ಅಮೆರಿಕದ ಮಸೀದಿಯೊಳಗೆ ಮನಬಂದಂತೆ ಗುಂಡಿನ ದಾಳಿ, ಮೂವರು ಸಾವು, ಇಬ್ಬರು ಶಂಕಿತರು ಕೂಡ ಶವವಾಗಿ ಪತ್ತೆ – Kannada News | Shooting at Major Mosque in San Diego Leaves Three Dead

ಸ್ಯಾನ್ ಡಿಯಾಗೋ, ಮೇ 19: ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿ(Mosque)ಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇತ್ತ ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ.

ಈ ಇಸ್ಲಾಮಿಕ್ ಕೇಂದ್ರವು ಸ್ಯಾನ್ ಡಿಯಾಗೋ ಕೌಂಟಿಯಲ್ಲೇ ಅತ್ಯಂತ ದೊಡ್ಡ ಮಸೀದಿಯಾಗಿದ್ದು, ಇಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಅರೇಬಿಕ್ ಭಾಷೆ, ಇಸ್ಲಾಮಿಕ್ ಅಧ್ಯಯನಗಳು ಮತ್ತು ಕುರಾನ್ ಬೋಧನೆ ಮಾಡುವ ‘ಅಲ್ ರಶೀದ್’ ಶಾಲೆ ಕೂಡ ಇದೆ. ಗುಂಡಿನ ದಾಳಿ ನಡೆದ ತಕ್ಷಣ ಇಡೀ ಪ್ರದೇಶವನ್ನು ಹತ್ತಾರು ಪೊಲೀಸ್ ವಾಹನಗಳು ಸುತ್ತುವರೆದವು. ಮಸೀದಿಯ ಪಾರ್ಕಿಂಗ್ ಸ್ಥಳದಿಂದ ಡಜನ್‌ಗಿಂತಲೂ ಹೆಚ್ಚು ಪುಟ್ಟ ಮಕ್ಕಳು ಪ್ರಾಣಭಯದಿಂದ ಪರಸ್ಪರ ಕೈ ಕೈ ಹಿಡಿದುಕೊಂಡು ಸುರಕ್ಷಿತವಾಗಿ ಹೊರಗೆ ಬರುತ್ತಿರುವ ದೃಶ್ಯಗಳು ಹೆಲಿಕಾಪ್ಟರ್ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ನೋಡುಗರ ಕರುಳು ಹಿಂಡುವಂತಿತ್ತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಸೀದಿಯ ಇಮಾಮ್ ತಹಾ ಹಸಾನೆ, ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ನಮ್ಮ ಕೇಂದ್ರವು ಸದಾ ಅಂತರ್​ಧರ್ಮೀಯ ಸೌಹಾರ್ದತೆ ಮತ್ತು ಸಮುದಾಯ ನಿರ್ಮಾಣದ ಮೇಲೆ ಕೆಲಸ ಮಾಡುತ್ತದೆ. ಇಸ್ಲಾಂ ಧರ್ಮದ ಬಗ್ಗೆ ತಿಳಿದುಕೊಳ್ಳಲು ಮುಸ್ಲಿಮೇತರರ ದೊಡ್ಡ ಗುಂಪೊಂದು ಮುಂಜಾನೆ ಮಸೀದಿಗೆ ಬಂದಿತ್ತು. ಅಂತಹ ಶಾಂತಿ ಬಯಸುವ ಜಾಗದಲ್ಲಿ ಈ ರಕ್ತಪಾತ ನಡೆದಿದೆ ಎಂದು ಅವರು ಕಣ್ಣೀರಿಟ್ಟಿದ್ದಾರೆ.\

ಮತ್ತಷ್ಟು ಓದಿ: ಹಫ್ತಾ ವಸೂಲಿ ಮಾಡುತ್ತ ಏರಿಯಾದಲ್ಲಿ ಹವಾ, ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ

ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ಮಾತನಾಡಿ, ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ ಇದನ್ನು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿದ ‘ದ್ವೇಷಾಪರಾಧ’ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ದಾಳಿ ನಡೆಸಿದ ಹದಿಹರೆಯದ ಶೂಟರ್‌ಗಳು ಯಾರು ಮತ್ತು ಅವರ ಹಿನ್ನೆಲೆ ಏನು ಎಂಬ ಹೆಚ್ಚಿನ ವಿವರಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ ಎಂದಿದ್ದಾರೆ.

ಕ್ಯಾಲಿಫೋರ್ನಿಯಾ ಗವರ್ನರ್ ಗ್ಯಾವಿನ್ ನ್ಯೂಸಮ್ ಅವರ ಕಚೇರಿಯು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿದೆ. “ಸಮುದಾಯವನ್ನು ರಕ್ಷಿಸಲು ಜೀವದ ಹಂಗು ತೊರೆದು ತಕ್ಷಣ ಸ್ಪಂದಿಸಿದ ರಕ್ಷಣಾ ಸಿಬ್ಬಂದಿಗೆ ಧನ್ಯವಾದಗಳು. ಸಾರ್ವಜನಿಕರು ಸ್ಥಳೀಯ ಅಧಿಕಾರಿಗಳ ಮಾರ್ಗದರ್ಶನವನ್ನು ಅನುಸರಿಸಬೇಕು” ಎಂದು ಗವರ್ನರ್ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ಶಾಂತಿ ಮತ್ತು ಶಿಕ್ಷಣದ ಕೇಂದ್ರವಾಗಿದ್ದ ಸ್ಯಾನ್ ಡಿಯಾಗೋದ ಮಸೀದಿಯ ಸುತ್ತಮುತ್ತಲಿನ ಮುಸ್ಲಿಂ ಮಾರುಕಟ್ಟೆಗಳು ಮತ್ತು ನೆರೆಹೊರೆಯಲ್ಲಿ ಸದ್ಯ ಭೀತಿಯ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು – Kannada News | Indian Celebrity Divorces 2026: 5 Star Couples Whose Marriages Ended Recently

2026ರಲ್ಲಿ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ 5 ಜನಪ್ರಿಯ ಸೆಲೆಬ್ರಿಟಿ ಜೋಡಿಗಳು

ಸಿನಿಮಾ ರಂಗದ ಸೆಲೆಬ್ರಿಟಿಗಳ ವೈವಾಹಿಕ ಜೀವನದ ಏಳುಬೀಳುಗಳು ಯಾವಾಗಲೂ ಸುದ್ದಿಯಲ್ಲಿರುತ್ತವೆ. ಅದರಲ್ಲೂ 2026ರ ಆರಂಭದಿಂದ ಹಿಡಿದು ಇತ್ತೀಚಿನವರೆಗಿನ ಕೆಲವೇ ತಿಂಗಳುಗಳಲ್ಲಿ ಭಾರತೀಯ ಚಿತ್ರರಂಗ ಹಾಗೂ ಕಿರುತೆರೆಯ ಹಲವು ಸ್ಟಾರ್ ಜೋಡಿಗಳು ತಮ್ಮ ದಾಂಪತ್ಯ ಜೀವನವನ್ನು ಕೊನೆಗೊಳಿಸುವ ಮೂಲಕ ಅಭಿಮಾನಿಗಳಿಗೆ ತೀವ್ರ ಆಘಾತ ನೀಡಿವೆ. ಅಂತಹ ಪ್ರಮುಖ 5 ಸೆಲೆಬ್ರಿಟಿ ಜೋಡಿಗಳ ವಿವರ ಇಲ್ಲಿde.

1. ದಳಪತಿ ವಿಜಯ್ – ಸಂಗೀತಾ ಸ್ವರ್ಣಲಿಂಗಂ: ಕಾಲಿವುಡ್‌ನ ಸ್ಟಾರ್ ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಮತ್ತು ಸಂಗೀತಾ ಅವರ ಸುದೀರ್ಘ 27 ವರ್ಷಗಳ ಸಂಸಾರ ಇತ್ತೀಚೆಗೆ ಮುರಿದುಬಿದ್ದಿದೆ. 1999ರಲ್ಲಿ ವಿವಾಹವಾಗಿದ್ದ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ವಿಜಯ್ ಅವರಿಗೆ ಮತ್ತೊಬ್ಬ ನಟಿಯ ಜೊತೆ ಒಡನಾಟ ಇದೆ ಎಂದು ಆರೋಪಿಸಿ ಸಂಗೀತಾ ಅವರು 2026ರ ಫೆಬ್ರವರಿಯಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೂಲಕ ಈ ಹೈಪ್ರೊಫೈಲ್ ಜೋಡಿ ಬೇರ್ಪಡುವ ಸನಿಹದಲ್ಲಿದೆ.

2. ಮೌನಿ ರಾಯ್ – ಸೂರಜ್ ನಂಬಿಯಾರ್: ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಅಧಿಕೃತವಾಗಿ ತಮ್ಮ ವಿಚ್ಛೇದನವನ್ನು ಘೋಷಿಸಿದ್ದಾರೆ. 2022ರ ಜನವರಿಯಲ್ಲಿ ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದ ಈ ಜೋಡಿ, ನಾಲ್ಕು ವರ್ಷಗಳ ದಾಂಪತ್ಯದ ನಂತರ ಪರಸ್ಪರ ಒಪ್ಪಿಗೆಯಿಂದಲೇ ಬೇರೆಯಾಗುತ್ತಿರುವುದಾಗಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದೆ.

3. ಹನ್ಸಿಕಾ ಮೋಟ್ವಾನಿ – ಸೊಹೇಲ್ ಕತುರಿಯಾ: ದಕ್ಷಿಣ ಭಾರತದ ಖ್ಯಾತ ನಟಿ ಹನ್ಸಿಕಾ ಮೋಟ್ವಾನಿ ಮತ್ತು ಉದ್ಯಮಿ ಸೊಹೇಲ್ ಕತುರಿಯಾ ದಂಪತಿಗೆ 2026ರ ಮಾರ್ಚ್‌ನಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಮಂಜೂರಾಗಿದೆ. 2022ರ ಡಿಸೆಂಬರ್‌ನಲ್ಲಿ ಜೈಪುರದಲ್ಲಿ ಮದುವೆಯಾಗಿದ್ದ ಇವರು, ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದಾಗಿ 2024ರಿಂದಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ವಿಶೇಷವೆಂದರೆ ಹನ್ಸಿಕಾ ಯಾವುದೇ ಜೀವನಾಂಶ ಪಡೆದಿಲ್ಲ ಎನ್ನಲಾಗಿದೆ.

4. ಜಯ್ ಭಾನುಶಾಲಿ – ಮಾಹಿ ವಿಜ್: ಹಿಂದಿ ಕಿರುತೆರೆಯ ಅತ್ಯಂತ ನೆಚ್ಚಿನ ಜೋಡಿಯಾಗಿದ್ದ ಜಯ್ ಭಾನುಶಾಲಿ ಮತ್ತು ಮಾಹಿ ವಿಜ್ ಜನವರಿ 2026ರಲ್ಲಿ ತಮ್ಮ 14 ವರ್ಷಗಳ ದಾಂಪತ್ಯ ಜೀವನವನ್ನು ಕೊನೆಗೊಳಿಸುವುದಾಗಿ ಘೋಷಿಸಿ ಶಾಕ್ ನೀಡಿದರು. ಇಬ್ಬರ ನಡುವೆ ಯಾವುದೇ ದ್ವೇಷವಿಲ್ಲದೆ, ಒಮ್ಮತದಿಂದಲೇ ಈ ನಿರ್ಧಾರ ಕೈಗೊಂಡಿದ್ದು, ತಮ್ಮ ಮೂವರು ಮಕ್ಕಳನ್ನು ಜವಾಬ್ದಾರಿಯಿಂದ ಒಟ್ಟಿಗೆ ಸಾಕೋಣ ಎಂದು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ಬಳಿಕ ಮೌನಿ ರಾಯ್​​​ಗೆ ಸಿಕ್ಕ ಜೀವನಾಂಶ ಎಷ್ಟು? ಮಾಜಿ ಪತಿ ಹೇಳಿದ್ದಿಷ್ಟು

5. ಎವೆಲಿನ್ ಶರ್ಮಾ – ತುಶಾನ್ ಭಿಂದಿ: ‘ಯೇ ಜವಾನಿ ಹೈ ದೀವಾನಿ’ ಖ್ಯಾತಿಯ ನಟಿ ಎವೆಲಿನ್ ಶರ್ಮಾ ತಮ್ಮ ಪತಿ, ಇಂಡೋ-ಆಸ್ಟ್ರೇಲಿಯನ್ ದಂತ ವೈದ್ಯ ತುಶಾನ್ ಭಿಂದಿ ಅವರಿಂದ ವಿಚ್ಛೇದನ ಪಡೆದಿದ್ದಾರೆ. ಐದು ವರ್ಷಗಳ ಮದುವೆ ಜೀವನದ ನಂತರ ಪ್ರೀತಿಯಿಂದಲೇ ದೂರಾಗಿರುವ ಈ ಜೋಡಿ, ತಮ್ಮ ಇಬ್ಬರು ಪುಟ್ಟ ಮಕ್ಕಳ ಪಾಲನೆಯತ್ತ ಗಮನ ಹರಿಸುವುದಾಗಿ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು! – Kannada News | The Significance of Adhika Jyeshtha Masa: Rituals and Benefits

ಅಧಿಕ ಜ್ಯೇಷ್ಠ ಮಾಸದಲ್ಲಿ ವಿಷ್ಣು ಪೂಜೆಯಿಂದ ಏನೆಲ್ಲಾ ಲಾಭವಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಅಧಿಕ ಜೇಷ್ಠ ಮಾಸವು ಹಿಂದೂ ಚಾಂದ್ರಮಾನ ಪದ್ಧತಿಯಲ್ಲಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾದ ಮಾಸವಾಗಿದೆ. ಸೂರ್ಯ ಮತ್ತು ಚಂದ್ರರ ಚಲನೆಯನ್ನು ಅವಲಂಬಿಸಿ ಇದು ಪ್ರತಿ ಮೂರು ವರ್ಷಗಳಿಗೊಮ್ಮೆ ಬರುತ್ತದೆ. ಈ ಮಾಸವನ್ನು ‘ಪುರುಷೋತ್ತಮ ಮಾಸ’ ಅಥವಾ ‘ಅಧಿಕ ಮಾಸ’ ಎಂದೂ ಕರೆಯುತ್ತಾರೆ. ‘ಅಧಿಕಸ್ಯ ಅಧಿಕ ಫಲಂ’ ಎಂಬ ನುಡಿಯಂತೆ ಈ ಮಾಸದಲ್ಲಿ ಮಾಡುವ ಪುಣ್ಯ ಕಾರ್ಯಗಳಿಗೆ ಹೆಚ್ಚಿನ ಫಲ ದೊರೆಯುತ್ತದೆ ಎಂದು ನಂಬಲಾಗಿದೆ.

ಪ್ರತಿ ಮಾಸಕ್ಕೂ ಒಬ್ಬ ಅಧಿಪತಿ ದೇವರಿರುತ್ತಾನೆ. ಆದರೆ ಅಧಿಕ ಮಾಸಕ್ಕೆ ಜವಾಬ್ದಾರಿ ವಹಿಸಿಕೊಳ್ಳಲು ದೇವರುಗಳು ಹಿಂಜರಿದಾಗ, ಸಾಕ್ಷಾತ್ ವಿಷ್ಣು ಭಗವಾನರು ಈ ಮಾಸದ ನಿರ್ವಹಣೆಯನ್ನು ವಹಿಸಿಕೊಂಡರು. ಹಾಗಾಗಿ ಇದನ್ನು ಪುರುಷೋತ್ತಮ ಮಾಸ ಎಂದು ಕರೆಯಲಾಗುತ್ತದೆ ಮತ್ತು ವಿಷ್ಣುವಿನ ಆರಾಧನೆಗೆ ಅತ್ಯಂತ ಪ್ರಶಸ್ತ ಮಾಸವಾಗಿದೆ. ಈ ತಿಂಗಳು ಪೂರ್ತಿ ವಿಷ್ಣುವೇ ಅಧಿಪತಿಯಾಗಿರುತ್ತಾನೆ. ವಿಷ್ಣು ಸಹಸ್ರನಾಮ ಪಾರಾಯಣ, ಓಂ ನಮೋ ಭಗವತೇ ವಾಸುದೇವಾಯ ಮಂತ್ರ ಜಪ, ಭಗವದ್ಗೀತೆ ಹಾಗೂ ಭಾಗವತ ಪಾರಾಯಣ, ನಾಮಸ್ಮರಣೆ ಮತ್ತು ದಾನ ಧರ್ಮಗಳು ವಿಶೇಷ ಪುಣ್ಯವನ್ನು ತರುತ್ತವೆ. ಬಡವರಿಗೆ ಅನ್ನದಾನ, ಸಹಾಯ ಮಾಡುವುದು ಅತ್ಯಂತ ಶುಭಕರ. ಈ ಮಾಸದಲ್ಲಿ ವಿವಾಹ, ಉಪನಯನ, ಗೃಹಪ್ರವೇಶ ಮುಂತಾದ ಕಾರ್ಯಗಳನ್ನು ನಿಷಿದ್ಧವೆಂದು ಪರಿಗಣಿಸಲಾಗುತ್ತದೆ. ದೇವತಾರಾಧನೆ ಮತ್ತು ಪುಣ್ಯ ಸಂಗ್ರಹಕ್ಕೆ ಈ ಮಾಸ ಅತ್ಯಂತ ಯೋಗ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ

 

Source link

ಕೊನೆ ಕ್ಷಣದಲ್ಲಿ ಇರಾನ್ ಮೇಲಿನ ಭೀಕರ ದಾಳಿ ಮುಂದೂಡಿದ ಅಮೆರಿಕ, ಗಲ್ಫ್ ರಾಷ್ಟ್ರಗಳ ಮನವಿಗೆ ಓಗೊಟ್ಟ ಟ್ರಂಪ್ – Kannada News | Donald Trump Says Planned Strike Was Delayed Amid Talks With Iran

ವಾಷಿಂಗ್ಟನ್, ಮೇ 19: ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹಾ ಯುದ್ಧದ ಭೀತಿ ಸೃಷ್ಟಿಸಿದ್ದ ಇರಾನ್ ಮೇಲಿನ ಅತ್ಯಂತ ಭೀಕರ ಮಿಲಿಟರಿ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಕೊನೆ ಕ್ಷಣದಲ್ಲಿ ಮುಂದೂಡಿದ್ದಾರೆ. ಅಮೆರಿಕದ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ  ವಿಷಯವನ್ನು ಖುದ್ದಾಗಿ ಹಂಚಿಕೊಂಡಿರುವ ಅಧ್ಯಕ್ಷ ಟ್ರಂಪ್, ಗಲ್ಫ್ ರಾಷ್ಟ್ರಗಳ ಉನ್ನತ ನಾಯಕರ ಮಧ್ಯಸ್ಥಿಕೆ ಮತ್ತು ಮನವಿಯ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮವಾದ ‘ಟ್ರುತ್ ಸೋಶಿಯಲ್’ಪೋಸ್ಟ್ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಟ್ರಂಪ್, ನಾವು ನಾಳೆಯೇ (ಬುಧವಾರ) ಇರಾನ್ ಮೇಲೆ ಅತ್ಯಂತ ಬೃಹತ್ ಮಟ್ಟದ ಮಿಲಿಟರಿ ದಾಳಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೆವು. ಆದರೆ, ನಾನು ಈ ದಾಳಿಯನ್ನು ಸದ್ಯಕ್ಕೆ ಮುಂದೂಡಿದ್ದೇವೆ. ಇದು ಸ್ವಲ್ಪ ಸಮಯದವರೆಗೆ ಇರಬಹುದು ಅಥವಾ ಇರಾನ್ ಜೊತೆಗಿನ ಮಾತುಕತೆ ಯಶಸ್ವಿಯಾದರೆ ಶಾಶ್ವತವಾಗಿಯೂ ದಾಳಿ ರದ್ದಾಗಬಹುದು ಎಂದಿದ್ದಾರೆ.

ದಾಳಿ ಮುಂದೂಡಿಕೆಯ ಹಿಂದಿರುವ ಅಸಲಿ ರಹಸ್ಯವನ್ನು ಬಿಚ್ಚಿಟ್ಟ ಟ್ರಂಪ್, ಮಧ್ಯಪ್ರಾಚ್ಯದ ಪ್ರಮುಖ ರಾಷ್ಟ್ರಗಳು ಅಮೆರಿಕದ ಬೆನ್ನಿಗೆ ನಿಂತು ಮಾತುಕತೆ ನಡೆಸಿರುವುದನ್ನು ಬಹಿರಂಗಪಡಿಸಿದರು. ಸೌದಿ ಅರೇಬಿಯಾ, ಕತಾರ್, ಯುಎಇ ಮತ್ತು ಇತರ ಕೆಲವು ಪ್ರಮುಖ ದೇಶಗಳು ನನ್ನನ್ನು ನೇರವಾಗಿ ಸಂಪರ್ಕಿಸಿ, ದಾಳಿಯನ್ನು ಕನಿಷ್ಠ 2 ರಿಂದ 3 ದಿನಗಳ ಕಾಲ ಮುಂದೂಡುವಂತೆ ವಿನಂತಿಸಿಕೊಂಡವು. ಇರಾನ್ ಜೊತೆಗೆ ಒಂದು ಮಹತ್ವದ ಒಪ್ಪಂದವನ್ನು ಮಾಡಿಕೊಳ್ಳಲು ತಾವು ಅತ್ಯಂತ ಹತ್ತಿರದಲ್ಲಿದ್ದೇವೆ ಎಂದು ಆ ದೇಶಗಳು ನಮಗೆ ಮನವರಿಕೆ ಮಾಡಿಕೊಟ್ಟಿವೆ ಎಂದು ಟ್ರಂಪ್ ತಿಳಿಸಿದರು.

ಮತ್ತಷ್ಟು ಓದಿ:

ಜಗತ್ತಿನ ಎರಡು ದೊಡ್ಡ ಶಕ್ತಿಗಳ ಸಮ್ಮಿಲನ: ಸಂಘರ್ಷ ಬೇಡ ಸಹಕಾರವಿರಲಿ ಎಂದ ಜಿನ್‌ಪಿಂಗ್

ಅಮೆರಿಕದ ಏಕೈಕ ಷರತ್ತು: ಪರಮಾಣು ಮುಕ್ತ ಇರಾನ್
ಇರಾನ್ ಜೊತೆಗಿನ ಯಾವುದೇ ಸಂಭಾವ್ಯ ಒಪ್ಪಂದಕ್ಕೆ ಅಮೆರಿಕ ವಿಧಿಸಿರುವ ಕಠಿಣ ನಿಲುವನ್ನು ಟ್ರಂಪ್ ಪುನರುಚ್ಚರಿಸಿದ್ದಾರೆ. ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಅಸ್ತ್ರಗಳನ್ನು ಹೊಂದುವಂತಿಲ್ಲ. ಈ ಷರತ್ತಿಗೆ ಒಪ್ಪಿ, ಮಧ್ಯಪ್ರಾಚ್ಯದ ನಮ್ಮ ಮಿತ್ರ ರಾಷ್ಟ್ರಗಳು ಆ ಒಪ್ಪಂದದಿಂದ ತೃಪ್ತರಾದರೆ, ಖಂಡಿತವಾಗಿಯೂ ಅಮೆರಿಕ ಕೂಡ ಸಮಾಧಾನಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಟ್ರಂಪ್ ಹೇಳಿದ್ದೇನು?

ಒಂದು ವೇಳೆ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದ್ದರೆ ಅದು ಇಡೀ ಮಧ್ಯಪ್ರಾಚ್ಯವನ್ನು ಯುದ್ಧದ ಜ್ವಾಲೆಗೆ ತಳ್ಳುತ್ತಿತ್ತು. ಆದರೆ ಸೌದಿ ಅರೇಬಿಯಾ, ಕತಾರ್ ಮತ್ತು ಯುಎಇ ಜಂಟಿಯಾಗಿ ರಾಜತಾಂತ್ರಿಕ ಚದುರಂಗದಾಟ ಆಡಿ ಟ್ರಂಪ್ ಅವರನ್ನು ಸದ್ಯಕ್ಕೆ ಶಾಂತಗೊಳಿಸುವಲ್ಲಿ ಯಶಸ್ವಿಯಾಗಿವೆ. ಮುಂದಿನ 48 ಗಂಟೆಗಳಲ್ಲಿ ಗಲ್ಫ್ ರಾಷ್ಟ್ರಗಳು ಇರಾನ್‌ನಿಂದ ಎಂತಹ ಭರವಸೆ ತರಲಿವೆ ಎಂಬುದರ ಮೇಲೆ ಜಾಗತಿಕ ಶಾಂತಿ ನಿರ್ಧಾರವಾಗಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 7:41 am, Tue, 19 May 26

Source link

ಮಗಳಿಗೆ Miyou ಎಂದು ಹೆಸರಿಟ್ಟ ಅಟ್ಲಿ-ಪ್ರಿಯಾ; ಅರ್ಥವೇನು? – Kannada News | Atlee Priya Name Daughter Miyou: Meaning, Japanese Origin and Fan Reactions

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ (Atlee) ಮತ್ತು ಅವರ ಪತ್ನಿ ಪ್ರಿಯಾ ತಮ್ಮ ಎರಡನೇ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಏಪ್ರಿಲ್ 20ರಂದು ಹೆಣ್ಣು ಮಗುವನ್ನು ಸ್ವಾಗತಿಸಿದ್ದ ಈ ಜೋಡಿ, ಈಗ ಮಗಳಿಗೆ ‘ಮಿಯು’ (Miyou) ಎಂದು ನಾಮಕರಣ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಮಗುವಿನ ಪುಟ್ಟ ಕೈಯನ್ನು ಹಿಡಿದುಕೊಂಡಿರುವ ಸುಂದರವಾದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಅಟ್ಲಿ ದಂಪತಿ ಈ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಅಟ್ಲಿ ಮತ್ತು ಪ್ರಿಯಾ ಇಟ್ಟಿರುವ ಈ ‘ಮಿಯು’ ಹೆಸರು ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಇದು ಅಪರೂಪದಲ್ಲೇ ಅಪರೂಪದ ಹೆಸರು. ಇದು ಭಾರತ ಅಥವಾ ಸಂಸ್ಕೃತ ಮೂಲದ ಹೆಸರಲ್ಲ. ಈ ಹೆಸರು ಜಪಾನ್ ಪ್ರಭಾವವನ್ನು ಹೊಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಹೆಸರಿನ ಅರ್ಥವನ್ನು ಹಂಚಿಕೊಂಡಿರುವ ದಂಪತಿ, ಮಿಯು ಎಂದರೆ ಸೌಂದರ್ಯ, ಸೌಮ್ಯತೆ ಮತ್ತು ಪ್ರೀತಿ ಎಂದು ಬರೆದುಕೊಂಡಿದ್ದಾರೆ.

ಜಪಾನಿ ಭಾಷೆಯ ಪ್ರಕಾರ, ಈ ಹೆಸರಿನಲ್ಲಿರುವ ಮಿ (Mi) ಎಂದರೆ ‘ಸುಂದರ’ ಮತ್ತು ‘ಯು’ ಎಂದರೆ ಸೌಮ್ಯ ಅಥವಾ ಶ್ರೇಷ್ಠ ಎಂಬ ಅರ್ಥ ಬರುತ್ತದೆ. ಈ ವಿಭಿನ್ನ ಹಾಗೂ ಅರ್ಥಪೂರ್ಣ ಹೆಸರನ್ನು ಕೇಳಿ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ದಂಪತಿಗೆ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಅಟ್ಲಿ-ಪ್ರಿಯಾ ದಂಪತಿಗೆ 2023ರ ಜನವರಿಯಲ್ಲಿ ಗಂಡು ಮಗು ಜನಿಸಿತ್ತು. ಆ ಮಗುವಿಗೆ ಮೀರ್ ಎಂದು ಹೆಸರನ್ನು ಇಟ್ಟಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಅಟ್ಲಿ ಪತ್ನಿ ಪ್ರಿಯಾ; ಸಂಭ್ರಮದಲ್ಲಿ ‘ರಾಕಾ’ ಸಿನಿಮಾ ನಿರ್ದೇಶಕ

ಸಿನಿಮಾ ವಿಷಯಕ್ಕೆ ಬರೋದಾದರೆ ಬಾಲಿವುಡ್‌ನಲ್ಲಿ ಜವಾನ್ ಮೂಲಕ ಬ್ಲಾಕ್‌ಬಸ್ಟರ್ ಸಿನಿಮಾ ನೀಡಿದ ಬಳಿಕ, ಅಟ್ಲಿ ಈಗ ತಮ್ಮ ಮುಂದಿನ ಬಹುಭಾಷಾ ಚಿತ್ರ ‘ರಾಕಾ’ (Raaka) ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮತ್ತು ದೀಪಿಕಾ ಪಡುಕೋಣೆ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಿಸುತ್ತಿರುವ ಈ ಚಿತ್ರದ ಅಲ್ಲು ಅರ್ಜುನ್ ಅವರ ಫಸ್ಟ್‌ ಲುಕ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಭಾರಿ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bangalore rains: ಅರ್ಧ ಗಂಟೆಯ ಭಾರಿ ಮಳೆಗೇ ನಲುಗಿದ ಬೆಂಗಳೂರು, ಅವಾಂತರಗಳ ಸರಮಾಲೆ

Source link

Video: ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ – Kannada News | Two Visitors Arrested After Entering Monkey Enclosure at Punch The Monkey’s Zoo

ಟೋಕಿಯೋ, ಮೇ 19: ಜಪಾನಿನಲ್ಲಿ ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಟೋಕಿಯೋ ಉಪನಗರ ಚಿಬಾದಲ್ಲಿರುವ ಪ್ರಸಿದ್ಧ ಇಚಿಕಾವಾ ಸಿಟಿ ಮೃಗಾಲಯದಲ್ಲಿ ಈ ಘಟನೆ ನಡೆದಿದ್ದು, ಕ್ರಿಪ್ಟೋಕರೆನ್ಸಿ ಪ್ರಚಾರಕ್ಕಾಗಿ ಇವರು ಈ ಹುಚ್ಚು ಸಾಹಸಕ್ಕೆ ಕೈಹಾಕಿದ್ದರು ಎನ್ನಲಾಗಿದೆ.

ಬಂಧಿತರನ್ನು 24 ವರ್ಷದ ರೀಡ್ ಜಹ್ನಾಯಿ ಡೇಸನ್ ಮತ್ತು 27 ವರ್ಷದ ನೀಲ್ ಜಬಾಹ್ರಿ ಡುವಾನ್ ಎಂದು ಗುರುತಿಸಲಾಗಿದೆ. ವೈರಲ್ ಆಗಿರುವ ವಿಡಿಯೋ ತುಣುಕುಗಳ ಪ್ರಕಾರ, ಡೇಸನ್ ನೀಲಿ ಬಣ್ಣದ ಸೂಟ್ ಧರಿಸಿ, ಮುಖಕ್ಕೆ ನಗುತ್ತಿರುವ ದೊಡ್ಡ ಎಮೋಜಿ ಹಾಕಿಕೊಂಡು ಮೃಗಾಲಯದ ರಕ್ಷಣಾ ಬೇಲಿಯನ್ನು ಜಿಗಿದು ಕೋತಿಗಳ ಆವರಣದೊಳಗೆ ನುಗ್ಗಿದ್ದರು, ಮತ್ತೊಬ್ಬ ಆರೋಪಿ ಡುವಾನ್ ಈ ಇಡೀ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿದ್ದ.

ಡೇಸನ್ ಧರಿಸಿದ್ದ ವಿಚಿತ್ರ ಉಡುಗೆ ಮತ್ತು ಎಮೋಜಿ ಮಾಸ್ಕ್, ಡಿಜಿಟಲ್ ಹಣವಾದ ಮೆಮೆಕಾಯಿನ್ ಕ್ರಿಪ್ಟೋಕರೆನ್ಸಿಗಳನ್ನು ಪ್ರಚಾರ ಮಾಡಲು ಬಳಸುವ ಸಂಕೇತವಾಗಿತ್ತು. ಮೃಗಾಲಯದ ಭದ್ರತಾ ಸಿಬ್ಬಂದಿ ತಕ್ಷಣವೇ ಅಲರ್ಟ್ ಆಗಿ ಇಬ್ಬರನ್ನೂ ವಶಕ್ಕೆ ಪಡೆದಿದ್ದರಿಂದ, ಅವರು ಪಂಚ್ ಅಥವಾ ಅಲ್ಲಿನ ಇತರ ಯಾವುದೇ ಕೋತಿಗಳಿಗೆ ಹಾನಿ ಮಾಡಲು ಸಾಧ್ಯವಾಗಲಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗೋಮಾಂಸ ಮತ್ತು ಅಶ್ಲೀಲ ಸಿನಿಮಾ ನಿಷೇಧವನ್ನು ಖಂಡಿಸಿದ್ದ ಕಿಯಾರಾ ಅಡ್ವಾಣಿ – Kannada News | Kiara Advani’s Decade Old Statement On Beef And P rn Bans Sparks Fresh Controversy

ಸೆಲೆಬ್ರಿಟಿಗಳು ಒಮ್ಮೊಮ್ಮೆ ನೀಡುವ ಹೇಳಿಕೆ ಅವರಿಗೆ ಮುಳುವಾಗುತ್ತದೆ. ಎಷ್ಟೋ ವರ್ಷಗಳ ಹಿಂದೆ ನೀಡಿದ ಹೇಳಿಕೆ ಮತ್ತೆ ಮತ್ತೆ ಚರ್ಚೆ ಆಗುತ್ತದೆ. ಈಗ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ದಶಕಗಳ ಹಿಂದೆ ಮುಂಬೈನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಿಯಾರಾ ನೀಡಿದ್ದ ಹೇಳಿಕೆ ಇದಾಗಿದೆ. ಗೋಮಾಂಸ ಹಾಗೂ ಅಶ್ಲೀಲ ಸಿನಿಮಾ ಬ್ಯಾನ್ ವಿಷಯವಾಗಿ ಅವರು ಮಾತನಾಡಿದ್ದರು.

1. ಕಿಯಾರಾ ಅಡ್ವಾಣಿ ವೈರಲ್ ವಿಡಿಯೋ 

2. ಅಶ್ಲೀಲ ಸೈಟ್ ಹಾಗೂ ಗೋಮಾಂಸ ಬಗ್ಗೆ ಹೇಳಿಕೆ

3. ದಶಕಗಳ ಬಳಿಕ ವೈರಲ್ ಆಯ್ತು ವಿಡಿಯೋ

2015ರಲ್ಲಿ ಮಹಾರಾಷ್ಟ್ರ ಸರ್ಕಾರ ಗೋಮಾಂಸ ಮಾರಾಟ ಮತ್ತು ಸಂಗ್ರಹಣೆಯನ್ನು ನಿಷೇಧಿಸಿತ್ತು. ಕೇಂದ್ರ ಸರ್ಕಾರ ಅಶ್ಲೀಲ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿತ್ತು. ಈ ಬಗ್ಗೆ ಕಿಯಾರಾ ಈ ಪ್ರತಿಕ್ರಿಯೆ ನೀಡಿದ್ದರು. ಸೆನ್ಸಾರ್‌ಶಿಪ್ ಮತ್ತು ವಾಕ್ ಸ್ವಾತಂತ್ರ್ಯದ ಬಗ್ಗೆ ಮಾತನಾಡಿದ್ದ ಅವರು, ‘ಮೊದಲು ಗೋಮಾಂಸ, ಈಗ ಪೋರ್ನ್ ನಿಷೇಧಿಸಲಾಗಿದೆ. ಮುಂದೆ ಏನಾಗುತ್ತದೆಯೋ ಯಾರಿಗೂ ಗೊತ್ತಿಲ್ಲ. ಇದು ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನೇ ಕಸಿದುಕೊಳ್ಳುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಗಳು ಬೆಳೆದು ದೊಡ್ಡವಳಾದಮೇಲೆ ಬಾಯ್​​ಫ್ರೆಂಡ್ ಮಾಡಿಕೊಂಡ್ರೆ? ಕಿಯಾರಾ ಕೊಟ್ಟ ಉತ್ತರ ಏನು?

ಈ ಹಳೇ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಎರಡು ಬಣಗಳಾಗಿ ವಿಂಗಡಣೆಯಾಗಿದ್ದಾರೆ. ಕೆಲವರು ಕಿಯಾರಾ ಅವರನ್ನು ದೇಶವಿರೋಧಿ ಎಂದು ಟೀಕಿಸಿದರೆ, ಇನ್ನು ಕೆಲವರು ‘ಇದು ಹತ್ತು ವರ್ಷಗಳ ಹಳೆಯ ವಿಡಿಯೋ, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ’ ಎಂದು ನಟಿಯ ಬೆಂಬಲಕ್ಕೆ ನಿಂತಿದ್ದಾರೆ.

ಯಶ್ ಜೊತೆ ‘ಟಾಕ್ಸಿಕ್’ ಚಿತ್ರದಲ್ಲಿ ಕಿಯಾರಾ

ನಟಿ ಕಿಯಾರಾ ಅಡ್ವಾಣಿ ಸದ್ಯ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ, ಗೀತು ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ತಾಯಿಯಾಗಿರುವ ಕಿಯಾರಾ, ಈ ಸಾಹಸ ಪ್ರಧಾನ ಆಕ್ಷನ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್​ಗೆ  ದೊಡ್ಡ ಮಟ್ಟದಲ್ಲಿ ಹೆಜ್ಜೆ ಇಡುತ್ತಿದ್ದಾರೆ. ಅವರ ಪಾತ್ರದ ಮೇಲೆ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Petrol Diesel Price Hike: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್ – Kannada News | Petrol, Diesel Price Hike: Fuel Prices Increase Again by 90 Paise

ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್, ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ!

ಬೆಂಗಳೂರು, ಮೇ 19: ಕಳೆದ ಶುಕ್ರವಾರದಂದು (ಮೇ 15) ಇಂಧನ ದರ 3 ರೂ.ನಷ್ಟು ಏರಿಕೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಮ್ಮೆ ಪೆಟ್ರೋಲ್, ಡೀಸೆಲ್ (Petrol, Diesel) ದರದಲ್ಲಿ 90 ಪೈಸೆ ಏರಿಕೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿದ್ದು, ಇದರಿಂದ ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.

(ಮಾಹಿತಿ ಅಪ್ಡೇಟ್ ಆಗುತ್ತಿದೆ)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 6:50 am, Tue, 19 May 26

Source link

ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಹಲವೆಡೆ ಭಾರೀ ಅವಾಂತರ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು – Kannada News | Bengaluru Rain: Over 300 Houses Drowned as Stormwater Drain Overflows into Nagawara Layout; HBR Layout Waterlogged

ಬೆಂಗಳೂರು, ಮೇ 19: ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಗೆ ನಾಗವಾರದ ಎಂಎಸ್ ರಾಮಯ್ಯ ನಾರ್ತ್ ಸಿಟಿ ಲೇಔಟ್‌ನಲ್ಲಿ ಭಾರಿ ಅವಾಂತರ ಸಂಭವಿಸಿದೆ. ರಾಜಕಾಲುವೆಯ ಕೊಳಚೆ ನೀರು ಲೇಔಟ್ ಒಳಗೆ ನುಗ್ಗಿ ಸುಮಾರು 300ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಹತ್ತು ಕ್ರಾಸ್‌ಗಳಲ್ಲಿ ಏಳಕ್ಕೂ ಹೆಚ್ಚು ಕ್ರಾಸ್‌ಗಳು ಸಂಪೂರ್ಣವಾಗಿ ಮುಳುಗಿವೆ. ರಾಜಕಾಲುವೆ ಅಗಲೀಕರಣದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಹಳೆ ಕಾಲುವೆಯನ್ನು ಒಡೆಯಲಾಗಿದ್ದರಿಂದ ನೀರಿನ ಹರಿವು ಹೆಚ್ಚಾಗಿ ಈ ಅವಾಂತರಕ್ಕೆ ಕಾರಣವಾಗಿದೆ.

ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದಿದೆ. ಮಳೆಗಾಲ ಹತ್ತಿರ ಬಂದಾಗ ಕಾಮಗಾರಿ ಆರಂಭಿಸಿರುವುದು ಮತ್ತು ಅದನ್ನು ಪೂರ್ಣಗೊಳಿಸದಿರುವುದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯದಿಂದಲೇ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ನಿವಾಸಿಗಳು ತಮ್ಮ ಮನೆಗಳಿಗೆ ನುಗ್ಗಿದ ನೀರನ್ನು ಹೊರಹಾಕಲು ಪರದಾಡುತ್ತಿದ್ದಾರೆ.

ಮತ್ತೊಂದೆಡೆ, HBR ಲೇಔಟ್​ನಲ್ಲಿ ರಸ್ತೆಗಳು ಜಲಾವೃತಗೊಂದು ಸ್ಥಳೀಯರು ಪರದಾಡುವಂತಾಯಿತು. ಹೊರಮಾವು ಬಳಿಯ SLV ವಜ್ರ ಅಪಾರ್ಟ್ಮೆಂಟ್​ನಲ್ಲೂ ಮಳೆಯಿಂದಾಗಿ ಸಂಕಷ್ಟ ಎದುರಾಯಿತು. ಬೆಲೆಬಾಳುವ ಕಾರುಗಳು ಜಲಾವೃತವಾಗಿದ್ದು, ತುರ್ತು ಸೇವೆ ಇಲ್ಲದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version