ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ನಿಮಗೆ ಹೈ ಬಿಪಿ ಇದ್ಯಾ? ಹಾಗಿದ್ರೆ ಸ್ಟ್ರೋಕ್ ಆಗದಂತೆ ತಡೆಯಲು ಈ ರೀತಿ ಮಾಡಿ

ಇತ್ತೀಚಿನ ವರ್ಷಗಳಲ್ಲಿ ಹೈ ಬಿಪಿ ಪ್ರಕರಣಗಳು ಹೆಚ್ಚುತ್ತಿವೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ಅಸ್ವಸ್ಥ ಜೀವನಶೈಲಿ ಈ ರೀತಿ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ಸಾಮಾನ್ಯವಾಗಿ ರಕ್ತದೊತ್ತಡದ ಮಟ್ಟ 120/80 ಎಂಎಂಎಚ್ಜಿ (mmHg) ಇರಬೇಕು ಎಂದು ವೈದ್ಯರು ಹೇಳುತ್ತಾರೆ. ಆದರೆ ಇದು ನಿರಂತರವಾಗಿ 140/90 ಎಂಎಂಎಚ್ಜಿ ಅಥವಾ ಅದಕ್ಕಿಂತ ಹೆಚ್ಚಿದ್ದರೆ, ಅದನ್ನು ಹೈಪರ್‌ಟೆನ್ಶನ್ ಎಂದು ಕರೆಯಲಾಗುತ್ತದೆ. ಈ ಮಟ್ಟದಲ್ಲಿ ಬಿಪಿ ದೀರ್ಘಕಾಲ ಇದ್ದರೆ ಸ್ಟ್ರೋಕ್ ಅಪಾಯ ಬಹಳ ಹೆಚ್ಚುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹೈ ಬಿಪಿ (High Blood Pressure) ಇರುವವರಲ್ಲಿ ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು, ಇದರ ಲಕ್ಷಣಗಳು ಹೇಗಿರುತ್ತವೆ, ಜೊತೆಗೆ ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸ್ಟ್ರೋಕ್ ಅಪಾಯ ಹೆಚ್ಚಾಗುವುದಕ್ಕೆ ಕಾರಣವೇನು?

ವೈದ್ಯರ ಪ್ರಕಾರ, ದೀರ್ಘಕಾಲ ಹೈ ಬಿಪಿ ಇದ್ದರೆ ಮೆದುಳಿಗೆ ರಕ್ತವನ್ನು ಸಾಗಿಸುವ ನರಗಳಿಗೆ ಹಾನಿಯಾಗುತ್ತದೆ. ಇದರಿಂದ ನರಗಳಲ್ಲಿ ಬ್ಲಾಕೇಜ್ ಉಂಟಾಗಬಹುದು. ಈ ಸಂದರ್ಭದಲ್ಲಿ ಮೆದುಳಿಗೆ ಸರಿಯಾದ ಆಮ್ಲಜನಕ ಸಿಗದೇ ಸ್ಟ್ರೋಕ್ ಸಂಭವಿಸಬಹುದು. ಕೆಲವು ಸಂದರ್ಭಗಳಲ್ಲಿ ರಕ್ತದೊತ್ತಡ ಹೆಚ್ಚಾಗಿ ಮೆದುಳಿನ ನರಗಳು ಸಿಡಿಯುವ ಸಾಧ್ಯತೆಯೂ ಇದೆ, ಇದು ಜೀವಕ್ಕೆ ಅಪಾಯಕಾರಿಯಾಗಬಹುದು. ಆದರೆ ಲಕ್ಷಣಗಳು ಆರಂಭಿಕ ಹಂತದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ರೋಗ ಗಂಭೀರವಾದ ನಂತರ ಮಾತ್ರ ಸಮಸ್ಯೆ ತಿಳಿದುಬರುತ್ತದೆ. ಅದಕ್ಕಾಗಿಯೇ ಹೈ ಬಿಪಿಯನ್ನು ಸೈಲೆಂಟ್ ಕಿಲ್ಲರ್ ಎಂದು ಕರೆಯಲಾಗುತ್ತದೆ.

ಇದನ್ನೂ ಓದಿ: ನೀವು ಮಾಡುವ ಈ ತಪ್ಪುಗಳೇ ರಕ್ತದೊತ್ತಡ ಹೆಚ್ಚಾಗಲು ಕಾರಣ?

ರಕ್ತದೊತ್ತಡ ಹೆಚ್ಚಾದಾಗ ಕಂಡುಬರುವ ಲಕ್ಷಣಗಳು:

  • ತಲೆನೋವು (ವಿಶೇಷವಾಗಿ ತಲೆಯ ಹಿಂಭಾಗದಲ್ಲಿ)
  • ತಲೆ ಸುತ್ತುವುದು
  • ಉಸಿರಾಟದಲ್ಲಿ ತೊಂದರೆ
  • ನಿರಂತರ ದಣಿವು

ಬಿಪಿ ನಿಯಂತ್ರಣಕ್ಕೆ ಏನು ಮಾಡಬೇಕು?

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅಗತ್ಯ. ಪ್ರತಿದಿನ ಕನಿಷ್ಠ ಅರ್ಧ ಗಂಟೆ ವ್ಯಾಯಾಮ ಮಾಡಬೇಕು. ಆಹಾರದಲ್ಲಿ ಉಪ್ಪಿನ ಪ್ರಮಾಣ ಕಡಿಮೆ ಮಾಡಬೇಕು. ದಿನಕ್ಕೆ ಕನಿಷ್ಠ 7 ಗಂಟೆ ನಿದ್ರೆ ಮಾಡಬೇಕು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು. ಜೊತೆಗೆ ನಿಯಮಿತವಾಗಿ ಬಿಪಿ ತಪಾಸಣೆ ಮಾಡಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಾರವಾಡದಲ್ಲಿ ಭಾರೀ ಮಳೆ: ಕಲ್ಲಘಟಗಿ ರಸ್ತೆ ತುಂಬೆಲ್ಲಾ ಆಲಿಕಲ್ಲು, ಫುಲ್ ಟ್ರಾಫಿಕ್ ಜಾಮ್

ಧಾರವಾಡ, (ಮಾರ್ಚ್ 17): ಕಾಶ್ಮೀರ, ಶಿಮ್ಲಾದಲ್ಲಿ ಹಿಮಪಾತದಿಂದಾಗಿ ಹೇಗೆ ಮಂಜುಗಡ್ಡೆ ರಸ್ತೆ ತುಂಬೆಲ್ಲಾ ಬಿದ್ದಿರುತ್ತೋ ಹಾಗೇ ಧಾರವಾಡ ಜಿಲ್ಲೆಯ ಕಲ್ಲಘಟಗಿಯಲ್ಲೂ ಸಹ ಆಲಿಕಲ್ಲು ಬಿದ್ದಿದೆ. ಮಳೆಯಿಂದಾಗಿ ರಸ್ತೆಯಲೆಲ್ಲಾ ಆಲಿಕಲ್ಲು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಸ್ತವ್ಯಸ್ತವಾಗಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಶಿ ರಾಶಿ ಆಲಿಕಲ್ಲು ಹೇಗೆ ಬಿದ್ದಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

Source link

ಅಮೆರಿಕ, ಇಸ್ರೇಲ್ ನಮ್ಮೆದುರು ಮಂಡಿಯೂರಬೇಕು; ಇರಾನ್‌ ಸುಪ್ರೀಂ ನಾಯಕ ಪಟ್ಟು

ಟೆಹ್ರಾನ್, ಮಾರ್ಚ್ 17: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ನಿಲ್ಲಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಮ್ಮ ಮುಂದೆ ಮಂಡಿಯೂರಬೇಕು, ಆ ಎರಡೂ ದೇಶಗಳು ಸೋಲನ್ನು ಒಪ್ಪಿಕೊಳ್ಳಬೇಕು. ಶಾಂತಿ ಮಾತುಕತೆಯ ಸಮಯ ಮುಗಿದುಹೋಗಿದೆ ಎಂದು ಅವರು ಘೋಷಿಸಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೊಜ್ತಬಾ ಖಮೇನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ವಿರೂಪಗೊಂಡಿದ್ದಾರೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ರಾಯಿಟರ್ಸ್ ಉಲ್ಲೇಖಿಸಿದ ಇರಾನಿನ ಅಧಿಕಾರಿಯೊಬ್ಬರ ಪ್ರಕಾರ, ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಯುಎಸ್ ಮತ್ತು ಇಸ್ರೇಲ್ ವಿರುದ್ಧ ಟೆಹ್ರಾನ್‌ನ ಸೇಡು ಬಹಳ ಗಂಭೀರವಾದುದು ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಹಾಗೇ, ಮೊಜ್ತಬಾ ಅವರು “ಶಾಂತಿಗೆ ಇದು ಸರಿಯಾದ ಸಮಯವಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

ಇದಕ್ಕೂ ಮೊದಲು, ಅವರ ತಂದೆಯಾದ ಅಯತೊಲ್ಲಾ ಖಮೇನಿಯ ಮರಣದ ನಂತರ ಇರಾನ್‌ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ಖಮೇನಿ ಅವರ ಮರಣದ ನಂತರ ಮಧ್ಯಪ್ರಾಚ್ಯದಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಬಲವಾದ ಸಂದೇಶವನ್ನು ನೀಡಿದ್ದರು. ಈ ಭಾಷಣವು ಅಮೆರಿಕ ಮತ್ತು ಇಸ್ರೇಲ್ ಕಡೆಗೆ ಇರಾನ್​ನ ಕಠಿಣ ನಿಲುವನ್ನು ಒತ್ತಿಹೇಳಿತ್ತು. ಇರಾನ್ ಅನುಭವಿಸಿದ ಹಾನಿಗಳಿಗೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಬೆಲೆ ತೆರಬೇಕಾಗುತ್ತದೆ ಎಂದು ಮೊಜ್ತಬಾ ಹೇಳಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಹೇಜಲ್​ವುಡ್ ಎಷ್ಟು ಪಂದ್ಯಗಳಿಗೆ ಅಲಭ್ಯ? ಅವರನ್ನು ಬದಲಿಸುವವರ್ಯಾರು?

Source link

ಕೋಟ್ಯಂತರ ರೂ ಆದಾಯವಿರುವ ದೇಗುಲದಲ್ಲಿ ಅಭಿವೃದ್ಧಿ ಶೂನ್ಯ: ರಾಜ್ಯದ ಶ್ರೀಮಂತ ದೇಗುಲಕ್ಕೆ ಇದೆಂಥಾ ಸ್ಥಿತಿ?

ಮಂಗಳೂರು, ಮಾರ್ಚ್​​ 17: ಕುಕ್ಕೆ ಸುಬ್ರಹ್ಮಣ್ಯ‌ ದೇವಸ್ಥಾನ (Kukke Shree Subrahmanya Temple) ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದು. ಕೋಟ್ಯಂತರ ರೂ ಆದಾಯ ತಂದು ಕೊಡುವ ಈ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಮಾತ್ರ ಸೂಕ್ತ ಮೂಲಭೂತ ಸೌಲಭ್ಯಗಳಿಲ್ಲ ಎಂಬುದು‌ ದಶಕಗಳ‌ ಆರೋಪ.‌ ಸಂಪತ್ತು ಇದ್ದರೂ ಇಚ್ಛಾಶಕ್ತಿ, ಕ್ರಿಯಾಶಕ್ತಿ‌ ಇಲ್ಲದ ಪರಿಣಾಮ ಇಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ಭಕ್ತರು ಪರದಾಡುವಂತಾಗಿದೆ.

ಭಕ್ತರ ಆರೋಪವೇನು?

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಪ್ರಸಿದ್ಧ ನಾಗ ಕ್ಷೇತ್ರ ಅಂತಾನೆ ಕರೆಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿರುವ ಈ ದೇವಸ್ಥಾನಕ್ಕೆ ಜಿಲ್ಲೆ, ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಬರ್ತಾರೆ. ಆದರೆ ಇತಿಹಾಸ ಪ್ರಸಿದ್ಧವಾಗಿರುವ ಈ ದೇವಸ್ಥಾನದಲ್ಲಿ ವ್ಯವಸ್ಥೆಗಳು ಮಾತ್ರ ಇನ್ನು ಇತಿಹಾಸ ಕಾಲದ್ದೆ ಇದೆ ಎಂಬುದು ಭಕ್ತರ ಆರೋಪ.

ಇದನ್ನೂ ಓದಿ: ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್​​​ ನ್ಯೂಸ್ ನೀಡಿದ ಸಿದ್ದರಾಮಯ್ಯ

ದೇವಳದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಯೋಜನೆ ಜಾರಿಗೊಳಿಸಿ 17 ವರ್ಷವಾದರೂ ಇನ್ನು ಕೂಡ ಪೂರ್ಣವಾಗಿಲ್ಲ ಎಂಬದು ಇಲ್ಲಿನ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಒಟ್ಟು 604 ಕೋಟಿ ರೂ ಕಾಮಗಾರಿಯಲ್ಲಿ ಈಗಾಗಲೇ ಎರಡು ಹಂತವನ್ನೂ ಪೂರ್ಣಗೊಳಿಸಿದ್ದು, ಈಗ ಮೂರನೇ ಹಂತದ ಕಾಮಗಾರಿಗಳ ಯೋಜನೆ, ಅಂದಾಜುಪಟ್ಟಿ ಸಿದ್ದಗೊಳಿಸಿ ಪಿಡಬ್ಲ್ಯುಡಿ ಇಲಾಖೆಯಿಂದ ಅನುಮೋದನೆ ಪಡೆದು ಸರ್ಕಾರಕ್ಕೆ ಸಲ್ಲಿಸಲಾಗಿದ್ದರು ಸಹ ಇನ್ನು ಸಹ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದಂತೆ 600 ಕೋಟಿ ರೂ ಎಫ್​​ಡಿ ಇದ್ದರೂ, ವಾರ್ಷಿಕ 150 ಕೋಟಿಗೂ ಹೆಚ್ಚು ಆದಾಯವಿದ್ದರು ಸಹ ಈ ಹಣವನ್ನು ದೇವಳದ ಅಭಿವೃದ್ಧಿ ಕಾರ್ಯಗಳಿಗೆ ಬಳಸಬೇಕೆಂದರೆ ಸರ್ಕಾರದ, ಹಣಕಾಸು ಇಲಾಖೆಯ‌ ಅನುಮೋದನೆ ಕಡ್ಡಾಯವಾಗಿದೆ. ಹೀಗಾಗಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿ, ಕ್ರಿಯಾಶಕ್ತಿ ಇಲ್ಲದೆ, ಅವೈಜ್ಞಾನಿಕ ತೀರ್ಮಾನಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪವಿದೆ.

ಏನೆಲ್ಲಾ ನಿರ್ಮಾಣವಾಗಬೇಕು?

ದೇವಳದಲ್ಲಿ ಸರ್ಪ ಸಂಸ್ಕಾರ ಸೇವೆ ಬಹಳಷ್ಟು ಪ್ರಸಿದ್ಧಿ ಪಡೆದಿದ್ದು ಪ್ರಸ್ತುತ ದಿನವೊಂದಕ್ಕೆ 175 ಭಕ್ತರಿಗೆ ಮಾತ್ರ ಸೇವೆ ನಡೆಸಲು ಅವಕಾಶವಿದ್ದು, ಎರಡು ತಿಂಗಳ ಕಾಲ ಬುಕ್ಕಿಂಗ್​ಗೆ ಕಾಯಬೇಕಾದ ಪರಿಸ್ಥಿತಿಯಿದೆ. ಹೀಗಾಗಿ ಸರ್ಪ ಸಂಸ್ಕಾರ ಯಾಗಶಾಲೆಯ ನಿರ್ಮಾಣವಾಗಬೇಕಿದೆ. ಒಂದು ಸಾವಿರ ಮಂದಿ ಆಶ್ಲೇಷ ಬಲಿ ಪೂಜೆ ಸಲ್ಲಿಸಲು ಪೂಜಾ ಮಂದಿರವೂ ನಿರ್ಮಾಣವಾಗಬೇಕಿದೆ. ಸದ್ಯ 25 ವರ್ಷ ಹಿಂದಿನ ಭೋಜನಶಾಲೆಯಿದ್ದು ಇನ್ನು ಮುಂದೆ ಏಕಕಾಲದಲ್ಲಿ ಐದು ಸಾವಿರ ಮಂದಿ ಕೂತು ಊಟ ಮಾಡುವ ಭೋಜನ ಶಾಲೆ ನಿರ್ಮಾಣವಾಗಬೇಕಿದೆ.

ಇದನ್ನೂ ಓದಿ: ಕರ್ನಾಟಕದ ದೇವಾಲಯಗಳ ಆದಾಯದಲ್ಲಿ ಭಾರೀ ಏರಿಕೆ: ದಕ್ಷಿಣ ಕನ್ನಡದ ಈ ದೇಗುಲ ಫಸ್ಟ್​

ಸದ್ಯ ದೇವಳದಲ್ಲಿ ವಸತಿ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಸೀಸನ್ ಸಮಯದಲ್ಲಿ ಭಕ್ತರು ರಥಬೀದಿಯಲ್ಲೆ ಮಲಗಬೇಕಾದ ಪರಿಸ್ಥಿತಿಯಿದೆ. ಹೀಗಾಗಿ 604 ಕೋಟಿ ರೂ ಗಳ‌ ಮಾಸ್ಟರ್ ಪ್ಲ್ಯಾನ್​ನಲ್ಲಿ ಪಾರಂಪರಿಕ ರಥಬೀದಿ, 800 ಕೊಠಡಿಗಳ ವಸತಿಗೃಹ, ಶೌಚಾಲಯ, ಗೆಸ್ಟ್ ಹೌಸ್, ಸುತ್ತು ಪೌಳಿ‌ ದುರಸ್ತಿ ಸೇರಿದಂತೆ ಅನೇಕ‌ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಸದ್ಯ ಈ ಬಾರಿಯ ಬಜೆಟ್​ನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ರಚಿಸುವ ಬಗ್ಗೆ ಸರ್ಕಾರ ಘೋಷಣೆ ಮಾಡಿದ್ದು, ಇನ್ನಾದರೂ ಸಮರ್ಪಕವಾಗಿ ಅಭಿವೃದ್ಧಿ ಕಾರ್ಯಗಳು ಆಗುತ್ತಾ ಅಂತಾ ಕಾದು ನೋಡಬೇಕಾಗಿದೆ‌.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು, (ಮಾರ್ಚ್ 17): ಹಣದ ವಿಚಾರಕ್ಕೆ ಸಂಬಂಧಿಸಿದಂತೆ ಕಾರಿನಿಂದ ಗುದ್ದಿ ವ್ಯಕ್ತಿಯನ್ನು ಹತ್ಯೆ ಯತ್ನ ನಡೆದಿರುವ ಘಟನೆ ಮಂಗಳೂರಿನ ಆರ್ಯಸಮಾಜ ರಸ್ತೆಯಲ್ಲಿ ನಡೆದಿದೆ. ಭೂವ್ಯವಹಾರಕ್ಕೆ ಸಂಬಂಧಿಸಿ ಹಣದ ವ್ಯಾಜ್ಯದ ಕೋಪದಲ್ಲಿ ಮಂಗಳೂರಿನ ಪಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎನ್ನುವಾತ ಕಾರಿನಿಂದ ಮೋಹನ್ ದಾಸ್ ಶೆಟ್ಟಿಗೆ ಗುದ್ದಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.

ಸುರತ್ಕಲ್‌ನ ಕಾನ ಮತ್ತು ವಾಮಂಜೂರಿನಲ್ಲಿ ಆರೋಪಿ ಮಹಮ್ಮದ್ ಶರೀಫ್ ಸುಮಾರು 2 ಕೋಟಿ ರೂ. ಹಣವನ್ನು ಹೂಡಿಕೆ ಮಾಡಿದ್ದ. ಆದರೆ ಮೋಹನ್ ದಾಸ್ ಶೆಟ್ಟಿ ಮೋಸ ಮಾಡಿರುವ ಸಿಟ್ಟಿನಲ್ಲಿ ಆತ ಸ್ಕೂಟರ್​​ನಲ್ಲಿ ತೆರಳುವಾಗ ಮಹಮ್ಮದ್ ಶರೀಫ್ ಕಾರಿನಿಂದ ಗುದ್ದಿ ಕೊಲೆ ಯತ್ನ ನಡೆಸಿದ್ದಾನೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಸದ್ಯ ಮಹಮ್ಮದ್ ಶರೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಈ ಐಪಿಎಲ್‌ನಲ್ಲಿ ರೋಹಿತ್ ‘ಇಂಪ್ಯಾಕ್ಟ್’ ಹೇಗಿರಲಿದೆ? ಸ್ಪಷ್ಟನೆ ನೀಡಿದ ಹೆಡ್​ ಕೋಚ್

Source link

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್​ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ಅಮ್ಮಾ ಬೇಡಮ್ಮಾ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ.

ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ ಮಹಿಳೆ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಳು. ರೈಲು ಸಮೀಪಿಸುತ್ತಿರುವುದನ್ನು ನೋಡಿದ ಆಕೆ ಹಳಿಗಳ ಕಡೆಗೆ ಹೋದಳು. ಅಷ್ಟರಲ್ಲೇ ಅವರ 7 ವರ್ಷದ ಮಗಳು ಟ್ವಿಂಕಲ್ ಓಡಿ ಬಂದು ಆಕೆಯನ್ನು ಹಿಡಿದುಕೊಂಡಳು. ಆ ಬಾಲಕಿ ಜೋರಾಗಿ ಕೂಗುತ್ತಿದ್ದಳು “ಅಮ್ಮ, ಬೇಡಮ್ಮಾ, ಸಾಯೋದು ಬೇಡಮ್ಮ” ಎಂದು ಅಳುತ್ತಿದ್ದಳು. ಅಮ್ಮನನ್ನು ಹಳಿಯಿಂದ ಹಿಂದಕ್ಕೆ ಎಳೆಯಲು ಪ್ರಯತ್ನಿಸುತ್ತಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆಕೆಯ ಕೂಗು ಕೇಳಿ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಸ್ಥಳಕ್ಕೆ ಧಾವಿಸಿದರು. ಆ ಮಹಿಳೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ನನಗೆ ನಯನತಾರಾ ಬೇಕು’: ಸಂಸದನ ಅಸಭ್ಯ ಮಾತಿಗೆ ಕಲಾವಿದರ ಸಂಘ ಗರಂ

ತಮಿಳುನಾಡಿನ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರು ನಟಿ ನಯನತಾರಾ (Nayanthara) ಬಗ್ಗೆ ನೀಡಿದ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಯು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರ ಸುರಕ್ಷತೆಗಾಗಿ ತಮ್ಮ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲೇ ಅವರು ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಸಿ.ವಿ. ಷಣ್ಮುಗಂ (CV Shanmugam) ಅವರ ಹೇಳಿಕೆಯನ್ನು ದಕ್ಷಿಣ ಭಾರತ ಕಲಾವಿದರ ಸಂಘ ಖಂಡಿಸಿದೆ. ಕೂಡಲೇ ಕ್ಷಮೆ ಕೇಳಬೇಕು ಎಂದು ಸಂಘ ಆಗ್ರಹಿಸಿದೆ.

ಘಟನೆ ಹಿನ್ನೆಲೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇತ್ತೀಚೆಗೆ ರಾಜ್ಯದ ಜನತೆಗೆ ‘ನಿಮ್ಮ ಕನಸುಗಳನ್ನು ಹಂಚಿಕೊಳ್ಳಿ, ಸರ್ಕಾರ ಅವುಗಳನ್ನು ಈಡೇರಿಸಲು ಶ್ರಮಿಸುತ್ತದೆ’ ಎಂದು ಭರವಸೆ ನೀಡಿದ್ದರು. ಇದನ್ನು ಟೀಕಿಸುವ ಭರದಲ್ಲಿ ಸಂಸದ ಷಣ್ಮುಗಂ ಅವರು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಬಳಸಿಕೊಂಡು ಅಸಭ್ಯ ಉದಾಹರಣೆ ನೀಡಿದ್ದಾರೆ.

‘ಅಬ್ದುಲ್ ಕಲಾಂ ಅವರು ಕನಸು ಕಾಣಲು ಹೇಳಿದರು. ಸ್ಟಾಲಿನ್ ಅವರು ತಮ್ಮ ಕನಸುಗಳನ್ನು ಹಂಚಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಒಂದು ವೇಳೆ ನನಗೆ ನಯನತಾರಾ ಜೊತೆ ಮದುವೆಯಾಗಬೇಕೆಂಬ ಕನಸಿದ್ದರೆ, ಸ್ಟಾಲಿನ್ ಅದನ್ನು ಈಡೇರಿಸುತ್ತಾರಾ? ಯಾರಾದರೂ ಸ್ಟಾಲಿನ್ ಅವರ ಬಳಿ ಹೋಗಿ ನಯನತಾರಾ ಜೊತೆ ಮದುವೆ ಮಾಡಿಸಿ ಎಂದು ಕೇಳಿದರೆ ಅವರು ಮದುವೆ ಮಾಡಿಸುತ್ತಾರಾ?’ ಎಂದು ಷಣ್ಮುಗಂ ವ್ಯಂಗ್ಯವಾಗಿ ಪ್ರಶ್ನಿಸಿದ್ದರು. ಈ ವೇಳೆ ಪಕ್ಕದಲ್ಲಿದ್ದ ಇತರ ನಾಯಕರು ಇದಕ್ಕೆ ನಗುತ್ತಾ ಬೆಂಬಲ ಸೂಚಿಸಿದ್ದು ಮತ್ತಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.

ನಯನತಾರಾ ಅವರ ಹೆಸರನ್ನು ಅನಗತ್ಯವಾಗಿ ಎಳೆದು ತಂದ ಸಿ.ವಿ. ಷಣ್ಮುಗಂ ಅವರ ವರ್ತನೆಯನ್ನು ದಕ್ಷಿಣ ಭಾರತ ಚಲನಚಿತ್ರ ಕಲಾವಿದರ ಸಂಘ ತೀವ್ರವಾಗಿ ಖಂಡಿಸಿದೆ. ಸಂಸದರಿಗೆ ಪತ್ರ ಬರೆದಿರುವ ಸಂಘವು, ‘ಗೌರವಾನ್ವಿತ ಸಂಸದರೇ, ನಿಮ್ಮ ಮಾತುಗಳು ಅತ್ಯಂತ ಅವಹೇಳನಕಾರಿ ಮತ್ತು ನಾಚಿಕೆಗೇಡಿನ ಸಂಗತಿ. ಸಂಸದೀಯ ಘನತೆಯನ್ನು ಗಾಳಿಗೆ ತೂರಿ ನಮ್ಮ ಸಹೋದ್ಯೋಗಿ ನಯನತಾರಾ ಅವರ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದೀರಿ’ ಎಂದು ಕಿಡಿಕಾರಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಬಿಡುಗಡೆಗೂ ಮುನ್ನ 31.5 ಕೋಟಿ ರೂ. ಮೌಲ್ಯದ ಮನೆ ಖರೀದಿಸಿದ ನಯನತಾರಾ

‘ಜನರಿಂದ ಚುನಾಯಿತರಾದ ಪ್ರತಿನಿಧಿಗಳು ಸಾರ್ವಜನಿಕವಾಗಿ ಮಾತನಾಡುವಾಗ ಅತ್ಯಂತ ಎಚ್ಚರಿಕೆ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕು. ಆದರೆ ನೀವು ಅದನ್ನು ಮರೆತಿದ್ದೀರಿ. ಈ ಕೂಡಲೇ ನೀವು ಬೇಷರತ್ ಕ್ಷಮೆಯಾಚಿಸಬೇಕು ಮತ್ತು ಮುಂದೆಂದೂ ಚಿತ್ರರಂಗದ ಮಹಿಳೆಯರ ಬಗ್ಗೆ ಇಂತಹ ಹಗುರವಾದ ಮಾತುಗಳನ್ನು ಆಡುವುದಿಲ್ಲ ಎಂದು ಭರವಸೆ ನೀಡಬೇಕು’ ಎಂದು ಸಂಘವು ಆಗ್ರಹಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಕುಟುಂಬದೊಂದಿಗೆ ಲಂಡನ್‌ನಲ್ಲಿ ನೆಲೆಯೂರಿರುವ ವಿರಾಟ್ ಕೊಹ್ಲಿ ಇದೀಗ 2026 ರ ಐಪಿಎಲ್​ಗಾಗಿ ಭಾರತದಕ್ಕೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಿಂದ ತನ್ನ ಮಡದಿ ಅನುಷ್ಕಾ ಶರ್ಮಾ ಅವರೊಂದಿಗೆ ಹೊರಬರುತ್ತಿರುವ ಅವರ ವೀಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಐಪಿಎಲ್‌ನ 19 ನೇ ಸೀಸನ್‌ಗಾಗಿ ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ಸಿದ್ಧತೆಗಳನ್ನು ಆರಂಭಿಸಿದ್ದರು. ಅದರ ವಿಡಿಯೋಗಳು ಕೂಡ ವೈರಲ್ ಆಗಿದ್ದವು. ಆದಾಗ್ಯೂ, ಭಾರತಕ್ಕೆ ಬಂದ ನಂತರ, ಅವರು ಶೀಘ್ರದಲ್ಲೇ ಆರ್‌ಸಿಬಿ ಶಿಬಿರವನ್ನು ಸೇರಲಿದ್ದು, ತಮ್ಮ ಅಭ್ಯಾಸವನ್ನು ಮುಂದುವರೆಸಿಲಿದ್ದಾರೆ. ಆರ್‌ಸಿಬಿ ಪ್ರಸ್ತುತ ಐಪಿಎಲ್ ಹಾಲಿ ಚಾಂಪಿಯನ್ ಆಗಿರುವ ಕಾರಣ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಬೇಕೆಂಬ ಒತ್ತಡದಲ್ಲಿದೆ. ಹೀಗಾಗಿ ವಿರಾಟ್ ಕೊಹ್ಲಿಯಿಂದ ಈ ಬಾರಿಯೂ ಅದೇ ರೀತಿಯ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

Source link

Exit mobile version