Nagpanchami Festival, Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 17, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ನಾಗಪಂಚಮಿ ಹಾಗೂ ಸೂರ್ಯ ಸಂಕ್ರಮಣ (ಸಿಂಹ ರಾಶಿಗೆ ಸೂರ್ಯ ಪ್ರವೇಶ) ದ ವಿಶೇಷ ಪರ್ವ ದಿನವಾಗಿದೆ. ನಾಗಪಂಚಮಿ, ಚರ್ಮವ್ಯಾಧಿ, ಸಂತಾನ, ವಿವಾಹ ಅಥವಾ ಆರೋಗ್ಯಕ್ಕಾಗಿ ನಾಗ ಪೂಜೆ ಮತ್ತು ವ್ರತಗಳನ್ನು ಆಚರಿಸಲು ಬಹು ವಿಶೇಷ ದಿನವಾಗಿದೆ. ವಿಷ್ಣುವಿನ ವಾಹನವಾದ ಗರುಡನ ಪೂಜೆಯೂ ಕೂಡ ವಿಷಪೂರಿತ ಅಂಶಗಳನ್ನು…

Read More