ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ಕೋಲಾರ, ಮಾರ್ಚ್ 18: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ. ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು ಮನೋಬಲಕ್ಕೆ ಮಾದರಿಯಾಗಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈಗಾಗಲೇ ಒಂದು ಶಸ್ತ್ರಚಿಕಿತ್ಸೆ ನಡೆದಿದ್ದು, ಇನ್ನೂ ಎರಡು ಶಸ್ತ್ರಚಿಕಿತ್ಸೆಗಳು ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಳ್ಳದೆ ಕುಸುಮಾ ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಾಳೆ. ಪರೀಕ್ಷಾ ಕೇಂದ್ರದಲ್ಲಿ ಸ್ಟ್ರೆಚರ್ ಬೆಡ್ ಮೇಲೆ ಮಲಗಿಕೊಂಡೇ ಆಕೆ ಪರೀಕ್ಷೆ ಬರೆದಿದ್ದು, ಆಕೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದಾರೆ. ಕುಸುಮಾಳ ಹಠ, ಪರಿಶ್ರಮ ಮತ್ತು ಶಿಕ್ಷಣದ ಮೇಲಿನ ಬದ್ಧತೆ ಇದೀಗ ಅನೇಕರಿಗೆ ಸ್ಪೂರ್ತಿಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

BOB Capital Markets: 103 ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ; ಪದವೀಧರರಿಗೆ ಸುವರ್ಣಕಾಶ

ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾದ ‘ಬಿಒಬಿ ಕ್ಯಾಪಿಟಲ್ ಮಾರ್ಕೆಟ್ಸ್ ಲಿಮಿಟೆಡ್’ (BOB Capital Markets Ltd), ದೇಶಾದ್ಯಂತ ಖಾಲಿ ಇರುವ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 103 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬ್ಯಾಂಕಿಂಗ್ ಮತ್ತು ಬಂಡವಾಳ ಮಾರುಕಟ್ಟೆ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯಡಿ ಉತ್ತರ ವಲಯಕ್ಕೆ 37, ಪಶ್ಚಿಮ ವಲಯಕ್ಕೆ 44 ಹಾಗೂ ದಕ್ಷಿಣ ಮತ್ತು ಪೂರ್ವ ವಲಯಗಳಿಗೆ ಒಟ್ಟು 22 ಹುದ್ದೆಗಳನ್ನು ಮೀಸಲಿಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಶಿಕ್ಷಣವನ್ನು ಪೂರೈಸಿರಬೇಕು. ಶೈಕ್ಷಣಿಕ ಅರ್ಹತೆಯ ಜೊತೆಗೆ ಬಂಡವಾಳ ಮಾರುಕಟ್ಟೆಯಲ್ಲಿ ಕನಿಷ್ಠ 6 ತಿಂಗಳ ಕೆಲಸದ ಅನುಭವವಿರುವುದು ಕಡ್ಡಾಯವಾಗಿದೆ. ಅದರಲ್ಲೂ ವಿಶೇಷವಾಗಿ ಡಿಮ್ಯಾಟ್ ಖಾತೆ ನಿರ್ವಹಣೆ, ಟ್ರೇಡಿಂಗ್ ಅಕೌಂಟ್, ಮತ್ತು ಸೇಲ್ಸ್ ಬ್ರೋಕಿಂಗ್ ವಿಭಾಗದಲ್ಲಿ ಪರಿಣತಿ ಹೊಂದಿರುವವರಿಗೆ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಉತ್ತಮ ಸಂವಹನ ಕೌಶಲ್ಯ, ಮಾರ್ಕೆಟಿಂಗ್ ಜ್ಞಾನ ಮತ್ತು ಗ್ರಾಹಕರೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವ ಕೌಶಲ್ಯವನ್ನು ಹೊಂದಿರಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಆಯ್ಕೆಯಾದ ಅಭ್ಯರ್ಥಿಗಳು ಹೈದರಾಬಾದ್, ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಕೇರಳ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳ ವಿವಿಧ ಶಾಖೆಗಳಲ್ಲಿ ಪೂರ್ಣ ಅವಧಿಯ ಕೆಲಸ ನಿರ್ವಹಿಸಬೇಕಾಗುತ್ತದೆ. ಆಸಕ್ತರು ತಮ್ಮ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ತಮ್ಮ ವಿವರವಾದ ರೆಸ್ಯೂಮೆಯನ್ನು careers@bobcaps.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು. ಇಮೇಲ್ ಕಳುಹಿಸುವಾಗ ಸಬ್ಜೆಕ್ಟ್ ಲೈನ್‌ನಲ್ಲಿ “Application for Business Development Manager (Off-Role)” ಎಂದು ನಮೂದಿಸುವುದು ಕಡ್ಡಾಯವಾಗಿದೆ.

ನೇಮಕಾತಿಯ ಬಗೆಗಿನ ಹೆಚ್ಚಿನ ವಿವರ ಹಾಗೂ  ಅಧಿಸೂಚನೆಯನ್ನು ಓದಲು ಅಧಿಕೃತ ವೆಬ್​ಸೈಟ್​​ಗೆ ಭೇಟಿ ನೀಡಿ: bobcaps.in/careers#jobopenings

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿಯಲ್ಲಿ ಕಟ್ಟಡಕ್ಕೆ ಬೆಂಕಿ; ಮೂರು ಮಕ್ಕಳು ಸೇರಿ ಆರು ಮಂದಿ ಬಲಿ

ನವದೆಹಲಿ, ಮಾರ್ಚ್ 18: ದೆಹಲಿಯ ಪಲಮ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ತಗುಲಿರುವ ದುರ್ಘಟನೆ (Fire Accident) ಸಂಭವಿಸಿದೆ. ಆರಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಮಾಹಿತಿ ಸದ್ಯಕ್ಕೆ ತಿಳಿದುಬಂದಿದೆ. ಇನ್ನೂ ಹಲವಾರು ಜನರಿಗೆ ಗಾಯಗಳಾಗಿವೆ. ದುರಂತದಲ್ಲಿ ಮೃತಪಟ್ಟಿರುವವರ ಪೈಕಿ ಮೂವರು ಮಕ್ಕಳಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಕಿ ದುರಂತಕ್ಕೆ ಏನು ಕಾರಣ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ.

ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಅಗ್ನಿಶಾಮಕ ವಿಭಾಗಕ್ಕೆ ಬೆಳಗ್ಗೆ 7:30ಕ್ಕೆ ಮಾಹಿತಿ ಹೋಗಿದೆ. ಕೂಡಲೇ 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಮತ್ತು ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಲಾಗಿದೆ. ಪೊಲೀಸ್ ಹಾಗು ಇತರ ತುರ್ತು ಸೇವೆಗಳೂ ಕೂಡ ಸ್ಥಳಕ್ಕೆ ಬಂದು ಕಾರ್ಯಾಚರಣೆಲ್ಲಿ ನೆರವಾಗುತ್ತಿದ್ದಾರೆ.

ಇದನ್ನೂ ಓದಿ: ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಆರು ಮಂದಿ ಮೃತಪಟ್ಟಿದ್ದು, ಕೆಲ ಜನರು ಈಗಲೂ ಕಟ್ಟಡದಲ್ಲಿ ಸಿಲುಕಿದ್ದಾರೆ. ಜಿಲ್ಲಾಡಳಿತ, ಅಗ್ನಿಶಾಮಕ ಇಲಾಖೆ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಟ್ವೀಟ್ ಮಾಡಿರುವ ಸಿಎಂ ರೇಖಾ ಗುಪ್ತಾ, ಘಟನೆಯನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಸಿನಿಮಾದ ಭೀಕರ ದೃಶ್ಯಗಳಿಗೆ ಸೆನ್ಸಾರ್ ಕತ್ತರಿ: ತಗ್ಗಿತು ಚಿತ್ರದ ಅವಧಿ

ರಣವೀರ್ ಸಿಂಗ್, ಅರ್ಜುನ್ ರಾಮ್​ಪಾಲ್, ಸಾರಾ ಅರ್ಜುನ್, ಆರ್. ಮಾಧವನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧುರಂಧರ್ 2’ (Dhurandhar 2) ಸಿನಿಮಾದ ಹೈಪ್ ಹೆಚ್ಚಾಗಿದೆ. ನಿರ್ದೇಶಕ ಆದಿತ್ಯ ಧಾರ್ ಸಾರಥ್ಯದಲ್ಲಿ ಮೂಡಿಬಂದಿರುವ ಈ ಚಿತ್ರದ ಪೇಯ್ಡ್ ಪ್ರಿವ್ಯೂಗಳು ಇಂದು (ಮಾರ್ಚ್ 18) ಆರಂಭ ಆಗುತ್ತಿವೆ. ಅದಕ್ಕೂ ಮುನ್ನ ಸೆನ್ಸಾರ್ ಮಂಡಳಿಯ (CBFC) ವರದಿ ಹೊರಬಿದ್ದಿದ್ದು, ಸಿನಿಮಾದಲ್ಲಿನ ಹಲವು ದೃಶ್ಯಗಳಿಗೆ ಕತ್ತರಿ ಹಾಕಲಾಗಿದೆ. ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಸದಸ್ಯರು ‘ಎ’ ಸರ್ಟಿಫಿಕೇಟ್ ನೀಡಿ, 21 ಬದಲಾವಣೆಗಳನ್ನು ಮಾಡುವಂತೆ ಸೂಚಿಸಲಾಗಿದೆ.

‘ಧುರಂಧರ್ 2’ ಚಿತ್ರದಲ್ಲಿ ಅತಿಯಾದ ಹಿಂಸೆಯ ದೃಶ್ಯಗಳು ಇರುವ ಕಾರಣದಿಂದ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯು ಒಟ್ಟು 21 ಪ್ರಮುಖ ಬದಲಾವಣೆಗಳನ್ನು ಸೂಚಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ದೃಶ್ಯಗಳು ಅತ್ಯಂತ ಭಯಾನಕವಾಗಿದ್ದವು ಎಂದು ವರದಿಯಾಗಿದೆ. ಕಣ್ಣುಗಳನ್ನು ಜಜ್ಜುವ ದೃಶ್ಯ, ತಕೆ ಕಡಿದು ಕಾಲಿನಿಂದ ಒದೆಯುವ ದೃಶ್ಯ, ಸಿಮೆಂಟ್ ಬ್ಲಾಕ್‌ನಿಂದ ತಲೆಗೆ ಹೊಡೆಯುವ ದೃಶ್ಯ ಹಾಗೂ ಸುತ್ತಿಗೆಯಿಂದ ತಲೆಗೆ ಬಡಿಯುವ ದೃಶ್ಯಗಳ ಅವಧಿಯನ್ನು ಕಡಿತಗೊಳಿಸಲಾಗಿದೆ.

ಕೇವಲ ಹಿಂಸಾಚಾರ ಮಾತ್ರವಲ್ಲದೆ ಕೆಲವು ಮಾಹಿತಿಗಳಿಗೆ ಸಂಬಂಧಿಸಿದ ಬದಲಾವಣೆಗಳನ್ನೂ ಮಂಡಳಿ ಸೂಚಿಸಿದೆ. ಸಬ್ಟೈಟಲ್‌ನಲ್ಲಿ ನೀಡಲಾಗಿದ್ದ ನೋಟ್ ಬ್ಯಾನ್ ದಿನಾಂಕಗಳನ್ನು ಸರಿಪಡಿಸಲಾಗಿದೆ. ‘ಲಾಹೋರ್’ ಎಂಬ ಹೆಸರನ್ನು ತೆಗೆದು ‘ದೆಹಲಿ’ ಎಂದು ಬದಲಾಯಿಸಲಾಗಿದೆ. ಅಲ್ಲದೆ, ಪ್ರಧಾನ ಮಂತ್ರಿಯವರ ಉಲ್ಲೇಖ ಮತ್ತು ಸುದ್ದಿ ತುಣುಕುಗಳನ್ನು ಬಳಸಲು ಚಿತ್ರತಂಡ ಅಧಿಕೃತ ಅನುಮತಿ ಪತ್ರವನ್ನು ಸಲ್ಲಿಸಿದೆ.

ವಿದೇಶಕ್ಕಿಂತ ಭಾರತದಲ್ಲಿ ಈ ಸಿನಿಮಾದ ಅವಧಿ ಕಡಿಮೆ ಆಗಿದೆ. ಸೆನ್ಸಾರ್ ಕಟ್‌ಗಳ ನಂತರ ಭಾರತದಲ್ಲಿ ಈ ಚಿತ್ರದ ಒಟ್ಟು ಅವಧಿ 3 ಗಂಟೆ 49 ನಿಮಿಷ 36 ಸೆಕೆಂಡ್ ಆಗಿದೆ. ವಿದೇಶಗಳಲ್ಲಿ ಬಿಡುಗಡೆಯಾಗುತ್ತಿರುವ ಅವೃತ್ತಿಯು 3 ಗಂಟೆ 55 ನಿಮಿಷಗಳಷ್ಟಿದ್ದು, ಭಾರತೀಯ ಆವೃತ್ತಿಯು ಸುಮಾರು 6 ನಿಮಿಷಗಳಷ್ಟು ಚಿಕ್ಕದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಭಾರತೀಯ ಚಿತ್ರರಂಗದ ಭವಿಷ್ಯ ಬದಲಿಸಲಿದೆ ಧುರಂಧರ್ 2: ರಣವೀರ್ ಸಿಂಗ್

ಸೆನ್ಸಾರ್ ಮಂಡಳಿಯ ಈ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಎ ರೇಟಿಂಗ್ (ವಯಸ್ಕರಿಗೆ ಮಾತ್ರ) ಎಂದು ಸರ್ಟಿಫಿಕೇಟ್ ನೀಡಿದ ಮೇಲೆ ದೃಶ್ಯಗಳನ್ನು ಕತ್ತರಿಸುವ ಅವಶ್ಯಕತೆಯಾದರೂ ಏನಿತ್ತು?’ ಎಂದು ಸಿನಿಪ್ರಿಯರು ಪ್ರಶ್ನಿಸುತ್ತಿದ್ದಾರೆ. ‘ಸೆನ್ಸಾರ್ ಮಂಡಳಿ ಇರುವುದು ಸಿನಿಮಾ ಎಡಿಟ್ ಮಾಡಲಿಕ್ಕಲ್ಲ, ರೇಟಿಂಗ್ ನೀಡಲು ಮಾತ್ರ’ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ರೀಲ್ಸ್​​ ಹುಚ್ಚಿಗೆ ತಂದೆಯನ್ನೇ ಚೀಲಕ್ಕೆ ತುಂಬಿ ಕೊರಿಯರ್​​ ಮಾಡಲು ಬಂದ ಮಗಳು!

ಬೆಂಗಳೂರು, ಮಾರ್ಚ್​​ 18: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್​​ ಮಾಡಿ ಜನರಿಗೆ ಬುದ್ಧಿ ಹೇಳುವವರ ಸಂಖ್ಯೆ ದೊಡ್ಡದಾಗಿದ್ದು, ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇಂತಹುದದ್ದೇ ಒಂದು ಪ್ರಸಂಗ ಬೆಂಗಳೂರಲ್ಲಿಯೂ ನಡೆದಿದೆ. ರೀಲ್ಸ್​​ ಮಾಡುವ ಚಟಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಬೇಕೆಂಬ ಹುಚ್ಚು ಈ ಮಟ್ಟಕ್ಕೂ ಹೋಗಬಹುದಾ ಎಂಬ ಪ್ರಶ್ನೆಯನ್ನೀಗ ಈ ಘಟನೆ ಹುಟ್ಟುಹಾಕಿದೆ.

ಘಟನೆ ಏನು?

ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರು ಮಂಗಳವಾರ ವ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೂರಿಯರ್ ಕಚೇರಿಗೆ ದೊಡ್ಡ ಪ್ಯಾಕೇಜ್‌ ಅನ್ನು ಹೊತ್ತು ತಂದಿದ್ದಾರೆ. ಇಷ್ಟು ದೊಡ್ಡ ಚೀಲ ನೋಡಿ ಒಳಗೆ ಏನಿದೆ ಎಂದು ಸಿಬ್ಬಂದಿ ಪ್ರಶ್ನಿಸಿದ್ದು, ಈ ವೇಳೆ ಕುಟುಂಬದವರಿಂದ ಯಾವುದೇ ಉತ್ತರ ಬಂದಿಲ್ಲ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಪ್ಯಾಕೇಜ್ ಓಪನ್​​ ಮಾಡಿ ನೋಡಿದ್ದಾರೆ. ಆ ವೆಳೆ ಅರೆಕ್ಷಣ ಅವರು ಬೆಚ್ಚಿಬಿದ್ದಿದ್ದು, ವೃದ್ಧ ವ್ಯಕ್ತಿಯೋರ್ವರು ಚೀಲದಲ್ಲಿ ಇರೋದು ಗೊತ್ತಾಗಿದೆ. ಆತ ಕೊರಿಯರ್​​ ಮಾಡಲು ಬಂದಿದ್ದ ಕುಟುಂಬದ ಪೈಕಿ ಮಹಿಳೆಯ ತಂದೆ ಎಂಬುದು ತಿಳಿದುಬಂದಿದೆ. ಅವರು ಚೀಲದಲ್ಲಿ ಉಸಿರಾಡಲೂ ಕಷ್ಟ ಪಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಭರ್ಜರಿ ಕಾರ್ಯಾಚರಣೆ; 2.34 ಕೋಟಿ ರೂ. ಹಣ ಸೀಜ್

ಹೀಗಿದ್ದರೂ ಕುಟುಂಬದವರು ಮಾತ್ರ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ಯುಗಾದಿ ಮತ್ತು ರಂಜಾನ್​​ ಹಬ್ಬದ ಸಮಯದಲ್ಲಿ ಬಸ್ ಟಿಕೆಟ್‌ಗಳು ಸಿಗದ ಸಮಸ್ಯೆಯನ್ನು ತೋರಿಸಲು, ಮನುಷ್ಯನನ್ನೇ ಕೂರಿಯರ್ ಮಾಡುವ ಪರಿಸ್ಥಿತಿ ಬಂದಿದೆ ಎಂಬ ಸಂದೇಶದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್​ ಮಾಡಲು ಈ ರೀತಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇವರ ಹುಚ್ಚಾಟದ ಬಗ್ಗೆ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದರೂ, ಇಷ್ಟು ದೂರ ಬಂದು ಇಷ್ಟು ಕಷ್ಟಪಟ್ಟಿದ್ದೇವೆ. ದಯವಿಟ್ಟು ಪಾರ್ಸೆಲ್ ತೆಗೆದುಕೊಳ್ಳಿ ಎಂದು ಮತ್ತೆ ಮೊಂಡುತನ ಪ್ರದರ್ಶಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಖಾಕಿ, ಕುಟುಂಬಸ್ಥರನ್ನು ಠಾಣೆಗೆ ಕರೆದೊಯ್ದಿದೆ. ತಮ್ಮದು ತಪ್ಪಾಯ್ತು ಎಂದು ಕುಟುಂಬಸ್ಥರು ಕ್ಷಮೆಯಾಚನೆ ಮಾಡಿದ ವಿಡಿಯೋ ದಾಖಲಿಸಿಕೊಂಡ ಪೊಲೀಸರು, ಗಂಭೀರ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Vaibhav Suryavanshi: ಕ್ರಿಸ್​ ಗೇಲ್​ನ ಆ ಒಂದು ದಾಖಲೆಯನ್ನು ಮುರಿಯಲೇಬೇಕು..!

Source link

ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ನವದೆಹಲಿ, ಮಾರ್ಚ್ 18: ಜನಸಾಮಾನ್ಯರಿಗೆ ವಿಮಾನ ಪ್ರಯಾಣ ಮತ್ತಷ್ಟು ಸುಲಭಗೊಳ್ಳಲಾಗುವಂತೆ ಸರ್ಕಾರ ಕೆಲ ಗಮನಾರ್ಹ ಕ್ರಮಗಳನ್ನು ಕೈಗೊಂಡಿದೆ. ಫ್ಲೈಟ್​ನ ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಉಚಿತಗೊಳಿಸಿರುವುದು ಸೇರಿದಂತೆ ವಿವಿಧ ನಿಯಮಗಳನ್ನು ಕೇಂದ್ರ ನಾಗರಿಕ ವಿಮಾನ ಸಚಿವಾಲಯ (civil aviation ministry) ಪ್ರಕಟಿಸಿದೆ. ಸಚಿವಾಲಯ ಬುಧವಾರ ಪತ್ರಿಕಾ ಹೇಳಿಕೆ ಮೂಲಕ ಈ ಹೊಸ ನಿಯಮಗಳನ್ನು ಬಹಿರಂಗಪಡಿಸಿದೆ.

ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಇರಲ್ಲ…

ಫ್ಲೈಟ್​ನಲ್ಲಿ ನೀವು ಟಿಕೆಟ್ ಬುಕ್ ಮಾಡಿದಾಗ ಟಿಕೆಟ್ ದರದ ಜೊತೆಗೆ ಸೀಟುಗಳಿಗೆ ಪ್ರತ್ಯೇಕ ಶುಲ್ಕ ನೀಡಬೇಕು. ಅಂದರೆ, ವಿಂಡೋ ಸೀಟುಗಳು, ಎಕ್ಸಿಟ್ ಬಳಿಯ ಸೀಟುಗಳು, ಕಾಲು ಚಾಚಲು ಹೆಚ್ಚು ಅವಕಾಶ ಕೊಡುವ ಸೀಟುಗಳು ಇತ್ಯಾದಿಗಳಿಗೆ ಬೇಡಿಕೆ ಇರುವುದರಿಂದ ಹೆಚ್ಚಿನ ಶುಲ್ಕ ಇರುತ್ತದೆ. ಪ್ರಸಕ್ತ ಫ್ಲೈಟ್​ನ ಶೇ. 20ರಷ್ಟು ಸೀಟುಗಳನ್ನು ಶುಲ್ಕರಹಿತವಾಗಿ ಬುಕ್ ಮಾಡಬಹುದು. ಹೊಸ ನಿಯಮಗಳ ಪ್ರಕಾರ, ಈಗ ಕನಿಷ್ಠ ಶೇ. 60ರಷ್ಟು ಸೀಟುಗಳು ಶುಲ್ಕರಹಿತವಾಗಿರಬೇಕು.

ಇದನ್ನೂ ಓದಿ: ಭಯೋತ್ಪಾದನೆ ಆರೋಪದಡಿ ಭಾರತದಲ್ಲಿ 6 ಉಕ್ರೇನಿಯನ್ನರು, ಓರ್ವ ಅಮೆರಿಕನ್ ಬಂಧನ

ಒಂದೇ ಪಿಎನ್​ಆರ್ ನಂಬರ್ ಇರುವ ಪ್ರಯಾಣಿಕರಿಗೆ ಅಕ್ಕಪಕ್ಕದಲ್ಲೇ ಸೀಟುಗಳು

ಈಗ ಇರುವ ವ್ಯವಸ್ಥೆಯಲ್ಲಿ ಒಂದು ಕುಟುಂಬ ಅಥವಾ ಗುಂಪಿನ ಹಲವು ಜನರಿಗೆ ಒಟ್ಟಿಗೆ ಫ್ಲೈಟ್ ಟಿಕೆಟ್ ಬುಕ್ ಮಾಡಿದಾಗ ಅಕ್ಕಪಕ್ಕದ ಸೀಟುಗಳು, ಹಿಂಬದಿ, ಮುಂಬದಿ ಸಾಲುಗಳು ಸಿಗುತ್ತವೆ ಎಂದು ಖಾತ್ರಿ ಇರುವುದಿಲ್ಲ. ಫ್ಲೈಟ್​ನಲ್ಲಿ ಎಲ್ಲಿ ಬೇಕಾದರೂ ಸೀಟ್ ಅಲಾಟ್ ಆಗಬಹುದು. ಹೊಸ ನಿಯಮದ ಪ್ರಕಾರ ಒಂದೇ ಪಿಎನ್​ಆರ್ (PNR) ಅಡಿಯಲ್ಲಿ ಬುಕಿಂಗ್ ಆಗಿರುವ ವ್ಯಕ್ತಿಗಳಿಗೆ ಅಕ್ಕಪಕ್ಕದ ಸೀಟುಗಳನ್ನೇ ಅಲಾಟ್ ಮಾಡಲು ಆದ್ಯತೆ ಕೊಡಬೇಕೆಂದು ಏರ್ಲೈನ್ಸ್ ಕಂಪನಿಗಳಿಗೆ ಸರ್ಕಾರ ನಿರ್ದೇಶನ ಕೊಟ್ಟಿದೆ.

ಲಗೇಜು ವಿಚಾರದಲ್ಲಿ ಸ್ಪಷ್ಟ ಮಾರ್ಗಸೂಚಿಗಳಿರಲಿ

ವಿಮಾನ ಪ್ರಯಾಣ ಮಾಡುವಾಗ ಯಾವ್ಯಾವ ರೀತಿಯ ವಸ್ತುಗಳನ್ನು, ಲಗೇಜುಗಳನ್ನು ತೆಗೆದುಕೊಂಡು ಹೋಗಬಹುದು, ಎಷ್ಟು ಶುಲ್ಕ ಕಟ್ಟಬಹುದು ಇತ್ಯಾದಿ ಬಗ್ಗೆ ವಿಮಾನ ಸಂಸ್ಥೆಗಳು ಸ್ಪಷ್ಟ ಮಾರ್ಗಸೂಚಿಗಳನ್ನು ಪ್ರಯಾಣಿಕರ ಗಮನಕ್ಕೆ ಬರಬೇಕು. ಇದರಿಂದ ಪ್ರಯಾಣಿಕರಿಗೆ ಅನಿಶ್ಚಿತತೆಯ ಸ್ಥಿತಿ ತಪ್ಪುತ್ತದೆ.

ಇದನ್ನೂ ಓದಿ: ಅಗತ್ಯ ಇದ್ದರೆ ಮಾತ್ರ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಿ: ಇಂಡಿಯನ್ ಆಯಿಲ್ ಮನವಿ

ನಾಗರಿಕ ವಿಮಾನಯಾನ ಸಚಿವಾಲಯ ರೂಪಿಸಿರುವ ಹೊಸ ನಿಯಮಗಳು

  • ಫ್ಲೈಟ್​ನಲ್ಲಿ ಶೇ. 60ಕ್ಕಿಂತ ಹೆಚ್ಚು ಸೀಟುಗಳು ಶುಲ್ಕರಹಿತವಾಗಿರಬೇಕು
  • ಒಂದೇ ಪಿಎನ್​ಆರ್ ಅಡಿಯ ಸೀಟುಗಳು ಒಟ್ಟೊಟ್ಟಿಗೆ ಇರುವಂತಿರಬೇಕು.
  • ವಿಶೇಷ ವಸ್ತು ಮತ್ತು ಸಾಕುಪ್ರಾಣಿಕಗಳನ್ನು ಸಾಗಿಸುವಾಗ ಬ್ಯಾಗೇಜ್ ನಿಯಮಗಳು ಸ್ಪಷ್ಟವಾಗಿರಬೇಕು.
  • ಪ್ರಯಾಣಿಕರ ಹಕ್ಕು ರಕ್ಷಣೆ ವ್ಯವಸ್ಥೆ ಸರಿಯಾಗಿ ಜಾರಿಯಲ್ಲಿರಬೇಕು
  • ಪ್ರಯಾಣಿಕರ ಹಕ್ಕುಗಳ ಬಗ್ಗೆ ಮಾಹಿತಿ ಎಲ್ಲಾ ಪ್ಲಾಟ್​ಫಾರ್ಮ್​ಗಳಲ್ಲೂ ಪ್ರದರ್ಶನವಾಗಬೇಕು.
  • ಪ್ರಾದೇಶಿಕ ಭಾಷೆಗಳಲ್ಲೂ ಮಾಹಿತಿ ಲಭ್ಯ ಇರಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Lizard Omens: ದೇವರ ಕೋಣೆಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಸನಾತನ ಧರ್ಮ ಹಾಗೂ ಶಾಸ್ತ್ರಗಳ ಪ್ರಕಾರ, ಪ್ರತಿಯೊಂದು ಜೀವಿಗೂ ತನ್ನದೇ ಆದ ವಿಶೇಷ ಮಹತ್ವವಿದೆ. ಅದರಲ್ಲಿಯೂ ಮನೆಯ ಗೋಡೆಗಳ ಮೇಲೆ ಓಡಾಡುವ ಹಲ್ಲಿಯನ್ನು ಸಾಕ್ಷಾತ್ ಲಕ್ಷ್ಮಿ ದೇವಿಯ ಸಂಕೇತವೆಂದೇ ಪರಿಗಣಿಸಲಾಗುತ್ತದೆ. ಕೇವಲ ಕೀಟಗಳನ್ನು ತಿಂದು ಮನೆಯನ್ನು ಸ್ವಚ್ಛವಾಗಿಡುವ ಜೀವಿಯಷ್ಟೇ ಅಲ್ಲದೆ, ಹಲ್ಲಿಯು ನಮ್ಮ ಭವಿಷ್ಯದ ಏಳುಬೀಳುಗಳ ಬಗ್ಗೆ ಮುನ್ಸೂಚನೆ ನೀಡುವ ಸಂಕೇತವೂ ಹೌದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಹಲ್ಲಿಯು ಮೈಮೇಲೆ ಬೀಳುವ ಜಾಗ ಮತ್ತು ಅದು ಕಾಣಿಸಿಕೊಳ್ಳುವ ಸಮಯದ ಮೇಲೆ ಶುಭ-ಅಶುಭ ಫಲಗಳು ನಿರ್ಧಾರವಾಗುತ್ತವೆ.

ವಿಶೇಷವಾಗಿ ನಿಮ್ಮ ಮನೆಯ ಪೂಜಾ ಮಂಟಪದಲ್ಲಿ ಹಲ್ಲಿ ಕಾಣಿಸಿಕೊಂಡರೆ ಅದು ಅತ್ಯಂತ ಮಂಗಳಕರ ಸಂಗತಿ. ಇದು ಲಕ್ಷ್ಮೀ ದೇವಿಯ ಕಟಾಕ್ಷ ನಿಮ್ಮ ಮೇಲಿದೆ ಎಂಬುದನ್ನು ಸೂಚಿಸುವುದಲ್ಲದೆ, ಶೀಘ್ರದಲ್ಲೇ ನಿಮ್ಮ ಮನೆಯಲ್ಲಿ ಶುಭ ಕಾರ್ಯಗಳು ಜರುಗಲಿವೆ ಮತ್ತು ಆರ್ಥಿಕ ಸಂಕಷ್ಟಗಳು ದೂರವಾಗಲಿವೆ ಎಂಬ ಪರೋಕ್ಷ ಸಂದೇಶವನ್ನು ನೀಡುತ್ತದೆ. ಆದರೆ, ಮನೆಯಲ್ಲಿ ಎರಡು ಹಲ್ಲಿಗಳು ಜಗಳವಾಡುವುದನ್ನು ನೋಡುವುದು ಅಷ್ಟು ಒಳ್ಳೆಯದಲ್ಲ. ಇದು ಕುಟುಂಬದ ಸದಸ್ಯರ ನಡುವೆ ಮನಸ್ತಾಪ ಅಥವಾ ಸ್ನೇಹಿತರೊಂದಿಗೆ ಕಲಹ ಉಂಟಾಗುವ ಸಾಧ್ಯತೆ ಎಂದು ಶಕುನ ಶಾಸ್ತ್ರ ಹೇಳುತ್ತದೆ.

ಇನ್ನು ಹಲ್ಲಿಯು ಮೈಮೇಲೆ ಬೀಳುವ ವಿಚಾರಕ್ಕೆ ಬಂದರೆ, ಕಾಲುಗಳ ಮೇಲೆ ಬೀಳುವ ಹಲ್ಲಿಯು ವಿಶೇಷ ಅರ್ಥವನ್ನು ಹೊಂದಿರುತ್ತದೆ. ಒಂದು ವೇಳೆ ಹಲ್ಲಿ ನಿಮ್ಮ ಬಲ ಪಾದದ ಮೇಲೆ ಬಿದ್ದರೆ, ಶೀಘ್ರದಲ್ಲೇ ನಿಮಗೆ ದೀರ್ಘ ಪ್ರಯಾಣ ಅಥವಾ ಪ್ರವಾಸದ ಯೋಗವಿದೆ ಹಾಗೂ ಆ ಪ್ರಯಾಣದಿಂದ ಧನಲಾಭವಾಗಲಿದೆ ಎಂದರ್ಥ. ಅದೇ ಹಲ್ಲಿ ಎಡಗಾಲಿನ ಮೇಲೆ ಬಿದ್ದರೆ, ಮುಂದೆ ಬರಲಿರುವ ಯಾವುದೋ ಸಂಕಷ್ಟ ಅಥವಾ ಅನಾರೋಗ್ಯದ ಬಗ್ಗೆ ಅದು ನಿಮ್ಮನ್ನು ಎಚ್ಚರಿಸುತ್ತಿದೆ ಎಂದರ್ಥ. ಒಂದು ವೇಳೆ ಹೊಸ ಮನೆ ಪ್ರವೇಶಿಸುವಾಗ ಸತ್ತ ಹಲ್ಲಿ ಕಂಡುಬಂದರೆ, ಆ ಮನೆಯ ವಾಸ್ತು ದೋಷ ಅಥವಾ ಮುಖ್ಯಸ್ಥರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಅಗತ್ಯ ಎಂದು ಶಾಸ್ತ್ರಗಳು ಎಚ್ಚರಿಸುತ್ತವೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ಕೇವಲ ವಾಸ್ತವದಲ್ಲಿ ಮಾತ್ರವಲ್ಲದೆ, ಕನಸಿನಲ್ಲಿ ಹಲ್ಲಿ ನಿಮ್ಮನ್ನು ಹೆದರಿಸುವಂತೆ ಅಥವಾ ದಾಳಿ ಮಾಡುವಂತೆ ಕಂಡರೆ, ಅದು ಆರ್ಥಿಕ ಮುಗ್ಗಟ್ಟು ಅಥವಾ ಮಾನಸಿಕ ನೆಮ್ಮದಿಗೆ ಭಂಗ ತರುವ ಸೂಚನೆಯಾಗಿರುತ್ತದೆ. ಹಲ್ಲಿಯ ಈ ನಕಾರಾತ್ಮಕ ಪರಿಣಾಮಗಳನ್ನು ಹೋಗಲಾಡಿಸಲು ನಮ್ಮ ಹಿರಿಯರು ಒಂದು ಸರಳ ಪರಿಹಾರವನ್ನು ಸೂಚಿಸಿದ್ದಾರೆ. ಹಲ್ಲಿ ಮೈಮೇಲೆ ಬಿದ್ದ ತಕ್ಷಣವೇ ಅಭ್ಯಂಗ ಸ್ನಾನ ಮಾಡಿ, ಇಷ್ಟ ದೇವರನ್ನು ಪ್ರಾರ್ಥಿಸುವುದರಿಂದ ಮನಸ್ಸಿನ ಭಯ ದೂರವಾಗಿ, ದೋಷದ ತೀವ್ರತೆ ಕಡಿಮೆಯಾಗುತ್ತದೆ ಎಂಬ ನಂಬಿಕೆಯಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಾರತೀಯ ಚಿತ್ರರಂಗದ ಭವಿಷ್ಯ ಬದಲಿಸಲಿದೆ ಧುರಂಧರ್ 2: ರಣವೀರ್ ಸಿಂಗ್

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರು ‘ಧುರಂಧರ್’ ಚಿತ್ರದ ಯಶಸ್ಸಿನಿಂದ ಖುಷಿಯಾಗಿದ್ದಾರೆ. ಮಂಗಳವಾರ (ಮಾರ್ಚ್ 17) ಸಂಜೆ ಮುಂಬೈನಲ್ಲಿ ನಡೆದ ‘ಧುರಂಧರ್ 2’ (Dhurandhar 2) ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ತಮ್ಮ ವಿಶಿಷ್ಟ ಶೈಲಿಯ ಮೂಲಕ ವೇದಿಕೆಯ ಮೇಲೆ ಮಿಂಚಿದ ರಣವೀರ್, ಚಿತ್ರದ ಮೊದಲ ಭಾಗಕ್ಕೆ ಪ್ರೇಕ್ಷಕರು ನೀಡಿದ ಅಭೂತಪೂರ್ವ ಯಶಸ್ಸನ್ನು ನೆನೆದು ಭಾವುಕರಾದರು. ಅಲ್ಲದೇ, ‘ಧುರಂಧರ್ 2’ ಸಿನಿಮಾ ಮೇಲೆ ಜನರು ಇಟ್ಟಿರುವ ನಿರೀಕ್ಷೆಯ ಬಗ್ಗೆಯೂ ರಣವೀರ್ ಸಿಂಗ್ (Ranveer Singh) ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ರಣವೀರ್ ಸಿಂಗ್ ಜೊತೆಗೆ ನಟಿ ಸಾರಾ ಅರ್ಜುನ್ ಮತ್ತು ಸಂಗೀತ ತಂಡದ ಸದಸ್ಯರಾದ ಶಾಶ್ವತ್ ಸಚದೇವ್, ಜಾಸ್ಮಿನ್ ಸ್ಯಾಂಡ್ಲಾಸ್, ಖಾನ್ ಸಾಬ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಮೊದಲ ಬಾರಿಗೆ ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿದ ರಣವೀರ್, ‘ಸ್ನೇಹಿತರೇ, ನೀವು ನಮ್ಮ ಧುರಂಧರ್ ಚಿತ್ರವನ್ನು ಐತಿಹಾಸಿಕ ಮೈಲಿಗಲ್ಲಿಗೆ ತಲುಪಿಸಿದ್ದೀರಿ. ಇದು ಕೇವಲ ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ ಸಾಧ್ಯವಾಗಿದೆ. ಇಡೀ ತಂಡದ ಪರವಾಗಿ ಪ್ರಪಂಚದಾದ್ಯಂತ ಇರುವ ಸಿನಿಪ್ರೇಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ತಿಳಿಸಿದರು.

ಆದಿತ್ಯ ಧಾರ್ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಸಿನಿಮಾದ ಎರಡನೇ ಭಾಗದ ಬಗ್ಗೆ ಮಾತನಾಡಿದ ರಣವೀರ್ ಸಿಂಗ್, ‘ಈಗ ಎರಡನೇ ಭಾಗ ಬಿಡುಗಡೆಗೆ ಸಿದ್ಧವಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಜನರು ಇದಕ್ಕೆ ಕಾಯುತ್ತಿದ್ದಾರೆ. ಎರಡನೇ ಭಾಗದ ಬಗ್ಗೆ ಇರುವ ನಿರೀಕ್ಷೆ ಅಭೂತಪೂರ್ವವಾದುದು’ ಎಂದು ಹೇಳಿದರು. ಅಲ್ಲದೇ, ಈ ಚಿತ್ರವು ಭಾರತೀಯ ಚಿತ್ರರಂಗದ ಭವಿಷ್ಯವನ್ನೇ ಬದಲಿಸಲಿದೆ ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದರು.

‘ಧುರಂಧರ್’ ಚಿತ್ರದಲ್ಲಿ ಪಾಕಿಸ್ತಾನದ ಕರಾಚಿಗೆ ತೆರಳಿದ್ದ ಭಾರತೀಯ ಗೂಢಚಾರಿಯ ಸಾಹಸದ ಕಥೆಯನ್ನು ಹೇಳಲಾಗಿತ್ತು. 1999ರ ವಿಮಾನ ಅಪಹರಣ, 2001ರ ಸಂಸತ್ ಮೇಲಿನ ದಾಳಿ ಮತ್ತು 2008ರ ಮುಂಬೈ ದಾಳಿಯಂತಹ ನೈಜ ಘಟನೆಗಳ ಎಳೆಯನ್ನು ಈ ಸಿನಿಮಾ ಒಳಗೊಂಡಿತ್ತು. ವಿಶ್ವದಾದ್ಯಂತ 1300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು.

ಇದನ್ನೂ ಓದಿ: ‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

‘ಧುರಂಧರ್: ದಿ ರಿವೇಂಜ್’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ಎ’ ಪ್ರಮಾಣಪತ್ರ ನೀಡಿದೆ. ಮಾರ್ಚ್ 19ರಂದು ಬಿಡುಗಡೆಯಾಗಲಿದ್ದು, ಬುಧವಾರ (ಮಾ.18) ಸಂಜೆ 5.30ರಿಂದಲೇ ಪೇಯ್ಡ್ ಪ್ರಿವ್ಯೂಗಳು ಆರಂಭವಾಗಲಿವೆ. ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮುಂಗಡವಾಗಿ ಬುಕ್ ಆಗಿದ್ದು, ಸಿನಿಮಾ ಮತ್ತೊಂದು ದಾಖಲೆ ಬರೆಯುವ ಮುನ್ಸೂಚನೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Ugadi 2026 Horoscope: ಯುಗಾದಿ ವರ್ಷ ಭವಿಷ್ಯ; ಗ್ರಹಗಳ ಸಂಚಾರ ಮತ್ತು ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವ ನಾಮ ಸಂವತ್ಸರದ ಯುಗಾದಿ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ ಯುಗಾದಿಯು ಅತ್ಯಂತ ಮಹತ್ವದ ಹಬ್ಬವಾಗಿದ್ದು, ಇದನ್ನು ಮಾರ್ಚ್ 19ರ ಗುರುವಾರದಂದು ಆಚರಿಸಲಾಗುತ್ತದೆ. ಯುಗಾದಿಯು ಜಗತ್ತಿನ ಮತ್ತು ಮನಸ್ಸುಗಳ ಪರಿವರ್ತನೆಯ ಕಾಲವಾಗಿದೆ.

ಈ ವರ್ಷಕ್ಕೆ ಪರಾಭವ ನಾಮ ಸಂವತ್ಸರ ಎಂದು ಹೆಸರಿಸಲಾಗಿದೆ. ಇದು 60 ಸಂವತ್ಸರಗಳಲ್ಲಿ 40ನೇ ಸಂವತ್ಸರವಾಗಿದೆ. ಈ ವರ್ಷದ ರಾಜ ಗುರು ಆಗಿದ್ದು, ಮಂತ್ರಿ ಕುಜ ಆಗಿದ್ದಾನೆ ಮತ್ತು ಸೇನಾಧಿಪತಿ ಚಂದ್ರ ಆಗಿದ್ದಾನೆ. ಗುರು, ಶನಿ, ರಾಹು, ಮತ್ತು ಕೇತು ಗ್ರಹಗಳ ಸಂಚಾರದಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಗುರು ಗ್ರಹವು ಜೂನ್ 2, 2026ರಂದು ಕರ್ಕಾಟಕ ರಾಶಿಗೆ ಪ್ರವೇಶಿಸಿ, ನಂತರ ಅಕ್ಟೋಬರ್ 31ರಂದು ಸಿಂಹ ರಾಶಿಗೆ ಮತ್ತು ಜನವರಿ 2027ರಲ್ಲಿ ಮತ್ತೆ ಕರ್ಕಾಟಕ ರಾಶಿಗೆ ಮರಳಲಿದೆ. ಶನಿ ಗ್ರಹವು ಮಾರ್ಚ್ 2027ರವರೆಗೆ ಮೀನ ರಾಶಿಯಲ್ಲಿ ಇರಲಿದೆ. ರಾಹು ಮತ್ತು ಕೇತುಗಳು ಡಿಸೆಂಬರ್ 2026ರಲ್ಲಿ ಮಕರ ಮತ್ತು ಕರ್ಕಾಟಕ ರಾಶಿಗಳಿಗೆ ಸ್ಥಾನ ಬದಲಾಯಿಸಲಿವೆ.

ಈ ಪರಾಭವ ನಾಮ ಸಂವತ್ಸರದಲ್ಲಿ ಮೇಷ ರಾಶಿಯವರಿಗೆ ಅದೃಷ್ಟ, ಆರ್ಥಿಕ ಅಭಿವೃದ್ಧಿ ಮತ್ತು ಕಾರ್ಯಗಳಲ್ಲಿ ಜಯ ಸಿಗಲಿದೆ. ವೃಷಭ ರಾಶಿಯವರಿಗೆ ಆದಾಯದಲ್ಲಿ ಏರಿಕೆ, ಹೊಸ ಯೋಜನೆಗಳಿಗೆ ಬೆಂಬಲ ಮತ್ತು ರಾಜಕೀಯ ಪ್ರಗತಿ ಇರಲಿದೆ. ಆದಾಗ್ಯೂ, ಕೆಲವು ಸಣ್ಣಪುಟ್ಟ ಸಮಸ್ಯೆಗಳು ಮತ್ತು ಸವಾಲುಗಳನ್ನು ಎದುರಿಸಬೇಕಾಗಬಹುದು ಎಂದು ಗುರೂಜಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಯುಗಾದಿ ಬಳಿಕ 1 ವರ್ಷ ಈ ರಾಶಿಗೆ ಸಾಕಷ್ಟು ಅದೃಷ್ಟ ಕೂಡಿಬರಲಿದೆ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version