IND vs NZ: ಸಚಿನ್ ದಾಖಲೆ ಮುರಿದರೂ ಇತಿಹಾಸ ಸೃಷ್ಟಿಸುವ ಅವಕಾಶ ಕೈಚೆಲ್ಲಿದ ವಿರಾಟ್ – Kannada News | Virat Kohli Breaks Sachin’s Record: Most ODI Runs vs New Zealand

ಒಂದು ವೇಳೆ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 50 ರನ್ ಗಳಿಸಿದ್ದರೆ, ಸತತ ಆರು ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್ ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದರು. ಆದಾಗ್ಯೂ, ಕೊಹ್ಲಿ ಈ ಇತಿಹಾಸ ನಿರ್ಮಿಸುವ ಅವಕಾಶವನ್ನು ಕಳೆದುಕೊಂಡರು.

Source link

ಆದಷ್ಟು ಬೇಗ ದೇಶ ಬಿಟ್ಟು ಹೊರಡಿ; ಇರಾನ್​​ನ ಭಾರತೀಯ ಪ್ರಜೆಗಳಿಗೆ ಸೂಚನೆ, ಸಹಾಯವಾಣಿ ಸಂಖ್ಯೆ ಬಿಡುಗಡೆ – Kannada News | Indian embassy in Iran issues fresh advisory for nationals amid unrest issues helpline numbers

ನವದೆಹಲಿ, ಜನವರಿ 14: ಇರಾನ್‌ನಲ್ಲಿ ಪ್ರತಿಭಟನೆಗಳು (Iran Protests) ಉಲ್ಬಣಗೊಳ್ಳುತ್ತಿದ್ದಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ಹೊಸ ಸೂಚನೆಯನ್ನು ನೀಡಿದೆ. ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳು, ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಮತ್ತು ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ತಮಗೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಕೂಡಲೇ ಇರಾನ್ ಬಿಟ್ಟು ಹೊರಡುವಂತೆ ಭಾರತೀಯ ರಾಯಭಾರ ಕಚೇರಿಯು ಸೂಚನೆ ನೀಡಿದೆ. ಇರಾನ್​ನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಯಭಾರ ಕಚೇರಿ ಈ ಸೂಚನೆ ನೀಡಿದೆ.

ಇರಾನ್‌ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಮತ್ತು ಪಿಐಒಗಳು ಸರಿಯಾದ ಎಚ್ಚರಿಕೆ ವಹಿಸಬೇಕೆಂದು ರಾಯಭಾರ ಕಚೇರಿಯು ಪುನರುಚ್ಚರಿಸಿದೆ. ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ಹೆಚ್ಚು ಜಾಗೃತರಾಗಿರಲು ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ಹಾಗೇ, ಭಾರತೀಯ ನಾಗರಿಕರು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಮತ್ತು ಎಲ್ಲ ರೀತಿಯ- ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮ ವರದಿಗಳನ್ನು ವೀಕ್ಷಿಸಲು ಸೂಚಿಸಲಾಗಿದೆ.

ಇದನ್ನೂ ಓದಿ: ಇರಾನ್ ಹಿಂದೆ ಸರಿಯುವುದಿಲ್ಲ, ಟ್ರಂಪ್ ಪದಚ್ಯುತಿ ಖಚಿತ; ಸುಪ್ರೀಂ ನಾಯಕ ಖಮೇನಿ ಪ್ರತಿಜ್ಞೆ

ಭಾರತೀಯ ಪ್ರಜೆಗಳು ತಮ್ಮ ವಲಸೆ ದಾಖಲೆಗಳನ್ನು ಲಭ್ಯವಿರಿಸಿಕೊಳ್ಳುವಂತೆ ರಾಯಭಾರ ಕಚೇರಿಯು ಸೂಚಿಸಿದೆ. “ಇರಾನ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ತಮ್ಮ ಪ್ರಯಾಣ ಮತ್ತು ವಲಸೆ ದಾಖಲೆಗಳು, ಪಾಸ್‌ಪೋರ್ಟ್‌ಗಳು ಮತ್ತು ಐಡಿಗಳು ಸೇರಿದಂತೆ ಎಲ್ಲ ದಾಖಲೆಗಳನ್ನು ತಮ್ಮ ಜೊತೆಯಲ್ಲೇ ರೆಡಿ ಇಟ್ಟುಕೊಳ್ಳಲು ಕೋರಲಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಸಹಾಯಕ್ಕಾಗಿ ಅವರು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ” ಎಂದು ಸಲಹಾ ಸಂಸ್ಥೆ ತಿಳಿಸಿದೆ.

ಭಾರತೀಯ ರಾಯಭಾರ ಕಚೇರಿಯ ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ ಇಲ್ಲಿದೆ. ಯಾವುದೇ ರೀತಿಯ ತುರ್ತು ಅಗತ್ಯವಿದ್ದರೆ ಮೊಬೈಲ್ ಸಂಖ್ಯೆಗಳು: +989128109115; +989128109109; +989128109102; +989932179359. ಇಮೇಲ್: cons.tehran@mea.gov.in” ಸಂಪರ್ಕಿಸಿ ಎಂದು ರಾಯಭಾರ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಇರಾನ್ ಜತೆ ವ್ಯಾಪಾರ ಮಾಡುವ ದೇಶಗಳಿಗೆ ಶೇ.25ರಷ್ಟು ಸುಂಕ ಘೋಷಿಸಿದ ಟ್ರಂಪ್, ಭಾರತದ ಮೇಲೂ ಪರಿಣಾಮ ಬೀರುತ್ತಾ?

ಭಾರತೀಯ ರಾಯಭಾರ ಕಚೇರಿಯಲ್ಲಿ ಇನ್ನೂ ನೋಂದಾಯಿಸದ ಇರಾನ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಈ ಲಿಂಕ್ ಬಳಸಿ https://www.meaers.com/request/home ನೋಂದಣಿ ಮಾಡುವಂತೆ ರಾಯಭಾರ ಕಚೇರಿ ಒತ್ತಾಯಿಸಿದೆ ಸೂಚಿಸಿದೆ.

ಹಾಗೇ, “ಇರಾನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಸೂಚನೆ ಬರುವವರೆಗೆ ಭಾರತೀಯ ಪ್ರಜೆಗಳು ಇರಾನ್‌ಗೆ ಪ್ರಯಾಣಿಸಬಾರದು ಎಂದು ಸೂಚಿಸಲಾಗಿದೆ” ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಡಾಲರ್‌ಗೆ ಹೋಲಿಸಿದರೆ ಕುಸಿಯುತ್ತಿರುವ ಆರ್ಥಿಕತೆ ಮತ್ತು ಕರೆನ್ಸಿ ಮೌಲ್ಯ ಐತಿಹಾಸಿಕ ಗರಿಷ್ಠ ಮಟ್ಟವನ್ನು ತಲುಪಿರುವುದನ್ನು ವಿರೋಧಿಸಿ ಇರಾನ್‌ನ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರು ಬೀದಿಗಿಳಿದಿದ್ದಾರೆ. ಇದರಿಂದಾಗಿ ಉದ್ವಿಗ್ನತೆ ಹೆಚ್ಚಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಸಸ್ಯಕಾಶಿಯಲ್ಲಿ ಬಣ್ಣಬಣ್ಣದ ಹೂಗಳ ಚಿತ್ತಾರ: ಲಾಲ್‌ಬಾಗ್‌ನಲ್ಲಿ ‘ತೇಜಸ್ವಿ ವಿಸ್ಮಯ’ ಲೋಕ ಅನಾವರಣ – Kannada News | Bangaluru Lalbagh Flower Show 2026: Tejaswi Vismaya Theme, Flower Show Begins Today

ಗಣರಾಜ್ಯೋತ್ಸವ ಅಂಗವಾಗಿ ಇಂದಿನಿಂದ (ಜ.14) ಲಾಲ್​​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಂಡಿದೆ. ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಜೀವನ ಆಧಾರಿತ “ತೇಜಸ್ವಿ ವಿಸ್ಮಯ” ಥೀಮ್‌ನಲ್ಲಿ ಈ ಬಾರಿ ಗಾಜಿನ ಮನೆ ಅಲಕೃತಗೊಂಡಿದೆ. ಚಂದದ ಹೂಗಳೊಂದಿಗೆ ಅಂದದ ಜೀವನಗಾಥೆ ಹೊತ್ತ ಫಲಪುಷ್ಪ ಪ್ರದರ್ಶನದ ಕಿರು ನೋಟ ಇಲ್ಲಿದೆ.

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಆಯೋಜನೆಗೊಂಡಿರುವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ತೋಟಗಾರಿಕಾ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ್ ಸಸಿಗೆ ನೀರು ಹಾಕುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ.

ಜನವರಿ 14 ರಿಂದ 26ರವರೆಗೆ ನಡೆಯಲಿರುವ 219ನೇ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಈ ಬಾರಿ ರಾಷ್ಟ್ರಕವಿ ಕುವೆಂಪು ಅವರ ಪುತ್ರ, ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಕುರಿತ ‘ತೇಜಸ್ವಿ ವಿಸ್ಮಯ’ ವಿಷಯ ಆಯ್ಕೆ ಮಾಡಿಕೊಂಡಿದೆ. ಗಾಜಿನ ಮನೆಯ ಅಂಗಳದಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ನೆಚ್ಚಿನ ಕಾಡನ್ನು ನಿರ್ಮಿಸಿಲಾಗಿದೆ.

ತಮಿಳುನಾಡು, ಕೇರಳ, ಮಹಾರಾಷ್ಟ, ಡಾರ್ಜಿಲಿಂಗ್, ವಯನಾಡು ಕಡೆಯಿಂದ 95ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ 35 ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕಾರ ಮಾಡಲಾಗಿದೆ. 

ತೇಜಸ್ವಿ ಅವರ ಕಾದಂಬರಿ, ಕಥೆಗಳಲ್ಲಿ ಕಂಡುಬರುವ ಕಾಡಿನ ಮಾದರಿಯನ್ನು ಗಾಜಿನ ಮನೆಯಲ್ಲಿ ನಿರ್ಮಿಸಲಾಗಿದೆ. 25 ಅಡಿ ಎತ್ತರದ ಬೃಹತ್ ಬೆಟ್ಟ, ಜಲಪಾತದ ಆಕರ್ಷಣಿಯವಾಗಿದೆ. ಅದರ ತಪ್ಪಲಿನಲ್ಲಿ ತೇಜಸ್ವಿ ಅವರ ಮೂಡಿಗೆರೆಯ ಹ್ಯಾಂಡ್‌ಪೋಸ್ಟ್ ಸಮೀಪವಿರುವ ‘ನಿರುತ್ತರ’ ಮನೆಯನ್ನು ಹೂಗಳಿಂದ ನಿರ್ಮಿಸಲಾಗಿದೆ.

ತೇಜಸ್ವಿ ವಿಸ್ಮಯ ಲೋಕವನ್ನು ಪೂರ್ಣ ಚಂದ್ರ ತೇಜಸ್ವಿ ಅವರ ಪುತ್ರಿಯರು ಕಣ್ತುಂಬಿಕೊಂಡರು. ಈ ಫ್ಲವರ್ ಶೋ ತಂದೆಯವರ ನೆನಪುಗಳನ್ನು ಮೆಲಕು ಹಾಕುವಂತೆ ಮಾಡಿದೆ ಅಂತ ಸಂತಸ ವ್ಯಕ್ತಪಡಿಸಿದರು. 

13 ದಿನಗಳ ಕಾಲ ನಡೆಯಲಿರುವ ಈ ಫ್ಲವರ್ ಶೋಗೆ ವಯಸ್ಕರಿಗೆ 80 ರೂ ಹಾಗೂ ಕಿರಿಯರಿಗೆ 30 ರೂ ಟಿಕೆಟ್ ದರ ನಿಗದಿ ಮಾಡಲಾಗಿದೆ. ಪೂರ್ಣ ಚಂದ್ರ ತೇಜಸ್ವಿ ಅವರ ವಿಸ್ಮಿತ ಜಗತ್ತನ್ನು ಹೊತ್ತು ಫಲಪುಷ್ಪ ಪ್ರದರ್ಶನ ನಿಮಗಾಗಿ ಕಾದು ನಿಂತಿದೆ.

Published On – 9:26 pm, Wed, 14 January 26

Source link

ಸತತವಾಗಿ 36 ಗಂಟೆ ಹನುಮಾನ್ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕಿದ ನಾಯಿ! – Kannada News | Dog Circles Hanuman Idol For 36 Hours in Bijnoor Watch Viral Video

ನವದೆಹಲಿ, ಜನವರಿ 14: ದೇವಸ್ಥಾನದ ಬಳಿ ಒಂದು ನಾಯಿ ಹನುಮಾನ್ ದೇವರ ವಿಗ್ರಹದ ಸುತ್ತ 36 ಗಂಟೆಗಳ ಕಾಲ ಸುತ್ತುತ್ತಲೇ ಇತ್ತು. ನಿರಂತರವಾಗಿ ಹನುಮಾನ್​ ವಿಗ್ರಹಕ್ಕೆ ಪ್ರದಕ್ಷಿಣೆ ಹಾಕುತ್ತಲೇ ಇದ್ದ ಆ ನಾಯಿಯನ್ನು ನೋಡಲು ಜನರು ಸಾಲಗಟ್ಟಿ ನಿಂತಿದ್ದರು. ಈ ದೃಶ್ಯವನ್ನು ಜನರು ಪವಾಡ ಎಂದು ಕರೆದಿದ್ದಾರೆ. ಉತ್ತರ ಪ್ರದೇಶದ ಬಿಜ್ನೋದಲ್ಲಿ ಕೊರೆಯುವ ಚಳಿಯಲ್ಲೂ ನಾಯಿ 36 ಗಂಟೆ ಪ್ರದಕ್ಷಿಣೆ ಹಾಕುತ್ತಲೇ ಇತ್ತು. ಕೆಲವರು ಆ ನಾಯಿಗೆ ಆರೋಗ್ಯ ಸಮಸ್ಯೆ ಇರಬಹುದು ಎಂದು ಕಳವಳ ವ್ಯಕ್ತಪಡಿಸಿ ಕಮೆಂಟ್ ಹಾಕುತ್ತಿದ್ದರೆ ಇನ್ನು ಕೆಲವರು ಆ ನಾಯಿಗೆ ಹನುಮಾನ್ ಆಶೀರ್ವಾದವಿದೆ ಎಂದು ಕಮೆಂಟ್ ಮಾಡಿದ್ದಾರೆ. ಒಟ್ಟಾರೆ ಈ ವಿಡಿಯೋ ಸಾಕಷ್ಟು ವೈರಲ್ (Viral Video) ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Chanakya Niti: ತಪ್ಪಿಯೂ ಇಂತಹ ಜನರನ್ನು ನಿಮ್ಮ ಮನೆಗೆ ಆಹ್ವಾನಿಸಬೇಡಿ – Kannada News | Chanakya Niti: If you invite such people to your home, you may face trouble

ಸಂಬಂಧಿಕರು, ಸ್ನೇಹಿತರನ್ನು ಮನೆಗೆ ಆಹ್ವಾನಿಸುವುದು ಸಾಮಾನ್ಯ. ಹಬ್ಬ ಹರಿದಿನಗಳು ಅಥವಾ ಇನ್ಯಾವುದೇ ಕಾರ್ಯಕ್ರಮ ಇರುವ ಸಂದರ್ಭದಲ್ಲಿ ಒಂದಷ್ಟು ಜನರನ್ನು ಮನೆಗೆ ಆಹ್ವಾನಿಸುತ್ತೇವೆ. ಈ ರೀತಿ ಎಲ್ಲರನ್ನೂ ಆಹ್ವಾನಿಸುವುದು ಸರಿಯಲ್ಲ, ಕೆಲವರು ತಮ್ಮೊಂದಿಗೆ ವಿನಾಶವನ್ನೇ ಹೊತ್ತು ತರುತ್ತಾರೆ. ಅಂತಹವರಿಂದ ಸಾಧ್ಯವಾದಷ್ಟು ದೂರವಿರಬೇಕು ಎಂದು ಆಚಾರ್ಯ ಚಾಣಕ್ಯರು (Acharya Chanakya)  ಹೇಳಿದ್ದಾರೆ. ಹಾಗಿದ್ದರೆ  ಮುಂದಾಗುವ ಅಪಾಯಗಳನ್ನು ತಪ್ಪಿಸಲು ಯಾವ ರೀತಿಯ ಜನರನ್ನು ಮನೆಗೆ ಆಹ್ವಾನಿಸಬಾರದು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

ಇಂತಹ ಜನರನ್ನು ತಪ್ಪಿಯೂ ಮನೆಗೆ ಆಹ್ವಾನಿಸಬೇಡಿ:

ಸ್ವಾರ್ಥಿ ಜನರು: ನೀವು ಎಂದಿಗೂ ಸ್ವಾರ್ಥಿಗಳನ್ನು ನಿಮ್ಮ ಮನೆಗೆ ಆಹ್ವಾನಿಸಬಾರದು. ಅಂತಹ ಜನರು ನಿಮ್ಮ ಯೋಗಕ್ಷೇಮದ ಬಗ್ಗೆ ಎಂದಿಗೂ ಯೋಚಿಸುವುದಿಲ್ಲ. ಅವರ ಸಂಪೂರ್ಣ ಗಮನವು ಅವರ ಸ್ವಂತ ಹಿತಾಸಕ್ತಿಗಳು ಮತ್ತು ಸ್ವಾರ್ಥದ ಮೇಲೆ ಇರುತ್ತದೆ. ಅಂತಹವರಿಂದ ಅಪಾಯಗಳು ಎದುರಾಗುವ ಸಾಧ್ಯತೆ ಹೆಚ್ಚು ಎಂದು ಚಾಣಕ್ಯ ಹೇಳುತ್ತಾರೆ.

ಎರಡು ಮುಖದ ಜನರು: ಆಚಾರ್ಯ ಚಾಣಕ್ಯರ ಪ್ರಕಾರ, ಎರಡು ಮುಖದ ವ್ಯಕ್ತಿಯನ್ನು ನಿಮ್ಮ ಮನೆಗೆ ಆಹ್ವಾನಿಸುವ ಮೊದಲು ನೀವು ಎರಡು ಬಾರಿ ಯೋಚಿಸಬೇಕು. ಅಂತಹ ಜನರು ನಿಮ್ಮ ಮುಂದೆ ಒಂದು ಮಾತನಾಡುತ್ತಾರೆ, ನಿಮ್ಮ ಬೆನ್ನ ಹಿಂದೆ ನಿಮ್ಮ ಬಗ್ಗೆ ಕೆಟ್ಟದ್ದು ಮಾತನಾಡುತ್ತಾರೆ. ಇವರಿಂದ ನಿಮಗೆ ಅಪಾಯವೇ ಹೆಚ್ಚು. ಆದ್ದರಿಂದ ಇಂತಹ ಜನರಿಂದ ದೂರವಿರಿ.

ಇತರರ ನೋವಲ್ಲಿ ಆನಂದ ಪಡೆಯುವ ಜನರು: ಇತರರನ್ನು ನೋಯಿಸುವುದರಲ್ಲಿ ಸಂತೋಷವನ್ನು ಕಂಡುಕೊಳ್ಳುವ ಜನರನ್ನು ಎಂದಿಗೂ ಆಹ್ವಾನಿಸಬಾರದು. ಏಕೆಂದರೆ ಅವರ ಕೆಟ್ಟ ಮನಸ್ಥಿತಿಯಿಂದ ನಿಮಗೆ ಹಾನಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ. ಅಂತಹ ವ್ಯಕ್ತಿಗಳಿಂದ ನೀವು ಸಾಧ್ಯವಾದಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು.

ಅಸೂಯೆ ಪಡುವ ಜನ: ಇನ್ನೊಬ್ಬರ ಏಳಿಗೆಯನ್ನು ಕಂಡು ಅಸೂಯೆ ಪಡುವ ಜನರು ಎಂದಿಗೂ ನಿಮಗೆ ಒಳ್ಳೆಯದನ್ನು ಬಯಸುವುದಿಲ್ಲ. ಅವರನ್ನು ನೀವು ಮನೆಗೆ ಆಹ್ವಾನಿಸಿದರೆ ಅವರು ನಿಮ್ಮ ಮನೆ ಹಾಗೂ ನಿಮ್ಮ ಯಶಸ್ಸಿನ ಬಗ್ಗೆ ಹೆಚ್ಚು ಅಸೂಯೆ ಪಡುತ್ತಾರೆ. ಅಂತಹ ವ್ಯಕ್ತಿಗಳಿಂದ ಸಾಧ್ಯವಾದಷ್ಟು ದೂರವಿರಬೇಕು ಎಂದು ಚಾಣಕ್ಯ ಹೇಳಿದ್ದಾರೆ.

ನಕಾರಾತ್ಮಕ ಜನ: ಯಾವಾಗಲೂ ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರಿ, ಏಕೆಂದರೆ ಅವರು ನಿಮ್ಮಲ್ಲೂ ನಕಾರಾತ್ಮಕತೆಯನ್ನು ತುಂಬಬಹುದು ಮತ್ತು ಅವರು ಮನೆಯ ಸಂತೋಷದ ವಾತಾವರಣವನ್ನೂ ಹಾಳು ಮಾಡಬಹುದು.

ಇದನ್ನೂ ಓದಿ: ಚಾಣಕ್ಯರ ಪ್ರಕಾರ ಶ್ರೀಮಂತರಾಗುವ ಮುನ್ನ ಜನರಲ್ಲಿ ಬದಲಾವಣೆಗಳು ಕಾಣಿಸುತ್ತವಂತೆ

ಸುಳ್ಳುಗಾರರು: ಸುಳ್ಳುಗಾರರನ್ನು ನಿಮ್ಮ ಮನೆಗೆ ಆಹ್ವಾನಿಸುವುದರಿಂದ ಸಮಸ್ಯೆಗಳು ಉಂಟಾಗುತ್ತವೆ ಮತ್ತು ನಿಮ್ಮ ಇದರಿಂದ ನಿಮ್ಮ ಖ್ಯಾತಿಗೂ ಹಾನಿಯಾಗುತ್ತದೆ ಎಂದು ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ.

ಅಪ್ರಾಮಾಣಿಕರು: ಅಪ್ರಾಮಾಣಿಕರು ಅಥವಾ ಭ್ರಷ್ಟ ವ್ಯಕ್ತಿಗಳನ್ನು ಸಹ ಆಹ್ವಾನಿಸಬಾರದು. ಇಂತಹ ಅನೈತಿಕ ವ್ಯಕ್ತಿಗಳನ್ನು ಮನೆಗೆ ಆಹ್ವಾನಿಸಿದರೆ ನಿಮ್ಮ ಗೌರವವೂ ಹಾಳಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲಕ್ಕುಂಡಿ ಸಿಕ್ಕ ನಿಧಿಗೆ ಇದೆ 300 ವರ್ಷಗಳ ಇತಿಹಾಸ, ಗ್ರಾಮಸ್ಥರಲ್ಲಿ ಶುರುವಾಯ್ತು ಹೊಸ ಆತಂಕ – Kannada News | Lakkundi Gold Treasure 300 year Old Says Gadag And villagers worried about treasure hunters

ಗದಗ, (ಜನವರಿ 14): ಜಿಲ್ಲೆಯ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ (Lakkundi Gold Treasure) ಈಗ ಭಾರಿ ಚರ್ಚೆ ಹುಟ್ಟುಹಾಕಿದ್ದು, ಈ ಚಿನ್ನದ ಹಿನ್ನೆಲೆಯ ರಹಸ್ಯ ಬಯಲಾಗಿದೆ. ಹೌದು…ಜಿಲ್ಲಾಡಳಿತ ವಶಕ್ಕೆ ಪಡೆದ ಚಿನ್ನವನ್ನು ಪರಿಶೀಲನೆ ನಡೆಸಿದಾಗ ಚಿನ್ನ ಪುರಾತನ ಕಾಲದ್ದು, ಕಲ್ಯಾಣ ಚಾಳುಕ್ಯರು, ಹಾಗೂ ವಿಜಯನಗರದ ಸಾಮ್ರಾಜ್ಯದ ಆಡಳಿತದ ವೇಳೆಯ ಚಿನ್ನ ಎನ್ನುವುದು ಬಹಿರಂಗವಾಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಗದಗ (Gadag) ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾಹಿತಿ ನೀಡಿದ್ದು, ಸಿಕ್ಕಿರುವ ನಿಧಿ ವಿಜಯನಗರ ಸಾಮ್ರಾಜ್ಯ ಅಥವಾ ಚಾಲುಕ್ಯರ ಕಾಲದ್ದು. ಬ್ರಿಟಿಷರ ಕಾಲಕ್ಕಿಂತಲೂ ಹಳೆಯದಾದ ನಿಧಿಯಾಗಿದ್ದು, ಮೇಲ್ನೋಟಕ್ಕೆ ಇದು ವಿಜಯನಗರ ಕಾಲದ್ದು ಅನ್ನಿಸ್ತಿದೆ. ಆದ್ರೆ ನಿಖರ ವರದಿ ಬರಲು ಇನ್ನೂ 3 ದಿನಗಳು ಬೇಕಾಗುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ.

ಗದಗ ತಾಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10 ರಂದು ಚಿನ್ನದ‌ ನಿಧಿ ಪತ್ತೆಯಾಗಿತ್ತು. ಕಸ್ತೂರಿ ರಿತ್ತಿ ಅವರ ಮನೆಯ ಪಾಯ ಮುಚ್ಚುವ ವೇಳೆ ಚಿನ್ನದ ನಿಧಿ ಪತ್ತೆಯಾಗಿದ್ದು, ದೊಡ್ಡ ಸಂಚಲನಕ್ಕೆ ಕಾರಣವಾಗಿತ್ತು. ಕುಟುಂಬಸ್ಥರು ಪ್ರಾಮಾಣಿಕವಾಗಿ ಚಿನ್ನವನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದರು. ಈ ನಾಲ್ಕು ಜನ ರಾಜ್ಯ ಹಾಗೂ ಕೇಂದ್ರದ ಪುರಾತತ್ತ್ವ ‌ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಈ ಚಿನ್ನ 300ಕ್ಕೂ ವರ್ಷಗಳ ಹಿಂದಿನದ್ದು ಎನ್ನಲಾಗಿದೆ. ಕಲ್ಯಾಣ ಚಾಲುಕ್ಯರು, ವಿಜಯನಗರ ಅರಸರ ಆಳ್ವಿಕೆ ಸಮಯದಲ್ಲಿ ಚಿನ್ನ ಇರಬಹುದು ಎಂದು ಅಂದಾಜಿಸಲಾಗಿದೆ. ಇನ್ನೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾದ ಶರಣು ಗೋಗೇರಿ ಮಾತನಾಡಿ, ‌ಖಜಾನೆಯಲ್ಲಿ ಇಟ್ಟಿದ್ಷ ಚಿನ್ನವನ್ನು ವಿಡಿಯೋ ಚಿತ್ರೀಕರಣ ಮಾಡೋ ಮೂಲಕ ಅದರ ಮೂಲವನ್ನು ಪತ್ತೆ ಮಾಡುವ ಕೆಲಸ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಕುಟುಂಬಕ್ಕೆ ಸರ್ಪದ ಭಯದ ನಡುವೆಯೂ ಶುಕ್ರದೆಸೆ

ಇನ್ನೂ ಲಕ್ಕುಂಡಿ ಗ್ರಾಮದಲ್ಲಿ ಸಿಕ್ಕ ಚಿನ್ನ ಹಳೆ ಕಾಲದ್ದು ಎನ್ನುವ ಸತ್ಯ ಬಹಿರಂಗವಾಗಿದೆ.‌ ಈ ಚಿನ್ನವನ್ನು ನೋಡಿದ್ರೆ ಒಬ್ಬ ಸದೃಢ ಮನುಷ್ಯ ಹಾಕಿಕೊಳ್ಳುವ ಆವರಣಗಳನ್ನು ಎನ್ನುವುದು ಈ ಗಾತ್ರವನ್ನು ನೋಡಿದ್ರೆ ತಿಳಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಲಕ್ಕುಂಡಿ ಗ್ರಾಮಸ್ಥರಲ್ಲಿ ಹೊಸ ಆತಂಕ

ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ‌ನಿಧಿಪತ್ತೆಯಾದ ಬೆನ್ನಲ್ಲೇ ನಿಧಿಗಳ್ಳರ ಹಾವಳಿ ಹೆಚ್ಚಾಗುವ ಆತಂಕ ಎದುರಾಗಿದೆ. ಈ ಹಿಂದೆ ಕೂಡಾ ಲಕ್ಕುಂಡಿ ಗ್ರಾಮದಲ್ಲಿ ಸಾಕಷ್ಟು ನಿಧಿ ಶೋಧ ಮಾಡಿವ ದುಷ್ಕೃತ್ಯಗಳ ನಡೆದಿವೆ. ಗ್ರಾಮದಲ್ಲಿ 101 ದೇವಸ್ಥಾನ ಹಾಗೂ 101 ಬಾವಿಗಳಿದ್ದು, ‌ಕಳೆದ‌ ಎರಡು ವರ್ಷಗಳ ಹಿಂದೆ ಸೋಮೇಶ್ವರ ದೇವಸ್ಥಾನದಲ್ಲಿ ನಿಧಿಗಳ್ಳರು, ಬಸಣ್ಣ ಮೂರ್ತಿಯನ್ನು ತೆಗೆದು, ಆರೇಳು ಆಡಿಯಷ್ಟು ತಗ್ಗು ಅಗೆದು ನಿಧಿ ಶೋಧ ಮಾಡಿದ್ದರು. ಈಗ ಮನೆಯ ಪಾಯ ಹಾಕುವ ವೇಳೆಯಲ್ಲಿ ನಿಧಿ ಸಿಕ್ಕಿದ್ದರಿಂದ ಮತ್ತೆ ನಿಧಿಗಳ್ಳರ ಹಾವಳಿ ಹೆಚ್ಚಾಗಲಿದ್ದು, ಪುರಾತನ ದೇವಸ್ಥಾನಗಳಿಗೆ ಸಿಸಿಟಿವಿ ಹಾಗೂ ಭದ್ರತೆ ಒದಗಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಒಟ್ಟಿನಲ್ಲಿ ನಿಧಿಯ ನಿಖರ ಕಾಲಮಾನ ತಿಳಿಯಲು ಜಿಲ್ಲಾಡಳಿತ ಮುಂದಾಗಿದೆ. ಆದ್ರೆ ಊರಲ್ಲಿ ನಿಧಿ ಸಿಕ್ಕಿದ್ದೇ ಗ್ರಾಮಸ್ಥರು ನಿದ್ದೆಗೆಡುವಂತೆ ಮಾಡಿದ್ದು, ನಿಧಿಗಳ್ಳರಿಂದಾಗಿ ಆತಂಕದಲ್ಲೇ ಬದುಕುವಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಶ್ವಿನಿ ಗೌಡ ಗೆಲ್ಲಿಸಲು 25 ಲಕ್ಷ ಪೇಮೆಂಟ್ ಆಗಿದ್ಯಾ? ಕರವೇ ಸದಸ್ಯರ ಖಡಕ್ ತಿರುಗೇಟು – Kannada News | Karave members dismiss the allegations of Ashwini Gowda payment to Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ (Ashwini Gowda) ಅವರು ಫಿನಾಲೆ ತಲುಪಿದ್ದಾರೆ. ಅವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಗೆಲ್ಲಿಸಲು 25 ಲಕ್ಷ ರೂಪಾಯಿ ಪೇಮೆಂಟ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆ ಆರೋಪಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ತಿರುಗೇಟು ನೀಡಿದ್ದಾರೆ. ‘ಕರವೇ ಅಧ್ಯಕ್ಷರಾದ ನಾರಾಯಣ ಗೌಡ ಅವರು ಮಗನ ಮದುವೆಯ ಕಾರ್ಡ್ ಕೊಡಲು ಸುದೀಪ್ ಮನೆಗೆ ಹೋಗಿದ್ದರು. ಅದನ್ನು ಗಿಲ್ಲಿ ಫ್ಯಾನ್ಸ್ ಈ ರೀತಿ ತಿರುಗಿಸಿ ಟ್ರೋಲ್ ಮಾಡುತ್ತಿದ್ದಾರೆ. ಇದಕ್ಕೆಲ್ಲ ನಾವು ಜಗ್ಗಲ್ಲ. ಕರವೇ ಕಾರ್ಯಕರ್ತರೆಲ್ಲ ಅಶ್ವಿನಿ ಗೌಡ ಅವರಿಗೆ ವೋಟ್ ಮಾಡುತ್ತಿದ್ದಾರೆ. ಅಶ್ವಿನಿ ಅವರೇ ಗೆಲ್ಲುವುದು’ ಎಂದು ಕರವೇ ಸದಸ್ಯರು ಹೇಳಿದ್ದಾರೆ. ಜನವರಿ 17 ಮತ್ತು 18ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಲ್ಲು ಅರ್ಜುನ್ ಜೊತೆ ಹೊಸ ಸಿನಿಮಾ ಘೋಷಿಸಿದ ಮೈತ್ರಿ: ನಿರ್ದೇಶಕ ಯಾರು? – Kannada News | Mytri announce new movie with Allu Arjun, Lokesh Kanagaraj is directing

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಮೂಲಕ ಅಲ್ಲು ಅರ್ಜುನ್ (Allu Arjun) ಅಂತರಾಷ್ಟ್ರೀಯ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರ ಸಿನಿಮಾಗಳಿಗೆ ಈಗ ಅಮೆರಿಕ, ಅರಬ್ ದೇಶಗಳಲ್ಲಿ ಮಾತ್ರವಲ್ಲದೆ, ರಷ್ಯಾ, ಜಪಾನ್, ಚೀನಾ ಇನ್ನೂ ಕೆಲವು ದೇಶಗಳಲ್ಲಿ ಬೇಡಿಕೆ ಇದೆ. ಅಲ್ಲು ಅರ್ಜುನ್ ಅವರ ಸ್ಟಾರ್ ಗಿರಿಯನ್ನು ಇಂಟರ್ನ್ಯಾಷನಲ್ ಲೆವೆಲ್​​ಗೆ ಕೊಂಡೊಯ್ದ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ನಿರ್ಮಾಪಕರಾದ ಮೈತ್ರಿ ಮೂವಿ ಮೇಕರ್ಸ್ ಇದೀಗ ಮತ್ತೊಮ್ಮೆ ಅಲ್ಲು ಅರ್ಜುನ್ ಜೊತೆಗೆ ಕೈಜೋಡಿಸಿದೆ. ಅಲ್ಲು ಅರ್ಜುನ್ ಜೊತೆಗೆ ಹೊಸದೊಂದು ಸಿನಿಮಾವನ್ನು ಇಂದಷ್ಟೆ ಮೈತ್ರಿ ಮೂವಿ ಮೇಕರ್ಸ್ ಘೋಷಣೆ ಮಾಡಿದೆ.

ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಲಿರುವ ಈ ಸಿನಿಮಾವನ್ನು ನಿರ್ದೇಶನ ಮಾಡಲಿರುವುದು ತಮಿಳಿನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್. ರಜನೀಕಾಂತ್ ನಟನೆಯ ‘ಕೂಲಿ’ ಸಿನಿಮಾ ನಿರ್ದೇಶಿಸಿದ್ದ ಲೋಕೇಶ್ ಕನಗರಾಜ್ ಇದೀಗ ಅಲ್ಲು ಅರ್ಜುನ್ ನಟನೆಯ ಹೊಸ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಇದೀಗ ಮೈತ್ರಿ ಅನಿಮೇಟೆಡ್ ಟೀಸರ್ ಒಂದನ್ನು ಹಂಚಿಕೊಂಡಿದ್ದು, ಟೀಸರ್​​ನಲ್ಲಿ ಅಲ್ಲು ಅರ್ಜುನ್, ಕುದುರೆಯ ಮೇಲೆ ಕೂತಿದ್ದಾರೆ. ಸಾಕಷ್ಟು ಪ್ರಾಣಿಗಳು ಟೀಸರ್​​ನಲ್ಲಿವೆ. ಸಿನಿಮಾದ ಕತೆ ಅರಣ್ಯದಲ್ಲಿ ನಡೆಯುತ್ತದೆ ಎಂಬ ಸುಳಿವನ್ನು ಟೀಸರ್ ನೀಡುತ್ತಿದೆ.

ಅಲ್ಲು ಅರ್ಜುನ್ ನಟಿಸಿ, ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿರುವ ಈ ಸಿನಿಮಾಕ್ಕೆ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಲಿದ್ದಾರೆ. ಇವುಗಳ ಹೊರತಾಗಿ ಟೀಸರ್​​ನಲ್ಲಿ ಹೆಚ್ಚಿನ ಅಂಶಗಳು ಬಹಿರಂಗವಾಗಿಲ್ಲ. ಸಿನಿಮಾದ ನಾಯಕಿ, ಇತರೆ ಪಾತ್ರಗಳು ಇನ್ನಷ್ಟೆ ಘೋಷಣೆ ಆಗಬೇಕಿದೆ. ಆದರೆ ಸಿನಿಮಾದ ಚಿತ್ರೀಕರಣ ಇದೇ ವರ್ಷ ಆರಂಭವಾಗಲಿದೆ ಎಂದು ಸಹ ಟೀಸರ್​​ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ:ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಮಲ್ಟಿಪ್ಲೆಕ್ಸ್

ಅಲ್ಲು ಅರ್ಜುನ್ ಪ್ರಸ್ತುತ ಅಟ್ಲಿ ನಿರ್ದೇಶಿಸುತ್ತಿರುವ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾನಲ್ಲಿ ದೀಪಿಕಾ ಪಡುಕೋಣೆ ನಾಯಕಿ. ಸಿನಿಮಾವನ್ನು ಹಾಲಿವುಡ್​ನ ‘ಗಾರ್ಡಿಯನ್ಸ್ ಆಫ್ ದಿ ಗ್ಯಾಲೆಕ್ಸಿ’ ಮಾದರಿಯಲ್ಲಿ ಅಟ್ಲಿ ಕಟ್ಟುತ್ತಿದ್ದಾರೆ. ಆ ಸಿನಿಮಾದ ಬಳಿಕ ತ್ರಿವಿಕ್ರಮ್ ಜೊತೆಗೆ ಮತ್ತೊಂದು ಸಿನಿಮಾನಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಇದೀಗ ಮೈತ್ರಿ ಘೋಷಿಸಿರುವಂತೆ ಅಲ್ಲು ಅರ್ಜುನ್ ಮೊದಲಿಗೆ ಅಟ್ಲಿ ನಿರ್ದೇಶನದ ಸಿನಿಮಾನಲ್ಲಿಯೇ ನಟಿಸಲಿದ್ದಾರೆ.

ಇನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದ ‘ಕೂಲಿ’ ಸಿನಿಮಾ ನಿರೀಕ್ಷಿತ ಯಶಸ್ಸು ಕಾಣಲಿಲ್ಲ ಹಾಗೆಂದು ಪೂರ್ಣ ನಿರಾಸೆ ಮಾಡಿಲ್ಲ. ಲೋಕೇಶ್ ಕನಗರಾಜ್ ಕೈಯಲ್ಲಿ ಸಹ ಹಲವು ಸಿನಿಮಾಗಳಿವೆ. ‘ಡಿಸಿ’ ಹೆಸರಿನ ಸಿನಿಮಾನಲ್ಲಿ ಅವರು ನಾಯಕರಾಗಿ ನಟಿಸುತ್ತಿದ್ದಾರೆ. ‘ಖೈದಿ 2’ ನಿರ್ದೇಶನ ಮಾಡಬೇಕಿದೆ. ಆಮಿರ್ ಖಾನ್ ಅವರಿಗಾಗಿ ಸಿನಿಮಾ ಮಾಡುವುದಾಗಿ ಘೋಷಿಸಿದ್ದಾರೆ. ‘ವಿಕ್ರಂ 2’ ಮಾಡಬೇಕಿದೆ. ಸೂರ್ಯ ಅವರಿಗಾಗಿ ಸಿನಿಮಾ ಮಾಡುವುದಾಗಿಯೂ ಘೋಷಿಸಿದ್ದಾರೆ. ಆದರೆ ಇದೆಲ್ಲದರ ನಡುವೆ ಇದೀಗ ಅಲ್ಲು ಅರ್ಜುನ್ ಸಿನಿಮಾ ಒಪ್ಪಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:34 pm, Wed, 14 January 26

Source link

IND vs NZ: ರಾಹುಲ್ ತಮ್ಮ ಶತಕವನ್ನು ಈ ರೀತಿ ಆಚರಿಸುವುದೇಕೆ? ಇದರ ಹಿಂದಿದೆ ಕಾರಣ – Kannada News | KL Rahul’s Heroic Rajkot Century: Saves Team India, Viral Celebration for Daughter

ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗಲೆಲ್ಲ ತಂಡಕ್ಕೆ ನೆರವಾಗುವ ಆಟಗಾರರ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್​ ಕೂಡ ಒಬ್ಬರು. ಇದಕ್ಕೆ ಉದಾಹರಣೆ ಎಂಬಂತೆ ರಾಜ್‌ಕೋಟ್ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 112 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್​ಗೆ ಬಂದ ಕೆಎಲ್ ರಾಹುಲ್ ಭರ್ಜರಿ ಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಇದೀಗ ಶತಕದ ಬಳಿಕ ರಾಹುಲ್ ಮಾಡಿದ ಸಂಭ್ರಮಾಚರಣೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಿಕ್ಸರ್ ಬಾರಿಸುವ ಮೂಲಕ ತಮ್ಮ 8ನೇ ಏಕದಿನ ಶತಕ ಪೂರೈಸಿದ ಕೆಎಲ್ ರಾಹುಲ್ ತಮ್ಮ ಹೆಲ್ಮೆಟ್ ತೆಗೆದು, ಬ್ಯಾಟ್ ಮೇಲಕ್ಕೆ ಎತ್ತಿ, ಬೆರಳು ಚೀಪುವ ರೀತಿಯಲ್ಲಿ ಸನ್ನೆ ಮಾಡಿದರು. ಕೆಎಲ್ ರಾಹುಲ್ ಈ ಹಿಂದೆಯೂ ಈ ರೀತಿಯ ಸಂಭ್ರಮಾಚರಣೆ ಮಾಡಿದ್ದರು. ರಾಹುಲ್ ಅವರ ಈ ಶೈಲಿಯ ಸಂಭ್ರಮಾಚರಣೆಗೆ ಕಾರಣವೂ ಇದ್ದು, ಇತ್ತೀಚೆಗೆ ಜನಿಸಿದ ತಮ್ಮ ಮಗಳಿಗೆ ಈ ಶತಕವನ್ನು ಅರ್ಪಿಸುವ ಮೂಲಕ ಅವರನ್ನು ನೆನಪಿಸಿಕೊಳ್ಳುತ್ತಾರೆ.

ಶತಲದ ಮೂಲಕ ರಾಹುಲ್, ರಾಜ್‌ಕೋಟ್‌ನಲ್ಲಿ ಏಕದಿನ ಶತಕ ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರೋಹಿತ್ ಮತ್ತು ವಿರಾಟ್ ಕೊಹ್ಲಿ ಕೂಡ ಈ ಮೈದಾನದಲ್ಲಿ ಎಂದಿಗೂ ಶತಕ ಗಳಿಸಿಲ್ಲ. ರಾಹುಲ್ ತಮ್ಮ ಅತ್ಯುತ್ತಮ ಏಕದಿನ ಸ್ಕೋರ್, ಅಜೇಯ 112 ರನ್ ದಾಖಲಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 5 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ರಾಹುಲ್ 64.21 ರ ಸರಾಸರಿ ಮತ್ತು 100 ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಕೆ.ಎಲ್. ರಾಹುಲ್ ಅವರ ಶತಕದಿಂದಾಗಿ, ಟೀಂ ಇಂಡಿಯಾ 50 ಓವರ್‌ಗಳಲ್ಲಿ 284 ರನ್‌ಗಳನ್ನು ಗಳಿಸಿತು. ರಾಹುಲ್, ಜಡೇಜಾ ಮತ್ತು ರೆಡ್ಡಿ ಅವರೊಂದಿಗೆ ಅರ್ಧಶತಕದ ಪಾಲುದಾರಿಕೆಯನ್ನು ಹಂಚಿಕೊಂಡರು. ಶುಭಮನ್ ಗಿಲ್ ಕೂಡ 56 ರನ್‌ಗಳ ಕಾಣಿಕೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿದೇಶದಿಂದ ಗುಟ್ಟಾಗಿ ಬಂದು ಅಮ್ಮನನ್ನೇ ಕೊಲೆ ಮಾಡಿದ ಮಗ! – Kannada News | Son returns from Abroad hides in cattle shed then kills his mother in Haryana

ನವದೆಹಲಿ, ಜನವರಿ 14: ಹರಿಯಾಣದ ಯಮುನಾನಗರ ಜಿಲ್ಲೆಯಲ್ಲಿ ಮಹಿಳೆಯ ಕೊಲೆಯಾಗಿತ್ತು. ಈ ಕೊಲೆ (Murder Case) ಪ್ರಕರಣ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಏಕೆಂದರೆ ಎಷ್ಟೇ ತಲೆಕೆಡಿಸಿಕೊಂಡು ಹುಡುಕಾಟ ನಡೆಸಿದ್ದರೂ ಅವರಿಗೆ ಕೊಲೆಗಾರನ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ, ಕೊನೆಗೂ ಈ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ, ಆ ಮಹಿಳೆಯ ಕೊಲೆಗಾರ ಬೇರಾರೂ ಅಲ್ಲ, ಆಕೆಯ ಮಗನೇ ಎಂಬುದು ಅಚ್ಚರಿಯ ವಿಷಯ. ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಆ ಯುವಕ ಇದೀಗ ಕಂಬಿ ಎಣಿಸುತ್ತಿದ್ದಾನೆ.

ಕೌಟುಂಬಿಕ ಉದ್ವಿಗ್ನತೆಯಿಂದಾಗಿ ಆತ ಸ್ನೇಹಿತನ ಸಹಾಯದಿಂದ ಆಕೆಯನ್ನು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಹರಿಯಾಣದ ಶ್ಯಾಮಪುರ ಗ್ರಾಮದ ಸರಪಂಚ್ ಅವರ ಪತ್ನಿ ಬಲ್ಜಿಂದರ್ ಕೌರ್ ಡಿಸೆಂಬರ್ 24ರ ರಾತ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಈ ಕೇಸನ್ನು ತನಿಖೆಗಾಗಿ ಅಪರಾಧ ಶಾಖೆಗೆ ಹಸ್ತಾಂತರಿಸಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಇದನ್ನೂ ಓದಿ: Crime News: ತಾಯಿ, ಹೆಂಡತಿಯನ್ನು ಕೊಂದು ಮಾಂಸ ಬಗೆದು ತಿಂದ ಕಿರಾತಕ!

ಆಗ ಆಧುನಿಕ ತಂತ್ರಜ್ಞಾನದ ಮೊರೆಹೋದ ಪೊಲೀಸರು ತಾಂತ್ರಿಕ ಪುರಾವೆಗಳು, ಮೊಬೈಲ್ ಸ್ಥಳದ ಟ್ರ್ಯಾಕಿಂಗ್ ಮತ್ತು ಫೋನ್ ಕಾಲ್ ದಾಖಲೆಗಳ ಮೂಲಕ ಪ್ರಕರಣವನ್ನು ಬಯಲು ಮಾಡಿದ್ದಾರೆ. ಮೃತ ಮಹಿಳೆಯ ಮಗ ಗೋಮಿತ್ ಡಿಸೆಂಬರ್ 18ರಂದೇ ಇಂಗ್ಲೆಂಡ್‌ನಿಂದ ಭಾರತಕ್ಕೆ ರಹಸ್ಯವಾಗಿ ಮರಳಿದ್ದ ಎಂಬುದು ತನಿಖೆಯ ವೇಳೆ ಬಯಲಾಗಿತ್ತು. ಆತ ತನ್ನ ಕುಟುಂಬಕ್ಕೆ ತಿಳಿಸದೆ ತನ್ನ ಆಪ್ತ ಸ್ನೇಹಿತ ಪಂಕಜ್ ಸಹಾಯ ಪಡೆದು ಅದೇ ಊರಿನಲ್ಲಿ ಬಚ್ಚಿಟ್ಟುಕೊಂಡಿದ್ದ.

ಗೋಮಿತ್ ತನ್ನ ತಾಯಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಬೇರೆ ಜಾತಿಯ ಮಹಿಳೆಯೊಂದಿಗಿನ ಅವನ ಸಂಬಂಧವನ್ನು ಆಕೆ ವಿರೋಧಿಸಿದ ನಂತರ ಉದ್ವಿಗ್ನತೆ ಹೆಚ್ಚಾಗಿತ್ತು. ಇದು ಅವನನ್ನು ತೀವ್ರವಾಗಿ ಕೆರಳಿಸಿತ್ತು. ಈ ಪರಿಸ್ಥಿತಿಯನ್ನು ಪರಿಹರಿಸಲು ಸಾಧ್ಯವಾಗದ ಕುಟುಂಬದ ಸದಸ್ಯರು ಗೋಮಿತ್‌ನನ್ನು ಅಧ್ಯಯನ ವೀಸಾದಲ್ಲಿ ಇಂಗ್ಲೆಂಡ್‌ಗೆ ಕಳುಹಿಸಿದ್ದರು. ವಿದೇಶದಲ್ಲಿ ಅವನು ತನ್ನ ಅಧ್ಯಯನವನ್ನು ಮುಂದುವರಿಸಿ, ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಅವನ ತಾಯಿಯ ಬಗ್ಗೆ ಅಸಮಾಧಾನ ಕಡಿಮೆಯಾಗಿರಲಿಲ್ಲ. ತನ್ನ ಪ್ರೀತಿಗೆ ಅಡ್ಡ ಬರುತ್ತಿರುವ ಅಮ್ಮನನ್ನೇ ಮುಗಿಸಬೇಕೆಂದು ಪ್ಲಾನ್ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಕನಸಲ್ಲಿ ಕಾಡಿದ 3 ಮಹಿಳೆಯರು; ಭಯದಿಂದ ಪ್ರಾಣವನ್ನೇ ಕಳೆದುಕೊಂಡ ಯುವಕ

ಡಿಸೆಂಬರ್ 24ರಂದು ಗೋಮಿತ್ ತನ್ನ ಮನೆಗೆ ಹೋಗಿ ದನದ ಕೊಟ್ಟಿಗೆಯಲ್ಲಿ ಅಡಗಿಕೊಂಡನು. ಆ ರಾತ್ರಿ ನಂತರ, ಅವನು ತನ್ನ ತಾಯಿಯ ಮೇಲೆ ದಾಳಿ ಮಾಡಿ, ಕತ್ತು ಹಿಸುಕಿ ಕೊಂದನು. ಕೊಲೆ ಆಕಸ್ಮಿಕವೆಂದು ತೋರಿಸಲು ಆತ ಆಕೆಯ ಶವವನ್ನು ನೀರಿನ ಟ್ಯಾಂಕ್‌ನಲ್ಲಿ ಎಸೆದಿದ್ದ ಎಂದು ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version