Headlines

ಪತ್ನಿಯ ಪ್ರಿಯಕರನಿಂದಲೇ ನಡೀತು ಪತಿಯ ಕೊಲೆ! ಸ್ನೇಹಿತನಂತೆ ನಟಿಸಿದ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 08: ಹೆಂಡತಿಯ ಅಕ್ರಮ ಸಂಬಂಧಕ್ಕೆ (Extramarital Affair) ಗಂಡ ಬಲಿಯಾದ ಘಟನೆ ಮಾರ್ಚ್ 26 ರಂದು ಬೊಮ್ಮಸಂದ್ರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪತ್ನಿಯ ಪ್ರಿಯಕರ ಆಕೆಯ ಪತಿಯೊಂದಿಗೆ ಸ್ನೇಹ ಬೆಳೆಸಿ, ಮಧ್ಯಪಾನ ಮಾಡಿಸಿ ಕೊನೆಗೆ ಚಾಕುವಿನಿಂದ ಕತ್ತು ಸೀಳಿ ಆತನ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮದ್ಯಪಾನ ಮಾಡಿಸಿ ಕತ್ತು ಸೀಳಿದ ಮೃತ ವ್ಯಕ್ತಿಯನ್ನು 42 ವರ್ಷದ ಸುನಿಲ್ ನಾಯಕ್ ಎಂದು ಗುರುತಿಸಲಾಗಿದೆ. ಆರೋಪಿ…

Read More

ಲೋಕಸಭೆಯಲ್ಲಿ ವಿರೋಧ ಪಕ್ಷಗಳಿಗೆ ಮುಖಭಂಗ; ಸ್ಪೀಕರ್ ವಿರುದ್ಧ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ, ಮಾರ್ಚ್ 11: ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Om Birla) ಅವರ ವಿರುದ್ಧ ಪ್ರತಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಇಂದು ಸದನದಲ್ಲಿ ಧ್ವನಿ ಮತದಿಂದ ತಿರಸ್ಕರಿಸಲಾಯಿತು. ಹಲವಾರು ವಿರೋಧ ಪಕ್ಷದ ಸಂಸದರ ಬೆಂಬಲದೊಂದಿಗೆ ಕಾಂಗ್ರೆಸ್‌ನ ಮೊಹಮ್ಮದ್ ಜಾವೇದ್ ಅವರು ಈ ನಿರ್ಣಯವನ್ನು ಮಂಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಭಾಷಣದ ವೇಳೆ ವಿರೋಧ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಅವರು ಭಾರತದ ಪ್ರಜಾಪ್ರಭುತ್ವದ…

Read More

ಕಾಂಗ್ರೆಸ್ ಅಸ್ಸಾಂ ಜನರಿಗೆ ಗೌರವ ಕೊಡಲಿಲ್ಲ, ವಲಸಿಗರಿಗೆ ಮಣೆ ಹಾಕಿತು; ಗುವಾಹಟಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ – Kannada News | Congress dislikes people of Assam likes foreign infiltrators PM Modi attacks opposition in Guwahati

ಗುವಾಹಟಿ, ಜನವರಿ 17: ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Modi) ಗುವಾಹಟಿಗೆ ಭೇಟಿ ನೀಡಿದ್ದಾರೆ. ಬೋಡೋಲ್ಯಾಂಡ್ ಅನ್ನು ನಿರ್ಲಕ್ಷಿಸುವಲ್ಲಿ ಮತ್ತು ರಾಜಕೀಯ ಲಾಭಕ್ಕಾಗಿ ಅಕ್ರಮ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುವಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರಗಳ ಪಾತ್ರ ದೊಡ್ಡದು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಬೋಡೋಲ್ಯಾಂಡ್ ಸಂಪರ್ಕವನ್ನು ಮುಖ್ಯವಾಹಿನಿಯಿಂದ ಕಡಿತಗೊಳಿಸಿತು. ಇದರಿಂದಾಗಿ ಒಳನುಸುಳುವವರು ಮತ ಬ್ಯಾಂಕ್ ರಾಜಕೀಯಕ್ಕಾಗಿ ಈ ಪ್ರದೇಶವನ್ನು ಬಳಸಿಕೊಳ್ಳಲು ಸುಲಭವಾಯಿತು ಎಂದು ಮೋದಿ ಹೇಳಿದ್ದಾರೆ. ಅಸ್ಸಾಂ ರಾಜ್ಯದಲ್ಲಿ ಒಂದು ಕಾಲದಲ್ಲಿ ಹತ್ಯೆಗಳು…

Read More

ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ ಮಾಡ್ತಾರೆ ಈ ಅಭಿಮಾನಿ!

ಚಾಮರಾಜನಗರ, ಮಾರ್ಚ್ 23: ಅಣ್ಣಾವ್ರ ಹುಟ್ಟೂರಾಗಿರುವ, ಕರ್ನಾಟಕ-ತಮಿಳುನಾಡು ಗಡಿ ಭಾಗದ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ಇದೀಗ ಕನ್ನಡಿಗರ ಗಮನ ಸೆಳೆಯುವಂತೆ ಮಾಡಿದ್ದಾರೆ. ದೊಡ್ಡ ಗಾಜನೂರು ಗ್ರಾಮದ ಸಿದ್ದರಾಜು ಎಂಬ ಅಭಿಮಾನಿ, ಸುದೀಪ್ ಮೇಲೆ ಅಪಾರ ಭಕ್ತಿ ಹೊಂದಿದ್ದಾರೆ. ಐಸ್ ಕ್ಯಾಂಡಿ ಮಾರಾಟ ಮಾಡುತ್ತಾ ಜೀವನ ನಡೆಸುವ ಸಿದ್ದರಾಜುಗೆ ‘ಕಿಚ್ಚ’ ಸುದೀಪ್ ಎಂದರೆ ಪಂಚಪ್ರಾಣ. ಇದಕ್ಕಾಗಿ ಅವರು ಮನೆ ಬಳಿ ಸುದೀಪ್‌ಗಾಗಿ ಗುಡಿ ನಿರ್ಮಿಸಿದ್ದು, ಪ್ರತಿದಿನವೂ ನಿತ್ಯ ಆರಾಧನೆ ಮಾಡುತ್ತಾರೆ! ಸೋಮವಾರ…

Read More

‘ರಾಣಿ’ ಧಾರಾವಾಹಿಯಲ್ಲಿ ಮಹತ್ವದ ತಿರುವು; ಅಕ್ಷರ ಲೋಕಕ್ಕೆ ಕಾಲಿಟ್ಟ ರಾಣಿ – Kannada News | Rani Serial: Education Dream Reignites! Colors Kannada’s Rani Inspires Women’s Empowerment

ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ‘ರಾಣಿ’ ಧಾರಾವಾಹಿ ಹೊಸ ತಿರುವು ಪಡೆದುಕೊಂಡಿದೆ. ಕೇವಲ ಸಂಸಾರದ ಜಗಳ, ಕೌಟುಂಬಿಕ ಬಿಕ್ಕಟ್ಟುಗಳಿಗೆ ಬಹುತೇಕ ಧಾರಾವಾಹಿಗಳು ಸೀಮಿತ ಆಗಿರುತ್ತವೆ. ಆದರೆ, ‘ರಾಣಿ’ ಧಾರಾವಾಹಿ ಆ ರೀತಿ ಅಲ್ಲ. ಯಾವುದೋ ಅನಿವಾರ್ಯ ಕಾರಣಕ್ಕೆ ಬಾಲ್ಯದಲ್ಲಿ ಮೊಟಕಾಗಿದ್ದ ಅವಳ ಶಿಕ್ಷಣದ ಕನಸಿಗೆ ಈಗ ಜೀವ ಬಂದಿದೆ. ರಾಣಿ ಹುಟ್ಟಿದ್ದು ಜೈಲಿನಲ್ಲಿ. ಹೀಗಾಗಿ, ವಿದ್ಯಾಭ್ಯಾಸ ನಡೆಸಲು ಆಕಗೆ ಸಾಧ್ಯವಾಗಿರಲಿಲ್ಲ. ಈಗ ಹಳೆಯ ಕಹಿ ನೆನಪುಗಳನ್ನು ಮರೆತು ಮತ್ತೆ ಅಕ್ಷರ ಲೋಕಕ್ಕೆ ಮರಳುತ್ತಿದ್ದಾಳೆ. ತನ್ನ ಮಗಳ ವಯಸ್ಸಿನ ವಿದ್ಯಾರ್ಥಿಗಳ…

Read More

IND vs NZ: ಕೊಹ್ಲಿ ದಾಖಲೆ ಮುರಿದು ವಿಶ್ವ ದಾಖಲೆ ನಿರ್ಮಿಸಿದ ಸೂರ್ಯಕುಮಾರ್ – Kannada News | Suryakumar Yadav Breaks Kohli Record, Sets T20 World Mark for Fastest 3000 Runs

ಈ ದಾಖಲೆಯ ಜೊತೆಗೆ ಮತ್ತೊಂದು ವಿಶ್ವ ದಾಖಲೆಯನ್ನು ಸೃಷ್ಟಿಸಿದ ಸೂರ್ಯ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3,000 ರನ್‌ ಪೂರೈಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡರು. ಸೂರ್ಯ 1,822 ಎಸೆತಗಳಲ್ಲಿ 3,000 ಟಿ20ರನ್‌ಗಳನ್ನು ಪೂರ್ಣಗೊಳಿಸಿದರು. ಈ ಹಿಂದೆ, ಈ ದಾಖಲೆಯನ್ನು ಯುಎಇಯ ಮೊಹಮ್ಮದ್ ವಾಸಿಮ್ ಹೊಂದಿದ್ದರು, ಅವರು 1,947 ಎಸೆತಗಳಲ್ಲಿ 3,000 ಟಿ20 ರನ್‌ ಪೂರೈಸಿದ್ದರು. Source link

Read More

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2025 ರ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಮಹಿಳಾ ತಂಡ ಟಿ20 ಸರಣಿ ಗೆದ್ದು, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಸೋತಿತ್ತು. ಇದೀಗ ಹೊಸ ಪ್ರವಾಸಕ್ಕೆ ಸಜ್ಜಾಗಿರುವ ವನಿತಾ ಪಡೆ, ಐದು ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸಕ್ಕಾಗಿ ಇದೀಗ ಬಿಸಿಸಿಐ, ತಂಡವನ್ನು ಸಹ ಪ್ರಕಟಿಸಿದೆ. ಈ ಪ್ರವಾಸಕ್ಕೆ 15 ಆಟಗಾರ್ತಿಯರ ತಂಡವನ್ನು ಘೋಷಿಸಿದ್ದು, ಎಂದಿನಂತೆ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಇಬ್ಬರು ಆಟಗಾರ್ತಿಯರಿಗೆ…

Read More

ಜೈಲಲ್ಲೇ ಪ್ಲ್ಯಾನ್​​ ಮಾಡಿ ಫಿಲ್ಮಿ ಸ್ಟೈಲ್​ನಲ್ಲಿ ಪೆಟ್ರೋಲ್​​ ಬಂಕ್ ಸಿಬ್ಬಂದಿ​ ದೋಚಿದ್ದ ಐವರು ಅರೆಸ್ಟ್​

ಮೈಸೂರು, ಮಾರ್ಚ್​ 10: ಕಿರುಮುದ್ದನಹಳ್ಳಿ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಫಿಲ್ಮಿ ಸ್ಟೈಲ್ ದರೋಡೆ ಪ್ರಕರಣವನ್ನ ಭೇದಿಸಿರುವ ಬಿಳಿಕೆರೆ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಡೀಸೆಲ್ ಕೇಳುವ ನೆಪದಲ್ಲಿ ಬಂದು ಮಚ್ಚು-ಡ್ರಾಗರ್ ತೋರಿಸಿ ಅಟ್ಟಹಾಸ ಮೆರೆದಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದ್ದು, ದರೋಡೆಗೆ ಇವರು ಸ್ಕೆಚ್​​ ಹಾಕಿದ್ದಿದ್ದು ಮಂಡ್ಯದ ಸೆಂಟ್ರಲ್ ಜೈಲಿನಲ್ಲಿ ಎಂಬ ವಿಷಯವೂ ತನಿಖೆ ವೇಳೆ ಬಯಲಾಗಿದೆ. ಕಳೆದ ತಿಂಗಳು ಫೆಬ್ರವರಿ 12ರಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯಿಲ್ ಬಂಕ್‌ನಲ್ಲಿ ದರೋಡೆ ಮಾಡಿದ್ದ…

Read More

‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’: ಸಂತೆಯಲ್ಲೇ ಮತಾಂತರಕ್ಕೆ ಇಳಿದವರಿಗೆ ಸಾರ್ವಜನಿಕರಿಂದ ಧರ್ಮದೇಟು

ಚಿಕ್ಕಮಗಳೂರು, ಮಾ.31: ಜಿಲ್ಲೆಯ ಹೊಸಪೇಟೆ ಗ್ರಾಮದ ಸಂತೆ ಮೈದಾನದಲ್ಲಿ ಪುಸ್ತಕಗಳನ್ನು ಹಂಚುವ ಮೂಲಕ ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮಂಗಳವಾರ (ಮಾ.31) ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಮೂಲದ ಓರ್ವ ವೃದ್ಧ ಮತ್ತು ಮಧ್ಯವಯಸ್ಕ ವ್ಯಕ್ತಿ ಹೊಸಪೇಟೆ ಗ್ರಾಮದ ಸಂತೆಯಲ್ಲಿ ‘ನಿಮ್ಮ ದುಃಖ ಸಂತೋಷವಾಗಿ ಬದಲಾಗುತ್ತೆ’ ಎಂಬ ಪುಸ್ತಕಗಳನ್ನು ಹಂಚುತ್ತಿದ್ದರು. ಮನೆ-ಮನೆಗೆ ತೆರಳಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಅವರನ್ನು…

Read More

ಭಾರತ ನಮ್ಮನ್ನು ಅವಮಾನಿಸಿದೆ… ನಾವು ಶ್ರೀಲಂಕಾದಲ್ಲಿ ಆಡ್ತೀವಿ..!

2026ರ ಟಿ20 ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ತಂಡ ಕಣಕ್ಕಿಳಿಯುವುದೆಲ್ಲಿ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಸದ್ಯಕ್ಕಂತು ಉತ್ತರ ಸಿಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಏಕೆಂದರೆ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲು ಬಾಂಗ್ಲಾದೇಶ್ ಹಿಂದೇಟು ಹಾಕಿದೆ. ಬದಲಾಗಿ ನಮ್ಮ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಯೋಜಿಸುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಈ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಇದಾಗ್ಯೂ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ನಿಲುವು ಬದಲಿಸಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾದೇಶ್ ವೇಗಿ ಮುಸ್ತಫಿಝುರ್ ರೆಹಮಾನ್…

Read More