Devotion and Destiny: ಪೂಜೆ ಪುನಸ್ಕಾರ ಮಾಡುವುದರಿಂದ ನಿಜವಾಗಿಯೂ ಕಷ್ಟಗಳಿಂದ ಮುಕ್ತಿ ಸಿಗುತ್ತಾ?
ಪೂಜೆ ಪುನಸ್ಕಾರಗಳಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಮಾನವರಾಗಿ ಹುಟ್ಟಿದ ಮೇಲೆ ಕಷ್ಟ-ಸುಖಗಳು ಜೀವನದ ಸಹಜ ಭಾಗ. ಅವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಪೂರ್ವಜನ್ಮದ ಕರ್ಮಫಲ ಅಥವಾ ಹಣೆಬರಹವನ್ನು ಹರಿಹರರೂ ಸಹ ಬದಲಾಯಿಸಲು ಸಾಧ್ಯವಿಲ್ಲ ಎಂಬ ನಂಬಿಕೆಯಿದೆ. ಆದರೂ, ಈ ಪೂಜೆ, ಪುನಸ್ಕಾರ, ಹವನ, ಹೋಮ, ಯಜ್ಞ, ಯಾಗಾದಿ, ಜಪಗಳನ್ನು ಆಚರಿಸುವುದರಿಂದ ಆ ಸಮಸ್ಯೆಗಳನ್ನು, ಕಷ್ಟಗಳನ್ನು ಸಹಿಸಿಕೊಳ್ಳುವ,…